Tag: ಸಚಿವ ಡಾ.ಸುಧಾಕರ್

  • ಸಿಎಂ ನೇತೃತ್ವದಲ್ಲಿ ಟಾಸ್ಕ್‌ಫೋರ್ಸ್ ಸಭೆ- ಕೊರೊನಾ ನಿಯಂತ್ರಣಕ್ಕೆ ಯಾವ ಸಚಿವರಿಗೆ ಏನು ಜವಾಬ್ದಾರಿ?

    ಸಿಎಂ ನೇತೃತ್ವದಲ್ಲಿ ಟಾಸ್ಕ್‌ಫೋರ್ಸ್ ಸಭೆ- ಕೊರೊನಾ ನಿಯಂತ್ರಣಕ್ಕೆ ಯಾವ ಸಚಿವರಿಗೆ ಏನು ಜವಾಬ್ದಾರಿ?

    – ಸೋಂಕು ಪ್ರದೇಶಗಳ ಕಟ್ಟುನಿಟ್ಟಿನ ಸೀಲ್‍ಡೌನ್‍ಗೆ ಸಿಎಂ ಸೂಚನೆ

    ಬೆಂಗಳೂರು: ಕೊರೊನಾ ನಿಯಂತ್ರಿಸುವಲ್ಲಿ ಸರ್ಕಾರ ತೀವ್ರ ಗೊಂದಲಕ್ಕೊಳಗಾಗಿದೆ, ಸಚಿವರಲ್ಲೇ ಹೊಂದಾಣಿಕೆ ಇಲ್ಲ ಎಂಬ ಆರೋಪ ಕೇಳಿ ಬಂದ ಬೆನ್ನಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪನವರು ಕೊರೊನಾ ಕಟ್ಟಿ ಹಾಕಲು ಟಾಸ್ಕ್‌ಫೋರ್ಸ್ ಸಭೆ ನಡೆಸಿದ್ದು, ಸಚಿವರಿಗೆ ವ್ಯವಸ್ಥಿತವಾಗಿ ಜಚಾಬ್ದಾರಿ ಹಂಚಿದ್ದಾರೆ.

    ಈ ಕುರಿತು ಸುದ್ದಿಗೋಷ್ಠಿ ನಡೆಸಿ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದು, ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚು ಕಾಣಿಸಿಕೊಂಡಿರುವ ಪ್ರದೇಶಗಳನ್ನು ಕಟ್ಟುನಿಟ್ಟಾಗಿ ಸೀಲ್‍ಡೌನ್ ಮಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಕಳೆದ ಕೆಲ ದಿನಗಳಿಂದ ಬೆಂಗಳೂರು ನಗರದ ಕೆಲವೆಡೆ ಸೋಂಕಿನ ಪ್ರಮಾಣ ಹೆಚ್ಚಾಗಿದೆ. ಅಂತಹ ಪ್ರದೇಶಗಳನ್ನು ಗುರುತಿಸಿ ಸೀಲ್‍ಡೌನ್ ಮಾಡುವಂತೆ ಇಂದು ಮಧ್ಯಾಹ್ನ ನಡೆದ ಕೋವಿಡ್-19 ನಿಗ್ರಹ ಕಾರ್ಯಪಡೆ ಸಭೆಯಲ್ಲಿ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.

    ಅಧಿಕಾರಿಗಳು, ವೈದ್ಯರು ಮತ್ತು ಎಲ್ಲ ಸಿಬ್ಬಂದಿ ಪರಿಶ್ರಮದಿಂದ ಕೆಲಸ ಮಾಡಿದ್ದರಿಂದಲೇ ಕರ್ನಾಟಕ ಇಂದು ಸಮಾಧಾನಕರ ಸ್ಥಿತಿಯಲ್ಲಿದೆ. ಇತ್ತೀಚೆಗೆ ಬೆಂಗಳೂರು ನಗರ ಮತ್ತು ಕೆಲ ಜಿಲ್ಲೆಗಳಲ್ಲಿ ಅನೇಕ ಕಾರಣಗಳಿಂದ ಸೋಂಕು ಹೆಚ್ಚಿದೆ. ಅದನ್ನು ನಿಯಂತ್ರಿಸಿ ಕೋವಿಡ್-19 ಹಿಮ್ಮೆಟ್ಟಿಸಲು ಮುಂದಿನ ದಿನಗಳಲ್ಲಿ ಎಲ್ಲರೂ ಇನ್ನಷ್ಟು ಪರಿಶ್ರಮದಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದ್ದಾರೆ ಎಂದರು.

    ಜವಾಬ್ದಾರಿ ಹಂಚಿಕೆ: ಇಡೀ ವ್ಯವಸ್ಥೆ ಅಚ್ಚುಕಟ್ಟಾಗಿ, ಪಾರದರ್ಶಕ ರೀತಿಯಲ್ಲಿ ಕಾರ್ಯಾಚರಣೆ ನಡೆಸಬೇಕು. ರೋಗಿಗಳಿಗೆ ಸರಿಯಾದ ಚಿಕಿತ್ಸೆ ದೊರೆಯುವ ವ್ಯವಸ್ಥೆ ಆಗಬೇಕು. ಈ ನಿಟ್ಟಿನಲ್ಲಿ ಸಚಿವರು ಸಂಘಟಿತವಾಗಿ ಕೆಲಸ ಮಾಡಬೇಕು ಎಂದಿದ್ದಾರೆ. ಅಲ್ಲದೆ ಕೋವಿಡ್ ವಿಷಯಕ್ಕೆ ಸಂಬಂಧಿಸಿದ ಎಲ್ಲ ನೀತಿ, ನಿರೂಪಣೆ, ಮಾರ್ಗಸೂಚಿ, ಮಾಧ್ಯಮಗಳಿಗೆ ಮಾಹಿತಿ ನೀಡುವುದು, ವಾರ್ ರೂಮ್ ಜವಾಬ್ದಾರಿಯನ್ನು ನನಗೆ ವಹಿಸಿದ್ದಾರೆ ಎಂದು ತಿಳಿಸಿದ್ದಾರೆ.

    ಕೋವಿಡ್ ಕೇರ್ ಸೆಂಟರ್ ಗಳ ಸ್ಥಾಪನೆ ಮತ್ತು ನಿರ್ವಹಣೆಯನ್ನು ಉಪ ಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ಅವರಿಗೆ ಹಂಚಿಕೆ ಮಾಡಲಾಗಿದೆ. ಕಂದಾಯ ಸಚಿವ ಆರ್.ಅಶೋಕ್ ಮತ್ತು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದಶಿ ವಿಶ್ವನಾಥ್ ಅವರಿಗೆ ಖಾಸಗಿ ಆಸ್ಪತ್ರೆಗಳ ನಿರ್ವಹಣೆ ಜವಾಬ್ದಾರಿ ನೀಡಲಾಗಿದೆ. ಎಲ್ಲರೂ ಸಮನ್ವಯದಿಂದ ಕೆಲಸ ಮಾಡಲು ಮುಖ್ಯಮಂತ್ರಿಯವರು ಸೂಚಿಸಿದ್ದಾರೆ ಎಂದರು.

    ಕಾನೂನು ಕ್ರಮ: ಖಾಸಗಿ ಆಸ್ಪತ್ರೆಯೊಂದರಲ್ಲಿ ಕಳಪೆ ಪಿಪಿಇ ಕಿಟ್ ನೀಡಲಾಗಿದೆ ಎಂಬ ವರದಿ ಮತ್ತು ಅದನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಬಿಸಾಡಲಾಗಿತ್ತು ಎಂಬ ವಿಷಯ ಗಮನಕ್ಕೆ ಬಂದಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಆಸ್ಪತ್ರೆಗೆ ಮುಂದೆ ಇಂತಹ ಘಟನೆ ಮರುಕಳಿಸದಂತೆ ಸೂಚನೆ ನೀಡಲಾಗಿದೆ. ಇಷ್ಟರ ಮೇಲೂ ಅಂತಹ ಪ್ರಕರಣ ಮರುಕಳಿಸಿದರೆ ಎಚ್ಚರಿಕೆ ನೀಡಲಾಗುವುದು. ಆಗಲೂ ಪರಿಸ್ಥಿತಿ ಸರಿಯಾಗದಿದ್ದಲ್ಲಿ ಕಾನೂನು ಮೂಲಕ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

    ಟಾಸ್ಕ್‌ಫೋರ್ಸ್ ಸಭೆಯಲ್ಲಿ ಲಾಕ್‍ಡೌನ್ ವಿಚಾರವು ಚರ್ಚೆಗೆ ಬಂತು. ಈ ಸನ್ನಿವೇಶದಲ್ಲಿ ಲಾಕ್‍ಡೌನ್ ಬೇಕಿಲ್ಲ ಎಂದು ನಾನು ಮತ್ತು ಡಿಸಿಎಂ ಅಶ್ವತ್ಥನಾರಾಯಣ ಸಿಎಂಗೆ ಹೇಳಿದ್ದೇವೆ. ಈ ಕುರಿತು ಮುಂದೆ ಅವರು ನಿರ್ಧಾರ ಕೈಗೊಳ್ಳಲಿದ್ದಾರೆ. ಈಗಾಗಲೇ ಸಿಎಂ ಪ್ರಕಟಿಸಿದ್ದಂತೆ ಭಾನುವಾರ ಮತ್ತು ರಾತ್ರಿ ಕಫ್ರ್ಯೂ ಮುಂದಿನ ಆದೇಶದವರೆಗೆ ಮುಂದುವರಿಯಲಿದೆ ಎಂದರು.

    ಸಿಎಂ ನೇತೃತ್ವದಲ್ಲಿ ನಡೆದ ಟಾಸ್ಕ್‌ಫೋರ್ಸ್ ಸಭೆಯಲ್ಲಿ ಡಿಸಿಎಂ ಅಶ್ವತ್ಥನಾರಾಯಣ, ಸಚಿವರಾದ ಶ್ರೀರಾಮುಲು, ಬಸವರಾಜ ಬೊಮ್ಮಾಯಿ, ಆರ್.ಅಶೋಕ್, ಸಿಎಂ ರಾಜಕೀಯ ಕಾರ್ಯದರ್ಶಿ ಎಸ್.ಆರ್.ವಿಶ್ವನಾಥ್ ಮತ್ತು ಹಿರಿಯ ಅಧಿಕಾರಿಗಳು ಹಾಜರಿದ್ದರು ಎಂದು ವಿವರಿಸಿದರು.

    ಟೆಲಿ ಮೆಡಿಸನ್ ಕಾರ್ಟ್‍ಗೆ ಚಾಲನೆ: ಕಾರ್ಯಕ್ರಮದಲ್ಲಿ ಸಿಸ್ಕೊ ಸಂಸ್ಥೆ ಸಾಮಾಜಿಕ ಹೊಣೆಗಾರಿಕೆ ಅಡಿ ಬೆಂಗಳೂರು ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕೊಡುಗೆ ನೀಡಿರುವ ಟೆಲಿ ಮೆಡಿಸನ್ ಕಾರ್ಟ್‍ಗೆ ಸಚಿವ ಸುಧಾಕರ್ ವಿಧಾನಸೌಧದಲ್ಲಿ ಚಾಲನೆ ನೀಡಿದರು. ಬಳಿಕ ಕೋವಿಡ್-19 ಆಸ್ಪತ್ರೆಯಲ್ಲಿ ಕಳೆದ 7 ದಿನಗಳಿಂದ ಚಿಕಿತ್ಸೆ ಪಡೆಯುತ್ತಿರುವ ರೋಗಿ ಜೊತೆ ಮಾತನಾಡಿ ಎಲ್ಲ ವಿವರ ಪಡೆದರು.

  • ಹಾಲಿನ ಅಭಿಷೇಕ, ಚಾಕ್ಲೇಟ್ ಹಾರ ಹಾಕಿ ಸುಧಾಕರ್ ಹುಟ್ಟುಹಬ್ಬ ಆಚರಣೆ

    ಹಾಲಿನ ಅಭಿಷೇಕ, ಚಾಕ್ಲೇಟ್ ಹಾರ ಹಾಕಿ ಸುಧಾಕರ್ ಹುಟ್ಟುಹಬ್ಬ ಆಚರಣೆ

    – 15 ಅಡಿ ಎತ್ತರದ ಕಟೌಟ್‍ಗೆ ತಾಂತ್ರಿಕತೆ ಮೂಲಕ ಹಾಲಿನ ಅಭಿಷೇಕ

    ಚಿಕ್ಕಬಳ್ಳಾಪುರ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಹಾಗೂ ಅಭಿಮಾನಿಗಳು ಸುಧಾಕರ್ ಅವರ ಬೃಹದಾಕಾರದ ಕಟೌಟ್‍ಗೆ ಹಾಲಿನ ಅಭಿಷೇಕ ನೇರವೇರಿಸಿದರು.

    ನಗರ ಹೊರವಲಯದ ಬಿಬಿ ರಸ್ತೆಯ ಪೆಟ್ರೋಲ್ ಬಂಕ್ ಪಕ್ಕದ ಖಾಲಿ ಜಾಗದಲ್ಲಿ ಬೆಂಬಲಿಗರು 15 ಅಡಿ ಎತ್ತರದ ಕಟೌಟ್ ನಿಲ್ಲಿಸಿ ಹೂವಿನ ಅಲಂಕಾರ ಮಾಡಿದ್ದರು. ಅಲ್ಲದೇ ತಾಂತ್ರಿಕತೆ ಮೂಲಕ ಕಟೌಟ್‍ಗೆ ನಿರಂತರವಾಗಿ ಹಾಲಿನ ಅಭಿಷೇಕ ಆಗುವಂತೆ ಮಾಡಿ ಹಾಲಿನ ಅಭಿಷೇಕ ನಡೆಸಿದರು. ಇದನ್ನೂ ಓದಿ: ಮಧ್ಯರಾತ್ರಿ ಆಸ್ಪತ್ರೆಯಿಂದ್ಲೇ ಪತ್ನಿ, ಮಗಳಿಂದ ಸಚಿವ ಡಾ.ಸುಧಾಕರ್‌ಗೆ ವಿಶ್

    ಇದಲ್ಲದೆ ಕಟೌಟ್‍ಗೆ ಚಾಕ್ಲೇಟ್‍ನಲ್ಲಿ ಮಾಡಿದ್ದ ಹಾರ ಹಾಕಿದ್ದು ವಿಶೇಷವಾಗಿತ್ತು. ಸದ್ಯ ಕ್ವಾರಂಟೈನ್‍ನಲ್ಲಿರುವ ಸಚಿವ ಸುಧಾಕರ್ ಅನುಪಸ್ಥಿತಿಯಲ್ಲಿ ಖುದ್ದು ಅವರ ಬೆಂಬಲಿಗರು ಕೇಕ್‍ಕಟ್ ಮಾಡಿ ಹಂಚಿ ಸವಿದರು. ಕೇಕ್‍ಕಟ್ ಮಾಡಿ ಪರಸ್ಪರ ತಿನ್ನಿಸುವ ವೇಳೆ ಬೆಂಬಲಿಗರು ಸಾಮಾಜಿಕ ಅಂತ ಮರೆತ್ತಿದ್ದರು.

    ಶ್ರೀ ಜಾಲಾರಿ ನರಸಿಂಹಸ್ವಾಮಿ ದೇವಾಲಯದಲ್ಲಿ ಅವರ ಬೆಂಬಲಿಗರು ವಿಶೇಷ ಪೂಜೆ ಸಲ್ಲಿಸಿ, ಸಚಿವ ಸುಧಾಕರ್ ಕುಟುಂಬಸ್ಥರು ಕೊರೊನಾದಿಂದ ಶೀಘ್ರ ಗುಣಮುಖರಾಗಲಿ ಅಂತ ಪ್ರಾರ್ಥಿಸಿದರು.

    ಇನ್ನೂ ಸುಧಾಕರ್ ಪತ್ನಿ ಹಾಗೂ ಮಗಳು ಮಧ್ಯರಾತ್ರಿ ಆಸ್ಪತ್ರೆಯಿಂದಲೇ ಶುಭಾಶಯ ತಿಳಿಸಿದ್ದಾರೆ. ಟಿಕ್ ಟಾಕ್ ಮಾಡಿರುವ ಸಚಿವರ ಪತ್ನಿ ಹಾಗೂ ಮಗಳು, ಹುಟ್ಟುಹಬ್ಬದ ಶುಭಾಯಗಳು ಎಂದು ತಿಳಿಸಿದ್ದಾರೆ. ಅಪ್ಪ ನೀನು ಎಲ್ಲಾ ಸಮಯದಲ್ಲೂ ಖುಷಿಯಾಗರಬೇಕು. ಲವ್ ಯೂ ಅಪ್ಪ. ನಿಮ್ಮ ಪ್ರೀತಿಯನ್ನ ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ವಿಡಿಯೋದಲ್ಲಿ ಬರೆದುಕೊಳ್ಳುವ ಮೂಲಕ ಮಗಳು ಅಪ್ಪನ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾಳೆ.

  • ಮಧ್ಯರಾತ್ರಿ ಆಸ್ಪತ್ರೆಯಿಂದ್ಲೇ ಪತ್ನಿ, ಮಗಳಿಂದ ಸಚಿವ ಡಾ.ಸುಧಾಕರ್‌ಗೆ ವಿಶ್

    ಮಧ್ಯರಾತ್ರಿ ಆಸ್ಪತ್ರೆಯಿಂದ್ಲೇ ಪತ್ನಿ, ಮಗಳಿಂದ ಸಚಿವ ಡಾ.ಸುಧಾಕರ್‌ಗೆ ವಿಶ್

    ಬೆಂಗಳೂರು: ಇಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರ 47ನೇ ವರ್ಷದ ಜನ್ಮದಿನವಾಗಿದ್ದು, ಮಧ್ಯರಾತ್ರಿ ಪತ್ನಿ ಹಾಗೂ ಮಗಳು ಆಸ್ಪತ್ರೆಯಿಂದಲೇ ಶುಭಾಶಯ ತಿಳಿಸಿದ್ದಾರೆ.

    ಟಿಕ್ ಟಾಕ್ ವಿಡಿಯೋ ಮಾಡಿರುವ ಮಾಡಿರುವ ಸಚಿವರ ಪತ್ನಿ ಹಾಗೂ ಮಗಳು, ಹುಟ್ಟುಹಬ್ಬದ ಶುಭಾಶಯಗಳು ಎಂದು ತಿಳಿಸಿದ್ದಾರೆ. ಅಪ್ಪ ನೀನು ಎಲ್ಲಾ ಸಮಯದಲ್ಲೂ ಖುಷಿಯಾಗರಬೇಕು. ಲವ್ ಯೂ ಅಪ್ಪ. ನಿಮ್ಮ ಪ್ರೀತಿಯನ್ನಿ ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ವಿಡಿಯೋದಲ್ಲಿ ಬರೆದುಕೊಳ್ಳುವ ಮೂಲಕ ಅಪ್ಪನ ಹುಟ್ಟುಹಬ್ಬಕ್ಕೆ ಮಗಳು ಪ್ರೀತಿಯಿಂದ  ಶುಭ ಕೋರಿದ್ದಾಳೆ.

    ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಆಸ್ಪತ್ರೆಯಿಂದ ರಾತ್ರಿ 12 ಗಂಟೆಗೆ ನನ್ನ ಮಗಳು ಮತ್ತು ನನ್ನ ಪತ್ನಿ ನನ್ನ ಹುಟ್ಟುಹಬ್ಬಕ್ಕೆ ಶುಭಾಶಯಗಳನ್ನ ತಿಳಿಸಿದ್ದಾರೆ. ಈ ವಿಡಿಯೋ ಉಡುಗೊರೆ ನನ್ನ ಜೀವನದಲ್ಲೇ ಮಧುರವಾದದ್ದು, ಪವಿತ್ರ ಪ್ರೀತಿಯ ಸಂಕೇತ. ಮಿಸ್ ಯು ಮೈ ಏಂಜಲ್ಸ್ ಅಂತ ಬರೆದುಕೊಂಡಿದ್ದಾರೆ.

    ಇದಕ್ಕೂ ಮೊದಲು ಟ್ವೀಟ್ ಮಾಡಿರುವ ಸಚಿವರು, ಆತ್ಮೀಯ ಬಂಧುಗಳೇ, ತಮ್ಮೆಲ್ಲರ ಶುಭಹಾರೈಕೆ, ಆಶೀರ್ವಾದಗಳಿಂದ ನನ್ನ ಕುಟುಂಬ ಸದಸ್ಯರು ಕ್ಷೇಮದಿಂದಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ನಾನು ಪ್ರಾಥಮಿಕ ಸಂಪರ್ಕಿತನಾಗಿ ಕ್ವಾರಂಟೈನ್ ನಲ್ಲಿರುವುದರಿಂದ, ನಾಳೆ ನನ್ನ ಜನ್ಮದಿನದಂದು ನೀವು ಇರುವಲ್ಲಿಂದಲೇ ಹಾರೈಸಿ, ಆಶೀರ್ವದಿಸಿ, ನಿಮ್ಮೆಲ್ಲರ ಪ್ರೀತಿ ಅಭಿಮಾನಗಳಿಗೆ ನಾನು ಚಿರಋಣಿಯಾಗಿದ್ದೇನೆ ಎಂದು ತಿಳಿಸಿದ್ದರು.

    ಸಚಿವರ ಪತ್ನಿ ಹಾಗೂ ಮಗಳಿಗೆ ಕೊರೊನಾ ಪಾಸಿಟಿವ್ ದೃಢವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಚಿವರು ಹಾಗೂ ಇನ್ನಿಬ್ಬರು ಗಂಡು ಮಕ್ಕಳ ಟೆಸ್ಟ್ ವರದಿಯಲ್ಲಿ ನೆಗೆಟಿವ್ ಬಂದಿದ್ದು, ಹೀಗಾಗಿ ಅವರು ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ. ಸಚಿವರ ಕುಟುಂಬಕ್ಕೆ ಕೊರೊನಾ ಒಕ್ಕರಿಸಿದೆ ಎಂದು ತಿಳಿದ ತಕ್ಷಣ ಕಾಂಗ್ರೆಸ್ ಹಾಗೂ ಬಿಜೆಪಿಯ ನಾಯಕರು ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

  • ನಮಗೆ ಇಂಗ್ಲಿಷ್ ಬರಲ್ಲ, ನೀವೇ ಅಧಿಕಾರಿಗಳಿಗೆ ಕ್ಲಾಸ್ ತಗೋಳಿ- ಸಚಿವ ಸುಧಾಕರ್ ಗೆ ಪರಿಷತ್ ಸದಸ್ಯ ಮನವಿ

    ನಮಗೆ ಇಂಗ್ಲಿಷ್ ಬರಲ್ಲ, ನೀವೇ ಅಧಿಕಾರಿಗಳಿಗೆ ಕ್ಲಾಸ್ ತಗೋಳಿ- ಸಚಿವ ಸುಧಾಕರ್ ಗೆ ಪರಿಷತ್ ಸದಸ್ಯ ಮನವಿ

    ಕಲಬುರಗಿ: ಸರ್ ನಮಗೆ ಇಂಗ್ಲೀಷ್ ಬರಲ್ಲ ಈ ಅಧಿಕಾರಿಗಳಿಗೇ ನೀವೆ ಸ್ಚಲ್ಪ ಕ್ಲಾಸ್ ತೆಗೆದುಕೊಳ್ಳಿ ಎಂದು ಕಲಬುರಗಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ವೈದ್ಯಕೀಯ ಸಚಿವ ಡಾ.ಸುಧಾಕರಗೆ ವಿಧಾನ ಪರಿಷತ್ ಸದಸ್ಯ ತಿಪಣಪ್ಪ ಕಮಕನೂರ ನಗೆ ಚಟಾಕಿ ಹಾರಿಸಿದ್ದಾರೆ.

    ಕೊರೊನಾ ಬಗ್ಗೆ ಜಿಲ್ಲೆಯ ಅಧಿಕಾರಿಗಳ ಬಳಿ ಮಾಹಿತಿ ಕೇಳಿದರೆ, ಬರೀ ಇಂಗ್ಲಿಷ್‍ನಲ್ಲಿ ಏನೆನೋ ಹೇಳಿ ಬಿಡ್ತಾರೆ, ಒಂದೆಡೆ ಈ ಅಧಿಕಾರಿಗಳು ಕೆಲಸ ಮಾಡುತ್ತಿಲ್ಲ, ಕೆಲಸ ಮಾಡಿ ಎಂದು ಸೂಚಿಸಿದರೆ ಬರೀ ಇಂಗ್ಲಿಷ್ ನಲ್ಲಿ ಮಾತನಾಡಿ ನಮ್ಮ ಬಾಯಿ ಮುಚ್ಚಿಸುತ್ತಾರೆ. ಹೀಗಾಗಿ ನಮಗೆ ಏನೂ ತಿಳಿಯುತ್ತಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಚಿವರ ಬಳಿ ಅಳಲು ತೋಡಿಕೊಂಡಿದ್ದಾರೆ.

    ಸದ್ಯ ಇದೀಗ ನೀವು ಸಭೆ ಕರೆಯುತ್ತಿರುವುದರಿಂದ ಈಗಷ್ಟೇ ನಮ್ಮ ಜಿಲ್ಲೆಯ ಕೊರೊನಾ ಬಗ್ಗೆ ಮಾಹಿತಿ ಸಿಗುತ್ತಿದೆ. ಸದ್ಯ ನೀವು ವೈದ್ಯಕೀಯ ಸಚಿವರಾಗಿ ಉತ್ತಮ ಕೆಲಸ ಮಾಡುತ್ತಿದ್ದು, ಅಧಿಕಾರಿಗಳಿಗೆ ಸ್ವಲ್ಪ ಬಿಸಿ ಮುಟ್ಟಿಸಿ ಎಂದು ಹೇಳಿದ್ದಾರೆ. ಇನ್ನು ತಿಪ್ಪಣಪ್ಪ ಅವರ ಮಾತು ಕೇಳುತ್ತಿದ್ದಂತೆ ಅಲ್ಲಿನ ಶಾಸಕರು ಹಾಗೂ ಅಧಿಕಾರಿಗಳು ನಕ್ಕಿದ್ದಾರೆ. ಹೀಗೆ ವಿಧಾನ ಪರಿಷತ್ ಸದಸ್ಯರು ತಮ್ಮ ಜಿಲ್ಲೆಯ ಅಧಿಕಾರಿಗಳ ಬಗ್ಗೆ ಹಾಸ್ಯವಾಗಿಯೇ ಸಚಿವರ ಬಳಿ ಹೇಳಿಕೊಂಡಿದ್ದಾರೆ.