Tag: ಸಂಸ್ಕೃತಿ

  • ಸಣ್ಣ ಸಮುದಾಯಗಳಿಗೆ ರಾಜಕೀಯ ಪ್ರಾತಿನಿಧ್ಯ ಕೊಡಿಸುವ ಕನಸು ಹೊತ್ತು ಕಾಂಗ್ರೆಸ್ ಸೇರ್ಪಡೆ: ದ್ವಾರಕಾನಾಥ್

    ಸಣ್ಣ ಸಮುದಾಯಗಳಿಗೆ ರಾಜಕೀಯ ಪ್ರಾತಿನಿಧ್ಯ ಕೊಡಿಸುವ ಕನಸು ಹೊತ್ತು ಕಾಂಗ್ರೆಸ್ ಸೇರ್ಪಡೆ: ದ್ವಾರಕಾನಾಥ್

    ಬೆಂಗಳೂರು: ದೇಶದಲ್ಲಿ ಫ್ಯಾಸಿಸ್ಟ್ ಹಾಗೂ ಮತಾಂಧ ಸಂಸ್ಕೃತಿಯ ಪ್ರಭಾವ ಹೆಚ್ಚಾಗುತ್ತಿದೆ. ಸಣ್ಣ ಹಾಗೂ ಹಿಂದುಳಿದ ಸಮುದಾಯಗಳನ್ನು ಈ ಪ್ಯಾಸಿಷ್ಟ್ ಶಕ್ತಿಗಳು ಸೆಳೆಯುತ್ತಿವೆ, ಈ ಸನ್ನಿವೇಶದಲ್ಲಿ ಈ ಸಣ್ಣ ಸಮುದಾಯಗಳನ್ನು ಕಮ್ಯೂನಲಿಸಂನಿಂದ ಉಳಿಸುವ ಸಲುವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಳ್ಳುವ ಮೂಲಕ ಈ ಸಮುದಾಯಗಳ ಅಭಿವೃದ್ಧಿ ಹಾಗೂ ರಾಜಕೀಯ ಪ್ರಾತಿನಿಧ್ಯಕ್ಕಾಗಿ ಶ್ರಮಿಸುವುದಾಗಿ ಡಾ.ಸಿ.ಎಸ್ ದ್ವಾರಕಾನಾಥ್ ಹೇಳಿದ್ದಾರೆ.

    ಇಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪದಾಧಿಕಾರಿಗಳ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ ಮಾತನಾಡಿದ ದ್ವಾರಕಾನಾಥ್, ಸಣ್ಣ ಸಮುದಾಯದ ಸಮಸ್ಯೆಗಳ ನಿವಾರಣೆಯ ನಿಟ್ಟಿನಲ್ಲಿ ಕಳೆದ ನಾಲ್ಕೂವರೆ ದಶಕಗಳಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. ದೇಶದಲ್ಲಿ ಇತ್ತೀಚೆಗೆ ಈ ಸಮುದಾಯದ ಪರವಾಗಿ ಧ್ವನಿ ಎತ್ತುವವರ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಕೊರಿಯಾಗೆ ಕಳುಹಿಸಿದ ಸ್ವಾರಸ್ಯಕರ ಕಥೆ ಹೇಳಿದ್ರು ಡಿ.ಕೆ ಶಿವಕುಮಾರ್

    ಫ್ಯಾಸಿಸ್ಟ್ ಸಂಸ್ಕೃತಿ ಹೆಚ್ಚಾಗಿರುವ ಸಂದರ್ಭದಲ್ಲಿ ಧ್ವನಿ ಇಲ್ಲದವರ ಪರವಾಗಿ ಧ್ವನಿ ಎತ್ತುವ ಶಕ್ತಿಯನ್ನು ಹೊಂದಿರುವ ಕಾಂಗ್ರೆಸ್ ಪಕ್ಷದ ಜೊತೆಗೆ ಕೈಜೋಡಿಸಿದ್ದೇನೆ. ದೇವರಾಜ್ ಅರಸು ಅವರು ರಾಜಕೀಯದಿಂದ ಜಾತಿಗಳ ಸಮೀಕರಣ ಮತ್ತು ಸಂಪನ್ಮೂಲಗಳ ಕ್ರೊಢೀಕರಣ ಸಾಧ್ಯ ಎಂದು ಹೇಳಿದ್ದರು. ಜಾತಿಗಳ ಸಮೀಕರಣ ಹಾಗೂ ಹಿಂದುಳಿದ ಸಮುದಾಯದ ಅಭಿವೃದ್ಧಿಗೆ ಹಾಗೂ ಅವರಿಗೆ ರಾಜಕೀಯ ಪ್ರಾತಿನಿಧ್ಯ ದೊರಕಿಸಿಕೊಡುವ ನಿಟ್ಟಿನಲ್ಲಿ ಪಕ್ಷದಲ್ಲಿ ಕಾರ್ಯನಿರ್ವಹಿಸುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ನನ್ನನ್ನು ಟಾರ್ಗೆಟ್ ಮಾಡುವುದಕ್ಕೆ ಬಂದವರೆಲ್ಲಾ ಮಣ್ಣಲ್ಲಿ ಮಣ್ಣಾಗಿ ಹೋಗಿದ್ದಾರೆ: ಪುಟ್ಟರಾಜು

  • ನಾಗರ ಪಂಚಮಿ ಹಬ್ಬವನ್ನು ಯಾಕೆ ಆಚರಿಸಲಾಗುತ್ತದೆ? ಹೆಣ್ಮಕ್ಕಳ ಹಬ್ಬ ಯಾಕೆ? ಇಲ್ಲಿದೆ ಕಥೆ

    ನಾಗರ ಪಂಚಮಿ ಹಬ್ಬವನ್ನು ಯಾಕೆ ಆಚರಿಸಲಾಗುತ್ತದೆ? ಹೆಣ್ಮಕ್ಕಳ ಹಬ್ಬ ಯಾಕೆ? ಇಲ್ಲಿದೆ ಕಥೆ

    ಹಿಂದೂ ಪಂಚಾಂಗದ ಪ್ರಕಾರ ಎಲ್ಲ ಹಬ್ಬಗಳಿಗೆ ಮುನ್ನುಡಿಯಂತೆ ಬರುವ ಹಬ್ಬ ಎಂದರೆ ಅದು ನಾಗರ ಪಂಚಮಿ. ಶ್ರಾವಣ ಶುದ್ಧ ಪಂಚಮಿಯಿಂದ ಆಚರಿಸಲ್ಪುಡುವ ಈ ಹಬ್ಬ ಮುಂದೆ ಬರಲಿರುವ ಗಣೇಶ ಚತುರ್ಥಿ, ಕೃಷ್ಣಾಷ್ಟಮಿ, ನವರಾತ್ರಿ, ಊರಿನ ಜಾತ್ರೆಗೆ, ಎಲ್ಲ ಶುಭ ಆಚರಣೆಗಳಿಗೆ ಮೊದಲ ಮೆಟ್ಟಿಲು.

    ನಾಗರ ಪಂಚಮಿ ಸಂಬಂಧಿಸಿದಂತೆ ಜನಪದ ಮತ್ತು ಪುರಾಣದಲ್ಲಿ ಹಲವು ಕಥೆಗಳಿವೆ. ಜನಪದ ಕಥೆಯ ಪ್ರಕಾರ ನಾಗರ ಪಂಚಮಿ ಬರುವುದು ಮುಂಗಾರಿನ ರಭಸದ ದಿನಗಳ ಮಧ್ಯೆ. ಈ ಕಾಲದ ಕೃಷಿ ಚಟುವಟಿಕೆಗಳು ಒಂದು ಹಂತ ತಲುಪಿರುತ್ತವೆ. ಈ ಕಾಲದಲ್ಲಿ ಕೀಟ, ಮಿಡತೆಗಳ ಹಾವಳಿ ಅಧಿಕ. ಅಷ್ಟೇ ಅಲ್ಲದೆ ಫಸಲು ತಿನ್ನಲು ಬರುವ ಇಲಿಗಳಿಗೂ ಕೊರತೆಯಿಲ್ಲ. ಇವೆಲ್ಲದರಿಂದ ರೈತನ ಫಸಲನ್ನು ಕಾಪಾಡುವುದು ಹಾವುಗಳು. ಇಲಿ, ಕಪ್ಪೆಗಳ ಅತಿಯಾದ ಹಾವಳಿಯನ್ನು ನಿಯಂತ್ರಿಸುವ ನಾಗರನಿಗೆ ಪುಟ್ಟದೊಂದು ಧನ್ಯವಾದ ಹೇಳಲು ನಡೆಸುವ ಪೂಜೆಯೇ ನಾಗರ ಪಂಚಮಿ.

    ಸ್ಕಂದ ಪುರಾಣದಲ್ಲಿ ನಾಗರ ಪಂಚಮಿಯ ಬಗ್ಗೆ ಕೆಲ ಮಾಹಿತಿಗಳು ಸಿಗುತ್ತದೆ. ಶ್ರೀಕೃಷ್ಣನ ಮಗನಾದ ಸಾಂಬನು ಶಿವಸುತ ಸುಬ್ರಹ್ಮಣ್ಯನಲ್ಲಿ ನಾಗರ ಪಂಚಮಿಯನ್ನು ಯಾಕೆ ಆಚರಿಸಲಾಗುತ್ತದೆ ಎಂದು ಪ್ರಶ್ನೆ ಕೇಳಿದಾಗ ಆತನ ಒಂದು ಕಥೆಯನ್ನು ಹೇಳುತ್ತಾನೆ.

    ಹಿಂದೆ ದೇವಶರ್ಮ ಎಂಬ ಬ್ರಾಹ್ಮಣನೊಬ್ಬನಿದ್ದನು. ಆತನಿಗೆ 8 ಗಂಡು ಮಕ್ಕಳು ಹಾಗೂ ಒಬ್ಬಾಕೆ ಹೆಣ್ಣು ಮಗಳಿದ್ದಳು. ಒಂದು ದಿನ ಗರುಡನಿಂದ ಹೆದರಿಸಲ್ಪಟ್ಟ ನಾಗರವೊಂದು ಈ ಕನ್ನಿಕೆಯ ಬಳಿ ಬಂದು ಆಶ್ರಯವನ್ನು ಕೇಳುತ್ತದೆ. ಭಕ್ತಿಯಿಂದ ಕನ್ನಿಕೆ ಆ ನಾಗನಿಗೆ ಹಾಲು, ಫಲಗಳನ್ನು ಇಟ್ಟು ಭಕ್ತಿಯಿಂದ ಸಾಕುತ್ತಾಳೆ. ಇದಕ್ಕೆ ಪ್ರತಿಯಾಗಿ ಆ ನಾಗವು ದಿನಂಪ್ರತಿ ಆಕೆಗೆ ಒಂದು ತೊಲೆ ಚಿನ್ನವನ್ನು ನೀಡುತ್ತಿರುತ್ತದೆ. ಹೀಗಿರಲು ಒಂದು ದಿನ ಎಂಟು ಗಂಡು ಮಕ್ಕಳಲ್ಲಿ ಒಬ್ಬನು ತುಂಬಾ ಬಂಗಾರ ಬೇಕೆಂದು ನಾಗನನ್ನು ಪೀಡಿಸಿ, ಕಾಲಿನಿಂದ ಒದೆಯುತ್ತಾನೆ. ಕೋಪಗೊಂಡ ನಾಗರ ಹಾವು ಅವನ್ನು ಸೇರಿದಂತೆ ಇತರ ಏಳು ಜನರನ್ನು ಕೊಂದು ಹೊರಟು ಹೋಗುತ್ತದೆ. ತನ್ನ ಅಣ್ಣಂದಿರ ಸಾವಿಗೆ ತಾನೇ ಕಾರಣನಾದೇ ಎಂದು ಆ ಕನ್ನಿಕೆ, ದೇವರ ಇದಿರಿನಲ್ಲಿ ಶಿರಚ್ಛೇದನಕ್ಕೆ ಮುಂದಾದಾಗ, ನಾರಾಯಣನು ವಾಸುಕಿಗೆ ಆ ಸತ್ತ ಹುಡುಗರನ್ನು ಬದುಕಿಸಲು ಹೇಳುತ್ತಾನೆ. ಈ ರೀತಿ ಪುನಃ ಅಣ್ಣಂದಿರ ಜೀವವನ್ನು ಮರಳಿ ಪಡೆದುಕೊಳ್ಳುವಲ್ಲಿ ಆ ಕನ್ನಿಕೆ ಯಶಸ್ವಿಯಾದ ದಿನವೇ ನಾಗರ ಪಂಚಮಿ.

    ಹೆಣ್ಣುಮಕ್ಕಳ ಹಬ್ಬ:
    ನಾಗರಪಂಚಮಿ ಹೆಚ್ಚಾಗಿ ಹೆಣ್ಣು ಮಕ್ಕಳ ಹಬ್ಬ. ನಾಗರಪಂಚಮಿಯ ಹಿಂದಿನ ದಿನ ಸಹೋದರಿ ನಾಗದೇವತೆಗೆ ಬೇಡಿಕೊಂಡರೆ ಸಹೋದರನಿಗೆ ಲಾಭ ಹಾಗೂ ರಕ್ಷಣೆ ಸಿಗುತ್ತದೆ. ನಾಗರಪಂಚಮಿ ಮಾಂಗಲ್ಯಪ್ರದ ಹಾಗೂ ಸಂತಾನಪ್ರದ ಎಂಬ ನಂಬಿಕೆ. ಉತ್ತರ ಕರ್ನಾಟಕದಲ್ಲಿ ನಾಗರಪಂಚಮಿ ವಿಶೇಷತೆಗಳಿಂದ ಕೂಡಿರುತ್ತದೆ. `ನಾಗರ ಪಂಚಮಿ ಬಂತು, ಅಣ್ಣ ಬರುತ್ತಾನೆ ಕರೆಯಾಕ, ಕರಿ ಸೀರೆ ಉಡಿಸಾಕ‘ ಎನ್ನುವ ಜಾನಪದ ಹಾಡು ಹಬ್ಬದ ವಿಶೇಷತೆ ಸಾರುತ್ತದೆ. ತವರಿಗೆ ಹೆಣ್ಣುಮಕ್ಕಳನ್ನು ಆಹ್ವಾನಿಸಿ, ಉಡುಗೊರೆ ನೀಡಿ ಗೌರವಿಸಲಾಗುತ್ತದೆ.

    ಸಿಂಧೂ ಜನರಲ್ಲೂ ನಂಬಿಕೆಯಿತ್ತು:
    ನಮ್ಮ ಪೂರ್ವಜರ ಕಾಲದಿಂದಲೂ ನಾಗಪೂಜೆ ನಡೆದುಕೊಂಡು ಬಂದ ಸಂಪ್ರದಾಯವಾಗಿದೆ. ಸಿಂಧೂ ಸಂಸ್ಕೃತಿಯ ಉತ್ಕನನ ತಾಣಗಳಲ್ಲಿ ಸಿಕ್ಕಿರುವ ಅನೇಕ ಅವಶೇಷಗಳು ಅಲ್ಲಿನ ಜನರು ನಾಗ (ಸರ್ಪ) ಪೂಜೆ ಮಾಡುತ್ತಿದ್ದರು ಎನ್ನುವುದು ತಿಳಿದುಬರುತ್ತದೆ. ಅವರ ನಂತರ ಬಂದಿರುವ ಅನೇಕ ರಾಜಮನೆತನಗಳು ಸರ್ಪವನ್ನು ವಿಶೇಷವಾಗಿ ಪೂಜಿಸುತ್ತಿದ್ದರು. ಈ ಬಗ್ಗೆ ಇತಿಹಾಸದ ಪುಟಗಳಲ್ಲಿ ಉಲ್ಲೇಖವಿದೆ. ಮಾನವ ಜನಾಂಗದವರು ಆದಿಕಾಲದಿಂದಲೂ ಈ ನಾಗಾರಾಧನೆ ನಡೆಸಿಕೊಂಡು ಬಂದಿದ್ದರು ತಿಳಿದುಬರುತ್ತದೆ.

    ಭಾರತದ ಇತಿಹಾಸದ ಪುಟಗಳಲ್ಲಿ ನಾಗವಂಶಗಳ ಕುರಿತಾಗಿ ಉಲ್ಲೇಖವಿದೆ. ಈಗಲೂ ಭಾರತದ ಕೇರಳ, ಅಸ್ಸಾಂ, ನಾಗಾಲ್ಯಾಂಡ್‍ಗಳಲ್ಲಿ ನಾಗಾ ಜನಾಂಗದ (ನಾಗವಂಶೀಯರು) ಇದ್ದಾರೆ. ಭಾರತಕ್ಕಷ್ಟೇ ನಾಗ ಪೂಜೆ ಸೀಮಿತವಾಗಿಲ್ಲ. ಗ್ರೀಸ್, ಜಪಾನ್, ಚೀನಾ, ಈಜಿಪ್ಟ್ ಸೇರಿದಂತೆ ಮುಂತಾದ ಪುರಾತನ ಸಂಸ್ಕøತಿಯುಳ್ಳ ಜನತೆ ನಾಗ ಪೂಜೆ ಮಾಡುತ್ತಿದ್ದರು. ನಮ್ಮ ನೆರೆಯ ರಾಜ್ಯ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಬತ್ತೀಸ ಶಿರಾಳ್ ಗ್ರಾಮದಲ್ಲಿ ನಾಗರಪಂಚಮಿ ದಿನ ಜೀವಂತ ನಾಗರಹಾವುಗಳನ್ನು ಪೂಜಿಸಲಾಗುತ್ತದೆ.

    ಕ್ಷೀರಾಭಿಷೇಕ ಮಾಡೋದು ಯಾಕೆ?
    “ಅನಂತಂ ವಾಸುಕಿಂ ಶೇಷಂ ಪದ್ಮನಾಭಂ ಚ ಕಂಬಲಮ್| ಶಂಖಪಾಲಂ ಧೃತರಾಷ್ಟ್ರಂ ತಕ್ಷಕಂ, ಕಾಲಿಯಂ ತಥಾ” ಎಂಬ ಶ್ಲೋಕವು ನಾಗ ದೇವನ ವಿವಿಧ ಹೆಸರುಗಳನ್ನು ಹೇಳುತ್ತದೆ. ಅನಂತ, ವಾಸುಕೀ, ಶೇಷ, ಪದ್ಮನಾಭ, ಕಂಬಲ, ಶಂಖಪಾಲ, ಧೃತರಾಷ್ಟ್ರ, ತಕ್ಷಕ ಮತ್ತು ಕಾಲಿಯಾ ಹೀಗೆ ಒಂಭತ್ತು ಜಾತಿಯ ನಾಗಗಳ ಆರಾಧನೆ ಮಾಡಲಾಗುತ್ತದೆ. ಸರ್ಪಭಯ ಮತ್ತು ವಿಷದಿಂದ ತೊಂದರೆಯಾಗದೇ ಇರಲು ಹಲವು ಕಡೆ ನಾಗನ ಕಲ್ಲುಗಳಿಗೆ ಕ್ಷೀರಾಭಿಷೇಕ ಮಾಡುವ ಪದ್ಧತಿಯಿದೆ.

    ನಾಗರಪಂಚಮಿಯ ದಿನದಲ್ಲಿ ವಾತಾವರಣವು ಸ್ಥಿರವಾಗಿರುತ್ತದೆ. ಸಾತ್ವಿಕತೆಯನ್ನು ಗ್ರಹಿಸಲು ಈ ಕಾಲವು ಅತ್ಯಂತ ಯೋಗ್ಯ ಮತ್ತು ಬಹಳ ಉಪಯುಕ್ತವಾಗಿದೆ. ಶ್ರಾವಣ ಶುದ್ಧ ಪಂಚಮಿಯ ದಿನ, ಗೋಮಯ (ಸಗಣಿ)ಯಿಂದ ಬಾಗಿಲು ಸಾರಿಸಿ, ರಂಗೋಲಿ, ಇಲ್ಲವೇ ಅರಿಶಿಣ, ಕುಂಕುಮದಿಂದ ನಾಗರ ಚಿತ್ರಗಳನ್ನು ಬರೆದು ನೇಮನಿಷ್ಠೆಯಿಂದ ಪೂಜೆ ಮಾಡುತ್ತಾರೆ.

    ಸರ್ಪಯಜ್ಞವನ್ನು ನಿಲ್ಲಿಸಿದ ದಿನ:
    ಜನಮೇಜಯ ರಾಜ ತನ್ನ ತಂದೆ ಪರೀಕ್ಷಿತ ರಾಜನ ಸಾವಿಗೆ ಸರ್ಪವೊಂದು ಕಾರಣವೆಂದು ತಿಳಿದು, ಭೂಲೋಕದಲ್ಲಿ ಸರ್ಪಸಂಕುಲವನ್ನು ನಿರ್ನಾಮ ಮಾಡಲು ‘ಸರ್ಪಯಜ್ಞ’ವನ್ನು ಆರಂಭಿಸುತ್ತಾನೆ. ಋತ್ವಿಜರು ಹೋಮಮಾಡಲು ಆರಂಭಿಸಿದಾಗ ಸರ್ಪಗಳು ಒಂದರ ಹಿಂದೆ ಒಂದರಂತೆ ಬಂದು ಅಗ್ನಿಕುಂಡಕ್ಕೆ ಬಿದ್ದು ಬುದಿಯಾಗತೊಡಗಿತು. ಇದನ್ನು ಕಂಡ ಉಳಿದ ಸರ್ಪಗಳು ಸರ್ಪರಾಜ ವಾಸುಕಿಯ ತಂಗಿಯಾದ ಜರತ್ಕಾರು ಬಳಿ ಹೋಗಿ  ದಯವಿಟ್ಟು ನಮ್ಮನ್ನು ಆ ರಾಜನ ಹೋಮದಿಂದ ರಕ್ಷಿಸು ಎಂದು ಬೇಡಿಕೊಳ್ಳುತ್ತವೆ. ಸರ್ಪಗಳ ಮನವಿಗೆ ಜರತ್ಕಾರು ಒಪ್ಪಿ ತನ್ನ ಮಗನಾದ ಆಸ್ತೀಕನಿಗೆ ಯಜ್ಞವನ್ನು ನಿಲ್ಲಿಸಿ ಬರುವಂತೆ ಸೂಚನೆ ನೀಡುತ್ತಾಳೆ. ಆಸ್ತೀಕ ಋಷಿಯು ಸರ್ಪಯಜ್ಞ ಮಾಡುವ ಜನಮೇಜಯ ರಾಜನ ಯಜ್ಞಶಾಲೆಯನ್ನು ಪ್ರವೇಶಿಸಿ ತನ್ನ ವಿದ್ಯಾಬಲದಿಂದ ಪ್ರಾಣಿ ಹಿಂಸೆ ಮಹಾಪಾಪ, ನೀನು ಈಗಾಗಲೇ ಮಾಡುತ್ತಿರುವ ಸರ್ಪಯಜ್ಞವನ್ನು ನಿಲ್ಲಿಸಬೇಕು ಎಂದು ಬೋಧಿಸಿದ. ಜನಮೇಜಯನು ಆಸ್ತಿಕನ ಮಾತಿಗೆ ಬೆಲೆಕೊಟ್ಟು ಸರ್ಪಯಜ್ಞವನ್ನು ನಿಲ್ಲಿಸಿದ ದಿನ ಪಂಚಮಿಯಾಗಿದೆಯಂತೆ.

    ಶಿವನ ಆಭರಣ, ವಿಷ್ಣುವಿನ ಹಾಸಿಗೆ, ಗಣಪತಿಯ ಹೊಟ್ಟೆಯ ಪಟ್ಟಿ, ಸಮುದ್ರಮಂಥನ ಕಾಲದಲ್ಲಿ ಮಂದರ ಪರ್ವರತವೆಂಬ ಕಡಗೋಲಿಗೆ ಹಗ್ಗವಾಗಿ, ದುರ್ಯೋಧನನ ಧ್ವಜದ ಚಿಹ್ನೆಯಾಗಿ ನಾಗ ಕಾಣಿಸಿಕೊಳ್ಳುತ್ತಾನೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೊಡಗಿನಲ್ಲಿ ಗಿರಿಜನರ ಸಾಂಸ್ಕೃತಿಕ ಕಲಾ ವೈಭವ

    ಕೊಡಗಿನಲ್ಲಿ ಗಿರಿಜನರ ಸಾಂಸ್ಕೃತಿಕ ಕಲಾ ವೈಭವ

    ಮಡಿಕೇರಿ: ಕೊಡಗಿನ ಗಡಿ ಭಾಗ ಕಾರ್ಮಾಡುವಿನಲ್ಲಿ ವನವಾಸಿ ಜನರು ಗಿರಿ ಜನೋತ್ಸವದ ಅದ್ಧೂರಿ ಕಾರ್ಯಕ್ರಮ ನಡೆಸಿದರು.

    ಗಿರಿಜನರನ್ನು ಒಂದು ಕಡೆ ಸೇರಿಸುವ ಉದ್ದೇಶದಿಂದ ಮತ್ತು ಗಿರಿ ಜನರ ಕಲೆ, ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಮೈಸೂರಿನ ರಂಗಯಣ ಮತ್ತು ವನವಾಸಿ ಕಲ್ಯಾಣ ಕೇಂದ್ರ ಕೊಡಗು ಇವರ ಸಂಯುಕ್ತ ಆಶ್ರಯದಲ್ಲಿ ಪೋನ್ನಪೇಟೆ ತಾಲೂಕಿನ ಕಾರ್ಮಾಡು ಗ್ರಾಮದಲ್ಲಿ ರಾಜ್ಯಮಟ್ಟದ ಗಿರಿಜನೊತ್ಸವ ಕಾರ್ಯಕ್ರಮ ನಡೆಸಿದರು. ವನವಾಸಿಗಳು ಕಾಡಿನಲ್ಲಿ ಪ್ರಕೃತಿಯನ್ನು ಪೂಜಿಸಿತ್ತಾ ಕಾಡಿನಲ್ಲೇ ತಮ್ಮ ಜೀವನವನ್ನು ಕಟ್ಟಿಕೊಂಡಿದ್ದಾರೆ.

    ಅವರ ಆಚಾರ, ವಿಚಾರ, ಕಲೆ, ಸಂಸ್ಕೃತಿ ಶ್ರೀಮಂತವಾಗಿದ್ದು ಆಧುನಿಕ ಯುಗದಲ್ಲಿ ಕಲೆಯನ್ನು ಉಳಿಸಲು ಯುವ ಪೀಳಿಗೆಯಲ್ಲಿ ಕಲೆಯನ್ನು ಬೆಳೆಸುವ ಉದ್ದೇಶದಿಂದ ಹಲವಾರು ಕಲಾ ತಂಡಗಳನ್ನು ಒಂದು ಕಡೆ ಸೇರಿಸಿ 10ಕ್ಕೂ ಹೆಚ್ಚು ಕಲಾ ತಂಡಗಳು ಜಾನಪದ ನೃತ್ಯಗಳನ್ನು ಪ್ರದರ್ಶನ ಮಾಡಿದರು. ರಂಗಾಯಣ ನಡೆ ಗಿರಿಜನರೆಡೆಗೆ ಎಂದು ಘೋಷ ವಾಖ್ಯಾ ಇಟ್ಟುಕೊಂಡು ಗಿರಿ ಜನರ ಕಡೆಗೆ ಹೋಗುತ್ತಿದ್ದೇವೆ ಎಂದು ರಂಗಾಯಣ ನಿರ್ದೇಶಕ ಅಡಂಡ್ಡ ಕಾರ್ಯಪ್ಪ ಎಂದರು.

    ಕೊಡಗು ಜಿಲ್ಲೆಯ ಕಾಡು ಕುರುಬ. ಮಲೆಕುಡಿಯ ಯರವ ಜನಾಂಗದ ಆದಿವಾಸಿಗಳು ಸೇರಿದಂತೆ ಮೈಸೂರು, ಚಾಮರಾಜನಗರ, ದಕ್ಷಿಣಕನ್ನಡ, ಮಂಡ್ಯ, ರಾಮನಗರದ ಗಿರಿಜನ ಕಲಾ ತಂಡಗಳು ಅವರ ಸಂಸ್ಕೃತಿ ಬಿಂಬಿಸುವ ಉಡುಪು ತೊಟ್ಟು ನೃತ್ಯ ಮಾಡಿದರು. ಪೂಜಕುಣಿತ, ಯರವರಕುಣಿತ, ಡೊಳ್ಳು ಕುಣಿತ, ಕಂಸಾಳೆ ನೃತ್ಯ, ಯರವ ಕುಣಿತ ಪರೆಕೊಟ್ ಹೀಗೆ ಮುಂತಾದ ನೃತ್ಯಗಳನ್ನು ಕಾಡಿನಲ್ಲಿ ಸಿಕ್ಕುವ ಪರಿಕರಗಳನ್ನು ಬಳಸಿಕೊಂಡು ಹಾಡು ಹಾಡುತ್ತಾ ನೃತ್ಯ ಮಾಡುತ್ತಾ ನೆರೆದಿದ್ದ ಪ್ರೇಕ್ಷಕರಿಗೆ ಕಲಾರುಚಿಯನ್ನು ಉಣಬಡಿಸಿದರೆ ಪ್ರೇಕ್ಷಕರು ಸಿಳ್ಳೆ ಚಪ್ಪಾಳೆ ತಟ್ಟಿ ಕಲಾವಿದರಿಗೆ ಪ್ರೋತ್ಸಾಹ ನೀಡಿದರು.

    ಒಟ್ಟಿನಲ್ಲಿ ಆಧುನಿಕ ನೃತ್ಯಗಳನ್ನು ನೋಡಿ ಬೇಸತ್ತಿದ್ದ ಜನರು ಹಲವು ಜಿಲ್ಲೆಯ ಕಲಾತಂಡಗಳ ಸಂಸ್ಕøತಿಯನ್ನು ಬಿಂಬಿಸುವ ಜಾನಪದ ನೃತ್ಯಗಳನ್ನು ನೋಡಿ ಸಖತ್ ಎಂಜಾಯ್ ಮಾಡಿದರು. ಇನ್ನೂ ಕಲಾವಿದರಂತೂ ಬೇರೆ ಸಂಸ್ಕೃತಿ ಬಿಂಬಿಸುವ ಕಲೆಗಳನ್ನು ನೋಡಿ ಖುಷಿಪಟ್ಟರು.

  • ಸ್ಪೈನ್ ಮಹಿಳೆಗೆ ಭಾರತದ ಸಂಸ್ಕೃತಿ  ಕಲಿಸಿಕೊಟ್ಟ ಕೊರೊನಾ

    ಸ್ಪೈನ್ ಮಹಿಳೆಗೆ ಭಾರತದ ಸಂಸ್ಕೃತಿ ಕಲಿಸಿಕೊಟ್ಟ ಕೊರೊನಾ

    ಉಡುಪಿ: ಮಹಾಮಾರಿ ಕೊರೊನಾದಿಂದ ದೇಶದ್ಯಾಂತ ಜನರು ಕಷ್ಟಪಡುವಂತಹ ಪರಿಸ್ಥಿತಿ ಎದುರಾಗಿದೆ. ಆದರೆ ಈ ಮಧ್ಯೆ ಕೊರೊನಾದಿಂದ ಸ್ಪೈನ್ ಮಹಿಳೆಯೊಬ್ಬರು ಭಾರತದ ಸಂಸ್ಕೃತಿಯನ್ನು ಕಲಿತಿದ್ದಾರೆ.

    ಸ್ಪೈನ್ ಮಹಿಳೆ ಥೆರೆಸಾ ಕೊರೊನಾದಿಂದ ಭಾರತದ ಸಂಸ್ಕೃತಿ ಕಲಿತಿದ್ದಾರೆ. ತವರು ದೇಶ ಬಿಟ್ಟು ಭಾರತಕ್ಕೆ ಬಂದ ಥೆರೆಸಾ ಭಾರತವನ್ನೇ ತವರು ಮಾಡಿಕೊಂಡಿದ್ದಾರೆ. ಜಿಲ್ಲೆಯ ಬೈಂದೂರಿನಲ್ಲಿ ನೆಲೆಸಿರುವ ಈಕೆ ಸ್ಪೈನ್ ದೇಶದವರು. ಆದರೆ ಕರಾವಳಿ ಭಾಷೆ, ಕುಂದಾಪುರದ ಸಂಸ್ಕೃತಿಗೆ ಲಾಕ್‍ಡೌನ್ ನಡುವೆ ಒಗ್ಗಿದ್ದಾರೆ. ಸ್ನೇಹಿತರಾದ ಕೃಷ್ಣ ಪೂಜಾರಿ ಮನೆಯಲ್ಲಿ ಆಶ್ರಯ ಪಡೆದಿರುವ ಈಕೆ ನಾಲ್ಕು ತಿಂಗಳಲ್ಲಿ ಅಪ್ಪಟ ಭಾರತೀಯಳೇ ಆಗಿಬಿಟ್ಟಿದ್ದಾರೆ.

    ಥೆರೆಸಾ ಸ್ಪೈನ್ ದೇಶಕ್ಕೆ ಹೊರಟು ನಿಂತಾಗ ಭಾರತದಲ್ಲಿ ಲಾಕ್‍ಡೌನ್ ಆರಂಭವಾಯಿತು. ಹಾಗಾಗಿ ಸ್ನೇಹಿತರಾದ ಕೃಷ್ಣ ಪೂಜಾರಿ ಅವರ ಮನೆಯಲ್ಲೇ ಉಳಿದುಕೊಂಡಿದ್ದರು. ಸಮಯದ ಸದ್ಬಳಕೆ ಮಾಡಿಕೊಂಡು ಹಳ್ಳಿ ಹುಡುಗಿಯರ ರೀತಿಯಲ್ಲಿ ಗ್ರಾಮೀಣ ಬದುಕಿಗೆ ಒಗ್ಗಿಕೊಂಡಿದ್ದಾರೆ.

    ಭತ್ತದ ನೇಜಿ ನೆಡುವುದು, ಹಾಲು ಕರೆಯೋದು, ಗೊಬ್ಬರ ಬುಟ್ಟಿ ತುಂಬುವುದು, ರಂಗೋಲಿ ಹಾಕುವುದು ಎಲ್ಲವನ್ನು ಮಾಡುತ್ತಾರೆ. ಜೊತೆಗೆ ತೆಂಗಿನ ಸೋಗೆ ನೇಯುವುದು, ಇಂಡಿಯನ್ ಸ್ಟೈಲ್‍ನಲ್ಲಿ ಬಟ್ಟೆ ತೊಳೆಯೋದು, ಅಡುಗೆ ಮಾಡೋದು ಅಭ್ಯಾಸವಾಗಿದೆ. ನಮ್ಮ ಮನೆಯವರಿಂದ ಪ್ರತಿಯೊಂದೂ ಕೆಲಸ ಕಲಿತಿದ್ದಾರೆ ಎಂದು ಆಶ್ರಯ ನೀಡಿದ ಕೃಷ್ಣ ಪೂಜಾರಿ ಸಂತಸದಿಂದ ಹೇಳಿದ್ದಾರೆ.

    ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಆರಂಭವಾಗಿದ್ದು, ಸ್ಪೈನ್‍ಗೆ ಥರೆಸಾ ಹೊರಡುವ ಸಮಯವಾಗಿದೆ. ಆದರೆ ಭಾರತ ಬಿಟ್ಟು ಹೋಗಲು ಮನಸ್ಸಿಲ್ಲ ಎಂದು ಥೆರೆಸಾ ಬೇಸರದಿಂದ ಹೇಳುತ್ತಿದ್ದಾರೆ.

  • ಸಂಸ್ಕೃತಿ ಅರಿಯಲು ಪಾಂಡಿಚೇರಿಯಿಂದ ಮುಂಬೈಗೆ ಕಾಲ್ನಡಿಗೆಯಲ್ಲಿ ಹೊರಟ ಯುವಕ, ಯುವತಿ

    ಸಂಸ್ಕೃತಿ ಅರಿಯಲು ಪಾಂಡಿಚೇರಿಯಿಂದ ಮುಂಬೈಗೆ ಕಾಲ್ನಡಿಗೆಯಲ್ಲಿ ಹೊರಟ ಯುವಕ, ಯುವತಿ

    – ಹಣ, ಮೊಬೈಲ್ ಇಲ್ಲದೇ 1400 ಕಿ.ಮೀ ಪಯಣ

    ರಾಮನಗರ: ದೇಶವು ಸಾಕಷ್ಟು ವಿಭಿನ್ನ ಸಂಸ್ಕೃತಿಯನ್ನ ಒಳಗೊಂಡಿದ್ದು, ರಾಜ್ಯದಿಂದ ರಾಜ್ಯಕ್ಕೆ ಸಂಸ್ಕೃತಿ, ಕಲೆ, ಭಾಷೆಗಳು ವಿಭಿನ್ನವಾಗಿದೆ. ಇದನ್ನು ತಿಳಿಯಲು ಯುವಕ, ಯುವತಿ ಪಾಂಡೀಚೆರಿಯಿಂದ ಮುಂಬೈಗೆ ಕಾಲ್ನಡಿಗೆಯಲ್ಲಿ ಪಯಣ ಬೆಳೆಸಿದ್ದು, ಮೊಬೈಲ್ ಇಲ್ಲದೇ, ಹಣವೂ ಇಲ್ಲದೆ 70 ದಿನಗಳು 1400 ಕಿ.ಮೀ ಪಯಣ ನಡೆಸುತ್ತಿದ್ದಾರೆ.

    ಉತ್ತರಾಖಂಡ್ ರಾಜ್ಯದ ಸಮಾಜ ಸೇವಕ ಅಂಕಿತ್ ದಾಸ್ ಹಾಗೂ ಮಹಾರಾಷ್ಟ್ರದ ಲೇಖಕಿ ನೈನಿಕ ಭಟ್ಯ ಕಾಲ್ನಡಿಗೆಯಲ್ಲಿ ಪಯಣ ನಡೆಸುತ್ತಿದ್ದಾರೆ. ಈಗಾಗಲೇ ನೈನಿಕ ಭಟ್ಯ ಹಾಗೂ ಅಂಕಿತ್ ದಾಸ್ 550 ಕಿ.ಮೀ ಪಯಣ ಮುಗಿಸಿದ್ದು, ತಮಿಳುನಾಡು, ಆಂಧ್ರ ಪ್ರದೇಶ ಹಾದು ಬಂದು ಕರ್ನಾಟಕ ತಲುಪಿದ್ದಾರೆ. ತಮಿಳುನಾಡು ಮತ್ತು ಆಂಧ್ರದಲ್ಲಿ ಇವರಿಗೆ ಉತ್ತಮ ಸ್ಪಂದನೆ ಜನಗಳಿಂದ ಸಿಕ್ಕಿದ್ದು, ಈಗ ಕರ್ನಾಟಕದಿಂದ ಪಯಣ ಆರಂಭ ಮಾಡಿರುವ ಜೋಡಿ ಬೆಂಗಳೂರಿನಿಂದ ಮಾಗಡಿಗೆ ಆಗಮಿಸಿ ಕುಣಿಗಲ್ ಮಾರ್ಗದ ಮೂಲಕ ಪಯಣ ಬೆಳೆಸಿದ್ದಾರೆ.

    1400 ಕಿಲೋ ಮೀಟರ್ ಪಯಣ ನಡೆಸುತ್ತಿರುವ ಅಂಕಿತ್ ದಾಸ್ ಹಾಗೂ ನೈನಿಕ ಭಟ್ಯ ಬಳಿ ನಯಾಪೈಸೆ ಹಣವಿಲ್ಲ. ಮೊಬೈಲ್ ಸಹ ಇಲ್ಲ. ಯಾವುದೇ ಮ್ಯಾಪ್ ಇಲ್ಲದೆ, 2 ಬ್ಯಾಗ್, ನೀರಿನ ಬಾಟಲಿ, ಹಾಕಿಕೊಳ್ಳಲು ಕೆಲವು ಬಟ್ಟೆಗಳು, 2 ತಟ್ಟೆಯನ್ನು ಹಿಡಿದು ಪಯಣ ಬೆಳೆಸಿದ್ದಾರೆ. ಪಯಣದ ದಾರಿಯಲ್ಲಿ ಯಾರು ಇವರಿಗೆ ಊಟ ಹಾಕುತ್ತಾರೋ ಅಲ್ಲೆ ಇವರಿಗೆ ಊಟ, ಕತ್ತಲಾದ ಮೇಲೆ ಯಾರು ಇವರಿಗೆ ಮಲಗಲು ಜಾಗ ಕೊಡುತ್ತಾರೋ ಅಲ್ಲೆ ಇವರ ನಿದ್ರೆ. ಯಾರೂ ಇವರಿಗೆ ಆಶ್ರಯ ಕೊಡದಿದ್ದರೆ ದೇವಸ್ಥಾನ, ಶಾಲೆಗಳಲ್ಲಿ ಮಲಗಿ ಬೆಳಗ್ಗೆ ಎದ್ದು ತಮ್ಮ ಪಯಣ ಆರಂಭಿಸುತ್ತಾರೆ.

    ನಾವು ಪಯಣಿಸಿರುವ ಎಲ್ಲಾ ಕಡೆಯು ಸಾರ್ವಜನಿಕರು ಅತಿಥಿಗಳನ್ನು ಸ್ವಾಗತಿಸುವಂತೆ ಸ್ವಾಗತಿಸಿದ್ದು, ಪ್ರತಿ ದಿನವು 3 ಹೊತ್ತು ಊಟ ಸಿಕ್ಕಿದೆ. ಒಂದೊಂದು ದಿನ ಹೆಚ್ಚಿಗೆ ಊಟ ಸಿಕ್ಕಿ ಅದನ್ನು ನಾವು ಎತ್ತುಕೊಂಡು ಹೋದ ಪ್ರಸಂಗವು ಇದೆ ಎಂದು ಅಂಕಿತ್ ದಾಸ್ ತಿಳಿಸುತ್ತಾರೆ.

    ಕರ್ನಾಟಕದ ಕನ್ನಡಿಗರು ವಿಶಾಲ ಹೃದಯದವರು ಎಂಬುದನ್ನು ನಾವು ಆಗಾಗ ಕೇಳುತ್ತಿರುತ್ತೇವೆ. ಕರ್ನಾಟಕದಲ್ಲಿ ಪಯಣ ಆರಂಭಿಸಿರುವ ಅಂಕಿತ್, ನೈನಿಕ ಕರ್ನಾಟಕ ಜನತೆಯ ಪ್ರೀತಿ, ಇಲ್ಲಿನ ಸಂಸ್ಕೃತಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪೇಪರ್, ಟಿವಿಗಳಲ್ಲಿ ಹೆಣ್ಣುಮಕ್ಕಳಿಗೆ ಸುರಕ್ಷಿತವಿಲ್ಲ ಎಂಬ ಸುದ್ದಿಗಳನ್ನು ಕೇಳುತ್ತಿದ್ದೆವು. ಆದರೆ ನಮಗೆ ಎಲ್ಲೂ ಕೂಡ ಅಪಾಯ ಬಂದಿಲ್ಲ. ಇಲ್ಲಿನ ಜನತೆ ನಮ್ಮನ್ನು ಪ್ರೀತಿಯಿಂದ ಕಾಣುತ್ತಿದ್ದಾರೆ. ಜನಗಳು ಈ ಪ್ರದೇಶ ಅಪಾಯಕಾರಿ ಎಂದು ಹೇಳಿದರೆ ನಾವು ಅಲ್ಲಿಗೆ ಹೋಗುವುದಿಲ್ಲ. ಎಲ್ಲಾ ಕಡೆಯೂ ನಮ್ಮನ್ನು ಪ್ರೀತಿಯಿಂದಲೇ ಕಾಣುತ್ತಿದ್ದಾರೆಂದು ನೈನಿಕ ಹೇಳಿದ್ದಾರೆ.

    ಅಂಕಿತ್ ಅವರು ತಮ್ಮ ಗೆಳತಿ ಪ್ರಿಯಾನ್ಷಾರವರಿಗೆ ತಾವು ಹೋಗುವ ಸ್ಥಳದಿಂದ ಬೇರೆಯವರ ಮೊಬೈಲ್‍ನಿಂದ ವಾಟ್ಸಾಪ್ ಮೂಲಕ ಎಲ್ಲಿ ಇದ್ದೇವೆಂದು ತಿಳಿಸುತ್ತಾರೆ. ಒಂದು ಜಾಗದಿಂದ ಮತ್ತೊಂದು ಜಾಗಕ್ಕೆ ಹೋಗಲು ಬೇರೆಯವರ ಮೊಬೈಲ್​ನಲ್ಲಿ ರೂಟ್ ಮ್ಯಾಪ್‍ನ್ನು ನೋಡಿ ಪಯಣ ಬೆಳೆಸುತ್ತಿರುವುದು ವಿಶೇಷವಾಗಿದೆ.

    ಇದರ ಜೊತೆಗೆ ತಾವು ಹೋಗುವ ಸ್ಥಳಗಳ ಸಂಸ್ಕೃತಿ, ವಿಶೇಷತೆಗಳ ಚಿತ್ರಗಳನ್ನು ಸೆರೆಹಿಡಿದು ಡೈರಿಯಲ್ಲಿ ಮಾಹಿತಿ ದಾಖಲಿಸಿಕೊಳ್ತಿದ್ದಾರೆ. ಇವರ ಜೊತೆ ಇರುವ ಸಾರ್ವಜನಿಕರ ಫೋಟೋಗಳನ್ನು ಬೇರೆಯವರ ಮೊಬೈಲ್‌ನಿಂದ ವಾಟ್ಸಾಪ್ ಮಾಡಿಸಿಕೊಂಡು ಪಯಣ ಮುಂದುವರೆಸಿದ್ದಾರೆ. ಇಂಗ್ಲೀಷ್, ಹಿಂದಿ ಬಿಟ್ಟರೆ ಇವರಿಗೆ ಬೇರೆ ಭಾಷೆ ಗೊತ್ತಿಲ್ಲ. ಕರ್ನಾಟಕಕ್ಕೆ ಬಂದಿರುವ ನೈನಿಕ ಭಟ್ಯ ಸ್ವಲ್ಪ ಸ್ವಲ್ಪ ಕನ್ನಡವನ್ನು ಕಲಿತು ಜನಗಳ ಜೊತೆ ಸಂಪರ್ಕ ಮಾಡಿ ತಮ್ಮ ಉದ್ದೇಶವನ್ನು ತಿಳಿಸಿ, ಊಟ ಮತ್ತು ಮಲಗಲು ಆಶ್ರಯ ಪಡೆಯುತ್ತಿದ್ದಾರೆ. ಆದರೆ ಕೆಲವೇ ದಿನಗಳಿಂದ ಕರ್ನಾಟಕದ ಸಂಪರ್ಕವನ್ನು ಹೊಂದಿರುವ ನೈನಿಕ ಭಟ್ಯ ಕನ್ನಡ ಕಲಿತಿರುವುದು ಹೆಮ್ಮೆಯ ವಿಚಾರವಾಗಿದೆ.

  • ಮಧ್ಯಪ್ರದೇಶದಲ್ಲಿ ಪ್ರೀ ವೆಡ್ಡಿಂಗ್ ಫೋಟೋಶೂಟ್ ನಿಷೇಧ

    ಮಧ್ಯಪ್ರದೇಶದಲ್ಲಿ ಪ್ರೀ ವೆಡ್ಡಿಂಗ್ ಫೋಟೋಶೂಟ್ ನಿಷೇಧ

    ಭೋಪಾಲ್: ಮಧ್ಯಪ್ರದೇಶದಲ್ಲಿ ಗುಜರಾತಿ, ಜೈನ್ ಮತ್ತು ಸಿಂಧಿ ಸಮುದಾಯದವರು ಪ್ರೀ ವೆಡ್ಡಿಂಗ್ ಫೋಟೋಶೂಟ್ ನಿಷೇಧ ಮಾಡಿದ್ದಾರೆ.

    ಭೋಪಾಲ್ ನಲ್ಲಿ ಗುಜರಾತಿ, ಜೈನ ಮತ್ತು ಸಿಂಧಿ ಸಮುದಾಯದ ಮುಖಂಡರು ಮದುವೆಗೆ ಮುಂಚೆಯೇ ವಧು ಮತ್ತು ವರ ಜೊತೆಯಲ್ಲಿ ಫೋಟೋ ತೆಗೆಸಿಕೊಳ್ಳುವುದು ನಮ್ಮ ಸಂಸ್ಕೃತಿಯಲ್ಲ. ಆದ್ದರಿಂದ ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಮಾಡಿಸಿದವರನ್ನು ಸಮುದಾಯದಿಂದ ಹೊರಹಾಕುತ್ತೇವೆ ಎಂದು ಬೆದರಿಕೆ ಹಾಕಿವೆ.

    ಸಮುದಾಯಗಳ ಈ ನಿರ್ಧಾರಕ್ಕೆ ಬೆಂಬಲ ಸೂಚಿಸಿರುವ ಮಧ್ಯಪ್ರದೇಶದ ಸಾರ್ವಜನಿಕ ಸಂಪರ್ಕ ಸಚಿವ ಪಿಸಿ ಶರ್ಮಾ, ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಎಂಬುದು ನಮ್ಮ ಸಂಸ್ಕೃತಿ ಅಲ್ಲ. ಇಲ್ಲಿನ ಜನರು ನಿಷೇಧಿಸಿರುವುದನ್ನು ಸಾಮಾಜಿಕ ದೃಷ್ಟಿಕೋನದಿಂದ ನಾನು ಒಳ್ಳೆಯದು ಎಂದು ನಂಬುತ್ತೇನೆ. ಜನರ ಹಿಂದಿನ ಸಂಸ್ಕೃತಿ ಮತ್ತು ಹಳೆಯ ಸಂಪ್ರದಾಯದ ಪ್ರಕಾರ ಮದುವೆಯಾದರೆ ವಿವಾಹ ಹೆಚ್ಚು ಯಶಸ್ವಿಯಾಗುತ್ತದೆ ಮತ್ತು ಸಂತೋಷದಾಯಕವಾಗಿ ಇರುತ್ತದೆ ಎಂದು ಹೇಳಿದ್ದಾರೆ.

    ಸಮಾಜದ ಈ ನಿರ್ಧಾರವನ್ನು ಸಮರ್ಥನೆ ಮಾಡಿಕೊಂಡಿರುವ ಗುಜರಾತಿ ಸಮುದಾಯದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂಜಯ್ ಪಾಟೀಲ್, ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಎಂಬುದು ಒಂದು ತಪ್ಪು ಕಲ್ಪನೆ. ಎಷ್ಟೋ ವಿವಾಹಗಳು ನಿಶ್ಚಿತಾರ್ಥ ಆದ ನಂತರ ಮುರಿದು ಬೀಳುತ್ತವೆ. ಆದ್ದರಿಂದ ಈ ರೀತಿಯ ಸಂಪ್ರದಾಯವನ್ನು ನಾವು ತಡೆಯಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

    ಈ ವಿಚಾರದ ಬಗ್ಗೆ ಭೋಪಾಲ್ ಜೈನ ಸಮಾಜದ ಅಧ್ಯಕ್ಷರಾದ ಪ್ರಮೋದ್ ಹಿಮಾಂಶು ಅವರು ಮಾತನಾಡಿ, ನಮ್ಮ ಸಮಾಜದ ಆಧ್ಯಾತ್ಮಿಕ ಗುರುಗಳು ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಅನ್ನು ಅಶ್ಲೀಲ ಎಂದು ಹೇಳಿದ ನಂತರ ನಾವು ನಮ್ಮ ಸಮಾಜದಲ್ಲಿ ಅದನ್ನು ನಿಷೇಧ ಮಾಡಿದ್ದೇವೆ ಎಂದು ಹೇಳಿದ್ದಾರೆ.

    ಫೋಟೋ ಶೂಟ್ ನಿಷೇಧಿಸಿದ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿರುವ ಸಿಂಧಿ ಸಮಾಜದ ಅಧ್ಯಕ್ಷ ಭಗವಾನ್ ದಾಸ್ ಇಸ್ರಾನಿ ಅವರು, ನಮ್ಮ ಸಮುದಾಯದಲ್ಲೂ ಕೂಡ ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಅನ್ನು ನಿಷೇಧ ಮಾಡಿದ್ದೇವೆ. ಈ ನಿಯಮವನ್ನು ಪಾಲಿಸುವಂತೆ ನಮ್ಮ ಸಮುದಾಯದ ಸದಸ್ಯರಿಗೆ ಈಗಾಗಲೇ ತಿಳಿಸಿದ್ದೇವೆ ಎಂದು ಹೇಳಿದ್ದಾರೆ.

    ಕಳೆದ ವರ್ಷ ಚತ್ತೀಸ್‍ಗಢದ ಸಿಂಧಿ ಮತ್ತು ಮಹೇಶ್ವರಿ ಸಮುದಾಯಗಳು ಇದೇ ರೀತಿಯಲ್ಲಿ ಮದುವೆಗೂ ಮುಂಚೆಯೇ ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಮಾಡಿಸಬಾರದು ಎಂದು ನಿಷೇಧ ಮಾಡಿದ್ದವು.

  • ರಾಜ್ಯ ಬಜೆಟ್ ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಏನು ಸಿಕ್ಕಿದೆ? ಹೊಸ ಯೋಜನೆಗಳು ಏನು?

    ರಾಜ್ಯ ಬಜೆಟ್ ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಏನು ಸಿಕ್ಕಿದೆ? ಹೊಸ ಯೋಜನೆಗಳು ಏನು?

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬಜೆಟ್ ನಲ್ಲಿ 2018-19ನೇ ಸಾಲಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ 425 ಕೋಟಿ ರೂ.ಗಳ ವೆಚ್ಚದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮಂಡಿಸಿದ್ದಾರೆ.

    ಹೊಸ ಯೋಜನೆಗಳು
    ಮಹಾಕವಿ ಕುವೆಂಪುರವರ ಮೈಸೂರಿನ ನಿವಾಸ `ಉದಯರವಿ’ಯನ್ನು ರಾಷ್ಟ್ರಕವಿ ಸ್ಮಾರಕವಾಗಿ ಸಂರಕ್ಷಿಸಿ ಅಭಿವೃದ್ಧಿ ಪಡಿಸುವುದು. ಮಹಾಕವಿಯ ದರ್ಶನವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ಸ್ಮಾರಕದ ಉದ್ದೇಶ.

    ಭಾರತದ ಗ್ರಾಮೀಣ ಜನಪದ ಮತ್ತು ಸಾಂಸ್ಕೃತಿಕ ಕಲೆಗಳನ್ನು, ಕರ್ನಾಟಕದ ಜನರಿಗೆ ಹಾಗೂ ಕನ್ನಡ ನಾಡಿನ ಜನಪದ ಸಂಸ್ಕೃತಿಯನ್ನು ಇಡೀ ಭಾರತಕ್ಕೆ ಪರಿಚಯಿಸುವ `ಜನಪದ ಸಾಂಸ್ಕೃತಿಕ ಭಾರತ’ ಕಾರ್ಯಕ್ರಮವನ್ನು ರೂಪಿಸಿ ಅನುಷ್ಠಾನ.


    ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಅಕಾಡೆಮಿಗಳು, ಪ್ರಾಧಿಕಾರಗಳು ಪ್ರಕಟಿಸಿರುವ ಪುಸ್ತಕಗಳನ್ನು ನಾಡಿನ ಜನತೆಗೆ ರಿಯಾಯಿತಿ ದರದಲ್ಲಿ ಮಾರಾಟ ಮಾಡಿ ಪುಸ್ತಕ ಸಂಸ್ಕೃತಿ ಬೆಳೆಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸಹಯೋಗದಲ್ಲಿ `ಪುಸ್ತಕ ಜಾಥಾ’ ಕಾರ್ಯಕ್ರಮವನ್ನು 1.5 ಕೋಟಿ ರೂ.ಗಳ ವೆಚ್ಚದಲ್ಲಿ ಹಮ್ಮಿಕೊಳ್ಳಲಾಗುವುದು.

    ವಿವಿಧ ಅಕಾಡೆಮಿಗಳು ಮತ್ತಷ್ಟು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಲು ಅಕಾಡೆಮಿಗಳಿಗೆ ನೀಡುತ್ತಿರುವ ಅನುದಾನದ ಹೆಚ್ಚಳ.

    ಗಡಿ ಪ್ರದೇಶ ಅಭಿವೃದ್ಧಿ ಮಂಡಳಿ ಮೂಲಕ 50 ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳುವುದು.

    ಸಮಗ್ರ ದಾಸ ಸಾಹಿತ್ಯದ ಅಧ್ಯಯನಕ್ಕಾಗಿ ನೂತನವಾಗಿ ಅಧ್ಯಯನ ಪೀಠ ಸ್ಥಾಪನೆ.

    ಕನ್ನಡ ತಂತ್ರಾಂಶ ಅಭಿವೃದ್ಧಿ ಹಾಗೂ ಕನ್ನಡ ತಾಂತ್ರಿಕ ವಿಷಯಗಳಲ್ಲಿ ಸಂಶೋಧನೆ ನಡೆಸುವ ತಾಂತ್ರಿಕ ವಿದ್ಯಾರ್ಥಿಗಳಿಗೆ ಫೆಲೋಷಿಪ್ ನೀಡುವುದು.

    ಕನ್ನಡದ ನವೋದಯ ಕಾವ್ಯದ ಪ್ರವರ್ತಕ ಗೋಪಾಲಕೃಷ್ಣ ಅಡಿಗರ ಜನ್ಮ ಶತಮಾನೋತ್ಸವದ ಸ್ಮರಣಾರ್ಥ `ಕಟ್ಟುವೆವು ನಾವು ಹೊಸ ನಾಡೊಂದನ್ನು’ ಎನ್ನುವ ಸಾಹಿತ್ಯ-ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದು.

    ವೃತ್ತಿ ರಂಗಭೂಮಿಯ ಸಮಗ್ರ ಅಧ್ಯಯನ, ಸಂಶೋಧನೆ ಮತ್ತು ರಂಗ ಶಿಕ್ಷಣಕ್ಕೆ ಅನುಕೂಲವಾಗುವಂತೆ ದಾವಣಗೆರೆಯಲ್ಲಿ ವೃತ್ತಿ ರಂಗಭೂಮಿ ಕೇಂದ್ರದ ಪ್ರಾರಂಭ.

  • ಮಧ್ಯಪ್ರದೇಶದಲ್ಲಿ ಕನ್ನಡದ ಕಂಪು- ಕರ್ನಾಟಕದ ವಿಶಿಷ್ಟತೆ ಬಗ್ಗೆ ತಿಳಿಸಿ ಬಂದ ದಾವಣಗೆರೆ ವಿದ್ಯಾರ್ಥಿಗಳು

    ಮಧ್ಯಪ್ರದೇಶದಲ್ಲಿ ಕನ್ನಡದ ಕಂಪು- ಕರ್ನಾಟಕದ ವಿಶಿಷ್ಟತೆ ಬಗ್ಗೆ ತಿಳಿಸಿ ಬಂದ ದಾವಣಗೆರೆ ವಿದ್ಯಾರ್ಥಿಗಳು

    ಬೆಂಗಳೂರು: ನಮ್ಮ ರಾಜ್ಯದಲ್ಲೇ ಮಕ್ಕಳಿಗೆ ಕನ್ನಡ ಕಲಿಸೋಕೆ ಹಿಂದೇಟು ಹಾಕೋವಾಗ ಕನ್ನಡ ಪ್ರಿಯರಿಗೆ ಇಲ್ಲೊಂದು ಖುಷಿ ಸುದ್ದಿ ಇದೆ.

    ಕೇಂದ್ರ ಸರ್ಕಾರ ಹಾಕಿಕೊಂಡಿರೋ ‘ಏಕ್ ಭಾರತ್ ಶ್ರೇಷ್ಠ್ ಭಾರತ್’ ಯೋಜನೆಯಡಿ ಮಧ್ಯಪ್ರದೇಶದಲ್ಲಿ ಗಡಿಯಾಚೆಗೆ ನುಡಿ ಸಂಭ್ರಮ ಕಾರ್ಯಕ್ರಮ ನಡೀತು. ಈ ಕಾರ್ಯಕ್ರಮದಲ್ಲಿ ಕರ್ನಾಟಕದ 21 ವಿದ್ಯಾರ್ಥಿಗಳು ಕನ್ನಡದ ಕಂಪು ಪಸರಿಸಿದ್ದಾರೆ.

    ಮಧ್ಯಪ್ರದೇಶದ ಅಲಿರಾಜಪುರ್ ಜಿಲ್ಲೆ ದೇಶದಲೇ ಅತೀ ಕಡಿಮೆ ಸಾಕ್ಷರತೆ ಹೊಂದಿದ ಜಿಲ್ಲೆಯಾಗಿದೆ. ಇಂತಹ ಜಿಲ್ಲೆಯಲ್ಲಿರುವ ಜವಾಹರ್ ನವೋದಯ ವಿದ್ಯಾಲಯದಲ್ಲಿ ದಾವಣಗೆರೆಯ 21 ವಿದ್ಯಾರ್ಥಿಗಳು ಹೋಗಿ ಕರ್ನಾಟಕದ ವೈಶಿಷ್ಠತೆ ಬಗ್ಗೆ ತಿಳಿಸಿ ಬಂದಿದ್ದಾರೆ. ಅಷ್ಟೇ ಅಲ್ಲ ಮಧ್ಯಪ್ರದೇಶದ ಆದಿವಾಸಿ ಜನರ ಸಂಸ್ಕೃತಿಯನ್ನ ನಮ್ಮ ವಿದ್ಯಾರ್ಥಿಗಳು ಕಲಿತು ಬಂದಿದ್ದಾರೆ.

    ಇದಕ್ಕಿಂತಲೂ ಖುಷಿ ವಿಷಯ ಏನೆಂದರೆ ಈ ಶಾಲೆಯಲ್ಲಿ ಒಟ್ಟು 535 ವಿದ್ಯಾರ್ಥಿಗಳಿದ್ದು, ಅದರಲ್ಲಿ 310 ಮಕ್ಕಳು ಕನ್ನಡ ಭಾಷೆಯನ್ನ ಕಲಿಯುತ್ತಿದ್ದಾರೆ. ಈ ಮಕ್ಕಳಿಗೆ ಕನ್ನಡ ಕಲಿಸಲು ಧರ್ಮಣ್ಣ ಚಿತ್ತಾ ಸೇರಿದಂತೆ ಇಬ್ಬರು ಶಿಕ್ಷಕರು ಇಲ್ಲಿದ್ದಾರೆ.

    ಮಧ್ಯಪ್ರದೇಶದ ಈ ಜಿಲ್ಲೆಯ ಮತ್ತೊಂದು ವಿಶೇಷತೆ ಏನೆಂದರೆ ಎಲ್ಲಾ ಕಡೆ ವರದಕ್ಷಿಣೆ ಕೊಟ್ಟು ಮದುವೆಯಾದರೆ, ಇಲ್ಲಿ ವಧುದಕ್ಷಿಣೆ ಕೊಟ್ಟು ಮದುವೆಯಾಗುವ ಸಂಪ್ರದಾಯವಿದೆ. ಇಲ್ಲಿ ಬಂಗಾರದ ಬದಲು ಜನರು ಮದುವೆಯಲ್ಲಿ ಬೆಳ್ಳಿ ಆಭರಣಗಳನ್ನೇ ಬಳಸುತ್ತಾರೆ.

  • ದೀಪಾವಳಿಯಂದು ಯಾದಗಿರಿಯಲ್ಲಿ ಲಂಬಾಣಿ ಯುವತಿಯರಿಂದ ವಿಶೇಷ ಡ್ಯಾನ್ಸ್

    ದೀಪಾವಳಿಯಂದು ಯಾದಗಿರಿಯಲ್ಲಿ ಲಂಬಾಣಿ ಯುವತಿಯರಿಂದ ವಿಶೇಷ ಡ್ಯಾನ್ಸ್

    ಯಾದಗಿರಿ: ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಬೆಳಕಿನ ಹಬ್ಬ ದೀಪಾವಳಿಯನ್ನು ನಾರಿಯರು ಬಣ್ಣ-ಬಣ್ಣದ ಸಾಂಪ್ರದಾಯಿಕ ಬಟ್ಟೆ ಧರಿಸಿ ಹಾಡಿಗೆ ತಕ್ಕಂತೆ ಸಖತ್ ಡ್ಯಾನ್ಸ್ ಮಾಡುವ ಮೂಲಕ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ.

    ಇಡೀ ದೇಶದೆಲ್ಲೆಡೆ ಪಟಾಕಿ ಹಚ್ಚಿ ಸದ್ದು ಗದ್ದಲದಿಂದ ಬೆಳಕಿನ ಹಬ್ಬವನ್ನು ಆಚರಿಸುತ್ತಾರೆ. ಆದರೆ ಲಂಬಾಣಿ ಸಮುದಾಯದ ತಾಂಡಾ ನಿವಾಸಿಗಳು ಮಾತ್ರ ಪುರಾತನ ಕಾಲದಿಂದ ಪರಿಸರ ಕಾಳಜಿ ಉಳಿಸಿಕೊಂಡು ಬಂದಿದ್ದಾರೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ನಮೂನೆಯ ಪಟಾಕಿ ತಂದು ಸಂಭ್ರಮಿಸುವ ಬದಲು ಆ ತಾಂಡಾ ನಿವಾಸಿಗಳು ಪುರಾತನ ಕಾಲದಿಂದ ನಡೆದುಕೊಂಡು ಬಂದ ಸಂಪ್ರದಾಯದಂತೆ ಸಂಸ್ಕೃತಿಯ ಪರಂಪರೆಯನ್ನು ಪಾಲನೆ ಮಾಡಿಕೊಂಡು ಹಬ್ಬ ಆಚರಿಸುತ್ತಾರೆ.

    ಶಹಾಪುರ ತಾಲೂಕಿನ ಬಿಕ್ಕುನಾಯ್ಕತಾಂಡಾ ಹಾಗೂ ವಿವಿಧ ತಾಂಡಾಗಳಲ್ಲಿ ನೂರಾರು ರೂಪಾಯಿ ಬೆಲೆ ಬಾಳುವ ಪಟಾಕಿ ಹಚ್ಚಿ ವಾಯುಮಾಲಿನ್ಯ ಹಾಳು ಮಾಡುವ ಬದಲು ಪಟಾಕಿಯಿಂದ ದೂರವಿದ್ದು ಪರಿಸರದೊಂದಿಗೆ ಹಬ್ಬ ಆಚರಿಸಿಕೊಂಡು ಬರುವುದು ಸಂಪ್ರದಾಯವಾಗಿದೆ. ತಾಂಡಾದಲ್ಲಿ ಸಂಪ್ರದಾಯಿಕ ಉಡುಗೆ ತೊಟ್ಟು ನಾರಿಯರು ದೀಪಾವಳಿ ಸಂಭ್ರಮದಿಂದ ಆಚರಿಸುತ್ತಾರೆ. ಬಣ್ಣದ ವೈಯಾರ ಬಟ್ಟೆ ಧರಿಸಿ ನಾರಿಯರು ಸಖತ್ ಡ್ಯಾನ್ಸ್ ಮಾಡಿ ಹಬ್ಬದ ಸಂಭ್ರಮಪಡುತ್ತಾರೆ.

    ಮದುವೆಯಾಗದ ಯುವತಿಯರು ಲಂಬಾಣಿ ಸಂಸ್ಕೃತಿ ಬಿಂಬಿಸುವ ಉಡುಪು ತೊಟ್ಟು, ತಾಂಡಾದ ಮುಖ್ಯಸ್ಥರೊಬ್ಬರ ಮನೆ ಮುಂದೆ ಸೇರಿಕೊಂಡು ತಾಂಡಾದ ಹೊರಭಾಗದ ಕಾಡಿಗೆ ಹಾಡನ್ನು ಹಾಡುತ್ತಾ ತೆರಳುತ್ತಾರೆ. ನಂತರ ಕಾಡಿನಿಂದ ವಿವಿಧ ಬಣ್ಣದ ಹೂವುಗಳನ್ನು ತೆಗೆದುಕೊಂಡು ಬರುತ್ತಾರೆ. ಯುವತಿಯರು ಹೂವು ತಂದು ಮನೆಯಂಗಳದಲ್ಲಿ ಚೆಲ್ಲಿ, ಸಗಣಿಯಲ್ಲಿ ಬೆರೆಸಿ ಗ್ರಾಮ ದೇವತೆಗೆ ವಿಶೇಷವಾಗಿ ಪೂಜೆ ಸಲ್ಲಿಸುತ್ತಾರೆ. ನಂತರ ಗ್ರಾಮದ ಮಂದಿರದಲ್ಲಿ ಸೇರಿ ಸಂಪ್ರದಾಯದ ಉಡುಗೆ ತೊಟ್ಟು ಯುವತಿಯರು ಹಾಡನ್ನು ಹಾಡುತ್ತಾ ಹಾಡಿಗೆ ತಕ್ಕಂತ್ ಸ್ಟೇಪ್ ಹಾಕುತ್ತಾರೆ.

    ಕೋರು ಹುಡುಗಿಯರು ಈ ದಿನ ಉಪವಾಸ ವೃತ ಆಚರಿಸಿ ಶ್ರದ್ಧಾ ಭಕ್ತಿಯಿಂದ ಬೆಳಕಿನ ಹಬ್ಬ ಆಚರಿಸುತ್ತಾರೆ. ಹಾಡಿಗೆ ತಕ್ಕಂತೆ ಹೆಜ್ಜೆ ಹಾಕಿ ಸಾಂಪ್ರದಾಯಿಕ ನೃತ್ಯ ಮಾಡಿ ಸಂಭ್ರಮಪಡುತ್ತಾರೆ. ನಾವು ಪಟಾಕಿಗಳನ್ನು ಹೊಡೆದು ಪರಿಸರವನ್ನು ನಾಶ ಮಾಡುವುದಿಲ್ಲ ನಮ್ಮ ಸಂಪ್ರದಾಯ ಸಂಸ್ಕೃತಿ ಪಾಲನೆಯನ್ನು ಮಾಡಿಕೊಂಡು ಬರುತ್ತೇವೆ ಎಂದು ತಾಂಡಾದ ಮುಖ್ಯಸ್ಥ ಎಚ್.ರಾಠೋಡ ಪಬ್ಲಿಕ್ ಟಿವಿ ಜೊತೆ ಮಾತನಾಡುತ್ತಾ ತಿಳಿಸಿದ್ದಾರೆ.

  • ದಕ್ಷಿಣ ಕನ್ನಡ ಜಿಲ್ಲೆಯದ್ದು ಒಬ್ಬರಿಗೊಬ್ಬರು ಜೀವ ಕೊಡೋ ಸಂಸ್ಕೃತಿ: ಖಾದರ್

    ದಕ್ಷಿಣ ಕನ್ನಡ ಜಿಲ್ಲೆಯದ್ದು ಒಬ್ಬರಿಗೊಬ್ಬರು ಜೀವ ಕೊಡೋ ಸಂಸ್ಕೃತಿ: ಖಾದರ್

    ರಾಯಚೂರು: ದಕ್ಷಿಣ ಕನ್ನಡದ ಜಿಲ್ಲೆಯ ಸಂಸ್ಕೃತಿ ನಿಜವಾದ ಸಂಸ್ಕೃತಿ. ಕೊಲೆಮಾಡುವ ಸಂಸ್ಕೃತಿ ನಮ್ಮದಲ್ಲ, ಒಬ್ಬರಿಗೊಬ್ಬರು ಜೀವ ಕೊಡುವ ಸಂಸ್ಕೃತಿ ನಮ್ಮದು ಅಂತ ಸಚಿವ ಯುಟಿ ಖಾದರ್ ಹೇಳಿದ್ದಾರೆ.

    ರಾಯಚೂರಿನ ಸಿಂಧನೂರಿನಲ್ಲಿ ಮಾತನಾಡಿದ ಸಚಿವ ಖಾದರ್ ಕೇವಲ ಶೇ.10 ರಷ್ಟು ಜನ ಮಾತ್ರ ಕೋಮುವಾದ ಸಂಬಂಧ ಹಲ್ಲೆ ಮಾಡುತ್ತಿದ್ದಾರೆ. ಅವರು ಯಾರೇ ಇದ್ದರೂ ಅವರ ವಿರುದ್ದ ಕಠಿಣ ಕ್ರಮಕ್ಕೆ ಸರ್ಕಾರ ಮುಂದಾಗಿದೆ. ಶರತ್ ಕೊಲೆ ಆರೋಪಿಗಳನ್ನ ಶೀಘ್ರದಲ್ಲಿ ಪತ್ತೆ ಹಚ್ಚಲು ಪೊಲೀಸರಿಗೆ ಸೂಚಿಸಿದ್ದೇವೆ ಅಂತ ತಿಳಿಸಿದರು.

    ಗುಜರಾತ್ ನ ಶಾಸಕರಿಗೆ ಬೆದರಿಕೆ ಹಾಗೂ ಆಮಿಷ ಒಡ್ಡಿದ್ದರಿಂದ ರಾಜ್ಯದಲ್ಲಿ ರಕ್ಷಣೆ ನೀಡಲಾಗಿತ್ತು. ಸೇಡಿನ ರಾಜಕಾರಣ ಮಾಡಿರುವ ಬಿಜೆಪಿ ಡಿಕೆಶಿ ಮೇಲೆ ಐಟಿ ದಾಳಿ ಮಾಡಿಸಿದೆ ಅಂತ ಆರೋಪಿಸಿದರು.