Tag: ಸಚಿವ ಡಿಕೆ ಶಿವಕುಮಾರ್

  • ಉಪಚುನಾವಣೆ ಕದನದ ಬಳಿಕವೂ ನಿಂತಿಲ್ಲ ಡಿಕೆಶಿ-ರಾಮುಲು ಶೀತಲ ಸಮರ

    ಉಪಚುನಾವಣೆ ಕದನದ ಬಳಿಕವೂ ನಿಂತಿಲ್ಲ ಡಿಕೆಶಿ-ರಾಮುಲು ಶೀತಲ ಸಮರ

    ಬೆಂಗಳೂರು: ಬಳ್ಳಾರಿ ಹಂಪಿ ಉತ್ಸವವನ್ನು ಆಚರಣೆ ಮಾಡದಿರಲು ಚಿಂತನೆ ನಡೆಸಿರುವ ರಾಜ್ಯ ಸರ್ಕಾರದ ಬಗ್ಗೆ ಶಾಸಕ ಶ್ರೀರಾಮುಲು ಕಿಡಿಕಾರಿದ್ದು, ಕಾಂಗ್ರೆಸ್ ಪಕ್ಷದ ಕೃತಜ್ಞತಾ ಸಮಾವೇಶ ಮಾಡಿದಾಗ ಬರದ ಬರಗಾಲ ಹಂಪಿ ಉತ್ಸವ ಆಚರಿಸಲು ಬಂತೆ ಎಂದು ಪ್ರಶ್ನೆ ಮಾಡಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಶಾಸಕ ಶ್ರೀರಾಮುಲು ಅವರು, ದುಂದು ವೆಚ್ಚ ಮಾಡಿ ಬಳ್ಳಾರಿಯಲ್ಲಿ ಕೃತಜ್ಞತಾ ಸಮಾವೇಶ ಮಾಡಿದಾಗ ಅಡ್ಡ ಬರದ ಬರಗಾಲ ಹಂಪಿ ಉತ್ಸವ ಆಚರಿಸಲು ಬಂತೆ? ನಿಮ್ಮ ರೈತಪರ ಕಾಳಜಿಯನ್ನು ರೈತರ ಸಾಲಮನ್ನಾ ಮಾಡುವ ಮೂಲಕ ತೋರಿಸಿ. ಕೇಂದ್ರ ಬರ ಅಧ್ಯಯನ ತಂಡಕ್ಕೆ ಸಹಕಾರ ನೀಡುವ ಮೂಲಕ ಕೆಲಸ ಮಾಡಿ ಎಂದು ಬರೆದು ಸಚಿವ ಡಿಕೆ ಶಿವಕುಮಾರ್ ಅವರಿಗೆ ಟ್ಯಾಗ್ ಮಾಡಿದ್ದಾರೆ.

    ಜಲಸಂಪ್ಮೂಲ ಸಚಿವ ಡಿಕೆ ಶಿವಕುಮಾರ್ ಅವರು ಮಂಗಳವಾರ ವಿಧಾನಸೌಧದಲ್ಲಿ ಮಾತನಾಡಿ, ರಾಜ್ಯದ ನೂರು ತಾಲೂಕುಗಳಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ಹಂಪಿ ಉತ್ಸವವನ್ನು ಮುಂದೂಡಲು ಸರ್ಕಾರ ನಿರ್ಧರಿಸಿದೆ. ಮುಂದಿನ ವರ್ಷ ವಿಜೃಂಭನೆಯಿಂದ ಆಚರಿಸಲಾಗುತ್ತದೆ ಎಂದು ಹೇಳಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಂಬಿಯನ್ನು ಮದ್ವೆಗೆ ಒಪ್ಪಿಸಿದ್ದು ಹೇಗೆ? ಡಿಕೆ ಶಿವಕುಮಾರ್ ನೆನಪು ಮೆಲುಕು

    ಅಂಬಿಯನ್ನು ಮದ್ವೆಗೆ ಒಪ್ಪಿಸಿದ್ದು ಹೇಗೆ? ಡಿಕೆ ಶಿವಕುಮಾರ್ ನೆನಪು ಮೆಲುಕು

    ಬೆಂಗಳೂರು: ಕಂಠೀರವ ಸ್ಟೇಡಿಯಂನಲ್ಲಿ ನಟ, ಮಾಜಿ ಸಚಿವ ಅಂಬರೀಶ್ ಅವರ ಅಂತಿಮ ದರ್ಶನ ಪಡೆದ ಸಚಿವ ಡಿ.ಕೆ.ಶಿವಕುಮಾರ್ ಹಳೆಯ ನೆನಪುಗಳನ್ನು ಮೆಲುಕು ಹಾಕಿಕೊಂಡರು. ಅಂಬರೀಶ್ ಅವರನ್ನು ಮದುವೆ ಹೇಗೆ ಒಪ್ಪಿಸಲಾಯ್ತು ಎಂಬ ಘಟನೆಯನ್ನು ಮಾಧ್ಯಮಗಳ ಜೊತೆ ಹಂಚಿಕೊಂಡರು.

    ಒಂದು ಸಾರಿ ಎಲ್ಲರು ಮಂಗಳೂರಿಗೆ ಹೋಗುತ್ತಿದ್ದರು. ದಿ.ಮಾಜಿ ಸಚಿವ ಹೆಚ್.ಸಿ.ಶ್ರೀಕಂಠಯ್ಯ ನನ್ನನ್ನು ಕರೆದಿದ್ದರು. ನಾನು ಬಂಗಾರಪ್ಪ ಅವರ ಸಂಪುಟದಲ್ಲಿ ಸಚಿವನಾಗಿದ್ದರಿಂದ ಏನೋ ಒಂದು ಕಾರಣ ಹೇಳಿ ಹೋಗಿದ್ದೆ. ಅಂದು ಸಾಯಂಕಾಲ ನಾನು, ಶ್ರೀಕಂಠಯ್ಯನವರು, ಅಂಬರೀಶ್, ಅಪ್ಪಾಜಿ ನಾಯಕ್, ಶ್ರೀಪತಿರಾಯರು ಸೇರಿದಂತೆ ನಾಲ್ಕೈದು ಜನ ಮಾತನಾಡುತ್ತಾ ಕುಳಿತೆವು.

    ಅಂದು ಮದುವೆ ಆಗ್ತೀನಿ ಅಂತಾ ಹೇಳುತ್ತಾ ಅಂಬರೀಶ್ ದಿನಗಳನ್ನು ಮುಂದೂಡುತ್ತಿದ್ದರು. ಹೀಗಾಗಿ ಶ್ರೀಕಂಠಯ್ಯನವರು ಆ ವೇಳೆ ಅಂಬರೀಶ್ ಮದುವೆ ವಿಚಾರ ಪ್ರಸ್ತಾಪ ಮಾಡಿದರು. ಅಂಬರೀಶ್ ನಿನಗೆ 39 ವಯಸ್ಸು ಆಯ್ತು. ಯಾವಾಗ ಮದುವೆ ಆಗ್ತೀಯಾ ಹೇಳು ನೀನು ಎಂದು ಎತ್ತರದ ಧ್ವನಿಯಲ್ಲಿ ಕೇಳಿದರು. ಯಾಕೆ ಆ ಹುಡುಗಿಯನ್ನ (ಸುಮಲತಾ) ಕಾಡಸ್ತೀಯಾ? ಆದಷ್ಟು ಬೇಗ ಮದ್ವೆ ಆಗು ಎಂದು ಗದರಿದರು. ಇದನ್ನು ಓದಿ: ಅಂಬಿ ಬರೆದ ಮೊದಲ ಪ್ರೇಮ ಪತ್ರದಲ್ಲಿ ಏನಿತ್ತು?

    ನಿನ್ನ ಮದುವೆ ವಿಚಾರ ಮಾತಾಡೋದಕ್ಕೆ ಎಲ್ಲರನ್ನು ಕರೆಸಿದ್ದೇನೆ. ಇವತ್ತು ಎರಡರಲ್ಲಿ ಒಂದು ತೀರ್ಮಾನ ಆಗಬೇಕು ಎಂದು ಶ್ರೀಕಂಠಯ್ಯನವರು ಹೇಳಿದರು. ಚುಂಚನಗಿರಿ ಸ್ವಾಮಿಗಳು ಕೂಡ ಹೇಳಿದ್ದಾರೆ. ಅದ್ದರಿಂದಲೇ ನಾವೆಲ್ಲಾ ಇಲ್ಲಿ ಸೇರಿದ್ದೇವೆ ಎಂದು ಒತ್ತಾಯ ಮಾಡಿದರು. ಶ್ರೀಕಂಠಯ್ಯ ಅವರ ಮಾತಿಗೆ ಒಪ್ಪಿಗೆ ಸೂಚಿಸಿದ ಅಂಬಿ ಒಂದು ವಾರದಲ್ಲಿ ಅಂತಿಮ ತೀರ್ಮಾನ ತಿಳಿಸುವುದಾಗಿ ಹೇಳಿದರು.  ಇದನ್ನು ಓದಿ: ಪತ್ನಿಗೆ ಕಂಡೀಷನ್ ಹಾಕ್ತೀರಾ ಪ್ರಶ್ನೆಗೆ ಅಂಬಿಯ ಪ್ರತಿಕ್ರಿಯೆ ಹೀಗಿತ್ತು 

    ಅಂದು ನನಗೆ ಅಂಬರೀಶ್ ಅವರ ಬಳಿ ಜೋರು ಮಾಡಿ ಮಾತನಾಡುವ ಶಕ್ತಿ ಇರಲಿಲ್ಲ. ಆದರೆ ಶ್ರೀ ಕಂಠಯ್ಯನವರು ದೊಡ್ಡ ಜಗಳವನ್ನೆ ಮಾಡಿದ್ದರು. ಆಗ ಆಯ್ತು ಬಿಡಿ ಅಣಯ್ಯ ಎಂದು ಅಂಬಿ ಹೇಳಿದ್ದರು. ಆ ಬಳಿಕವೇ ಅವರಿಬ್ಬರ ಪ್ರೇಮದ ಬೆಸುಗೆಗೆ ಇಡೀ ಸಮಾಜ ಬೆಂಬಲಕ್ಕೆ ನಿಂತಿದ್ದನ್ನು ಕಂಡ ಅಂಬಿ ಮದುವೆಗೆ ಅಂತಿಮವಾಗಿ ಒಪ್ಪಿಗೆ ನೀಡಿದರು ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸರ್ಕಾರ ಟೇಕಾಫ್ ಆಗಿಲ್ಲ – ಶಾಸಕರಲ್ಲಿ ಅಸಮಾಧಾನ ಇರೋದು ನಿಜ: ಸತೀಶ್ ಜಾರಕಿಹೊಳಿ

    ಸರ್ಕಾರ ಟೇಕಾಫ್ ಆಗಿಲ್ಲ – ಶಾಸಕರಲ್ಲಿ ಅಸಮಾಧಾನ ಇರೋದು ನಿಜ: ಸತೀಶ್ ಜಾರಕಿಹೊಳಿ

    ಬೆಂಗಳೂರು: ಪಕ್ಷದ ಶಾಸಕರದಲ್ಲಿ ಅಸಮಾಧಾನ ಇರುವುದು ನಿಜ, ನನ್ನ ಬಳಿಯೂ ಕೆಲ ಶಾಸಕರು ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಮಾಜಿ ಸಚಿವ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

    ಸರ್ಕಾರ ಪೂರ್ಣ ಪ್ರಮಾಣದಲ್ಲಿ ಟೇಕಾಫ್ ಆಗಿಲ್ಲ, ಕೆಲ ಇಲಾಖೆಗಳು ಮಾತ್ರ ಕೆಲಸ ಮಾಡುತ್ತಿದ್ದು. ಪೂರ್ಣ ಪ್ರಮಾಣದಲ್ಲಿ ಟೇಕಾಫ್ ಆಗಲು ಮತ್ತಷ್ಟು ಸಮಯ ಬೇಕಿದೆ. ಹಾಗೆಯೇ ಅಧಿವೇಶನದ ಒಳಗೆ ಸಂಪುಟ ವಿಸ್ತರಣೆ ಆಗುವುದು ಅನುಮಾನ. ಎಲ್ಲಾ ಸರ್ಕಾರದ ವೇಳೆಯಲ್ಲೂ ಕೆಲ ಶಾಸಕರು ಅಸಮಾಧಾನ ವ್ಯಕ್ತಪಡಿಸುವುದು ಸಾಮಾನ್ಯ. ಸಿದ್ದರಾಮಯ್ಯ ಅವರು ಕೂಡ ಸಿಎಂ ಆಗಿದ್ದಾಗ ಈ ಸಮಸ್ಯೆ ಇತ್ತು. ಆದರೆ ಏನೇ ಸಮಸ್ಯೆಗಳಿದ್ದರೂ ಪಕ್ಷದ ಆಂತರಿಕ ಸಭೆಯಲ್ಲಿ ಬಗೆಹರಿಸಿಕೊಳ್ಳುವುದಾಗಿ ತಿಳಿಸಿದರು.

    ಸಮ್ಮಿಶ್ರ ಸರ್ಕಾರ ಕೈಗೊಂಡ ಸಾಲಮನ್ನಾದಿಂದ ಇತರೇ ಅಭಿವೃದ್ಧಿ ಕಾರ್ಯಗಳಿಗೆ ಹಣ ಹೊಂದಿಸುವುದು ಕಷ್ಟವಾಗಿದೆ. ಆದ್ದರಿಂದ ಇಂತಹ ಕಾರ್ಯಗಳಿಗೆ ಹಣ ಸರಿಯಾಗಿ ಒದಗಿಸುತ್ತಿಲ್ಲ. ಬಿಜೆಪಿಯವರು ಪಕ್ಷ ಏನೇ ಹೇಳಬಹುದು. ಶಾಸಕರು ಕೂಡ ಬೇಸರ ವ್ಯಕ್ತಪಡಿಸಿರಬಹುದು. ಆದರೆ ನಾವು ಯಾವುದೇ ರೀತಿಯಲ್ಲಿ ಶಾಸಕರ ಸಂಪರ್ಕದಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದರು.

    ಡಿಕೆಶಿ ಬಳ್ಳಾರಿ ಭೇಟಿ: ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರು ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಭೇಟಿ ನೀಡಿದ್ದಾರೆ. ಅಲ್ಲದೇ ಸಿಎಂ ಕುಮಾರಸ್ವಾಮಿ ಅವರು ಸರ್ಕಾರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸಿದ್ದಾರೆ. ಇದರ ಅನ್ವಯ ಜಿಲ್ಲೆಯಲ್ಲಿ ಬೆಳೆಗಾರರು ಹೋರಾಟ ನಡೆಸುತ್ತಿರುವ ಕಾರಣ ಅವರ ಮನವೊಲಿಸಲು ಭೇಟಿ ನೀಡಿರಬಹುದು ಅಷ್ಟೇ. ಡಿಕೆ ಶಿವಕುಮಾರ್ ನಾನು ಕಳೆದ 20 ವರ್ಷದಿಂದ ಬಹಳ ಆತ್ಮೀಯ ಸ್ನೇಹಿತರು. ಜಿಲ್ಲೆಗೆ ಬೇಕಾದ ಪ್ರಮುಖ ಕೆಲಸಗಳನ್ನು ಅವರು ಮಾಡಿದ್ದಾರೆ ಎಂದರು. ಇದನ್ನು ಓದಿ: ಬಳ್ಳಾರಿ ಆಯ್ತು ಈಗ ಜಾರಕಿಹೊಳಿ ಕೋಟೆಯಲ್ಲಿ ಹವಾ – ರೈತರ ಜೊತೆ ಡಿಕೆಶಿ ಸಂಧಾನ ಯಶಸ್ವಿ

    ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಮಾತನಾಡಿದ್ದು, ಕೆಲ ಮೀಸಲಾತಿ ವಿಚಾರವಾಗಿ ಹಾಗೂ ವರ್ಗಾವಣೆ ಕುರಿತು ಮಾತನಾಡಬೇಕಿತ್ತು ಅಷ್ಟೇ. ಕ್ಷೇತ್ರಕ್ಕೆ ಸಿದ್ದರಾಮಯ್ಯ ಆಳ್ವಿಕೆಯಲ್ಲಿ ಸಾಕಷ್ಟು ಅನುದಾನ ಬರುತ್ತಿತ್ತು. ಆದ್ರೆ ಈಗ ಅನುದಾನ ಕಡಿಮೆ ಆಗಿದೆ. ಮೈತ್ರಿ ಸರ್ಕಾರದಲ್ಲಿ ಸಮರ್ಪಕ ಅನುದಾನ ಶಾಸಕರ ಕ್ಷೇತ್ರಗಳಿಗೆ ಬರುತ್ತಿಲ್ಲ. ಮುಂದಿನ ವರ್ಷದಲ್ಲಿ ಈ ಹಣ ಹೆಚ್ಚಳ ಆಗುವ ನಿರೀಕ್ಷೆ ಇದೆ. ಆದ್ದರಿಂದ ತಾಳ್ಮೆ ವಹಿಸಿ ಕೆಲಸ ಮಾಡುತ್ತಿದ್ದೇವೆ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಡಿಕೆಶಿ ತಪ್ಪೊಪ್ಪಿಗೆ ಹೇಳಿಕೆಯೇ ಕಾಂಗ್ರೆಸ್ ಗೆಲುವಿಗೆ ಕಾರಣ : ರಂಭಾಪುರಿ ಶ್ರೀ

    ಡಿಕೆಶಿ ತಪ್ಪೊಪ್ಪಿಗೆ ಹೇಳಿಕೆಯೇ ಕಾಂಗ್ರೆಸ್ ಗೆಲುವಿಗೆ ಕಾರಣ : ರಂಭಾಪುರಿ ಶ್ರೀ

    ರಾಯಚೂರು: ಶೈವ ಲಿಂಗಾಯತ ಒಂದೇ ಧರ್ಮ, ಪ್ರತ್ಯೇಕ ಧರ್ಮ ಮಾಡಲು ಹೋಗಿದ್ದು ತಪ್ಪಾಗಿದೆ ಎಂದು ಡಿಕೆ ಶಿವಕುಮಾರ್ ಒಪ್ಪಿಕೊಂಡಿದ್ದಕ್ಕೆ ಬಳ್ಳಾರಿಯಲ್ಲಿ ಕಾಂಗ್ರೆಸ್ ಗೆಲ್ಲಲು ಸಾಧ್ಯವಾಗಿದೆ ಎಂದು ರಂಭಾಪುರಿ ಜಗದ್ಗುರು ಶ್ರೀ ಪ್ರಸನ್ನ ವೀರಸೋಮೇಶ್ವರ ಸ್ವಾಮಿಜಿ ಹೇಳಿದ್ದಾರೆ.

    ರಾಯಚೂರಿನಲ್ಲಿ ಮಾತನಾಡಿದ ಶ್ರೀಗಳು, ಲಿಂಗಾಯತ ಪ್ರತ್ಯೇಕ ಧರ್ಮ ಮುಗಿದ ಅಧ್ಯಾಯ. ಈ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಯಲ್ಲಿ ಪ್ರತ್ಯೇಕ ಧರ್ಮ ಮಾಡಲು ಕೆಲವರು ಪ್ರಚೋದಿಸಿದ್ದರು. ಆದರೆ ಈಗಿನ ಸಮ್ಮಿಶ್ರ ಸರ್ಕಾರ ಪ್ರತ್ಯೇಕ ಧರ್ಮದ ಬಗ್ಗೆ ಕೇಂದ್ರಕ್ಕೆ ಮತ್ತೊಮ್ಮೆ ಶಿಫಾರಸ್ಸು ಮಾಡುವ ಸಾಧ್ಯತೆ ಕಡಿಮೆಯಿದೆ. ಕುಮಾರಸ್ವಾಮಿ ಹಾಗೂ ದೇವೇಗೌಡರಿಗೆ ಲಿಂಗಾಯತ ಹಾಗು ವೀರಶೈವ ಪ್ರತ್ಯೇಕ ಧರ್ಮ ಮಾಡುವ ಒಲವು ಇಲ್ಲ ಹೇಳಿದ್ದಾರೆ. ಸದ್ಯ ರಾಜ್ಯದ ಕಾಂಗ್ರೆಸ್ ನಾಯಕರು ಕೂಡ ಈ ಕುರಿತು ಕೇಂದ್ರ ನಾಯಕರಿಗೆ ಮನವರಿಗೆ ಮಾಡಬೇಕು. ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೂಡ ಧರ್ಮ ವಿಭಜನೆ ವಿಚಾರದಲ್ಲಿ ಪಶ್ಚಾತ್ತಾಪ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.

    ಇದೇ ವೇಳೆ ರಾಜ್ಯ ಸರ್ಕಾರ ಬೆಳೆ ಸಾಲ ಮನ್ನಾ ಘೋಷಣೆ ಮಾಡಿದೆ. ಆದರೆ ವಿಳಂಬ ಮಾಡುತ್ತಿರುವುದು ಸರಿ ಅಲ್ಲ. ವಿಳಂಬದಿಂದಾಗಿ ರೈತರ ಆತ್ಮಹತ್ಯೆಗಳು ಮುಂದುವರಿದಿವೆ. ಕಬ್ಬು ಬೆಳೆಗಾರ ಸಮಸ್ಯೆಯ ಬಗ್ಗೆಯೂ ಸರಕಾರ ಪರಿಹಾರಕ್ಕೆ ಚಿಂತಿಸಬೇಕು ಎಂದರು.

    ಡಿಕೆ ಶಿವಕುಮಾರ್ ಹೇಳಿದ್ದು ಏನು?
    ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಶರನ್ನವರಾತ್ರಿ ಅಂಗವಾಗಿ ರಂಭಾಪುರಿ ಶ್ರೀಗಳ ನೇತೃತ್ವದಲ್ಲಿ ನಡೆದ ಧರ್ಮಸಮ್ಮೇಳನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಡಿಕೆ ಶಿವಕುಮಾರ್ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದರು. ನಮ್ಮ ಸರ್ಕಾರದಲ್ಲಿ ನಾವು ದೊಡ್ಡ ತಪ್ಪನ್ನು ಮಾಡಿದ್ದೇವೆ. ಸರ್ಕಾರದವರು, ರಾಜಕೀಯದವರು ಧರ್ಮದ ವಿಚಾರದಲ್ಲಿ ಜಾತಿಯ ವಿಚಾರದಲ್ಲಿ ಕೈ ಹಾಕಬಾರದು. ನಮ್ಮ ಸರ್ಕಾರದಿಂದ ದೊಡ್ಡ ಅಪರಾಧವಾಗಿದೆ. ನಾನೂ ಸಹ ಆ ಸರ್ಕಾರದಲ್ಲಿ ಮಂತ್ರಿಯಾಗಿದ್ದೆ. ನಮ್ಮ ಬೇರೆ ಸಚಿವರು ವಿಭಿನ್ನವಾಗಿ ಮಾತನಾಡಿದರು. ಆದ್ರೆ ಸರ್ಕಾರದ ತೀರ್ಮಾನ ಆ ಸಂದರ್ಭದಲ್ಲಿ ಬೇಕಾದಷ್ಟು ಅಲ್ಲೋಲ ಕಲ್ಲೋಲ ಸೃಷ್ಟಿಯಾಯ್ತು. ರಾಜಕೀಯದಲ್ಲಿ ಅನೇಕ ವಿಭಿನ್ನವಾದ ಹೇಳಿಕೆಗಳನ್ನು ನಾವು ನೋಡಿದ್ದೇವೆ. ಯಾವುದೇ ಸರ್ಕಾರ ಧರ್ಮದಲ್ಲಿ ಕೈ ಹಾಕಬಾರದು ಎನ್ನೋದಕ್ಕೆ ಮೊನ್ನೆ ನಡೆದ ಜನಾಭಿಪ್ರಾಯವೇ ಸಾಕ್ಷಿ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews 

  • ಬಳ್ಳಾರಿಯಲ್ಲಿ ಶಾಂತವಾಗಿದ್ಯಾಕೆ ಕನಕಪುರ ಬಂಡೆ – ಡಿಕೆಶಿ ಹಿಂದಿದೆಯಾ ಪ್ರೇರಕ ಶಕ್ತಿ?

    ಬಳ್ಳಾರಿಯಲ್ಲಿ ಶಾಂತವಾಗಿದ್ಯಾಕೆ ಕನಕಪುರ ಬಂಡೆ – ಡಿಕೆಶಿ ಹಿಂದಿದೆಯಾ ಪ್ರೇರಕ ಶಕ್ತಿ?

    ಬೆಂಗಳೂರು: ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದ ಗೆಲುವಿಗೆ ಶ್ರಮಿಸಿ ಪಕ್ಷದ ಅಭ್ಯರ್ಥಿಯ ಭರ್ಜರಿ ಗೆಲುವಿಗೆ ಕಾರಣರಾಗಿದ್ದ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರು ಕ್ಷೇತ್ರಕ್ಕೆ ತೆರಳಿ ವಿಜಯೋತ್ಸವದಲ್ಲಿ ಭಾಗವಹಿಸಿರಲಿಲ್ಲ. ಸದ್ಯ ಡಿಕೆಶಿ ಅವರ ಈ ನಡೆ ಕುತೂಹಲ ಮೂಡಿಸಿದ್ದು, ಅವರ ಈ ನಡೆಗೆ ಪ್ರೇರಕ ಶಕ್ತಿಯೇ ಕಾರಣ ಎನ್ನಲಾಗುತ್ತಿದೆ.

    ಚುನಾವಣೆ ಫಲಿತಾಂಶದ ಬಳಿಕ ಮಾತನಾಡಿದ್ದ ಡಿಕೆ ಶಿವಕುಮಾರ್, ಬಳ್ಳಾರಿಯಲ್ಲಿ ವಿಜಯೋತ್ಸವ ಆಚರಣೆ ವೇಳೆ ಭಾಗವಹಿಸಲು ಚಿಂತನೆ ನಡೆಸುವುದಾಗಿ ತಿಳಿಸಿದ್ದರು. ಆದರೆ ಆ ಬಳಿಕ ಬಳ್ಳಾರಿಗೆ ತೆರಳದೆ ಸುಮ್ಮನಿದ್ದರು. ಈ ಹಿಂದೆ ವಿರೋಧಿ ಪಕ್ಷದ ಮುಖಂಡರ ಟೀಕೆಗೆ ನೇರ ಟಾಂಗ್ ನೀಡುತ್ತಿದ್ದ ಡಿಕೆಶಿ, ಸದ್ಯ ಶಾಂತಿಯ ಜಪ ಮಾಡುತ್ತಿದ್ದಾರೆ. ಅಲ್ಲದೇ ಚುನಾವಣೆಯ ವೇಳೆಯೂ ಶಾಸಕ ಶ್ರೀರಾಮುಲು ಅವರನ್ನು ರಾಮುಲು ಅಣ್ಣ ಹಾಗೂ ಬಿಜೆಪಿ ಅಭ್ಯರ್ಥಿಯನ್ನು ಶಾಂತಕ್ಕ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದರು.

    ಡಿಕೆ ಶಿವಕುಮಾರ್ ಅವರ ಈ ಬದಲಾವಣೆಗೆ ಅಧ್ಯಾತ್ಮ ಗುರು ನೊಣವಿನರೆಕೆರೆ ಅಜ್ಜಯ್ಯ ಅವರ ಮಾತು ಕಾರಣ. ಚುನಾವಣೆಯಲ್ಲಿ ಗೆದ್ದ ಬಳಿಕ ಯಾವುದೇ ಹಮ್ಮು ಇಲ್ಲದೇ ತಲೆಬಾಗಿ ನಡೆಯುವಂತೆ ಸಲಹೆ ನೀಡಿದ್ದಾರೆ. ಅಲ್ಲದೇ ಎಲ್ಲರಿಗೂ ಗೌರವ ನೀಡಿ ಜನರ ಪ್ರೀತಿ ಗಳಿಸುವಂತೆ ಅಜ್ಜಯ್ಯ ಸೂಚನೆ ನೀಡಿದ್ದಾರೆ. ಅಜ್ಜಯ್ಯನವರ ಆಣತಿಯಂತೆ ಡಿಕೆ ಶಿವಕುಮಾರ್ ಶಾಂತ ಸ್ವರೂಪಿಯಾಗಿದ್ದಾರೆ ಎನ್ನಲಾಗಿದೆ.

    ಈ ನಡುವೆ ಡಿಕೆ ಶಿವಕುಮಾರ್ ಅವರು ನವೆಂಬರ್ 19ಕ್ಕೆ ಬಳ್ಳಾರಿಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗೆ ಮತ ನೀಡಿದ ಮತದಾರರು, ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಲಿದ್ದಾರೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಚಂದ್ರಶೇಖರ್ ಗೆ ಹಣ ನೀಡಿಲ್ಲವೆಂದು ಚಾಮುಂಡೇಶ್ವರಿ ಮುಂದೆ ಪ್ರಮಾಣ ಮಾಡಲಿ- ಸಿಎಂಗೆ ರುದ್ರೇಶ್ ಸವಾಲ್

    ಚಂದ್ರಶೇಖರ್ ಗೆ ಹಣ ನೀಡಿಲ್ಲವೆಂದು ಚಾಮುಂಡೇಶ್ವರಿ ಮುಂದೆ ಪ್ರಮಾಣ ಮಾಡಲಿ- ಸಿಎಂಗೆ ರುದ್ರೇಶ್ ಸವಾಲ್

    – ಡಿಕೆಶಿ ಮಧ್ಯರಾತ್ರಿ ಬಳ್ಳಾರಿಯಿಂದ ಬೆಂಗ್ಳೂರಿಗೆ ಬಂದಿದ್ದು ಏಕೆ?

    ರಾಮನಗರ: ಸಿಎಂ ಅವರು ದೈವ ಇಚ್ಛೆಯಿಂದ ರಾಮನಗರ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ ಎಂದು ಹೇಳಿದ್ದಾರೆ. ಆದರೆ ಬಿಜೆಪಿ ಅಭ್ಯರ್ಥಿಗೆ ಹಣ ನೀಡಿ ಡೀಲ್ ಮಾಡಿಲ್ಲ ಎಂದು ಸಿಎಂ ಅವರು ತಾಯಿ ಚಾಮುಂಡೇಶ್ವರಿ ಮುಂದೆ ಪ್ರಮಾಣ ಮಾಡಲಿ ಎಂದು ರಾಮನಗರ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎಂ ರುದ್ರೇಶ್ ಸವಾಲು ಎಸೆದಿದ್ದಾರೆ.

    ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಚಂದ್ರಶೇಖರ್ ಅವರು ಏಕಾಏಕಿ ಕಾಂಗ್ರೆಸ್ ಸೇರಲು ಡೀಲ್ ನಡೆದಿದೆ ಅಂತ ಆರೋಪಿಸಿದ್ದಾರೆ. ಅಲ್ಲದೇ ಇದೇ ವೇಳೆ ಅಲ್ಲದೇ ಸಚಿವ ಡಿಕೆ ಶಿವಕುಮಾರ್ ಮಧ್ಯರಾತ್ರಿಯಲ್ಲಿ ಬಳ್ಳಾರಿಯಿಂದ ಬೆಂಗಳೂರಿಗೆ ಬಂದಿದು ಏಕೆ ಎಂದು ಪ್ರಶ್ನೆ ಮಾಡಿದರು.

    ಮೈತ್ರಿ ಸರ್ಕಾರ ಹಿಂಬಾಗಿಲಿನ ರಾಜಕೀಯ ಮಾಡಿ ಪಕ್ಷದ ಅಭ್ಯರ್ಥಿಯನ್ನು ಹೈಜಾಕ್ ಮಾಡಿ, ಚುನಾವಣೆಯಲ್ಲಿ ಗೊಂದಲ ಉಂಟಾಗುವಂತೆ ಮಾಡಿದೆ. ಶನಿವಾರ ನಡೆದ ಮತದಾನದ ಕೊನೆ ಕ್ಷಣದಲ್ಲಿ ಮತದಾನ ಏರಿಕೆಯಾಗಿದೆ. ಅವರ ಹಿಂಬಾಲಕರು ಬಲಾತ್ಕಾರವಾಗಿ ಮತದಾನ ಮಾಡಿಸಿದ್ದಾರೆ. ಇದು ಗೂಂಡಾಗಿರಿಯ ಚುನಾವಣೆ. ನ.6 ರಂದು ಲಭಿಸುವ ಫಲಿತಾಂಶ ಎಲ್ಲದಕ್ಕೂ ಉತ್ತರ ನೀಡಲಿದೆ ಎಂದರು.

    ಉಪಚುನಾವಣೆಯ ಬಳಿಕ ರಾಮನಗರ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಗೆ ನಿರ್ಧರಿಸಿದ್ದಾರೆ ಎಂದು ಶನಿವಾರ ಹೇಳಲಾಗಿದ್ದು, ಆದ್ರೆ ಯಾವುದೇ ಕಾರಣಕ್ಕೂ ನಾನು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಿಲ್ಲ ಎಂದು ಎಂ. ರುದ್ರೇಶ್ ಸ್ಪಷ್ಟಪಡಿಸಿದ್ದಾರೆ.

    ರಾಜ್ಯ ನಾಯಕರ ತಪ್ಪು ನಿರ್ಧಾರ:
    ಕ್ಷೇತ್ರ ಅಭ್ಯರ್ಥಿಯ ಆಯ್ಕೆ ವಿಚಾರದಲ್ಲಿ ರಾಜ್ಯ ನಾಯಕರು ತಪ್ಪು ಮಾಡಿದರು. ನಾವು ಮಾಡಿದ್ದು ತಪ್ಪಲ್ಲ, ನಮ್ಮ ತಪ್ಪಿದ್ದರೆ ಮೊದಲಿಗೆ ಅವರಿಗೆ ಟಿಕೆಟ್ ನೀಡಲು ಒಪ್ಪಿಗೆ ಸೂಚಿಸುತ್ತಿರಲಿಲ್ಲ. ಕ್ಷೇತ್ರದಲ್ಲಿ ಪ್ರಭಾವಿಗಳ ಚಕ್ರವ್ಯೂಹದಲ್ಲಿ ನಾವು ಬಂದಿಯಾಗದ್ದೆವು. ಚುನಾವಣೆ ವೇಳೆ ನಡೆದ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿ ಚರ್ಚೆ ನಡೆಸಿ ಇನ್ನು 2 ದಿನದಲ್ಲಿ ಬೆಂಗಳೂರಿಗೆ ಆಗಮಿಸಲಿರುವ ಬಿಎಸ್ ಯಡಿಯೂರಪ್ಪ ಅವರಿಗೆ ಈ ಬಗ್ಗೆ ಮಾಹಿತಿ ನೀಡಲಾಗುವುದು ಎಂದರು.

    ರುದ್ರೇಶ್ ಕಣ್ಣೀರು:
    ಕಾರ್ಯಕರ್ತರೊಂದಿನ ಸಭೆಯ ವೇಳೆ ಪಕ್ಷದಲ್ಲಿ ನಡೆದ ಇತ್ತೀಚಿನ ಬೆಳವಣಿಗೆಗಳನ್ನು ಉಲ್ಲೇಖಿಸಿ ರುದ್ರೇಶ್ ಭಾವುಕರಾದರು. ಈ ವೇಳೆ ನಿಮ್ಮ ಜೊತೆ ನಾವಿದ್ದೇವೆ ಕಣ್ಣೀರಿಡಬೇಡಿ ಎಂದ ಕಾರ್ಯಕರ್ತರು ಬೆಂಬಲ ನೀಡಿದರು. ಬಳಿಕ ಕಾರ್ಯಕರ್ತರ ಒತ್ತಾಯದ ಮೇರೆಗೆ ರಾಜೀನಾಮೆ ನಿಡುವ ಸುದ್ದಿಯನ್ನು ಅಲ್ಲಗೆಳೆದರು. ರಾಜ್ಯ ನಾಯಕರು ಜಿಲ್ಲೆಗೆ ಸಹಕಾರ ನೀಡಿದರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆಲುವು ಪಡೆಯುತ್ತೇವೆ. ಈ ಚುನಾವಣೆಯಲ್ಲಿ ನಡೆದ ದುಡುಕಿನ ನಿರ್ಧಾರ ಲೋಕಸಭೆಗೆ ಬೇಡ. ಚುನಾವಣೆ ವೇಳೆ ಕ್ಷೇತ್ರ ಎಲ್ಲಾ ಮುಖಂಡರ ಸಲಹೆ ಪಡೆದು ಅಭ್ಯರ್ಥಿಯನ್ನು ಆಯ್ಕೆ ಮಾಡುವಂತೆ ಪಕ್ಷದ ನಾಯಕರಿಗೆ ಸಲಹೆ ನೀಡುವುದಾಗಿ ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸೋಲಿಗೆ ಹೆದರಿ ಬಿಜೆಪಿ ಅಭ್ಯರ್ಥಿ ಹೈಜಾಕ್ : ಪ್ರತಾಪ್ ಸಿಂಹ ಕಿಡಿ

    ಸೋಲಿಗೆ ಹೆದರಿ ಬಿಜೆಪಿ ಅಭ್ಯರ್ಥಿ ಹೈಜಾಕ್ : ಪ್ರತಾಪ್ ಸಿಂಹ ಕಿಡಿ

    ಮೈಸೂರು: ರಾಮನಗರ ಉಪಚುನಾವಣೆಯಲ್ಲಿ ಮೈತ್ರಿ ಪಕ್ಷಗಳು ಸೋಲುವ ಭಯದಿಂದ ಬಿಜೆಪಿ ಅಭ್ಯರ್ಥಿಯನ್ನು ಹಣದ ಬಲದಿಂದ ಹೈಜಾಕ್ ಮಾಡಿದೆ. ಎಲ್ ಚಂದ್ರಶೇಖರ್ ಅವರನ್ನು ಬ್ಲಾಕ್‍ಮೇಲ್ ಮಾಡಿ ಕಾಂಗ್ರೆಸ್ ಪಕ್ಷಕ್ಕೆ ಕರೆತಂದಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

    ರಾಮನಗರ ಚುನಾವಣಾ ಕಣದಿಂದ ಬಿಜೆಪಿ ಅಭ್ಯರ್ಥಿ ಹಿಂದೆ ಸರಿದ ಕುರಿತು ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಸಂಸದ ಪ್ರತಾಪ್ ಸಿಂಹ, ಉಪಚುನಾವಣೆಯಲ್ಲಿ ಕಾಂಗ್ರೆಸ್ – ಜೆಡಿಎಸ್ ಪಕ್ಷಗಳು ರಣಹೇಡಿತನವನ್ನು ಪ್ರದರ್ಶಿಸಿದ್ದಾರೆ. ರಾಮನಗರದಲ್ಲಿ ಜೆಡಿಎಸ್ ಅಭ್ಯರ್ಥಿ ಸೋಲುವ ಭಯ ಇತ್ತು. ಇದರಿಂದ ತಪ್ಪಿಸಿಕೊಳ್ಳಲು ನಮ್ಮ ಅಭ್ಯರ್ಥಿಯನ್ನ ಹೈಜಾಕ್ ಮಾಡಿದ್ದಾರೆ. ಈ ಮೂಲಕ ಎರಡು ಪಕ್ಷಗಳು ತಮ್ಮ ಪುಕ್ಕಲುತನ ತೋರಿಸಿವೆ ಎಂದು ಕಿಡಿಕಾರಿದರು.

    ಎರಡು ಪಕ್ಷಗಳಿಗೆ ಚುನಾವಣೆ ಗೆಲ್ಲುವ ತಾಕತ್ತು ಇಲ್ಲ. ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ನಿಜವಾಗಿಯೂ ರಾಜಕೀಯ ರಣತಂತ್ರ ಮಾಡುವ ರಾಜಕಾರಣಿ ಅಲ್ಲ. ಅವರು ಏನಿದ್ದರೂ ಹಣದ ರಾಜಕೀಯವನ್ನಷ್ಟೇ ಮಾಡುತ್ತಾರೆ ಅಷ್ಟೇ. ಆದರೆ ಇಂತಹ ಸಂದರ್ಭಗಳಿಂದ ಬಿಜೆಪಿ ಪಾಠ ಕಲಿಯಬೇಕಿಲ್ಲ. ಇದರಿಂದ ನಮ್ಮ ಶಕ್ತಿ ಏನಂತ ಗೊತ್ತಾಗಿದೆ. ರಾಮನಗರದಲ್ಲಿ ಬಿಜೆಪಿ ಗೆದ್ದ ಇತಿಹಾಸ ಇಲ್ಲ. ಆದರೆ ಮುಖ್ಯಮಂತ್ರಿ ಪತ್ನಿಯೇ ಅಭ್ಯರ್ಥಿ ಆಗಿದ್ದರೂ ಈ ಬಾರಿ ಗೆಲ್ಲುವ ವಾತಾವರಣ ಇತ್ತು. ಅದಕ್ಕೆ ಹೆದರಿ ಎರಡು ಪಕ್ಷಗಳು ಪುಕ್ಕಲುತನದಿಂದ ಬಿಜೆಪಿ ಅಭ್ಯರ್ಥಿಯನ್ನೆ ಹೈಜಾಕ್ ಮಾಡಿದ್ದಾರೆ ಎಂದು ಆರೋಪಿಸಿದರು.

    ಒಂದೊಮ್ಮೆ ಅವರು ಗೆಲ್ಲುವ ವಿಶ್ವಾಸ ಇದ್ದರೆ ಧೈರ್ಯವಾಗಿ ಚುನಾವಣೆ ಎದುರಿಸಬೇಕಿತ್ತು. ಆದರೆ ಚಂದ್ರಶೇಖರ್ ಅವರನ್ನು ಬ್ಲಾಕ್ ಮೇಲ್ ಮಾಡಿದ್ದಾರೆ. ಅವರು ಭಯದಿಂದ ಆತ್ಮ ದ್ರೋಹದ ಕೆಲಸ ಮಾಡಿದ್ದಾರೆ. ಪ್ರಚಾರ ಬಂದಿಲ್ಲ ಎಂಬುವುದು ಒಂದು ನೆಪ ಅಷ್ಟೇ. ಉಪಚುನಾವಣೆಯಲ್ಲಿ ಜಮಖಂಡಿ ಸೇರಿದಂತೆ ಲೋಕಸಭಾ ಸ್ಥಾನಗಳಾದ ಶಿವಮೊಗ್ಗ, ಮಂಡ್ಯ, ಬಳ್ಳಾರಿಯಲ್ಲಿ ಪಕ್ಷ ಜಯಗಳಿಸುತ್ತದೆ. ಅಲ್ಲದೇ ಮುಂದಿನ 2019ರ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಹೆಚ್ಚಿನ ಸ್ಥಾನ ಗೆಲ್ಲುತ್ತದೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮನುಷ್ಯತ್ವ ಇಲ್ಲದವರ ಕ್ಷಮೆ ಬೇಡ – ಸಚಿವ ಡಿಕೆಶಿ

    ಮನುಷ್ಯತ್ವ ಇಲ್ಲದವರ ಕ್ಷಮೆ ಬೇಡ – ಸಚಿವ ಡಿಕೆಶಿ

    ಶಿವಮೊಗ್ಗ: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಮಾಜಿ ಸಿಎಂ ಸಿದ್ದರಾಯ್ಯ ಅವರ ಮಗನ ಸಾವಿನ ಬಗ್ಗೆ ಮಾತನಾಡಿ ತಮಗೆ ಮನುಷ್ಯತ್ವ ಇಲ್ಲ ಎಂದು ತೋರಿಸಿದ್ದಾರೆ. ಇಂತಹ ಮನುಷ್ಯತ್ವ ಇಲ್ಲದವರ ಕ್ಷಮೆ ನಮಗೆ ಬೇಡ ಎಂದು ಹೇಳಿದ್ದಾರೆ.

    ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಮಧುಬಂಗಾರಪ್ಪ ಅವರ ಪರ ಪ್ರಚಾರ ನಡೆಸುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್ ಅವರು, ಕೊಲೆ ಮಾಡಿದ ಮೇಲೆ ಕ್ಷಮಾಪಣೆ ಕೇಳಿದರೆ ಏನು ಬರುತ್ತದೆ. ಮಾತು, ಮುತ್ತು ಒಡೆದರೆ ಹೋಯ್ತು ಎಂದು ಹೇಳುತ್ತಾರೆ. ಹಾಗೆಯೇ ಸಿದ್ದರಾಮಯ್ಯ ಅವರ ಬಗ್ಗೆ ಗಾಲಿ ಜನಾರ್ದನ ರೆಡ್ಡಿ ಅವರು ನೀಡಿದ ಹೇಳಿಕೆ ಅವರ ಸಂಸ್ಕøತಿಯನ್ನು ತೋರಿಸುತ್ತದೆ. ಈ ಬಗ್ಗೆ ರಾಮುಲು, ಯಡಿಯೂರಪ್ಪ ಕ್ಷಮಾಪಣೆ ಕೇಳಬೇಕು. ಅಲ್ಲದೇ ರೆಡ್ಡಿ ಹೇಳಿಕೆಗೆ ಅವರು ಉತ್ತರ ಕೊಡಬೇಕು ಎಂದು ಆಗ್ರಹಿಸಿದರು.

    ಇದೇ ವೇಳೆ ಜನಾರ್ದನ ರೆಡ್ಡಿ ಅವರ ವಿರುದ್ಧವೂ ಕಿಡಿಕಾರಿದ ಸಚಿವ ಡಿಕೆಶಿ, ಖಾವಿ ಹಾಕಿಕೊಂಡು ಜನಾರ್ದಾನ ರೆಡ್ಡಿ ಹೀಗೆ ಮಾತನಾಡಿದ್ದಾರೆ. ರೆಡ್ಡಿ ಅವರನ್ನು ಬಿಜೆಪಿಗೆ ಸೇರಿಸಿಕೊಂಡಿಲ್ಲ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ ಶಾ ಅವರು ನಮಗೂ ರೆಡ್ಡಿಗೂ ಸಂಬಂಧ ಇಲ್ಲ ಎಂದು ಹೇಳುತ್ತಾರೆ. ಸಂಸ್ಕಾರ, ಮನುಷ್ಯತ್ವ ಇಲ್ಲದ ಮನುಷ್ಯನ ಕ್ಷಮಾಪಣೆ ಬೇಕಿಲ್ಲ ಎಂದರು.

    ಕೇಂದ್ರ ಸರ್ಕಾರದ ನಾಲ್ಕುವರೆ ವರ್ಷದ ಆಡಳಿತ ವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ. ದಿನನಿತ್ಯ ಜನರು ಬೆಲೆ ಹೆಚ್ಚಳದಿಂದ ಸಂಕಷ್ಟ ಅನುಭವಿಸುತ್ತಾರೆ. ನಮ್ಮ ಸಮ್ಮಿಶ್ರ ಸರ್ಕಾರದಲ್ಲಿ ಒಮ್ಮತದಿಂದ ಅಭ್ಯರ್ಥಿ ಆಯ್ಕೆ ಮಾಡಿದ್ದೇವೆ. ಈ ಹಿಂದೆ ಎಂದು ಇಂತಹ ಒಮ್ಮತದ ಅಭ್ಯರ್ಥಿ ಆಯ್ಕೆ ಮಾಡಿರಲಿಲ್ಲ. ಅದ್ದರಿಂದ ಬಿಜೆಪಿಯಲ್ಲಿ ಬಿಎಸ್‍ವೈ ತಮ್ಮ ಪುತ್ರರನ್ನೇ ಅಭ್ಯರ್ಥಿ ಎಂದು 5 ನಿಮಿಷದಲ್ಲಿ ಘೋಷಣೆ ಮಾಡಿದರು. ಇದರ ಬಗ್ಗೆ ಈಶ್ವರಪ್ಪ ಅವರು ಅಸಮಾಧಾನ ವ್ಯಕ್ತಪಡಿಸಿ 5 ಜನ ಅಭ್ಯರ್ಥಿಗಳಿದ್ದಾರೆ ಎಂದು ಹೇಳಿದ್ದರು. ಆದರೆ ಕ್ಷೇತ್ರದ ಜನತೆಯೇ ಇದಕ್ಕೆ ಉತ್ತರ ನೀಡುತ್ತಾರೆ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಚಿವ ಡಿಕೆಶಿ ಕ್ಷಮೆಯಾಚಿಸಿದ್ದು ದಡ್ಡತನ: ರಮೇಶ್ ಜಿಗಜಿಣಗಿ

    ಸಚಿವ ಡಿಕೆಶಿ ಕ್ಷಮೆಯಾಚಿಸಿದ್ದು ದಡ್ಡತನ: ರಮೇಶ್ ಜಿಗಜಿಣಗಿ

    ವಿಜಯಪುರ: ಲಿಂಗಾಯತ ಪ್ರತ್ಯೇಕ ಧರ್ಮ ರಚನೆ ವಿಚಾರವಾಗಿ ಈ ಸಂದರ್ಭದಲ್ಲಿ ಜಲಸಂಪ್ಮೂಲ ಸಚಿವ ಡಿಕೆ ಶಿವಕುಮಾರ್ ಅವರು ಕ್ಷಮೆ ಯಾಚಿಸಿದ್ದು ಅವರ ದಡ್ಡತನ ಎಂದು ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ಹೇಳಿದ್ದಾರೆ.

    ಈ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ ಸಚಿವರು, ಇಷ್ಟು ದಿನ ಡಿಕೆ ಶಿವಕುಮಾರ್ ಅವರು ಮಲಗಿದ್ರಾ? ಈ ಸಂದರ್ಭದಲ್ಲಿ ಏಕೆ ಕ್ಷಮೆ ಕೇಳಬೇಕು? ಎಲ್ಲದಕ್ಕೂ ಕಾರಣ ರಾಜ್ಯದಲ್ಲಿ ನಡೆಯುತ್ತಿರುವ ಚುನಾವಣೆ ಅಷ್ಟೇ. ಜನರ ಕರುಣೆ ಪಡೆಯಲು ಡಿಕೆ ಶಿವಕುಮಾರ್ ಈ ಹೇಳಿಕೆ ನೀಡಿದ್ದಾರೆ. ಆದರೆ ಇದರಿಂದ ಏನು ಪ್ರಯೋಜನ ಆಗುವುದಿಲ್ಲ ಎಂದು ತಿಳಿಸಿದರು.

    ಧರ್ಮ ಇಬ್ಭಾಗ ಮಾಡುವ ಕುರಿತ ಪ್ರಯತ್ನದ ಬಗ್ಗೆ ಜನರು ಈಗಾಗಲೇ ಒಂದು ತೀರ್ಮಾನ ಮಾಡಿದ್ದಾರೆ. ಆದರೆ ಇವರು ಜನರಿಗೆ ಒಂದು ತಪ್ಪು ಹಾದಿ ಹಿಡಿಸಲು ಇದೊಂದು ಇದು ಒಂದು ದೊಡ್ಡ ನಾಟಕ. ಧರ್ಮದ ವಿಚಾರದಲ್ಲಿ ಎಂದು ರಾಜಕಾರಣಿಗಳು ಕೈ ಹಾಕಬಾರದು ಎಂದು ಕಿವಿ ಮಾತು ಹೇಳಿದರು. ಇದನ್ನೂ ಓದಿ: ಶಿವಕುಮಾರ್ Vs ಎಂಬಿ ಪಾಟೀಲ್ – ಕಾಂಗ್ರೆಸ್‍ನಲ್ಲಿ ಮತ್ತೆ ಧರ್ಮ ಯುದ್ಧ ಶುರು

    ಇದೇ ವೇಳೆ ಬಳ್ಳಾರಿ ಉಪಚುನಾವಣೆಯ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಬಳ್ಳಾರಿ ಚುನಾವಣೆಯಲ್ಲಿ ನನಗೂ ಉಸ್ತುವಾರಿ ಹಾಕಿದ್ದಾರೆ. ನಾನು ಹಲವು ಬಾರಿ ಅಲ್ಲಿಗೆ ಭೇಟಿ ನೀಡಿದ್ದೇನೆ. ಚುಣಾವಣೆಯ ಕಾರ್ಯತಂತ್ರದ ಬಗ್ಗೆಯೂ ಎರಡು ಬಾರಿ ಪಕ್ಷದಲ್ಲಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗಿದೆ. ನಮ್ಮ ಪಕ್ಷದ ಅಭ್ಯರ್ಥಿ ಶಾಂತಕ್ಕ ಅವರು 1 ಲಕ್ಷ ಮತಗಳ ಅಂತರದಲ್ಲಿ ಗೆಲುವು ಪಡೆಯುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನು ಓದಿ : ನಾವು ತಪ್ಪು ಮಾಡಿದ್ದೇವೆ, ನನ್ನ ಹೇಳಿಕೆಗೆ ಈಗಲೂ ಬದ್ಧ: ಡಿಕೆ ಶಿವಕುಮಾರ್

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಡಿಕೆಶಿ ಹವಾ ಏನಿದ್ರೂ ಕನಕಪುರದಲ್ಲಿ ಮಾತ್ರ- ಬಿಜೆಪಿ ಸೇರ್ಪಡೆ ಬಳಿಕ ಚಂದ್ರಶೇಖರ್ ಹೇಳಿಕೆ

    ಡಿಕೆಶಿ ಹವಾ ಏನಿದ್ರೂ ಕನಕಪುರದಲ್ಲಿ ಮಾತ್ರ- ಬಿಜೆಪಿ ಸೇರ್ಪಡೆ ಬಳಿಕ ಚಂದ್ರಶೇಖರ್ ಹೇಳಿಕೆ

    ಬೆಂಗಳೂರು: ಸಚಿವ ಡಿಕೆ ಶಿವಕುಮಾರ್ ಅವರ ಪ್ರಭಾವ ಏನಿದ್ದರೂ ಕನಕಪುರದಲ್ಲಿ ಮಾತ್ರ. ರಾಮನಗರದಲ್ಲಿ ಅವರ ಪ್ರಭಾವ ಇದ್ದಿದ್ದರೆ ಪಕ್ಷದ ಅಭ್ಯರ್ಥಿಗಳು ಸೋಲುತ್ತಿರಲಿಲ್ಲ ಎಂದು ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾದ ಮುಖಂಡ ಚಂದ್ರಶೇಖರ್ ಅವರು ಹೇಳಿದ್ದಾರೆ.

    ಮೈತ್ರಿ ಸರ್ಕಾರದ ಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ಕಿತ್ತಾಟ ಬಿಜೆಪಿಗೆ ವರದಾನವಾಗಿ ಪರಿಣಾಮಿಸಿದ್ದು, ಸ್ಥಳೀಯ ಕಾರ್ಯಕರ್ತರ ಮೈತ್ರಿ ವಿರೋಧದಿಂದ ಉಂಟಾಗಿರುವ ಅತೃಪ್ತರಿಗೆ ಬಿಜೆಪಿ ಮುಖಂಡರು ಗಾಳ ಬೀಸಿದ್ದಾರೆ. ಮೊದಲ ಹಂತದಲ್ಲಿ ರಾಮನಗರದಲ್ಲಿ ಆಪರೇಷನ್ ಸಕ್ಸಸ್ ಆಗಿದ್ದು, ಸಿಎಂ ಲಿಂಗಪ್ಪ ಪುತ್ರ ಚಂದ್ರಶೇಖರ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

    ಬಿಜೆಪಿ ಸೇರ್ಪಡೆ ಬಳಿಕ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಚಂದ್ರಶೇಖರ್, ಕಳೆದ 28 ವರ್ಷಗಳಿಂದ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಸೇವೆ ಸಲ್ಲಿಸಿದ್ದೆ. ಪ್ರತಿ ಚುನಾವಣೆಯಲ್ಲೂ ಪಕ್ಷ ಸೂಚಿಸಿದ ಅಭ್ಯರ್ಥಿಯ ಗೆಲುವಿಗೆ ಶ್ರಮ ವಹಿಸುತ್ತಿದ್ದೆ. ಆದರೆ ಕ್ಷೇತ್ರದಲ್ಲಿ ಜೆಡಿಎಸ್, ಕಾಂಗ್ರೆಸ್ ಮಾಡಿಕೊಂಡಿರುವ ಒಳಒಪ್ಪಂದದಿಂದ ಪಕ್ಷದಲ್ಲಿ ಉಸಿರುಗಟ್ಟಿಸುವ ವಾತಾವರಣ ನಿರ್ಮಾಣವಾಗಿದೆ. ಅದ್ದರಿಂದ ನಾನು ಕಾರ್ಯಕರ್ತರ ಒತ್ತಡ ಮೇಲೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ ಎಂದು ತಿಳಿಸಿದರು.

    ಇದೇ ವೇಳೆ ಸಚಿವ ಡಿಕೆ ಶಿವಕುಮಾರ್ ಅವರ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ನನಗೆ ಸಚಿವ ಡಿಕೆ ಶಿವಕುಮಾರ್ ಅವರ ಭಯ ಇಲ್ಲ, ರಾಮನಗರದಲ್ಲಿ ಭಯದ ಪ್ರಶ್ನೆಯೇ ಇಲ್ಲ. ಡಿಕೆಶಿ ಪ್ರಭಾವ ಏನಿದ್ದರೂ ಕನಕಪುರದಲ್ಲಿ ಮಾತ್ರ. ರಾಮನಗರ, ಚನ್ನಪಟ್ಟಣ, ಮಾಗಡಿಯಲ್ಲಿ ಅವರ ಪ್ರಭಾವ ಇದ್ದಿದ್ದರೆ ಕಾಂಗ್ರೆಸ್ ಅಭ್ಯರ್ಥಿಗಳು ಸೋತು ಜೆಡಿಎಸ್ ಅಭ್ಯರ್ಥಿಗಳು ಗೆಲ್ಲುತ್ತಿರಲಿಲ್ಲ ಎಂದು ಹೇಳಿದರು.

    ಕಾಂಗ್ರೆಸ್ ಪಕ್ಷ ತೊರೆಯುವ ಕುರಿತು ನಮ್ಮ ತಂದೆಯವರೊಂದಿಗೆ ನಾನು ಚರ್ಚೆ ನಡೆಸಿದ್ದೇನೆ. ನನ್ನ ತಂದೆಯ ರಾಜಕಾರಣವೇ ಬೇರೆ, ನನ್ನ ರಾಜಕಾರಣವೇ ಬೇರೆ. ಇಂತಹ ಸಂದರ್ಭದಲ್ಲಿ ಹಲವು ಉದಾಹರಣೆಗಳನ್ನು ನೀಡಲು ಸಿದ್ಧವಿದ್ದು, ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಬೆಳವಣಿಗೆ ಕಾರ್ಯನಿರ್ವಹಿಸುತ್ತೇನೆ ಎಂದರು.

    ಯಾವುದೇ ಬೇಡಿಕೆ ಇಲ್ಲ: ಬಿಜೆಪಿ ಪಕ್ಷದ ಸೇರ್ಪಡೆ ವೇಳೆ ಯಾವುದೇ ಬೇಡಿಕೆಯನ್ನು ನಾನು ಇಟ್ಟಿಲ್ಲ ಎಂದು ಸ್ಪಷ್ಟಪಡಿಸಿದ ಚಂದ್ರಶೇಖರ್ ಅವರು, ಕಾಂಗ್ರೆಸ್ ಹಾಗೂ ಜೆಡಿಎಸ್ ಒಳ ಮೈತ್ರಿ ವಿರುದ್ಧ ನಾನು ಈ ತೀರ್ಮಾನ ತೆಗೆದುಕೊಂಡಿದ್ದೇನೆ. ಈ ನಿರ್ಧಾರಕ್ಕೆ ಕ್ಷೇತ್ರ ಜನರು, ಮತದಾರರು ಹಾಗೂ ಸ್ನೇಹಿತರು ಬೆಂಬಲ ವ್ಯಕ್ತಪಡಿಸಿದ್ದಾರೆ. ಯಡಿಯೂರಪ್ಪನವರು ನಮ್ಮ ನಾಯಕರು. ನನಗೆ ಬೆಂಬಲ ನೀಡಿ ಈ ಬಾರಿಯ ಚುನಾವಣೆಯಲ್ಲಿ ಟಿಕೆಟ್ ನೀಡಿದರೆ ಸಮರ್ಥವಾಗಿ ಸ್ಪರ್ಧೆಯನ್ನು ಎದುರಿಸಿ ಗೆದ್ದು ಬರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv