Tag: ಸಚಿವ ಕೋಟ ಶ್ರೀನಿವಾಸ ಪೂಜಾರಿ

  • ಕುಕ್ಕೆಯ ಆನ್‍ಲೈನ್ ಸೇವೆಗಳ ನಿರ್ವಹಣೆ ಫ್ಯೂರ್ ಪ್ರೇಯರ್ ಸಂಸ್ಥೆಗಿಲ್ಲ: ಸಚಿವ ಕೋಟ

    ಕುಕ್ಕೆಯ ಆನ್‍ಲೈನ್ ಸೇವೆಗಳ ನಿರ್ವಹಣೆ ಫ್ಯೂರ್ ಪ್ರೇಯರ್ ಸಂಸ್ಥೆಗಿಲ್ಲ: ಸಚಿವ ಕೋಟ

    ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯದ ಆನ್‍ಲೈನ್ ಸೇವೆಗಳ ನಿರ್ವಹಣೆಯಿಂದ ಪ್ಯೂರ್ ಪ್ರೇಯರ್ ಸಂಸ್ಥೆಯನ್ನು ಮುಕ್ತಗೊಳಿಸಲಾಗಿದೆ ಎಂದು ರಾಜ್ಯ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

    ನಾನು ಮುಜರಾಯಿ ಸಚಿವನಾಗಿ ಆಯ್ಕೆಯಾಗುವ ಮೊದಲೇ ರಾಜ್ಯದ 54 ದೇವಸ್ಥಾನಗಳ ಸೇವೆಯನ್ನು ಆನ್ ಲೈನ್ ಮೂಲಕ ನಡೆಸಲು ಸರ್ಕಾರ ತೀರ್ಮಾನಿಸಿತ್ತು. ಇದಕ್ಕಾಗಿ ಸರ್ವೆಯನ್ನೂ ನಡೆಸಲಾಗಿದ್ದು, ಪ್ಯೂರ್ ಪ್ರೇಯರ್ ಸಂಸ್ಥೆಗೆ 15 ಜಿಲ್ಲೆಗಳ ದೇವಸ್ಥಾನಗಳನ್ನು ಬಿಟ್ಟುಕೊಡಲಾಗಿತ್ತು. ಉಳಿದ ಜಿಲ್ಲೆಗಳ ಸರ್ವೇ ಕಾರ್ಯವನ್ನು ಇನ್ನಷ್ಟೇ ಮಾಡಬೇಕಿದೆ. ಈ ನಡುವೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಸೇವೆಗಳ ವಿಚಾರದಲ್ಲಿ ಪ್ಯೂರ್ ಪ್ರೇಯರ್ ಸಂಸ್ಥೆ ಅವ್ಯವಹಾರ ನಡೆಸಿದೆ ಎನ್ನುವ ವಿಚಾರ ಸರಕಾರದ ಗಮನಕ್ಕೆ ಬಂದ ತಕ್ಷಣವೇ ಕುಕ್ಕೆ ಸುಬ್ರಹ್ಮಣ್ಯ ಸೇವೆಯನ್ನು ಸಂಸ್ಥೆಯಿಂದ ಕೈಬಿಡಲಾಗಿದೆ ಎಂದು ತಿಳಿಸಿದರು.

    ಪ್ಯೂರ್ ಪ್ರೇಯರ್ ಸಂಸ್ಥೆಯು ಎಲ್ಲಾ ದೇವಸ್ಥಾನಗಳ ಆನ್‍ಲೈನ್ ಸೇವೆಯನ್ನು ಉಚಿತವಾಗಿ ನಿರ್ವಹಿಸುತ್ತಿದ್ದ ಸರ್ಕಾರ ಯಾವುದೇ ವೆಚ್ಚವನ್ನು ಸಂಸ್ಥೆಗೆ ನೀಡುತ್ತಿಲ್ಲ. ಅಲ್ಲದೆ ಮುಜರಾಯಿ ಇಲಾಖೆ ತನ್ನದೇ ಹೊಸದಾದ ಸಾಫ್ಟ್‍ವೇರ್ ಅಭಿವೃದ್ಧಿಪಡಿಸುತ್ತಿದ್ದು, ಈ ಕಾರ್ಯ ಮುಂದಿನ ಎರಡು ತಿಂಗಳಲ್ಲಿ ಮುಗಿಯಲಿದೆ. ಆ ಬಳಿಕ ಇಲಾಖೆಯೇ ಎಲ್ಲಾ ದೇವಾಲಯಗಳ ಆನ್‍ಲೈನ್ ಸೇವೆಗಳನ್ನು ನಿರ್ವಹಿಸಲಿದೆ ಎಂದು ಸಚಿವರು ಹೇಳಿದರು.

  • ಆನ್‍ಲೈನ್ ಪೂಜೆ ಮತ್ತಷ್ಟು ದೇಗುಲಗಳಿಗೆ ವಿಸ್ತರಣೆ: ಸಚಿವ ಕೋಟ

    ಆನ್‍ಲೈನ್ ಪೂಜೆ ಮತ್ತಷ್ಟು ದೇಗುಲಗಳಿಗೆ ವಿಸ್ತರಣೆ: ಸಚಿವ ಕೋಟ

    ಉಡುಪಿ: ಮುಜರಾಯಿ ಇಲಾಖೆ ದೇವಸ್ಥಾನಗಳಲ್ಲಿ ಆನ್‍ಲೈನ್ ಪೂಜಾ ಸೇವೆ ಬಗ್ಗೆ ಕೆಲವರ ಆಕ್ಷೇಪ ಇದೆ. ಆನ್‍ಲೈನ್ ಸೇವೆ ಹೊಸ ಯೋಜನೆಯಲ್ಲ. ಈ ಹಿಂದಿನಯೂ ಇತ್ತು. ಈಗ ಮತ್ತಷ್ಟು ದೇವಸ್ಥಾನಗಳನ್ನು ಆನ್‍ಲೈನ್ ಸೇವೆಯ ವ್ಯಾಪ್ತಿಗೆ ಇಲಾಖೆ ತರುತ್ತೇವೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

    ನಗರದಲ್ಲಿ ಮಾತನಾಡಿದ ಸಚಿವರು, ಕೊಲ್ಲೂರು ದೇವಸ್ಥಾನದಲ್ಲಿ ಕಳೆದ ವರ್ಷ ಮೂರು ಸಾವಿರ ಆನ್‍ನೈನ್ ಸೇವೆಗಳು ಬಂದಿವೆ. ಮೈಸೂರು ಚಾಮುಂಡೇಶ್ವರಿಯಲ್ಲಿ ಹೋದ ವರ್ಷ 49.50 ಲಕ್ಷ ರೂ. ಜಮಾ ಆಗಿದೆ. ಲಾಕ್‍ಡೌನ್‍ನಿಂದ ಭಕ್ತರಿಗೆ ದೇವಸ್ಥಾನಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ. ಸೇವೆ ಕೊಡಬೇಕೆಂಬ ಹರಕೆ ಹೊತ್ತ ಭಕ್ತರಿಗೆ ಆನ್‍ಲೈನ್ ಸೇವೆಯಿಂದ ಅನುಕೂಲವಾಗಲಿದೆ ಎಂದರು.

    ಭಕ್ತರಿಗೆ ನೆಮ್ಮದಿ ಸಿಗಲಿ ಎಂಬ ಕಾರಣಕ್ಕೆ ಆನ್‍ಲೈನ್ ಆರಂಭಿಸಿದ್ದೇವೆ. ಲಾಕ್ ಡೌನ್ ವರೆಗಾದರೂ ಆನ್ಲೈನ್ ಸೇವೆ ಅಗತ್ಯವಿದೆ. ಭಕ್ತರ ಕೋರಿಕೆ ಹಿನ್ನೆಲೆಯಲ್ಲಿ ಈ ಸೇವೆ ಆರಂಭವಾಗಿದೆ ಹೊರತು ನಾವಲ್ಲ ಮಾಡಿದ್ದು ಎಂದರು.

    ದೇವಸ್ಥಾನಗಳಿಗೆ ಬಾಗಿಲು ಹಾಕಿದೆ ಪೂಜೆ ಆಗುತ್ತಿಲ್ಲ ಎಂದು ಮಾಧ್ಯಮಗಳಲ್ಲಿ ಸುದ್ದಿಯಾಗುತ್ತಿದೆ. ಎಲ್ಲಾ ದೇವಸ್ಥಾನಗಳನ್ನು ಸಾಂಪ್ರದಾಯಿಕ ಪೂಜೆ ನಡೆಯುತ್ತಲೇ ಇದೆ. ತ್ರಿಕಾಲ, ಕಾಲಮಿತಿಯ ಪೂಜೆಗಳು ನಿಂತಿಲ್ಲ. ದೇವಸ್ಥಾನದಲ್ಲೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಅನಿವಾರ್ಯತೆ ಇದೆ. ಹಾಗಾಗಿ ಲಾಕ್‍ಡೌನ್ ಮುಗಿದ ನಂತರವೇ ದೇವಸ್ಥಾನ ತೆರೆಯಲಾಗುತ್ತದೆ ಎಂದು ಹೇಳಿದರು.

  • ಮೀನುಗಾರರ ಸಾಲಮನ್ನಾ, ರಾಜ್ಯ ಸರ್ಕಾರದಿಂದ 60 ಕೋಟಿ ರೂ. ಬಿಡುಗಡೆ: ಸಚಿವ ಪೂಜಾರಿ

    ಮೀನುಗಾರರ ಸಾಲಮನ್ನಾ, ರಾಜ್ಯ ಸರ್ಕಾರದಿಂದ 60 ಕೋಟಿ ರೂ. ಬಿಡುಗಡೆ: ಸಚಿವ ಪೂಜಾರಿ

    ಮಂಗಳೂರು: ರಾಜ್ಯ ಸರ್ಕಾರ ಘೋಷಣೆ ಮಾಡಿದ ಮೀನುಗಾರರ ಸಾಲಮನ್ನಾ ಯೋಜನೆಯಡಿ 23 ಸಾವಿರ ಜನ ಫಲಾನುಭವಿಗಳಿಗೆ 60 ಕೋಟಿ ರೂಪಾಯಿಯನ್ನು ರಾಜ್ಯ ಹಣಕಾಸು ಇಲಾಖೆ ಅಧಿಕೃತವಾಗಿ ಬಿಡುಗಡೆ ಮಾಡಿದೆ ಎಂದು ರಾಜ್ಯ ಮೀನುಗಾರಿಕೆಗೆ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

    ಸಾಲಮನ್ನಾದ ಹಣ ಭೂಮಿ ಕೋಶದ ಮೂಲಕ ಸಾಲಗಾರರ ಖಾತೆಗೆ ಜಮಾ ಮಾಡಲು ತುರ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

    ಕೊರೊನದ ಸಂಕಷ್ಟದ ದಿನಗಳಲ್ಲೂ ಕೂಡ ಮೀನುಗಾರರ ಹಿತರಕ್ಷಣೆಗಾಗಿ 60 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಹಾಗೂ ಸಹಕಾರ ನೀಡಿದ ರಾಜ್ಯ ಬಿಜೆಪಿ ಅಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್ ಅವರಿಗೆ ರಾಜ್ಯದ ಸಮಸ್ತ ಮೀನುಗಾರರ ಪರವಾಗಿ ರಾಜ್ಯ ಮೀನುಗಾರಿಕೆಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಧನ್ಯವಾದಗಳನ್ನು ತಿಳಿಸಿದ್ದಾರೆ.

  • ಉಪಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮಧ್ಯೆ ಹೊಂದಾಣಿಕೆ ಇಲ್ಲ- ಸಚಿವ ಕೋಟ

    ಉಪಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮಧ್ಯೆ ಹೊಂದಾಣಿಕೆ ಇಲ್ಲ- ಸಚಿವ ಕೋಟ

    ಉಡುಪಿ: ಅನರ್ಹ ಶಾಸಕರ ಸ್ಥಾನಗಳಿಗೆ ನಡೆಯುತ್ತಿರುವ ಉಪಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಹೊಂದಾಣಿಕೆ ಇಲ್ಲ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಸ್ಪಷ್ಟಪಡಿಸಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ದೇವೇಗೌಡರು ರಾಷ್ಟ್ರದ ಹಿರಿಯ ರಾಜಕಾರಣಿ. ಬಿಜೆಪಿ ಅವರನ್ನು ಬಹಳ ಗೌರವಿಸುತ್ತದೆ. ಅವರ ಮಗ ಕುಮಾರಸ್ವಾಮಿಯವರಿಗೆ ಅದೇ ಗೌರವ ನಮ್ಮಿಂದ ಸಿಗುತ್ತದೆ. ಆದರೆ ಉಪಚುನಾವಣೆಯಲ್ಲಿ ನಮ್ಮ ನಡುವೆ ಹೊಂದಾಣಿಕೆ ಇಲ್ಲ. ಸರಕಾರ ಉಳಿಸಲು ಜೆಡಿಎಸ್ ಸಹಾನುಭೂತಿ ತೋರಿಸಿದೆ ಅದಕ್ಕೆ ಧನ್ಯವಾದಗಳು. ಎಲ್ಲ 15 ಕ್ಷೇತ್ರದಲ್ಲಿ ಯಾವುದೇ ಒಳ ಒಪ್ಪಂದ ಆಗಿಲ್ಲ, ಅತ್ಯಂತ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಇದೇ ವೇಳೆ ಸಿದ್ದರಾಮಯ್ಯ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, ಟೀಕೆ ಮಾಡುವುದೇ ಸಿದ್ದರಾಮಯ್ಯನವರ ಕೆಲಸ. ನಾವು ಹೇಳಿದಂತೆ ಟಿಪ್ಪು ಜಯಂತಿಯನ್ನು ರದ್ದು ಮಾಡಿದ್ದೇವೆ. ಟಿಪ್ಪು ಪಠ್ಯ ರದ್ದು ಅದರ ಮುಂದುವರಿದ ಭಾಗ. ಈಗಿನ ತಲೆಮಾರಿಗೆ ಟಿಪ್ಪು ನ್ಯೂನತೆ ಕಂಡಿದೆ. ಮಡಿಕೇರಿ ಶಾಸಕರೊಬ್ಬರು ಟಿಪ್ಪು ಪಠ್ಯ ರದ್ದು ಮಾಡಲು ಮನವಿ ಮಾಡಿದ್ದರು. ಅವರ ಮನವಿ ಪರಿಶೀಲಿಸುವುದಾಗಿ ಶಿಕ್ಷಣ ಸಚಿವರು ಹಾಗೂ ಸಿಎಂ ಭರವಸೆ ನೀಡಿದ್ದಾರೆ ಎಂದರು.

    ಈಗ ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಏಕಾಂಗಿಯಾಗಿದ್ದಾರೆ. ಸ್ವಪಕ್ಷೀಯರನ್ನು ಬಿಟ್ಟು ತಾಳ್ಮೆ ಕಳೆದುಕೊಂಡು ಮಾತನಾಡುವ ಅವರ ಮುನ್ನುಗ್ಗುವ ಗುಣವನ್ನು ಕಾಂಗ್ರೆಸ್ ಸಹಿಸುವುದಿಲ್ಲ ಎಂದರು.

    ದೇವರ ಹೆಸರಿನ ಮದ್ಯದಂಗಡಿಗಳಿಗೆ ಮರು ನಾಮಕರಣ ಮಾಡುವ ಕುರಿತು ಪ್ರತಿಕ್ರಿಯಿಸಿದ ಅವರು, ಮದ್ಯದಂಗಡಿಗೆ ದೇವರ ಹೆಸರು ಇಡುವುದು ಆಭಾಸವಾಗುತ್ತದೆ. ಹೀಗಾಗಿ ಬಾರ್, ವೈನ್ ಶಾಪ್ ಗಳಿಗೆ ದೇವರ ಹೆಸರಿಗೆ ಜನರಿಂದ ವಿರೋಧ ಬಂದಿದೆ. ನಾನು ಮುಜರಾಯಿ ಇಲಾಖೆ ಕಾರ್ಯದರ್ಶಿಗೆ ಒಂದು ಟಿಪ್ಪಣಿ ಕಳುಹಿಸಿದ್ದೇನೆ. ಸಾರ್ವಜನಿಕರಿಂದ ಬಂದಿರುವ ಅಭಿಪ್ರಾಯಕ್ಕೆ ಅಧಿಕಾರಿಗಳಿಂದ ಕಡತ ಸಿದ್ಧಪಡಿಸಲು ಸೂಚಿಸಿದ್ದೇನೆ. ಅಬಕಾರಿ ಮತ್ತು ಕಾನೂನು ಇಲಾಖೆ ಜೊತೆ ಚರ್ಚೆ ಮಾಡಲು ಸೂಚನೆ ನೀಡಿದ್ದೇನೆ. ಈ ಕುರಿತು ಯಾರೂ ಗಾಬರಿಗೊಳ್ಳುವ ಅಗತ್ಯವಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚರ್ಚೆಗೆ ಅವಕಾಶ ಇದೆ. ಸಾರ್ವಜನಿಕ ಅಭಿಪ್ರಾಯಕ್ಕೂ ಅವಕಾಶ ಇದೆ. ಅಭಾಸ ಹೆಸರು ಬದಲಿಸುವ ಚಿಂತನೆ ಮುಜರಾಯಿ ಇಲಾಖೆ ಮುಂದಿದೆ ಎಂದರು.

    ಬಾರ್ ಒಳಗೆ ದೇವರ ಫೋಟೋ ಇಡಬೇಡಿ ಎಂದಿಲ್ಲ. ದೇವರ ಹೆಸರಿರುವವರು ಕುಡಿಯಬಹುದಾ ಎಂದು ನೀವು ಪ್ರಶ್ನೆ ಮಾಡಬಹುದು? ದೇವರ ಹೆಸರು ಇರುವವರು ಮದ್ಯದಂಗಡಿಯಿಂದ ವಾಪಾಸ್ ಕಳುಹಿಸಬೇಕು ಎಂಬ ಅಭಿಪ್ರಾಯ ಇದೆ. ಸರಕಾರ ಈ ವರೆಗೆ ಯಾವುದೇ ನಿರ್ಧಾರ ಮಾಡಿಲ್ಲ. ಅಬಕಾರಿ, ಕಾನೂನು ಇಲಾಖೆ ಒಪ್ಪದಿದ್ದರೆ ನಾವೇನೂ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು.

    ಬಿಜೆಪಿಯಲ್ಲಿ ಫೇಲ್ ಆಗುವ ವಿದ್ಯಾರ್ಥಿಗಳಿಲ್ಲ, ಹೈಕಮಾಂಡ್ ನಿಂದ ರಾಜ್ಯ ಸರಕಾರದ ಸಾಧನೆ ಕುರಿತು ಪರಾಮರ್ಶೆ ನಡೆಸುತ್ತಿದೆ. ರಾಜ್ಯ ಸರಕಾರದ ನೂರು ದಿನದ ಸಾಧನೆ ಜನತೆ ಮುಂದಿಟ್ಟಿದ್ದೇವೆ. ನೆರೆಯ ವಾತಾವರಣವನ್ನು ನಿಭಾಯಿಸಿದ್ದೇವೆ. ಕೇಂದ್ರ ಸರಕಾರ ಸಹ ನಮ್ಮ ಕೆಲಸವನ್ನು ಗಮನಿಸುತ್ತದೆ. ನೀವು ಎಷ್ಟು ಕೆಲಸ ಮಾಡಿದ್ದೀರಿ ಎಮದು ಕೇಳಿದರೆ ತಪ್ಪೇನು? ಹೈಕಮಾಂಡ್ ಸಮೀಕ್ಷೆ ಮಾಡಿದ್ದರೆ ತಪ್ಪೇನು? ನಮ್ಮನ್ನು ಗಮನಿಸುತ್ತಿದ್ದರೆ ನಾವು ಚೆನ್ನಾಗಿ ಕೆಲಸ ಮಾಡಬಹುದು. ಪಾಸು- ಫೇಲಿನ ಪಟ್ಟಿ ನಮ್ಮಲ್ಲಿಲ್ಲ, ಫೇಲ್ ಆಗುವ ವಿದ್ಯಾರ್ಥಿಗಳು ನಮ್ಮಲ್ಲಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.