Tag: ಸದಾನಂದಗೌಡ

  • ಜಮೀರ್ ಪಾಕಿಸ್ತಾನದಲ್ಲಿ ಬೇಡ, ತಮ್ಮ ಕ್ಷೇತ್ರದಲ್ಲೇ ಸೂಸೈಡ್ ಬಾಂಬರ್ ಆಗಿ ಆತ್ಮಾಹುತಿ ಮಾಡಿಕೊಳ್ಳಲಿ – ಸದಾನಂದಗೌಡ

    ಜಮೀರ್ ಪಾಕಿಸ್ತಾನದಲ್ಲಿ ಬೇಡ, ತಮ್ಮ ಕ್ಷೇತ್ರದಲ್ಲೇ ಸೂಸೈಡ್ ಬಾಂಬರ್ ಆಗಿ ಆತ್ಮಾಹುತಿ ಮಾಡಿಕೊಳ್ಳಲಿ – ಸದಾನಂದಗೌಡ

    ಬೆಂಗಳೂರು: ಜಮೀರ್ ಪಾಕಿಸ್ತಾನಕ್ಕೆ ಹೋಗಿ ಸೂಸೈಡ್ ಬಾಂಬರ್ ಆಗುವುದು ಬೇಡ. ತಮ್ಮ ಕ್ಷೇತ್ರದಲ್ಲಿ ಸೂಸೈಡ್ ಬಾಂಬರ್ ಆಗಿ ಆತ್ಮಾಹುತಿ ಮಾಡಿಕೊಳ್ಳಲಿ ಎಂದು ಸಚಿವ ಜಮೀರ್ ಅಹ್ಮದ್ (Zameer Ahmed) ವಿರುದ್ಧ ಮಾಜಿ ಸಿಎಂ ಸದಾನಂದಗೌಡ (Sadanand Gowda) ಅವರು ಕಿಡಿಕಾರಿದ್ದಾರೆ.ಇದನ್ನೂ ಓದಿ: ಜಮೀರ್ ಸುಮ್ಮನಿದ್ರೆ ಅದೇ ದೊಡ್ಡ ಸೇವೆ: ಜೋಶಿ

    ಪ್ರಧಾನಿ ಮೋದಿ, ಅಮಿತ್ ಶಾ ಅವಕಾಶ ಕೊಟ್ಟರೆ ಸೂಸೈಡ್ ಬಾಂಬ್ ಹಾಕಿಕೊಂಡು ಪಾಕಿಸ್ತಾನಕ್ಕೆ ಹೋಗುತ್ತೇನೆ ಎಂಬ ಸಚಿವ ಜಮೀರ್ ಅಹ್ಮದ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಭಾಗದಲ್ಲಿ ಯಕ್ಷಗಾನಕ್ಕೆ ಮೊದಲು ಒಬ್ಬ ಹಾಸ್ಯಗಾರ ಬರುತ್ತಾರೆ. ಜನರನ್ನು ರಂಜಿಸಲು ಅವರು ಬರುತ್ತಾರೆ. ಆ ಹಾಸ್ಯಗಾರರಿಗಿಂತ ಕೆಳಗೆ ಇರುವವರು ಈ ಜಮೀರ್ ಎಂದು ವ್ಯಂಗ್ಯ ನುಡಿದಿದ್ದಾರೆ.

    ಅವರು ಪಾಕಿಸ್ತಾನಕ್ಕೆ ಹೋಗಿ ಬಾಂಬ್ ಹಾಕಬೇಕಿಲ್ಲ. ಅವರ ಕ್ಷೇತ್ರದಲ್ಲಿ ಅವರು ಆತ್ಮಾಹುತಿ ಬಾಂಬರ್ ಆಗಲಿ. ಜಮೀರ್ ಪಾಕಿಸ್ತಾನದ ವಿರುದ್ಧ ಆತ್ಮಾಹುತಿ ಬಾಂಬರ್ ಆದರು ಎಂದು ಜಗತ್ತಿಗೆ ಒಂದು ಸಂದೇಶ ಹೋಗಲಿ. ಸುಮ್ಮನೆ ಮನರಂಜನೆಗೆ ಮಾತನಾಡುವುದು ಬೇಡ ಎಂದು ವಾಗ್ದಾಳಿ ನಡೆಸಿದ್ದಾರೆ.ಇದನ್ನೂ ಓದಿ: ಸುಹಾಸ್ ಹತ್ಯೆ ಕೇಸ್ – ಫಾಝಿಲ್ ಸಹೋದರನೇ ಪ್ರಮುಖ ಆರೋಪಿ

  • ದಯವಿಟ್ಟು ರಾಜ್ಯ ನಾಯಕರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಿ: ಹೈಕಮಾಂಡ್‌ ನಡೆಗೆ ಸದಾನಂದಗೌಡ ಬೇಸರ

    ದಯವಿಟ್ಟು ರಾಜ್ಯ ನಾಯಕರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಿ: ಹೈಕಮಾಂಡ್‌ ನಡೆಗೆ ಸದಾನಂದಗೌಡ ಬೇಸರ

    ಬೆಂಗಳೂರು: ರಾಜ್ಯ ನಾಯಕರ ವಿಚಾರವಾಗಿ ಬಿಜೆಪಿ ಹೈಕಮಾಂಡ್‌ ಅನುಸರಿಸುತ್ತಿರುವ ಧೋರಣೆಗೆ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ (D.V.Sadananda Gowda) ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಧಾನಸಭೆ ವಿಪಕ್ಷ ನಾಯಕರ ಆಯ್ಕೆ ಮಾಡಬೇಕೆಂದು ಆಗ್ರಹಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದಗೌಡ ಅವರು, ಕೇಂದ್ರದ ನಾಯಕರಿಗೆ ಮನವಿ ಮಾಡ್ತೀನಿ. ಕರ್ನಾಟಕದ ನಾಯಕರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಿ. ವಿಧಾನಸಭಾ ಚುನಾವಣೆಯಲ್ಲಿ ಕಳೆದುಕೊಂಡಿರಬಹುದು. ಆದರೆ ಲೋಕಸಭಾ ಚುನಾವಣೆಗೆ ಡಬಲ್ ಕೊಡ್ತೀವಿ. ದಯವಿಟ್ಟು ವಿಶ್ವಾಸ ತೆಗೆದುಕೊಳ್ಳಿ. ರಾಜ್ಯಕ್ಕೆ ಬರದೆ, ರಾಜ್ಯದ ವಿಪಕ್ಷ ನಾಯಕರ ಆಯ್ಕೆ ಮಾಡದೆ ಬಿಡೋದು ಸರಿಯಲ್ಲ ಎಂದು ಹೈಕಮಾಂಡ್‌ ವಿರುದ್ಧ ಅಸಮಾಧಾನ ಹೊರಹಾಕಿದರು. ಇದನ್ನೂ ಓದಿ: ಟಿಕೆಟ್ ಕೊಡಲ್ಲ ಅಂತ ಹೈಕಮಾಂಡ್ ಹೇಳಿತ್ತು: ಸದಾನಂದಗೌಡ ನಿವೃತ್ತಿ ಘೋಷಣೆಗೆ ಬಿಎಸ್‌ವೈ ಪ್ರತಿಕ್ರಿಯೆ

    ತಮ್ಮ ಚುನಾವಣಾ ನಿವೃತ್ತಿ ಬಗ್ಗೆ ಮಾತನಾಡಿದ ಅವರು, ವಾಸ್ತವವಾಗಿ ರಾಷ್ಟ್ರೀಯ ನಾಯಕ ಯಡಿಯೂರಪ್ಪ ಅವರು ಟ್ವೀಟ್ ಮಾಡಿದ್ದಾರೆ. ಯಾವುದೇ ಒತ್ತಡ ಇಲ್ಲ ಅಂತ. ನಾನು ಹನುಮಂತ ರೀತಿ ಎದೆ ಬಗೆದು ತೋರಿಸಲಾಗಲ್ಲ. ಸತ್ಯವನ್ನೇ ಹೇಳಿದ್ದೇನೆ.‌ ಕಠೋರವಾಗಿ ಹೇಳಿಲ್ಲ. ಯಾವುದೇ ಒತ್ತಡ ಇಲ್ಲ. ಯಾರ ಬಳಿಯೂ ಚರ್ಚೆ ಮಾಡಿಲ್ಲ. ನಾನು ನಿವೃತ್ತಿ ಆಗ್ತೇನೆ ಅಂತ 2019 ರಲ್ಲೇ ಹೇಳಿದ್ದೆ. ಆಗ ಪಕ್ಷ ಮತ್ತು ಸಂಘ ಈ ಬಾರಿ ಸ್ಪರ್ಧೆ ಮಾಡಿ ಅಂತ ಹೇಳಿದ್ದರು. ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಪಕ್ಷದ ವಿರುದ್ಧ ಯಾವುದೇ ಹೇಳಿಕೆ ನೀಡಿಲ್ಲ. ನಾನು ರಾಜಕೀಯಕ್ಕೆ ಬಂದಾಗ ಚೇಲಾ ಆಗಿ ತಿರುಗಿಲ್ಲ. ಇವತ್ತಿನ ಈ ನಿಲುವು ನನ್ನ ಮನೆಯವರಿಗೆ ಬಿಟ್ಟು, ಯಾರ ಬಳಿಯೂ ಚರ್ಚೆ ಮಾಡಿ ತೀರ್ಮಾನ ಮಾಡಿಲ್ಲ ಎಂದು ತಿಳಿಸಿದರು.

    ನಿಮ್ಮಲ್ಲೇ 13 ಜನರಿಗೆ ಟಿಕೆಟ್ ಇಲ್ಲ, ಸದಾನಂದಗೌಡರಿಗೂ ಟಿಕೆಟ್ ಇಲ್ಲ ಅಂತ ಚರ್ಚೆ ಮಾಡಿದ್ದರು ಎಂಬ ಮಾತು ನೂರಕ್ಕೆ ನೂರು ಸುಳ್ಳು. ಯಡಿಯೂರಪ್ಪ ಅವರು ವ್ಯತ್ಯಾಸ ಹೇಳಿಕೆ ನೀಡಿದ್ದರು. ಆದರೆ ಟ್ವೀಟ್ ಮಾಡಿ ಸ್ಪಷ್ಟಪಡಿಸಿದರು. ಹಾಗಾಗಿ ನಾನು ಅವರ ಬಗ್ಗೆಯೂ ಹೇಳಿಕೆ ನೀಡಲ್ಲ ಎಂದರು. ಇದನ್ನೂ ಓದಿ: ಕಲೆಕ್ಷನ್‍ನಲ್ಲೂ ಸಿಎಂ, ಡಿಸಿಎಂ ನಡುವೆ ತೀವ್ರ ಸ್ಪರ್ಧೆ: ಡಿ.ವಿ.ಸದಾನಂದಗೌಡ

    ನಾವು ಮಂಡ್ಯ, ಹಾಸನ ಎಲ್ಲಾ ಕಡೆ ಪಕ್ಷದ ಕೆಲಸ ಮಾಡಿದ್ದೇವೆ. ರಾಜಕಾರಣದಲ್ಲಿ ನಾನೇ ಇರಬೇಕು, ನನ್ನ ಮಕ್ಕಳಿರಬೇಕು ಎನ್ನುವ ಭಾವನೆ ನನಗಿಲ್ಲ. ಕುಟುಂಬದ ರಾಜಕಾರಣ ಸರಿಯಲ್ಲ. ಸಕಾಲದಂತ ಕಾನೂನು ತಂದು ಭ್ರಷ್ಟಾಚಾರಕ್ಕೆ ಒಂದಷ್ಟು ಕಡಿವಾಣ ಹಾಕುವ ಕೆಲಸ ಮಾಡಿದ್ದೇವೆ. ಸದಾನಂದಗೌಡ ಯಾರ ಚೇಲ ಅಲ್ಲ. ಯಾರ ಒತ್ತಡಕ್ಕೂ ತೀರ್ಮಾನ ತೆಗೆದುಕೊಳ್ಳಲ್ಲ. ಯಾವುದೇ ಆಮಿಷಕ್ಕೆ ಒಳಗಾಗಿಲ್ಲ. ಇದು ಜವಾಬ್ದಾರಿ ಅಂತ ತಿಳಿದಿದ್ದೇನೆ. ಕೋಟ್ಯಾಂತರ ಸದಸ್ಯರು ಇರುವ ಪಕ್ಷ. ಸದಾನಂದಗೌಡರಿಗೆ ಟಿಕೆಟ್ ಇಲ್ಲ ಅಂತ ಹೇಳಿದ್ದಾರೆ. 32 ಲಕ್ಷ ಮತದಾರರಿರುವ ಕ್ಷೇತ್ರ ನಮ್ಮದು. ಒಬ್ಬೇ ಒಬ್ಬ ಕಾರ್ಯಕರ್ತ ಸದಾನಂದಗೌಡ ಸರಿ ಇಲ್ಲ ಅಂತ ಹೇಳಿದ್ರೆ ನಾನು ಬೆಂಗಳೂರು ಬಿಟ್ಟುಬಿಡ್ತೀನಿ ಎಂದು ಸವಾಲು ಹಾಕಿದರು.

  • ಸಿದ್ದರಾಮಯ್ಯನ ಕಾಲಿಗೆ ಹಗ್ಗ ಕಟ್ಟಿ ಎಳೆದುಕೊಂಡು ಹೋಗ್ತಿದ್ರು: ಸದಾನಂದಗೌಡ ತಿರುಗೇಟು

    ಸಿದ್ದರಾಮಯ್ಯನ ಕಾಲಿಗೆ ಹಗ್ಗ ಕಟ್ಟಿ ಎಳೆದುಕೊಂಡು ಹೋಗ್ತಿದ್ರು: ಸದಾನಂದಗೌಡ ತಿರುಗೇಟು

    ಚಿಕ್ಕಬಳ್ಳಾಪುರ: ಬಿಜೆಪಿಯದ್ದು ತಾಲಿಬಾನ್ ಸಂಸ್ಕೃತಿ ಅಂತ ಕಿಡಿಕಾರಿರುವ ಮಾಜಿ ಸಿಎಂ ಸಿದ್ದರಾಮಯ್ಯನವರ ಹೇಳಿಕೆಗೆ ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಿಎಂ ಸದಾನಂದಗೌಡ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯನವರಿಗೆ ಪೂರ್ತಿ ತಲೆ ಕೆಟ್ಟಿದೆ. ರಾಜಕಾರಣದಲ್ಲಿ ಸ್ವಲ್ಪ ಕೆಟ್ಟರು ಪರವಾಗಿಲ್ಲ. ಬಿಜೆಪಿಯವರು ತಾಲಿಬಾನ್‍ಗಳು ಆಗಿದ್ದರೆ, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಕಾರಿನಲ್ಲಿ ಓಡಾಡಲು ಸಾಧ್ಯವಾಗುತ್ತಿತ್ತೇ? ಅವರ ಕಾಲಿಗೆ ಹಗ್ಗ ಕಟ್ಟಿ ಬೀದಿಯಲ್ಲಿ ಎಳೆದಾಡಿಕೊಂಡು ಹೋಗುತ್ತಿದ್ದರು ಅಂತ ಖಾರವಾಗಿ ಸಿದ್ದರಮಯ್ಯನವರಿಗೆ ತಿರುಗೇಟು ನೀಡಿದ್ದಾರೆ.


    ಚಿಕ್ಕಬಳ್ಳಾಪುರ ತಾಲೂಕಿನ ಗೊಲ್ಲಹಳ್ಳಿ ಬಳಿ ಸಿರಿ ಅಕ್ವಾ ಕಲ್ಚರ್ ಫಾರಂಗೆ ಭೇಟಿ ನೀಡಿ ಮಾತನಾಡಿ ಅವರು, ಸಿದ್ದರಾಮಯ್ಯನವರು ಅರ್ಥ ಮಾಡಿಕೊಳ್ಳಬೇಕು. ಬಾಯಿಗೆ ಬಂದ ಹಾಗೆ ಮಾತನಾಡಬಾರದು. ಬಿಜೆಪಿಯವರ ಪ್ಯಾಂಟ್ ಲೂಸ್ ಆಗಿದೆ ಅನ್ನೋ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯಾರದ್ದು ಏನೇನೋ ಲೂಸ್ ಆಗಿದಿಯೋ ನನಗೆ ಗೊತ್ತಿಲ್ಲ, ಆದರೆ ಸಿದ್ದರಾಮಯ್ಯನವರ ತಲೆ ಮಾತ್ರ ಲೂಸ್ ಆಗಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

    ಚುನಾವಣೆ ಬಂದಾಗ ಮಾತ್ರ ಕಾಂಗ್ರೆಸ್‍ನವರಿಗೆ ಅಹಿಂದ ಹೋರಾಟ ಮಾಡ್ತಾರೆ. ಬಾಯಿಗೆ ಬಂದ ಹಾಗೆ ಮಾತಾಡೋದು ಅವರ ಯೋಜನೆಗಳನ್ನ ಕಾರ್ಯಗತ ಮಾಡಲು ಮುಂದಾಗುತ್ತಾರೆ ಅಂತ ಆಕ್ರೋಶದ ನುಡಿಗಳನ್ನ ವ್ಯಕ್ತಪಡಿಸಿದರು.

    ಇದೇ ವೇಳೆ ಜೊತೆಯಲ್ಲಿದ್ದ ಮೀನುಗಾರಿಕಾ ಸಚಿವ ಅಂಗಾರ ಕೂಡ ಸಿದ್ದರಾಮಯ್ಯನವರೇ ಕೆಟ್ಟು ಹೋಗಿದ್ದಾರೆ. ಅವರ ಕೆಟ್ಟು ಹೋದ ಕಾರಣ ಕೆಟ್ಟ ಸಂಸ್ಕೃತಿ ಅವರಲ್ಲಿದೆ. ನಾವು ತಲೆಕೆಡೆಸಿಕೊಳ್ಳುವುದಿಲ್ಲ, ಮತಾಂತರಕ್ಕೆ ನಮ್ಮ ಸರ್ಕಾರ ಆಸ್ಪದ ಕೊಡುವುದಿಲ್ಲ ಎಂದರು.

  • ಕೊರೊನಾ ಮೂರನೇ ಅಲೆ- ತಜ್ಞರ ಸಲಹೆ ಪಾಲಿಸುವಂತೆ ಸಿಎಂಗೆ ಸದಾನಂದಗೌಡ ಸಲಹೆ

    ಕೊರೊನಾ ಮೂರನೇ ಅಲೆ- ತಜ್ಞರ ಸಲಹೆ ಪಾಲಿಸುವಂತೆ ಸಿಎಂಗೆ ಸದಾನಂದಗೌಡ ಸಲಹೆ

    ಬೆಂಗಳೂರು: ಕೊರೊನಾ ಮೂರನೇ ಅಲೆಯಲ್ಲಿ ತಜ್ಞರ ಸಲಹೆ ಸೂಚನೆಗಳನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿರವರು ಪಾಲಿಸುವಂತೆ ಮಾಜಿ ಕೇಂದ್ರ ಸಚಿವ ಸದಾನಂದ ಗೌಡ ಸಲಹೆಯನ್ನು ನೀಡಿದ್ದಾರೆ.

    ಬೆಂಗಳೂರು ಹೊರವಲಯದ ಟಿ.ದಾಸರಹಳ್ಳಿಯಲ್ಲಿ ಮಾತನಾಡಿದ ಡಿ.ವಿ ಸದಾನಂದ ಗೌಡ ಅವರು, ಮುಖ್ಯಮಂತ್ರಿಗಳು ತಜ್ಞರ ಸಲಹೆಯನ್ನು ಪಡೆದುಕೊಳ್ಳಬೇಕು, ತಜ್ಞರ ಸಲಹೆಯನ್ನು ಯಾವತ್ತು ಅಲ್ಲಗಳೆಯಬಾರದು, ತಜ್ಞರು ಹೇಳಿದಂತೆ ಮೊದಲನೇ ಹಾಗೂ ಎರಡನೇ ಕೊರೊನಾ ಅಲೆ ನಿಜವಾಗಿದೆ. ಅಪಾರ ಪ್ರಾಣ ಹಾನಿಗಳು ಕೂಡ ಸಂಭವಿಸಿವೆ, ವ್ಯಾಕ್ಸಿನೇಷನ್ ಅನ್ನು ಎಲ್ಲರೂ ಪಡೆದುಕೊಳ್ಳಬೇಕು, ಯಾರು ನಿರ್ಲಕ್ಷ್ಯ ಮಾಡಬಾರದು. ತಜ್ಞರ ಸಲಹೆಗಳಿಗೆ ವಿಶೇಷ ಮನ್ನಣೆ ಕೊಡಬೇಕೆಂದು ಮುಖ್ಯಮಂತ್ರಿಗಳಿಗೆ ಸದಾನಂದ ಗೌಡರು ಮನವಿ ಮಾಡಿಕೊಂಡರು. ಇದನ್ನೂ ಓದಿ: ವಾಜಪೇಯಿ ಹೆವೀ ಡ್ರಿಂಕರ್ – ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ

    ಸಿ.ಪಿ ಯೋಗೇಶ್ವರ್ ಮುಖ್ಯಮಂತ್ರಿ ಭೇಟಿ ವಿಚಾರವಾಗಿ ಸದಾನಂದ ಗೌಡ, ಯೋಗೇಶ್ವರ್‍ಗೆ ಟಾಂಗ್ ನೀಡಿದ್ದಾರೆ. ನಮ್ಮ ಸಂವಿಧಾನದಲ್ಲಿ ಶೇ.15 ಮಂತ್ರಿ ಸ್ಥಾನ ಕೊಡಲು ಮಾತ್ರ ಅವಕಾಶವಿದೆ. ಇನ್ನೂ 4 ಮಂತ್ರಿ ಸ್ಥಾನ ಬಾಕಿ ಇದೆ ಅದನ್ನು ನೀಡುವ ವಿಚಾರ ಮುಖ್ಯಮಂತ್ರಿಗಳಿಗೆ ಬಿಟ್ಟಿದ್ದು, ಯಾರೂ ಹಸ್ತಕ್ಷೇಪ ಮಾಡಬಾರದು ಮುಖ್ಯಮಂತ್ರಿಗಳಿಗೆ ಬೇಕಾದವರನ್ನು ಅವರ ತಂಡಕ್ಕೆ ಸೇರಿಸಿಕೊಳ್ಳುತ್ತಾರೆ ಎಂದು ದಾಸರಹಳ್ಳಿ ಮಂಡಲ ಕಾರ್ಯಕಾರಿಣಿ ಸಭೆಯಲ್ಲಿ ಸದಾನಂದ ಗೌಡ ಹೇಳಿಕೆ ನೀಡಿದ್ದಾರೆ. ಈ ವೇಳೆ ಮಾಜಿ ಶಾಸಕ ಮುನಿರಾಜು, ಲೋಕೇಶ್ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

  • ಬಿಜೆಪಿಯ ಅದೃಷ್ಟದ ಹೋಟೆಲ್‍ನಲ್ಲಿ ನೂತನ ಸಿಎಂ ಆಯ್ಕೆ

    ಬಿಜೆಪಿಯ ಅದೃಷ್ಟದ ಹೋಟೆಲ್‍ನಲ್ಲಿ ನೂತನ ಸಿಎಂ ಆಯ್ಕೆ

    ಬೆಂಗಳೂರು: ರಾಜ್ಯದ ಮುಂದಿನ ಸಿಎಂ ಯಾರು ಎಂಬ ಪ್ರಶ್ನೆಗೆ ಇಂದು ನಗರದ ಹೋಟೆಲಿನಲ್ಲಿ ನಡೆಯಲಿರುವ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಉತ್ತರ ಸಿಗಲಿದೆ.

    ಹೋಟೆಲ್ ದಿ ಕ್ಯಾಪಿಟಲ್ ನಲ್ಲಿ ಇಂದು ಸಂಜೆ 7 ಗಂಟೆಗೆ ಶಾಸಕಾಂಗ ಸಭೆಯನ್ನು ಕರೆಯಲಾಗಿದೆ. ಶಾಸಕಾಂಗ ಸಭೆಯ ಹಿನ್ನೆಲೆಯಲ್ಲಿ ಹೋಟೆಲ್ ಕ್ಯಾಪಿಟಲ್ ನಲ್ಲಿ ಸಕಲ ಸಿದ್ದತೆಗಳನ್ನ ಮಾಡಿಕೊಳ್ಳಲಾಗುತ್ತಿದೆ.

    ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ವೀಕ್ಷಕರಾಗಿ ನೇಮಕವಾಗಿರುವ ಸಚಿವರಾದ ಧರ್ಮೇಂದ್ರ ಪ್ರದಾನ್ ಮತ್ತು ಕಿಶನ್ ರೆಡ್ಡಿ ಸಭೆಯಲ್ಲಿ ಭಾಗಿಯಾಗಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲಿದ್ದಾರೆ. ಇದನ್ನೂ ಓದಿ : ಯಡಿಯೂರಪ್ಪನವರ ಅನುಭವವನ್ನು ಪಕ್ಷ ಬಳಸಿಕೊಳ್ಳಲಿದೆ: ಅರುಣ್ ಸಿಂಗ್

    ಯಾಕೆ ಈ ಹೋಟೆಲ್?
    ಇದೇ ಕ್ಯಾಪಿಟಲ್ ಹೋಟೆಲ್ ನಲ್ಲೇ ಕಳೆದ ಬಾರಿ ಸದಾನಂದಗೌಡ ಮತ್ತು ಜಗದೀಶ್ ಶೆಟ್ಟರ್ ಅವರನ್ನು ಸಿಎಂ ಸ್ಥಾನಕ್ಕೆ ಆಯ್ಕೆ ಮಾಡಲಾಗಿತ್ತು. ರಾಜಭವನದ ಪಕ್ಕದಲ್ಲೇ ಇರುವ ಹೋಟೆಲಿನಲ್ಲಿ ಸಭೆ ನಡೆಯಲಿರುವ ಕಾರಣ ಇಂದೇ ಪ್ರಕ್ರಿಯೆ ಮುಗಿದು ನೂತನ ಸಿಎಂ ರಾಜಭವನಕ್ಕೆ ತೆರಳಿ ಸರ್ಕಾರ ರಚನೆಗೆ ಅನುಮತಿ ಕೇಳುವ ಸಾಧ್ಯತೆಯಿದೆ.

  • ಸಿದ್ದರಾಮಯ್ಯನವರು ಇತ್ತೀಚಿನ ದಿನಗಳಲ್ಲಿ ಪೂರ್ತಿ ಮೆಂಟಲ್ ಆಗಿಬಿಟ್ಟಿದ್ದಾರೆ: ಸದಾನಂದಗೌಡ

    ಸಿದ್ದರಾಮಯ್ಯನವರು ಇತ್ತೀಚಿನ ದಿನಗಳಲ್ಲಿ ಪೂರ್ತಿ ಮೆಂಟಲ್ ಆಗಿಬಿಟ್ಟಿದ್ದಾರೆ: ಸದಾನಂದಗೌಡ

    ಮಡಿಕೇರಿ: ಇತ್ತೀಚಿನ ದಿನಗಳಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರು ಪೂರ್ತಿ ಮೆಂಟಲ್ ಆಗಿಬಿಟ್ಟಿದ್ದಾರೆ ಎಂದು ಕೇಂದ್ರ ಸಚಿವ ಸದಾನಂದಗೌಡ ಹೇಳಿದ್ದಾರೆ.

    ಸೋಮವಾರಪೇಟೆ ತಾಲೂಕಿನ ಕುಶಾಲನಗರದಲ್ಲಿ ಮಾತಾನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಪ್ರಶ್ನೆಯೇ ಇಲ್ಲ. ಅಲ್ಲದೆ ಮುಖ್ಯಮಂತ್ರಿ ಹುದ್ದೆಗೆ ವೆಕೆನ್ಸಿ ಇಲ್ಲ ಮತ್ತು ಮುಖ್ಯಮಂತ್ರಿ ಬದಲಾವಣೆ ಎನ್ನೋದು ಪಕ್ಷದ ಆಂತರಿಕ ಚರ್ಚೆ ಅಲ್ಲ. ಮುಂದೆಯೂ ಯಡಿಯೂರಪ್ಪ ಅವರೇ ಸಿಎಂ ಅಗಿ ಮುಂದುವರೆಯುತ್ತಾರೆ ಎಂದರು.

    ಸಿದ್ದರಾಮಯ್ಯನವರನ್ನು ನೋಡಿದರೆ ಅಯ್ಯೋ ಪಾಪ ಎನಿಸುತ್ತದೆ. ಅವರಿಗೆ ಹುದ್ದೆಯನ್ನು ಉಳಿಸಿಕೊಳ್ಳುವುದೇ ಈಗ ಕಷ್ಟವಾಗಿದೆ. ಆದರೆ ಅವರು ನಮ್ಮ ದೇಶ ಮತ್ತು ಪಕ್ಷದ ಬಗ್ಗೆ ಮಾತಾನಾಡುಲು ಬರುತ್ತಾರೆ ಎಂದು ತಿರುಗೇಟು ನೀಡಿದರು.

  • ಬಲ್ಕ್ ಡ್ರಗ್ಸ್, ಮೆಡಿಕಲ್ ಡಿವೈಸ್ ಪಾರ್ಕ್ ಸ್ಥಾಪನೆಗೆ ಕೇಂದ್ರ ನಿರ್ಧಾರ- ಮಾರ್ಗಸೂಚಿ ಪ್ರಕಟ

    ಬಲ್ಕ್ ಡ್ರಗ್ಸ್, ಮೆಡಿಕಲ್ ಡಿವೈಸ್ ಪಾರ್ಕ್ ಸ್ಥಾಪನೆಗೆ ಕೇಂದ್ರ ನಿರ್ಧಾರ- ಮಾರ್ಗಸೂಚಿ ಪ್ರಕಟ

    – ಫಾರ್ಮಾ ವಲಯದಲ್ಲಿ ಸ್ವಾವಲಂಬನೆ ಸಾಧಿಸಲು ಕ್ರಮ

    ನವದೆಹಲಿ: ದೇಶದ ಫಾರ್ಮಾ ವಲಯದಲ್ಲಿ ಮತ್ತಷ್ಟು ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ 13,600 ರೂ. ಕೋಟಿ ವೆಚ್ಚದಲ್ಲಿ ದೇಶದ್ಯಾಂತ ಏಳು ಬಲ್ಕ್ ಡ್ರಗ್ಸ್ ಮತ್ತು ಮೆಡಿಕಲ್ ಡಿವೈಸ್ ಪಾರ್ಕ್ ಗಳ ಸ್ಥಾಪನೆಗೆ ಕೇಂದ್ರ ಸರ್ಕಾರ ನಿರ್ಧಿರಿಸಿದೆ.

    ಈ ಸಂಬಂಧ ಇಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ಮಾರ್ಗಸೂಚಿ ಬಿಡುಗಡೆಗೊಳಿಸಿ ಮಾತನಾಡಿ, ಆತ್ಮ ನಿರ್ಭರ್ ಭಾರತ್ ಯೋಜನೆಯಡಿ ಔಷಧಿ ವಲಯವನ್ನು ಸ್ವಾವಲಂಬಿ ಮಾಡಲಿದ್ದೇವೆ. ಆಮದು ಬದಲಿಗೆ ಹೆಚ್ಚು ಔಷಧಿಗಳನ್ನು ಭಾರತದಲ್ಲೇ ಉತ್ಪಾದನೆ ಮಾಡಲಿದ್ದೇವೆ ಎಂದರು.

    ಸರ್ಕಾರ ಮೇಗಾ ಪಾರ್ಕ್ ಗಳ ಸ್ಥಾಪನೆಗೆ ಮಾರ್ಗಸೂಚಿ ಪ್ರಕಟಿಸಿದೆ. ಈ ನಿಯಮಗಳ ಅನ್ವಯ ಯಾವ ರಾಜ್ಯ ಹೆಚ್ಚು ಆಸಕ್ತಿ ತೋರಿಸಿ ಸೌಲಭ್ಯಗಳನ್ನು ಒದಗಿಸಲು ಮುಂದೆ ಬರಲಿದೆಯೋ ಅಲ್ಲಿ ಪಾರ್ಕ್ ಸ್ಥಾಪನೆ ಮಾಡಲು ಕೇಂದ್ರ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ. ಕರ್ನಾಟಕದಿಂದಲೂ ರಾಯಚೂರಿನಲ್ಲಿ ಬಲ್ಕ್ ಡ್ರಗ್ಸ್ ಮತ್ತು ಮೆಡಿಕಲ್ ಡಿವೈಸ್ ಪಾರ್ಕ್ ಸ್ಥಾಪನೆ ಮಾಡುವ ಪ್ರಸ್ತಾಪ ಬಂದಿದೆ ಎಂದು ಸದಾನಂದಗೌಡ ತಿಳಿಸಿದರು.

    ಈಗಾಗಲೇ ಬೇರೆ ದೇಶಗಳು ಭಾರತದಲ್ಲಿ ಹೂಡಿಕೆ ಮಾಡಲು ಮುಂದೆ ಬಂದಿವೆ. ಉತ್ತಮ ಸಂಸ್ಥೆಗಳಿಗೆ ಅವಕಾಶ ನೀಡಲಾಗುವುದು. ಇದರಿಂದ ಔಷಧಿ ವಲಯ ಒಂದು ಕಡೆ ಸ್ವಾವಲಂಬನೆ ಸಾಧಿಸಿದರೇ ಮತ್ತೊಂದು ಕಡೆ ಪರೋಕ್ಷವಾಗಿ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

  • ಕುಮಾರಸ್ವಾಮಿ ರಾಜಕೀಯ ಮೆಟ್ಟಿಲು ಕುಸಿಯುತ್ತಿದೆ – ಸದಾನಂದ ಗೌಡ

    ಕುಮಾರಸ್ವಾಮಿ ರಾಜಕೀಯ ಮೆಟ್ಟಿಲು ಕುಸಿಯುತ್ತಿದೆ – ಸದಾನಂದ ಗೌಡ

    ಮಂಡ್ಯ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ರಾಜಕೀಯ ಮೆಟ್ಟಿಲು ಸದ್ಯದ ಸಂದರ್ಭದಲ್ಲಿ ಕುಸಿಯುತ್ತಿದೆ. ಹೀಗಾಗಿ ಅವರು ಸಿಡಿಗಳನ್ನು ಹಿಡಿದುಕೊಂಡು ಬರುತ್ತಿದ್ದಾರೆ ಎಂದು ಕೇಂದ್ರ ಸಚಿವ ಸದಾನಂದಗೌಡ ಟಾಂಗ್ ನೀಡಿದ್ದಾರೆ.

    ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮಂಗಳೂರು ಗಲಭೆ ವಿಚಾರದ ಕುರಿತು ಸಿಡಿ ಬಿಡುಗಡೆ ಮಾಡಿದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಮಂಗಳೂರು ಗಲಭೆ ನಡೆದು ಇಷ್ಟು ದಿನಗಳು ಕಳೆದಿವೆ, ಗಲಭೆಯಾದಗ ಕುಮಾರಸ್ವಾಮಿ ಅವರು ಯಾಕೆ ಸಿಡಿ ಬಿಡುಗಡೆ ಮಾಡಲಿಲ್ಲ ಎಂದು ಪ್ರಶ್ನೆ ಮಾಡಿದರು.

    ಕುಮಾರಸ್ವಾಮಿ ಅವರು ಅವರದ್ದೆ ಜನರನ್ನು ಕಳುಹಿಸಿ ಪೊಲೀಸ್ ಡ್ರೆಸ್ ಹಾಕಿಸಿ ಎಲ್ಲಾ ರೀತಿಯ ವಿಡಿಯೋ ಮಾಡಿ ಈಗ ಸಿಡಿ ಬಿಡುಗಡೆ ಮಾಡಿರಬೇಕು. ಈ ಸಿಡಿ ಬಿಡುಗಡೆಯ ಹಿಂದೆ ದೊಡ್ಡ ಹುನ್ನಾರವಿದೆ. ಸಿಡಿಗಳು ಹಲವಾರು ಜನರಿಗೆ ತಮ್ಮ ರಾಜಕೀಯ ಅಸ್ತಿತ್ವದ ಸ್ವತ್ತಾಗಿ ಪರಿವರ್ತನೆಯಾಗಿವೆ. ಹೀಗಾಗಿ ಕುಮಾರಸ್ವಾಮಿ ಅವರು ಸಿಡಿ ಬಿಡುಗಡೆ ಮಾಡಿದ್ದಾರೆ ಎಂದು ವ್ಯಂಗ್ಯವಾಡಿದರು. ಇದನ್ನು ಓದಿ : ಮಂಗ್ಳೂರನ್ನು ‘ಕಾಶ್ಮೀರ’ ಮಾಡಲು ಹೊರಟಿದೆ, ಇದನ್ನು ತೋರಿಸಲು 35 ವಿಡಿಯೋ ರಿಲೀಸ್ – ‘ಸಿಡಿ’ದ ಎಚ್‍ಡಿಕೆ

    ಕರ್ನಾಟಕದಲ್ಲಿ ಇದುವರೆಗೆ ಸಾಕಷ್ಟು ಸಿಡಿಗಳು ಬಿಡುಗಡೆಯಾಗಿವೆ. ಅವುಗಳಲ್ಲಾ ಸತ್ಯ ಆಗಿದ್ದರೆ ಹಲವರು ಜೈಲಿಗೆ ಹೋಗಬೇಕಿತ್ತು. ಇದು ಕೇವಲ ತಮ್ಮ ತಾತ್ಕಾಲಿಕ ಬೆಳೆ ಬೇಯಿಸಿಕೊಳ್ಳಲು ಜನರನ್ನು ಬೇರೆ ದಾರಿಗೆ ಎಳೆಯಲು ಕುಮಾರಸ್ವಾಮಿ ಅವರು ಹೀಗೆ ಮಾಡುತ್ತಿದ್ದಾರೆ ಎಂದು ಸದಾನಂದಗೌಡ ಅವರು ವಾಗ್ದಾಳಿ ನಡೆಸಿದರು.

  • ಕೊಡಗಿನ ಬಾಳಗೋಡು ಏಕಲವ್ಯ ಶಾಲೆಗೆ 5 ಕೋಟಿ: ಡಿ.ವಿ ಸದಾನಂದಗೌಡ

    ಕೊಡಗಿನ ಬಾಳಗೋಡು ಏಕಲವ್ಯ ಶಾಲೆಗೆ 5 ಕೋಟಿ: ಡಿ.ವಿ ಸದಾನಂದಗೌಡ

    – ಕೈ ಮಿತ್ರರಿಗೆ ಕೇಂದ್ರ ಸಚಿವ ವಿನಂತಿ

    ಮಡಿಕೇರಿ: ರಾಜ್ಯದಲ್ಲಿರುವ ಬುಡಕಟ್ಟು ಇಲಾಖೆ ವ್ಯಾಪ್ತಿಯ ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ (ಇಎಂಆರ್‍ಎಸ್) ಕೇಂದ್ರ ಸರ್ಕಾರವು ಬರೋಬ್ಬರಿ 15 ಕೋಟಿ ಅನುದಾನ ಮಂಜೂರು ಮಾಡಿದೆ.

    ಡಿಸೆಂಬರ್ 31ರಂದು ಅನುದಾನ ಮಂಜೂರಾತಿ ಆದೇಶ ಹೊರಡಿಸಲಾಗಿದ್ದು, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. “ಕೇಂದ್ರ ಸರ್ಕಾರದ ಬುಡಕಟ್ಟು ಇಲಾಖೆಯು ನಮ್ಮ ಬೆಳಗಾವಿ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಏಕಲವ್ಯ ಮಾದರಿ ವಸತಿ ಶಾಲೆಗಳ (EMRS) ಅಭಿವೃದ್ಧಿಗೆ ಪ್ರಸಕ್ತ ಸಾಲಿನಲ್ಲಿ ರೂ.15 ಕೋಟಿ ಅನುದಾನವನ್ನು ಮಂಜೂರು ಮಾಡಿದೆ. ಸಮುದಾಯದ ಮಕ್ಕಳ ಏಳ್ಗೆಯತ್ತ ಮತ್ತೊಂದು ಪುಟ್ಟ ಹೆಜ್ಜೆ. ಪ್ರಧಾನಿ ಮೋದಿ ಅವರಿಗೆ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.

    ರಾಜ್ಯದ ಬೆಳಗಾವಿ, ಚಿಕ್ಕಮಗಳೂರು, ಕೊಡಗು ಶಾಲೆಗಳಿಗೆ ತಲಾ 5 ಕೋಟಿ ಅನುದಾನ ಮಂಜೂರು ಮಾಡಲಾಗಿದೆ. ವಿರಾಜಪೇಟೆ ತಾಲೂಕಿನ ಬಾಳಗೋಡು ಶಾಲೆಗೂ 5 ಕೋಟಿ ಲಭಿಸಿದೆ. ಅಲ್ಲದೇ ಸದಾನಂದಗೌಡ ಅವರು ನಿರಂತರವಾಗಿ ಟ್ವೀಟ್ ಮಾಡುವ ಮೂಲಕ ಪ್ರಧಾನಿ ಮೋದಿ ಅವರು ಜಾರಿ ಮಾಡಿರುವ ಅನುದಾಗಳ ಬಗ್ಗೆ ತಿಳಿಸಿದ್ದಾರೆ.

    ‘ಮನ್ರೆಗಾ’ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಈವರೆಗೆ ಕೇಂದ್ರವು ಕರ್ನಾಟಕಕ್ಕೆ ಒಟ್ಟು 3995.43 ಕೋಟಿ ರೂ. ಹಾಗೂ ಈ ಹಿಂದಿನ ಬಾಕಿ 500 ಕೋಟಿ ರೂ. ಅನುದಾನವನ್ನು ಸಹ ಬಿಡುಗಡೆ ಮಾಡಿದೆ. ಜಿ.ಎಸ್.ಟಿ.ಗೆ ಸಂಬಂಧಪಟ್ಟಂತೆ ಪ್ರಸಕ್ತ ಸಾಲಿನ ಇದುವರೆಗಿನ ಅವಧಿಯಲ್ಲಿ 12,483.73 ಕೋಟಿ ರೂ.ಗಳು ರಾಜ್ಯದ ಪಾಲು. ಇದು ನಿರಂತರ ಪ್ರಕ್ರಿಯೆಯಾಗಿದೆ.

    ಶೈಕ್ಷಣಿಕ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನರೇಂದ್ರ ಮೋದಿ ಸರ್ಕಾರವು 2019-20ರ ಸಾಲಿನಲ್ಲಿ ಈವರೆಗೆ ಕರ್ನಾಟಕ ರಾಜ್ಯಕ್ಕೆ 898.5 ಕೋಟಿ ರೂಗಳನ್ನು ಬಿಡುಗಡೆ ಮಾಡಿದೆ. ಸಿಎಂ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದೊಂದಿಗೆ ಉತ್ತಮ ಸಮನ್ವಯ ಹೊಂದಿದೆ. ಶೈಕ್ಷಣಿಕ ಕ್ಷೇತ್ರದ ಅಮೂಲಾಗೃ ಅಭಿವೃದ್ಧಿಗೆ ಕೆಲಸ ಮಾಡುತ್ತಿದೆ ಎಂದು ತಿಳಿಸಿದ್ದಾರೆ.

    ಕೇಂದ್ರ ಸರ್ಕಾರವು 2019-20ರ ಆರ್ಥಿಕ ವರ್ಷದಲ್ಲಿ ಇಲ್ಲಿಯ ತನಕ ವಿವಿಧ ಯೋಜನೆಗಳಡಿಯಲ್ಲಿ ಕರ್ನಾಟಕಕ್ಕೆ 41,889.75 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ. ಅನುದಾನ ಬಿಡುಗಡೆಗೆ ಪ್ರತಿಷ್ಠಾಪಿತ ಮಾರ್ಗಸೂಚಿಗಳಿವೆ. ಯಾವ ರಾಜ್ಯಗಳಿಗೂ ತಾರತಮ್ಯ ಎಸಗುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಟೀಕೆ ಮಾಡುವ ಮುನ್ನ ಅಂಕಿ-ಅಂಶ, ಸಂತ್ಯಾಂಶ ಏನೆಂಬುದನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡಿ. ಜನರಲ್ಲಿ ತಪ್ಪುಗ್ರಹಿಕೆ ಉಂಟುಮಾಡಲು ಪ್ರಯತ್ನಸಬೇಡಿ ಎಂದು ಕಾಂಗ್ರೆಸ್ ಮಿತ್ರರಿಗೆ ವಿನಂತಿ ಮಾಡಿಕೊಂಡಿದ್ದಾರೆ.

  • ದೇವರು, ಗುರುಗಳು, ತಂದೆ-ತಾಯಿಯ ವ್ಯತ್ಯಾಸ ಗೊತ್ತಿಲ್ಲದ ರಾಕ್ಷಸರನ್ನು ದೇವರೇ ಶಿಕ್ಷಿಸಲಿ: ಡಿವಿಎಸ್

    ದೇವರು, ಗುರುಗಳು, ತಂದೆ-ತಾಯಿಯ ವ್ಯತ್ಯಾಸ ಗೊತ್ತಿಲ್ಲದ ರಾಕ್ಷಸರನ್ನು ದೇವರೇ ಶಿಕ್ಷಿಸಲಿ: ಡಿವಿಎಸ್

    ಬೆಂಗಳೂರು: ಫೋನ್ ಕದ್ದಾಲಿಕೆ ಯಾರೇ ಮಾಡಿರಲಿ ಅವರು ಸಾರ್ವಜನಿಕ ಜೀವನದಲ್ಲಿ ಇರಲು ಅರ್ಹರಲ್ಲ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಸಚಿವ ಡಿ.ವಿ ಸದಾನಂದಗೌಡ ಅವರು ಟ್ವೀಟ್ ಮಾಡಿದ್ದಾರೆ.

    ಸದಾನಂದಗೌಡ ಅವರು ತಮ್ಮ ಟ್ವಿಟ್ಟರಿನಲ್ಲಿ, “ಕೆಲ ಸಮಯದ ಹಿಂದೆ ಗುರು ಪೀಠ ಶ್ರೀ ಆದಿಚುಂಚನಗಿರಿ ಶ್ರೀ ನಿರ್ಮಲಾನಂದ ಸ್ವಾಮೀಜಿಯವರ ಫೋನ್ ಕದ್ದಾಲಿಕೆ ನಡೆದಿದೆ ಎನ್ನುವ ಮಾಧ್ಯಮ ವರದಿಗಳು ಆಘಾತಕಾರಿಯಾದದ್ದು. ಅಂತಹ ಕೆಲಸ ಯಾರೇ ಮಾಡಿರಲಿ ಅವರು ಸಾರ್ವಜನಿಕ ಜೀವನದಲ್ಲಿ ಇರಲು ಅರ್ಹರಲ್ಲ. ದೇವರು, ಗುರುಗಳು, ತಂದೆ ತಾಯಿಯ ವ್ಯತ್ಯಾಸ ಗೊತ್ತಿಲ್ಲದ ರಾಕ್ಷಸರನ್ನು ದೇವರೇ ಶಿಕ್ಷಿಸಲಿ” ಎಂದು ಟ್ವೀಟ್ ಮಾಡಿದ್ದಾರೆ.

    ಈ ಬಗ್ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮಾಡುವುದರ ಮೂಲಕ ತನ್ನ ವಿರುದ್ಧ ಕೇಳಿ ಬರುತ್ತಿರುವ ಆರೋಪಗಳಿಗೆ ಸ್ಪಷ್ಟನೆ ನೀಡಿದ್ದರು. ಕುಮಾರಸ್ವಾಮಿ ಅವರು ತಮ್ಮ ಟ್ವಿಟ್ಟರಿನಲ್ಲಿ, ನನ್ನ ಅಧಿಕಾರವಧಿಯಲ್ಲಿ ಆದಿ ಚುಂಚನಗಿರಿ ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ನಡೆದಿತ್ತು ಎಂಬ ವರದಿಗಳು, ಅದಕ್ಕೆ ಸಂಬಂಧಿಸಿದಂತೆ ರಾಜಕೀಯ ನಾಯಕರ ಹೇಳಿಕೆಗಳು ನನ್ನ ಹೃದಯದಲ್ಲಿ ಸಹಿಸಲಾಗದ ನೋವುಂಟು ಮಾಡಿವೆ. ಎಲ್ಲಕ್ಕೂ ಮಿಗಿಲಾಗಿ ಸ್ವಾಮೀಜಿಗಳಲ್ಲಿ ಮೂಡಿರಬಹುದಾದ ಬೇಸರ ನನ್ನ ನೋವನ್ನು ಹೆಚ್ಚಿಸಿದೆ ಎಂದಿದ್ದಾರೆ.

    ಈ ಪ್ರಕರಣದಲ್ಲಿ ಅನಗತ್ಯವಾಗಿ ನನ್ನ ಹೆಸರು ಪ್ರಸ್ತಾಪಿಸಲಾಗಿದೆ. ಸಂಭವಿಸದ ತಪ್ಪೊಂದಕ್ಕೆ ಅಶೋಕ್ ಅವರು ಎಲ್ಲರಿಗಿಂತಲೂ ಮುಂದೆ ಹೋಗಿ ಕ್ಷಮೆ ಕೇಳಿದ್ದಾರೆ. ಇದರಿಂದ ಅವರಿಗೇನು ಲಾಭವೋ ಗೊತ್ತಿಲ್ಲ. ಅವರ ಆತುರಕ್ಕೆ ಮರುಕವಿದೆ. ಅದೇ ಹೊತ್ತಲ್ಲೇ ಶ್ರೀಗಳಿಗಾಗುತ್ತಿರುವ ಬೇಸರಕ್ಕೆ ಅತೀವ ನೋವಿದೆ ಎಂದು ಹೇಳಿಕೊಂಡಿದ್ದಾರೆ.

    ನಿರ್ಮಲಾನಂದರು ನನಗೆ ನೈತಿಕ ಬಲವಾಗಿದ್ದವರು, ತಮ್ಮ ಸಾಮಾಜಿಕ ಕಾರ್ಯಗಳ ನೆರಳಲ್ಲಿ ನನಗೆ ಮಾರ್ಗದರ್ಶನ ಮಾಡಿದವರು, ನನಗಾಗಿ ಕಾಲಭೈರವನಲ್ಲಿ ಪ್ರಾರ್ಥಿಸಿದವರು. ಅವರ ವಿಚಾರದಲ್ಲಿ ನಾನು ಅನುಮಾನದ ನಡೆ ಅನುಸರಿಸಲು ಸಾಧ್ಯವೇ? ಖಂಡಿತ ಇಲ್ಲ ಎಂದು ಮಾಜಿ ಸಿಎಂ ಟ್ವೀಟ್ ಮಾಡಿದ್ದಾರೆ.