Tag: ಸಚಿವ ಸಾರಾ ಮಹೇಶ್

  • ಬಿಜೆಪಿಗೆ ಬೆಂಬಲ ಕೊಡುತ್ತಾ ಜೆಡಿಎಸ್?: ಸಾರಾ ಮಹೇಶ್, ಕಮಲ ಮುಖಂಡರ ಭೇಟಿ!

    ಬಿಜೆಪಿಗೆ ಬೆಂಬಲ ಕೊಡುತ್ತಾ ಜೆಡಿಎಸ್?: ಸಾರಾ ಮಹೇಶ್, ಕಮಲ ಮುಖಂಡರ ಭೇಟಿ!

    ಬೆಂಗಳೂರು: ಬಿಜೆಪಿಗೆ ಬೆಂಬಲ ಕೊಡಲು ಜೆಡಿಎಸ್ ಮುಂದೆ ಬಂದಿತೇ ಎಂಬ ಪ್ರಶ್ನೆ ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿದೆ.

    ನಗರದ ಕೆ.ಕೆ.ಗೆಸ್ಟ್ ಹೌಸ್‍ನಿಂದ ಬಿಜೆಪಿ ಮುಖಂಡರಾದ ಕೆ.ಎಸ್.ಈಶ್ವರಪ್ಪ ಹಾಗೂ ಮುರಳೀಧರ್ ರಾವ್ ಅವರು ಹೊರ ಬಂದರು. ಅವರ ಬೆನ್ನಲ್ಲೇ ಜೆಡಿಎಸ್‍ನ ಸಚಿವ ಸಾರಾ ಮಹೇಶ್ ಅವರು ಹೊರ ಬಂದಿದ್ದು ಭಾರೀ ಕುತೂಹಲ ಮೂಡಿಸಿದೆ.

    ಸಾ.ರಾ.ಮಹೇಶ್ ಅವರ ಜೊತೆ ಮಾತನಾಡಲು ಬಂದಿದ್ರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಕೆ.ಎಸ್.ಈಶ್ವರಪ್ಪನವರು, ನಾನು ಹಾಗೂ ಮುರಳೀಧರ್ ರಾವ್ ಮಾತನಾಡಲು ಬಂದಿದ್ದೇವು. ನನಗೂ ಸಾ.ರಾ.ಮಹೇಶ್ ಅವರಿಗೂ ಏನ್ ಸಂಬಂಧ ಎಂದು ಹೇಳಿದರು.

    ಕೆ.ಎಸ್.ಈಶ್ವರಪ್ಪ ಅವರು ಕೆ.ಕೆ.ಗೆಸ್ಟ್ ಹೌಸ್‍ನಿಂದ ಹೊರಟ ಕೆಲವೇ ನಿಮಿಷಗಳಲ್ಲಿ ಸಚಿವ ಸಾರಾ ಮಹೇಶ್ ಅವರು ಹೊರ ಬಂದರು. ಈ ವೇಳೆ ಮಾತನಾಡಿದ ಸಚಿವರು, ಈಶ್ವರಪ್ಪನವರು ಕ್ಷೇತ್ರದ ಬಗ್ಗೆ ವಿಚಾರಿಸಲು ಬಂದಿದ್ದರು. ನಾನು ಸಚಿವ, ಹೀಗಾಗಿ ಭೇಟಿಯಾಗಲು ಬಂದಿದ್ದೆ. ಅದರಲ್ಲಿ ಏನು ತಪ್ಪು ಎಂದು ಮರು ಪ್ರಶ್ನೆ ಮಾಡಿದರು.

    ಸಚಿವ ಸಾ.ರಾ.ಮಹೇಶ್ ಅವರು 9 ಗಂಟೆ ಸುಮಾರಿಗೆ ಬಂದಿದ್ದರು. ಮೀಟಿಂಗ್ ಇದೆ ಅಂತ ರೂಂ ಕೇಳಿದ್ದರು. ಆಮೇಲೆ ಕೆ.ಎಸ್.ಈಶ್ವರಪ್ಪ, ಮುರುಳಿಧರ್ ರಾವ್ ಬಂದರು. ನಂತರ ಮೀಟಿಂಗ್ ಮುಗಿಸಿ ಹೊರಟರು ಎಂದು ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭ್ಯವಾಗಿದೆ.

    ಈ ಕುರಿತು ಸ್ಪಷ್ಟನೆ ನೀಡಿರುವ ಜೆಡಿಎಸ್, ಕುಮಾರಕೃಪ ಗೆಸ್ಟ್ ಹೌಸ್‍ಗೆ ಶಾಸಕರು, ಮಂತ್ರಿಗಳು ವಿಶ್ರಾಂತಿ ಪಡೆಯಲು ಹೋಗುವುದು ಸಹಜ. ಇದೇ ಸಂದರ್ಭದಲ್ಲಿ ಸಾ.ರಾ.ಮಹೇಶ್ ಅವರು ಆಕಸ್ಮಿಕವಾಗಿ ಕೆ.ಎಸ್.ಈಶ್ವರಪ್ಪ, ಮುರಳೀಧರ ರಾವ್ ಅವರನ್ನು ದಾರಿ ಮಧ್ಯೆ ಭೇಟಿಯಾಗಿದ್ದಾರೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸದೃಢವಾಗಿದ್ದು, ಸಮರ್ಥ ಆಡಳಿತ ಮುಂದುವರಿಸಲಿದೆ ಎಂದು ಟ್ವಿಟ್ ಮಾಡಿದೆ.

  • ಸಾರಾ ಮಹೇಶ್ ಸುದ್ದಿಗೋಷ್ಠಿ ಬಹಿಷ್ಕರಿಸಿದ ಮಾಧ್ಯಮಗಳು

    ಸಾರಾ ಮಹೇಶ್ ಸುದ್ದಿಗೋಷ್ಠಿ ಬಹಿಷ್ಕರಿಸಿದ ಮಾಧ್ಯಮಗಳು

    ಮಡಿಕೇರಿ: ಪ್ರವಾಸೋದ್ಯಮ ಸಚಿವ ಸಾರಾ ಮಹೇಶ್ ಅವರ ಸುದ್ದಿಗೋಷ್ಠಿಯನ್ನು ಮಾಧ್ಯಮಗಳು ಬಹಿಷ್ಕರಿಸಿದ ಪ್ರಸಂಗ ಇಂದು ಮಡಿಕೇರಿಯಲ್ಲಿ ನಡೆದಿದೆ.

    ಮಡಿಕೇರಿ ಕೋಟೆ ಸಭಾಂಗಣದಲ್ಲಿ ಇಂದು ಕೊಡಗು ಜಿಲ್ಲಾ ಪ್ರಾಕೃತಿಕ ವಿಕೋಪ ಸಂತ್ರಸ್ತರ ಸಭೆ ಆಯೋಜನೆಗೊಂಡಿತ್ತು. ಈ ಸಭೆಯಲ್ಲಿ ಸಚಿವರು ನಡೆದುಕೊಂಡ ರೀತಿಯಿಂದಾಗಿ ಎಲ್ಲ ಮಾಧ್ಯಮಗಳು ಸುದ್ದಿಗೋಷ್ಠಿಯನ್ನು ಬಹಿಷ್ಕರಿಸಿವೆ.

    ಆಗಿದ್ದೇನು?
    ಕೊಡಗು ಜಿಲ್ಲಾ ಪ್ರಾಕೃತಿಕ ವಿಕೋಪ ಸಂತ್ರಸ್ತರ ಸಭೆ ನಡೆದಿತ್ತು. ವಾರ್ತಾ ಇಲಾಖೆಯಿಂದ ಆಹ್ವಾನ ಬಂದ ಹಿನ್ನೆಲೆಯಲ್ಲಿ ಪತ್ರಕರ್ತರು ಸಭೆಯಲ್ಲಿ ಭಾಗವಹಿಸಿದ್ದರು. ಆದರೆ ಸಭೆ ಆರಂಭಕ್ಕೂ ಮುನ್ನ ಕುಳಿತ್ತಿದ್ದ ಮಾಧ್ಯಮದ ವ್ಯಕ್ತಿಗಳನ್ನು ಉದ್ದೇಶಿಸಿ, ಈಗ ಹೊರಗೆ ಹೋಗಿ. ನಾನು ಕರೆದಾಗ ಬನ್ನಿ ಎನ್ನುವ ಮೂಲಕ ಸಚಿವರು ದರ್ಪ ಮೆರೆದರು.

    ಇದನ್ನು ಮಾಧ್ಯಮದವರು ಖಂಡಿಸುತ್ತಿದ್ದಂತೆ ಪ್ರತಿಕ್ರಿಯೆ ನೀಡಿದ ಸಚಿವರು, ಸಭೆಗೆ ತನ್ನದೆಯಾದ ರೀತಿ ನೀತಿಗಳಿವೆ. ನಿಮ್ಮಲ್ಲಿ ವಿನಂತಿ ಮಾಡಿಕೊಳ್ಳುತ್ತೇನೆ. ದಯವಿಟ್ಟು ಹೊರಗೆ ಹೋಗಿ. ರಾತ್ರಿಯಾದರೂ ಸಭೆ ನಡೆಸಿ ಪ್ರತಿ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸುತ್ತೇನೆ ಎಂದು ಹೇಳಿದ್ದರು.

    ಸಂತ್ರಸ್ತರ ಜೊತೆ ಸಭೆ ನಡೆಸಿದ ಬಳಿಕ ಸಾರಾ ಮಹೇಶ್ ಮಾಧ್ಯಮದವರನ್ನು ಸುದ್ದಿಗೋಷ್ಠಿಗೆ ಬರುವಂತೆ ತಿಳಿಸಿದರು. ಈ ವೇಳೆ ಮಾಧ್ಯಮದವರು ಸಭೆಯಿಂದ ನಮ್ಮನ್ನು ಹೊರಹಾಕಿದ್ದಕ್ಕೆ ಬರುವುದಿಲ್ಲ ಎಂದು ಹೇಳಿ ಸುದ್ದಿಗೋಷ್ಠಿಯನ್ನು ಬಹಿಷ್ಕರಿಸಿದ್ದಾರೆ.

    ಸಚಿವ ಸಾ.ರಾ ಮಹೇಶ್ ನೇತೃತ್ವದಲ್ಲಿ ನಡೆದ ಸಭೆಗೆ ಭಾರೀ ಭದ್ರತೆ ನೀಡಲಾಗಿತ್ತು. ಸಂಸದ ಪ್ರತಾಪ್ ಸಿಂಹ, ಶಾಸಕರಾದ ಅಪ್ಪಚ್ಚು ರಂಜನ್, ಕೆ.ಜಿ ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ, ಕೊಡಗು ಜಿಲ್ಲಾಧಿಕಾರಿ ಅನೀಶ್ ಕಣ್ಮಣಿ ಜಾಯ್, ಎಸ್‍ಪಿ ಡಿ.ಸುಮನ್ ಅವರು ಸಭೆಯಲ್ಲಿ ಭಾಗವಹಿಸಿದ್ದರು. ಕೇವಲ ಸಂತ್ರಸ್ತರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿತ್ತು.

  • ಹೊರಹೋಗಿ ಅಂದೆ, ಕನ್ನಡ ಅರ್ಥ ಆಗಲ್ವಾ – ಮಾಧ್ಯಮಗಳ ವಿರುದ್ಧ ಸಾರಾ ಮಹೇಶ್ ಕಿಡಿ

    ಹೊರಹೋಗಿ ಅಂದೆ, ಕನ್ನಡ ಅರ್ಥ ಆಗಲ್ವಾ – ಮಾಧ್ಯಮಗಳ ವಿರುದ್ಧ ಸಾರಾ ಮಹೇಶ್ ಕಿಡಿ

    – ಕರೆದಾಗ ಬನ್ನಿ ಸಾಕು, ಈಗ ಹೋಗಿ

    ಮಡಿಕೇರಿ: ಹೊರಹೋಗಿ ಅಂತ ಹೇಳಿದೆ, ನಿಮಗೆ ಕನ್ನಡ ಅರ್ಥ ಆಗಲ್ವಾ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸಾರಾ ಮಹೇಶ್ ಪ್ರಶ್ನಿಸಿ ಮಾಧ್ಯಮಗಳ ವಿರುದ್ಧ ಕಿಡಿಕಾರಿದ್ದಾರೆ.

    ಮಡಿಕೇರಿ ಕೋಟೆ ಸಭಾಂಗಣದಲ್ಲಿ ಇಂದು ಕೊಡಗು ಜಿಲ್ಲಾ ಪ್ರಾಕೃತಿಕ ವಿಕೋಪ ಸಂತ್ರಸ್ತರ ಸಭೆ ಆಯೋಜನೆಗೊಂಡಿತ್ತು. ವಾರ್ತಾ ಇಲಾಖೆಯಿಂದ ಆಹ್ವಾನ ಬಂದ ಹಿನ್ನೆಲೆಯಲ್ಲಿ ಮಾಧ್ಯಮದ ವ್ಯಕ್ತಿಗಳು ಸಭೆಯಲ್ಲಿ ಭಾಗವಹಿಸಿದ್ದರು.

    ಸಭೆ ಆರಂಭಕ್ಕೂ ಮುನ್ನ ಕುಳಿತ್ತಿದ್ದ ಮಾಧ್ಯಮದ ವ್ಯಕ್ತಿಗಳನ್ನು ಉದ್ದೇಶಿಸಿ, ಈಗ ಹೊರಗೆ ಹೋಗಿ. ನಾನು ಕರೆದಾಗ ಬನ್ನಿ ಎನ್ನುವ  ಮೂಲಕ ದರ್ಪ ಮೆರೆದಿದ್ದಾರೆ.

    ಈ ಹೇಳಿಕೆಯನ್ನು ಮಾಧ್ಯಮದವರು ಖಂಡಿಸುತ್ತಿದ್ದಂತೆ ಪ್ರತಿಕ್ರಿಯೆ ನೀಡಿದ ಸಚಿವರು, ಸಭೆಗೆ ತನ್ನದೆಯಾದ ರೀತಿ ನೀತಿಗಳಿವೆ. ನಿಮ್ಮಲ್ಲಿ ವಿನಂತಿ ಮಾಡಿಕೊಳ್ಳುತ್ತೇನೆ. ದಯವಿಟ್ಟು ಹೊರಗೆ ಹೋಗಿ. ರಾತ್ರಿಯಾದರೂ ಸಭೆ ನಡೆಸಿ ಪ್ರತಿ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸುತ್ತೇನೆ ಎಂದು ಹೇಳಿದರು.

    ಸಚಿವ ಸಾ.ರಾ ಮಹೇಶ್ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಗೆ ಭಾರೀ ಭದ್ರತೆ ನೀಡಲಾಗಿದೆ. ಸಂಸದ ಪ್ರತಾಪ್ ಸಿಂಹ, ಶಾಸಕರಾದ ಅಪ್ಪಚ್ಚು ರಂಜನ್, ಕೆ.ಜಿ ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ, ಕೊಡಗು ಜಿಲ್ಲಾಧಿಕಾರಿ ಅನೀಶ್ ಕಣ್ಮಣಿ ಜಾಯ್, ಎಸ್‍ಪಿ ಡಿ.ಸುಮನ್ ಅವರು ಸಭೆಯಲ್ಲಿ ಭಾಗವಹಿಸಿದ್ದಾರೆ. ಹೀಗಾಗಿ ಸಭೆ ನಡೆಸುತ್ತಿರುವ ಕೋಟೆ ಸಭಾಂಗಣದ ಸುತ್ತಲೂ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಕೇವಲ ಸಂತ್ರಸ್ತರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ.

    ಸಂಸದ ಪ್ರತಾಪ್ ಸಿಂಹ ಅವರು ನನಗೂ ಈ ಸಭೆಗೂ ಯಾವುದೇ ಸಂಬಂಧವಿಲ್ಲ ಎಂಬಂತೆ ಕುಳಿತ್ತಿದ್ದಾರೆ. ಸಿಎಂ ಕುಮಾರಸ್ವಾಮಿ ಬಳಿಕ ಗುರುವಾರ ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿ ಮಾಧ್ಯಮಗಳ ವಿರುದ್ಧ ಕಿಡಿ ಕಾರಿದ್ದರು. ಈಗ ಸಾರಾ ಮಹೇಶ್ ಸಹ ಸಿಎಂ ಅವರ ನಡೆಯನ್ನು ಅನುಸರಿಸುತ್ತಿದ್ದಾರಾ ಎನ್ನುವ ಪ್ರಶ್ನೆ ಎದ್ದಿದೆ.

  • ‘ವೈಯಕ್ತಿಕ ಭಿನ್ನಾಭಿಪ್ರಾಯ ಬಿಡಬೇಕು’ – ಮಾಜಿ ಸಿಎಂ ಸಿದ್ದರಾಮಯ್ಯಗೆ ಪರೋಕ್ಷ ಎಚ್ಚರಿಕೆ ನೀಡಿದ ಸಾರಾ ಮಹೇಶ್

    ‘ವೈಯಕ್ತಿಕ ಭಿನ್ನಾಭಿಪ್ರಾಯ ಬಿಡಬೇಕು’ – ಮಾಜಿ ಸಿಎಂ ಸಿದ್ದರಾಮಯ್ಯಗೆ ಪರೋಕ್ಷ ಎಚ್ಚರಿಕೆ ನೀಡಿದ ಸಾರಾ ಮಹೇಶ್

    ಮೈಸೂರು: ಕಾಂಗ್ರೆಸ್-ಜೆಡಿಎಸ್ ಪಕ್ಷದ ನಾಯಕರು ನಮ್ಮ ಗುಂಪುಗಾರಿಕೆ, ವೈಯಕ್ತಿಕ ಇಚ್ಛಾಶಕ್ತಿ ಹಾಗೂ ಭಿನ್ನಾಭಿಪ್ರಾಯ ಬಿಡಬೇಕು ಎಂದು ಹೇಳುವ ಮೂಲಕ ಸಚಿವ ಸಾ.ರಾ ಮಹೇಶ್ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದುಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರದಲ್ಲಿ ಎರಡು ಪಕ್ಷದ ನಾಯಕರು ಒಮ್ಮತದಿಂದ ಕೆಲಸ ಮಾಡಬೇಕು. ಆದರೆ ನಿಖಿಲ್ ಕುಮಾರಸ್ವಾಮಿ ಹೆಸರು ಹೇಳಿದ ನಂತರ ಕಾಂಗ್ರೆಸ್ ಮುಖಂಡರು ಮತ್ತೊಬ್ಬ ಆಕಾಂಕ್ಷಿಯ ಜೊತೆ ಓಡಾಡುತ್ತಿದ್ದಾರೆ. ಆದರೆ ಅವರನ್ನು ಸ್ವಾಗತಿಸುತ್ತಿದ್ದಾರೆ. ಈ ರೀತಿ ಮಂಡ್ಯದಲ್ಲಿ ನಡೆದು ಕೊಂಡಾಗ ಮೈಸೂರು ಕಾರ್ಯಕರ್ತರ ಮೇಲೂ ಅದು ಪರಿಣಾಮ ಬೀರುತ್ತೆ ಎಂದು ಸಾರಾ ಮಹೇಶ್ ಹೇಳಿದ್ದಾರೆ.

    ಎರಡು ಪಕ್ಷದ ನಾಯಕರು ಬದಲಾಗಬೇಕು. ರಾಷ್ಟ್ರ ರಾಜ್ಯ ನಾಯಕರ ತೀರ್ಮಾನದಂತೆ ಮೈತ್ರಿ ಅಭ್ಯರ್ಥಿ ನಿಖಿಲ್, ಮೈತ್ರಿಗೆ ದ್ರೋಹ ಮಾಡೋದು ತಂದೆ ತಾಯಿಗೆ ದ್ರೋಹ ಮಾಡಿದಂತೆ. ಹಿಂದಿನ ಉಪ ಚುನಾವಣೆ ಕಹಿ ಘಟನೆಯಿಂದ ಈ ಹೇಳಿಕೆ ನೀಡುತ್ತಿದ್ದು, ಇದು ತಗೋ ಕೊಡು ಪಾಲಿಸಿ ಅಷ್ಟೇ. ಯಾರನ್ನು ಬಲವಂತವಾಗಿ ಬಳಸಿಕೊಳ್ಳಲು ಸಾಧ್ಯವಿಲ್ಲ. ನೀವು ಎಷ್ಟು ಪ್ರೀತಿಸುತ್ತಿರೋ ಗೌರವಿಸುತ್ತಿರೋ ನಾವು ಅಷ್ಟೇ ಪ್ರೀತಿಸುತ್ತೀವಿ ಎಂದರು.

    ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರಿಗೆ ಖಡಕ್ ಈ ಬಗ್ಗೆ ಸೂಚನೆ ನೀಡಬೇಕು ಎಂದಿದ್ದಾರೆ. ನಿನ್ನೆ ಜೆಡಿಎಸ್ ಕಾರ್ಯಕ್ರಮದಲ್ಲೂ ಮಾತನಾಡಿ ಅವರು, ನೀವು ನಮ್ಮನ್ನು ಒಮ್ಮೆ ತಬ್ಬಿಕೊಂಡರೆ ನಾವು 5 ಬಾರಿ ತಬ್ಬಿಕೊಳ್ಳುತ್ತೇವೆ. ನೀವು ಮಂಡ್ಯದಲ್ಲಿ ನಮಗೇ ನೀಡಿದ ಬೆಂಬಲವೇ ಮೈಸೂರಿನಲ್ಲೂ ಪ್ರತಿಧ್ವನಿಸುತ್ತದೆ ಎಂದಿದ್ದರು.

    ಇದೇ ವೇಳೆ ಸುಮಲತಾ ಅಂಬರೀಶ್ ಈಗಲೂ ನಿಖಿಲ್ ಬೆಂಬಲಿಸುವ ಬಗ್ಗೆ ವಿಶ್ವಾಸವಿದೆ ಎಂದು ತಿಳಿಸಿದ ಸಚಿವರು, ಯಾರೋ ಅವರಿಗೆ ಒತ್ತಡ ಹಾಕಿರುವ ಪರಿಣಾಮ ಸುಮಲತಾ ಸ್ಪರ್ಧೆ ಮಾಡುತ್ತಿದ್ದಾರೆ ಅಷ್ಟೇ. ನಿಖಿಲ್ ಕುಮಾರಸ್ವಾಮಿ ಮತ್ತು ಅಭಿಷೇಕ್ ಆತ್ಮೀಯ ಸ್ನೇಹಿತರಾಗಿದ್ದು, ಸುಮಲತಾ ಅವರು ಮನಸು ಮಾಡಬಹುದಿತ್ತು. ಮಗನ ಸ್ನೇಹಿತನನ್ನು ಮಗನಂತೆ ಕಾಣಬಹುದಾಗಿತ್ತು. ನಿಖಿಲ್, ಅಭಿ ಬಾಂಧವ್ಯ ಎಲ್ಲಾ ನೋಡಿ ಸುಮಲತಾ ಅಂಬರೀಶ್ ನಿಖಿಲ್ ಬೆಂಬಲಿಸುತ್ತಾರೆ ಎಂದು ಆತ್ಮವಿಶ್ವಾಶ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಂಡ್ಯದಲ್ಲಿ ನಮ್ಮನ್ನ ಹೇಗೆ ನಡೆಸಿಕೊಳ್ಳುತ್ತಿರೋ ಅದು ಮೈಸೂರಿನಲ್ಲಿ ಪ್ರತಿಧ್ವನಿಸಲಿದೆ – ಸಾರಾ ಮಹೇಶ್ ಎಚ್ಚರಿಕೆ

    ಮಂಡ್ಯದಲ್ಲಿ ನಮ್ಮನ್ನ ಹೇಗೆ ನಡೆಸಿಕೊಳ್ಳುತ್ತಿರೋ ಅದು ಮೈಸೂರಿನಲ್ಲಿ ಪ್ರತಿಧ್ವನಿಸಲಿದೆ – ಸಾರಾ ಮಹೇಶ್ ಎಚ್ಚರಿಕೆ

    – ನೀವು ಒಮ್ಮೆ ತಬ್ಬಿಕೊಂಡರೆ 5 ಬಾರಿ ತಬ್ಬಿಕೊಳ್ತೇವೆ
    – ಜೆಡಿಎಸ್ ಪ್ರಚಾರ ಸಮಾರಂಭದಲ್ಲಿ ಮಹೇಶ್ ಮಾತು

    ಮೈಸೂರು: ಮೈತ್ರಿ ಧರ್ಮದ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ಮಾಡಿಕೊಂಡಿರುವ ದೋಸ್ತಿ ಪಕ್ಷಗಳ ನಡುವೆ ಹೊಂದಾಣಿಕೆ ಕಷ್ಟವಾಗುತ್ತಿದ್ಯಾ ಎಂಬ ಅನುಮಾನ ಮೂಡಿದ್ದು, ಮಂಡ್ಯದಲ್ಲಿ ನಮ್ಮನ್ನ ಹೇಗೆ ನಡೆಸಿಕೊಳ್ಳುತ್ತಿರೋ ಅದು ಮೈಸೂರಿನಲ್ಲಿ ಕೂಡ ಪ್ರತಿಧ್ವನಿಸಲಿದೆ ಎಂದು ಸಚಿವ ಸಾರಾ ಮಹೇಶ್ ಪರೋಕ್ಷವಾಗಿ ಕಾಂಗ್ರೆಸ್ಸಿಗೆ ಎಚ್ಚರಿಕೆ ಕೊಟ್ಟಿದ್ದಾರೆ.

    ನಗರದಲ್ಲಿ ಪ್ರಚಾರ ಸಮಾರಂಭ ಉದ್ದೇಶಿಸಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯಲ್ಲಿ ನಿಮ್ಮ, ನಮ್ಮ ಅಂತರ ಇದ್ದೆ ಇರುತ್ತದೆ. ಮೈತ್ರಿಯಾಗಿ ಸರ್ಕಾರ ನಡೆಸುತ್ತಿದ್ದೇವೆ. ಆದರೆ ಕಾಂಗ್ರೆಸ್ ಸ್ನೇಹಿತರೇ ನೀವು ಮಂಡ್ಯದಲ್ಲಿ ನಮ್ಮನ್ನು ಹೇಗೆ ನಡೆಸಿಕೊಳ್ಳುತ್ತಿರೋ ಅದು ಮೈಸೂರಿನಲ್ಲಿ ಪ್ರತಿಧ್ವನಿಸಲಿದೆ ಎಂದು ತಿಳಿಸಿದರು.

    ಮಂಡ್ಯದಲ್ಲಿ ನಮ್ಮನ್ನ ಒಮ್ಮೆ ತಬ್ಬಿಕೊಂಡರೆ ಮೈಸೂರಿನಲ್ಲಿ ನಿಮ್ಮನ್ನ 5 ಬಾರಿ ತಬ್ಬಿಕೊಳ್ಳುತ್ತೇವೆ. ನಿಮಗೆ ಇದು ನೆನಪಿನಲ್ಲಿ ಇರಲಿ. ಈ ಲೋಕಸಭೆ ಚುನಾವಣೆಯಿಂದಲೇ ಇದು ಪ್ರಾರಂಭವಾಗಬೇಕು. ನಾವು ಜಿಲ್ಲೆಯಲ್ಲಿ ಯಾವುದೇ ವ್ಯತ್ಯಾಸವನ್ನು ಮಾಡದೇ ಸೇವೆ ಮಾಡಿದ್ದೇವೆ. ಆದ್ದರಿಂದ ಮೈತ್ರಿ ಧರ್ಮ ಪಾಲಿಸಿ ನಿಖಿಲ್ ಕುಮಾರಸ್ವಾಮಿ ಅವರನ್ನು ಗೆಲ್ಲಿಸಿಕೊಡಿ ಎಂದರು.

    ರಾಜ್ಯದ ಯಾವುದೇ ಪಕ್ಷದ ನೇತಾರರನ್ನಾಗಿ ಮಾಡಿದರೂ ಕೂಡ ಜೆಡಿಎಸ್ ಕಾರ್ಯಕರ್ತರು ನಂಬುವುದು ಎಚ್‍ಡಿಡಿ ಕುಟುಂಬವನ್ನು ಮಾತ್ರ. ಆದ್ದರಿಂದ ಕಾರ್ಯಕರ್ತರ ಒಪ್ಪಿಗೆ ಮೇರೆಗೆ ಈ ನಿರ್ಧಾರ ಮಾಡಲಾಗಿದೆ. ಆದರೆ ಅಂಬರೀಶ್ ಅವರೇ ರಾಜಕಾರಣ ಬೇಡ ಎಂದ ಮೇಲೆ ನಿಖಿಲ್ ಅವರ ವಿರುದ್ಧ ಏಕೆ ಸ್ಪರ್ಧೆ ಮಾಡುತ್ತಿದ್ದೀರಾ ಎಂದು ಯೋಚಿಸಿ ಎಂದು ಅವರು ಸುಮಲತಾ ಅವರಲ್ಲಿ ಮನವಿ ಮಾಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಿಜೆಪಿಗೆ ಮಾತು ಕೊಟ್ಟಿದ್ದೇವೆ, ದೋಸ್ತಿ ಕೈಬಿಡುವ ನಿರ್ಧಾರವಿಲ್ಲ: ಸಾರಾ ಮಹೇಶ್

    ಬಿಜೆಪಿಗೆ ಮಾತು ಕೊಟ್ಟಿದ್ದೇವೆ, ದೋಸ್ತಿ ಕೈಬಿಡುವ ನಿರ್ಧಾರವಿಲ್ಲ: ಸಾರಾ ಮಹೇಶ್

    – ಕಾಂಗ್ರೆಸ್ ಜೊತೆಗೆ ಸಂಬಂಧ ಹಾಳಾಗಿದ್ದಾಗ ತೆಗೆದುಕೊಂಡ ನಿರ್ಧಾರಕ್ಕೆ ಬದ್ಧ
    – ದೋಸ್ತಿ ಶಾಸಕರ ವಿರುದ್ಧ ಹರಿಹಾಯ್ದ ಸಚಿವ

    ಮೈಸೂರು: ಜಿಲ್ಲಾ ಪಂಚಾಯತ್ ಮೈತ್ರಿ ವಿಚಾರದಲ್ಲಿ ಬಿಜೆಪಿಯವರಿಗೆ ಮಾತು ಕೊಟ್ಟಿದ್ದೇವೆ. ಹೀಗಾಗಿ ಅವರ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದೇವೆ ಎಂದು ಪ್ರವಾಸೋದ್ಯಮ ಸಚಿವ ಸಾರಾ ಮಹೇಶ್ ತಿಳಿಸಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ಮೈಸೂರಿನಲ್ಲಿ ಬಿಜೆಪಿ-ಜೆಡಿಎಸ್ ದೋಸ್ತಿ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಜೊತೆ ಮಾತನಾಡಿದ್ದೇನೆ. ಸ್ಥಳೀಯ ಮಟ್ಟದ ಪರಿಸ್ಥಿತಿಗೆ ಅನುಗುಣವಾಗಿ ಹೊಂದಾಣಿಕೆಯ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ನಾವು ನಿರ್ಧಾರ ಬದಲಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

    ಜಿಲ್ಲಾ ಪಂಚಾಯತ್ ಸದಸ್ಯರ ಮನಸ್ಥಿತಿಯನ್ನು ಅರ್ಥ ಮಾಡಿಕೊಂಡು ನಾವು ಹೊಂದಾಣಿಕೆ ಮಾಡಿಕೊಳ್ಳುತ್ತಿದ್ದೇವೆ. ಈ ಹಿಂದೆ ಕಾಂಗ್ರೆಸ್ ಜೊತೆಗಿನ ಸಂಬಂಧ ಹಾಳಾಗಿದ್ದಾಗ ಮೈಸೂರಿನಲ್ಲಿ ಬಿಜೆಪಿ-ಜೆಡಿಎಸ್ ಹೊಂದಾಣಿಕೆಯ ನಿರ್ಧಾರ ಮಾಡಿಕೊಂಡಿದ್ದೇವು. ಮುಂದಿನ ಅವಧಿಯ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಯಾರು ಎನ್ನುವುದು ನಿರ್ಣಯವಾಗಿದೆ ಎಂದು ತಿಳಿಸಿದರು.

    ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುತ್ತಾರೆ ಎಂಬ ಶಾಸಕ ನಾರಾಯಣ ರಾವ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಚಿವ ಸಾರಾ ಮಹೇಶ್ ಅವರು, ಸಿದ್ದರಾಮಯ್ಯ ಅವರನ್ನು ಓಲೈಸಲು ಹೇಳಿಕೆ ಕೊಟ್ಟಿದ್ದಾರೆ. ಇಲ್ಲವೇ ಸಚಿವ ಸ್ಥಾನ ಅಥವಾ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೊಡಲಿ ಎಂದು ಹೊಗಳಿದ್ದಾರೆ ಎಂದು ತಿರುಗೇಟು ಕೊಟ್ಟರು.

    ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ನಾವು ಶಾಸಕ ನಾರಾಯಣ ರಾವ್ ರೀತಿ ಮಾತನಾಡಬಹುದು. ಆದರೆ ನಮ್ಮ ರಾಜ್ಯದ, ರಾಷ್ಟ್ರದ ನಾಯಕರು ದೋಸ್ತಿ ಪಕ್ಷದ ವಿರುದ್ಧ ಮಾತನಾಡದಂತೆ ಸೂಚನೆ ಕೊಟ್ಟಿದ್ದಾರೆ. ಯಾವುದೇ ವಿಚಾರವಿದ್ದರೂ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಿ. ಬಹಿರಂಗವಾಗಿ ಯಾವುದೇ ಕಾರಣಕ್ಕೂ ಚರ್ಚೆ ಬೇಡವೆಂದು ತಿಳಿಸಿದ್ದಾರೆ. ನಾವು ಸಹ ಕಾದು ನೋಡುತ್ತೇವೆ. ಕಾಂಗ್ರೆಸ್ ನಾಯಕರು ತಮ್ಮ ಶಾಸಕರಿಗೆ ಈಗಲಾದರೂ ಎಚ್ಚರಿಕೆ ಕೊಡಲಿ ಎಂದು ಗುಡುಗಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮೈಸೂರಿನಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮುಂದುವರಿಕೆ: ಸಾರಾ ಮಹೇಶ್

    ಮೈಸೂರಿನಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮುಂದುವರಿಕೆ: ಸಾರಾ ಮಹೇಶ್

    ಮೈಸೂರು: ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಇದ್ದರೂ ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮುಂದುವರಿಸುತ್ತೇವೆ ಎಂದು ಪ್ರವಾಸೋದ್ಯಮ ಸಚಿವ ಸಾರಾ ಮಹೇಶ್ ಹೇಳಿದ್ದಾರೆ.

    ನಗರದಲ್ಲಿ ಮಾತನಾಡಿದ ಸಚಿವರು, ಮೈಸೂರು ಜಿಲ್ಲಾ ಪಂಚಾಯತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಚುನಾವಣೆ ಫೆ.23ರಂದು ನಡೆಯಲಿದೆ. ಈ ಹಿಂದೆಯೂ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದೆವು. ಹೀಗಾಗಿ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮುಂದುವರಿಯಲಿದೆ ಎಂದು ಸ್ಪಷ್ಟನೆ ನೀಡಿದರು.

    ಈ ಹಿಂದೆ ಸ್ಥಳೀಯ ನಾಯಕರು ತೆಗೆದುಕೊಂಡಿದ್ದ ನಿರ್ಧಾರದಂತೆ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯಲಿದೆ. ಈ ಮೂಲಕ ಹಿಂದಿನ ಒಪ್ಪಂದದಂತೆ ನಮ್ಮ ಪಕ್ಷದ ಪರಿಮಳಾ ಶ್ಯಾಮ್ ಅವರು ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಲಿದ್ದಾರೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಿಚ್‍ಗುತ್ ಮಾರಮ್ಮ ದೇವಿ ವಿಷ ಪ್ರಸಾದ ದುರಂತ – ಮಂಗಳವಾರ ಸುಳ್ವಾಡಿಗೆ ಸಿಎಂ ಭೇಟಿ

    ಕಿಚ್‍ಗುತ್ ಮಾರಮ್ಮ ದೇವಿ ವಿಷ ಪ್ರಸಾದ ದುರಂತ – ಮಂಗಳವಾರ ಸುಳ್ವಾಡಿಗೆ ಸಿಎಂ ಭೇಟಿ

    ಚಾಮರಾಜನಗರ: ಸುಳ್ವಾಡಿ ಕಿಚ್‍ಗುತ್ ಮಾರಮ್ಮ ದೇವಿ ವಿಷ ಪ್ರಸಾದ ಸೇವನೆಯಿಂದ ದುರಂತ ತಾಣವಾಗಿರುವ ಹನೂರಿನ ಸುಳ್ವಾಡಿಗೆ ನಾಳೆ ಸಿಎಂ ಕುಮಾರಸ್ವಾಮಿ ಭೇಟಿ ನೀಡಲಿದ್ದಾರೆ.

    ಇಂದು ಸಚಿವ ಸಾರಾ ಮಹೇಶ್ ಅವರು ಸುಳ್ವಾಡಿ ಗ್ರಾಮಕ್ಕೆ ಭೇಟಿ ನೀಡಿ ಕುಟುಂಬಗಳಿಗೆ ಸಾಂತ್ವನ ಹೇಳಿದರು. ಇತ್ತ ಮಲೆಮಹದೇಶ್ವರ ಬೆಟ್ಟದ ಸಾಲೂರು ಮಠ ಇದೀಗ ಬಿಕೋ ಎನ್ನುತ್ತಿದ್ದು, ಸಾಲೂರು ಮಠದ ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಕರಣ 1ನೇ ಆರೋಪಿ ಇಮ್ಮಡಿ ಮಹದೇವಸ್ವಾಮಿ ವಿರುದ್ಧ ಸಿಡಿದೆದ್ದಿರುವ ಭಕ್ತರು, ಸಾಲೂರು ಮಠದಲ್ಲಿದ್ದ ಕಿರಿಯ ಸ್ವಾಮೀಜಿ ಫೋಟೋ ಹರಿದು ಆಕ್ರೋಶ ಹೊರಹಾಕಿದ್ದಾರೆ.

    ಇತ್ತ ಕೀಟನಾಶಕ ಸೇವಿಸಿ ಅಸ್ವಸ್ಥರಾದವರಿಗೆ 11ನೇ ದಿನವೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಒಟ್ಟು 33 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದರಲ್ಲಿ 8 ಮಂದಿಗೆ ಐಸಿಯೂನಲ್ಲಿ ಚಿಕಿತ್ಸೆ ನೀಡುತ್ತಿದ್ದರೆ, 12 ಮಂದಿಗೆ ಕೃತಕ ಉಸಿರಾಟದ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲದೇ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, 13 ಮಂದಿಗೆ ಸಾಮಾನ್ಯ ವಾರ್ಡ್ ನಲ್ಲಿ ನೀಡಲಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಯಾರಿಗೆ ಮತ ಹಾಕಿದ್ದಾರೋ ಅವರ ಜೊತೆ ಚರ್ಚೆ ಮಾಡಲಿ: ಸಾರಾ ಮಹೇಶ್

    ಯಾರಿಗೆ ಮತ ಹಾಕಿದ್ದಾರೋ ಅವರ ಜೊತೆ ಚರ್ಚೆ ಮಾಡಲಿ: ಸಾರಾ ಮಹೇಶ್

    ಮಂಡ್ಯ: ಕ್ಷೇತ್ರದಲ್ಲಿ ಚುನವಣಾ ಬಹಿಷ್ಕಾರ ಮಾಡಿರುವ ಗ್ರಾಮಗಳು ಕಾಂಗ್ರೆಸ್‍ಗೆ ಮತದಾನ ಮಾಡುವ ಗ್ರಾಮಗಳಾಗಿದ್ದು, ಅವರು ಕೇಳಿದ ಸಾಕಷ್ಟು ಮೂಲಭೂತ ಸೌಲಭ್ಯಗಳನ್ನು ನೀಡಿದ್ದೇನೆ. ಇನ್ನು ಹೆಚ್ಚಿನ ಸೌಲಭ್ಯ ಬೇಕಾದರೆ ಕಾಂಗ್ರೆಸ್ ನಾಯಕರು ಹೋಗಿ ಚರ್ಚೆ ಮಾಡುತ್ತಾರೆ ಎಂದು ಸಚಿವ ಸಾರಾ ಮಹೇಶ್ ಹೇಳಿದ್ದಾರೆ.

    ಜಿಲ್ಲೆಯ ಅರಂಬಳ್ಳಿ ಗ್ರಾಮಸ್ಥರು ರಸ್ತೆ ಕೇಳಿದ್ದರು. ಅವರ ಮನವಿ ಮೇರೆಗೆ ಕ್ರಮಕೈಗೊಂಡಿದ್ದೇನೆ. ಆದರೆ ಚುನಾವಣಾ ನೀತಿ ಸಂಹಿತೆಯಿಂದ ಸದ್ಯ ಪ್ರಕ್ರಿಯೆ ತಡವಾಗಿದೆ. ಅದ್ದರಿಂದ ಗ್ರಾಮಸ್ಥರ ಮನವೊಲಿಕೆ ಮಾಡುತ್ತೇನೆ. ಆದರೆ ಬಾಚಹಳ್ಳಿ, ದೊಡ್ಡ ಕೊಪ್ಪಲು ಗ್ರಾಮದಲ್ಲಿ ರಾಜಕೀಯ ಪ್ರೇರಿತವಾಗಿ ಬಹಿಷ್ಕಾರ ಮಾಡಿದ್ದಾರೆ. ಎರಡು ಗ್ರಾಮಗಳಿಗೆ ಈಗಾಗಲೇ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗಿದೆ. ಕಳೆದ ವಿಧಾನ ಸಭಾ ಚುನಾವಣೆಯಲ್ಲೂ 2 ಗ್ರಾಮಗಳಲ್ಲಿ ಶೇ.99ರಷ್ಟು ಜನ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ್ದಾರೆ. ಅವರಿಗೆ ಹೆಚ್ಚಿನ ಸೌಲಭ್ಯಗಳು ಬೇಕಾದಲ್ಲಿ ಅವರ ಮುಖಂಡರು ಹೋಗಿ ಚರ್ಚೆ ಮಾಡುತ್ತಾರೆ ಎಂದರು.

    ರಾಜಕೀಯ ಪಕ್ಷಗಳ, ಜನರ ಅಭಿಪ್ರಾಯಕ್ಕೆ ವಿರುದ್ಧವಾಗಿ ಚುನಾವಣೆ ಘೋಷಣೆ ಮಾಡಲಾಗಿದ್ದು, ಅದ್ದರಿಂದ ಮತದಾನ ಪ್ರಕ್ರಿಯೆ ನಿರೀಕ್ಷಿತ ಮಟ್ಟದಲ್ಲಿ ಇಲ್ಲ. ಅಲ್ಲದೇ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನ ಮಾಡಲಾಗುತ್ತದೆ. ಈ ಬಾರಿಯೂ ಶೇ.50 ರಷ್ಟು ಮತದಾನ ಆಗುವ ಸಾಧ್ಯತೆ ಇದೆ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಾ.ರಾ ಮಹೇಶ್ ವಿರುದ್ಧ ನಿರ್ಮಲಾ ಸೀತಾರಾಮನ್ ಕಿಡಿ- ಗೊಂದಲ ಕುರಿತು ರಕ್ಷಣಾ ಸಚಿವರ ಸ್ಪಷ್ಟನೆ

    ಸಾ.ರಾ ಮಹೇಶ್ ವಿರುದ್ಧ ನಿರ್ಮಲಾ ಸೀತಾರಾಮನ್ ಕಿಡಿ- ಗೊಂದಲ ಕುರಿತು ರಕ್ಷಣಾ ಸಚಿವರ ಸ್ಪಷ್ಟನೆ

    ಬೆಂಗಳೂರು: ಕೊಡಗು ಪ್ರವಾಹ ಪೀಡಿತ ಪ್ರದೇಶ ಭೇಟಿ ಬಳಿಕ ಸುದ್ದಿಗೋಷ್ಠಿಯಲ್ಲಿ ಉಂಟಾದ ಗೊಂದಲದ ಬಗ್ಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟನೆ ನೀಡಿದ್ದು ಕೊಡಗು ಉಸ್ತುವಾರಿ ಸಚಿವ ಸಾರಾ ಮಹೇಶ್ ಅವರಿಗೆ ದೇಶದ ರಾಜಕೀಯ ವ್ಯವಸ್ಥೆ ಬಗ್ಗೆ ಪರಿಜ್ಞಾನ ಇಲ್ಲ ಎಂದು ಕಿಡಿಕಾರಿದ್ದಾರೆ.

    ಇಡೀ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಣಾ ಇಲಾಖೆ ಸ್ಪಷ್ಟನೆ ನೀಡಿ ಪತ್ರಿಕಾ ಬಿಡುಗಡೆ ಮಾಡಿದ್ದು, ಈ ಹೇಳಿಕೆಯನ್ನು ಸಚಿವೆ ನಿರ್ಮಲಾ ಸೀತಾರಾಮನ್ ಟ್ವೀಟ್ ಮಾಡಿದ್ದಾರೆ. ಅದರ ಪೂರ್ಣ ರೂಪ ಇಂತಿದೆ.

    ರಕ್ಷಣಾ ಸಚಿವರ ಕೊಡಗು ಭೇಟಿ ವೇಳೆ ಜಿಲ್ಲಾಡಳಿತದೊಂದಿಗೆ ನಡೆದ ಸಭೆಯಲ್ಲಿ ಜಿಲ್ಲಾ ಉಸ್ತವಾರಿ ಮಂತ್ರಿಗಳಾದ ಶ್ರೀ ಸಾ.ರಾ.ಮಹೇಶ್ ಅವರ ಮೇಲೆ ರಕ್ಷಣಾ ಸಚಿವರು ಕೋಪಗೊಂಡಿದ್ದರು ಎಂದು ಕೆಲವು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣದಲ್ಲಿ ವರದಿಯಾಗಿದೆ.

    ಜಿಲ್ಲಾ ಉಸ್ತುವಾರಿ ಮಂತ್ರಿಗಳು ರಕ್ಷಣಾ ಮಂತ್ರಿಗಳ ಬಗ್ಗೆ ವೈಯಕ್ತಿಕ ಟೀಕೆ ಮಾಡಿರುವ ಬಗ್ಗೆಯೂ ವರದಿಯಾಗಿದೆ. ಅವರ ಈ ಟೀಕೆಯು ಸಂಸತ್ತಿನ ಮೇಲ್ಮನೆಯಾದ ರಾಜ್ಯಸಭೆಯ ಘನತೆಗೆ ಚ್ಯುತಿಯುಂಟು ಮಾಡುವಂತಹದಾಗಿದೆ ಹಾಗೂ ಭಾರತ ರಾಜಕೀಯ ವ್ಯವಸ್ಥೆಯ ಬಗ್ಗೆ ಯಾವುದೇ ಗೌರವ ಮತ್ತು ತಿಳುವಳಿಕೆ ಜಿಲ್ಲಾ ಉಸ್ತುವಾರಿ ಮಂತ್ರಿಗಳಿಗೆ ಇಲ್ಲ ಎನ್ನುವುದನ್ನು ತೋರಿಸಿದೆ.

    ಈ ಕುರಿತ ಸ್ಪಷ್ಟನೆ ನೀಡಲು ಅಂದಿನ ಪ್ರವಾಸ ಕಾರ್ಯಕ್ರಮದ ಪೂರ್ಣ ಮಾಹಿತಿಯ ವಿವರಗಳನ್ನು ಇಲ್ಲಿ ನೀಡಲಾಗಿದೆ: ರಕ್ಷಣಾ ಮಂತ್ರಿಗಳ ಪ್ರವಾಸ ಕಾರ್ಯಕ್ರಮದ ಕುರಿತು ಜಿಲ್ಲಾಡಳಿತವೇ 2 ದಿನಗಳ ಮುಂಚೆಯೇ ವೇಳಾಪಟ್ಟಿ ಅಂತಿಮಗೊಳಿಸಿತ್ತು. ಬಳಿಕ ಜಿಲ್ಲಾಡಳಿತ ಮನವಿ ಮೇರೆಗೆ ಸ್ಥಳೀಯ ಗಣ್ಯರೊಂದಿಗೆ ಸಂವಾದ ಕಾರ್ಯಕ್ರಮವನ್ನು ಪಟ್ಟಿಗೆ ಸೇರಿಸಲಾಯಿತು.

    ಹಾನಿಗೀಗಾಡ ಪ್ರದೇಶಗಳ ಭೇಟಿಯ ನಂತರ ನೆರೆಯಿಂದ ತೀವ್ರ ತೊಂದರೆಗೊಳಗಾದ ನಿವೃತ್ತ ಸೈನಿಕರೊಂದಿಗೆ ರಕ್ಷಣಾ ಮಂತ್ರಿಗಳು ಸಂವಾದ ನಡೆಸುವಾಗ ಅದಕ್ಕೆ ಉಸ್ತವಾರಿ ಸಚಿವರು ಆಕ್ಷೇಪ ವ್ಯಕ್ತಪಡಿಸಿದರು. ಅಧಿಕಾರಿಗಳೊಂದಿಗೆ ಸಭೆಯನ್ನು ಮೊದಲು ನಡೆಸಬೇಕು ಎನ್ನುವುದು ಅವರ ವಾದವಾಗಿತ್ತು. ಆದರೆ ನಿವೃತ್ತ ಸೈನಿಕರ ಯೋಗಕ್ಷೇಮವೂ ರಕ್ಷಣಾ ಇಲಾಖೆಯ ಆದ್ಯತೆಗಳಲ್ಲಿ ಒಂದಾದ ಕಾರಣ ರಕ್ಷಣಾ ಮಂತ್ರಿಗಳು ಈ ಬಗ್ಗೆ ಸ್ಪಷ್ಟನೆ ನೀಡಿದರು. ಅದರೂ ಉಸ್ತುವಾರಿ ಸಚಿವರು ತಕ್ಷಣ ಆ ಸಭೆ ನಿಲ್ಲಿಸಿ, ಅಧಿಕಾರಿಗಳ ಸಭೆಗೆ ಹೋಗಬೇಕೆಂದು ಒತ್ತಾಯಿಸಿದರು.

    ಆಗ ಪರಿಸ್ಥಿತಿಯನ್ನು ಅರಿತ ರಕ್ಷಣಾ ಸಚಿವರು ಮತ್ತಷ್ಟು ಗೊಂದಲ ಉಂಟಾಗುವುದನ್ನು ತಪ್ಪಿಸಲು ಆ ಸಭೆಯನ್ನು ಸ್ಥಗಿತಗೊಳಿಸಿ ಅಧಿಕಾರಿಗಳ ಸಭೆಗೆ ತೆರಳಿದರು. ಅಲ್ಲಿ ಆಗಲೇ ಪತ್ರಿಕಾಗೋಷ್ಟಿಗೆ ವ್ಯವಸ್ಥೆ ಮಾಡಲಾಗಿತ್ತು. ಅದೇ ಸ್ಥಳಕ್ಕೆ ಅಧಿಕಾರಿಗಳನ್ನು ತರಾತುರಿಯಲ್ಲಿ ಕರೆದು ಮಾಧ್ಯಮ ಪ್ರತಿನಿಧಿಗಳ ಉಪಸ್ಥಿತಿಯಲ್ಲೇ ಅಧಿಕಾರಿಗಳ ಸಭೆ ಆರಂಭಿಸಲಾಯಿತು. ಎಲ್ಲಾ ಮಾಧ್ಯಮ ಪ್ರತಿನಿಧಿಗಳ ಎದುರಿನಲ್ಲೇ ಪರಿಶೀಲನಾ ಸಭೆ ನಡೆಸುವ ನಿದರ್ಶನ ಇಲ್ಲವಾದರೂ, ಪರಿಸ್ಥಿಯನ್ನು ತಿಳಿಯಾಗಿಸಲು ಸಭೆಯನ್ನು ನಡೆಸಲಾಯಿತು.

    ರಕ್ಷಣಾ ಸಚಿವರು ನಂತರ ತಮಗಾಗಿ ಕಾದಿದ್ದ ಮಾಜಿ ಸೈನಿಕರೊಂದಿಗೆ ಸಂವಾದ ನಡೆಸಿ ಅವರ ಅಹವಾಲು ಆಲಿಸಿದರು. ಜಿಲ್ಲಾಡಳಿತವೇ ಅಂತಿಮಗೊಳಿಸಿದ ಕಾರ್ಯಕ್ರಮದ ಪ್ರಕಾರವೇ ರಕ್ಷಣಾ ಸಚಿವರು ಸಭೆ ನಡೆಸಿದರೂ, ಜಿಲ್ಲಾ ಉಸ್ತುವಾರಿ ಸಚಿವರು ನೀಡಿದ ಪ್ರತಿಕ್ರಿಯೆ ಮತ್ತು ಟೀಕೆ ದುರದೃಷ್ಟಕರ. ಇನ್ನು ರಕ್ಷಣಾ ಸಚಿವರ ಬಗ್ಗೆ ಮಾಡಿರುವ ವೈಯಕ್ತಿಕ ಕೀಳು ಅಭಿರುಚಿಯಿಂದ ಕೂಡಿದ್ದಾಗಿದೆ. ಅವರ ಈ ನಡವಳಿಕೆ ಪ್ರತಿಕ್ರಿಯೆಗೂ ಯೋಗ್ಯವಲ್ಲ.

    ರಕ್ಷಣಾ ಸಚಿವರು ಪತ್ರಿಕಾಗೋಷ್ಟಿಯಲ್ಲಿ ಪರಿವಾರ ಎಂದು ಉಲ್ಲೇಖಿಸಿದ್ದನ್ನು ತಪ್ಪಾಗಿ ವ್ಯಾಖ್ಯಾನಿಸಿರುವುದು ಗಮನಕ್ಕೆ ಬಂದಿದೆ. ರಕ್ಷಣಾ ಇಲಾಖೆಯ 4 ವಿಭಾಗಗಳಲ್ಲಿ ನಿವೃತ್ತ ಸೈನಿಕರ ಕಲ್ಯಾಣವೂ ಒಂದು. ರಕ್ಷಣಾ ಇಲಾಖೆಯ ಪರಿವಾರದಲ್ಲಿ ನಿವೃತ್ತ ಸೈನಿಕರು ಸೇರಿರುತ್ತಾರೆ ಎಂಬುವುದು ಇಲ್ಲಿ ಗಮನಿಸಬೇಕಾದ ಅಂಶ. ಈ ಅರ್ಥದಲ್ಲಿ ಪರಿವಾರ ಎನ್ನುವ ಪದ ಬಳಕೆ ಮಾಡಲಾಗಿದೆ. ಉಳಿದಂತೆ ಬೇರೆಲ್ಲಾ ಅಭಿಪ್ರಾಯಗಳೂ ಅಪಾರ್ಥದಿಂದ ಕೂಡಿದ್ದು ಹಾಗೂ ಖಂಡನೀಯ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv