Tag: ಸಂಸದ ಡಿ.ಕೆ ಸುರೇಶ್

  • ಸರ್ಕಾರಕ್ಕೆ ನಮ್ಮನ್ನು ಬಂಧಿಸುವ ಶಕ್ತಿ ಇಲ್ಲ: ಡಿ.ಕೆ. ಸುರೇಶ್

    ಸರ್ಕಾರಕ್ಕೆ ನಮ್ಮನ್ನು ಬಂಧಿಸುವ ಶಕ್ತಿ ಇಲ್ಲ: ಡಿ.ಕೆ. ಸುರೇಶ್

    ರಾಮನಗರ: ನಮ್ಮ ಪಾದಯಾತ್ರೆ ಕಟ್ಟಿ ಹಾಕುವ ಶಕ್ತಿ ಸರ್ಕಾರಕ್ಕೆ ಇಲ್ಲ. ಜನರ ಆರೋಗ್ಯ ದೃಷ್ಟಿ, ಬೆಂಗಳೂರಿನಲ್ಲಿ ಕೇಸ್ ಹೆಚ್ಚಳವಾಗುತ್ತಿರುವ ಕಾರಣ ಪಾದಯಾತ್ರೆ ರದ್ದು ಮಾಡಿದ್ದೇವೆ ಎಂದು ಸಂಸದ ಡಿ.ಕೆ. ಸುರೇಶ್ ಹೇಳಿದರು.

    ರಾಮನಗರದಲ್ಲಿ ಪಬ್ಲಿಕ್ ಟಿವಿ ಪ್ರತಿನಿಧಿ ಜೊತೆ ಮಾತನಾಡಿದ ಅವರು, ಕೋವಿಡ್ ಹೆಚ್ಚಳವಾಗಿದ್ದನ್ನು ನೋಡಿ ನಮ್ಮ ಮೇಲೆ ಕೇಸ್ ಹಾಕಲು ಸರ್ಕಾರ ಪ್ಲ್ಯಾನ್ ಮಾಡಿತ್ತು. ಸರ್ಕಾರದ ವೈಫಲ್ಯದಿಂದ ಕೋವಿಡ್ ಹೆಚ್ಚಾಗಿದೆ. ಇದನ್ನು ಪಾದಯಾತ್ರೆ ಮೇಲೆ ಹಾಕುವ ಯತ್ನ ನಡೆದಿದೆ. ಈ ಕಾರಣ ಪಾದಯಾತ್ರೆ ರದ್ದು ಮಾಡುತ್ತಿದ್ದೇವೆ. ಇದು ಕೊನೆಯಲ್ಲ, ಆರಂಭ ಎಂದರು. ಇದನ್ನೂ ಓದಿ:  5 ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿ ಸಿದ್ದು ಪಕ್ಕ ಪ್ರತ್ಯಕ್ಷ

    ಸರ್ಕಾರ ನಮ್ಮನ್ನು ಬಂಧಿಸುತ್ತದೆ ಎಂದು ಹೆದರಿ ಪಾದಯಾತ್ರೆ ರದ್ದು ಮಾಡುತ್ತಿಲ್ಲ. ಸರ್ಕಾರಕ್ಕೆ ಆ ಶಕ್ತಿಯೂ ಇಲ್ಲ ಎಂದು ರಾಜ್ಯ ಸರ್ಕಾರಕ್ಕೆ ಡಿ.ಕೆ.ಸುರೇಶ್ ಸವಾಲೆಸೆದರು. ಇದನ್ನೂ ಓದಿ: ನೋಟಿಸ್‍ಗೆ ಹೆದರಲ್ಲ, ಜನರ ಹಿತದೃಷ್ಟಿಯಿಂದ ಪಾದಯಾತ್ರೆ ರದ್ದು: ಸಿದ್ದರಾಮಯ್ಯ

  • ರಾಮನಗರ ಜಿಲ್ಲೆಯನ್ನು ಯಾರಿಗೂ ಜಿಪಿಎ ಬರೆದುಕೊಟ್ಟಿಲ್ಲ: ಪ್ರೀತಂಗೌಡ

    ರಾಮನಗರ ಜಿಲ್ಲೆಯನ್ನು ಯಾರಿಗೂ ಜಿಪಿಎ ಬರೆದುಕೊಟ್ಟಿಲ್ಲ: ಪ್ರೀತಂಗೌಡ

    ಹಾಸನ : ಸಂಸದ ಡಿ.ಕೆ.ಸುರೇಶ್ ನಡವಳಿಕೆಯನ್ನು ಇಡೀ ರಾಜ್ಯದ ಜನತೆ ಖಂಡಿಸುತ್ತಿದ್ದಾರೆ. ರಾಮನಗರ ಜಿಲ್ಲೆಯನ್ನು ಯಾರಿಗೂ ಜಿಪಿಎ ಬರೆದುಕೊಟ್ಟಿಲ್ಲ. ಅಲ್ಲಿ ಪಾಳೇಗಾರರ ಸಂಸ್ಕೃತಿ ನಡೆಯುತ್ತಿಲ್ಲ. ಇನ್ಮುಂದೆ ಅವರ ನಡವಳಿಕೆಯನ್ನು ತಿದ್ದಿಕೊಳ್ಳಬೇಕು ಎಂದು ಶಾಸಕ ಪ್ರೀತಂಗೌಡ ಹೇಳಿದರು.

    ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕ್ಯಾಬಿನೆಟ್ ಮಂತ್ರಿ ಭಾಷಣ ಮಾಡುವಾಗ ಪಾಳೇಗಾರರ ಸಂಸ್ಕೃತಿಯಲ್ಲಿ ಜಗಳಕ್ಕೆ ಹೋಗಿದ್ದಾರೆ. ಸಂಸದ ಡಿ.ಕೆ.ಸುರೇಶ್ ನಡವಳಿಕೆಯನ್ನು ಇಡೀ ರಾಜ್ಯದ ಜನತೆ ಖಂಡಿಸುತ್ತಿದ್ದಾರೆ. ರಾಮನಗರ ಜಿಲ್ಲೆಯನ್ನು ಯಾರಿಗೂ ಜಿಪಿಎ ಬರೆದುಕೊಟ್ಟಿಲ್ಲ. ಅಲ್ಲಿ ಪಾಳೇಗಾರರ ಸಂಸ್ಕೃತಿ ನಡೆಯುತ್ತಿಲ್ಲ. ಇನ್ಮುಂದೆ ಅವರ ನಡವಳಿಕೆಯನ್ನು ತಿದ್ದಿಕೊಳ್ಳಬೇಕು. ಇಡೀ ರಾಜಕಾರಣಿಗಳು ತಲೆ ತಗ್ಗಿಸುವ ಕೆಲಸವನ್ನು ನಿನ್ನೆ ರಾಮನಗರದಲ್ಲಿ ಮಾಡಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಕನಕಪುರ, ರಾಮನಗರ ಯಾರೋಬ್ಬರ ಸ್ವತ್ತಲ್ಲ: ಎಚ್‍ಡಿಕೆ ಕಿಡಿ

    ಇಂದು ರಾಜ್ಯಾದ್ಯಂತ ಅಶ್ವತ್ಥನಾರಾಯಣ ಅವರನ್ನು ಬೆಂಬಲಿಸಿ ಪ್ರತಿಭಟನೆ ಮಾಡುತ್ತಿದ್ದೇವೆ. ಮಾಫಿಯಾ ಆಫ್ ರಾಮನಗರ ಖಂಡಿಸುತ್ತೇವೆ. ಅವರು ಮಾಡುತ್ತಿರುವುದು ಅವರ ಮೇಲೆ ಚಪ್ಪಡಿ ಕಲ್ಲು ಎಳೆದುಕೊಂಡಂತೆ. ಕಾರ್ಯಕ್ರಮಕ್ಕೆ ಡಿ.ಕೆ ಸುರೇಶ್ ಅವರಿಗೆ ಡೋಲ್ ಸೆಟ್ಟು ಇಟ್ಟು ಆಹ್ವಾನ ಕೊಡಲು ಆಗಲ್ಲ. ಡಿಸಿಯಿಂದ ಸಮಸ್ಯೆ ಆಗಿದ್ದರೆ ಹಕ್ಕುಚ್ಯುತಿ ಮಂಡಿಸಲಿ. ಸಾವಿರ ಜನ ಕರೆದುಕೊಂಡು ಬಂದು ಧಿಕ್ಕಾರ ಕೂಗುವುದು ಸಭ್ಯತೆಯಲ್ಲ. ಒಂದೂವರೆ ವರ್ಷ ಸಮ್ಮಿಶ್ರ ಸರ್ಕಾರ ಇತ್ತು. ನನ್ನನ್ನು ಕರೆಯುತ್ತಿರಲಿಲ್ಲ. ನಾನು ಸ್ಟೇಜ್ ಮೇಲೆ ಹೋಗಿ ಕೂಗಾಡಿದ್ನಾ. ನನಗೇನು ಕೂಗಾಡಲು ಬರಲ್ವಾ. ನನ್ನ ಹತ್ರ ಹಾಸನದಲ್ಲಿ ಜನ ಇಲ್ವಾ. ನಾನು ಆ ರೀತಿ ಮಾಡಿದ್ನಾ. ಸಮಾಧಾನವಾಗಿಯೇ ಇದ್ದೆ. ರಾಜಕೀಯ ಬಂದಾಗ ರಾಜಕೀಯ ಮಾಡೋಣ ಎಂದು ಹೇಳಿದರು.

    ಮುಂದಿನ ಚುನಾವಣೆಯಲ್ಲಿ ಹಾಸನದಲ್ಲಿ ಏಳಕ್ಕೆ ಏಳು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂಬ ಡಿಕೆಶಿ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಕಳೆದ ಬಾರಿ ಯಾರೂ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿದ್ದರೋ, ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರೋ ಅವರು ಏಳಕ್ಕೆ ಏಳು ಕಾಂಗ್ರೆಸ್ ಗೆಲ್ಲುತ್ತದೆ ಎಂದಿದ್ದರು. ಏಳು ಮಕಾಡೆ ಮಲಗಿ, ಹೇಳಿದವರು ಸೋತರು ಎಂದು ಮಾಜಿ ಸಚಿವ ಎ.ಮಂಜು ವಿರುದ್ಧ ಕುಟುಕಿದರು.

    ನಂತರ 224 ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದು ಹೇಳುತ್ತೇನೆ. ಮೈಕ್ ಮುಂದೆ ಹೇಳುವುದೇ ಬೇರೆ ರಾಜಕೀಯವೇ ಬೇರೆ. ಮತಗಳೇನು ಅವರ ಜೇಬಿನಲ್ಲಿ ಇರಲ್ಲ ಎಂದು ಡಿ.ಕೆ.ಶಿವಕುಮಾರ್ ಅವರು ಟಾಂಗ್ ನೀಡಿದರು. ಇದನ್ನೂ ಓದಿ: ರಾಮನಗರ ಶಾಂತಿಯ ಜಿಲ್ಲೆ, ಗೂಂಡಾ ರೀತಿಯ ವರ್ತನೆ ಮಾಡಿದ್ದು ತಪ್ಪು: ಎಚ್‍ಡಿಕೆ ಕಿಡಿ

    ಇದೇ ವೇಳೆ ಡಿ.ಕೆ.ಶಿವಕುಮಾರ್ ಮೇಕೆದಾಟು ಯೋಜನೆ ಪಾದಯಾತ್ರೆ ವಿಚಾರವಾಗಿ ಮಾತನಾಡಿದ ಅವರು, ಮೇಕೆದಾಟು ಹೋರಾಟ ರೈತರಿಗೋಸ್ಕರ, ಜನರಿಗೋಸ್ಕರ ಮಾಡುವುದಾದರೆ ಮಾಡಲಿ. ಅದನ್ನು ಬಿಟ್ಟು ರಾಜಕೀಯಕ್ಕಾಗಿ ಮಾಡಬಾರದು. ಚುನಾವಣೆ ಬಗ್ಗೆ ಮಾತನಾಡುತ್ತಿದ್ದಾರೆ ಎಂದರೆ ಮೇಕೆದಾಟು ಚುನಾವಣೆ ಗಿಮಿಕ್ ಎಂದರ್ಥ. ಹಾಸನ, ಹಳೇ ಮೈಸೂರು ಭಾಗದ ಜನರಿಗೆ ಚುನಾವಣೆ ಗಿಮಿಕ್ ಅವಶ್ಯಕತೆ ಇಲ್ಲ. ಈ ಹೋರಾಟದಿಂದ ಹೊಸದಾಗಿ ಸೂಟುಬೂಟು ಹೊಲಿಸಿಕೊಳ್ಳಬಹುದು ಎಂದುಕೊಂಡಿದ್ದರೆ ಆ ಸೂಟು, ಬೂಟು ರೂಂನಲ್ಲಿ ಉಳಿಯುತ್ತದೆ ಹೊರತು ಧರಿಸಲು ಅವಕಾಶ ಸಿಗಲ್ಲ. ಮೇಕೆದಾಟು ವಿಚಾರವನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳಲು ಹೊರಟಿದ್ದಾರೆ. ರಾಜ್ಯದ ಬಿಜೆಪಿ ಸರ್ಕಾರ ಮೇಕೆದಾಟು ಮಾಡುತ್ತೇವೆ ಎಂದಿದ್ದಾರೆ ಕಾದುನೋಡಿ ಎಂದಿದ್ದಾರೆ. ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆಗೆ ಟಫ್‍ರೂಲ್ಸ್ ಅನ್ವಯ – ಬಿಜೆಪಿಯಿಂದ ಷಡ್ಯಂತ್ರ ಎಂದ ಕಾಂಗ್ರೆಸ್‌

  • ಕೊರೊನಾ ಮೃತನ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡು ಆದರ್ಶ ಮೆರೆದ ಸಂಸದ ಡಿ.ಕೆ ಸುರೇಶ್

    ಕೊರೊನಾ ಮೃತನ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡು ಆದರ್ಶ ಮೆರೆದ ಸಂಸದ ಡಿ.ಕೆ ಸುರೇಶ್

    ರಾಮನಗರ: ಕೋವಿಡ್ 19 ಹಾಗೂ ಸೋಂಕಿನಿಂದ ಬಲಿಯಾದವರ ಅಂತ್ಯ ಸಂಸ್ಕಾರದ ಕುರಿತು ಜನರಲ್ಲಿರುವ ಅಪನಂಬಿಕೆ ಮತ್ತು ಅಪಪ್ರಚಾರಗಳನ್ನು ತೊಡೆದು ಹಾಕಲು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯ ಡಿ.ಕೆ ಸುರೇಶ್ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದಾರೆ.

    ತಮ್ಮ ಕ್ಷೇತ್ರದ ವ್ಯಾಪ್ತಿಯ ಕನಕಪುರದ ನಿವಾಸಿ 73 ವರ್ಷ ವಯಸ್ಸಿನ ನರಸಿಂಹ ಶೆಟ್ಟಿಯವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಸಂಸದ ಸುರೇಶ್ ಅವರು ಆದರ್ಶ ಮೆರೆದಿದ್ದಾರೆ. ಮೃತರ ಅಂತ್ಯಸಂಸ್ಕಾರವನ್ನು ಕನಕಪುರ ದೇಗುಲಮಠದ ಬಳಿಯಿರುವ ಸ್ಮಶಾನದಲ್ಲಿ ಎಲ್ಲಾ ವಿಧಿ-ವಿಧಾನಗಳ ಪ್ರಕಾರ ಗೌರವಯುತವಾಗಿ ನೆರವೇರಿಸಲು ಸಹಕರಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ. ಅಂತ್ಯ ಸಂಸ್ಕಾರದಲ್ಲಿ ಪ್ರತಿಯೊಬ್ಬರೂ ಅಗತ್ಯ ಸುರಕ್ಷಾ ಪರಿಕರಗಳಾದ ಪಿಪಿಇ ಕಿಟ್ ಬಳಸಿ ಪಾಲ್ಗೊಂಡಿದ್ದರು. ವಿಧಾನ ಪರಿಷತ್ ಸದಸ್ಯ ರವಿ ಹಾಗೂ ಕನಕಪುರ ನಗರಸಭೆ ಸದಸ್ಯರು ಸಹ ಈ ಸಂದರ್ಭದಲ್ಲಿ ಹಾಜರಿದ್ದರು.

    ಇತ್ತೀಚೆಗೆ ಕೊರೊನಾ ಸೋಂಕಿತರನ್ನು ಸಮಾಜ ಕೀಳಾಗಿ ನೋಡುತ್ತಿರುವ ಹಿನ್ನೆಲೆಯಲ್ಲಿ ತಾವೇ ಖುದ್ದಾಗಿ ಆಸ್ಪತ್ರೆಗೆ ಭೇಟಿ ನೀಡಿ ಸೋಂಕಿತರ ಜತೆ ಮಾತನಾಡಿ ಸಮಾಜಕ್ಕೆ ಸಕಾರಾತ್ಮಕ ಸಂದೇಶ ರವಾನಿಸಿದ್ದ ಸುರೇಶ್ ಅವರು, ಈಗ ಸೋಂಕಿನಿಂದ ಮೃತಪಟ್ಟವರಿಗೆ ಗೌರವಯುತ ಅಂತ್ಯ ಸಂಸ್ಕಾರ ಆಗುವಂತೆ ನೋಡಿಕೊಂಡಿದ್ದಾರೆ.

    ಈ ವಿಚಾರವಾಗಿ ಇತ್ತೀಚೆಗಷ್ಟೇ ಬಹಿರಂಗ ಪತ್ರ ಬರೆದಿದ್ದ ಸುರೇಶ್ ಅವರು, ‘ಕೊರೊನಾ ಸೋಂಕಿನಿಂದ ಮರಣ ಹೊಂದಿದ ವ್ಯಕ್ತಿಗಳಿಂದ ಸಮಾಜಕ್ಕೆ ಯಾವುದೇ ಹಾನಿಯಾಗುವುದಿಲ್ಲ. ಈ ವಿಷಯದಲ್ಲಿ ಬರೀ ಊಹಾಪೋಹಗಳನ್ನು ಹಬ್ಬಿಸಲಾಗಿದೆ. ಹೀಗಾಗಿ ಶವ ಸಂಸ್ಕಾರಕ್ಕೆ ಪ್ರತಿರೋಧ ಒಡ್ಡುವುದಾಗಲಿ, ಅಡ್ಡಿಪಡಿಸುವುದಾಗಲಿ ನಮ್ಮ ಸಂಸ್ಕೃತಿಯೂ ಅಲ್ಲ, ಸದಾಚಾರವೂ ಅಲ್ಲ. ಆದ್ದರಿಂದ ಆಯಾ ಪ್ರದೇಶಗಳಲ್ಲಿ ಕೋವಿದ್ ನಿಂದ ಮರಣ ಹೊಂದಿದ ವ್ಯಕ್ತಿಗಳ ಬಂಧುಗಳು ಹಾಗೂ ಗ್ರಾಮಸ್ಥರು ನಿರಾತಂಕವಾಗಿ, ಮೃತ ವ್ಯಕ್ತಿಗೆ ಗೌರವಯುತ ಅಂತಿಮ ಸಂಸ್ಕಾರ ನೆರವೇರಲು ಅವಕಾಶ ಮಾಡಿಕೊಡಬೇಕು. ಆ ಮೂಲಕ ಮಾನವೀಯತೆ ಮತ್ತು ಸೌಹಾರ್ದತೆ ಮೆರೆಯಬೇಕು’ ಎಂದು ಮನವಿ ಮಾಡಿದ್ದರು.

    ನರಸಿಂಹ ಶೆಟ್ಟಿಯವರ ಅಂತ್ಯ ಸಂಸ್ಕಾರದ ನಂತರ ಮಾತನಾಡಿದ ಸುರೇಶ್ ಅವರು, ‘ನರಸಿಂಹ ಶೆಟ್ಟಿಯವರು ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಕೊರೊನಾ ಸೋಂಕು ತಗುಲಿ ಚಿಕಿತ್ಸೆ ಪಡೆಯುತ್ತಿದ್ದರು. ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಜೀವ ಕಳೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬ ವರ್ಗದವರಿಗೆ ಈ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಈ ಅಂತ್ಯಸಂಸ್ಕಾರದಲ್ಲಿ ಭಾಗಿಯಾದ ಮತ್ತು ಸಹಕರಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳನ್ನು ತಿಳಿಸುತ್ತೇನೆ’ ಎಂದರು.

  • ಇದು ಸಿಟಿಯಲ್ಲ ರಾಮನಗರ, ಎಸ್ಪಿಗೆ ಶಿಸ್ತು ಕಲಿಯಲು ಹೇಳು – ಡಿಕೆ ಸುರೇಶ್ ಗರಂ

    ಇದು ಸಿಟಿಯಲ್ಲ ರಾಮನಗರ, ಎಸ್ಪಿಗೆ ಶಿಸ್ತು ಕಲಿಯಲು ಹೇಳು – ಡಿಕೆ ಸುರೇಶ್ ಗರಂ

    ರಾಮನಗರ: ಇದು ಸಿಟಿಯಲ್ಲ ರಾಮನಗರ ಜಿಲ್ಲೆ ನೆನಪಿರಲಿ ಎಸ್ಪಿಗೆ ಶಿಸ್ತು ಕಲಿಯಲು ಹೇಳು ಎಂದು ಸಂಸದ ಡಿಕೆ ಸುರೇಶ್ ಅಧಿಕಾರಿಗಳ ಮೇಲೆ ಗರಂ ಆಗಿದ್ದಾರೆ.

    ಎಲ್ಲಿ ನಿಮ್ ಎಸ್ಪಿ, ಇದು ಬೇರೆ ತರಹ ಅಲ್ಲ ನಿಮ್ ಎಸ್ಪಿಗೆ ಹೇಳಿ. ಯಶವಂತಪುರಕ್ಕೆ ಏನ್ ಡ್ಯೂಟಿಗೆ ಹೋಗಿದ್ದಾರಾ ಬಂದೋಬಸ್ತ್‍ಗೆ ಹೋಗಿದ್ದಾರಾ? ಎಲೆಕ್ಷನ್ ಅದರ ಪಾಡಿಗೆ ನಡೆಯುತ್ತೆ ಮೀಟಿಂಗ್ ಇದೆ ಬರಬೇಕು. ಇದು ರಾಮನಗರ ಜಿಲ್ಲೆ ಅಂತಾ ಹೇಳಿ. ಬೇರೆ ಎಲ್ಲ ಮಾತನಾಡೋಕೆ ಆಗುತ್ತೆ ಮೀಟಿಂಗ್ ಅಟೆಂಡ್ ಮಾಡೋಕೆ ಆಗಲ್ವಾ ಎಂದು ಜಿಲ್ಲಾ ಪಂಚಾಯತ್ ನಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳ ಮೇಲೆ ಡಿಕೆ ಸುರೇಶ್ ಕಿಡಿಕಾರಿದ್ರು.

    ನಿಮ್ ಎಸ್ಪಿಗೆ ಹೇಳು ಶಿಸ್ತು ಕಲಿತ್ಕೋಳಿ ಅಂತಾ ಗೊತ್ತಾಯ್ತಾ. ಇದು ಬೆಂಗಳೂರು ಸಿಟಿ ಅಲ್ಲ ರಾಮನಗರ ಜಿಲ್ಲೆ ನೆನಪಿರಲಿ. ಪೊಲೀಸ್ ಇಲಾಖೆನಲ್ಲಿ ಕೆಲಸ ಮಾಡ್ತಿರೋದು ಡಿಸಿಪ್ಲೈನ್ ಕಲಿತುಕೊಳ್ಳೋಕೆ ಹೇಳು. ಉಳಿದಿದ್ದನ್ನು ಅಮೇಲೆ ಮಾತನಾಡುತ್ತೇನೆ. ನಾನ್ ಹೇಳ್ದೆ ಎಂದು ನಿಮ್ ಎಸ್ಪಿಗೆ ಹೇಳಿ ಎಂದು ರಾಮನಗರ ಟೌನ್ ಸಬ್ ಇನ್ಸ್ ಪೆಕ್ಟರ್ ಹೇಮಂತ್ ಗೆ ಹೇಳಿದ ಸಂಸದ ಡಿಕೆ ಸುರೇಶ್ ಸೂಚಿಸಿದ್ದಾರೆ.

    ಜಿಲ್ಲೆಗೆ ಬಂದಿರುವ ಅಧಿಕಾರಿಗಳೆಲ್ಲ ಇಲ್ಲಿ ಕೆಲಸ ಮಾಡ್ಕೊಂಡು ಇರಬೇಕು, ನಾನು ಅಷ್ಟು ದುಡ್ಡು ಇಷ್ಟು ದುಡ್ಡು ಕೊಟ್ಟು ಬಂದಿದ್ದೀನಿ ಅನ್ನೋದಲ್ಲ. ಕೆಲಸ ಮಾಡೋಕೆ ಬಂದಿದ್ದೀರಿ ಕೆಲಸ ಮಾಡ್ಕೊಂಡು ಹೋಗಬೇಕು ಅಷ್ಟೇ. ಹೊಸದಾಗಿ ಜಿಲ್ಲೆಗೆ ಬಂದಿರುವವರು ತಮ್ಮ ಪರಿಚಯ ಮಾಡಿಕೊಳ್ಳಿ ಎಂದು ಡಿಸಿಯಿಂದ ಹಿಡಿದು ಸಿಇಓ ಸೇರಿದಂತೆ ಹೊಸದಾಗಿ ಬಂದಿರುವ ಇಲಾಖೆಯ ಅಧಿಕಾರಿಗಳಿಗೆ ಸರೇಶ್ ಅವರು ಹೇಳಿದ್ದಾರೆ.

    ಒಬ್ಬೊಬ್ಬರಾಗಿ ಎಲ್ಲರನ್ನೂ ಪರಿಚಯ ಮಾಡಿಕೊಂಡು ಸಾರ್ವಜನಿಕ ಕೆಲಸ ಮಾತ್ರ ಮಾಡಬೇಕು. ಬೇರೆ ರೀತಿಯಲ್ಲಿ ಪಕ್ಷದವರು ಹೇಳಿದರು, ಮುಖಂಡರು, ಕಾರ್ಯಕರ್ತರು ಹೇಳೋದಲ್ಲ ಇಲ್ಲಿ ನಡೆಯಲ್ಲ. ಇಲ್ಲಿ ಅಗಲ್ಲ ಅನ್ನೋರು ಜಾಗ ಖಾಲಿ ಮಾಡ್ಕೊಂಡು ಹೋಗಿ ಎಂದು ಡಿಕೆ ಸುರೇಶ್ ಅಧಿಕಾರಿಗಳಿಗೆ ವಾರ್ನ್ ಮಾಡಿದ್ದಾರೆ.

  • ಐದು ದಿನಗಳ ಇಡಿ ಡ್ರಿಲ್ ಬಳಿಕ ಡಿ.ಕೆ.ಸುರೇಶ್‍ಗೆ ಕೊಂಚ ರಿಲೀಫ್

    ಐದು ದಿನಗಳ ಇಡಿ ಡ್ರಿಲ್ ಬಳಿಕ ಡಿ.ಕೆ.ಸುರೇಶ್‍ಗೆ ಕೊಂಚ ರಿಲೀಫ್

    ನವದೆಹಲಿ: ಸಂಸದ ಡಿ.ಕೆ.ಸುರೇಶ್ ಅವರಿಗೆ ಕಳೆದ 5 ದಿನಗಳಿಂದ ಫುಲ್ ಡ್ರಿಲ್ ಮಾಡಿದ್ದ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಕೊಂಚ ರಿಲೀಫ್ ನೀಡಿದ್ದಾರೆ.

    ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅಕ್ರಮ ಹಣಕಾಸು ವ್ಯವಹಾರ ಪ್ರಕರಣದ ಸಂಬಂಧ ಸಹೋದರ ಡಿ.ಕೆ.ಸುರೇಶ್ ಶುಕ್ರವಾರ ಲೋಕನಾಯಕ್ ಭವನದಲ್ಲಿರುವ ಇಡಿ ಕಚೇರಿಗೆ ಹಾಜರಾಗಿದ್ದರು. ಬೆಳಗ್ಗೆ 11 ಗಂಟೆಗೆ ವಿಚಾರಣೆ ಆರಂಭಿಸಿದ ಇಡಿ ಅಧಿಕಾರಿಗಳು ಸಂಜೆ 7 ಗಂಟೆ ಸುಮಾರಿಗೆ ವಿಚಾರಣೆ ಅಂತ್ಯಗೊಳಿಸಿದರು. ನಾಳೆ ಮತ್ತೆ ವಿಚಾರಣೆ ಹಾಜರಾಗಬೇಕು ಎಂದು ಇಡಿ ಅಧಿಕಾರಿಗಳು ಯಾವುದೇ ಸಮನ್ಸ್ ಜಾರಿ ಮಾಡಿಲ್ಲ. ಹೀಗಾಗಿ ಡಿ.ಕೆ.ಸುರೇಶ್ ಅವರಿಗೆ ಕೊಂಚ ರಿಲೀಫ್ ಸಿಕ್ಕಿದೆ.

    ವಿಚಾರಣೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಂಸದರು, ಇಡಿ ಅಧಿಕಾರಿಗಳು ಸಮನ್ಸ್ ಕೊಡುತ್ತೇವೆ. ಆಗ ವಿಚಾರಣೆಗೆ ಹಾಜರಾಗಬೇಕು ಎಂದು ತಿಳಿಸಿದ್ದಾರೆ. ನಾನು ವಿಚಾರಣೆಗೆ ಹಾಜರಾಗುತ್ತೇನೆ ಅಂತ ಹೇಳಿದ್ದೇನೆ. ಆದರೆ ವಿಚಾರಣೆಗೆ ಯಾವಾಗ ಹಾಜರಾಗಬೇಕು ಎಂದು ಸಮಯ ತಿಳಿಸಿಲ್ಲ ಎಂದರು.

    ಬೇರೆ ಇನ್ನೇನಾದ್ರು ಇದೆಯಾ? ನೀವು ಹೇಳಿದ್ರಿ ಅಂತ ಸ್ವಲ್ಪ ಬೇಗ ಬಿಟ್ಟಿದ್ದಾರೆ ಎಂದು ಮಾಧ್ಯಮಗಳ ವಿರುದ್ಧ ನಗುತ್ತಲೇ ಕಿಡಿಕಾರಿದರು. ಬಳಿಕ ಸ್ವಲ್ಪ ಗರಂ ಆದ ಸಂಸದರು, ನೀವೇ ಏನೇನೋ ಮಾಹಿತಿ ಕೊಡುತ್ತೀರಿ. ಅದನ್ನೆಲ್ಲಾ ಅವರು ಕೇಳಬೇಕಲ್ವಾ? ಇದೊಳ್ಳೆ ಕಥೆಯಾಯ್ತಲ್ಲಾ. ನಿಮಗಿರುವಷ್ಟು ಮಾಹಿತಿ ನನಗಿಲ್ಲ ಎಂದು ಹೇಳಿದರು.

  • ಜನ ಡಿಕೆ ಸುರೇಶ್‍ರನ್ನ ಸಂಸದ ಅನ್ನಲ್ಲಾ ಗೂಂಡಾ ಎಂಪಿ ಅಂತಾರೆ: ಎಂ.ರುದ್ರೇಶ್

    ಜನ ಡಿಕೆ ಸುರೇಶ್‍ರನ್ನ ಸಂಸದ ಅನ್ನಲ್ಲಾ ಗೂಂಡಾ ಎಂಪಿ ಅಂತಾರೆ: ಎಂ.ರುದ್ರೇಶ್

    ರಾಮನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಅವರನ್ನ ರಾಮನಗರ ಜಿಲ್ಲೆಯ ಜನ ಲೋಕಸಭಾ ಸದಸ್ಯ ಅಂತ ಕರೆಯುವುದಿಲ್ಲ. ಬದಲಾಗಿ ಗೂಂಡಾ ಸಂಸದ, ಗೂಂಡಾ ಮಂತ್ರಿಯ ಸಹೋದರನೆಂದು ಕರೆಯುತ್ತಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಂ.ರುದ್ರೇಶ್ ತಿರುಗೇಟು ನೀಡಿದ್ದಾರೆ.

    ರಾಮನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿಯವರು ಗೂಂಡಾಗಳನ್ನಿಟ್ಟು ಶಾಸಕರನ್ನು ಕೂರಿಸಿದ್ದಾರೆ ಎಂದು ಇತ್ತೀಚೆಗೆ ದೆಹಲಿಯಲ್ಲಿ ಸಂಸದರು ಆರೋಪಿಸಿದ್ದಾರೆ. ಆದರೆ ಗೂಂಡಾಗಿರಿ ಬಿಜೆಪಿ ಸಂಸ್ಕøತಿಯಲ್ಲಿ ಇಲ್ಲ. ಕಾಂಗ್ರೆಸ್ ಹಾಗೂ ಮೈತ್ರಿ ಸರ್ಕಾರದಲ್ಲಿ ಗೂಂಡಾಗಿರಿ ನಡೆಯುತ್ತಿದೆ ಎಂದು ದೂರಿದರು.

    ಇತ್ತೀಚೆಗೆ ನಡೆದ ರಾಮನಗರ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಹೈಜಾಕ್ ಮಾಡಿದ್ದು ಗೂಂಡಾಗಿರಿಯಲ್ಲವೇ? ನಮ್ಮ ಅಭ್ಯರ್ಥಿಯನ್ನು ಹಣ ನೀಡಿ ಖರೀದಿಸಿದ್ದಾರೆಯೇ? ಬಳ್ಳಾರಿಯಲ್ಲಿದ್ದ ಸಚಿವ ಡಿ.ಕೆ.ಶಿವಕುಮಾರ್ ಅವರು ರಾತ್ರೋರಾತ್ರಿ ಬೆಂಗಳೂರಿಗೆ ಸಿಎಂ ಕುಮಾರಸ್ವಾಮಿ ಅವರೊಂದಿಗೆ ಸೇರಿ ಬಿಜೆಪಿ ಅಭ್ಯರ್ಥಿಗೆ ಹಣ ನೀಡಿದ್ದಾರೆ ಎಂದು ಆರೋಪಿಸಿದರು.

    ರಾಮನಗರ ಉಪಚುನಾವಣೆಯಲ್ಲಿ ಆಪರೇಷನ್ ಮಾಡಿದ್ದು ಕಾಂಗ್ರೆಸ್ ಹಾಗೂ ಜೆಡಿಎಸ್. ನೈತಿಕತೆ ಇರುವ ನೀವು ಹೈಜಾಕ್ ಮಾಡಿದ ಅಭ್ಯರ್ಥಿಗೆ ಎಷ್ಟು ಹಣ ಕೊಟ್ಟಿದ್ದಿರೀ? ರೌಡಿಸಂ ಮಾಡಿ ಹೇಗೆ ಹೆದರಿಸಿದ್ದೀರಿ ಎನ್ನುವುದನ್ನು ತಿಳಿಸಿ ಎಂದು ಗುಡುಗಿದರು.

    ಸಂಸದ ಡಿ.ಕೆ.ಸುರೇಶ್ ಕೇಂದ್ರ ಸರ್ಕಾರದಿಂದ ಬಂದ ಯೋಜನೆ, ಅನುದಾನಗಳಲ್ಲಿ ಅವ್ಯವಹಾರ ಮಾಡಿದ್ದಾರೆ. ಟ್ರಸ್ಟ್ ಮೂಲಕ ಮಾಡಿರುವ ಅವ್ಯವಹಾರ ಎಲ್ಲವನ್ನೂ ಸಹ ದಾಖಲೆಗಳ ಸಹಿತವಾಗಿ ಮುಂದಿನ ದಿನಗಳಲ್ಲಿ ಬಿಡುಗಡೆ ಮಾಡುತ್ತೇನೆ ಎಂದು ಎಂ.ರುದ್ರೇಶ್ ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಆಸ್ಪತ್ರೆಗೆ ಅಡ್ಮಿಟ್ ಮಾಡೋದು, ಬಿಡೋದು ನಮ್ಮ ವೈಯಕ್ತಿಕ ವಿಚಾರ- ಡಿ.ಕೆ.ಸುರೇಶ್ ಗರಂ

    ಆಸ್ಪತ್ರೆಗೆ ಅಡ್ಮಿಟ್ ಮಾಡೋದು, ಬಿಡೋದು ನಮ್ಮ ವೈಯಕ್ತಿಕ ವಿಚಾರ- ಡಿ.ಕೆ.ಸುರೇಶ್ ಗರಂ

    ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಆಗುತ್ತಿದೆ. ಆಸ್ಪತ್ರೆಗೆ ಅಡ್ಮಿಟ್ ಮಾಡುವುದು, ಬಿಡುವುದು ನಮ್ಮ ವೈಯಕ್ತಿಕ ವಿಚಾರ ಎಂದು ಸಂಸದ ಡಿ.ಕೆ.ಸುರೇಶ್ ಮಾಧ್ಯಮಗಳ ವಿರುದ್ಧ ಗರಂ ಆಗಿ ಪ್ರತಿಕ್ರಿಯೆ ನೀಡಿದ್ದಾರೆ.

    ಕನಕಪುರದಿಂದ ಸದಾಶಿವನಗರ ನಿವಾಸಕ್ಕೆ ಡಿ.ಕೆ.ಶಿವಕುಮಾರ್ ಆಗಮಿಸಿದ್ದ ಬೆನ್ನಲ್ಲೇ ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ.ಸುರೇಶ್, ಇಬ್ಬರು ವೈದ್ಯರು ಮನೆಯಲ್ಲೇ ಇದ್ದು ಡಿ.ಕೆ.ಶಿವಕುಮಾರ್ ಅವರ ಆರೋಗ್ಯ ನೋಡಿಕೊಳ್ಳುತ್ತಿದ್ದಾರೆ. ವಿಶ್ರಾಂತಿ ತೆಗೆದುಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಒಂದು ವೇಳೆ ಆರೋಗ್ಯದಲ್ಲಿ ಚೇತರಿಕೆ ಕಾಣದಿದ್ದರೆ ಆಸ್ಪತ್ರೆಗೆ ದಾಖಲಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

    ಡಿ.ಕೆ.ಶಿವಕುಮಾರ್ ಹಾಗೂ ನನ್ನ ವಿರುದ್ಧ ಯಾವುದೇ ನೋಟಿಸ್ ಬಂದಿಲ್ಲ, ಯಾವುದೇ ಅಧಿಕಾರಿಗಳು ಮಾಹಿತಿ ನೀಡಿಲ್ಲ. ಆದರೆ ನೋಟಿಸ್ ಬರುತ್ತದೆ ಅಂತಾ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರ ಆಗುತ್ತಿದೆ ಎಂದು ಹೇಳಿದರು.

    ಬೆಂಗಳೂರು ನಿವಾಸಕ್ಕೆ ಡಿ.ಕೆ.ಶಿವಕುಮಾರ್ ಆಗಮಿಸುತ್ತಿದ್ದಂತೆ ಅವರ ಮನೆಗೆ ಕಿಮ್ಸ್ ಜನರಲ್ ಸರ್ಜನ್ ಡಾ.ಬಿ.ಸಿ.ಭಗವಾನ್ ಅವರು ದೌಡಾಯಿಸದರು. ಕಿಟ್ ಸಹಿತ ಬಂದಿದ್ದ ವೈದ್ಯರು, ಬಳಿಕ ಸಚಿವ ಆರೋಗ್ಯ ತಪಾಸಣೆ ಮಾಡಿದ್ದಾರೆ.

    ಡಿಕೆಶಿಗೆ ಫುಡ್ ಪಾಯ್ಸನ್:
    ಕಲಬುರಗಿಯಲ್ಲಿ ಪ್ರವಾಸ ಮುಗಿಸಿದ ಬಳಿಕ ಡಿ.ಕೆ.ಶಿವಕುಮಾರ್ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಡಿದ್ದು, ಬೆಂಗಳೂರಿಗೆ ಬಂದ ಬಳಿಕ ತೀವ್ರವಾಗಿ ವಾಂತಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಕನಕಪುರ ಕಾರ್ಯಕ್ರಮ ರದ್ದುಗೊಳಿಸಿ, ಕಗ್ಗಲೀಪುರ ಪ್ರಾಥಾಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಹೈದರಾಬಾದ್‍ನಿಂದ ಬೆಂಗಳೂರಿಗೆ ಆಗಮಿಸಿದ ವಿಮಾನದಲ್ಲಿ ಸ್ಯಾಂಡ್ ವಿಚ್ ತಿಂದ ಪರಿಣಾಮ ಸಚಿವರ ಆರೋಗ್ಯದಲ್ಲಿ ಏರುಪೇರಾಗಿದೆ. ನಿತ್ರಾಣಗೊಂಡಿರುವ ಶಿವಕುಮಾರ್ ಅವರಿಗೆ ವೈದ್ಯರು ಗ್ಲುಕೋಸ್ ಹಾಕಿ, ಚಿಕಿತ್ಸೆ ನೀಡುತ್ತಿದ್ದರು. ಆದರೆ ಈಗ ಅವರನ್ನು ಬೆಂಗಳೂರಿಗೆ ಕರೆತರಲಾಗಿದೆ.

    ಬಂಧನ ಭೀತಿ ತಪ್ಪಿಸಿಕೊಳ್ಳಲು ಪ್ಲಾನ್:
    ಜಾರಿ ನಿರ್ದೇಶನಾಲಯ ಬಂಧನ ಭೀತಿಯಿಂದ ತಪ್ಪಿಸಿಕೊಳ್ಳಲು ಸಚಿವ ಡಿ.ಕೆ.ಶಿವಕುಮಾರ್ ಮಾಸ್ಟರ್ ಪ್ಲಾನ್ ನಡೆಸಿದ್ದಾರೆ. ಒಂದು ವೇಳೆ ಇಡಿ ವಿಚಾರಣೆಗೆ ಕರೆದ್ರೆ, ಯಾವ ರೀತಿ ಉತ್ತರ ನೀಡಬೇಕು ಅನ್ನೋದರ ಬಗ್ಗೆ ಹಿರಿಯ ವಕೀಲರಿಂದ ಸಲಹೆ ಪಡೆದುಕೊಳ್ಳುತ್ತಿದ್ದಾರೆ. ಒಂದು ವೇಳೆ ಇಡಿ ಬಂಧಿಸಲು ಮುಂದಾದ್ರೆ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸುವ ಸಾಧ್ಯತೆಗಳಿವೆ. ಇಡಿಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಹಿರಿಯ ವಕೀಲರಿಗೆ ಯಾವಾಗ ಏನು ಬೇಕಾದರೂ ಆಗುವ ಸಾಧ್ಯತೆಗಳಿವೆ. ಕಾನೂನಾತ್ಮಕವಾಗಿ ಎಲ್ಲದಕ್ಕೂ ಸಿದ್ಧರಾಗಿರಿ ಎಂದು ಆಪ್ತ ವಕೀಲರಿಗೆ ಡಿ.ಕೆ.ಶಿವಕುಮಾರ್ ಸಂದೇಶ ರವಾನಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನು ಓದಿ: ಇಡಿಯ ಮುಂದಿನ ಕಾನೂನು ಪ್ರಕ್ರಿಯೆ ಏನು? ಡಿಕೆಶಿ ಆಗ್ತಾರಾ ಅರೆಸ್ಟ್? ಮುಂದಿರುವ ದಾರಿ ಏನು?

    ಬುಧವಾರ ಡಿ.ಕೆ.ಶಿವಕುಮಾರ್ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆಗಳಿವೆ. ಈ ಸಂಬಂಧ ಘಟಾನುಘಟಿ ವಕೀಲರೊಂದಿಗೆ ಸಚಿವರು ನಿರಂತರ ಸಂಪರ್ಕದಲ್ಲಿದ್ದಾರೆ ಎನ್ನಲಾಗುತ್ತಿದೆ. ಇಂದು ಮಧ್ಯಾಹ್ನ ಕನಕಪುರದಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸಚಿವರು ಭಾಗಿಯಾಗಬೇಕಿತ್ತು. ಆದ್ರೆ ಸಚಿವರು ಕಾರ್ಯಕ್ರಮಕ್ಕೆ ಡಿ.ಕೆ.ಸಹೋದರರು ಗೈರಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬಂಡಾಯ ಸುದ್ದಿಗೋಷ್ಠಿ ನಡೆಸಿ ಪಕ್ಷದ ನಾಯಕರ ವಿರುದ್ಧವೇ ತೊಡೆ ತಟ್ಟಿದ ಡಿ.ಕೆ.ಸುರೇಶ್

    ಬಂಡಾಯ ಸುದ್ದಿಗೋಷ್ಠಿ ನಡೆಸಿ ಪಕ್ಷದ ನಾಯಕರ ವಿರುದ್ಧವೇ ತೊಡೆ ತಟ್ಟಿದ ಡಿ.ಕೆ.ಸುರೇಶ್

    ಬೆಂಗಳೂರು: ನಮ್ಮ ನೆನಪೇ ಪಕ್ಷದ ನಾಯಕರಿಗೆ ಇಲ್ಲ. ನಾನು ಕಾಂಗ್ರೆಸ್ ಪಕ್ಷದ ಒಬ್ಬ ಸಂಸದನಿದ್ದೇನೆ ಎಂಬ ವಿಚಾರವನ್ನೇ ಮರೆತಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ ಸುರೇಶ್ ಪಕ್ಷದ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

    ಬೆಂಗಳೂರು ಬಿಬಿಎಂಪಿ ಮೇಯರ್ ಆಯ್ಕೆಯ ವಿಚಾರವಾಗಿ ಚರ್ಚೆ ನಡೆಸಲು ಕರೆದಿದ್ದ ಸಭೆಗೆ ತಮಗೇ ಆಹ್ವಾನ ನೀಡದಿರುವ ಕುರಿತು ಮಾತನಾಡಿದ ಸುರೇಶ್, ಈ ಸುದ್ದಿಗೋಷ್ಠಿಯನ್ನು ಬಂಡಾಯ ಪತ್ರಿಕಾಗೋಷ್ಠಿ ಅಂದರೂ ಯಾವುದೇ ತೊಂದರೆ ಇಲ್ಲ. ಬೆಂಗಳೂರು ಮೇಯರ್ ಚುನಾವಣೆ ಇದೇ ತಿಂಗಳ 26 ರಂದು ನಡೆಯಲಿದ್ದು, ಪ್ರಬಲ ನಾಯಕರೇ ಮೇಯರ್ ಆಗ್ತಾರೆ. ಆದರೆ ಬೆಂಗಳೂರು ವ್ಯಾಪ್ತಿಯಲ್ಲಿ ಹೊಸದಾಗಿ ಸೇರಿರುವ ಹಲವು ವಾರ್ಡ್‍ಗಳಲ್ಲಿ ಅಭಿವೃದ್ಧಿ ಕಾರ್ಯಗಳೇ ನಡೆದಿಲ್ಲ. ಸರ್ಕಾರ ಹಾಗೂ ಎಲ್ಲಾ ಮೇಯರ್‍ಗಳು ಈ ವಾರ್ಡ್‍ಗಳ ಅಭಿವೃದ್ಧಿಯನ್ನು ಮರೆತಿದ್ದಾರೆ. ತಮ್ಮ ಲೋಕಸಭಾ ಕ್ಷೇತ್ರಗಳಲ್ಲಿಯೇ ಇಂತಹ ಹಲವು ವಾರ್ಡ್‍ಗಳಿವೆ ಎಂದು ಸರ್ಕಾರದ ನಿರ್ಲಕ್ಷದ ವಿರುದ್ಧ ಹಾರಿಯ್ದರು.

    ಮೇಯರ್ ಚುನಾವಣೆಯ ಬಗ್ಗೆ ನಮಗೇ ಜವಾಬ್ದಾರಿಯನ್ನು ವಹಿಸಿದರೆ ನಾವೇ ಸ್ವತಃ ಜೆಡಿಎಸ್ ನಾಯಕರೊಂದಿಗೆ ಮಾತಾನಾಡುತ್ತೇವೆ. ಈ ಬಾರಿಯ ಮೇಯರ್ ಚುನಾವಣೆಯಲ್ಲಿ ಬೆಂಗಳೂರು ಹೊರ ವಲಯದ ಕಾರ್ಪೊರೇಟರ್ ಗಳಿಗೆ ಹುದ್ದೆಯನ್ನು ನೀಡಬೇಕು. ಅದರಲ್ಲೂ ಪರಿಶಿಷ್ಟ ಜಾತಿಗೆ ಸೇರಿದ ವೇಲು ನಾಯಕ್ ಹಾಗೂ ಅಂಜನಪ್ಪ ಇಬ್ಬರಲ್ಲಿ ಒಬ್ಬರನ್ನು ಮೇಯರ್ ಮಾಡಬೇಕು. ಈ ವಿಚಾರವಾಗಿ ಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರನ್ನು ಒತ್ತಾಯ ಮಾಡುತ್ತೇವೆ ಎಂದರು.

    ನನ್ನ ಸಹೋದರ ಶಿವಕುಮಾರ್ ಸಂಪತ್ ರಾಜುಗೆ ಮೇಯರ್ ಆಗಲು ಬೆಂಬಲ ನೀಡಬಹುದು ಆದರೆ ನಾನು ನನ್ನ ಕ್ಷೇತ್ರದ ಕಾರ್ಪೊರೇಟರ್‍ಗಳಿಗೆ ಬೆಂಬಲ ನೀಡುತ್ತೇನೆ. ಅತ್ತರೆ ಹಾಲು ಕುಡಿಸುತ್ತಾರೆ ಎಂಬ ಮಾತಿದೆ. ಹಾಗೆಯೇ ನಾವಾಗೆ ಕೇಳದಿದ್ದರೆ ಅವರು ನಮ್ಮನ್ನು ಗಮನಿಸುವುದಿಲ್ಲ. ನನ್ನ ಸಹನೆ ಕಟ್ಟೆ ಒಡೆಯುತ್ತದೆ. ಮುಂದಿನ ದಿನಗಳಲ್ಲಿ ಅದು ದೊಡ್ಡದಾಗಬಹುದು ಎಂದು ಎಚ್ಚರಿಸಿದರು.

    ನನ್ನ ನಾಯಕರಾದ ಸಂಸದ ಡಿ.ಕೆ.ಸುರೇಶ್ ತೀರ್ಮಾನಕ್ಕೆ ನಾನು ಬದ್ದನಾಗಿದ್ದೇನೆ. ಸುರೇಶ್ ಅವರ ಬೇಡಿಕೆ ನ್ಯಾಯಯುತವಾಗಿದೆ ಎಂದು ಶಾಸಕ ಮುನಿರತ್ನ ಹೇಳಿದರು.