Tag: ಸತೀಶ್ ರೆಡ್ಡಿ

  • ಹೊಟ್ಟೆಗೆ ಊಟವಿಲ್ಲದೆ ಗಂಟೆಗಟ್ಲೆ ಶಾಸಕರ ಮನೆ ಬಳಿ ಕಾದ್ವಿ – ಕಾರುಗಳಿಗೆ ಬೆಂಕಿಯಿಟ್ಟ ಪ್ರಕರಣಕ್ಕೆ ಟ್ವಿಸ್ಟ್

    ಹೊಟ್ಟೆಗೆ ಊಟವಿಲ್ಲದೆ ಗಂಟೆಗಟ್ಲೆ ಶಾಸಕರ ಮನೆ ಬಳಿ ಕಾದ್ವಿ – ಕಾರುಗಳಿಗೆ ಬೆಂಕಿಯಿಟ್ಟ ಪ್ರಕರಣಕ್ಕೆ ಟ್ವಿಸ್ಟ್

    ಬೆಂಗಳೂರು: ನಗರದ ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಮನೆಯ ಒಳಗಿದ್ದ ಎರಡು ಕಾರುಗಳಿಗೆ ಬೆಂಕಿ ಹಾಕಿದ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಕಳೆದ ಎರಡು ದಿನಗಳಿಂದ ಐದು ತಂಡಳಾಗಿ ತೀವ್ರ ಹುಡುಕಾಟ ನಡೆದಿದ್ದ ಪೊಲೀಸರು ಕೊನೆಗೂ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

    ನೇಪಾಳ ಮೂಲದ ಸಾಗರ್ ಮತ್ತು ಸ್ಥಳೀಯರಾದ ಶ್ರೀಧರ್ ಗೌಡ ಮತ್ತು ನವೀನ್‍ನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿಸಿ ವಿಚಾರಣೆ ನಡೆಸಿದ ವೇಳೆ ಲಾಕ್ ಡೌನ್ ನಂತರ ಈ ಮೂವರು ಕೆಲಸವಿಲ್ಲದೇ ತೀವ್ರ ಪರದಾಡಿದ್ದರು. ಆದರೆ ಎಲ್ಲೂ ಕೂಡ ಕೆಲಸ ಸಿಕ್ಕಿರಲಿಲ್ಲ. ಇದೇ ಕಾರಣಕ್ಕೆ ಶಾಸಕ ಸತೀಶ್ ರೆಡ್ಡಿ ಬಳಿ ಸಹಾಯ ಕೇಳೋಕೆ ಅಂತಾ ಬಂದಿದ್ರು. ಮೂರು ಬಾರಿ ಶಾಸಕರನ್ನು ಭೇಟಿ ಮಾಡೋಕೆ ಟ್ರೈ ಮಾಡಿದರು ಕೂಡ ಎಂಎಲ್‍ಎ ಮನೆ ಸೆಕ್ಯೂರಿಟಿ ಗಾರ್ಡ್ ಒಳಗೆ ಬಿಟ್ಟಿರಲಿಲ್ಲ. ಇದನ್ನೂ ಓದಿ: ಕೇವಲ 7 ನಿಮಿಷಗಳಲ್ಲಿ ಕೃತ್ಯ ಎಸಗಿ ಎಸ್ಕೇಪ್ ಆಗಿದ್ದಾರೆ: ಸತೀಶ್ ರೆಡ್ಡಿ

    ಇಡೀ ದಿನ ಕಾದರು ಕೂಡ ಒಮ್ಮೆ ಭೇಟಿಗೂ ಅವಕಾಶ ಕೊಟ್ಟಿರಲಿಲ್ವಂತೆ. ಹೊಟ್ಟೆಗೆ ಊಟವಿಲ್ಲದೇ ಇಡೀ ದಿನ ಕಾದರೂ ಒಮ್ಮೆಯೂ ಭೇಟಿಗೆ ಅವಕಾಶ ಕೊಟ್ಟಿರಲಿಲ್ಲ. ಇದರಿಂದ ಬೇಸರಗೊಂಡ ಮೂವರು ಆರೋಪಿಗಳು, ಕಂಠಪೂರ್ತಿ ಕುಡಿದು ಶ್ರೀಮಂತರು ಶ್ರೀಮತಾಗೇ ಇರ್ತಾರೆ ನಮ್ಮಂಥ ಬಡವರು ಬಡರಾಗೇ ಸಾಯಬೇಕು ಅಂತಾ ಹತಾಶೆಗೊಂಡಿದ್ರು. ಇದೇ ಮತ್ತಿನಲ್ಲಿ ಶಾಸಕರ ಮನೆ ಬಳಿ ಬಂದು ಬೈಕಿನಲ್ಲಿ ಪೆಟ್ರೋಲ್ ಕಳವು ಮಾಡಿ ಮನೆ ಬಳಿಯಿದ್ದ ಎರಡು ಕಾರುಗಳಿಗೆ ಬೆಂಕಿ ಹಾಕಿ ಎಸ್ಕೇಪ್ ಆಗಿದ್ದಾಗಿ ಪೊಲೀಸರ ಬಳಿ ಬಾಯ್ಬಿಟ್ಟಿದ್ದಾರೆ.

    ಸದ್ಯ ಪೊಲೀಸರು ತನಿಖೆ ಮುಂದುವರಿಸಿದ್ದು ಬೇರೆ ಏನಾದರೂ ಕಾರಣ ಇದೆಯಾ ಅನ್ನೋದನ್ನು ತನಿಖೆ ಮಾಡ್ತಿದ್ದಾರೆ. ಇದನ್ನೂ ಓದಿ: ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿಯಿಟ್ಟ ದುಷ್ಕರ್ಮಿಗಳು!

  • ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಪ್ರಕರಣ ಸಂಬಂಧ ಒಂದಿಷ್ಟು ಕ್ಲ್ಯೂ ಸಿಕ್ಕಿದೆ: ಕಮಲ್ ಪಂತ್

    ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಪ್ರಕರಣ ಸಂಬಂಧ ಒಂದಿಷ್ಟು ಕ್ಲ್ಯೂ ಸಿಕ್ಕಿದೆ: ಕಮಲ್ ಪಂತ್

    ಬೆಂಗಳೂರು: ಶಾಸಕ ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಇಟ್ಟ ಪ್ರಕರಣ ಮೇಲ್ನೋಟಕ್ಕೆ ಚಿಕ್ಕದು ಅನಿಸಿದರೂ ಅದರ ವ್ಯಾಪ್ತಿ ದೊಡ್ಡದಿದೆ. ಈ ಸಂಬಂಧ ಈಗಾಗಲೇ ನಮಗೆ ಒಂದಿಷ್ಟು ಕ್ಲ್ಯೂ ಸಿಕ್ಕಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.

    ಇಂದು ನಗರದ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರೋಪಿಗಳನ್ನು 24 ಗಂಟೆಯಲ್ಲಿ ಹಿಡಿಯುವ ಗಡುವು ಎಲ್ಲಿಂದ ಬಂತು? ಸಿಆರ್‌ಪಿಸಿಯಲ್ಲಿ ಈ ಗಡುವು ಎಲ್ಲಿಯೂ ಇಲ್ಲ. ಮೇಲ್ನೋಟಕ್ಕೆ ಈ ಪ್ರಕರಣ ಚಿಕ್ಕದು ಅನಿಸಿದರೂ. ಇದರ ವ್ಯಾಪ್ತಿ ದೊಡ್ಡದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನೂರು ಮಂದಿ ಪೊಲೀಸರು, ತಜ್ಞರು ಕೆಲಸ ಮಾಡುತ್ತಿದ್ದಾರೆ. ಜೊತೆಗೆ ಸಿಸಿಟಿವಿ ತಜ್ಞರು ಎಲ್ಲರೂ ಕೆಲಸ ಮಾಡುತ್ತಿದ್ದಾರೆ. ಅಲ್ಲದೇ ನಮಗೆ ಒಂದಿಷ್ಟು ಕ್ಲ್ಯೂ ಸಿಕ್ಕಿದೆ. ಆರೋಪಿಗಳನ್ನು ವಶಕ್ಕೆ ಪಡೆದ ಬಳಿಕ ಸ್ಪಷ್ಟ ಕಾರಣ ತಿಳಿಯುತ್ತದೆ ಎಂದಿದ್ದಾರೆ.

    ಯಾವ ಕಾರಣಕ್ಕೆ ಈ ಕೃತ್ಯ ಎಸಗಲಾಗಿದೆ ಎನ್ನುವುದು ತಿಳಿದು ಬಂದಿಲ್ಲ. ಆದರೆ ಬೇಗೂರು ಕೆರೆಯಲ್ಲಿ ಶಿವನ ಮೂರ್ತಿ ಅನಾವರಣ ಸಂಬಂಧ ಗಲಾಟೆ ಎಬ್ಬಿಸಲು ಈ ಕೃತ್ಯ ನಡೆದಿರಬಹುದೇ ಎಂಬ ಶಂಕೆ ಎದ್ದಿದೆ. ಈ ಬಗ್ಗೆ ಸತೀಶ್ ರೆಡ್ಡಿ ಚಾಲಕ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದರು. ಸಿಸಿಬಿ ಪೊಲೀಸರು ಇದೇ ಆಯಾಮದಲ್ಲಿ ತನಿಖೆ ಕೂಡ ನಡೆಸಿದ್ದು, ಈಗಾಗಲೇ ಹಲವು ಅನುಮಾನಿತರನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ. ಇದನ್ನೂ ಓದಿ: ಬೇಗೂರು ಕೆರೆಯಲ್ಲಿ ಶಿವನ ಪ್ರತಿಮೆ ಸ್ಥಾಪನೆ ಬೆಂಬಲಿಸಿದ್ದಕ್ಕೆ ಸತೀಶ್ ರೆಡ್ಡಿ ಕಾರಿಗೆ ಬೆಂಕಿ?

    ಈ ಘಟನೆ ಸಂಬಂಧ ಶಾಸಕ ಸತೀಶ್ ರೆಡ್ಡಿ ಪಬ್ಲಿಕ್ ಟಿವಿ ಜೊತೆ ಮಾತನಾಡಿ, 25ಕ್ಕೂ ಹೆಚ್ಚು ಮಂದಿಯನ್ನು ವಿಚಾರಣೆ ಮಾಡಲಾಗಿದೆ. ಅದರಲ್ಲಿ ಮೂವರನ್ನು ಕೃತ್ಯದಲ್ಲಿ ಭಾಗಿಯಾಗಿರೋದು ಮನವರಿಕೆಯಾಗಿದೆ. ಬೇರೆ ಬೇರೆ ಆಯಾಮಾಗಳಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದು, ಇಂದು ಸಂಜೆಯೊಳಗೆ ಕಾರುಗಳಿಗೆ ಬೆಂಕಿ ಹಚ್ಚಿದವರ ಬಂಧನ ಮಾಡುವ ಸಾಧ್ಯತೆಗಳಿವೆ ಎಂದು ಹೇಳಿದ್ದರು. ಇದನ್ನೂ ಓದಿ:ಕಾರುಗಳಿಗೆ ಬೆಂಕಿ ಹಚ್ಚಿದವರನ್ನು ಸಂಜೆಯೊಳಗೆ ಬಂಧನ ಮಾಡೋ ಸಾಧ್ಯತೆ: ಸತೀಶ್ ರೆಡ್ಡಿ

  • ಕಾರುಗಳಿಗೆ ಬೆಂಕಿ ಹಚ್ಚಿದವರನ್ನು ಸಂಜೆಯೊಳಗೆ ಬಂಧನ ಮಾಡೋ ಸಾಧ್ಯತೆ: ಸತೀಶ್ ರೆಡ್ಡಿ

    ಕಾರುಗಳಿಗೆ ಬೆಂಕಿ ಹಚ್ಚಿದವರನ್ನು ಸಂಜೆಯೊಳಗೆ ಬಂಧನ ಮಾಡೋ ಸಾಧ್ಯತೆ: ಸತೀಶ್ ರೆಡ್ಡಿ

    ಬೆಂಗಳೂರು: ಇಂದು ಸಂಜೆಯೊಳಗೆ ಕಾರುಗಳಿಗೆ ಬೆಂಕಿ ಹಚ್ಚಿದವರ ಬಂಧನಮಾಡುವ ಸಾಧ್ಯತೆಗಳಿವೆ ಎಂದು ಶಾಸಕ ಸತೀಶ್ ರೆಡ್ಡಿ ಹೇಳಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಘಟನೆ ಸಂಬಂಧ 25 ಕ್ಕೂ ಹೆಚ್ಚು ಮಂದಿಯನ್ನ ವಿಚಾರಣೆ ಮಾಡಲಾಗಿದೆ. ಅದರಲ್ಲಿ ಮೂವರನ್ನ ಕೃತ್ಯದಲ್ಲಿ ಭಾಗಿಯಾಗಿರೋದು ಮನವರಿಕೆಯಾಗಿದೆ. ಬೇರೆ ಬೇರೆ ಆಯಾಮಾಗಳಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದರು.

    ನನಗೆ ವೈಯಕ್ತಿಕವಾಗಿ ಯಾರು ದ್ವೇಷಿಗಳಿಲ್ಲ. ಬೆಂಗಳೂರಿನಲ್ಲಿ ಯಾರು ಏನ್ ಬೇಕಾದ್ರು ಯಾವ ಶಾಸಕರ ಮನೆಗೂ ಹೋಗಬಹುದೆಂಬ ಸಂದೇಶ ಕಳಿಸುವ ದೃಷ್ಟಿಯಿಂದ ಕೃತ್ಯ ಎಸಗಿಸರೋ ಶಂಕೆ ಇದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಸಂಜೆಯೊಳಗೆ ಆರೋಪಿಗಳನ್ನು ಅರೆಸ್ಟ್ ಮಾಡುವ ಭರವಸೆ ನೀಡಿರುವುದಾಗಿ ರೆಡ್ಡಿ ಹೇಳಿದರು. ಇದನ್ನೂ ಓದಿ: ಬೇಗೂರು ಕೆರೆಯಲ್ಲಿ ಶಿವನ ಪ್ರತಿಮೆ ಸ್ಥಾಪನೆ ಬೆಂಬಲಿಸಿದ್ದಕ್ಕೆ ಸತೀಶ್ ರೆಡ್ಡಿ ಕಾರಿಗೆ ಬೆಂಕಿ?

    ಡಿಜೆ ಹಳ್ಳಿ ಗಲಭೆ ನಡೆದು ಬರೋಬ್ಬರಿ ಒಂದು ವರ್ಷ ಆಗೋದರೊಳಗೆ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿಯ ಎರಡು ಕಾರುಗಳು ಧಗಧಗಿಸಿವೆ. ಮಧ್ಯರಾತ್ರಿ 1 ಗಂಟೆ 23 ನಿಮಿಷಕ್ಕೆ ಸತೀಶ್ ರೆಡ್ಡಿಯ ಮನೆ ಹಿಂಭಾಗದಿಂದ ಆವರಣ ಪ್ರವೇಶಿಸಿದ ದುಷ್ಕರ್ಮಿಗಳು ಕಾರುಗಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿ ಆಗಿದ್ದರು. ಘಟನೆಯಲ್ಲಿ ಫಾರ್ಚುನರ್ ಕಾರು ಸೇರಿದಂತೆ ಎರಡು ಕಾರು ಬೆಂಕಿಗಾಹುತಿ ಆಗಿವೆ. ಕಾರಿನ ಬ್ಯಾಟರಿ ಸ್ಫೋಟಗೊಂಡಾಗ ಭದ್ರತಾ ಸಿಬ್ಬಂದಿ ಎಚ್ಚೆತ್ತುಕೊಂಡಿದ್ದಾರೆ. ಅಗ್ನಿಶಾಮಕ ದಳವನ್ನು ಸ್ಥಳಕ್ಕೆ ಕರೆಸುವಷ್ಟರದಲ್ಲಿ ಕಾರುಗಳು ಸುಟ್ಟು ಕರಕಲಾಗಿವೆ.

    ವಿವಾದಿತ ಬೇಗೂರು ಕೆರೆಯಲ್ಲಿ ಪ್ರತಿಪ್ಠಾಪಿಸಿದ್ದ ಶಿವನ ವಿಗ್ರಹಕ್ಕೆ ಪೂಜೆ ಮಾಡಲು ಮುಂದಾಗಿದ್ದೇ ಘಟನೆಗೆ ಕಾರಣ ಎನ್ನಲಾಗಿದೆ. ಸತೀಶ್ ರೆಡ್ಡಿ ಚಾಲಕ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ. ಸಿಸಿಬಿ ಪೊಲೀಸರು ಇದೇ ಆಯಾಮದಲ್ಲಿ ತನಿಖೆ ಕೂಡ ನಡೆಸಿದ್ದಾರೆ. ಈಗಾಗಲೇ ಹಲವು ಅನುಮಾನಿತರನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ.

  • ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ – ಓರ್ವ ವಶಕ್ಕೆ

    ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ – ಓರ್ವ ವಶಕ್ಕೆ

    ಬೆಂಗಳೂರು: ಬೊಮ್ಮನಹಳ್ಳಿಯ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಅವರ ಕಾರುಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಶಂಕಿತನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಇನ್ನುಳಿದ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

    ಏನಿದು ಪ್ರಕರಣ?
    ಗುರುವಾರ  ನಸುಕಿನ ಜಾವ 1 ಗಂಟೆ 23 ನಿಮಿಷಕ್ಕೆ ಸಂದರ್ಭದಲ್ಲಿ ಸತೀಶ್ ರೆಡ್ಡಿಯ ಮನೆ ಹಿಂಭಾಗದಿಂದ ಆವರಣ ಪ್ರವೇಶಿಸಿದ ದುಷ್ಕರ್ಮಿಗಳು ಕಾರುಗಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿ ಆಗಿದ್ದಾರೆ. ಇದನ್ನೂ ಓದಿ: ಬೇಗೂರು ಕೆರೆಯಲ್ಲಿ ಶಿವನ ಪ್ರತಿಮೆ ಸ್ಥಾಪನೆ ಬೆಂಬಲಿಸಿದ್ದಕ್ಕೆ ಸತೀಶ್ ರೆಡ್ಡಿ ಕಾರಿಗೆ ಬೆಂಕಿ?

    ಘಟನೆಯಲ್ಲಿ ಫಾರ್ಚುನರ್ ಕಾರು ಸೇರಿದಂತೆ ಎರಡು ಕಾರು ಬೆಂಕಿಗಾಹುತಿ ಆಗಿವೆ. ಕಾರಿನ ಬ್ಯಾಟರಿ ಸ್ಫೋಟಗೊಂಡಾಗ ಭದ್ರತಾ ಸಿಬ್ಬಂದಿ ಎಚ್ಚೆತ್ತುಕೊಂಡಿದ್ದಾರೆ. ಅಗ್ನಿಶಾಮಕ ದಳವನ್ನು ಸ್ಥಳಕ್ಕೆ ಕರೆಸುವಷ್ಟರದಲ್ಲಿ ಕಾರುಗಳು ಸುಟ್ಟು ಕರಕಲಾಗಿವೆ. ಸ್ಥಳಕ್ಕೆ ಗೃಹ ಸಚಿವ ಅರಗ ಜ್ಞಾನೇಂದ್ರ, ಕಂದಾಯ ಮಂತ್ರಿ ಅಶೋಕ್ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

    ಶ್ವಾನ ಪಡೆ ಮೂಲಕ ಆರೋಪಿಗಳ ಪತ್ತೆಗೆ ಯತ್ನಿಸಿದ್ದಾರೆ. ಸುಮಾರು 200 ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಸಿಸಿಬಿ ಪೊಲೀಸರು ನಾಲ್ಕು ವಿಶೇಷ ತಂಡಗಳನ್ನು ರಚಿಸಿ ದುಷ್ಕರ್ಮಿಗಳಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ.

    ಮಧ್ಯ ರಾತ್ರಿ 1 ಗಂಟೆ ಸುಮಾರಿಗೆ ಬೊಮ್ಮನಹಳ್ಳಿ ಪೆಟ್ರೋಲ್ ಬಂಕ್‍ನಲ್ಲಿ ಬೈಕಲ್ಲಿ ಬಂದ ಇಬ್ಬರು ಯುವಕರು ಬಾಟಲ್‍ಗೆ ಪೆಟ್ರೋಲ್ ತುಂಬಿಸಿಕೊಂಡಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಇವರೇ ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಇಟ್ಟಿರಬಹುದೇ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

  • ಬೇಗೂರು ಕೆರೆಯಲ್ಲಿ ಶಿವನ ಪ್ರತಿಮೆ ಸ್ಥಾಪನೆ ಬೆಂಬಲಿಸಿದ್ದಕ್ಕೆ ಸತೀಶ್ ರೆಡ್ಡಿ ಕಾರಿಗೆ ಬೆಂಕಿ?

    ಬೇಗೂರು ಕೆರೆಯಲ್ಲಿ ಶಿವನ ಪ್ರತಿಮೆ ಸ್ಥಾಪನೆ ಬೆಂಬಲಿಸಿದ್ದಕ್ಕೆ ಸತೀಶ್ ರೆಡ್ಡಿ ಕಾರಿಗೆ ಬೆಂಕಿ?

    – ಹಿಂದೂ ಸಂಘಟನೆಗಳಿಂದ ಪೂಜೆಗೆ ಯತ್ನ
    – ಕ್ಷೇತ್ರದ ಅಭಿವೃದ್ಧಿಗೆ ಕೈ ಜೋಡಿಸಬೇಕೆಂದು ಮನವಿ ಮಾಡಿದ್ದ ಸತೀಶ್ ರೆಡ್ಡಿ

    ಬೆಂಗಳೂರು: ಬೇಗೂರು ಕೆರೆಯಲ್ಲಿ ಶಿವನ ಪ್ರತಿಮೆ ಸ್ಥಾಪನೆಯನ್ನು ಬೆಂಬಲಿಸಿದ್ದಕ್ಕೆ  ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಹಚ್ಚಲಾಗಿದ್ಯಾ ಎಂಬ ಪ್ರಶ್ನೆ ಎದ್ದಿದೆ.

    ಕಳೆದ ವರ್ಷ ಕೆಜಿ ಹಳ್ಳಿ, ಡಿಜೆ ಹಳ್ಳಿಯಲ್ಲಿ ಗಲಭೆ ನಡೆದಾಗ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ ಹಚ್ಚಲಾಗಿತ್ತು. ಆದರೆ ಈಗ ಬಿಜೆಪಿ ಶಾಸಕನ ಕಾರಿಗೆ ಬೆಂಕಿ ಹಚ್ಚಲಾಗಿದ್ದು, ಯಾವ ಕಾರಣಕ್ಕೆ ಈ ಕೃತ್ಯ ಎಸಗಲಾಗಿದೆ ಎನ್ನುವುದು ತಿಳಿದು ಬಂದಿಲ್ಲ. ಆದರೆ ಬೇಗೂರು ಕೆರೆಯಲ್ಲಿ ಶಿವನ ಮೂರ್ತಿ ಅನಾವರಣ ಸಂಬಂಧ ಗಲಾಟೆ ಎಬ್ಬಿಸಲು ಈ ಕೃತ್ಯ ನಡೆದಿರಬಹುದೇ ಎಂಬ ಶಂಕೆ ಎದ್ದಿದೆ.  ಇದನ್ನೂ ಓದಿ: ಕೇವಲ 7 ನಿಮಿಷಗಳಲ್ಲಿ ಕೃತ್ಯ ಎಸಗಿ ಎಸ್ಕೇಪ್ ಆಗಿದ್ದಾರೆ: ಸತೀಶ್ ರೆಡ್ಡಿ 

    ಏನಿದು ವಿವಾದ?
    ಬೆಂಗಳೂರು ದಕ್ಷಿಣ ನಾಗನಾಥೇಶ್ವರ ಸನ್ನಿಧಿ ತಟದಲ್ಲಿರುವ ಬೇಗೂರು ಕೆರೆ ಅಭಿವೃದ್ಧಿ ಸಮಯದಲ್ಲಿ ಬೃಹತ್ ಶಿವನ ಮೂರ್ತಿಯನ್ನು ನಿರ್ಮಾಣ ಮಾಡಲಾಗಿತ್ತು. ಈ ಪ್ರತಿಮೆ ಸ್ಥಾಪನೆಗೆ ಅನ್ಯಕೋಮಿನವರು ವಿರೋಧ ವ್ಯಕ್ತಪಡಿಸಿ ಶಿವನ ಮೂರ್ತಿಯನ್ನು ತೆರವು ಮಾಡಬೇಕೆಂದು ಆಗ್ರಹಿಸಿದ್ದರು.

    ವಿಚಾರ ಹೈಕೋರ್ಟ್ ಮೆಟ್ಟಿಲು ಹತ್ತಿತ್ತು. ವಿಚಾರಣೆ ನಡೆಸಿದ ಕೋರ್ಟ್ ಯಥಾಸ್ಥಿತಿಯನ್ನು ಕಾಪಾಡುವಂತೆ ಆದೇಶ ನೀಡಿತ್ತು. ಈ ಆದೇಶದ ಅನ್ವಯ ತಾಲೂಕು ಆಡಳಿತ ಶಿವನ ಮೂರ್ತಿಗೆ ಪ್ಲಾಸ್ಟಿಕ್ ಕವರ್ ಸುತ್ತಿ ದರ್ಶನವನ್ನು ಮರೆ ಮಾಡಿತ್ತು. ವಿರೋಧದ ನಡುವೆಯೂ ಹಿಂದೂ ಸಂಘಟನೆಗಳು ಶಿವನ ಮೂರ್ತಿಗೆ ಸುತ್ತಿರುವ ಪ್ಲಾಸ್ಟಿಕ್ ಹೊದಿಕೆಯನ್ನು ತೆರವುಗೊಳಿಸಿ ಮೂರ್ತಿಯನ್ನು ಭಕ್ತರ ವೀಕ್ಷಣೆಗೆ ಮುಕ್ತಗೊಳಿಸಿದ್ದರು.

    ಪರಿಸ್ಥಿತಿ ಗಂಭೀರವಾಗಿ ಹೋಗುತ್ತಿರುವ ಹಿನ್ನೆಲೆಯಲ್ಲಿ ಬುಧವಾರ ಸ್ಥಳಕ್ಕೆ ಆಗಮಿಸಿದ್ದ ಸತೀಶ್ ರೆಡ್ಡಿ, ಹಿಂದೂಗಳ ಭಾವನೆಯನ್ನು ಅನ್ಯ ಕೋಮಿನವರು ಗೌರವಿಸಿ ಸಹಕಾರ ನೀಡಬೇಕು. ದೇಶದ ಎಲ್ಲ ನದಿ ತೀರದಲ್ಲಿ ಶಿವನ ದೇಗುಲಗಳು ಎದ್ದು ನಿಂತಿವೆ. ಇದರಿಂದಾಗಿ ಆ ಪ್ರದೇಶಕ್ಕೆ ಹೆಸರು ಬರುತ್ತದೆ. ಹೀಗಾಗಿ ನಾಗನಾಥೇಶ್ವರ ದೇವಸ್ಥಾನ ಇತಿಹಾಸ ಅರಿತು ಈ ಕ್ಷೇತ್ರದ ಅಭಿವೃದ್ಧಿಗೆ ಕೈ ಜೋಡಿಸಬೇಕೆಂದು ಮನವಿ ಮಾಡಿದ್ದರು.

    ಇಂದು ಹೇಳಿದ್ದೇನು?
    ತನ್ನ ಕಾರಿಗೆ ಬೆಂಕಿ ಬಿದ್ದ ಬಳಿಕ ಪ್ರತಿಕ್ರಿಯೆ ನೀಡಿದ ಸತೀಶ್ ರೆಡ್ಡಿ, ಕೋರ್ಟ್ ನಲ್ಲಿ ಈ ವಿಚಾರ ಕಾರಣ ಕಾನೂನು ರೀತಿಯಲ್ಲಿ ಈ ಪ್ರಕರಣವನ್ನು ಬಗೆಹರಿಸುವ ಕೆಲಸ ಮಾಡುವ ಎಂದು ಹೇಳಿ ಬಂದಿದ್ದೆ. ಆ ವಿಚಾರವಾಗಿ ಕೃತ್ಯ ನಡೆದಿರಬಹುದೆಂದು ಶಂಕಿಸಿ ತನಿಖೆ ಮಾಡಲಾಗುತ್ತಿದೆ. ಕೆರೆಯಲ್ಲಿರುವ ಮೂರ್ತಿಯನ್ನು ತೆರವು ಮಾಡುವಂತೆ ಕೇಸ್ ಹಾಕಿದ್ದಾರೆ. ಕಳೆದ ವಾರದ ಹಿಂದೆ ಪ್ರತಿಭಟನೆ ಮಾಡಿದ್ದರು. ನಾನು ನಿನ್ನೆ ಸಂಜೆ ಮೂರ್ತಿ ಇರುವ ಸ್ಥಳಕ್ಕೆ ಹೋಗಿದ್ದೆ. ನಿನ್ನೆ ಹೋಗಿ ಬಂದ ಮೇಲೆ ಈ ಘಟನೆ ನಡೆದಿದೆ ಎಂದು ತಿಳಿಸಿದರು.

  • ಕೇವಲ 7 ನಿಮಿಷಗಳಲ್ಲಿ ಕೃತ್ಯ ಎಸಗಿ ಎಸ್ಕೇಪ್ ಆಗಿದ್ದಾರೆ: ಸತೀಶ್ ರೆಡ್ಡಿ

    ಕೇವಲ 7 ನಿಮಿಷಗಳಲ್ಲಿ ಕೃತ್ಯ ಎಸಗಿ ಎಸ್ಕೇಪ್ ಆಗಿದ್ದಾರೆ: ಸತೀಶ್ ರೆಡ್ಡಿ

    – ಪ್ರಕರಣವನ್ನು ರಾಜಕೀಯವಾಗಿ ತೆಗೆದುಕೊಳ್ಳಲ್ಲ

    ಆನೇಕಲ್: ಕೇವಲ 7 ನಿಮಿಷಗಳಲ್ಲಿ ಕಾರುಗಳಿಗೆ ಬೆಂಕಿ ಇಟ್ಟು ಆರೋಪಿಗಳು ಎಸ್ಕೇಪ್ ಆಗಿದ್ದಾರೆ ಎಂದು ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಹೇಳಿದ್ದಾರೆ.

    ಘಟನೆ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಸಿಟಿವಿಯಲ್ಲಿ ಸೆರೆಯಾಗಿರುವ ಪ್ರಕಾರ 1 ಗಂಟೆ 23 ನಿಮಿಷಕ್ಕೆ ಇಬ್ಬರು ಎಂಟ್ರಿಯಾಗಿದ್ದಾರೆ. ಕೇವಲ 7 ನಿಮಿಷಗಳಲ್ಲಿ ಕೃತ್ಯ ಎಸಗಿ ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಹಿಂದಿನ ಗೇಟ್ ನಿಂದ ಇಬ್ಬರು ಎಸ್ಕೇಪ್ ಆಗಿರೋದು ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ತಿಳಿಸಿದ್ದಾರೆ.

    ಹಿಂದಿನ ಗೇಟ್ ನಲ್ಲಿ ಸಿಸಿಟಿವಿ ಇದೆ ಅದರೆ ಅರಲ್ಲಿ ಮುಖ ಸರಿಯಾಗಿ ಕಾಣಿಸೋದಿಲ್ಲ. ಪೊಲೀಸ್, ವಾಚ್ ಮೆನ್ ಇಬ್ಬರು ಮುಂದಿನ ಗೇಟಿನ ಬಳಿ ಇದ್ದರು. ಬೈಕ್ ಗಳಲ್ಲಿ ಇಬ್ಬರು ಬಂದಿದ್ರು ಅನ್ನೋದು ಗೊತ್ತಾಗಿದೆ. ಪೊಲೀಸರು ಈಗಾಗಲೇ ತನಿಖೆಯನ್ನ ಆರಂಭಿಸಿದ್ದಾರೆ ಎಂದರು. ಇದನ್ನೂ ಓದಿ: ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿಯಿಟ್ಟ ದುಷ್ಕರ್ಮಿಗಳು!

    ನನಿಗೆ ಇಲ್ಲಿ ಯಾವುದೇ ರಾಜಕೀಯ ವೈಷ್ಯಮ ಇಲ್ಲ. ಹೀಗಾಗಿ ಇದನ್ನ ರಾಜಕೀಯವಾಗಿ ತೆಗೆದುಕೊಳ್ಳುವುದನ್ನ ನಿರಾಕರಿಸುತ್ತೇನೆ. ಯಾರೋ ಒಂದು ದುರಾಲೋಚನೆಯ ಮೆಸೇಜ್ ಪಾಸ್ ಮಾಡಿದ್ದಾರೆ. ಯಾರ ಮನೆಯಲ್ಲಿ ಏನು ಬೇಕಾದ್ರೂ ಮಾಡಬಹುದು ಅಂತಾ ತೋರಿಸೋಕೆ ಹೀಗೆ ಮಾಡಿದ್ದಾರೆ ಎಂದು ಸತೀಶ್ ರೆಡ್ಡಿ ತಿಳಿಸಿದ್ದಾರೆ.

  • ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿಯಿಟ್ಟ ದುಷ್ಕರ್ಮಿಗಳು!

    ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿಯಿಟ್ಟ ದುಷ್ಕರ್ಮಿಗಳು!

    ಬೆಂಗಳೂರು: ಶಾಸಕ ಸತೀಶ್ ರೆಡ್ಡಿಗೆ ಸೇರಿದ ಎರಡು ಕಾರುಗಳು ಬೆಂಕಿಗಾಹುತಿಯಾಗಿದೆ.

    ಮನೆ ಮುಂದೆ ನಿಲ್ಲಿಸಿದ್ದ ಎರಡು ಕಾರುಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಹೀಗಾಗಿ ಫಾರ್ಚೂನರ್ ಕಾರು ಸೇರಿದಂತೆ ಎರಡು ಕಾರುಗಳು ಬೆಂಕಿಗಾಹುತಿಯಾಗಿವೆ.

    ಸತೀಶ್ ರೆಡ್ಡಿಯವರು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಬೊಮ್ಮನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಬಿಜೆಪಿಯಲ್ಲಿನ ಖಾತೆ ಹಂಚಿಕೆ ಬಿಕ್ಕಟ್ಟು ಬಹುತೇಕ ಶಮನ

    ಈ ಸಂಬಂಧ ಆಗ್ನೇಯ ವಿಭಾಗದ ಡಿಸಿಪಿ ಶ್ರೀನಾಥ್ ಜೋಶಿ ಸುದ್ದಿಗಾರರೊಂದಿಗೆ ಮಾತನಾಡಿ, ಶಾಸಕರ ಕಾರಿಗೆ ಕಿಡಿಗೇಡಿಗಳು ಕಾರಿಗೆ ಬೆಂಕಿ ಹಾಕಿದ್ದಾರೆ. ಘಟನೆಯಲ್ಲಿ ಎರಡು ಕಾರುಗಳು ಭಸ್ಮವಾಗಿದೆ. ಈ ಕುರಿತು ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಯಾರು ಮಾಡಿದ್ದಾರೆ..? ಏಕೆ ಮಾಡಿದ್ದಾರೆ..? ಅನ್ನೋದ್ರ ಬಗ್ಗೆ ತನಿಖೆ ನಡೆಯುತ್ತಿದೆ. ಆರೋಪಿಗಳ ಪತ್ತೆಗಾಗಿ ನಾಲ್ಕು ವಿಶೇಷ ತಂಡ ರಚನೆ ಮಾಡಲಾಗಿದೆ. ಆರೋಪಿಗಳ ದುಷ್ಕೃತ್ಯದ ಬಗ್ಗೆ ಸಿಸಿಟಿವಿ ದೃಶ್ಯಗಳು ಲಭ್ಯವಾಗಿದ್ದು ಸದ್ಯದಲ್ಲೆ ಆರೋಪಿ ಗಳ ಬಂಧಿಸುವ ವಿಶ್ವಾಸ ಇದೆ ಎಂದರು.

  • ಬೆಡ್ ಬ್ಲಾಕಿಂಗ್ ದಂಧೆಯ ಪಾತ್ರಧಾರಿ ಸತೀಶ್ ರೆಡ್ಡಿ ಯನ್ನು ಕೂಡಲೇ ಬಂಧಿಸಿ – AAP ಆಗ್ರಹ

    ಬೆಡ್ ಬ್ಲಾಕಿಂಗ್ ದಂಧೆಯ ಪಾತ್ರಧಾರಿ ಸತೀಶ್ ರೆಡ್ಡಿ ಯನ್ನು ಕೂಡಲೇ ಬಂಧಿಸಿ – AAP ಆಗ್ರಹ

    ಬೆಂಗಳೂರು: ಕೊರೊನಾ ಎರಡನೇ ಅಲೆಯ ಮಹಾದುರಂತದ ಸಮಯದಲ್ಲಿ ಇಡೀ ರಾಜ್ಯವೇ ತಲೆ ತಗ್ಗಿಸುವಂತಹ ಬೆಡ್ ಬ್ಲಾಕಿಂಗ್ ದಂಧೆಗೆ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಸಾಕಷ್ಟು ಕುಮ್ಮಕ್ಕು ನೀಡಿರುವುದು ಮೇಲ್ನೋಟಕ್ಕೆ ತಿಳಿದು ಬಂದಿರುವ ವಿಷಯ. ಈ ಕೂಡಲೇ ಇವರನ್ನು ಬಂಧಿಸಿ ವಿಚಾರಣೆಗೊಳಪಡಿಸಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಕಾನೂನು ವಿಭಾಗದ ಅಧ್ಯಕ್ಷರಾದ ನಂಜಪ್ಪ ಕಾಳೇಗೌಡ ಆಗ್ರಹಿಸಿದ್ದಾರೆ.

    ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ನಂಜಪ್ಪ ಕಾಳೇಗೌಡ, ಹಲವು ವರ್ಷಗಳಿಂದ ಇವರ ಬಳಿ ಆಪ್ತ ಸಹಾಯಕನಾಗಿರುವ ಬಾಬು ಎಂಬಾತನನ್ನು ಹಾಗೂ ಇನ್ನಿತರರನ್ನು ಈಗಾಗಲೇ ಕೇಂದ್ರ ಅಪರಾಧ ದಳ ಬಂಧಿಸಿ ವಿಚಾರಣೆಗೊಳಪಡಿಸಿದೆ. ಈ ಬಗ್ಗೆ 200ಕ್ಕೂ ಹೆಚ್ಚು ಪುಟಗಳ ದೋಷಾರೋಪಣಾ ಪಟ್ಟಿಯನ್ನು ಸಹ ಈಗಾಗಲೇ ಸಲ್ಲಿಸಿದೆ. ಈ ಹಿಂದೆ ಬೊಮ್ಮನಹಳ್ಳಿ ವಲಯದ ಬಿಬಿಎಂಪಿ ವಾರ್ ರೂಂಗೆ ನುಗ್ಗಿ ಶಾಸಕರ ಬೆಂಬಲಿಗರು ಬೆಡ್ ಬ್ಲಾಕಿಂಗ್ ದಂಧೆಗೆ ಬೆಂಬಲ ನೀಡುತ್ತಿಲ್ಲವೆಂಬ ಕಾರಣಕ್ಕಾಗಿ ಕಿರಿಯ ಐಎಎಸ್ ಅಧಿಕಾರಿಯೊಬ್ಬರಿಗೆ ಹಲ್ಲೆಯನ್ನು ಸಹ ನಡೆಸಲು ಪ್ರಯತ್ನಿಸಿ ಧಾಂದಲೆ ನಡೆಸಿದ್ದರು ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಬೆಡ್ ಬ್ಲಾಕ್ ದಂಧೆ ಪ್ರಕರಣ – ಸತೀಶ್ ರೆಡ್ಡಿ ಆಪ್ತನ ಬಂಧನಕ್ಕೆ ಸಿಸಿಬಿ ಸಿದ್ಧತೆ

     

    ಶಾಸಕರ ಆಪ್ತ ಸಹಾಯಕ ಶಾಸಕರ ಬೆಂಬಲವಿಲ್ಲದೆ ಇಂತಹ ದುಷ್ಕೃತ್ಯಗಳಲ್ಲಿ ತೊಡಗುವುದು ಖಂಡಿತ ಸಾಧ್ಯವಿಲ್ಲ ಎಂಬುದು ಇಡೀ ರಾಜ್ಯದ ಜನತೆಗೆ ಗೊತ್ತಿರುವ ವಿಷಯ. ಈ ಪ್ರಕರಣದಲ್ಲಿ ಶಾಸಕರ ಪಾತ್ರ ಏನು ಎಂಬುದನ್ನು ಸರ್ಕಾರ ಹಾಗೂ ತನಿಖಾ ಸಂಸ್ಥೆಯು ರಾಜ್ಯದ ಜನತೆಗೆ ಬಹಿರಂಗಗೊಳಿಸಬೇಕಿದೆ. ಕೇವಲ ಸಣ್ಣಪುಟ್ಟ ವ್ಯಕ್ತಿಗಳನ್ನು ಮಾತ್ರ ಬಂಧಿಸಿ ಪ್ರಭಾವಿ ಶಾಸಕರನ್ನು ಕರೆದು ವಿಚಾರಣೆಯನ್ನೂ ಸಹ ಮಾಡಿಲ್ಲ. ಬಿಜೆಪಿ ಸರ್ಕಾರವು ಅವರದೇ ಪಕ್ಷದ ಶಾಸಕನ ಪರ ನಿಂತಿರುವುದು ದೇಶದ ನ್ಯಾಯದಾನ ವ್ಯವಸ್ಥೆಗೆ ಅಪಮಾನ ತರುವ ವಿಷಯವಾಗಿದೆ. ಇದನ್ನೂ ಓದಿ: ಬೆಡ್ ಬ್ಲಾಕಿಂಗ್ ಕೇಸ್ – ಸತೀಶ್ ರೆಡ್ಡಿ ಆಪ್ತ ಅರೆಸ್ಟ್

    ಬೆಡ್ ಬ್ಲಾಕಿಂಗ್ ನಂತಹ ಘೋರಾತಿಘೋರ ಅಪರಾಧ ಕೃತ್ಯದಿಂದ ಈಗಾಗಲೇ ಸಾವಿರಾರು ಅಮಾಯಕರು ಬಲಿಯಾಗಿದ್ದಾರೆ. ಇವರುಗಳ ಸಾವಿಗೆ ಸೂಕ್ತ ನ್ಯಾಯವನ್ನು ಒದಗಿಸುವ ಇರಾದೆ ಹಾಗೂ ಕಿಂಚಿತ್ತು ಕಾಳಜಿ ಏನಾದರೂ ಸರ್ಕಾರಕ್ಕೆ ಇದ್ದಲ್ಲಿ ಈ ಕೂಡಲೇ ಸತೀಶ್ ರೆಡ್ಡಿ ಅವರನ್ನು ಬಂಧಿಸಿ ಸೂಕ್ತ ತನಿಖೆ ಕೈಗೊಳ್ಳಬೇಕಿದೆ. ಇಲ್ಲದಿದ್ದಲ್ಲಿ ಪ್ರಕರಣವು ಪ್ರಭಾವಿಗಳ ಒತ್ತಡದಿಂದ ಸಂಪೂರ್ಣ ಹಳ್ಳ ಹಿಡಿಯುವ ಸಾಧ್ಯತೆ ಇದೆ ಎಂದು ಕಳವಳ ವ್ಯಕ್ತಪಡಿಸಿದರು.

  • ಬೆಡ್ ಬ್ಲಾಕಿಂಗ್- ಬಿಜೆಪಿ ಸಂಸದ, ಶಾಸಕನ ವಿರುದ್ಧ ತನಿಖೆ ನಡೆಸುವಂತೆ ದೂರು

    ಬೆಡ್ ಬ್ಲಾಕಿಂಗ್- ಬಿಜೆಪಿ ಸಂಸದ, ಶಾಸಕನ ವಿರುದ್ಧ ತನಿಖೆ ನಡೆಸುವಂತೆ ದೂರು

    ಬೆಂಗಳೂರು: ಬೆಡ್ ಬ್ಲಾಕಿಂಗ್ ದಂಧೆಯ ಹಿಂದೆ ಸಂಸದ ತೇಜಸ್ವಿ ಸೂರ್ಯ, ಶಾಸಕ ಸತೀಶ್ ರೆಡ್ಡಿ ಕೈವಾಡವಿದ್ದು, ಸೂಕ್ತ ತನಿಖೆ ನಡೆಸುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ದೂರು ನೀಡಲಾಗಿದೆ.

    ಈ ಸಂಬಂಧ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು, ಬಿಜೆಪಿ ಶಾಸಕ ಸತೀಶ್ ರೆಡ್ಡಿ ಅಪ್ತ ಬಾಬುವನ್ನು ಬಂಧಿಸಿದ್ದಾರೆ. ಬಾಬು ಮೂಲಕ ಸತೀಶ್ ರೆಡ್ಡಿ ಸೇರಿದಂತೆ ಕೆಲ ಬಿಜೆಪಿ ಗರು ಬೆಡ್ ಬ್ಲಾಕಿಂಗ್ ದಂಧೆ ನಡೆಸುತ್ತಿದ್ದರು. ಇದಕ್ಕೆ ಸಂಸದ ತೇಜಸ್ವಿ ಸೂರ್ಯ ಕೂಡ ಬೆಂಬಲ ನೀಡಿದ್ದಾರೆ. ಹಾಗಾಗಿ ಈ ಇಬ್ಬರು ನಾಯಕರನ್ನು ಬಂಧಿಸಿ ಸೂಕ್ತ ತನಿಖೆ ಮಾಡಬೇಕು ಅಂತಾ ದೂರಿನಲ್ಲಿ ತಿಳಿಸಲಾಗಿದೆ.

    ಕೊರೋನಾ ಲಸಿಕೆ ಯನ್ನು ಉಚಿತವಾಗಿ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ಕೊಟ್ಟಿದ್ರು. ಆದ್ರೆ ಸಂಸದ ತೇಜಸ್ವಿ ಸೂರ್ಯ ಕ್ಷೇತ್ರದಲ್ಲೇ ಖಾಸಗಿ ಆಸ್ಪತ್ರೆಗಳು ಲಸಿಕೆ ಯನ್ನು ಹಣಕ್ಕೆ ಮಾರಾಟ ಮಾಡುತ್ತಿದ್ದಾರೆ. ಪ್ರತಿ ಖಾಸಗಿ ಆಸ್ಪತ್ರೆ ಮುಂದೆ ಯಾವ್ಯಾವ ಲಸಿಕೆಗೆ ಎಷ್ಟು ಹಣ ಅಂತಾ ಬ್ಯಾನರ್ ಹಾಕಲಾಗಿದೆ, ವಿಪರ್ಯಾಸವೆಂದರೆ ಸಂಸದ ತೇಜಸ್ವಿ ಸೂರ್ಯರವರ ಫೋಟೋ ಕೂಡ ಅದೇ ಬ್ಯಾನರ್‍ಗಳಲ್ಲಿ ಹಾಕಲಾಗಿದೆ. ಖಾಸಗಿ ಆಸ್ಪತ್ರೆಗಳ ಲಸಿಕೆ ದಂಧೆಯಲ್ಲೂ ಸಂಸದರ ಕೈವಾಡ ವ್ಯಕ್ತವಾಗಿದೆ. ಹಾಗಾಗಿ ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಬಿಜೆಪಿಯ ಈ ಇಬ್ಬರು ಪ್ರಭಾವಿ ನಾಯಕರು ಮತ್ತು ಕೆಲ ಕಾರ್ಯಕರ್ತರು ಕೂಡ ಭಾಗಿಯಾಗಿದ್ದು, ಸೂಕ್ತ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಬೇಕು ಅಂತಾ ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ದೂರು ನೀಡಲಾಗಿದೆ.

  • ಬೆಡ್ ಬ್ಲಾಕ್ ದಂಧೆ ಪ್ರಕರಣ – ಸತೀಶ್ ರೆಡ್ಡಿ ಆಪ್ತನ ಬಂಧನಕ್ಕೆ ಸಿಸಿಬಿ ಸಿದ್ಧತೆ

    ಬೆಡ್ ಬ್ಲಾಕ್ ದಂಧೆ ಪ್ರಕರಣ – ಸತೀಶ್ ರೆಡ್ಡಿ ಆಪ್ತನ ಬಂಧನಕ್ಕೆ ಸಿಸಿಬಿ ಸಿದ್ಧತೆ

    ಬೆಂಗಳೂರು: ಬೆಡ್ ಬ್ಲಾಕಿಂಗ್ ಪ್ರಕರಣದಲ್ಲಿ ಬಿಜೆಪಿ ಶಾಸಕ್ ಸತೀಶ್ ರೆಡ್ಡಿ ಆಪ್ತ ಬಾಬು ಬಂಧನಕ್ಕೆ ಸಿಸಿಬಿ ಸಕಲ ತಯಾರಿ ನಡೆಸಿದೆ.

    ಶಾಸಕ ಸತೀಶ್ ರೆಡ್ಡಿ ಹಾಗೂ ಪಿಎ ಹರೀಶ್‍ಗೆ ಕಿಂಗ್‍ಪಿನ್ ಬಾಬು ಖಾಸಾ ದೋಸ್ತಿ ಹೊಂದಿದ್ದಾನೆ. ಸತೀಶ್ ರೆಡ್ಡಿ ಮಾತಿನಂತೆಯೇ ಬಾಬು ಬೆಡ್ ಬ್ಲಾಕ್ ಮಾಡಿಸುತ್ತಿದ್ದಾಗಿ ತಿಳಿದು ಬಂದಿದೆ. ಜೊತೆಗೆ ಕೆಲವರಲ್ಲಿ ಪ್ರತ್ಯೇಕವಾಗಿ ಹಣ ಪಡೆದು ಬೆಡ್ ಬ್ಲಾಕ್ ಮಾಡಿರುವ ಸಾಧ್ಯತೆಯೂ ಇದೆ. ಬಾಬುಗೆ ಸಿಸಿಬಿ ಡ್ರಿಲ್ ಮಾಡಿದ ಬೆನ್ನಲ್ಲೇ ಈಗ ಬಿಪಿ ಏರುಪೇರಾಗಿ ಆಸ್ಪತ್ರೆ ಪಾಲಾಗಿದ್ದಾನೆ. ಈ ಬೆನ್ನಲ್ಲೇ ಕೊರೋನಾ ಪಾಸಿಟಿವ್ ಆಗಿದ್ಯಂತೆ.

    ತೇಜಸ್ವಿ ಸೂರ್ಯ ರೇಡ್ ಮಾಡಿದ್ದಾಗ ಸತೀಶ್ ರೆಡ್ಡಿ ಜೊತೆಯಲ್ಲೇ ಇದ್ದ ಬಾಬು, ವಾರ್‍ರೂಂ ಸಿಬ್ಬಂದಿಗೆ ಫುಲ್ ಅವಾಜ್ ಹಾಕಿದ್ದರು. ಸತೀಶ್ ರೆಡ್ಡಿ ತಮ್ಮ ಬೆಂಬಲಿಗರೊಂದಿಗೆ ಬೊಮ್ಮನಹಳ್ಳಿ ವಲಯದ ವಾರ್ ರೂಮ್‍ಗೆ ನುಗ್ಗಿ ಕರ್ತವ್ಯ ನಿರತ ವೈದ್ಯೆ ಪಲ್ಲವಿ ಹಾಗೂ ಪ್ರೊಬೇಷನರಿ ಐಎಎಸ್ ಅಧಿಕಾರಿ, ನೊಡೇಲ್ ಆಫೀಸ್ ಯಶವಂತ್ ಅನ್ನೋವ್ರಿಗೆ ಬೆಡ್ ಹಂಚಿಕೆ ವಿಷಯವಾಗಿ ಹಲ್ಲೆಗೆ ಯತ್ನಿಸಿದ್ದಾರೆ. ಇದನ್ನೂ ಓದಿ: ಬೆಡ್ ದಂಧೆ ನಡೆಯೋದು ಹೇಗೆ ಅನ್ನೋದನ್ನ ವಿವರಿಸಿದ ತೇಜಸ್ವಿ ಸೂರ್ಯ

    ಐಎಎಸ್ ಅಧಿಕಾರಿ ಕೈ ಮುಗಿದು ಮಾತನಾಡಲು ಅವಕಾಶ ಕೊಡಿ ಅಂದರೂ ಬಿಟ್ಟಿಲ್ಲ. ಈ ವೇಳೆ ನನಗೇನಾದರೂ ಆದರೆ ನಿಮ್ಮ ಮೇಲೆ ಎಫ್‍ಐಆರ್ ದಾಖಲಿಸ್ತೇನೆ ಅಂತ ಪೊಲೀಸರಿಗೆ ಯಶವಂತ್ ಹೇಳಿದ್ದಾರೆ. ಇದರಿಂದ ರೊಚ್ಚಿಗೆದ್ದ ಸತೀಶ್ ರೆಡ್ಡಿ ಬೆಂಬಲಿಗರು ಮತ್ತಷ್ಟು ರಾದ್ಧಾಂತ ಸೃಷ್ಟಿಸಿದ್ದಾರೆ. ತೇಜಸ್ವಿ ಸೂರ್ಯ ರೇಡ್‍ಗೆ ಮುಂಚೆ ಅಂದರೆ ಏಪ್ರಿಲ್ 30ರಂದು ಈ ಘಟನೆ ನಡೆದಿದ್ದು, ಈಗ ಬೆಳಕಿಗೆ ಬಂದಿದೆ.