Tag: ಸಚಿವ ಸಂಪುಟ ವಿಸ್ತರಣೆ

  • ಗ್ರಾಮ ವಾಸ್ತವ್ಯದಿಂದ 17 ಸಾವಿರ ಜನರಿಗೆ ಅನುಕೂಲವಾಗಿದೆ: ಆರ್.ಅಶೋಕ್

    ಗ್ರಾಮ ವಾಸ್ತವ್ಯದಿಂದ 17 ಸಾವಿರ ಜನರಿಗೆ ಅನುಕೂಲವಾಗಿದೆ: ಆರ್.ಅಶೋಕ್

    ರಾಯಚೂರು: ಗ್ರಾಮ ವಾಸ್ತವ್ಯದಿಂದ ನಮಗೆ ನ್ಯಾಯ ಸಿಗುತ್ತದೆ ಅನ್ನೋ ನಂಬಿಕೆ ಗ್ರಾಮೀಣ ಭಾಗದ ಜನರಲ್ಲಿ ಮೂಡುತ್ತಿದೆ. ಅಧಿಕಾರಿಗಳು ಇನ್ನಷ್ಟು ಶ್ರಮಪಟ್ಟರೆ ಜನರಿಗೆ ಇನ್ನೂ ಅನುಕೂಲವಾಗುತ್ತದೆ ಅಂತ ಕಂದಾಯ ಸಚಿವ ಆರ್.ಅಶೋಕ್ (Revenue Minister R. Ashok) ಹೇಳಿದ್ದಾರೆ.

    ಜಿಲ್ಲೆಯ ದೇವದುರ್ಗದ (Devadurga) ಅರಕೇರಾದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಹಿನ್ನೆಲೆ ಗ್ರಾಮವಾಸ್ತವ್ಯ ಮುಗಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಆರ್.ಅಶೋಕ್ ಅವರು, ಗ್ರಾಮ ವಾಸ್ತವ್ಯ ವೇಳೆಯೇ ಸೈನಿಕರಿಗೆ ಆರೂವರೆ ಎಕರೆ ಜಮೀನು ಮಂಜೂರು ಮಾಡಲಾಗಿದೆ. ಈ ಗ್ರಾಮ ವಾಸ್ತವ್ಯದಿಂದ 17 ಸಾವಿರ ಜನರಿಗೆ ಅನುಕೂಲವಾಗಿದೆ ಎಂದು ತಿಳಿಸಿದರು.

    ಅರಕೇರಾ ನೂತನ ತಾಲೂಕಿಗೆ ಅಧಿಕಾರಿಗಳನ್ನು ಶೀಘ್ರದಲ್ಲಿಯೇ ನೇಮಕ ಮಾಡುತ್ತೇವೆ. ಇಲ್ಲಿನ ಜನ ಮನೆಗಳನ್ನು ಕೇಳುತ್ತಿದ್ದಾರೆ. ವಸತಿ ಸೌಲಭ್ಯ ಕಲ್ಪಿಸಬೇಕಿದೆ. ಈಗ 300 ಮನೆಗಳನ್ನು ನೀಡುತ್ತಿದ್ದೇವೆ. 2 ಸಾವಿರ ಅರ್ಜಿಗಳು ಬಂದಿವೆ ಅವುಗಳನ್ನು ಶೀಘ್ರ ವಿಲೇವಾರಿ ಮಾಡುತ್ತೇವೆ ಎಂದರು.

    ಇದೇ ವೇಳೆ ಸಚಿವ ಸಂಪುಟದ ವಿಸ್ತರಣೆ, ಈ ಭಾಗಕ್ಕೆ ಸಚಿವ ಸ್ಥಾನ ಕೊಡುವುದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದ್ದು, ನಾನು ಅದರ ಬಗ್ಗೆ ಪ್ರತಿಕ್ರಿಯೆ ಕೊಡುವುದು ಏನೂ ಇಲ್ಲ ಅಂತ ಅಶೋಕ್ ಹೇಳಿದರು. ಇದನ್ನೂ ಓದಿ: ಹಾಸನದಲ್ಲಿ ಭೀಕರ ರಸ್ತೆ ಅಪಘಾತ- ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

    ರಾಯಚೂರಿಗೆ ಏಮ್ಸ್ ನೀಡುವ ಬಗ್ಗೆ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತದೆ. ರಾಯಚೂರನ್ನು ಮಹಾನಗರ ಪಾಲಿಕೆ ಮಾಡಬೇಕಿದೆ. ವಿಮಾನ ನಿಲ್ದಾಣ ಸೇರಿದಂತೆ ಅಗತ್ಯ ಸೌಲಭ್ಯಗಳನ್ನ ಮೊದಲು ಕಲ್ಪಿಸಬೇಕಿದೆ. ಎಲ್ಲಾ ಅಗತ್ಯ ಸೌಲಭ್ಯಗಳನ್ನ ನೀಡಿದ ಮೇಲೆ ಏಮ್ಸ್‌ಗೆ ಒತ್ತಾಯ ಮಾಡಬಹುದು ಎಂದು ತಿಳಿಸಿದರು. ಇದನ್ನೂ ಓದಿ: ಹಾಸನ ಭೀಕರ ಅಪಘಾತ ಪ್ರಕರಣ – ಎಸ್ಕೇಪ್ ಆಗಿದ್ದ ಹಾಲಿನ ಟ್ಯಾಂಕರ್ ಚಾಲಕ ಪೊಲೀಸರ ವಶಕ್ಕೆ

    Live Tv
    [brid partner=56869869 player=32851 video=960834 autoplay=true]

  • ಮರಾಠಾ ಸಮುದಾಯದ ಶ್ರೀಮಂತ್ ಪಾಟೀಲ್ ಇಲ್ಲವೆ ನನಗೆ ಸಚಿವ ಸ್ಥಾನ ಬೇಕು: ಅನಿಲ್ ಬೆನಕೆ

    ಮರಾಠಾ ಸಮುದಾಯದ ಶ್ರೀಮಂತ್ ಪಾಟೀಲ್ ಇಲ್ಲವೆ ನನಗೆ ಸಚಿವ ಸ್ಥಾನ ಬೇಕು: ಅನಿಲ್ ಬೆನಕೆ

    ಬೆಳಗಾವಿ: ರಾಜ್ಯದಲ್ಲಿ ಮರಾಠಾ ದೊಡ್ಡ ಪ್ರಮಾಣದಲ್ಲಿ ಇದೆ. ಹೀಗಾಗಿ ಅದನ್ನು ಪ್ರತಿನಿಧಿಸುವ ಸಲುವಾಗಿ ಸಮಾಜದ ಶ್ರೀಮಂತ್ ಪಾಟೀಲ್ ಇಲ್ಲವೆ ನನಗೆ ಸಚಿವ ಸ್ಥಾನ ನೀಡಬೇಕು ಬೆಳಗಾವಿ ಉತ್ತರ ಶಾಸಕ ಅನಿಲ್ ಬೆನಕೆ ಆಗ್ರಹಿಸಿದರು.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮರಾಠಾ ಸಮುದಾಯಕ್ಕೆ ಸಚಿವ ಸ್ಥಾನ ಕೊಡಬೇಕೆಂದು ಬೇಡಿಕೆ ಇದೆ. ಆದರೆ, ಹೈಕಮಾಂಡ್ ಏನು ನಿರ್ಣಯ ತೆಗೆದುಕೊಳ್ಳುತ್ತದೆ ಅದಕ್ಕೆ ನಾವು ಬದ್ಧರಾಗಿದ್ದೇವೆ ಎಂದರು.

    ರಾಜ್ಯದಲ್ಲಿ ಮರಾಠ ದೊಡ್ಡ ಸಮುದಾಯವಿದ್ದು ಅದನ್ನ ಪ್ರತಿನಿಧಿಸುವುದಕ್ಕೆ ನಮ್ಮ ಸಮಾಜದವರಿಗೆ ಸಚಿವ ಸ್ಥಾನ ಬೇಕು ಎಂಬುವುದು ಸಮಾಜದ ಬೇಡಿಕೆ ಆಗಿದೆ. ಪಕ್ಷ ನಮ್ಮ ಸಮಾಜದ ಬೇಡಿಕೆ ಈಡೇರಿಸುವ ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಹೀಗಾಗಿ ಸಮಾಜದ ಶ್ರೀಮಂತ್ ಪಾಟೀಲ್ ಇಲ್ಲವೆ ನನಗೆ ಸಚಿವ ಸ್ಥಾನ ನೀಡಬೇಕು. ಯಾರಿಗೆ ಕೊಟ್ಟರು ತೊಂದರೆ ಇಲ್ಲ. ಇಬ್ಬರಲ್ಲಿ ಒಬ್ಬರಿಗೆ ಸಚಿವ ಸ್ಥಾನ ಕೊಡಬೇಕು ಎಂದು ಒತ್ತಾಯಿಸಿದರು.

  • ಸಚಿವ ಸಂಪುಟ ವಿಸ್ತರಣೆ ‘ನಾಳೆ ಬಾ’ ಎಂಬಂತಿದೆ: ಅಭಯ್ ಪಾಟೀಲ್ ವ್ಯಂಗ್ಯ

    ಸಚಿವ ಸಂಪುಟ ವಿಸ್ತರಣೆ ‘ನಾಳೆ ಬಾ’ ಎಂಬಂತಿದೆ: ಅಭಯ್ ಪಾಟೀಲ್ ವ್ಯಂಗ್ಯ

    ಬೆಳಗಾವಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ತಮ್ಮದೇ ಸರ್ಕಾರದ ವಿರುದ್ಧ ನಗರದ ಬಿಜೆಪಿ ಶಾಸಕ ಅಭಯ್ ಪಾಟೀಲ್ ಸಚಿವ ಸಂಪುಟ ವಿಸ್ತರಣೆ ‘ನಾಳೆ ಬಾ’ ಎಂಬಂತಿದೆ ಎಂದು ವ್ಯಂಗ್ಯವಾಡಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಅದು ಆಗೋದಲ್ಲ, ಹೋಗೋದಲ್ಲ. ನನಗೆ ಮಂತ್ರಿ ಸ್ಥಾನ ಕೊಡೋದು, ಬಿಡೋದು ಸಿಎಂ ವಿವೇಚನೆಗೆ ಬಿಟ್ಟಿದ್ದು ಎಂದು ತಿಳಿಸಿದರು.

    ನನಗೆ ಸಿಎಂ ಬುಲಾವ್ ಅನ್ನೋದು ತಪ್ಪು. ಎಲ್ಲ ಶಾಸಕರಿಗೂ ಊಟಕ್ಕೆ ಕರೆದಿದ್ದರು. ಹೀಗಾಗಿ ಊಟ ಮಾಡಿ ಬಂದಿದ್ದೇವೆ. ಮೂರು ಸ್ವೀಟ್, ರೊಟ್ಟಿ ಜೊತೆ ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕದ ಊಟ ಇತ್ತು ಎಂದು ತಿಳಿಸಿದರು.

    ನಮ್ಮ ಸರ್ಕಾರ ಬೆಳಗಾವಿ ಜಿಲ್ಲಾ ಕೇಂದ್ರಕ್ಕೆ ಅಭಿವೃದ್ಧಿ ವಿಷಯದಲ್ಲಿ ಪ್ರಾಮುಖ್ಯತೆ ನೀಡಿದೆ. ಇನ್ನು, ಸಿಎಂ ಬದಲಾವಣೆ ಬಗ್ಗೆ ಚರ್ಚೆ ನಮ್ಮ ಗಮನಕ್ಕೆ ಬಂದಿಲ್ಲ. ಸಭೆಯಲ್ಲಿ ಆ ರೀತಿಯ ಯಾವುದೇ ಚರ್ಚೆ ನಡೆದಿಲ್ಲ ಎಂದರು.

  • ಸಚಿವ ಸ್ಥಾನ ಕೇಳುವ ಅವಶ್ಯಕತೆ ನನಗಿಲ್ಲ: ಅರವಿಂದ್ ಬೆಲ್ಲದ್

    ಸಚಿವ ಸ್ಥಾನ ಕೇಳುವ ಅವಶ್ಯಕತೆ ನನಗಿಲ್ಲ: ಅರವಿಂದ್ ಬೆಲ್ಲದ್

    ಹುಬ್ಬಳ್ಳಿ: ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ಬೇಕು ಎಂದು ಕೇಳಿಲ್ಲ ಎಂದು ಶಾಸಕ ಅರವಿಂದ್ ಬೆಲ್ಲದ್ ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಶಾಸಕರಿಗೂ ಸಚಿವರಾಗಬೇಕು ಅಂತಾ, ಸಚಿವರಿಗೆ ಸಿಎಂ ಆಗಬೇಕು ಅಂತಾ ಆಸೆ ಇರುತ್ತದೆ. ಆದರೆ ನಾನು ವರಿಷ್ಠರ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಎಂದರು.

    ಮಾಧ್ಯಮಗಳಲ್ಲಿ ಸಂಪುಟ ವಿಸ್ತರಣೆ ಇದೆ ಎಂದು ಬಂದಿರುವುದನ್ನು ನೋಡಿದ್ದೇನೆ. ಆದರೆ ಸಂಪುಟ ವಿಸ್ತರಣೆ ವಿಷಯದ ಬಗ್ಗೆ ನನಗೆ ಗೊತ್ತಿಲ್ಲ. ನಮ್ಮ ಹೈಕಮಾಂಡ್ ತಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ. ಸಚಿವ ಸ್ಥಾನವನ್ನು ಕೇಳುವ ಅವಶ್ಯಕತೆ ಇಲ್ಲ. ಪಕ್ಷದ ನಾಯಕರಿಗೆ ಯಾವಾಗ ಯಾರಿಗೆ ಯಾವ ಜವಾಬ್ದಾರಿಯನ್ನು ನೀಡಬೇಕು ಎನ್ನುವುದು ಗೊತ್ತಿದೆ ಎಂದು ಹೇಳಿದರು. ಇದನ್ನೂ ಓದಿ:  ಖ್ಯಾತ ಫೋಟೋಗ್ರಾಫರ್ ತೆಗೆದಿರುವ ಸೂರ್ಯನ ಒಂದು ಫೋಟೋಗೆ 3766ರೂ.!

    ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರಬುದ್ಧ ರಾಜಕಾರಣಿ. ಅವರು ಹೆಚ್ಚು ಅಭಿವೃದ್ಧಿಯ ಕೆಲಸಗಳನ್ನು ಮಾಡುತ್ತಿದ್ದಾರೆ. ಅವರ ತೀರ್ಮಾನಕ್ಕೆ ನಾನು ಬದ್ಧನಾಗಿರುವೆ ಎಂದು ತಿಳಿಸಿದರು. ಹಿರಿಯರನ್ನು ಕೈಬಿಟ್ಟು ಕಿರಿಯರಿಗೆ ಸ್ಥಾನ ನೀಡಬೇಕು ಎನ್ನುವ ರೇಣುಕಾಚಾರ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಇದನ್ನೂ ಓದಿ: ಬಿಜೆಪಿ ಸರ್ಕಾರಕ್ಕೆ ರೆಡ್ ಅಲರ್ಟ್: ಅಖಿಲೇಶ್ ಯಾದವ್

  • 7 ಜನರ ಖಾತೆ ಬದಲಾವಣೆ – ಹಠ ಬಿಡದೆ ಖಾತೆ ಬದಲಿಸಿಕೊಂಡ ಸಚಿವರು

    7 ಜನರ ಖಾತೆ ಬದಲಾವಣೆ – ಹಠ ಬಿಡದೆ ಖಾತೆ ಬದಲಿಸಿಕೊಂಡ ಸಚಿವರು

    ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಬಳಿಕ ಖಾತೆ ಹಂಚಿಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ತಲೆನೋವಾಗಿ ಪರಿಣಮಿಸಿತ್ತು. ಕಸರತ್ತು ಮಾಡಿ ಹಂಚಿಕೆಯನ್ನು ಸಹ ಮಾಡಿದ್ದರು. ಆದರೆ ಬಳಿಕ ಕೆಲ ಸಚಿವರು ಅಸಮಾಧಾನ ಹೊರ ಹಾಕಿ ಸಚಿವ ಸಂಪುಟ ಸಭೆಯನ್ನೇ ಬಹಿಷ್ಕರಿಸಿದ್ದರು. ಹೀಗಾಗಿ ಇದೀಗ 7 ಜನರ ಖಾತೆ ಬದಲಾವಣೆ ಮಾಡಲಾಗಿದೆ.

    ಪರಿಷ್ಕೃತ ಖಾತೆ ಹಂಚಿಕೆ ಪಟ್ಟಿಗೆ ರಾಜ್ಯಪಾಲರು ಅಂಕಿತ ಹಾಕಿದ್ದು, ರಾಜ್ಯ ಗೆಜೆಟ್ ನಲ್ಲಿ ಪ್ರಕಟಿಸಲಾಗಿದೆ. ಮಾಧುಸ್ವಾಮಿಯವರಿಗೆ ವೈದ್ಯಕೀಯ ಶಿಕ್ಷಣದ ಜೊತೆ ಹಜ್ ಮತ್ತು ವಕ್ಫ್ ನೀಡಲಾಗಿದೆ. ಅರವಿಂದ ಲಿಂಬಾವಳಿಯವರಿಗೆ ಅರಣ್ಯ ಖಾತೆ ಜೊತೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಎಂಟಿಬಿ ನಾಗರಾಜ್ ಅವರಿಗೆ ಪೌರಾಡಳಿತ, ಸಕ್ಕರೆ, ಆರ್.ಶಂಕರ್‍ಗೆ ತೋಟಗಾರಿಕೆ, ರೇಷ್ಮೆ, ಗೋಪಾಲಯ್ಯನವರಿಗೆ ಅಬಕಾರಿ ಹಾಗೂ ನಾರಾಯಣಗೌಡ ಅವರಿಗೆ ಯುವಜನ ಸೇವೆ ಮತ್ತು ಕ್ರೀಡೆ, ಯೋಜನೆ ಮತ್ತು ಸಾಂಖಿಕ ಇಲಾಖೆಯ ಜವಾಬ್ದಾರಿಯನ್ನು ವಹಿಸಲಾಗಿದೆ.

    ಸಚಿವರ ಒತ್ತಡಕ್ಕೆ ಮಣಿದು ಸಿಎಂ ಯಡಿಯೂರಪ್ಪ ಮತ್ತೆ ಖಾತೆ ಬದಲಾವಣೆ ಮಾಡಿದ್ದಾರೆ. ಆದರೆ ಡಾ.ಸುಧಾಕರ್ ಗೆ ವೈದ್ಯಕೀಯ ಶಿಕ್ಷಣ ಸಿಕ್ಕೇ ಇಲ್ಲ. ಅರವಿಂದ ಲಿಂಬಾವಳಿಯವರಿಗೆ ಸಹ ಪರಿಸರ ಸಿಗಲಿಲ್ಲ. ಅಲ್ಲದೆ ಮಾಧುಸ್ವಾಮಿಯವರಿಗೆ ವೈದ್ಯಕೀಯ ಶಿಕ್ಷಣವನ್ನೇ ಉಳಿಸಲಾಗಿದೆ.

    ಹಿಂದೆ ಯಾವ ಖಾತೆ ನೀಡಲಾಗಿತ್ತು?
    ಬಸವರಾಜ ಬೊಮ್ಮಾಯಿಯವರಿಗೆ ಗೃಹ ಜೊತೆಗೆ ಕಾನೂನು ಸಂಸದೀಯ, ಮಾಧುಸ್ವಾಮಿಯವರಿಗೆ ವೈದ್ಯಕೀಯ ಶಿಕ್ಷಣ, ಕನ್ನಡ ಮತ್ತು ಸಂಸ್ಕೃತಿ, ಮುರುಗೇಶ ನಿರಾಣಿಗೆ ಗಣಿಗಾರಿಕೆ, ಉಮೇಶ್ ಕತ್ತಿಗೆ ಆಹಾರ ಖಾತೆ, ಡಾ.ಕೆ ಸುಧಾಕರ್‍ಗೆ ಆರೋಗ್ಯ ಇಲಾಖೆ, ಎಂಟಿಬಿ ನಾಗರಾಜ್‍ಗೆ ಅಬಕಾರಿ, ಗೋಪಾಲಯ್ಯಗೆ ತೋಟಗಾರಿಕೆ ಮತ್ತು ಸಕ್ಕರೆ, ನಾರಾಯಣ ಗೌಡಗೆ ಯುವಜನ ಸೇವೆ ಮತ್ತು ಕ್ರೀಡೆ, ಹಜ್ ಮತ್ತು ವಕ್ಫ್, ಸಿ.ಪಿ.ಯೋಗೇಶ್ವರ್‍ಗೆ ಸಣ್ಣ ನೀರಾವರಿ, ಅರವಿಂದ ಲಿಂಬಾವಳಿಗೆ ಅರಣ್ಯ, ಆನಂದ್ ಸಿಂಗ್‍ಗೆ ಪ್ರವಾಸೋದ್ಯಮ, ಪರಿಸರ, ಸಿ.ಸಿ.ಪಾಟೀಲ್‍ಗೆ ಸಣ್ಣ ಕೈಗಾರಿಕೆ ಮತ್ತು ವಾರ್ತಾ ಇಲಾಖೆ, ಕೋಟ ಶ್ರೀನಿವಾಸ ಪೂಜಾರಿಗೆ ಮುಜರಾಯಿ ಜೊತೆಗೆ ಹಿಂದುಳಿದ ವರ್ಗ, ಎಸ್.ಅಂಗಾರಗೆ ಮೀನುಗಾರಿಕೆ, ಬಂದರು, ಆರ್.ಶಂಕರ್‍ಗೆ ಪೌರಾಡಳಿತ, ರೇಷ್ಮೆ, ಪ್ರಭು ಚೌಹಾಣ್‍ಗೆ ಪಶುಸಂಗೋಪನೆ ಖಾತೆಯನ್ನು ನೀಡಲಾಗಿತ್ತು.

  • ಸಿಡಿ ಬಗ್ಗೆ ಗೊತ್ತಿಲ್ಲ, ರಾಜಕಾರಣದ ವೈಯಕ್ತಿಕ ಜೀವನದಲ್ಲಿ ಕಹಿ ಘಟನೆಗಳು ಇರ್ತವೆ: ಜಾರಕಿಹೊಳಿ

    ಸಿಡಿ ಬಗ್ಗೆ ಗೊತ್ತಿಲ್ಲ, ರಾಜಕಾರಣದ ವೈಯಕ್ತಿಕ ಜೀವನದಲ್ಲಿ ಕಹಿ ಘಟನೆಗಳು ಇರ್ತವೆ: ಜಾರಕಿಹೊಳಿ

    ಬೆಳಗಾವಿ: ಸಿಡಿ ಬಗ್ಗೆ ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ನಡೆಯುತ್ತಿದ್ದು, ಈ ಬಗ್ಗೆ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸಹ ಪ್ರತಿಕ್ರಿಯಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ಸಚಿವರಿಗೆ ಶುಭಾಶಯ ಕೋರಿದ್ದಾರೆ. ಸಂಪುಟ ವಿಸ್ತರಣೆಯಲ್ಲಿ ಸಿಎಂ ತೆಗೆದುಕೊಂಡ ನಿರ್ಣಯಕ್ಕೆ ಬೆನ್ನಲುಬಾಗಿ ನಿಲ್ಲುತ್ತೇವೆ. ದೊಡ್ಡ ಪಕ್ಷದಲ್ಲಿ ಅಸಮಾಧಾನ ಸಹಜ ಅದನ್ನ ಪಕ್ಷದವರು ಸರಿ ಪಡಿಸುತ್ತಾರೆ ಎಂದರು. ಇದೇ ವೇಳೆ ಸಿಡಿ ಬಾಂಬ್ ಕುರಿತು ಮಾತನಾಡಿದ ಅವರು, ಸಿಡಿ ಇದೆಯೋ, ಇಲ್ಲವೋ ಗೊತ್ತಿಲ್ಲ. ಈ ರೀತಿಯ ಸಿಡಿಗಳು ಬರ್ತವೆ ಹೋಗುತ್ತವೆ. ರಾಜಕಾರಣದಲ್ಲಿ, ವೈಯಕ್ತಿಕ ಜೀವನದಲ್ಲಿ ಈ ರೀತಿ ಮಾತನಾಡಬಾರದು. ಏನು ಸಿಡಿ ಇವೆ ಗೊತ್ತಿಲ್ಲ, ರಾಜಕಾರಣದ ಅವರ ವೈಯಕ್ತಿಕ ಜೀವನದಲ್ಲಿ ಕಹಿ ಘಟನೆಗಳು ಇರುತ್ತವೆ. ಅದರ ಬಗ್ಗೆ ಮಾತಾಡಬಾರದು ಎಂದರು.

    ಕಷ್ಟದಲ್ಲಿರುವ ರಾಜಕಾರಣಿಗಳಿಗೆ ನೈತಿಕ ಸ್ಥೈರ್ಯ ನೀಡಬೇಕು. ಅವರನ್ನು ಡ್ಯಾಮೇಜ್ ಮಾಡಬಾರದು, ಬರೀ ರಾಜಕಾರಣ ಮಾಡಬೇಕು. ಯಡಿಯೂರಪ್ಪನವರು ಬ್ಲ್ಯಾಕ್ ಗೆ ಹೆದರುವ ರಾಜಕಾರಣಿ ಅಲ್ಲ. ತಮ್ಮ ಜೀವನದುದ್ದಕ್ಕೂ ಹೋರಾಟ ಮಾಡಿಕೊಂಡು ಬಂದ ಮನುಷ್ಯ. ಯಾವ ಸಿಡಿ ಇಲ್ಲ, ಎನೂ ಇಲ್ಲ ಎಂದು ತಿಳಿಸಿದರು.

    ಅಸಮಾಧಾನಿತ ಕೆಲ ಶಾಸಕರು ಗೃಹ ಸಚಿವ ಅಮಿತ್ ಶಾಗೆ ದೂರು ನೀಡುವ ಕುರಿತು ಪ್ರತಿಕ್ರಿಯಿಸಿದ ಅವರು, ಸೋತವರಿಗೆ ಕೊಡ್ತಾರೆ, ಬಿಡ್ತಾರೆ ಗೊತ್ತಿಲ್ಲ. ಯೋಗೇಶ್ವರ್ ಗೆ ಅಂದು ನಮ್ಮನ್ನ ಒಗ್ಗೂಡಿಸುವುದು ಯಾಕೆ ಬೇಕಿತ್ತು, ಕಷ್ಟಪಟ್ಟು ಆರೋಗ್ಯ ಹಾಳು ಮಾಡಿಕೊಂಡು, ಸಾಲ ಮಾಡಿಕೊಂಡು ಮಾಡುವುದು ಯಾಕೆ ಬೇಕಿತ್ತು? ಬಿಜೆಪಿ ಸರ್ಕಾರ ರಚಿಸಲು ತಮ್ಮ ಮನೆಯ ಮೇಲೆ 9 ಕೋಟಿ ರೂ. ಸಾಲ ಮಾಡಿಕೊಂಡಿದ್ದಾರೆ. ಎಂಟಿಬಿ ನಾಗರಾಜ್ ಕಡೆಯಿಂದ ಸಿ.ಪಿ.ಯೋಗೇಶ್ವರ್ ಅಂದು ಸಾಲ ತಂದಿದ್ದರು. ಈಗ ಮಾತನಾಡುವವರು ಆಗ ಎಲ್ಲಿದ್ದರು ಎಂದು ರಮೇಶ್ ಅಸಮಾಧಾನಿತ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    ಯೋಗೇಶ್ವರ್ ಗೆ ಸಚಿವ ಸ್ಥಾನ ಸಿಕ್ಕಿರುವುದು ಸರಿಯಾಗಿದೆ. ಈ ಸರ್ಕಾರದ ರಚನೆಯಲ್ಲಿ ಯೋಗೇಶ್ವರ್ ಪಾತ್ರ ಬಹಳ ದೊಡ್ಡದಿದೆ ಎಂದು ಯೋಗೇಶ್ವರ್ ಪರ ರಮೇಶ್ ಬ್ಯಾಟಿಂಗ್ ಮಾಡಿದರು. ಅಲ್ಲದೆ ಭ್ರಷ್ಟರಿಗೆ ರಮೇಶ್ ಸಾಥ್ ಕೊಡುತ್ತಿದ್ದಾರೆ ಎಂಬ ವಿಶ್ವನಾಥ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ವಿಶ್ವನಾಥ್ ಮಾತಾಡಿರುವುದು ನಮಗೆ ಆಶೀರ್ವಾದ, ಅದರ ಬಗ್ಗೆ ನೋ ಕಮೆಂಟ್ಸ್ ಎಂದಿದ್ದಾರೆ.

    ನಾಯಕತ್ವ ಬದಲಾವಣೆ ಆದರೆ ನಿಮ್ಮ ನಿಲುವೇನು ಎಂಬುದರ ಕುರಿತು ಉತ್ತರಿಸಿದ ಅವರು, ನಾವು ಯಡಿಯೂರಪ್ಪ ಪರವಾಗಿ ಇರುತ್ತೇವೆ. ಹಾದಿ ಬೀದಿಯಲ್ಲಿ ಮಾತನಾಡಲು ಆಗಲ್ಲ, ಎಲ್ಲಿ ಮಾತಾಡಬೇಕು ಅಲ್ಲಿ ಮಾತನಾಡುತ್ತೇವೆ. ಯೋಗೇಶ್ವರ್ ಮುಖ್ಯವಾಗಿದ್ದವರು ಎಂದಿದ್ದಾರೆ.

    ಶಾಸಕ ಮುನಿರತ್ನ ನೂರಕ್ಕೆ ನೂರರಷ್ಟು ಪ್ರಮಾಣ ವಚನ ಸ್ವೀಕರಿಸುತ್ತಾರೆ ಅಂದುಕೊಂಡದ್ದೆ. ಮುನಿರತ್ನ ಈಗ ನರ್ವಸ್ ಆಗಬಾರದು ಮುಂದಿನ ದಿನಗಳಲ್ಲಿ ಹೈಕಮಾಂಡ್ ಜತೆಗೆ ಮಾತನಾಡಿ ಮಂತ್ರಿ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಅವರ ಪರವಾಗಿ ಪ್ರಯತ್ನ ಮಾಡುತ್ತೇವೆ. ಮುನಿರತ್ನ ಜೊತೆ ಫೋನ್ ಮಾಡಿ ಮಾತನಾಡಿದ್ದೇನೆ. ನಾನು ಬಾಂಬ್ ಟೀಮ್ ನ ಕ್ಯಾಪ್ಟನ್ ಅಲ್ಲ, ಕೊನೆಯ ಹದಿನೇಳನೆಯವನು. ಮುನಿರತ್ನ ಮತ್ತು ನಾಗೇಶ್ ಡ್ರಾಪ್ ಆಗ್ತಾರೆ ಎಂದು ನನಗೆ ಕಲ್ಪನೆ ಇರಲಿಲ್ಲ ಎಂದು ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

    ಸಿ.ಪಿ.ಯೋಗೇಶ್ವರ್ ಹದಿನೈದು ದಿನ ಕುಟುಂಬ ಬಿಟ್ಟು ನಮ್ಮ ಜತೆಗಿದ್ದರು. 2023ರ ಚುನಾವಣೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಗೆದ್ದು ಆಗ ಅವರ ಹಕ್ಕು ಚಲಾಯಿಸಿ ಸರಿಯಾಗಿ ಸಚಿವರಾಗುವುದು ಒಳ್ಳೆಯದು. ಈಗಿನ ಸಂದರ್ಭಗಳನ್ನ ನೋಡಿ ತಿಳಿದುಕೊಳ್ಳಬೇಕು ಎಂದು ಅಸಮಾಧಾನ ಶಾಸಕರಿಗೆ ಟಾಂಗ್ ನೀಡಿದ್ದಾರೆ.

    ಜಿ.ಪಂ, ತಾ.ಪಂ ಚುನಾವಣೆ ಆದ ಬಳಿಕ ಸಂಪುಟ ವಿಸ್ತರಣೆ ಆಗಬಹುದು. ಹೈಕಮಾಂಡ್ ಇದರ ಬಗ್ಗೆ ನಿರ್ಣಯ ತೆಗೆದುಕೊಳ್ಳುತ್ತದೆ. ಬೆಳಗಾವಿ, ಬೆಂಗಳೂರಿಗೆ ಸರ್ಕಾರ ಸೀಮಿತವಾಗಿದೆ ಎಂಬ ರೇಣುಕಾಚಾರ್ಯ ಹೇಳಿಕೆ ವಿಚಾರದ ಕುರಿತು ಮಾತನಾಡಿ, ರೇಣುಕಾಚಾರ್ಯ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ. ಇಟ್ಟುಕೊಂಡು ಕೂರುವ ಬದಲು ಬಿಡುಗಡೆ ಮಾಡಿದರೆ ಒಳ್ಳೆಯದು. ಸಿಎಂ ಯಡಿಯೂರಪ್ಪ ಮಾತು ಕೊಟ್ಟಂತೆ ನಡೆಯುತ್ತಾರೆ ಅವರ ಬೆನ್ನಿಗೆ ನಾವು ನಿಲ್ಲುತ್ತೇವೆ.

  • ಸಿಡಿ ತೋರಿಸಿ ಬ್ಲ್ಯಾಕ್‍ಮೇಲ್, ಕ್ರಿಮಿನಲ್ ಕೇಸ್ ಹಾಕುವ ಧೈರ್ಯ ಸಿಎಂಗೆ ಇದೆಯೇ- ಸಿದ್ದು ಪ್ರಶ್ನೆ

    ಸಿಡಿ ತೋರಿಸಿ ಬ್ಲ್ಯಾಕ್‍ಮೇಲ್, ಕ್ರಿಮಿನಲ್ ಕೇಸ್ ಹಾಕುವ ಧೈರ್ಯ ಸಿಎಂಗೆ ಇದೆಯೇ- ಸಿದ್ದು ಪ್ರಶ್ನೆ

    ಬೆಂಗಳೂರು: ಸಿಡಿ ತೋರಿಸಿ ಮುಖ್ಯಮಂತ್ರಿಗಳಿಗೆ ಬ್ಲ್ಯಾಕ್‍ಮೇಲ್ ಮಾಡಿ ಸಚಿವ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ ಎಂಬ ಆರೋಪದ ಕುರಿತು ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಇದೀಗ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಹ ಹರಿಹಾಯ್ದಿದ್ದಾರೆ.

    ಸರಣಿ ಟ್ವೀಟ್ ಮಾಡಿರುವ ಅವರು, ಸಿಡಿ ತೋರಿಸಿ ಸಿಎಂ ಬೆದರಿಸಿ, ಕೆಲವರು ಮಂತ್ರಿ ಹುದ್ದೆ ಪಡೆದಿದ್ದಾರೆ ಎಂದು ಬಿಜೆಪಿ ಶಾಸಕರೇ ಆರೋಪಿಸುತ್ತಿದ್ದಾರೆ. ಬ್ಲಾಕ್‍ಮೇಲ್ ಮಾಡಿದವರು ಯಾರೇ ಆಗಿರಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಧೈರ್ಯ ಮುಖ್ಯಮಂತ್ರಿಗಳಿಗಿದೆಯೇ ಎಂದು ಪ್ರಶ್ನಿಸಿದ್ದಾರೆ.

    ಅಲ್ಲದೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕುಟುಂಬ ರಾಜಕಾರಣದ ಬಗ್ಗೆ ಬಿಜೆಪಿ ನಾಯಕರಿಗೆ ತಡವಾಗಿ ಜ್ಞಾನೋದಯವಾಗಿದೆ. ಯಡಿಯೂರಪ್ಪ ನಾಮಕಾವಸ್ತೆ ಮುಖ್ಯಮಂತ್ರಿ, ನಿಜವಾದ ಅಧಿಕಾರ ಚಲಾಯಿಸುತ್ತಿರುವುದು ಅವರ ಮಗ ಎಂದು ನಾನು ಬಹಳ ಹಿಂದೆಯೇ ಹೇಳಿದ್ದೆ. ಕೆಲವರಿಗೆ ಈಗೀಗ ಸತ್ಯ ಗೊತ್ತಾಗ್ತಿದೆ ಎಂದು ಮತ್ತೊಂದು ಟ್ವೀಟ್‍ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಸಿಎಂ ಯಡಿಯೂರಪ್ಪ ಅವರ ಕುರ್ಚಿ ಗಟ್ಟಿಯಾಗಿದ್ದರೆ ಸಂಪುಟ ವಿಸ್ತರಣೆಗಾಗಿ ಹೈಕಮಾಂಡ್ ಬಳಿ ಗೋಗರೆಯುವ, ಕೈಕಾಲು ಹಿಡಿಯುವ ಅಗತ್ಯವಿರುತ್ತಿರಲಿಲ್ಲ. ಕೆಲವರಿಗೆ ಮಂತ್ರಿ ಸ್ಥಾನ ಕೊಡಲು ಕಾನೂನಿನ ತೊಡಕಿದೆ ಅಂತ ಗೊತ್ತಿದ್ರೂ ಸುಳ್ಳು ವಾಗ್ದಾನ ನೀಡಿ ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ. ಹೀಗಾಗಿ ಬಿಜೆಪಿ ಸೇರಿದ ಕೆಲವರು ಬಾಯಿ ಬಡ್ಕೊತಿರೋದು ಎಂದು ಆರೋಪಿಸಿದ್ದಾರೆ.

  • ನಾಳೆ ದೆಹಲಿಗೆ ತೆರಳುವ ಮುನ್ನ ರೇಣುಕಾಚಾರ್ಯ ಮೆಗಾ ಬಾಂಬ್!

    ನಾಳೆ ದೆಹಲಿಗೆ ತೆರಳುವ ಮುನ್ನ ರೇಣುಕಾಚಾರ್ಯ ಮೆಗಾ ಬಾಂಬ್!

    ಬೆಂಗಳೂರು: ಸಚಿವ ಸ್ಥಾನ ತಪ್ಪಿದ್ದಕ್ಕೆ ಶಾಸಕ ರೇಣುಕಾಚಾರ್ಯ ತೀವ್ರ ಬೇಸರಗೊಂಡಿದ್ದು, ವರಿಷ್ಠರ ಭೇಟಿ ಮಾಡಲು ನಾಳೆ ಬೆಳಗ್ಗೆ ದೆಹಲಿಗೆ ತೆರಳುತ್ತಿದ್ದಾರೆ. ಇದಕ್ಕೂ ಮುನ್ನ ಮೆಗಾ ಬಾಂಬ್ ಸ್ಫೋಟಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ನಾಳೆ ಬೆಳಗ್ಗೆ 8.20ರ ಫ್ಲೈಟ್‍ನಲ್ಲಿ ರೇಣುಕಾಚಾರ್ಯ ದೆಹಲಿಗೆ ತೆರಳಲಿದ್ದಾರೆ. ಇದೇ ವೇಳೆ ನೂತನ ಸಚಿವರೊಬ್ಬರ ವಿರುದ್ಧ ಮೆಗಾ ಬಾಂಬ್ ಸಿಡಿಸಲಿದ್ದಾರೆ ಎನ್ನಲಾಗಿದೆ. ಹಲವರು ಬ್ಲ್ಯಾಕ್‍ಮೇಲ್ ಮಾಡಿ ಸಚಿವ ಸ್ಥಾನ ಪಡೆದಿದ್ದಾರೆ ಎಂದು ಆರೋಪಿಸಿರುವ ಅವರು, ಈ ಕುರಿತು ಹೈಕಮಾಂಡ್ ಗೆ ದೂರು ನೀಡಲು ದೆಹಲಿ ಯಾತ್ರೆ ನಡೆಸುತ್ತಿದ್ದಾರೆ. ರೇಣುಕಾಚಾರ್ಯ ಅವರ ಬಾಂಬ್ ಕುರಿತು ಭಾರೀ ಚರ್ಚೆ ನಡೆಯುತ್ತಿದ್ದು, ನಾಳೆ ಬಿಜೆಪಿಯಲ್ಲಿ ಆ ಬಾಂಬ್ ಅಲ್ಲೋಲ್ಲ ಕಲ್ಲೋಲ ಸೃಷ್ಟಿಸುತ್ತಾ ಎಂಬ ಪ್ರಶ್ನೆ ಇದೀಗ ಎದ್ದಿದೆ.

    ಸೋತವರಿಗೆ ಬ್ಲ್ಯಾಕ್ ಮೇಲ್ ಮಾಡಿದವರಿಗೆ ಸಚಿವ ಸ್ಥಾನ ನೀಡಿರುವುದರಿಂದ ಪಕ್ಷದ ವರಿಷ್ಠರ ಜೊತೆ ಮತ್ತೆ ಕೂಲಂಕುಷವಾಗಿ ಚಚಿ೯ಸುತ್ತೇನೆ.

    ಜಾತಿ…

    Posted by MP Renukacharya on Wednesday, January 13, 2021

    ಈ ಕುರಿತು ಫೇಸ್ಬುಕ್‍ನಲ್ಲಿ ಸಹ ಬರೆದುಕೊಂಡಿರುವ ಅವರು, ಸಚಿವ ಸ್ಥಾನ ಸಿಗಲಿಲ್ಲವೆಂದು ಸಹಜವಾಗಿ ಅಘಾತವಾಗಿದೆ. ನಾಯಕತ್ವ ಮತ್ತು ಪಕ್ಷದ ಮೇಲೆ ಹೆಚ್ಚು ವಿಶ್ವಾಸವಿಟ್ಟಿದ್ದೇನೆ. ಮುಂದೆಯೂ ಇಡುತ್ತೇನೆ. ನನ್ನ ಹೋರಾಟ ಪಕ್ಷ ಮತ್ತು ನಾಯಕತ್ವದ ವಿರುದ್ಧವಲ್ಲ. ಈಗ ಸರ್ಕಾರದಲ್ಲಾಗಿರುವ ತಪ್ಪು ವ್ಯವಸ್ಥೆಯ ವಿರುದ್ಧ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಗೆದ್ದ ಶಾಸಕರಿಗೆ ಮತ್ತು ಮತದಾನ ಮಾಡಿದ ಮತದಾರರಿಗೆ ಮಾಡಿದ ಅವಮಾನವಿದು. ಕರ್ನಾಟಕ ಸರ್ಕಾರ ಕೇವಲ 2 ಜಿಲ್ಲೆಗೆ ಮಾತ್ರ ಸೀಮಿತವಾಗಬಾರದು. ನಾಯಕತ್ವ ಮತ್ತು ಸಂಘಟನೆ ನನಗೆ ಎಲ್ಲಾ ಸ್ಥಾನ-ಮಾನ ನೀಡಿದೆ ಎಂದಿದ್ದಾರೆ.

    ಸಚಿವ ಸ್ಥಾನ ಸಿಗಲಿಲ್ಲವೆಂದು ಸಹಜವಾಗಿ ಅಘಾತವಾಗಿದೆ. ನಾಯಕತ್ವ ಮತ್ತು ಪಕ್ಷದ ಮೇಲೆ ಹೆಚ್ಚು ವಿಶ್ವಾಸವಿಟ್ಟಿದ್ದಿನಿ ಮುಂದೆಯು…

    Posted by MP Renukacharya on Wednesday, January 13, 2021

    ಸೋತವರಿಗೆ, ಬ್ಲ್ಯಾಕ್ ಮೇಲ್ ಮಾಡಿದವರಿಗೆ ಸಚಿವ ಸ್ಥಾನ ನೀಡಿರುವುದರಿಂದ ಪಕ್ಷದ ವರಿಷ್ಠರ ಜೊತೆ ಮತ್ತೆ ಕೂಲಂಕುಷವಾಗಿ ಚರ್ಚಿಸುತ್ತೇನೆ. ಜಾತಿ ರಾಜಕೀಯ ಮಾಡಿ ನನಗೆ ಅಭ್ಯಾಸವಿಲ್ಲ. ಸೋತವರಿಗೆ ಸಚಿವ ಸ್ಥಾನ ನೀಡಿರುವುದು ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ ಸರ್ವ ಜನಾಂಗದ ಮತದಾರರಿಗೆ ಮಾಡಿದ ಅಪಮಾನ. ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ ಅಭಿವೃದ್ಧಿಯೇ ನನ್ನ ಧ್ಯೇಯ ಎಂದು ಬರೆದುಕೊಂಡಿದ್ದಾರೆ.

  • ಅಧಿದೇವತೆ ಶಾಪ, ನ್ಯಾಯ ದೇವತೆ ತೀರ್ಪಿನಿಂದ ವಿಶ್ವನಾಥ್‍ಗೆ ಸಚಿವ ಸ್ಥಾನ ಸಿಕ್ಕಿಲ್ಲ: ಸಾರಾ ಮಹೇಶ್

    ಅಧಿದೇವತೆ ಶಾಪ, ನ್ಯಾಯ ದೇವತೆ ತೀರ್ಪಿನಿಂದ ವಿಶ್ವನಾಥ್‍ಗೆ ಸಚಿವ ಸ್ಥಾನ ಸಿಕ್ಕಿಲ್ಲ: ಸಾರಾ ಮಹೇಶ್

    – ಬಿಎಸ್‍ವೈ ಟೀಕಿಸುವ ಸಣ್ಣ ನೈತಿಕತೆಯೂ ಅವರಿಗಿಲ್ಲ

    ಚಾಮರಾಜನಗರ: ಅಧಿದೇವತೆ ಶಾಪ, ನ್ಯಾಯ ದೇವತೆ ತೀರ್ಪಿನಿಂದ ವಿಶ್ವನಾಥ್ ಗೆ ಸಚಿವ ಸ್ಥಾನ ಸಿಕ್ಕಿಲ್ಲ. ಸಿಎಂ ಯಡಿಯೂರಪ್ಪ ಟೀಕಿಸುವ ಸಣ್ಣ ನೈತಿಕತೆಯೂ ಇವರಿಗಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೆಸರು ಹೇಳದೆ ಶಾಸಕ ಸಾ.ರಾ.ಮಹೇಶ್ ವಾಗ್ದಾಳಿ ನಡೆಸಿದರು.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಂವಿಧಾನಿಕ ಸ್ಥಾನ ಹೊಂದಬಾರದು ಎಂಬ ಹೈಕೋರ್ಟ್ ತೀರ್ಪಿದ್ದರೂ ನೀವು ಪರಿಷತ್ ಸದಸ್ಯರಾಗಿರೋದು ತಪ್ಪು. ವಿಶ್ವನಾಥ್ ಅವರನ್ನು ನಲವತ್ತು ವರ್ಷ ಕಾಂಗ್ರೆಸ್ ಮದ್ವೆಯಾಗಿತ್ತು. ನಾವು ಕೂಡುವಳಿ ಮಾಡ್ಕೊಂಡಿದ್ವಿ, ನೀವು ದಿನದ ವ್ಯಾಪಾರಕ್ಕೆ ತೆಗೆದುಕೊಂಡಿದ್ದೀರಿ, ನಿಮ್ಮ ಕತೆ ಏನಾಗುತ್ತೋ ಎಂದು ಆಗಲೇ ಬಿಜೆಪಿಗೆ ಎಚ್ಚರಿಸಿದ್ದೆ ಎಂದು ಪರೋಕ್ಷವಾಗಿ ವಿಶ್ವನಾಥ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    ಈಗ ವಿಶ್ವನಾಥ್ ಕೋಗಿಲೆ ಅಲ್ಲ ಕಾಗೆ ಅನ್ನೋದು ರಾಜ್ಯದ ಜನತೆಗೆ ಗೊತ್ತಾಗಿದೆ. ರಾಜಕೀಯವಾಗಿ ಮೂಲೆಗುಂಪಾಗಿದ್ದ ವ್ಯಕ್ತಿಯನ್ನು ತನು, ಮನ, ಧನ ನೀಡಿ ಆಶ್ರಯ ಕೊಟ್ಟ ಜೆಡಿಎಸ್ ಗೆ ದ್ರೋಹ ಮಾಡಿದ್ದೀರಿ. ಜೆಡಿಎಸ್ ಕಾರ್ಯಕರ್ತರ ನಿಟ್ಟುಸಿರು ನಿಮ್ಮನ್ನ ಸುಮ್ಮನೆ ಬಿಡುತ್ತಾ ಎಂದು ಪ್ರಶ್ನಿಸಿದರು.

    ಯಡಿಯೂರಪ್ಪ ಮಾತಿಗೆ ತಪ್ಪಿದವರೆಂದು ಹೇಳಲು ಇವರಿಗೆ ನೈತಿಕತೆ ಇಲ್ಲ. ಬಿಜೆಪಿಗೆ ಹೋಗಿದ್ದ ಹದಿನೇಳು ಜನರಲ್ಲಿ ಹದಿನಾರು ಜನರಿಗೆ ಯಡಿಯೂರಪ್ಪ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ. ಹೈಕೋರ್ಟ್ ತೀರ್ಪಿಗಿಂತ ಯಡಿಯೂರಪ್ಪ ದೊಡ್ಡವರಲ್ಲ. ಅಧಿಕಾರ ಇಲ್ಲದೇ ನಾನೂ ಬಿಜೆಪಿಯಲ್ಲಿ ಬಿಎಸ್‍ವೈ ಅವರೊಂದಿಗೆ ಬಾವುಟ ಕಟ್ಟಿದ್ದೇನೆ. ಅಲ್ಲೇನು ನಡೆಯುತ್ತೆ ನನಗೂ ಗೊತ್ತು ಎಂದು ಹೇಳಿದರು.

    ನನ್ನ ಉಸಿರು ಇರೋ ತನಕ ಅವರ ಹೆಸರು ಹೇಳಲ್ಲ, ಅದಕ್ಕೇ ಪರೋಕ್ಷವಾಗಿ ಟೀಕೆ ಮಾಡಿದ್ದೇನೆ. ದೇವೇಗೌಡರು ದೇವರಾದರೆ, ಕುಮಾರಸ್ವಾಮಿ ರಾಕ್ಷಸರಾಗಿ ಬಿಟ್ಟರೆ ಎಂದು ಪ್ರಶ್ನಿಸಿದ ಅವರು, ಹುಣಸೂರು ಉಪ ಚುನಾವಣೆಯಲ್ಲಿ ಬಿಜೆಪಿ ದುಡ್ಡು ಕೊಟ್ಟಿರಲಿಲ್ಲವಾ, ವಿಶ್ವನಾಥ್ ಒಬ್ಬ ದುರಂತ ನಾಯಕ ಎಂದು ಕುಟುಕಿದರು.

  • ಸಿಡಿ ತೋರಿಸಿ ಬ್ಲ್ಯಾಕ್‍ಮೇಲ್ ಮಾಡಿದವರಿಗೆ ಸಚಿವ ಸ್ಥಾನ- ಯತ್ನಾಳ್ ಹೊಸ ಬಾಂಬ್

    ಸಿಡಿ ತೋರಿಸಿ ಬ್ಲ್ಯಾಕ್‍ಮೇಲ್ ಮಾಡಿದವರಿಗೆ ಸಚಿವ ಸ್ಥಾನ- ಯತ್ನಾಳ್ ಹೊಸ ಬಾಂಬ್

    ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಹೊಸ ಬಾಂಬ್ ಸಿಡಿಸಿದ್ದು, ಸಿಡಿ ತೋರಿಸಿ ಬ್ಲ್ಯಾಕ್‍ಮೇಲ್ ಮಾಡಿದವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

    ಸಚಿವ ಸಂಪುಟ ವಿಸ್ತರಣೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿರಿತನ, ಪ್ರಾಮಾಣಿಕತನವನ್ನು ಸಿಎಂ ಪರಿಗಣಿಸಲಿಲ್ಲ. ಕಳೆದ ಮೂರು ತಿಂಗಳಿಂದ ಈ ಮೂವರು ಸಿಡಿ ಇಟ್ಟುಕೊಂಡು ಸಿಎಂ ಯಡ್ಡಿಯೂರಪ್ಪನವರನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು. ಹೀಗಾಗಿ ಸಿಡಿ ತೋರಿಸಿ ಬ್ಲ್ಯಾಕ್ ಮೇಲ್ ಮಾಡಿದ ಇಬ್ಬರಿಗೆ ಸಚಿವ ಸ್ಥಾನ ನೀಡಲಾಗಿದೆ. ಒಬ್ಬರು ಸಿಡಿ ಜೊತೆ ಸಿಎಂ ಪುತ್ರ ವಿಜಯೇಂದ್ರಗೆ ಹಣ ನೀಡಿ ಸಿಎಂ ಕಾರ್ಯದರ್ಶಿ ಆಗಿದ್ದಾರೆ. ಇದು ಅಪವಿತ್ರ ಸಂಪುಟ ವಿಸ್ತರಣೆ. ಸಿಎಂ ವೀರಶೈವ ಲಿಂಗಾಯತ ಸಮಾಜ ತಲೆ ತಗ್ಗಿಸುವಂಥ ಕೆಲಸ ಮಾಡಿದ್ದಾರೆ ಎಂದು ಸಿಎಂ ಯಡ್ಡಿಯೂರಪ್ಪ ವಿರುದ್ಧ ಬಸನಗೌಡ ಪಾಟೀಲ ಯತ್ನಾಳ್ ಅಸಮಧಾನ ಸ್ಫೋಟಿಸಿದ್ದಾರೆ.

    ವೀರಶೈವ ಲಿಂಗಾಯತ ಸಮಾಜ ನಿಮ್ಮ ಹಿಂದೆ ಇಲ್ಲ. ಇಡೀ ವೀರಶೈವ ಸಮಾಜ ನಮ್ಮ ಹಿಂದಿದೆ. ಕೇಂದ್ರ ಸರ್ಕಾರವನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದೀರಿ. ಇವತ್ತಿನಿಂದ ನಿಮ್ಮ ಅಂತ್ಯ ಪ್ರಾರಂಭವಾಗಿದೆ. ಕರ್ನಾಟಕದಲ್ಲಿ ಮತ್ತೆ ಮೋದಿಯವರ ನೇತೃತ್ವದಲ್ಲಿ ಹೊಸ ಯುಗ ಪ್ರಾರಂಭವಾಗುತ್ತೆ ಎಂಬ ವಿಶ್ವಾಸ ವಿದೆ ಎಂದು ಸಿಎಂ ಯಡ್ಡಿಯೂರಪ್ಪ ವಿರುದ್ಧ ಬಸನಗೌಡ ಪಾಟೀಲ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಯಡಿಯೂರಪ್ಪ, ವಿಜಯೇಂದ್ರ ಕಾಂಗ್ರೆಸ್ ಮುಖಂಡರನ್ನು ಖರೀದಿ ಮಾಡಿದ್ದಾರೆ. ಕಾಂಗ್ರೆಸ್ ಸತ್ತಿದೆ, ವಿರೋಧ ಪಕ್ಷ ಇಲ್ಲ. ಎಲ್ಲವೂ ಹೊಂದಾಣಿಕೆ ಇದೆ. ಸಿದ್ದರಾಮಯ್ಯ, ಡಿಕೆಶಿ, ಜಮೀರ್, ಕೆ.ಜೆ.ಜಾರ್ಜ್ ಇವರು ಯಡಿಯೂರಪ್ಪನವರ ಜೊತೆ ಇದ್ದಾರೆ. ಹಿಂದೂಗಳ ದೇವರನ್ನ ಅಪಮಾನ ಮಾಡಿದವರು ಇಂದು ಸಚಿವರಾಗುತ್ತಿದ್ದಾರೆ. ರಾಮನ ಬಗ್ಗೆ, ಸೀತೆಯ ಬಗ್ಗೆ ಅಸಹ್ಯಕರವಾಗಿ ಸಂದೇಶ ಕಳುಹಿಸಿದವರು ಇಂದು ಮಂತ್ರಿ ಆಗುತ್ತಿರುವುದು ದುರ್ದೈವ. ಇದು ಅಂತ್ಯ ಕಾಲ, ವಿನಾಶ ಕಾಲೆ ವಿಪರೀತ ಬುದ್ಧಿ. ಈ ಕೆಲಸದಲ್ಲಿ ಯಡಿಯೂರಪ್ಪ ಹೋಗುತ್ತಿದ್ದಾರೆ ಎಂದು ಗುಡುಗಿದ್ದಾರೆ.