Tag: ಸಚಿವ ಎಚ್ ಕೆ ಪಾಟೀಲ್

  • ಬೆಂಗಳೂರು-ಗದಗ ವೋಲ್ವೋ ಬಸ್ ಪುನಃ ಆರಂಭಿಸುವಂತೆ ಸ್ಪಿನ್ ಮಾಂತ್ರಿಕ ಸುನೀಲ್ ಜೋಷಿ ಮನವಿ

    ಬೆಂಗಳೂರು-ಗದಗ ವೋಲ್ವೋ ಬಸ್ ಪುನಃ ಆರಂಭಿಸುವಂತೆ ಸ್ಪಿನ್ ಮಾಂತ್ರಿಕ ಸುನೀಲ್ ಜೋಷಿ ಮನವಿ

    ಗದಗ: ವೋಲ್ವೋ ಬಸ್ ಪುನಃ ಆರಂಭಿಸುವಂತೆ ಟೀಂ ಇಂಡಿಯಾದ(Team India) ಮಾಜಿ ಆಟಗಾರ, ಸ್ಪಿನ್ ಮಾಂತ್ರಿಕ ಸುನೀಲ್ ಜೋಷಿ (Sunil Joshi) ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

    ಬೆಂಗಳೂರಿನಿಂದ (Bengaluru) ಗದಗ ನಗರಕ್ಕೆ ವೋಲ್ವೋ ಬಸ್ (Volvo Bus) ಸೇವೆಯನ್ನು ಪುನರಾರಂಭಗೊಳಿಸುವಂತೆಸಿಎಂ ಸಿದ್ದರಾಮಯ್ಯ (CM Siddaramaiah), ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy), ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ ಪಾಟೀಲ್ (H. K. Patil ) ಅವರಿಗೆ ಎಕ್ಸ್ನಲ್ಲಿ ಟ್ಯಾಗ್ ಮಾಡುವ ಮೂಲಕ ಜೋಷಿ ಮನವಿ ಮಾಡಿಕೊಂಡಿದ್ದಾರೆ.ಇದನ್ನೂ ಓದಿ:

    ಬೆಂಗಳೂರಿನಿಂದ ಗದಗಕ್ಕೆ (Gadag) ಹೋಗುವ ವೋಲ್ವೋ ಬಸ್ ಸೇವೆಯನ್ನು ರದ್ದುಗೊಳಿಸಲಾಗಿದೆ ಮತ್ತು ಇದಕ್ಕೆ ಯಾವುದೇ ವಿವರ ನೀಡಲಾಗಿಲ್ಲ. ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರಿಗೆ, ಈ ವಿಷಯದಲ್ಲಿ ತಕ್ಷಣವೇ ಚರ್ಚಿಸಬೇಕೆಂದು ವಿನಂತಿಸುತ್ತೇನೆ. ನಿಮ್ಮ ಸಹಕಾರ ತುಂಬಾ ಮೆಚ್ಚುಗೆಯಾಗುತ್ತದೆ ಎಂದು ಬರೆದುಕೊಂಡಿದ್ದಾರೆ. ದಯವಿಟ್ಟು ಈ ಬಸ್ ಅನ್ನು ಮತ್ತೆ ಶುರುಮಾಡಿ ಎಂದು ವಿನಂತಿಯಿಂದ ಕೇಳಿಕೊಳ್ಳುತ್ತೇನೆ ಎಂದು ಮನವಿ ಮಾಡಿದ್ದಾರೆ.ಇದನ್ನೂ ಓದಿ:

    2023ರ ಜನವರಿ 9 ರಂದು ಸಾರಿಗೆ ಸಚಿವರಾಗಿದ್ದ ಶ್ರೀರಾಮಲು ಅವರು ಬೆಂಗಳೂರಿನಿಂದ ಗದಗಕ್ಕೆ ವೋಲ್ವೋ ಬಸ್ ಸೇವೆಯನ್ನು ಆರಂಭಿಸಿದ್ದರು. ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದ ಟರ್ಮಿನಲ್-1 ರಿಂದ ಮಧ್ಯಾಹ್ನ 2 ಗಂಟೆಗೆ ಹೊರಟು ಸಂಜೆ 6.15ಕ್ಕೆ ಗದಗ ತಲುಪುತ್ತಿತ್ತು. ಆದರೆ ಈಗ ಈ ಬಸ್ಸು ಸೇವೆಯನ್ನು ರದ್ದುಗೊಳಿಸಲಾಗಿದೆ. ಬಸ್ ಸೇವೆ ರದ್ದಿಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ.

  • ಎಸ್‍ಎಂಕೆ ಎಲ್ಲ ಪಡೆದಿದ್ದಾರೆ, ನಾನು ಪಡೆದಿದ್ದೀನಾ: ಕಾಗೋಡು ಪ್ರಶ್ನೆ

    ಎಸ್‍ಎಂಕೆ ಎಲ್ಲ ಪಡೆದಿದ್ದಾರೆ, ನಾನು ಪಡೆದಿದ್ದೀನಾ: ಕಾಗೋಡು ಪ್ರಶ್ನೆ

    ಚಿಕ್ಕಬಳ್ಳಾಪುರ: ಬರ ಪರಿಹಾರಕ್ಕಾಗಿ ಕೈಗೊಂಡ ಕಾಮಗಾರಿಗಳು ಹಾಗೂ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಕಂದಾಯ ಸಚಿವ ಕಾಗೋಡು ತಿಮಪ್ಪ ನಡೆಸಿದರು. ಕಂದಾಯ ಇಲಾಖೆಯಲ್ಲಿ ಬಗರುಹುಖಂ ಅರ್ಜಿ ವಿಲೇವಾರಿ ಹಾಗೂ ಸಾಗುವಳಿ ಚೀಟಿ ವಿತರಣೆ ಮಾಡದ ಹಿನ್ನೆಲೆಯಲ್ಲಿ ಅಧಿಕಾರಿಗಳ ವಿರುದ್ಧ ಕಾಗೋಡು ತಿಮ್ಮಪ್ಪ ಬೇಸರ ವ್ಯಕ್ತಪಡಿಸಿದರು.

    ಬಳಿಕ ಮಾಧ್ಯಮಗಳೊಂದಿಗೆ ಎಸ್ ಎಂ ಕೃಷ್ಣ ಬಿಜೆಪಿ ಸೇರಿದ ಬಗ್ಗೆ ಪ್ರತಿಕ್ರಿಯಿಸಿ, ಎಸ್‍ಎಂ ಕೃಷ್ಣ ಈ ದೇಶದಲ್ಲಿ ರಾಜಕೀಯವಾಗಿ ಎಲ್ಲಾ ಸ್ಥಾನಮಾನಗಳನ್ನ ಅನುಭವಿಸಿದ್ದಾರೆ. ಆದ್ರೆ ನಾನು ಪಡೆದಿದ್ದೀನಾ ಅಂತ ಪ್ರಶ್ನೆ ಹಾಕಿದ್ರು. ರಾಜಕಾರಣದಲ್ಲಿ ಸ್ವಚ್ಛತೆ, ತತ್ವ ಸಿದ್ದಾಂತಗಳಿಗೆ ಬದ್ಧತೆ ಇರಬೇಕು ಅಂತ ಎಸ್‍ಎಂಕೆ ನಿಲುವಿಗೆ ಬೇಸರ ವ್ಯಕ್ತಪಡಿಸಿದ್ದಾರೆ.

    ನಿಮ್ಮ ಕುಟುಂಬ ಸದಸ್ಯರನ್ನು ರಾಜಕರಾಣಕ್ಕೆ ಪ್ರವೇಶ ಮಾಡಿಸ್ತೀರಾ ಅಂತ ಮಾಧ್ಯಮದವರ ಪ್ರಶ್ನೆಗೆ ಬೇಡ ಅಂತಲೇ ಉತ್ತರಿಸಿದ ಸಚಿವರು ಈ ರಾಜಕಾರಣ ಸಾಕಾಗಿದೆ ನನಗೆ ಅಂತ ಆಸೆ ಇಲ್ಲ ಅಂತ ನಗು ಮುಖದಿಂದಲೇ ಉತ್ತರಿಸಿದರು.

    ಎಚ್‍ಕೆ ಪಾಟೀಲ್ ಸಾಥ್: ಬರ ಅಧ್ಯಯನಕ್ಕೆ ಚುನಾವಣಾ ಪ್ರಚಾರಕ್ಕೆ ಗುಡ್ ಬೈ ಹೇಳಿದ ಗ್ರಾಮೀಣಾಭಿವೃದ್ದಿ ಸಚಿವ ಹೆಚ್.ಕೆ.ಪಾಟೀಲ್ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಸಾಥ್ ನೀಡಿದ್ರು. ಸಚಿವ ಪಾಟೀಲ್ ಇಂದು ಧಾರವಾಡ, ಬೆಳಗಾವಿ ವಿಭಾಗದಲ್ಲಿ ಬರ ಪರಿಹಾರ ಕಾಮಗಾರಿ ಪರಿಶೀಲನೆ ನಡೆಸಿದ್ರು.