Tag: ಸಚಿವ ರೇವಣ್ಣ

  • ಎಲ್ಲವನ್ನೂ ನಾನೇ ಮಾಡಿದ್ದೇನೆ ಎನ್ನೋ ಗರ್ವ ಇರಬಾರದು: ಪ್ರಧಾನಿ ಮೋದಿಗೆ ಎಚ್‍ಡಿಡಿ ಟಾಂಗ್

    ಎಲ್ಲವನ್ನೂ ನಾನೇ ಮಾಡಿದ್ದೇನೆ ಎನ್ನೋ ಗರ್ವ ಇರಬಾರದು: ಪ್ರಧಾನಿ ಮೋದಿಗೆ ಎಚ್‍ಡಿಡಿ ಟಾಂಗ್

    – ರೇವಣ್ಣನಿಗೆ ನನ್ನನ್ನು ಮೀರಿ ಕೆಲಸ ಮಾಡೋ ಶಕ್ತಿ ಇದೆ

    ಹಾಸನ: ಎಲ್ಲವನ್ನೂ ನಾನೇ ಮಾಡಿದ್ದೇನೆ ಎನ್ನುವ ಗರ್ವ ಇರಬಾರದು ಎಂದು ಹೇಳುವ ಮೂಲಕ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟಾಂಟ್ ಕೊಟ್ಟಿದ್ದಾರೆ.

    ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ದೇವೇಗೌಡರು, ತಮ್ಮ ಆಡಳಿತ ಅವಧಿಯ ಐದು ವರ್ಷದಲ್ಲಿ ಎಲ್ಲವನ್ನೂ ನಾನು ಸಾಧನೆ ಮಾಡಿದ್ದೇನೆ ಅಂತ ಪ್ರಧಾನಿ ಮೋದಿ ಹೇಳುತ್ತಾರೆ. ಹಾಗಾದರೆ ಈ ಹಿಂದೆ ಯಾರೂ ಅಭಿವೃದ್ಧಿ ಕೆಲಸ ಮಾಡಿಲ್ಲವೇ? ಬ್ರಿಟಿಷರ ಕಾಲದಿಂದಲೂ ಅನೇಕ ಪುಣ್ಯಾತ್ಮರು ಕೆಲಸ ಮಾಡಿಲ್ಲವೇ? ಬ್ರಿಟಿಷರಿಂದ ಭಾರತವನ್ನ ಉಳಿಸಿಕೊಳ್ಳಲಿಲ್ಲವೇ ಎಂದು ಪ್ರಶ್ನಿಸಿ ವಾಗ್ದಾಳಿ ನಡೆಸಿದರು.

    ಇದೇ ವೇಳೆ ಲೋಕೋಪಯೋಗಿ ಸಚಿವ, ಪುತ್ರ ಎಚ್.ಡಿ.ರೇವಣ್ಣರನ್ನು ದೇವೇಗೌಡ ಹೊಗಳಿದರು. ರೇವಣ್ಣ ರಾಜಕೀಯಕ್ಕೆ ಬರಬೇಕೆಂದು ನಾನು ಯೋಚನೆ ಮಾಡಿರಲಿಲ್ಲ. ರೇವಣ್ಣನೂ ಯೋಚನೆ ಮಾಡಿರಲಿಲ್ಲ. ಅವನಿಗೆ ಬೆಂಗಳೂರಿನಲ್ಲಿ ಒಂದು ಕಾರ್ಖಾನೆ ಮಾಡೋಣ ಎಂದುಕೊಂಡಿದ್ದೆ. ಆದರೆ ಈಗ ನನ್ನನ್ನು ಮೀರಿ ಕೆಲಸ ಮಾಡುವ ಶಕ್ತಿ ರೇವಣ್ಣನಿಗೆ ಬಂದಿದೆ ಎಂದು ಹೇಳಿದರು.

    ನಾನು ಪ್ರಧಾನಿಯಾಗಿ ಅವಿಶ್ವಾಸಮತ ನಿರ್ಣಯವಾದಾಗಲೂ ರೇವಣ್ಣ ರೈಲ್ವೇ ಮಾರ್ಗ ನಿರ್ಮಾಣವಾಗಬೇಕು ಅಂತ ಹಠ ಹಿಡಿದಿದ್ದ. ದೈವ ಇಚ್ಛೆಯಿಂದ ನಮಗೆ ಅಧಿಕಾರ ಬಂದಿದೆ. ನಮ್ಮ ತಂದೆ ತಾಯಿಗಳು ಈಶ್ವರನ ಪೂಜೆ ಮಾಡಿದ್ದಾರೆ. ನಾವೇನಾದರೂ ಇಷ್ಟು ಬೆಳೆದಿದ್ದರೆ ಈಶ್ವರನ ಅನುಗ್ರಹವೇ ಕಾರಣ ಎಂದರು.

    ಎಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಆಗುತ್ತಾರೆ ಅಂತ ಯಾರೂ ಊಹೆ ಮಾಡಿರಲಿಲ್ಲ. ಇದೇ ದೈವದ ಆಟ ಅವರು ಮುಖ್ಯಮಂತ್ರಿಯಾದರು. ನಮ್ಮ ವಂಶಸ್ಥರು ಅಂದುಕೊಂಡಿದ್ದನ್ನ ಮಕ್ಕಳು ಸಾಧಿಸಿದ್ದಾರೆ. ತಾಂತ್ರಿಕ ವಿಶ್ವವಿದ್ಯಾಲಯವನ್ನು ಹಾಸನಕ್ಕೆ ತರಲು ಕುಮಾರಸ್ವಾಮಿ ಮತ್ತು ರೇವಣ್ಣ ನಡುವೆ ತರ್ಕ ನಡೆದಿತ್ತು. ಈಗ ರೇವಣ್ಣನ ಇಚ್ಛೆಯಂತೆ ತಾಂತ್ರಿಕ ವಿಶ್ವವಿದ್ಯಾಲಯ ಜಿಲ್ಲೆಗೆ ಬಂದಿದೆ ಎಂದು ಮಕ್ಕಳನ್ನು ಕೊಂಡಾಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ವಿಧಾನಸೌಧಕ್ಕೆ ಬರಿಗಾಲಲ್ಲಿ ನಡೆದು ಬಂದ ಸಚಿವ ರೇವಣ್ಣ

    ವಿಧಾನಸೌಧಕ್ಕೆ ಬರಿಗಾಲಲ್ಲಿ ನಡೆದು ಬಂದ ಸಚಿವ ರೇವಣ್ಣ

    ಬೆಂಗಳೂರು: ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ವಿಧಾನಸೌಧಕ್ಕೆ ಚಪ್ಪಲಿ ಹಾಕದೇ ಬರಿಗಾಲಲ್ಲಿ ನಡೆದುಕೊಂಡು ಬಂದಿದ್ದಾರೆ.

    ಈ ವೇಳೆ ರೇವಣ್ಣ ಮಾಧ್ಯಮಗಳೊಂದಿಗೆ ಮಾತನಾಡಿ, “ಏನೂ ಆಗಲ್ಲ, ಇಂದು ಬಜೆಟ್ ನಡೆಸುತ್ತೇವೆ. ಏನೂ ಆಗಲ್ಲ ನೀವು ತಲೆ ಕಡಿಸಿಕೊಳ್ಳಬೇಡಿ. ಬಿಜೆಪಿಗೆ ರಾಜ್ಯದ ಬಗ್ಗೆ ಯಾವುದೇ ಚಿಂತನೆ ಇಲ್ಲ. ಇಂದು ಬಜೆಟ್ ಮಂಡನೆ ಆಗುತ್ತೆ. ರೈತರ ಪರ, ಬಡವರ ಪರ ಸರ್ಕಾರ ಬಜೆಟ್ ಇರುತ್ತೆ. ಯಾರನ್ನು ಆಪರೇಷನ್ ಮಾಡುವುದಕ್ಕೆ ಆಗಲ್ಲ. ಯಡಿಯೂರಪ್ಪ ಆಪರೇಷನ್ ಮಾಡುವುದಕ್ಕೆ ಹೋಗಿ ಫೇಲ್ ಆಗಿದ್ದಾರೆ. ಆಪರೇಷನ್ ಮಾಡುವುದಕ್ಕೆ 15 ದಿನ ಆಪರೇಷನ್ ಥಿಯೇಟರ್ ಖಾಲಿ ಇಲ್ಲ” ಎಂದು ಹೇಳಿದ್ದಾರೆ.

    ಇದೇ ವೇಳೆ ಸಿಎಂ ಕುಮಾರಸ್ವಾಮಿ ಬಗ್ಗೆ ಮಾತನಾಡಿದ ಅವರು, “ಕುಮಾರಸ್ವಾಮಿ ಅವರನ್ನು ಟಚ್ ಮಾಡಿದವರಿಗೆ ಏನಾದರೂ ಆಗುತ್ತೆ ಎಂದು ಜ್ಯೋತಿಷಿಗಳು ಹೇಳಿದ್ದಾರೆ. ಹಾಗಾಗಿ ಸರ್ಕಾರಕ್ಕೆ ಏನು ಆಗುವುದಿಲ್ಲ. ಯಡಿಯೂರಪ್ಪ ಆಪರೇಷನ್ ಫೇಲ್ ಆಗಿದೆ. ಸರ್ಕಾರಕ್ಕೆ ಏನು ಆಗುವುದಿಲ್ಲ” ಎಂದು ಸಚಿವ ರೇವಣ್ಣ ಹೇಳಿಕೆ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸರ್ಕಾರ ಉಳಿವಿಗೆ ಸಚಿವ ರೇವಣ್ಣ ಪ್ರಯತ್ನ ಅವಶ್ಯ- ವಿಠ್ಠಲ್ ಭಟ್ ಭವಿಷ್ಯ

    ಸರ್ಕಾರ ಉಳಿವಿಗೆ ಸಚಿವ ರೇವಣ್ಣ ಪ್ರಯತ್ನ ಅವಶ್ಯ- ವಿಠ್ಠಲ್ ಭಟ್ ಭವಿಷ್ಯ

    – ಬಿಎಸ್‍ವೈ, ಸಿದ್ದರಾಮಯ್ಯಗೆ ಗುರುಬಲ ಇಲ್ಲರುವುದಕ್ಕೆ ಸಿಎಂ ಸೇಫ್

    ಬೆಂಗಳೂರು: ಮೈತ್ರಿ ಸರ್ಕಾರದ ಉಳಿವಿಗಾಗಿ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣರ ಪ್ರಯತ್ನ ಬಹು ಅವಶ್ಯಕವಾಗಿದೆ ಎಂದು ಆಚಾರ್ಯ ವಿಠ್ಠಲ್ ಭಟ್ ಭವಿಷ್ಯ ನುಡಿದಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ರೇವಣ್ಣ ಅವರಿಗೆ ಮಾತ್ರ ಗುರುಬಲ ಉತ್ತಮವಾಗಿದೆ. ಹೀಗಾಗಿ ಸರ್ಕಾರದ ರಕ್ಷಣೆಯಲ್ಲಿ ಅವರ ಪಾತ್ರ ಪ್ರಮುಖವಾಗಿದೆ. ಸಚಿವರು ಸರ್ಕಾರ ರಕ್ಷಿಸುವ ಪ್ರಯತ್ನ ಮಾಡುತ್ತಿಲ್ಲ. ಒಂದು ವೇಳೆ ಪ್ರಯತ್ನಕ್ಕೆ ಮುಂದಾದರೆ ಯಾವುದೇ ಕಾರಣಕ್ಕೂ ಸರ್ಕಾರ ಬೀಳುವುದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ.

    ಸಿಎಂ ಕುಮಾರಸ್ವಾಮಿ ಅವರಿಗೆ ಈ ವರ್ಷದ ನವೆಂಬರ್ ವರೆಗೂ ಗುರುಬಲವಿಲ್ಲ. ಇತ್ತ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೂ ಗುರುಬಲವಿಲ್ಲ. ಇದರಿಂದಾಗಿ ಕುಮಾರಸ್ವಾಮಿ ಅವರ ಸಿಎಂ ಸ್ಥಾನ ಭದ್ರವಾಗಿದೆ. ಒಂದು ವೇಳೆ ಇಬ್ಬರಲ್ಲಿ ಯಾರಿಗಾದರೂ ಗುರುಬಲ ಸಿಕ್ಕಿದ್ದರೆ ಸರ್ಕಾರ ಇಷ್ಟೋತ್ತಿಗೆ ಬಿದ್ದು ಹೋಗುತ್ತಿತ್ತು. ಸದ್ಯದ ಬೆಳವಣಿಗೆ ಪ್ರಕಾರ ರಾಜ್ಯ ದೋಸ್ತಿ ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ ಎಂದು ನುಡಿದರು.

    ಬಿ.ಎಸ್.ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತುಕೊಳ್ಳುವ ಯೋಗ ಕೂಡಿಬಂದಿಲ್ಲ. ಈ ಯೋಗ ಕೂಡಿ ಬರಲು ಹೆಚ್ಚು ಕಾಲ ಬೇಕಾಗುತ್ತದೆ. ಇದೇ ಕುಮಾರಸ್ವಾಮಿ ಅವರಿಗೆ ಇರುವ ಪ್ಲಸ್ ಪಾಯಿಂಟ್. ಜೊತೆಗೆ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಮಾಡಿಸುತ್ತಿರುವುದು ಕೂಡ ಅವರ ಸ್ಥಾನಕ್ಕೆ ಭದ್ರತೆ ಒದಗಿಸಿದೆ. ಆದರೆ ಅವರ ಈಗಿನ ಪರಿಸ್ಥಿತಿ ಅಷ್ಟು ಉತ್ತಮವಾಗಿಲ್ಲ. ಕುಮಾರಸ್ವಾಮಿ ಅವರು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಲೋಕೋಪಯೋಗಿ ಸಚಿವರ ಕೆಲಸಕ್ಕೆ ಪತ್ನಿ ಭವಾನಿ ರೇವಣ್ಣ ಫುಲ್‌ ಮಾರ್ಕ್ಸ್‌

    ಲೋಕೋಪಯೋಗಿ ಸಚಿವರ ಕೆಲಸಕ್ಕೆ ಪತ್ನಿ ಭವಾನಿ ರೇವಣ್ಣ ಫುಲ್‌ ಮಾರ್ಕ್ಸ್‌

    – ರಾಜ್ಯವೇ ಒಂದು ಕಣ್ಣಾದ್ರೆ, ಹಾಸನವೇ ಒಂದು ಕಣ್ಣಿನಂತೆ!

    ಹಾಸನ: ಲೋಕೋಪಯೋಗಿ ಸಚಿವ ಎಚ್‍ಡಿ ರೇವಣ್ಣ ಅವರು ಇಲಾಖೆಯಲ್ಲಿ ಬಿಡುವಿಲ್ಲದೇ ಕಾರ್ಯನಿರ್ವಹಿಸುತ್ತಿದ್ದು, ಇಡೀ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಕೈಗೊಂಡಿದ್ದಾರೆ ಎಂದು ಹಾಸನ ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರು ಆಗಿರುವ ಭವಾನಿ ರೇವಣ್ಣ ಅವರು ಹೇಳಿದ್ದಾರೆ.

    ಜಿಲ್ಲೆಯ ಚಿಕ್ಕಹೊನ್ನೇನಹಳ್ಳಿಯಲ್ಲಿ ಗ್ರಾಮದ ಟ್ರಸ್ಟ್ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಪತಿ ರೇವಣ್ಣ ಅವರು ಯಾವಾಗ್ಲು ದೊಡ್ಡ ಕೆಲಸದ ಬಗ್ಗೆಯೇ ಯೋಚನೆ ಮಾಡುತ್ತಾರೆ. ಜನರು ಸಣ್ಣ ಪುಟ್ಟ ಕೆಲಸ ಕೇಳಿದರೆ ಕೂಡ ಮಾಡಿಸೋಣ ಎಂದು ಯಾವುದನ್ನೂ ಕೈಬಿಡದೆ ಮಾಡುತ್ತಾರೆ. ಲೋಕೋಪಯೋಗಿ ಇಲಾಖೆಯಲ್ಲಿ ಬಿಡುವಿಲ್ಲದೆ ಕೆಲಸ ಮಾಡುತ್ತಿದ್ದು, ಅದಕ್ಕೆ ತಕ್ಕಂತೆ ಸಾಕಷ್ಟು ಅನುದಾನ ತಂದು ಕೆಲಸ ಮಾಡುತ್ತಿದ್ದಾರೆ ಎಂದು ಹಾಡಿ ಹೊಗಳಿದರು.

    ರೇವಣ್ಣ ಅವರ ಬಳಿ ಆಗುವುದಿಲ್ಲ ಎಂಬ ಪದವೇ ಇಲ್ಲ. ಅವರು ಹಾಸನದಿಂದ ಚನ್ನರಾಯಪಟ್ಟಣ ಕ್ರಾಸ್ ಮಾಡಿ ತೆರಳಿದ್ದಾರೆ ಎಂದರೆ ಯಾವುದೋ ಫೈಲ್ ಹಿಡಿದು ಬೆಂಗಳೂರಿಗೆ ಹೊರಟಿದ್ದಾರೆ ಎಂದರ್ಥ. ಆ ಕಡೆಯಿಂದ ನೆಲಮಂಗಲ ಬಿಟ್ಟು ಬಂದಿದ್ದರೆ ಅಂದರೆ ಆ ಕೆಲಸ ಮಾಡಿಸಿಕೊಂಡು ವಾಪಸ್ ಬರುತ್ತಿದ್ದಾರೆ ಎಂದರ್ಥ ಎಂದು ಯೋಚನೆ ಮಾಡುತ್ತೇವೆ. ಒಂದೊಮ್ಮೆ ಅವರು ಬೆಂಗಳೂರಿನಲ್ಲೇ ಉಳಿದರೆ ಹೋದ ಕೆಲಸಕ್ಕೆ ಸಂಬಂಧ ಪಟ್ಟ ಸಚಿವರೋ ಅಥವಾ ಅಧಿಕಾರಿಯೋ ಸಿಕ್ಕಿಲ್ಲ ಎಂದರ್ಥ ಎಂದು ತಿಳಿಸಿದರು.

    ರಾಜ್ಯವೇ ಅವರಿಗೆ ಒಂದು ಕಣ್ಣಾದ್ರೆ, ಹಾಸನವೇ ಒಂದು ಕಣ್ಣಿನಂತೆ ಎಂದು ಜನ ಹೇಳುತ್ತಾರೆ. ಆದರಂತೆ ಅವರು ಹೆಚ್ಚಿನ ಅನುದಾನ ತಂದು ಕೆಲಸ ಮಾಡಿಸುತ್ತಾರೆ. ಅವರಿಗೆ ನಮ್ಮ ಕುಟುಂಬದ ಸಂಪೂರ್ಣ ಬೆಂಬಲ ಇದ್ದು, ಕೆಲಸ ಮಾಡುವುದಲ್ಲಿ ರೇವಣ್ಣರವರು ಯಾವತ್ತೂ ಮೊದಲ ಸ್ಥಾನಕ್ಕೆ ಬರುತ್ತಾರೆ ಎಂದು ಪತಿ ಕೆಲಸದ ಬಗ್ಗೆ ಪತ್ನಿ ಭವಾನಿ ರೇವಣ್ಣ ಅವರು ಫುಲ್ ಮಾರ್ಕ್ಸ್‌ ಕೊಟ್ಟರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಾಲೇಜು ಹುಡುಗಿಯರನ್ನು ಚುಡಾಯಿಸೋರನ್ನ ಒದ್ದು ಒಳಗೆ ಹಾಕಿ: ಎಚ್‍ಡಿ ರೇವಣ್ಣ

    ಕಾಲೇಜು ಹುಡುಗಿಯರನ್ನು ಚುಡಾಯಿಸೋರನ್ನ ಒದ್ದು ಒಳಗೆ ಹಾಕಿ: ಎಚ್‍ಡಿ ರೇವಣ್ಣ

    ಹಾಸನ: ಕಾಲೇಜು ಆವರಣದಲ್ಲಿ ಮದ್ಯಪಾನ ಮಾಡುವ ಹಾಗೂ ವಿದ್ಯಾರ್ಥಿನಿಯರನ್ನು ಚುಡಾಯಿಸುವ ಕಿಡಿಗೇಡಿಗಳನ್ನು ಒದ್ದು ಒಳಗೆ ಹಾಕಿ ಎಂದು ಸಚಿವ ರೇವಣ್ಣ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಪ್ರಕಾಶ್ ಗೌಡ ಅವರಿಗೆ ಸೂಚನೆ ನೀಡಿದ್ದಾರೆ.

    ಇಂದು ಹಾಸನದ ಜಿಲ್ಲಾ ಸಭಾಂಗಣದಲ್ಲಿ ಶಾಲಾ-ಕಾಲೇಜು ಮುಖ್ಯಸ್ಥರೊಂದಿಗೆ ಸಭೆ ನಡೆಸಿ ಸಚಿವರು ಚರ್ಚೆ ನಡೆಸಿದ್ದರು. ಈ ವೇಳೆ ಕಾಲೇಜಿನ ಮುಖ್ಯೋಪಾಧ್ಯಾಯರೊಬ್ಬರು ತಮ್ಮ ಕಾಲೇಜು ಆವರಣದಲ್ಲಿ ಮದ್ಯಪಾನ ಮಾಡಿ, ವಿದ್ಯಾರ್ಥಿನಿಯರನ್ನು ಚುಡಾಯಿಸುವ ಪುಂಡರ ಬಗ್ಗೆ ಮಾಹಿತಿ ನೀಡಿ ಸಚಿವರ ಗಮನ ಸೆಳೆದರು.

    ಮುಖ್ಯೋಪಾದ್ಯಾಯರಿಂದ ಮಾಹಿತಿ ಪಡೆಯುತ್ತಿದಂತೆ ಗರಂ ಆದ ಸಚಿವರು, ವಿದ್ಯಾರ್ಥಿನಿಯರಿಗೆ ಚುಡಾಯಿಸುವ ಮತ್ತು ಕಾಲೇಜು ಆವರಣದಲ್ಲಿ ಮದ್ಯಪಾನ ಮಾಡುವ ಕಿಡಿಗೇಡಿಗಳನ್ನು ಪೊಲೀಸರು ಮಫ್ತಿಯಲ್ಲಿ ಹೋಗಿ ಹಿಡಿದು ಒದ್ದು ಒಳಗೆ ಹಾಕುವಂತೆ ಸೂಚನೆ ನೀಡಿದರು. ಇಂತಹ ವಿಚಾರದಲ್ಲಿ ಯಾರೇ ಆಗಲಿ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುವುದು ಕಂಡು ಬಂದರೆ ಕೂಡಲೇ ಕ್ರಮಕೈಗೊಳ್ಳಿ, ಅದ್ಯಾವನ್ ಬರ್ತಾನೆ ನಾನು ನೋಡ್ತಿನಿ. 15 ದಿನಗಳಲ್ಲಿ ಈ ಬಗ್ಗೆ ಮಾಹಿತಿ ನೀಡಿ ಎಂದು ತಮ್ಮದೇ ಶೈಲಿಯಲ್ಲಿ ಸೂಚನೆ ನೀಡಿದರು.

    ಇದೇ ವೇಳೆ ರಾಜ್ಯದ ಶಿಕ್ಷಣದ ಫಲಿತಾಂಶದಲ್ಲಿ ನಮ್ಮ ಜಿಲ್ಲೆ 7 ಸ್ಥಾನದಲ್ಲಿ ಇದ್ದು, ಮೊದಲ ಸ್ಥಾನಕ್ಕೆ ತೆಗೆದುಕೊಂಡು ಹೋಗುವಂತೆ ಶಿಕ್ಷಕರಿಗೆ ಮನವಿ ಮಾಡಿದರು. ಹಳ್ಳಿ ಮಕ್ಕಳು ಹೆಚ್ಚು ಶಿಕ್ಷಣ ಪಡೆಯಲು ಸರ್ಕಾರಿ ಶಾಲೆ, ಕಾಲೇಜುಗಳಿಗೆ ಬರುತ್ತಾರೆ. ಆದ್ದರಿಂದ ನಿಮಗೆ ಯಾವುದೇ ಸೌಲಭ್ಯ ಬೇಕಾದರು ನೀಡುತ್ತೇನೆ. ಎಲ್ಲಾ ಮಕ್ಕಳಿಗೆ ಭಾನುವಾರವೂ ವಿಶೇಷ ತರಗತಿ ನಡೆಸಿ ಎಂದರು. ಈ ಬಾರಿ ಫಲಿತಾಂಶದಲ್ಲಿ ಮುಂದೆ ಬಾರದಿದ್ದರೆ ನಿಮ್ಮ ಮೇಲೆ ಕ್ರಮಕೈಗೊಳ್ಳುವುದಾಗಿ ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹುಬ್ಬಳ್ಳಿ, ಧಾರವಾಡ ನಡುವೆ ಎಲಿವೇಟೆಡ್ ರಸ್ತೆ ನಿರ್ಮಾಣಕ್ಕೆ ಕೇಂದ್ರದ ಒಪ್ಪಿಗೆ

    ಹುಬ್ಬಳ್ಳಿ, ಧಾರವಾಡ ನಡುವೆ ಎಲಿವೇಟೆಡ್ ರಸ್ತೆ ನಿರ್ಮಾಣಕ್ಕೆ ಕೇಂದ್ರದ ಒಪ್ಪಿಗೆ

    – ಸಿಎಂ ಎಚ್‍ಡಿಕೆ ಭೇಟಿಗೆ ಪ್ರಧಾನಿ ಮೋದಿ ಒಪ್ಪಿಗೆ

    ನವದೆಹಲಿ: ಹುಬ್ಬಳ್ಳಿ, ಧಾರವಾಡ ಅವಳಿ ನಗರಗಳ ನಡುವೆ ಎಲಿವೇಟೆಡ್ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸಚಿವ ಗಡ್ಕರಿ ಒಪ್ಪಿಗೆ ಸೂಚಿಸಿದ್ದು, ಭೂ ಸ್ವಾಧೀನ ಪ್ರಕ್ರಿಯೆ ಮುಗಿದ ತಕ್ಷಣ ಕಾಮಗಾರಿ ಆರಂಭಿಸುವುದಾಗಿ ಹೇಳಿದ್ದಾರೆ.

    ನವದೆಹಲಿಯಲ್ಲಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮತ್ತು ಲೋಕೋಪಯೋಗಿ ಸಚಿವ ಹೆಚ್.ಡಿ ರೇವಣ್ಣ ರಾಜ್ಯದ ವಿವಿಧ ಹೆದ್ದಾರಿ ಕಾಮಗಾರಿಗಳಿಗೆ ಅನುಮತಿ ನೀಡುವಂತೆ ಮನವಿ ಮಾಡಿದರು. ಸಚಿವರ ಭೇಟಿ ವೇಳೆ ಕರ್ನಾಟಕ, ಗೋವಾ ರಾಜ್ಯಗಳನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 4 ಎ ಪ್ರಸ್ತುತ ಎರಡು ಪಥಗಳದ್ದಾಗಿದ್ದು, ಇದರ ಅಗಲೀಕರಣಕ್ಕಾಗಿ ಮುಂದಿನ 18 ತಿಂಗಳ ಕಾಲ ಬಂದ್ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬಳಸಬಹುದಾದ ಪರ್ಯಾಯ ಸಂಪರ್ಕ ಮಾರ್ಗಗಳ ಅಭಿವೃದ್ಧಿಯನ್ನು ಕೈಗೆತ್ತಿಕೊಳ್ಳುವ ಬಗ್ಗೆಯೂ ಪ್ರಸ್ತಾಪ ಮಾಡಲಾಯಿತು. ಬೇಲೂರು ಹಾಸನ ನಡುವೆ ರಾಷ್ಟ್ರೀಯ ಹೆದ್ದಾರಿ 373ರ ಅಭಿವೃದ್ಧಿಪಡಿಸುವಂತೆ ಮನವಿ ಮಾಡಿದರು.

    ಇದೇ ವೇಳೆ ಲೋಕೋಪಯೋಗಿ ಸಚಿವ ರೇವಣ್ಣ ಅವರು ಬೇಲೂರು – ಹಾಸನ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಮನವಿ ಮಾಡಿದರು. ಅಲ್ಲದೇ ಹಾಸನ- ಹೊಳೆನರಸೀಪುರ ಚತುಷ್ಪಥ ರಸ್ತೆ, ಚನ್ನರಾಯಪಟ್ಟಣ- ಹೊಳೆ ನರಸೀಪುರ – ಅರಕಲಗೂಡು – ಕೊಡ್ಲಿಪೇಟೆ- ಮಡಿಕೇರಿ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಉನ್ನತೀಕರಿಸುವ ಬಗ್ಗೆಯೂ ಭೇಟಿ ವೇಳೆ ಚರ್ಚಿಸಲಾಯಿತು.

    ಉಳಿದಂತೆ ಕಲ್ಲಿದ್ದಲು ಪೂರೈಕೆ ವಿಚಾರವಾಗಿ ನಾಳೆ ಬೆಳಗ್ಗೆ ಪಿಯೂಶ್ ಗೋಯಲ್ ಹಾಗೂ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ, ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ಹೆಸರಿಡುವಂತೆ ಮಧ್ಯಾಹ್ನ 1 ಗಂಟೆಗೆ ವಿಮಾನಯಾನ ಸಚಿವ ಸುರೇಶ್ ಪ್ರಭು ಅವರನ್ನು ಭೇಟಿಯಾಗಲಿರುವ ಸಿಎಂ, ಸಂಜೆ 5 ಗಂಟೆಗೆ ವೇಳೆಗೆ ಪ್ರಧಾನಿ ಮೋದಿ ಜೊತೆ ಚರ್ಚೆ ನಡೆಸಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಚಿವ ರೇವಣ್ಣಗೆ ಗದರಿದ ಸಿಎಂ ಕುಮಾರಸ್ವಾಮಿ

    ಸಚಿವ ರೇವಣ್ಣಗೆ ಗದರಿದ ಸಿಎಂ ಕುಮಾರಸ್ವಾಮಿ

    ಹಾಸನ: ಮುಖ್ಯಮಮತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ದೊಡ್ಡಣ್ಣ ಎಂದು ಕರೆಯುವ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ ರೇವಣ್ಣಗೆ ಗದರಿದ್ದಾರೆ.

    ಜಿಲ್ಲೆಯಲ್ಲಿ ಮಂಗಳವಾರ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆಯುತ್ತಿತ್ತು. ಈ ವೇಳೆ ಸಿಎಂ ಕುಮಾರಸ್ವಾಮಿ ಗರಂ ಆಗಿ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ. ರೇವಣ್ಣಗೆ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

    ಸಿಎಂ ಕುಮಾರಸ್ವಾಮಿ ಸಭೆಯಲ್ಲಿ ರಾಜ್ಯ ಅಭಿವೃದ್ಧಿ ಕುರಿತು ಸಭೆ ಮಾಡುತ್ತಿದ್ದರು. ಈ ವೇಳೆ ಸಚಿವ ರೇವಣ್ಣ ತಮ್ಮ ಜಿಲ್ಲೆಯಾದ ಬರೀ ಹಾಸನದ ಬಗ್ಗೆಯಷ್ಟೆ ಪ್ರಶ್ನೆ ಮಾಡುತ್ತಿದ್ದರು. ಇದರಿಂದ ಸಿಎಂ ಕುಮಾರಸ್ವಾಗೆ ಇರಿಸು ಮುರುಸಾಗಿದೆ. ಹೀಗಾಗಿ ಕೋಪಗೊಂಡ ಸಿಎಂ ಕುಮಾರಸ್ವಾಮಿ ಅವರು ರೇವಣ್ಣ ವಿರುದ್ಧವೇ ಗರಂ ಆಗಿದ್ದರು.

    ರೇವಣ್ಣ ಕೇಳಿದ ಪ್ರಶ್ನೆಗೆ, ಇಲ್ಲಿ ನಡೆಯುತ್ತಿರುವುದು ರಾಜ್ಯ ಅಭಿವೃದ್ಧಿಗೆ ಸಂಬಂಧ ಪಟ್ಟ ಸಭೆಯಾಗಿದೆ. ಇಲ್ಲಿ ನಿಮ್ಮ ಬರೀ ಹಾಸನದ ಬಗ್ಗೆಯಷ್ಟೆ ಪ್ರಶ್ನೆ ಕೇಳಿದರೆ ಹೇಗಾಗುತ್ತದೆ ಎಂದು ಕೋಪಗೊಂಡು ಸಿಎಂ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ ಅಂತ ಮೂಲಗಳಿಂದ ತಿಳಿದು ಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಭೆ ನಡುವೆಯೇ ಡಿಸಿಎಂಗೆ ಫೋನ್ ಮಾಡಿ ಅಸಮಾಧಾನ ಹೊರಹಾಕಿದ ರೇವಣ್ಣ!

    ಸಭೆ ನಡುವೆಯೇ ಡಿಸಿಎಂಗೆ ಫೋನ್ ಮಾಡಿ ಅಸಮಾಧಾನ ಹೊರಹಾಕಿದ ರೇವಣ್ಣ!

    ತುಮಕೂರು: ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಹೇಮಾವತಿ ಸಲಹಾ ಸಮಿತಿ ಸಭೆ ನಡುವೆಯೇ ಸಮ್ಮಿಶ್ರ ಸರ್ಕಾರದ ಡಿಸಿಎಂ ಪರಮೇಶ್ವರ್ ಅವರಿಗೆ ಫೋನ್ ಮಾಡಿದ ಲೋಕೋಪಯೋಗಿ ಸಚಿವ ರೇವಣ್ಣ ತಮ್ಮ ಫೋನ್ ಕರೆಗೆ ಉತ್ತರಿಸದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಜಿಲ್ಲೆಗೆ ಹೇಮಾವತಿ ಜಲಾಶಯದಿಂದ ಬರಬೇಕಾಗಿದ್ದ ನೀರನ್ನು ಪೂರ್ಣ ಪ್ರಮಾಣದಲ್ಲಿ ಹರಿಸುತ್ತಿಲ್ಲ ಎಂದು ಸಾರ್ವಜನಿಕರು ದೂರನ್ನು ಆಧಾರಿಸಿ ಪಬ್ಲಿಕ್ ಟಿವಿ ವರದಿ ಮಾಡಿದ್ದ ಹಿನ್ನೆಲೆಯಲ್ಲಿ ಇಂದು ತರಾತುರಿಯಲ್ಲಿ ಸಭೆಯನ್ನು ಕರೆಯಲಾಗಿತ್ತು. ಆದರೆ ಸಭೆಗೆ ಹಾಜರಾಗುವಂತೆ ತಿಳಿಸಲು ಲೋಕೋಪಯೋಗಿ ಸಚಿವ ರೇವಣ್ಣ ಅವರು ಹಲವು ಬಾರಿ ಪರಮೇಶ್ವರ್ ಅವರಿಗೆ  ಕರೆ ಮಾಡಿದ್ದಾರೆ. ಆದರೆ ರೇವಣ್ಣ ಅವರ ಕರೆಗೆ ಡಿಸಿಎಂ ಉತ್ತರಿಸದೇ ಮುನಿಸಿಕೊಂಡಿದ್ದರು ಎನ್ನಲಾಗಿದೆ.

    ಕರೆ ಸ್ವೀಕರಿಸದ್ದಕ್ಕೆ ಅಸಮಾಧಾನಗೊಂಡ ರೇವಣ್ಣ ಅವರು ಇಂದು ಸಭೆಯ ನಡುವೆಯೇ ಪರಮೇಶ್ವರ್ ಅವರಿಗೆ ಕರೆ ಮಾಡಿ ಗಮನಸೆಳೆದರು. “ಅಣ್ಣಾ ನಾನು ನಿಮಗೆ ನಿನ್ನೆ ಮೂರ್ನಾಲ್ಕು ಬಾರಿ ಫೋನ್ ಮಾಡಿದ್ದೆ, ನೀವು ರಿಸೀವ್ ಮಾಡಲೇ ಇಲ್ಲ. ಬೇಕಾದರೆ ನಿಮ್ಮವರನ್ನು ಕೇಳಿ ನೋಡಿ” ಎಂದು ನಯವಾಗಿಯೇ ಅಸಮಾಧಾನ ಹೊರಹಾಕಿದರು.

    ಉಳಿದಂತೆ ಸಭೆಯಲ್ಲಿ ತುಮಕೂರಿಗೆ ನೀರಾವರಿ ವಿಚಾರದಲ್ಲಿ ಯಾವುದೇ ಅನ್ಯಾಯ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದ ಸಚಿವ ರೇವಣ್ಣ ಅವರು, 24.5 ಟಿಎಂಸಿ ನೀರಿನಲ್ಲಿ ಈಗಾಗಲೇ 14 ಟಿಎಂಸಿ ನೀರು ಬಿಡಲಾಗಿದೆ. ಮುಂದೆಯೂ ನೀರು ಹರಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.

    ಈ ವೇಳೆ ತಮ್ಮ ವಿರುದ್ಧ ಆರೋಪ ಮಾಡಿದ ಮಾಜಿ ಸಂಸದ ಜಿ.ಎಸ್. ಬಸವರಾಜು ಅವರನ್ನು ಲೇವಡಿ ಮಾಡಿದ್ದ ರೇವಣ್ಣ, ಇನ್ನು ಮುಂದೆ ಜಿ.ಎಸ್.ಬಸವರಾಜು ನೀರುಗಂಟಿಯಾಗಿ ಕೆಲಸ ಮಾಡಲಿ. ಅವರಿಗೆ ಡ್ಯಾಂ ಕೀ ಕೊಡುತ್ತೇವೆ ಎಂದು ವಾಗ್ದಾಳಿ ನಡೆಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • `ಮೇಡಂ ಎಣ್ಣೆಕಾಟ ತಪ್ಪಿಸಿ’-ಡಿಸಿ ರೋಹಿಣಿ ಸಿಂಧೂರಿಗೆ ರೇವಣ್ಣ ಮನವಿ

    `ಮೇಡಂ ಎಣ್ಣೆಕಾಟ ತಪ್ಪಿಸಿ’-ಡಿಸಿ ರೋಹಿಣಿ ಸಿಂಧೂರಿಗೆ ರೇವಣ್ಣ ಮನವಿ

    ಹಾಸನ: ಜಿಲ್ಲೆಯ ಹಳ್ಳಿಗಳಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಲೋಕೋಪಯೋಗಿ ಸಚಿವ ಎಚ್‍ಡಿ ರೇವಣ್ಣ ಅವರು ಡಿಸಿ ರೋಹಿಣಿ ಸಿಂಧೂರಿ ಅವರಲ್ಲಿ ಮನವಿ ಮಾಡಿದ್ದಾರೆ.

    ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಸಚಿವ ಸಭೆಯಲ್ಲಿ ಮಾತನಾಡಿದ ಸಚಿವ ರೇವಣ್ಣ, ಜಿಲ್ಲೆಯ ಎಲ್ಲೆಡೆ ಹಳ್ಳಿಗಳಲ್ಲಿ ಇರುವ ಕೆಲ ಟೀ ಕ್ಯಾಂಟೀನ್‍ಗಳು ಈಗ ಮದ್ಯದ ಅಂಗಡಿಯಾಗಿ ಬದಲಾಗಿವೆ. ಪ್ರತಿ ನಿತ್ಯ ಹಳ್ಳಿ ಹೆಂಗಸರು ಬಂದು ನನ್ನನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ ಎಂದರು.

    ಅಕ್ರಮ ಮದ್ಯ ಮಾರಾಟ ಕುರಿತು ಮಾಹಿತಿ ಲಭಿಸಿದರೆ ಅಂತ ಅಂಗಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಕೆಲ ಕ್ಯಾಂಟೀನ್‍ಗಳಲ್ಲಿ ಬೆಳಗ್ಗೆಯಿಂದ ರಾತ್ರಿ ವರೆಗೂ ಮಾರಾಟ ಮಾಡಲಾಗುತ್ತದೆ. ಅದ್ದರಿಂದ ಅವುಗಳಿಗೆ ಬೀಗ ಮುದ್ರೆ ಹಾಕಲು ಕೂಡ ಕ್ರಮಕೈಗೊಳ್ಳಿ ಎಂದು ಮನವಿ ಮಾಡಿದರು.

    ಮಾಜಿ ಪ್ರಧಾನಿ ದೇವೇಗೌಡರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ರೇವಣ್ಣ ಅವರು ಗ್ರಾಮೀಣ ಭಾಗದ ಅಕ್ರಮ ಮದ್ಯ ಮಾರಾಟದ ಬಗ್ಗೆ ಜಿಲ್ಲಾಧಿಕಾರಿಗಳ ಗಮನಸೆಳೆದರು. ಇದನ್ನು ಓದಿ: ಮೂರೇ ತಿಂಗಳಲ್ಲಿ ಬಿಜೆಪಿಯನ್ನು ನಗರದಿಂದ ಕಳುಹಿಸಿಲ್ಲವೇ: ರೇವಣ್ಣ 

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಭಾರೀ ವಾಹನಗಳಿಗೂ ಶಿರಾಡಿ ಘಾಟ್ ಸಂಚಾರಕ್ಕೆ ಮುಕ್ತ

    ಭಾರೀ ವಾಹನಗಳಿಗೂ ಶಿರಾಡಿ ಘಾಟ್ ಸಂಚಾರಕ್ಕೆ ಮುಕ್ತ

    ಹಾಸನ: ರಸ್ತೆ ದುರಸ್ತಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿದ್ದ ಶಿರಾಡಿ ಘಾಟ್ ಈಗ ಸಂಚಾರಕ್ಕೆ ಮುಕ್ತವಾಗಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ.

    ರಾಷ್ಟ್ರೀಯ ಹೆದ್ದಾರಿ 75 ರಲ್ಲಿರುವ 26 ಕಿ.ಮೀ. ಶಿರಾಡಿ ಘಾಟ್ ರಸ್ತೆ ಕಾಂಕ್ರಿಟೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಕಳೆದ ಆರು ತಿಂಗಳಿನಿಂದ ಸಂಚಾರ ಸ್ಥಗಿತಗೊಂಡಿತ್ತು. ಸಚಿವ ಎಚ್.ಡಿ.ರೇವಣ್ಣ ಜುಲೈ 15ರಂದು ವಾಸ್ತುಪ್ರಕಾರವಾಗಿ ಶಿರಾಡಿ ಘಾಟ್ ಉದ್ಘಾಟಿಸಿ, ಲಘು ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದರು. ಆದರೆ ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಬೃಹತ್ ವಾಹನಗಳನ್ನು ನಿಷೇಧಿಸಲಾಗಿತ್ತು. ಇದನ್ನು ಓದಿ: ವಾಸ್ತು ಪ್ರಕಾರ ಶಿರಾಡಿ ಘಾಟ್ ಉದ್ಘಾಟಿಸಿದ ಸಚಿವ ಹೆಚ್.ಡಿ.ರೇವಣ್ಣ

    ಶಿರಾಡಿ ಘಾಟ್ ಬೆಂಗಳೂರು-ಮಂಗಳೂರು ನಡುವಿನ ಪ್ರಮುಖ ಹೆದ್ದಾರಿಯಾಗಿದ್ದು, ಲಾರಿ ಹಾಗೂ ಬಸ್ ಸಂಚಾರಕ್ಕೆ ತೊಡಕಾಗಿತ್ತು. ಇದೀಗ ಹಾಸನ-ದಕ್ಷಿಣ ಕನ್ನಡ ಜಿಲ್ಲೆಗಳ ನಡುವಿನ ಗಡಿ ಭಾಗದ 26 ಕಿ.ಮೀ ಕಾಂಕ್ರೀಟ್ ರಸ್ತೆ ಕಾಮಗಾರಿ ಸಂಪೂರ್ಣವಾಗಿದ್ದು, ಎಲ್ಲ ರೀತಿಯ ವಾಹನ ಸಂಚಾರಕ್ಕೆ ಜಿಲ್ಲಾಡಳಿತ ಅವಕಾಶ ನೀಡಿದೆ. ಇದನ್ನು ಓದಿ: ಶಿರಾಡಿ ಘಾಟ್ ನಲ್ಲಿ ದ್ವಿಚಕ್ರ, ತ್ರಿಚಕ್ರ, ಮಿನಿ ಬಸ್, ಟೆಂಪೋ ಟ್ರಾವಲರ್ಸ್ ಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ- ಖಾದರ್