Tag: ಸಚಿವ ಸಿ.ಪಿ.ಯೋಗೇಶ್ವರ್

  • ಡೆಕ್ಕನ್ ವಿಮಾನ ಸಂಸ್ಥೆಯಿಂದ ವಾಯುಯಾನ ಸೇವೆ: ಯೋಗೇಶ್ವರ್

    ಡೆಕ್ಕನ್ ವಿಮಾನ ಸಂಸ್ಥೆಯಿಂದ ವಾಯುಯಾನ ಸೇವೆ: ಯೋಗೇಶ್ವರ್

    ಬೆಂಗಳೂರು: ಕಲಬುರಗಿ, ವಿಜಯಪುರ, ಬಾಗಲಕೋಟೆ, ಬಳ್ಳಾರಿ, ಬೀದರ್, ಕೊಪ್ಪಳ ಜಿಲ್ಲೆಗಳಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಡೆಕ್ಕನ್ ವಿಮಾನಯಾನ ಸಂಸ್ಥೆ ಚಿಕ್ಕ ವಿಮಾನಗಳ ಹಾಗೂ ಹೆಲಿಕಾಪ್ಟರ್ ಗಳ ವಾಯುಯಾನ ಸೇವೆಯನ್ನು ಒದಗಿಸಲು ಮುಂದೆ ಬಂದಿವೆ. ಈ ಸಂಬಂಧ ಇಂದು ಒಂದು ಪ್ರಾತ್ಯಕ್ಷಿಕೆಯನ್ನು ಪ್ರವಾಸೋದ್ಯಮ ಸಚಿವ ಯೋಗೇಶ್ವರ್ ವೀಕ್ಷಿಸಿದರು.

    ಅಪೋಲೋ ಆಸ್ಪತ್ರೆ ಸಮೂಹ ಹಾಗೂ ಟ್ರೇಡ್ ಇಂಡಿಯಾ ಪ್ರೈ.ಲಿ. ಸಂಸ್ಥೆಯವರು The Deccan Circuit ಪ್ರಾತ್ಯಕ್ಷಿಕೆಯನ್ನು ಪ್ರದರ್ಶಿಸಿದರು. ಮಹಾರಾಷ್ಟ್ರ, ತೆಲಂಗಾಣ, ಆಂದ್ರಪ್ರದೇಶ ಹಾಗೂ ಕರ್ನಾಟಕದಲ್ಲಿ 3000 ಕಿ.ಮೀ. ವಾಯು ಯಾನ ಸೇವೆಯನ್ನು Deccan ಸಂಸ್ಥೆ ನೀಡುತ್ತಿದೆ. ಮುಂದಿನ ದಿನಗಳಲ್ಲಿ ಕರ್ನಾಟಕದ ಪ್ರವಾಸಿ ಸ್ಥಳಗಳಿಗೆ ಡೆಕ್ಕನ್ ಸಂಸ್ಥೆ ತನ್ನ ಸೇವೆಯನ್ನು ವಿಸ್ತರಿಸಲಿವೆ. ಅಲ್ಲದೆ ಪ್ರವಾಸಿ ಸ್ಥಳಗಳನ್ನು ಸಹ ಅಭಿವೃದ್ಧಿಪಡಿಸಲು ಉತ್ಸುಕವಾಗಿರುವುದಾಗಿ ಟ್ರೇಡ್ ಇಂಡಿಯಾ ಪ್ರೈ.ಲಿ ನಿರ್ದೇಶಕ ಅನಿಲ್ ಕಾಮಿನೇನಿ ಇದೇ ವೇಳೆ ತಿಳಿಸಿದರು.

    ಇದೇ ವೇಳೆ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿದ ಸಚಿವ ಯೋಗೇಶ್ವರ್, ಡೆಕ್ಕನ್ ಸಂಸ್ಥೆಯವರಿಗೆ ಅವಶ್ಯಕತೆಯಿರುವ ಜಮೀನನ್ನು ಗುತ್ತಿಗೆಗೆ ನೀಡುವ ಸಂಬಂಧ ಹಾಗೂ ವಾಯುಯಾನಕ್ಕೆ ಅಗತ್ಯವಿರುವ ಅನುಮತಿಯನ್ನು ಕೊಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

  • ಯಾವ ಎಕ್ಸಾಂ ಬರೆದಿದ್ದಾರೆ ಗೊತ್ತಿಲ್ಲ- ಯೋಗೇಶ್ವರ್‌ಗೆ ಸುಧಾಕರ್ ಟಾಂಗ್

    ಯಾವ ಎಕ್ಸಾಂ ಬರೆದಿದ್ದಾರೆ ಗೊತ್ತಿಲ್ಲ- ಯೋಗೇಶ್ವರ್‌ಗೆ ಸುಧಾಕರ್ ಟಾಂಗ್

    ದಾವಣಗೆರೆ: ನಾವು 17 ಜನ ರಾಜೀನಾಮೆ ಕೊಟ್ಟು ಪರೀಕ್ಷೆ ಬರೆದಿದ್ದೆವು, ಅವರು ಯಾವ ಎಕ್ಸಾಂ ಬರೆದಿದ್ದಾರೆ ಗೊತ್ತಿಲ್ಲ ಎಂದು ಸಚಿವ ಯೋಗೇಶ್ವರ್ ಗೆ ಆರೋಗ್ಯ ಸಚಿವ ಸುಧಾಕರ್ ಟಾಂಗ್ ನೀಡಿದರು.

    ಪರೀಕ್ಷೆ ಬರೆದಿದ್ದೇವೆ, ಫಲಿತಾಂಶಕ್ಕೆ ಕಾಯುತ್ತಿದ್ದೇವೆ ಎಂಬ ಯೋಗೇಶ್ವರ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ನಾವು 17 ಜನ ರಾಜೀನಾಮೆ ಕೊಟ್ಟು ಪರೀಕ್ಷೆ ಬರೆದಿದ್ದೆವು, ಬಳಿಕ ಪಾಸ್ ಆಗಿ ಸಚಿವರಾಗಿದ್ದೇವೆ. ಯೋಗೇಶ್ವರ್ ಯಾವ ಪರೀಕ್ಷೆ ಬರೆದಿದ್ದಾರೋ ಗೊತ್ತಿಲ್ಲ ಎಂದು ಸುಧಾಕರ್ ವ್ಯಂಗ್ಯವಾಡಿದರು.

    ರಮೇಶ್ ಜಾರಕಿಹೊಳಿ, ಮುನಿರತ್ನ ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಸಿಎಂ ನಿರ್ಧಾರ ಮಾಡುತ್ತಾರೆ. ರಮೇಶ್ ಜಾರಕಿಹೊಳಿ ರಾಜೀನಾಮೆ ಕೊಡಲ್ಲ ಎಂದು ಹೇಳಿದ್ದೆ, ಕೊಟ್ಟಿಲ್ಲ ಎಂದು ಸ್ಪಷ್ಟ ಪಡಿಸಿದರು.

    ಲಸಿಕೆ ಹೆಚ್ಚು ಮಾಡಲಿಕ್ಕೆ ನಾನು ದೆಹಲಿಗೆ ಹೋಗಿದ್ದೆ, ಬೇರೆ ಅರ್ಥ ಕಲ್ಪಿಸುವುದು ಬೇಡ. 250 ಪಿಎಚ್ ಸಿ ಮೇಲ್ದರ್ಜೆಗೆ ಏರಿಸಲಾಗುವುದು, ಐದು ವರ್ಷದಲ್ಲಿ ಮೇಲ್ದರ್ಜೆಗೆ ಉದ್ದೇಶ ಹೊಂದಲಾಗಿದೆ. ಇದರ ಬಗ್ಗೆ ಚರ್ಚಿಸಲು ದೆಹಲಿಗೆ ತೆರಳಿದ್ದೆ ಎಂದರು. ಲಸಿಕೆ ಸುಳ್ಳು ಲೆಕ್ಕ ಕೊಡುತ್ತಿದ್ದಾರೆ ಎಂಬ ಸಿದ್ದರಾಮಯ್ಯ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕರ್ನಾಟಕಕ್ಕೆ ಎರಡುವರೆ ಕೋಟಿ ಲಸಿಕೆ ಸುಳ್ಳು ಲೆಕ್ಕಾನಾ, ದೇಶದಲ್ಲಕ 38 ಕೋಟಿ ಜನಕ್ಕೆ ಲಸಿಕೆ ನೀಡಲಾಗಿದ್ದು, ಅಮೇರಿಕದಲ್ಲಿ ಎಷ್ಟು ಕೊಟ್ಟಿದ್ದಾರೆ ಕೇಳಿ ಒಮ್ಮೆ, ಸಿದ್ದರಾಮಯ್ಯನವರಿಗೆ ಸುಳ್ಳು ಲೆಕ್ಕ ಹೇಳುವ ಅಭ್ಯಾಸ ಇರಬೇಕು ಎಂದು ತಿರುಗೇಟು ನೀಡಿದರು.