Tag: ಸಜೀವದಹನ

  • ಸ್ವಂತ ಅತ್ತಿಗೆ, ಮಗುವನ್ನೇ ಸಜೀವವಾಗಿ ಸುಟ್ಟುಹಾಕಿದ ಬಾಮೈದ

    ಚೆನ್ನೈ: ಸ್ವಂತ ಅತ್ತಿಗೆ ಹಾಗೂ ಆಕೆಯ ಮಗುವನ್ನು ಸಜೀವವಾಗಿ ಸುಟ್ಟುಹಾಕಿ ಹತ್ಯೆಗೈದಿರುವ ಘಟನೆ ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ನಡೆದಿದೆ.

    ಘಟನೆಯಲ್ಲಿ ಬಲಿಯಾದವರನ್ನು 22 ವರ್ಷದ ಅಂಜಲಾಯಿ ಮತ್ತು ಆಕೆಯ ಮಗು ಮಲರ್‌ವೆಳಿ ಎಂದು ಗುರುತಿಸಲಾಗಿದೆ. ತಮಿಳುನಾಡಿನ ದಿಂಡಿಗಲ್ ಜಿಲ್ಲೆಯ ನಾಥಮ್ ಗ್ರಾಮದ ಬಳಿ ಮಹಿಳೆ ಹಾಗೂ ಆಕೆಯ ಒಂದೂವರೆ ವರ್ಷದ ಮಗುವನ್ನು ಮರ್ಚ್ 2 ರಂದು ಪತಿಯ ಸೋದರನೇ ಸಜೀವವಾಗಿ ದಹನ ಮಾಡಿದ್ದಾರೆ ಎಂಬುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಮೂರನೇ ಮದುವೆಯಾಗಿದ್ದಕ್ಕೆ ಬಾವನನ್ನೆ ಹತ್ಯೆಗೈದ ಬಾಮೈದ

    crime

    ಅಂಜಲಾಯಿ ದಿನಗೂಲಿ ಮಾಡುವ ಶಿವಕುಮಾರ್ ಎಂಬಾತನನ್ನು ಮದುವೆಯಾಗಿ ಅವಿಭಕ್ತ ಕುಟುಂಬದಲ್ಲಿ ಜೀವನ ನಡೆಸುತ್ತಿದ್ದರು. ಶಿವಕುಮಾರ್ ಅವರ ಸಹೋದರ ಕರುಪಯ್ಯ (30) ಅವರು ಅಂಜಲಾಯಿ ಅವರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದರು. ಅಲ್ಲದೆ, ಆಕೆಗೆ ಚಿತ್ರಹಿಂಸೆ ನೀಡುತ್ತಿದ್ದರು.

    ಶಿವಕುಮಾರ್ ಶನಿವಾರ ಕೆಲಸಕ್ಕೆ ತೆರಳಿದ ನಂತರ ಅಂಜಲಾಯಿ ಕುರಿ ಮೇಯಿಸಲು ಹೋಗಿದ್ದಾರೆ. ಈ ವೇಳೆ ಆಕೆಯನ್ನು ಹಿಂಬಾಲಿಸಿಕೊಂಡು ಹೋಗಿದ್ದ ಕರುಪಯ್ಯ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದಾನೆ. ಮಗುವಿನೊಂದಿಗೆ ಇದ್ದ ಅಂಜಲೈ ಸಹಾಯಕ್ಕಾಗಿ ಕಿರುಚಿದಾಗ ಕರುಪ್ಪಯ್ಯ ಇಬ್ಬರ ಮೇಲೂ ಹಲ್ಲೆ ನಡೆಸಿದ್ದಾನೆ. ಪ್ರಜ್ಞೆ ತಪ್ಪಿದ ಬಳಿಕ ಸ್ವಲ್ಪದೂರ ಕೊಂಡೊಯ್ದು ಇಬ್ಬರನ್ನೂ ಸುಟ್ಟುಹಾಕಿದ್ದಾನೆ. ವಿಷಯ ತಿಳಿದ ಸ್ಥಳೀಯರು ಕರುಪ್ಪಯ್ಯನಿಗೆ ಥಳಿಸಿದ್ದಾರೆ. ನಂತರ ಅವರನ್ನು ದಿಂಡಿಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪಾಕಿಸ್ತಾದ ಮಾಜಿ ಪ್ರಧಾನಿ ನವಾಜ್ ಶರೀಫ್ ಮೇಲೆ ದಾಳಿ

    ಸಂತ್ರಸ್ತೆಯ ಪತಿ ಶಿವಕುಮಾರ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಕರುಪ್ಪಯ್ಯ ವಿರುದ್ಧ ಐಪಿಸಿ ಸೆಕ್ಷನ್ 302 (ಲೈಂಗಿಕ ಕಿರುಕುಳ ಮತ್ತು ಹತ್ಯೆ ಆರೋಪಕ್ಕೆ) ಮತ್ತು 201ರ (ಮಾಹಿತಿಗಳ ನಾಶಪಡಿಸಲು ಯತ್ನಿಸುವುದಕ್ಕಾಗಿ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

     

  • ವಿದ್ಯಾರ್ಥಿನಿಯನ್ನು ಜೀವಂತ ಸುಟ್ಟ 16 ಮಂದಿಗೆ ಗಲ್ಲು ಶಿಕ್ಷೆ

    ವಿದ್ಯಾರ್ಥಿನಿಯನ್ನು ಜೀವಂತ ಸುಟ್ಟ 16 ಮಂದಿಗೆ ಗಲ್ಲು ಶಿಕ್ಷೆ

    ಡಾಕಾ: ಏಪ್ರಿಲ್‍ನಲ್ಲಿ ಲೈಂಗಿಕ ಕಿರುಕುಳದ ವಿರುದ್ಧ ಪೊಲೀಸರಿಗೆ ದೂರ ಸಲ್ಲಿಸಿದ್ದ 19 ವರ್ಷದ ವಿದ್ಯಾರ್ಥಿನಿಯನ್ನು ಸೀಮೆಎಣ್ಣೆ ಸುರಿದು, ಬೆಂಕಿ ಹಚ್ಚಿ ಸಜೀವವಾಗಿ ಸುಟ್ಟು ಕೊಲೆಗೈದಿದ್ದ ಪ್ರಕರಣ ಇಲ್ಲರನ್ನು ಬೆಚ್ಚಿಬೀಳಿಸಿತ್ತು. ಈ ಪ್ರಕರಣದಲ್ಲಿ ಭಾಗಿಯಾಗಿದ್ದ 16 ಮಂದಿಗೆ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ.

    ನುಸ್ರತ್ ಜಹಾನ್ ರಫಿ(19) ಮದರಸಾ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಈಕೆ ತನ್ನ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಳು. ಆದರೆ ಆ ದೂರನ್ನು ವಾಪಸ್ ಪಡೆಯುವಂತೆ ಬೆದರಿಕೆ ಹಾಕಲಾಗಿತ್ತು. ಇದಕ್ಕೆ ನಿರಾಕರಿಸಿದ ವಿದ್ಯಾರ್ಥಿನಿಯನ್ನು ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಲಾಗಿತ್ತು. ಕಳೆದ ಏಪ್ರಿಲ್ ಈ ಘಟನೆ ನಡೆದಿತ್ತು.

    ತನ್ನ ಮೇಲೆ ಆದ ಲೈಂಗಿಕ ಕಿರುಕುಳವನ್ನು ವಿರೋಧಿಸಿ, ನ್ಯಾಯ ಹೋರಾಟಕ್ಕೆ ನಿಂತು ಬಲಿಯಾದ ವಿದ್ಯಾರ್ಥಿನಿ ಪರ ಸಾಕಷ್ಟು ಸರ್ಕಾರೇತರ ಸಂಸ್ಥೆಗಳು, ವಿದ್ಯಾರ್ಥಿ ಸಂಘಗಳು ಹಾಗೂ ಸಾರ್ವಜನಿಕರು ಧ್ವನಿ ಎತ್ತಿದ್ದರು. ಆ ಬಳಿಕ ಈ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿತ್ತು. ಈ ಸಂಬಂಧ ಒಟ್ಟು 18 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಆದರೆ ವಿಚಾರಣೆ ಬಳಿಕ ಅವರಲ್ಲಿ 16 ಮಂದಿ ದೋಷಿಗಳು ಎಂದ ಘೋಷಿಸಿ, ನ್ಯಾಯಾಲಯ ಅವರಿಗೆ ಗಲ್ಲು ಶಿಕ್ಷೆ ವಿಧಿಸಿದೆ. ಈ ಮೂಲಕ ವಿದ್ಯಾರ್ಥಿನಿ ಸಾವಿಗೆ ನ್ಯಾಯ ದೊರಕಿಸಿಕೊಟ್ಟಿದೆ.

    ಈ ಪ್ರಕರಣ ನಡೆದ ಬಳಿಕ ಬಾಂಗ್ಲಾದೇಶ ಸರ್ಕಾರ ದೇಶದ ಸುಮಾರು 27 ಸಾವಿರ ಶಾಲೆಗಳಿಗೆ ವಿದ್ಯಾರ್ಥಿಗಳ ಮೇಲೆ ನಡೆಯುವ ಲೈಂಗಿಕ ಕಿರುಕುಳ ತಡೆಯಲು ಸಮಿತಿಯನ್ನು ರಚಿಸುವಂತೆ ಆದೇಶಿಸಿದೆ.

    ಏನಿದು ಪ್ರಕರಣ?
    ಮೃತ ನುಸ್ರತ್‍ಳನ್ನು ಮಾರ್ಚ್ 27ರಂದು ಹೆಡ್‍ಮಾಸ್ಟರ್ ತನ್ನ ಕಚೇರಿಗೆ ಕರೆಸಿಕೊಂಡಿದ್ದನು. ಅಲ್ಲಿ ವಿದ್ಯಾರ್ಥಿನಿಯನ್ನು ಅಸಭ್ಯವಾಗಿ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದನು. ಇದನ್ನು ಅರಿತ ನುಸ್ರತ್ ತಕ್ಷಣ ಆತನಿಂದ ತಪ್ಪಿಸಿಕೊಂಡು ಕಚೇರಿಯಿಂದ ಓಡಿಹೋಗಿದ್ದಳು. ನಂತರ ನುಸ್ರತ್ ನಡೆದ ಘಟನೆಯ ಬಗ್ಗೆ ಪೋಷಕರಿಗೆ ವಿವರಿಸಿದ್ದಾಳೆ. ನಂತರ ಪೋಷಕರನ್ನು ಕರೆದುಕೊಂಡು ಪೊಲೀಸ್ ಠಾಣೆಗೆ ಹೋಗಿ ಹೆಡ್‍ಮಾಸ್ಟರ್ ವಿರುದ್ಧ ದೂರು ನೀಡಿದ್ದಳು. ಆದರೆ ಪೊಲೀಸರು ವಿದ್ಯಾರ್ಥಿನಿಯ ದೂರನ್ನು ದಾಖಲಿಸಿಕೊಳ್ಳದೆ ಆಕೆಯ ಜೊತೆಯೇ ಅಸಭ್ಯವಾಗಿ ವರ್ತಿಸಿದ್ದರು.

    ಈ ವೇಳೆ ನುಸ್ರತ್ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯನ್ನು ರೆಕಾರ್ಡ್ ಮಾಡಿಕೊಂಡಿದ್ದಳು. ಪೊಲೀಸ್ ಅಧಿಕಾರಿಯೊಬ್ಬ ಇದೇನು ದೊಡ್ಡ ವಿಷಯವಲ್ಲ ಎಂದು ನಿರ್ಲಕ್ಷ್ಮದಿಂದ ಹೇಳಿದ್ದರು. ಅಷ್ಟೇ ಅಲ್ಲದೇ ನುಸ್ರತ್ ತನ್ನ ಕೈಗಳಿಂದ ಮುಖವನ್ನು ಮುಚ್ಚಿಕೊಂಡಿದ್ದರೆ, ಮುಖದಿಂದ ಕೈಗಳನ್ನು ಸರಿಸು ಎಂದು ದೌರ್ಜನ್ಯ ನಡೆಸಿರುವುದು ವಿಡಿಯೋದಲ್ಲಿ ಕಂಡುಬಂದಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

    ವಿಡಿಯೋ ವೈರಲ್ ಆದ ಬಳಿಕ ಪೊಲೀಸರು ಹೆಡ್‍ಮಾಸ್ಟರ್ ವಿರುದ್ಧ ದೂರು ದಾಖಲಿಸಿಕೊಂಡು ಆತನನ್ನು ಬಂಧಿಸಿದ್ದರು. ಆದರೆ ಕೆಲವು ವಿದ್ಯಾರ್ಥಿಗಳು ಮತ್ತು ರಾಜಕಾರಣಿಗಳು ಪೊಲೀಸ್ ಠಾಣೆಯ ಮುಂದೆ ಬಂದು ಹೆಡ್‍ಮಾಸ್ಟರ್ ಅನ್ನು ಬಿಡುಗಡೆ ಮಾಡುವಂತೆ ಪ್ರತಿಭಟನೆಯನ್ನು ನಡೆಸಿದ್ದರು.

    ಇತ್ತ ನುಸ್ರತ್ ಈ ಘಟನೆ ನಡೆದು 11 ದಿನಗಳ ನಂತರ ಅಂದರೆ ಏಪ್ರಿಲ್ 6 ರಂದು ಪರೀಕ್ಷೆಗೆಂದು ಶಾಲೆಗೆ ಹೋಗಿದ್ದಳು. ಆಗ ಕ್ಲಾಸ್‍ಮೇಟ್‍ಗೆ ಶಾಲೆಯ ಛಾವಣಿಯ ಮೇಲೆ ಹೊಡೆಯುತ್ತಿದ್ದಾರೆ ಎಂದು ಯಾರೋ ಹೇಳಿದ್ದರು. ತಕ್ಷಣ ನುಸ್ರತ್ ಮೇಲೆ ಹೋಗಿದ್ದಾಗ, ಅಲ್ಲಿ ಐವರು ಬುರ್ಖಾ ಧರಿಸಿ ಆಕೆಯನ್ನು ಸುತ್ತುವರಿದು, ಹೆಡ್‍ಮಾಸ್ಟರ್ ವಿರುದ್ಧ ನೀಡಿರುವ ದೂರನ್ನು ವಾಪಾಸ್ ತೆಗೆದುಕೊಳ್ಳುವಂತೆ ಹೇಳಿದ್ದರು. ಇದಕ್ಕೆ ನುಸ್ರತ್ ನಿರಾಕರಿಸಿದಾಗ, ನುಸ್ರತ್ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದರು.

    ಇದೇ ವೇಳೆ ಆಕೆ ತನ್ನ ಸಹೋದರನ ಮೊಬೈಲ್‍ನಲ್ಲಿ ತನ್ನ ಮೇಲೆ ದಾಳಿ ನಡೆಸಿದ ವಿಡಿಯೋವನ್ನು ರೆಕಾರ್ಡ್ ಮಾಡಿದ್ದಳು. ಜೊತೆಗೆ ದಾಳಿಗೂ ಮುನ್ನ ಕೆಲವರನ್ನು ಗುರುತಿಸಿದ್ದಳು. ವಿಡಿಯೋದಲ್ಲಿ `ಶಿಕ್ಷಕ ನನ್ನನ್ನು ಮುಟ್ಟಿದ. ನನ್ನ ಕೊನೆಯ ಉಸಿರು ಇರುವತನಕ ಈ ದೌರ್ಜನ್ಯದ ವಿರುದ್ಧ ಹೋರಾಡುತ್ತೇನೆ’ ಎಂದು ನುಸ್ರತ್ ಹೇಳಿದ್ದಳು.

    ಈ ಘಟನೆ ಸಂಬಂಧಿಸಿದಂತೆ 18 ಮಂದಿಯನ್ನು ಬಂಧಿಸಲಾಗಿತ್ತು. ಆರೋಪಿಗಳಲ್ಲಿ ಮೂವರು ನುಸ್ರತ್ ಕ್ಲಾಸ್‍ಮೇಟ್ ಸೇರಿದಂತೆ ಐವರು ಆಕೆಗೆ ಬೆಂಕಿ ಹಚ್ಚುವ ಮೊದಲು ಸ್ಕಾರ್ಫ್ ನಿಂದ ಕೈ ಮತ್ತು ಕಾಲು ಕಟ್ಟಿದ್ದರು. ಬೆಂಕಿ ಹಚ್ಚಿದ ನಂತರ ಆ ಸ್ಕಾರ್ಫ್ ಸುಟ್ಟು ಹೋಗಿದೆ. ಇದರಿಂದ ಅವಳು ಛಾವಣಿಯಿಂದ ತಪ್ಪಿಸಿಕೊಂಡು ಕೆಳಗೆ ಬಂದಿದ್ದಳು. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಷ್ಟರಲ್ಲಿ ನುಸ್ರತ್ ದೇಹ 80% ಸುಟ್ಟು ಹೋಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಏಪ್ರಿಲ್ 10 ರಂದು ನುಸ್ರತ್

  • ಫ್ಲೈಓವರ್ ಮೇಲೆ ಹೊತ್ತಿ ಉರಿದ ಕಾರು – ತಾಯಿ, ಇಬ್ಬರು ಮಕ್ಕಳು ಸಜೀವದಹನ

    ಫ್ಲೈಓವರ್ ಮೇಲೆ ಹೊತ್ತಿ ಉರಿದ ಕಾರು – ತಾಯಿ, ಇಬ್ಬರು ಮಕ್ಕಳು ಸಜೀವದಹನ

    ನವದೆಹಲಿ: ಚಲಿಸುತ್ತಿದ್ದ ಕಾರಿಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡ ಪರಿಣಾಮ ವಾಹನದ ಒಳಗಿದ್ದ ತಾಯಿ ಹಾಗೂ ಇಬ್ಬರು ಹೆಣ್ಣು ಮಕ್ಕಳು ಸಜೀವ ದಹನವಾಗಿರುವ ದಾರುಣ ಘಟನೆ ಪೂರ್ವ ದೆಹಲಿಯ ಅಕ್ಷರಧಾಮ ಫ್ಲೈಓವರ್ ನಲ್ಲಿ ನಡೆದಿದೆ.

    ಭಾನುವಾರ ಸಂಜೆ ಸುಮಾರು 6.30ರ ಹೊತ್ತಿಗೆ ಈ ದುರಂತ ಸಂಭವಿಸಿದೆ. ದೆಹಲಿಯ ನಿವಾಸಿಗಳಾದ ರಂಜನಾ ಮಿಶ್ರಾ, ರಿಧಿ ಹಾಗೂ ನಿಕ್ಕಿ ಮೃತ ದುರ್ದೈವಿಗಳು. ಭಾನುವಾರ ಸಂಜೆ ಅಕ್ಷರಧಾಮ ದೇವಾಲಯಕ್ಕೆ ರಂಜನಾ, ಪತಿ ಉಪೇಂದ್ರ ಮಿಶ್ರಾ ಹಾಗೂ ಅವರ ಮೂವರು ಮಕ್ಕಳು ಕಾರಿನಲ್ಲಿ ತೆರೆಳುತ್ತಿದ್ದರು. ಈ ವೇಳೆ ಅಕ್ಷರಧಾಮ ಫ್ಲೈಓವರ್ ಮೇಲೆ ಬರುತ್ತಿರುವಾಗ ಕಾರಿನಲ್ಲಿ ಗ್ಯಾಸ್ ಲೀಕ್ ಆದ ಕಾರಣ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಕಾರು ಹೊತ್ತಿ ಉರಿದಿದೆ.

    ಬೆಂಕಿ ಕಾಣಿಸಿಕೊಂಡ ತಕ್ಷಣ ಕಾರು ಚಲಾಯಿಸುತ್ತಿದ್ದ ಪತಿ, ತನ್ನ ಪಕ್ಕದಲ್ಲೇ ಕೂತಿದ್ದ ಮೂರನೇ ಮಗಳನ್ನು ಎತ್ತಿಕೊಂಡು ಹೊರಗಡೆ ಹಾರಿದ್ದಾರೆ. ಆದ್ರೆ ಪತ್ನಿ ಹಾಗೂ ಇನ್ನಿಬ್ಬರು ಮಕ್ಕಳು ಕಾರಿನ ಹಿಂದಿನ ಸೀಟಿನಲ್ಲಿ ಕುಳಿತ್ತಿದ್ದ ಕಾರಣಕ್ಕೆ ಅವರನ್ನು ಕಾಪಾಡುವಷ್ಟರಲ್ಲಿ ಕಾರು ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, ಮೂವರು ಕೂಡ ಸಜೀವದಹನವಾಗಿದ್ದಾರೆ.

    ಕಾರಿಗೆ ಬೆಂಕಿ ಹೇಗೆ ತಗುಲಿತು ಅಂತ ನನಗೆ ಗೊತ್ತಿಲ್ಲ ಎಂದು ಶಾಕ್‍ನಲ್ಲಿ ಉಪೇಂದ್ರ ಮಿಶ್ರಾ ಹೇಳುತ್ತಿದ್ದಾರೆ. ಸದ್ಯ ಬೆಂಕಿ ಅನಾಹುತದ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಡಿಸಿಪಿ ಜಸ್ಮೀತ್ ಸಿಂಗ್ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಅಗ್ನಿ ದುರಂತದಲ್ಲಿ 70 ಮಂದಿ ಸಜೀವ ದಹನ!

    ಅಗ್ನಿ ದುರಂತದಲ್ಲಿ 70 ಮಂದಿ ಸಜೀವ ದಹನ!

    ಢಾಕಾ: ರಾಸಾಯನಿಕ ಸಂಗ್ರಹಿಸಿದ್ದ ಕಟ್ಟಡದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿ 70 ಮಂದಿ ಸಜೀವವಾಗಿ ದಹನವಾಗಿರುವ ಘಟನೆ ಬಾಂಗ್ಲಾದೇಶ ರಾಜಧಾನಿ ಢಾಕಾದಲ್ಲಿ ಬುಧವಾರ ತಡರಾತ್ರಿ ನಡೆದಿದೆ.

    ಢಾಕಾದ ಚೌಕ್‍ಬಜಾರ್ ಪ್ರದೇಶದಲ್ಲಿ ರಾಸಾಯನಿಕ ಸಂಗ್ರಹಿಸಿದ್ದ ಕಟ್ಟಡದಲ್ಲಿ ಈ ಬೆಂಕಿ ಅವಘಡ ಸಂಭವಿಸಿದ್ದು, ಬಳಿಕ ಸಮೀಪದ ಜನವಸತಿ ಕಟ್ಟಡಗಳಿಗೂ ಬೆಂಕಿ ವ್ಯಾಪಿಸಿದೆ. ಈ ದುರಂತದಲ್ಲಿ ಇದೂವರೆಗೆ ಸುಮಾರು 70 ಮಂದಿ ಸಾವನ್ನಪ್ಪಿದ್ದು, ಸುಮಾರು 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡವರ ಪೈಕಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಢಾಕಾದ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಚಿಕಿತ್ಸೆಗೆಂದು ರವಾನಿಸಲಾಗಿದೆ. ಹಾಗೆಯೇ ಇನ್ನಷ್ಟು ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಅಗ್ನಿಶಾಮಕ ದಳ ಮತ್ತು ಪೊಲೀಸರು ತಿಳಿಸಿದ್ದಾರೆ.

    ಚೌಕ್‍ಬಜಾರ್ ಪ್ರದೇಶದಲ್ಲಿ ಕಟ್ಟಡಗಳು ಒಂದರ ಪಕ್ಕ ಮತ್ತೊಂದು ತೀರ ಹತ್ತಿರದಲ್ಲಿದೆ. ಆದರಿಂದ ರಾಸಾಯನಿಕ ಸಂಗ್ರಹಿಸಿದ್ದ ಕಟ್ಟಡಕ್ಕೆ ತಗುಲಿದ ಬೆಂಕಿ ಸ್ವಲ್ಪ ಸಮಯದಲ್ಲಿಯೇ ಸಮೀಪದ ಅಪಾರ್ಟ್​​ಮೆಂಟ್​  ಸೇರಿ ಒಟ್ಟು ನಾಲ್ಕು ಕಟ್ಟಡಗಳಿಗೆ ತಲುಪಿದೆ. ಸತತ 9 ಗಂಟೆಗಳು ಅಗ್ನಿಶಾಮಕ ದಳ ಹರಸಾಹಸಪಟ್ಟು ಬೆಂಕಿಯನ್ನು ಕೊಂಚ ಮಟ್ಟಿಗೆ ನಿಯಂತ್ರಣಕ್ಕೆ ತಂದಿದ್ದಾರೆ.

    ಈ ಘಟನೆಯಲ್ಲಿ ಸಾವನ್ನಪ್ಪಿದವರ ಮೃತದೇಹ ಬಹುತೇಕ ಸುಟ್ಟು ಹೊಗಿದ್ದು, ಮೃತಪಟ್ಟವರ ಗುರುತು ಪತ್ತೆಹಚ್ಚಲು ಆಗುತ್ತಿಲ್ಲ. ಬ್ಯಾಗ್ ಗಳನ್ನು ಬಳಸಿ ರಕ್ಷಣಾ ಸಿಬ್ಬಂದಿ ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದಾರೆ. ಇದು ಬಹಳ ಕಷ್ಟಕರ ಎಂದು ಅಗ್ನಿಶಾಮಕ ಅಧಿಕಾರಿ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಗುಡಿಸಲಿಗೆ ಬೆಂಕಿ – 4 ತಿಂಗಳ ಕಂದಮ್ಮ ಸಜೀವದಹನ!

    ಗುಡಿಸಲಿಗೆ ಬೆಂಕಿ – 4 ತಿಂಗಳ ಕಂದಮ್ಮ ಸಜೀವದಹನ!

    ಚಿಕ್ಕಬಳ್ಳಾಪುರ: ಆಕಸ್ಮಿಕ ಬೆಂಕಿ ತಗುಲಿ ಇಡೀ ಗುಡಿಸಲು ಧಗ ಧಗ ಹೊತ್ತಿ ಉರಿದಿದ್ದು, ಗುಡಿಸಲಿನಲ್ಲಿದ್ದ 4 ತಿಂಗಳ ಮಗು ಸಜೀವದಹನವಾಗಿರೋ ಹೃದಯವಿದ್ರಾವಕ ಘಟನೆ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಮಂಚೇನಹಳ್ಳಿ ಹೋಬಳಿಯ ರಾಯನಕಲ್ಲು ಗ್ರಾಮದ ಬಳಿ ನಡೆದಿದೆ.

    4 ತಿಂಗಳ ರಾಜೇಶ್ವರಿ ಮೃತ ಕಂದಮ್ಮ. ರಾಯನಕಲ್ಲು ಗ್ರಾಮದ ನಿವಾಸಿಗಳಾದ ದಿವಂಗತ ರವಿ ಹಾಗೂ ಶಶಿಕಲಾ ದಂಪತಿಯ ಮಗು ರಾಜೇಶ್ವರಿ ಅಗ್ನಿ ಅವಘಡಕ್ಕೆ ಬಲಿಯಾಗಿದೆ. ಮೂಲತಃ ಹಾವಾಡಿಗರಾದ ಶಶಿಕಲಾ ಕುಟುಂಬಸ್ಥರು ಕಳೆದ 10 ವರ್ಷಗಳಿಂದ ರಾಯನಕಲ್ಲು ಗ್ರಾಮದ ಬಳಿ ಇರುವ ಕೆರೆಯ ಪಕ್ಕದ ಬೆಟ್ಟದ ಕೆಳಗೆ ಗುಡಿಸಲು ಹಾಕಿಕೊಂಡು ಬದುಕು ಕಟ್ಟಿಕೊಂಡಿದ್ದರು.

    ವಿಪರ್ಯಾಸವೆಂದರೆ ಇಂದು ಮಗುವನ್ನು ಗುಡಿಸಲಿನಲ್ಲಿ ಮಲಗಿಸಿದ್ದ ತಾಯಿ ಶಶಿಕಲಾ ಅಡುಗೆ ಮಾಡಲು ಓಲೆ ಹಚ್ಚಿದ್ದರು. ಬಳಿಕ ಅನ್ನ ಮಾಡಲು ಅಕ್ಕಿ ತರಲು ಎಂದು ಪಕ್ಕದ ಗುಡಿಸಲಿಗೆ ಹೋಗಿದ್ದಾಗ ಬೆಂಕಿ ಗುಡಿಸಲಿಗೆ ತಗುಲಿ ಇಡೀ ಗುಡಿಸಲು ಸಂಪೂರ್ಣ ಸುಟ್ಟು ಕರಕಲಾಗಿದೆ. ಹೀಗಾಗಿ ಗುಡಿಸಲಿನಲ್ಲೇ ನಿದ್ದೆ ಮಾಡುತ್ತಿದ್ದ ಮಗು ರಾಜೇಶ್ವರಿ ಸಹ ಚಿರನಿದ್ರೆಗೆ ಜಾರಿದ್ದಾಳೆ.

    ಮಗುವನ್ನು ಕಳೆದುಕೊಂಡ ತಾಯಿ ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಈ ಘಟನೆ ಕುರಿತು ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv