Tag: ಸಂಸದ ಪ್ರತಾಪ್ ಸಿಂಹ

  • ಸಂಸದ ಪ್ರತಾಪ್ ಸಿಂಹ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಪ್ರಕಾಶ್ ರೈ

    ಸಂಸದ ಪ್ರತಾಪ್ ಸಿಂಹ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಪ್ರಕಾಶ್ ರೈ

    ಮೈಸೂರು: ಸಂಸದ ಹಾಗೂ ಬಹುಭಾಷಾ ನಟನ ಕೋಲ್ಡ್ ವಾರ್ ಮುಂದುವರೆದಿದ್ದು, ಇದೀಗ ಪ್ರತಾಪ್ ಸಿಂಹ ವಿರುದ್ಧ ಪ್ರಕಾಶ್ ರೈ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

    ಕೇವಲ 1 ರೂ ಪರಿಹಾರ ಕೋರಿ ಮೈಸೂರಿನ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಲು ರೈ ನಿರ್ಧರಿಸಿದ್ದಾರೆ. ಹೀಗಾಗಿ ಪ್ರಕಾಶ್ ರೈ ಇಂದು ಮಧ್ಯಾಹ್ನ ಮೈಸೂರು ನ್ಯಾಯಾಲಯಕ್ಕೆ ತೆರಳಿ ಕೇಸು ದಾಖಲಿಸಲಿದ್ದಾರೆ. ಇದನ್ನೂ ಓದಿ:  ಅಪ್ರಸ್ತುತ ವ್ಯಕ್ತಿಗಳ ಬಗ್ಗೆ ಮಾತನಾಡಲ್ಲ: ಪ್ರತಾಪ್ ಸಿಂಹ

    ಈ ಹಿಂದೆ ನವೆಂಬರ್ 23 ರಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ರೈ 10 ದಿನದ ಒಳಗೆ ದೂರಿಗೆ ಉತ್ತರ ಕೊಡಬೇಕು ಲಿಗಲ್ ನೋಟಿಸ್ ಕಳುಹಿಸಿದ್ದರು. ಇದಕ್ಕೆ ಪ್ರತಿಯಾಗಿ ನಿಮ್ಮ ನೋಟಿಸ್ ಲಿಗಲ್ ಆಗಿ ಇಲ್ಲ ಅದಕ್ಕೆ ಉತ್ತರಿಸಲ್ಲ ಎಂದು ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದರು. ಆದರೆ ಇದೀಗ ರೈ ಅಧಿಕೃತವಾಗಿ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮ್ಮೆ ಹೂಡಲು ಸಜ್ಜಾಗಿದ್ದಾರೆ. 1 ರೂ ಪರಿಹಾರಕ್ಕೆ ಮನವಿ ಮಾಡಿ ಕೇಸು ದಾಖಲಿಸಲಿದ್ದಾರೆ. ಇದನ್ನೂ ಓದಿ: ನಾನು ಹೇಳಿಕೆ ನೀಡಲ್ಲ, ಹೋರಾಡೋ ವ್ಯಕ್ತಿ: ಪ್ರತಾಪ್ ಸಿಂಹ ವಿರುದ್ಧ ರೈ ಕಿಡಿ

    ಪ್ರತಾಪ್ ಸಿಂಹ ಟ್ವೀಟ್ ಏನಿತ್ತು?
    ಅಕ್ಟೋಬರ್ 2 ರಂದು ಪ್ರತಾಪ್ ಸಿಂಹ ವೆಬ್‍ಸೈಟ್ ಒಂದರಲ್ಲಿ ಬಂದಿದ್ದ ಸುದ್ದಿಯನ್ನು ಟ್ವೀಟ್ ಮಾಡಿದ್ದರು. “ಮಗನ ಸಾವಿನ ದು:ಖದಲ್ಲಿದ್ದ ಹೆಂಡತಿಯನ್ನು ಬಿಟ್ಟು ಡ್ಯಾನ್ಸರ್ ಹಿಂದೆ ಓಡಿದ ರೈಯಂತಹವನು ಮೋದಿ? ಯೋಗಿಗೆ ಹೇಳುವಷ್ಟು ಯೋಗ್ಯತೆಯಿರುವವನಾ?” ಎನ್ನುವ ಹೆಡ್‍ಲೈನ್ ಈ ಸುದ್ದಿಯಲ್ಲಿತ್ತು. ಇದನ್ನೂ ಓದಿ: ನಟ ಪ್ರಕಾಶ್ ರಾಜ್ ವಿರುದ್ಧ ಕೇಸ್ ದಾಖಲು

    ಇದನ್ನು ಓದಿ: ತಮ್ಮ ದಂಧೆಗಾಗಿ, ಹಣಕ್ಕಾಗಿ ತಮಿಳುನಾಡಿನಲ್ಲಿ ರೈ, ಇಲ್ಲಿ ರಾಜ್: ಪ್ರತಾಪ್ ಸಿಂಹ

    ಇದನ್ನು ಓದಿ: ಮೋದಿ, ಪ್ರತಾಪ್ ಸಿಂಹಗೆ ಪರೋಕ್ಷವಾಗಿ ಟಾಂಗ್ ನೀಡಿದ ನಟ ಪ್ರಕಾಶ್ ರೈ

  • ಪ್ರತಾಪ್ ಸಿಂಹ ಕಾರ್ಯ ವೈಖರಿಗೆ ಶಹಬ್ಬಾಸ್ ಎಂದ ಪ್ರಧಾನಿ ಮೋದಿ

    ಪ್ರತಾಪ್ ಸಿಂಹ ಕಾರ್ಯ ವೈಖರಿಗೆ ಶಹಬ್ಬಾಸ್ ಎಂದ ಪ್ರಧಾನಿ ಮೋದಿ

    ಮೈಸೂರು: ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ಕಾರ್ಯವೈಖರಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.

    ಮಹಾರಾಜ ಕಾಲೇಜಿನಲ್ಲಿ ಆಯೋಜನೆಗೊಂಡಿದ್ದ ಬಿಜೆಪಿ ಪರಿವರ್ತನಾ ಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಅವರು, ನಿಮ್ಮ ಕ್ಷೇತ್ರದ ಸಂಸದರಾದ ಪ್ರತಾಪ ಸಿಂಹ ನಮ್ಮ ಬಳಿಗೆ ಯಾವಾಗಲೂ ಯಾವುದಾದರೂ ಯೋಜನೆ ಹಿಡಿದು ಬರುತ್ತಾರೆ. ನಮ್ಮನ್ನು ನೆಮ್ಮದಿಯಿಂದ ಕೂರಲು ಬಿಡಲ್ಲ ಎಂದು ಹೇಳಿದರು.

    ಇದೇ ವೇಳೆ ಬೆಂಗಳೂರು ಮೈಸೂರು ನಡುವೆ ಅಷ್ಟಪಥಗಳ ರಾಷ್ಟ್ರೀಯ ಹೆದ್ದಾರಿ ರಚನೆಗೆ ಕೇಂದ್ರ ಸರ್ಕಾರ ಅನುಮತಿಸಿದೆ ನೀಡಿರುವ ಬಗ್ಗೆ ತಿಳಿಸಿದರು. ಅಲ್ಲದೆ ಮೈಸೂರಿಗೆ ಹೊಸ ವಿಶ್ವದರ್ಜೆಯ ಸ್ಯಾಟಲೈಟ್ ರೈಲ್ವೆ ಸ್ಟೇಷನ್ ಅನ್ನು ನಾಗನಹಳ್ಳಿ ಬಳಿ ನಿರ್ಮಾಣ ಮಾಡಲಾಗುತ್ತದೆ. ಇದರಿಂದ 76 ರೈಲುಗಳು ಮೈಸೂರಿಗೆ ಆಗಮಿಸಲು ಹಾಗೂ ನಿರ್ಗಮಿಸಲು ಸಾಧ್ಯವಾಗುತ್ತದೆ ಎಂದರು. ಇದನ್ನೂ ಓದಿ: Commission ಸರ್ಕಾರವನ್ನು ತೊಲಗಿಸಿ Mission ಸರ್ಕಾರವನ್ನು ತನ್ನಿ: ಪ್ರಧಾನಿ ಮೋದಿ

    ಇದೇ ವೇಳೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕರ್ನಾಟಕದಲ್ಲಿ ಬಂಡಲ್ ಬಂಡಲ್ ನೋಟುಗಳು ಸಿಗುತ್ತವೆ. ಡೈರಿಗಳು ಸಿಗುತ್ತವೆ. ಅವುಗಳಲ್ಲಿ ಏನೇನು ಬರೆದಿದೆ. ಎಷ್ಟೆಷ್ಟು ಹಂಚಿಕೆಯ ವಿವರಗಳಿವೆ ಎಂಬುವುದು ಯಾರಿಗೆ ಗೊತ್ತು. ಅಂತಹ ವ್ಯಕ್ತಿಗಳಿಗೆ ಬೆಂಬಲ ನೀಡಿದರೆ ಮೈಸೂರಿಗೆ ಕೆಟ್ಟ ಹೆಸರು ಬರುತ್ತದೆ. ಮೈಸೂರಿನಲ್ಲಿ ಹುಟ್ಟಿದ ವ್ಯಕ್ತಿ ಕೆಟ್ಟ ಕೆಲಸ ಮಾಡುವುದಿಲ್ಲ. ಆದರೆ ಆ ವ್ಯಕ್ತಿ ಇಲ್ಲಿ ಹುಟ್ಟಿ ಬೆಂಗಳೂರಿಗೆ ಹೋಗುವ ಮಾರ್ಗ ಮಧ್ಯೆ ನೈತಿಕತೆ ಬಿಟ್ಟಿದ್ದಾರೆ. ಹಗರಣಗಳ ಮೇಲೆ ಹಗರಣ ಹೊರ ಬರುತ್ತಿದೆ. ಕೇಂದ್ರ ಸರ್ಕಾರ ಕೊಟ್ಟ ಅನುದಾನವನ್ನು ಬಳಕೆ ಮಾಡಿಕೊಳ್ಳದೇ ರಾಜಕಾರಣಕ್ಕಾಗಿ ಹಾಗೂ ಹೈಕಮಾಂಡ್ ನಾಯಕರನ್ನು ಖುಷಿ ಪಡಿಸಲು, ಅವರಿಗೆ ಕಾಣಿಕೆ ಸಲ್ಲಿಸಲು ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

     

     

  • ಮಸೀದಿಯಲ್ಲಿ ತುಲಾಭಾರ ಮಾಡೋ ಸಿಎಂ ಮಠಗಳನ್ನು ಒಡೆಯುತ್ತಿದ್ದಾರೆ: ಹೆಗ್ಡೆ ಕಿಡಿ

    ಮಸೀದಿಯಲ್ಲಿ ತುಲಾಭಾರ ಮಾಡೋ ಸಿಎಂ ಮಠಗಳನ್ನು ಒಡೆಯುತ್ತಿದ್ದಾರೆ: ಹೆಗ್ಡೆ ಕಿಡಿ

    ನವದೆಹಲಿ: ಸಿಎಂ ಸಿದ್ದರಾಮಯ್ಯ ಅವರು ಹಿಂದೂಗಳ ಭಾವನೆ ಜೊತೆ ಚೆಲ್ಲಾಟ ಆಡುತ್ತಿದ್ದಾರೆ. ಮಠಗಳ ಆಸ್ತಿ ವಶಪಡಿಕೊಳ್ಳಲು ಸುತ್ತೋಲೆ ಹೊರಡಿಸಿ ವಿರೋಧ ವ್ಯಕ್ತವಾದಾಗ ವಾಪಸ್ ಪಡೆಯುತ್ತಾರೆ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ವಾಗ್ದಾಳಿ ನಡೆಸಿದ್ದಾರೆ.

    ದೆಹಲಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ತುಚ್ಛ ರಾಜಕೀಯ ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ದೇವಸ್ಥಾನ ಮಠಗಳ ಆಸ್ತಿ ವಶಪಡಿಸಿಕೊಳ್ಳಲು ಸುತ್ತೋಲೆ ಹೊರಡಿಸಿ ವಿರೋಧ ವ್ಯಕ್ತವಾದಾಗ ಅದನ್ನು ವಾಪಾಸ್ ಪಡೆಯುತ್ತಾರೆ. ಈ ಮೂಲಕ ಬಹುಸಂಖ್ಯಾತ ಹಿಂದೂಗಳ ಭಾವನೆಗಳ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಆರೋಪ ಮಾಡಿದರು.

    ಸಿಎಂ ಅವರಿಗೆ ಮಠ ಮಾನ್ಯಗಳನ್ನು ಒಡೆಯುವ ಉದ್ದೇಶವಿದ್ದು, ಮೂಢ ನಂಬಿಕೆ ನಿಷೇಧ ಕಾಯ್ದೆ ಬಗ್ಗೆ ಮಾತನಾಡುವವರು ಮಸೀದಿಗಳಲ್ಲಿ ತುಲಾಭಾರ ಮಾಡಿಸಿಕೊಳ್ಳುತ್ತಾರೆ. ಈ ಮೂಲಕ ಅನಾವಶ್ಯಕ ಗೊಂದಲ ಸೃಷ್ಠಿಸುತ್ತಿರುವುದು ಸಿಎಂ ಸ್ಥಾನಕ್ಕೆ ಶೋಭೆ ತರುವುದಿಲ್ಲ. ನಿಮಗೆ ತಾಕತ್ತಿದ್ದರೆ ಮಸೀದಿಗಳ ಭೂಮಿಯನ್ನು ವಾಪಸ್ ಪಡೆಯಿರಿ ಎಂದು ಸವಾಲು ಎಸೆದರು. ಇದನ್ನೂ ಓದಿ: ಯಾವುದೇ ಮಠಗಳನ್ನು ವಶಪಡಿಸಿಕೊಳ್ಳುವ ಉದ್ದೇಶ ಸರ್ಕಾರಕ್ಕಿಲ್ಲ: ಸಿಎಂ

    ಇದೇ ವೇಳೆ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದ ಮೈಸೂರು ಸಂಸದ ಪ್ರತಾಪ್ ಸಿಂಹ, ಸಂಸದ ಭಗವಂತ್ ಖೂಬಾ, ನಳೀನ್‍ಕುಮಾರ್ ಕಟೀಲ್ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಸಂಸದ ಪ್ರತಾಪ್ ಸಿಂಹ ಅವರು ಮಾತನಾಡಿ ರಾಜ್ಯಸರ್ಕಾರ ನಮಗೆ ಹಿಂದೂಗಳ ಮತ ಬೇಡ ಎಂದು ಹೇಳಿಕೆ ನೀಡಲಿ. ಮುಂದಿನ ಚುನಾವಣೆಯಲ್ಲಿ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದರು.   ಇದನ್ನೂ ಓದಿ: ಮತ್ತೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಡಿಚ್ಚಿ

     

  • ಗೃಹ ಸಚಿವ ರಾಮಲಿಂಗಾರೆಡ್ಡಿ ವಿರುದ್ಧ ‘ಸ್ಕ್ರೂ ಡ್ರೈವರ್ ಅಭಿಯಾನ’ ಆರಂಭಿಸಿದ ಪ್ರತಾಪ್ ಸಿಂಹ

    ಗೃಹ ಸಚಿವ ರಾಮಲಿಂಗಾರೆಡ್ಡಿ ವಿರುದ್ಧ ‘ಸ್ಕ್ರೂ ಡ್ರೈವರ್ ಅಭಿಯಾನ’ ಆರಂಭಿಸಿದ ಪ್ರತಾಪ್ ಸಿಂಹ

    ಬೆಂಗಳೂರು: ಕಳೆದ ಕೆಲ ದಿನಗಳ ಹಿಂದೆ ನಗರದಲ್ಲಿ ಬಿಜೆಪಿ ಕಾರ್ಯಕರ್ತ ಸಂತೋಷ್ ಎಂಬವರ ಕೊಲೆಯಾಗಿತ್ತು. ಸಂತೋಷರನ್ನು ಕೊಲೆ ಮಾಡಲು ದುಷ್ಕರ್ಮಿಗಳು ಸ್ಕ್ರೂ ಡ್ರೈವರ್ ಬಳಕೆ ಮಾಡಿದ್ದರು ಅಷ್ಟೇ ಎಂದು ಹೇಳಿಕೆ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರ ವಿರುದ್ಧ ಯುವ ಮೋರ್ಚಾ ವಿನೂತನ ಪ್ರತಿಭಟನೆ ಆರಂಭಿಸಿದೆ.

    ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾದ ಮೈಸೂರು ಸಂಸದ ಪ್ರತಾಪ್ ಸಿಂಹ ಸ್ಕ್ರೂ ಡ್ರೈವರ್ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಈ ಮೂಲಕ ಗೃಹ ಸಚಿವರಿಗೆ ಸ್ಕ್ರೂ ಡ್ರೈವರ್ ಕಳಿಸುವ ಮೂಲಕ ಪ್ರತಿಭಟನೆ ಆರಂಭಿಸಿದ್ದಾರೆ. ಪ್ರತಿಭಟನೆಗೆ ಸ್ಕ್ರೂಡ್ ಅಪ್ ಹೋಮ್ ಮಿನಿಸ್ಟರ್ (#ScrewedUpHomeMinister) ಎಂದು ಹೆಸರಿಟ್ಟಿದ್ದು, ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.

    ಈ ವೇಳೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಕರ್ನಾಟಕದಲ್ಲಿ ಸ್ಟೇಟ್ ಸ್ಪಾನ್ಸರ್ ಟೆರರಿಸಂ ನಡೆಯುತ್ತಿದೆ ಎಂದು ಆರೋಪಿಸಿದರು. ಅಲ್ಲದೇ ಗೃಹ ಸಚಿವರು ಸಂವೇದನಾ ರಹಿತ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ 24 ಸಂಘ ಪರಿವಾರದ ಕಾರ್ಯಕರ್ತರ ಹತ್ಯೆ ನಡೆದಿದೆ. ರಾಮಲಿಂಗಾರೆಡ್ಡಿ ಅವರು ಅಧಿಕಾರ ಸ್ವೀಕರಿಸಿದ ತಕ್ಷಣ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾಗಿದೆ. ಮಂಗಳೂರು ದೀಪಕ್ ರಾವ್ ಹತ್ಯೆಯಾದಾಗ ತಮ್ಮ ಕಾರ್ಯದಕ್ಷತೆ ಬಗ್ಗೆ ಗೃಹ ಸಚಿವರಿಗೆ ಅನುಮಾನ ಬರಬೇಕಿತ್ತು. ಸಂತೋಷ್ ಹತ್ಯೆಯಾದಾಗ ತನಿಖೆ ನಡೆಸಿ, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವ ಆಶ್ವಾಸನೆ ನೀಡಬೇಕಿತ್ತು. ಆದರೆ ಆರೋಪಿಯನ್ನು ಸಮರ್ಥಿಸುವ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ. ಆರೋಪಿಗೆ ಕೊಲೆ ಮಾಡುವ ಉದ್ದೇಶ ಇರಲಿಲ್ಲ ಎಂದು ಗೃಹ ಸಚಿವರು ಹೇಳಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

    ನಮ್ಮ ಪ್ರತಿಭಟನೆ ಅಂದೋಲನದ ಮೂಲಕ ಗೃಹ ಸಚಿವರಿಗೆ ಸ್ಕ್ರೂ ಡ್ರೈವರ್ ಕೊರಿಯರ್ ಮಾಡಲಾಗುತ್ತದೆ. ನಾವು ಕಳುಹಿಸಿದ ಸ್ಕ್ರೂ ಡೈವರ್ ನೋಡಿದಾಗ 24 ಹರೆಯದ ಸಂತೋಷ್ ನೆನಪಾಗಬೇಕು. ತನ್ನ ಮಗಳ ಪ್ರಾಯದ ವಿಧವೆ ಹೆಣ್ಣು, ಇನ್ನೂ ಜಗತ್ತು ಕಾಣದ ಮಗುವಿನ ಚಿತ್ರ ಕಾಣಬೇಕು. ತಮ್ಮ ಹೇಳಿಕೆಯ ಹೊಣೆ ಹೊತ್ತು ಗೃಹ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

  • ಸಂಸದ ಪ್ರತಾಪ್ ಸಿಂಹ ವಿರುದ್ಧ ದೂರು ದಾಖಲಿಸಲು ಜಿಲ್ಲಾಧಿಕಾರಿ ಸೂಚನೆ

    ಸಂಸದ ಪ್ರತಾಪ್ ಸಿಂಹ ವಿರುದ್ಧ ದೂರು ದಾಖಲಿಸಲು ಜಿಲ್ಲಾಧಿಕಾರಿ ಸೂಚನೆ

    ಮೈಸೂರು: ಇತ್ತೀಚೆಗೆ ಇಲ್ಲಿನ ಹುಣಸೂರಿನಲ್ಲಿ ನಡೆದ ಹನುಮಜಯಂತಿ ಮೆರವಣಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ವಿರುದ್ಧ ದೂರು ದಾಖಲಿಸುವಂತೆ ಸೂಚನೆ ನೀಡಿರುವುದಾಗಿ ಜಿಲ್ಲಾಧಿಕಾರಿ ಡಿ.ರಂದೀಪ್ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೆರವಣಿಗೆ ವೇಳೆ ಸಂಸದ ಪ್ರತಾಪ್ ಸಿಂಹ ಅವರು ನಿಬಂಧನೆ ಉಲ್ಲಂಘನೆ ಮಾಡಿದ್ದಾರೆ. ಹೀಗಾಗಿ ನಿಯಮ ಉಲ್ಲಂಘನೆ ವಿಚಾರವಾಗಿ ಮೋಟಾರ್ ಕಾಯ್ದೆಯಡಿ ದೂರು ದಾಖಲು ಮಾಡಲು ಸೂಚಿಸಿದ್ದೇನೆ ಅಂದ್ರು. ಇದನ್ನೂ ಓದಿ: ಪ್ರತಾಪ್ ಸಿಂಹ ವಿರುದ್ಧ ಐಪಿಸಿ ಸೆಕ್ಷನ್ 188 ಸೇರಿಸಿ ಪೇಚಿಗೆ ಸಿಲುಕಿದ ಖಾಕಿಗಳು!

    ಮೆರವಣಿಗೆ ವೇಳೆ ಸಂಸದ ಪ್ರತಾಪ್ ಸಿಂಹ ಅವರು ವಿಶೇಷ ವಾಹನ ಬಳಸಿದ್ದರು. ಹನುಮ ಜಯಂತಿ ಮೆರವಣಿಗೆ ಅನುಮತಿ ನೀಡುವ ವೇಳೆ ವಿಶೇಷ ವಾಹನ ಬಳಸುವಂತಿಲ್ಲ ಎಂದು ನಿಬಂಧನೆ ವಿಧಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ನಿಬಂಧನೆ ಉಲ್ಲಂಘನೆಗೆ ಕೇಸು ದಾಖಲಿಸಲು ಸೂಚಿಸಲಾಗಿದೆ. ಇದನ್ನೂ ಓದಿಪೊಲೀಸ್ ಪಂಜರದಲ್ಲೇ ಸಿಂಹ ಘರ್ಜನೆ-ಈದ್ ಮಿಲಾದ್ ಆಚರಣೆಯೂ ಹಿಂಗೇ ಇರಬೇಕೆಂದು ಆಗ್ರಹ

     

    ಹನುಮಜಯಂತಿಯನ್ನ ವಿಶೇಷ ಪ್ರಕರಣವಾಗಿ ಪರಿಗಣಿಸಿಲಾಗಿತ್ತು. ಇನ್ಯಾವುದೇ ಧರ್ಮದ ಜಯಂತಿಗೆ ಈ ರೀತಿಯ ವ್ಯವಸ್ಥೆ ಇರೋದಿಲ್ಲ. ಸಮಸ್ಯೆಯಾಗಿದ್ದಕ್ಕೆ ಜಿಲ್ಲಾಡಳಿತ ಮಧ್ಯಪ್ರವೇಶ ಮಾಡಿತ್ತು. ಇತರೆ ಜಯಂತಿಗಳು ಶಾಂತಿಯುತವಾಗಿ ನಡೆಯಲಿವೆ ಅಂತ ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.  

  • ಪೊಲೀಸ್ ಪಂಜರದಲ್ಲೇ ಸಿಂಹ ಘರ್ಜನೆ-ಈದ್ ಮಿಲಾದ್ ಆಚರಣೆಯೂ ಹಿಂಗೇ ಇರಬೇಕೆಂದು ಆಗ್ರಹ

    ಪೊಲೀಸ್ ಪಂಜರದಲ್ಲೇ ಸಿಂಹ ಘರ್ಜನೆ-ಈದ್ ಮಿಲಾದ್ ಆಚರಣೆಯೂ ಹಿಂಗೇ ಇರಬೇಕೆಂದು ಆಗ್ರಹ

    ಮೈಸೂರು: ಜಿಲ್ಲೆಯ ಹುಣಸೂರಿನ ಹನುಮ ಜಯಂತಿ ಮೆರವಣಿಗೆಗೆ ಜಿಲ್ಲಾಡಳಿತ ಹಾಕಿದ ನಿರ್ಬಂಧನೆಗಳನ್ನು ಈದ್ ಮಿಲಾದ್ ಮೆರವಣಿಗೆಗೂ ಹಾಕಬೇಕು, ಹಿಂದೂಗಳನ್ನು ಅದರಲ್ಲಿ ಬಳಸಿಕೊಳ್ಳಬೇಕು ಎಂದು ಸಂಸದ ಪ್ರತಾಪ್ ಸಿಂಹ ಆಗ್ರಹಿಸಿದ್ದಾರೆ.

    ಇಂದು ನಡೆದ ಹನುಮ ಜಯಂತಿ ಮೆರವಣಿಗೆ ವೇಳೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಹನುಮಜಯಂತಿಯಲ್ಲಿ ಸಾಮಾನ್ಯ ವ್ಯಕ್ತಿಯಾಗಿ ಭಾಗವಹಿಸಿದ್ದೇನೆ. ಜಿಲ್ಲಾಡಳಿತ ಹನುಮ ಜಯಂತಿ ಆಚರಣೆಗೆ ವಿಧಿಸಿರುವ ನಿರ್ಬಂಧನೆಗಳನ್ನು ಮುಂದಿನ ಎಲ್ಲಾ ಆಚರಣೆ ವೇಳೆ ಪಾಲನೆ ಮಾಡುಬೇಕು ಹಾಗೂ ರಾಷ್ಟ್ರೀಯ ಹಬ್ಬ ಆಚರಣಾ ಸಮಿತಿಯ ನೇತೃತ್ವದಲ್ಲೇ ಈದ್ ಮಿಲಾದ್ ಮೆರವಣಿಗೆ ನಡೆಸಬೇಕು ಎಂದು ಆಗ್ರಹಿಸಿದರು.

    ಈ ವೇಳೆ ಮಾಧ್ಯಮಗಳನ್ನು ನಿಯಂತ್ರಿಸಲು ಬಂದ ಪೊಲೀಸ್ ಅಧಿಕಾರಗಳನ್ನು ತರಾಟೆ ತೆಗೆದುಕೊಂಡ ಅವರು, ನೀವೇನು ಭಿಕ್ಷೆ ನೀಡಿ ನಮಗೆ ಮೆರವಣಿಗೆಗೆ ಅವಕಾಶ ಕೊಟ್ಟಿಲ್ಲ. ಪೊಲೀಸ್ ಅಧಿಕಾರಿಗಳು ಸೂಚಿಸಿದ ಮಾರ್ಗದಲ್ಲೇ ಮೆರವಣಿಗೆ ತೆರಳುತ್ತಿದ್ದೇವೆ. ನಮ್ಮ ಮೇಲೆ ಅನಗತ್ಯ ಒತ್ತಡ ಹಾಕಿದರೆ ನಾನು ರಸ್ತೆಯಲ್ಲೆ ಕೂರುತ್ತೇನೆ. ಮೆರವಣಿಗೆಯಲ್ಲಿ ಗಲಾಟೆ ನಡೆಯಲು ಅವಕಾಶ ಮಾಡಿಕೊಡಬೇಡಿ. ಶಾಂತಿಯಿಂದ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಬಿಡಿ. ನಾವು ಮಾಡುತ್ತಿರುವುದು ಮ್ಯಾರಥಾನ್ ಅಲ್ಲ, ಸುಮ್ಮನೆ ಓಡಿಕೊಂಡು ಹೋಗಬೇಕಾಗುತ್ತಾ ಎಂದು ಪ್ರಶ್ನಿಸಿದರು.

    ಇದಕ್ಕೂ ಮುನ್ನ ಸಂಸದ ಪ್ರತಾಪ್ ಸಿಂಹ ಹನುಮಜಯಂತಿಯ ಮೆರವಣಿಯಲ್ಲಿ ವಿಶೇಷವಾಗಿ ತಲೆಗೆ ಕೇಸರಿ ಪೇಟ ತೊಟ್ಟು ನಂದಿಕಂಬ ಹೊತ್ತು ಕುಣಿದರು. ಪ್ರಥಮ ಸಾಲಿನಲ್ಲಿ ನಂದಿಕಂಬ ಮೆರವಣಿಗೆಯನ್ನು ಹೊತ್ತು ಹನುಮ ಭಕ್ತರು ಸಾಗಿದ್ದರು.

    ಹನುಮ ಜಯಂತಿಗೆ ಜಿಲ್ಲಾಡಳಿತ ವಿಧಿಸಿದ್ದ ಷರತ್ತುಗಳೇನು?
    * ಹನುಮ ಜಯಂತಿಯಲ್ಲಿ ರಾಜಕೀಯ ವ್ಯಕ್ತಿಗಳ ವಿಶೇಷ ವಾಹನ ಇರುವಂತಿಲ್ಲ
    * ರಾಜಕೀಯ ವ್ಯಕ್ತಿಗಳು ಕೇವಲ ಹನುಮ ಭಕ್ತರಾಗಿಯೇ ಜಯಂತಿಗೆ ಬರಬೇಕು
    * ಹನುಮ ಜಯಂತಿಯಲ್ಲಿ ಎಂಪಿ/ಎಂಎಲ್‍ಎ ಯಾರು ಸಹ ಭಾಷಣ ಮಾಡುವಂತಿಲ್ಲ
    * ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಎಂಪಿ/ಎಂಎಲ್‍ಎ ಹೆಸರು ಹಾಕುವಂತಿಲ್ಲ
    * ಹನುಮ ಜಯಂತಿಗೆ ಶುಭಾಷಯ ಕೋರಿ ರಾಜಕಾರಣಿಗಳ ಫ್ಲೆಕ್ಸ್ ಹಾಕುವಂತಿಲ್ಲ
    * ಜಿಲ್ಲಾಡಳಿತದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದಲೇ ಹನುಮಜಯಂತಿ ಆಚರಣೆ.. ಹೀಗೆ ಹಲವು ಷರತ್ತು ವಿಧಿಸಿ ಮೈಸೂರು ಜಿಲ್ಲಾಡಳಿತ ಆದೇಶ ಹೊರಡಿಸಿತ್ತು.

    https://www.youtube.com/watch?v=ds9xy0aLXCU

     

     

  • ಜೆಡಿಎಸ್‍ಗೆ ಮತ ಹಾಕಿ ಕಾಂಗ್ರೆಸ್ ಸೋಲಿಸಿದ ಪ್ರತಾಪ್ ಸಿಂಹ

    ಜೆಡಿಎಸ್‍ಗೆ ಮತ ಹಾಕಿ ಕಾಂಗ್ರೆಸ್ ಸೋಲಿಸಿದ ಪ್ರತಾಪ್ ಸಿಂಹ

    ಮೈಸೂರು: ಜಿಲ್ಲೆಯ ಹುಣಸೂರು ನಗರಸಭೆ ಜೆಡಿಎಸ್ ತೆಕ್ಕೆಗೆ ಸೇರಿದ್ದು, ಕಾಂಗ್ರೆಸ್‍ನಿಂದ ಜೆಡಿಎಸ್‍ಗೆ ವಲಸೆ ಹೋಗಿದ್ದ ಶಿವಕುಮಾರ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಸಂಸದ ಪ್ರತಾಪ್ ಸಿಂಹ ಅವರು ಜೆಡಿಎಸ್ ಬೆಂಬಲಿತ ಅಭ್ಯರ್ಥಿಯ ಪರವಾಗಿ ಮತ ಚಲಾಯಿಸಿ ಗೆಲುವಿಗೆ ಕಾರಣರಾದರು.

    ನಗರಸಭೆ ಸಭಾಂಗಣದಲ್ಲಿ ಹಿಂದಿನ ಅಧ್ಯಕ್ಷ ಲಕ್ಷ್ಮಣ್ ಅವರ ಪದಚ್ಯುತಿಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯಿತು. ಸಂಸದ ಪ್ರತಾಪ್ ಸಿಂಹ ಅವರು ಚುನಾವಣೆಯಲ್ಲಿ ಭಾಗಿಯಾಗಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗೆ ಮತ ನೀಡಿದ್ದರಿಂದ 15 ಮತ ಪಡೆದ ಶಿವಕುಮಾರ್ ಗೆಲುವು ಸಾಧಿಸಿದರು.

    ಹುಣಸೂರು ನಗರಸಭೆಯಲ್ಲಿ 15 ಕಾಂಗ್ರೆಸ್, 9 ಜೆಡಿಎಸ್, 3 ಪಕ್ಷೇತರ ಸದಸ್ಯರು, ಒಬ್ಬರು ಶಾಸಕರು ಹಾಗೂ ಲೋಕಸಭಾ ಸದಸ್ಯರು ಸೇರಿ ಒಟ್ಟು 29 ಸಂಖ್ಯಾಬಲ ಹೊಂದಿತ್ತು. ಕಾಂಗ್ರೆಸ್ ನ ಮೊದಲ ವಾರ್ಡ್ ಸದಸ್ಯ ಶಿವಕುಮಾರ್ ಹಾಗೂ 5ನೇ ವಾರ್ಡ್ ಶಿವರಾಜು, 3ನೇ ವಾರ್ಡ್‍ನ ಮಂಜುಳಾ, 9ನೇ ವಾರ್ಡ್ ಸುನೀತಾ, 10ನೇ ವಾರ್ಡ್‍ನ ಯೋಗಾನಂದ, 18 ವಾರ್ಡ್‍ನ ರವಿಕುಮಾರ್ ಜೆಡಿಎಸ್ ಗೆ ವಲಸೆ ಬಂದಿದ್ದರು.

    ಸಂಸದರ ವೋಟಿನಿಂದ ಜಯ: ಒಟ್ಟು 29 ಸದಸ್ಯ ಬಲದ ನಗರಸಭೆ ಚುನಾವಣೆಯಲ್ಲಿ ಎರಡೂ ಕಡೆಯೂ ತಲಾ 14 ಸದಸ್ಯರಿದ್ದರು. ಒಂದು ವೇಳೆ ಸಂಸದರು ಭಾಗವಹಿಸದೇ ಇದ್ದಲ್ಲಿ ಲಾಟರಿ ಎತ್ತುವ ಮೂಲಕ ಆಯ್ಕೆ ನಡೆಯಬೇಕಿತ್ತು. ಈ ಚುನಾವಣೆಯಲ್ಲಿ ಸಂಸದ ಪ್ರತಾಪ್ ಸಿಂಹ ಭಾಗವಹಿಸಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಶಿವಕುಮಾರ್ ಪರ ವೋಟು ಚಲಾಯಿಸಿದರು.

    ಸದಸ್ಯರು ಕೈ ಎತ್ತುವ ಮೂಲಕ ಮತದಾನ ಮಾಡಿದರು. ಶಿವಕುಮಾರ್ ವಿಜೇತರಾಗಿದ್ದಾರೆಂದು ಚುನಾವಣಾಧಿಕಾರಿಯಾದ ಉಪ ವಿಭಾಗಾಧಿಕಾರಿ ಕೆ.ನಿತಿನ್ ಘೋಷಿಸಿದರು. ಈ ಮೂಲಕ ಬಹುಮತವಿದ್ದರೂ ಕಾಂಗ್ರೆಸ್ ಅಧಿಕಾರವನ್ನು ಕಳೆದುಕೊಂಡಿದೆ.

    ಮತಹಾಕಿದ್ದಕ್ಕೆ ಪ್ರತಾಪ್ ಸಿಂಹ ಫೇಸ್‍ಬುಕ್‍ನಲ್ಲಿ ಸ್ಪಷ್ಟನೆ:
    ಮೈಸೂರಿನಲ್ಲಿ ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯಿತಿ, ವಿವಿಧ ಪುರಸಭೆ ಹಾಗು ನಗರಸಭೆಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಿದೆ. ಹಾಗಾಗಿ ನಮಗೆ 3 ಸಲ ಉಪಮೇಯರ್, ಕೆಲ ಕಡೆ ತಾಲೂಕು ಪಂಚಾಯಿತಿ ಅಧ್ಯಕ್ಷ ಸ್ಥಾನ, ಸ್ಥಾಯಿ ಸಮಿತಿ ಸಿಕ್ಕಿದೆ. ಹುಣಸೂರಿನಲ್ಲಿ ಪಕ್ಷಾಂತರದ ಪಿಡುಗು ಹೆಚ್ಚಿದ್ದು ಕಳೆದ ಒಂದೂವರೆ ವರ್ಷದಲ್ಲಿ ಎರಡು ಬಾರಿ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಎರಡು ಸಲವೂ ಮೈತ್ರಿಕೂಟದ ಪರವಾಗಿ ವೋಟು ಹಾಕಿದ್ದೇನೆ.

    ಈ ಬಾರಿ ಜೆಡಿಎಸ್ ಬಣದ ಪರವಾಗಿ ನಿಂತ ಶಿವಕುಮಾರ್ ಹಾಗು ಕಾಂಗ್ರೆಸ್ ಬಣದ ಅಭ್ಯರ್ಥಿ ಸೌರಭ ಸಿದ್ದರಾಜು ಇಬ್ಬರೂ ಕಾಂಗ್ರೆಸ್ಸಿಗರೇ! ಈ ಕಾಂಗ್ರೆಸ್ ಅಭ್ಯರ್ಥಿ ಕಡೆಯವರು ನಮ್ಮ ಹನುಮ ಭಕ್ತರರಿಗೆ ಎಂಥ ಉಪದ್ರವ ಕೊಟ್ಟಿದ್ದರು ಎಂಬುದು ಹುಣಸೂರಿಗೆ ಗೊತ್ತು. ಹಾಗಾಗಿ ಕುಷ್ಟಗಿಯಿಂದ ರಾತ್ರಿ ಹೊರಟು ಬೆಳಗಿನ ಜಾವ ಕಸಾಯಿಖಾನೆಗೆ ತೆರಳುತ್ತಿದ್ದ 16 ಪಶುಗಳನ್ನು ನಮ್ಮ ಯುವಮೋರ್ಚಾದ ಶೇಖರ್, ದರ್ಶನ, ಡ್ರೈವರ್ ಸಹಾಯದಿಂದ ರಕ್ಷಿಸಿ ನೇರವಾಗಿ ಹುಣಸೂರಿಗೆ ಬಂದು ಹನುಮಭಕ್ತರ ವಿರೋಧಿಗಳಿಗೆ ವೋಟಿನ ಮೂಲಕ ಪಾಠ ಕಳಿಸಿ ಹೊರಬಂದಾಗ, “ಪ್ರತಾಪ್ ಸಿಂಹನಿಗೆ ಜೈ” ಎಂಬ ಘೋಷಣೆ ಮೊಳಗಿತು. ಮುಂದೆ ಬರುತ್ತಿರುವಾಗ ಮಾಜಿ ಸಂಸದ ವಿಶ್ವನಾಥರು ಎದುರಾದರು, ಕಾಲು ಮುಟ್ಟಿ ಸಮಸ್ಕರಿಸಿದೆ (ಸಂಘದ ಸಂಸ್ಕಾರ). ನನ್ನನ್ನು ತಬ್ಬಿಕೊಂಡರು. ಆ ಫೋಟೋ ಹಾಕಿ ಇಲ್ಲದ ಗುಲ್ಲೆಬ್ಬಿಸಬೇಡಿ. ಮೋದಿಜಿಯನ್ನು ಹೊಗಳಿ, ಸತತವಾಗಿ ಅವರ ಪರವಾಗಿ ಬರೆದ (2004, ಜೂನ್ 19 ರಿಂದ) ಮೊದಲ ಕನ್ನಡ ಬರಹಗಾರ ಹಾಗು ಮೋದಿಜಿ ಆತ್ಮಚರಿತ್ರೆ ಬರೆದ ಮೊಟ್ಟಮೊದಲ ಲೇಖಕ ನಾನು. ಸಾಯುವವರೆಗೂ ನಾನು ಮೋದಿಜಿ ನಿಷ್ಠ. ಜನವರಿ 27ಕ್ಕೆ ಹನುಮ ಜಯಂತಿ ಮೆರವಣಿಗೆ ಇದೆ. ಬಂದು ಕಣ್ಣಾರೆ ಕಂಡು ಆನಂದಿಸಿರಂತೆ. ವದಂತಿ ಬಿಡಿ.

  • ಸಂಸದ ಪ್ರತಾಪ್ ಸಿಂಹ ವಿರುದ್ಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

    ಸಂಸದ ಪ್ರತಾಪ್ ಸಿಂಹ ವಿರುದ್ಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

    ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಮೈಸೂರು ಸಂಸದ ಪ್ರತಾಪ್ ಸಿಂಹ ಪ್ರಚೋದನಾತ್ಮಕ ಪೋಸ್ಟ್ ಹಾಕುವ ಮೂಲಕ ಸಾಮಾಜಿಕ ಸ್ವಾಸ್ಥ್ಯ ಹಾಳು ಮಾಡಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಬೆಂಗಳೂರು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    ಕರ್ನಾಟಕ ಅಂತರ್ಜಾಲ ಪ್ರಾಧಿಕಾರದ ಎ ಆನಂದ ಎಂಬವರು ಪ್ರತಾಪ್ ಸಿಂಹ ಅವರ ವಿರುದ್ಧ ದೂರು ದಾಖಲಿಸಿದ್ದು, ಕರ್ತವ್ಯ ನಿರತ ಸರ್ಕಾರಿ ಅಧಿಕಾರಿಗಳ ಮೇಲೆ ವಿನಕಾರಣ ಹೇಳಿಕೆ ನೀಡಿ ಅವರ ದಕ್ಷತೆ ಹಾಗೂ ಪ್ರಾಮಾಣಿಕತೆಗೆ ಧಕ್ಕೆ ತರುವ ರೀತಿಯಲ್ಲಿ ಕೃತ್ಯವೆಸಗಿದ್ದಾರೆ ಎಂದು ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

    ರಾಜ್ಯ ಸರ್ಕಾರ ವಿರುದ್ಧ ಪ್ರತಿಭಟನೆ ನಡೆಸುವ ಹಿನ್ನೆಲೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಕೇಳಿದ ಪ್ರಶ್ನೆಗೆ ಉತ್ತರಿಸುವ ವಿಡಿಯೋ ಕುರಿತು ದೂರಿನಲ್ಲಿ ಉಲ್ಲೇಖ ಮಾಡಲಾಗಿದ್ದು, ಜವಾಬ್ದಾರಿಯುತ ಸ್ಥಾನದಲ್ಲಿರುವ ಸಂಸದರು ನೈಜವಲ್ಲದ ಪೋಸ್ಟ್ ಗಳನ್ನು ಫೇಸ್‍ಬುಕ್ ನಲ್ಲಿ ಹಾಕಿ ಪ್ರಚೋದನೆ ನೀಡುತ್ತಾರೆ. ಅಲ್ಲದೇ ದೇಶದ ವೀರ ವನಿತೆಯರ ಚಾರಿತ್ರ್ಯ ಹರಣ ಮಾಡುವಂತಹ ಪೋಸ್ಟ್ ಗಳನ್ನು ಹಾಕಿದ್ದು, ಈ ಕುರಿತು ದೂರು ದಾಖಲಿಸಿ ಸೂಕ್ತ ಕ್ರಮಕೈಗೊಳ್ಳುಬೇಕು. ಪ್ರಕರಣದ ಸಂಬಂಧಿಸಿದ ಸಾಕ್ಷ್ಯಧಾರಗಳನ್ನು ನಂತರ ದಿನಗಳಲ್ಲಿ ಹಾಜರು ಪಡಿಸುವುದಾಗಿ ದೂರಿನಲ್ಲಿ ಮನವಿ ಮಾಡಿದ್ದಾರೆ. (ಇದನ್ನೂ ಓದಿ: ಪ್ರತಾಪ್ ಸಿಂಹ ವಿರುದ್ಧ ಐಪಿಸಿ ಸೆಕ್ಷನ್ 188 ಸೇರಿಸಿ ಪೇಚಿಗೆ ಸಿಲುಕಿದ ಖಾಕಿಗಳು!)

    ಪ್ರತಾಪ್ ಸಿಂಹ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆ 2000 66 ಸಿ, ಐಪಿಸಿ ಸೆಕ್ಷನ್ ಗಳಾದ 153ಎ(ಸಮಾಜದ ಸಾಮರಸ್ಯ ಹಾಳು ಮಾಡುವುದು), 295ಎ( ಕೋಮು ಸೌಹಾರ್ದಕ್ಕೆ ಧಕ್ಕೆ), 505(ಜೀವ ಬೆದರಿಕೆ) ಅಡಿ ಪ್ರಕರಣ ದಾಖಲಾಗಿದೆ.

  • ಮುಂದಿನ ದಿನಗಳಲ್ಲಿ ಪ್ರತಾಪ್ ಸಿಂಹ ನಡವಳಿಕೆಯಿಂದ ಬಿಜೆಪಿಗೆ ಹೊಡೆತ- ಸಚಿವ ಎಂ.ಬಿ ಪಾಟೀಲ್

    ಮುಂದಿನ ದಿನಗಳಲ್ಲಿ ಪ್ರತಾಪ್ ಸಿಂಹ ನಡವಳಿಕೆಯಿಂದ ಬಿಜೆಪಿಗೆ ಹೊಡೆತ- ಸಚಿವ ಎಂ.ಬಿ ಪಾಟೀಲ್

    ವಿಜಯಪುರ: ಮೈಸೂರು ಸಂಸದ ಪ್ರತಾಪ್ ಸಿಂಹ ಅವರು ಸುಮ್ ಸುಮ್ನೆ ಸಮಸ್ಯೆಗಳನ್ನು ಸೃಷ್ಟಿ ಮಾಡ್ತಿದ್ದಾರೆ. ಮುಂದಿನ ದಿನಗಳಲ್ಲಿ ಪ್ರತಾಪ್ ಸಿಂಹ ಅವರ ನಡವಳಿಕೆ ಬಿಜೆಪಿಗೆ ಹೊಡೆತ ಕೊಡಲಿದೆ ಅಂತ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಭವಿಷ್ಯ ನುಡಿದಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಾಪ್ ಸಿಂಹ ಅವರ ಮಾತಿನಲ್ಲಿ ಹಿಡಿತ ಇಲ್ಲ. ಕಿತ್ತೂರಾಣಿ ಚೆನ್ನಮ್ಮ, ಒನಕೆ ಓಬವ್ವರಂತಹ ಸ್ವತಂತ್ರ ಹೋರಾಟಗಾರರ ಬಗ್ಗೆ ಮಾತನಾಡಿದ್ದರು. ಪ್ರತಾಪ್ ಸಿಂಹನೇ ಗಲಭೆಗಳನ್ನು ಎಬ್ಬಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ ಅವರು, ಸಂಸದರ ಉದ್ದೇಶ ಸರಿಯಿಲ್ಲ ಅಂತ ಹೇಳಿದ್ರು.

    ಇದನ್ನೂ ಓದಿ: ಪ್ರತಾಪ್ ಸಿಂಹಗೆ ಪೊಲಿಟಿಕಲ್ ಮೆಚ್ಯುರಿಟಿ ಇಲ್ಲ: ಸಿಎಂ ಸಿದ್ದರಾಮಯ್ಯ

    ಗುಜರಾತ್‍ನಲ್ಲಿ ಕಾಂಗ್ರೆಸ್ ಗೆಲ್ಲುತ್ತೆ. ಮೋದಿ ಜಾಥಾನೂ ನೋಡಿದ್ದೀರಿ. ಇತ್ತ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ನಮ್ಮ ಹಾರ್ದಿಕ್ ಪಟೇಲ್ ಜಾಥಾವನ್ನು ಕೂಡ ನೋಡಿದ್ದೀರಿ. ಪ್ಲಸ್ 4%ರಷ್ಟು ಅಥವಾ ಮೈನಸ್ 4%ರಷ್ಟು ಆದರೆ ಒಂದು ಸರಕಾರ ಬದಲಾಗುತ್ತೆ. ಯಾವೊಂದು ಮಾಧ್ಯಮ ಇದನ್ನ ಹೇಳುತ್ತಿಲ್ಲ. ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಪಟೇಲರು, ಉದ್ಯಮಿಗಳು ಎಲ್ಲರು ಒಂದು ಕಡೆ ಇದ್ದಾಗ ಅದು ಹೇಗೆ ಮೋದಿ ಗೆಲ್ಲುತ್ತಾರೆ ಎಂದು ಪ್ರಶ್ನಿಸಿದರು.

    ಇದನ್ನೂ ಓದಿ:  ಓಬವ್ವ, ಕಿತ್ತೂರು ರಾಣಿ ಬಗ್ಗೆ ಪ್ರಕಟವಾದ ಪೋಸ್ಟಿಗೂ ನನಗೂ ಸಂಬಂಧವಿಲ್ಲ: ಪ್ರತಾಪ್ ಸಿಂಹ

    4 ವರ್ಷದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ನನ್ನಂತೆ ಸಿದ್ಧರಾಮಯ್ಯ ಕೆಲಸ ಮಾಡಿದ್ದಾರೆಂದು ಮಾಜಿ ಪ್ರಧಾನಿ ದೇವೇಗೌಡರೇ ಹೊಗಳಿದ್ದಾರೆ. ಆದ್ರೆ ಕುಮಾರಸ್ವಾಮಿ ಇದನ್ನ ಸರಕಾರಕ್ಕೆ ದೇವೇಗೌಡರು ಟಾಂಗ್ ಕೊಟ್ಟಿದ್ದಾರೆ ಎಂದಿದ್ದಾರೆ. ದೇವೇಗೌಡರ ಹೇಳಿಕೆ ಸಿದ್ಧರಾಮಯ್ಯಗೆ ಟಾಂಗ್ ನೀಡಿದ್ದರೆ, ಅದು ಅವರಿಗೂ ಅನ್ವಯಿಸುತ್ತೆ ಎಂದು ಎಚ್‍ಡಿಕೆಗೆ ಪಾಟೀಲ್ ಟಾಂಗ್ ನೀಡಿದರು.

    ಇದನ್ನೂ ಓದಿ: ಪ್ರತಾಪ್ ಸಿಂಹ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರಿಗೆ ಕಾಂಗ್ರೆಸ್ಸಿನಿಂದ ಹಣ ಹಂಚಿಕೆ

  • ಕಾಂಗ್ರೆಸ್ ಟೀಕಿಸಲು ಅಭಿಮಾನಿಗಳಿಗೆ ರಸಪ್ರಶ್ನೆ ಆರಂಭಿಸಿದ ಪ್ರತಾಪ್ ಸಿಂಹ!

    ಕಾಂಗ್ರೆಸ್ ಟೀಕಿಸಲು ಅಭಿಮಾನಿಗಳಿಗೆ ರಸಪ್ರಶ್ನೆ ಆರಂಭಿಸಿದ ಪ್ರತಾಪ್ ಸಿಂಹ!

    ಮೈಸೂರು: ಸಂಸದ ಪ್ರತಾಪ್ ಸಿಂಹ ಫೇಸ್ ಬುಕ್ ಹಾಗೂ ಟ್ವಿಟ್ಟರ್ ಸಾಮಾಜಿಕ ಜಾಲತಾಣದಲ್ಲಿ ರಸಪ್ರಶ್ನೆ ಕೇಳುವ ಮೂಲಕ ಟಾಂಗ್ ನೀಡಲು ಆರಂಭಿಸಿದ್ದಾರೆ.

    ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಚಿವ ವಿನಯ್ ಕುಲರ್ಣಿ ಹಾಗೂ ಮೈಸೂರು ಎಸ್‍ಪಿ ರವಿ ಡಿ.ಚನ್ನಣ್ಣವರ್ ವಿರುದ್ಧ ಹಲವು ಪೋಸ್ಟ್ ಮಾಡಿ ಪ್ರಶ್ನೆ ಕೇಳುತ್ತಿದ್ದಾರೆ.

    ಸಿಂಹ ಪ್ರಶ್ನೆಗಳು:
    ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರಿಗೆ ಕಪಾಳಕ್ಕೆ ಹೊಡೆದ ಪುಂಡ ಯಾರು? ಬಳ್ಳಾರಿ ನಗರ ಪಾಲಿಕೆ ಅಧಿಕಾರಿಯ ಕಪಾಳಕ್ಕೆ ಹೊಡೆದವರ ವಿರುದ್ಧ ಕೇಸು ದಾಖಲಾಗಿದೇಯೋ ಇಲ್ವೋ? ಓಬವ್ವನಿಗೆ ಹಿಂದಿನಿಂದ ಚೂರಿ ಹಾಕಿದವನ ಜಯಂತಿ ಆರಂಭಿಸಿದ ಸರ್ಕಾರ ಯಾವುದು? ಮೈಸೂರಿನ ಕೆ.ಆರ್.ನಗರದಲ್ಲಿ ಅಂಟಿಸಿರುವ ಪೋಸ್ಟರ್ ಗಳ ವಿರುದ್ಧ ಕ್ರಮ ಕೈಗೊಳ್ಳುವವರು ಯಾರು ಇಲ್ಲವೆ? ಎಂಬ ಪ್ರಶ್ನೆಗಳನ್ನು ಟ್ಟಿಟ್ಟರ್ ಮತ್ತು ಫೇಸ್‍ಬುಕ್ ನಲ್ಲಿ ಕೇಳಿದ್ದಾರೆ.

    ಮಂಗಳವಾರದಿಂದ ಸಾಮಾಜಿಕ ಜಾಲತಾಣದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಇದಕ್ಕೆ ಟ್ವಿಟ್ಟರ್ ಹಾಗೂ ಫೇಸ್ ಬುಕ್ ಬಳಕೆದಾರರು ತಮಗೆ ತೊಚಿದಂತೆ ಉತ್ತರಗಳನ್ನು ನೀಡುತ್ತಿದ್ದಾರೆ.