Tag: ಸಚಿವ

  • ದಲಿತ ಅಂತಾ ನನ್ನನ್ನು ಕಡೆಗಣಿಸಿದ್ದಾರೆ; ಯೋಗಿ ಸರ್ಕಾರದ ವಿರುದ್ಧ ಆರೋಪ – ಸಚಿವ ರಾಜೀನಾಮೆ

    ದಲಿತ ಅಂತಾ ನನ್ನನ್ನು ಕಡೆಗಣಿಸಿದ್ದಾರೆ; ಯೋಗಿ ಸರ್ಕಾರದ ವಿರುದ್ಧ ಆರೋಪ – ಸಚಿವ ರಾಜೀನಾಮೆ

    ಲಕ್ನೋ: ಎರಡನೇ ಬಾರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದ ಯೋಗಿ ಆದಿತ್ಯನಾಥ್‌ ನೇತೃತ್ವದ ಸಂಪುಟಕ್ಕೆ ಈಗ ಸಂಕಷ್ಟ ಎದುರಾಗಿದೆ. ಯೋಗಿ ಸರ್ಕಾರದ ಸಚಿವ ಸಂಪುಟದ ಸಚಿವರೊಬ್ಬರು ರಾಜೀನಾಮೆ ನೀಡಿದ್ದಾರೆ. ಮತ್ತೊಬ್ಬರು ದೆಹಲಿಯಲ್ಲಿ ವಾಸ್ತವ್ಯ ಹೂಡಿದ್ದಾರೆ.

    ʼದಲಿತ ಅಂತಾ ನನ್ನನ್ನು ಕಡೆಗಣಿಸಿದ್ದಾರೆʼ ಎಂದು ಎಂದು ಯೋಗಿ ಆದಿತ್ಯನಾಥ್‌ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿರುವ ಸಚಿವ ದಿನೇಶ್‌ ಕಾರ್ತಿಕ್‌ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ: Sena vs Sena: ಉದ್ಧವ್ ಶಿಬಿರಕ್ಕೆ ತಕ್ಷಣದ ಪರಿಹಾರವಿಲ್ಲ, ಆಗಸ್ಟ್ 1 ರಂದು ಮುಂದಿನ ವಿಚಾರಣೆ: ಕೋರ್ಟ್

    ಕಳೆದ 100 ದಿನಗಳಲ್ಲಿ ನನಗೆ ಯಾವುದೇ ಕೆಲಸ, ಜವಾಬ್ದಾರಿ ವಹಿಸಿಲ್ಲ. ನನಗೆ ತುಂಬಾ ನೋವಾಗಿದೆ. ಹೀಗಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಯುಪಿ ಜಲ ಸಂಪನ್ಮೂಲ ಸಚಿವ ಕಾರ್ತಿಕ್‌ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    ಉತ್ತರ ಪ್ರದೇಶದ ಜಲಸಂಪನ್ಮೂಲ ಸಚಿವ ಕಾರ್ತಿಕ್ ಅವರು ತಮ್ಮ ಪತ್ರದಲ್ಲಿ 100 ದಿನಗಳ ಕಾಲ ಯಾವುದೇ ಕೆಲಸವನ್ನು ನಿಯೋಜಿಸಿಲ್ಲ ಎಂದು ಹೇಳಿದ್ದಾರೆ. ಇಲಾಖಾ ವರ್ಗಾವಣೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಪತ್ರದಲ್ಲಿ ನೋಯುತ್ತಿರುವ ಕಾರಣ ರಾಜೀನಾಮೆ ನೀಡುತ್ತಿದ್ದೇನೆ.

    ನಾನು ದಲಿತ ಎಂಬ ಕಾರಣಕ್ಕೆ ನನಗೆ ಯಾವುದೇ ಪ್ರಾಮುಖ್ಯತೆ ನೀಡಿಲ್ಲ. ಸಚಿವನಾಗಿ ನನಗೆ ಯಾವುದೇ ಅಧಿಕಾರವಿಲ್ಲ. ನಾನು ರಾಜ್ಯದ ಸಚಿವನಾಗಿ ಕೆಲಸ ಮಾಡುವುದು ದಲಿತ ಸಮುದಾಯಕ್ಕೆ ವ್ಯರ್ಥ. ನನ್ನನ್ನು ಯಾವುದೇ ಸಭೆಗೆ ಕರೆದಿಲ್ಲ. ನನ್ನ ಸಚಿವಾಲಯದ ಬಗ್ಗೆ ಏನನ್ನೂ ಹೇಳಿಲ್ಲ. ಇದು ದಲಿತ ಸಮುದಾಯಕ್ಕೆ ಮಾಡಿದ ಅವಮಾನ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಒಂದು ಟ್ವೀಟ್‌ಗೆ 12 ಲಕ್ಷ, ಇನ್ನೊಂದಕ್ಕೆ 2 ಕೋಟಿ: ಜುಬೇರ್‌ ವಿರುದ್ಧ ಯುಪಿ ಸರ್ಕಾರ ಸ್ಫೋಟಕ ಆರೋಪ

    ಲೋಕೋಪಯೋಗಿ ಸಚಿವ ಜಿತಿನ್ ಪ್ರಸಾದ ಅವರು ಮುಖ್ಯಮಂತ್ರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ತಂಡದ ಅಧಿಕಾರಿಯೊಬ್ಬರನ್ನು ಮುಖ್ಯಮಂತ್ರಿ ಅಮಾನತು ಮಾಡಿರುವ ಬಗ್ಗೆ ಜಿತಿನ್ ಪ್ರಸಾದ ಕೋಪಗೊಂಡಿದ್ದಾರೆ. ಪ್ರಸಾದ ಅವರು ಕಳೆದ ವರ್ಷ ಯುಪಿ ಚುನಾವಣೆಗೆ ತಿಂಗಳುಗಳ ಮೊದಲು ಕಾಂಗ್ರೆಸ್‌ ಬಿಟ್ಟು ಬಿಜೆಪಿ ಸೇರಿದ್ದರು.

    ಅಕ್ರಮಗಳ ಆರೋಪ ಹೊತ್ತಿದ್ದ ಐವರು ಹಿರಿಯ ಪಿಡಬ್ಲ್ಯೂಡಿ ಅಧಿಕಾರಿಗಳನ್ನು ಅಮಾನತುಗೊಳಿಸಿ ಯುಪಿ ಸರ್ಕಾರ ಆದೇಶ ಹೊರಡಿಸಿತ್ತು.

    Live Tv
    [brid partner=56869869 player=32851 video=960834 autoplay=true]

  • 20 ಮಂದಿಯ ರಾಜೀನಾಮೆಯ ಬೆನ್ನಲ್ಲೇ ನೂತನ ಸಚಿವ ಸಂಪುಟ ರಚನೆ- 13 ಮಂದಿ ಪ್ರಮಾಣವಚನ

    20 ಮಂದಿಯ ರಾಜೀನಾಮೆಯ ಬೆನ್ನಲ್ಲೇ ನೂತನ ಸಚಿವ ಸಂಪುಟ ರಚನೆ- 13 ಮಂದಿ ಪ್ರಮಾಣವಚನ

    ಭುವನೇಶ್ವರ್: ಶನಿವಾರ ಒಡಿಶಾದ ಎಲ್ಲಾ 20 ಸಚಿವರು ರಾಜೀನಾಮೆ ನೀಡಿದ್ದರು. ಇದಾದ ಒಂದು ದಿನದ ಬಳಿಕ ಹೊಸ ಸಂಪುಟ ಪುನಾರಚನೆ ಆಗಿದ್ದು, ನೂತನ 13 ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

    ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ನಿರ್ದೇಶನದಂತೆ ರಾಜ್ಯ ಸರ್ಕಾರದ ಎಲ್ಲಾ 20 ಸಚಿವರು ಶನಿವಾರ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದರು. ಒಡಿಶಾದ ರಾಜಕೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಎಲ್ಲಾ ಸಚಿವರು ರಾಜೀನಾಮೆ ನೀಡುವಂತೆ ಸೂಚಿಸಲಾಗಿದೆ.

    ಭುವನೇಶ್ವರದ ಲೋಕಸೇವಾ ಭವನದ ನೂತನ ಸಮಾವೇಶ ಕೇಂದ್ರದಲ್ಲಿ ನಡೆದ ಸಮಾರಂಭದಲ್ಲಿ ಬಿಜೆಡಿ ಶಾಸಕರಾದ ಜಗನ್ನಾಥ್ ಸರಕಾ, ನಿರಂಜನ್ ಪೂಜಾರಿ ಮತ್ತು ಆರ್.ಪಿ ಸ್ವೈನ್ ಸೇರಿದಂತೆ 13 ಶಾಸಕರಿಗೆ ರಾಜ್ಯಪಾಲ ಗಣೇಶಿ ಲಾಲ್ ಅವರು ಪ್ರಮಾಣ ವಚನ ಬೋಧಿಸಿದರು. ಮೂವರು ಮಹಿಳಾ ಶಾಸಕರಾದ ಪ್ರಮೀಳಾ ಮಲ್ಲಿಕ್, ಉಷಾದೇವಿ ಮತ್ತು ತುಕುನಿ ಸಾಹು ಅವರನ್ನು ನೂತನ ಸಚಿವ ಸಂಪುಟಕ್ಕೆ ಸೇರಿಸಲಾಗಿದೆ. ಇದನ್ನೂ ಓದಿ: ವಿಶ್ವಪರಿಸರ ದಿನ- ರಾಜಭವನದಲ್ಲಿ ರುದ್ರಾಕ್ಷಿ ಸಸಿ ನೆಟ್ಟ ರಾಜ್ಯಪಾಲರು

    ಒಡಿಶಾ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಎಸ್.ಎನ್ ಪಾತ್ರೋ: ಒಡಿಶಾ ಅಸೆಂಬ್ಲಿ ಸ್ಪೀಕರ್ ಎಸ್.ಎನ್ ಪಾತ್ರೋ ಅವರು ಶನಿವಾರ ರಾಜೀನಾಮೆ ನೀಡಿದ್ದರು. ಈ ಬಗ್ಗೆ ಪಾತ್ರೋ ಅವರ ಮಗ ಬಿಪ್ಲಬ್ ಮಾತನಾಡಿ, ನನ್ನ ತಂದೆ ಗಂಭೀರ ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿದ್ದಾರೆ ಮತ್ತು ಅವರ ಎಡಗಣ್ಣಿನಲ್ಲಿ ಸೋಂಕಿನಿಂದ ಬಳಲುತ್ತಿದ್ದಾರೆ. ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಪೀಕರ್ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಈದ್ಗಾ ಮೈದಾನ ವಿವಾದ- ಗ್ರೌಂಡ್‍ನಲ್ಲಿ ಹಿಂದೂ ಸಂಘಟನೆಯ ಮುಖಂಡರ ಹೈಡ್ರಾಮಾ

    ಈ ಹಿನ್ನೆಲೆಯಲ್ಲಿ ಬಿ.ಕೆ ಅರುಖಾ ಮುಂದಿನ ಒಡಿಶಾ ಸ್ಪೀಕರ್ ಆಗುವ ಸಾಧ್ಯತೆಯಿದೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ.ಕೆ ಅರುಖಾ ಅವರು ವಿಧಾನಸಭೆಯ ಮುಂದಿನ ಸ್ಪೀಕರ್ ಆಗುವ ಸಾಧ್ಯತೆ ಇದೆ ಎಂದು ಆಡಳಿತಾರೂಢ ಬಿಜೆಡಿ ಮೂಲಗಳು ತಿಳಿಸಿವೆ.

  • ಬುಲ್ಡೋಜರ್ ಕಾನೂನು ಜಾರಿ ಬಗ್ಗೆ ಸಿಎಂ ಜೊತೆ ಚರ್ಚೆ: ಆರ್.ಅಶೋಕ್

    ಬುಲ್ಡೋಜರ್ ಕಾನೂನು ಜಾರಿ ಬಗ್ಗೆ ಸಿಎಂ ಜೊತೆ ಚರ್ಚೆ: ಆರ್.ಅಶೋಕ್

    ಬೆಂಗಳೂರು: ರಾಜ್ಯದಲ್ಲಿ ಗಲಭೆ ಮಾಡುವ ಮನಸ್ಥಿತಿ ಇರುವವರಿಗೆ ಮನೆ-ಮಠ ಇಲ್ಲದಂತೆ ಮಾಡಬೇಕು. ಅದಕ್ಕಾಗಿ ಬುಲ್ಡೋಜರ್ ಕಾನೂನು ಜಾರಿಗೆ ತರಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಲಾಗುವುದು ಎಂದು ಸಚಿವ ಆರ್.ಅಶೋಕ್ ಬುಲ್ಡೋಜರ್ ಪ್ರಯೋಗ ಜಾರಿಯ ಬಗ್ಗೆ ಪುನರುಚ್ಚರಿಸಿದರು.

    r ashok

    ಬೆಂಗಳೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಗಲಭೆ ಮಾಡುವವರನ್ನು ಅರೆಸ್ಟ್ ಮಾಡಿದರೆ, ಮರ‍್ನಾಲ್ಕು ದಿನಗಳಲ್ಲಿ ಜಾಮೀನು ಪಡೆದುಕೊಂಡು ಹೊರಗೆ ಬರುತ್ತಾರೆ. ಪುನಃ ಗಲಭೆ ಮಾಡುತ್ತಾರೆ. ಅದಕ್ಕಾಗಿ ಅವರಿಗೆ ಬುದ್ಧಿ ಕಲಿಸಲು ಮನೆ-ಮಠ ಇಲ್ಲದಂತೆ ಮಾಡಬೇಕು. ಆಗ ಬುದ್ಧಿ ಬರುತ್ತದೆ ಎಂದು ಕಿಡಿಕಾರಿದರು.  ಇದನ್ನೂಓದಿ: PSI ನೇಮಕಾತಿಯ ಯಾವುದೇ ಬ್ಯಾಚ್‌ನಲ್ಲಿ ಅಕ್ರಮ ನಡೆದಿದ್ದರೂ ತಪ್ಪಿತಸ್ಥರ ವಿರುದ್ಧ ಕ್ರಮ: ಸಿಎಂ

    ನಮ್ಮಲ್ಲೂ ಉತ್ತರ ಪ್ರದೇಶದ ಮಾದರಿಯ ರೂಲ್ಸ್ ಜಾರಿಗೆ ಬರಬೇಕಾದ ಸ್ಥಿತಿಯಿದೆ. ಈ ನೀತಿ ತಂದರಷ್ಟೇ ಗಲಭೆಕೋರರನ್ನು ಮಟ್ಟ ಹಾಕಲು ಸಾಧ್ಯ. ಗಲಭೆ ಸೃಷ್ಟಿ ಮಾಡುವವರ ಮೇಲೆ ಕಠಿಣ ಕ್ರಮ ಜರುಗಿಸಬೇಕು. ಯಾವುದೇ ಧರ್ಮ, ಜಾತಿಗೆ ಸೇರಿದ್ದರೂ ಸುಮ್ಮನೆ ಬಿಡಬಾರದು. ಅವರ ಆಸ್ತಿ-ಪಾಸ್ತಿಗಳನ್ನು ಜಪ್ತಿ ಮಾಡಿಕೊಳ್ಳಬೇಕು. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುತ್ತೇನೆ ಎಂದು ಹೇಳಿದರು.

    YOGI

    ಕಾಂಗ್ರೆಸ್‌ಗೆ ಜನರೇ ಪಾಠ ಕಲಿಸ್ತಾರೆ: ನಾವು ಇನ್ನಷ್ಟು ಕಠಿಣ ಕ್ರಮ ತೆಗೆದುಕೊಂಡು ದುಷ್ಟರ ಹೆಡೆಮುರಿ ಕಟ್ಟುತ್ತೇವೆ. ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲವೆಂದ ಅವರು, ರಾಜ್ಯದಲ್ಲಿ ಅರಾಜಕತೆ ಉಂಟುಮಾಡುವ ಕಾಂಗ್ರೆಸ್‌ಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಕುಟುಕಿದರು. ಇದನ್ನೂ ಓದಿ: ಕರ್ನಾಟಕದಲ್ಲಿ ಶಾಂತಿ ದೃಷ್ಟಿಯಿಂದ ಬುಲ್ಡೋಜರ್ ಕ್ರಮ ಅವಶ್ಯ: ಮುತಾಲಿಕ್

    ವಿದೇಶಿ ಶಕ್ತಿಗಳಿವೆಯೇ?:  ಕಾಂಗ್ರೆಸ್ ಸಂಸ್ಕೃತಿಯೇ ಎಲ್ಲೆಡೆ ಅಶಾಂತಿ ನಿರ್ಮಾಣ ಮಾಡುವುದು. ಹಿಂದೆ ಅವರದೇ ಪಕ್ಷದ ಸಿಎಂ ಬದಲಾಯಿಸಲು ರಾಮನಗರ, ಕನಕಪುರದಲ್ಲಿ ಗಲಾಟೆ ಮಾಡಿಸುತ್ತಿದ್ದರು. ಡಿಜೆ ಹಳ್ಳಿ-ಕೆಜಿಹಳ್ಳಿಯಲ್ಲೂ ಅವರದೇ ಪಕ್ಷದ ಶಾಸಕನ ಮನೆಯನ್ನು, ಅವರದೇ ಪಕ್ಷದ ಮಾಜಿ ಮೇಯರ್ ಬೆಂಕಿ ಹಾಕಿಸಿ, ಜೈಲಿಗೆ ಹೋಗಿದ್ದ. ಹುಬ್ಬಳ್ಳಿ ಗಲಾಟೆಯಲ್ಲೂ ಸ್ಥಳೀಯ ಕಾಂಗ್ರೆಸ್ ಅಧ್ಯಕ್ಷನೇ ಭಾಗಿಯಾಗಿದ್ದಾನೆ. ಪಿಎಸ್‌ಐ ನೇಮಕಾತಿ ಹಗರಣದಲ್ಲೂ ಕಾಂಗ್ರೆಸ್ ಮುಖಂಡನೇ ಇದ್ದಾನೆ. ಹೀಗೆ ಅವರೇ ಎಲ್ಲ ಹಗರಣದಲ್ಲೂ ಭಾಗಿಯಾಗಿ ಉಳಿದವರ ಬಗ್ಗೆ ಮಾತನಾಡುತ್ತಾರೆ. ರಾಜ್ಯದಲ್ಲಿ ಅಶಾಂತಿ, ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಸರ್ವಪ್ರಯತ್ನ ಮಾಡುತ್ತಿದೆ. ವಿದೇಶಿ ಶಕ್ತಿಗಳು ಈ ಎಲ್ಲ ಘಟನೆಯಲ್ಲಿ ಭಾಗಿಯಾಗಿದೆಯೇ ಎನ್ನುವ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

  • ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಇಲ್ಲ, ಲೋಡ್ ಶೆಡ್ಡಿಂಗ್ ಮಾಡಲ್ಲ: ಸುನೀಲ್ ಕುಮಾರ್

    ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಇಲ್ಲ, ಲೋಡ್ ಶೆಡ್ಡಿಂಗ್ ಮಾಡಲ್ಲ: ಸುನೀಲ್ ಕುಮಾರ್

    ಬೆಂಗಳೂರು: ರಾಜ್ಯದಲ್ಲಿ ಕಲ್ಲಿದ್ದಲಿನ ಕೊರತೆಯುಂಟಾಗಿದೆ, ವಿದ್ಯುತ್ ಕ್ಷಾಮವಿದೆ ಎಂದು ಕಾಂಗ್ರೆಸ್ ವಿನಾಕಾರಣ ಹುಯಿಲೆಬ್ಬಿಸುತ್ತಿದ್ದು, ವಾಸ್ತವ ವಿಚಾರವನ್ನು ಮರೆಮಾಚುವ ವ್ಯವಸ್ಥಿತ ಷಡ್ಯಂತ್ರ ನಡೆಸುತ್ತಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಬೇಸಿಗೆಯಲ್ಲಿ ವಿದ್ಯುತ್ ಸಮಸ್ಯೆ ಉಂಟಾಗಬಾರದು ಎಂಬ ಉದ್ದೇಶದಿಂದಲೇ ಎಚ್ಚರಿಕೆ ವಹಿಸಿ ಕಲ್ಲಿದ್ದಲು ದಾಸ್ತಾನಿಗೆ ಆದ್ಯತೆ ನೀಡಲಾಗಿದೆ. ಮುಖ್ಯವಾಗಿ ರಾಜ್ಯದ ಸರಾಸರಿ ಬೇಡಿಕೆಯ ಅರ್ಧದಷ್ಟು ಭಾಗ ಈಗ ಸೋಲಾರ್ ಹಾಗೂ ಪವನಶಕ್ತಿ ಮೂಲದಿಂದ ಲಭಿಸುತ್ತಿದೆ. ಹಾಗಾಗಿ ಕಾಂಗ್ರೆಸ್ ಆರೋಪಿಸುವುದರಲ್ಲಿ ಅರ್ಥವೇ ಇಲ್ಲ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲೂ ಬುಲ್ಡೋಜರ್ ಕಾರ್ಯಾಚರಣೆಗೆ ಹೆಚ್ಚಿದ ಒತ್ತಡ: ಬಿಜೆಪಿಯಲ್ಲಿ ಭಿನ್ನ ನಿಲುವು

    sunil kumar

    ಕೇಂದ್ರದಿಂದ ರಾಜ್ಯಕ್ಕೆ ಪ್ರತಿನಿತ್ಯ ಸರಾಸರಿ 13,500 ರಿಂದ 14,500 ರೇಕ್ ಕಲ್ಲಿದ್ದಲು ಪೂರೈಕೆಯಾಗುತ್ತಿದೆ. ಎಲ್ಲ ವಿದ್ಯುತ್ ಸ್ಥಾವರಗಳ ಬೇಡಿಕೆಗೆ ಅಗತ್ಯವಾದ ಕಲ್ಲಿದ್ದಲು ಇದರಿಂದ ಲಭ್ಯವಾಗುತ್ತಿದೆ. ರಾಜ್ಯದಲ್ಲಿಂದು ಪ್ರತಿ ದಿನಕ್ಕೆ 10,400 ಮೆಗಾ ವ್ಯಾಟ್ ವಿದ್ಯುತ್ ಬೇಡಿಕೆ ಇದೆ. ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ಎನ್ನಬಹುದಾದ 14,800 ಮೆಗಾ ವ್ಯಾಟ್ ವಿದ್ಯುತ್ ಬೇಡಿಕೆ ಕಳೆದ ಮಾರ್ಚ್ 21ರಂದು ಎದುರಾಗಿತ್ತು. ಆಗಲೂ ನಮಗೆ ಕಲ್ಲಿದ್ದಲು ಕೊರತೆ ಉಂಟಾಗಿರಲಿಲ್ಲ. ಹೀಗಿರುವಾಗ ಸಾಮಾನ್ಯ ಬೇಡಿಕೆಯ ದಿನಗಳಲ್ಲಿ ಕಲ್ಲಿದ್ದಲು ಕೊರತೆ ಉಂಟಾಗಲು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.

    BLACKSTONE

    ಎಂತಹ ಸ್ಥಿತಿ ನಿರ್ಮಾಣವಾದರೂ ಮೂರು ದಿನಗಳವರೆಗೆ ಕೊರತೆ ನೀಗಿಸುವಷ್ಟು ಕಲ್ಲಿದ್ದಲು ದಾಸ್ತಾನಿದೆ. ಕಾಂಗ್ರೆಸ್ ನಾಯಕರು ಸೃಷ್ಟಿಸಿರುವ ಈ ಅಪಪ್ರಚಾರದಿಂದ ರಾಜ್ಯದ ಜನರು ಆತಂಕ ಪಡಬೇಕಾದ ಅಗತ್ಯವಿಲ್ಲ. ಯಾವುದೇ ಜಿಲ್ಲೆಯಲ್ಲಿ ವಿದ್ಯುತ್ ವ್ಯತ್ಯಯವಾದರೆ ಅದು ಸರಬರಾಜಿನಲ್ಲಿ ಆದ ಸಮಸ್ಯೆಯೇ ವಿನಃ ಕಲ್ಲಿದ್ದಲು ಕೊರತೆಯಿಂದ ಆಗಿದ್ದಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಅತ್ಯಾಚಾರ ಆರೋಪಿಗೆ ಜಾಮೀನು ನಿರಾಕರಿಸಿದ ಕೋರ್ಟ್

    SUNIL

    ಬೇಸಿಗೆಯಲ್ಲಿ ವಿದ್ಯುತ್ ಕೊರತೆ ಇರದು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಇದರಿಂದಾಗಿ ಕೃಷಿ ಪಂಪ್‌ಸೆಟ್ ಗಳಿಗೆ ಅಗತ್ಯವಾದ ವಿದ್ಯುತ್ ಬೇಡಿಕೆ ಪ್ರಮಾಣ ಕಡಿಮೆಯಾಗಿದೆ ಎಂಬ ಕಾರಣಕ್ಕೆ ಬಳ್ಳಾರಿ ಹಾಗೂ ರಾಯಚೂರು ಶಾಖೋತ್ಪನ್ನ ಘಟಕದ ಉತ್ಪಾದನೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಿದ್ದೇವೆಯೇ ಹೊರತು ಕಲ್ಲಿದ್ದಲು ಕೊರತೆಗಾಗಿ ಅಲ್ಲ. ರಾಜ್ಯದಲ್ಲಿ ಪ್ರತಿನಿತ್ಯ 7,000 ಮೆಗಾ ವ್ಯಾಟ್ ಸೋಲಾರ್ ಹಾಗೂ ಪವನ ವಿದ್ಯುತ್ ಉತ್ಪಾದನೆಯಾಗುತ್ತಿದೆ. ಬೇಸಿಗೆಯಲ್ಲಿ ವಿದ್ಯುತ್ ಕೊರತೆಯ ಪ್ರಶ್ನೆಯೇ ಉದ್ಭವಿಸದು ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಬಸವಣ್ಣನಂತೆ ಬೊಮ್ಮಾಯಿ ಕೆಲಸ ಮಾಡುತ್ತಿದ್ದಾರೆ: ದೇಶಿಕೇಂದ್ರ ಮಹಾಸ್ವಾಮಿಜೀ 

    SOLAR

    ಕತ್ತಲುಭಾಗ್ಯದ ದುರ್ದಿನಗಳನ್ನು ಮರೆತಿಲ್ಲ: ಕೇಂದ್ರದಲ್ಲಿ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ 2004-2014ರ ಅವಧಿಯಲ್ಲಿ 725 ಲಕ್ಷ ಮೆಟ್ರಿಕ್ ಟನ್ ಕಲ್ಲಿದ್ದಲು ರಾಜ್ಯಕ್ಕೆ ಪೂರೈಕೆಯಾಗಿತ್ತು. ಆದರೆ 2015 – 2022ರ ಅವಧಿಯಲ್ಲಿ 792 ಲಕ್ಷ ಮೆಟ್ರಿಕ್ ಟನ್ ಕಲ್ಲಿದ್ದಲು ಪೂರೈಕೆಯಾಗಿದೆ. ಕಲ್ಲಿದ್ದಲು ಪೂರೈಕೆ ಹಾಗೂ ವಿದ್ಯುತ್‌ಗೆ ಮೂಲ ಸೌಕರ್ಯ ಕಲ್ಪಿಸುವಲ್ಲಿಯೂ ಕೇಂದ್ರ ಸರ್ಕಾರ ಹಿಂದುಳಿದಿಲ್ಲ. ಅಧಿಕಾರದ `ಅಭಾವ ವೈರಾಗ್ಯ’ ದಿಂದ ರೋಸಿ ಹೋಗಿರುವ ಕಾಂಗ್ರೆಸ್ ಕರ್ನಾಟಕದಲ್ಲಿ ವಿದ್ಯುತ್ ಅಭಾವ ಇದೆ ಎಂಬ ಪ್ರಹಸನ ಸ್ರಷ್ಟಿಸಿದರೆ ಜನರು `ಶಾಕ್ ಟ್ರೀಟ್ ಮೆಂಟ್’ ನೀಡುತ್ತಾರೆ. ಸಿದ್ದರಾಮಯ್ಯ ಸರ್ಕಾರದಲ್ಲಿದ್ದಾಗ ರಾಜ್ಯಕ್ಕೆ ನೀಡಿದ್ದ `ಕತ್ತಲು ಭಾಗ್ಯದ’ ದುರ್ದಿನಗಳನ್ನು ಸಾರ್ವಜನಿಕರು ಇನ್ನೂ ಮರೆತಿಲ್ಲ. ಅಪಪ್ರಚಾರ ನಡೆಸುವಾಗ ಹತ್ತು ಬಾರಿ ಯೋಚಿಸಿ ಅಡಿ ಇಡಲಿ ಎಂದು ವ್ಯಂಗ್ಯವಾಡಿದ್ದಾರೆ.

  • ತಪ್ಪು ಮಾಡಿದ್ದರೆ ಶಿಕ್ಷಿಸು, ಇಲ್ಲವೇ ರಕ್ಷಿಸು – ಮನೆದೇವರ ಮೊರೆಹೋದ ಈಶ್ವರಪ್ಪ

    ತಪ್ಪು ಮಾಡಿದ್ದರೆ ಶಿಕ್ಷಿಸು, ಇಲ್ಲವೇ ರಕ್ಷಿಸು – ಮನೆದೇವರ ಮೊರೆಹೋದ ಈಶ್ವರಪ್ಪ

    ಶಿವಮೊಗ್ಗ: ಮುಖ್ಯಮಂತ್ರಿಗಳನ್ನು ಭೇಟಿಯಾಗಿ ರಾಜೀನಾಮೆ ನೀಡಲು ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿರುವ ಸಚಿವ ಕೆ.ಎಸ್.ಈಶ್ವರಪ್ಪ ಇದೀಗ ಆರೋಪದಿಂದ ವಿಮುಕ್ತರಾಗಲು ಮನೆದೇವರ ಮೊರೆಹೋಗಿದ್ದಾರೆ.

    ರಾಜೀನಾಮೆ ನೀಡಲು ಶಿವಮೊಗ್ಗದಿಂದ ತೆರಳುವುದಕ್ಕೂ ಮುನ್ನವೇ ಮನೆದೇವರಿಗೆ ಪೂಜೆ ಸಲ್ಲಿಸಿದ್ದಾರೆ. ಇದೇ ವೇಳೆ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿ, ನಮ್ಮ ಮನೆ ದೇವರು ಮಲ್ಲೇಶ್ವರ ಹಾಗೂ ಚೌಡೇಶ್ವರಿಯಲ್ಲಿ ಪ್ರಾರ್ಥನೆ ಮಾಡ್ತೇನೆ. ನಾನು ತಪ್ಪು ಮಾಡಿದ್ದರೆ ಶಿಕ್ಷಿಸು, ಇಲ್ಲವೇ ನಿರಪರಾಧಿಯಾಗಿ ಹೊರ ಬರುವಂತೆ ಮಾಡೆಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಈಶ್ವರಪ್ಪ ರಾಜೀನಾಮೆಗೂ ಮುನ್ನ 29 PDOಗಳ ಟ್ರಾನ್ಸ್‌ಫರ್

    eshwarappa

    ಜೀವನದಲ್ಲಿ ವ್ಯಕ್ತಿಗಳಿಗೆ ಪರೀಕ್ಷೆಗಳು ಎದುರಾಗುತ್ತವೆ. ಈ ಹಿಂದೆ ಇಂಧನ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೆ. ಇವತ್ತು ನನ್ನ ವಿರುದ್ಧ ಆರೋಪ ಕೇಳಿ ಬಂದಿದೆ. ಹೆಣ್ಣುಮಕ್ಕಳು ಅಳುತ್ತಾ ಕಳುಹಿಸಬಾರದು. ಸಂತೋಷವಾಗಿ ಕಳುಹಿಸಿಕೊಡಬೇಕು ಎಂದು ಮಹಿಳಾ ಕಾರ್ಯಕರ್ತೆಯರಿಗೆ ಸಚಿವ ಕೆ.ಎಸ್.ಈಶ್ವರಪ್ಪ ಬುದ್ದಿಮಾತು ಹೇಳಿದರು.

    ರಾಜ್ಯದಾದ್ಯಂತ ಅನೇಕರು ನನಗೆ ದೂರವಾಣಿ ಕರೆ ಮಾಡಿ, ನಿಮ್ಮ ಮೇಲೆ ಏಕೆ ಆರೋಪ? ಎಂದು ಕೇಳುತ್ತಿದ್ದಾರೆ. ಮನೆಗೆ ಬಂದು ಧೈರ್ಯ ತುಂಬುತ್ತಿದ್ದಾರೆ. ಹೋದ ಕಡೆ, ಬಂದ ಕಡೆ ಪ್ರಸಾದ ಕೊಡ್ತಿದ್ದಾರೆ. ಹಾಗಾಗಿ ಈ ಘಟನೆಯಿಂದಾಗಿ ಸಂಘಟನೆಯಲ್ಲಿ ತೊಡಗಲು ಹೆಚ್ಚಿನ ಶಕ್ತಿ ನೀಡಿದಂತಾಗಿದೆ. ಅಳುತ್ತಾ ಕಳುಹಿಸುವುದಾದರೆ ನಾನು ಹೊಗೋದೇ ಇಲ್ಲ. ಹೆಣ್ಣುಮಕ್ಕಳು ಸಂತೋಷದಿAದ ಕಳುಹಿಸಿಕೊಡಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಈಶ್ವರಪ್ಪನವರನ್ನು ಬಂಧಿಸಿ ಅನ್ನೋರಿಗೆ ನಾಚಿಕೆಯಾಗ್ಬೇಕು: ರೇಣುಕಾಚಾರ್ಯ

    eshwarappa

    ಮೂರು ದಿನಗಳ ಹಿಂದೆಯೇ ರಾಜೀನಾಮೆ ನೀಡಬೇಕೆಂದುಕೊಂಡಿದ್ದೆ. ಆದರೆ ಕೊಡಬೇಡ ಅಂತ ಹಿರಿಯರು ಹೇಳಿದ್ದರು. ಅದಕ್ಕಾಗಿ ಕೊಡದಿರಲು ನಿರ್ಧರಿಸಿದ್ದೆ. ನಿನ್ನೆ ರಾಜೀನಾಮೆ ಕೊಡು ಅಂದ್ರು ಅದಕ್ಕೆ ಕೊಡಲು ಮುಂದಾದೆ. ತನಿಖೆಯ ನಂತರ ನಿರಪರಾಧಿಯಾಗಿ ಹೊರಬರುವ ವಿಶ್ವಾಸವಿದೆ ಎಂದರು.

    ನನ್ನ ಜೀವ ಇರುವವರೆಗೂ ಈ ಸಂಘಟನೆ ಮೂಲಕ ಇನ್ನೂ ಹೆಚ್ಚಿನ ಕೆಲಸ ಮಾಡುತ್ತೇನೆ. ನಾವೆಲ್ಲರೂ ಬಡವರು, ದೀನದಲಿತರ ಪರ ಕೆಲಸ ಮಾಡೋಣ. ಹಿಂದೂಗಳ ಮೇಲಿನ ಸಂಘರ್ಷದ ಮೂಲಕ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿರುವವರಿಗೆ ಸರಿಯಾದ ಉತ್ತರ ಕೊಡೋಣ ಎಂದು ಕರೆ ನೀಡಿದರು.

    ಇದೇ ವೇಳೆ ಈಶ್ವರಪ್ಪ ಮಹಾರಾಜ್ ಕೀ ಜೈ ಎಂಬ ಘೋಷಣೆಗಳು ಮೊಳಗಿದವು.

  • ಸಚಿವ ಸೋಮಣ್ಣಗೆ ಸಂಕಷ್ಟ – ಏಪ್ರಿಲ್ 16ಕ್ಕೆ ವಿಚಾರಣೆಗೆ ಬರುವಂತೆ ಕೋರ್ಟ್ ಸಮನ್ಸ್

    ಸಚಿವ ಸೋಮಣ್ಣಗೆ ಸಂಕಷ್ಟ – ಏಪ್ರಿಲ್ 16ಕ್ಕೆ ವಿಚಾರಣೆಗೆ ಬರುವಂತೆ ಕೋರ್ಟ್ ಸಮನ್ಸ್

    ಬೆಂಗಳೂರು: ಅಕ್ರಮ ಆಸ್ತಿ ಆರೋಪದಲ್ಲಿ ಹಾಲಿ ಸಚಿವ ವಿ.ಸೋಮಣ್ಣಗೆ ಸಂಕಷ್ಟ ಎದುರಾಗಿದೆ. ಜನಪ್ರತಿನಿಧಿಗಳ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಎಸಿಬಿಯ ಬಿ ರಿಪೋರ್ಟ್ ತಿರಸ್ಕರಿಸಿದ ಲೋಕಾಯುಕ್ತ ಕೋರ್ಟ್, ಕ್ರಿಮಿನಲ್ ಕೇಸ್ ರಿಜಿಸ್ಟರ್ ಮಾಡಿ ಏಪ್ರಿಲ್ 16ಕ್ಕೆ ಖುದ್ದು ವಿಚಾರಣೆಗೆ ಹಾಜರಾಗುವಂತೆ ಸೋಮಣ್ಣಗೆ ಸಮನ್ಸ್ ನೀಡಿದೆ.

    ಸೋಮಣ್ಣ ಅವರು ಶಾಸಕರಾಗಿದ್ದ ವೇಳೆ ಆದಾಯ ಮೀರಿ ಆಸ್ತಿ ಗಳಿಸಿದ್ದಾರೆ ಎಂದು ಆರೋಪಿಸಿ ರಾಮಕೃಷ್ಣ ಎಂಬವರು 2013 ರಲ್ಲಿ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ಈ ಕುರಿತು ತನಿಖೆ ನಡೆಸುವಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಆದೇಶ ಮಾಡಿದ್ದು, ಅದರಂತೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿದ್ದರು. ಬಳಿಕ ಸೋಮಣ್ಣ ಯಾವುದೇ ರೀತಿಯಲ್ಲಿ ಅಕ್ರಮ ಆಸ್ತಿ ಗಳಿಸಿಲ್ಲ ಎಂದು ಲೋಕಾಯುಕ್ತ ಪೊಲೀಸರು ಕೋರ್ಟ್‌ಗೆ ‘ಬಿ’ ವರದಿ ಸಲ್ಲಿಸಿದ್ದರು. ಇದನ್ನೂ ಓದಿ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ – ಸಂಕಷ್ಟದಲ್ಲಿ ಮುಜರಾಯಿ ಇಲಾಖೆಯ ಶಾಲೆ

    ಲೋಕಾಯುಕ್ತ ಪೊಲೀಸರ ಈ ವರದಿಯನ್ನು ತಿರಸ್ಕರಿಸಿರುವ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಇದೀಗ ಸಮನ್ಸ್ ಜಾರಿ ಮಾಡಿದೆ. ವಿ. ಸೋಮಣ್ಣ ಶಾಸಕರಾಗುವ ಮೊದಲಿನ ಆದಾಯ, ನಂತರದ ಆದಾಯ, ಗಳಿಸಿದ ಆಸ್ತಿಯ ಸೂಕ್ತ ವಿವರಗಳನ್ನು ಲೋಕಾಯುಕ್ತ ಪೊಲೀಸರು ತನಿಖಾ ವರದಿಯಲ್ಲಿ ಉಲ್ಲೇಖಿಸಿಲ್ಲ. ಹೀಗಾಗಿ ಲೋಕಾಯುಕ್ತ ಪೊಲೀಸರು ಅಸಮರ್ಥ ತನಿಖೆ ನಡೆಸಿದ್ದಾರೆ ಎಂದು ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ. ಇದನ್ನೂ ಓದಿ: ಲಾಲೂ ಪ್ರಸಾದ್ ಯಾದವ್ ಆರೋಗ್ಯದಲ್ಲಿ ಏರುಪೇರು – ದೆಹಲಿಯ ಏಮ್ಸ್‌ಗೆ ಶಿಫ್ಟ್‌

    ಶಾಸಕರಾಗಿದ್ದ ವಿ. ಸೋಮಣ್ಣ ವಿರುದ್ಧ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರನ್ನು ಸಲ್ಲಿಸಿದ್ದ ದೂರುದಾರ ವಿಚಾರಣೆಗೆ ಹಾಜರಾಗಿರಲಿಲ್ಲ. ದೂರುದಾರನ ನಡೆ ನೋಡಿ ಅನುಮಾನ ವ್ಯಕ್ತಪಡಿಸಿದ್ದ ನ್ಯಾಯಾಲಯ, ದೂರುದಾರನಿಗೆ ಎಚ್ಚರಿಕೆ ನೀಡಿತ್ತು. ಆ ಬಳಿಕ ರಾಮಕೃಷ್ಣ ಖಾಸಗಿ ದೂರನ್ನು ಸಲ್ಲಿಸಿದ್ದರು. ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು ಬಿ ವರದಿ ಸಲ್ಲಿಸಿ ಕೈ ತೊಳೆದುಕೊಂಡಿದ್ದರು. ಆದರೆ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಲೋಕಾಯುಕ್ತ ಪೊಲೀಸರ ತನಿಖೆಯನ್ನು ತಿರಸ್ಕರಿಸಿ ಸಮನ್ಸ್ ಜಾರಿಗೊಳಿಸಿದೆ.

  • ಯುದ್ಧಭೂಮಿಯಿಂದ ಕನ್ನಡಿಗರನ್ನು ಕರೆತಂದದ್ದು ಮೋದಿ ಭಗೀರಥ ಪ್ರಯತ್ನ: ಸಿಎಂ

    ಯುದ್ಧಭೂಮಿಯಿಂದ ಕನ್ನಡಿಗರನ್ನು ಕರೆತಂದದ್ದು ಮೋದಿ ಭಗೀರಥ ಪ್ರಯತ್ನ: ಸಿಎಂ

    ದಾವಣಗೆರೆ: ಉಕ್ರೇನ್ ಯುದ್ಧಭೂಮಿಯಿಂದ 572 ಕನ್ನಡಿಗರನ್ನು ಕರೆತರುವ ಮೂಲಕ ವಿಶ್ವದಾದ್ಯಂತ ಪ್ರಧಾನಿ ನರೇಂದ್ರಮೋದಿ ಅವರ ವರ್ಚಸ್ಸು ಎಷ್ಟಿದೆ ಎಂಬುದು ಗೊತ್ತಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

    ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯುದ್ಧಭೂಮಿಯಲ್ಲಿ ಸೈನಿಕರನ್ನು ಕರೆತರುವುದೇ ಕಷ್ಟಸಾಧ್ಯ. ಅಂತಹದ್ದರಲ್ಲಿ ಸಂಬಂಧವಿಲ್ಲದ ದೇಶದಿಂದ 572 ಕನ್ನಡಿಗರನ್ನು ಹೊರತಂದಿರುವುದು ಸಾಮಾನ್ಯ ಕೆಲಸವಲ್ಲ. ಜೊತೆಗೆ ಇದು ಮೋದಿ ಅವರ ವರ್ಷಸ್ಸು ಹಾಗೂ ಅಂತಾರಾಷ್ಟ್ರೀಯ ಸಂಬಂಧವನ್ನು ತೋರಿಸುತ್ತದೆ ಎಂದು ಶ್ಲಾಘಿಸಿದರು.

    ಅಮೇರಿಕಾ ಕೂಡಾ ತನ್ನ ನಾಗರಿಕರನ್ನು ಕೈ ಬಿಟ್ಟಿದೆ. ಆದರೆ, ಆಪರೇಷನ್ ಗಂಗಾ ಕಾರ್ಯಾಚರಣೆಯಲ್ಲಿ 572 ಕನ್ನಡಿಗರನ್ನು ವಾಪಾಸ್ ತರಲಾಗಿದೆ. ದುರ್ದೈವ ನವೀನ್ ಒಬ್ಬರು ಮೃತಪಟ್ಟಿದ್ದಾರೆ. ಇದು ಮೋದಿಯವರ ಭಗೀರಥ ಪ್ರಯತ್ನ. ಉಕ್ರೇನ್‍ನಿಂದ ಕರೆತರುವಾಗ ಭಾರತೀಯರಿಗೇ ಹೆಚ್ಚಿನ ಪ್ರಾಶಸ್ತ್ಯ ನೀಡಿದ್ದರು. ಇಂಡಿಯನ್ ಫ್ಲ್ಯಾಗ್ ಹಿಡಿದರೆ ಸಾಕು ಸುರಕ್ಷಿತವಾಗಿ ಕಳುಹಿಸಿಕೊಡುತ್ತಿದ್ದರು. ನಾವು ವಿದೇಶಾಂಗ ಸಚಿವರೊಂದಿಗೆ, ರಾಯಭಾರಿ ಕಚೇರಿಯೊಂದಿಗೆ ಸಂಪರ್ಕದಲ್ಲಿದ್ದೆವು ಎಂದು ತಿಳಿಸಿದರು. ಇದನ್ನೂ ಓದಿ: ಉಕ್ರೇನ್‍ನಿಂದ 22,500 ವಿದ್ಯಾರ್ಥಿಗಳು ವಾಪಸ್- ಆಪರೇಷನ್ ಗಂಗಾ ಪೂರ್ಣ

    ನವೀನ್ ಮೃತಪಟ್ಟಾಗ ಘಟನೆ ನಡೆದಿದ್ದೇ ಒಂದು ಕಡೆ, ನವೀನ್ ಮೃತದೇಹ ಸಂರಕ್ಷಿಸಿ ಇಟ್ಟಿದ್ದೇ ಮತ್ತೊಂದು ಕಡೆ. ಇನ್ನೂ ಶೆಲ್ಲಿಂಗ್ ದಾಳಿ ನಡೆಯುತ್ತಿದ್ದರೂ ಈ ನಡುವೆ ನವೀನ್ ಪಾರ್ಥೀವ ಶರೀರವನ್ನು ತರಲಾಗಿದೆ. ಈಗ ನವೀನ್ ಬಾಡಿ ಹುಟ್ಟೂರು ತಲುಪಿದೆ ಎಂದ ಸಿಎಂ ನವೀನ್ ಸಾವು ನೆನೆದು ಭಾವುಕರಾದರು. ಇದನ್ನೂ ಓದಿ: ಸ್ವಂತ ಜಮೀನು ಮಾರಿ ಆಸ್ಪತ್ರೆ ನಿರ್ಮಾಣಕ್ಕೆ ಮುಂದಾದ ಹಿರಿಯ ನಟಿ ಲೀಲಾವತಿ

  • ಸುಧಾಕರ್ ಏನು ಸಿಎಂಗಿಂತ ದೊಡ್ಡವರಾ? ಬಿಜೆಪಿ ಶಾಸಕ ಕಿಡಿ

    ಸುಧಾಕರ್ ಏನು ಸಿಎಂಗಿಂತ ದೊಡ್ಡವರಾ? ಬಿಜೆಪಿ ಶಾಸಕ ಕಿಡಿ

    ಬಳ್ಳಾರಿ: ಸುಧಾಕರ್ ಏನು ಮುಖ್ಯಮಂತ್ರಿಗಳಿಗಿಂತ ದೊಡ್ಡವರಾ ಎಂದು ಆರೋಗ್ಯ ಸಚಿವರ ವಿರುದ್ಧ ಬಳ್ಳಾರಿ ನಗರ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಕೆಂಡಾಮಂಡಲವಾಗಿದ್ದಾರೆ.

    ಸ್ವಪಕ್ಷದ ಸಚಿವರ ವಿರುದ್ಧವೇ ಸೋಮಶೇಖರ್ ರೆಡ್ಡಿ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಕೆಲ ಸಚಿವರು ದೇವಲೋಕದಿಂದ ಬಂದಿದ್ದೇವೆ ಎನ್ನುವಂತೆ ವರ್ತನೆ ಮಾಡುತ್ತಿದ್ದಾರೆ. ಅವರೇನು ಮೇಲಿಂದ ಬಂದವರೇ? ಅವರು ದೇವಮಾನವರಂತೆ ವರ್ತನೆ ಮಾಡುತ್ತಿದ್ದಾರೆ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ನರೇಗಾ ವಿಶ್ವಕ್ಕೆ ಮಾದರಿ: ಕೆ.ಎಸ್.ಈಶ್ವರಪ್ಪ

    ನಿನ್ನೆ ಕಲ್ಯಾಣ ಕರ್ಣಾಟಕದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿತ್ತು. ಕಲ್ಯಾಣ ಕರ್ಣಾಟಕದ ಮೀಸಲಾತಿಯಲ್ಲಿ ಎಂಬಿಬಿಎಸ್ ವಿದ್ಯಾರ್ಥಿಗಳ ಸೀಟ್ ಏಕಾಏಕಿ ಕಡಿತ ಮಾಡಲಾಗಿತ್ತು. ಹೀಗಾಗಿ ಆರೋಗ್ಯ ಸಚಿವ ಸುಧಾಕರ್ ಅವರಿಗೆ ನಾನು ಹಲವು ಸಾರಿ ಕರೆ ಮಾಡಿದ್ದೆ. ಅವರ ಪಿಎಗೂ ಕರೆ ಮಾಡಿದೆ. ಬಳಿಕ ಅವರಿಗೆ ಮೆಸೇಜ್ ಸಹ ಹಾಕಿದ್ದೆ. ಆದರೆ ಅವರು ಯಾವುದಕ್ಕೂ ಪ್ರತಿಕ್ರಿಯೆ ನೀಡಿಲ್ಲ. ಇದೇ ವಿಚಾರವಾಗಿ ನಾವು ಸಿಎಂ ಬೊಮ್ಮಾಯಿ ಬಳಿಯೂ ಹೋಗಿದ್ದೆ, ಅವರು ಕೇವಲ 30 ಸೆಕೆಂಡ್‍ನಲ್ಲಿ ಕೆಲಸ ಮಾಡಿಕೊಟ್ಟರು ಎಂದು ತಿಳಿಸಿದ್ದಾರೆ.

    ಸುಧಾಕರ್ ಅವರು ಸಿಎಂಗಿಂತ ದೊಡ್ಡವರಾ? ಕೆಲ ಸಚಿವರಿಗೆ ದುರಹಂಕಾರ ಹೆಚ್ಚಾಗಿದೆ. ಅದಕ್ಕೆ ಸರಿಯಾಗಿ ಪ್ರತಿಕ್ರಿಯೆ ನೀಡದ ಸಚಿವರ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಸಿಎಂಗೆ ಮನವಿ ಮಾಡಿರುವೆ ಎಂದಿದ್ದಾರೆ. ಇದನ್ನೂ ಓದಿ: ಕಳ್ಳತನ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದ ಮಂತ್ರವಾದಿ – ಹಣ, ಚಿನ್ನಾಭರಣ ಮಾಯ ಮಾಡಿದ್ದೇನೆ ಎಂದ!

    ನಾನು ನನ್ನ ವೈಯಕ್ತಿಕ ವಿಚಾರಕ್ಕೆ ಅವರಿಗೆ ಕರೆ ಮಾಡಿಲ್ಲ. ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಕರೆ ಮಾಡಿದ್ದೆ. ನಮ್ಮಂಥವರ ವಿಚಾರವಾಗಿಯೇ ಈ ರೀತಿ ನಿರ್ಲಕ್ಷ್ಯ ವಹಿಸಿದರೆ,ಸಾಮಾನ್ಯ ಜನರ ಪರಿಸ್ಥಿತಿ ಹೇಗೆ ಎಂದು ಪ್ರಶ್ನಿಸಿದ್ದಾರೆ.

  • ಮೈಕೆಲ್ ಲೋಬೋ ಸಚಿವ ಸ್ಥಾನಕ್ಕೆ ರಾಜೀನಾಮೆ – ಚುನಾವಣೆಗೂ ಮುನ್ನ ಗೋವಾದಲ್ಲಿ ಬಿಜೆಪಿಗೆ ಹಿನ್ನೆಡೆ

    ಮೈಕೆಲ್ ಲೋಬೋ ಸಚಿವ ಸ್ಥಾನಕ್ಕೆ ರಾಜೀನಾಮೆ – ಚುನಾವಣೆಗೂ ಮುನ್ನ ಗೋವಾದಲ್ಲಿ ಬಿಜೆಪಿಗೆ ಹಿನ್ನೆಡೆ

    ಪಣಜಿ: ಬಿಜೆಪಿ ನೇತೃತ್ವದ ಗೋವಾ ಸರ್ಕಾರದಲ್ಲಿ ಸಚಿವ ಮೈಕೆಲ್ ಲೋಬೋ ಅವರು ಶಾಸಕ ಹಾಗೂ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಗೋವಾ ಚುನಾವಣೆಗೆ ಕೇವಲ ಒಂದು ತಿಂಗಳಿರುವಾಗಲೇ ಬಿಜೆಪಿಗೆ ಭಾರೀ ಹೊಡೆತ ಬಿದ್ದಂತಾಗಿದೆ.

    ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸಾಮಾನ್ಯ ಜನರ ಪಕ್ಷವಲ್ಲವಾಗಿ ಉಳಿದಿಲ್ಲ. ಇದರಿಂದಾಗಿ ನಾನು ಶಾಸಕ ಹಾಗೂ ಸಚಿವ ಸ್ಥಾನವೆರಡಕ್ಕೂ ರಾಜೀನಾಮೆ ನೀಡಿದ್ದೇನೆ. ಇದರ ಜೊತೆಗೆ ನಾನು ಬಿಜೆಪಿ ಸದಸ್ಯತ್ವಕ್ಕೂ ರಾಜೀನಾಮೆ ನೀಡುತ್ತಿದ್ದೇನೆ. ಯಾವ ಪಕ್ಷಕ್ಕೆ ಸೇರಬೇಕೆನ್ನುವುದನ್ನು ನಾನು ಮುಂದಿನ ದಿನಗಳಲ್ಲಿ ತೀರ್ಮಾನಿಸುತ್ತೇನೆ ಎಂದ ಅವರು, ಬಿಜೆಪಿ ಸಾಮಾನ್ಯ ಜನರ ಪಕ್ಷವಲ್ಲ ಎಂದು ಮತದಾರರು ತಿಳಿಸಿದ್ದಾರೆ ಎಂದು ತಮ್ಮ ರಾಜೀನಾಮೆಯನ್ನು ಸಮರ್ಥಿಸಿಕೊಂಡಿದ್ದಾರೆ.

    ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದ್ದರು, ಕಾಂಗ್ರೆಸ್‌ಗೆ ಸೇರುತ್ತಾರೋ ಅಥವಾ ಇತರೆ ಪಕ್ಷಕ್ಕೆ ಸೇರುತ್ತಾರೋ ಎಂನ್ನುವುದರ ಕುರಿತು ಅಧಿಕೃತವಾಗಿ ಬಹಿರಂಗ ಪಡಿಸಿಲ್ಲ. ಬದಲಾಗಿ ನಾನು ಯಾವ ಪಕ್ಷಕ್ಕೆ ಸೇರುತ್ತೇನೋ, ಆ ಪಕ್ಷದಲ್ಲಿ ಅತಿ ಹೆಚ್ಚು ಮತದಿಂದ ಗೆಲುವು ಸಾಧಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಅಫ್ಘಾನಿಸ್ತಾನಕ್ಕೆ ಭಾರತದ ನೆರವು – ಇರಾನ್ ಸಹಾಯ

    ಗೋವಾ ರಾಜ್ಯದ ತ್ಯಾಜ್ಯ ನಿವಹಣಾ ಇಲಾಖೆಯ ಉಸ್ತುವಾರಿಯನ್ನು ಇವರು ನೋಡಿಕೊಳ್ಳುತ್ತಿದ್ದರು. ಇತ್ತೀಚೆಗಷ್ಟೇ ಮೈಕೆಲ್ ಲೋಬೋ ಅವರು ಬಹಿರಂಗವಾಗಿ ತಮ್ಮ ಪಕ್ಷದ ಬಗ್ಗೆ ಟೀಕಿಸುತ್ತಿದ್ದರು. ಇದು ಮಾಜಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಕಟ್ಟಿದ್ದ ಪಕ್ಷವಾಗಿ ಉಳಿದಿಲ್ಲ ಎಂದಿದ್ದರು. 2019ರಲ್ಲಿ ಮನೋಹರ್ ಪರಿಕ್ಕರ್ ಅವರ ಸಾವಿನ ನಂತರ ಅಧಿಕಾರ ವಹಿಸಿಕೊಂಡ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರೊಂದಿಗೆ ಅವರು ಭಿನ್ನಾಭಿಪ್ರಾಯ ಹೊಂದಿದ್ದರು. ಇದನ್ನೂ ಓದಿ: ನನ್ನನ್ನು ನೋಡಿದ್ರೆ ಕೊರೊನಾ ಇದೆ ಅಂತ ಅನ್ನಿಸುತ್ತಾ?: ಡಿ.ಕೆ. ಶಿವಕುಮಾರ್

  • ವಿವಾಹ ನೋಂದಣಿಯಂತೆ ಮತಾಂತರ ನೋಂದಣಿ ಮಾಡೋ ಚಿಂತನೆ ನಡೆದಿದೆ: ಮಾಧುಸ್ವಾಮಿ

    ವಿವಾಹ ನೋಂದಣಿಯಂತೆ ಮತಾಂತರ ನೋಂದಣಿ ಮಾಡೋ ಚಿಂತನೆ ನಡೆದಿದೆ: ಮಾಧುಸ್ವಾಮಿ

    ತುಮಕೂರು: ವಿವಾಹ ನೋಂದಣಿ ಮಾಡುವಂತೆ ಮತಾಂತರವನ್ನು ಕೂಡ ನೋಂದಣಿ ಮಾಡುವಂತಹ ಪದ್ಧತಿಯನ್ನು ಮತಾಂತರ ನಿಷೇಧ ಕಾಯ್ದೆಯಲ್ಲಿ ತರುವ ಚಿಂತನೆ ನಡೆದಿದೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಸ್ಪಷ್ಟಪಡಿಸಿದ್ದಾರೆ.

    ಚಿಕ್ಕನಾಯಕನಹಳ್ಳಿ ತಾಲೂಕಿನ ಜೆ.ಸಿ.ಪುರದಲ್ಲಿ ಮಾತನಾಡಿದ ಅವರು, ಮದುವೆ ನೋಂದಣಿ ಪ್ರಕ್ರಿಯೆಯಲ್ಲಿ ಹೇಗೆ ನೋಟಿಸ್ ಬೋರ್ಡಿಗೆ ವಿವಾಹಿತರ ವಿವರ ಹಾಕುತ್ತೇವೆಯೋ ಹಾಗೆಯೇ ಮತಾಂತರಗೊಂಡವರ ವಿವರವನ್ನೂ ನೋಟಿಸ್ ಬೋರ್ಡ್‍ಗೆ ಹಾಕಿ ಆಕ್ಷೇಪಣೆಗೆ ಸಮಯವಕಾಶ ಕೊಡಲಾಗುತ್ತದೆ. ಯಾವುದೇ ಆಕ್ಷೇಪಣೆ ಇಲ್ಲದಿದ್ದರೆ ಅಂಥವರ ಅರ್ಜಿಯನ್ನು ಪುರಸ್ಕರಿಸಲಾಗುತ್ತದೆ ಎಂದು ಹೇಳಿದರು.

    ಯಾರಿಗೂ ನೋವು ಆಗದ, ಅಡಚಣೆ ಆಗದ ರೀತಿಯಲ್ಲಿ ಕಾಯ್ದೆ ಇರಬೇಕು ಎಂದು ಯೋಚಿಸಿದ್ದೇನೆ. ಆ ನಿಟ್ಟಿನಲ್ಲಿ ಪರಾಮರ್ಶೆ ನಡೆದಿದೆ. ಬಲವಂತ ಹಾಗೂ ಆಮಿಷ ಒಡ್ಡಿ ಮಾಡುವ ಮತಾಂತರ ಈಗಾಗಲೇ ನಿಷೇಧ ಇದ್ದು, ಮತಾಂತರ ಮಾಡಿದವರಿಗೆ ಯಾವ ರೀತಿಯ ಶಿಕ್ಷೆ ಆಗಬೇಕು ಅನ್ನೋದು ಚರ್ಚೆ ನಡೆಯಬೇಕಿದೆ ಎಂದು ತಿಳಿಸಿದರು. ಇದನ್ನೂ ಓದಿ: ವೇದಿಕೆ ಮೇಲೆ ಕಣ್ಣೀರಿಟ್ಟ ಮಾಧುಸ್ವಾಮಿ

    ಸ್ವಯಂಪ್ರೇರಿತ ಮತಾಂತರಕ್ಕೂ ರೂಪುರೇಷೆ ಸಿದ್ಧಗೊಳ್ಳುತಿದ್ದು, ಮತಾಂತರ ಆಗುವವನೂ ಅರ್ಜಿ ಸಲ್ಲಿಸುವ ವ್ಯವಸ್ಥೆ ಜಾರಿಯಾಗಲಿದೆ. ಬಲವಂತದ ಮತಾಂತರ ಅಲ್ಲ ಎಂದು ತಿಳಿದ ಮೇಲೆ ಜಿಲ್ಲಾಧಿಕಾರಿಗಳು ಮತಾಂತರದ ಅರ್ಜಿ ಪುರಸ್ಕರಿಸಬಹುದಾಗಿದೆ. ಜೊತೆಗೆ ಒಮ್ಮೆ ಮತಾಂತರಗೊಂಡ ವ್ಯಕ್ತಿ ಮೂಲ ಜಾತಿ, ಧರ್ಮವನ್ನು ಕಳೆದುಕೊಳ್ಳುತ್ತಾನೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದ ವಿರುದ್ಧ ಭಾರತ ಯುದ್ಧವನ್ನೂ ಗೆಲ್ಲಲಿದೆ: ರಾಜನಾಥ್ ಸಿಂಗ್

    ಪರಿಶಿಷ್ಠ ಜಾತಿ ವ್ಯಕ್ತಿ ಕ್ರಿಶ್ಚಿಯನ್ ಗೆ ಮತಾಂತರಗೊಂಡರೆ, ಆತ ಅಲ್ಪಸಂಖ್ಯಾತ ಎಂದಾಗುತ್ತದೆ. ಆತನ ಮೂಲ ಜಾತಿ ಪ್ರಮಾಣ ಪತ್ರ ಬದಲಾಗುತ್ತದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: 24 ಗಂಟೆಯಲ್ಲಿ ಬರೋಬ್ಬರಿ 10 ಡೋಸ್ ಕೋವಿಡ್ ಲಸಿಕೆ ಪಡೆದ ಭೂಪ!