Tag: ಸತೀಶ್ ನೀನಾಸಂ

  • ‘ನಿನ್ನ ಪ್ರತಿಯೊಂದು ಹೆಜ್ಜೆಯಲ್ಲೂ ನನ್ನ ಪಾಲಿರಲಿ’ ಎನ್ನುತ್ತಿದ್ದಾರೆ ಸಪ್ತಮಿ ಗೌಡ

    ‘ನಿನ್ನ ಪ್ರತಿಯೊಂದು ಹೆಜ್ಜೆಯಲ್ಲೂ ನನ್ನ ಪಾಲಿರಲಿ’ ಎನ್ನುತ್ತಿದ್ದಾರೆ ಸಪ್ತಮಿ ಗೌಡ

    ‘ಕಾಂ ತಾರ’ (ಕಾಂತಾರ) ಬೆಡಗಿ ಸಪ್ತಮಿ ಗೌಡ (ಸಪ್ತಮಿ ಗೌಡ) ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಬಹುಭಾಷೆಗಳಲ್ಲಿ ಮೂಡಿ ಬರಲಿರುವ ಸಿನಿಮಾಗೆ ಸಪ್ತಮಿ ಗೌಡ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಹಳ್ಳಿ ಹುಡುಗಿಯ ಗೆಟಪ್‌ನಲ್ಲಿ ನಟಿ ಕಾಣಿಸಿಕೊಂಡಿರುವ ಲುಕ್ ಈಗ ರಿವೀಲ್ ಆಗಿದೆ. ‘ದಿ ರೈಸ್ ಆಫ್ ಅಶೋಕ’ (ದಿ ರೈಸ್ ಆಫ್ ಅಶೋಕ) ಸಿನಿಮಾದ ಪೋಸ್ಟರ್ ರಿಲೀಸ್ ಆಗಿದೆ.

    ಸದಾ ಹೊಸ ಬಗೆಯ ಪಾತ್ರಗಳಿಗೆ ಒತ್ತು ಕೊಡೋ ಸಪ್ತಮಿ ಇದೀಗ ಸತೀಶ್ ನೀನಾಸಂಗೆ (ಸತೀಶ್ ನೀನಾಸಂ) ಜೊತೆಯಾಗಿದ್ದಾರೆ. ‘ದಿ ರೈಸ್ ಆಫ್ ಅಶೋಕ’ ಸಿನಿಮಾಗೆ ನಾಯಕಿಯಾಗಿದ್ದಾರೆ. ಪೋಸ್ಟರ್ ಜೊತೆ ನಿನ್ನ ಪ್ರತಿಯೊಂದು ಹೆಜ್ಜೆಯ ಚಿತ್ರದಲ್ಲೂ ನನ್ನ ಪಾಲಿರಲಿ. ಒಂದು ನಿಂದಾದರೆ, ಮತ್ತೊಂದು ನನ್ನದು ಎಂದು ರೊಮ್ಯಾಂಟಿಕ್ ಆಗಿ ಅಡಿಬರಹ ನೀಡಿದ್ದಾರೆ. ಪೋಸ್ಟರ್ ನೋಡಿ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

     

    ಈ ಪೋಸ್ಟ್ ಅನ್ನು Instagram ನಲ್ಲಿ ವೀಕ್ಷಿಸಿ

     

    🧿ಸಪ್ತಮಿ ಗೌಡ (@sapthami_gowda) ಹಂಚಿಕೊಂಡ ಪೋಸ್ಟ್

    ರಿಲೀಸ್ ಆಗಿರುವ ಪೋಸ್ಟರ್‌ನಲ್ಲಿ ಸಪ್ತಮಿ ಹಳ್ಳಿ ಹುಡುಗಿಯ ಗೆಟಪ್‌ನಲ್ಲಿದ್ದಾರೆ. ಲಂಗ ದಾವಣಿ ಹಾಕಿಕೊಂಡು ಸೈಕಲ್ ಮೇಲೆ ಕುಳಿತಿದ್ದಾರೆ. ಸೈಕಲ್ ಹಿಂದೆ ಹೂವಿನ ಬುಟ್ಟಿ ಇಡಲಾಗಿದೆ. ಅಂಬಿಕಾ ಎಂಬ ಹಳ್ಳಿ ಹುಡುಗಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದನ್ನೂ ಓದಿ: ಹನಿ ಸಿಂಗ್ ಕಾನ್ಸರ್ಟ್‌ನಲ್ಲಿ ರಾಕಿಂಗ್ ಸ್ಟಾರ್- ಕನ್ನಡದಲ್ಲಿ ಹಾಡುವಂತೆ ಯಶ್ ಕಂಡೀಷನ್

    ಮೊದಲ ಬಾರಿಗೆ ಸತೀಶ್ ನೀನಾಸಂಗೆ ಸಪ್ತಮಿ ಗೌಡ ನಾಯಕಿಯಾಗಿ ಕಾಣಿಸಿಕೊಳ್ತಿದ್ದಾರೆ. ನಿರ್ದೇಶಕ ವಿನೋದ್ದೊಂಡಾಳೆ ನಿಧನದ ಬಳಿಕ ಈ ಚಿತ್ರವನ್ನು ಮನು ಎಂಬುವವರು ನಿರ್ದೇಶಿಸುತ್ತಿದ್ದಾರೆ. ನಟ ಸತೀಶ್ ನೀನಾಸಂ ನಿರ್ಮಾಣದ ಹೊಣೆ ಹೊತ್ತಿದ್ದಾರೆ.

  • ರಗಡ್‌ ಅವತಾರದಲ್ಲಿ ನೀನಾಸಂ ಸತೀಶ್-‘ದಿ ರೈಸ್ ಆಫ್ ಅಶೋಕ’ ಮೋಷನ್ ಪೋಸ್ಟರ್ ಔಟ್

    ರಗಡ್‌ ಅವತಾರದಲ್ಲಿ ನೀನಾಸಂ ಸತೀಶ್-‘ದಿ ರೈಸ್ ಆಫ್ ಅಶೋಕ’ ಮೋಷನ್ ಪೋಸ್ಟರ್ ಔಟ್

    ನೀನಾಸಂ ಸತೀಶ್ (Satish Ninasam) ನಟಿಸುತ್ತಿರುವ ಅಶೋಕ ಬ್ಲೇಡ್ ಸಿನಿಮಾವೀಗ ಶೀರ್ಷಿಕೆ ಬದಲಾವಣೆಯೊಂದಿಗೆ ಮತ್ತೆ ಶೂಟಿಂಗ್ ಅಖಾಡಕ್ಕೆ ಇಳಿಯುತ್ತಿದೆ. ಅಶೋಕ್ ಬ್ಲೇಡ್ ಬದಲಿಗೆ ‘ದಿ ರೈಸ್ ಆಫ್ ಅಶೋಕ’ (The Rise Of Ashoka) ಎಂಬ ಟೈಟಲ್ ಇಡಲಾಗಿದೆ. ಕೈಯಲ್ಲಿ ಮಚ್ಚು ಹಿಡಿದು ರಗಡ್‌ ಅವತಾರ ತಾಳಿದ್ದಾರೆ. ಸಿನಿಮಾದ ಪೋಸ್ಟರ್‌ ರಿಲೀಸ್‌ ಆಗಿದೆ.

    ನಿರ್ದೇಶಕ ವಿನೋದ್ ದೊಂಡಾಲೆ ನಿಧನದ ಬಳಿಕ ಈ ಚಿತ್ರ ನಿಂತು ಹೋಯ್ತು ಎಂಬ ಸುದ್ದಿಯಾಗಿತ್ತು. ಆದರೆ ನಟ ನೀನಾಸಂ ಸತೀಶ್ ‘ದಿ ರೈಸ್ ಆಫ್ ಅಶೋಕ’ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ವಿನೋದ್ ದೊಂಡಾಲೆ ಶೇಕಡ 80%ರಷ್ಟು ಚಿತ್ರೀಕರಣ ಮುಗಿಸಿದ್ದಾರೆ. ಒಂದಿಷ್ಟು ಟಾಕಿ ಮತ್ತು ಹಾಡುಗಳ ಚಿತ್ರೀಕರಣ ಬಾಕಿ ಇತ್ತು.

    ಚಮಕ್, ಕ್ಷೇತ್ರಪತಿ, ಅವತಾರ ಪುರುಷ ಸೇರಿದಂತೆ ಒಂದಷ್ಟು ಸಿನಿಮಾಗಳಲ್ಲಿ ಸಂಕಲನಕಾರರಾಗಿ ಕೆಲಸ ಮಾಡಿರುವ ಮನು ಶೇಡ್ಗಾರ್ ‘ದಿ ರೈಸ್ ಆಫ್ ಅಶೋಕ’ನಿಗೆ ಉಳಿದ ದೃಶ್ಯಗಳಿಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಮಚ್ಚು ಹಿಡಿದು ರಗಡ್ ಲುಕ್‌ನಲ್ಲಿ ನೀನಾಸಂ ಸತೀಶ್ ಕಾಣಿಸಿಕೊಂಡಿದ್ದಾರೆ. ಇದು ರೆಟ್ರೋ ಕಾಲದ ಕಥೆ ಅನ್ನೋದು ಪೋಸ್ಟರ್‌ನಲ್ಲಿ ಗೊತ್ತಾಗ್ತಿದೆ. ಬಂಡಾಯದ ಕಥೆಯನ್ನು ಹರವಿಡೋದಿಕ್ಕೆ ಸತೀಶ್ ಟೀಮ್ ಸಜ್ಜಾಗಿದೆ.

    ಫೆಬ್ರವರಿ ತಿಂಗಳ 15ರಿಂದ ‘ದಿ ರೈಸ್ ಆಫ್ ಅಶೋಕ’ಸಿನಿಮಾದ ಚಿತ್ರೀಕರಣ ಮತ್ತೆ ಪ್ರಾರಂಭವಾಗಲಿದೆ. ಸತೀಶ್ ವೃತ್ತಿ ಜೀವನದ ಅತ್ಯುತ್ತಮ ಚಿತ್ರವಾಗಿದ್ದು, ಕನ್ನಡದ ಜೊತೆಗೆ ತಮಿಳು ಹಾಗೂ ತೆಲುಗಿನಲ್ಲಿ ಅದ್ಧೂರಿಯಾಗಿ ತಯಾರಾಗುತ್ತಿದೆ. ವೃದ್ಧಿ ಕ್ರಿಯೇಷನ್ ಹಾಗೂ ಸತೀಶ್ ಪಿಕ್ಚರ್ಸ್ ಹೌಸ್ ಬ್ಯಾನರ್ ನಡಿ ವರ್ಧನ್ ನರಹರಿ, ಜೈಷ್ಣವಿ ಹಾಗೂ ನೀನಾಸಂ ಸತೀಶ್ ಅವರು ‌’ರೈಸ್ ಆಫ್ ಅಶೋಕ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ನೀನಾಸಂ ಸತೀಶ್ ನಾಯಕನಾಗಿ ಅಭಿನಯಿಸುತ್ತಿದ್ದು, ಬಿ.ಸುರೇಶ್, ಅಚ್ಯುತ್ ಕುಮಾರ್, ಗೋಪಾಲ ಕೃಷ್ಣ ದೇಶಪಾಂಡೆ, ಸಂಪತ್ ಮೈತ್ರೀಯಾ, ಯಶ್ ಶೆಟ್ಟಿ ತಾರಾಬಳಗದಲ್ಲಿದ್ದಾರೆ.

    ‘ದಿ ರೈಸ್ ಆಫ್ ಅಶೋಕ’ನಿಗೆ ಲವಿತ್ ಕ್ಯಾಮೆರಾ ಹಿಡಿಯುತ್ತಿದ್ದು, ವರದರಾಜ್ ಕಾಮತ್ ಕಲಾ ನಿರ್ದೇಶನ, ಪೂರ್ಣಚಂದ್ರ ತೇಜಸ್ವಿ ಎಸ್.ವಿ ಸಂಗೀತ ನಿರ್ದೇಶನ, ಡಾ.ರವಿವರ್ಮಾ ಮತ್ತು ವಿಕ್ರಮ್ ಮೋರ್ ಸಾಹಸ ನಿರ್ದೇಶನ, ಸಂತೋಷ್ ಶೇಖರ್ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ನಿರ್ದೇಶನದ ಜೊತೆಗೆ ಮನು ಶೆಡ್ಗಾರ್ ಸಂಕಲನದ ಹೊಣೆ ಕೂಡ ಹೊತ್ತುಕೊಂಡಿದ್ದಾರೆ.

  • ‘ಅಯೋಗ್ಯ 2’ಗೆ ಅದ್ಧೂರಿ ಮುಹೂರ್ತ- ಮತ್ತೆ ಜೊತೆಯಾದ ಸತೀಶ್‌ ನೀನಾಸಂ, ರಚಿತಾ ರಾಮ್

    ‘ಅಯೋಗ್ಯ 2’ಗೆ ಅದ್ಧೂರಿ ಮುಹೂರ್ತ- ಮತ್ತೆ ಜೊತೆಯಾದ ಸತೀಶ್‌ ನೀನಾಸಂ, ರಚಿತಾ ರಾಮ್

    ಸ್ಯಾಂಡಲ್‌ವುಡ್‌ನ ಸೂಪರ್ ಸಕ್ಸಸ್ ಜೋಡಿಗಳಲ್ಲಿ ಒಂದಾಗಿರುವ ರಚಿತಾ ರಾಮ್ (Rachita Ram) ಹಾಗೂ ಸತೀಶ್ ನೀನಾಸಂ (Satish Ninasam) ಮತ್ತೆ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ‘ಅಯೋಗ್ಯ 2’ ಸಿನಿಮಾಗಿ ರಚಿತಾ ರಾಮ್ ಮತ್ತು ಸತೀಶ್ ನೀನಾಸಂ ಒಂದಾಗಿದ್ದಾರೆ. ಸೂಪರ್ ಹಿಟ್ ‘ಅಯೋಗ್ಯ’ ಸಿನಿಮಾ ಮೂಲಕ ಮೋಡಿ ಮಾಡಿದ್ದ ಈ ಜೋಡಿ ಇದೀಗ 6 ವರ್ಷಗಳ ಬಳಿಕ ಮತ್ತೆ ಅಭಿಮಾನಿಗಳನ್ನು ರಂಜಿಸಲು ರೆಡಿಯಾಗಿದ್ದಾರೆ.

    ಇಂದು (ಡಿ.11) ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನದಲ್ಲಿ ನಡೆದ ಅದ್ಧೂರಿ ಮುಹೂರ್ತ ಸಮಾರಂಭದಲ್ಲಿ ‘ಅಯೋಗ್ಯ 2’ ಚಿತ್ರೀಕರಣಕ್ಕೆ ಚಾಲನೆ ಸಿಕ್ಕಿದೆ. ಡೈರೆಕ್ಟರ್ ಮಹೇಶ್ ಕುಮಾರ್ ಸಾರಥ್ಯದಲ್ಲಿ ‘ಅಯೋಗ್ಯ 2’ (Ayogya 2) ಮೂಡಿ ಬರುತ್ತಿದ್ದು‌, ಮುನೇಗೌಡ ಅವರು ತಮ್ಮ ಎಸ್ ವಿ ಸಿ ಪ್ರೊಡಕ್ಷನ್‌ನಲ್ಲಿ ಬಂಡವಾಳ ಹೂಡಿದ್ದಾರೆ. ಇದನ್ನೂ ಓದಿ:ಪೂಜಾ ಹೆಗ್ಡೆಗೆ ಠಕ್ಕರ್-‌ ನಾಗಚೈತನ್ಯಗೆ ಶ್ರೀಲೀಲಾ ಜೋಡಿ?

    ಇನ್ನೂ ಅಶ್ವಿನಿ ಪುನೀತ್ ರಾಜ್‌ಕುಮಾರ್ (Ashwini Puneeth Rajkumar) ‘ಅಯೋಗ್ಯ 2’ ಚಿತ್ರಕ್ಕೆ ಕ್ಲ್ಯಾಪ್ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭಹಾರೈಸಿದರು. ಮುಹೂರ್ತ ಸಮಾರಂಭದಲ್ಲಿ ಇಡೀ ಸಿನಿಮಾತಂಡದ ಜೊತೆಗೆ ನೆನಪಿರಲಿ ಪ್ರೇಮ್, ನಟ ಶ್ರೇಯರ್ ಮಂಜು, ಪ್ರಮೋದ್ ಸೇರಿದಂತೆ ಅನೇಕ ಕಲಾವಿದರು ಹಾಜರಿದ್ದು ಸಿನಿಮಾತಂಡಕ್ಕೆ ಶುಭಹಾರೈಸಿದರು.

    ಪೂಜೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಿರ್ದೇಶಕ ಮಹೇಶ್, ಅಯೋಗ್ಯ  2 ಕನ್ನಡದ ಜೊತೆಗೆ ತಮಿಳು, ತೆಲುಗಿನಲ್ಲೂ ಮಾಡುತ್ತಿದ್ದೇವೆ. ರಚಿತಾ ಮತ್ತು ಸತೀಶ್ ಅವರನ್ನು ತೆರೆಮೇಲೆ ನೋಡೋಕೆ ತುಂಬಾ ಖುಷಿ ಆಗುತ್ತೆ. ಇದು ಪ್ಯಾನ್ ಇಂಡಿಯಾ ಸಿನಿಮಾ ಅಲ್ಲ, ಫ್ಯಾನ್ ಇಂಡಿಯಾ ಸಿನಿಮಾ. ಮೊದಲ ಭಾಗ ಹಿಟ್ ಆದ್ಮೇಲೆ ಬೇರೆ ಭಾಷೆಗೆ ಡಬ್ ಮಾಡಿದ್ವಿ. ಆದರೀಗ ತಮಿಳು ಹಾಗೂ ತೆಲುಗಿನಲ್ಲಿ ಮಾಡುತ್ತಿದ್ದೇವೆ ಎಂದು ಹೇಳಿದರು.

    ನೀನಾಸಂ ಸತೀಶ್ ಮಾತನಾಡಿ, ಅಯೋಗ್ಯ 2 ಸಿನಿಮಾಗೆ ನಿರ್ಮಾಪಕರ ದೊಡ್ಡ ಲಿಸ್ಟ್ ಇತ್ತು. ಅದರೆ ಕೊನೆಯದಾಗಿ ಮುನೇಗೌಡ ಅವರು ಫೈನಲ್ ಆಗಿದ್ದಾರೆ ಅವರು ಉತ್ತಮ ನಿರ್ಮಾಪಕರು. ಅಯೋಗ್ಯ 2 ಸಿನಿಮಾ ಕನ್ನಡ ಸಿನಿಮಾರಂಗಕ್ಕೆ ದೊಡ್ಡ ಸಿನಿಮಾವಾಗಲಿದೆ ಎಂದು ಹೇಳಿದರು.

    ಇನ್ನೂ ನಟಿ ರಚಿತಾ ರಾಮ್ ಮಾತನಾಡಿ, ‘ಕಳೆದ 6 ವರ್ಷದ ಹಿಂದೆ ಅಯೋಗ್ಯ ಸಿನಿಮಾ ಇದೇ ಜಾಗದಲ್ಲಿ ಮುಹೂರ್ತ ಆಗಿತ್ತು. ತುಂಬಾ ಖುಷಿ ಆಗುತ್ತಿದೆ. ಅಶ್ವಿನಿ ಮೇಡಮ್ ಅವರ ಆಶೀರ್ವಾದವಿದೆ. ಮೊದಲ ಭಾಗಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು. ಅಯೋಗ್ಯ 2 ಮಾಡಬೇಕು ಅಂದಾಗ ಮೊದಲು ತಲೆಗೆ ಬಂದಿದ್ದು ಏನಮ್ಮಿ ಏನಮ್ಮಿ ಹಾಡಿಗೆ ರಿಪ್ಲೇಸ್ ಯಾವುದು ಅಂತ ಆದರೆ ಆ ಹಾಡಿಗೆ ಯಾವುದೇ ರಿಪ್ಲೇಸ್ ಇಲ್ಲ. ನಾನು ಮತ್ತು ಸತೀಶ್ ಟಾಮ್ ಅಂಡ್ ಜೆರ್ರಿ ಹಾಗೆ ಕಿತ್ತಾಡುತ್ತಿರುತ್ತೇವೆ ಎಂದು ಹೇಳಿದರು. ಇನ್ನೂ ಈ ಸಿನಿಮಾದಲ್ಲಿ ರಚಿತಾ ಅವರಿಗೆ ಲೇಡಿ ಸೂಪರ್ ಸ್ಟಾರ್ ಎನ್ನುವ ಬಿರುದನ್ನು ನೀಡಲಾಗಿದೆ. ಈ ಬಗ್ಗೆ ಮಾತನಾಡಿದ ರಚಿತಾ, ನಾನು ಯಾವಾಗಲು ಅಭಿಮಾನಿಗಳ ಪ್ರೀತಿಯ ಬುಲ್ ಬುಲ್ ಆಗಿಯೇ ಇರುತ್ತೇನೆ ಎಂದರು.

    ನಿರ್ಮಾಪಕ ಎಂ ಮುನೇಗೌಡ ಮಾತನಾಡಿ, ‘ಕನ್ನಡ ಸಿನಿಮಾರಂಗಕ್ಕೆ ಉತ್ತಮ ಸಿನಿಮಾವಾಗಲಿದೆ. ಮಹೇಶ್ ಬಂದು ಅಯೋಗ್ಯ 2 ಮಾಡಬೇಕು ಅಂದಾಗೆ ಹಿಂದೆ ಮುಂದೆ ನೋಡದೇ ಒಪ್ಪಿಕೊಂಡೆ. ಅಯೋಗ್ಯ ಮೊದಲ ಭಾಗ ಸೂಪರ್ ಹಿಟ್ ಆಗಿತ್ತು. ರಚಿತಾ ಮೇಡಮ್ ಕೂಡ ಸಿನಿಮಾ ಮಾಡಿ ಎಂದರು. ಎಲ್ಲಾ ಉತ್ತಮ ಕಲಾವಿದರಿದ್ದಾರೆ ಎಂದು ಹೇಳಿದರು.

    6 ವರ್ಷದ ಹಿಂದೆ ಬಂದಿದ್ದ ಸಿದ್ದೇಗೌಡ ಹಾಗೂ ನಂದಿನಿ ಲವ್ ಸ್ಟೋರಿಗೆ ಕನ್ನಡ‌ ಸಿನಿಮಾ ಪ್ರೇಮಿಗಳು ಫಿದಾ ಆಗಿದ್ದರು. ಈಗ ಮತ್ತದೇ ತಂಡ ‘ಅಯೋಗ್ಯ 2’ ಸಿನಿಮಾ ಮೂಲಕ‌ ಒಂದಾಗುತ್ತಿರುವುದು ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗಿದೆ. ಅಯೋಗ್ಯ 2ನಲ್ಲಿ ಬಹುತೇಕ ಕಲಾವಿದರು ಹಾಗೂ ತಂತ್ರಜ್ಞರು ಮೊದಲ ಭಾಗದಲ್ಲಿ ಇದ್ದವರೇ ಮುಂದುವರೆಯುತ್ತಿರುವುದು ವಿಶೇಷ. ಹಿರಿಯ ನಟ ಸುಂದರ್ ರಾಜ್, ತಬಲ ನಾಣಿ, ಶಿವರಾಜ್ ಕೆ ಆರ್ ಪೇಟೆ ಪಾರ್ಟ್ 2ನಲ್ಲೂ ಇದ್ದಾರೆ. ಈ ಬಾರಿ ಮಂಜು ಪಾವಗಡ ಕೂಡ ಅಯೋಗ್ಯ ಸಿನಿಮಾ ತಂಡ ಸೇರಿಕೊಂಡಿದ್ದಾರೆ. ಇನ್ನೂ ಮಾಸ್ತಿ ಅವರ ಸಂಭಾಷಣೆ, ವಿಶ್ವಜಿತ್ ರಾವ್ ಕ್ಯಾಮರಾ, ಅರ್ಜುನ್ ಜನ್ಯ ಅವರ ಸಂಗೀತ ಸಿನಿಮಾಗಿರಲಿದೆ.

    ‘ಅಯೋಗ್ಯ’ ಸಿನಿಮಾದ ಹಾಡುಗಳು ಕನ್ನಡ ಸಿನಿಮಾರಂಗದಲ್ಲಿಯೇ ಹೊಸ ಇತಿಹಾಸ ಬರೆದಿತ್ತು. ಈಗ ಮತ್ತಷ್ಟು ಕುತೂಹಲ ಹಾಗೂ ನಿರೀಕ್ಷೆಗಳೊಂದಿಗೆ ಅಯೋಗ್ಯ 2 ಸೆಟ್ಟೇರಿದೆ. ಮಂಡ್ಯದಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದ್ದು ಮುಂದಿನ ವರ್ಷ ಸಿನಿಮಾ ತೆರೆಗೆ ಬರಲಿದೆ.

  • ‘ಅಯೋಗ್ಯ2’ಗೆ ಮುಹೂರ್ತ ಫಿಕ್ಸ್- ಮತ್ತೆ ಒಂದಾದ ಸಕ್ಸಸ್ ಜೋಡಿ ರಚಿತಾ ರಾಮ್, ಸತೀಶ್ ನಿನಾಸಂ

    ‘ಅಯೋಗ್ಯ2’ಗೆ ಮುಹೂರ್ತ ಫಿಕ್ಸ್- ಮತ್ತೆ ಒಂದಾದ ಸಕ್ಸಸ್ ಜೋಡಿ ರಚಿತಾ ರಾಮ್, ಸತೀಶ್ ನಿನಾಸಂ

    ಸ್ಯಾಂಡಲ್‌ವುಡ್‌ನ ಸೂಪರ್ ಸಕ್ಸಸ್ ಜೋಡಿಗಳಲ್ಲಿ ಒಂದಾಗಿರುವ ರಚಿತಾ ರಾಮ್ (Rachita Ram) ಹಾಗೂ ಸತೀಶ್ ನಿನಾಸಂ (Satish Ninasam) ಮತ್ತೆ ಒಂದಾಗಿದ್ದಾರೆ. ‘ಅಯೋಗ್ಯ’ ಸಿನಿಮಾ ಮೂಲಕ ಮೋಡಿ ಮಾಡಿದ್ದ ಈ ಜೋಡಿ ಇದೀಗ 6 ವರ್ಷಗಳ ಬಳಿಕ ಮತ್ತೆ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದೆ. ಅಯೋಗ್ಯ ಸಿನಿಮಾದ ಪಾರ್ಟ್ 2 (Ayogya 2) ಸೆಟ್ಟೇರುತ್ತಿದ್ದು, ಈಗಾಲೇ ಮುಹೂರ್ತಕ್ಕೆ ಡೇಟ್ ಫಿಕ್ಸ್ ಆಗಿದೆ.

    6 ವರ್ಷದ ಹಿಂದೆ ಸಿದ್ದೇಗೌಡ ಹಾಗೂ ನಂದಿನಿ ಲವ್ ಸ್ಟೋರಿಗೆ ಕನ್ನಡ‌ ಸಿನಿಮಾ ಪ್ರೇಮಿಗಳು ಶಹಬ್ಬಾಸ್ ಎಂದಿದ್ದರು. ಈಗ ಮತ್ತದೇ ತಂಡ ‘ಅಯೋಗ್ಯ 2’ ಸಿನಿಮಾ ಮೂಲಕ‌ ಒಂದಾಗುತ್ತಿರುವುದು ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗಿದೆ. ‘ಅಯೋಗ್ಯ’ ಸಿನಿಮಾದ ಹಾಡುಗಳು ಕನ್ನಡ ಸಿನಿಮಾರಂಗದಲ್ಲಿಯೇ ಹೊಸ ಇತಿಹಾಸ ಬರೆದಿತ್ತು. ಈಗ ಮತ್ತಷ್ಟು ನಿರೀಕ್ಷೆಗಳೊಂದಿಗೆ ಚಿತ್ರತಂಡ ಹೊಸ ದಾಖಲೆ ಸೃಷ್ಟಿಸಲು‌ ಸಜ್ಜಾಗಿದೆ. ಇನ್ನು ‘ಅಯೋಗ್ಯ 2’ ಸಿನಿಮಾ ಡಿಸೆಂಬರ್ 11ರಂದು ಸೆಟ್ಟೇರಲಿದ್ದು, ಮಹೇಶ್ ಕುಮಾರ್ ನಿರ್ದೇಶನ ಮಾಡಲಿದ್ದಾರೆ. ಎಂ ಮುನೇಗೌಡ ‘ಅಯೋಗ್ಯ 2’ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ‌‌ ಇರಲಿದೆ.

    ರಚಿತಾ ರಾಮ್, ಸತೀಶ್ ನಿನಾಸಂ‌, ರವಿಶಂಕರ್, ಶಿವರಾಜ್ ಕೆ.ಆರ್ ಪೇಟೆ ಸೇರಿದಂತೆ ‘ಅಯೋಗ್ಯ’ ಸಿನಿಮಾದಲ್ಲಿ ಅಭಿನಯಿಸಿದ ಬಹುತೇಕ ಕಲಾವಿದರು ಅಯೋಗ್ಯ- 2ನಲ್ಲಿ ಮುಂದುವರೆಯುತ್ತಿರುವುದು ವಿಶೇಷ. ಇದನ್ನೂ ಓದಿ:ಸಂಸತ್ ಲೈಬ್ರರಿಯಲ್ಲಿ `ಸಾಬರಮತಿ ರಿಪೋರ್ಟ್‌’ ಸಿನಿಮಾ ವೀಕ್ಷಿಸಿದ ಮೋದಿ

    ಸೂಪರ್ ಹಿಟ್ ಸಿನಿಮಾದ ಸೀಕ್ವೆಲ್ ಅಂದರೆ ನಿರೀಕ್ಷೆ ಮತ್ತು ಕುತೂಹಲ ಕೊಂಚ ಜಾಸ್ತಿನೆ ಇರಲಿದೆ. ಹಾಗಾಗಿ ಅಯೋಗ್ಯ-2 ಕೂಡ ಸೆಟ್ಟೇರುವುದಕ್ಕೂ ಮೊದಲೇ ನಿರೀಕ್ಷೆ ದುಪ್ಪಟ್ಟು ಮಾಡಿದೆ. ಪಾರ್ಟ-2 ಹೇಗಿರಲಿದೆ ರವಿ ಶಂಕರ್ ಮತ್ತು ಸತೀಶ್ ನಡುವಿನಕಾದಾಟ, ಜಿದ್ದಾಜಿದ್ದಿ ಹಾಗೆ ಮುಂದುವರೆಯಲಿದಿಯಾ ಕಾದುನೋಡಬೇಕು.

  • ಮನಾಲಿ ಮಂಜಿನಲ್ಲಿ ‘ಮ್ಯಾಟ್ನಿ’ ಚಿತ್ರದ ಸಾಂಗ್ ಶೂಟ್

    ಮನಾಲಿ ಮಂಜಿನಲ್ಲಿ ‘ಮ್ಯಾಟ್ನಿ’ ಚಿತ್ರದ ಸಾಂಗ್ ಶೂಟ್

    ಮ್ಯಾಟ್ನಿ (Matinee) ಸತೀಶ್ ನಿನಾಸಂ (Satish Ninasam), ರಚಿತಾ ರಾಮ್ ಹಾಗೂ ಅದಿತಿ ಪ್ರಭುದೇವ (Aditi Prabhudev) ಅಭಿನಯದ ಸಿನಿಮಾ. ಸತೀಶ್ ಮತ್ತು ರಚಿತಾ ಎರಡನೇ ಬಾರಿ ಜೊತೆಯಾಗಿದ್ದು ಅಯೋಗ್ಯ ನಂತ್ರ ಮತ್ತೆ ಈ ಜೋಡಿ ತೆರೆ ಮೇಲೆ ಒಟ್ಟಿಗೆ ಮಿಂಚಲಿದೆ. ಈಗಾಗಲೇ ಸಾಂಗ್ ಮೂಲಕ ಸದ್ದು ಮಾಡ್ತಿರೋ ಮ್ಯಾಟ್ನಿ ತಂಡ ಈಗ ಮತ್ತೊಂದು ರೋಮ್ಯಾಟಿಕ್ ಹಾಡಿನ ಮೂಲಕ ಪ್ರೇಕ್ಷಕರ ಮುಂದೆ ಬಂದಿದೆ.

    ಸದ್ಯ ಬಿಡುಗಡೆಯಾಗಿರೋ ನಿನಗಾಗಿ ಮಿಡಿಯುವುದು ಈ ಹೃದಯ ಅನ್ನೋ ಹಾಡಿನಲ್ಲಿ ಸತೀಶ್ ನಿನಾಸಂ ಹಾಗೂ ಅದಿತಿ ಪ್ರಭುದೇವಾ ಕಾಣಿಸಿಕೊಂಡಿದ್ದಾರೆ. ಈ ಕಂಪ್ಲೀಟ್ ಹಾಡನ್ನು ಮನಾಲಿಯಲ್ಲಿ ಚಿತ್ರೀಕರಣ ಮಾಡಿದ್ದು ಹಾಡು ಸಖತ್ ಬ್ಯೂಟಿಫುಲ್ ಹಾಗೂ ರೋಮ್ಯಾಂಟಿಕ್ ಆಗಿ ಮೂಡಿ ಬಂದಿದೆ.

    ಇನ್ನು ಈ ಹಾಡನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಬಿಡುಗಡೆ ಮಾಡುವ ಮೂಲಕ ಮ್ಯಾಟ್ನಿ ಸಿನಿಮಾತಂಡಕ್ಕೆ ಆಲ್ ದ ಬೆಸ್ಟ್ ಹೇಳಿದ್ದಾರೆ. ನಿನಗಾಗಿ ಮಿಡಿಯುವುದು ಹಾಡಿನ ಜೊತೆಗೆ ಮೇಕಿಂಗ್ ಅನ್ನು ಬಿಡುಗಡೆ ಮಾಡಿರೋ ತಂಡ ಮೂರು ದಿನಗಳ ಕಾಲ ಮನಾಲಿ ಚಿತ್ರೀಕರಣ ಹೇಗಿತ್ತು ಅದರ ಜೊತೆ ಚಿತ್ರತಂಡ ಮನಾಲಿಯಲ್ಲಿ ಏನೆಲ್ಲಾ ಸಾಹಸ ಮಾಡಿ ಚಿತ್ರೀಕರಣ ಮಾಡಿದೆ ಅನ್ನೋದನ್ನ ಮೇಕಿಂಗ್ ಮೂಲಕ ತಿಳಿಸಿದ್ದಾರೆ.

    ಮ್ಯಾಟ್ನಿ ಸಿನಿಮಾವನ್ನ ಮನೋಹರ್ ಕಾಂಪಲ್ಲಿ ನಿರ್ದೇಶನ ಮಾಡಿದ್ದು ಪಾರ್ವತಿ ಎಸ್ ಗೌಡ ಚಿತ್ರಕ್ಕೆ ಎಫ್ ಥ್ರೀ ಪ್ರೊಡಕ್ಷನ್ಸ್ ಮೂಲಕ ಬಂಡವಾಳ ಹೂಡಿದ್ದಾರೆ. ಇನ್ನು ಈ ಹಾಡಿಗೆ ಕೀರ್ತನ್ ಪೂಜಾರಿ ಕ್ಯಾಮೆರಾ ವರ್ಕ್ ಮಾಡಿದ್ದು, ಸಂತು ಮಾಸ್ಟರ್ ಕೋರಿಯೋಗ್ರಾಫ್ ಮಾಡಿದ್ದಾರೆ. ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನ ಮಾಡಿರೋ ಮ್ಯಾಟ್ನಿ ಸಿನಿಮಾದ ಈ ರೋಮ್ಯಾಂಟಿಕ್ ಹಾಡನ್ನ ಹೇಮಂತ್ ಕುಮಾರ್ ಗಂಜಂ ಬರೆದಿದ್ದು ಸಾದ್ವಿನಿ ಕೊಪ್ಪ ಹಾಡನ್ನ ಹಾಡಿದ್ದಾರೆ.

     

    ಮ್ಯಾಟ್ನಿ ಸಿನಿಮಾದಲ್ಲಿ ಸತೀಶ್ ನಿನಾಸಂ , ರಚಿತಾ ರಾಮ್, ಅದಿತಿ ಪ್ರಭುದೇವಾ ಸೇರಿದಂತೆ ದೊಡ್ಡ ತಾರಾ ಬಳಗವೇ ಇದೆ. ಶಿವರಾಜ್ ಕೆ ಆರ್ ಪೇಟೆ, ನಾಗಭೂಷನ್, ಪೂರ್ಣ ಮೈಸೂರು, ದಿಗಂತ್ ಸೇರಿದಂತೆ ತಬಲ ನಾಣಿ, ಪ್ರಕಾಶ್ ತುಂಬಿನಾಡು,ಗೋಪಿ ಮಿಮಿಕ್ರಿ,ತುಳಸಿ ಶಿವಮಣಿ  ಇನ್ನು ಅನೇಕರು ಅಭಿನಯಿಸಿದ್ದಾರೆ ಏರ್ಪಿಲ್ 5 ರಂದು ಮ್ಯಾಟ್ನಿ ಸಿನಿಮಾ ರಾಜ್ಯಾಧ್ಯಂತ ತೆರೆಗೆ ಬರ್ತಿದೆ.

  • ಏಪ್ರಿಲ್ ಮೊದಲ ವಾರದಲ್ಲಿ ಬಹುನಿರೀಕ್ಷಿತ ‘ಮ್ಯಾಟ್ನಿ’

    ಏಪ್ರಿಲ್ ಮೊದಲ ವಾರದಲ್ಲಿ ಬಹುನಿರೀಕ್ಷಿತ ‘ಮ್ಯಾಟ್ನಿ’

    ಯೋಗ್ಯ ಚಿತ್ರದ ತರುವಾಯ ಒಂದು ಸುದೀರ್ಘಾವಧಿಯ ನಂತರ ನೀನಾಸಂ ಸತೀಶ್ (Satish Ninasam) ಮತ್ತು ರಚಿತಾ ರಾಮ್ (Rachita Ram) ಜೋಡಿಯಾಗಿ ನಟಿಸುತ್ತಿರುವ ಚಿತ್ರ `ಮ್ಯಾಟ್ನಿ’ (Matney). ಯಶಸ್ವಿ ಜೋಡಿಯಾಗಿ ಗುರುತಿಸಿಕೊಂಡಿರುವ ಸತೀಶ್ ಮತ್ತು ರಚಿತಾ ಮತ್ತೊಂದು ತೆರನಾದ ಗೆಟಪ್ಪಿನಲ್ಲಿ ಕಾಣಿಸಿಕೊಂಡಿರುವ ಮ್ಯಾಟ್ನಿಯ ಬಿಡುಗಡೆ ದಿನಾಂಕದ ಬಗ್ಗೆ ಒಂದಷ್ಟು ವಿಚಾರಗಳು ಹರಿದಾಡುತ್ತಿವೆ. ಗಾಂಧಿ ನಗರದಲ್ಲಿ ಸದ್ಯಕ್ಕೆ ಗುಲ್ಲೆದ್ದಿರುವ ವಿಚಾರಗಳನ್ನಾಧರಿಸಿ ಹೇಳೋದಾದರೆ, ಏಪ್ರಿಲ್ ತಿಂಗಳ ಮೊದಲ ವಾರದಲ್ಲಿ ಮ್ಯಾಟ್ನಿ ತೆರೆಗಾಣುವ ಸಾಧ್ಯತೆಗಳಿವೆ.

    ಮನೋಹರ್ ಕಾಂಪಲ್ಲಿ ನಿರ್ದೇಶನದಲ್ಲಿ, f3 ಪ್ರೊಡಕ್ಷನ್ಸ್ ಬ್ಯಾನರಿನಡಿಯಲ್ಲಿ ಮೂಡಿ ಬಂದಿರುವ ಮ್ಯಾಟ್ನಿ ಆರಂಭದಿಂದ ಇಲ್ಲಿಯವರೆಗೂ ಪ್ರೇಕ್ಷಕರ ಆಸಕ್ತಿ ಸೆಳೆಯುತ್ತಾ ಬಂದಿದೆ. ಹಂತ ಹಂತವಾಗಿ ಒಂದಿಷ್ಟು ವಿಚಾರಗಳನ್ನು ತಲುಪಿಸುತ್ತಾ ಬಂದಿರುವ ಈ ಚಿತ್ರವೀಗ ಬಿಡುಗಡೆಯ ಅಂಚಿಗೆ ಬಂದು ನಿಂತಿದೆ. ಸದ್ದಿಲ್ಲದಂತೆ ಪೋಸ್ಟ್ ಪ್ರೊಡಕ್ಷನ್ ಕಾರ್ಯ ಮುಗಿಸಿರುವ ಮ್ಯಾಟ್ನಿಯ ಪ್ರಚಾರ ಕಾರ್ಯವೂ ಚಾಲೂ ಆಗುವ ಲಕ್ಷಣಗಳು ಕಾಣಿಸುತ್ತಿವೆ.

    ಇತ್ತೀಚಿನ ವರ್ಷಗಳಲ್ಲಿ ವಿಶೇಷವಾದ, ಒಂದಕ್ಕೊಂದು ಭಿನ್ನವಾದ ಪಾತ್ರಗಳನ್ನೇ ನೀನಾಸಂ ಸತೀಶ್ ಒಪ್ಪಿಕೊಳ್ಳುತ್ತಾ ಬರುತ್ತಿದ್ದಾರೆ. ಅದರ ಮುಂದುವರೆಕೆಯ ಭಾಗವೆಂಬಂತೆ ಕಾಣಿಸುತ್ತಿರುವ ಮ್ಯಾಟ್ನಿ ಮನಮೋಹಕ ಕಥೆಯ ಹೂರಣದೊಂದಿಗೆ ರೂಪಿಸಲ್ಪಟ್ಟಿದೆ. ಒಂದು ಯಶಸ್ವಿ ಜೋಡಿ ಮತ್ತೊಂದು ಸಿನಿಮಾದಲ್ಲಿಯೂ ಜೊತೆಯಾದಾಗ ಸಹಜವಾಗಿಯೇ ಅದರತ್ತ ಒಂದಷ್ಟು ಕುತೂಹಲ ಮೂಡಿರತ್ತೆ. ಈ ಸಿನಿಮಾದ ಬಗ್ಗೆಯೂ ಅಂಥದ್ದೊಂದು ನಿರೀಕ್ಷೆ ಮೂಡಿದೆ.

  • ಗೆಳೆಯನಿಂದ ಪಾರ್ಟಿ ಸಾಂಗ್ ರಿಲೀಸ್ ಮಾಡಿಸಿದ ನೀನಾಸಂ ಸತೀಶ್

    ಗೆಳೆಯನಿಂದ ಪಾರ್ಟಿ ಸಾಂಗ್ ರಿಲೀಸ್ ಮಾಡಿಸಿದ ನೀನಾಸಂ ಸತೀಶ್

    ಹೊಸ ವರ್ಷವನ್ನು ಮತ್ತಷ್ಟು ರಂಗಾಗಿಸಲು ನೀನಾಸಂ ಸತೀಶ್ ಮತ್ತು ಮ್ಯಾಟ್ನಿ ಟೀಮ್ ಸಜ್ಜಾಗಿದೆ. ನ್ಯೂ ಯಿಯರ್ ಆಚರಿಸುವವರಿಗಾಗಿ ಮ್ಯಾಟ್ನಿ ಸಿನಿಮಾದ ಹಾಡೊಂದು ನಿನ್ನೆ ರಿಲೀಸ್ ಆಗಿದ್ದು, ನೆಚ್ಚಿನ ಗೆಳೆಯ, ನಟ ಧನಂಜಯ್ (Dhananjay) ಅವರಿಂದ ಮ್ಯಾಟ್ನಿ ಸಿನಿಮಾದ  ‘ಬಾರೋ ಬಾರೋ ಬರುವಾಗ ಬಾಟಲ್ ತಾರೋ’ ಎರಡನೇ ಹಾಡನ್ನು ರಿಲೀಸ್ ಮಾಡಿಸಲಾಗಿದೆ.

    ಈ ಹಿಂದೆ ಇದೇ ಕಲರ್ ಫುಲ್ ಎಣ್ಣೆ ಸಾಂಗ್ ಶೂಟಿಂಗ್ ಬೆಂಗಳೂರಿನಲ್ಲಿ ನಡೆದಿತ್ತು. ರಂಗು ರಂಗಾದ ಸೆಟ್ ನಲ್ಲಿ ನಡೆದ ಚಿತ್ರೀಕರಣದಲ್ಲಿ ನೀನಾಸಂ ಸತೀಶ್, ನಾಗಭೂಷಣ್ (Nagabhushan), ಶಿವರಾಜ್ ಕೆ.ಆರ್ ಪೇಟೆ ಸೇರಿದಂತೆ ಹಲವರು ಭಾಗಿಯಾಗಿದ್ದರು. ಇದೊಂದು ಎಣ್ಣೆ ಸಾಂಗ್ ಆಗಿದ್ದು, ಸಿನಿಮಾದ ಪ್ರಮುಖ ಘಟ್ಟದಲ್ಲಿ ಈ ಹಾಡು ಬರಲಿದೆಯಂತೆ.

    ನೀನಾಸಂ ಸತೀಶ್ ನಟನೆಯ ಬಹುತೇಕ ಸಿನಿಮಾದ ಹಾಡುಗಳು ಹಿಟ್ ಆಗಿವೆ. ಇದೇ ಮ್ಯಾಟ್ನಿ ಸಿನಿಮಾದ ಹಾಡೊಂದು ಈ ಹಿಂದೆ ರಿಲೀಸ್ ಆಗಿದ್ದು, ಸಂಜೆ ಮೇಲೆ ಸುಮ್ನೆ ಹಂಗೆ ಹೆಸರಿನ ಗೀತೆಯೂ ಹಿಟ್ ಲಿಸ್ಟ್ ಗೆ ಸೇರ್ಪಡೆ ಆಗಿದೆ. ಹಾಗಾಗಿ ಎಣ್ಣೆ ಸಾಂಗ್ ಕೂಡ ಅದೇ ಸಾಲಿಗೆ ಸೇರಲಿದೆ ಎನ್ನುವ ನಿರೀಕ್ಷೆ ಹುಟ್ಟು ಹಾಕಿದೆ. ಸತೀಶ್ ನೀನಾಸಂ ಮತ್ತು ರಚಿತಾ ರಾಮ್ ಕಾಂಬಿನೇಷನ್ ನ, ಅಯೋಗ್ಯ ಸಿನಿಮಾದ ‘ಏನಮ್ಮಿ ಏನಮ್ಮಿ’ ಹಾಡು 108 ಮಿಲಿಯನ್ ಗೂ ಅಧಿಕ ವೀಕ್ಷಣೆ ಪಡೆದು ದಾಖಲೆ ಬರೆದಿತ್ತು. ಇದೀಗ ಮತ್ತೆ ಈ ಜೋಡಿಯ ‘ಸಂಜೆ ಮೇಲೆ ಸುಮ್ನೆ ಹಂಗೆ’ (Sanje Mele) ಹಾಡು ವೈರಲ್ ಆಗಿದೆ. ನಿನ್ನೆಯಷ್ಟೇ ರಿಲೀಸ್ ಆಗಿರುವ ‘ಮ್ಯಾಟ್ನಿ’ (Matinee) ಸಿನಿಮಾದ ಈ ಗೀತೆ ಕಡಿಮೆ ಅವಧಿಯಲ್ಲೇ 3.8 ಮಿಲಿಯನ್ ಗೂ ಅಧಿಕ ವೀಕ್ಷಣೆ ಪಡೆದು ವೈರಲ್ ಆಗುತ್ತಿದೆ.

    ಪೂರ್ಣಚಂದ್ರ ತೇಜಸ್ವಿ (Purnachandra Tejaswi) ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದ ಗೀತೆಗೆ ವಿಜಯ್ ಪ್ರಕಾಶ್ (Vijay Prakash) ದನಿಯಾಗಿದ್ದಾರೆ. ಇಡೀ ಹಾಡನ್ನು ಕಲರ್ ಫುಲ್ ಸೆಟ್ ನಲ್ಲಿ ಚಿತ್ರೀಕರಿಸಿದ್ದಾರೆ ನಿರ್ದೇಶಕ ಮನೋಹರ್. ಈಗಾಗಲೇ ಅಯೋಗ್ಯ ಸಿನಿಮಾದಲ್ಲಿ ಸಖತ್ತಾಗಿ ಹಾಡುಗಳಿಗೆ ಹೆಜ್ಜೆ ಹಾಕಿದ್ದ ಸತೀಶ್ ಮತ್ತು ರಚಿತಾ ರಾಮ್ ಕೂಡ ಈ ಸಿನಿಮಾದಲ್ಲಿ ಇರುವುದರಿಂದ ಹಾಡುಗಳು (Songs)ನಿರೀಕ್ಷೆ ಮೂಡಿಸಿದ್ದವು. ಏನಮ್ಮಿ ಏನಮ್ಮಿ ಅಂತ ಸ್ಯಾಂಡಲ್‌ವುಡ್‌ನಲ್ಲಿ ಹೊಸ ಅಲೆ ಸೃಷ್ಟಿಸಿದ ಜೋಡಿ ಸತೀಶ್ ನೀನಾಸಂ- ರಚಿತಾ ರಾಮ್ ಫೇರ್ ಮತ್ತೆ ಮ್ಯಾಟ್ನಿ ಸಿನಿಮಾದ ಮೂಲಕ ಒಂದಾಗಿದ್ದರಿಂದ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ನಿರೀಕ್ಷೆಗೆ ತಕ್ಕಂತೆ ನಿರ್ದೇಶಕ  ಮನೋಹರ್ ಕಾಂಪಳ್ಳಿ ಕೂಡ ‘ಮ್ಯಾಟ್ನಿ’ ಸಿನಿಮಾವನ್ನು ತಯಾರಿಸಿದ್ದಾರೆ ಎನ್ನುವ ಮಾತಿದೆ. ಈಗಾಗಲೇ ಸಿನಿಮಾದ ಬಹುತೇಕ ಚಿತ್ರೀಕರಣ ಮುಗಿದಿದ್ದು, ಸದ್ಯದಲ್ಲೇ ಸಿನಿಮಾ ತೆರೆಗೆ ಬರಲಿದೆ.

    ‘ಮ್ಯಾಟ್ನಿ’ಯ ಟೀಸರ್ ಕಲರ್ ಫುಲ್ ಸೆಟ್, ಮನ ಸೆಳೆಯೋ ಬ್ಯಾಗ್ರೌಂಡ್ ಮ್ಯೂಸಿಕ್, ರಚ್ಚು ಲುಕ್ ಎಲ್ಲವೂ ಕಣ್ಣಿಗೆ ಹಬ್ಬ ನೀಡಿದ್ದರೆ, ಸತೀಶ್ ನೀನಾಸಂ ಪ್ರೇಮ ನಿವೇದನೆ, ಪ್ರೀತಿಯ ಸಾಲುಗಳು ಕಣ್ಮನ ಸೆಳೆದಿದ್ದವು.  ಮನೋಹರ್ ಕಾಂಪಲಿ ಇಬ್ಬರು ಸ್ಟಾರ್ ಜೋಡಿಗೆ ಸರಿ ಹೊಂದುವಂತಹ ಒಂದೊಳ್ಳೆ ಕಥೆ ಹೆಣೆದಿದ್ದು ನಿರ್ದೇಶಕನಾಗಿ ತಮ್ಮನ್ನು ಸಹ ಪ್ರೂವ್ ಮಾಡಿಕೊಳ್ಳಲು ಸಕಲ ತಯಾರಿ ಮಾಡಿಕೊಂಡಿದ್ದಾರೆ.

     

    ರೋಮ್ಯಾಂಟಿಕ್ ಲವ್ ಸ್ಟೋರಿ ಸಬ್ಜೆಕ್ಟ್ ಇರುವ ಮ್ಯಾಟ್ನಿ ಚಿತ್ರದಲ್ಲಿ ಸತೀಶ್ ನೀನಾಸಂ ಶ್ರೀಮಂತ ಮನೆತನದ ಹುಡುಗನ ಪಾತ್ರಕ್ಕೆ ಬಣ್ಣಹಚ್ಚಿದ್ದು, ಲವರ್ ಬಾಯ್ ಅವತಾರವೆತ್ತಿದ್ದಾರೆ. ಈಗಾಗಲೇ ಅಯೋಗ್ಯ ಸಿನಿಮಾದಲ್ಲಿ ಸತೀಶ್ ಹಾಗೂ ರಚ್ಚು ಜೋಡಿ ಹಿಟ್ ನೀಡಿದ್ದು, `ಮ್ಯಾಟ್ನಿ’ ಸಿನಿಮಾದಲ್ಲೂ ಈ ಜೋಡಿ ಮೋಡಿ ಮಾಡಲಿದೆ ಎನ್ನುವ ನಿರೀಕ್ಷೆಯೂ ಹೆಚ್ಚಿದೆ. ಸದ್ಯ ಇದೊಂದು ಲವ್ ಸ್ಟೋರಿ ಎಂದಿರುವ ನಿರ್ದೇಶಕರು ಸಿನಿಮಾ ಬಗ್ಗೆ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ.  ಎಫ್ 3 ಪ್ರೊಡಕ್ಷನ್ಸ್ ಬ್ಯಾನರ್ ನಡಿ ಪಾರ್ವತಿ ಎಸ್ ಗೌಡ ಚಿತ್ರವನ್ನು ನಿರ್ಮಿಸಿದ್ದು, ಲೂಸಿಯ ಖ್ಯಾತಿಯ ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನ, ಸುಧಾಕರ್ ಸಿನಿಮಾಟೋಗ್ರಫಿ. ಕೆ.ಎಂ.ಪ್ರಕಾಶ್ ಸಂಕಲನ ಚಿತ್ರಕ್ಕಿದೆ.

  • ಹೊಸ ವರ್ಷಕ್ಕೆ ‘ಬಾಟಲ್ ತಾರೋ’ ಅಂತಿದ್ದಾರೆ ನೀನಾಸಂ ಸತೀಶ್

    ಹೊಸ ವರ್ಷಕ್ಕೆ ‘ಬಾಟಲ್ ತಾರೋ’ ಅಂತಿದ್ದಾರೆ ನೀನಾಸಂ ಸತೀಶ್

    ಹೊಸ ವರ್ಷವನ್ನು ಹೊಸ ರೀತಿಯಲ್ಲಿ ಸ್ವಾಗತಿಸುತ್ತಿದ್ದಾರೆ ಕನ್ನಡದ ಹೆಸರಾಂತ ನಟ ನೀನಾಸಂ ಸತೀಶ್. ನಾಳೆ ಅವರ ಮ್ಯಾಟ್ನಿ ಸಿನಿಮಾದ ಹೊಸ ಹಾಡು ರಿಲೀಸ್ ಆಗುತ್ತಿದ್ದು, ಸಂಜೆ 5ಕ್ಕೆ ‘ಬಾರೋ ಬಾರೋ ಬರುವಾಗ ಬಾಟಲ್ ತಾರೋ’ ಎರಡನೇ ಹಾಡನ್ನು ರಿಲೀಸ್ ಮಾಡುವುದಾಗಿ ಹೇಳಿದ್ದಾರೆ. ಈ ಹಿಂದೆ ಇದೇ ಕಲರ್ ಫುಲ್ ಎಣ್ಣೆ ಸಾಂಗ್ ಶೂಟಿಂಗ್ ಬೆಂಗಳೂರಿನಲ್ಲಿ ನಡೆಯಿತು. ರಂಗು ರಂಗಾದ ಸೆಟ್ ನಲ್ಲಿ ನಡೆದ ಚಿತ್ರೀಕರಣದಲ್ಲಿ ನೀನಾಸಂ ಸತೀಶ್, ನಾಗಭೂಷಣ್ (Nagabhushan), ಶಿವರಾಜ್ ಕೆ.ಆರ್ ಪೇಟೆ ಸೇರಿದಂತೆ ಹಲವರು ಭಾಗಿಯಾಗಿದ್ದರು. ಇದೊಂದು ಎಣ್ಣೆ ಸಾಂಗ್ ಆಗಿದ್ದು, ಸಿನಿಮಾದ ಪ್ರಮುಖ ಘಟ್ಟದಲ್ಲಿ ಈ ಹಾಡು ಬರಲಿದೆಯಂತೆ.

    ನೀನಾಸಂ ಸತೀಶ್ ನಟನೆಯ ಬಹುತೇಕ ಸಿನಿಮಾದ ಹಾಡುಗಳು ಹಿಟ್ ಆಗಿವೆ. ಇದೇ ಮ್ಯಾಟ್ನಿ ಸಿನಿಮಾದ ಹಾಡೊಂದು ಈ ಹಿಂದೆ ರಿಲೀಸ್ ಆಗಿದ್ದು, ಸಂಜೆ ಮೇಲೆ ಸುಮ್ನೆ ಹಂಗೆ ಹೆಸರಿನ ಗೀತೆಯೂ ಹಿಟ್ ಲಿಸ್ಟ್ ಗೆ ಸೇರ್ಪಡೆ ಆಗಿದೆ. ಹಾಗಾಗಿ ಎಣ್ಣೆ ಸಾಂಗ್ ಕೂಡ ಅದೇ ಸಾಲಿಗೆ ಸೇರಲಿದೆ ಎನ್ನುವ ನಿರೀಕ್ಷೆ ಹುಟ್ಟು ಹಾಕಿದೆ. ಸತೀಶ್ ನೀನಾಸಂ ಮತ್ತು ರಚಿತಾ ರಾಮ್ ಕಾಂಬಿನೇಷನ್ ನ, ಅಯೋಗ್ಯ ಸಿನಿಮಾದ ‘ಏನಮ್ಮಿ ಏನಮ್ಮಿ’ ಹಾಡು 108 ಮಿಲಿಯನ್ ಗೂ ಅಧಿಕ ವೀಕ್ಷಣೆ ಪಡೆದು ದಾಖಲೆ ಬರೆದಿತ್ತು. ಇದೀಗ ಮತ್ತೆ ಈ ಜೋಡಿಯ ‘ಸಂಜೆ ಮೇಲೆ ಸುಮ್ನೆ ಹಂಗೆ’ (Sanje Mele) ಹಾಡು ವೈರಲ್ ಆಗಿದೆ. ನಿನ್ನೆಯಷ್ಟೇ ರಿಲೀಸ್ ಆಗಿರುವ ‘ಮ್ಯಾಟ್ನಿ’ (Matinee) ಸಿನಿಮಾದ ಈ ಗೀತೆ ಕಡಿಮೆ ಅವಧಿಯಲ್ಲೇ 3.8 ಮಿಲಿಯನ್ ಗೂ ಅಧಿಕ ವೀಕ್ಷಣೆ ಪಡೆದು ವೈರಲ್ ಆಗುತ್ತಿದೆ.

    ಪೂರ್ಣಚಂದ್ರ ತೇಜಸ್ವಿ (Purnachandra Tejaswi) ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದ ಗೀತೆಗೆ ವಿಜಯ್ ಪ್ರಕಾಶ್ (Vijay Prakash) ದನಿಯಾಗಿದ್ದಾರೆ. ಇಡೀ ಹಾಡನ್ನು ಕಲರ್ ಫುಲ್ ಸೆಟ್ ನಲ್ಲಿ ಚಿತ್ರೀಕರಿಸಿದ್ದಾರೆ ನಿರ್ದೇಶಕ ಮನೋಹರ್. ಈಗಾಗಲೇ ಅಯೋಗ್ಯ ಸಿನಿಮಾದಲ್ಲಿ ಸಖತ್ತಾಗಿ ಹಾಡುಗಳಿಗೆ ಹೆಜ್ಜೆ ಹಾಕಿದ್ದ ಸತೀಶ್ ಮತ್ತು ರಚಿತಾ ರಾಮ್ ಕೂಡ ಈ ಸಿನಿಮಾದಲ್ಲಿ ಇರುವುದರಿಂದ ಹಾಡುಗಳು (Songs)ನಿರೀಕ್ಷೆ ಮೂಡಿಸಿದ್ದವು. ಏನಮ್ಮಿ ಏನಮ್ಮಿ ಅಂತ ಸ್ಯಾಂಡಲ್‌ವುಡ್‌ನಲ್ಲಿ ಹೊಸ ಅಲೆ ಸೃಷ್ಟಿಸಿದ ಜೋಡಿ ಸತೀಶ್ ನೀನಾಸಂ- ರಚಿತಾ ರಾಮ್ ಫೇರ್ ಮತ್ತೆ ಮ್ಯಾಟ್ನಿ ಸಿನಿಮಾದ ಮೂಲಕ ಒಂದಾಗಿದ್ದರಿಂದ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ನಿರೀಕ್ಷೆಗೆ ತಕ್ಕಂತೆ ನಿರ್ದೇಶಕ  ಮನೋಹರ್ ಕಾಂಪಳ್ಳಿ ಕೂಡ ‘ಮ್ಯಾಟ್ನಿ’ ಸಿನಿಮಾವನ್ನು ತಯಾರಿಸಿದ್ದಾರೆ ಎನ್ನುವ ಮಾತಿದೆ. ಈಗಾಗಲೇ ಸಿನಿಮಾದ ಬಹುತೇಕ ಚಿತ್ರೀಕರಣ ಮುಗಿದಿದ್ದು, ಸದ್ಯದಲ್ಲೇ ಸಿನಿಮಾ ತೆರೆಗೆ ಬರಲಿದೆ.

    ‘ಮ್ಯಾಟ್ನಿ’ಯ ಟೀಸರ್ ಕಲರ್ ಫುಲ್ ಸೆಟ್, ಮನ ಸೆಳೆಯೋ ಬ್ಯಾಗ್ರೌಂಡ್ ಮ್ಯೂಸಿಕ್, ರಚ್ಚು ಲುಕ್ ಎಲ್ಲವೂ ಕಣ್ಣಿಗೆ ಹಬ್ಬ ನೀಡಿದ್ದರೆ, ಸತೀಶ್ ನೀನಾಸಂ ಪ್ರೇಮ ನಿವೇದನೆ, ಪ್ರೀತಿಯ ಸಾಲುಗಳು ಕಣ್ಮನ ಸೆಳೆದಿದ್ದವು.  ಮನೋಹರ್ ಕಾಂಪಲಿ ಇಬ್ಬರು ಸ್ಟಾರ್ ಜೋಡಿಗೆ ಸರಿ ಹೊಂದುವಂತಹ ಒಂದೊಳ್ಳೆ ಕಥೆ ಹೆಣೆದಿದ್ದು ನಿರ್ದೇಶಕನಾಗಿ ತಮ್ಮನ್ನು ಸಹ ಪ್ರೂವ್ ಮಾಡಿಕೊಳ್ಳಲು ಸಕಲ ತಯಾರಿ ಮಾಡಿಕೊಂಡಿದ್ದಾರೆ.

    ರೋಮ್ಯಾಂಟಿಕ್ ಲವ್ ಸ್ಟೋರಿ ಸಬ್ಜೆಕ್ಟ್ ಇರುವ ಮ್ಯಾಟ್ನಿ ಚಿತ್ರದಲ್ಲಿ ಸತೀಶ್ ನೀನಾಸಂ ಶ್ರೀಮಂತ ಮನೆತನದ ಹುಡುಗನ ಪಾತ್ರಕ್ಕೆ ಬಣ್ಣಹಚ್ಚಿದ್ದು, ಲವರ್ ಬಾಯ್ ಅವತಾರವೆತ್ತಿದ್ದಾರೆ. ಈಗಾಗಲೇ ಅಯೋಗ್ಯ ಸಿನಿಮಾದಲ್ಲಿ ಸತೀಶ್ ಹಾಗೂ ರಚ್ಚು ಜೋಡಿ ಹಿಟ್ ನೀಡಿದ್ದು, `ಮ್ಯಾಟ್ನಿ’ ಸಿನಿಮಾದಲ್ಲೂ ಈ ಜೋಡಿ ಮೋಡಿ ಮಾಡಲಿದೆ ಎನ್ನುವ ನಿರೀಕ್ಷೆಯೂ ಹೆಚ್ಚಿದೆ. ಸದ್ಯ ಇದೊಂದು ಲವ್ ಸ್ಟೋರಿ ಎಂದಿರುವ ನಿರ್ದೇಶಕರು ಸಿನಿಮಾ ಬಗ್ಗೆ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ.  ಎಫ್ 3 ಪ್ರೊಡಕ್ಷನ್ಸ್ ಬ್ಯಾನರ್ ನಡಿ ಪಾರ್ವತಿ ಎಸ್ ಗೌಡ ಚಿತ್ರವನ್ನು ನಿರ್ಮಿಸಿದ್ದು, ಲೂಸಿಯ ಖ್ಯಾತಿಯ ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನ, ಸುಧಾಕರ್ ಸಿನಿಮಾಟೋಗ್ರಫಿ. ಕೆ.ಎಂ.ಪ್ರಕಾಶ್ ಸಂಕಲನ ಚಿತ್ರಕ್ಕಿದೆ.

     

    ಸತೀಶ್ ನೀನಾಸಂಗೆ(Satish Ninasum) ರಚಿತಾ ರಾಮ್ ಮಾತ್ರ ನಾಯಕಿಯಲ್ಲ, ಅದಿತಿ ಪ್ರಭುದೇವ (Aditi Prabhudeva) ಕೂಡ ನಟಿಸಿದ್ದಾರೆ. ರಚಿತಾ ರಾಮ್, ಅದಿತಿ ಪಾತ್ರಕ್ಕೂ ಸಿಕ್ಕಾಪಟ್ಟೆ ಪ್ರಾಮುಖ್ಯತೆಯಿದೆ. ಮ್ಯಾಟ್ನಿ ಮೂಲಕ ಡಿಫರೆಂಟ್ ಆಗಿರೋ ಕಥೆ ಹೇಳೋದ್ದಕ್ಕೆ ಈ ಸ್ಟಾರ್ಸ್ ರೆಡಿಯಾಗಿದ್ದಾರೆ. ಮ್ಯಾಟ್ನಿ ಶೋ ಯಾವಾಗ ಎಂಬುದೇ ಈಗ ಪ್ರಶ್ನೆಯಾಗಿದೆ.

  • ‘ಮ್ಯಾಟ್ನಿ’ ಚಿತ್ರದ ಎಣ್ಣೆ ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ನೀನಾಸಂ ಸತೀಶ್

    ‘ಮ್ಯಾಟ್ನಿ’ ಚಿತ್ರದ ಎಣ್ಣೆ ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ನೀನಾಸಂ ಸತೀಶ್

    ನ್ನಡದ ಹೆಸರಾಂತ ನಟ ನೀನಾಸಂ ಸತೀಶ್ ನಟನೆಯ ‘ಮ್ಯಾಟ್ನಿ’ ಸಿನಿಮಾದ ಕಲರ್ ಫುಲ್ ಎಣ್ಣೆ ಸಾಂಗ್ ಶೂಟಿಂಗ್ ಬೆಂಗಳೂರಿನಲ್ಲಿ ನಡೆಯಿತು. ರಂಗು ರಂಗಾದ ಸೆಟ್ ನಲ್ಲಿ ನಡೆದ ಚಿತ್ರೀಕರಣದಲ್ಲಿ ನೀನಾಸಂ ಸತೀಶ್, ನಾಗಭೂಷಣ್ (Nagabhushan), ಶಿವರಾಜ್ ಕೆ.ಆರ್ ಪೇಟೆ ಸೇರಿದಂತೆ ಹಲವರು ಭಾಗಿಯಾಗಿದ್ದರು. ಇದೊಂದು ಎಣ್ಣೆ ಸಾಂಗ್ ಆಗಿದ್ದು, ಸಿನಿಮಾದ ಪ್ರಮುಖ ಘಟ್ಟದಲ್ಲಿ ಈ ಹಾಡು ಬರಲಿದೆಯಂತೆ.

    ನೀನಾಸಂ ಸತೀಶ್ ನಟನೆಯ ಬಹುತೇಕ ಸಿನಿಮಾದ ಹಾಡುಗಳು ಹಿಟ್ ಆಗಿವೆ. ಇದೇ ಮ್ಯಾಟ್ನಿ ಸಿನಿಮಾದ ಹಾಡೊಂದು ಈ ಹಿಂದೆ ರಿಲೀಸ್ ಆಗಿದ್ದು, ಸಂಜೆ ಮೇಲೆ ಸುಮ್ನೆ ಹಂಗೆ ಹೆಸರಿನ ಗೀತೆಯೂ ಹಿಟ್ ಲಿಸ್ಟ್ ಗೆ ಸೇರ್ಪಡೆ ಆಗಿದೆ. ಹಾಗಾಗಿ ಎಣ್ಣೆ ಸಾಂಗ್ ಕೂಡ ಅದೇ ಸಾಲಿಗೆ ಸೇರಲಿದೆ ಎನ್ನುವ ನಿರೀಕ್ಷೆ ಹುಟ್ಟು ಹಾಕಿದೆ.

    ಸತೀಶ್ ನೀನಾಸಂ ಮತ್ತು ರಚಿತಾ ರಾಮ್ ಕಾಂಬಿನೇಷನ್ ನ, ಅಯೋಗ್ಯ ಸಿನಿಮಾದ ‘ಏನಮ್ಮಿ ಏನಮ್ಮಿ’ ಹಾಡು 108 ಮಿಲಿಯನ್ ಗೂ ಅಧಿಕ ವೀಕ್ಷಣೆ ಪಡೆದು ದಾಖಲೆ ಬರೆದಿತ್ತು. ಇದೀಗ ಮತ್ತೆ ಈ ಜೋಡಿಯ ‘ಸಂಜೆ ಮೇಲೆ ಸುಮ್ನೆ ಹಂಗೆ’ (Sanje Mele) ಹಾಡು ವೈರಲ್ ಆಗಿದೆ. ನಿನ್ನೆಯಷ್ಟೇ ರಿಲೀಸ್ ಆಗಿರುವ ‘ಮ್ಯಾಟ್ನಿ’ (Matinee) ಸಿನಿಮಾದ ಈ ಗೀತೆ ಕಡಿಮೆ ಅವಧಿಯಲ್ಲೇ 3.8 ಮಿಲಿಯನ್ ಗೂ ಅಧಿಕ ವೀಕ್ಷಣೆ ಪಡೆದು ವೈರಲ್ ಆಗುತ್ತಿದೆ.

    ಪೂರ್ಣಚಂದ್ರ ತೇಜಸ್ವಿ (Purnachandra Tejaswi) ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದ ಗೀತೆಗೆ ವಿಜಯ್ ಪ್ರಕಾಶ್ (Vijay Prakash) ದನಿಯಾಗಿದ್ದಾರೆ. ಇಡೀ ಹಾಡನ್ನು ಕಲರ್ ಫುಲ್ ಸೆಟ್ ನಲ್ಲಿ ಚಿತ್ರೀಕರಿಸಿದ್ದಾರೆ ನಿರ್ದೇಶಕ ಮನೋಹರ್. ಈಗಾಗಲೇ ಅಯೋಗ್ಯ ಸಿನಿಮಾದಲ್ಲಿ ಸಖತ್ತಾಗಿ ಹಾಡುಗಳಿಗೆ ಹೆಜ್ಜೆ ಹಾಕಿದ್ದ ಸತೀಶ್ ಮತ್ತು ರಚಿತಾ ರಾಮ್ ಕೂಡ ಈ ಸಿನಿಮಾದಲ್ಲಿ ಇರುವುದರಿಂದ ಹಾಡುಗಳು (Songs)ನಿರೀಕ್ಷೆ ಮೂಡಿಸಿದ್ದವು.

    ಏನಮ್ಮಿ ಏನಮ್ಮಿ ಅಂತ ಸ್ಯಾಂಡಲ್‌ವುಡ್‌ನಲ್ಲಿ ಹೊಸ ಅಲೆ ಸೃಷ್ಟಿಸಿದ ಜೋಡಿ ಸತೀಶ್ ನೀನಾಸಂ- ರಚಿತಾ ರಾಮ್ ಫೇರ್ ಮತ್ತೆ ಮ್ಯಾಟ್ನಿ ಸಿನಿಮಾದ ಮೂಲಕ ಒಂದಾಗಿದ್ದರಿಂದ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ನಿರೀಕ್ಷೆಗೆ ತಕ್ಕಂತೆ ನಿರ್ದೇಶಕ  ಮನೋಹರ್ ಕಾಂಪಳ್ಳಿ ಕೂಡ ‘ಮ್ಯಾಟ್ನಿ’ ಸಿನಿಮಾವನ್ನು ತಯಾರಿಸಿದ್ದಾರೆ ಎನ್ನುವ ಮಾತಿದೆ. ಈಗಾಗಲೇ ಸಿನಿಮಾದ ಬಹುತೇಕ ಚಿತ್ರೀಕರಣ ಮುಗಿದಿದ್ದು, ಸದ್ಯದಲ್ಲೇ ಸಿನಿಮಾ ತೆರೆಗೆ ಬರಲಿದೆ.

    ‘ಮ್ಯಾಟ್ನಿ’ಯ ಟೀಸರ್ ಕಲರ್ ಫುಲ್ ಸೆಟ್, ಮನ ಸೆಳೆಯೋ ಬ್ಯಾಗ್ರೌಂಡ್ ಮ್ಯೂಸಿಕ್, ರಚ್ಚು ಲುಕ್ ಎಲ್ಲವೂ ಕಣ್ಣಿಗೆ ಹಬ್ಬ ನೀಡಿದ್ದರೆ, ಸತೀಶ್ ನೀನಾಸಂ ಪ್ರೇಮ ನಿವೇದನೆ, ಪ್ರೀತಿಯ ಸಾಲುಗಳು ಕಣ್ಮನ ಸೆಳೆದಿದ್ದವು.  ಮನೋಹರ್ ಕಾಂಪಲಿ ಇಬ್ಬರು ಸ್ಟಾರ್ ಜೋಡಿಗೆ ಸರಿ ಹೊಂದುವಂತಹ ಒಂದೊಳ್ಳೆ ಕಥೆ ಹೆಣೆದಿದ್ದು ನಿರ್ದೇಶಕನಾಗಿ ತಮ್ಮನ್ನು ಸಹ ಪ್ರೂವ್ ಮಾಡಿಕೊಳ್ಳಲು ಸಕಲ ತಯಾರಿ ಮಾಡಿಕೊಂಡಿದ್ದಾರೆ.

    ರೋಮ್ಯಾಂಟಿಕ್ ಲವ್ ಸ್ಟೋರಿ ಸಬ್ಜೆಕ್ಟ್ ಇರುವ ಮ್ಯಾಟ್ನಿ ಚಿತ್ರದಲ್ಲಿ ಸತೀಶ್ ನೀನಾಸಂ ಶ್ರೀಮಂತ ಮನೆತನದ ಹುಡುಗನ ಪಾತ್ರಕ್ಕೆ ಬಣ್ಣಹಚ್ಚಿದ್ದು, ಲವರ್ ಬಾಯ್ ಅವತಾರವೆತ್ತಿದ್ದಾರೆ. ಈಗಾಗಲೇ ಅಯೋಗ್ಯ ಸಿನಿಮಾದಲ್ಲಿ ಸತೀಶ್ ಹಾಗೂ ರಚ್ಚು ಜೋಡಿ ಹಿಟ್ ನೀಡಿದ್ದು, `ಮ್ಯಾಟ್ನಿ’ ಸಿನಿಮಾದಲ್ಲೂ ಈ ಜೋಡಿ ಮೋಡಿ ಮಾಡಲಿದೆ ಎನ್ನುವ ನಿರೀಕ್ಷೆಯೂ ಹೆಚ್ಚಿದೆ.

    ಸದ್ಯ ಇದೊಂದು ಲವ್ ಸ್ಟೋರಿ ಎಂದಿರುವ ನಿರ್ದೇಶಕರು ಸಿನಿಮಾ ಬಗ್ಗೆ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ.  ಎಫ್ 3 ಪ್ರೊಡಕ್ಷನ್ಸ್ ಬ್ಯಾನರ್ ನಡಿ ಪಾರ್ವತಿ ಎಸ್ ಗೌಡ ಚಿತ್ರವನ್ನು ನಿರ್ಮಿಸಿದ್ದು, ಲೂಸಿಯ ಖ್ಯಾತಿಯ ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನ, ಸುಧಾಕರ್ ಸಿನಿಮಾಟೋಗ್ರಫಿ. ಕೆ.ಎಂ.ಪ್ರಕಾಶ್ ಸಂಕಲನ ಚಿತ್ರಕ್ಕಿದೆ.

     

    ಸತೀಶ್ ನೀನಾಸಂಗೆ(Satish Ninasum) ರಚಿತಾ ರಾಮ್ ಮಾತ್ರ ನಾಯಕಿಯಲ್ಲ, ಅದಿತಿ ಪ್ರಭುದೇವ (Aditi Prabhudeva) ಕೂಡ ನಟಿಸಿದ್ದಾರೆ. ರಚಿತಾ ರಾಮ್, ಅದಿತಿ ಪಾತ್ರಕ್ಕೂ ಸಿಕ್ಕಾಪಟ್ಟೆ ಪ್ರಾಮುಖ್ಯತೆಯಿದೆ. ಮ್ಯಾಟ್ನಿ ಮೂಲಕ ಡಿಫರೆಂಟ್ ಆಗಿರೋ ಕಥೆ ಹೇಳೋದ್ದಕ್ಕೆ ಈ ಸ್ಟಾರ್ಸ್ ರೆಡಿಯಾಗಿದ್ದಾರೆ. ಮ್ಯಾಟ್ನಿ ಶೋ ಯಾವಾಗ ಎಂಬುದೇ ಈಗ ಪ್ರಶ್ನೆಯಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜಗತ್ತಿನ ಅತಿ ಉದ್ದದ ಜಿಪ್ ಲೈನ್ ನಲ್ಲಿ ಚಲಿಸಿದ ನಟ ನೀನಾಸಂ ಸತೀಶ್

    ಜಗತ್ತಿನ ಅತಿ ಉದ್ದದ ಜಿಪ್ ಲೈನ್ ನಲ್ಲಿ ಚಲಿಸಿದ ನಟ ನೀನಾಸಂ ಸತೀಶ್

    ಸ್ಯಾಂಡಲ್ ವುಡ್ ಹೆಸರಾಂತ ನಟ ನೀನಾಸಂ ಸತೀಶ್ (Satish Ninasam), ಜಗತ್ತಿನ ಅತೀ ಉದ್ದವಾದ ಜಿಪ್ ಲೈನ್ (Zip line) ನಲ್ಲಿ ಸಾಹಸ ಪ್ರದರ್ಶನ ಮಾಡುವ ಮೂಲಕ ಹೊಸ ಅನುಭವಕ್ಕೆ ಸಾಕ್ಷಿಯಾಗಿದ್ದಾರೆ. ಆ ವಿಡಿಯೋವನ್ನು ಅವರು ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಮೊದಲ ಬಾರಿಗೆ ಜಿಪ್ ಲೈನ್ ನಲ್ಲಿ ಅವರು ಚಲಿಸಿದ್ದು ಆ ಅನುಭವ ಮರೆಯಲಾರದ್ದು ಎಂದಿದ್ದಾರೆ.

    ಜಗತ್ತಿನ ಅತೀ ಉದ್ದವಾದ ಜಿಪ್ ಲೈನ್ ಇರುವುದು ಯುಎಇನಲ್ಲಿ (UAE). ಕೇಬಲ್ ಮಾರ್ಗವು 2.8 ಕಿಮೀ ಉದ್ದವಾಗಿದೆ. ಇದು ಸಮುದ್ರ ಮಟ್ಟದಿಂದ 1680 ಮೀಟರ್ ಎತ್ತರದಲ್ಲಿದೆ. ಜಿಪ್ ಲೈನ್ 28 ಫುಟ್ ಬಾಲ್ ಪಿಚ್ ಗಳಿಗಿಂತ ಉದ್ದವಾಗಿ ಮತ್ತು ದುಬೈನ ಅತೀ ಎತ್ತರದ ಗಗನಚುಂಬಿ ಕಟ್ಟಡವಾದ ಬುರ್ಜ್ ಖಲೀಫಾಕ್ಕಿಂತ ಮೂರು ಹೆಚ್ಚು ಹೆಚ್ಚು ಉದ್ದವಾಗಿದೆ ಎಂದು ಅಂದಾಜಿಸಲಾಗಿದೆ. ಇದನ್ನೂ ಓದಿ:ಕುಟುಂಬದೊಂದಿಗೆ ವರಮಹಾಲಕ್ಷ್ಮಿ ಹಬ್ಬ ಆಚರಿಸಿದ ನಿಖಿಲ್

    ಈ ಜಿಪ್ ಲೈನ್ ಗಂಟೆಗೆ 160 ಕಿಮೀ ವೇಗದಲ್ಲಿ ಚಲಿಸುತ್ತದೆ. ಅಲ್ಲದೇ, ಯುಎಇನ ಅತೀ ಎತ್ತರದ ಪರ್ವತವಾದ ಜೆಬೆಲ್ ಜೈಸ್ ಪರ್ವತದಲ್ಲಿ ಇದನ್ನು ಅಳವಡಿಸಲಾಗಿದೆ. ಅಲ್ಲದೇ ದಿನಕ್ಕೆ 250 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತಿದೆ. ಇಂಥದ್ದೊಂದು ರೋಚಕ ಅನುಭವವನ್ನು ನೀನಾಸಂ ಸತೀಶ್ ಪಡೆದುಕೊಂಡಿದ್ದಾರೆ.

     

    ಆಗಾಗ್ಗೆ ಸತೀಶ್ ಇಂತಹ ಸಾಹಸವನ್ನು ಮಾಡುತ್ತಲೇ ಇರುತ್ತಾರೆ. ಈ ಬಾರಿ ಅತೀ ಉದ್ದದ ಜಿಪ್ ಲೈನ್ ಗೆ ತೆರಳಿ ಅಲ್ಲಿ ಒಂದಷ್ಟು ಸಮಯವನ್ನು ಕಳೆದಿದ್ದಾರೆ. ಆ ಅನುಭವವನ್ನು ವಿಡಿಯೋದಲ್ಲಿ ದಾಖಲಿಸಿದ್ದಾರೆ. ಆ ವಿಡಿಯೋವನ್ನು ತಮ್ಮ ಸತೀಶ್ ಆಡಿಯೋ ಹೌಸ್ ಯೂಟ್ಯೂಬ್ ಚಾನೆಲ್ ನಲ್ಲಿ ಅಪ್ ಲೋಡ್ ಮಾಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]