Tag: ಸಚಿವರು

  • ಡಿಕೆಶಿ ಸೋಂಕಿಗೆ ತುತ್ತಾಗಿರೋ ಸುದ್ದಿ ತಿಳಿದು ಬೇಸರವಾಯಿತು: ಸಿದ್ದರಾಮಯ್ಯ

    ಡಿಕೆಶಿ ಸೋಂಕಿಗೆ ತುತ್ತಾಗಿರೋ ಸುದ್ದಿ ತಿಳಿದು ಬೇಸರವಾಯಿತು: ಸಿದ್ದರಾಮಯ್ಯ

    ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರು ಕೊರೊನಾ ಸೋಂಕಿಗೆ ತುತ್ತಾಗಿರುವುದಕ್ಕೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.

    ಡಿಕೆ ಶಿವಕುಮಾರ್ ಅವರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದ್ದು, ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದರು. ಸದ್ಯ ಡಿಕೆಶಿ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ಸಿಎಂ ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಅನೇಕರು ಡಿಕೆಶಿ ಶೀಘ್ರವೇ ಗುಣಮುಖರಾಗಿ ಬರಲಿ ಎಂದು ಹಾರೈಸಿದ್ದಾರೆ.

    ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರು ಕೊರೊನಾ ಸೋಂಕಿಗೆ ತುತ್ತಾಗಿರುವ ಸುದ್ದಿ ತಿಳಿದು ಬೇಸರವಾಯಿತು. ಆದಷ್ಟು ಬೇಗ ಸೋಂಕಿನಿಂದ ಗುಣಮುಖರಾಗಿ ಜನಸೇವೆಗೆ ಮರಳಲಿ ಎಂದು ಹಾರೈಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

    “ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿಕೆ ಶಿವಕುಮಾರ್ ಅವರು ಶೀಘ್ರದಲ್ಲಿ ಕೊರೊನಾ ಸೋಂಕಿನಿಂದ ಪೂರ್ಣ ಗುಣಮುಖರಾಗಿ, ಮತ್ತೆ ಎಂದಿನಂತೆ ತಮ್ಮ ಕಾರ್ಯಕ್ಷೇತ್ರದಲ್ಲಿ ಸಕ್ರಿಯರಾಗಿ ತೊಡಗಿಕೊಳ್ಳಲಿ” ಎಂದು ಸಿಎಂ ಯಡಿಯೂರಪ್ಪ ಹಾರೈಸಿದ್ದಾರೆ.

    ಡಿ.ಕೆ. ಶಿವಕುಮಾರ್ ಅವರಿಗೆ ಕೋವಿಡ್ ಇರುವುದಾಗಿ ತಿಳಿಯಿತು. ಕೊರೊನಾ ವೈರಸ್ ಸೋಂಕಿನಿಂದ ಅವರು ಶೀಘ್ರ ಗುಣಮುಖರಾಗಲಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಇನ್ನೂ ಡಿಕೆಶಿ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿರುವ ವಿಷಯ ತಿಳಿದು ನೋವಾಗಿದೆ. ಅವರು ಶೀಘ್ರವಾಗಿ ಗುಣಾಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಚಿವ ಸುಧಾಕರ್ ಟ್ವೀಟ್ ಮಾಡಿದ್ದಾರೆ.

    “ಮಾಜಿ ಸಚಿವರು, ಕೆಪಿಸಿಸಿ ಅಧ್ಯಕ್ಷರು ಹಾಗೂ ಆತ್ಮೀಯರಾದ ಡಿ.ಕೆ. ಶಿವಕುಮಾರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸಾರ್ವಜನಿಕ ಜೀವನದಲ್ಲಿ ಸದಾ ಚಟುವಟಿಕೆಯಿಂದ ಇರುವ ಶಿವಕುಮಾರ್ ಅವರು ಶೀಘ್ರವಾಗಿ ಗುಣಮುಖರಾಗಲಿ” ಸಚಿವ ಶ್ರೀರಾಮುಲು ಹಾರೈಸಿದ್ದಾರೆ.

  • ಅಷ್ಟ ದಿಕ್ಪಾಲಕ ಸಚಿವರಿಂದ ಸಿಎಂಗೆ ರಿಪೋರ್ಟ್ ಸಲ್ಲಿಕೆ- ಕೊರೊನಾ ಉಸ್ತುವಾರಿಗಳ ಕೆಲಸಕ್ಕೆ ಬಿಎಸ್‍ವೈ ಬೇಸರ

    ಅಷ್ಟ ದಿಕ್ಪಾಲಕ ಸಚಿವರಿಂದ ಸಿಎಂಗೆ ರಿಪೋರ್ಟ್ ಸಲ್ಲಿಕೆ- ಕೊರೊನಾ ಉಸ್ತುವಾರಿಗಳ ಕೆಲಸಕ್ಕೆ ಬಿಎಸ್‍ವೈ ಬೇಸರ

    ಬೆಂಗಳೂರು: ಕೊರೊನಾ ಅಬ್ಬರದ ನಡುವೆ ಬೆಂಗಳೂರಲ್ಲಿ ಮತ್ತೆ ಲಾಕ್‍ಡೌನ್ ಬೇಕಾ ಮತ್ತು ಬೇಡ್ವಾ ಅನ್ನೋದು ಇಂದು ತೀರ್ಮಾನ ಆಗುವ ಸಾಧ್ಯತೆಗಳಿವೆ. ಇತ್ತ ಬೆಂಗಳೂರು ಅಷ್ಟ ವಲಯಗಳ ದಿಕ್ಪಾಲಕ ಸಚಿವರು ಸಿಎಂ ಯಡಿಯೂರಪ್ಪ ಅವರಿಗೆ ವರ್ಕ್ ರಿಪೋರ್ಟ್ ಸಲ್ಲಿಕೆ ಮಾಡಿದ್ದಾರೆ.

    ಎಂಟು ವಲಯಗಳ ಉಸ್ತುವಾರಿ ಸಚಿವರು 10 ದಿನಗಳ ವರ್ಕ್ ರಿಪೋರ್ಟ್ ಅನ್ನು ಸಿಎಂ ಯಡಿಯೂರಪ್ಪ ಅವರಿಗೆ ಸಲ್ಲಿಸಿದ್ದಾರೆ. 10 ದಿನಗಳ ವರ್ಕ್ ರಿಪೋರ್ಟಿನಲ್ಲಿ ವಲಯವಾರು ಕೊರೊನಾ ನಿಯಂತ್ರಣ, ನಿರ್ವಹಣೆಗೆ ಕೈಗೊಂಡ ಕ್ರಮಗಳನ್ನು ಉಲ್ಲೇಖಿಸಲಾಗಿದೆ. ಆದರೆ ಅಷ್ಟ ದಿಕ್ಪಾಲಕರ ವರ್ಕ್ ರಿಪೋರ್ಟ್​ಗೆ ಸಿಎಂ ಯಡಿಯೂರಪ್ಪ ಅತೃಪ್ತಿ ಆಗಿದ್ದಾರೆ ಎನ್ನಲಾಗಿದೆ.

    ಈ 10 ದಿನಗಳಲ್ಲಿ ನಿರೀಕ್ಷೆ ಮಾಡಿರುವ ಮಟ್ಟಕ್ಕೆ ಪ್ರಗತಿ ಸಾಧಿಸಿಲ್ಲ. ಅಲ್ಲದೇ ಕೊರೊನಾ ನಿಯಂತ್ರಣ ವಿಚಾರದಲ್ಲಿ ವಲಯವಾರು ಸಾಧನೆ ಆಗಿಲ್ಲ ಎಂದು ಸಿಎಂ ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ಜೊತೆಗೆ ಕೆಲವು ಉಸ್ತುವಾರಿ ಸಚಿವರು ಫೀಲ್ಡ್‌ಗೆ ಇಳಿಯದೇ ಅಧಿಕಾರಿಗಳಿಂದಲೇ ಮಾಹಿತಿ ಪಡೆಯುತ್ತಿರುವುದು ಗಮನಕ್ಕೆ ಬಂದಿದೆ ಎಂದು ಸಿಎಂ ಸಚಿವರಿಗೆ ವಾರ್ನಿಂಗ್ ಕೂಡ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

    ಅಷ್ಟ ದಿಕ್ಪಾಲಕ ಸಚಿವರು
    1. ಪಶ್ವಿಮ ವಲಯ – ಡಿಸಿಎಂ ಡಾ.ಅಶ್ವಥ್ ನಾರಾಯಣ್
    2. ಪೂರ್ವ ವಲಯ – ಸಚಿವ ವಿ.ಸೋಮಣ್ಣ
    3. ದಕ್ಷಿಣ ವಲಯ – ಸಚಿವ ಆರ್.ಅಶೋಕ್
    4. ಬೊಮ್ಮನಹಳ್ಳಿ ವಲಯ – ಸಚಿವ ಸುರೇಶ್ ಕುಮಾರ್
    5. ಮಹದೇವಪುರ ವಲಯ – ಸಚಿವ ಬೈರತಿ ಬಸವರಾಜು
    6. ಯಲಹಂಕ ವಲಯ – ಎಸ್.ಆರ್.ವಿಶ್ವನಾಥ್
    7. ಆರ್ ಆರ್ ನಗರವಲಯ – ಸಚಿವ ಎಸ್.ಟಿ.ಸೋಮಶೇಖರ್
    8. ದಾಸರಹಳ್ಳಿ ವಲಯ – ಸಚಿವ ಗೋಪಾಲಯ್ಯ

    8 ಉಸ್ತುವಾರಿಗಳ ಮೇಲೆ ಸಿಎಂ ಬೇಸರ?
    – ದಕ್ಷಿಣ, ಪೂರ್ವ ಮತ್ತು ಪಶ್ಚಿಮ, ಬೊಮ್ಮನಹಳ್ಳಿ ವಲಯದಲ್ಲಿ ಕೊರೊನಾ ನಿಯಂತ್ರಣಾ ಕ್ರಮಗಳು ಸಮಾಧಾನ ತಂದಿಲ್ಲ.
    – ಈ ವಲಯಗಳಲ್ಲಿ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆಗೆ ನಿರಾಕರಿಸುತ್ತಿವೆ
    – ಸರ್ಕಾರಿ ಆಸ್ಪತ್ರೆಗಳು, ಕೋವಿಡ್ ಕೇರ್ ಸೆಂಟರ್ ಗಳಲ್ಲಿ ರೋಗಿಗಳಿಗೆ ಮೂಲಸೌಕರ್ಯಗಳ ಕೊರತೆ ನೀಗಿಲ್ಲ
    – ಸೋಂಕಿತರನ್ನು ಆಸ್ಪತ್ರೆಗೆ, ಕೋವಿಡ್ ಕೇರ್ ಸೆಂಟರ್ ಗಳಿಗೆ ದಾಖಲಿಸುವ ಪ್ರಕ್ರಿಯೆಯಲ್ಲಿ ವೇಗ ಬಂದಿಲ್ಲ
    – ಸೋಂಕಿತರು ಕರೆ ಮಾಡಿದ 2 ಗಂಟೆಯೊಳಗೆ ಅಂಬುಲೆನ್ಸ್‌ಗಳು ತಲುಪುತ್ತಿಲ್ಲ
    – ಕಂಟೈನ್ಮೆಂಟ್ ವಲಯಗಳಲ್ಲಿ ಕೋವಿಡ್ ಟೆಸ್ಟಿಂಗ್ ಪ್ರಮಾಣ ಹೆಚ್ಚಳವಾಗಿಲ್ಲ
    – ಪ್ರತಿ ವಲಯಗಳಲ್ಲೂ ಸಹಾಯವಾಣಿಗಳಿದ್ದರೂ ಸಕಾಲಕ್ಕೆ ಸ್ಪಂದನೆ ದೊರಕುತ್ತಿಲ್ಲ ಎಂಬ ಆರೋಪ ಜಾಸ್ತಿ ಇದೆ
    – ವಲಯವಾರು ವೈದ್ಯ ಸಿಬ್ಬಂದಿ ಕೊರತೆ ಇದ್ದು, ಈ ಹಿನ್ನೆಲೆಯಲ್ಲಿ ಯಾವುದೇ ಕ್ರಮ ಆಗಿಲ್ಲ. ಸ್ವಯಂ ಸೇವಕರ ನೇಮಕ ಹೇಳಿಕೊಳ್ಳುವಂತಿಲ್ಲ

    ಸಿಎಂ ಯಡಿಯೂರಪ್ಪ ಈ ಮೂಲಕ ಸಚಿವರ 10 ದಿನಗಳ ವರ್ಕ್ ರಿಪೋರ್ಟ್‌ನಲ್ಲಿ ವೈಫಲ್ಯಗಳನ್ನು ಎತ್ತಿ ತೋರಿಸಿದ್ದಾರೆ.

  • ಬೆಂಗಳೂರಿನಲ್ಲಿ ಕೊರೊನಾ ತಡೆಗೆ ಅಷ್ಟದಿಗ್ಬಂಧನ?

    ಬೆಂಗಳೂರಿನಲ್ಲಿ ಕೊರೊನಾ ತಡೆಗೆ ಅಷ್ಟದಿಗ್ಬಂಧನ?

    ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕೊರೊನಾ ರಣಕೇಕೆಗೆ ಬ್ರೇಕ್ ಹಾಕಲು ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಮುಂದಾಗಿದ್ದು, ನಗರದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬೆಂಗಳೂರಿನ 8 ವಲಯಗಳಿಗೆ 8 ಸಚಿವರಿಗೆ ಉಸ್ತುವಾರಿ ವಹಿಸಲು ಚಿಂತನೆ ನಡೆಸಲಾಗಿದೆ.

    ಸದ್ಯ ಚಿಂತನೆ ಕಾರ್ಯ ರೂಪಕ್ಕೆ ತರಲು ಸಿಎಂ ಬಿಎಸ್‍ವೈ ಅವರು, ವಲಯವಾರು ಸಚಿವರಿಂದ ಅಧ್ಯಯನ ಮಾಡಿ ಸೋಮವಾರದ ವೇಳೆಗೆ ವರದಿ ಸಲ್ಲಿಸಲು ಸೂಚನೆ ನೀಡಿದ್ದಾರೆ. ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣದ ಕುರಿತು ಪ್ರಮುಖ ಚರ್ಚೆ ನಡೆಸಲಾಗಿದೆ. ಸದ್ಯ ಸಚಿವರು ನೀಡುವ ವರದಿಯ ಬಳಿಕ ಬೆಂಗಳೂರು ಹಾಫ್ ಲಾಕ್ ಡೌನ್ ಅಥವಾ ಫುಲ್ ಲಾಕ್ ಡೌನ್ ಬಗ್ಗೆ ಅಂತಿಮ ನಿರ್ಧಾರ ಮಾಡುವ ಸಾಧ್ಯತೆ ಇದೆ.

    ಕ್ಯಾಬಿನೆಟ್ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಮಾಧುಸ್ವಾಮಿ ಅವರು, ಶನಿವಾರದ ಲಾಕ್‍ಡೌನ್ ಬಗ್ಗೆ ನಾಳೆ ನಿರ್ಧಾರ ಮಾಡಲಾಗುತ್ತದೆ. ಇವತ್ತು ಕೇವಲ ಅಭಿಪ್ರಾಯಕ್ಕೆ ಮಾತ್ರ ಸೀಮಿತ ಮಾಡಲಾಗಿದೆ. ಬೆಂಗಳೂರನ್ನು 8 ವಲಯಗಳಾಗಿ 8 ಸಚಿವರಿಗೆ ಉಸ್ತುವಾರಿ ವಹಿಸಲಾಗಿದೆ. ವಲಯಗಳಿಗೆ ಸಚಿವರ ತಂಡದ ನೇಮಕ ಮಾಡಿದ ಬಳಿಕ ಆಯಾ ತಂಡದ ವಲಯಗಳಿಗೆ ಭೇಟಿ ಕೊಡುತ್ತಾರೆ. ಉಳಿದಂತೆ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಮೆಡಿಕಲ್ ಗ್ಯಾಸ್ ಪೈಪ್ ಲೈನ್, ಬೆಡ್ ಹೆಚ್ಚಳ, ಅಕ್ಸಿಜನ್ ವ್ಯವಸ್ಥೆಗೆ 207 ಕೋಟಿ ರೂ. ಹಣ ಮಂಜೂರು ಮಾಡಲಾಗಿದೆ. ಕೊರೊನಾವನ್ನು ತೀವ್ರವಾಗಿ ತೆಗೆದುಕೊಂಡು ಟೆಸ್ಟ್ ವೇಗವನ್ನು ಹೆಚ್ಚಿಸಿಲು ಮುಂದಾಗಿದ್ದೇವೆ. ಆ ಮೂಲಕ ಕೊರೊನಾವನ್ನ ಭೇದಿಸುತ್ತೇವೆ ಎಂದರು.

    ಬೆಂಗಳೂರಿನ ವಲಯಗಳಲ್ಲಿ ಹೆಚ್ಚು ಕಡಿಮೆಯಾದರೆ ಜವಾಬ್ದಾರಿ ವಹಿಸಿಕೊಂಡಿರುವ ಸಚಿವರೇ ಹೊಣೆ ಮಾಡಲಾಗುತ್ತದೆ. ಅಲ್ಲದೇ ಉಸ್ತುವಾರಿ ಸಚಿವರ ಅಡಿಯಲ್ಲಿ ಅಧಿಕಾರಿಗಳ ತಂಡದ ಮಾಡಿ ಅಲ್ಲಿನ ಕಾರ್ಪೊರೇಟರ್, ಅಧಿಕಾರಿಗಳು, ಜನಪ್ರತಿನಿಧಿಗಳ ತಂಡದ ರಚಿಸಲಾಗುತ್ತದೆ. ಕೂಡಲೇ ತಂಡದ ವಲಯಗಳಲ್ಲಿ ಇರುವ ಕಾಂಟೈನ್‍ಮೆಂಟ್ ಝೋನ್, ಸೋಂಕು ಹರಡಿರುವ ಪ್ರಮಾಣ, ಸೋಂಕಿತರ ಸಂಖ್ಯೆ, ಆಸ್ಪತ್ರೆ ಸಮಸ್ಯೆ, ಬೆಡ್ ಸಮಸ್ಯೆ ಸೇರಿದಂತೆ ಕೊರೊನಾ ತಡೆಗೆ ಅಗತ್ಯವಿರುವ ಕ್ರಮಗಳನ್ನು ಸಚಿವರು ನಿರ್ವಹಿಸಬೇಕಿದೆ. ಈಗಾಗಲೇ ಕೊರೊನಾ ಜವಾಬ್ದಾರಿ ವಹಿಸಿಕೊಂಡಿರುವ ಸಚಿವರಾದ ಶ್ರೀರಾಮುಲು ಮತ್ತು ಡಾ.ಕೆ ಸುಧಾಕರ್ ಅವರು ಮೇಲ್ವಿಚಾರಣೆಯನ್ನು ಮಾಡಲಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಸಿಎಂ ಕಾರ್ಯದರ್ಶಿ ಆಗಿರುವ ಎಸ್.ಆರ್.ವಿಶ್ವನಾಥ್ ಅವರಿಗೂ ವಲಯದ ಉಸ್ತುವಾರಿ ನೀಡಲಾಗುತ್ತದೆ ಎನ್ನಲಾಗಿದೆ.

    ಪ್ರತಿದಿನ ವಲಯದ ಉಸ್ತುವಾರಿಗಳು ಕೊರೊನಾ ಕುರಿತ ಮಾಹಿತಿಯನ್ನು ಸಿಎಂ ಅವರಿಗೆ ಸಲ್ಲಿಕೆ ಮಾಡಬೇಕಿದೆ. ಅಷ್ಟವಲಯ ತಂಡದಲ್ಲಿ ಕೊರೊನಾ ಕಂಟ್ರೋಲ್‍ಗೆ ಮೈಕ್ರೋ ಲೆವಲ್ ಸೆಟ್ ಅಪ್ ಮಾಡಲಾಗುತ್ತಿದೆ. ಈ ತಂಡ ನಾಲ್ಕು ಹಂತದಲ್ಲಿ ಕಾರ್ಯಾಚರಣೆ ನಡೆಸಲಿದೆ. ಸಚಿವರು, ಶಾಸಕರು, ಪಾಲಿಕೆ ಸದಸ್ಯ, ವಾರ್ಡ್ ಅಧಿಕಾರಿಗಳು ಕಾರ್ಯನಿರ್ವಹಿಸಲಿದ್ದಾರೆ. ಸದ್ಯದಲ್ಲಿ ಸಿಎಂ ಅವರ ನಿರ್ಧಾರ ಪ್ರಮುಖವಾಗಿದ್ದು, ಸರ್ಕಾರ ಈ ಅಷ್ಟ ಉಸ್ತುವಾರಿಗಳ ಚಿಂತನೆ ಯಶಸ್ವಿಯಾಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.

    ವಲಯ ಉಸ್ತುವಾರಿಗಳು ಯಾರು? ಎಲ್ಲಿಗೆ? (ಸಂಭವನೀಯ ಪಟ್ಟಿ)
    ಬೆಂಗಳೂರಿನಲ್ಲಿ ಒಟ್ಟು ಎಂಟು ವಲಯಗಳು:
    ಬಿಬಿಎಂಪಿ ಪೂರ್ವ ವಲಯ – 44 ವಾರ್ಡ್ – ಡಾ.ಅಶ್ವಥ್ ನಾರಾಯಣ್
    ಬಿಬಿಎಂಪಿ ಪಶ್ಚಿಮ ವಲಯ- 44 ವಾರ್ಡ್ – ಸೋಮಣ್ಣ
    ಬಿಬಿಎಂಪಿ ದಕ್ಷಿಣ ವಲಯ – 44 ವಾರ್ಡ್ – ಅಶೋಕ್
    ಬಿಬಿಎಂಪಿ ಮಹಾದೇವ ಪುರ ವಲಯ – 17 – ಬೈರತಿ ಬಸವರಾಜು
    ಬಿಬಿಎಂಪಿ ಯಲಹಂಕ- 11ವಾರ್ಡ್ – ಎಸ್.ಆರ್.ವಿಶ್ವನಾಥ್
    ಬಿಬಿಎಂಪಿ ಆರ್ ಆರ್ ನಗರ ವಲಯ- 14 – ಎಸ್.ಟಿ.ಸೋಮಶೇಖರ್
    ಬಿಬಿಎಂಪಿ ದಾಸರಹಳ್ಳಿ ವಲಯ- 08 ವಾರ್ಡ್ – ಗೋಪಾಲಯ್ಯ
    ಬಿಬಿಎಂಪಿ ಬೊಮ್ಮನಹಳ್ಳಿ ವಲಯ- 16 – ಸುರೇಶ್ ಕುಮಾರ್

  • ಇಂದು ಸಂಜೆ ಕೇಂದ್ರ ಸಚಿವರ ಮಹತ್ವದ ಸಭೆ

    ಇಂದು ಸಂಜೆ ಕೇಂದ್ರ ಸಚಿವರ ಮಹತ್ವದ ಸಭೆ

    ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಈ ನಡುವೆ ಕೇಂದ್ರ ಸಚಿವರ ತಂಡ ಸಭೆ ನಡೆಸಲಿದೆ.

    ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸಂಜೆ ಐದು ಗಂಟೆಗೆ ಸಭೆ ನಡೆಯಲಿದ್ದು, ಸಭೆಯಲ್ಲಿ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

    ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರಾಸಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದಗೌಡ, ವಿದೇಶಾಂಗ ಸಚಿವ ಜೈಶಂಕರ್, ರೈಲ್ವೆ ಸಚಿವ ಪಿಯೂಷ್ ಗೋಯಲ್, ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಪುರಿ ಭಾಗಿಯಾಗಲಿದ್ದಾರೆ.

    ಪ್ರಸುತ್ತ ದೇಶದಲ್ಲಿ ಏರಿಕೆಯಾಗುತ್ತಿರುವ ಸೋಂಕು ಮತ್ತು ಲಾಕ್‍ಡೌನ್ ವಿನಾಯತಿಗಳ ಬಗ್ಗೆ ಚರ್ಚೆ ನಡೆಯಲಿದೆ. ರೈಲು ಮತ್ತು ವಿಮಾನ ಸಂಚಾರಕ್ಕೆ ಅವಕಾಶ, ಕೇಂದ್ರದ ವಿಶೇಷ ಆರ್ಥಿಕ ಪ್ಯಾಕೇಜ್ ಅನುಷ್ಠಾನ ಹಾಗೂ ಮುಂಗಾರು ಮಳೆ ಆರಂಭಾಗುತ್ತಿದೆ. ಹೀಗಾಗಿ ದೇಶದಲ್ಲಿ ಭಿತ್ತನೆ ಬೀಜ ಹಾಗೂ ರಸಗೊಬ್ಬರಗಳ ವಿತರಣೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ.

  • ಎಸ್ಸೆಸ್ಸೆಲ್ಸಿ ಪರೀಕ್ಷೆಗಾಗಿ ಅಗತ್ಯ ಸಿದ್ಧತೆಗೆ ಡಿಡಿಪಿಐಗಳಿಗೆ ಸುರೇಶ್ ಕುಮಾರ್ ಸೂಚನೆ

    ಎಸ್ಸೆಸ್ಸೆಲ್ಸಿ ಪರೀಕ್ಷೆಗಾಗಿ ಅಗತ್ಯ ಸಿದ್ಧತೆಗೆ ಡಿಡಿಪಿಐಗಳಿಗೆ ಸುರೇಶ್ ಕುಮಾರ್ ಸೂಚನೆ

    – ವಿದ್ಯಾರ್ಥಿಗಳೊಂದಿಗೆ ಸುರೇಶ್ ಕುಮಾರ್ ಸಂವಾದ

    ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಗಾಗಿ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಡಿಡಿಪಿಐಗೆಗಳಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.

    ಪರೀಕ್ಷೆ ದಿನಾಂಕ ಘೋಷಣೆ ಹಿನ್ನೆಲೆ ಸಚಿವ ಸುರೇಶ್ ಕುಮಾರ್ ಅವರು ಡಿಡಿಪಿಐಗಳಿಗೆ ಪತ್ರ ಬರೆದಿದ್ದು, ಈ ಬಾರಿ ಪರೀಕ್ಷೆಯಲ್ಲಿ ಅಧಿಕಾರಿಗಳ ಜವಾಬ್ದಾರಿ ಹೆಚ್ಚಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆರೋಗ್ಯ ಪಾಲನೆಯ ಕ್ರಮಕೈಗೊಳ್ಳಬೇಕು. ವಿದ್ಯಾರ್ಥಿಗಳ ಕಲಿಕೆಯ ಹಿತಕ್ಕಾಗಿ ಪುನರ್ಮನನ ತರಗತಿಗಳನ್ನ ಪ್ರಾರಂಭ ಮಾಡಲಾಗಿದೆ. ಪರೀಕ್ಷೆಗೆ ಇಲಾಖೆ ತೆಗೆದುಕೊಂಡ ಮುಂಜಾಗ್ರತಗೆ ಅಗತ್ಯ ಕ್ರಮವಹಿಸಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಊರಿಗೆ ತೆರಳಿರೋ ಸಿಇಟಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

    ಅಷ್ಟೇ ಅಲ್ಲದೆ ಸ್ವತಃ ಸಚಿವರೇ ವಿದ್ಯಾರ್ಥಿಗಳ ಮನಸ್ಥಿತಿ ಅರಿಯಲು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ ಪರೀಕ್ಷೆಗೆ ಸಜ್ಜಾಗಿರುವ ಕುರಿತಂತೆ ವಿಚಾರಿಸಿದ್ದಾರೆ. ತಮ್ಮ ಕಚೇರಿಯಿಂದ ಶಿವಮೊಗ್ಗ, ಹೊಸಕೋಟೆ, ಬೆಂಗಳೂರು, ಬಾಗಲಕೋಟೆ, ಇಳ್ಕಲ್, ಹಾನಗಲ್, ಸವಣೂರು, ಗದಗ, ಹುಬ್ಬಳ್ಳಿ ಮತ್ತಿತರ ಭಾಗದ 40ಕ್ಕೂ ಹೆಚ್ಚು ವಿದ್ಯಾರ್ಥಿ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿದ ಸಚಿವರು, ಕೊರೊನಾ ಹಿನ್ನೆಲೆಯಲ್ಲಿ ಪರೀಕ್ಷೆ ಈ ಬಾರಿ ಸ್ವಲ್ಪ ತಡವಾಗಿ ಆರಂಭವಾಗುತ್ತಿರುವುದಕ್ಕೆ ಬೇಜಾರು ಮಾಡಿಕೊಳ್ಳದೇ ಚೆನ್ನಾಗಿ ಓದಬೇಕು ಎಂದು ಸಲಹೆ ನೀಡಿದರು.

    ಆರೋಗ್ಯದ ಕಡೆ ಹೆಚ್ಚಿನ ಗಮನ ನೀಡುವುದು ಸೇರಿದಂತೆ ದೂರದರ್ಶನ ಚಂದನ ವಾಹಿನಿಯಲ್ಲಿ ಪುನರ್ಮನನ ತರಗತಿಗಳನ್ನು ನೋಡುತ್ತಿದ್ದೀರಾ ಎಂದು ಪ್ರಶ್ನಿಸಿದರು. ಸಚಿವರ ಕಚೇರಿಯಿಂದ ಫೋನ್ ಕರೆ ಬಂದ ಸಂದರ್ಭದಲ್ಲಿ ಇಳಕಲ್‍ನ ವಿದ್ಯಾರ್ಥಿನಿಯೊಬ್ಬಳು ಚಂದನ ವಾಹಿನಿಯಲ್ಲಿ ಪುನರ್ಮನನ ತರಗತಿಗಳನ್ನು ವೀಕ್ಷಿಸುತ್ತಿದ್ದಳು. ಪುನರ್ಮನನ ತರಗತಿಗಳು ಚೆನ್ನಾಗಿ ಮೂಡಿಬರುತ್ತಿದ್ದು, ಈಗ ಶಾಲಾ ತರಗತಿಗಳು ನಡೆಯುತ್ತಿಲ್ಲವಾದ್ದರಿಂದ ಇದರಿಂದ ಸಾಕಷ್ಟು ಉಪಯೋಗವಾಗುತ್ತಿದೆ ಎಂದು ತಿಳಿಸಿದ್ದು ಗಮನಾರ್ಹವಾಗಿತ್ತು.

    ಶಿವಮೊಗ್ಗದ ಆದಿಚುಂಚನಗಿರಿ ಶಾಲೆಯ ವಿದ್ಯಾರ್ಥಿನಿ ಎನ್.ಎಸ್.ಶ್ರದ್ಧಾ ಒಡೆಯರಪುರ ವಿದ್ಯಾರ್ಥಿನಿ ತಮ್ಮ ಮನೆಯಲ್ಲಿ ಟಿ.ವಿ. ಇಲ್ಲವಾದ್ದರಿಂದ ಚಂದನ ವಾಹಿನಿ ನೋಡಲು ಆಗುತ್ತಿಲ್ಲ ಎಂದು ಹೇಳಿದ ತಕ್ಷಣವೇ ಶಿವಮೊಗ್ಗದ ಬಿಇಒಗೆ ಫೋನ್ ಮಾಡಿದ ಸಚಿವರು, ವಿದ್ಯಾರ್ಥಿನಿಯ ಫೋನ್ ನಂಬರ್ ನೀಡಿದ್ದಲ್ಲದೇ ಆಕೆಗೆ ಚಂದನ ವಾಹಿನಿಯ ಪುನರ್ಮನನ ತರಗತಿ ವೀಕ್ಷಿಸಲು ಸೂಕ್ತ ವ್ಯವಸ್ಥೆ ಮಾಡಿಕೊಡಲು ಸೂಚಿಸಿದರು.

    ಸಚಿವರೊಂದಿಗೆ ಮಾತನಾಡಿದ ಎಲ್ಲ ವಿದ್ಯಾರ್ಥಿಗಳು ಕೊನೆಗೂ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿದ್ದರಿಂದ ಖುಷಿಯಾಗಿದ್ದು, ನಿನ್ನೆಯಿಂದಲೇ ಪರೀಕ್ಷೆಗೆ ಗಂಭೀರವಾಗಿ ಓದುತ್ತಿರುವುದಾಗಿ ಹೇಳಿಕೊಂಡರು. ಪರೀಕ್ಷೆಯೆಂದರೆ ಭೂತವಲ್ಲ, ಅದೊಂದು ಕ್ರೀಡೆ ಇದ್ದಂತೆ ಎಂದು ತಿಳಿದು ಸಂತೋಷದಿಂದ ಪರೀಕ್ಷಾ ಕೊಠಡಿಗೆ ತೆರಳುವಂತೆ ಸಚಿವರು ತಿಳಿಸಿದರು. ಹಾಗೆಯೇ ಕೊರೊನಾ ಹಿನ್ನೆಲೆಯಲ್ಲಿ ಪರೀಕ್ಷೆಗೆ ಕೈಗೊಂಡ ಸಿದ್ಧತೆಗಳನ್ನು ವಿವರಿಸಿದರಲ್ಲದೇ ತಾವು ಕಷ್ಟಪಟ್ಟು ಓದಿ ಪರೀಕ್ಷೆಯನ್ನು ಖುಷಿಯಿಂದ ಬರೆಯುವುದಷ್ಟೇ ನಿಮ್ಮ ಕೆಲಸ ಎಂದು ಸಲಹೆ ಮಾಡಿದರು.

    ಹಾಗೆಯೇ ನಿಮ್ಮ ಸ್ನೇಹಿತರಾರಾದರೂ ತಮ್ಮ ಶಾಲೆಯಿಂದ ದೂರದ ಊರಿನಲ್ಲಿದ್ದರೆ, ಅವರಿಗೆ ಹತ್ತಿರದ ಪರೀಕ್ಷಾ ಕೇಂದ್ರಕ್ಕೆ ಬದಲಾಯಿಸಿಕೊಂಡು ಅವರು ಇರುವ ಊರಿನ ಸಮೀಪದಲ್ಲೇ ಪರೀಕ್ಷೆ ಬರೆಯಲು ಅವಕಾಶ ಇರುವ ಕುರಿತು ತಿಳಿಸಬೇಕೆಂದೂ ಸುರೇಶ್ ಕುಮಾರ್ ಸಲಹೆ ನೀಡಿದರು.

  • ಮೂರ್ನಾಲ್ಕು ಸಚಿವರನ್ನು ಬಿಟ್ಟು ಉಳಿದವರಿಗೆ ಕೊರೊನಾ ಭಯವಿದೆ- ಎಂಎಲ್‍ಸಿ ಗೋಪಾಲಸ್ವಾಮಿ ವ್ಯಂಗ್ಯ

    ಮೂರ್ನಾಲ್ಕು ಸಚಿವರನ್ನು ಬಿಟ್ಟು ಉಳಿದವರಿಗೆ ಕೊರೊನಾ ಭಯವಿದೆ- ಎಂಎಲ್‍ಸಿ ಗೋಪಾಲಸ್ವಾಮಿ ವ್ಯಂಗ್ಯ

    ಹಾಸನ: ಗ್ರೀನ್‍ಝೋನ್‍ನಲ್ಲಿರುವ ಹಾಸನ ಜಿಲ್ಲೆಗೆ ಹೊಸ ಸವಾಲು ಎದುರಾಗಿದೆ. ಮುಂಬೈನಿಂದ ಚನ್ನರಾಯಪಟ್ಟಣಕ್ಕೆ ಮೂರು ಸಾವಿರ ಜನ ಆಗಮಿಸಲು ಕಾಯುತ್ತಿರುವ ಬಗ್ಗೆ ಎಂಎಲ್‍ಸಿ ಗೋಪಾಲಸ್ವಾಮಿ ಮಾಹಿತಿ ನೀಡಿದ್ದು, ಅವರೆಲ್ಲರನ್ನು ಸಮರ್ಪಕವಾಗಿ ಕ್ವಾರಂಟೈನ್ ಮಾಡುವ ಬಗ್ಗೆ ಎಚ್ಚರಿಕೆ ವಹಿಸಲು ಸೂಚಿಸಿದ್ದಾರೆ.

    ಮುಂಬೈನಿಂದ ಆಗಮಿಸಿದ್ದ ಮಂಡ್ಯ ಜಿಲ್ಲೆ, ನಾಗಮಂಗಲ ಮೂಲದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿತ್ತು. ಆತ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ 5 ಗ್ರಾಮಗಳಿಗೆ ಭೇಟಿ ನೀಡಿ ಸ್ನೇಹಿತರು, ಸಂಬಂಧಿಕರನ್ನು ಭೇಟಿ ಮಾಡಿ ಹೋಗಿದ್ದ. ಈ ಹಿನ್ನೆಲೆಯಲ್ಲಿ 5 ಗ್ರಾಮಗಳನ್ನು ಸೀಲ್‍ಡೌನ್ ಮಾಡಿದ್ದರಿಂದ ಎಂಎಲ್‍ಸಿ ಗೋಪಾಲಸ್ವಾಮಿ ಗ್ರಾಮದ ಜನರಿಗೆ ಅಗತ್ಯ ವಸ್ತುಗಳಿಗೆ ತೊಂದರೆ ಆಗಬಾರದು ಎಂದು ಆಹಾರ ಸಾಮಗ್ರಿ ಕಿಟ್ ವಿತರಣೆ ಮಾಡಿದರು.

    ಇದೇ ವೇಳೆ ಹಾಸನ ಜಿಲ್ಲೆ ಗ್ರೀನ್‍ಝೋನ್‍ನಲ್ಲಿದ್ದರೂ ಮುಂದಿನ ದಿನಗಳಲ್ಲಿ ಎದುರಿಸಬೇಕಾದ ಸವಾಲುಗಳ ಬಗ್ಗೆ ಮಾತನಾಡಿದರು. ಮುಂಬೈನಿಂದ ಜಿಲ್ಲೆಯ ಚನ್ನರಾಯಪಟ್ಟಣಕ್ಕೆ ಬರಲು 3 ಸಾವಿರ ಜನ ಅರ್ಜಿ ಹಾಕಿಕೊಂಡಿದ್ದಾರೆ. ಚನ್ನರಾಯಪಟ್ಟಣದ ಪಕ್ಕದ ತಾಲೂಕುಗಳಾದ ಕೆ.ಆರ್.ಪೇಟೆ ಮತ್ತು ನಾಗಮಂಗಲಕ್ಕೆ ಸುಮಾರು 10 ಸಾವಿರ ಜನ ಬರುವ ಮಾಹಿತಿ ಇದೆ. ಅವರ ಆರೋಗ್ಯ ಪರಿಶೀಲನೆ ಕಟ್ಟುನಿಟ್ಟಾಗಿ ಆಗಬೇಕು. ಆರ್ಥಿಕವಾಗಿ ಚೆನ್ನಾಗಿರುವವರಿಗೆ ಅವರ ಖರ್ಚಿನಲ್ಲೇ ಹೋಟೆಲ್‍ಗಳಲ್ಲಿ ಕ್ವಾರಂಟೈನ್‍ನಲ್ಲಿ ಮಾಡಬೇಕು. ಬಡ ಜನರಿಗೆ ಸರ್ಕಾರದ ಸಹಾಯದಲ್ಲಿ ಕ್ವಾರಂಟೈನ್ ಮಾಡಬೇಕು ಎಂದರು.

    ಕೊರೊನಾದಂತಹ ಸಂದಿಗ್ಧ ಸಂದರ್ಭದಲ್ಲಿ ಸರ್ಕಾರ ಸಚಿವರ ಬಗ್ಗೆ ಬೇಸರ ವ್ಯಕ್ತಪಡಿಸಿದ ಗೋಪಾಲಸ್ವಾಮಿ ಅವರು, ಮೂರು-ನಾಲ್ಕು ಜನ ಸಚಿವರು ಬಿಟ್ಟು ಬೇರೆಯವರಿಗೆ ಕೊರೊನಾ ಭಯವಿದೆ. ನಮಗೆ ಕೊರೊನ ಬಂದುಬಿಡುತ್ತೆ ಎಂಬ ರೀತಿಯ ಭೀತಿ ಸಚಿವರಲ್ಲಿದೆ ಎಂದು ವ್ಯಂಗ್ಯವಾಡಿದರು.

  • ಹೊಸದಾಗಿ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ರಮೇಶ್ ಜಾರಕಿಹೊಳಿ ಕೊಕ್

    ಹೊಸದಾಗಿ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ರಮೇಶ್ ಜಾರಕಿಹೊಳಿ ಕೊಕ್

    – ಬಿಎಸ್‍ವೈಗೆ ಬೆಂಗ್ಳೂರು ನಗರ ಜವಾಬ್ದಾರಿ

    ಬೆಂಗಳೂರು: ಹೆಮ್ಮಾರಿ ಕೊರೊನಾ ವೈರಸ್ ಭೀತಿಯಿಂದ ರಾಜ್ಯದ ಜನತೆ ಆತಂಕಕ್ಕೆ ಒಳಗಾಗಿದ್ದಾರೆ. ಸರ್ಕಾರವು ಸೋಂಕು ಹರಡುವುದನ್ನು ತಡೆಯುವಲ್ಲಿ ವಿವಿಧ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇಂತಹ ಸಂದರ್ಭದಲ್ಲಿಯೇ ಹೊಸದಾಗಿ ಜಿಲ್ಲೆಯ ಉಸ್ತುವಾರಿ ಸಚಿವರ ನೇಮಕ ಮಾಡಿದ್ದಾರೆ. ಆದರೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸೇರಿದಂತೆ ಮೂವರು ಸಚಿವರಿಗೆ ಕೋಕ್ ನೀಡಲಾಗಿದೆ.

    ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬೆಂಗಳೂರು ನಗರ ಜಿಲ್ಲಾ ಉಸ್ತವಾರಿಯನ್ನು ವಹಿಸಿಕೊಂಡಿದ್ದಾರೆ. ರಮೇಶ್ ಜಾರಕಿಹೊಳಿ, ಗೋಪಾಲಯ್ಯ, ಶ್ರೀಮಂತ ಪಾಟೀಲ್ ಅವರಿಗೆ ಯಾವುದೇ ಜಿಲ್ಲಾ ಉಸ್ತುವಾರಿ ನೀಡಿಲ್ಲ. ಸಚಿವ ಜಗದೀಶ್ ಶೆಟ್ಟರ್ ಅವರಿಗೆ ಬೆಳಗಾವಿ ಜಿಲ್ಲೆಯ ಜೊತೆಗೆ ಹೆಚ್ಚುವರಿಯಾಗಿ ಧಾರವಾಡ ಜಿಲ್ಲೆಯ ಉಸ್ತುವಾರಿ ನೀಡಲಾಗಿದೆ.

    ಬಸವರಾಜ ಬೊಮ್ಮಾಯಿ, ಜೆ.ಸಿ. ಮಾಧುಸ್ವಾಮಿ, ಪ್ರಭು ಚವ್ಹಾಣ ಅವರಿಗೆ ಹೆಚ್ಚುವರಿ ಜಿಲ್ಲೆಗಳನ್ನು ನೀಡಿಲಾಗಿದೆ. ಆದರೆ ರಮೇಶ್ ಜಾರಕಿಹೊಳಿ ಅಥವಾ ಶ್ರೀಮಂತ ಪಾಟೀಲ್ ಅವರನ್ನು ಕೈಬಿಟ್ಟಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.

    ಯಾರಿಗೆ ಯಾವ ಜಿಲ್ಲೆ?
    ಬಿ.ಎಸ್.ಯಡಿಯೂರಪ್ಪ- ಬೆಂಗಳೂರು ನಗರ ಜಿಲ್ಲೆ
    ಸಿ.ಎಸ್.ಅಶ್ವಥ್ ನಾರಾಯಣ- ರಾಮನಗರ
    ಬಿ.ಸಿ. ಪಾಟೀಲ – ಕೊಪ್ಪಳ
    ಲಕ್ಷ್ಣಣ ಸವದಿ- ರಾಯಚೂರು
    ಗೋವಿಂದ ಕಾರಜೋಳ- ಬಾಗಲಕೋಟೆ
    ಕೆ.ಎಸ್.ಈಶ್ವರಪ್ಪ- ಶಿವಮೊಗ್ಗ
    ಆರ್.ಅಶೋಕ್- ಬೆಂಗಳೂರು ಗ್ರಾಮಾಂತರ
    ಜಗದೀಶ್ ಶೆಟ್ಟರ್- ಬೆಳಗಾವಿ, ಧಾರವಾಡ (ಹೆಚ್ಚುವರಿ)

    ಬಿ.ಶ್ರೀರಾಮುಲು- ಚಿತ್ರದುರ್ಗ
    ಕೆ.ಸುಧಾಕರ್- ಚಿಕ್ಕಬಳ್ಳಾಪುರ
    ಎಸ್.ಸುರೇಶ್ ಕುಮಾರ್- ಚಾಮರಾಜನಗರ
    ವಿ.ಸೋಮಣ್ಣ- ಕೊಡಗು
    ಸಿ.ಟಿ.ರವಿ- ಚಿಕ್ಕಮಗಳೂರು
    ಬಸವರಾಜ ಬೊಮ್ಮಾಯಿ- ಹಾವೇರಿ, ಉಡುಪಿ (ಹೆಚ್ಚುವರಿ)
    ಕೋಟಾ ಶ್ರೀನಿವಾಸ ಪೂಜಾರಿ- ದಕ್ಷಿಣ ಕನ್ನಡ
    ಜೆ.ಸಿ. ಮಾಧುಸ್ವಾಮಿ- ತುಮಕೂರು, ಹಾಸನ (ಹೆಚ್ಚುವರಿ)
    ಸಿ.ಸಿ. ಪಾಟೀಲ- ಗದಗ
    ಎಚ್.ನಾಗೇಶ್- ಕೋಲಾರ

    ಪ್ರಭು ಚವ್ಹಾಣ- ಬೀದರ್, ಯಾದಗಿರಿ (ಹೆಚ್ಚುವರಿ)
    ಶಶಿಕಲಾ ಜೊಲ್ಲೆ- ವಿಜಯಪುರ
    ಶಿವರಾಮ್ ಹೆಬ್ಬಾರ್- ಉತ್ತರ ಕನ್ನಡ
    ಎಸ್.ಟಿ.ಸೋಮಶೇಖರ್- ಮೈಸೂರು
    ಕೆ.ಸಿ.ನಾರಾಯಣಗೌಡ- ಮಂಡ್ಯ
    ಆನಂದಸಿಂಗ್- ಬಳ್ಳಾರಿ
    ಬೈರತಿ ಬಸವರಾಜ- ದಾವಣಗೆರೆ

  • ಜನತಾ ಕರ್ಫ್ಯೂ ಪಾಲನೆಗೆ ಸಚಿವರು, ಶಾಸಕರಿಗೆ ಸಿಎಂ ಸೂಚನೆ

    ಜನತಾ ಕರ್ಫ್ಯೂ ಪಾಲನೆಗೆ ಸಚಿವರು, ಶಾಸಕರಿಗೆ ಸಿಎಂ ಸೂಚನೆ

    ಬೆಂಗಳೂರು: ಕೊರೊನಾ ವೈರಸ್ ಪರಿಣಾಮದಿಂದ ಕಳೆದ ಕೆಲವು ದಿನಗಳಿಂದಲೂ ಸಿಎಂ ಯಡಿಯೂರಪ್ಪ ಅವರ ಧವಳಗಿರಿ ನಿವಾಸ ಸ್ತಬ್ಧವಾಗಿದೆ. ಇವತ್ತೂ ಕೂಡ ಸಿಎಂ ನಿವಾಸ ಸ್ತಬ್ಧವಾಗಿತ್ತಲ್ಲದೇ, ಸಿಎಂ ಭೇಟಿಗೆ ಸಾರ್ವಜನಿಕರಿಗೆ ನಿರ್ಬಂಧ ಮುಂದುವರೆದಿತ್ತು. ಇಂದು ಯಾರನ್ನು ಭೇಟಿಯಾಗದಿರಲು ಸಿಎಂ ಯಡ ನಿರ್ಧರಿಸಿದ್ದಾರೆ.

    ಸಿಎಂ ಭೇಟಿಗೆ ಬರುತ್ತಿರುವ ಒಂದಷ್ಟು ಜನರನ್ನು ಪೊಲೀಸರು ವಾಪಸ್ ಕಳುಹಿಸುತ್ತಿದ್ದಾರೆ. ಸಿಎಂ ಇಂದು ಯಾರನ್ನು ಭೇಟಿ ಯಾಗುವುದಿಲ್ಲವೆಂದು ಪೊಲೀಸರು ಹೇಳಿ ವಾಪಸ್ ಕಳಿಸುತ್ತಿದ್ದಾರೆ. ಅಲ್ಲದೆ ತಮ್ಮ ಭದ್ರತಾ ಸಿಬ್ಬಂದಿ ಟೀಂ ಗೂ ರೆಸ್ಟ್ ಕೊಟ್ಟಿರುವ ಸಿಎಂ, ಕೇವಲ ಕೆಲವೊಂದಿಷ್ಟು ಮಂದಿಯಿಂದ ಮಾತ್ರ ಸಿಎಂ ಮನೆಗೆ ಭದ್ರತೆ ನೀಡಲಾಗಿದೆ. ಮಾಸ್ಕ್ ಧರಿಸಿ ಪೊಲೀಸರು ಭದ್ರತೆಯಲ್ಲಿ ತೊಡಗಿದ್ದಾರೆ.

    ಭಾನುವಾರ ಸಿಎಂ ಜನತಾ ಕರ್ಫ್ಯೂ ಪಾಲನೆ:
    ಜನತಾ ಕಫ್ರ್ಯೂ ಹಿನ್ನೆಲೆ ನಾಳೆ ಇಡೀ ದಿನ ಧವಳಗಿರಿ ನಿವಾಸದಲ್ಲೆ ಇದ್ದು, ಜನತಾ ಕರ್ಫ್ಯೂ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಗಳನ್ನು ಸಿಎಂ ಯಡಿಯೂರಪ್ಪ ಸಹ ಪಾಲಿಸಲಿದ್ದಾರೆ. ನಾಳೆ ಸಂಜೆ 5ಕ್ಕೆ ಕೊರೊನಾ ತಡೆಯುವಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ಚಪ್ಪಾಳೆ ಮೂಲಕ ಧನ್ಯವಾದ ಅರ್ಪಿಸಲಿದ್ದಾರೆ. ಧವಳಗಿರಿ ನಿವಾಸದ ಬಾಲ್ಕನಿ ಅಥವಾ ಗೇಟ್ ಬಳಿಯಲ್ಲಿ ನಿಂತು ಚಪ್ಪಾಳೆ ತಟ್ಟುವ ಮೂಲಕ ಧನ್ಯವಾದ ಸಲ್ಲಿಸಲಿದ್ದಾರೆ.

    ಎಲ್ಲಾ ಶಾಸಕರು, ಮಂತ್ರಿಗಳು ನಾಳೆ ನಿಮ್ಮ ನಿಮ್ಮ ಮನೆಗಳಲ್ಲೇ ಇರಿ ಎಂದು ಸಿಎಂ ಯಡಿಯೂರಪ್ಪ ಇದೇ ವೇಳೆ ಸೂಚಿಸಿದ್ದಾರೆ. ಹಾಗೆಯೇ ಸಿಎಂ ನಿವಾಸಕ್ಕೆ ಸಚಿವರು, ಶಾಸಕರಿಗೂ ಪ್ರವೇಶ ನಿರ್ಬಂಧ ಮಾಡಲಾಗಿದೆ. ಪ್ರೊಟೋಕಾಲ್ ಅಧಿಕಾರಿಗಳು, ಸಿಬ್ಬಂದಿ ಬಿಟ್ಟು ಮತ್ಯಾರಿಗೂ ಪ್ರವೇಶ ಇರುವುದಿಲ್ಲ ಎಂದು ಸಚಿವರು ಶಾಸಕರಿಗೆ ಈಗಾಗಲೇ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

  • ನಾಳೆ ಬೆಳಗ್ಗೆಯೇ ಬಹುಮತ ಸಾಬೀತುಪಡಿಸಿ- ಕೈ ಸರ್ಕಾರಕ್ಕೆ ಎಂಪಿ ರಾಜ್ಯಪಾಲ ಆದೇಶ

    ನಾಳೆ ಬೆಳಗ್ಗೆಯೇ ಬಹುಮತ ಸಾಬೀತುಪಡಿಸಿ- ಕೈ ಸರ್ಕಾರಕ್ಕೆ ಎಂಪಿ ರಾಜ್ಯಪಾಲ ಆದೇಶ

    – ರಾಜ್ಯಪಾಲರ ಭಾಷಣದ ಬಳಿಕ ವಿಶ್ವಾಸ ಮತಯಾಚನೆ
    – ಮುಂದೂಡುವುದು, ವಿಳಂಬ, ಅಮಾನತು ಸಾಧ್ಯವಿಲ್ಲ
    – ಆರು ಸಚಿವರ ರಾಜೀನಾಮೆ ಅಂಗೀಕಾರ

    ಭೋಪಾಲ್: ಮಧ್ಯಪ್ರದೇಶ ರಾಜಕೀಯ ಹೈ ಡ್ರಾಮಾ ದಿನದಿಂದ ದಿನಕ್ಕೆ ಕುತೂಹಲ ಕೆರಳಿಸುತ್ತಿದ್ದು, ಕಾಂಗ್ರೆಸ್ಸಿನ 22 ಶಾಸಕರ ರಾಜೀನಾಮೆ ಪೈಕಿ ಇದೀಗ ಆರು ಸಚಿವರ ರಾಜೀನಾಮೆಯನ್ನು ಸ್ಪೀಕರ್ ಅಂಗೀಕರಿಸಿದ್ದು, ಮತ್ತೊಂದೆಡೆ ನಾಳೆಯೇ ಬಹುಮತ ಸಾಬೀತು ಪಡಿಸುವಂತೆ ಕಮಲ್‍ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮಧ್ಯಪ್ರದೇಶದ ರಾಜ್ಯಪಾಲ ಲಾಲ್‍ಜೀ ಟಂಡನ್ ನಿರ್ದೇಶಿಸಿದ್ದಾರೆ.

    ಈ ಮೂಲಕ ಕಾಂಗ್ರೆಸ್ ಸರ್ಕಾರ ರಚನೆಯಾಗಿ ಕೇವಲ 15 ತಿಂಗಳಿಗೆ ಬೀಳುವ ಹಂತಕ್ಕೆ ತಲುಪಿದೆ. ಮಾರ್ಚ್ 16ರಂದು ಬೆಳಗ್ಗೆ 11ಕ್ಕೆ ನನ್ನ ಭಾಷಣದ ಮೂಲಕ ಅಧಿವೇಶನ ಆರಂಭವಾಗಲಿದೆ. ಇದಾದ ಬಳಿಕ ಮೊದಲ ಕೆಲಸವೇ ವಿಶ್ವಾಸ ಮತಯಾಚನೆ ಮಾಡುವುದಾಗಿದೆ ಎಂದು ರಾಜ್ಯಪಾಲರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

    ಬಟನ್ ಒತ್ತುವ ಮೂಲಕ ವಿಶ್ವಾಸ ಮತಯಾಚನೆ ಪ್ರಕ್ರಿಯೆ ನಡೆಯಲಿದೆ. ಇನ್ನಾವುದೇ ಮತದಾನ ಪ್ರಕ್ರಿಯೆ ಸ್ವೀಕಾರಾರ್ಹವಲ್ಲ. ಅಲ್ಲದೆ ಮಾರ್ಚ್ 16ರಂದೇ ವಿಶ್ವಾಸ ಮತಯಾಚನೆ ಪ್ರಕ್ರಿಯೆ ಪೂರ್ಣಗೊಳ್ಳಬೇಕು. ಈ ಪ್ರಕ್ರಿಯೆಯನ್ನು ಮುಂದೂಡುವುದು, ವಿಳಂಬ ಮಾಡುವುದು ಅಥವಾ ಅಮಾನತುಗೊಳಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.

    ಸಚಿವರ ರಾಜೀನಾಮೆ ಅಂಗೀಕಾರ:
    ಆರು ಬಂಡಾಯ ಮಂತ್ರಿಗಳ ರಾಜೀನಾಮೆಯನ್ನು ಮಧ್ಯಪ್ರದೇಶದ ವಿಧಾನಸಭಾ ಸ್ಪೀಕರ್ ನರ್ಮದಾ ಪ್ರಸಾದ್ ಪ್ರಜಾಪತಿ ಅವರು ಶನಿವಾರ ಅಂಗೀಕರಿಸಿದ್ದಾರೆ. ಗೋವಿಂದ್ ಸಿಂಗ್ ರಜಪೂತ್, ಮಹೇಂದ್ರ ಸಿಂಗ್ ಸಿಸೋಡಿಯಾ, ಪ್ರಭುರಾಮ್ ಚೌಧರಿ, ಪ್ರದುಮನ್ ತೋಮರ್, ತುಳಸಿರಾಮ್ ಸಿಲಾವತ್ ಹಾಗೂ ಇಮಾರ್ತಿ ದೇವಿ ಅವರನ್ನು ಕಾಂಗ್ರೆಸ್ ಸರ್ಕಾರದ ಸಮ್ಮುಖದಲ್ಲಿ ರಾಜ್ಯಪಾಲರು ಸಚಿವ ಸಂಪುಟದದಿಂದ ವಜಾ ಮಾಡಿದ್ದಾರೆ.

    ಇತ್ತೀಚೆಗಷ್ಟೇ ಜ್ಯೋತಿರಾದಿತ್ಯ ಸಿಂಧಿಯಾ ಕಾಂಗ್ರೆಸ್ ಪಕ್ಷಕ್ಕೆ ಗುಡ್‍ಬೈ ಹೇಳಿದ್ದರು. ಅವರೊಂದಿಗೆ ಸಿಂಧಿಯಾ ಆಪ್ತರಾಗಿದ್ದ 22 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ್ದರು. ನಂತರ ಜ್ಯೋತಿರಾದಿತ್ಯ ಸಿಂದಿಯಾ ಬಿಜೆಪಿ ಸೇರಿದ್ದರು. ಒಟ್ಟು 22 ಶಾಸಕರ ರಾಜೀನಾಮೆಯಿಂದ ಕಮಲನಾಥ್ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. 230 ಬಲದ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಇಬ್ಬರು ಶಾಸಕರ ನಿಧನದಿಂದ ಸದ್ಯ 228 ಶಾಸಕರಿದ್ದಾರೆ. ಸದ್ಯ 22 ಮಂದಿ ಕಾಂಗ್ರೆಸ್ ಶಾಸಕರ ರಾಜೀನಾಮೆಯಿಂದ ಸಿಎಂ ಕಮಲನಾಥ್ ಸರ್ಕಾರ ಅಲ್ಪ ಮತಕ್ಕೆ ಕುಸಿದಿದೆ. ಈಗ ಸದನದಲ್ಲಿ 206 ಶಾಸಕರಿದ್ದು ಬಹುಮತ ಸಾಧಿಸಲು 104 ಶಾಸಕರ ಬೆಂಬಲ ಬೇಕಿದೆ. ಬಿಜೆಪಿ ಬಳಿ 107 ಶಾಸಕರಿದ್ದರೆ, ಕಾಂಗ್ರೆಸ್ ಬಳಿ 92 ಶಾಸಕರಿದ್ದಾರೆ.

    ಒಟ್ಟು 230 ವಿಧಾನಸಭಾ ಕ್ಷೇತ್ರಗಳಿರುವ ಮಧ್ಯಪ್ರದೇಶದಲ್ಲಿ 2018ರ ಚುನಾವಣೆಯಲ್ಲಿ ಕಾಂಗ್ರೆಸ್ 114, ಬಿಜೆಪಿ 109, ಪಕ್ಷೇತರ 1, ಬಿಎಸ್‍ಪಿ 2, ಎಸ್‍ಪಿ 2 ಕ್ಷೇತ್ರದಲ್ಲಿ ಜಯಗಳಿಸಿತ್ತು. 2019ರ ಲೋಕಸಭಾ ಚುನಾವಣೆಯ ಒಟ್ಟು 29 ಕ್ಷೇತ್ರಗಳ ಪೈಕಿ ಬಿಜೆಪಿ 28 ರಲ್ಲಿ ಗೆದ್ದಿದ್ದರೆ 1 ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಗಳಿಸಿತ್ತು.

  • ಕೊರೊನಾ ಕೇಸ್‍ನಲ್ಲಿ ಸಚಿವರಿಬ್ಬರ ಎಡವಟ್ಟು

    ಕೊರೊನಾ ಕೇಸ್‍ನಲ್ಲಿ ಸಚಿವರಿಬ್ಬರ ಎಡವಟ್ಟು

    – ಮಾಹಾಮಾರಿ ವಿಷ್ಯದಲ್ಲಿ ನಿರ್ಲಕ್ಷ್ಯದ ಅತಿರೇಕ

    ಬೆಂಗಳೂರು: ಕೊರೊನಾ ವೈರಸ್ ವಿಷಯದಲ್ಲಿ ರಾಜ್ಯ ಸರ್ಕಾರ ಎಷ್ಟು ನಿರ್ಲಕ್ಷ್ಯವಾಗಿದೆ ಎಂದರೆ ಸಚಿವರು, ಅಧಿಕಾರಿಗಳು ಜೀವಕ್ಕೆ ಕಂಟಕವಾದ ರೋಗದ ವಿಷಯದಲ್ಲಿ ಎಡವಟ್ಟುಗಳ ಮೇಲೆ ಎಡವಟ್ಟು ಮಾಡುತ್ತಿದ್ದಾರೆ.

    ಕಲಬುರಗಿಯ 76 ವರ್ಷದ ವೃದ್ಧ ಸಾವನ್ನಪ್ಪಿದ್ದು ಕೊರೊನಾ ವೈರಸ್‍ನಿಂದಲೇ ಎಂದು ಖಚಿತವಾಗಿದೆ. ಆದರೆ ಸೋಂಕು ಶಂಕಿತ ವ್ಯಕ್ತಿಗೆ ಕೊರೊನಾ ವೈರಸ್ ಬಂದೇ ಇಲ್ಲ ಎಂದು ಸಚಿವರುಗಳು ತಿಳಿಸಿದ್ದಾರೆ. ಅಲ್ಲದೇ ಸೋಂಕು ಪೀಡಿತ ಮೃತಪಟ್ಟು, ಮೂರು ದಿನಗಳ ಬಳಿಕ ಕೊರೊನಾ ಸೋಂಕುನಿಂದಲೇ ಮೃತಪಟ್ಟಿರೋದು ದೃಢಪಟ್ಟಿದೆ. ಮೃತಪಟ್ಟ ವ್ಯಕ್ತಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಫೆ. 29ರಿಂದ ವ್ಯಕ್ತಿ ಸಾಯುವ ಅಂತಿಮ ಕ್ಷಣದವರೆಗೆ ವ್ಯಕ್ತಿಯ ಸಂಪರ್ಕದಲ್ಲಿದ್ದರಿಗೂ ಕೊರೊನಾ ಸೊಂಕು ಹರಡಿರುವ ಸಾಧ್ಯತೆ ಇದೆ.

    ಮೃತ ವೃದ್ಧ, ಹತ್ತು ದಿನಗಳ ಅವಧಿಯಲ್ಲಿ ಮೂರು ಆಸ್ಪತ್ರೆಯ ಸಿಬ್ಬಂದಿ, ಸಂಬಂಧಿಕರು, ಕುಟುಂಬಸ್ಥರನ್ನ ಸಂಪರ್ಕಿಸಿರುವ ಸಾಧ್ಯತೆ ಇದೆ. ಇದು ತೀವ್ರ ಆತಂಕಕ್ಕೀಡಾಗುವ ವಿಚಾರವಾಗಿದೆ. ಹೀಗಾಗಿ ವ್ಯಕ್ತಿಯ ಜೊತೆ ಸಂಪರ್ಕದಲ್ಲಿದ್ದವರ ಮಾಹಿತಿ ಸಂಗ್ರಹಿಸಿ ಪ್ರತ್ಯೇಕ ನಿಗಾ ವಹಿಸಲು ಆರೋಗ್ಯ ಇಲಾಖೆ ಸೂಚನೆ ನೀಡಿತ್ತು. ಆದರೆ ವ್ಯಕ್ತಿಯ ಅಂತ್ಯಕ್ರಿಯೆ ವೇಳೆಯಲ್ಲೂ ಯಾವುದೇ ಮುನ್ನಚ್ಚರಿಕಾ ಕ್ರಮ ಕೈಗೊಂಡಿರಲಿಲ್ಲ.

    ಕಲಬುರಗಿ ಜಿಲ್ಲಾಡಳಿತ, ಸೋಂಕು ಪೀಡಿತ ಎಂದು ಗುರುತಿಸಿದ್ದರೂ ಸಚಿವರು ಗಂಭೀರವಾಗಿ ಪರಿಗಣಿಸಿರಲಿಲ್ಲ. ವೈದ್ಯಾಧಿಕಾರಿಗಳ ತಂಡ ಮೃತ ವ್ಯಕ್ತಿಯ ಗಂಟಲು ದ್ರವ, ರಕ್ತದ ಮಾದರಿ ಸಂಗ್ರಹ ಕಲಬುರಗಿಯಿಂದ ಬೆಂಗಳೂರಿಗೆ ತಡವಾಗಿ ಕಳಿಸಿದ್ದರು. ಹೀಗಾಗಿ ಈ ವಿಳಂಬವೇ ಅನಾಹುತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

    ಸಚಿವರ ಎಡವಟ್ಟು:
    * ವ್ಯಕ್ತಿ ಆಸ್ಪತ್ರೆಗೆ ದಾಖಲಾದ ಬಳಿಕ ವೈದ್ಯರು ಕೊರೊನಾ ಸೋಂಕು ಶಂಕಿತ ಅಂತ ಡಿಕ್ಲೇರ್ ಮಾಡಿದ್ದಾರೆ. ಆದರೆ ಆತನ ರಿಪೋರ್ಟ್ ಬರುವ ಮುನ್ನವೇ ಐಸೋಲೇಷನ್ ಸೆಂಟರ್ ನಿಂದ ಕುಟುಂಬಸ್ಥರು ಹೇಳಿದರು ಅಂತ ಹೈದರಾಬಾದ್‍ಗೆ ಶಿಫ್ಟ್ ಮಾಡಲಾಗಿತ್ತು.

    * ಸೋಂಕು ಶಂಕಿತರನ್ನು 28 ದಿನ ಪ್ರತ್ಯೇಕಿಸಿ ನಿಗಾದಲ್ಲಿ ಇಡಬೇಕು. ಆದರೆ ಈ ಸೋಂಕು ಪೀಡಿತನನ್ನು ರಿಪೋರ್ಟ್ ಬಾರದೇ ಒಂದೇ ದಿನದಲ್ಲಿ ಡಿಸ್ಜಾರ್ಜ್ ಮಾಡಿದ್ದು ಹೇಗೆ? ಇದು ಸ್ಥಳೀಯ ಡಿಸಿ, ಆರೋಗ್ಯಾಧಿಕಾರಿಗಳ ಗಮನಕ್ಕೆ ಬಂದಿರಲಿಲ್ವೇ? ಎಂಬ ಪ್ರಶ್ನೆ ಮೂಡಿದೆ.

    * ಕೊರೊನಾ ಸಾಂಕ್ರಾಮಿಕ ರೋಗವಾಗಿದ್ದರಿಂದ ಆಸ್ಪತ್ರೆಯವರಿಗೆ, ಆರೋಗ್ಯಾಧಿಕಾರಿಗಳಿಗೆ ಆತನನ್ನು ಬಲವಂತವಾಗಿ ಆಸ್ಪತ್ರೆಯಲ್ಲಿ ಇರಿಸುವಂತಹ ಅಧಿಕಾರ ಇದ್ದರೂ ಯಾಕೆ ಬಳಕೆ ಮಾಡಲಿಲ್ಲ?

    * ಸೋಂಕು ಪೀಡಿತ ಸಾವನ್ನಪ್ಪಿದಾಗ ಕಲಬುರಗಿ ಆರೋಗ್ಯಾಧಿಕಾರಿಗಳು ಆತನ ಅಂತ್ಯಕ್ರಿಯೆ ವೇಳೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸುತ್ತೋಲೆ ಹೊರಡಿಸಿದರು. ಆದರೆ ರಿಪೋರ್ಟ್ ಬಾರದೇ ಇದ್ದರೂ ಏಕಾಏಕಿ ಸುದ್ದಿಗೋಷ್ಠಿ ಕರೆದ ಸಚಿವರು ಆತನಿಗೆ ಕೊರೊನಾ ಗಿರೋನಾ ಏನಿಲ್ಲ, ವಯಸ್ಸಾಗಿತ್ತು, ಅಸ್ತಮಾ ಸಮಸ್ಯೆ ಇತ್ತು ಎಂದು ಹೇಳಿದ್ದಾರೆ.

    * ಕಲಬುರಗಿಯಲ್ಲಿ ಆರೋಗ್ಯಾಧಿಕಾರಿಗಳು ಆತನ ಅಂತ್ಯಕ್ರಿಯೆಯ ವೇಳೆ ಯಾವ ಮುನ್ನೆಚ್ಚರಿಕೆಯನ್ನೂ ತೆಗೆದುಕೊಳ್ಳಲಿಲ್ಲ. ಆತನ ಮೃತದೇಹವನ್ನು ರವಾನಿಸಿದ ಅಂಬುಲೆನ್ಸ್ ಡ್ರೈವರ್ ಕೂಡ ಮಾಸ್ಕ್ ಧರಿಸಿರಲಿಲ್ಲ.

     

    * ಗೈಡ್ ಲೈನ್ಸ್ ಪ್ರಕಾರ ಸೋಂಕು ಪೀಡಿತನ ಅಂತ್ಯಕ್ರಿಯೆಯ ವೇಳೆ, ಅಂತ್ಯಕ್ರಿಯೆ ನಡೆಸುವವರು ಕೈಗೆ ಗ್ಲೌಸ್ ಮುಖಕ್ಕೆ ಮಾಸ್ಕ್ ಹಾಗೂ ಕಾಲು ಮುಚ್ಚುವ ಶೂ ಧರಿಸಬೇಕು. ಅಂತ್ಯಕ್ರಿಯೆ ಮುಗಿದ ಬಳಿಕ ಸೂಕ್ತ ವಿಲೇವಾರಿ ನಡೆಸಬೇಕು. ಆದರೆ ಈತನ ಅಂತ್ಯಕ್ರಿಯೆಯಲ್ಲಿ ಈ ಪ್ರಕ್ರಿಯೆ ಕಾಣಿಸಲೇ ಇಲ್ಲ. ಆತನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡವರಿಂದ ಹಿಡಿದು ಯಾರೂ ಕೂಡ ಮಾಸ್ಕ್ ಧರಿಸಿರಲಿಲ್ಲ

    * ಸೋಂಕು ಶಂಕೆ ಎಂದು ಗೊತ್ತಾಗಿ ಆತ ಸಾವನ್ನಪ್ಪಿದ ಮೇಲೂ ಆತನ ರಿಪೋರ್ಟ್ ತರಿಸುವುದಕ್ಕೆ ತಡ ಮಾಡಿದ್ದಾರೆ. ರಿಪೋರ್ಟ್ ಗೂ ಮುನ್ನವೇ ಸಚಿವರುಗಳ ಎಡವಟ್ಟು ಹೇಳಿಕೆಯಿಂದ ಆರೋಗ್ಯಾಧಿಕಾರಿಗಳು ಆತ ವಾಸವಿದ್ದ ಮನೆ, ಏರಿಯಾವನ್ನು ಫ್ಯೂಮಿಗೇಷನ್ ಮಾಡುವ ಕೆಲಸಕ್ಕೂ ಕೈ ಹಾಕಿರಲಿಲ್ಲ. ಕೊರೊನಾದ ಮೊದಲ ಸಾವು ರಾಜ್ಯ ಸರ್ಕಾರದ ವೈಫಲ್ಯವನ್ನು ಸಾರಿದೆ.