Tag: ಸಕ್ಸಸ್

  • ಒಟಿಟಿಯಲ್ಲೂ ‘ಆರ್ಟಿಕಲ್ 370’ ಚಿತ್ರಕ್ಕೆ ಸಖತ್ ರೆಸ್ಪಾನ್ಸ್: ಖುಷಿ ಹಂಚಿಕೊಂಡ ಯಾಮಿನಿ

    ಒಟಿಟಿಯಲ್ಲೂ ‘ಆರ್ಟಿಕಲ್ 370’ ಚಿತ್ರಕ್ಕೆ ಸಖತ್ ರೆಸ್ಪಾನ್ಸ್: ಖುಷಿ ಹಂಚಿಕೊಂಡ ಯಾಮಿನಿ

    ಬಾಕ್ಸ್ ಆಫೀಸಿನಲ್ಲಿ ಸಖತ್ ಕಮಾಯಿ ಮಾಡಿರುವ ಬಾಲಿವುಡ್ ನ ಆರ್ಟಿಕಲ್ 370 ಚಿತ್ರವು ಏಪ್ರಿಲ್ 19ರಿಂದ ಒಟಿಟಿಯಲ್ಲೂ (Ott) ಸ್ಟ್ರೀಮಿಂಗ್ ಆಗುತ್ತಿದೆ. ಚುನಾವಣೆಯನ್ನು ಮುಂದಿಟ್ಟುಕೊಂಡು ಈ ಚಿತ್ರವನ್ನು ಆತುರಾತುರವಾಗಿ ತರುತ್ತಿದ್ದಾರೆ ಎನ್ನುವ ಆರೋಪದ ನಡುವೆಯೂ ಚಿತ್ರಕ್ಕೆ ಒಟಿಟಿಯಲ್ಲೂ ಸಖತ್ ರೆಸ್ಪಾನ್ಸ್ ಬಂದಿದೆ. ಹಾಗಾಗಿ ನಟಿ ಯಾಮಿನಿ ಸಂಭ್ರಮವನ್ನು ವ್ಯಕ್ತ ಪಡಿಸಿದ್ದಾರೆ.

    ಈ ಸಿನಿಮಾವನ್ನು ಮೆಚ್ಚಿಕೊಳ್ಳದವರೇ ಇಲ್ಲ. ಈ ಹಿಂದೆ ರಕ್ಷಣಾ ಸಚಿವ ರಾಜನಾಥ್ ಸಿಂಗ್(Rajnath Singh)  ತಮ್ಮ ಕುಟುಂಬದೊಂದಿಗೆ ದೆಹಲಿಯಲ್ಲಿ ಆರ್ಟಿಕಲ್ 370 (Article 370) ಸಿನಿಮಾ ನೋಡಿದ್ದರು. ಈ ಕುರಿತಂತೆ ಅವರು ಟ್ವೀಟ್ ಮಾಡಿದ್ದರು. ಈ ಸಿನಿಮಾ ಕುರಿತಂತೆ ಅನೇಕರು ಮೆಚ್ಚುಗೆ ವ್ಯಕ್ತ ಪಡಿಸಿದ್ದರು. ಕಾಶ್ಮೀರದಲ್ಲಿ ಆರ್ಟಿಕಲ್ 370 ತೆಗೆದಿದ್ದರ ಬಗ್ಗೆ ಮನಮುಟ್ಟುವಂತೆ ಸಿನಿಮಾದಲ್ಲಿ ಹೇಳಿದ್ದಾರೆ. ಇದು ನೈಜ ಘಟನೆಗಳ ಪ್ರೇರಣೆಯಿಂದ ಆಗಿರುವ ಸಿನಿಮಾ’ ಎಂದು ಬರೆದುಕೊಂಡಿದ್ದಾರೆ. ಈ ಸಿನಿಮಾ ನೋಡುವಾಗ ಭಾವುಕರಾದ ಸಂಗತಿಯನ್ನೂ ಅವರು ಬಿಚ್ಚಿಟ್ಟಿದ್ದರು.

    ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಕೂಡ ಆರ್ಟಿಕಲ್ 370 ಚಿತ್ರದ ಬಗ್ಗೆ ತಮ್ಮ ಭಾಷಣದಲ್ಲಿ ಉಲ್ಲೇಖ ಮಾಡಿದ್ದರು. ಕಾಶ್ಮೀರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೋದಿ, ‘ಆರ್ಟಿಕಲ್ 370 ಸಿನಿಮಾ ಜಮ್ಮು ಕಾಶ್ಮೀರದ ವಿಶೇಷ ಅಧಿಕಾರವನ್ನು ಯಾಕೆ ತಗೆಯಲಾಯಿತು ಎನ್ನುವುದನ್ನು ಸ್ಪಷ್ಟವಾಗಿ ತಿಳಿಸುತ್ತದೆ ಎಂದು ಹೇಳಿದ್ದರು.

    ಮೋದಿಯ ಈ ಭಾಷಣವನ್ನು ಕೇಳಿರುವ ಆರ್ಟಿಕಲ್ 370 ಸಿನಿಮಾದ ನಾಯಕಿ ಯಾಮಿನಿ ಗೌತಮ್ (Yamini Gautam), ಮೋದಿ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದರು. ಈ ನೈಜ ಕಥೆಯನ್ನು ನಿಮಗೆ ಮತ್ತು ಎಲ್ಲರಿಗೂ ಒಪ್ಪುವಂತೆ ಸಿನಿಮಾ ಮಾಡಿದ್ದೇವೆ ಎನ್ನುವ ಭರವಸೆಯನ್ನು ನಾನು ಮತ್ತು ನನ್ನ ತಂಡ ನೀಡಲಿದೆ ಎಂದು ಯಾಮಿನಿ ಪ್ರತಿಕ್ರಿಯೆ ನೀಡಿದ್ದರು.

     

    ಅಂದಹಾಗೆ ಕನ್ನಡತಿ ಪ್ರಿಯಾ ಮಣಿ ಹಾಗೂ ಬಾಲಿವುಡ್ ಹೆಸರಾಂತ ನಟಿ ಯಾಮಿನಿ ಗೌತಮ್ ಕಾಂಬಿನೇಷನ್ ನ ಲ್ಲಿ ಈ ಸಿನಿಮಾ ಮೂಡಿ ಬಂದಿದೆ. ಸಿನಿಮಾದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಪಾತ್ರಗಳು ಇವೆ. ಯಾಮಿ ಗೌತಮ್ ಖಡಕ್ ಎನ್.ಐ.ಎ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ.

  • ‘ಯುವ’ ಸಕ್ಸಸ್: ಸಂಭ್ರಮ ಹಂಚಿಕೊಂಡ ಹೊಂಬಾಳೆ ಫಿಲ್ಮ್ಸ್

    ‘ಯುವ’ ಸಕ್ಸಸ್: ಸಂಭ್ರಮ ಹಂಚಿಕೊಂಡ ಹೊಂಬಾಳೆ ಫಿಲ್ಮ್ಸ್

    ವಿಶ್ವವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತಹ ಕೆ.ಜಿ.ಎಫ್, ಕಾಂತಾರ, ರಾಜಕುಮಾರ ದಂತಹ ಯಶಸ್ವಿ ಚಿತ್ರಗಳ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ಲಾಂಛದಡಿಯಲ್ಲಿ ವಿಜಯ್ ಕಿರಗಂದೂರ್ ನಿರ್ಮಿಸಿರುವ, ಸಂತೋಷ್ ಆನಂದರಾಮ್ ನಿರ್ದೇಶನದಲ್ಲಿ ಯುವ ರಾಜಕುಮಾರ್ (Yuvaraj Kumar) ನಾಯಕರಾಗಿ ನಟಿಸಿರುವ ಮೊದಲ ಚಿತ್ರ “ಯುವ” ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಈ ಮೂಲಕ ಹೊಂಬಾಳೆ ಫಿಲಂಸ್ ನ ಗೆಲುವಿನ ಓಟಕ್ಕೆ  ಮತ್ತೊಂದು ಚಿತ್ರ ಸೇರ್ಪಡೆಯಾಗಿದೆ. ಈ ಯಶಸ್ಸಿನ (Success) ಸಂಭ್ರಮವನ್ನು ಸಂಭ್ರಮಿಸಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು.

    ರಾಜ್ಯದ ಜನತೆ “ಯುವ” (Yuva) ಚಿತ್ರವನ್ನು ಭರ್ಜರಿಯಾಗಿ ಸ್ವಾಗತಿಸಿದ್ದಾರೆ. ಚಿತ್ರ ಮೂರನೇ ವಾರಕ್ಕೆ ಕಾಲಿಟ್ಟಿದೆ. ಈಗಲೂ ಜನ ಕುಟುಂಬ ಸಮೇತ ಬಂದು ಸಿನಿಮಾ ನೋಡುತ್ತಿದ್ದಾರೆ. ಕನ್ನಡ ಕಲಾರಸಿಕರಿಗೆ, ಮಾಧ್ಯಮದವರಿಗೆ, ಹೊಂಬಾಳೆ ಫಿಲಂಸ್ ಸಂಸ್ಥೆಗೆ ಹಾಗೂ ನನ್ನ ಇಡೀ ಚಿತ್ರತಂಡಕ್ಕೆ ಈ ಸಂದರ್ಭದಲ್ಲಿ ಧನ್ಯವಾದ ತಿಳಿಸುತ್ತೇನೆ ಎಂದರು ನಿರ್ದೇಶಕ ಸಂತೋಷ್ ಆನಂದರಾಮ್.

    ಜನರು ನನ್ನ ಮೊದಲ ಚಿತ್ರಕ್ಕೆ ತೋರುತ್ತಿರುವ ಒಲವಿಗೆ ಮನ ತುಂಬಿ ಬಂದಿದೆ ಎಂದು ಮಾತನಾಡಿದ ನಾಯಕ ಯುವ ರಾಜಕುಮಾರ್, ಪ್ರಥಮವಾಗಿ ನಾನು ನನಗೆ ಅವಕಾಶ ನೀಡಿದ ಹೊಂಬಾಳೆ ಸಂಸ್ಥೆಯ ವಿಜಯ್ ಕಿರಗಂದೂರ್ ಅವರಿಗೆ, ನಿರ್ದೇಶಕ ಸಂತೋಷ್ ಆನಂದರಾಮ್ ಅವರಿಗೆ ಕೃತಜ್ಞತೆ ತಿಳಿಸುತ್ತೇನೆ. ನನ್ನ ಸಹ ಕಲಾವಿದರ ಹಾಗೂ ತಂತ್ರಜ್ಞರ ಪ್ರೋತ್ಸಾಹವನ್ನು ಈ ಸಮಯದಲ್ಲಿ ನೆನೆಯುತ್ತೇನೆ. ಮೊದಲ ಚಿತ್ರದಲ್ಲಿ ನನ್ನಿಂದೇನಾದರೂ ಸಣ್ಣಪುಟ್ಟ ತಪ್ಪಾಗಿದ್ದರೆ ಮುಂದಿನ ಚಿತ್ರಗಳಲ್ಲಿ ಸರಿ ಪಡಿಸಿಕೊಳ್ಳುತ್ತೇನೆ. ಜನ ಫ್ಯಾಮಿಲಿ ಸಮೇತ ಬಂದು ಚಿತ್ರವನ್ನು ನೋಡುತ್ತಿರುವುದು ಬಹಳ ಖುಷಿಯಾಗಿದೆ. ಈ ಮೂಲಕ ರಾಜ್ಯದ ಜನತೆಗೆ ವಿಶೇಷ ಧನ್ಯವಾದ ತಿಳಿಸುತ್ತೇನೆ ಎಂದರು.

    ನನ್ನ ಮಗನ ಮೊದಲ ಚಿತ್ರವನ್ನು  ನಿರ್ಮಾಣ ಮಾಡಿದ ಹೊಂಬಾಳೆ ಸಂಸ್ಥೆಗೆ ಮೊದಲು ಧನ್ಯವಾದ ಹೇಳುತ್ತೇನೆ. ನಂತರ ನನ್ನ ಮಗನ ಒಂದು ಬ್ರಾಂಡ್ ಗೆ ಸೀಮಿತ ಮಾಡದೆ ಎಲ್ಲಾ ರೀತಿಯ ನಟನೆಯನ್ನು ಅವನಿಂದ ಎಲ್ಲಾ ರೀತಿಯ ನಟನೆಯನ್ನು ಮಾಡಿಸಿರುವ ನಿರ್ದೇಶಕ ಸಂತೋಷ್ ಆನಂದರಾಮ್ ಅವರಿಗೂ ಧನ್ಯವಾದ ಹೇಳುತ್ತಾ, ಯುವನ ಸಿನಿಮಾ ಹಾದಿ ಈಗಷ್ಟೇ ಆರಂಭವಾಗಿದೆ. ‌ಮುಂದೆ ಬೇರೆಬೇರೆ ಪಾತ್ರಗಳಲ್ಲಿ ಅವನು ನಟಿಸಿ ಜನರಿಂದ ಸೈ ಎನಿಸಿಕೊಳ್ಳಬೇಕು ಎಂದು ರಾಘವೇಂದ್ರ ರಾಜಕುಮಾರ್ ತಿಳಿಸಿದರು.

    ಒಳ್ಳೆಯ ಪಾತ್ರ ನೀಡಿದ್ದಕ್ಕೆ ನಾಯಕಿ ಸಪ್ತಮಿ ಗೌಡ ನಿರ್ಮಾಪಕರಿಗೆ ಹಾಗೂ ನಿರ್ದೇಶಕರಿಗೆ ಧನ್ಯವಾದ ಹೇಳಿದರು ಚಿತ್ರದಲ್ಲಿ ಅಭಿನಯಿಸಿರುವ ಅಚ್ಯುತಕುಮಾರ್, ಸುಧಾರಾಣಿ, ಗೋಪಾಲಕೃಷ್ಣ ದೇಶಪಾಂಡೆ, ರವಿಶಂಕರ್ ಗೌಡ, ರಾಘು ಶಿವಮೊಗ್ಗ ಹಾಗೂ ಛಾಯಾಗ್ರಾಹಕ ಶ್ರೀಶ ಕುದುವಳ್ಳಿ “ಯುವ” ಚಿತ್ರದ ಗೆಲುವನ್ನು ‌ತಮ್ಮ ಮಾತುಗಳ ಮೂಲಕ ಹಂಚಿಕೊಂಡರು.

  • ರಜನಿ ‘ಜೈಲರ್ ಸಕ್ಸಸ್’: ಚಿತ್ರತಂಡಕ್ಕೆ ಚಿನ್ನದ ಉಡುಗೊರೆ

    ರಜನಿ ‘ಜೈಲರ್ ಸಕ್ಸಸ್’: ಚಿತ್ರತಂಡಕ್ಕೆ ಚಿನ್ನದ ಉಡುಗೊರೆ

    ಜೈಲರ್ ಸಿನಿಮಾ ಭರ್ಜರಿ ಗೆಲುವು (Success) ಸಾಧಿಸಿದೆ. ಬಾಕ್ಸ್ ಆಫೀಸಿನಲ್ಲಿ ಭಾರೀ ಕಲೆಕ್ಷನ್ ಮಾಡಿದೆ. ಹೀಗಾಗಿ ನಿರ್ಮಾಪಕ ಕಲಾನಿಧಿ ಮಾರನ್, ಭರ್ಜರಿ ಉಡುಗೊರೆಗಳನ್ನು ಚಿತ್ರತಂಡಕ್ಕೆ ನೀಡುತ್ತಿದ್ದಾರೆ. ಚಿತ್ರದ ನಾಯಕ, ನಿರ್ದೇಶಕ, ಸಂಗೀತ ನಿರ್ದೇಶಕರಿಗೆ ಈಗಾಗಲೇ ಕಾರುಗಳ ಉಡುಗೊರೆ (Gift) ನೀಡಿರುವ ನಿರ್ಮಾಪಕರು, ಇದೀಗ ಚಿತ್ರತಂಡದಲ್ಲಿ ಕೆಲಸ ಮಾಡಿದ ಮುನ್ನೂರಕ್ಕೂ ಹೆಚ್ಚು ಜನರಿಗೆ ಬಂಗಾರದ ಉಡುಗೊರೆ ನೀಡಿದೆ. ಸಕ್ಸಸ್ ಪಾರ್ಟಿಯಲ್ಲಿ ಚಿನ್ನವನ್ನು ಗಿಫ್ಟ್ ಆಗಿ ನೀಡಿದ್ದಾರೆ.

    ಈ ಹಿಂದೆ ನಿರ್ಮಾಪಕ ಕಲಾನಿಧಿ ಮಾರನ್ (Kalanidhi Maran), ನಟ ರಜನಿಕಾಂತ್ (Rajinikanth) ಅವರಿಗೆ ದುಬಾರಿ ಉಡುಗೊರೆಯನ್ನೇ ನೀಡಿದ್ದರು. ಈ ಸಿನಿಮಾಗಾಗಿ ರಜನಿ 250 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದ್ದು, ಮೊದಲ ಕಂತಾಗಿ 150 ಕೋಟಿ ರೂಪಾಯಿ ಸಂದಾಯವಾಗಿತ್ತು. ಎರಡನೇ ಕಂತು ನೂರು ಕೋಟಿ ರೂಪಾಯಿ ಮತ್ತು ಬಿಎಂಡಬ್ಲೂ ಎಕ್ಸ್ 7 ದುಬಾರಿ ಕಾರನ್ನು (Car) ಉಡುಗೊರೆಯಾಗಿ ನೀಡಲಾಗಿದೆ. ಈ ಕಾರಿನ ಬೆಲೆ  1.50 ಕೋಟಿಗೂ ಹೆಚ್ಚು ಎಂದು ಅಂದಾಜಿಸಲಾಗಿದೆ.

    ಜೈಲರ್ (Jailer) ಸಿನಿಮಾ ಈಗಲೂ ಬಾಕ್ಸ್ ಆಫೀಸಿನಲ್ಲಿ ಈಗಲೂ ಸದ್ದು ಮಾಡುತ್ತಿದೆ. ಹಲವು ವರ್ಷಗಳ ನಂತರ ರಜನಿ ಇಂಥದ್ದೊಂದು ಗೆಲುವನ್ನು (Success) ತಮ್ಮದಾಗಿಸಿಕೊಂಡಿದ್ದಾರೆ. ಹಾಗಾಗಿ ಸಹಜವಾಗಿಯೇ ಅವರ ಅಭಿಮಾನಿಗಳಲ್ಲಿ ಸಂಭ್ರಮ ತಂದಿದೆ. ಈ ಖುಷಿಯನ್ನು ಅವರು ಚಿತ್ರತಂಡದ ಜೊತೆಗೆ ಹಂಚಿಕೊಂಡಿದ್ದರು.

    ಜೈಲರ್ ಸಿನಿಮಾದ ಚಿತ್ರತಂಡದ ಜೊತೆಗೆ ಕೇಕ್ ಕತ್ತರಿಸಿ ಸಂಭ್ರಮಸಿರುವ ರಜನಿಕಾಂತ್, ಸಿನಿಮಾಗಾಗಿ ದುಡಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸಿದ್ದರು. ಅಲ್ಲದೇ ಸಿನಿಮಾ ನೋಡಿದ ಪ್ರತಿಯೊಬ್ಬರಿಗೂ ಧನ್ಯವಾದಗಳನ್ನು ಈ ಸಂದರ್ಭದಲ್ಲಿ ಅವರು ಹೇಳಿದ್ದರು. ಸ್ವತಃ ತಾವೇ ಎಲ್ಲರಿಗೂ ಕೇಕ್ (Cake)ತಿನ್ನಿಸಿದ್ದರು. ಇದನ್ನೂ ಓದಿ:ಅಮೆರಿಕಾದಲ್ಲಿ ‘ಮೈ ಹೀರೋ’ ಶೂಟಿಂಗ್ : ಹಾಲಿವುಡ್ ನಟ ಎರಿಕ್ ಭಾಗಿ

    ರಜನಿಕಾಂತ್ ಮೇನಿಯಾ ನಿಲ್ಲುತ್ತಿಲ್ಲ. ಒಂದಲ್ಲ ಎರಡಲ್ಲ. ಭರ್ತಿ ಹದಿನಾರು ದಿನಗಳು ಮುಗಿದಿದೆ. ಆದರೂ ಜನರು ಚಿತ್ರಮಂದಿರಕ್ಕೆ ನುಗ್ಗುತ್ತಿದ್ದಾರೆ. ನೋಡಿದವರೇ ಮತ್ತೆ ಮತ್ತೆ ನೋಡುತ್ತಿದ್ದಾರೆ. ರಜನಿ ಯುಗ ಮುಗಿಯಿತು ಎಂದವರಿಗೆ ಕಪಾಳಕ್ಕೆ ಬಾರಿಸುವಂಥ ಉತ್ತರ ಕೊಟ್ಟಿದೆ ಜೈಲರ್. ವಿಶ್ವದಾದ್ಯಂತ ಇಲ್ಲಿವರೆಗೆ 600 ಕೋಟಿ ರೂಪಾಯಿಗೂ ಹೆಚ್ಚು ಗಳಿಸಿದೆ.

     

    ಮೊದಲ ದಿನ ಒಟ್ಟು 500 ಪ್ರದರ್ಶನ ಕಂಡಿತ್ತು ಜೈಲರ್. ಮೊದಲ ವಾರದ ನಂತರ ಪ್ರದರ್ಶನ ಸಂಖ್ಯೆ ಕಮ್ಮಿ ಆಗಬಹುದು. ಹೀಗಂತ ಲೆಕ್ಕಾಚಾರ ಹಾಕಲಾಗಿತ್ತು. ಆದರೆ ಐದು ನೂರರಲ್ಲಿ ಒಂದೇ ಒಂದು ಪ್ರದರ್ಶನ ಕಮ್ಮಿಯಾಗಿಲ್ಲ. ಜನರು ಸಿನಿಮಾ ನೋಡುವುದನ್ನು ನಿಲ್ಲಿಸುತ್ತಿಲ್ಲ. ರಜನಿ ಅಷ್ಟೊಂದು ಮೋಡಿ ಮಾಡಿದ್ದಾರೆ. ಏನಾದರಾಗಲಿ  ಹಳೇ ರಜನಿಕಾಂತ್ ಮತ್ತೆ ಸಿಕ್ಕಿದ್ದಾರೆ. ಫ್ಯಾನ್ಸ್ ಕೇಕೆ ಹಾಕುತ್ತಿದ್ದಾರೆ. ನಿರ್ದೇಶಕ ನೆಲ್ಸನ್ ನಿರ್ದೇಶನಕ್ಕೆ ಭೇಷ್ ಎಂದಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಜೈಲರ್’ ಸಕ್ಸಸ್ ಸಂಭ್ರಮ : ಕೇಕ್ ಕತ್ತರಿಸಿದ ತಲೈವಾ ರಜನಿ

    ‘ಜೈಲರ್’ ಸಕ್ಸಸ್ ಸಂಭ್ರಮ : ಕೇಕ್ ಕತ್ತರಿಸಿದ ತಲೈವಾ ರಜನಿ

    ಜನಿಕಾಂತ್ (Rajinikanth) ನಟನೆಯ ಜೈಲರ್ (Jailer) ಸಿನಿಮಾ ಈಗಲೂ ಬಾಕ್ಸ್ ಆಫೀಸಿನಲ್ಲಿ ಸದ್ದು ಮಾಡುತ್ತಿದೆ. ಹಲವು ವರ್ಷಗಳ ನಂತರ ರಜನಿ ಇಂಥದ್ದೊಂದು ಗೆಲುವನ್ನು (Success) ತಮ್ಮದಾಗಿಸಿಕೊಂಡಿದ್ದಾರೆ. ಹಾಗಾಗಿ ಸಹಜವಾಗಿಯೇ ಅವರ ಅಭಿಮಾನಿಗಳಲ್ಲಿ ಸಂಭ್ರಮ ತಂದಿದೆ. ಈ ಖುಷಿಯನ್ನು ಅವರು ಚಿತ್ರತಂಡದ ಜೊತೆಗೆ ಹಂಚಿಕೊಂಡಿದ್ದಾರೆ.

    ಜೈಲರ್ ಸಿನಿಮಾದ ಚಿತ್ರತಂಡದ ಜೊತೆಗೆ ಕೇಕ್ ಕತ್ತರಿಸಿ ಸಂಭ್ರಮಸಿರುವ ರಜನಿಕಾಂತ್, ಸಿನಿಮಾಗಾಗಿ ದುಡಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಅಲ್ಲದೇ ಸಿನಿಮಾ ನೋಡಿದ ಪ್ರತಿಯೊಬ್ಬರಿಗೂ ಧನ್ಯವಾದಗಳನ್ನು ಈ ಸಂದರ್ಭದಲ್ಲಿ ಅವರು ಹೇಳಿದ್ದಾರೆ. ಸ್ವತಃ ತಾವೇ ಎಲ್ಲರಿಗೂ ಕೇಕ್ (Cake)ತಿನ್ನಿಸಿದ್ದಾರಂತೆ.

    ರಜನಿಕಾಂತ್ ಮೇನಿಯಾ ನಿಲ್ಲುತ್ತಿಲ್ಲ. ಒಂದಲ್ಲ ಎರಡಲ್ಲ. ಭರ್ತಿ ಹದಿನಾರು ದಿನಗಳು ಮುಗಿದಿದೆ. ಆದರೂ ಜನರು ಚಿತ್ರಮಂದಿರಕ್ಕೆ ನುಗ್ಗುತ್ತಿದ್ದಾರೆ. ನೋಡಿದವರೇ ಮತ್ತೆ ಮತ್ತೆ ನೋಡುತ್ತಿದ್ದಾರೆ. ರಜನಿ ಯುಗ ಮುಗಿಯಿತು ಎಂದವರಿಗೆ ಕಪಾಳಕ್ಕೆ ಬಾರಿಸುವಂಥ ಉತ್ತರ ಕೊಟ್ಟಿದೆ ಜೈಲರ್. ವಿಶ್ವಾದ್ಯಂತ ಇಲ್ಲಿವರೆಗೆ 600 ಕೋಟಿ ರೂಪಾಯಿ ಗಳಿಸಿದೆ. ಹಾಗಿದ್ದರೆ ಕರ್ನಾಟಕದಲ್ಲಿ(Karnataka) ಎಷ್ಟು ಕೋಟಿ? ಉಸಿರು ಬಿಗಿ ಹಿಡಿಯಿರಿ. ಅನಾಮತ್ತು ಐವತ್ತು ಕೋಟಿಗೂ ಅಧಿಕ ಖಜಾನೆಗೆ ಸೇರಿಸಿದೆ. ದಟ್ ಈಸ್ ತಲೈವಾ ತಾಕತ್ತು.

    ಮೊದಲ ದಿನ ಒಟ್ಟು 500 ಪ್ರದರ್ಶನ ಕಂಡಿತ್ತು ಜೈಲರ್. ಮೊದಲ ವಾರದ ನಂತರ ಪ್ರದರ್ಶನ ಸಂಖ್ಯೆ ಕಮ್ಮಿ ಆಗಬಹುದು. ಹೀಗಂತ ಲೆಕ್ಕಾಚಾರ ಹಾಕಲಾಗಿತ್ತು. ಆದರೆ ಐದು ನೂರರಲ್ಲಿ ಒಂದೇ ಒಂದು ಪ್ರದರ್ಶನ ಕಮ್ಮಿಯಾಗಿಲ್ಲ. ಜನರು ಸಿನಿಮಾ ನೋಡುವುದನ್ನು ನಿಲ್ಲಿಸುತ್ತಿಲ್ಲ. ರಜನಿ ಅಷ್ಟೊಂದು ಮೋಡಿ ಮಾಡಿದ್ದಾರೆ. ಏನಾದರಾಗಲಿ. ಹಳೇ ರಜನಿಕಾಂತ್ ಮತ್ತೆ ಸಿಕ್ಕಿದ್ದಾರೆ. ಫ್ಯಾನ್ಸ್ ಕೇಕೆ ಹಾಕುತ್ತಿದ್ದಾರೆ. ನಿರ್ದೇಶಕ ನೆಲ್ಸನ್ ನಿರ್ದೇಶನಕ್ಕೆ ಭೇಷ್ ಎಂದಿದ್ದಾರೆ.

     

    ಸಿನಿಮಾರಂಗದ ಆರಾಧ್ಯ ದೈವ ರಜನಿಕಾಂತ್ ಅವರನ್ನ ಜೈಲರ್ (Jailer) ಸಿನಿಮಾ ಮೂಲಕ ಮತ್ತೆ ನೋಡಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ತಲೈವಾ ಮತ್ತೆ ತೆರೆಯ ಮೇಲೆ ಮಿಂಚೋದಕ್ಕೆ ಸೂಕ್ತ ಸಿನಿಮಾ ಅಂತಿದ್ದಾರೆ. ಈಗ ಅವರ ಮುಂದಿನ ಸಿನಿಮಾಗಾಗಿ ಫ್ಯಾನ್ಸ್ ಎದುರು ನೋಡ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಠಾಣ್ ಸೋತಿದ್ದರೆ ಹೋಟೆಲ್ ನಲ್ಲಿ ಅಡುಗೆ ಮಾಡ್ತಿದ್ದೆ : ಶಾರುಖ್ ಖಾನ್

    ಪಠಾಣ್ ಸೋತಿದ್ದರೆ ಹೋಟೆಲ್ ನಲ್ಲಿ ಅಡುಗೆ ಮಾಡ್ತಿದ್ದೆ : ಶಾರುಖ್ ಖಾನ್

    ಬಾಲಿವುಡ್ ನಟ ಶಾರುಖ್ ಖಾನ್ (Shah Rukh Khan) ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಪಠಾಣ್ (Pathan) ಸಿನಿಮಾದ ಸಕ್ಸಸ್ (Success) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಠಾಣ್ ಸಿನಿಮಾ ಒಂದು ವೇಳೆ ಸೋತಿದ್ದರೆ ತಾವು ಅಡುಗೆ (Cooking) ಭಟ್ಟ ಆಗುತ್ತಿದ್ದೆ ಎನ್ನುವ ಮಾತುಗಳನ್ನು ಆಡಿದ್ದಾರೆ. ಅದಕ್ಕಾಗಿಯೇ ಅವರು ಹೋಟೆಲ್ (Hotel) ಉದ್ಯಮಕ್ಕೆ ಕಾಲಿಡುತ್ತಿದ್ದ ಸಂಗತಿಯನ್ನೂ ತಿಳಿಸಿದ್ದಾರೆ.

    ಸತತ ನಾಲ್ಕು ವರ್ಷಗಳಿಂದ ಶಾರುಖ್ ಖಾನ್ ಅವರಿಗೆ ಯಾವುದೇ ಗೆಲುವು ಸಿಕ್ಕಿಲ್ಲ. ಪಠಾಣ್ ಸಿನಿಮಾದ ಬಗ್ಗೆ ನಿರೀಕ್ಷೆ ಇದ್ದರೂ, ಅದಕ್ಕೆ ಆದ ಅಡೆತಡೆಯಿಂದಾಗಿ ಸ್ವತಃ ಶಾರುಖ್ ಗಲಿಬಿಲಿಗೊಂಡಿದ್ದರಂತೆ. ಬಾಯ್ಕಾಟ್ ಹಾಗೂ ಮತ್ತಿತರ ಕಾರಣದಿಂದಾಗಿ ಪಠಾಣ್ ಸೋತಿದ್ದರೆ ತಾವು ತಮ್ಮದೇ ಹೋಟೆಲ್ ನಲ್ಲಿ ಅಡುಗೆ ಮಾಡುತ್ತಿರುವ ವಿಚಾರವನ್ನು ಹಂಚಿಕೊಂಡಿದ್ದಾರೆ. ಅಡುಗೆ ಮಾಡುವುದಕ್ಕಾಗಿಯೇ ಅವರು ತರಬೇತಿಯನ್ನು ಕೂಡ ಪಡೆದಿದ್ದರಂತೆ. ಇದನ್ನೂ ಓದಿ: ಟಾಲಿವುಡ್ ನಟ ನಾನಿಗೆ ಮೃಣಾಲ್ ಠಾಕೂರ್ ನಾಯಕಿ

    ಆದರೆ, ಪಠಾಣ್ ಅವರನ್ನು ಅಡುಗೆ ಮಾಡುವುದಕ್ಕೆ ಬಿಟ್ಟಿಲ್ಲ. ಕೇಳರಿಯದ ರೀತಿಯಲ್ಲಿ ಗೆಲುವು ತಂದುಕೊಟ್ಟಿದೆ. ಬಿಡುಗಡೆಯಾದ ಬಹುತೇಕ ಕಡೆ ಬಾಕ್ಸ್ ಆಫೀಸನ್ನು ಭರ್ತಿ ಮಾಡಿಸಿದೆ. ಈವರೆಗೂ ಅಂದಾಜು 500 ಕೋಟಿ ರೂಪಾಯಿ ಆದಾಯವನ್ನು ಅದು ತಂದುಕೊಟ್ಟಿದೆ ಎಂದು ಹೇಳಲಾಗುತ್ತಿದೆ. ಅಧಿಕೃತವಾಗಿ ಚಿತ್ರತಂಡದಿಂದ ಲಾಭದ ವಿಚಾರ ಬಹಿರಂಗವಾಗದೇ ಇದ್ದರೂ, ಸಿನಿ ಪಂಡಿತರು ಮಾತ್ರ ದಿನದ ಲೆಕ್ಕವನ್ನು ಕೊಡುತ್ತಲೇ ಇದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅಡ್ಡಪರಿಣಾಮವಿಲ್ಲ, ಶೇ.90ರಷ್ಟು ಪರಿಣಾಮಕಾರಿ – ಆಸ್ಟ್ರಾಜೆನೆಕಾ ಲಸಿಕೆ ಸಕ್ಸಸ್

    ಅಡ್ಡಪರಿಣಾಮವಿಲ್ಲ, ಶೇ.90ರಷ್ಟು ಪರಿಣಾಮಕಾರಿ – ಆಸ್ಟ್ರಾಜೆನೆಕಾ ಲಸಿಕೆ ಸಕ್ಸಸ್

    ಲಂಡನ್: ಕೊರೊನಾ ಲಸಿಕೆಗಾಗಿ ಆಸ್ಟ್ರಾಜೆನೆಕಾ ಮತ್ತು ಆಕ್ಸ್ ಫರ್ಡ್ ಕಂಪನಿಗಳು ಜಂಟಿಯಾಗಿ ಸಂಶೋಧಿಸುತ್ತಿರುವ ಕೊರೊನಾ ಲಸಿಕೆ ಯಶಸ್ವಿಯಾಗಿದೆ.

    ಈಗ ಸಕ್ಸಸ್ ಆಗಿರುವ ಆಸ್ಟ್ರಾಜೆನೆಕಾ ಲಸಿಕೆಯೂ ಯಾವುದೇ ಅಡ್ಡಪರಿಣಾಮವಿಲ್ಲದೇ ಕೆಲಸ ಮಾಡಲಿದೆ. ಜೊತೆಗೆ ಇದು ಶೇ.90ರಷ್ಟು ಪರಿಣಾಮಕಾರಿಯಾಗಿದೆ ಎಂದು ಆಸ್ಟ್ರಾಜೆನೆಕಾ ಕಂಪನಿ ಹೇಳಿಕೆ ನೀಡಿದೆ. ಈ ಲಸಿಕೆ ಈಗಾಗಲೇ ಅಂತಿಮ ಹಂತಕ್ಕೆ ಬಂದಿದ್ದು, ಕೆಲವೇ ದಿನಗಳಲ್ಲಿ ಲಸಿಕೆ ಉತ್ಪಾದನೆಗೆ ಕಂಪನಿಯು ಅನುಮತಿ ಪಡೆಯುವ ನಿರೀಕ್ಷೆ ಇದೆ.

    ಲಸಿಕೆ ಹೇಗಿದೆ?
    ಆಸ್ಟ್ರಾಜೆನೆಕಾ ಮತ್ತು ಆಕ್ಸಫರ್ಡ್ ಕಂಪನಿಗಳು ಜಂಟಿಯಾಗಿ ಆವಿಷ್ಕಾರ ಮಾಡಿರುವ ಈ ಲಸಿಕೆ ಶೇ.90ರಷ್ಟು ಪರಿಣಾಮಕಾರಿಯಾಗಿದೆ. 1 ಡೋಸ್‍ನಲ್ಲೇ ಆಸ್ಟ್ರಾಜೆನೆಕಾ ಲಸಿಕೆ ಶೇಕಡಾ 90ರಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಲಿದೆ. 1 ತಿಂಗಳ ಬಳಿಕ 2 ಫುಲ್ ಡೋಸ್ ಕೊಟ್ಟಾಗ ಶೇ.62ರಷ್ಟು ಪರಿಣಾಮಕಾರಿಯಾಗಿ ಈ ಲಸಿಕೆ ಕೆಲಸ ಮಾಡಲಿದೆ ಎಂದು ಆಸ್ಟ್ರಾಜೆನೆಕಾ ಕಂಪನಿ ತಿಳಿಸಿದೆ.

    2 ಫುಲ್ ಡೋಸ್‍ಗಳ ಪರಿಣಾಮಗಳನ್ನು ಒಟ್ಟಿಗೆ ವಿಶ್ಲೇಷಿಸಿದರೆ ಆಸ್ಟ್ರಾಜೆನೆಕಾ ಲಸಿಕೆ ಶೇಕಡಾ 70ರಷ್ಟು ಪರಿಣಾಮಕಾರಿಯಾಗಿದ್ದು, ಕೊರೋನಾ ಸೋಂಕು ತಡೆಯುವಿಕೆಯಲ್ಲಿ ಪರಿಣಾಮ ಬೀರಲಿದೆ. ಈ ಲಸಿಕೆಯ ಪ್ರಯೋಗಕ್ಕೆ ಒಳಗಾದವರು ಯಾರೂ ಆಸ್ಪತ್ರೆಗೆ ದಾಖಲಾಗಿಲ್ಲ, ಗಂಭೀರ ಕಾಯಿಲೆಗಳು ಕಾಣಿಸಿಕೊಂಡಿಲ್ಲ. ಜೊತೆಗೆ 2-8 ಡಿಗ್ರಿ ಸೆಲ್ಸಿಯಸ್‍ನಷ್ಟು ಉಷ್ಣಾಂಶದಲ್ಲಿ ಲಸಿಕೆ ಸಂಗ್ರಹ ಮತ್ತು ಸಾಗಾಟ ಮಾಡಬಹುದು. ಲಸಿಕೆ ಉತ್ಪಾದನೆ ಆದ ಬಳಿಕ 6 ತಿಂಗಳಲ್ಲಿ ನೀಡಬಹುದು. 2021ರಲ್ಲಿ 300 ಕೋಟಿಯಷ್ಟು ಲಸಿಕೆ ಉತ್ಪಾದನೆ ಗುರಿ ಹೊಂದಿದ್ದೇವೆ ಎಂದು ಆಸ್ಟ್ರಾಜೆನೆಕಾ ಮಾಹಿತಿ ನೀಡಿದೆ.

    ಫೆಬ್ರವರಿ ವೇಳೆಗೆ ಕೊರೊನಾ ವಿರುದ್ಧ ಹೋರಾಡಲು ಭಾರತಕ್ಕೆ ಎರಡು ಲಸಿಕೆಗಳು ಲಭ್ಯವಿರುತ್ತವೆ ಎಂದು ಹೇಳಲಾಗಿದ್ದು, ಫೆಬ್ರವರಿ ಆರಂಭದಲ್ಲೇ ಆಸ್ಟ್ರಾಜೆನೆಕಾ ಮತ್ತು ಭಾರತ್ ಬಯೋಟೆಕ್‍ನ ಲಸಿಕೆಗಳು ಲಭ್ಯವಾಗುವ ಸಾಧ್ಯತೆ ಇದೆ.

    ಎಲ್ಲರಿಗಿಂತ ಮೊದಲು ಹೇಗೆ?
    ಆಕ್ಸ್‍ಫರ್ಡ್ ವಿಶ್ವವಿದ್ಯಾಲಯ ತೀವ್ರತೆರನಾದ ಶ್ವಾಸಕೋಶದ ಸಮಸ್ಯೆ ತರಬಲ್ಲ ಸಾರ್ಸ್ (ಸಿವಿಯರ್ ಅಕ್ಯೂಟ್ ರೆಸ್ಪಿರೇಟರಿ ಸಿಂಡೋಮ್) ಹಾಗೂ ಎಂಇಆರ್‍ಎಸ್ (ಮಿಡಲ್ ಈಸ್ಟ್ ರೆಸ್ಪಿರೇಟರಿ ಸಿಂಡೋಮ್) ಸೋಂಕಿಗೆ ಲಸಿಕೆಯನ್ನು ಕಂಡು ಹಿಡಿಯುವ ಪ್ರಯತ್ನ ನಡೆಸುತ್ತಿತ್ತು. ಈ ನಡುವೆ ಉಸಿರಾಟದ ಸಮಸ್ಯೆಗೆ ಕಾರಣವಾಗಬಲ್ಲ ಕೊರೊನಾ ವೈರಸ್ ಬಂದಿದೆ. ಹೀಗಾಗಿ ಕೂಡಲೇ ತಂಡ ಕೋವಿಡ್‍ಗೆ ಲಸಿಕೆ ಕಂಡು ಹಿಡಿಯಲು ಮುಂದಾಗಿತ್ತು. ಬೇರೆಯವರು ಲಸಿಕೆ ಕಂಡು ಹಿಡಿಯುವ ಪ್ರಯೋಗ ನಡೆಸುವುದಕ್ಕೆ ಮುನ್ನವೇ ಇವರು ವೈರಸ್ ಕುರಿತು ಸಾಕಷ್ಟು ಸಂಶೋಧನೆ ನಡೆಸಿರುವ ಕಾರಣ ವಿಶ್ವದಲ್ಲಿ ಈ ಲಸಿಕೆ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ.

  • ಯಶಸ್ಸಿಗಾಗಿ ಲಿಫ್ಟ್ ಅಲ್ಲ, ಮೆಟ್ಟಿಲು ಬಳಸಿ- ಫಿಟ್ ಇಂಡಿಯಾಗೆ ಮೋದಿ ಚಾಲನೆ

    ಯಶಸ್ಸಿಗಾಗಿ ಲಿಫ್ಟ್ ಅಲ್ಲ, ಮೆಟ್ಟಿಲು ಬಳಸಿ- ಫಿಟ್ ಇಂಡಿಯಾಗೆ ಮೋದಿ ಚಾಲನೆ

    ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ‘ಫಿಟ್ ಇಂಡಿಯಾ ಅಭಿಯಾನ ಚಾಲನೆ ನೀಡಿ ರಾಷ್ಟ್ರದ ಜನರು ಸದೃಢರಾಗುವಂತೆ ಕೋರಿಕೊಂಡಿದ್ದಾರೆ.

    ಇಂದು ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಫಿಟ್ ಇಂಡಿಯಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಯಶಸ್ಸಿಗಾಗಿ ಲಿಫ್ಟ್ ಅಲ್ಲ, ಮೆಟ್ಟಿಲುಗಳನ್ನು ಬಳಸಿ ಫಿಟ್ ಆಗಿರಬೇಕು ಎಂದು ಕರೆಕೊಟ್ಟರು.

    ಸಚಿವರು, ಶಾಲಾ ಮಕ್ಕಳು ಮತ್ತು ಸೆಲೆಬ್ರಿಟಿಗಳು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅದು ಬೋರ್ಡ್ ರೂಮ್ ಆಗಿರಲಿ ಬಾಲಿವುಡ್ ಆಗಿರಲಿ ನಾವು ಫಿಟ್ ಆಗಿರಬೇಕು. ನಮಗೆ ಫಿಟ್ ಆದ ದೇಹವಿದ್ದರೆ. ಮನಸ್ಸು ನಿಯಂತ್ರಣದಲ್ಲಿರುತ್ತದೆ. ಈ ಫಿಟ್ ಇಂಡಿಯಾ ಚಾಲೆಂಜ್ ಅನ್ನು ಎಲ್ಲರೂ ಸ್ವೀಕರಿಸಬೇಕು. ‘ಸ್ವಚ್ಛ ಭಾರತ್’ ಅಭಿಯಾನದಂತೆ ಇದನ್ನು ಎಲ್ಲರೂ ಸ್ವೀಕಾರ ಮಾಡಿ ಎಂದು ಜನರಲ್ಲಿ ಮೋದಿ ಕೋರಿಕೊಂಡರು.

    ನಾವು ಫಿಟ್‍ನೆಸ್ ಅನ್ನು ಜೀವನದ ಮಂತ್ರವಾಗಿ ಮಾಡಿಕೊಳ್ಳಬೇಕು. ನಾವು ಆಹಾರ ಪದ್ಧತಿ ಮತ್ತು ದೇಹದ ಫಿಟ್‍ನೆಸ್ ಬಗ್ಗೆ ಮಾತನಾಡುತ್ತೇವೆ ಆದರೆ ಊಟದ ಟೇಬಲ್ ಬಳಿ ಬಂದಾಗ ನಾವು ಅದನ್ನು ಪಾಲಿಸುವುದಿಲ್ಲ. ಈಗಿನ ನಮ್ಮ ಯಂತ್ರಚಾಲಿತ ಜೀವನ ಶೈಲಿಗೆ ನಮ್ಮ ತಂತ್ರಜ್ಞಾನವು ಬಹುದೊಡ್ಡ ಕಾರಣ. ಕೆಲವು ದಶಕಗಳ ಹಿಂದೆ, ಒಬ್ಬ ಸಾಮಾನ್ಯ ವ್ಯಕ್ತಿಯು ದಿನದಲ್ಲಿ 8-10 ಕಿ.ಮೀ ನಡೆಯುತ್ತಿದ್ದ, ಸೈಕ್ಲಿಂಗ್ ಮಾಡುತ್ತಿದ್ದ ಅಥವಾ ಓಡುತ್ತಿದ್ದನು. ಆದರೆ ಈಗ ತಂತ್ರಜ್ಞಾನದಿಂದ ಈ ಎಲ್ಲಾ ದೈಹಿಕ ಚಟುವಟಿಕೆ ಕಡಿಮೆಯಾಗಿದೆ. ನಾವು ಈಗ ಕಡಿಮೆ ನಡೆಯುತ್ತೇವೆ ಎಂದು ಮೋದಿ ಹೇಳಿದರು.

    ತಮ್ಮ ದೈನಂದಿನ ದಿನಚರಿಯಲ್ಲಿ ದಿನ ಯೋಗ ಮಾಡುವ ಮೋದಿ ಅವರು ಜನರು ಜೀವನ ಶೈಲಿಯನ್ನು ಬದಲಾವಣೆ ಮಾಡಿಕೊಳ್ಳಬೇಕು ಎಂದು ಒತ್ತಾಯ ಮಾಡಿದ್ದಾರೆ. ನಾವು ಹಿಂದಿನ ಕಾಲದಲ್ಲಿ 60 ವರ್ಷ ಆದ ನಂತರ ಹೃದಯಾಘಾತವಾಗುತ್ತದೆ ಎಂದು ಕೇಳಿದ್ದವು. ಆದರೆ ಈಗ 30, 40 ವರ್ಷಕ್ಕೆ ಜನರು ಹೃದಯಾಘಾತದಿಂದ ಬಳಲುತ್ತಿದ್ದಾರೆ. ಇದಕ್ಕೆ ಕಾರಣ ನಮ್ಮ ಜೀವನ ಶೈಲಿ. ನಮ್ಮ ಜೀವನದಲ್ಲಿ ನಾವು ಮಾಡಿಕೊಂಡ ಸಣ್ಣ ಬದಲಾವಣೆ ನಮ್ಮ ಜೀವನದಲ್ಲಿ ದೊಡ್ಡ ವ್ಯತ್ಯಾಸವನ್ನು ಉಂಟುಮಾಡುತ್ತದೆ ಎಂದು ಮೋದಿ ಅಭಿಪ್ರಾಯಪಟ್ಟರು.

    ಈ ಫಿಟ್ ಇಂಡಿಯಾ ಚಳುವಳಿಯು ರಾಷ್ಟ್ರೀಯ ಕ್ರೀಡಾದಿನವನ್ನು ಸೂಚಿಸುತ್ತದೆ. ರಾಷ್ಟ್ರದ ಜನರ ದೈನಂದಿನ ದಿನದಲ್ಲಿ ದೈಹಿಕ ಚಟುವಟಿಕೆಗಳು ಮತ್ತು ಕ್ರೀಡೆಯನ್ನು ಪ್ರೋತ್ಸಾಹಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ.