Tag: ಸಚಿವರು

  • ನವಾಬ್‌ ಮಲಿಕ್‌ ವಿರುದ್ಧ ಸಮೀರ್‌ ವಾಂಖೆಡೆ ತಂದೆಯಿಂದ ದೂರು ದಾಖಲು

    ನವಾಬ್‌ ಮಲಿಕ್‌ ವಿರುದ್ಧ ಸಮೀರ್‌ ವಾಂಖೆಡೆ ತಂದೆಯಿಂದ ದೂರು ದಾಖಲು

    ಮುಂಬೈ: ಮಹಾರಾಷ್ಟ್ರ ಸಚಿವ ನವಾಬ್‌ ಮಲಿಕ್‌ ವಿರುದ್ಧ ಎನ್‌ಸಿಬಿ ಮುಂಬೈ ವಲಯ ನಿರ್ದೇಶಕ ಸಮೀರ್‌ ವಾಂಖೆಡೆ ಅವರ ತಂದೆ ಧ್ಯಾನ್‌ದೇವ್‌ ವಾಂಖೆಡೆ ಅವರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ಒಷಿವಾರ ಘಟಕದ ಸಹಾಯಕ ಪೊಲೀಸ್‌ ಕಮಿಷನರ್‌ಗೆ ದೂರು ನೀಡಿದ್ದಾರೆ. ನನ್ನ ಪುತ್ರ ಹಾಗೂ ಕುಟುಂಬದ ಬಗ್ಗೆ ಜಾತಿ ವಿಚಾರವಾಗಿ ಸಚಿವರು ಸುಳ್ಳು ಸುದ್ದಿ ಹರಡಿದ್ದಾರಲ್ಲದೇ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರ ವಿರುದ್ಧ ಎಸ್ಸಿ/ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಧ್ಯಾನ್‌ದೇವ್‌ ವಾಂಖೆಡೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಅಗ್ನಿ ಅವಘಡ- ICUನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 3 ಶಿಶುಗಳು ಸಾವು

    ನಮ್ಮ ಕುಟುಂಬದ ಜಾತಿ ಬಗ್ಗೆ ಸಚಿವ ನವಾಬ್‌ ಮಲಿಕ್‌ ಅವರು ಅಪಪ್ರಚಾರ ಮಾಡುತ್ತಿದ್ದಾರೆ. ನಾವು ಮಹರ್‌ ಸಮುದಾಯಕ್ಕೆ ಸೇರಿದವರಾಗಿದ್ದು, ಅದು ಪರಿಶಿಷ್ಟ ಜಾತಿ ವರ್ಗಕ್ಕೆ ಬರುತ್ತದೆ ಎಂದು ವಾಂಖೆಡೆ ತಿಳಿಸಿದ್ದಾರೆ.

    ಸಚಿವ ಮಲಿಕ್‌ ಅವರು ನಮ್ಮ ಮೇಲಿನ ದ್ವೇಷದ ಕಾರಣದಿಂದಾಗಿ ನನ್ನ ಮಗಳು ಯಾಸ್ಮೀನ್‌ ಅವರನ್ನು ಆನ್‌ಲೈನ್‌ನಲ್ಲಿ ಹಿಂಬಾಲಿಸುವ ಮಟ್ಟಕ್ಕೆ ಇಳಿದಿದ್ದಾರೆ. ಅಲ್ಲದೇ ಇನ್‌ಸ್ಟಾಗ್ರಾಂ, ಫೇಸ್‌ಬುಕ್‌ ಮುಂತಾದ ಸಾಮಾಜಿಕ ಜಾಲತಾಣದಲ್ಲಿ ಆಕೆಯ ವೈಯಕ್ತಿಕ ಛಾಯಾಚಿತ್ರಗಳನ್ನು ವೈರಲ್‌ ಮಾಡಿದ್ದಾರೆ ಎಂದು ವಾಂಖೆಡೆ ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಪುನೀತ್ ರಾಜ್‌ಕುಮಾರ್‌ಗೆ ಪದ್ಮಶ್ರೀ ಪ್ರಶಸ್ತಿ ನೀಡುವಂತೆ ಶ್ರೀರಾಮ ಸೇನೆ ಆಗ್ರಹ

    ARYAN

    ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ನಟ ಶಾರೂಖ್‌ ಖಾನ್‌ ಅವರ ಪುತ್ರ ಆರ್ಯನ್‌ ಖಾನ್‌ ಅವರನ್ನು ಬಂಧಿಸಲಾಗಿತ್ತು. ಆರ್ಯನ್‌ ಖಾನ್‌ ಬಿಡುಗಡೆ ಮಾಡಲು ಲಂಚ ನೀಡುವಂತೆ ಶಾರೂಖ್‌ ಅವರಿಗೆ ಬೇಡಿಕೆ ಇಟ್ಟಿದ್ದರು ಎಂದು ವಾಂಖೆಡೆ ಅವರ ವಿರುದ್ಧ ಸಚಿವ ನವಾಬ್‌ ಮಲಿಕ್‌ ಗಂಭೀರ ಆರೋಪ ಮಾಡಿದ್ದರು. ಅಲ್ಲದೇ ಜಾತಿ ಹೆಸರಿನಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ್ದರು.

  • ಆಟೋ ಚಾಲಕರ ಸಂಘಕ್ಕೆ ವಾರ್ಷಿಕ 1 ಲಕ್ಷ ರೂ. ಸಹಾಯಧನ: ಸಚಿವ ಕೆ.ಗೋಪಾಲಯ್ಯ

    ಆಟೋ ಚಾಲಕರ ಸಂಘಕ್ಕೆ ವಾರ್ಷಿಕ 1 ಲಕ್ಷ ರೂ. ಸಹಾಯಧನ: ಸಚಿವ ಕೆ.ಗೋಪಾಲಯ್ಯ

    ಬೆಂಗಳೂರು: ಪ್ರತಿ ತಿಂಗಳು ಪ್ರತಿಯೊಬ್ಬ ಆಟೋ ಚಾಲಕ 500 ರೂ. ಉಳಿತಾಯ ಮಾಡಿದರೆ, ಸಂಘಕ್ಕೆ ವಾರ್ಷಿಕ 1 ಲಕ್ಷ ರೂ. ಸಹಾಯಧನ ನೀಡುತ್ತೇವೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.

    ಮಹಾಲಕ್ಷ್ಮಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ಭಾನುವಾರ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶ್ರಮಿಕ ವರ್ಗವಾದ ನೀವು ಆರ್ಥಿಕ ಉಳಿತಾಯಕ್ಕೆ ಹೆಚ್ಚು ಒತ್ತು ನೀಡಬೇಕೆಂದು ಸಲಹೆ ನೀಡಿದರು. ಇದನ್ನೂ ಓದಿ: ನ್ಯುಮೋನಿಯಾದಿಂದ ಮೃತಪಟ್ಟ ಪತ್ನಿಯ ನೆನಪಲ್ಲಿ ಮೂರ್ತಿ ಪ್ರತಿಷ್ಠಾಪಿಸಿದ ಪತಿ!

    ನಿಮ್ಮದೇ ಆದ ಸಂಘ ಮಾಡಿಕೊಂಡು ಅದರಲ್ಲಿ ಉಳಿತಾಯ ಮಾಡುತ್ತ ಬನ್ನಿ. ಪ್ರತಿ ತಿಂಗಳು ಪ್ರತಿಯೊಬ್ಬ ಆಟೋಚಾಲಕ 500 ರೂ ಉಳಿತಾಯ ಮಾಡಿದರೆ ನಾನು ಸಂಘಕ್ಕೆ ವರ್ಷಕ್ಕೆ ಒಂದು ಲಕ್ಷ ರೂ. ಸಹಾಯಧನ ನೀಡುತ್ತೇನೆ ಎಂದರು. ಇದನ್ನೂ ಓದಿ: ದಕ್ಷಿಣ ಕನ್ನಡ: ದಾರಿಯಲ್ಲಿ ಐದು ಗ್ರಾನೈಡ್ ಪತ್ತೆ!

    ಇದೇ ವೇಳೆ ನಟ ಪುನೀತ್‌ ಅವರನ್ನು ಸ್ಮರಿಸಿದ ಸಚಿವರು, ಪುನೀತ್ ರಾಜ್‌ಕುಮಾರ್ ಅವರ ನಿಧನದ ನೋವಿನಿಂದ ನಾನೂ ಸೇರಿದಂತೆ ನಾಡಿನ ಅಪಾರ ಅಭಿಮಾನಿಗಳು, ಹಿತೈಷಿಗಳು ಹೊರಬಂದಿಲ್ಲ. ಅವರ ನಿಧನ ರಾಜ್ಯಕ್ಕೆ ಮತ್ತು ಕನ್ನಡ ಸಿನಿಮಾ ರಂಗಕ್ಕೆ ತುಂಬಲಾರದ ನಷ್ಟ ಉಂಟು ಮಾಡಿದೆ ವಿಷಾದಿಸಿದರು. ಈ ಸಂದರ್ಭದಲ್ಲಿ ಗೆಳೆಯರ ಬಳಗ ಸೇರಿದಂತೆ ವಿವಿಧ ಕನ್ನಡ ಪರ ಮತ್ತು ಆಟೋಚಾಲಕರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

  • ದೀಪಾವಳಿ: ನಂಜನಗೂಡಿನಲ್ಲಿ ಗೋಪೂಜೆ ಮಾಡಿದ ಸಚಿವ ಸೋಮಶೇಖರ್‌

    ದೀಪಾವಳಿ: ನಂಜನಗೂಡಿನಲ್ಲಿ ಗೋಪೂಜೆ ಮಾಡಿದ ಸಚಿವ ಸೋಮಶೇಖರ್‌

    ನಂಜನಗೂಡು: ಬಲಿಪಾಡ್ಯಮಿ ದಿನವಾದ ಶುಕ್ರವಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ನಂಜುಂಡೇಶ್ವರ ದೇವಸ್ಥಾನದಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸಿದರು.

    ದೀಪಾವಳಿ ಹಬ್ಬದ ಪ್ರಯುಕ್ತ ನಂಜನಗೂಡಿಗೆ ಆಗಮಿಸಿದ ಸಚಿವರು ನಂಜುಂಡೇಶ್ವರನ ಸನ್ನಿಧಾನದಲ್ಲಿ ಗೋವುಗಳಿಗೆ ಹಾರ ಹಾಕಿ ಪೂಜೆ ಸಲ್ಲಿಸಿದರು. ನಂತರ ನಂಜುಂಡೇಶ್ವರನಿಗೆ ಪೂಜೆ ಸಲ್ಲಿಸಿದರು. ಇದನ್ನೂ ಓದಿ: ಸ್ವರ್ಗದಲ್ಲಿ ಅಪ್ಪ, ಅಮ್ಮನೊಂದಿಗೆ ಪುನೀತ್ – ಫೋಟೋ ವೈರಲ್

    ಬಳಿಕ ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದ ಬಳಿ ಹಮ್ಮಿಕೊಂಡಿದ್ದ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಉತ್ತರಾಖಂಡದ ಕೇದಾರನಾಥದಲ್ಲಿ ಆದಿ ಶಂಕರಾಚಾರ್ಯರ ನವೀಕೃತ ಪ್ರತಿಮೆ ಉದ್ಘಾಟನೆ ಮಾಡಿದ ನೇರ ಪ್ರಸಾರದ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

    ಕೇದಾರನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ ಶಂಕರಾಚಾರ್ಯರ ಪ್ರತಿಮೆಯನ್ನು ಕೆತ್ತಿದ್ದು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಎಂಬುದನ್ನು ತಿಳಿದು ಸಚಿವರು ಸಂತಸ ವ್ಯಕ್ತಪಡಿಸಿದರು. 12 ಅಡಿ ಎತ್ತರ, 35 ಟನ್ ತೂಕದ ಕುಳಿತ ಭಂಗಿಯಲ್ಲಿರುವ ಶಂಕರಾಚಾರ್ಯರ ಪ್ರತಿಮೆಗೆ ಹೆಗ್ಗಡದೇವನಕೋಟೆಯಿಂದ 120 ಟನ್ ಕೃಷ್ಣ ಶಿಲೆ ಬಳಸಿದ ವಿಚಾರ ತಿಳಿದು ಖುಷಿಪಟ್ಟರು. ಇದನ್ನೂ ಓದಿ: ವಿಜಯಪುರದಲ್ಲಿ ಮತ್ತೆ ಸರಣಿ ಭೂಕಂಪದ ಅನುಭವ

    14 ಲಕ್ಷ ರೈತರಿಗೆ 10203.52 ಕೋಟಿ ರೂ. ಸಾಲ
    ದೇವಸ್ಥಾನದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಅಲ್ಪಾವಧಿ, ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲ ನೀಡಲಾಗುತ್ತಿದೆ. 30 ಲಕ್ಷ ರೈತರಿಗೆ 20810 ಕೋಟಿ ರೂ. ಸಾಲ ವಿತರಣೆ ಗುರಿ ನೀಡಲಾಗಿದ್ದು, ಇದರಲ್ಲಿ 14 ಲಕ್ಷ ರೈತರಿಗೆ 10203.52 ಕೋಟಿ ರೂ. ಸಾಲ ನೀಡಲಾಗಿದೆ ಎಂದು ಹೇಳಿದರು.

    ಮೈಸೂರು ಜಿಲ್ಲೆಯಲ್ಲಿ ಮಳೆ ಹಾನಿಯಿಂದ ಉಂಟಾಗಿರುವ ನಷ್ಟ ಹಾಗೂ ಕೈಗೊಳ್ಳಬೇಕಾದ ಪರಿಹಾರ ಕಾರ್ಯಗಳ ಬಗ್ಗೆ ಮುಖ್ಯಮಂತ್ರಿ ಜೊತೆ ಮಾತನಾಡಿದ್ದೇನೆ. ಚಾಮುಂಡಿ ಬೆಟ್ಟದಲ್ಲಿ ಮತ್ತೆ ಭೂಕುಸಿತವಾಗಿರುವ ಬಗ್ಗೆ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಅವರ ಗಮನಕ್ಕೆ ತರಲಾಗಿದೆ ಎಂದರು.

    ಈ ಸಂದರ್ಭದಲ್ಲಿ ಶಾಸಕ ಹರ್ಷವರ್ಧನ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಸಚಿವರ ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ, ಕಾಫಿ ಬೋರ್ಡ್ ಅಧ್ಯಕ್ಷ ಕೃಷ್ಣಪ್ಪಗೌಡ, ಜಿಲ್ಲಾಧ್ಯಕ್ಷೆ ಮಂಗಳ ಸೋಮಶೇಖರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

  • ಖಾದಿ ಉತ್ಪನ್ನ ಖರೀದಿಸುವಂತೆ ಮುಖ್ಯಮಂತ್ರಿ, ಸಚಿವರು, ಶಾಸಕರಿಗೆ ಎಂಟಿಬಿ ನಾಗರಾಜ್ ಮನವಿ

    ಖಾದಿ ಉತ್ಪನ್ನ ಖರೀದಿಸುವಂತೆ ಮುಖ್ಯಮಂತ್ರಿ, ಸಚಿವರು, ಶಾಸಕರಿಗೆ ಎಂಟಿಬಿ ನಾಗರಾಜ್ ಮನವಿ

    ಬೆಂಗಳೂರು: ಖಾದಿ ಸಂಘ-ಸಂಸ್ಥೆಗಳನ್ನು ಪುನಶ್ಚೇತನಗೊಳಿಸಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಕನಸನ್ನು ಸಾಕಾರಗೊಳಿಸಲು ಅಕ್ಟೋಬರ್ 2 ರಂದು ತಮ್ಮ ವ್ಯಾಪ್ತಿಯಲ್ಲಿ ಬರುವ ಖಾದಿ ಭಂಡಾರಗಳಿಗೆ ಭೇಟಿ ನೀಡಿ ಖಾದಿ ಉತ್ಪನ್ನಗಳನ್ನು ಖರೀದಿಸುವ ಮೂಲಕ ಖಾದಿ ಸಂಘ-ಸಂಸ್ಥೆಗಳಿಗೆ ಉತ್ತೇಜನ ನೀಡುವಂತೆ ಮುಖ್ಯಮಂತ್ರಿ, ಸಚಿವರು, ಶಾಸಕರಿಗೆ ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜ್ ಮನವಿ ಮಾಡಿದ್ದಾರೆ.

    ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ ಮಂಡಲದ ಉಭಯ ಸದನಗಳ ಪ್ರತಿಪಕ್ಷದ ನಾಯಕರು, ಸದಸ್ಯರು, ಉಪ ಸಭಾಧ್ಯಕ್ಷರು, ಉಪ ಸಭಾಪತಿ ಹಾಗೂ ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಪತ್ರ ಬರೆದು ಎಂಟಿಬಿ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: 90 ವರ್ಷದ ಅಜ್ಜಿ ಕಾರ್ ಡ್ರೈವಿಂಗ್ -ಪ್ರಯತ್ನ ಶ್ಲಾಘಿಸಿದ ಸಿಎಂ

    BASAVARAJ BOMMAI
    ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯ ಮತ್ತು ಸ್ವಾವಲಂಬಿ ಗ್ರಾಮ ಪರಿಕಲ್ಪನೆಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯನ್ನು ಸ್ಥಾಪಿಸಲಾಗಿದೆಯಾದರೂ ಅದು ಲಾಭದಾಯಕವಾಗಿಲ್ಲ. ರಾಜ್ಯದಲ್ಲಿ ಖಾದಿ ಉತ್ಪನ್ನಗಳನ್ನು ಉತ್ಪಾದಿಸುವ ಸುಮಾರು 200 ಸಂಸ್ಥೆಗಳಿದ್ದು, ಇವುಗಳಲ್ಲಿ ಸುಮಾರು 20 ಸಾವಿರ ನೂಲುವವರು ಮತ್ತು ನೇಕಾರರು ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಆದರೆ, ಕೊರೊನಾದಿಂದಾಗಿ ಖಾದಿ ಸಂಘ-ಸಂಸ್ಥೆಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ಹಾಗಾಗಿ, ಅಕ್ಟೋಬರ್ 2ರ ಗಾಂಧಿ ಜಯಂತಿಯ ಸುಸಂದರ್ಭದಲ್ಲಿ ಖಾದಿ ಉತ್ಪನ್ನಗಳನ್ನು ಖರೀದಿಸುವ ಮೂಲಕ ಅವುಗಳ ನೆರವಿಗೆ ಎಲ್ಲಾ ಜನಪ್ರತಿನಿಧಿಗಳು ಬರಬೇಕಿದೆ ಎಂದು ಎಂಟಿಬಿ ತಮ್ಮ ಪತ್ರದಲ್ಲಿ ಕೋರಿದ್ದಾರೆ. ಇದನ್ನೂ ಓದಿ: ಮತಾಂತರದ ಪಿಡುಗಿನ ಮಧ್ಯೆ ಯುವತಿ ಸಾಧನೆಯನ್ನು ಕೊಂಡಾಡಿದ ಗೂಳಿಹಟ್ಟಿ

  • ಕಲಾಪಕ್ಕೆ ಸಚಿವರ ಹಾಜರಿ ಕಡ್ಡಾಯ- ಸಿಎಂಗೆ ಪತ್ರ ಬರೆದ ಸಭಾಪತಿ ಹೊರಟ್ಟಿ

    ಕಲಾಪಕ್ಕೆ ಸಚಿವರ ಹಾಜರಿ ಕಡ್ಡಾಯ- ಸಿಎಂಗೆ ಪತ್ರ ಬರೆದ ಸಭಾಪತಿ ಹೊರಟ್ಟಿ

    ಹುಬ್ಬಳ್ಳಿ: ಸಪ್ಟೆಂಬರ್ 13 ರಿಂದ ಹತ್ತು ದಿನಗಳ ಕಾಲ ನಡೆಯುವ ವಿಧಾನಮಂಡಲ ಅಧಿವೇಶನದ ಕಲಾಪಗಳಿಗೆ ಸಚಿವರು ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಸೂಚನೆ ನೀಡಬೇಕು ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರದಿದ್ದಾರೆ.

    ಈ ಕುರಿತು ಪತ್ರ ಬರೆದಿರುವ ಬಸವರಾಜ ಹೊರಟ್ಟಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿಧಾನ ಮಂಡಲ ಅಧಿವೇಶನ ಬಹು ಮುಖ್ಯವಾಗಿದೆ. ನಾಡಿನ ಜ್ವಲಂತ ಸಮಸ್ಯೆ, ಸಾರ್ವಜನಿಕ ಸಂಕಷ್ಟಗಳ ಕುರಿತು ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಲು ಅಧಿವೇಶನ ಸೂಕ್ತ ವೇದಿಕೆಯಾಗಿದೆ. ಹೀಗಾಗಿ ಶಾಸನ ಸಭೆಯ ಕಲಾಪಗಳು ನಡೆಯುವಾಗ ಸಚಿವರು ಸದನದಲ್ಲಿ ಹಾಜರಿರಬೇಕು ಎಂದು ಸೂಚನೆ ನೀಡುವಂತೆ ಮುಖ್ಯಮಂತ್ರಿಗೆ, ಸಭಾಪತಿ ಕೋರಿದ್ದಾರೆ. ಇದನ್ನೂ ಓದಿ: ಬಿಜೆಪಿಯ ಬೂಟಿನ ರುಚಿಗಾಗಿ ಹಪಹಪಿಸುವ ಪ್ರಶಾಂತ್ ಸಂಬರ್ಗಿ ಕನ್ನಡ ವಿರೋಧಿ: ಚಂದ್ರಚೂಡ್

    ಈ ಹಿಂದೆ ನಡೆದ ಅಧಿವೇಶನಗಳಲ್ಲಿ ಸಚಿವರು ಗೈರು ಆಗಿದ್ದರು. ಮುಂದೆ ನಡೆಯುವ ಸದನದಲ್ಲಿ ಎಲ್ಲರೂ ಭಾಗಿಯಾಗಬೇಕು. ಸಚಿವರ ಅನುಪಸ್ಥಿತಿಯು ಆಡಳಿತಾರೂಢ ಸರ್ಕಾರದಿಂದ ಉತ್ತರ ಪಡೆಯುವ ಸದಸ್ಯರ ಹಕ್ಕು ಮತ್ತು ಅವಕಾಶ ವಂಚಿಸಿದಂತಾಗುತ್ತದೆ. ಕಾರಣ ಸಚಿವರು ಸದನದಲ್ಲಿ ಹಾಜರಿರುವುದನ್ನು ಖಾತ್ರಿಪಡಿಸಿಕೊಳ್ಳುವಂತೆ ತಿಳಿಸಿದ್ದಾರೆ. ಅಧಿವೇಶನ ವೇಳೆ ತಮ್ಮ ಕ್ಷೇತ್ರದ ಕಾರ್ಯಕ್ರಮಗಳನ್ನು ಉಲ್ಲೇಖಿಸಿ ಕಲಾಪದಿಂದ ವಿನಾಯಿತಿ ಕೋರಿ ಮನವಿ ಸಲ್ಲಿಸಬೇಡಿ. ಅಧಿವೇಶನದಲ್ಲಿ ಇಲಾಖೆ ಅಧಿಕಾರಿಗಳ ಪಾಲ್ಗೊಳ್ಳುವಿಕೆಯೂ ಅಷ್ಟೇ ಪ್ರಮುಖವಾಗಿದೆ. ಹೀಗಾಗಿ ಚರ್ಚೆ ವೇಳೆ ಸದನದಲ್ಲಿ ಅಧಿಕಾರಿಗಳ ಉಪಸ್ಥಿತಿ ಕುರಿತು ಮುಖ್ಯ ಕಾರ್ಯದರ್ಶಿಗಳು ಗಮನಹರಿಸಬೇಕೆಂದು ಹೊರಟ್ಟಿ ಸೂಚಿಸಿದ್ದಾರೆ.

    ಕಲಾಪದಲ್ಲಿ ಆಯಾ ದಿನದಲ್ಲಿ ಹಾಜರಾಗುವ ಸಚಿವರ ಹಾಗೂ ಅಧಿಕಾರಿಗಳ ಹೆಸರನ್ನು ಆಯಾ ಸದನ ಆರಂಭಗೊಳ್ಳುವಾಗಲೇ ಪ್ರಕಟಿಸಲಾಗುವುದು ಹಾಗೂ ಗೈರು ಹಾಜರಾದವರ ಮಾಹಿತಿಯನ್ನು ಸಂಬಂಧಿಸಿದವರಿಗೆ ಕಳುಹಿಸಿ ಕ್ರಮಕ್ಕೆ ಸೂಚಿಸಲಾಗುವುದು ಎಂದು ಹೊರಟ್ಟಿ ತಿಳಿಸಿದ್ದಾರೆ. ಇದನ್ನೂ ಓದಿ: ಗುಹೆಯೊಳಗೆ ನೆಲೆಸಿರೋ ಕಲ್ಲು ಗಣಪತಿಗಿದೆ ನಾಲ್ಕು ಕೈ!

  • ವಿದ್ಯುತ್ ಚಾಲಿತ ವಾಹನ ಬಳಕೆ ಮಾಡಿದರೆ ಪೆಟ್ರೋಲ್ ಬೆಲೆ ಕಡಿಮೆಯಾಗುತ್ತೆ: ನಾರಾಯಣ ಗೌಡ

    ವಿದ್ಯುತ್ ಚಾಲಿತ ವಾಹನ ಬಳಕೆ ಮಾಡಿದರೆ ಪೆಟ್ರೋಲ್ ಬೆಲೆ ಕಡಿಮೆಯಾಗುತ್ತೆ: ನಾರಾಯಣ ಗೌಡ

    -ವಿದ್ಯುತ್ ಚಾಲಿತ ವಾಹನ ರೈಡ್ ಮಾಡಿದ ಸಚಿವರು

    ಬೆಂಗಳೂರು: ವಿದ್ಯುತ್ ಚಾಲಿತ ವಾಹನ ಬಳಕೆ ಮಾಡಿದರೆ ಮುಂದಿನ ದಿನಗಳಲ್ಲಿ ಪೆಟ್ರೋಲ್ ಬೆಲೆ ಕಡಿಮೆಯಾಗುತ್ತದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣ ಗೌಡ ಅಭಿಪ್ರಾಯಪಟ್ಟಿದ್ದಾರೆ.

    ವಿಶ್ವ ವಿದ್ಯುತ್ ಚಾಲಿತ ವಾಹನ ದಿನಾಚರಣೆ-2021 ಅಂಗವಾಗಿ ಕಂಠೀರವ ಕ್ರೀಡಾಂಗಣದಲ್ಲಿ ವಿದ್ಯುತ್ ಚಾಲಿತ ವಾಹನಗಳ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ನಾರಾಯಣ ಗೌಡ ರ್ಯಾಲಿಗೆ ಹಸಿರು ನಿಶಾನೆ ತೋರಿದರು. ಜೊತೆಗೆ ಸಚಿವರುಗಳು ವಾಹನ ಚಾಲನೆ ಮಾಡಿ ಪರಿಸರ ಸ್ನೇಹಿ ವಾಹನಗಳ ಬಳಕೆ ಹೆಚ್ಚಾಗಲಿ ಎಂದರು.

    ರ್ಯಾಲಿಯನ್ನು ಉದ್ಘಾಟಿಸಿ ಮಾತನಾಡಿದ ನಾರಾಯಣ ಗೌಡ, ನಮ್ಮ ಶರೀರವನ್ನು, ನಮ್ಮ ಪರಿಸರವನ್ನು ಕಾಪಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ವಿದ್ಯುತ್ ಚಾಲಿತ ವಾಹನಗಳ ಬಳಕೆ ಹೆಚ್ಚಾಗಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿದ್ಯುತ್ ವಾಹನಗಳ ಖರೀದಿಗೆ ಸಬ್ಸಿಡಿ ನೀಡುತ್ತಿದೆ ಎಂದರು. ಇದನ್ನೂ ಓದಿ: ಕಲಬುರಗಿಯಲ್ಲಿ ಮೈತ್ರಿಗೆ ಸಿದ್ದರಾಮಯ್ಯ ವಿರೋಧ- ಮಾಜಿ ಸಿಎಂ ಲೆಕ್ಕಾಚಾರ ಏನು?

    ಈ ಮೊದಲು ಸಚಿವರು ಪರಿಸರ ಸ್ನೇಹಿ ವಾಹನ ಬಳಸಿ ಎನ್ನುವ ನಾಮಫಲಕಗಳನ್ನು ಬಿಡುಗಡೆಗೊಳಿಸಿದರು. ನಂತರ ಮಾತನಾಡಿದ ಇಂಧನ ಸಚಿವ ಸುನಿಲ್ ಕುಮಾರ್, ವಿದ್ಯುತ್ ಚಾಲಿತ ವಾಹನಗಳು ಭವಿಷ್ಯಕ್ಕೆ ಅನಿವಾರ್ಯವಾಗಬೇಕು. ಕೇಂದ್ರ ಹಾಗೂ ರಾಜ್ಯ ವಿದ್ಯುತ್ ಚಾಲಿತ ವಾಹನಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತದೆ. ಸದ್ಯ 136 ಕಡೆ ವಿದ್ಯುತ್ ರೀಚಾರ್ಜಿಂಗ್ ಸೆಂಟರ್ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ 500 ಕ್ಕೂ ಹೆಚ್ಚು ಚಾರ್ಜಿಂಗ್ ಸೆಂಟರ್ ಮಾಡುವ ಯೋಜನೆಯಿದೆ ಎಂದರು.

    ಸಚಿವ ಮುನಿರತ್ನ ಮಾತನಾಡಿ, ಹೊಸದಾಗಿ ರಿಚಾರ್ಜ್ ಪಾಯಿಂಟ್ ಗಳನ್ನು ಪೆಟ್ರೋಲ್ ಬಂಕ್ ಬಳಿಯೇ ಮಾಡಬೇಕು ಎಂದು ಇಂಧನ ಸಚಿವರಿಗೆ ಮನವಿ ಮಾಡಿದ್ರು. ಈ ಮೂಲಕ 40% ಪೆಟ್ರೋಲ್ ಬಳಕೆ ಕಡಿಮೆ ಮಾಡಬೇಕು. ವಾಹನಗಳ ದರ ಪೆಟ್ರೋಲ್ ಬಳಕೆಯ ವಾಹನಗಳಿಗಿಂತ ಕಡಿಮೆ ಮಾಡಬೇಕು. ವಾಹನ ಕಂಪನಿಗಳಿಗೆ ಬೆಲೆ ಕಡಿಮೆ ಮಾಡಲು ಕೋರುತ್ತೇನೆ ಎಂದರು. ಇದನ್ನೂ ಓದಿ: ಹೆಚ್‍ಡಿಕೆಗೆ ಕಲಬುರಗಿ ಮೈತ್ರಿ ಪವರ್ – ಮೇಯರ್ ಪಟ್ಟದ ಬೇಡಿಕೆ ಅಸ್ತ್ರ ಏಕೆ?

  • ಅಧಿವೇಶನದ ನಂತರ ದೇವಸ್ಥಾನಗಳಿಗೆ ಭೇಟಿ ನೀಡಿ ಅಲ್ಲಿಯೇ ಸಮಸ್ಯೆ ಪರಿಹಾರ: ಶಶಿಕಲಾ ಜೊಲ್ಲೆ

    ಅಧಿವೇಶನದ ನಂತರ ದೇವಸ್ಥಾನಗಳಿಗೆ ಭೇಟಿ ನೀಡಿ ಅಲ್ಲಿಯೇ ಸಮಸ್ಯೆ ಪರಿಹಾರ: ಶಶಿಕಲಾ ಜೊಲ್ಲೆ

    -ಇಲಾಖೆಯಲ್ಲಿರುವ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ

    ಬೆಂಗಳೂರು: ರಾಜ್ಯ ಹಾಗೂ ಹೊರ ರಾಜ್ಯದ ದೇವಸ್ಥಾನಗಳಲ್ಲಿ ರಾಜ್ಯದ ಭಕ್ತರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ವಿಧಾನ ಮಂಡಲ ಅಧಿವೇಶನ ಮುಗಿದ ನಂತರ ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿ, ಅಲ್ಲಿಯೇ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ, ವಕ್ಫ್ ಹಾಗೂ ಹಜ್ ಸಚಿವರಾದ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

    ಹಿಂದೂ ಧಾರ್ಮಿಕ ದತ್ತಿ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಸಚಿವರು ಹಾಗೂ ರಾಜ್ಯ ದಾರ್ಮಿಕ ಪರಿಷತ್ತಿನ ಅಧ್ಯಕ್ಷರಾಗಿರುವ ಶಶಿಕಲಾ ಜೊಲ್ಲೆಯವರು ಸೋಮವಾರ ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಧಾರ್ಮಿಕ ಪರಿಷತ್ತಿನ ಸಭೆ ನಡೆಸಿದರು. ಈ ಸಭೆಯಲ್ಲಿ ಮುಜರಾಯಿ ಇಲಾಖೆಯಲ್ಲಿ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ತೆರಳುವ ರಾಜ್ಯ ಹಾಗೂ ಹೊರರಾಜ್ಯಗಳಲ್ಲಿ ಇರುವ ಪ್ರಮುಖ ದೇವಸ್ಥಾನಗಳ ಸಮಸ್ಯೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗಿದ್ದು, ಇಲಾಖೆಯಲ್ಲಿ ನಾವು ಮಾಡಬೇಕಾದಂತಹ ಕೆಲಸ ಬಹಳ ಇದೆ. ಇಡೀ ಜಗತ್ತಿನಲ್ಲಿಯೇ ನಮ್ಮ ಸಂಸ್ಕೃತಿ, ಆದ್ಯಾತ್ಮಿಕತೆಗೆ ಹೆಸರುವಾಸಿಯಾಗಿದ್ದೇವೆ. ಅದನ್ನು ಉಳಿಸಿಕೊಂಡು ಹೋಗುವ ಕೆಲಸ ನಮ್ಮದು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಇದನ್ನೂ ಓದಿ: ಸಾಹಿತ್ಯ ಲೋಕದಲ್ಲಿ ಕ್ರಾಂತಿ – ಪುಸ್ತಕಗಳನ್ನು ಗ್ರಂಥಾಲಯಕ್ಕೆ ನೀಡಲಿದ್ದಾರೆ ಸುನಿಲ್ ಕುಮಾರ್

    ಮುಜರಾಯಿ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇದ್ದು, ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಇಲಾಖೆಯ ಕಾರ್ಯದರ್ಶಿಯ ಜೊತೆಗೆ ಚರ್ಚೆ ನಡೆಸಿದ್ದು, ಶೀಘ್ರವೇ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಭರ್ತಿ ಮಾಡುವ ಕುರಿತು ಚಿಂತನೆ ನಡೆಸಲಾಗುವುದು. ಇಲಾಖೆಯಲ್ಲಿ ಐದು ವರ್ಷಕ್ಕಿಂತ ಹೆಚ್ಚಿನ ಸಮಯ ಒಂದೆ ಕಡೆ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದರೆ, ಅಥವಾ ಇಲಾಖಾ ಹಂತದಲ್ಲಿ ಅವ್ಯವಹಾರ ನಡೆಯುತ್ತಿದ್ದರೆ, ಹಿರಿಯ ಅಧಿಕಾರಿಗಳು ಅದನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಬೇಕು. ಬೆಂಗಳೂರಿನ ಬನಶಂಕರಿ ದೇವಸ್ಥಾನದ ಅವ್ಯವಹಾರದ ಬಗ್ಗೆ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಮುಜರಾಯಿ ಇಲಾಖೆಯ ಆಯುಕ್ತರು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಚಿವರು ನಿರ್ದೇಶನ ನೀಡಿದ್ದಾರೆ.

    ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಕಮಿಟಿಗಳು ಇಲಾಖೆಯ ಮಾಹಿತಿಯನ್ನು ಧಾರ್ಮಿಕ ಪರಿಷತ್ ಸದಸ್ಯರಿಗೆ ನೀಡುವುದಿಲ್ಲ ಎಂಬ ಆರೋಪ ಇದೆ. ಆಯುಕ್ತರು ಸಂಬಂಧ ಪಟ್ಟವರನ್ನು ಸಂಪರ್ಕಿಸಿ ಸದಸ್ಯರಿಗೆ ಮಾಹಿತಿ ನೀಡುವಂತೆ ಸೂಚಿಸಬೇಕು. ಮುಜರಾಯಿ ಇಲಾಖೆಯಿಂದ ಸಾಮೂಹಿಕ ವಿವಾಹದ ಯೋಜನೆ ಜಾರಿಯಲ್ಲಿದ್ದು, ಅದನ್ನು ಯಶಸ್ವಿಗೊಳಿಸಲು ಎಲ್ಲರೂ ಶ್ರಮಿಸಬೇಕು ಎಂದು ಸೂಚಿಸಿದರು. ಇದನ್ನೂ ಓದಿ: ಅಕ್ರಮವಾಗಿ ನೆಲೆಸಿರುವ ವಿದೇಶಿ ನಾಗರಿಕರ ಮೇಲೆ ಹೆಚ್ಚಿನ ನಿಗಾ: ಆರಗ ಜ್ಞಾನೇಂದ್ರ

    ಗೋಪೂಜೆಗೆ ಆದ್ಯತೆ:
    ಗೋವು ನಮ್ಮ ಸಂಸ್ಕೃತಿಯ ಭಾಗವಾಗಿದ್ದು, ಅದನ್ನು ತಾಯಿ ಸ್ಥಾನದಲ್ಲಿ ನೋಡುತ್ತೇವೆ. ಹೀಗಾಗಿ ಕೇವಲ ಪಶು ಸಂಗೋಪನೆ ಇಲಾಖೆ ಮಾತ್ರವಲ್ಲ. ಮುಜರಾಯಿ ಇಲಾಖೆಯ ಮೂಲಕವೂ ಗೋವಿನಿಂದ ಆಗುವ ಪ್ರಯೋಜನಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಅಲ್ಲದೇ ದೀಪಾವಳಿ ಸಂದರ್ಭದಲ್ಲಿ ಗೋ ಪೂಜೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಅರ್ಚಕರಿಗೆ ಜೀವ ವಿಮೆ ಮಾಡಬೇಕೆಂಬ ಬೇಡಿಕೆ ಇದೆ. ಈ ಬಗ್ಗೆ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಆರನೇ ವೇತನ ಆಯೋಗದ ಶಿಫಾರಸ್ಸಿನಂತೆ ಅರ್ಚಕರಿಗೆ ವೇತನ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು. ನಮ್ಮ ರಾಜ್ಯದ ಜನರು ಬೇರೆ ರಾಜ್ಯದ ದೇವಸ್ಥಾನಗಳಿಗೆ ಪ್ರವಾಸ ಕೈಗೊಳ್ಳುವ, ಮಹಾರಾಷ್ಟ್ರದ ತುಳಜಾಭವಾನಿ, ಫಂಡರಾಪುರ, ಗುಡ್ಡಾಪುರ ದಾನಮ್ಮ, ಆಂಧ್ರಪ್ರದೇಶದ ತಿರುಪತಿ, ಶ್ರೀಶೈಲದಲ್ಲಿ ರಾಜ್ಯ ಸರ್ಕಾರದ ಜಾಗ ಇರುವ ಬಗ್ಗೆ ಪರಿಶೀಲಿಸಿ ಅಲ್ಲಿ ಯಾತ್ರಿ ನಿವಾಸಗಳ ನಿರ್ಮಾಣ ಮಾಡಲು ಶೀಘ್ರವೇ ಸ್ಥಳಗಳಿಗೆ ಭೇಟಿ ನೀಡಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಚಿವರು ಸಭೆಯಲ್ಲಿ ತಿಳಿಸಿದರು.

     

  • ಪತ್ರಿಕಾ ವಿತರಕರಿಗೆ ಸಾಮಾಜಿಕ ಭದ್ರತೆ: ಅಶ್ವಥ್ ನಾರಾಯಣ ಭರವಸೆ

    ಪತ್ರಿಕಾ ವಿತರಕರಿಗೆ ಸಾಮಾಜಿಕ ಭದ್ರತೆ: ಅಶ್ವಥ್ ನಾರಾಯಣ ಭರವಸೆ

    ಬೆಂಗಳೂರು: ಬಹಳ ರಿಸ್ಕ್ ತೆಗೆದುಕೊಂಡು ಮನೆ ಮನೆಗೂ ಬೆಳಗ್ಗೆಯೇ ಪತ್ರಿಕೆ ಮುಟ್ಟಿಸುವ ಪತ್ರಿಕಾ ವಿತರಕರಿಗೆ ಸಾಮಾಜಿಕ ಭದ್ರತೆ ಬಹಳ ಮುಖ್ಯ. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ವಹಿಸುತ್ತದೆ ಎಂದು ಉನ್ನತ ಶಿಕ್ಷಣ, ಐಟಿ-ಬಿಟಿ, ವಿಜ್ಞಾನ-ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಖಾತೆ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ ಹೇಳಿದರು.

    ಬೆಂಗಳೂರಿನಲ್ಲಿ ಶನಿವಾರ ಪತ್ರಿಕಾ ವಿತರಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಮಳೆ ಇರಲಿ, ಚಳಿ ಇರಲಿ ಅಥವಾ ಯಾವುದೇ ತುರ್ತು ಸಂದರ್ಭವೂ ಇರಲಿ. ಬೆಳಗ್ಗೆ ನಾವು ನಿದ್ದೆಯಿಂದ ಏಳುವುದಕ್ಕೆ ಮುನ್ನವೇ ಪತ್ರಿಕೆ ನಮ್ಮ ಮನೆಯ ಅಂಗಳದಲ್ಲಿರುತ್ತದೆ. ಇದಕ್ಕೆ ಕಾರಣರಾದವರನ್ನು ಅಲಕ್ಷ್ಯ ಮಾಡುವಂತಿಲ್ಲ ಎಂದರು. ಇದನ್ನೂ ಓದಿ: ರಾಜ್ಯದಲ್ಲಿ ಇನ್ನೆರಡು ದಿನ ಮಳೆ- ಹವಾಮಾನ ಇಲಾಖೆ ಮುನ್ಸೂಚನೆ

    ಕೋವಿಡ್ ಸಮಯದಲ್ಲಿಯೂ ನಮ್ಮ ಮನೆಗೆ ಪತ್ರಿಕೆ ಬರುವುದು ನಿಲ್ಲಲಿಲ್ಲ. ತಮ್ಮ ಜೀವವನ್ನೂ ಲೆಕ್ಕಿಸದೇ ಮನೆಮನೆಗೂ ಪತ್ರಿಕೆ ಮುಟ್ಟಿಸಿದ್ದು ವಿತರಕರ ವೃತ್ತಿ ಬದ್ಧತೆಗೆ ಸಾಕ್ಷಿಯಾಗಿದೆ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಕೊಚ್ಚೆ ನೀರೇ ಕುಡಿದಿದ್ದೇನೆ – ಹೆಚ್‍ಡಿಕೆಗೆ ಜೆಡಿಎಸ್ ಶಾಸಕ ಟಾಂಗ್

    ಸಾಮಾಜಿಕವಾಗಿ ವೃತ್ತಿ ತಾರತಮ್ಯ ಇರಬಾರದು. ಮನೆ ಮನೆಗೂ ಪತ್ರಿಕೆ ತಲುಪಿಸುವ ಪತ್ರಿಕಾ ವಿತರಕರನ್ನು ನಾವು ಮುಖ್ಯವಾಹಿನಿಯಲ್ಲಿ ಎಲ್ಲ ವೃತ್ತಿಪರರಿಗೂ ಸಿಗುವಂಥ ಸೌಲಭ್ಯಗಳು ಸಿಗಬೇಕು. ಸರ್ಕಾರದಿಂದ ಸಿಗಬಹುದಾದ ಎಲ್ಲ ಅನುಕೂಲಗಳನ್ನು ಮಾಡಿಕೊಡಲಾಗುವುದು. ಪ್ರತಿದಿನ ಬೆಳಗ್ಗೆ ಸೂರ್ಯೋದಯಕ್ಕೆ ಮುನ್ನವೇ ನಮಗೆ ಪತ್ರಿಕೆ ತಲುಪಿಸುವ ವಿತರಕರು, ಬಹುಬೇಗ ನಿದ್ದೆಯಿಂದ ಎದ್ದು, ನಿಷ್ಠೆಯಿಂದ ಕೆಲಸ ಮಾಡುತ್ತಾರೆ. ಅವರಿಗೆ ರಜೆ ಎಂಬುದೇ ಅಪರೂಪ. ಇವರ ಕಷ್ಟಕ್ಕೆ ನಾವು ಮಿಡಿಯಬೇಕು ಎಂದು ಸಚಿವರು ನುಡಿದರು.

    ಅಸಂಘಟಿತ ವಲಯಕ್ಕೆ ಪತ್ರಿಕಾ ವಿತರಕರು:
    ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಮಾತನಾಡಿ, ವಿತರಕರನ್ನು ಕಾರ್ಮಿಕ ಇಲಾಖೆ ವ್ಯಾಪ್ತಿಗೆ ತಂದು ಅವರನ್ನು ಅಸಂಘಟಿತ ವಲಯಕ್ಕೆ ಸೇರ್ಪಡೆ ಮಾಡುವುದಾಗಿ ಭರವಸೆ ನೀಡಿದರು. ವಸತಿ ಸಚಿವ ವಿ.ಸೋಮಣ್ಣ ಮಾತನಾಡಿ, ಪತ್ರಿಕಾ ವಿತರಕರ ಪರವಾಗಿ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.

  • ಸಂಪುಟದಲ್ಲಿರುವ ಸಚಿವರು ಪ್ರತಿಭಾವಂತರು – ಸಹೋದ್ಯೋಗಿಗಳಿಗೆ ಸಿಎಂ ಮೆಚ್ಚುಗೆ

    ಸಂಪುಟದಲ್ಲಿರುವ ಸಚಿವರು ಪ್ರತಿಭಾವಂತರು – ಸಹೋದ್ಯೋಗಿಗಳಿಗೆ ಸಿಎಂ ಮೆಚ್ಚುಗೆ

    ಹಾವೇರಿ: ನನ್ನ ಸಚಿವ ಸಂಪುಟದಲ್ಲಿರುವ ಸಚಿವರು ಪ್ರತಿಭಾವಂತರು, ಕಾರ್ಯಕ್ಷಮತೆಯಿಂದ ಕೆಲಸ ಮಾಡುವವರು ಎಂದು ಸಂಪುಟ ಸಹೋದ್ಯೋಗಿಗಳ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

    ಬುಧವಾರ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ತಡಸ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ವೇಳೆ ಶಂಕುಸ್ಥಾಪನೆ ನೆರವೇರಿಸುವುದಕ್ಕೂ ಮುನ್ನ ಸಿಎಂ ತಡಸ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದರು.ಇದನ್ನೂ ಓದಿ:ಸಾರ್ವಜನಿಕ ಗಣೇಶೋತ್ಸವ ಸೆಪ್ಟೆಂಬರ್ 5 ರಂದು ತೀರ್ಮಾನ : ಬೊಮ್ಮಾಯಿ

    ನನ್ನ ಸಚಿವ ಸಂಪುಟದಲ್ಲಿರುವ ಸಚಿವರು ಪ್ರತಿಭಾವಂತರಿದ್ದಾರೆ. ಕಾರ್ಯಕ್ಷಮತೆಯಿಂದ ಕೆಲಸ ಮಾಡುವ ಸಾಮಥ್ರ್ಯವನ್ನು ಹೊಂದಿದ್ದಾರೆ. ಹೀಗಾಗಿ ರಾಜ್ಯದ ಜನತೆಗೆ ಉತ್ತಮ ಕಾರ್ಯಕ್ರಮಗಳನ್ನು ಕೊಡಲು ಸಾಧ್ಯವಾಗುತ್ತಿದೆ ಎಂದು ಪ್ರಶಂಸಿದ್ದಾರೆ.ಇದನ್ನೂ ಓದಿ:ಚಾಮರಾಜನಗರ ಡಿಸಿ ವಿರುದ್ಧ ಡಿಕೆಶಿ ಕಿಡಿ

    ತಡಸ ಗ್ರಾಮ ಮುಂದಿನ ದಿನಗಳಲ್ಲಿ ಪಟ್ಟಣ, ನಗರವಾಗಿ ಪರಿವರ್ತನೆಯಾಗಲಿದೆ. ಗ್ರಾಮಕ್ಕೆ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು. ಈಗಾಗಲೇ ಗ್ರಾಮದಲ್ಲಿ ಪದವಿಪೂರ್ವ ಕಾಲೇಜು ಇದೆ. ಮುಂದೆ ಇಲ್ಲಿ ಪದವಿ ಕಾಲೇಜು ಸ್ಥಾಪಿಸಲಾಗುವುದು. ಹೆಣ್ಣು ಮಕ್ಕಳಿಗಾಗಿ ವಿಶೇಷ ಹೈಸ್ಕೂಲ್ ನನ್ನು ತೆರೆಯಲಾಗುವುದು. ಗ್ರಾಮದ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ತಾಂತ್ರಿಕ ಶಿಕ್ಷಣ ನೀಡುವ ಶಾಲೆಯನ್ನು ಆರಂಭಿಸಲು ಉದ್ದೇಶಿಸಿದ್ದೇನೆ ಎಂದು ಭರವಸೆ ನೀಡಿದ್ದಾರೆ.ಇದನ್ನೂ ಓದಿ:ನನ್ನ ಸ್ವಂತ ಹಣದಿಂದ ಕ್ಷೇತ್ರದ ಜನರಿಗೆ ಪರಿಹಾರ ನೀಡುತ್ತೇನೆ: ಶ್ರೀಮಂತ ಪಾಟೀಲ್

  • ಖಾತೆ ತೃಪ್ತಿ ತಂದಿದೆ : ಶಶಿಕಲಾ ಜೊಲ್ಲೆ ಸಹಮತ

    ಖಾತೆ ತೃಪ್ತಿ ತಂದಿದೆ : ಶಶಿಕಲಾ ಜೊಲ್ಲೆ ಸಹಮತ

    ವಿಜಯಪುರ: ನನಗೆ ಖಾತೆ ಬಗ್ಗೆ ಯಾವುದೇ ಅಸಮಾಧಾನ ಇಲ್ಲ. ಯಾವ ಖಾತೆ ಕೊಟ್ಟಿದ್ದಾರೋ ಆ ಖಾತೆಯನ್ನು ವ್ಯವಸ್ಥಿತವಾಗಿ ನಿರ್ವಹಣೆ ಮಾಡುವುದು ನನ್ನ ಉದ್ದೇಶ ಎಂದು ಮುಜರಾಯಿ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

    ಇವತ್ತು ಮಹಾಪೂರ ಬರ್ತಿದೆ, ಕೊರೊನಾ ಇದೆ. ಇಂತಹ ಸಂದರ್ಭದಲ್ಲಿ ಅಸಮಾಧಾನ ಪಡುವುದು ಸರಿಯಲ್ಲ. ಕೊಟ್ಟಂತಹ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸಿ ಜನರ ಸಮಸ್ಯೆಗೆ ಸ್ಪಂದಿಸುತ್ತೇನೆ ಎಂದಿದ್ದಾರೆ. ರಾಜ್ಯ ಹಾಗೂ ಹೊರ ರಾಜ್ಯದ ದೇವಸ್ಥಾನ ಅಭಿವೃದ್ಧಿಗೆ ನಾನು ಬದ್ಧಳಾಗಿದ್ದೇನೆ. ಹೊರ ರಾಜ್ಯ ದೇವಸ್ಥಾನಗಳಿಗೆ ತೆರಳುವ ನಮ್ಮ ರಾಜ್ಯ ಭಕ್ತರಿಗೆ ಎಲ್ಲ ಮೂಲಭೂತ ಸೌಕರ್ಯ ಒದಗಿಸುತ್ತೇವೆ ಎಂದು ಭರವಸೆ ನೀಡಿದರು.

    ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿದ ಸಚಿವರಿಗೆ, ಕೆಲಸ ಮಾಡುವವರಿಗೆ ಯಾವ ಖಾತೆ ಇದ್ದರೆ ಏನು, ಕೆಲಸ ಮಾಡುವ ಇಚ್ಛೆ ಇದ್ದು, ಜನರಿಗೆ ಸ್ಪಂದಿಸುವ ಇಚ್ಛೆ ಇದೆ ಅಂದರೆ ಸಾಕು ಎಂದು ಖಾತೆ ಕ್ಯಾತೆ ತೆಗೆದವರಿಗೆ ಟಾಂಗ್ ನೀಡಿದ್ದಾರೆ. ಎಂತಹದೇ ಖಾತೆ ಇದ್ದರೂ ಅದರ ಮುಖಾಂತರ ನಾವು ಕೆಲಸ ಮಾಡಬಹುದು. ಈ ರೀತಿ ಅಸಮಾಧಾನ ಆಗುತ್ತಿರುವುದು ಅವರಿಗೆ ಬಿಟ್ಟ ವಿಷಯ. ಇದು ಬಹಳ ದೊಡ್ಡ ವಿಷಯ ಅಲ್ಲ. ಸ್ವಲ್ಪ ಅಸಮಧಾನ ಇರಬಹುದು. ಅದು ನಿವಾರಣೆ ಆಗುತ್ತೆ. ಅವರವರು ಅವರ ಖಾತೆಯನ್ನು ಮುಂದುವರೆಸುತ್ತಾರೆ ಎಂಬ ವಿಶ್ವಾಸ ಇದೆ. ಇದನ್ನು ನಮ್ಮ ಪಕ್ಷದ ಹಿರಿಯರು ಬಗೆಹರಿಸುತ್ತಾರೆಂಬ ವಿಶ್ವಾಸ ಇದೆ ಎಂದಿದ್ದಾರೆ. ಇದನ್ನೂ ಓದಿ:ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ – ಆರೋಪಿಗೆ ಸ್ಥಳೀಯರಿಂದ ಗೂಸ