Tag: ಸಚಿವ ಯುಟಿ ಖಾದರ್

  • ಭಾರೀ ವಾಹನಗಳ ಸಂಚಾರಕ್ಕೆ ಶಿರಾಡಿ ಘಾಟ್ ಮುಕ್ತ

    ಭಾರೀ ವಾಹನಗಳ ಸಂಚಾರಕ್ಕೆ ಶಿರಾಡಿ ಘಾಟ್ ಮುಕ್ತ

    ಮಂಗಳೂರು: ಲಘುವಾಹನಗಳು ಮಾತ್ರ ಸಂಚಾರ ನಡೆಸುತ್ತಿದ್ದ ಶಿರಾಡಿ ಘಾಟ್ ನಾಳೆಯಿಂದ ಘನವಾಹನ ಸಂಚಾರಕ್ಕೆ ಮುಕ್ತಾಯವಾಗಲಿದೆ. ಈ ಕುರಿತು ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ಯು.ಟಿ ಖಾದರ್ ಮಾಹಿತಿ ನೀಡಿದ್ದಾರೆ.

    ದಕ್ಷಿಣ ಕನ್ನಡ ಮತ್ತು ಹಾಸನ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವ ಜಿಲ್ಲಾ ಉಸ್ತುವಾತಿ ಸಚಿವರು ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೂ ರಸ್ತೆ ಸದೃಢವೆಂಬ ಮಾಹಿತಿ ಪಡೆದಿದ್ದಾರೆ. ಇದರ ಅನ್ವಯ ನಾಳೆ ಬೆಳಗ್ಗೆಯಿಂದ ಘನ ವಾಹನಗಳ ಸಂಚಾರ ಮುಕ್ತಗೊಳಿಸಲು ಸೂಚನೆ ನೀಡಲಾಗಿದೆ.

    ಮಳೆಯಿಂದ ಗುಡ್ಡ ಕುಸಿದು ಬೆಂಗಳೂರು-ಮಂಗಳೂರು ರಸ್ತೆ ಬಂದ್ ಆಗಿತ್ತು. ಹೆದ್ದಾರಿ ಕಾಮಗಾರಿ ಹಾಗೂ ಗುಡ್ಡ ಕುಸಿತದಿಂದ ಬರೋಬ್ಬರಿ 10 ತಿಂಗಳ ಕಾಲ ಬಸ್ ಸಂಚಾರ ಬಂದ್ ಆಗಿತ್ತು. ಬಳಿಕ ರಸ್ತೆ ಕಾಮಗಾರಿ ಪೂರ್ಣಗೊಳಿಸಿ ಮೊದಲು ಸೆಪ್ಟೆಂಬರ್ 5 ರಿಂದ ಲಘು ವಾಹನಕ್ಕೆ ಮಾತ್ರ ಅವಕಾಶ ನೀಡಲಾಗಿತ್ತು.  ಅಕ್ಟೋಬರ್ 3 ರಿಂದ ಸಾರಿಗೆ ಬಸ್ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಶಿರಾಡಿ ಘಾಟ್ ಕಾಂಕ್ರೀಟ್ ಆದ ಬಳಿಕ ಕಳೆದ ಜುಲೈ 15ರಂದು ಅಧಿಕೃತ ಉದ್ಘಾಟನೆ ಆಗಿತ್ತು. ಆದರೆ ಭೂಕುಸಿತ ಕಾರಣ ಮತ್ತೆ ಶಿರಾಡಿ ಘಾಟ್ ಹೆದ್ದಾರಿ ಸ್ಥಗಿತಗೊಳಿಸಲಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಸ್ಮಾರ್ಟ್ ಸಿಟಿ 15 ಕೋಟಿ ರೂ.ಹಣ ಕಸಾಯಿಖಾನೆಗೆ -ಪ್ರಧಾನಿ ಮೋದಿಗೆ ಖಾದರ್ ಪತ್ರ

    ಸ್ಮಾರ್ಟ್ ಸಿಟಿ 15 ಕೋಟಿ ರೂ.ಹಣ ಕಸಾಯಿಖಾನೆಗೆ -ಪ್ರಧಾನಿ ಮೋದಿಗೆ ಖಾದರ್ ಪತ್ರ

    ಮಂಗಳೂರು: ಕಸಾಯಿಖಾನೆಗೆ 15 ಕೋಟಿ ರೂ. ಅನುದಾನ ನೀಡಿದ ವಿವಾದ ವಿಚಾರವಾಗಿ ಸ್ಪಷ್ಟನೆ ನೀಡಿ ನಗರಾಭಿವೃದ್ಧಿ ಸಚಿವ ಯು.ಟಿ ಖಾದರ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುವಾಗಿ ತಿಳಿಸಿದ್ದಾರೆ.

    ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಕಸಾಯಿಖಾನೆಗೆ ನೀಡಿರುವ ಅನುದಾನವನ್ನು ಸುಖಸುಮ್ಮನೆ ವಿವಾದ ಮಾಡಲಾಗಿದೆ. ಇದು ತಮ್ಮ ಮನಸ್ಸಿಗೆ ತುಂಬಾ ನೋವುಂಟು ಮಾಡಿದೆ. ಅದ್ದರಿಂದ ಈ ಕುರಿತು ಸ್ಪಷ್ಟನೆ ನೀಡಿ ಪ್ರಧಾನ ಮಂತ್ರಿ ಮತ್ತು ಕೇಂದ್ರ ನಗರಾಭಿವೃದ್ಧಿ ಸಚಿವಾಲಯಕ್ಕೆ ಪತ್ರ ಬರೆಯುತ್ತೇನೆ. ಅಲ್ಲಿಂದ ಬರುವ ಪತ್ರಿಕ್ರಿಯೆ ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇನೆ ಎಂದು ಯು.ಟಿ ಖಾದರ್ ತಿಳಿಸಿದ್ದಾರೆ.

    ನಗರದಲ್ಲಿ ಇರುವ ಕುರಿ, ಆಡು ಕಸಾಯಿಖಾನೆಗೆ ನೀಡುವಂತೆ ನಗರ ಸ್ವಚ್ಛತೆಯ ದೃಷ್ಟಿಯಿಂದ ಅನುದಾನ ಬಿಡುಗಡೆ ಮಾಡಲು ಶಿಫಾರಸ್ಸು ಮಾಡಿದ್ದೇವು. ಆದರೆ ಈ ಕುರಿತು ಚುನಾಯಿತ ಜನಪತ್ರಿನಿಧಿಗಳು, ಕೆಲ ಸಂಸ್ಥೆಗಳು ವಿವಾದ ಉಂಟಾಗಿತ್ತು. ಇದರಿಂದ ಜನರ ನಡುವೆಯೂ ವೈಮನಸ್ಸು ಹೆಚ್ಚಾಗುವುದಕ್ಕೆ ಅವಕಾಶ ಇದೆ. ಅದ್ದರಿಂದ ಪ್ರಧಾನಿ ಮೋದಿ ಅವರಿಂದ ಬರುವ ಉತ್ತರದಂತೆ ಮುಂದೆ ಕ್ರಮಕೈಕೊಳ್ಳುತ್ತೇನೆ. ಈ ವಿವಾದದ ಕುರಿತು ಮತ್ತೆ ಯಾರು ಆರೋಪ, ಪ್ರತ್ಯಾರೋಪ ಮಾಡುವುದು ಬೇಡ ಎಂದು ಮನವಿ ಮಾಡಿದರು.

    ಕಸಾಯಿಖಾನೆಗೆ ಹಣ ಮಂಜೂರು ಮಾಡಲು ಅನುಮತಿ ಕೋರಿ ಮಾತ್ರ ಶಿಫಾರಸ್ಸು ಪತ್ರ ಬರೆಯಲಾಗಿದೆ. ಸ್ವಚ್ಛತೆ ದೃಷ್ಟಿಯಿಂದ ಅನಿವಾರ್ಯವಾಗಿದ್ದು, ಕೆಲವರು ಕಸಾಯಿಖಾನೆ ಬದಲಿಗೆ ಗೋಶಾಲೆಗೆ ಕೊಡಿ ಎಂದು ಬೇಡಿಕೆ ಇಟ್ಟಿದ್ದಾರೆ. ಅದಕ್ಕೆ ನನ್ನ ಸಹಮತ ಇದೆ. ಆದರೆ ಅದಕ್ಕೆ ಅವಕಾಶ ಇದೆಯಾ ಎಂದು ಸ್ಪಷ್ಟನೆ ಬಯಸಿದ್ದೇನೆ. ಈ ಕುರಿತು ಯಾರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸುವುದು ಬೇಡ. ಅದ್ದರಿಂದಲೇ ನಾನು ಈ ಕ್ರಮಕ್ಕೆ ಮುಂದಾಗಿದ್ದೇನೆ. ಜಿಲ್ಲೆಯಲ್ಲಿ ಶಾಂತಿ ಕಾಪಾಡುವುದು ನಮ್ಮ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv