Tag: ಸಂಸದ ಅನಂತಕುಮಾರ್ ಹಗ್ಡೆ

  • ಮುಸಲ್ಮಾನನ ಮಗ ಗಾಂಧಿ ಹೇಗಾದ ಎನ್ನುವ ಪ್ರಶ್ನೆಗೆ ಕಾಂಗ್ರೆಸ್ ಉತ್ತರ ಕೊಡಲಿ: ಅನಂತಕುಮಾರ್ ಹೆಗ್ಡೆ

    ಮುಸಲ್ಮಾನನ ಮಗ ಗಾಂಧಿ ಹೇಗಾದ ಎನ್ನುವ ಪ್ರಶ್ನೆಗೆ ಕಾಂಗ್ರೆಸ್ ಉತ್ತರ ಕೊಡಲಿ: ಅನಂತಕುಮಾರ್ ಹೆಗ್ಡೆ

    – ತಮ್ಮ ದೇಶದ ಕೆಲ ತಲೆಹಿಡುಕರಿಗೆ ಏರ್ ಸ್ಟ್ರೈಕ್ ಸಾಕ್ಷಿ ಬೇಕಂತೆ

    ಕಾರವಾರ: ಅಮೆರಿಕ ಸೇರಿದಂತೆ ಇಡೀ ಜಗತ್ತು ಭಾರತೀಯ ವಾಯು ಪಡೆ ನಡೆಸಿದ ಏರ್ ಸ್ಟ್ರೈಕ್ ಅನ್ನ ಒಪ್ಪಿಕೊಂಡಿದೆ. ಆದರೆ ನಮ್ಮಲ್ಲಿರುವ ಕೆಲ ತಲೆಹಿಡುಕರಿಗೆ ಸಾಕ್ಷಿ ಬೇಕು ಎಂದು ಏರ್ ಸ್ಟ್ರೈಕ್ ಬಗ್ಗೆ ಸಾಕ್ಷಿ ಕೇಳಿದವರ ವಿರುದ್ಧ ಎಂದು ಕೇಂದ್ರ ಸಚಿವ ಅನಂತಕುಮಾರ್ ಹೆಗ್ಡೆ ವಾಗ್ದಾಳಿ ನಡೆಸಿದ್ದಾರೆ.

    ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕೂಗ್ತಿ ಮಹಾಸತಿ ದೇವಸ್ಥಾನದಲ್ಲಿ ನಡೆದ ತಾಯ್ನೆಲದ ಸೇವೆ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಸಚಿವರು, ಭಾರತೀಯ ಯೋಧರ ಶೌರ್ಯದ ಬಗ್ಗೆ ಸಂದೇಹ ಪಡುವ ಬಿಕನಾಸಿ ಪರಿಸ್ಥಿತಿ ಕಾಂಗ್ರೆಸ್‍ನಿಂದ ನಿರ್ಮಾಣವಾಗಿದೆ. ನಮ್ಮ ಪೈಲಟ್‍ಗಳು ಪಾಕಿಸ್ತಾನಕ್ಕೆ ನುಗ್ಗಿ ಉಗ್ರರನ್ನು ಹತ್ಯೆ ಮಾಡಿದ್ದಕ್ಕೆ ಸಾಕ್ಷಿ ಕೇಳುತ್ತಿದ್ದಾರೆ. ಆದರೆ ಮುಸಲ್ಮಾನನ ಮಗ ಗಾಂಧಿ ಹೇಗಾದ ಎನ್ನುವುದಕ್ಕೆ ಸಾಕ್ಷಿ ಕೊಡುತ್ತಾರಾ ಎಂದು ಪ್ರಶ್ನಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಮುಸಲ್ಮಾನ ಅಪ್ಪ, ಕ್ರಿಶ್ಚಿಯನ್ ತಾಯಿಗೆ ಹುಟ್ಟಿರುವ ಈ ಪರದೇಶಿ ಬ್ರಾಹ್ಮಣ ಹೇಗಾದ ಎನ್ನುವುದಕ್ಕೆ ಡಿಎನ್‍ಎ ಸಾಕ್ಷಿ ಕೊಡುತ್ತಾರಾ? ಮಾಜಿ ಪ್ರಧಾನಿ ರಾಜೀವ್ ಗಾಂಧಿ ಉಗ್ರರ ದಾಳಿಗೆ ಬಲಿಯಾದಾಗ ಅವರ ದೇಹ ಛಿದ್ರ ಛಿದ್ರವಾಗಿತ್ತು. ಮೃತ ದೇಹವನ್ನು ಪತ್ತೆ ಹಚ್ಚಲು, ಡಿಎನ್‍ಎ ಪರೀಕ್ಷೆಗೆ ಮಕ್ಕಳ ರಕ್ತದ ಮಾದರಿ ನೀಡುವಂತೆ ಸೋನಿಯಾ ಗಾಂಧಿ ಕೇಳಲಾಗಿತ್ತು. ಆದರೆ ಸೋನಿಯಾ ಗಾಂಧಿ ಅವರು, ರಾಹುಲ್ ಗಾಂಧಿ ರಕ್ತದ ಮಾದರಿ ಬೇಡ, ಪ್ರಿಯಾಂಕಾ ಗಾಂಧಿ ರಕ್ತವನ್ನು ತೆಗೆದುಕೊಳ್ಳಿ ಎಂದು ಹೇಳಿದ್ದರು. ಅಂತಹವರು ಈಗ ಏರ್ ಸ್ಟ್ರೈಕ್ ಸಾಕ್ಷಿ ಕೇಳುತ್ತಿದ್ದಾರೆ ಎಂದು ಗಾಂಧಿ ಕುಟುಂಬದ ವಿರುದ್ಧ ಕಿಡಿಕಾರಿದರು.

    ಮೆಣಸಿನಕಾಯಿ ಗಿಡದಲ್ಲಿ ತೆಂಗಿನ ಕಾಯಿ ಬಿಡುತ್ತದೆ ಎನ್ನುವ ಸಾಕ್ಷಿ ಗಾಂಧಿ ಕುಟುಂಬದಲ್ಲಿ ಇರಬಹುದು. ಆದರೆ ನಮ್ಮಲ್ಲಿ ಅಂತಹ ಸಾಕ್ಷಿಗಳಿಲ್ಲ. ಕಾಂಗ್ರೆಸ್ ದಿವಾಳಿಯಾಗುತ್ತಿದೆ. ಹೀಗಾಗಿ ಇಂತಹ ಹೇಳಿಕೆಗಳನ್ನು ನೀಡುತ್ತಿದೆ ಎಂದು ವ್ಯಂಗ್ಯವಾಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv