Tag: ಸಚಿವರು

  • ಮುಡಾ ಕೇಸಲ್ಲಿ ಸಚಿವರಿಬ್ಬರ ಪಾತ್ರ ಇದ್ಯಾ? – ಮುಂದಿನ ವಾರವೇ ಸಿಎಂಗೆ ಇಡಿ ಸಮನ್ಸಾ?

    ಮುಡಾ ಕೇಸಲ್ಲಿ ಸಚಿವರಿಬ್ಬರ ಪಾತ್ರ ಇದ್ಯಾ? – ಮುಂದಿನ ವಾರವೇ ಸಿಎಂಗೆ ಇಡಿ ಸಮನ್ಸಾ?

    ಮೈಸೂರು: ಮುಡಾ ಹಗರಣದ ತನಿಖೆ ತೀವ್ರಗೊಂಡ ಹೊತ್ತಲ್ಲೇ ಸ್ಫೋಟಕ ವಿಚಾರವೊಂದು ಬಹಿರಂಗಗೊಂಡಿದೆ. ಮುಡಾದಲ್ಲಿ ಈ ಹಿಂದೆ ಕೆಲಸ ಮಾಡಿದ್ದ ಇಬ್ಬರು ಅಧಿಕಾರಿಗಳು, ಸಚಿವರಿಬ್ಬರ ಪಾತ್ರದ ಬಗ್ಗೆಯೂ ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ.

    50:50 ಅನುಪಾತದಲ್ಲಿ ಸೈಟ್ ಹಂಚಿಕೆ ಮಾಡೋವಾಗ ಇಬ್ಬರು ಸಚಿವರು ಪ್ರಭಾವ ಬೀರಿದ್ದಾರೆ.. ಇಬ್ಬರು ಪ್ರಮುಖ ಸಚಿವರ ಸಹಕಾರದಿಂದ ಈ ಅಕ್ರಮ ಆಗಿದೆ ಎಂದು ಇಬ್ಬರು ಅಧಿಕಾರಿಗಳು ಹೇಳಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

    ಅಧಿಕಾರಿಗಳ ಈ ಹೇಳಿಕೆ ಆಧರಿಸಿ ಇಡಿ ತನಿಖೆ ಇನ್ನಷ್ಟು ತೀವ್ರಗೊಳಿಸಿದೆ. ಮುಂದಿನ ವಾರ ಸಿಎಂ ಸಿದ್ದರಾಮಯ್ಯಗೆ ಇಡಿ ನೊಟೀಸ್ ಕೊಡಬಹುದು, ವಿಚಾರಣೆ ನಡೆಸಬಹುದು ಎಂಬ ಸುದ್ದಿ ಹಬ್ಬಿದೆ.

    ಈ ಮಧ್ಯೆ, ಕೊಳ್ಳೆ ಹೊಡೆಯುತ್ತಿದ್ರೂ ಮುಖ್ಯಮಂತ್ರಿಗಳನ್ನು ಮುಟ್ಟಬಾರದಾ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. 50 ಕೋಟಿ ರೂ. ಆಮಿಷದ ಆರೋಪ ಮಾಡಿದ್ದಕ್ಕೆ ಬಫೂನ್ ಎಂದು ಜರೆದಿದ್ದಾರೆ. ಇದನ್ನೂ ಎಸ್‌ಐಟಿಗೆ ಕೊಡಿ ಎಂದು ಲೇವಡಿ ಮಾಡಿದ್ದಾರೆ. ಆದ್ರೆ, ಸಿಎಂ ಹೇಳಿಕೆಯನ್ನು ರಮೇಶ್ ಬಂಡಿಸಿದ್ದೇಗೌಡ ಸಮರ್ಥಿಸಿದ್ದಾರೆ. ಸಿಎಂ ರಾಜೀನಾಮೆ ಕೊಡೋದು ನಿಶ್ಚಿತ ಎಂದು ವಿಜಯೇಂದ್ರ ಮತ್ತೊಮ್ಮೆ ಹೇಳಿದ್ದಾರೆ.

  • ಸಿದ್ದು ಸಂಪುಟದ ಮೂವರು ಸಚಿವರಿಗೆ ಜೀವ ಬೆದರಿಕೆ ಪತ್ರ

    ಸಿದ್ದು ಸಂಪುಟದ ಮೂವರು ಸಚಿವರಿಗೆ ಜೀವ ಬೆದರಿಕೆ ಪತ್ರ

    ಬೆಳಗಾವಿ: ಓರ್ವ ಸ್ವಾಮೀಜಿ ಸೇರಿ ಸಿಎಂ ಸಿದ್ದರಾಮಯ್ಯ (Siddaramaiah) ಸಂಪುಟದ ಮೂವರು ಸಚಿವರಿಗೆ (Ministers) ಅನಾಮಿಕನೋರ್ವ ಜೀವ ಬೆದರಿಕೆ ಪತ್ರ (Life Threat Letter) ಬರೆದಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.

    ಬೈಲೂರು ನಿಷ್ಕಲಮಂಟಪದ ನಿಜಗುಣಾನಂದ ಶ್ರೀ ಸೇರಿ ಮೂವರು ಸಚಿವರಿಗೆ ಅನಾಮಧೇಯ ವ್ಯಕ್ತಿಯೋರ್ವ ಜೀವ ಬೆದರಿಕೆ ಪತ್ರ ಬರೆದಿದ್ದು, ಸಚಿವ ಸತೀಶ್ ಜಾರಕಿಹೊಳಿ, ದಿನೇಶ್ ಗುಂಡೂರಾವ್, ಪ್ರಿಯಾಂಕ್ ಖರ್ಗೆ ಹೆಸರನ್ನು ಉಲ್ಲೇಖಿಸಿ ಜೀವ ಬೆದರಿಕೆ ಹಾಕಿದ್ದಾನೆ. ಇಷ್ಟು ಮಾತ್ರವಲ್ಲದೇ ಹಲವು ಪ್ರಗತಿಪರ ವಿಚಾರವಾದಿಗಳಿಗೂ ಈ ಪತ್ರದ ಮೂಲಕ ಬೆದರಿಕೆ ಹಾಕಲಾಗಿದೆ. ಇದನ್ನೂ ಓದಿ: ಡಿಸಿಎಂ ತಗೊಂಡು ಏನ್ ಮಾಡ್ಬೇಕು, ಆದ್ರೆ ಲಿಂಗಾಯತರು ಸಿಎಂ ಆಗ್ಬೇಕು: ಶಾಮನೂರು ಕಿಡಿ

    ಬೆಳಗಾವಿ (Belagavi) ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬೈಲೂರು ನಿಷ್ಕಲಮಂಟಪ ಆಶ್ರಮಕ್ಕೆ ಸೆಪ್ಟೆಂಬರ್ 20ರಂದು ಈ ಜೀವ ಬೆದರಿಕೆ ಪತ್ರ ಬಂದಿದೆ. ಕಳೆದ ತಿಂಗಳಷ್ಟೇ ಶ್ರೀಗಳಿಗೆ ಜೀವ ಬೆದರಿಕೆ ಪತ್ರ ಬಂದಿತ್ತು. ಈಗ ಮತ್ತೆ ನಿಷ್ಕಲಮಂಟಪಕ್ಕೆ ಇನ್ನೊಂದು ಜೀವ ಬೆದರಿಕೆ ಪತ್ರವನ್ನು ಕಳುಹಿಸಲಾಗಿದೆ. ಇದನ್ನೂ ಓದಿ: ಹಿಂದುತ್ವದ ಮೇಲೆ ಆತನಿಗೆ ಒಲವಿತ್ತು, ಪತ್ರದಲ್ಲಿ ಮನವಿ ಮಾಡಿರಬಹುದು – ಆರೋಪಿ ಶಿವಾಜಿರಾವ್ ಜಾಧವ್ ಸಹೋದರ

    ಪತ್ರದಲ್ಲಿ ಏನಿದೆ?
    ನಿಜಗುಣಾನಂದ ನಾನು ಬರೆದಿರುವ ಪತ್ರ ಪ್ರೇಮ ಪತ್ರ ಅಂತಾದರೂ ತಿಳಿ ಅಥವಾ ಸಾವಿನ ಪತ್ರವಂತಾದರೂ ತಿಳಿ. ನಾನು ನಿನ್ನ ಜೊತೆ ತಮಾಷೆ ಮಾಡುತ್ತಿಲ್ಲ. ನೀನು ಆಯೋಜಿಸುವ ಪಾಪದ ಕಾರ್ಯಕ್ರಮದಲ್ಲೇ ನಿನ್ನ ಕಣ್ಣೆದುರಿಗೆ ನಿನ್ನ ಸಾವು ಬರುತ್ತದೆ. ನೀನು ಮನುಷ್ಯ ರೂಪದಲ್ಲಿರುವ ರಾಕ್ಷಸ. ಹಿಂದೂ ಧರ್ಮ ದೇವತೆಗಳನ್ನು ನಿಂದಿಸುವ ನೀನು ರಾಕ್ಷಸನೇ ಸರಿ. ನಿನ್ನ ಜೀವನದ ಕೊನೆಯ ಘಟ್ಟದಲ್ಲಿ ನೀನು ನಿಂತಿದ್ದಿಯಾ. ನಿನ್ನ ಹತ್ಯೆ ಬಿಟ್ಟರೆ ಬೇರೆ ದಾರಿಯೇ ಇಲ್ಲ. ನಿನ್ನಂಥ ದುಷ್ಟ ರಾಕ್ಷಸ ಸಂತತಿಯ ಸಂಹಾರವನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ಬೆದರಿಕೆ ಹಾಕಲಾಗಿದೆ. ಇದನ್ನೂ ಓದಿ: ವ್ಯಕ್ತಿಗಳ ಬ್ರೈನ್ ವಾಷ್ ಮಾಡಿ ಆಯುಧ ಮಾಡುವುದು ಪ್ರಜಾಪ್ರಭುತ್ವದ ಲಕ್ಷಣವಲ್ಲ: ಕುಂ.ವೀರಭದ್ರಪ್ಪ

    ಹಲವು ವಿಚಾರವಾದಿಗಳು ಹಾಗೂ ಪ್ರಗತಿಪರರ ಹೆಸರನ್ನು ಪತ್ರದಲ್ಲಿ ಉಲ್ಲೇಖಿಸಿದ್ದು, ರಾಜ್ಯದ ಮೂವರು ಸಚಿವರು, ಸಾಹಿತಿಗಳ ಹೆಸರುಗಳನ್ನು ಬೆದರಿಕೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಎಸ್‌ಜಿ ಸಿದ್ದರಾಮಯ್ಯ, ಕೆ ಮರುಳಸಿದ್ದಪ್ಪ, ಬರಗೂರು ರಾಮಚಂದ್ರಪ್ಪ, ಭಾಸ್ಕರ್ ಪ್ರಸಾದ್, ಪ್ರೊ.ಭಗವಾನ್, ಪ್ರೊ.ಮಹೇಶ್‌ಚಂದ್ರ, ಬಿಟಿ ಲಲಿತಾ ನಾಯಕ್, ನಟ ಚೇತನ್, ನಟ ಪ್ರಕಾಶರಾಜ್, ಪ್ರಿಯಾಂಕ್ ಖರ್ಗೆ, ಜಾರಕಿಹೊಳಿ, ದಿನೇಶ್ ಗುಂಡೂರಾವ್, ದ್ವಾರಕಾನಾಥ, ದೇವನೂರು ಮಹದೇಪ್ಪ, ಬಿಎಲ್ ವೇಣು, ನೀವು ನಿಮ್ಮ ತಂದೆ ತಾಯಿಗಳಿಗೆ ಹುಟ್ಟಿದ್ದರೆ ಕೇಳುವ ಪ್ರಶ್ನೆಗೆ ಉತ್ತರ ಕೊಡಿ ಎಂದು ಅನಾಮಧೇಯ ಸವಾಲೆಸೆದಿದ್ದಾನೆ. ಇದನ್ನೂ ಓದಿ: ರಾಯಚೂರಿನಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ – ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ಹಿಂದೇಟು

    ಮತಾಂಧ ಮುಸ್ಲಿಮರು, ಪಾಕಿಸ್ತಾನಿಗಳು, ಭಯೋತ್ಪಾದಕರು ಮಾಡುತ್ತಿರುವುದು ತಪ್ಪು ಎಂದು ಹೇಳುವ ತಾಕತ್ತು ನಿಮ್ಮಲ್ಲಿದೆಯೇ? ದೇಶದ ಒಳಗೆ ಇದ್ದುಕೊಂಡು ಪಾಕ್ ನಾಯಿಗಳು ಮಾಡುತ್ತಿರುವುದು ತಪ್ಪು ಎಂದು ಹೇಳುವ ಧೈರ್ಯ ನಿಮ್ಮಲ್ಲಿದೆಯೇ? ಧೈರ್ಯವಿದ್ದರೆ ಹೇಳಿ. ಇಲ್ಲವಾದರೆ ನಿಮ್ಮ ಕೊನೆಯ ದಿನಗಳನ್ನು ಎಣಿಸಿ. ನಿಜಗುಣಾನಂದ ನಿನ್ನ ಕೊನೆಯ ದಿನಗಳನ್ನು ಎಣಿಸು ಎಂದು ಪತ್ರದ ಮೂಲಕ ಬೆದರಿಕೆ ಹಾಕಿದ್ದಾನೆ. ಇದನ್ನೂ ಓದಿ: ಸಂಸದ ಮುನಿಸ್ವಾಮಿ, ಶಾಸಕ ಎಸ್‌ಎನ್ ನಾರಾಯಣಸ್ವಾಮಿ ಜಟಾಪಟಿ ಪ್ರಕರಣ – ಎಫ್‌ಐಆರ್ ದಾಖಲು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿಂಗಾಪುರದಲ್ಲಿ ಸರ್ಕಾರವನ್ನು ಉರುಳಿಸುವ ಷಡ್ಯಂತ್ರದ ಬಗ್ಗೆ ತಿಳಿದಿಲ್ಲ: ಸಿಎಂ

    ಸಿಂಗಾಪುರದಲ್ಲಿ ಸರ್ಕಾರವನ್ನು ಉರುಳಿಸುವ ಷಡ್ಯಂತ್ರದ ಬಗ್ಗೆ ತಿಳಿದಿಲ್ಲ: ಸಿಎಂ

    ಹಾವೇರಿ: ಸಿಂಗಾಪುರದಲ್ಲಿ (Singapore) ಸರ್ಕಾರವನ್ನು ಉರುಳಿಸಲು ಷಡ್ಯಂತ್ರ ನಡೆದಿರುವ ಬಗ್ಗೆ ನನಗೆ ಗೊತ್ತಿಲ್ಲ. ಹೇಳಿಕೆ ನೀಡಿರುವ ಡಿಕೆ ಶಿವಕುಮಾರ್ (DK Shivakumar) ಅವರನ್ನೇ ಕೇಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು.

    ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬರ ಬರುತ್ತದೆ ಎಂದು ಬಿಜೆಪಿಯವರು ಟ್ರೋಲ್ ಮಾಡಿರುವ ಬಗ್ಗೆ ಉತ್ತರಿಸಿ, ಈಗ ಮಳೆಯಾಗುತ್ತಿಲ್ಲವೇ ಎಂದು ಪ್ರಶ್ನಿಸಿದರು. ಈ ಮೂಢ ನಂಬಿಕೆಗಳಲ್ಲಿ ಹಾಗೂ ಮೌಢ್ಯಗಳಲ್ಲಿ ನನಗೆ ನಂಬಿಕೆ ಇಲ್ಲ. ಬಿಜೆಪಿ ಅಧಿಕಾರದ ಅವಧಿಯಲ್ಲಿ ಪ್ರವಾಹ ಬಂದು ಒಂದು ಲಕ್ಷ ಮನೆಗಳು ಬಿದ್ದುಹೋಗಿದ್ದವು. ಪ್ರವಾಹ ಉಂಟಾಗುವುದು ಹಾಗೂ ಮಳೆ ಕೊರತೆಯಾಗುವುದು ಸ್ವಾಭಾವಿಕ. ಈಗ ಹವಾಮಾನ ಬದಲಾವಣೆ ಇದೆ. ಮುಂಗಾರು ಜೂನ್ ತಿಂಗಳಲ್ಲಿ ಪ್ರಾರಂಭವಾಗುವುದು ಜುಲೈನಲ್ಲಿ ಆಗುತ್ತಿದೆ. ಜಗತ್ತಿನ ಎಲ್ಲೆಡೆ ಹವಾಮಾನ ಬದಲಾವಣೆಯಾಗುತ್ತಿದೆ ಎಂದರು. ಇದನ್ನೂ ಓದಿ: ಯಾರು ಯಾರಿಗೂ ಪತ್ರ ಬರೆದಿಲ್ಲ – ಇದೆಲ್ಲಾ ಊಹಾಪೋಹದ ಸುದ್ದಿ: ಡಿಕೆಶಿ

    ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಒಂದಾಗುತ್ತಿರುವ ಬಗ್ಗೆ ನನಗೆ ತಿಳಿದಿಲ್ಲ, ಮಾತುಕತೆ ನಡೆಸುತ್ತಿದ್ದಾರೆ. ಅವರು ಒಂದಾದರೆ ನಮಗೇನೂ ಭಯವಿಲ್ಲ. ನಾವು 15-20 ಸ್ಥಾನಗಳನ್ನು ಗೆದ್ದೇ ಗೆಲ್ಲುತ್ತೇವೆ. ಅವರು ಒಂದಾದರೂ, ಒಂದಾಗದೇ ಇದ್ದರು ಗೆಲ್ಲುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ಸಚಿವರ ವಿರುದ್ಧ ಶಾಸಕರ ಅಸಮಾಧಾನ – ಸಿಎಂಗೆ 25 ಶಾಸಕರ ದೂರು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಯಾರು ಯಾರಿಗೂ ಪತ್ರ ಬರೆದಿಲ್ಲ – ಇದೆಲ್ಲಾ ಊಹಾಪೋಹದ ಸುದ್ದಿ: ಡಿಕೆಶಿ

    ಯಾರು ಯಾರಿಗೂ ಪತ್ರ ಬರೆದಿಲ್ಲ – ಇದೆಲ್ಲಾ ಊಹಾಪೋಹದ ಸುದ್ದಿ: ಡಿಕೆಶಿ

    ಬೆಂಗಳೂರು: ಯಾವ ಶಾಸಕರು (MLA) ಕೂಡಾ ಸಚಿವರ (Minister) ವಿರುದ್ಧ ಪತ್ರ ಬರೆದಿಲ್ಲ. ಅವರಲ್ಲಿ ಯಾವುದೇ ಅಸಮಾಧಾನವೂ ಇಲ್ಲ. ಇದೆಲ್ಲಾ ಊಹಾಪೋಹದ ಸುದ್ದಿಗಳು ಅಷ್ಟೇ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿಕೆ ನೀಡಿದ್ದಾರೆ.

    ಶಾಸಕರು ಸಚಿವರ ವಿರುದ್ಧ ಪತ್ರ ಬರೆದು ಅಸಮಾಧಾನ ವ್ಯಕ್ತಪಡಿಸಿರುವ ಬಗೆಗಿನ ಮಾಧ್ಯಮದರ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ಯಾವ ಅಸಮಧಾನವೂ ಇಲ್ಲ. ಇದೆಲ್ಲಾ ಊಹಾಪೋಹದ ಸುದ್ದಿಗಳು. ಎಲ್ಲಾ ಸಚಿವರೂ ಅವರವರ ಕ್ಷೇತ್ರದಲ್ಲಿ ಶಾಸಕರ ಕೆಲಸ ಮಾಡುತ್ತಿದ್ದಾರೆ. ಸದ್ಯ ಟ್ರಾನ್ಸ್‌ಫರ್ ಟೈಮ್ ಮುಗಿದಿದ್ದು, ಇನ್ನು ಉಳಿದಿದ್ದರೆ ಅದನ್ನು ಮುಖ್ಯಮಂತ್ರಿಗಳು ನೋಡಿಕೊಳ್ಳುತ್ತಾರೆ ಎಂದು ತಿಳಿಸಿದರು.

    ನಾವು 5 ಗ್ಯಾರಂಟಿ ಕೊಟ್ಟಿದ್ದೇವೆ. ಅದನ್ನು ಜಾರಿಗೆ ತರುವ ಬಗ್ಗೆ ಶಾಸಕರ ಜೊತೆ ಮಾತನಾಡಬೇಕಿದೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ನಮ್ಮ ಯೋಜನೆ ಇಂಪ್ಲಿಮೆಂಟ್ ಮಾಡುವ ಬಗ್ಗೆ ಚರ್ಚೆ ನಡೆಸುತ್ತೇವೆ. ಶಾಸಕರು ಹೆಚ್ಚಿನ ಅನುದಾನ ಕೇಳುತ್ತಿದ್ದಾರೆ. 10 ಕೋಟಿ, 20 ಕೋಟಿ, 100 ಕೋಟಿ, 300 ಕೋಟಿ ಅಂತ ಅನುದಾನ ಕೇಳುತ್ತಿದ್ದಾರೆ. ಕೆಲವೊಂದು ಭರವಸೆ ಕೊಟ್ಟಿರುತ್ತೇವೆ. ಆದರೆ 1 ವರ್ಷಗಳ ಸಮಯ ಸಮಾಧಾನದಿಂದ ಕಾಯಲು ಹೇಳಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ಸಚಿವರ ವಿರುದ್ಧ ಶಾಸಕರ ಅಸಮಾಧಾನ – ಸಿಎಂಗೆ 25 ಶಾಸಕರ ದೂರು

    ಶಾಸಕಾಂಗ ಪಕ್ಷದ ಸಭೆಯಲ್ಲಿ ಇದನ್ನೆಲ್ಲಾ ಮಾತನಾಡುತ್ತೇವೆ. ಹಿಂದಿನ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೆಲವು ವಿಚಾರ ಚರ್ಚೆ ಮಾಡಿದ್ದೆವು. ಉಳಿದ ವಿಚಾರ ನಾಡಿದ್ದು ಸಭೆಯಲ್ಲಿ ಚರ್ಚೆ ಮಾಡುತ್ತೇವೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: PFI, ಇಂಡಿಯನ್ ಮುಜಾಹಿದೀನ್‌ನಲ್ಲೂ ಭಾರತ ಅನ್ನೋ ಪದವಿದೆ – ವಿಪಕ್ಷಗಳ INDIA ಒಕ್ಕೂಟಕ್ಕೆ ಮೋದಿ ಟಾಂಗ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕರ್ನಾಟಕದ 24 ಸಚಿವರು ಪ್ರಮಾಣವಚನ ಸ್ವೀಕಾರ

    ಕರ್ನಾಟಕದ 24 ಸಚಿವರು ಪ್ರಮಾಣವಚನ ಸ್ವೀಕಾರ

    ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನ (Karnataka Congress) ಸಿದ್ದರಾಮಯ್ಯ (Siddaramaiah) ಸರ್ಕಾರ ಅಧಿಕಾರಕ್ಕೆ ಬಂದು ವಾರ ಕಳೆದಿದ್ದು, ಶನಿವಾರ ಸಂಪುಟದ (Cabinet) 24 ನೂತನ ಸಚಿವರು (Ministers ಪ್ರಮಾಣವಚನ ಸ್ವೀಕರಿಸಿದ್ದಾರೆ.

    ಶನಿವಾರ ಬೆಳಗ್ಗೆ 11:45ರ ವೇಳೆಗೆ ರಾಜಭವನದ ಗಾಜಿನ ಮನೆಯಲ್ಲಿ 24 ಸಚಿವರಿಗೆ ರಾಜ್ಯದ ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಘೋಷಿಸಿದ್ದಾರೆ.

    ನೂತನ ಸಚಿವರು:
    ಶಿವಾನಂದ ಪಾಟೀಲ್ – ಲಿಂಗಾಯತ (ಬಸವನಬಾಗೇವಾಡಿ), ಎನ್‌ಎಸ್ ಮಲ್ಲಿಕಾರ್ಜುನ್- ಲಿಂಗಾಯತ (ದಾವಣಗೆರೆ ಉತ್ತರ), ಹೆಚ್.ಕೆ.ಪಾಟೀಲ್ – ರೆಡ್ಡಿ ಲಿಂಗಾಯತ (ಗದಗ), ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ – ಒಕ್ಕಲಿಗ (ಬ್ಯಾಟರಾಯನಪುರ), ಚಲುವರಾಯ ಸ್ವಾಮಿ – ಒಕ್ಕಲಿಗ (ನಾಗಮಂಗಲ), ಕೆ. ವೆಂಕಟೇಶ್ – ಒಕ್ಕಲಿಗ (ಪಿರಿಯಾಪಟ್ಟಣ), ಎಚ್‌ಸಿ ಮಹದೇವಪ್ಪ – ಎಸ್‌ಸಿ – ಬಲಗೈ (ಟಿ.ನರಸೀಪುರ), ಈಶ್ವರ್ ಖಂಡ್ರೆ – ಲಿಂಗಾಯತ (ಭಾಲ್ಕಿ), ಕೆ.ಎನ್ ರಾಜಣ್ಣ- ಎಸ್‌ಟಿ (ಮಧುಗಿರಿ), ಶರಣ ಬಸಪ್ಪ ದರ್ಶನಾಪೂರ್, ಆರ್. ಬಿ ತಿಮ್ಮಾಪೂರ್, ಶಿವರಾಜ್ ತಂಗಡಗಿ, ಶರಣ ಪ್ರಕಾಶ್ ಪಾಟೀಲ್- ಲಿಂಗಾಯತ (ಸೇಡಂ), ಮಂಕಾಳ ವೈದ್ಯ – ಮೊಗವೀರ ( ಭಟ್ಕಳ), ಲಕ್ಷ್ಮಿ ಹೆಬ್ಬಾಳ್ಕರ್ – ಲಿಂಗಾಯತ (ಬೆಳಗಾವಿ ಗ್ರಾ.), ರಹೀಂ ಖಾನ್ – ಮುಸ್ಲಿಂ (ಬೀದರ್ ಉತ್ತರ), ಎಂ.ಸಿ ಸುಧಾಕರ್ – ಒಕ್ಕಲಿಗ (ಚಿಂತಾಮಣಿ), ಡಿ ಸುಧಾಕರ್, ಸಂತೋಷ್ ಲಾಡ್ – ಮರಾಠ (ಕಲಘಟಗಿ), ಬೋಸರಾಜು – ಕ್ಷತ್ರೀಯ (ಮಾಜಿ ಎಂಎಲ್‌ಸಿ), ಬೈರತಿ ಸುರೇಶ್ – ಕುರುಬ (ಹೆಬ್ಬಾಳ), ಮಧು ಬಂಗಾರಪ್ಪ – ಈಡಿಗ (ಸೊರಬ) ಹಾಗೂ ಬಿ. ನಾಗೇಂದ್ರ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದನ್ನೂ ಓದಿ: ಅಂತಿಮಗೊಂಡ ಸಚಿವರ ಪಟ್ಟಿ – ಯಾವ ಜಿಲ್ಲೆಗೆ ಎಷ್ಟು ಮಂತ್ರಿಗಿರಿ?

    ಸಂಪುಟದ ಎಲ್ಲ 34 ಸ್ಥಾನಗಳು ಭರ್ತಿಯಾಗಿದ್ದು, ಸಂಪುಟದಲ್ಲಿ 22 ಜಿಲ್ಲೆಗಳಿಗೆ ಮಂತ್ರಿ ಭಾಗ್ಯ ದೊರಕಿದೆ. 9 ಜಿಲ್ಲೆಗಳಿಗೆ ಸಂಪುಟದಲ್ಲಿ ಯಾವುದೇ ಸ್ಥಾನ ನೀಡಲಾಗಿಲ್ಲ. ಚಾಮರಾಜನಗರ, ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಕೋಲಾರ, ವಿಜಯನಗರ, ಹಾವೇರಿ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ 22 ಜಿಲ್ಲೆಗಳಿಗೆ ಮಂತ್ರಿ ಸ್ಥಾನಗಳು ದೊರೆತಿವೆ. ಇದನ್ನೂ ಓದಿ: ಸಿದ್ದು ಸಂಪುಟದಲ್ಲಿ ಹಲವರಿಗೆ ಸಚಿವ ಸ್ಥಾನ ಮಿಸ್

  • ಸೋಲುಂಡು ಪಕ್ಷಕ್ಕೆ ಶಾಕ್ ಕೊಟ್ಟ ಬೊಮ್ಮಾಯಿ ಸಂಪುಟದ ಸಚಿವರು

    ಸೋಲುಂಡು ಪಕ್ಷಕ್ಕೆ ಶಾಕ್ ಕೊಟ್ಟ ಬೊಮ್ಮಾಯಿ ಸಂಪುಟದ ಸಚಿವರು

    ಬೆಂಗಳೂರು : ಸಾಮಾನ್ಯವಾಗಿ ಸಂಪುಟದ ಸಚಿವರನ್ನು ಗೆಲುವಿನ ಕುದುರೆಗೆ ಹೋಲಿಸುತ್ತಾರೆ. ಸೋಲರಿಯದ ಹಾಗೂ ಮತ್ತೆ ಗೆಲ್ಲುವಂತಹ ಅಭ್ಯರ್ಥಿಗಳೆಂದು ಪರಿಗಣಿಸಿ ಸಿಎಂ ಬೊಮ್ಮಾಯಿ (Basavaraja Bommai) ಸಂಪುಟದ ಅನೇಕ ಸಚಿವರಿಗೆ (Minister) ಈ ಬಾರಿ ಬಿಜೆಪಿ ಟಿಕೇಟ್ ನೀಡಲಾಗಿತ್ತು. ಆದರೆ, ಮತದಾರರ ವಿಶ್ವಾಸ ಗೆಲ್ಲುವಲ್ಲಿ ಅನೇಕ ಸಚಿವರು ವಿಫಲರಾಗಿದ್ದಾರೆ.

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿದ್ದ ಹಲವು ಹಾಲಿ ಸಚಿವರು ಸೋಲುಂಡು ಬಿಜೆಪಿಗೆ ಶಾಕ್ ನೀಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಜಿದ್ದಾಜಿದ್ದಿ ಕಣವಾಗಿದ್ದ ಮುಧೋಳ ಕ್ಷೇತ್ರದಲ್ಲಿ ಮಾಜಿ ಡಿಸಿಎಂ, ಸಚಿವ ಗೋವಿಂದ ಕಾರಜೋಳ ಸೋಲು ಕಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಆರ್.ಬಿ. ತಿಮ್ಮಾಪುರ 70,478 ಮತಗಳನ್ನು ಪಡೆಯುವುದರ ಮೂಲಕ ಕಾರಜೋಳ ಅವರನ್ನು ಸೋಲಿಸಿದ್ದಾರೆ. ಕಾರಜೋಳ ಈ ಬಾರಿ 54,082 ಮತಗಳನ್ನು ಪಡೆದಿದ್ದು, 16396 ಅಂತರದಲ್ಲಿ ಕಾರಜೋಳ ಸೋತಿದ್ದಾರೆ.

    ಚಿಕ್ಕಬಳ್ಳಾಪೂರ ಕ್ಷೇತ್ರವು ಜಿದ್ದಾಜಿದ್ದಿ ಕಣವಾಗಿ ಮಾರ್ಪಟ್ಟಿತ್ತು.  ಆರೋಗ್ಯ ಸಚಿವ ಡಾ.ಕೆ ಸುಧಾಕರ್ ವಿರುದ್ಧ ಇದೇ ಮೊದಲ ಬಾರಿಗೆ ರಾಜಕೀಯ ಪ್ರವೇಶ ಮಾಡಿದ್ದ ಪ್ರದೀಪ್ ಈಶ್ವರ್ ಸ್ಪರ್ಧಿಸಿದ್ದರು. ಅಚ್ಚರಿ ಎನ್ನುವಂತೆ ಪ್ರದೀಪ್ ಗೆದ್ದು, ಸಚಿವರನ್ನೇ ಸೋಲಿಸಿದ್ದಾರೆ. ಪ್ರದೀಪ್ ಅವರು 85755 ಮತಗಳನ್ನು ಪಡೆದಿದ್ದರೆ, ಕೆ.ಸುಧಾಕರ್ 74068 ಮತಗಳನ್ನು ಪಡೆದು ಸೋಲನ್ನೊಪ್ಪಿಕೊಂಡಿದ್ದಾರೆ. ಇದನ್ನೂ ಓದಿ: Karnataka Election 2023 Result – ಕಾಂಗ್ರೆಸ್‌ 135, ಬಿಜೆಪಿ 65, ಜೆಡಿಎಸ್‌ 20 ಮುನ್ನಡೆ LIVE Updates

    ಸಚಿವ ಹಾಲ್ಲಪ್ಪ ಆಚಾರ್ಯ ಯಲಬುರ್ಗ ಕ್ಷೇತ್ರದಿಂದ ಈ ಬಾರಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದರು. ಪ್ರಬಲ ಸ್ಪರ್ಧಿಯಾಗಿದ್ದ ಬಸವರಾಜ ರಾಯರೆಡ್ಡಿಯನ್ನು ಸೋಲಿಸುವ ಪಣತೊಟ್ಟಿದ್ದರು. ಆದರೆ, ಈ ಬಾರಿ ಮತದಾರ ರಾಯರೆಡ್ಡಿಗೆ ಮಣೆ ಹಾಕಿದ್ದಾನೆ. ಬಸವರಾಜ ರಾಯರೆಡ್ಡಿ 92508 ಮತಗಳನ್ನು ಪಡೆದಿದ್ದರೆ, ಹಾಲಪ್ಪ 75461 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ.

    ಕೆ.ಆರ್ ಪೇಟೆ ಕ್ಷೇತ್ರದಿಂದ ಸ್ಪರ್ಧಿಸಿದ ನಾರಾಯಣಗೌಡ ಕೂಡ ಅಚ್ಚರಿ ಎನ್ನುವಂತೆ ಸೋಲು ಕಂಡಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಬಿ.ಎಲ್. ದೇವರಾಜ್, ಜೆಡಿಎಸ್ ಪಕ್ಷದ ಎಚ್.ಟಿ. ಮಂಜು ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಮಂಜು 79844 ಮತ ಪಡೆದು ಗೆಲುವಿನ ಪತಾಕಿ ಹಾರಿಸಿದರೆ, 57939 ಮತಗಳನ್ನು ಪಡೆಯುವುದರ ಮೂಲಕ ದೇವರಾಜ್ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. 37793 ಮತಗಳನ್ನು ಕೊಡುವ ಮೂಲಕ ನಾರಾಯಣಗೌಡ ಅವರನ್ನು ಮೂರನೇ ಸ್ಥಾನಕ್ಕೆ ತಳ್ಳಿದ್ದಾರೆ ಮತದಾರ.

    ಬಿಜೆಪಿ ಪಕ್ಷದ ಪ್ರಭಾವಿ ಸಚಿವರಾಗಿದ್ದ ಬಳ್ಳಾರಿ ಗ್ರಾಮಾಂತರ ಅಭ್ಯರ್ಥಿ ಬಿ.ಶ್ರೀರಾಮುಲು ಕೂಡ ಸೋಲುವ ಮೂಲಕ ಪಕ್ಷಕ್ಕೆ ಶಾಕ್ ನೀಡಿದ್ದಾರೆ. ಗೆಲ್ಲುವ ಕುದುರೆ ಎಂದೇ ಬಿಂಬಿತರಾಗಿದ್ದ ಶ್ರೀರಾಮುಲು ಅವರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಿ.ನಾಗೇಂದ್ರ 103030 ಮತಗಳನ್ನು ಪಡೆಯುವ ಮೂಲಕ ಸೋಲಿನ ರುಚಿ ಉಣಿಸಿದ್ದಾರೆ. ಶ್ರೀರಾಮುಲು 74031 ಮತಗಳನ್ನು ಪಡೆಯುವ ಮೂಲಕ ಸೋತಿದ್ದಾರೆ.

    ಅಲ್ಲದೇ ಹಿರೇಕೆರೂರು ಕ್ಷೇತ್ರದಲ್ಲಿ ಬಿ.ಸಿ. ಪಾಟೀಲ್, ಹೊಸಕೋಟೆ ಕ್ಷೇತ್ರದ ಎಂಟಿಬಿ ನಾಗರಾಜ, ಚಾಮರಾಜನಗರ ಮತ್ತು ವರುಣಾ ಕ್ಷೇತ್ರದಲ್ಲಿ ವಿ.ಸೋಮಣ್ಣ, ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಜೆ.ಸಿ ಮಾಧುಸ್ವಾಮಿ, ಬೀಳಗಿ ಕ್ಷೇತ್ರದಿಂದ ಮುರುಗೇಶ್ ನಿರಾಣಿ, ಕನಕಪುರ ಕ್ಷೇತ್ರದಿಂದ ಆರ್.ಅಶೋಕ್ ಸೋತಿದ್ದಾರೆ. ಆರ್. ಅಶೋಕ್ ಕನಕಪುರದಿಂದ ಸೋತರೆ, ಪದ್ಮನಾಭನಗರ ಮತಕ್ಷೇತ್ರದಿಂದ ಗೆದ್ದಿದ್ದಾರೆ.

    ಬೊಮ್ಮಾಯಿ ಸಂಪುಟದ ಸಚಿವರು

    ಗೋವಿಂದ ಕಾರಜೋಳ – ಜಲಸಂಪನ್ಮೂಲ ಖಾತೆ

    ಬಿ. ಶ್ರೀರಾಮುಲು – ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಖಾತೆ

    ವಿ. ಸೋಮಣ್ಣ – ವಸತಿ, ಮೂಲಸೌಕರ್ಯ ಇಲಾಖೆ

    ಜೆಸಿ ಮಾಧುಸ್ವಾಮಿ – ಸಣ್ಣ ನೀರಾವರಿ, ಕಾನೂನು, ಸಂಸದೀಯ ವ್ಯವಹಾರ

    ಮುರುಗೇಶ್ ನಿರಾಣಿ – ಬೃಹತ್ ಮತ್ತು ಮಧ್ಯಮ ಕೈಗಾರಿಕೆ

    ಡಾ. ಕೆ. ಸುಧಾರಕರ್ – ರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ

    ಎಂಟಿಬಿ ನಾಗರಾಜು – ಪೌರಾಡಳಿತ, ಸಣ್ಣ ಪ್ರಮಾಣದ ಕೈಗಾರಿಕೆಗಳು,

    ನಾರಾಯಣ ಗೌಡ – ಯುವಜನ ಮತ್ತು ಕ್ರೀಡೆ, ರೇಷ್ಮೆ

    ಬಿಸಿ ಪಾಟೀಲ್- ಕೃಷಿ

    ಬಿ.ಸಿ. ನಾಗೇಶ್- ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ

    ಹಾಲಪ್ಪ ಆಚಾರ್- ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ

  • ಸಚಿವರು ವಿಮಾನದ ಬ್ಯುಸಿನೆಸ್‌ ಕ್ಲಾಸ್‌ನಲ್ಲಿ ಪ್ರಯಾಣಿಸುವಂತಿಲ್ಲ, 5 ಸ್ಟಾರ್‌ ಹೋಟೆಲ್‌ನಲ್ಲಿ ಉಳಿಯುವಂತಿಲ್ಲ – ಪಾಕ್‌ ಸರ್ಕಾರ

    ಸಚಿವರು ವಿಮಾನದ ಬ್ಯುಸಿನೆಸ್‌ ಕ್ಲಾಸ್‌ನಲ್ಲಿ ಪ್ರಯಾಣಿಸುವಂತಿಲ್ಲ, 5 ಸ್ಟಾರ್‌ ಹೋಟೆಲ್‌ನಲ್ಲಿ ಉಳಿಯುವಂತಿಲ್ಲ – ಪಾಕ್‌ ಸರ್ಕಾರ

    ಇಸ್ಲಾಮಾಬಾದ್: ಸಚಿವರು ಇನ್ಮುಂದೆ ವಿಮಾನದ ಬ್ಯುಸಿನೆಸ್‌ ಕ್ಲಾಸ್‌ನಲ್ಲಿ ಪ್ರಯಾಣ ಮಾಡುವಂತಿಲ್ಲ. ಅಷ್ಟೇ ಅಲ್ಲದೇ ಪಂಚತಾರಾ ಹೋಟೆಲ್‌ಗಳಲ್ಲಿ ಉಳಿಯುವಂತಿಲ್ಲ ಎಂದು ಪಾಕಿಸ್ತಾನ ಸರ್ಕಾರ (Pakistan Government) ಸೂಚನೆ ನೀಡಿದೆ.

    ತಮ್ಮ ಸಂಬಳವನ್ನು ಕಡಿತ ಮಾಡಲು ಒಪ್ಪಿಕೊಂಡಿದ್ದಕ್ಕೆ ಸಚಿವರಿಗೆ ಧನ್ಯವಾದಗಳು ಎಂದು ಸರ್ಕಾರ ಹೇಳಿದೆ. ಹಣದುಬ್ಬರ, ಸಾಲದ ಹೊರೆ ತಪ್ಪಿಸಲು ವೆಚ್ಚ ಕಡಿತದ ಕ್ರಮಗಳನ್ನು ಸರ್ಕಾರ ಅನಾವರಣಗೊಳಿಸಿದೆ. ಜುಲೈನಲ್ಲಿ ಮುಂದಿನ ಬಜೆಟ್‌ನಲ್ಲಿ ಸರ್ಕಾರವು ಮತ್ತಷ್ಟು ಕಠಿಣ ಕ್ರಮಗಳನ್ನು ಅನುಸರಿಸಲಿದೆ ಎಂದು ಪ್ರಧಾನಿ ಶೆಹಬಾಜ್ ಷರೀಫ್ (Shehbaz Sharif) ಹೇಳಿದ್ದಾರೆ. ಇದನ್ನೂ ಓದಿ: ರಷ್ಯಾ, ಉಕ್ರೇನ್ ಯುದ್ಧಕ್ಕೆ 1 ವರ್ಷ – ಮತದಾನದಿಂದ ದೂರ ಉಳಿದ ಭಾರತ

    ಇಸ್ಲಾಮಾಬಾದ್‌ನಲ್ಲಿ ನಡೆದ ಕ್ಯಾಬಿನೆಟ್ ಸಭೆಯ ನಂತರ ಮಾತನಾಡಿದ ಅವರು, ಇದು ಈ ಸಮಯದ ಅಗತ್ಯವಾಗಿದೆ. ಸಮಯವು ನಮ್ಮಿಂದ ಸಂಯಮ, ಸರಳತೆ ಮತ್ತು ತ್ಯಾಗವನ್ನು ಬಯಸಿದೆ ಎಂದು ಷರೀಫ್‌ ತಿಳಿಸಿದ್ದಾರೆ. ಇದನ್ನೂ ಓದಿ: Allah ಮೋದಿಯನ್ನು ನಮಗೆ ಕೊಡು, ಅವರೇ ನಮ್ಮ ದೇಶ ಆಳಲಿ: ದೇವರ ಮೊರೆಹೋದ ಪಾಕ್ ಪ್ರಜೆ

    ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ 5ನೇ ರಾಷ್ಟ್ರವಾಗಿರುವ ಪಾಕಿಸ್ತಾನ ದೇಶವು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ. ದೇಶದ ದುರ್ಬಲ ಪರಿಸ್ಥಿತಿ ವಿರುದ್ಧ ಜನಸಾಮಾನ್ಯರು ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ. ಬಿಕಟ್ಟಿನ ಸನ್ನಿವೇಶ ನಿಭಾಯಿಸಲು ಸರ್ಕಾರವು ಕಠಿಣ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಉನ್ನತ ಶ್ರೇಣಿಯ ಸರ್ಕಾರಿ ಅಧಿಕಾರಿಗಳಲ್ಲದೆ ಹಲವಾರು ಫೆಡರಲ್ ಮತ್ತು ರಾಜ್ಯ ಸಚಿವರು ತಮ್ಮ ಸಂಬಳ ಮತ್ತು ಸವಲತ್ತುಗಳನ್ನು ತ್ಯಜಿಸಲು ಸ್ವಯಂಪ್ರೇರಿತರಾಗಿ ಮುಂದೆ ಬಂದಿದ್ದಾರೆ ಎಂದು ಷರೀಫ್ ಹೇಳಿದರು. ಮುಂದಿನ ವರ್ಷದವರೆಗೆ ಐಷಾರಾಮಿ ವಸ್ತುಗಳು ಮತ್ತು ಕಾರುಗಳ ಖರೀದಿಯನ್ನು ಸರ್ಕಾರ ನಿಷೇಧಿಸಿದೆ ಎಂದು ಮಾಹಿತಿ ನೀಡಿದ್ದಾರೆ.

    ಏತನ್ಮಧ್ಯೆ, ಸ್ಟೇಟ್ ಬ್ಯಾಂಕ್ ಆಫ್ ಪಾಕಿಸ್ತಾನ್ (SBP) 2022ರ ಆರಂಭದಿಂದ ಬೆಂಚ್‌ಮಾರ್ಕ್ ದರವನ್ನು 725 ಬೇಸಿಸ್ ಪಾಯಿಂಟ್‌ಗಳಿಂದ ಹೆಚ್ಚಿಸಿದೆ. SBP ತನ್ನ ಮುಂದಿನ ನೀತಿ ಪರಾಮರ್ಶೆಯನ್ನು ಮಾರ್ಚ್ 16 ರಂದು ನಡೆಸಲಿದೆ. ಇದನ್ನೂ ಓದಿ: ಯೋಧರಿಗೆ ಆಹಾರ ನೀಡಲು ಒದ್ದಾಡುತ್ತಿದೆ ಪಾಕ್!

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮಹಾರಾಷ್ಟ್ರದ ಇಬ್ಬರು ಸಚಿವರು, ಓರ್ವ ಸಂಸದ ಗಡಿ ಪ್ರವೇಶಕ್ಕೆ ನಿಷೇಧ – ಬೆಳಗಾವಿ ಡಿಸಿ ಆದೇಶ

    ಮಹಾರಾಷ್ಟ್ರದ ಇಬ್ಬರು ಸಚಿವರು, ಓರ್ವ ಸಂಸದ ಗಡಿ ಪ್ರವೇಶಕ್ಕೆ ನಿಷೇಧ – ಬೆಳಗಾವಿ ಡಿಸಿ ಆದೇಶ

    ಬೆಳಗಾವಿ: ಮಹಾರಾಷ್ಟ್ರದ ಇಬ್ಬರು ಸಚಿವರು, ಓರ್ವ ಸಂಸದನ ಗಡಿ ಪ್ರವೇಶಕ್ಕೆ ನಿಷೇಧ ಹೇರಿ ಬೆಳಗಾವಿ ಡಿಸಿ ನಿತೇಶ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.

    ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿದ ಡಿಸಿ ನಿತೇಶ್ ಪಾಟೀಲ್, ಮಹಾರಾಷ್ಟ್ರದ ಇಬ್ಬರು ಸಚಿವರು, ಓರ್ವ ಸಂಸದನ ಗಡಿ ಪ್ರವೇಶಕ್ಕೆ ಸಿಆರ್‌ಪಿಸಿ 1973 ಕಲಂ 144(3)ರ ಅನ್ವಯ ಪ್ರದತ್ತ ಅಧಿಕಾರ ಬಳಸಿ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಗಡಿ ಪ್ರವೇಶಿಸದಂತೆ ನಿರ್ಬಂಧಿತ ಆದೇಶ ಮಾಡಿದ್ದಾರೆ. ಇದನ್ನೂ ಓದಿ: 47 ವರ್ಷದ ಹೋರಾಟದ ಬಳಿಕ ದತ್ತಪೀಠದಲ್ಲಿ ನೆರವೇರಿತು ಹಿಂದೂ ಅರ್ಚಕರಿಂದ ಪೂಜೆ

    ಮಹಾರಾಷ್ಟ್ರದ ಗಡಿ ಸಮನ್ವಯ ಸಚಿವ ಚಂದ್ರಕಾಂತ್ ಪಾಟೀಲ್, ಶಂಭುರಾಜ್ ದೇಸಾಯಿ ಹಾಗೂ ಮಹಾರಾಷ್ಟ್ರದ ಗಡಿತಜ್ಞ ಸಮಿತಿ ಅಧ್ಯಕ್ಷ, ಸಂಸದ ಧೈರ್ಯಶೀಲ್ ಮಾನೆಗೆ ನಿಷೇಧ ಹೊರಡಿಸಲಾಗಿದೆ. ಇದನ್ನೂ ಓದಿ: ಮಹಾರಾಷ್ಟ್ರ ಸಚಿವರ ಬೆಳಗಾವಿ ಭೇಟಿ ರದ್ದಾಗುವ ಸುಳಿವು – ಸಿಎಂ ನಿರ್ಧರಿಸುತ್ತಾರೆ ಎಂದ ದೇವೇಂದ್ರ ಫಡ್ನವಿಸ್

    ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಡಿಸಿ ಕ್ರಮ ಕೈಗೊಂಡಿದ್ದಾರೆ. ಮಹಾರಾಷ್ಟ್ರದ ಸಚಿವರ ಆಗಮನದ ಹಿನ್ನೆಲೆ ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆ ಇದೆ. ಭಾಷಾ ವೈಷಮ್ಯ ಬೆಳೆದು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯುಂಟಾಗುವ ಸಾಧ್ಯತೆ ಇದೆ. ಹೀಗಾಗಿ ಸಾರ್ವಜನಿಕರ ನೆಮ್ಮದಿ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮ ಕೈಗೊಂಡು ಬೆಳಗಾವಿ ಜಿಲ್ಲೆಯ ಗಡಿ ಪ್ರವೇಶಿಸದಂತೆ ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಹಾರಾಷ್ಟ್ರ ಸಚಿವರ ಬೆಳಗಾವಿ ಭೇಟಿ ರದ್ದಾಗುವ ಸುಳಿವು – ಸಿಎಂ ನಿರ್ಧರಿಸುತ್ತಾರೆ ಎಂದ ದೇವೇಂದ್ರ ಫಡ್ನವಿಸ್

    ಮಹಾರಾಷ್ಟ್ರ ಸಚಿವರ ಬೆಳಗಾವಿ ಭೇಟಿ ರದ್ದಾಗುವ ಸುಳಿವು – ಸಿಎಂ ನಿರ್ಧರಿಸುತ್ತಾರೆ ಎಂದ ದೇವೇಂದ್ರ ಫಡ್ನವಿಸ್

    ಬೆಳಗಾವಿ: ಮಹಾರಾಷ್ಟ್ರ (Maharashtra) ಗಡಿ ಸಮನ್ವಯಕ್ಕೆ ಸಚಿವರ (Ministers) ಬೆಳಗಾವಿ (Belagavi) ಭೇಟಿ ರದ್ದಾಗುವ ಬಗ್ಗೆ ಅನುಮಾನ ಮೂಡಿದೆ. ಈ ಬಗ್ಗೆ ಮಹಾರಾಷ್ಟ್ರ ಡಿಸಿಎಂ ಪರೋಕ್ಷವಾಗಿ ಸುಳಿವು ನೀಡಿದ್ದಾರೆ. ಮಹಾರಾಷ್ಟ್ರ ಸಚಿವರ ಬೆಳಗಾವಿ ಭೇಟಿ ಬಗ್ಗೆ ಸಿಎಂ ನಿರ್ಧರಿಸುತ್ತಾರೆ ಎಂದು ಮುಂಬೈನಲ್ಲಿ ಮಹಾರಾಷ್ಟ್ರದ ಡಿಸಿಎಂ ದೇವೇಂದ್ರ ಫಡ್ನವಿಸ್ (Devendra Fadnavis) ಹೇಳಿದ್ದಾರೆ.

    ಮುಂಬೈನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಡಿ ವಿವಾದ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಕರ್ನಾಟಕ ಆಗಲಿ, ಮಹಾರಾಷ್ಟ್ರ ಆಗಲಿ ನಿರ್ಣಯ ಕೈಗೊಳ್ಳಲಾಗುವುದಿಲ್ಲ. ಏನೇ ನಿರ್ಣಯ ಕೈಗೊಳ್ಳಬೇಕಿದ್ದರೂ ಸುಪ್ರೀಂ ಕೋರ್ಟ್ ತಗೆದುಕೊಳ್ಳುತ್ತದೆ. ಈ ಸಂದರ್ಭದಲ್ಲಿ ಯಾವುದೇ ಹೊಸ ವಿವಾದ ಸೃಷ್ಟಿಸುವುದು ಯೋಗ್ಯವಲ್ಲ. ಸುಪ್ರೀಂ ಕೋರ್ಟ್‌ನಲ್ಲಿ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದಿದ್ದಾರೆ.

    ನಾಳೆ ಮಹಾಪರಿನಿರ್ವಾಹಣ ದಿನದ ನಿಮಿತ್ತ ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಭೇಟಿ ನೀಡಲಿದ್ದರು. ಸಚಿವರು ಕೈಗೊಂಡ ನಿರ್ಣಯ ಯಾರೂ ತಡೆಯಲು ಸಾಧ್ಯವಿಲ್ಲ. ಆದರೆ ಮಹಾಪರಿನಿರ್ವಾಹಣ ದಿನ ನಾವು ಈ ರೀತಿ ವಾದ ಸೃಷ್ಟಿಸುವುದು ಸರಿಯೇ? ನಾವು ಈ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ಈ ಬಗ್ಗೆ ಸಿಎಂ ಏಕನಾಥ್ ಶಿಂಧೆ ಸೂಕ್ತ ನಿರ್ಣಯ ಕೈಗೊಳ್ಳುತ್ತಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜೋಡೋ ಯಾತ್ರೆ ವೇಳೆ ಮೋದಿ ಪರ ಘೋಷ – ತಲೆಕೆಡಿಸಿಕೊಳ್ಳದೇ ಗಾಳಿಯಲ್ಲಿ ಮುತ್ತು ತೇಲಿಸಿದ ರಾಗಾ

    ಮಹಾಪರಿನಿರ್ವಾಹಣ ದಿನ ಅತ್ಯಂತ ಮಹತ್ವದ ದಿನ. ಅಂದು ಯಾವುದೇ ಅಹಿತಕರ ಘಟನೆ ಆಗಬಾರದು. ಈ ದಿನ ಯಾವುದೇ ಪ್ರತಿಭಟನೆ ಆಗುವುದು ಯೋಗ್ಯವಲ್ಲ. ಭವಿಷ್ಯದಲ್ಲಿ ನಾವು ಬೆಳಗಾವಿಗೆ ಹೋಗೋದನ್ನು ಯಾರಿಂದಲೂ ತಡೆಯಲು ಆಗುವುದಿಲ್ಲ. ಸ್ವತಂತ್ರ್ಯ ಭಾರತದ ಯಾವುದೇ ಪ್ರದೇಶಕ್ಕೆ ಹೋಗಲು ಯಾರೂ ಯಾರನ್ನೂ ತಡೆಯಲಾಗಲ್ಲ. ಮಹಾಪರಿನಿರ್ವಾಹಣ ದಿನ ಇರುವುದರಿಂದ ಬೆಳಗಾವಿ ಭೇಟಿ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಅಂತಿಮ ನಿರ್ಧಾರ ಸಿಎಂ ಕೈಗೊಳ್ಳುತ್ತಾರೆ ಎಂದು ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ. ಇದನ್ನೂ ಓದಿ: Gujarat Exit Poll Result: ಗುಜರಾತ್‌ನಲ್ಲಿ ಸತತ 7ನೇ ಬಾರಿ ಬಿಜೆಪಿಗೆ ಅಧಿಕಾರ

    Live Tv
    [brid partner=56869869 player=32851 video=960834 autoplay=true]

  • ಆರ್ಥಿಕ ಇಲಾಖೆಯೇ ಎಲ್ಲಾ ಮಾಡಬೇಕಾದ್ರೆ ಸಚಿವರು ಯಾಕೆ ಬೇಕು? ಆಯನೂರು ಮಂಜುನಾಥ್ ಆಕ್ರೋಶ

    ಆರ್ಥಿಕ ಇಲಾಖೆಯೇ ಎಲ್ಲಾ ಮಾಡಬೇಕಾದ್ರೆ ಸಚಿವರು ಯಾಕೆ ಬೇಕು? ಆಯನೂರು ಮಂಜುನಾಥ್ ಆಕ್ರೋಶ

    ಬೆಂಗಳೂರು: ಸರ್ಕಾರದ ವಿರುದ್ಧ ಆಡಳಿತ ಪಕ್ಷದ ಸದಸ್ಯರೇ ಆಕ್ರೋಶಗೊಂಡು, ತರಾಟಗೆ ತೆಗೆದುಕೊಂಡ ಘಟನೆ ಇಂದು ವಿಧಾನ ಪರಿಷತ್‌ನಲ್ಲಿ (Karnataka Legislative Assembly Session) ನಡೆಯಿತು.

    ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಸದಸ್ಯ ಸಂಕನೂರು‌, ಅನುದಾನಿತ ಶಾಲೆಗಳ ಶಿಕ್ಷಕರ ನೇಮಕಾತಿ ಬಗ್ಗೆ ಪ್ರಶ್ನೆ ಕೇಳಿದರು. ಇದಕ್ಕೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (B.C.Nagesh) ಅವರು ಆರ್ಥಿಕ ಇಲಾಖೆ ಕಡೆ ಬೊಟ್ಟು ಮಾಡಿ ತೋರಿಸಿದರು. ಇದನ್ನೂ ಓದಿ: ಅಕ್ಟೋಬರ್ ಅಂತ್ಯಕ್ಕೆ ರಾಜ್ಯದಲ್ಲಿ ನಮ್ಮ ಕ್ಲಿನಿಕ್ ಸಂಪೂರ್ಣ ಪ್ರಾರಂಭ: ಸುಧಾಕರ್

    ಇದಕ್ಕೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಸದಸ್ಯ ಆಯನೂರು ಮಂಜುನಾಥ್ (Ayanur Manjunath), ಸಚಿವರ ವಿರುದ್ದ ಕಿಡಿಕಾರಿದರು. ಎಲ್ಲಾ ಪ್ರಶ್ನೆಗೂ ಆರ್ಥಿಕ ಇಲಾಖೆ ಅನುಮತಿ ಬೇಕು ಅನ್ನೋದು ಯಾಕೆ? ಹಾಗಾದ್ರೆ ಸಚಿವರು ಯಾಕೆ ಕೆಲಸ ಮಾಡಬೇಕು. ಮತ್ತೆ ಸಚಿವರು ಹೀಗೆ ಬೇಜವಾಬ್ದಾರಿ ಉತ್ತರ ಕೊಡಬಾರದು ಅಂತ ಕಿಡಿಕಾರಿದರು.

    ಯಾವುದೇ ಇಲಾಖೆಗೆ ಅರ್ಥಿಕ ಇಲಾಖೆ ಬಳಿ ಹಣ ಪಡೆಯೋದು ನಿಮ್ಮ ಕರ್ತವ್ಯ. ಅದು ಬಿಟ್ಟು ಇಲಾಖೆ ಮೇಲೆ ಬೊಟ್ಟು ತೋರಿಸಿದ್ರೆ ಹೇಗೆ? ಇದು ಸರಿಯಾದ ಉತ್ತರ ಅಲ್ಲ. ಇನ್ಯಾವತ್ತೂ ಆರ್ಥಿಕ ಇಲಾಖೆ ಅನುಮತಿ ಅಂತ ಹೇಳಬಾರದು. ಈ‌ ಬಗ್ಗೆ ಸಚಿವರು ಸರಿಯಾಗಿ ಅರ್ಥ ಮಾಡಿಕೊಂಡು ಉತ್ತರ ಕೊಡಬೇಕು ಎಂದು ಸಚಿವರ ಮೇಲೆ ಗರಂ ಆದರು. ಇದನ್ನೂ ಓದಿ: ಡಿಸೆಂಬರ್ ವೇಳೆಗೆ ಶಾಲೆಗಳಲ್ಲಿ ಭಗವದ್ಗೀತೆ ಬೋಧನೆ: ಬಿ.ಸಿ.ನಾಗೇಶ್

    ಸಂಕನೂರು ಪ್ರಶ್ನೆಗೂ ಮುನ್ನ ಆರೋಗ್ಯ ಸಚಿವರಿಗೆ ಆಯನೂರು ಕೇಳಿದಾಗಲೂ, ಆರ್ಥಿಕ ಇಲಾಖೆ ಜೊತೆ ಚರ್ಚೆ ಆಗಬೇಕು ಎಂದು ಸುಧಾಕರ್ (Dr. K.Shudhakar) ಹೇಳಿದ್ದರು. ಈ ಹಿನ್ನಲೆಯಲ್ಲಿ ಸಿಟ್ಟಾಗಿ‌ ಸಚಿವರ ಮೇಲೆ ಅಸಮಾಧಾನ ಹೊರ ಹಾಕಿದರು.

    Live Tv
    [brid partner=56869869 player=32851 video=960834 autoplay=true]