Tag: ಸಚಿವ ಸಿಟಿ ರವಿ

  • ಜೀವದ ಜೊತೆಗೆ ಜೀವನಾನು ಕಟ್ಟಿಕೊಳ್ಳಿ: ಸಿಟಿ.ರವಿ

    ಜೀವದ ಜೊತೆಗೆ ಜೀವನಾನು ಕಟ್ಟಿಕೊಳ್ಳಿ: ಸಿಟಿ.ರವಿ

    – ಡಿಕೆಶಿಗೆ ರವಿ ತಿರುಗೇಟು

    ಬೆಂಗಳೂರು: ಕೊರೊನಾ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳನ್ನು ಹಂತ ಹಂತವಾಗಿ ತೆರೆಯುವುದು ಒಳ್ಳೆಯ ವಿಷಯವಾಗಿದೆ. ಜೀವದ ಜೊತೆ ಜೀವನಾನು ಕಟ್ಟಿಕೊಳ್ಳಬೇಕಾಗಿದೆ ಎಂದು ಸಚಿವ ಸಿಟಿ.ರವಿ ಹೇಳಿದ್ದಾರೆ.

    ಹಾಸನಾಂಬೆ ದರ್ಶನ ಪಡೆಯಲು ಬಂದಿದ್ದ ಸಿಟಿ,ರವಿ ಅವರು ಮಾಧ್ಯಮದವರೊಂದಿಗೆ ಮಾತನಾಡುವ ವೇಳೆ ಶಿಕ್ಷಣ ಸಂಸ್ಥೆಗಳನ್ನು ತೆರೆಯುಲು ಸೂಕ್ತ ಸಮಯವಾಗಿದೆ. ಕಾಲೇಜಿಗೆ ಕಳುಹಿಸಿದ ನಂತರ ಯಾರ ಮೇಲೂ ದೂರಬಾರದು. ಮಕ್ಕಳನ್ನು ಶಾಲೆಗೆ ಕಳುಹಿಸುವ ತೀರ್ಮಾನ ಪೋಷಕರಿಗೆ ಬಿಟ್ಟಿದ್ದಾಗಿದೆ. ಕಾಲೇಜಿನ ವಿದ್ಯಾರ್ಥಿಗಳು ತಿಳುವಳಿಕೆ ಉಳ್ಳವರಾಗಿದ್ದಾರೆ. ನಾಳೆ ದೂರಬಾರದು ಎಂದಷ್ಟೇ ಪೋಷಕರ ಪತ್ರ ಪಡೆಯುತ್ತಿದ್ದೇವೆ. ಈ ವಿಷ್ಯದಲ್ಲಿ ಜವಬ್ದಾರಿ ಮರೆಯುವುದಿಲ್ಲ, ಆತಂಕ ಪಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ.

    ಅಧಿಕಾರ ದುರುಪಯೋಗ ಆಗುತ್ತಿದೆ ಎಂಬ ಡಿಕೆಶಿ ಹೇಳಿಕೆ ಕುರಿತಾಗಿ ಮಾತನಾಡಿದ ಸಿಟಿ.ರವಿ, ದುರುಪಯೋಗದ ಪರಮಾವಧಿ ಮುಟ್ಟಿದವರು ಡಿಕೆಶಿ ಆಗಿದ್ದಾರೆ. ಆ ಪರಮಾವಧಿ ಕಾರಣಕ್ಕೆ ಇಂದು ಸಂಕಷ್ಟ ಎದುರಿಸುತ್ತಿದ್ದಾರೆ. ಹೀಗಾಗಿ ಉಳಿದವರು ಹಾಗೇ ಇರುತ್ತಾರೆ ಎಂದು ಅವರು ಭಾವಿಸಿದ್ದಾರೆ. ಜನಸ್ನೇಹಿ ಆಡಳಿತ ನೀಡೋದು ಬಿಜೆಪಿಯ ಆಡಳಿತವಾಗಿದೆ. ಕಾಂಗ್ರೆಸ್ ಅವರಿಗಲ್ಲದೆ ಇನ್ಯಾರಿಗೂ ಅಧಿಕಾರ ದುರುಪಯೋಗದ ವಿಷಯದಲ್ಲಿ ನಂಬರ್ ಒನ್ ಸರ್ಟಿಫಿಕೇಟ್ ಸಿಗುವುದಿಲ್ಲ. ಎ ಯಿಂದ ಝಡ್ ವರೆಗೂ ಅಧಿಕಾರ ದುರುಪಯೋಗ ಪಡಿಸಿಕೊಂಡ ಕೀರ್ತಿ, ಅಪಕೀರ್ತಿ ಇದ್ದರೆ ಅದು ಕಾಂಗ್ರಸ್ಸಿಗೆ ಮಾತ್ರ ಇದನ್ನು ಅರ್ಥ ಮಾಡಿಕೊಂಡು ಡಿಕೆ.ಶಿವಕುಮಾರ್ ಮಾತನಾಡಬೇಕು ಎಂದು ತಿರುಗೇಟು ಕೊಟ್ಟಿದ್ದಾರೆ. ಇದನ್ನು ಓದಿ: ಬೆಳ್ಳಂಬೆಳಗ್ಗೆ ಪತ್ನಿ ಜೊತೆ ಹಾಸನಾಂಬೆಯ ದರ್ಶನ ಪಡೆದ ಡಿಕೆಶಿ

    ಮುಖ್ಯಮಂತ್ರಿಗಳು ಪಕ್ಷಕ್ಕೆ ಬರುವ ಸಂದರ್ಭದಲ್ಲಿ ಯಾರ್ಯಾರಿಗೆ ವಾಗ್ದಾನ ನೀಡಿದ್ದಾರೋ ಅದನ್ನೆಲ್ಲ ಈಡೇರಿಸಿದ್ದಾರೆ. ಮುನಿರತ್ನ ಅವರಿಗೆ ಏನು ವಾಗ್ದಾನ ನೀಡಿದ್ದಾರೋ ನನಗೆ ಗೊತ್ತಿಲ್ಲ. ಕೊಟ್ಟಿರುವುದನ್ನು ಈಡೇರಿಸುತ್ತಾರೆ. ಹಾಸನಕ್ಕೂ ಸಚಿವ ಸ್ಥಾನ ಸಿಗಲಿ, ಚಿಕ್ಕಮಗಳೂರಿಗೂ ಸಚಿವ ಸ್ಥಾನ ಒಲಿದು ಬರಲಿ ಎಂದು ಆಶಿಸುತ್ತೇನೆ. ಸಚಿವ ಸಂಪುಟ ಪುನಾರಚನೆ ವಿಷಯದಲ್ಲಿ ಅಸಮಾಧಾನ ಎಂಬುದು ಮನಸ್ಥಿತಿ ಆಧರಿಸಿರುತ್ತೆ. ಅದನ್ನು ಸಮಾಧಾನ ಮಾಡಲು ಬರುತ್ತೆ ಸಮಾಧಾನ ಮಾಡ್ತೇವೆ ಎಂದು ಮುನಿರತ್ನ ಅವರಿಗೆ ಸಚಿವ ಸ್ಥಾನ ನೀಡುವ ವಿಚಾರವಾಗಿ ಮಾತನಾಡಿದ್ದಾರೆ.

  • ಪರೋಕ್ಷವಾಗಿ ಸಿಎಂ ಬಿಎಸ್‍ವೈಗೆ ಟಾಂಗ್ ಕೊಟ್ಟ ಸಿಟಿ ರವಿ

    ಪರೋಕ್ಷವಾಗಿ ಸಿಎಂ ಬಿಎಸ್‍ವೈಗೆ ಟಾಂಗ್ ಕೊಟ್ಟ ಸಿಟಿ ರವಿ

    – ಸಚಿವ ಸ್ಥಾನಕ್ಕೆ ಸಿ.ಟಿ.ರವಿ ರಾಜೀನಾಮೆ ಅನುಮಾನ?

    ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸಚಿವ ಸಿಟಿ ರವಿ ಅವರಿಗೆ ಪ್ರಮೋಷನ್ ಲಭಿಸಿದ್ದು, ಈ ನಡುವೆಯೇ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎನ್ನಲಾಗಿತ್ತು. ಆದರೆ ಸದ್ಯ ಸಿಟಿ ರವಿ ಅವರು ನೀಡಿರುವ ಹೇಳಿಕೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದು ಅನುಮಾನ ಮೂಡಿದೆ.

    ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು ಪ್ರತಿಕ್ರಿಯೆ ನೀಡಿರುವ ಸಿ.ಟಿ.ರವಿ ಅವರು, ನಮ್ಮಲ್ಲಿ ಒಬ್ಬರಿಗೆ ಒಂದು ಸ್ಥಾನ ಎಂಬ ಅಲಿಖಿತ ನಿಯಮವಿದೆ. ಇದೇ ರೀತಿ 75 ವರ್ಷ ದಾಟಿದವರು ಅಧಿಕಾರ, ರಾಜಕೀಯದಿಂದ ನಿವೃತ್ತಿ ಹೊಂದಬೇಕೆಂಬ ನಿಯಮವೂ ಇದೆ. ಆದರೆ ಕೆಲವೊಮ್ಮೆ ವರಿಷ್ಠರೇ ಅಲಿಖಿತ ನಿಯಮಗಳನ್ನು ಬದಲಾವಣೆ ಮಾಡಿದ್ದಾರೆ ಎಂದು ಪರೋಕ್ಷವಾಗಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಟಾಂಗ್ ನೀಡಿದರು.

    ಅಲಿಖಿತ ನಿಯಮಗಳನ್ನು ಬದಲಾಯಿಸಿದ್ದು, ಪಕ್ಷದ ವರಿಷ್ಠ ಮಂಡಳಿಯ ನಿರ್ಧಾರ. ಆದರೆ ಬಿಜೆಪಿ ಪಕ್ಷದ ಕಾರ್ಯಕರ್ತನಾಗಿ ಹಾಗೂ ವ್ಯಕ್ತಿಗತ ಆಯ್ಕೆಯಂತೆ ನನಗೆ ಸಂಘಟನೆಯೇ ಮುಖ್ಯ ಎಂದು ಸ್ಪಷ್ಟಪಡಿಸಿದರು. ಈ ಹಿಂದೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು ಮಾತನಾಡಿದ್ದ ಸಿಟಿ ರವಿ ಅವರು, ಪಕ್ಷವೋ, ಸರ್ಕಾರವೋ ಎಂದು ಕೇಳಿದಾಗ ನಾನು ಪಕ್ಷಕ್ಕೆ ಪ್ರಾಮುಖ್ಯತೆ ನೀಡುತ್ತೇನೆ. ರಾಷ್ಟ್ರೀಯ ರಾಜಕಾರಣಕ್ಕೆ ತೆರಳಿದರೂ ನಮ್ಮ ಬೇರುಗಳು ಇಲ್ಲೇ ಇದೆ. ಪಕ್ಷ ವರಿಷ್ಠರು ಯಾವಾಗ ರಾಜೀನಾಮೆಗೆ ಸೂಚಿಸುತ್ತಾರೋ ಅಂದೇ ರಾಜೀನಾಮೆ ನೀಡುತ್ತೇನೆ. ಪಕ್ಷ ಕೊಟ್ಟ ಜವಾಬ್ದಾರಿಯನ್ನು ಮುಂದುವರಿಸುತ್ತೇನೆ ಎಂದರು. ಇನ್ನು ನಿನ್ನೆ ನಡೆದ ಸಂಪುಟಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋಷನ್ ಪಡೆದ ಸಚಿವ ಸಿಟಿ ರವಿ ಅವರಿಗೆ ಸಚಿವ ಸಂಪುಟ ಸಭೆಯಲ್ಲಿ ಅಭಿನಂದನೆ ತಿಳಿಸಿದ್ದರು.

    ಇದೇ ವೇಳೆ ಉತ್ತರಪ್ರದೇಶದಲ್ಲಿ ನಡೆದ ಅತ್ಯಾಚಾರದ ಘಟನೆಯನ್ನು ಖಂಡಿಸಿದ ಸಿಟಿ ರವಿ ಅವರು, ಅತ್ಯಾಚಾರಿಗಳ ಮೇಲೆ ಕಠಿಣ ಕ್ರಮವನ್ನು ಕೈಗೊಳ್ಳಬೇಕು. ಆದರೆ ಇದನ್ನು ರಾಜಕೀಯ ದುರ್ಬಳಕೆ ಮಾಡಿಕೊಳ್ಳುವ ಮನೋಭಾವನೆ ಸರಿಯಲ್ಲ. ಕಾಂಗ್ರೆಸ್ ನದ್ದು ದನ ಸತ್ತರೆ ರಣಹದ್ದುಗಳು ಕಾಯುವ ರೀತಿಯ ಮನಸ್ಥಿತಿ. ರಾಹುಲ್ ಗಾಂಧಿ ಸಾಂತ್ವನ ಹೇಳೋದಕ್ಕೆ ಹೊರಟಿರಲಿಲ್ಲ. ಬದಲಾಗಿ ಪ್ರದರ್ಶನ ಮಾಡೋದಕ್ಕೆ ಮಾಡಲು ಹೊರಟಿದ್ದರು. ಪ್ರದರ್ಶನದ ಮೂಲಕ ಸಾಂತ್ವನ ಹೇಳೋದಲ್ಲ ಎಂದು ಟಾಂಗ್ ನೀಡಿದರು.

  • ಕೊರೊನಾ ಊಹೆಗೆ ನಿಲುಕದ ವೈರಸ್- ಮತ್ತೆ ಲಾಕ್‍ಡೌನ್ ಸುಳಿವು ನೀಡಿದ ಸಿಟಿ ರವಿ

    ಕೊರೊನಾ ಊಹೆಗೆ ನಿಲುಕದ ವೈರಸ್- ಮತ್ತೆ ಲಾಕ್‍ಡೌನ್ ಸುಳಿವು ನೀಡಿದ ಸಿಟಿ ರವಿ

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರಿಂದ ಲೋಕಲ್ ಲಾಕ್‍ಡೌನ್ ಮಾತು ಕೇಳಿ ಬಂದಿದೆ. ಇದರ ಬೆನ್ನಲ್ಲೇ ಸಚಿವ ಸಿಟಿ ರವಿ ಅವರು ಮತ್ತೆ ಲಾಕ್‍ಡೌನ್ ಮಾಡುವ ಕುರಿತ ಸುಳಿವನ್ನು ನೀಡಿದ್ದಾರೆ.

    ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಸಿಟಿ ರವಿ, ಕೊರೊನಾ ನಮ್ಮ ಊಹೆಗೂ ನಿಲುಕದ ವೈರಸ್ ಆಗಿದ್ದು, ಈ ಬಗ್ಗೆ ಯೋಚನೆ ಮಾಡಬೇಕಾದ ಸ್ಥಿತಿ ಬಂದಿದೆ ಎಂದು ತಿಳಿಸಿದರು. ಇದನ್ನೂ ಓದಿ: 1-2 ದಿನ ಲಾಕ್‌ಡೌನ್‌ – ರಾಜ್ಯಗಳ ಸಲಹೆ ಕೇಳಿದ ಮೋದಿ

    ಸದ್ಯ ಆರೋಗ್ಯವಾಗಿದ್ದ ಕೇಂದ್ರ ಸಚಿವರು ವಿಧಿವಶರಾಗಿದ್ದು, ರಾಜ್ಯ, ದೇಶಕ್ಕೆ ದೊಡ್ಡ ನಷ್ಟವಾಗಿದೆ. ಹಲವು ಕೊರೊನಾ ಪ್ರಕರಣದಲ್ಲಿ 90 ವರ್ಷದವರೂ ಸೋಂಕಿನಿಂದ ಗುಣಮುಖರಾಗಿದ್ದಾರೆ. ಆದರೆ 30 ವರ್ಷಗಳ ವಯಸ್ಸಿನವರು ಸಾವನ್ನಪ್ಪುತ್ತಿದ್ದಾರೆ. ಈಗ ಕೊರೊನಾವನ್ನು ನಿರ್ಲಕ್ಷ್ಯ ಮಾಡುವ ಸ್ಥಿತಿ ಇಲ್ಲ. ಅಚಾನಕ್ ಸಾವುಗಳು ಸಂಭವಿಸುತ್ತಿದೆ. ಆದ್ದರಿಂದ ಆರೋಗ್ಯ ಇಲಾಖೆ ನೀಡಿರುವ ಎಲ್ಲಾ ಎಚ್ಚರಿಕೆಗಳನ್ನು ವೈಯುಕ್ತಿಕವಾಗಿಯೂ ಅನುಸರಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂಬ ಸಂದೇಶ ಲಭಿಸಿದೆ ಎಂದರು.

    ಆರೋಗ್ಯ ಇಲಾಖೆ ನೀಡುವ ಸಲಹೆಗಳನ್ನು ಪಾಲಿಸುವುದು ಎಲ್ಲರ ಕರ್ತವ್ಯ. ಆದರೆ ಕೆಲವರು ಇದನ್ನೂ ಕೇವಲ ಸರ್ಕಾರದ ಜವಾಬ್ದಾರಿ ಅಷ್ಟೇ ಎಂದುಕೊಂಡಿದ್ದಾರೆ. ಕೊರೊನಾ ವಿಚಾರದಲ್ಲಿ ಸರ್ಕಾರಕ್ಕಿಂತ ವೈಯುಕ್ತಿಕ ಜವಾಬ್ದಾರಿ ಬಹಳ ಹೆಚ್ಚಿದೆ. ಆದ್ದರಿಂದ ಎಲ್ಲರೂ ನಿಯಮಗಳನ್ನು ಪಾಲಿಸಿ ಕೊರೊನಾವನ್ನು ದೂರ ಮಾಡೋಣ ಎಂದರು.

    ಸದನದಲ್ಲಿ ಕಾಂಗ್ರೆಸ್ ಪಕ್ಷ ಕಾಯ್ದೆಗಳಿಗೆ ವಿರೋಧ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, ಜನರ ವಿಶ್ವಾಸ ಕಳೆದುಕೊಂಡವರು ಇನ್ನು ಏನು ಮಾಡಲು ಸಾಧ್ಯ. ಕಾಂಗ್ರೆಸ್ ಪಕ್ಷದವರು ಜನರ ವಿಶ್ವಾಸ ಕಳೆದುಕೊಂಡಿದ್ದು, ಅವರಿಗೆ ನೈತಿಕತೆ ಎಲ್ಲಿದೆ. ತಾಂತ್ರಿಕವಾಗಿಯೂ ನಾವು ಗೆಲ್ಲುತ್ತೇವೆ, ನಂಬರ್ ನಲ್ಲಿಯೂ ನಾವು ಗೆಲ್ಲುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಕೋವಿಡ್‌ ನಿಯಮ ಪಾಲಿಸಿ, ಮಾದರಿಯಾಗೋಣ – ದೆಹಲಿಯಲ್ಲೇ ಅಂಗಡಿ ಅಂತ್ಯಕ್ರಿಯೆ

  • ಬಿಎಸ್‍ವೈ ಮನೆಯಲ್ಲಿ ವಾಚ್‍ಮ್ಯಾನ್ ಕೆಲಸ ಖಾಲಿ ಇದೆ: ಸಿಟಿ ರವಿ

    ಬಿಎಸ್‍ವೈ ಮನೆಯಲ್ಲಿ ವಾಚ್‍ಮ್ಯಾನ್ ಕೆಲಸ ಖಾಲಿ ಇದೆ: ಸಿಟಿ ರವಿ

    – ಈಗಲೇ ಜಮೀರ್ ಡ್ರಗ್ಸ್ ಪೆಡ್ಲರ್ ಅಂತ ಹೇಳಲ್ಲ
    – ಜಮೀರ್ ಮಾತಿನಲ್ಲಿ ಎಷ್ಟು ಸತ್ಯ ಇರುತ್ತೆ?

    ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಅವರ ಮಾತಿನಲ್ಲಿ ಎಷ್ಟು ಸತ್ಯ ಇರುತ್ತೆ? ಬಿಎಸ್ ಯಡಿಯೂರಪ್ಪನವರು ಸಿಎಂ ಆದರೆ ಅವರ ಮನೆಯಲ್ಲಿ ವಾಚ್‍ಮ್ಯಾನ್ ಆಗುತ್ತೇನೆ ಎಂದಿದ್ದರು. ವಾಚ್‍ಮ್ಯಾನ್ ಕೆಲಸ ಖಾಲಿ ಇದೆ. ಯಾವಾಗ ಮಾಚ್‍ಮ್ಯಾನ್ ಆಗುತ್ತೀರಾ ಎಂದು ಸಾಮಾಜಿಕ ಜಾಲತಾಣದಲ್ಲಿ ಜನರು ಪ್ರಶ್ನಿಸುತ್ತಿದ್ದಾರೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದ್ದಾರೆ.

    ವಿಧಾನಸೌಧದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಟಿ ರವಿ ಅವರು, ಜಮೀರ್ ಹೇಳಿಕೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ಆಗುತ್ತಿದೆ. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳು ಪವರ್ ಫುಲ್ ಆಗಿದ್ದು, ಬಿಎಸ್‍ವೈ ಅವರು ಸಿಎಂ ಆಗಿ 1 ವರ್ಷ ಆಗಿದೆ. ಆದ್ದರಿಂದ ಜನ ಜಮೀರ್ ಅವರನ್ನು ಯಾವಾಗ ವಾಚ್‍ಮ್ಯಾನ್ ಆಗ್ತಿಯಾ ಎಂದು ಪ್ರಶ್ನಿಸುತ್ತಿದ್ದಾರೆ. ಈಗ ಆಸ್ತಿ ಬರೆದುಕೊಡುತ್ತೇನೆ ಎಂದು ಹೇಳಿದ್ದಾರೆ. ಆದರೆ ಆಸ್ತಿ ಹೇಗೆ ಬಂತು ಎಂದು ಜನರು ಈಗ ಪ್ರಶ್ನಿಸುತ್ತಿದ್ದಾರೆ. ಜಮೀರ್ ಮಾತಿನಲ್ಲಿ ಎಷ್ಟು ಸತ್ಯ ಇರುತ್ತೆ? ಎಂದು ಹೇಳಿದರು. ಇದನ್ನೂ ಓದಿ: ಭಾಸ್ಕರ್ ರಾವ್ ಜೊತೆಗೂ ರಾಹುಲ್ ಫೋಟೋ ಇದೆ, ಅವರು ಅಪರಾಧಿನಾ: ಅಶೋಕ್ ಪ್ರಶ್ನೆ

    ಜಮೀರ್ ಅವರು ಕ್ಯಾಸಿನೋಗೆ ಹೋದರೆ ನೆಮ್ಮದಿ ಸಿಗುತ್ತೆ ಎಂದಿದ್ದಾರೆ. ಯಾವ ರೀತಿ ನೆಮ್ಮದಿ ಸಿಗುತ್ತೆ ಅಲ್ಲಿ ಎಂದು ಹೇಳಲಿ. ಈ ಬಗ್ಗೆ ಅವರು ಬೆಳಕು ಚೆಲ್ಲಬೇಕಿದೆ. ಅವರ ಪಾಸ್ ಪೋರ್ಟ್ ಪರಿಶೀಲನೆ ಮಾಡಿಸಬೇಕು. ಅದನ್ನು ಮುಚ್ಚಿಟ್ಟರೆ ಸಂಶಯದ ಸುಳಿಯೊಳಗೆ ಸಿಲುಕಿಕೊಳ್ಳುತ್ತೀರಿ ಎಂದು ಸಲಹೆ ಜಮೀರ್ ಅವರಿಗೆ ಸಲಹೆ ನೀಡಿದರು. ಇದನ್ನೂ ಓದಿ: ಇಂದು ರಾಗಿಣಿಗೆ ಜಾಮೀನು ಭಾಗ್ಯವಿಲ್ಲ – ಸೆ.16ಕ್ಕೆ ಮುಂದೂಡಿಕೆ

    ಆರೋಪಿ ಫಾಝಿಲ್ ಜೊತೆ ಸಿದ್ದರಾಮಯ್ಯ ಹಾಗೂ ಜಮೀರ್ ಇರುವ ಫೋಟೋ ಪ್ರದರ್ಶಿಸಿದ ಸಿ.ಟಿ ರವಿ ಅವರು, ಈ ಫೋಟೋ ಏನು ಹೇಳುತ್ತೆ? ಈ ಫೋಟೋ ಜನ್ಮ ಜನ್ಮಾಂತರದ ಸಂಬಂಧ ಅಂತ ಹೇಳುತ್ತದೆ. ಮಾಜಿ ಸಿಎಂ ಸಿದ್ದರಾಮಯ್ಯ, ಜಮೀರ್ ಅಹ್ಮದ್ ಎಲ್ಲಾ ಫೋಟೋದಲ್ಲಿದ್ದಾರೆ. ಇದು ಬಹಳ ಆತ್ಮೀಯ ಸಂಬಂಧ ಅಂತ ಫೋಟೋದಲ್ಲಿನ ಮುಖಭಾವ ಹೇಳುತ್ತೆ. ಇದು ಯಾವುದೋ ಕುಟುಂಬದ ಕಾರ್ಯಕ್ರಮ. ಇದು ಅಪರಿಚಿತ ಜೊತೆ ತೆಗೆಸಿಕೊಂಡಿರುವ ಫೋಟೋ ಅಂತೂ ಅಲ್ಲ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಆದರೆ ನಾನು ಈಗಲೇ ಜಮೀರ್ ಅವರನ್ನು ಡ್ರಗ್ಸ್ ಪೆಡ್ಲರ್ ಅಂತ ಹೇಳಲ್ಲ. ಜಮೀರ್ ಅವರು ಅಲ್ಪಸಂಖ್ಯಾತರ ಗುರಾಣಿ ಹಿಡಿದು ತಪ್ಪಿಸಿಕೊಳ್ಳೊದು ಬೇಡ. ಕಳ್ಳನ ಹೆಂಡತಿ ಯಾವತ್ತಾದರೂ ಒಂದು ದಿನ ‘ಡ್ಯಾಷ್’ ಆಗಲೇಬೇಕು. ಫೋಟೋದಲ್ಲಿ ಎಲ್ಲರೂ ಒಂದೇ ರೀತಿಯ ಟೋಪಿ ಹಾಕಿಕೊಂಡಿದ್ದು, ಅವರು ಮಾತ್ರ ಟೋಪಿ ಹಾಕಿಕೊಂಡಿದ್ದಾರಾ ಅಥವಾ ಬೇರೆಯವರಿಗೂ ಹಾಕಿದ್ದಾರಾ ಎಂಬುವುದು ತಿಳಿಯಬೇಕಿದೆ ಎಂದು ಕಿಡಿಕಾರಿದರು.

  • ಈ ಬಾರಿ ಮೈಸೂರಿನಲ್ಲಿ ಸರಳ ದಸರಾ ಆಚರಣೆ – ಏನಿರುತ್ತೆ? ಏನಿರಲ್ಲ?

    ಈ ಬಾರಿ ಮೈಸೂರಿನಲ್ಲಿ ಸರಳ ದಸರಾ ಆಚರಣೆ – ಏನಿರುತ್ತೆ? ಏನಿರಲ್ಲ?

    ಬೆಂಗಳೂರು: ಕೊರೊನಾ ವೈರಸ್ ಸೋಂಕಿನ ಕಾರಣದಿಂದ ಈ ಬಾರಿಯ 2020ರ ದಸರಾವನ್ನು ಸರಳವಾಗಿ ಆಚರಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಸಿಟಿ ರವಿ ಹೇಳಿದ್ದಾರೆ.

    ದಸರಾ ಆಚರಣೆ ಕುರಿತು ಚರ್ಚಿಸಲು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಉನ್ನತ ಮಟ್ಟದ ಸಮಿತಿ ಸಭೆ ನಡೆಯಿತು. ಸಭೆ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಚಿವ ಸಿಟಿ ರವಿ, ಚಾಮುಂಡಿ ಬೆಟ್ಟ, ಅರಮನೆಗೆ ಮಾತ್ರ ಈ ಬಾರಿ ದಸರಾ ಸೀಮಿತವಾಗಿರಬೇಕು ಎಂದು ಉನ್ನತ ಮಟ್ಟದ ಸಮಿತಿಯಿಂದ ತೀರ್ಮಾನ ಮಾಡಲಾಗಿದೆ. ಅರಮನೆಯಲ್ಲಿ ಹಾಗೂ ಚಾಮುಂಡಿ ಬೆಟ್ಟದಲ್ಲಿ ಸಂಪ್ರದಾಯದ ಕಾರ್ಯಕ್ರಮಗಳು ಇರುತ್ತೆ. ಯುವ ದಸರಾ, ವಸ್ತು ಪ್ರದರ್ಶನ, ಫಲ ಪುಷ್ಪ ಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಸದೇ ಇರಲು ನಿರ್ಧಾರ ಮಾಡಲಾಗಿದ್ದು, ಅರಮನೆ ಒಳಗೆ ಮಾತ್ರ ಜಂಬೂ ಸವಾರಿ ನಡೆಯಲಿದೆ ಎಂದು ತಿಳಿಸಿದರು.

    ಈ ಬಾರಿ ಕೊರೊನಾ ವಾರಿಯರ್ಸ್ ಗಳಿಂದ ದಸರಾ ಉದ್ಘಾಟನೆ ಮಾಡಲಾಗುವುದು. ದಸರಾಗೆ ಪ್ರಾರಂಭಿಕವಾಗಿ 10 ಕೋಟಿ ರೂ. ಬಿಡುಗಡೆಗೆ ಮಾಡಲು ನಿರ್ಧಾರ ಮಾಡಲಾಗಿದ್ದು, ದಸರಾದಲ್ಲಿ ಚೀನಿ ವಸ್ತುಗಳು ಸಂಪೂರ್ಣ ನಿಷೇಧ ಮಾಡಲಾಗಿದೆ. ಅಲ್ಲದೇ ಈ ಬಾರಿ ದಸರಾಗೆ ಆನೆಗಳ ಸಂಖ್ಯೆಯಲ್ಲಿ ಇಳಿಕೆ ಮಾಡಲಾಗಿದ್ದು, 10ಕ್ಕೂ ಹೆಚ್ಚು ಆನೆಗಳ ಬದಲಾಗಿ ಕೇವಲ 5 ಆನೆಗಳು ಮಾತ್ರ ಇರುತ್ತದೆ. ಆದರೆ ಅರಮನೆ ಆವರಣದಲ್ಲಿ ಮಾತ್ರ ಜಂಬೂಸವಾರಿ ನಡೆಯಲಿದೆ. ಮೈಸೂರಿನಲ್ಲಿ ಮತ್ತೊಂದು ಸಭೆ ನಡೆಸಿ ಅಂತಿಮ ನಿರ್ಧಾರ ಮಾಡಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

    ಏನಿರುತ್ತೆ?
    * ಈ ವರ್ಷ ಕೇವಲ ಚಾಮುಂಡಿ ಬೆಟ್ಟ, ಅರಮನೆ ಒಳಗೆ ಮಾತ್ರ ಆಚರಣೆ. ಜನಸಂದಣಿಗೆ ಅವಕಾಶ ನೀಡದಂತೆ ಮೈಸೂರು ದಸರಾ ಆಚರಣೆ.
    * ಸಂಪ್ರದಾಯಕ್ಕೆ ಸೀಮಿತವಾಗಿ ಈ ಬಾರಿ ದಸರಾ ಸಂಭ್ರಮಾಚರಣೆ ನಡೆಯಲಿದ್ದು, ಚಾಮುಂಡಿ ಬೆಟ್ಟ, ಅರಮನೆ ಒಳಗೆ ಮಾತ್ರ ದಸರಾ ಆಚರಣೆ.
    * ಆರಮನೆ ಆವರಣದಲ್ಲಿ ಜಂಬೂ ಸವಾರಿ ನಡೆಯಲಿದ್ದು, ಈ ಬಾರಿ ದಸರಾಗೆ 5 ಆನೆಗಳು ಮಾತ್ರ ಆಗಮನ.
    * 5 ಜನ ಕೊರೊನಾ ವಾರಿಯರ್ಸ್ ಗಳಿಂದ ಈ ಬಾರಿ ದಸರಾ ಉದ್ಘಾಟನೆ ಮಾಡಲಿದ್ದು, ವೈದ್ಯರು, ನರ್ಸ್, ಆಶಾ ಕಾರ್ಯಕರ್ತೆ, ಪೌರ ಕಾರ್ಮಿಕರು, ಪೊಲೀಸ್ ರಿಂದ ಉದ್ಘಾಟನೆ ನಡೆಯಲಿದೆ.
    * ಸಂಪ್ರದಾಯಕ್ಕೆ ಸೀಮಿತವಾಗಿ ಕುಸ್ತಿ ಪಂದ್ಯ ಆಯೋಜನೆ ಮಾಡಲಾಗುತ್ತದೆ.
    * ನಗರದ ಪ್ರಮುಖ ಬೀದಿಗಳು, ಸರ್ಕಲ್ ನಲ್ಲಿ ದೀಪಾಲಂಕಾರ ಮಾಡಲಾಗುತ್ತದೆ.
    * ದಸರಾ ಆಚರಣೆಗೆ ಸಿಎಂ ಅವರಿಂದ 10 ಕೋಟಿ ರೂ. ಮತ್ತು ಮೂಡಾ ದಿಂದ 5 ಕೋಟಿ ರೂ. ಬಿಡುಗಡೆ ಮಾಡಲಾಗುತ್ತದೆ.

    ಏನಿರಲ್ಲ?
    * ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳು.
    * ಯುವ ದಸರಾ, ಮಕ್ಕಳ ದಸರಾ, ಮಹಿಳಾ ದಸರಾ, ಯೋಗ ದಸರಾ ವಸ್ತು ಪ್ರದರ್ಶನ, ಫಲ ಪುಷ್ಪ ಪ್ರದರ್ಶನ.
    * ಚಿತ್ರೋತ್ಸವ, ಹಾಸ್ಯೋತ್ಸವ, ಸಂಗೀತ ಸಂಜೆ, ಕವಿಗೋಷ್ಠಿ, ಸಾಹಸ ಕ್ರೀಡೆ, ಆಹಾರ ಮೇಳೆ, ಕುಸ್ತಿ ಪಂದ್ಯ.
    * ರೈತ ದಸರಾ, ರಾಜ್ಯ ದಸರಾ ಕ್ರೀಡಾ ಕೂಟ, ಏರ್ ಶೋ, ಹೆಲಿ ರೈಡ್, ಚಿತ್ರ ಸಂತೆ, ಹಸಿರು ಸಂತೆ, ಹಾಟ್ ಏರ್ ಬಲ್ಯೂನ್, ಮತ್ಸ್ಯ ಮೇಳ.
    * ಪಂಜಿನ ಕವಾಯತು.

    ಸಭೆಯಲ್ಲಿ ಡಿಸಿಎಂಗಳಾದ ಕಾರಜೋಳ, ಲಕ್ಷ್ಮಣ ಸವದಿ, ಡಾ. ಅಶ್ವಥ್ ನಾರಾಯಣ, ಕನ್ನಡ ಮತ್ತು ಸಂಸ್ಕøತಿ ಹಾಗೂ ಪ್ರವಾಸೋದ್ಯಮ ಸಚಿವ ಸಿಟಿ ರವಿ, ಮೈಸೂರು ಭಾಗದ ಜನಪ್ರತಿನಿಧಿಗಳು, ಮಂಡ್ಯ ಜಿಲ್ಲೆ ಜನಪ್ರತಿನಿಧಿಗಳು, ಮೈಸೂರು ಡಿಸಿ, ಮೈಸೂರು ಆಯುಕ್ತರು, ಎಸ್‍ಪಿ ಸೇರಿ ವಿವಿಧ ಇಲಾಖೆ ಮುಖ್ಯಸ್ಥರು ಸಭೆಯಲ್ಲಿ ಭಾಗಿಯಾಗಿದ್ದರು.

  • ಡ್ರಗ್ಸ್ ಮಾಫಿಯಾ ಪ್ರಕರಣ ತನಿಖೆ ನಡೆಸುತ್ತಿರೋ ಪೊಲೀಸರ ಮೇಲೆ ಒತ್ತಡ ಹಾಕಲಾಗುತ್ತಿದೆ: ಸಿಟಿ ರವಿ

    ಡ್ರಗ್ಸ್ ಮಾಫಿಯಾ ಪ್ರಕರಣ ತನಿಖೆ ನಡೆಸುತ್ತಿರೋ ಪೊಲೀಸರ ಮೇಲೆ ಒತ್ತಡ ಹಾಕಲಾಗುತ್ತಿದೆ: ಸಿಟಿ ರವಿ

    ಚಿಕ್ಕಮಗಳೂರು: ಡ್ರಗ್ ಮಾಫಿಯಾ ಇವತ್ತು, ನಿನ್ನೆಯದ್ದಲ್ಲ. ಆಗಾಗ ಮಾಫಿಯಾವನ್ನು ನಿಯಂತ್ರಿಸುವ ಕಾರ್ಯ ಮಾಡಿದ್ದರು ಕೂಡ ಅದನ್ನು ಬೇರು ಸಮೇತ ಕಿತ್ತುಹಾಕಲು ಸಾಧ್ಯವಾಗಿಲ್ಲ. ಈಗ ಸರ್ಕಾರ ಮಾಫಿಯಾವನ್ನು ಗಂಭೀರವಾಗಿ ಪರಿಗಣಿಸಿದೆ. ಆದರೆ ತನಿಖಾ ತಂಡದ ಮೇಲೆ ಒತ್ತಡ ತರುವಂತಹ ಕೆಲಸ ನಡೆಯುತ್ತಿದೆ ಎಂದು ಪ್ರವಾಸೋದ್ಯಮ ಸಚಿವ ಸಿಟಿ ರವಿ ಹೇಳಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಡ್ರಗ್ ಮಾಫಿಯಾವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, 84ಕ್ಕೂ ಹೆಚ್ಚು ಜನರನ್ನ ವಿಚಾರಣೆ ಮಾಡುವ ಕೆಲಸವಾಗಿದೆ. ಈ ವಿಷಯದಲ್ಲಿ ಸರ್ಕಾರ ರಾಜಿ ಮಾಡಿಕೊಂಡಿಲ್ಲ. ಈಗಾಗಲೇ ಗೃಹ ಸಚಿವರು ಈ ಕುರಿತು ಮಾತನಾಡಿ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ ಎಂದು ಹೇಳಿದ್ದಾರೆ. ಮಾಫಿಯಾದಲ್ಲಿ ಯಾರೇ ಇದ್ದರೂ ಕಠಿಣ ಕ್ರಮಕೈಗೊಳ್ಳುತ್ತೇವೆ. ಯುವ ಜನರನ್ನು ಪಿಡುಗಿನಿಂದ ಮುಕ್ತಗೊಳಿಸಬೇಕೆಂಬ ಜವಾಬ್ದಾರಿ ಸರ್ಕಾರದ ಮೇಲಿದೆ ಎಂದು ಸ್ಪಷ್ಟಪಡಿಸಿದರು.

    ಸರ್ಕಾರ ಡ್ರಗ್ಸ್ ಮಾಫಿಯಾವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಮಾಡಿಸುತ್ತಿದ್ದೆ. ಆದ್ದರಿಂದಲೇ ತನಿಖಾ ತಂಡದ ಮೇಲೆ ಒತ್ತಡ ತರುವ ಹಾಗೂ ಕೆಲವೊಮ್ಮೆ ವಿಷಯಾಂತರ ಗೊಳಿಸುವಂತಹ ಪ್ರಯತ್ನ ನಡೆಸುತ್ತಿದ್ದಾರೆ. ಆದರೆ ಸರ್ಕಾರ ಇದಕ್ಕೆಲ್ಲಾ ಸರ್ಕಾರ ಮಣಿಯುವುದಿಲ್ಲ ಎಂದು ಹೇಳಿದರು.

    ಡ್ರಗ್ಸ್ ಮಾಫಿಯಾದಲ್ಲಿ ಈಗಾಗಲೇ ಕೆಲ ಸಾಕ್ಷಿಗಳನ್ನು ಆಧರಿಸಿ ಕೆಲವರನ್ನು ವಶಕ್ಕೆ ಪಡೆಯುವ ಮತ್ತು ಮತ್ತಷ್ಟು ಮಂದಿಯನ್ನು ವಿಚಾರಣೆ ನಡೆಸುವ ಕಾರ್ಯವನ್ನು ಮಾಡುದೆ. ಇದರಿಂದಲೇ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ ಎಂಬುವುದು ಅರ್ಥವಾಗುತ್ತದೆ. ಈ ಮಾಫಿಯಾ ಇದು ರಾಜ್ಯಕ್ಕೆ ಸೀಮಿತವಾಗಿಲ್ಲ, ಹೊರರಾಜ್ಯ, ಹೊರದೇಶಗಳ ಸಂಪರ್ಕ ಕೂಡ ಇದೆ. ಕೆಲವು ಕಡೆ ಮಾಫಿಯಾ ಭಯೋತ್ಪಾದಕರ ಜೊತೆ ತಳುಕು ಹಾಕಿಕೊಂಡಿದೆ. ಮತ್ತೆ ಕೆಲವು ಕಡೆ ರಾಜಕಾರಣಿಗಳು ಹಾಗೂ ಸಿನಿಮಾ ಸೆಲೆಬ್ರಿಟಿಗಳ ಜೊತೆಯೂ ತಳುಕು ಹಾಕಿಕೊಂಡಿದೆ. ಮಾಫಿಯಾದಲ್ಲಿ ಯಾರೇ ಇದ್ದರೂ ಸರಿಯೇ, ಗಂಭೀರವಾಗಿ ತನಿಖೆಯಾಗುತ್ತದೆ ಎಂದು ತಿಳಿಸಿದರು.

  • ನಮ್ಮದೇನಿದ್ದರೂ ಏಕ್ ಮಾರ್ ದೋ ತುಕ್ಡಾ ಕ್ರಮ: ಸಚಿವ ಸಿಟಿ ರವಿ

    ನಮ್ಮದೇನಿದ್ದರೂ ಏಕ್ ಮಾರ್ ದೋ ತುಕ್ಡಾ ಕ್ರಮ: ಸಚಿವ ಸಿಟಿ ರವಿ

    ಬೆಂಗಳೂರು: ಎಸ್‍ಡಿಪಿಐ ನಿಷೇಧ ವಿಚಾರ ಇಂದಿನ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಸಿಟಿ ರವಿ ಹೇಳಿದ್ದಾರೆ.

    ವಿಧಾನಸೌಧದ ಬಳಿ ಮಾತನಾಡಿದ ಸಿಟಿ ರವಿ ಅವರು, ಯಾವುದೇ ಒಂದು ಘಟನೆ ಮೇಲೆ ನಿಷೇಧದಂತಹ ನಿರ್ಧಾರ ಮಾಡಲು ಸಾಧ್ಯವಿಲ್ಲ. ಆದರೆ ಈ ಹಿಂದೆ ನಡೆದಿರುವ ಹಲವಾರು ಸಮಾಜ ಘಾತುಕ ಘಟನೆಗಳ ಬಗ್ಗೆ ಕೂಡ ಸಾಕ್ಷಾಧಾರ ಕಲೆ ಹಾಕುವ ಕೆಲಸ ಆಗುತ್ತಿದೆ. ಯಾವುದೇ ಸಮಾಜ ಘಾತುಕ ಶಕ್ತಿಗಳನ್ನು ಸಹಿಸಿಕೊಳ್ಳುವ ಪ್ರಶ್ನೆ ಇಲ್ಲ. ನಾಳೆ ದಿನ ಕೋರ್ಟಿನಲ್ಲೂ ಈ ಕುರಿತಂತೆ ಉತ್ತರ ನೀಡಬೇಕಾದ ಸಂದರ್ಭ ಎದುರಾಗುತ್ತದೆ. ಆದ್ದರಿಂದ ಅದಕ್ಕೆ ಬೇಕಾದ ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದೇವೆ ಎಂದರು.

    ಕೆಲವರು ರಾಜಕೀಯ ಕಾರಣಗಳಿಗಾಗಿ ನೀಡುತ್ತಿರುವ ಹೇಳಿಕೆಗಳನ್ನು ಗಮನಿಸುತ್ತಿದ್ದೇನೆ. ಅವರಿಗೆ ಅಕ್ಕಿ ಮೇಲೆ ಆಸೆ, ಅಕ್ಕನ ಮಕ್ಕಳ ಮೇಲೂ ಪ್ರೀತಿ ಅನ್ನೋ ರೀತಿ ಮಾಡುತ್ತಿದ್ದಾರೆ. ಮತ ಬ್ಯಾಂಕ್ ರಾಜಕೀಯ ಇನ್ನಾದರೂ ಕಾಂಗ್ರೆಸ್ ನಾಯಕರು ಬಿಡಲಿ. ಯಾವುದೇ ಸಂಘಟನೆ ತಪ್ಪು ಮಾಡಿದರೂ ನಾವು ಅವರನ್ನು ಬಿಡುವುದಿಲ್ಲ. ನಮ್ಮದೇನಿದ್ದರೂ ಏಕ್ ಮಾರ್ ದೋ ತುಕ್ಡಾ ಕ್ರಮ. ಬೆಂಗಳೂರು ಗಲಭೆಯಲ್ಲಿ ಉಂಟಾಗಿರುವ ಆಸ್ತಿ ನಷ್ಟವನ್ನು ಅವರಿಂದಲೇ ತುಂಬಿಸುತ್ತೇವೆ ಎಂದರು.

    ಇದೇ ವೇಳೆ ತಮ್ಮ ದೆಹಲಿ ಭೇಟಿ ಕುರಿತು ಪ್ರತಿಕ್ರಿಯೆ ನೀಡಿದ ಅವರು, ದೆಹಲಿ ಭೇಟಿ ಫಲಪ್ರದವಾಗಿದೆ. ನಾನು ಅಂದುಕೊಂಡ ಎಲ್ಲಾ ಕೆಲಸ ಈಡೇರಿದೆ. ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಸದಾನಂದ ಗೌಡರು ಸಹಕಾರ ನೀಡಿದ್ದು, ನನ್ನ ಇಲಾಖೆಗೆ ಸಂಬಂಧಿಸಿದ ಎಲ್ಲಾ ಕೆಲಸ ಯಶಸ್ವಿಯಾಗಿದೆ. ಮೈಸೂರಿನಲ್ಲಿ ಸ್ವಾಯತ್ತ ಕೇಂದ್ರ ಮಾಡಲು ಎಚ್‍ಆರ್ ಡಿ ಮಿನಿಸ್ಟರ್ ಭರವಸೆ ನೀಡಿದ್ದಾರೆ. ಖೇಲೋ ಇಂಡಿಯಾದಲ್ಲಿ ಕರ್ನಾಟಕ ಹೆಚ್ಚು ಸಹಕಾರ ನೀಡಲು ಕೇಂದ್ರದ ಸಚಿವರಿಗೆ ಮನವಿ ಮಾಡಿದ್ದೇವೆ. ನಮ್ಮ ಮನವಿ ಹಾಗೂ ಬೇಡಿಕೆಗಳಿಗೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.

  • ನಟ ಶಿವರಾಜ್ ಕುಮಾರ್ ಮನೆಯಲ್ಲಿ ಕನ್ನಡ ಸ್ಟಾರ್ ನಟರ ಸಭೆ

    ನಟ ಶಿವರಾಜ್ ಕುಮಾರ್ ಮನೆಯಲ್ಲಿ ಕನ್ನಡ ಸ್ಟಾರ್ ನಟರ ಸಭೆ

    ಬೆಂಗಳೂರು: ಕೊರೊನಾದಿಂದ ಕಿರುತೆರೆ ಮತ್ತು ಸಿನಿಮಾರಂಗಕ್ಕೆ ಆಗಿರುವ ಸಮಸ್ಯೆಗಳ ಬಗ್ಗೆ ಇಂದು ಕನ್ನಡ ಸ್ಟಾರ್ ನಟರು, ನಟ ಶಿವರಾಜ್ ಕುಮಾರ್ ಅವರ ನಿವಾಸದಲ್ಲಿ ಸಭೆ ನಡೆಸಿ ಚರ್ಚೆ ನಡೆಸಿದರು.

    ಚಿತ್ರಮಂದಿರ ತೆರೆಯುವುದು ಹಾಗೂ ತೆರಿಗೆ ವಿನಾಯಿತಿಗೆ ಮನವಿ ಪಡೆಯುವ ಬಗ್ಗೆ ಸಚಿವ ಸಿಟಿ ರವಿ ಅವರೊಂದಿಗೆ ಕಲಾವಿದರು ಹಾಗೂ ನಿರ್ಮಾಪಕರು ಸಭೆಯಲ್ಲಿ ಮನವಿ ಮಾಡಿದರು. ಈ ವೇಳೆ ನಟರಾದ ರವಿಚಂದ್ರನ್, ಪುನೀತ್ ರಾಜ್‍ಕುಮಾರ್, ಉಪೇಂದ್ರ, ದುನಿಯಾ ವಿಜಯ್, ರಕ್ಷಿತ್ ಶೆಟ್ಟಿ, ಯಶ್, ರಮೇಶ್ ಅರವಿಂದ್, ಶ್ರೀಮುರಳಿ, ಗಣೇಶ್ ಹಾಗೂ ನಿರ್ಮಾಪಕರಾದ ಪುಷ್ಕರ್ ಮಲ್ಲಿಕಾರ್ಜುನಯ್ಯ, ಕಾರ್ತಿಕ್ ಗೌಡ, ಸೂರಪ್ಪ ಬಾಬು ಸೇರಿದಂತೆ ಹಲವರು ಸಭೆಯಲ್ಲಿ ಹಾಜರಿದ್ದರು.

    ಸಭೆ ಬಳಿಕ ವಿಧಾನಸೌಧದಲ್ಲಿ ಮಾತನಾಡಿದ ಸಚಿವ ಸಿಟಿ ರವಿ ಅವರು, ಚಲನಚಿತ್ರೋದ್ಯಮ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಸಭೆ ನಡೆಸಿ ಚರ್ಚೆ ನಡೆಸಿದ್ದು, ಅನೇಕ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು. ಉದ್ಯಮವನ್ನು ಅವಲಂಬಿಸಿರುವವರಿಗೆ ವಿಶೇಷ ಪ್ಯಾಕೇಜ್ ಹಾಗೂ ಚಿತ್ರೋದ್ಯಮ ಪುನಶ್ಚೇತನಕ್ಕೆ ಸಹಕಾರ ನೀಡಲು ಮನವಿ ಮಾಡಿದ್ದಾರೆ. ಈ ಬಗ್ಗೆ ಸಿಎಂ ಅವರೊಂದಿಗೆ ಚರ್ಚೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

    ಜಿಮ್ ಮತ್ತು ಚಿತ್ರಮಂದಿರ ಪುನರಾರಂಭ ಮಾಡುವ ನೀತಿ ನಿಯಮಗಳು ಕೇಂದ್ರ ಸರ್ಕಾರದ ನೀತಿ ನಿಯಮಗಳ ಮೇಲೆ ಅವಲಂಬನೆ ಆಗಿರುತ್ತೆ. ಕೇಂದ್ರದ ನಿರ್ಧಾರದ ಮೇಲೆ ನಾವು ಕ್ರಮ ತೆಗೆದುಕೊಳ್ಳುತ್ತೇವೆ. ಚಿತ್ರಮಂದಿರದವರು ಭೇಟಿ ಮಾಡಿ ಮಾತನಾಡಿದ್ದಾರೆ. ಅಲ್ಲದೇ ಕುರಿತಂತೆ ಸಿಎಂ ಅವರನ್ನು ಭೇಟಿ ಮಾಡಿಸಿ ಚರ್ಚೆ ಮಾಡುತ್ತೇವೆ. ಚಿತ್ರೋದ್ಯಮದ ಬಗ್ಗೆ ನಮಗೂ ಕಾಳಜಿ ಇದೆ ಎಂದು ಹೇಳಿದರು.

  • ಮುಂದಿನ 15-20 ದಿನಗಳ ಕಾಲ ಪ್ರವಾಸ ಹೋಗ್ಬೇಡಿ: ಸಿಟಿ ರವಿ

    ಮುಂದಿನ 15-20 ದಿನಗಳ ಕಾಲ ಪ್ರವಾಸ ಹೋಗ್ಬೇಡಿ: ಸಿಟಿ ರವಿ

    ಬೆಂಗಳೂರು: ಕೊರೊನಾ ಕಾರಣ ರಾಜ್ಯದಲ್ಲಿ ದಿನವೇ ದಿನೇ ಪರಿಸ್ಥಿತಿ ಹದಗೆಡುತ್ತಿದೆ. ‘ಯುದ್ಧಕಾಲೇ ಶಸ್ತ್ರಭ್ಯಾಸ’ ಎಂಬಂತೆ ಸರ್ಕಾರ ಕಳೆದ ನಾಲ್ಕು ದಿನಗಳಿಂದ ಮೀಟಿಂಗ್ ಮೇಲೆ ಮೀಟಿಂಗ್‍ಗಳನ್ನು ಮಾಡುತ್ತಿದೆ. ಸರ್ಕಾರದ ಮಟ್ಟದಲ್ಲಿ ನಡೆಯುತ್ತಿರುವ ಬೆಳವಣಿಗೆ ಗಮನಿಸಿದರೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮುಗಿದ ಕೂಡಲೇ ಅರ್ಧ ಅಥವಾ ಸಂಪೂರ್ಣ ಲಾಕ್‍ಡೌನ್ ಜಾರಿ ಆಗುವುದು ಬಹುತೇಕ ಫಿಕ್ಸ್ ಆಗಿದೆ.

    ಈ ಕುರಿತು ಮಾತನಾಡಿದ ಸಚಿವ ಸಿಟಿ ರವಿ ಅವರು, ಮುಂದಿನ 20 ದಿನಗಳ ಕಾಲ ನಿಮ್ಮೆಲ್ಲಾ ಪ್ರವಾಸ ಮುಂದೂಡಿ ಎಂಬ ಸಲಹೆಯನ್ನು ರಾಜ್ಯದ ಜನತೆಗೆ ನೀಡಿದ್ದಾರೆ. ಕೊರೊನಾ ಕುರಿತ ಭಯ ಜನರನ್ನು ಕಾಡುತ್ತಿದೆ. ಬೆಂಗಳೂರಿನಲ್ಲಿ ಹೆಚ್ಚು ಕೇಸ್ ಬರುತ್ತಿರುವುದರಿಂದ ಪ್ರವಾಸೋದ್ಯಮ ಸ್ಥಳಗಳ ಸಮೀಪ ವಾಸಿಸುವ ಜನರಲ್ಲಿ ಭಯ ಕಾಡುತ್ತಿದೆ. ಆದ್ದರಿಂದ ನಿಮ್ಮ ಪ್ರವಾಸವನ್ನು ಮುಂದಿನ 15-20 ದಿನಗಳವರೆಗೂ ಮುಂದೂಡಿ. ತಜ್ಞರು ನೀಡುವ ಸಲಹೆ ಮೇರೆಗೆ ಲಾಕ್‍ಡೌನ್ ಮಾಡಬೇಕಾ..? ಬೇಡವಾ..? ಎಂದು ಯೋಚನೆ ಮಾಡುತ್ತೇವೆ ಎಂದರು.

    ಲಾಕ್‍ಡೌನ್ ನಿರ್ಧಾರ ರಾಜಕೀಯಕ್ಕೆ ಸಂಬಂಧಿಸಿದ ವಿಚಾರವಲ್ಲ. ಯಾರು ಕೊರೊನಾ ಕುರಿತು ಮೈ ಮರೆಯಬಾರದು, ಎಲ್ಲಾ ಎಚ್ಚರಿಕೆಯಿಂದ ಇರಬೇಕು. ಸಮುದಾಯಕ್ಕೆ ಸೋಂಕು ಹರಡದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಸಚಿವರು ತಿಳಿಸಿದರು.

    ಇದೇ ವೇಳೆ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಕಾಂಗ್ರೆಸ್‍ನ ಅನೇಕ ಹಿರಿಯ ನಾಯಕರಿಗೆ ಭಯ ಹುಟ್ಟಿಸುವಂತಿದೆ. ನನಗೆ ಬಿಜೆಪಿ ಪಕ್ಷದವರ ಜೊತೆ ಮಾತ್ರ ಸಂಬಂಧವಿದ್ದು, ಬೇರೆ ಪಕ್ಷದವರ ಜೊತೆಗೆ ಯಾವುದೇ ಸೋದರ ಮಾವನ ಸಂಬಂಧ ಇಲ್ಲ ಎಂದು ವ್ಯಂಗ್ಯವಾಡಿದರು.

    ಉಳಿದಂತೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ರಾಜ್ಯದಲ್ಲಿ ಲಾಕ್‍ಡೌನ್ ಮಾಡಲು ನಿರ್ಧರಿಸಿದರೆ ಯಾವ ಮಾದರಿಯ ಲಾಕ್‍ಡೌನ್ ಎನ್ನುವುದನ್ನು ಮುಖ್ಯಮಂತ್ರಿ ಯಡಿಯೂರಪ್ಪ ತೀರ್ಮಾನಿಸಲಿದ್ದಾರೆ. ಮೊದಲು ಬೆಂಗಳೂರಿಗಷ್ಟೇ ಸೀಮಿತ ಎಂದುಕೊಂಡಿದ್ದ ಲಾಕ್‍ಡೌನ್‍ನ್ನು ಇಡೀ ರಾಜ್ಯಕ್ಕೆ ವಿಸ್ತರಿಸುವ ಬಗ್ಗೆಯೂ ಚರ್ಚೆಗಳು ನಡೆದಿವೆ ಎಂಬ ಮಾಹಿತಿ ಲಭಿಸಿದೆ.

  • ಸಿಎಂ ಬಿಎಸ್‍ವೈ ಮಾತು ಉಳಿಸಿಕೊಂಡಿದ್ದಾರೆ, ಅವ್ರು ಮಾತು ತಪ್ಪಲ್ಲ: ಎಸ್.ಟಿ.ಸೋಮಶೇಖರ್

    ಸಿಎಂ ಬಿಎಸ್‍ವೈ ಮಾತು ಉಳಿಸಿಕೊಂಡಿದ್ದಾರೆ, ಅವ್ರು ಮಾತು ತಪ್ಪಲ್ಲ: ಎಸ್.ಟಿ.ಸೋಮಶೇಖರ್

    – ‘ಸಿ.ಟಿ.ರವಿಗೆ ಎಂ.ಎಲ್.ಸಿ ಮಾಡಿಸಿ ಅಂತ ಬೆಳಗ್ಗಿಂದ ಫೋನು’

    ಚಿಕ್ಕಮಗಳೂರು: ಇದೇ ತಿಂಗಳ 19ರಂದು ನಡೆಯೋ ಎಂ.ಎಲ್.ಸಿ. ಚುನಾವಣೆಯ ಅಭ್ಯರ್ಥಿಗಳ ಆಯ್ಕೆ ಹಾಗೂ ಫಲಿತಾಂಶದ ಬಗ್ಗೆ ಬಿಜೆಪಿಯವರಿಗೆ ಮೊದಲೇ ತಿಳಿದು ಈಗಿನ ಆಂತರಿಕ ಬೇಗುದಿಗೆ ಕಾರಣವಾಗಿದೆಯಾ ಎಂಬ ಅನುಮಾನ ಮೂಡಿದೆ. ಏಕೆಂದರೆ, ಇಂದು ನಗರದ ಡಿಸಿಸಿ ಬ್ಯಾಂಕ್‍ನಲ್ಲಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ ಮಾತು ಎಲ್ಲಾ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಉಪಚುನಾವಣೆಯಲ್ಲಿ ಸೋತ ಆರ್.ಶಂಕರ್, ಎಂ.ಟಿ.ಬಿ.ನಾಗರಾಜ್ ಹಾಗೂ ವಿಶ್ವನಾಥ್ ಎಂ.ಎಲ್.ಸಿ. ಆಗಿ ಸಚಿವರಾಗ್ತಾರಾ ಎಂಬ ಅನುಮಾನ ಮೂಡಿದೆ.

    ಬಿಜೆಪಿಗೆ ನಾಯಕರಿಗೆ ಇದರ ಮುನ್ಸೂಚನೆ ಸಿಕ್ಕಿಯೇ ಸಭೆಗಳು ಆರಂಭವಾಗಿದ್ಯಾ ಎಂಬ ಶಂಕೆ ವ್ಯಕ್ತವಾಗಿದೆ. ಏಕೆಂದರೆ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರ ಹೇಳಿಕೆ ಮೇಲಿನ ಎಲ್ಲದಕ್ಕೂ ಸಾಮಿಪ್ಯವಿರುವಂತ್ತಿದೆ. ಸಿಎಂ ನಮ್ಮೆಲ್ಲರನ್ನೂ ಶಾಸಕರು, ಸಚಿವರು ಮಾಡಿದ್ದಾರೆ. ಅವರು ಮಾತಿಗೆ ತಕ್ಕಂತೆ ನಡೆದುಕೊಂಡಿದ್ದಾರೆ. ಎಲ್ಲರಿಗೂ ಅವಕಾಶ ಮಾಡಿ ಕೊಡ್ತೀನಿ ಎಂದಿದ್ದರು. ಅವರು ಮಾತಿಗೆ ತಪ್ಪಲ್ಲ ಎಂದಿರೋದು ಸೋತ ಮೂವರು ಎಂ.ಎಲ್.ಸಿ. ಮೂಲಕ ಮಿನಿಸ್ಟರ್ ಆಗುತ್ತಾರಾ ಎಂದು ಬಿಜೆಪಿಯಲ್ಲಿ ಅಸಮಾಧಾನ ವ್ಯಕ್ತವಾಗಿ ಈ ಬೆಳಣಿಗೆ ನಡೆದಿರುವಂತಿದೆ.

    ಸಿ.ಟಿ.ರವಿಗೆ ಬೆಳಗ್ಗಿಂದ ಫೋನು: ಈಗ ಎಂ.ಎಲ್.ಸಿ. ಚುನಾವಣೆ ನಡೆಯುತ್ತಿದೆ. ಎರಡು ರಾಜ್ಯ ಸಭೆ ಸೇರಿ 9 ಎಂ.ಎಲ್.ಸಿ. ಬಿಜೆಪಿಗೆ ಲಭ್ಯವಾಗಲಿದೆ. ಜಾತಿ ಸಮುದಾಯ ಹಾಗೂ ಪಕ್ಷಕ್ಕೆ ದುಡಿದವರು, ಶಾಸಕರು, ಸಂಸದರಿಂದ ಕೇಳುತ್ತಿದ್ದಾರೆ. ಇದರಲ್ಲಿ ರಾಜಕೀಯ ಇಲ್ಲ. ಈ ರೀತಿ ಎಲ್ಲಾ ಪಕ್ಷದಲ್ಲೂ ಕೇಳುತ್ತಾರೆ. ಸಿ.ಟಿ.ರವಿಗೆ ಬೆಳಗ್ಗಿಂದಲೂ ಫೋನ್ ಬರುತ್ತಿದೆ. ನಮ್ಮನ್ನು ಸಿಎಂ ಬಳಿ ಕರೆದುಕೊಂಡು ಹೋಗಿ, ಎಂ.ಎಲ್.ಸಿ ಹಾಗೂ ರಾಜ್ಯ ಸಭೆ ಸದಸ್ಯರನ್ನಾಗಿ ಮಾಡಿ ಎಂದು ಎಲ್ಲರೂ ಫೋನ್ ಮಾಡುತ್ತಿದ್ದಾರೆ. ಎಲ್ಲರಿಗೂ ಕೇಳಲು ರೈಟ್ಸ್ ಇದೆ ಎಂದಿದ್ದಾರೆ.

    ಯಾರಿಂದ ರಾಜ್ಯಕ್ಕೆ ಒಳ್ಳೆಯದ್ದೋ ಅವರಿಗೆ ರೆಕಮೆಂಡ್: ಇದೇ ವೇಳೆ ಸೋಮಶೇಖರ್ ಜೊತೆಗಿದ್ದ ಸಚಿವ ಸಿ.ಟಿ.ರವಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಇನ್ನೊಂದು ವಾರದಲ್ಲಿ ಕೋರ್ ಕಮಿಟಿ ಸಭೆ ಕರೆಯಬಹುದು. ಕೋರ್ ಕಮಿಟಿಯಲ್ಲಿ ಈ ಬಗ್ಗೆ ಚರ್ಚೆ ಮಾಡುತ್ತೇವೆ. ಯಾವ್ಯಾವ ಹೆಸರು ಬಂದಿದೆ ಎಲ್ಲವನ್ನೂ ಚರ್ಚೆ ಮಾಡುತ್ತೇವೆ. ಸಮಾಜಕ್ಕೆ-ಪಕ್ಷಕ್ಕೆ ಹಾಗೂ ರಾಜ್ಯಕ್ಕೆ ಯಾರಿಂದ ಒಳ್ಳೆದಾಗುತ್ತೋ ಅವರಿಗೆ ಕೊಡ್ಬೇಕು ಅನ್ನೋದು ನಮ್ಮ ರೆಕಮೆಂಟ್ ಎಂದಿದ್ದಾರೆ. ಇನ್ನು, ಶಾಸಕರು ಸಭೆ ಸೇರಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ಊಟಕ್ಕೆ ಸೇರಿದ್ವಿ ಎಂದು ಅವರೇ ಹೇಳಿದ್ದಾರೆ. ಊಟಕ್ಕೆ ಸೇರೋದು ತಪ್ಪಲ್ಲ. ಆದ್ರೆ, ಪಕ್ಷವನ್ನ ಬಲಗೊಳಿಸಬೇಕೋ ವಿನಃ ಯಾರೂ ದುರ್ಬಲಗೊಳಿಸಬಾರದು ಎಂದಿದ್ದಾರೆ.