Tag: ಸತೀಶ್ ರೆಡ್ಡಿ

  • ತೇಜಸ್ವಿ ಸೂರ್ಯ, ರವಿ ಸುಬ್ರಹ್ಮಣ್ಯ, ಸತೀಶ್ ರೆಡ್ಡಿಗೆ ಡಿಕೆಶಿ ಅಭಿನಂದನೆ

    ತೇಜಸ್ವಿ ಸೂರ್ಯ, ರವಿ ಸುಬ್ರಹ್ಮಣ್ಯ, ಸತೀಶ್ ರೆಡ್ಡಿಗೆ ಡಿಕೆಶಿ ಅಭಿನಂದನೆ

    ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸಂಸದ ತೇಜಸ್ವಿಸೂರ್ಯ, ಶಾಸಕರಾದ ರವಿಸುಬ್ರಹ್ಮಣ್ಯ, ಸತೀಶ್ ರೆಡ್ಡಿಗೆ ಅಭಿನಂದನೆ ಸಲ್ಲಿಸಿದ್ದಾರೆ.

    ಸಿಲಿಕಾನ್ ಸಿಟಿಯಲ್ಲಿ ನಡೆಯುತ್ತಿದ್ದ ಬೆಡ್ ಬ್ಲಾಕ್ ದಂಧೆಯನ್ನು ಪತ್ತೆ ಹಚ್ಚಿದ ಹಿನ್ನೆಲೆಯಲ್ಲಿ ಡಿಕೆಶಿ ಈ ಅಭಿನಂದನೆಯನ್ನು ತಿಳಿಸಿದ್ದಾರೆ.

    ಟ್ವೀಟ್ ನಲ್ಲೇನಿದೆ..?
    ಬೆಡ್ ಬ್ಲಾಕ್ ದಂಧೆ ಪತ್ತೆಹಚ್ಚಿದ ಹಿನ್ನೆಲೆಯಲ್ಲಿ ಸಂಸದ ತೇಜಸ್ವಿಸೂರ್ಯ, ಶಾಸಕರಾದ ರವಿಸುಬ್ರಹ್ಮಣ್ಯ, ಸತೀಶ್ ರೆಡ್ಡಿಗೆ ಅಭಿನಂದನೆ ಸಲ್ಲಿಸುತ್ತೇನೆ. ಯಾರ ನಿಯಂತ್ರಣದಲ್ಲಿದೆ ಬಿಬಿಎಂಪಿ..!? ಆ ಬಿಜೆಪಿ ಸಚಿವನೇ ನೇರ ಹೊಣೆ ಹೊರಬೇಕು ಎಂದು ಆಕ್ರೋಶ ಹೊರಹಾಕಿದ್ದಾರೆ.

    ಏನಿದು ಪ್ರಕರಣ..?
    ಹೋಂ ಐಸೋಲೇಟ್ ಆಗುವ ವ್ಯಕ್ತಿಗಳಿಗೆ ತಿಳಿಯದಂತೆ ಅವರ ಹೆಸರಿನಲ್ಲಿ ಬೆಡ್ ಮೀಸಲಿರಿಸುವ ಮಹಾದಂಧೆ ಬಯಲಾಗಿತ್ತು. ಸಂಸದ ತೇಜಸ್ವಿ ಸೂರ್ಯ ಬಿಬಿಎಂಪಿಯ ಕಳ್ಳಾಟವನ್ನ ಬಯಲು ಮಾಡಿದ್ದು, ಸೋಂಕಿತರ ಜೊತೆ ಮಾತನಾಡಿ ಸೀಟ್ ಸಿಕ್ಕಿದೆಯಾ ಅಥವಾ ಇಲ್ಲವಾ ಅನ್ನೋದನ್ನ ಖಚಿತಪಡಿಸಿಕೊಂಡಿದ್ದರು. ಸೋಂಕಿತರ ಕುಟುಂಬಸ್ಥರ ಜೊತೆ ತೇಜಸ್ವಿ ಸೂರ್ಯ ಮಾತನಾಡಿರುವ ಆಡಿಯೋಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿತ್ತು.

    ಬೆಂಗಳೂರು ದಕ್ಷಿಣ ಭಾಗದಲ್ಲಿ ಬಿಬಿಎಂಪಿಯ ವಾರ್ ರೂಂ ಅಧಿಕಾರಿಗಳೇ ಕೃತಕ ಬೆಡ್ ಅಭಾವ ಸೃಷ್ಟಿಸುತ್ತಿರುವ ವಿಚಾರ ಬೆಳಕಿಗೆ ಬಂದಿದೆ. ಹೋಂ ಐಸೋಲೇಟ್ ನಲ್ಲಿರುವ ಸೋಂಕಿತನ ಹೆಸರಲ್ಲಿ ಬೆಡ್ ಬುಕ್ ಆದ್ರೆ, ಅದು ಯಾರಿಗೆ ನೀಡಲಾಗುತ್ತೆ ಎಂಬುದರ ಬಗ್ಗೆ ತಿಳಿದು ಬರಬೇಕಿದೆ. ಮಹಾನಗರ ಬೆಂಗಳೂರಿನಲ್ಲಿ ಕೃತಕ ಬೆಡ್ ಅಭಾವದಿಂದಲೇ ಈ ಹೆಲ್ತ್ ಎಮೆರ್ಜೆನ್ಸಿ ಉಂಟಾಗಿದೆಯಾ ಅನ್ನೋ ಅನುಮಾನಗಳು ದಟ್ಟವಾಗಿದೆ.

  • ಅನಂತ್ ಕುಮಾರ್ ಇಲ್ಲದಿರುವಿಕೆ ಎದ್ದು ಕಾಣ್ತಿದೆ – ಸಿಎಂ ವಿರುದ್ಧ ಸತೀಶ್ ರೆಡ್ಡಿ ಕೆಂಡಾಮಂಡಲ

    ಅನಂತ್ ಕುಮಾರ್ ಇಲ್ಲದಿರುವಿಕೆ ಎದ್ದು ಕಾಣ್ತಿದೆ – ಸಿಎಂ ವಿರುದ್ಧ ಸತೀಶ್ ರೆಡ್ಡಿ ಕೆಂಡಾಮಂಡಲ

    ಬೆಂಗಳೂರು: ಇಂದು ಸಚಿವ ಸಂಪುಟ ವಿಸ್ತರಣೆ ನಡೆಯಲಿದ್ದು, ಭಾರೀ ಹೈಡ್ರಾಮಾ ನಡೆಯುತ್ತಿದೆ. 7 ಮಂದಿ ಸಚುವರಾಗಿ ಪ್ರಮಾಣ ವಚನ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಈ ಬೆನ್ನಲ್ಲೇ ಸ್ವಪಕ್ಷದವರೇ ಸಿಎಂ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    ಈ ಸಂಬಂಧ ಶಾಸಕ ಸತೀಶ್ ರೆಡ್ಡಿ ಟ್ವೀಟ್ ಮಾಡಿ ಬಿಎಸ್‍ವೈ ವಿರುದ್ಧ ಕಿಡಿಕಾರಿದ್ದಾರೆ. ಅಲ್ಲದೆ ಇದೇ ವೇಳೆ ಮಾಜಿ ಕೇಂದ್ರ ಸಚಿವ ದಿವಂಗತ ಅನಂತ್ ಕುಮಾರ್ ಅವರನ್ನು ನೆನಪಿಸಿಕೊಂಡಿದ್ದಾರೆ.

    ಟ್ವೀಟ್‍ನಲ್ಲೇನಿದೆ..?
    ರೀ ಯಡಿಯೂರಪ್ಪನವರೇ ಮಂತ್ರಿಮಂಡಲ ವಿಸ್ತರಣೆಯಲ್ಲಿ ಸಚಿವರ ಆಯ್ಕೆ ಪ್ರಕ್ರಿಯೆಯ ಮಾನದಂಡಗಳೇನು? ನಿಮಗೆ, ನಮ್ಮ ರಾಜ್ಯ ಮತ್ತು ರಾಷ್ಟ್ರದ ನಾಯಕರುಗಳಿಗೆ ನಿಷ್ಟಾವಂತ ಯುವ ಕಾರ್ಯಕರ್ತರು ಕಾಣುತ್ತಿಲ್ಲವೆ? ನಮ್ಮ ಕಷ್ಟ ನಷ್ಟಗಳನ್ನು ಆಲಿಸುತ್ತಿದ್ದ ಶ್ರೀ ಅನಂತಕುಮಾರ್ ಜಿ ರವರ ಇಲ್ಲದಿರುವಿಕೆ ಎದ್ದು ಕಾಣುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾನಾಡಿದ ಸಿಎಂ, ಇಂದು 7 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಉಮೇಶ್ ಕತ್ತಿ, ಅರವಿಂದ್ ಲಿಂಬಾವಳಿ, ಎಂಟಿಬಿ ನಾಗರಾಜ್, ಮುರುಗೇಶ್ ನಿರಾಣಿ, ಆರ್ ಶಂಕರ್, ಸಿ.ಪಿ ಯೋಗೇಶ್ವರ್ ಹಾಗೂ ಎಸ್. ಅಂಗಾರ ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಾರೆ ಎಂದು ತಿಳಿಸಿದ್ದಾರೆ. ಈ ಮೂಲಕ ಶಾಸಕ ಮುನಿರತ್ನ, ಅವರಿಗೆ ಸಚಿವ ಸ್ಥಾನ ಕೈ ತಪ್ಪಿದ್ದು, ಸಿಎಂ ವಚನ ಭ್ರಷ್ಟರಾದ್ರಾ ಎಂದು ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.

  • ಬಿಜೆಪಿ ಶಾಸಕ ಸತೀಶ್ ರೆಡ್ಡಿ ಬಾಮೈದ ಎಂದು ಹೇಳಿಕೊಂಡು ಗೂಂಡಾಗಿರಿ- ಕಾರ್ ಗೆ ಸೈಡ್ ಬಿಡ್ಲಿಲ್ಲವೆಂದು ಚಾಲಕನ ಮೇಲೆ ಮರಣಾಂತಿಕ ಹಲ್ಲೆ

    ಬಿಜೆಪಿ ಶಾಸಕ ಸತೀಶ್ ರೆಡ್ಡಿ ಬಾಮೈದ ಎಂದು ಹೇಳಿಕೊಂಡು ಗೂಂಡಾಗಿರಿ- ಕಾರ್ ಗೆ ಸೈಡ್ ಬಿಡ್ಲಿಲ್ಲವೆಂದು ಚಾಲಕನ ಮೇಲೆ ಮರಣಾಂತಿಕ ಹಲ್ಲೆ

    ಬೆಂಗಳೂರು: ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಬಾಮೈದ ಅಂತ ಹೇಳಿಕೊಂಡು ದುಷ್ಕರ್ಮಿಯೊಬ್ಬ ಅಟ್ಟಹಾಸ ಮೆರೆದಿದ್ದಾನೆ.

    ಕೋರಮಂಗಲದ ಬಳಿ ಕಾರು ಮುಂದೆ ಹೋಗಲು ಬೇಗ ಸ್ಥಳಾವಕಾಶ ಮಾಡಿಕೊಡಲಿಲ್ಲ ಅಂತ ಚಾಲಕನನ್ನ ಅಡ್ಡಗಟ್ಟಿ ಮರಣಾಂತಿಕವಾಗಿ ಹಲ್ಲೆ ಮಾಡಿದ್ದಾನೆ. ನಾನು ಯಾರು ಗೊತ್ತಾ? ನನಗೆ ಸೈಡ್ ಬಿಡಲು ವಿಳಂಬ ಮಾಡ್ತಿಯಾ ಅಂತೆಲ್ಲಾ ಧಮ್ಕಿ ಹಾಕಿದ್ದಾನೆ.

    ಹಲ್ಲೆಯಿಂದಾಗಿ ಗಂಭೀರವಾಗಿ ಗಾಯಗೊಂಡ ಚಾಲಕ ತಿಪ್ಪೇಸ್ವಾಮಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸ್ತಿದ್ದಾರೆ.

    ಹಲ್ಲೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರೋ ಶಾಸಕ ಸತೀಶ್ ರೆಡ್ಡಿ, ನನಗೆ ಬಾಮೈದನೇ ಇಲ್ಲ ಎಂದು ಪಬ್ಲಿಕ್ ಟಿವಿಗೆ ಸ್ಪಷ್ಟಪಡಿಸಿದ್ದಾರೆ.

  • ಟಿಪ್ಪು ಜಯಂತಿ ವಿರೋಧಿಸಿ, ಮತ್ತೊಂದೆಡೆ ಬೆಂಬಲಿಸುವ ಬಿಜೆಪಿಯ ದ್ವಿಮುಖ ಧೋರಣೆ ಅನಾವರಣ

    ಟಿಪ್ಪು ಜಯಂತಿ ವಿರೋಧಿಸಿ, ಮತ್ತೊಂದೆಡೆ ಬೆಂಬಲಿಸುವ ಬಿಜೆಪಿಯ ದ್ವಿಮುಖ ಧೋರಣೆ ಅನಾವರಣ

    ಬಳ್ಳಾರಿ/ಬೆಂಗಳೂರು: ರಾಜ್ಯದೆಲ್ಲೆಡೆ ಟಿಪ್ಪು ಜಯಂತಿಯನ್ನು ಬಿಜೆಪಿ ವಿರೋಧಿಸುತ್ತಿದೆ. ಟಿಪ್ಪು ಜಯಂತಿ ಬೇಡವೇ ಬೇಡವೆಂದು ಹೋರಾಟ ನಡೆಸುತ್ತಿರುವ ಬೆನ್ನಲ್ಲೇ ಬಳ್ಳಾರಿ ಬಿಜೆಪಿ ಕಚೇರಿಯಲ್ಲೆ ಟಿಪ್ಪುಜಯಂತಿ ಆಚರಿಸಲಾಗಿದ್ದರೆ, ಟಿಪ್ಪು ಜಯಂತಿಗೆ ಶುಭಕೋರುವ ಫ್ಲೆಕ್ಸ್ ನಲ್ಲಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಫೋಟೋ ಪ್ರಕಟವಾಗಿದೆ.

    ಬಳ್ಳಾರಿಯ ಸಂಸದ ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ಅವರ ಪರಮಾಪ್ತನಾಗಿರುವ ಪಾಲಿಕೆಯ ಸದಸ್ಯ ಗೋವಿಂದರಾಜಲು ನೇತೃತ್ವದಲ್ಲಿ ಬಿಜೆಪಿ ಕಚೇರಿಯ ಮುಂಭಾಗ ಟಿಪ್ಪು ಜಯಂತಿಯನ್ನು ಆಚರಣೆ ಮಾಡಲಾಗಿದೆ. ಅಷ್ಟೇ ಅಲ್ಲದೇ ಹೊಸಪೇಟೆಯಲ್ಲಿ ಸರ್ಕಾರದಿಂದ ಆಚರಿಸುತ್ತಿರುವ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಆನಂದ ಸಿಂಗ್ ಅನಾರೋಗ್ಯದ ಮಧ್ಯೆಯೂ ಪಾಲ್ಗೊಂಡು ಅಚ್ಚರಿ ಮೂಡಿಸಿದ್ದಾರೆ.

    ಬಿಜೆಪಿಯ ಕಾರ್ಯಕರ್ತರು ಬಿಜೆಪಿ ಕಚೇರಿಯ ಮುಂದೆ ಟಿಪ್ಪು ಭಾವಚಿತ್ರವನ್ನಿಟ್ಟು ಹಾರ ಹಾಕಿ ಪೂಜೆ ಸಲ್ಲಿಸಿ ಜಯಂತಿ ಆಚರಣೆ ಮಾಡಿದ್ದಾರೆ. ಇದು ಟಿಪ್ಪು ಜಯಂತಿ ವಿರೋಧಿಸುತ್ತಿರುವ ಬಿಜೆಪಿ ಮುಖಂಡರಿಗೆ ಮುಜುಗರ ಉಂಟುಮಾಡಿದೆ.

    ಕಚೇರಿಯಲ್ಲಿ ಟಿಪ್ಪು ಜಯಂತಿ ಆಚರಣೆ ಮಾಡಲು ಬಿಜೆಪಿಯ ಅಲ್ಪಸಂಖ್ಯಾತ ವಿಭಾಗದ ಕಾರ್ಯಕರ್ತರು ಕಳೆದ ರಾತ್ರಿಯೇ ಸಂಸದ ಶ್ರೀರಾಮುಲು ಅನುಮತಿ ಸಹ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ನಾಯಕರು ಬಳ್ಳಾರಿಯಲ್ಲಿ ಮುಸ್ಲಿಂ ಮತಗಳನ್ನು ಪಡೆಯಲು ಇಬ್ಬಗೆಯ ನೀತಿ ಅನುಸರಿಸುತ್ತಿರುವುದು ಬಿಜೆಪಿಯ ಹಿರಿಯ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ.

    ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದರ ಬಗ್ಗೆ ಪ್ರತಿಕ್ರಿಯಿಸಿದ ಆನಂದ್ ಸಿಂಗ್, ಎಲ್ಲ ಜಯಂತಿಯಲ್ಲಿ ನಾನು ಪಾಲ್ಗೊಳ್ಳುತ್ತೇನೆ. ಎಲ್ಲ ಜಯಂತಿಯಂತೆ ಟಿಪ್ಪು ಜಯಂತಿ ಕೂಡ ಒಂದು. ವಿಜಯನಗರ ಕ್ಷೇತ್ರದಲ್ಲಿ ಭೇದಭಾವವಿಲ್ಲ. ಕ್ಷೇತ್ರದ ಜನರ ಇಚ್ಛೆಯಂತೆ ಪಾಲ್ಗೊಂಡಿದ್ದೇನೆ. ಟಿಪ್ಪು ಜಯಂತಿಯಲ್ಲಿ ಪಾಲ್ಗೊಳ್ಳಬಾರದು ಎಂದು ಯಾರು ಹೇಳಿಲ್ಲ. ಕೃಷ್ಣದೇವರಾಯರ ಆಳ್ವಿಕೆಯಲ್ಲಿ ಎಲ್ಲರನ್ನು ಒಂದೇ ರೀತಿ ನೋಡಲಾಗುತ್ತಿತ್ತು. ಇದರಲ್ಲಿ ಯಾವುದೇ ರಾಜಕೀಯವಿಲ್ಲ ಎಂದು ಹೇಳಿದರು.

    ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರ ಮತಗಳು ನಿರ್ಣಾಯಕವಾಗಿರುವ ಹಿನ್ನೆಲೆಯಲ್ಲಿ ಮುಸ್ಲಿಂ ಮತಗಳನ್ನು ಸೆಳೆಯಲು ಶಾಸಕ ಸತೀಶ್ ರೆಡ್ಡಿ ಪ್ಲಾನ್ ಮಾಡಿದ್ದು, ಟಿಪ್ಪು ಜಯಂತಿ ಪರ ಇರುವ ಫ್ಲೆಕ್ಸ್ ನಲ್ಲಿ  ಫೋಟೋ ಪ್ರಕಟವಾಗಿದೆ. ಬೊಮ್ಮನಹಳ್ಳಿಯ ಮಂಗಮ್ಮನಪಾಳ್ಯ ರಸ್ತೆಯಲ್ಲಿನ ಫ್ಲೆಕ್ಸ್ ನಲ್ಲಿ ಸತೀಶ್ ರೆಡ್ಡಿ ಅವರ ಫೋಟೋಗಳು ಪ್ರಕಟವಾಗಿದೆ.