Tag: ಸತ್ಯ

  • BBK 11: 1 ಲಕ್ಷಕ್ಕೂ ಅಧಿಕ ವೋಟ್ ಗಳಿಸಿ ದೊಡ್ಮನೆ ಸ್ವರ್ಗಕ್ಕೆ ಕಾಲಿಟ್ಟ ಗೌತಮಿ

    BBK 11: 1 ಲಕ್ಷಕ್ಕೂ ಅಧಿಕ ವೋಟ್ ಗಳಿಸಿ ದೊಡ್ಮನೆ ಸ್ವರ್ಗಕ್ಕೆ ಕಾಲಿಟ್ಟ ಗೌತಮಿ

    ಬಿಗ್ ಬಾಸ್ (Bigg Boss Kannada 11) ಪ್ರಾರಂಭಕ್ಕೂ ಮೊದಲೇ ಗೌತಮಿ ಜಾದವ್ (Gouthami Jadav) ಹೆಸರು ರಿವೀಲ್ ಆಗಿತ್ತು. ಇದೀಗ ಅವರು 1 ಲಕ್ಷಕ್ಕೂ ಅಧಿಕ ವೋಟ್ ಗಳಿಸಿ ದೊಡ್ಮನೆಯ ಸ್ವರ್ಗಕ್ಕೆ ಕಾಲಿಟ್ಟಿದ್ದಾರೆ. ಇದನ್ನೂ ಓದಿ:BBK 11: ವಿಶೇಷ ಅಧಿಕಾರದೊಂದಿಗೆ ಸ್ವರ್ಗದ ಮನೆಗೆ ಕಾಲಿಟ್ಟ ಭವ್ಯಾ, ಯಮುನಾ

    ಸತ್ಯ ಸೀರಿಯಲ್ ಮೂಲಕ ಖ್ಯಾತಿ ಗಳಿಸಿದ್ದ ನಟಿ ಗೌತಮಿ ಅವರು ಸೆ.28ರಂದೇ ಬಿಗ್ ಬಾಸ್‌ಗೆ ಬರುವ ರಾಜ ರಾಣಿ ಶೋನಲ್ಲಿ ರಿವೀಲ್ ಆಗಿತ್ತು. ರಿವೀಲ್ ಆದ 15 ನಿಮಿಷಗಳಲ್ಲಿ 1 ಲಕ್ಷ 16 ಸಾವಿರಕ್ಕೂ ಅಧಿಕ ವೋಟ್ ಪಡೆದು ಇಂದು (ಸೆ.29) ಬಿಗ್ ಬಾಸ್‌ನ ಸ್ವರ್ಗದ ಲೋಕಕ್ಕೆ ಅವರು ಎಂಟ್ರಿ ಕೊಟ್ಟಿದ್ದಾರೆ.

    ಅಂದಹಾಗೆ, ಮೊದಲ ಎರಡು ಸ್ವರ್ಧಿಗಳಾಗಿ ಭವ್ಯಾ(Bhavya Gowda) ಮತ್ತು ಯಮುನಾ ಕಾಲಿಟ್ಟಿದ್ದಾರೆ. ಬಳಿಕ ಧನರಾಜ್, ಗೌತಮಿ ಮತ್ತು ಅನುಷಾ ರೈ ಜೊತೆ ಧರ್ಮ ಕೀರ್ತಿರಾಜ್ ದೊಡ್ಮನೆಗೆ ಎಂಟ್ರಿ ಕೊಟ್ಟಿದ್ದಾರೆ.

  • ‘ಬಿಗ್ ಬಾಸ್’ ಮೊದಲ ಸ್ಪರ್ಧಿ ರಿವೀಲ್- ದೊಡ್ಮನೆಗೆ ಗೌತಮಿ ಜಾದವ್

    ‘ಬಿಗ್ ಬಾಸ್’ ಮೊದಲ ಸ್ಪರ್ಧಿ ರಿವೀಲ್- ದೊಡ್ಮನೆಗೆ ಗೌತಮಿ ಜಾದವ್

    ಅಂತೂ ಇಂತೂ ಬಿಗ್‌ ಬಾಸ್‌ ಸ್ಪರ್ಧಿಗಳ ಕುತೂಹಲಕ್ಕೆ ತೆರೆಬಿದ್ದಿದೆ. ದೊಡ್ಮನೆಯ ಬರಲಿರುವ ಮೊದಲ ಸ್ಪರ್ಧಿಯ ಬಗ್ಗೆ ಅನಾವರಣ ಆಗಿದೆ.  ಕಿರುತೆರೆ ಫೇಮಸ್‌ ನಟಿ ಗೌತಮಿ ಜಾದವ್ ಅವರು ಬಿಗ್‌ ಬಾಸ್‌ ಕನ್ನಡ ಸೀಸನ್‌ 11ಕ್ಕೆ (Bigg Boss Kannada 11) ಮೊದಲ ಸ್ಪರ್ಧಿಯಾಗಿ ಎಂಟ್ರಿ ಕೊಡಲಿದ್ದಾರೆ.

    ಇದು ‘ರಾಜ ರಾಣಿ’ ಗ್ರ್ಯಾಂಡ್‌ ಫಿನಾಲೆಯಲ್ಲಿ ಗೌತಮಿ (Gouthami Jadav) ಹೆಸರು ರಿವೀಲ್‌ ಆಗಿದೆ. ಸತ್ಯ (Sathya) ಸೀರಿಯಲ್‌ ಖ್ಯಾತಿಯ ಗೌತಮಿ ಇನ್ಮುಂದೆ ಬಿಗ್‌ ಬಾಸ್‌ ಮನೆಯಲ್ಲಿ ನೋಡಬಹುದುದಾಗಿದೆ, ಹಾಗಾದ್ರೆ ಅವರು ಸ್ಪರ್ಗಕ್ಕೆ ಹೋಗ್ತಾರಾ? ಅಥವಾ ನರಕಕ್ಕೆ ಹೋಗ್ತಾರಾ? ಅದು ಪ್ರೇಕ್ಷಕರಿಗೆ ನಿರ್ಧರಿಸುವ ಅವಕಾಶವಿದೆ.

    ಅಂದಹಾಗೆ, ನಟಿ ಗೌತಮಿ ನಾಗ ಪಂಚಮಿ ಸೀರಿಯಲ್‌ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದರು.

  • ‘ಸತ್ಯ’ ಕಿರುಚಿತ್ರದ ಟ್ರೈಲರ್ ರಿಲೀಸ್: ಇದು ಮರ್ಡರ್ ಮಿಸ್ಟ್ರಿ ಕತೆ

    ‘ಸತ್ಯ’ ಕಿರುಚಿತ್ರದ ಟ್ರೈಲರ್ ರಿಲೀಸ್: ಇದು ಮರ್ಡರ್ ಮಿಸ್ಟ್ರಿ ಕತೆ

    ಸಿನಿಮಾ ಮಾಡಬೇಕೆಂಬ ಆಸಕ್ತಿಯಿಂದ ಐಟಿ ಕಂಪನಿಯಲ್ಲಿ ಒಳ್ಳೇ ಉದ್ಯೋಗವಿದ್ದರೂ ಸಹ  ಚಿತ್ರರಂಗಕ್ಕೆ ಬಂದಿದ್ದಾರೆ ಆನಂದ್ ಅಹಿಪತಿ. ಸಿನಿಮಾ ಮಾಡುವುದಕ್ಕೂ  ಮುನ್ನ ಅದೇ ಕ್ವಾಲಿಟಿಯಲ್ಲಿ ಸತ್ಯ (Satya) ಎಂಬ ಕಿರುಚಿತ್ರವನ್ನು ನಿರ್ದೇಶಿಸಿದ್ದಾರೆ. ಥ್ರಿಲ್ಲರ್, ಮರ್ಡರ್ ಮಿಸ್ಟ್ರಿ ಕಥಾಹಂದರ ಒಳಗೊಂಡ  ಆ ಶಾರ್ಟ್ ಫಿಲಂನ ಟ್ರೈಲರ್ (Trailer) ಬಿಡುಗಡೆ ಕಾರ್ಯಕ್ರಮವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.

    ಆನಂದ್ ಅಹಿಪತಿ  (Anand Ahipati) ಅವರೇ ಕಥೆ, ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡುವುದರ ಜೊತೆಗೆ ನಾಯಕನ ಪಾತ್ರದಲ್ಲೂ ಕಾಣಿಸಿಕೊಂಡಿದ್ದಾರೆ. ಯಾವುದೇ ಚಿತ್ರಕ್ಕೂ  ಕಮ್ಮಿಯಿಲ್ಲದ ಹಾಗೆ ಈ ಕಿರು ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

    ಈ ಸಂದರ್ಭದಲ್ಲಿ ಮಾತನಾಡಿದ ಆನಂದ್, 3 ವರ್ಷದ ಹಿಂದೆ ಐಟಿ ಕಂಪನಿಯಲ್ಲಿ ವರ್ಕ್ ಮಾಡ್ತಿದ್ದೆ.  ಆದರೆ ನನಗೆ ಇಂಟರೆಸ್ಟ್ ಇದ್ದದ್ದು ಆಕ್ಟಿಂಗ್ ನಲ್ಲಿ. ಅನುಪಂ ಖೇರ್ ಇನ್ ಸ್ಟಿಟ್ಯೂಟ್ ನಲ್ಲಿ ಕೋರ್ಸ್ ಮುಗಿಸಿ, ಈ ಶಾರ್ಟ್ ಫಿಲಂನಲ್ಲಿ ಅಭಿನಯಿಸಿದೆ. ಹಠ ಹಿಡಿದು 38 ನಿಮಿಷಗಳ ಈ ಚಿತ್ರ ನಿರ್ದೇಶನ‌ ಮಾಡಿದ್ದೇನೆ. ಇದು ಪ್ರೀಕ್ವೇಲ್ ಟು ಫ್ಯೂಚರ್ ಫಿಲಂ ಅನ್ನಬಹುದು, ಹಣದ ಬಗ್ಗೆ ಯೋಚಿಸದೆ ಕ್ವಾಲಿಟಿ ಹೆಚ್ಚು ಆದ್ಯತೆ ಕೊಟ್ಟು ಈ ಚಿತ್ರ ಮಾಡಿದ್ದೇನೆ ಅಂತಾರೆ.

    ಮುಂದುವರೆದು ಮಾತನಾಡಿದ ಆನಂದ, ಸತ್ಯ ಅಂದ್ರೆ ನಿಜ, ಈತ ಒಬ್ಬ ಸೈಕೋ ಕಿಲ್ಲರ್, ಆತನ ಮನದಲ್ಲಿ  ಏನೇನು ನಡೀತಿದೆ ಅನ್ನೋದೇ ಈ ಚಿತ್ರದ ಕಾನ್ಸೆಪ್ಟ್. ಆತ ಏನೇನು ಮಾಡ್ತಾನೆ, ಯಾಕೆ ಮಾಡ್ತಾನೆ, ಹೇಗೆ ಮಾಡ್ತಾನೆ ಅಂತ ಈ ಚಿತ್ರದಲ್ಲಿ ತೋರಿಸಿದ್ದೇವೆ. ಕೊನೇವರೆಗೆ ನೋಡಿದಾಗ ಅದು ಅರ್ಥವಾಗುತ್ತದೆ ಎಂದರು. ನಾಯಕಿ ಪಾತ್ರ ಮಾಡಿರುವ ಸೌಮ್ಯ ಮಾತನಾಡಿ ಈ ಸಿನಿಮಾ ಆನಂದ್ ರ ಕನಸು, ಇದೊಂದು ವಿಭಿನ್ನ ಜಾನರ್ ಸಿನಿಮಾ,  ನಾನೊಬ್ಬ ಕಲಾವಿದೆಯಾಗೇ ಚಿತ್ರದಲ್ಲಿ ಕಾಣಿಸಿಕೊಂಡಿದ್ದೇನೆ  ಎಂದರು.

     

    ದುರ್ಗಾ ಸಿನಿಮಾಸ್ ಮೂಲಕ ನಿರ್ದೇಶಕ ಆನಂದ್ ಅಹಿಪತಿ  ಅವರೇ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ 2 ಹಾಡುಗಳಿದ್ದು, ಅಜಯ್  ಶಿವರಾಜ್ ಸಂಗೀತ ನಿರ್ದೆಶನ ಮಾಡಿದ್ದಾರೆ. ಕಾರ್ತೀಕ್  ಸಿದ್ದರಾಜು ಕ್ಯಾಮೆರಾ ವರ್ಕ್ ನಿಭಾಯಿಸಿದ್ದಾರೆ.

  • ಕಿರುತೆರೆಯತ್ತ ಸಪ್ತಮಿ- ‘ಸತ್ಯ’ ಸೀರಿಯಲ್‌ಗೆ ಕಾಂತಾರ ನಟಿ ಸಾಥ್

    ಕಿರುತೆರೆಯತ್ತ ಸಪ್ತಮಿ- ‘ಸತ್ಯ’ ಸೀರಿಯಲ್‌ಗೆ ಕಾಂತಾರ ನಟಿ ಸಾಥ್

    ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಿರುವ ‘ಕಾಂತಾರ’ (Kantara) ಬ್ಯೂಟಿ ಸಪ್ತಮಿ ಗೌಡ (Sapthami Gowda) ಅವರು ಟಿವಿ ಪ್ರೇಕ್ಷಕರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಸಪ್ತಮಿ ಇದೀಗ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದಾರೆ. ಹಾಗಾದ್ರೆ ಸಿನಿಮಾ ಬಿಟ್ಟು ಸೀರಿಯಲ್‌ಗೆ ಎಂಟ್ರಿ ಕೊಟ್ರಾ? ಅಂತ ನೀವು ಅಂದುಕೊಂಡಿರಬಹುದು. ಆದರೆ ಅಸಲಿ ವಿಚಾರ ಬೇರೆ ಇದೆ. ಇದೀಗ ಈ ಸ್ಟಾರ್ ನಟಿ ಸೀರಿಯಲ್ ಪ್ರಚಾರಕ್ಕಿಳಿದಿದ್ದಾರೆ.

    ರಿಷಬ್ ಶೆಟ್ಟಿಗೆ (Rishab Shetty) ನಾಯಕಿಯಾಗಿ ‘ಕಾಂತಾರ’ ಮೂಲಕ ಸಕ್ಸಸ್ ಕಂಡ ನಟಿ ಸಪ್ತಮಿ ಇದೀಗ ಬಹುಭಾಷೆಗಳಲ್ಲಿ ಮಿಂಚುತ್ತಿದ್ದಾರೆ. ಇದರ ನಡುವೆ ಕಿರುತೆರೆಗೆ ಸಪ್ತಮಿ ಹಾಜರಿ ಹಾಕಿದ್ದಾರೆ. ಇತ್ತೀಚೆಗೆ ‘ಶ್ರೀರಸ್ತು ಶುಭಮಸ್ತು’ ಮತ್ತು ‘ಅಮೃತಧಾರೆ’ (Amruthadaare) ಸೀರಿಯಲ್‌ಗೆ ಸಾಥ್ ಕೊಟ್ಟ ನಂತರ ಸತ್ಯ (Sathya Serial) ಧಾರಾವಾಹಿಗೆ ನಟಿ ಪ್ರಚಾರಕ್ಕೆ ಸಾಥ್ ನೀಡಿದ್ದಾರೆ. ಇದನ್ನೂ ಓದಿ:ಸುದೀಪ್ ಗಾಗಿ ರಕ್ಷಿತ್ ಶೆಟ್ಟಿ ಸಿನಿಮಾ: ಕಿಚ್ಚ ಹೇಳಿದ್ದೇನು?

    ಸೀರಿಯಲ್ ಪ್ರಚಾರಕ್ಕೆ ಸಪ್ತಮಿ ಬಂದಿದ್ದಾರೆ. ಈ ಹಿಂದೆ ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿಯ ಪಾತ್ರಗಳ ನಿರೂಪಣೆ ಮಾಡಿದ್ದರು. ಅದಾದ ಬಳಿಕ ‘ಅಮೃತಧಾರೆ’ ಸೀರಿಯಲ್ ನಿರೂಪಣೆ ಮಾಡಿದ್ದರು. ಇದೀಗ ‘ಸತ್ಯ’ ಸೀರಿಯಲ್ ಕಥೆಯಲ್ಲಿ ಕಥಾನಾಯಕಿಗೆ ಸತ್ಯಗೆ ಪೊಲೀಸ್ ಆಗುವ ಕನಸಿರುತ್ತದೆ. ಆ ಕನಸನ್ನು ನಾಯಕಿ ನನಸು ಮಾಡಿಕೊಳ್ತಾರಾ ಎಂಬುದೇ ಕಥೆಯ ಎಳೆಯಾಗಿದೆ. ಇದನ್ನೇ ಸಪ್ತಮಿ ನಿರೂಪಣೆ ಮಾಡಿ ಪ್ರೇಕ್ಷಕರ ಮನಮುಟ್ಟುವಂತೆ ಹೇಳಿದ್ದಾರೆ.

    ‘ಕಾಂತಾರ’ ಚಿತ್ರದ ಸಕ್ಸಸ್ ಅನ್ನು ನಟಿ ಸದುಪಯೋಗಪಡಿಸಿಕೊಂಡಿದ್ದಾರೆ. ಕನ್ನಡದ ಜೊತೆ ಜೊತೆಗೆ ಬಾಲಿವುಡ್ ಸಿನಿಮಾಗಳಲ್ಲಿ ಸಪ್ತಮಿ ಬ್ಯುಸಿಯಾಗಿದ್ದಾರೆ. ಟಾಲಿವುಡ್‌ನಲ್ಲಿಯೂ ಕನ್ನಡದ ಬೆಡಗಿಗೆ ಸಖತ್ ಬೇಡಿಕೆಯಿದೆ.

    ತೆಲುಗು ಅಂಗಳದಲ್ಲಿ ಮೊದಲೇ ಕನ್ನಡತಿಯರ ದರ್ಬಾರ್ ಜಾಸ್ತಿಯಾಗಿದೆ. ರಶ್ಮಿಕಾ ಮಂದಣ್ಣ, ಶ್ರೀಲೀಲಾ, ರುಕ್ಮಿಣಿ ವಸಂತ್ ಮಧ್ಯೆ ಸಪ್ತಮಿ ಕೂಡ ತಮ್ಮ ಚಾರ್ಮ್ ಉಳಿಸಿಕೊಂಡಿದ್ದಾರೆ. ಅಳೆದು ತೂಗಿ ಸಿನಿಮಾ ಒಪ್ಪಿಕೊಳ್ತಿದ್ದಾರೆ.

  • ‘ರಾಮಾ ರಾಮಾ ರೇ’ ಖ್ಯಾತಿಯ ಸತ್ಯರ ಹೊಸ ಚಿತ್ರದ ಅಪ್ ಡೇಟ್

    ‘ರಾಮಾ ರಾಮಾ ರೇ’ ಖ್ಯಾತಿಯ ಸತ್ಯರ ಹೊಸ ಚಿತ್ರದ ಅಪ್ ಡೇಟ್

    ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ, ರಾಮಾ ರಾಮಾ ರೇ ಖ್ಯಾತಿಯ ಸತ್ಯ (Satya) ಇದೀಗ ಮತ್ತೊಂದು ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಜೊತೆಗೆ ಪಾತ್ರವೊಂದನ್ನೂ ನಿರ್ವಹಿಸಿದ್ದಾರೆ. ಸತ್ಯ ಪಿಕ್ಚರ್ಸ್ ಗೂಡಿನಿಂದ ಈ ಹೊಸ ಸಿನಿಮಾ ಬರುತ್ತಿದ್ದು, ಚಿತ್ರಕ್ಕೆ X&Y ಎಂದು ಹೆಸರಿಟ್ಟಿದ್ದಾರೆ.

    ಇದು ಇವತ್ತಿನ ಜನರೇಷನ್ ಕಥೆ. ಅಪ್ಪ-ಅಮ್ಮ ಆದವರ, ಅಪ್ಪ-ಅಮ್ಮ ಆಗುತ್ತಿರುವವರ, ಅಪ್ಪ –ಅಮ್ಮ ಆಗಬೇಕು ಎಂದುಕೊಂಡವರ ಕಥೆ. ಹಾಗೆಯೇ ಇವತ್ತಿನ ಹುಡುಗ-ಹುಡುಗಿಯರ ಕಥೆ, ಇವತ್ತಿನ ಮಕ್ಕಳ ಕಥೆ. ಇದೊಂದು ಕಾಮಿಡಿ ಜಾನರ್ ಸಿನಿಮಾ ಆಗಿದ್ದು ಅತಿ ಸೂಕ್ಷ್ಮ ವಿಚಾರಗಳನ್ನು ಅಷ್ಟೇ ಸರಳವಾಗಿ ಅದರಲ್ಲೂ ನಗುನಗುತ್ತಾ ನೋಡುವಂತಹ ಕಥೆಯಾಗಿ ಪ್ರೇಕ್ಷಕರ ಮುಂದೆ ತರುತ್ತಿದ್ದಾರೆ ಸತ್ಯ.

    ಸಿನಿಮಾದ ಮೊದಲ ಹಂತದ ಚಿತ್ರೀಕರಣ ಮುಗಿದಿದ್ದು, ಎರಡನೇ ಹಂತದ ಚಿತ್ರೀಕರಣಕ್ಕೆ ತಯಾರಿ ನಡೆಯುತ್ತಿದೆ. ವಾಸುಕಿ-ವೈಭವ್ ಸಂಗೀತ, ಲವಿತ್ ಛಾಯಾಗ್ರಹಣ, ಬಿ.ಎಸ್ ಕೆಂಪರಾಜು ಸಂಕಲನ, ವರದರಾಜ್ ಕಾಮತ್ ಕಲಾ ನಿರ್ದೇಶನ ಚಿತ್ರಕ್ಕಿದೆ.  ಅಥರ್ವ ಪ್ರಕಾಶ, ಬೃಂದಾ ಆಚಾರ್ಯ, ಅಯನ, ಸುಂದರ್ ವೀಣಾ, ವೀಣಾ ಸುಂದರ್, ದೊಡ್ಡಣ್ಣ ಹೀಗೆ ಹಿರಿಯ ಮತ್ತು ಹೊಸ ಕಲಾವಿದರ ಸಂಗಮ ಚಿತ್ರದಲ್ಲಿದೆ.

     

    ಇದು ಈ ಸಂಸ್ಥೆಯ ನಾಲ್ಕನೇ ಸಿನಿಮಾ. ಈ ಹಿಂದಿನ ಮೂರು ಚಿತ್ರಗಳಿಗೆ ನೀವು ತೋರಿದ ಪ್ರೀತಿ, ತಪ್ಪುಮಾಡಿದಾಗ ನೀವು ತಿದ್ದಿದ ರೀತಿ, ಈ ಸಿನಿಮಾದಲ್ಲೂ ಬೇಕೇ ಬೇಕೆಂಬ ಬೇಡಿಕೆ ನಮ್ಮದು. ಮೊದಲ ಪೋಸ್ಟರನ್ನು ನಿಮ್ಮ ಜೊತೆ ಹಂಚಿಕೊಳ್ಳುತ್ತಾ ನಿಮ್ಮ ಅನಿಸಿಕೆಗಾಗಿ ಎದುರುನೋಡುತ್ತಿದ್ದೇನೆ ಎಂದು ಸತ್ಯ ಕೇಳಿಕೊಂಡಿದ್ದಾರೆ.

  • ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಸಾಗರ್, ಸಿರಿ ರಾಜು ದಂಪತಿ

    ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಸಾಗರ್, ಸಿರಿ ರಾಜು ದಂಪತಿ

    ಕಿರುತೆರೆಯ ಜನಪ್ರಿಯ ‘ಸತ್ಯ’ (Sathya Serial) ಸೀರಿಯಲ್ ಹೀರೋ ಸಾಗರ್- ಸಿರಿ ರಾಜು (Siri Raju) ದಂಪತಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಬಗ್ಗೆ ಸಾಗರ್ ದಂಪತಿ ಸ್ಪೆಷಲ್ ಫೋಟೋಶೂಟ್ ಹಂಚಿಕೊಳ್ಳುವ ಮೂಲಕ ಸಿಹಿಸುದ್ದಿ ನೀಡಿದ್ದಾರೆ.

    ನಟಿ ಸಿರಿ ರಾಜು ಅವರು ಮಗುವಿನ ಶೂ ಫೋಟೋ ಶೇರ್ ಮಾಡಿ, ‘ಪವಾಡಗಳಿಗೂ ಸಮಯ ಹಿಡಿಯುತ್ತದೆ’ ಎಂದು ಗುಡ್ ನ್ಯೂಸ್ ತಿಳಿಸಿದ್ದರು. ಇದೀಗ ‘ಸತ್ಯ’ ಹೀರೋ ಸಾಗರ್ (Sagar Biligowda) ಪತ್ನಿ ಸಿರಿ ಬೇಬಿ ಬಂಪ್ ಫೋಟೋ ಹಂಚಿಕೊಂಡಿದ್ದಾರೆ. ಮಗುವಿನ ಆಗಮನದ ನಿರೀಕ್ಷೆಯಲ್ಲಿರುವ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ಸಂಭ್ರಮಿಸಿದ್ದಾರೆ.

    ಕಂದು ಬಣ್ಣದ ಟಾಪ್ ಧರಿಸಿ ಸಿರಿ ಬೇಬಿ ಬಂಪ್ ಲುಕ್ ತೋರಿಸಿದ್ದಾರೆ. ಪತ್ನಿ ಸಿರಿ ಜೊತೆ ಸಾಗರ್ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿರುವ ಸಾಗರ್‌ ದಂಪತಿಗೆ ಆಪ್ತರು, ಅಭಿಮಾನಿಗಳು ಶುಭಕೋರುತ್ತಿದ್ದಾರೆ. ಇದನ್ನೂ ಓದಿ:ಬರೋಬ್ಬರಿ 20 ಕೆಜಿ ತೂಕ ಇಳಿಸಿಕೊಂಡ ಬಾಲಿವುಡ್ ಸುಂದರಿ

    ಕಳೆದ ವರ್ಷ ಜ.26ರಂದು ಬೆಂಗಳೂರಿನ ರೆಸಾರ್ಟ್‌ವೊಂದರಲ್ಲಿ ಸಾಗರ್- ಸಿರಿ ರಾಜು ವೈವಾಹಿಕ ಬದುಕಿಗೆ ಕಾಲಿಟ್ಟಿದ್ದರು. ಕಿರುತೆರೆಯ ನಟ-ನಟಿಯರು ಸಾಗರ್- ಸಿರಿ ಮದುವೆಯಲ್ಲಿ ಭಾಗಿಯಾಗಿದ್ದರು.

  • ರಂಜನಿ ನಟನೆಯ ‘ಸತ್ಯಂ’ ಸಿನಿಮಾದ ಆಡಿಯೋ ರಿಲೀಸ್ ಮಾಡಿದ ಸಚಿವ ತಂಗಡಗಿ

    ರಂಜನಿ ನಟನೆಯ ‘ಸತ್ಯಂ’ ಸಿನಿಮಾದ ಆಡಿಯೋ ರಿಲೀಸ್ ಮಾಡಿದ ಸಚಿವ ತಂಗಡಗಿ

    ಹಾಂತೇಶ್ ವಿ.ಕೆ. ಅವರ ನಿರ್ಮಾಣದ ‘ಸತ್ಯಂ’ (Satyam) ಚಿತ್ರದ  ಆಡಿಯೋ ಬಿಡುಗಡೆ ಸಮಾರಂಭ ಗಂಗಾವತಿಯ ಜಗಜೀವನ ರಾಮ್ ಸರ್ಕಲ್ ನಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ  ನೆರವೇರಿತು. ಸಚಿವರಾದ ಶಿವರಾಜ್ ತಂಗಡಗಿ (Shivaraj Thangadagi) ಅವರು ಸತ್ಯಂ ಚಿತ್ರದ ಆಡಿಯೋ ಬಿಡುಗಡೆಗೊಳಿಸಿ ಮಾತನಾಡುತ್ತ ಬಾಂಧವ್ಯದ ಕಥೆ ಇಟ್ಟುಕೊಂಡು ಉತ್ತರ ಕರ್ನಾಟಕದವರೇ ಆದ  ನಿರ್ಮಾಪಕರು ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ನಮ್ಮ ಭಾಗದವರಾದ ಇವರನ್ನು ನಾವೆಲ್ಲ ಸೇರಿ ಗೆಲ್ಲಿಸಬೇಕು. ಉತ್ತರ ಕರ್ನಾಟಕದಲ್ಲಿ ಸಾಕಷ್ಟು ಪ್ರತಿಭಾವಂತರಿದ್ದಾರೆ. ಅವರಿಗೆಲ್ಲ ಅವಕಾಶ ಸಿಗುವಂತಾಗಲಿ ಎಂದು ಚಿತ್ರತಂಡಕ್ಕೆ ಶುಭ ಹಾರೈಸಿದರು.

    ನಂತರ ನಿರ್ಮಾಪಕ ಮಹಾಂತೇಶ್ ಅವರು  ಮಾತನಾಡುತ್ತ ಇದು ನಮ್ಮ ಸಂಸ್ಥೆಯ ಎರಡನೇ ಚಿತ್ರ. ತಲೆಮಾರುಗಳ ನಡುವಿನ ಕಥಾಹಂದರ  ಇಟ್ಟುಕೊಂಡು ಒಂದೊಳ್ಳೇ ಸಿನಿಮಾ ಮಾಡಿದ್ದೇವೆ. ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ತಯಾರಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ, ನಮ್ಮ ಜನರ ಸಮ್ಮುಖದಲ್ಲಿ  ಆಡಿಯೋ ಬಿಡುಗಡೆ  ಮಾಡಬೇಕೆಂಬುದು ನನ್ನ ಕನಸಾಗಿತ್ತು. ದಯವಿಟ್ಟು ನಮ್ಮ ಚಿತ್ರವನ್ನು ಥೇಟರಿನಲ್ಲಿ ವೀಕ್ಷಿಸುವ ಮೂಲಕ ಪ್ರೋತ್ಸಾಹಿಸಿ ಎಂದು ಹೇಳಿದರು.

    ಸದಭಿರುಚಿಯ ಚಿತ್ರಗಳ ಮೂಲಕ ಗುರ್ತಿಸಿಕೊಂಡಿರುವ ಅಶೋಕ್ ಕಡಬ ಅವರು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು ಉತ್ತರ ಕರ್ನಾಟಕದಲ್ಲಿ ಕನ್ನಡ ಚಿತ್ರಗಳನ್ನು ಹೆಚ್ಚು  ಜನ ನೋಡುತ್ತಾರೆ. ಹಾಗಾಗಿ ನಿಮ್ಮ ಬಳಿಗೆ ಬಂದಿದ್ದೇವೆ. ಒಳ್ಳೇ ಸಿನಿಮಾ ಮಾಡಿದ್ದೇವೆ. ನೀವೆಲ್ಲ ಚಿತ್ರವನ್ನು ಗೆಲ್ಲಿಸುತ್ತೀರೆಂಬ ನಂಬಿಕೆಯಿದೆ ಎಂದರು. ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು, ಜಗದ್ಗುರು ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳ ಸಮ್ಮುಖದಲ್ಲಿ ನಡೆದ ಈ ಕಾರ್ಯಕ್ರಮದ ವೇದಿಕೆಯಲ್ಲಿ ಉತ್ತರ ಕರ್ನಾಟಕ ಭಾಗದ ಅನೇಕ ರಾಜಕೀಯ ಗಣ್ಯರುಗಳು ಭಾಗವಹಿಸಿದ್ದರು.

     

    ಕಾಲಘಟ್ಟಗಳಲ್ಲಿ ನಡೆಯೋ ಕಥೆ ಸತ್ಯಂ ಚಿತ್ರದಲ್ಲಿದ್ದು,  ಜಮೀನ್ದಾರ್ ಕುಟುಂಬದ ಎಳೆಯೊಂದಿಗೆ ಪ್ರಸ್ತುತ ಬದುಕಿನ ಕಥೆಯೂ ಬೆಸೆದುಕೊಂಡಿದೆ. ತಾತನಾಗಿ ಹಿರಿಯ ನಟ ಸುಮನ್ , ಮೊಮ್ಮಗನಾಗಿ ಸಂತೋಷ್ ಅಭಿನಯಿಸಿದ್ದಾರೆ. ನಾಯಕಿಯಾಗಿ ರಂಜಿನಿ ರಾಘವನ್  (Ranjani Raghavan)  ಕಾಣಿಸಿಕೊಂಡಿದ್ದಾರೆ.  ಜನವರಿಯಲ್ಲಿ  ಚಿತ್ರದ ಟ್ರೈಲರ್  ಬಿಡುಗಡೆಯಾಗಲಿದೆ. ರವಿ ಬಸ್ರೂರು  ಅವರ ಸಂಗೀತ ಸಂಯೋಜನೆ,   ಸಿನಿಟೆಕ್ ಸೂರಿ ಅವರ ಕ್ಯಾಮೆರಾ ವರ್ಕ್ ಈ  ಚಿತ್ರಕ್ಕಿದೆ    ಕೆ.ವಿ.ರಾಜು ಅವರು ಒಂದಿಷ್ಟು ಚಿತ್ರಕಥೆ, ಸಂಭಾಷಣೆ  ಬರೆದಿದ್ದು, ಅದನ್ನು  ಕಿನ್ನಾಳ ರಾಜ್  ಪೂರ್ಣಗೊಳಿಸಿ, ಒಂದು ಹಾಡನ್ನೂ ಬರೆದಿದ್ದಾರೆ.

  • ರಂಜನಿ ರಾಘವನ್ ನಟನೆಯ ‘ಸತ್ಯಂ’ ಟೀಸರ್ ರಿಲೀಸ್

    ರಂಜನಿ ರಾಘವನ್ ನಟನೆಯ ‘ಸತ್ಯಂ’ ಟೀಸರ್ ರಿಲೀಸ್

    ತಾತ ಮೊಮ್ಮಗನ ಸುತ್ತ ನಡೆಯುವ  ಕಥಾಹಂದರ ಇಟ್ಟುಕೊಂಡು ಅಶೋಕ್ ಕಡಬ ಅವರು ನಿರ್ದೇಶಿಸಿರುವ  ಚಿತ್ರ “ಸತ್ಯಂ” (Satyam) ಇದೀಗ ಬಿಡುಗಡೆಯ ಹಂತಕ್ಕೆ ಬಂದಿದೆ.  ಶ್ರೀ ಮಾತಾ ಕ್ರಿಯೇಶನ್ಸ್ ಮೂಲಕ ಮಾಂತೇಶ್ ವಿಕೆ. ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಆಧ್ಯಾತ್ಮಕ ಚಿಂತಕರಾದ ಜಂಬುನಾಥ್ ಸ್ವಾಮಿ ಅವರು ಈ ಚಿತ್ರದ ಟೀಸರ್ (Teaser) ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

    ಈ ಸಂದರ್ಭದಲ್ಲಿ ನಿರ್ಮಾಪಕ ಮಾಂತೇಶ್. ವಿ.ಕೆ. ಮಾತನಾಡುತ್ತಾ, ನಮ್ಮ ಸಂಸ್ಥೆಯ ಎರಡನೇ ಚಿತ್ರವಿದು. ಈ ಹಿಂದೆ  ಮಹಾಮಹಿಮ ಲಡ್ಡು ಮುತ್ಯ ಎಂಬ ಚಿತ್ರ ನಿರ್ಮಿಸಿದ್ದೆ. ಈ  ಚಿತ್ರ ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ಮೂಡಿಬಂದಿದೆ. ನಾನೊಬ್ಬ ಸಿವಿಲ್ ಕಾಂಟ್ರಾಕ್ಟರ್ ಆಗಿದ್ದರೂ ಸಿನಿಮಾ ಮೇಲೆ ತುಂಬಾ ಆಸಕ್ತಿ,  ಪ್ರೀತಿಯಿದೆ. ನಮ್ಮ ಬ್ಯಾನರ್ ಮೂಲಕ ಸದಭಿರುಚಿಯ  ಚಿತ್ರವನ್ನು ನೀಡುವುದು ನಮ್ಮ ಉದ್ದೇಶ. ಅಶೋಕ್ ಕಡಬ ಅವರು ಈ ಕಥೆ ತಂದಾಗ ವಿಶೇಷ ಅನಿಸಿತು. ಎರಡು ಕಾಲಘಟ್ಟಗಳಲ್ಲಿ ನಡೆಯೋ ಕಥೆಯಿದು. ಜಮೀನ್ದಾರ್ ಕುಟುಂಬದ ಎಳೆಯೊಂದಿಗೆ ಪ್ರಸ್ತುತ ಬದುಕಿನ ಕಥೆಯೂ ಬೆಸೆದುಕೊಂಡಿದೆ.  ತಾತ ಮೊಮ್ಮಗನ ಕಥೆ ತುಂಬಾ ವಿಶೇಷವಾಗಿದೆ. ತಾತನಾಗಿ ಹಿರಿಯ ನಟ ಸುಮನ್ ಹಾಗೂ ಮೊಮ್ಮಗನಾಗಿ ಸಂತೋಷ್ ಅಭಿನಯಿಸಿದ್ದಾರೆ. ನಾಯಕಿಯಾಗಿ ರಂಜಿನಿ ರಾಘವನ್  ಉತ್ತಮ ಅಭಿನಯ  ನೀಡಿದ್ದಾರೆ.  ಇದೊಂದು ಫ್ಯಾಮಿಲಿ ಕಂಟೆಂಟ್ , ಥ್ರಿಲ್ಲರ್ ಚಿತ್ರ.  ವಿಶೇಷವಾಗಿ  ಆನೇಕಲ್ ಬಾಲರಾಜ್ ಅವರನ್ನು ನೆನಪಿಸಿಕೊಳ್ಳಬೇಕು, ಈ ಕಥೆಯನ್ನು ಕೇಳಿದ  ಅವರು ಇದೊಂದು ಒಳ್ಳೆಯ ಕಥೆ. ನನ್ನ ಬೆಂಬಲ ಸದಾ ಇದೆ ಎಂದಿದ್ದರು.  ಅವರ ಆಶೀರ್ವಾದ ಇದ್ದೇ ಇರುತ್ತೆ. ಅವರ ಮಗ ಸಂತೋಷ  ನಾಯಕನಾಗಿ ತುಂಬಾ ಚೆನ್ನಾಗಿ ಅಭಿನಯಿಸಿದ್ದಾರೆ.  ಚಿತ್ರದ ವಿತರಣೆ ಹಕ್ಕನ್ನು ನಿರ್ಮಾಪಕ ಕೆ.ಎ. ಸುರೇಶ್ ವಹಿಸಿಕೊಂಡಿದ್ದಾರೆ. ಸದ್ಯದಲ್ಲೆ  ಟ್ರೈಲರ್ , ಹಾಡುಗಳು ಬಿಡುಗಡೆ ಮಾಡಿ, ಡಿಸೆಂಬರ್ ವೇಳೆಗೆ ತೆರೆಗೆ ತರುವ  ಪ್ಲಾನ್ ಇದೆ ಎಂದು ಹೇಳಿದರು.

    ನಿರ್ದೇಶಕ ಅಶೋಕ್ ಕಡಬ ಮಾತನಾಡುತ್ತಾ ಇದೊಂದು ಫ್ಯಾಮಿಲಿ ಎಂಟೈನರ್.  ಪಂಜುರ್ಲಿ ದೈವ ಆರಾಧಿಸುವ ರಾಜಮನೆತನದ ಕುಟುಂಬದಲ್ಲಿ ಒಂದು ಕಳಂಕ ನಡೆದಿರುತ್ತದೆ ಅದರಿಂದ  ಸಾವು ನೋವುಗಳು ಆಗಿದ್ದು, ಅದರಲ್ಲಿ ಒಂದು ವಂಶದ ಕುಡಿ ಸುಮಾರು 40 ವರ್ಷದ ನಂತರ ಭೂತ ಕೋಲದ ಪೂಜೆಗೆಂದು ಆ ಊರಿಗೆ ಬಂದಾಗ ನಡೆಯುವ ಕಥೆಯಿದು. ಮೂರು ಶೇಡ್ ಗಳು ಇರುವ ಈ ಚಿತ್ರಕ್ಕೆ ದೊಡ್ಡ ಮಟ್ಟದ ಸೆಟ್ ಗಳನ್ನು ಹಾಕಿದ್ದೆವು. 2019ರಲ್ಲೇ ನಾವೀ ಕಥೆ ಮಾಡಿದ್ದೆವು, ಕಾಂತಾರ ಬರುವ ಮುಂಚೆಯೇ ಈ ಸಬ್ಜೆಕ್ಟ್ ರೆಡಿ ಇತ್ತು. ಈ ಚಿತ್ರದ ಟೀಸರ್ ನಲ್ಲಿ ಕಾಣುವ ಹುಲಿ ಉಗುರು  ಒರಿಜಿನಲ್ ಅಲ್ಲ. ಕಾಸ್ಟ್ಯೂಮರ್ ಕೊಟ್ಟಿರುವ ಡುಪ್ಲಿಕೇಟ್ ಉಗುರು ಎಂದರು. ಹಾರರ್, ಸಸ್ಪೆನ್ಸ್ , ಲವ್ ಕಂಟೆಂಟ್  ಒಳಗೊಂಡ ಚಿತ್ರವನ್ನು ಕನ್ನಡ,  ತೆಲುಗು ಭಾಷೆಯಲ್ಲಿ ಮಾಡಿದ್ದೇವೆ.  ರವಿ ಬಸ್ರೂರು  ಸಂಗೀತ  ಅದ್ಭುತವಾಗಿ ಮ್ಯೂಸಿಕ್ ಮಾಡಿದ್ದಾರೆ.  ಸಿನಿಟೆಕ್ ಸೂರಿ ಕ್ಯಾಮೆರಾ ವರ್ಕ್  ಚಿತ್ರಕ್ಕಿದೆ. ಕೆ. ವಿ.  ರಾಜು ಅವರು ಒಂದಿಷ್ಟು ಚಿತ್ರಕಥೆ, ಸಂಭಾಷಣೆ  ಬರೆದಿದ್ದು, ಅದನ್ನು  ಕಿನ್ನಲ್ ರಾಜ್  ಪೂರ್ಣಗೊಳಿಸಿ, ಒಂದು ಹಾಡನ್ನೂ ಬರೆದಿದ್ದಾರೆ ಎಂದು ಮಾಹಿತಿ ನೀಡಿದರು.

    ನಾಯಕ  ಸಂತೋಷ್ ಬಾಲರಾಜ್ (Santhosh Balraj) ಮಾತನಾಡುತ್ತ ನಾನು ಈ ಹಿಂದೆ ಮಾಡಿದ  ಕೆಂಪ, ಕರಿಯ-2,  ಗಣಪ ಸಿನಿಮಾಗಳೇ ಒಂದಾದರೆ, ಇದು ಆ ಮೂರಕ್ಕಿಂತ ಡಿಫ್ರೆಂಟ್ ಆಗಿ ಮೂಡಿ ಬಂದಿರುವ ಚಿತ್ರ. ನನ್ನ ಪಾತ್ರದ ಹೆಸರು ಸತ್ಯ, ನನ್ನ ತಂದೆ ಬದುಕಿದ್ದರೆ  ತುಂಬಾ ಇಷ್ಟಪಡುತ್ತಿದ್ದರು.  ಆರಂಭದಲ್ಲಿ ಈ ಕಥೆಯನ್ನು ಒಪ್ಪಿ ಇದೊಂದು  ಉತ್ತಮ ಚಿತ್ರವಾಗಿ ಮೂಡಿಬರುತ್ತೆ ಅಂದಿದ್ದರು.  ನನಗೆ ದರ್ಶನ್ ಅವರ ಸಪೋರ್ಟ್ ಕೂಡ ತುಂಬಾ ಇದೆ. ಬಹಳ ಗ್ಯಾಪ್ ಆಗಿತ್ತು, ಇನ್ನಷ್ಟು ವಿಭಿನ್ನ ಚಿತ್ರಗಳ ಮೂಲಕ ನಿಮ್ಮ ಮುಂದೆ ಬರುತ್ತೇನೆ ಎಂದರು.

     

    ನಾಯಕಿ ರಂಜಿನಿ ರಾಘವನ್ (Ranjani Raghavan) ಮಾತನಾಡುತ್ತ ಸತ್ಯಂ ಟೀಸರ್ ಗಾಗಿ ನಾನು ತುಂಬಾ ಕಾದಿದ್ದೆ. ಅಚಾನಕ್ಕಾಗಿ ನಾನೀ ಚಿತ್ರತಂಡಕ್ಕೆ  ಸೇರ್ಪಡೆಯಾದೆ.  ನನ್ನ ಪಾತ್ರ ಚಿತ್ರದ ಕಥೆಗೆ ಟರ್ನಿಂಗ್ ಪಾಯಿಂಟ್ ಆಗಿದ್ದು , ಕಥೆಯ ಜೊತೆಗೇ ಸಾಗುತ್ತೆ. ಸಂತೋಷ್ ಅವರ ಸಪೋರ್ಟ್ ಚೆನ್ನಾಗಿತ್ತು,  ಚಿತ್ರದ ಹಾಡುಗಳು ಚೆನ್ನಾಗಿ ಬಂದಿದೆ ಎಂದರು.  ನಂತರ ಸಾಹಿತಿ ಹಾಗೂ ಸಂಭಾಷಣೆಕಾರ ಕಿನ್ನಲ್ ರಾಜ್ , ಛಾಯಾಗ್ರಹಕ ಸಿನಿಟೆಕ್ ಸೂರಿ, ಮೊದಲ ಬಾರಿಗೆ ಬೇರೆ ಬ್ಯಾನರ್ ಚಿತ್ರವನ್ನು ವಿತರಣೆ ಮಾಡುತ್ತಿರುವ  ಕೆ.ಎ. ಸುರೇಶ್ ಚಿತ್ರದ ಕುರಿತಂತೆ ಮಾತನಾಡಿದರು.

  • ‘ಮೆಲೋಡಿ ಡ್ರಾಮಾ’ಗಾಗಿ ಒಂದಾದ ಸೋನು ನಿಗಮ್, ಕೈಲಾಶ್ ಖೇರ್

    ‘ಮೆಲೋಡಿ ಡ್ರಾಮಾ’ಗಾಗಿ ಒಂದಾದ ಸೋನು ನಿಗಮ್, ಕೈಲಾಶ್ ಖೇರ್

    ಮಾರ್ಚ್ ಆರಂಭವಾಯಿತೆಂದರೆ ಬೇಸಿಗೆಯೂ ಆರಂಭವಾಯಿತು ಅಂತ..ಅದರಲ್ಲೂ ಏಪ್ರಿಲ್ ನಲ್ಲಿ ಬಿಸಿಲಿನದೇ ಆರ್ಭಟ.‌ ಈ ಬಾರಿ ಬಿರು ಬೇಸಿಗೆಗೆ ತಂಪೆರೆಯಲು ಸುಂದರ ‘ಮೆಲೋಡಿ ಡ್ರಾಮಾ’ ಬರಲಿದೆ. ಅಂದರೆ “ನಿನ್ನ ಕಥೆ ನನ್ನ ಜೊತೆ” ಎಂಬ ಅಡಿಬರಹ ಹೊಂದಿರುವ ‘ಮೆಲೋಡಿ ಡ್ರಾಮಾ. ಚಿತ್ರ ಏಪ್ರಿಲ್ ತಿಂಗಳಲ್ಲಿ ತೆರೆಗೆ ಬರಲಿದೆ. ಪ್ರೈಮ್ ಸ್ಟಾರ್ ಸ್ಟುಡಿಯೊ ನಿರ್ಮಿಸಿರುವ ‘ಮೆಲೋಡಿ ಡ್ರಾಮಾ, ಚಿತ್ರ, ಪ್ರೀತಿ ಒಂದು ಸುಂದರ ಅನುಭವ, ನಂಬಿಕೆ. ಅದರ ಆಧಾರ ಇವೆರಡರ ನಡುವಿನ ಪಯಣದಲ್ಲಿ ಭಾವ ಭಾವನೆಗಳ ತೊಡಲಾಟವನ್ನು ವ್ಯಕ್ತ ಪಡಿಸುವ ಒಂದು ಸುಂದರಮಯ ಚಿತ್ರವಾಗಿದೆ.

    ಕನ್ನಡದ ಹಲವು ಯಶಸ್ವಿ ಚಿತ್ರಗಳಿಗೆ ಸಂಗೀತ ನೀಡಿರುವ ಕಿರಣ್ ರವೀಂದ್ರನಾಥ್ ಅವರ ಸಂಗೀತ ನಿರ್ದೇಶನದಲ್ಲಿ ಎಂಟು ಸುಮಧುರ ಹಾಡುಗಳು ಈ ಚಿತ್ರದಲ್ಲಿದೆ. ತಮ್ಮ ಗಾಯನದ ಮೂಲಕ ಜನಪ್ರಿಯರಾಗಿರುವ ಸೋನು ನಿಗಮ್, ಕೈಲಾಶ್ ಖೇರ್ ಹಾಗೂ ಪಲಾಕ್ ಮುಚ್ಚಲ್ ಈ ಚಿತ್ರದ ಹಾಡುಗಳನ್ನು ಹಾಡಿದ್ದಾರೆ.ಜಯಂತ್ ಕಾಯ್ಕಿಣಿ ,  ನಾಗೇಂದ್ರ ಪ್ರಸಾದ್, ಹೃದಯ ಶಿವ, ಧನಂಜಯ್ ರಂಜನ್ ಗೀತರಚನೆ ಮಾಡಿದ್ದಾರೆ.

    ‘ದ್ಪಿಪಾತ್ರ’ ಚಿತ್ರದ ಮೂಲಕ ನಾಯಕನ ಪಾತ್ರ ಆರಂಭಿಸಿದ    ಸತ್ಯ ಈ ಚಿತ್ರದ ನಾಯಕ. ಜನಪ್ರಿಯ ಧಾರಾವಾಹಿಗಳಲ್ಲಿ, “ಲಾಂಗ್ ಡ್ರೈವ್” ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿರುವ  ಸುಪ್ರಿತಾ ಸತ್ಯನಾರಾಯಣ “ಮೊಲೋಡಿ ಡ್ರಾಮಾ” ಚಿತ್ರದ ನಾಯಕಿ. ಖ್ಯಾತ ನಟ ಚೇತನ್ ಚಂದ್ರ ಸಹ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದು, ಇನ್ನು ರಂಗಾಯಣ ರಘು, ಅನುಪ್ರಭಾಕರ್, ರಾಜೇಶ್ ನಂಟರಂಗ, ಬಲ ರಾಜವಾಡಿ, ಲಕ್ಷ್ಮಿ ಸಿದ್ದಯ್ಯ, ಅಶ್ವಿನ್ ರಾವ್ ಪಲ್ಲಕ್ಕಿ, ಅಶ್ವಿನ್ ಹಾಸನ್, ರಂಜನ್ ಸನತ್, ಬಿಗ್ ಬಾಸ್ ವಿನೋದ್ ಗೊಬ್ಬರ,  ಮುಂತಾದವರು ತಾರಾಬಳಗದಲ್ಲಿದ್ದಾರೆ.  ಇದನ್ನೂ ಓದಿ:ಸಮಂತಾ ಬಳಿಕ ವಿಚಿತ್ರ ಕಾಯಿಲೆ ಬಗ್ಗೆ ಬಾಯ್ಬಿಟ್ಟ ಅನುಷ್ಕಾ ಶೆಟ್ಟಿ

    ಹದಿನೈದು ವರ್ಷಗಳಿಂದ ಚಿತ್ರರಂಗದೊಂದಿಗೆ ನಂಟಿರುವ, ಪಿ.ಎನ್ ಸತ್ಯ ಸೇರಿದಂತೆ ಕೆಲವು ನಿರ್ದೇಶಕರ ಜೊತೆ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿರುವ ಮಂಜುಕಾರ್ತಿಕ್ ಜಿ ಈ ಚಿತ್ರದ ನಿರ್ದೇಶಕರು. ಇದು ಅವರಿಗೆ ಚೊಚ್ಚಲ ನಿರ್ದೇಶನದ ಚಿತ್ರ. ಬೆಂಗಳೂರು, ಮಂಡ್ಯ, ಮೈಸೂರು, ಕುಶಾಲನಗರ, ಮಡಿಕೇರಿ, ಶಿವಮೊಗ್ಗ, ಮಂಗಳೂರು, ಕುಂದಾಪುರ ಹಾಗೂ ವಿಜಯಪುರದ ರಮಣೀಯ ಸ್ಥಳಗಳಲ್ಲಿ 45 ದಿನಗಳ ಕಾಲ ಚಿತ್ರೀಕರಣ ನಡೆದಿದೆ. ಮನು DB ಹಳ್ಳಿ ಛಾಯಾಗ್ರಹಣ ಹಾಗೂ ಮುನಿರಾಜ್ ಅವರ ಸಂಕಲನವಿರುವ ಈ ಚಿತ್ರದ ಪ್ರಥಮಪ್ರತಿ ಸಿದ್ದವಿದ್ದು, ಸದ್ಯದಲೇ ಸೆನ್ಸಾರ್ ಮಂಡಳಿ ಚಿತ್ರವನ್ನು ವೀಕ್ಷಿಸಲಿದೆ.

    ನಿರ್ಮಾಪಕರಾದ M ನಂಜುಂಡ ರೆಡ್ಡಿ (ನಡುವಲಮನೆ) ಚಿತ್ರಕ್ಕೆ ಯಾವುದೇ ರೀತಿಯ ಕೊರತೆ ಬಾರದಂತೆ ಅದ್ದೂರಿಯಾಗಿ ಚಿತ್ರವನ್ನು ನಿರ್ಮಿಸಿದ್ದಾರೆ,  ಚಿತ್ರಕ್ಕೆ ಮೇಲ್ವಿಚಾರಣೆ ಜೈಪ್ರಸಾದ್ ಕಲ್ಯಾಣಿ (ಜಗಳೂರು) ನಿರ್ವಹಿಸಿದ್ದಾರೆ. ಏಪ್ರಿಲ್ ಮೊದಲ ವಾರದಲ್ಲಿ ಬಿಡುಗಡೆಯಾಗಲು ಸಜ್ಜಾಗಿರುವ ಈ ಚಿತ್ರ ಪ್ರೇಕ್ಷಕನಿಗೆ ಹೊಸ ಅನುಭವಗಳನ್ನು ನೀಡುವುದಲ್ಲದೆ ಹಳೆಯ ನೆನಪುಗಳನ್ನು ನೆನಪು ಹಾಕುವ ಹೊಸ ಭಾವವನ್ನು ನೀಡುತ್ತದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಟ ಮಿಲಿಂದ್ ಜೊತೆ ಡ್ಯುಯೆಟ್ ಹಾಡಲಿದ್ದಾರೆ ‘ಲವ್ ಮಾಕ್ಟೈಲ್’  ನಟಿ ರಚೆಲ್ ಡೇವಿಡ್

    ನಟ ಮಿಲಿಂದ್ ಜೊತೆ ಡ್ಯುಯೆಟ್ ಹಾಡಲಿದ್ದಾರೆ ‘ಲವ್ ಮಾಕ್ಟೈಲ್’ ನಟಿ ರಚೆಲ್ ಡೇವಿಡ್

    ರಾಮಾ ರಾಮಾ ರೇ, ಒಂದಲ್ಲ ಎರಡಲ್ಲ ಸಿನಿಮಾ ಖ್ಯಾತಿಯ ನಿರ್ದೇಶಕ ಸತ್ಯ ಪ್ರಕಾಶ್ ನಿರ್ದೇಶನದ ಜೊತೆಗೆ ಸಿನಿಮಾ ನಿರ್ಮಾಣ, ವಿತರಣೆಯಲ್ಲೂ ಬ್ಯುಸಿಯಾಗಿರೋದು ಗೊತ್ತೇ ಇದೆ. ಸದಾ ಹೊಸ ಪ್ರತಿಭೆಗಳನ್ನು ಗುರುತಿಸುವಲ್ಲಿ ಮುಂಚೂಣಿಯಲ್ಲಿರುವ ಸತ್ಯ ಪ್ರಕಾಶ್ ಮತ್ತೊಬ್ಬ ನವನಟನಿಗೆ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಅವರೇ ಮಿಲಿಂದ್. 2018ರಲ್ಲಿ ತೆರೆಕಂಡ ಅನಂತ್ ನಾಗ್ ಅಭಿನಯದ ವೀಕೆಂಡ್ ಸಿನಿಮಾದಲ್ಲಿ ನಟಿಸಿದ್ದ ಮಿಲಿಂದ್ ಗಿದು ಎರಡನೇ ಸಿನಿಮಾ.  ಈ ಚಿತ್ರದಲ್ಲಿ ಪೂರ್ಣ ಪ್ರಮಾಣದ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದು, ಪಾತ್ರಕ್ಕೆ ತಯಾರಿಯೂ ಭರ್ಜರಿಯಾಗಿ ನಡೆಯುತ್ತಿದೆ. ಮಿಲಿಂದ್ ಜೋಡಿಯಾಗಿ ಲವ್ ಮಾಕ್ಟೈಲ್ ಖ್ಯಾತಿಯ  ರಚೆಲ್ ಡೇವಿಡ್  ತೆರೆ ಹಂಚಿಕೊಳ್ಳುತ್ತಿದ್ದಾರೆ.

     ಇತ್ತೀಚೆಗೆ ಸತ್ಯ ಪ್ರಕಾಶ್ ನಿರ್ದೇಶನದಲ್ಲಿ ತೆರೆಕಂಡ ಮ್ಯಾನ್ ಆಫ್ ದಿ ಮ್ಯಾಚ್ ಸಿನಿಮಾ ಬಿಡುಗಡೆಯಾಗಿ ಉತ್ತಮ ವಿಮರ್ಶೆ ಪಡೆದುಕೊಂಡಿತ್ತು. ಈ ಚಿತ್ರವನ್ನು ನಿರ್ದೇಶನದ ಜೊತೆ ನಿರ್ಮಾಪಕ ಮಂಜುನಾಥ್ ಜೊತೆಗೂಡಿ ಸತ್ಯ ಹಾಗೂ ಮಯೂರ ಪಿಕ್ಚರ್ಸ್ ಬ್ಯಾನರ್ ನಡಿ ನಿರ್ಮಾಣ ಕೂಡ ಮಾಡಿದ್ದರು. ಇದೀಗ  ಮತ್ತೊಂದು ಸಿನಿಮಾ ನಿರ್ಮಾಣಕ್ಕೆ  ಮುಂದಾಗಿದ್ದು,  ಈ ಚಿತ್ರಕ್ಕೂ ಮಯೂರ ಪಿಕ್ಚರ್ಸ್ ಡಿ.ಮಂಜುನಾಥ್ ಕೈ ಜೋಡಿಸಿದ್ದಾರೆ. ನೂತನ ಚಿತ್ರದ ಟೈಟಲ್ ಹಾಗೂ ನಾಯಕ ಮಿಲಿಂದ್, ನಾಯಕಿ ರಚೆಲ್ ಡೇವಿಡ್ ಪಾತ್ರದ ಬಗ್ಗೆ ಸದ್ಯದಲ್ಲೇ ಮಾಹಿತಿ ಹಂಚಿಕೊಳ್ಳಲಿದ್ದಾರೆ. ಇದನ್ನೂ ಓದಿ:‘ಪುಟ್ಟಪರ್ತಿ ಸಾಯಿಬಾಬಾ’ ಸಿನಿಮಾ ಮಾಡುವುದಾಗಿ ಘೋಷಿಸಿದ ಸಾಯಿ ಪ್ರಕಾಶ್ : ನಿರ್ದೇಶಕರ 100ನೇ ಸಿನಿಮಾವಿದು

    ದೀಪಕ್ ಮಧುವನಹಳ್ಳಿ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಈ ಚಿತ್ರಕ್ಕೆ ಸತ್ಯ ಪ್ರಕಾಶ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ಮಾಣ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಭಾಗ್ಯರಾಜ್, ರಾಜು ಜೇಮ್ಸ್ ಬಾಂಡ್, ಕಳ್ಬೆಟ್ಟದ ದರೋಡೆಕೋರರು ಸಿನಿಮಾ ನಿರ್ದೇಶಿಸಿರುವ ದೀಪಕ್ ಮಧುವನಹಳ್ಳಿ ನಾಲ್ಕನೇ ಸಿನಿಮಾವಿದು. ರೋಮ್ಯಾಂಟಿಕ್ ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ, ಲವಿತ್ ಕ್ಯಾಮೆರಾ ವರ್ಕ್,ಅಜಯ್ ಸಂಕಲನ ಚಿತ್ರಕ್ಕಿರಲಿದೆ.

    Live Tv
    [brid partner=56869869 player=32851 video=960834 autoplay=true]