Tag: ಸಂಸದೆ ಸುಮಲತಾ

  • ಸುಮಲತಾ ಹುಟ್ಟಹಬ್ಬ- ಅಂಬರೀಶ್ ಸಮಾಧಿಗೆ ಪೂಜೆ

    ಸುಮಲತಾ ಹುಟ್ಟಹಬ್ಬ- ಅಂಬರೀಶ್ ಸಮಾಧಿಗೆ ಪೂಜೆ

    ಬೆಂಗಳೂರು: ಸಂಸದೆ ಸುಮಲತಾ ಅಂಬರೀಶ್ ಅವರು ಇಂದು 57ನೇ ವಸಂತಕ್ಕೆ ಕಾಲಿಟ್ಟಿದ್ದು, ತಮ್ಮ ಹುಟ್ಟಹಬ್ಬದ ಹಿನ್ನೆಲೆಯಲ್ಲಿ ಪತಿ ಅಂಬರೀಶ್ ಅವರ ಸಮಾಧಿಗೆ ಪೂಜೆ ಸಲ್ಲಿಸಿದರು.

    ಕಂಠೀರವ ಸ್ಟುಡಿಯೊ ಆವರಣದಲ್ಲಿರುವ ಅಂಬರೀಶ್ ಅವರ ಸಮಾಧಿಗೆ ಪೂಜೆ ಸಲ್ಲಿಸಿದ ಸುಮಲತಾ ಅವರು ಬಳಿಕ ಮಂಡ್ಯಗೆ ತೆರಳಿದರು. ಈ ವೇಳೆ ಸುಮಲತಾ ಅವರಿಗೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸಾಥ್ ನೀಡಿದರು. ಮಂಡ್ಯ ಕ್ಷೇತ್ರ ಜನತೆಯೊಂದಿಗೆ ಸುಮಲತಾ ಅವರು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಿದ್ದಾರೆ.

    ಇತ್ತ ಸುಮಲತಾ ಅವರ ಪುತ್ರ ಅಭಿಷೇಕ್ ಅವರು ತಮ್ಮ ಮನೆಯಲ್ಲೇ ಹುಟ್ಟುಹಬ್ಬ ಆಚರಿಸಿದ್ದು, ಅಮ್ಮನ ಕೈಯಿಂದ ಕೇಕ್ ಕತ್ತರಿಸುವ ಮೂಲಕ ಹುಟ್ಟಹಬ್ಬ ಆಚರಿಸಿದ ವಿಡಿಯೋವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಅಲ್ಲದೇ ವಿಶ್ವದಲ್ಲೇ ನೀವು ಬೆಸ್ಟ್ ಅಮ್ಮ ಆಗಿದ್ದಕ್ಕೆ ಧನ್ಯವಾದ ಎಂದು ಅಭಿಷೇಕ್ ಹೇಳಿದ್ದಾರೆ.

    ನಟ ದರ್ಶನ್ ಅವರು ಕೂಡ ಸುಮಲತಾ ಅವರಿಗೆ ಹುಟ್ಟಹಬ್ಬದ ಶುಭಾಶಯ ತಿಳಿಸಿದ್ದು. ಮದರ್ ಇಂಡಿಯಾ ಸುಮಲತಾ ಅಮ್ಮರವರಿಗೆ ಹುಟ್ಟುಹಬ್ಬದ ಹಾರ್ಧಿಕ ಶುಭಾಶಯ ಎಂದು ತಿಳಿಸಿದ್ದಾರೆ. ಸುಮಲತಾ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಸೇರಿದಂತೆ ಹಲವು ರಾಜಕೀಯ ನಾಯಕರು, ನಟ-ನಟಿಯರು ಕೂಡ ಸಾಮಾಜಿಕ ಜಾಲತಾಣದಲ್ಲಿ ಶುಭಕೋರಿದ್ದಾರೆ.

  • ‘ಕ್ವಾರಂಟೈನ್ ಮಾಡೋದು ಅವಮಾನ ಅಲ್ಲ’- ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯಗೆ ತಿಳಿ ಹೇಳಿದ ಸಂಸದೆ ಸುಮಲತಾ

    ‘ಕ್ವಾರಂಟೈನ್ ಮಾಡೋದು ಅವಮಾನ ಅಲ್ಲ’- ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯಗೆ ತಿಳಿ ಹೇಳಿದ ಸಂಸದೆ ಸುಮಲತಾ

    ಮಂಡ್ಯ: ಕ್ವಾರಂಟೈನ್ ಮಾಡೋದು ಅವಮಾನ ಅಲ್ಲ ಎಂದು ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರಿಗೆ ಸಂಸದೆ ಸುಮಲತಾ ತಿಳಿ ಹೇಳಿದ್ದಾರೆ.

    ಆಶಾ ಕಾರ್ಯಕರ್ತೆಗೆ ಕ್ವಾರಂಟೈನ್ ಮಾಡಿದ್ದಾರೆ. ಮೊದಲೇ ಮನನೊಂದು ಆತ್ಮಹತ್ಯೆಗೆ ಆಶಾ ಕಾರ್ಯಕರ್ತೆ ಯತ್ನಿಸಿದ್ದರು. ಈಗ ಕ್ವಾರಂಟೈನ್ ಮಾಡಿ ಇನ್ನೊಂದು ಅವಮಾನ ಮಾಡಿದ್ದಾರೆ. ಕ್ವಾರಂಟೈನ್ ಮಾಡುವ ಅಗತ್ಯ ಏನಿತ್ತು? ನನಗೆ ಅವರು ಫೋನ್ ಮಾಡಿ ನೋವು ತೋಡಿಕೊಂಡಿದ್ದಾರೆ ಎಂದು ಶಾಸಕ ರವೀಂದ್ರ ಶೀಕಂಠಯ್ಯ ಅವರು ಮಂಡ್ಯದ ಜಿಲ್ಲಾ ಪಂಚಾಯತಿಯ ಸಭೆಯಲ್ಲಿ ಪ್ರಸ್ತಾಪಿಸಿದರು.

    ಈ ವೇಳೆ ಮಾತನಾಡಿದ ಸಂಸದೆ ಸುಮಲತಾ ಅವರು, ಕ್ವಾರಂಟೈನ್ ಮಾಡೋದು ಅವಮಾನ ಅಂತ ತಿಳಿದುಕೊಳ್ಳೋದು ತಪ್ಪು. ಅರಿವು ಮೂಡಿಸಬೇಕಾದ ನಮ್ಮಂತ ಜನಪ್ರತಿನಿಧಿಗಳೇ ಅವಮಾನ ಎಂದು ಹೇಳಿದು ಸರಿಯಲ್ಲ. ಅವಮಾನ ಅಂತ ಹೇಳಿದರೆ ಬಹಳಷ್ಟು ಜನ ಹೆದರುತ್ತಾರೆ ಎಂದು ವಿವರಿಸಿದರು. ಈ ಸಂದರ್ಭದಲ್ಲಿ ಸಭೆಯಲ್ಲಿ ಸಚಿವರಾದ ಡಾ.ಸುಧಾಕರ್, ನಾರಾಯಣಗೌಡ ಅವರು ಹಾಜರಿದ್ದರು.

    ಏನಿದು ಘಟನೆ: ಇತ್ತೀಚೆಗೆ ಮಂಡ್ಯ ಆಶಾ ಕಾರ್ಯಕರ್ತೆ ಮೇಲಾಧಿಕಾರಿಗಳು ಹಾಗೂ ಗ್ರಾಮ ಪಂಚಾಯ್ತಿ ಸದಸ್ಯನ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದರು. ಮಂಡ್ಯ ತಾಲೂಕಿನ ಕಾಗೇಹಳ್ಳ ದೊಡ್ಡಿ ಗ್ರಾಮದ ಅಂಗನವಾಡಿಯ ಆಶಾ ಕಾರ್ಯಕರ್ತೆ ಭಾಗ್ಯಮ್ಮ (45) ಆತ್ಮಹತ್ಯೆಗೆ ಯತ್ನಿಸಿದ್ದರು. ಮತದಾರರ ಪಟ್ಟಿಗೆ ಹೆಸರು ಸೇರಿಸುವ ಮತ್ತು ಪರಿಷ್ಕರಿಸುವ ಕೆಲಸಕ್ಕೆ ಭಾಗ್ಯಮ್ಮ ಅವರನ್ನು ನಿಯೋಜನೆ ಮಾಡಲಾಗಿತ್ತು. ಈ ವೇಳೆ ಗ್ರಾಮ ಪಂಚಾಯ್ತಿ ಸದಸ್ಯ ಅಕ್ರಮವಾಗಿ ಮತದಾರರ ಪಟ್ಟಿಗೆ ಸೇರಿಸುವಂತೆ ಒತ್ತಡ ಹೇರಿದ್ದರು. ಇದಕ್ಕೆ ಭಾಗ್ಯ ಅವರು ನಿರಾಕರಿಸಿದರು ಎನ್ನಲಾಗಿತ್ತು. ಬಳಿಕ ರಾಜಕೀಯ ಪ್ರಭಾವ ಬಳಸಿ ಭಾಗ್ಯಮ್ಮ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಈ ವಿಚಾರದಲ್ಲಿ ಮೇಲಾಧಿಕಾರಿಗಳು ಶಾಮೀಲಾಗಿ ಕಿರುಕುಳ ನೀಡುತ್ತಿದ್ದರು ಎಂದು ಭಾಗ್ಯಮ್ಮ ಹೇಳಿಕೊಂಡಿದ್ದರು ಎನ್ನಲಾಗಿತ್ತು. ಆತ್ಮಹತ್ಯೆ ಪ್ರತ್ನಿಸಿದ್ದ ಭಾಗ್ಯಮ್ಮ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಹಿಂದಿರುಗಿದ್ದರು. ಆದ್ದರಿಂದ ಅವರಿಗೆ ಮನೆಯಲ್ಲೇ ಉಳಿದುಕೊಳ್ಳುವಂತೆ ಕ್ವಾರಂಟೈನ್ ಮಾಡಲಾಗಿದೆ ಎಂದು ಶಾಸಕರು ಪ್ರಶ್ನಿಸಿದ್ದರು.

  • ಸರ್ಕಾರದ ಉಳಿವಿಗೆ ಬಿಜೆಪಿ ಮಾಸ್ಟರ್ ಪ್ಲಾನ್- ಸುಮಲತಾ, ನಿಖಿಲ್ ಮತ್ತೆ ಮುಖಾಮುಖಿಯಾಗ್ತಾರಾ?

    ಸರ್ಕಾರದ ಉಳಿವಿಗೆ ಬಿಜೆಪಿ ಮಾಸ್ಟರ್ ಪ್ಲಾನ್- ಸುಮಲತಾ, ನಿಖಿಲ್ ಮತ್ತೆ ಮುಖಾಮುಖಿಯಾಗ್ತಾರಾ?

    ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಚುನಾವಣೆಯಲ್ಲಿ ಮತ್ತೆ ಮುಖಾಮುಖಿಯಾಗ್ತಾರಾ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಯಾಗುತ್ತಿದೆ.

    ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಬಿಜೆಪಿ ನಾಯಕರು ಸುಮಲತಾ ಅವರನ್ನು ರಾಜ್ಯ ರಾಜಕಾರಣಕ್ಕೆ ತರಲಿದ್ದಾರೆ. ಈ ಮೂಲಕ ಸಂಖ್ಯಾಬಲ ಹೆಚ್ಚಿಸಿಕೊಳ್ಳಲು ಭಾರೀ ಪ್ಲಾನ್ ರೂಪಿಸಲಾಗಿದೆ. ವಿಧಾನಸಭಾ ಉಪ ಚುನಾವಣೆಯಲ್ಲಿ ನಿಖಿಲ್ ಅವರು ಸ್ಪರ್ಧಿಸುವುದು ಖಚಿತವಾದರೆ ಸುಮಲತಾ ಅವರನ್ನು ಪ್ರತಿಸ್ಪರ್ಧಿಯಾಗಿ ನಿಲ್ಲಿಸಲು ಬಿಜೆಪಿ ಸಿದ್ಧತೆ ನಡೆಸಿದೆ ಎಂದು ಮೂಲಗಳಿಂದ ಮಾಹಿತಿ ಲಭಿಸಿದೆ.

    ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ಕ್ಷೇತ್ರದ ನಾರಾಯಣಗೌಡ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಹೀಗಾಗಿ ಈ ಕ್ಷೇತ್ರಕ್ಕೆ ನಡೆಯಲಿರುವ ಉಪಚುನವಾವಣೆಯಲ್ಲಿ ನಿಖಿಲ್ ಅವರಿಗೆ ಅವಕಾಶ ನೀಡಬೇಕು ಎಂಬ ಕೂಗು ಜೆಡಿಎಸ್‍ನಲ್ಲಿ ಕೇಳಿಬಂದಿದೆ. ಹೀಗಾಗಿ ನಿಖಿಲ್ ಸ್ಪರ್ಧೆ ಮಾಡಿ ಗೆದ್ದರೆ ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಕನಸು ಕಂಡಿರುವ ಬಿಜೆಪಿಗೆ ಭಾರೀ ಹಿನ್ನಡೆಯಾಗಲಿದೆ. ಹೀಗಾಗಿ ಸುಮಲತಾ ಅವರಿಗೆ ಸಚಿವ ಸ್ಥಾನ ನೀಡುವುದಾಗಿ ಹೇಳಿ, ಕೆ.ಆರ್. ಪೇಟೆಯಿಂದ ಸ್ಪರ್ಧೆ ಮಾಡುವಂತೆ ಬಿಜೆಪಿ ಒತ್ತಾಯಿಸಲಿದೆ.

    ಮಂಡ್ಯ ಜಿಲ್ಲೆಯಲ್ಲಿ ಇದುವರೆಗೂ ಒಂದೇ ಒಂದು ಶಾಸಕ ಸ್ಥಾನದಲ್ಲಿ ಬಿಜೆಪಿ ಗೆಲುವು ಸಾಧಿಸಿಲ್ಲ. ಈ ಬಾರಿ ಹೇಗಾದರೂ ಮಾಡಿ ಮಂಡ್ಯದಲ್ಲಿ ಖಾತೆ ತೆರೆಯಲು ಬಿಜೆಪಿ ಹರಸಾಹಸ ಪಡುತ್ತಿದೆ. ಈ ನಿಟ್ಟಿನಲ್ಲಿ ಕೆಆರ್ ಪೇಟೆಯಲ್ಲಿ ಬಿಜೆಪಿ ಗೆಲುವು ಸಾಧಿಸಿ ಸರ್ಕಾರವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳಲು ಪ್ಲಾನ್ ರೂಪಿಸುತ್ತಿದೆ.

    ಕಳೆದ ಲೋಕಸಭಾ ಚುನಾವಣೆಯಲ್ಲಿ ಸಂಸದೆ ಸುಮಲತಾ ಅವರು ಕೆಆರ್ ಪೇಟೆ ಕ್ಷೇತ್ರವೊಂದರಲ್ಲೇ ಸುಮಾರು 15 ಸಾವಿರಕ್ಕೂ ಹೆಚ್ಚಿನ ಲೀಡ್ ಪಡೆದಿದ್ದರು. ಹೀಗಾಗಿ ಸುಮಲತಾ ಅವರನ್ನು ಉಪ ಚುನಾವಣೆಗೆ ನಿಲ್ಲಿಸಲು ಮಾಸ್ಟರ್ ಪ್ಲಾನ್ ರೂಪಿಸಲಾಗಿದೆ. ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಕೆಆರ್ ಪೇಟೆ ಕ್ಷೇತ್ರದ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

  • ಮಂಡ್ಯ ಬಸ್ ದುರಂತದ ಪರಿಹಾರಕ್ಕೆ ಪತ್ರ ಬರೆದಿದ್ದು ನಾನು- ಶಿವರಾಮೇಗೌಡ

    ಮಂಡ್ಯ ಬಸ್ ದುರಂತದ ಪರಿಹಾರಕ್ಕೆ ಪತ್ರ ಬರೆದಿದ್ದು ನಾನು- ಶಿವರಾಮೇಗೌಡ

    ಮಂಡ್ಯ: ಜಿಲ್ಲೆಯಲ್ಲಿ ನಡೆದಿದ್ದ ಬಸ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರದಿಂದ ಪರಿಹಾರ ಹಣ ತಂದ ಕ್ರೆಡಿಟ್ ಪಡೆಯುವ ಕುರಿತು ಸಂಸದೆ ಸುಮಲತಾ ಹಾಗೂ ಜೆಡಿಎಸ್ ಕಾರ್ಯಕರ್ತರ ಫೈಟ್ ಮಧ್ಯೆ ಇದೀಗ ಮಾಜಿ ಸಂಸದ ಶಿವರಾಮೇಗೌಡ ಎಂಟ್ರಿ ಕೊಟ್ಟಿದ್ದಾರೆ.

    ಸುಮಲತಾ ಬೆಂಬಲಿಗರು ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವಿನ ವಾಕ್ಸಮರ ಮಧ್ಯೆ ಶಿವರಾಮೇಗೌಡ ಅವರ ಟ್ವೀಟ್ ಅಚ್ಚರಿ ಮೂಡಿಸಿದೆ. ‘ಕೇಂದ್ರಕ್ಕೆ ಪರಿಹಾರ ಹಣಕ್ಕಾಗಿ ಒತ್ತಾಯಿಸಿದ್ದು ನಾನು’ ಎಂದು ಮಾಜಿ ಸಂಸದರು ಟ್ವೀಟ್ ಮಾಡಿದ್ದಾರೆ. ಪರಿಹಾರ ಕೋರಿ ಕೇಂದ್ರಕ್ಕೆ ಪತ್ರ ಬರೆದವನು ನಾನು, ಹಣ ಬಂದಿದ್ದು ಎರಡು ತಿಂಗಳ ಹಿಂದೆ ಎಂದು ಶಿವರಾಮೇಗೌಡ ತಿಳಿಸಿದ್ದಾರೆ. ಇದನ್ನೂ ಓದಿ: ಮಂಡ್ಯ ಬಸ್ ದುರಂತ ಕೇಂದ್ರ ಸರ್ಕಾರದಿಂದ ನೆರವು- ನನಗೆ ಕ್ರೆಡಿಟ್ ಬೇಡ ಎಂದ ಸುಮಲತಾ

    ಮಂಡ್ಯದ ಕನಗನಮರಡಿ ಗ್ರಾಮದಲ್ಲಿ ನವೆಂಬರ್ 24ರಂದು ಭೀಕರ ಬಸ್ ದುರಂತ ಸಂಭವಿಸಿತ್ತು. ಘಟನೆಯಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದರು. ಈ ವೇಳೆ ರಾಜ್ಯ ಸರ್ಕಾರ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ನೀಡಿತ್ತು. ಇದೀಗ ಕೇಂದ್ರ ಸರ್ಕಾರವೂ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ನೀಡಿದೆ.

    ಕೇಂದ್ರದ ಪರಿಹಾರ ಹಣದ ವಿಚಾರವಾಗಿ ವಾದ ವಿವಾದಗಳು ಆರಂಭವಾಗಿದ್ದು, ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಪ್ರಧಾನಿ ಮೋದಿ ಬಳಿ ಮಾತನಾಡಿ ಪರಿಹಾರ ಹಣ ಬಿಡುಗಡೆ ಮಾಡಿಸಿದ್ದಾರೆ ಎಂದು ಸುಮಲತಾ ಬೆಂಬಲಿಗರು ಹೇಳುತ್ತಿದ್ದಾರೆ. ಕೇಂದ್ರದಿಂದ ಪರಿಹಾರ ಹಣ ತಂದಿದ್ದು ಮುಖ್ಯಮಂತ್ರಿ ಹಾಗೂ ಮಂಡ್ಯ ಜಿಲ್ಲಾಧಿಕಾರಿ ಮಂಜುಶ್ರೀ ಎಂದು ಜೆಡಿಎಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಳ್ಳುತ್ತಿದ್ದಾರೆ.

    ಈ ಮಧ್ಯೆ ಇದೀಗ ಶಿವರಾಮೇಗೌಡ ಎಂಟ್ರಿ ಕೊಟ್ಟಿದ್ದು, ಕೇಂದ್ರಕ್ಕೆ ಪತ್ರ ಬರೆದು ಹೆಚ್ಚಿನ ಪರಿಹಾರಕ್ಕೆ ಆಗ್ರಹಿಸಿದ್ದು ನಾನು ಎಂದು ಮಾಜಿ ಸಂಸದ ಶಿವರಾಮೇಗೌಡ ಟ್ವೀಟ್ ಮಾಡಿದ್ದಾರೆ

    https://www.youtube.com/watch?v=XpZzL4RaCWk