Tag: ಸತೀಸ್ ಜಾರಕಿಹೊಳಿ

  • ‘ಡಿಕೆಶಿ ನನ್ನ ಗೆಳೆಯ’- ಅನರ್ಹ ಶಾಸಕ ರಮೇಶ್ ಜಾರಕಿಹೊಳಿ

    ‘ಡಿಕೆಶಿ ನನ್ನ ಗೆಳೆಯ’- ಅನರ್ಹ ಶಾಸಕ ರಮೇಶ್ ಜಾರಕಿಹೊಳಿ

    – ಸತೀಶ್ ಜಾರಕಿಹೊಳಿರನ್ನ ಧಾರವಾಡಕ್ಕೆ ಸೇರಿಸ್ಬೇಕು

    ಬೆಳಗಾವಿ: ಇಡಿ ಅಧಿಕಾರಿಗಳ ಬಂಧನದಲ್ಲಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರು ನನ್ನ ಗೆಳೆಯರಾಗಿದ್ದು, ಅವರನ್ನು ನಾನು ದೆಹಲಿಯಲ್ಲಿಯೇ ಭೇಟಿ ಮಾಡುತ್ತೇನೆ ಎಂದು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

    ಉಪಚುನಾವಣೆಯ ಹಿನ್ನೆಲೆಯಲ್ಲಿ ನಾಳೆ ಗೋಕಾಕ್ ನಲ್ಲಿ ಸಂಕಲ್ಪ ಸಮಾವೇಶ ಏರ್ಪಡಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ಅನರ್ಹ ಶಾಸಕ ರಮೇಶ್ ಕುಮಾರ್ ಅವರು ಬೆಂಗಳೂರಿನಿಂದ ಬೆಳಗಾವಿಗೆ ಆಗಮಿಸಿದ್ದರು. ಉಪಚುನಾವಣೆ ತಯಾರಿಯಲ್ಲಿರುವ ಅವರು, ನಾಳೆ ಸಮಾವೇಶ ನಡೆಸುವ ಮೂಲಕ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.

    ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಅವರು ನನ್ನ ಉತ್ತಮ ಗೆಳೆಯ. ರಾಜಕೀಯ ಹಾಗೂ ವೈಯಕ್ತಿಕ ಜೀವನ ಬೇರೆಯಾಗಿದ್ದು, ಅವನ ಕಷ್ಟ ಕಾಲದಲ್ಲಿ ನಾನು ಇರುತ್ತೇನೆ. ದೆಹಲಿಗೆ ಹೋದ ಬಳಿಕ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡುತ್ತೇನೆ. ಈ ಹಿಂದೆ ಅವರ ಭೇಟಿಗೆ ತೆರಳಿದ್ದೆ. ಆದರೆ ಭೇಟಿ ಸಾಧ್ಯವಾಗಲಿಲ್ಲ ಎಂದರು.

    ಇದೇ ವೇಳೆ ಸತೀಶ್ ಜಾರಕಿಹೊಳಿ ಅವರ ಬಗ್ಗೆ ಮಾತನಾಡಿದ ಅವರು, ಮಾಜಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ತಲೆ ಸರಿಯಲ್ಲ. ಅವರನ್ನ ಧಾರವಾಡಕ್ಕೆ ಸೇರಿಸಬೇಕು ಎಂದು ಹೇಳುವ ಮೂಲಕ ಪರೋಕ್ಷವಾಗಿ ಸತೀಶ್ ಜಾರಕಿಹೊಳಿರನ್ನು ಧಾರವಾಡ ಮಾನಸಿಕ ಅಸ್ವಸ್ಥರ ಆಸ್ಪತ್ರೆಗೆ ಸೇರಿಸಬೇಕು ಎಂದರು. ಅಲ್ಲದೇ ಕೆಲವು ಮಾಧ್ಯಮದವರು ಪ್ಯಾಕೇಜ್ ತೆಗೆಕೊಂಡು ನನ್ನ ಹೆಸರು ಕೆಡಸುತ್ತಿದ್ದಾರೆ. ಇದಕ್ಕೆ ನಾನು ಉತ್ತರ ಹೇಳಲು ಗೋಕಾಕ್‍ಗೆ ಬಂದಿದ್ದೇನೆ. ಅದರಲ್ಲೂ ಕೆಲ ಮಾಧ್ಯಮಗಳು ವಿಶೇಷ ಪ್ಯಾಕೇಜ್ ಪಡೆದಿವೆ. ನಾನು ಚಿಕ್ಕವನಾಗಿದ್ದಾಗಿನಿಂದಲೂ ದೇವಸ್ಥಾನಕ್ಕೆ ಹೋಗುತ್ತಿದ್ದೇನೆ. ನಾನು ದೇವಸ್ಥಾನ ಹೋದರೆ ಎಂಜಾಯ್ ಮಾಡುತ್ತಿದ್ದಾರೆ ಎಂದು ವರದಿ ಮಾಡುತ್ತಾರೆ ಎಂದು ಮಾಧ್ಯಮಗಳ ವಿರುದ್ಧ ಕಿಡಿಕಾರಿದರು.

    ಜಿಲ್ಲೆಯಲ್ಲಿ ಮತ್ತೆ ಪ್ರವಾಹ ಉಂಟಾಗುವ ಬಗ್ಗೆ ಮಾತನಾಡಿದ ಅವರು, ಈಗಾಗಲೇ ನಾನು ಕ್ಷೇತ್ರದಲ್ಲಿ ಈ ಬಗ್ಗೆ ಮಾಡಬೇಕಾದ ಕ್ರಮಗಳನ್ನು ಮಾಡುತ್ತಿದ್ದೇನೆ. ಮುಂದಿನ ದಿನಗಳಲ್ಲೂ ಇದು ಮುಂದುವರಿಯುತ್ತದೆ. ಕ್ಷೇತ್ರದ ಜನರ ನೆರವಿಗೆ ಬರುವ ಕಾರ್ಯ ಮಾಡುತ್ತೇನೆ. ಆದರೆ ನಾನು ಪ್ರಚಾರ ಪಡೆಯಲು ಬಯಸುವುದಿಲ್ಲ. ನನ್ನ ಬಗ್ಗೆ ಕ್ಷೇತ್ರದ ಜನರಿಗೆ ಗೊತ್ತಿದೆ ಎಂದರು.

  • ಸರ್ಕಾರ ಬೀಳಲು `ವಸ್ತು’ವೇ ಕಾರಣ- ಸತೀಶ್ ಜಾರಕಿಹೊಳಿ

    ಸರ್ಕಾರ ಬೀಳಲು `ವಸ್ತು’ವೇ ಕಾರಣ- ಸತೀಶ್ ಜಾರಕಿಹೊಳಿ

    ಬೆಳಗಾವಿ: ಮೈತ್ರಿ ಸರ್ಕಾರ ಉರುಳಲು ಜಾರಕಿಹೊಳಿ ಕುಟುಂಬ ಅಲ್ಲ ಒಂದು `ವಸ್ತು’ ಕಾರಣ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಬಿಳಲು `ವಸ್ತು’ನೇ ಕಾರಣವಾಗಿದೆ. ಆ ವಸ್ತುವಿನಿಂದಾಗಿ ಸರ್ಕಾರಕ್ಕೆ ಇಂತಹ ಪರಿಸ್ಥಿತಿ ಬಂದಿದೆ. ಆ `ವಸ್ತು’ ಯಾವುದೆಂದು ಸಮಯ ಬಂದಾಗ ಹೇಳುತ್ತೆನೆ, ಹೇಳಲೇ ಬೇಕು. ಇಲ್ಲದಿದ್ದರೆ ಇತಿಹಾಸದಲ್ಲಿ ನಮ್ಮ ಕುಟುಂಬದಿಂದಲೇ ಸರ್ಕಾರ ಉರುಳಿತು ಎಂಬ ಅಪಮಾನ ಉಳಿಯುತ್ತದೆ. ಆದರೆ ನಮ್ಮ ಕುಟುಂಬದಿಂದ ಉರುಳಲಿಲ್ಲ, ಒಂದು ‘ವಸ್ತು’ವಿನಿಂದಲೇ ಸರ್ಕಾರಕ್ಕೆ ಹೀಗಾಯಿತು ಎಂದು ತಿಳಿಸಿದ್ದಾರೆ.

    ರಾಜ್ಯದ ಬಹಳ ಜನಕ್ಕೆ ಸರ್ಕಾರ ಯಾಕೆ ಬಿದ್ದಿದೆ ಎಂದು ಗೊತ್ತಿಲ್ಲ. ಹೀಗಾಗಿ ಅದನ್ನು ತಿಳಿಸುವುದು ನನ್ನ ಕರ್ತವ್ಯವಾಗಿದ್ದು, ಸಮಯ ಬಂದಾಗ ಸರ್ಕಾರ ಬಿದ್ದಿದ್ದರ ಹಿಂದಿನ ಕಾರಣ ರಿವೀಲ್ ಮಾಡುವುದಾಗಿ ಅವರು ಹೇಳಿದರು.

    ಇದೇ ಸಂದರ್ಭದಲ್ಲಿ ಅನರ್ಹ ವಿಚಾರ ಸಂಬಂಧ ಮಾತನಾಡಿದ ಅವರು, ಶಾಸಕರ ಅನರ್ಹತೆಯನ್ನ ಬಿಜೆಪಿಯವರು ಬ್ಲಾಕ್ ಮೇಲ್ ತಂತ್ರ ಎಂದು ಅರೋಪ ಮಾಡಿದ್ದಾರೆ. ಆದರೆ ಸುಪ್ರೀಂ ಕೋರ್ಟ್ ಈ ಬಗ್ಗೆ ಹೇಳಿದ್ದರು ಕೂಡ ಸ್ಪೀಕರ್ ಅವರಿಗೆ ತಮ್ಮದೇ ಆದ ತೀರ್ಮಾನ ಕೈಗೊಳ್ಳಲು ಅವಕಾಶ ಕೊಟ್ಟಿದ್ದಾರೆ. ಇಂತಹ ಸ್ಪೀಕರ್ ಇನ್ನು ಮುಂದೆ ಸಿಗಲು ಸಾಧ್ಯವಿಲ್ಲ. ಅವರು ನಮ್ಮ ಪಕ್ಷದವರೇ ಆಗಿರಬಹುದು. ಆದರೆ ನಿಯಮಗಳನ್ನು ಬಿಟ್ಟು ಏನೂ ಮಾಡಿಲ್ಲ. ಶಾಸಕರ ಅತೃಪ್ತತೆ ಬಗ್ಗೆ ನಾನು ಮೊದಲೇ ಮಾಹಿತಿ ನೀಡಿದ್ದೆ. ನಮ್ಮವರು ವಾಪಸ್ ಬರುತ್ತಾರೆ ಎಂಬ ವಿಶ್ವಾಸ ಇತ್ತು. ಆದರೆ ಇಂದು ತೆಗೆದುಕೊಂಡಿರುವ ನಿರ್ಧಾರ ಅತೃಪ್ತ ಶಾಸಕರಿಗೆ ಪಾಠ ಆಗಲಿದೆ ಎಂದರು.

    ಪಕ್ಷ ವಿರೋಧಿ ಚುಟುವಟಿಕೆ ನಡೆಸಿದ ಶಾಸಕರನ್ನು ಅನರ್ಹಗೊಳಿಸಬೇಕಾಗಿದೆ. ನಿಯಮಗಳ ಅನ್ವಯ ಸ್ಪೀಕರ್ ಅವರು ಶಾಸಕರಿಗೆ ಸಮಯ ನೀಡಲೇ ಬೇಕಿತ್ತು. ಈಗ ಅನರ್ಹವಾದ ಶಾಸಕರಿಗೂ 3 ರಿಂದ 4 ಬಾರಿ ಅವಕಾಶ ಕೊಟ್ಟಿದ್ದಾರೆ. ಮುಂದಿನ ನಿರ್ಧಾರ ಬಗ್ಗೆ ಕಾದು ನೋಡುತ್ತಿದ್ದೇನೆ. ಅನರ್ಹ ಗೊಂಡ ಶಾಸಕರು ಕೋರ್ಟಿಗೆ ಹೋದರೂ ಪ್ರಕರಣ ಇತ್ಯರ್ಥ ಆಗಲು ಸಮಯಾವಕಾಶ ಬೇಕಾಗುತ್ತದೆ ಎಂದರು.

  • ರಮೇಶ್ ರಾಜೀನಾಮೆ ‘ರಿಲೀಸ್ ಆಗದ ಸಿನಿಮಾದಂತೆ’: ಸತೀಶ್ ಜಾರಕಿಹೊಳಿ

    ರಮೇಶ್ ರಾಜೀನಾಮೆ ‘ರಿಲೀಸ್ ಆಗದ ಸಿನಿಮಾದಂತೆ’: ಸತೀಶ್ ಜಾರಕಿಹೊಳಿ

    – ಸಿದ್ದರಾಮಯ್ಯ ಸಿಎಂ ಚಾಪ್ಟರ್ ಕ್ಲೋಸ್

    ಬೆಳಗಾವಿ: ಮೇ 29 ರಿಂದ ಮತ್ತೆ ರಾಜ್ಯದಲ್ಲಿ ಆಪರೇಷನ್ ಕಮಲ ಆರಂಭ ಆಗಲಿದ್ದು, ಆದರೆ ಈ ಬಾರಿ ಮಾನಸಿಕವಾಗಿ ಆಪರೇಷನ್ ಕಮಲ ಎದುರಿಸಲು ಸಿದ್ಧರಿದ್ದೇವೆ. ರಮೇಶ್ ಜಾರಕಿಹೊಳಿ ಅವರ ರಾಜೀನಾಮೆ ‘ರಿಲೀಸ್ ಆಗದ ಸಿನಿಮಾದಂತೆ’ ಎಂದು ಅರಣ್ಯ ಸಚಿವ ಸತೀಸ್ ಜಾರಕಿಹೊಳಿ ಸೋದರನಿಗೆ ಟಾಂಗ್ ಕೊಟ್ಟಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಆಪರೇಷನ್ ಮಾಡಿದರೆ ನಾವು ಉಲ್ಟಾ ಆಪರೇಷನ್ ಮಾಡುತ್ತೇವೆ. ಆಪರೇಷನ್ ಕಮಲ ಗೋವಾಕ್ಕೆ ಶಿಫ್ಟ್ ಆದ್ರು ಆಗಬಹುದು. ನಮ್ಮ ಶಾಸಕರು ಯಾರು ಅವರ ಜತೆಗೆ ಹೋಗುವುದಿಲ್ಲ. ಆದರೆ ಮೋದಿ ಹೊಡೆತಕ್ಕೆ ಸಿದ್ದರಾಮಯ್ಯ ಸಿಎಂ ಮಾಡುವುದು ಕ್ಲೋಸ್ ಆಗಿದೆ. ಹೈಕಮಾಂಡ್ ಹೇಳಿದಂತೆ ನಾಲ್ಕು ವರ್ಷ ಲೆಫ್ಟ್ ರೈಟ್ ಮಾಡುವುದಷ್ಟೇ ನಮ್ಮ ಕೆಲಸ ಎಂದು ಸಿದ್ದು ಸಿಎಂ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

    ರಮೇಶ್ ಜಾರಕಿಹೊಳಿ ‘ಕರಿಮಾಯೆ’ ಎಂಬ ಪಿಕ್ಚರ್ ಇದ್ದಂಗೆ. ಆ ಸಿನಿಮಾ ಬಿಡುಗಡೆ ಆಗಲಿಲ್ಲ ಅದೇ ರೀತಿ ಈಗ ರಮೇಶ್ ರಾಜೀನಾಮೆ ಬಿಡುಗಡೆಯಾಗದ ಸಿನಿಮಾ ಇದ್ದಂತೆ. ಅವರ ಮೇಲೆ ಸ್ಪೀಕರ್ ಕ್ರಮಕೈಗೊಳ್ಳಬೇಕು. ರಾಜ್ಯದಲ್ಲಿ ಕಾಂಗ್ರೆಸ್‍ಗೆ ಈ ಸ್ಥಿತಿ ಬರಲು ಜೆಡಿಎಸ್ ಜತೆಗೆ ಹೊಂದಾಣಿಕೆ ಮಾಡಿಕೊಂಡಿದ್ದೆ ಕಾರಣ ಇರಬಹುದು. ಸರಿ ಮಾಡಿಕೊಳ್ಳಲು ನಮಗೆ ಇನ್ನೂ ನಾಲ್ಕು ವರ್ಷ ಸಮಯ ಇದೆ. ಹೊಂದಾಣಿಕೆ ಮಾಡಿಕೊಂಡ ಪರಿಣಾಮ ಪಕ್ಷದ ಮೇಲೆ ಉಂಟಾಗಿದ್ದು, ಜೆಡಿಎಸ್ ಪಕ್ಷವನ್ನು ಒಪ್ಪಿಕೊಳ್ಳದವರು, ಕಾಂಗ್ರೆಸ್ ಪಕ್ಷವನ್ನು ದ್ವೇಷ ಮಾಡುವ ಸ್ಥಿತಿ ನಿರ್ಮಾಣ ಆಗಿದೆ. ಆದರೆ ಸದ್ಯ ಜೆಡಿಎಸ್ ನಾಯಕರು ಕೂಡ ನಮ್ಮದು ತಪ್ಪಾಗಿದೆ ಎಂದು ಒಪ್ಪಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಆಪರೇಷನ್ ಕಮಲಕ್ಕೆ ಅವಕಾಶ ಮಾಡಿಕೊಡದಂತೆ ನಾವು ಪ್ರಯತ್ನ ಮಾಡುತ್ತಿದ್ದೇವೆ ಎಂದರು.

    ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷ ಸ್ಥಾನದಲ್ಲೇ ಮುಂದುವರಿಯುತ್ತಾರೆ. ಸೋನಿಯಾ ಗಾಂಧಿ ಆ ಸ್ಥಾನಕ್ಕೆ ಬರುವುದಿಲ್ಲ. ರಾಜ್ಯ ಅಧ್ಯಕ್ಷ ಸ್ಥಾನದಲ್ಲೂ ಬದಲಾವಣೆ ಆಗಲ್ಲ, ದಿನೇಶ್ ಗುಂಡೂರಾವ್ ಅವರು ಮುಂದುವರಿಯುತ್ತಾರೆ. ಉಳಿದಂತೆ ಖರ್ಗೆ ರಾಜ್ಯ ರಾಜಕಾರಣಕ್ಕೆ ಬರುವುದು ಅವರಿಗೆ ಬಿಟ್ಟ ವಿಚಾರ. ಆದರೆ ನಾಲ್ಕು ವರ್ಷ ದಲಿತ ಸಿಎಂ ಪ್ರಶ್ನೆ ಇಲ್ಲ ಕುಮಾರಸ್ವಾಮಿ ಮುಂದುವರಿಯುತ್ತಾರೆ ಸ್ಪಷ್ಟಪಡಿಸಿದರು.