Tag: ಸಂಸದೆ ಸುಮಲತಾ ಅಂಬರೀಶ್

  • ಅಭಿಷೇಕ್ ರಾಜಕೀಯ ಪ್ರವೇಶ ಬಗ್ಗೆ ಚುನಾವಣೆ ಬಂದಾಗ ನೋಡೋಣ: ಸುಮಲತಾ

    ಅಭಿಷೇಕ್ ರಾಜಕೀಯ ಪ್ರವೇಶ ಬಗ್ಗೆ ಚುನಾವಣೆ ಬಂದಾಗ ನೋಡೋಣ: ಸುಮಲತಾ

    ಬೆಂಗಳೂರು: ಸಂಸದೆ ಸುಮಲತಾ ಅಂಬರೀಶ್ ಅವರು ಇಂದು ಕೆಲವು ಅಭಿವೃದ್ಧಿ ಕಾರ್ಯಗಳ ವಿಚಾರವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಆಚಾರ್ ಹಾಲಪ್ಪ ಬಸಪ್ಪ ಅವರನ್ನು ಭೇಟಿಯಾಗಿದ್ದಾರೆ.

    ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಭಿಷೇಕ್ ಈಗ ಅವರಿಗೆ 28 ವರ್ಷ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಸಿನಿಮಾ ಕಡೆ ಹೆಚ್ಚು ಗಮನಕೊಟ್ಟಿದ್ದಾರೆ. ವಿಧಾನಸಭಾ ಚುನಾವಣೆಗೆ 20 ತಿಂಗಳು ಇದೆ. ಆಗ ನೋಡೋಣ ಏನಾಗಲಿದೆಯೋ ಅಭಿಮಾನಿಗಳಿಂದ ಒತ್ತಾಯ ಬಂದರೆ ನೋಡೋಣ. ಸದ್ಯಕ್ಕಂತೂ ಸಿನಿಮಾಗಳ ಕಡೆ ಗಮನಹರಿಸಿದ್ದಾರೆ ಎಂದಿದ್ದಾರೆ.

    ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಲಪ್ಪ ಆಚಾರ್ ಅವರನ್ನು ಸಂಸದೆ ಸುಮಲತಾ ವಿಧಾನಸೌಧದಲ್ಲಿ ಕ್ಯಾಬಿನೆಟ್ ಸಭೆಯ ಬಳಿಕ ಗಣಿ ಸಚಿವರನ್ನು ಭೇಟಿ ಮಾಡಿದ್ದಾರೆ. ಸುಮಲತಾ ಅಕ್ರಮ ಗಣಿಗಾರಿಕೆ ಕುರಿತ ಮಾಹಿತಿಯನ್ನು ನೀಡಿದ್ದಾರೆ. ಇದನ್ನೂ ಓದಿ:  ಕಣ್ಣಿಗೆ ಖಾರದ ಪುಡಿ ಎರಚಿ ಯುವಕನ ಬರ್ಬರ ಕೊಲೆ

    ಮಂಡ್ಯ ಜಿಲ್ಲೆಯ ಅಕ್ರಮ ಕಲ್ಲು ಗಣಿಗಾರಿಕೆ ಬಗ್ಗೆ ಸಚಿವರ ಜೊತೆ ಚರ್ಚಿಸಿದೆ. ಸಚಿವರನ್ನೂ ಜಿಲ್ಲೆಗೆ ಭೇಟಿ ನೀಡುವಂತೆ ಮನವಿ ಮಾಡಿದ್ದೇನೆ. ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಅಕ್ರಮ ಗಣಿಗಾರಿಕೆ ವಿಚಾರವಾಗಿ ಮೊದಲ ಹೆಜ್ಜೆ ಇಟ್ಟು ಆಗಿದೆ. ಕದ್ದು ಮುಚ್ಚಿ ನಡೆಯುತ್ತಿರುವ ಗಣಿಗಾರಿಕೆಯನ್ನು ತಡೆದು ನಿಯಂತ್ರಣಕ್ಕೆ ತರುವ ಸಮಯವಾಗಿದೆ. ಓಪನ್ ಆಗಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಸ್ಥಗಿತವಾಗಿದೆ. ಊಹೆ ಮಾಡಿಕೊಂಡು ಇರುವವರಿಗೆ ನಾನು ಬಂದು ಉತ್ತರ ಕೊಡಲು ಸಾಧ್ಯವಿಲ್ಲ ಎಂದಿದ್ದಾರೆ. ಇದನ್ನೂ ಓದಿ:  ಅತ್ಯಾಚಾರನೂ ಇಲ್ಲ, ಏನೂ ಇಲ್ಲ ಅವರಿಬ್ಬರು ನಾಟಕವಾಡುತ್ತಿದ್ರು: ಎಸ್‍ಟಿಎಸ್

    ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ವೇತನ ಕಡಿಮೆ ಇದೆ. ಅವರು ಕೊರೊನಾ ಸಮಯದಲ್ಲಿ ಸಾಕಷ್ಟು ಕೆಲಸವನ್ನು ಮಾಡಿದ್ದಾರೆ. ಹೀಗಾಗಿ ನಾವು ಅವರಿಗೆ ಸಂಬಳ ಹೆಚ್ಚು ಮಾಡಬೇಕು ಎಂದು ನಾವು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಆಚಾರ್ ಹಾಲಪ್ಪ ಬಸಪ್ಪ ಅವರಿಗೆ ಮನವಿ ಮಾಡಿದ್ದೇನೆ ಅವರು ಕೆಲವು ಸಲಹೆಯನ್ನು ಕೊಟ್ಟಿದ್ದಾರೆ. ಆರೋಗ್ಯ ಕಾರ್ಯಕರ್ತರ ಮೇಲೆ ನಡೆಯುತ್ತಿದ್ದ ಹಲ್ಲೆ ಕುರಿತಾಗಿ ನಾವು ಪಾರ್ಲಿಮೆಂಟ್‍ನಲ್ಲಿ ಚರ್ಚೆ ಮಾಡಿದ್ದೇವೆ. ಆರೋಗ್ಯ ಕಾರ್ಯಕರ್ತರು, ವೈದ್ಯರ ಮೇಲೆ ನಡೆಯುವ ಹಲ್ಲೆಯನ್ನು ಖಂಡಿಸುತ್ತೇನೆ ಎಂದಿದ್ದಾರೆ.

  • ಸಂಸದೆಗಾಗಿ 10 ಮೀಟರ್ ಮುಂದೆ ಬಂತು ಮೆಮೋ ರೈಲು

    ಸಂಸದೆಗಾಗಿ 10 ಮೀಟರ್ ಮುಂದೆ ಬಂತು ಮೆಮೋ ರೈಲು

    ಮಂಡ್ಯ: 10 ಮೀಟರ್ ಹಿಂದೆ ನಿಂತಿದ್ದ ರೈಲನ್ನು ತಾನಿದ್ದ ಜಾಗಕ್ಕೆ ಸಂಸದೆ ಸುಮಲತಾ ಅಂಬರೀಶ್ ಕರೆಸಿಕೊಂಡು ವಿಶೇಷ ಬೋಗಿಯನ್ನು ಉದ್ಘಾಟಿಸಿದ್ದಾರೆ.

    ಮಂಡ್ಯ ರೈಲು ನಿಲ್ದಾಣದಲ್ಲಿ ಮೆಮೋ ರೈಲಿನ ಮಹಿಳಾ ವಿಶೇಷ ಬೋಗಿಯನ್ನು ಉದ್ಘಾಟಿಸುವ ವೇಳೆ ಸಂಸದೆ ಸುಮಲತಾ ಅವರು ರೈಲನ್ನು ತಾವಿದ್ದಲ್ಲಿಯೇ ಕರೆಸಿಕೊಳ್ಳುವ ಮೂಲಕ ಸುದ್ದಿಯಾಗಿದ್ದಾರೆ.

    ಉದ್ಘಾಟನೆ ಮಾಡಲು ಸಿದ್ಧಗೊಂಡಿದ್ದ ರೈಲು 10 ಮೀ. ಹಿಂದೆ ನಿಂತಿತ್ತು. 10 ಹೆಜ್ಜೆ ನಡೆಯಲು ಸಂಸದೆ ಸುಮಲತಾ ಯೋಚಿಸಿದ್ದಕ್ಕಾಗಿ ಅಧಿಕಾರಿಗಳೇ ರೈಲನ್ನು ಮುಂದಕ್ಕೆ ಕರೆಸಿದ್ದಾರೆ. ರೈಲು ತಾನಿದ್ದ ಸ್ಥಳಕ್ಕೆ ಬಂದ ನಂತರ ಸುಮಲತಾ ಮೆಮೋ ರೈಲಿನ ವಿಶೇಷ ಬೋಗಿಯ ಟೇಪ್ ಕತ್ತರಿಸಿ ಒಳ ಪ್ರವೇಶಿಸಿದರು.

    ಕೇಂದ್ರ ರೈಲ್ವೆ ಸಚಿವರ ಬಳಿ ಮೆಮೋ ರೈಲಿನಲ್ಲಿ ವಿಶೇಷ ಮಹಿಳಾ ಬೋಗಿಗಾಗಿ ಸಂಸದೆ ಸುಮಲತಾ ಮನವಿ ಮಾಡಿದ್ದರು. ಮನವಿ ಮೇರೆಗೆ ರೈಲ್ವೇ ಸಚಿವಾಲಯ ಮೆಮೋ ರೈಲಿನಲ್ಲಿ ಮಹಿಳಾ ವಿಶೇಷ ಬೋಗಿ ಮಂಜೂರು ಮಾಡಿತ್ತು. ಈ ಮೂಲಕ ಮಂಡ್ಯ ಮಹಿಳೆಯರಿಗೆ ಸುಮಲತಾ ದೀಪಾವಳಿ ಗಿಫ್ಟ್ ನೀಡಿದ್ದಾರೆ.

    ಈ ಮೆಮೋ ರೈಲು ಬೆಂಗಳೂರು- ಮೈಸೂರು ಮಾರ್ಗವಾಗಿ ಸಂಚರಿಸುತ್ತದೆ. ರೈಲಿನಲ್ಲಿ ಮಹಿಳಾ ಬೋಗಿಯನ್ನು ಅಳವಡಿಸಲಾಗಿರಲಿಲ್ಲ. ಇದಕ್ಕಾಗಿ ಸುಮಲತಾ ಅವರು ಕೇಂದ್ರ ರೈಲ್ವೆ ಇಲಾಖೆಗೆ ಮನವಿ ಮಾಡಿದ್ದರು. ಈ ಬೋಗಿಯಲ್ಲಿ 80 ಆಸನಗಳಿದ್ದು, ಪ್ರತ್ಯೇಕ ಮಹಿಳಾ ಬೋಗಿ ಅಳವಡಿಕೆಯಿಂದ ನಿತ್ಯ ಬೆಂಗಳೂರಿಗೆ ತೆರಳುವ ಮಹಿಳಾ ಕಾರ್ಮಿಕರಿಗೆ ಅನುಕೂಲವಾಗಿಲಿದೆ.

    ಸಂಸದೆ ಸುಮಲತಾ ಅಂಬರೀಶ್ ಮಾತನಾಡಿ, ಪ್ರತ್ಯೇಕ ಮಹಿಳಾ ಬೋಗಿಗೆ ಈ ಭಾಗದ ಮಹಿಳೆಯರು ನನ್ನಲ್ಲಿ ಮನವಿ ಸಲ್ಲಿಸಿದ್ದರು. ಚುನಾವಣೆ ಸಮಯದಲ್ಲಿ ಕೆಲಸ ನಿರತ ಮಹಿಳೆಯರು ಮನವಿ ಮಾಡಿದ್ದರು. ಜನರ ಕೋರಿಕೆಯಂತೆ ಕೇಂದ್ರ ರೈಲ್ವೇ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೆ. ಇದೀಗ ಮಹಿಳಾ ಬೋಗಿಯನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.

  • ಬಿಜೆಪಿಯ ಪ್ರಭಾವಿ ನಾಯಕ ಬಿಎಲ್ ಸಂತೋಷ್ ಜೊತೆ ಸುಮಲತಾ ಚರ್ಚೆ

    ಬಿಜೆಪಿಯ ಪ್ರಭಾವಿ ನಾಯಕ ಬಿಎಲ್ ಸಂತೋಷ್ ಜೊತೆ ಸುಮಲತಾ ಚರ್ಚೆ

    ಬೆಂಗಳೂರು: ಮಂಡ್ಯದ ಪಕ್ಷೇತರ ಸಂಸದೆ ಸುಮಲತಾ ಅಂಬರೀಷ್ ಬಿಜೆಪಿಯ ಪ್ರಭಾವಿ ನಾಯಕರನ್ನು ಭೇಟಿ ಮಾಡುವ ಮೂಲಕ ಕುತೂಹಲ ಮುಂದುವರಿಸಿದ್ದಾರೆ.

    ಸಂಸದೆ ಸುಮಲತಾ ಅವರು ಮಾಜಿ ಸಿಎಂ ಎಸ್.ಎಂ.ಕೃಷ್ಣ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರನ್ನು ಇತ್ತೀಚೆಗಷ್ಟೇ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಬೆಂಗಳೂರಿನ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಇಂದು ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನು ಭೇಟಿ ಮಾಡಿದ್ದಾರೆ.

    ಬೆಂಗಳೂರಿನ ಬಿಜೆಪಿ ಪ್ರಧಾನ ಕಚೇರಿಗೆ ಆಗಮಿಸಿದ ಸುಮಲತಾ ಅವರನ್ನು ಬಿ.ಎಲ್.ಸಂತೋಷ್ ಹಾಗೂ ಮಹಿಳಾ ಮೋರ್ಚಾದ ಅಧ್ಯಕ್ಷೆ ಭಾರತಿ ಶೆಟ್ಟಿ ಸ್ವಾಗತಿಸಿದರು. ಬಿಜೆಪಿ ಕಚೇರಿಯ ವಿಐಪಿ ಕೊಠಡಿಯಲ್ಲಿ ಬಿ.ಎಲ್ ಸಂತೋಷ್ ಮತ್ತು ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್ ಜೊತೆ ಸುಮಲತಾ ಅಂಬರೀಷ್ ಸುಮಾರು ಒಂದು ಗಂಟೆ ಕಾಲ ಚರ್ಚೆ ನಡೆಸಿದರು. ಈ ಬೆಳವಣಿಗೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

    ಚರ್ಚೆ ಬಳಿಕ ಮಾತನಾಡಿದ ಸುಮಲತಾ ಅಂಬರಿಷ್ ಅವರು, ಚುನಾವಣೆಯಲ್ಲಿ ನನಗೆ ಬೆಂಬಲ ಕೊಟ್ಟಿದ್ದಾರೆ. ಹೀಗಾಗಿ ಬಿಜೆಪಿ ನಾಯಕರಿಗೆ ಧನ್ಯವಾದ ತಿಳಿಸಲು ಬಂದಿದ್ದೇನೆ. ಬಾಹ್ಯ ಬೆಂಬಲ ನೀಡುವಂತೆ ಬಿಜೆಪಿ ನಾಯಕರು ಕೇಳಿಕೊಂಡಿಲ್ಲ ಹಾಗೂ ಈ ಕುರಿತು ಯಾವುದೇ ಚರ್ಚೆಯಾಗಿಲ್ಲ. ಒಂದು ವೇಳೆ ಬಿಜೆಪಿಗೆ ಬಾಹ್ಯ ಬೆಂಬಲ ನೀಡುವುದಾದರೆ ಮಂಡ್ಯ ಜನತೆ ಜೊತೆ ಚರ್ಚಿಸಿ ಮುಂದುವರಿಯುತ್ತೇನೆ ಎಂದು ತಿಳಿಸಿದರು.

    ಮಂಡ್ಯದ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಸಹಕಾರ ಬೇಕಾಗುತ್ತದೆ. ಈ ನಿಟ್ಟಿನಲ್ಲಿ ಬಿಜೆಪಿ ನಾಯಕರ ಜೊತೆಗೆ ಮಾತುಕತೆ ಅಗತ್ಯವಾಗುತ್ತದೆ ಎಂದು ಹೇಳಿದರು.

    ರಾಜ್ಯ ಬಿಜೆಪಿಯ ಪ್ರಮುಖ ನಾಯಕರು ಇಲ್ಲದ ಸಂದರ್ಭದಲ್ಲೇ ಬಿ.ಎಲ್.ಸಂತೋಷ್ ಅವರನ್ನು ಭೇಟಿ ಮಾಡಿರುವ ಸುಮಲತಾ ಅವರ ನಡೆ ಕುತೂಹಲ ಮೂಡಿಸಿದೆ.