Tag: ಸದಾನಂದ ಗೌಡ

  • ತಳಮಟ್ಟದಿಂದ ಪಕ್ಷವನ್ನು ಬಲ ಪಡಿಸಿದ ಪ್ರಮುಖ ನಾಯಕ – ಡಿವಿಎಸ್‍ಗೆ ಮೋದಿ ಶುಭಾಶಯ

    ತಳಮಟ್ಟದಿಂದ ಪಕ್ಷವನ್ನು ಬಲ ಪಡಿಸಿದ ಪ್ರಮುಖ ನಾಯಕ – ಡಿವಿಎಸ್‍ಗೆ ಮೋದಿ ಶುಭಾಶಯ

    ನವದೆಹಲಿ: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ ಸದಾನಂದ ಗೌಡರವರು ಇಂದು 68 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಇತರ ಸಹೋದ್ಯೋಗಿಗಳು ಟ್ವೀಟ್ ಮಾಡುವ ಮೂಲಕ ಸದಾನಂದ ಗೌಡರಿಗೆ ಶುಭಾಶಯ ತಿಳಿಸಿದ್ದಾರೆ.

    ಈ ಕುರಿತಂತೆ ಪ್ರಧಾನಿ ನರೇಂದ್ರ ಮೋದಿಯವರು, ಕೇಂದ್ರ ಸಚಿವ ಶ್ರೀ ಡಿ.ವಿ ಸದಾನಂದ ಗೌಡರಿಗೆ ಹುಟ್ಟುಹಬ್ಬದ ಶುಭಾಶಯಗಳು. ನೀವು ತಳಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವಲ್ಲಿ ಪ್ರಮುಖ ಕಾರ್ಯನಿರ್ವಹಿಸಿದ ಓರ್ವ ಅನುಭವಿ ಪ್ರಭಾವಿ ನಾಯಕ. ರಾಸಾಯನಿಕ ಮತ್ತು ರಸಗೊಬ್ಬರ ಕ್ಷೇತ್ರಗಳ ಬೆಳವಣಿಗೆ ಪ್ರಮುಖ ಪಾತ್ರವಹಿಸಿದವರು. ಅವರ ದೀರ್ಘಕಾಲ ಬಾಳಬೇಕೆಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

    ಕೇಂದ್ರದ ಹಿರಿಯ ಸಚಿವರಾದ ರಾಜನಾಥ್ ಸಿಂಗ್‍ರವರು, ರಾಷ್ಟ್ರ ಮತ್ತು ಪಕ್ಷಕ್ಕೆ ಹಲವಾರು ಸೇವೆ ಸಲ್ಲಿಸಿದ್ದಾರೆ ಮತ್ತು ತಮ್ಮ ಕರ್ತವ್ಯವನ್ನು ಸಂಪೂರ್ಣವಾಗಿ ಅಚ್ಚು-ಕಟ್ಟಿನಿಂದ ನಿರ್ವಹಿಸುತ್ತಾರೆ. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಸಿಗಲಿ ಎಂದು ಟ್ವೀಟ್ ಮಾಡುವ ಮೂಲಕ ಶುಭಾಶಯ ಕೋರಿದ್ದಾರೆ.

    ಮತ್ತೊರ್ವ ಕ್ಯಾಬಿನೆಟ್ ಸಹೋದೋಗ್ಯಿ ಪ್ರಕಾಶ್ ಜಾವಡೇಕರ್, ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ ಸದಾನಂದ ಗೌಡರವರಿಗೆ ಹುಟ್ಟುಹಬ್ಬದ ಶುಭಾಶಯಗಳು. ನಿಮಗೆ ಉತ್ತಮ ಆರೋಗ್ಯ ಹಾಗೂ ದೀರ್ಘಯುಷ್ಯ ದೊರೆಯಲಿ ಎಂದು ಟ್ವೀಟ್ ಮಾಡುವ ಮೂಲಕ ಶುಭಾಶಯ ತಿಳಿಸಿದ್ದಾರೆ.

    ಸದಾನಂದ ಗೌಡರು ಬೆಂಗಳೂರು ಉತ್ತರ ಕ್ಷೇತ್ರದಿಂದ ಗೆದ್ದು ಲೋಕಸಭೆಗೆ ಆಯ್ಕೆ ಆಗಿದ್ದಾರೆ. ಈ ಮುನ್ನ ಕರ್ನಾಟಕದ 20ನೇ ಮುಖ್ಯಮಂತ್ರಿಯಾಗಿ ಕೂಡ ಕಾರ್ಯನಿರ್ವಹಿಸಿದ್ದರು. ಅಲ್ಲದೆ 2016ರಲ್ಲಿ ಕಾನೂನು ಹಾಗೂ ರೈಲ್ವೇ ಖಾತೆಯ ರಾಜ್ಯ ಸಚಿವರಾಗಿದ್ದರು.

  • ಸದಾನಂದ ಗೌಡರಿಗೆ ಕೊರೊನಾ ಸೋಂಕು

    ಸದಾನಂದ ಗೌಡರಿಗೆ ಕೊರೊನಾ ಸೋಂಕು

    ಬೆಂಗಳೂರು: ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರಿಗೆ ಕೋವಿಡ್-19 ಸೋಂಕು ತಗುಲಿದೆ. ಸದಾನಂದ ಗೌಡರು ಟ್ವಿಟ್ಟರ್ ಮೂಲಕ ಸೋಂಕು ತಗುಲಿರುವ ಮಾಹಿತಿಯನ್ನ ಬಹಿರಂಗಪಡಿಸಿದ್ದಾರೆ.

    ಸೋಂಕಿನ ಕೆಲ ಲಕ್ಷಣಗಳು ಕಂಡು ಬಂದ ಹಿನ್ನೆಲೆ ಕೋವಿಡ್ 19 ಪರೀಕ್ಷೆಗೆ ಒಳಗಾಗಿದ್ದೆ. ವರದಿಯಲ್ಲಿ ಸೋಂಕು ತಗಲಿರೋದು ಖಚಿತವಾಗಿದ್ದು, ಐಸೋಲೇಷನ್ ನಲ್ಲಿದ್ದೇನೆ. ನನ್ನ ಸಂಪರ್ಕದಲ್ಲಿ ಬಂದವರು ತಮ್ಮ ಆರೋಗ್ಯದ ಬಗ್ಗೆ ಎಚ್ಚರವಹಿಸಿ ಮತ್ತು ಕೊರೊನಾ ನಿಯಮಗಳನ್ನ ಪಾಲಿಸಿ ಎಂದು ಸದಾನಂದ ಗೌಡರು ತಿಳಿಸಿದ್ದಾರೆ.

    3-4 ತಿಂಗಳಿನಲ್ಲಿ ಕೊರೊನಾಗೆ ಭಾರತ ಲಸಿಕೆ ಸಿಗಲಿದೆ. ಲಸಿಕೆ ಲಭ್ಯವಾಗುವ ವಿಚಾರದಲ್ಲಿ ನನಗೆ ಬಹಳ ವಿಶ್ವಾಸವಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅಧಿಕೃತವಾಗಿ ಪ್ರಕಟಿಸಿದ್ದಾರೆ. ಕಾರ್ಯಕ್ರಮದ ಒಂದರಲ್ಲಿ ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿದ ಅವರು, ವೈಜ್ಞಾನಿಕ ಮಾನದಂಡಗಳ ಅಡಿಯಲ್ಲಿ ಲಸಿಕೆ ವಿತರಣೆ ಮಾಡಲಾಗುವುದು. ಆರೋಗ್ಯ ಕಾರ್ಯಕರ್ತರಿಗೆ ಮತ್ತು ಕೊರೊನಾ ವಾರಿಯರ್ಸ್‍ಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಬಳಿಕ ಹಿರಿಯ ನಾಗರಿಕರಿಗೆ ಲಸಿಕೆಯನ್ನು ಹಾಕಲಾಗುವುದು ಎಂದು ಹೇಳಿದ್ದಾರೆ.

  • ಹೋಟೆಲ್ ಕ್ವಾರಂಟೈನ್‍ಗೆ ಒಪ್ಪದ ಪ್ರಯಾಣಿಕರು ದೆಹಲಿಗೆ ವಾಪಸ್

    ಹೋಟೆಲ್ ಕ್ವಾರಂಟೈನ್‍ಗೆ ಒಪ್ಪದ ಪ್ರಯಾಣಿಕರು ದೆಹಲಿಗೆ ವಾಪಸ್

    – ಏರ್‌ಪೋರ್ಟಿನಲ್ಲಿ ಮಹಿಳೆ ರಂಪಾಟ
    – ಹೋಂ ಕ್ವಾರಂಟೈನ್‍ಗೆ ತೆರಳಿದ ಸದಾನಂದ ಗೌಡ

    ಬೆಂಗಳೂರು: ಇಂದಿನಿಂದ ದೇಶಿಯ ವಿಮಾನಗಳ ಹಾರಾಟ ಆರಂಭವಾಗಿದ್ದು, ಚೆನ್ನೈ ಹಾಗೂ ದೆಹಲಿಯಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಮಾನಗಳು ಆಗಮಿಸಿವೆ.

    ಎರಡು ತಿಂಗಳ ಬಳಿಕ ಮೊದಲ ಬಾರಿಗೆ ದೇಶಿಯ ವಿಮಾನ ಹಾರಾಟ ನಡೆಸಿದ್ದು, ಇಂದು 120 ಜನ ಪ್ರಯಾಣಿಕರು ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಬಂದವರನ್ನೆಲ್ಲ ಹೋಟೆಲ್ ನಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಆದರೆ ಇದಕ್ಕೆ ಒಪ್ಪದ ಕೆಲ ಪ್ರಯಾಣಿಕರು ದೆಹಲಿಗೆ ವಾಪಸ್ಸಾಗಿದ್ದಾರೆ.

    ಎಲ್ಲಾ ಪ್ರಯಾಣಿಕರಿಗೆ ಏಳು ದಿನ ಹೋಟೆಲ್ ಕ್ವಾರಂಟೈನ್ ಇನ್ನೂ ಏಳು ದಿನ ಹೋಂ ಕ್ವಾರಂಟೈನ್ ಕಡ್ಡಾಯವಾಗಿದೆ. ಕ್ವಾರಂಟೈನ್ ಗೆ ಹೋಗುವವರು ತಮ್ಮದೇ ಖರ್ಚಿನಲ್ಲಿ ಟಿಕೆಟ್ ಖರೀದಿ ಮಾಡಬೇಕು, ಹೋಮ್ ಕ್ವಾರಂಟೈನ್ ಆಗುವವರು ಕೂಡ ತಮ್ಮದೇ ಖರ್ಚಿನಲ್ಲಿ ಕ್ಯಾಬ್ ಗಳನ್ನು ಬುಕ್ ಮಾಡಿಕೊಳ್ಳಬೇಕು.

    ಏರ್ ಪೋರ್ಟಿನಿಂದ ನಿರ್ಗಮನ ಮಾಡುವವರಿಗೆ ಹೈಟೆಕ್ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತಿಎ. ಟಿವಿ ಸ್ಕ್ರೀನ್ ನಲ್ಲಿ ಪ್ರತಿ ಪ್ರಯಾಣಿಕರ ಬಾಡಿ ಟೆಂಪರೇಚರ್ ಚೆಕ್ ಮಾಡಲಾಗುತ್ತಿದೆ. ಬಾಡಿ ಟೆಂಪರೇಚರ್ 38 ಕ್ಕಿಂತ ಜಾಸ್ತಿ ಬಂದ್ರೆ ಪ್ರಯಾಣಕ್ಕೆ ಅವಕಾಶವಿಲ್ಲ.

    ಪ್ರತಿ ಅರ್ಧ ಗಂಟೆಗೊಮ್ಮೆ ಇಡೀ ಏರ್ ಪೋರ್ಟ್ ಸ್ಯಾನಿಟೈಸ್ ಮಾಡಲಾಗುತ್ತಿದೆ. ಇಂದು 94 ವಿಮಾನ ಗಳು ಏರ್ಪೋರ್ಟಿನಿಂದ ಆಗಮನ ಮತ್ತು ನಿರ್ಗಮನ ಮಾಡಲಿವೆ. 6 ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ಹೋಟೆಲ್ ಕ್ವಾರಂಟೈನ್ ಕಡ್ಡಾಯವಾಗಿದ್ದು, ಉಳಿದ ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ಹೋಂ ಕ್ವಾರಂಟೈನ್ ಮಾಡಲಾಗುತ್ತದೆ.

    ಹೋಟೆಲ್ ಕ್ವಾರಂಟೈನ್ ಗೆ ನಿರಾಕರಿಸಿ ದೆಹಲಿ ಮತ್ತು ಚೆನ್ನೈನಿಂದ ಬಂದ ಪ್ರಯಾಣಿಕರು ಕ್ಯಾತೆ ತೆಗೆದಿದ್ದಾರೆ. ಈ ಸಂಬಂಧ ಏರ್ ಪೋರ್ಟ್ ಒಳಗೆ ಅಧಿಕಾರಿಗಳ ಜೊತೆಗೆ ವಾಗ್ವಾದ ನಡೆಸಿದ್ದಾರೆ. ಹೋಂ ಕ್ವಾರಂಟೈನ್ ಕಳುಹಿಸಿ, ಹೋಟೆಲ್ ಕ್ವಾರಂಟೈನ್ ಗೆ ಹೋಗಲ್ಲ. ಬೇರೆ ಬೇರೆ ರಾಜ್ಯಗಳಿಂದ ದೆಹಲಿಗೆ ಬಂದು ಅಲ್ಲಿಂದ ಬೆಂಗಳೂರಿಗೆ ಬಂದಿದ್ದೀವಿ. ನಾವು ದೆಹಲಿ ರಾಜ್ಯದವರಲ್ಲ ಎಂದು ಗಲಾಟೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಹೋಟೆಲ್ ಕ್ವಾರಂಟೈನ್ ಗೆ ಒಪ್ಪಿಕೊಳ್ಳದ ಪ್ರಯಾಣಿಕರನ್ನು ಸಿಬ್ಬಂದಿ ದೆಹಲಿಗೆ ವಾಪಸ್ ಕಳುಹಿಸಿದ್ದಾರೆ. ಉಳಿದ ಪ್ರಯಾಣಿಕರನ್ನು ಕ್ವಾರಂಟೈನ್ ಮಾಡಲಾಗಿದೆ.

    ಎಸ್ಕೇಪ್ ಆಗ್ತಿದ್ದ ಮಹಿಳೆ:
    ಚೆನ್ನೈನಿಂದ ಬಂದು ಕ್ವಾರಂಟೈನ್ ಆಗದೇ ಏರ್ ಪೋರ್ಟಿನಿಂದ ಮಹಿಳೆಯೊಬ್ಬರು ಎಸ್ಕೇಪ್ ಆಗಲು ಯತ್ನಿಸಿದ್ದು, ಈ ವೇಳೆ ಆಕೆಯನ್ನು ಪಬ್ಲಿಕ್ ಟಿವಿ ಬೆನ್ನಟ್ಟಿದೆ. ಬ್ಯಾರಿಕೇಡ್ ದಾಟಿ ಹೊರಗಡೆ ಬಂದ ದೃಶ್ಯ ನೋಡಿದ ಪಬ್ಲಿಕ್ ಟಿವಿ ಮಹಿಳೆಯನ್ನು ಹಿಂಬಾಲಿಸಿತ್ತು. ಈ ವೇಳೆ ಕ್ಯಾಮೆರಾ ಕಂಡು ಮಹಿಳೆ ಗರಂ ಆಗಿದ್ದಾರೆ.

    ಏರ್ ಪೋರ್ಟ್ ಸಿಬ್ಬಂದಿಯ ಕಣ್ತಪ್ಪಿಸಿ ಮಹಿಳೆ ಎಸ್ಕೇಪ್ ಆಗುತ್ತಿದ್ದರು. ಕೂಡಲೇ ಈ ವಿಚಾರ ಸಿಬ್ಬಂದಿಯ ಗಮನಕ್ಕೆ ಬಂದಿದ್ದು, ಮಹಿಳೆಯನ್ನು ವಶಕ್ಕೆ ಪಡೆಯಲಾಗಿದೆ. ಕ್ವಾರಂಟೈನ್ ಆಗದ ವಿಚಾರಕ್ಕೆ ಅಧಿಕಾರಿಗಳ ಜೊತೆಗೆ ವಾಗ್ವಾದ ನಡೆಸುತ್ತಿದ್ದ ವೇಳೆ ಮಹಿಳೆ ಎಸ್ಕೇಪ್ ಆಗಲು ಯತ್ನಿಸಿದ್ದರು. ಇತ್ತ ದೆಹಲಿಯಿಂದ ಆಗಮಿಸಿದ ಕೇಂದ್ರ ಸಚಿವ ಸದಾನಂದ ಗೌಡ ಅವರು ನೇರವಾಗಿ ಹೋಂ ಕ್ವಾರಂಟೈನ್ ಗೆ ತೆರಳಿದ್ದಾರೆ.

  • ಸದಾನಂದ ಗೌಡ್ರ ಸದಾಸ್ಮಿತಾ ಫೌಂಡೇಷನ್‍ನಿಂದ 5 ಲಕ್ಷ ಮೌಲ್ಯದ ಕಿಟ್ ವಿತರಣೆ

    ಸದಾನಂದ ಗೌಡ್ರ ಸದಾಸ್ಮಿತಾ ಫೌಂಡೇಷನ್‍ನಿಂದ 5 ಲಕ್ಷ ಮೌಲ್ಯದ ಕಿಟ್ ವಿತರಣೆ

    ಮಡಿಕೇರಿ: ಕೊರೊನಾ ಮಹಾಮಾರಿಯನ್ನು ನಿಯಂತ್ರಿಸಲು ಸರ್ಕಾರಗಳು ಸರ್ವ ಪ್ರಯತ್ನ ನಡೆಸುತ್ತಿವೆ. ಅದಕ್ಕೆ ಸಾಕಷ್ಟು ಸಂಘ ಸಂಸ್ಥೆಗಳು, ಉದ್ಯಮಿಗಳು ಹಾಗೇ ವೈಯಕ್ತಿಕವಾಗಿ ಕೆಲವರು ತಮ್ಮ ಕೈಲಾದ ಸಹಕಾರ, ಸಹಾಯಗಳನ್ನು ಮಾಡುತ್ತಿದ್ದಾರೆ. ಹಾಗೆಯೇ ಕೇಂದ್ರ ಸಚಿವ ಸದಾನಂದಗೌಡ ಅವರ ಸದಾಸ್ಮಿತಾ ಫೌಂಡೇಷನ್ ನಿಂದ ಕೊಡಗಿನ ಜಿಲ್ಲಾಸ್ಪತ್ರೆಗೆ 5 ಲಕ್ಷ ರೂ. ಮೌಲ್ಯದ ಮೆಡಿಕಲ್ ಕಿಟ್ ಗಳನ್ನು ವಿತರಣೆ ಮಾಡಲಾಯಿತು.

    ಫೌಂಡೇಷನ್ ಪರವಾಗಿ ಕೊಡಗಿನ ವಿರಾಜಪೇಟೆ ಶಾಸಕ ಕೆ.ಜಿ ಬೋಪಯ್ಯ ಅವರು ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಮೆಡಿಕಲ್ ಕಾಲೇಜು ಡೀನ್ ಕಾರ್ಯಪ್ಪ ಅವರಿಗೆ ಹಸ್ತಾಂತರಿಸಿದ್ರು. ಜಿಲ್ಲಾಸ್ಪತ್ರೆ ಈಗ ಸಂಪೂರ್ಣ ಕೊರೊನಾ ವೈರಸ್ ಸೋಂಕಿತರಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಯಾಗಿದೆ. ಹೀಗಾಗಿ ಅಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ವೈಯಕ್ತಿಕ ರಕ್ಷಣೆಗೆ ಬೇಕಾಗಿರುವ 40 ಪಿಪಿಇ ಕಿಟ್, 200 ಎನ್95 ಮಾಸ್ಕ್ ಮತ್ತು 200 ಬಾಟಲ್ ಸ್ಯಾನಿಟೈಸರ್ ವಿತರಣೆ ಮಾಡಿದ್ರು.

    ಒಟ್ಟು ಐದು ಲಕ್ಷ ರೂಪಾಯಿ ಮೌಲ್ಯದ ಮೆಡಿಕಲ್ ಕಿಟ್ ಕೊಡುವ ಮೂಲಕ ವೈದ್ಯರು ಮತ್ತು ಸರ್ಕಾರಕ್ಕೆ ಕೇಂದ್ರ ಸಚಿವ ಸದಾನಂದಗೌಡ ಅವರು ನೆರವಾಗಿದ್ದಾರೆ.

  • ರಸಗೊಬ್ಬರ, ಕೀಟನಾಶಕ ದಾಸ್ತಾನು ಬೇಕಷ್ಟಿದೆ –  ಡಿವಿಎಸ್ ಭರವಸೆ

    ರಸಗೊಬ್ಬರ, ಕೀಟನಾಶಕ ದಾಸ್ತಾನು ಬೇಕಷ್ಟಿದೆ –  ಡಿವಿಎಸ್ ಭರವಸೆ

    ನವದೆಹಲಿ: ಕರ್ನಾಟಕವೂ ಸೇರಿದಂತೆ ದೇಶದ ಯಾವುದೇ ಭಾಗದಲ್ಲಿ ರಸಗೊಬ್ಬರ ಅಥವಾ ಕೀಟನಾಶಕಗಳ ಕೊರತೆ ಉಂಟಾಗಿಲ್ಲ. ಕರ್ನಾಟಕದಲ್ಲಿ ಸದ್ಯ 7.3 ಲಕ್ಷ ಟನ್ ರಸಗೊಬ್ಬರವಿದೆ. ಏಪ್ರಿಲ್ ತಿಂಗಳಲ್ಲಿ ರಾಜ್ಯದ ಬೇಡಿಕೆ 2.57 ಲಕ್ಷ ಟನ್. ಹಾಗಾಗಿ ರೈತರು ಈ ಸಲವೂ ಮಾಮೂಲಿಯಾಗಿ ಮುಂಗಾರು ಬಿತ್ತನೆಗೆ ತಯಾರಿ ಮಾಡಿಕೊಳ್ಳಬಹುದು ಎಂದು ಕೇಂದ್ರ ರಾಸಾಯನಿ ಮತ್ತು ರಸಗೊಬ್ಬರ ಸಚಿವ ಸದಾನಂದ ಗೌಡ ಭರವಸೆ ನೀಡಿದ್ದಾರೆ.

    ಲಾಕ್‍ಡೌನ್‍ನಿಂದಾಗಿ ಆರಂಭದಲ್ಲಿ ಒಂದೆರಡು ದಿನ ಸರಕು ಸಾಗಣೆಗೆ ತೊಂದರೆಯಾಗಿತ್ತು. ಆದರೆ ರಸಗೊಬ್ಬರ, ಕೀಟನಾಶಕ ಸೇರಿಂತೆ ಕೃಷಿಸಂಬಂಧಿತ ಎಲ್ಲ ಪರಿಕರಗಳನ್ನು ಅತ್ಯವಶ್ಯಕ ವಸ್ತುಗಳ ಪಟ್ಟಿಗೆ ಸೇರಿಸಿ ಉತ್ಪಾದನೆ ಹಾಗೂ ಸಾಗಣೆ ಮೇಲಿನ ನಿರ್ಬಂಧವನ್ನು ಕೇಂದ್ರ ಸರ್ಕಾರವು ಸಂಪೂರ್ಣ ತೆಗೆದುಹಾಕಿತು. ರಸಗೊಬ್ಬರ ಕಾರ್ಖಾನೆಗಳು, ಗೋಡೌನ್‍ಗಳು, ಬಂದರಗಳು, ವಿತರಣಾ ಕೇಂದ್ರಗಳ ಮಧ್ಯೆ ರಸಗೊಬ್ಬರ ಸಾಗಣೆಗೆ ಬೇಡಿಕೆಗೆ ಅನುಗುಣವಾಗಿ ಗೂಡ್ಸ್ ರೈಲುಗಳನ್ನು ಒದಗಿಸುವಂತೆ ರೇಲ್ವೆ ಇಲಾಖೆಗೆ ಕೇಂದ್ರ ಸರ್ಕಾರವು ಕಟ್ಟುನಿಟ್ಟಿನ ಆದೇಶ ನೀಡಿದೆ. ಹಾಗೆಯೇ ಜಲ ಹಾಗೂ ಭೂಸಾರಿಗೆಗೆ ರಸಗೊಬ್ಬರ, ಕೀಟನಾಶಕ ಮತ್ತಿತರ ಕೃಷಿಸಂಬಂಧಿತ ಸರಕುಗಳನ್ನು ಸಾಗಣೆಗೆ ಮುಕ್ತ ಅನುಮತಿ ನೀಡಲಾಗಿದೆ ಎಂದು ಹೇಳಿದ್ದಾರೆ.

    ದೇಶದ ಬಹುತೇಕ ರಸಗೊಬ್ಬರ ಕಾರ್ಖಾನೆಗಳು ಪೂರ್ಣ ಪ್ರಮಾಣದಲ್ಲಿ ಉತ್ಪಾದನೆಯಲ್ಲಿ ತೊಡಗಿವೆ. ಈ ಸಂದರ್ಭದಲ್ಲಿ ಲಾಕ್‍ಡೌನ್‍ ನಿಯಮಗಳನ್ನು (ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮುಖಗವಸು ಧರಿಸುವುದು ಇವೇ ಮುಂತಾದವು) ಕಟ್ಟುನಿಟ್ಟಾಗಿ ಅನುಸರಿಸುವಂತೆ ಸೂಚಿಸಲಾಗಿದೆ. ದೇಶದಲ್ಲಿ ಇನ್ನೂ ಹಲವು ತಿಂಗಳಿಗೆ ಸಾಕಾಗುವಷ್ಟು ರಸಗೊಬ್ಬರ ದಾಸ್ತಾನು ಇದೆ. ಸದ್ಯ 86.87 ಲಕ್ಷ ಮೆಟ್ರಿಕ್ ಟನ್ ಯೂರಿಯಾ ದಸ್ತಾನು ಇದೆ. ಆದಾಗ್ಯೂ ಮುಂಜಾಗ್ರತಾ ಕ್ರಮವಾಗಿ 7.57 ಲಕ್ಷ ಟನ್ ಯೂರಿಯಾ ಆಮದು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಲಾಗಿದೆ.

    ದೇಶಾದ್ಯಂತ ರಸಗೊಬ್ಬರ ಮಳಿಗೆಗಳೂ ತೆರೆದಿದ್ದು ಎಂದಿನಂತೆ ವಹಿವಾಟು ನಡೆಸಿವೆ. ಕರ್ನಾಟಕದಲ್ಲಿ ಸಾಗಣೆ, ಪೂರೈಕೆಗೆ ಸಂಬಂಧಿಸಿದಂತೆ ಸಮಸ್ಯೆಗಳಿದ್ದರೆ ಕೃಷಿ ಸಹಾಯವಾಣಿ 080-22212818 / 22210237 ಗೆ ಕರೆಮಾಡಿ ಬಗೆಹರಿಸಿಕೊಳ್ಳಬಹುದು. ನಾನು ಮತ್ತೆ ಸ್ಪಷ್ಟಪಡಿಸುತ್ತಿದ್ದೇನೆ. ರಸಗೊಬ್ಬರ, ಕೀಟನಾಶಕಗಳ ಕೊರತೆ ಇಲ್ಲ. ದಾಸ್ತಾನು ಸಾಕಷ್ಟಿದೆ. ಬೇಕಾದಷ್ಟು ಗೊಬ್ಬರ ಪೂರೈಸುವ ಜವಾಬ್ದಾರಿ ನಮ್ಮದು. ರೈತಬಾಂಧವರಿಗೆ ನನ್ನ ಮನವಿ. ನೀವು ಯಾವುದೇ ರೀತಿಯ ವದಂತಿಗಳಿಗೆ ಕಿವಿಗೊಡಬೇಡಿ. ನಿರಾತಂಕವಾಗಿ ಮುಂಗಾರು ಬಿತ್ತನೆಗೆ ತಯಾರಿಮಾಡಿಕೊಳ್ಳಿ. ನಿಮಗೆ ಶುಭವಾಗಲಿ ಎಂದು ಡಿವಿಎಸ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಮನೆ-ಮನೆಗೆ ಜನೌಷಧಿ: ಈ ಮಧ್ಯೆ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆಯ (PMBJP) ಜನೌಷಧಿ ಕೇಂದ್ರಗಳ ಮೂಲಕ ಮನೆಗೇ ಔಷಧ ಸರಬರಾಜು ಮಾಡುವ ಸೌಲಭ್ಯವನ್ನು ಆರಂಭಿಸಲಾಗಿದೆ. ಅಗತ್ಯವಿರುವವರು ವಿಶೇಷವಾಗಿ ಹಿರಿಯ ನಾಗರಿಕರು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು. ಅದಕ್ಕಾಗಿ ನಿಮ್ಮ ಸ್ಮಾರ್ಟ್ ಫೋನಿನಲ್ಲಿ ನಮ್ಮ ಸರ್ಕಾರವೇ ಅಭಿವೃದ್ಧಿಪಡಿಸಿರುವ ‘ಜನೌಷಧಿ ಸುಗಮ್, ಎಂಬ ಆ್ಯಪ್ ರೂಪಿಸಲಾಗಿದೆ ಎಂದು ಹೇಳಿದ್ದಾರೆ.

    ಈ ಆ್ಯಪಿನಲ್ಲಿ ಹತ್ತಿರದ ಜನೌಷಧಿ ಕೇಂದ್ರ (ವಿಳಾಸ ಸಮೇತ), ಆ ಕೇಂದ್ರದ ಲೊಕೇಶನ್ ಮ್ಯಾಪ್, ಕೇಂದ್ರದಲ್ಲಿ ನಿಮಗೆ ಬೇಕಾದ ಔಷಧಿ ಲಭ್ಯತೆ ಇದೆಯೋ ಅಥವಾ ಇಲ್ಲವೋ, ಅಂಗಡಿಯ ದೂರವಾಣಿ ನಂಬರ್ – ಹೀಗೆ ಎಲ್ಲ ವಿವರಗಳು ಲಭ್ಯ. ಲಾಕ್‍ಡೌನ್ ಈ ಸಂದರ್ಭದಲ್ಲಿ ಔಷಧ ಅಂಗಡಿಗಳ ಬಳಿ ಗುಂಪು ಸೇರುವ ಅಗತ್ಯವಿಲ್ಲ. ಇದರಿಂದ ಸಾಮಾಜಿಕ ಅಂತರ ಕಾಯ್ದುಕೊಡಂತೆಯೂ ಆಯಿತು ಎಂದು ತಿಳಿಸಲಾಗಿದೆ.

    ಜನೌಷಧಿ ಸುಗಮ್ ಆ್ಯಪ್ ಡೌನ್‍ಲೋಡ್ ಮಾಡಲು ಕ್ಲಿಕ್ ಮಾಡಿ: ಜನೌಷಧಿ ಸುಗಮ್

  • ಮೋದಿ ಮನೆ ಮೇಲೂ ದಾಳಿಯಾಗಬೇಕು: ಸದಾನಂದ ಗೌಡ

    ಮೋದಿ ಮನೆ ಮೇಲೂ ದಾಳಿಯಾಗಬೇಕು: ಸದಾನಂದ ಗೌಡ

    ಚಿಕ್ಕಬಳ್ಳಾಪುರ: ಕೇಂದ್ರದಿಂದ ಜಾರಿ ನಿರ್ದೇಶನಾಲಯ(ಇಡಿ) ದಾಳಿ ಮಾಡಿಸಿದರೆ ರಾಜಕಾರಣ ಅಂತಾರೆ. ಹೀಗಾಗಿ ನರೇಂದ್ರ ಮೋದಿಯಿಂದ ಹಿಡಿದು ಎಲ್ಲಾ ರಾಜಕಾರಣಿಗಳ ಮನೆ ಮೇಲೂ ದಾಳಿ ಆಗಬೇಕು ಎಂದು ಕೇಂದ್ರ ಸಚಿವ ಸದಾನಂದ ಗೌಡ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ.

    ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಗರದ ಪ್ರವಾಸಿ ಮಂದಿರದಲ್ಲಿ ರೈತ ಮುಖಂಡರೊಂದಿಗೆ ಮಾತುಕತೆಯ ವೇಳೆ ಈ ಹೇಳಿಕೆ ನೀಡಿದ್ದಾರೆ. ಬಾಡೂಟ ಹಾಕಿಸಿದರೆ ಸಾಕು ಜನ ವೋಟು ಹಾಕುತ್ತಾರೆ. ದುಡ್ಡಿರದ ಪ್ರಾಮಾಣಿಕ ರಾಜಕಾರಣಿಗೆ ಅವಕಾಶ ಉಂಟಾ ಎಂದು ಪ್ರಶ್ನಿಸಿದರು. ಅಲ್ಲದೆ ಕೋಟಿಗಟ್ಟಲೇ ಖರ್ಚು ಮಾಡಿ ಬಂಡವಾಳ ಸಮೇತ ತೆಗೀತಾನೆ. ದೇಶದ ಎಲ್ಲಾ ಕಡೆ ಈ ತರ ಇಲ್ಲ. ಆದರೆ ಕರ್ನಾಟಕ ನಂಬರ್ ಒನ್ ಆಗಿದ್ದು, ಜನ ಎಚ್ಚೆತ್ತುಕೊಳ್ಳಬೇಕು ಎಂದು ತಿಳಿಸಿದರು.

    ಇದೇ ವೇಳೆ ಕೇಂದ್ರದಿಂದ ಇಡಿ ದಾಳಿ ಮಾಡಿಸಿದರೆ ರಾಜಕಾರಣ ಅಂತಾರೆ. ಹೀಗಾಗಿ ನರೇಂದ್ರ ಮೋದಿಯಿಂದ ಹಿಡಿದು ಎಲ್ಲಾ ರಾಜಕಾರಣಿಗಳ ಮನೆ ರೇಡ್ ಆಗಬೇಕು. ರಾಜಕಾರಣ ವ್ಯಾಪಾರವಾಗಿದೆ. ನಮ್ಮ ಪಕ್ಷವೂ ಸೇರಿದೆ. ರಾಜಕಾರಣದಲ್ಲಿ ಶೇ.25 ಒಳ್ಳೆಯವರಿದ್ದಾರೆ. ಆದರೆ ಅವರು ಶೇ.75ರಲ್ಲಿ ಸೇರಿ ಕಲುಷಿತ ಆಗಿದ್ದಾರೆ ಎಂದು ತಿಳಿಸಿದರು.

  • ಕಾಂಗ್ರೆಸ್ ದೇಶದ ರಿಜೆಕ್ಟೆಡ್ ಗೂಡ್ಸ್: ಸದಾನಂದ ಗೌಡ ವ್ಯಂಗ್ಯ

    ಕಾಂಗ್ರೆಸ್ ದೇಶದ ರಿಜೆಕ್ಟೆಡ್ ಗೂಡ್ಸ್: ಸದಾನಂದ ಗೌಡ ವ್ಯಂಗ್ಯ

    – ‘ಕೈ’ ನಾಯಕರಿಂದ ಜನರ ನಡುವೆ ಸಿಎಎ ಗೊಂದಲ ಸೃಷ್ಟಿ

    ಉಡುಪಿ: ಕಾಂಗ್ರೆಸ್ ದೇಶದ ರಿಜೆಕ್ಟೆಡ್ ಗೂಡ್ಸ್. ವಿಪಕ್ಷ ಸ್ಥಾನಮಾನ ಪಡೆಯುವ ತಾಕತ್ ಇಲ್ಲದ ಪಕ್ಷ ಅದು. ರಾಜ್ಯಸಭೆಯಲ್ಲಿ ಸಂಖ್ಯಾಬಲ ಇಲ್ಲದಿದ್ದರೂ ಪೌರತ್ವ ತಿದ್ದುಪಡೆ ಕಾಯ್ದೆ ಪಾಸ್ ಆಗಿದೆ ಎಂದು ಕೇಂದ್ರ ರಸಗೊಬ್ಬರ ಸಚಿವ ಸದಾನಂದ ಗೌಡ ವ್ಯಂಗ್ಯವಾಡಿದ್ದಾರೆ.

    ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದ ಕೇಂದ್ರ ಸಚಿವರು ನವಗ್ರಹ ಕಿಂಡಿ ಮೂಲಕ ಕೃಷ್ಣದರ್ಶನ ಪಡೆದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್‍ಗೆ ದೇಶದಲ್ಲಿ ಕೆಲಸ ಇಲ್ಲ. ಜನರ ನಡುವೆ ಗೊಂದಲ ಸೃಷ್ಟಿ ಮಾಡುವುನ್ನೇ ಉದ್ಯೋಗ ಮಾಡಿಕೊಂಡಿದೆ ಎಂದು ವಾಗ್ದಾಳಿ ನಡೆಸಿದರು.

    ಆಳವಾದ ಅಧ್ಯಯನ ಮಾಡದಿದ್ದರೆ ಸಿಎಎ ವಿಚಾರದಲ್ಲಿ ಗೊಂದಲ ಆಗುತ್ತದೆ. ದೇಶದ 130 ಕೋಟಿ ಜನಕ್ಕೆ ಕಾಯ್ದೆಯಿಂದ ತೊಂದರೆ ಆಗಲ್ಲ. ಕಾಂಗ್ರೆಸ್‍ಗೆ ಐದೂವರೆ ವರ್ಷ ವಿರೋಧಿಸಲು ಏನೂ ಸಿಗದೆ ಜನರ ನಡುವೆ ಗೊಂದಲ ತಂದಿಡುತ್ತಿದೆ. ರಾಜ್ಯಸಭೆಯಲ್ಲಿ ಸಂಖ್ಯಾಬಲ 99 ಇದ್ದರೂ 123 ಜನರ ಬೆಂಬಲ ಸಿಕ್ಕಿದೆ. ಲೋಕಸಭೆಯಲ್ಲಿ ಸಿಎಎಗೆ ಬಿಲ್ ಪಾಸಾಗಿದೆ ಎಂದು ಹೇಳಿದರು.

    ಪಿಣರಾಯಿ ರಾಜೀನಾಮೆ ಕೊಡಲಿ:
    ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಿಎಎ ವಿಚಾರದಲ್ಲಿ ಸಣ್ಣತನ ಪ್ರದರ್ಶನ ಮಾಡಿದ್ದಾರೆ. ಅವರು ಸಿಎಂ ಆಗಿ ಮುಂದುವರಿಯಲು ಅರ್ಹರಲ್ಲ. ಕೇರಳದಲ್ಲಿ 3,000 ಜನ ವ್ಯಾಪಾರಿ, ಉದ್ಯೋಗಿಗಳ ಜೊತೆ ಸಿಎಎ ವಿಚಾರವಾಗಿ ಮಾತಡಿದ್ದೇನೆ. ಎಲ್ಲರಿಗೂ ಮನವರಿಕೆಯಾಗಿದೆ. ಸಿಎಂ ಪಿಣರಾಯಿ ಅವರಿಗೂ ಪ್ರತಿಕ್ರಿಯೆ ಕೊಟ್ಟು ಬಂದಿದ್ದೇನೆ ಎಂದರು.

    ರಾಜ್ಯ ಕಾಂಗ್ರೆಸ್ ಏಳು ಹೋಳಾಗಿದೆ:
    ರಾಜ್ಯ ಕಾಂಗ್ರೆಸ್ ಪಾರ್ಟಿ ಒಡೆದು ಹೋಗುತ್ತಿದೆ. ಧರ್ಮಾಧಾರಿತವಾಗಿ ಬಿಜೆಪಿ ದೇಶ ಒಡೆಯುತ್ತಿಲ್ಲ. ರಾಜ್ಯ ಕಾಂಗ್ರೆಸ್ ಏಳು ತಂಡಗಳಾಗಿ ಒಡೆದುಹೋಗಿದೆ. ದಿನೇಶ್ ಗುಂಡುರಾವ್, ಮಾಜಿ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಈಶ್ವರ್ ಖಂಡ್ರೆ, ಮಾಜಿ ಸಚಿವ ಡಿಕೆ ಶಿವಕುಮಾರ್, ಮಾಜಿ ಡಿಸಿಎಂ ಜಿ.ಪರಮೇಶ್ವರ್, ಎಂ.ಬಿ.ಪಾಟೀಲ್ ಅವರು ದೆಹಲಿ ಪ್ರವಾಸ ಮಾಡುತ್ತಾರೆ. ವಾರಕ್ಕೊಬ್ಬ ತಂಡ ತೆಗೆದುಕೊಂಡು ದೆಹಲಿಯಲ್ಲಿ ಇರುತ್ತಾರೆ ಎಂದು ಹೇಳಿದರು.

  • ಅಯೋಧ್ಯೆಯ ತೀರ್ಪಿಗಾಗಿ ಶ್ರೀಗಳು ಕಾಯುತ್ತಿದ್ರು ಅನ್ಸುತ್ತೆ: ಸದಾನಂದ ಗೌಡ

    ಅಯೋಧ್ಯೆಯ ತೀರ್ಪಿಗಾಗಿ ಶ್ರೀಗಳು ಕಾಯುತ್ತಿದ್ರು ಅನ್ಸುತ್ತೆ: ಸದಾನಂದ ಗೌಡ

    ಉಡುಪಿ: ಮೊನ್ನೆ ಮೊನ್ನೆಯವರೆಗೂ ಜನಸೇವೆ ಮಾಡಿದ ಶ್ರೀಗಳು ಶ್ರೀಕೃಷ್ಣನ ಪಾದ ಸೇರಿದ್ದಾರೆ. ಅಯೋಧ್ಯೆಯ ತೀರ್ಪಿಗಾಗಿ ಶ್ರೀಗಳು ಕಾಯುತ್ತಿದ್ದರು ಅನಿಸುತ್ತೆ. ಶ್ರೀಗಳ ಚಿಂತನೆ, ವಿಚಾರ ಸದಾ ಜೀವಂತ ಎಂದು ಕೇಂದ್ರ ಸಚಿವ ಸದಾನಂದ ಗೌಡರು ಸಂತಾಪ ಸೂಚಿಸಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪೇಜಾವರ ಶ್ರೀಗಳ ಅಗಲಿಕೆಗೆ ಕಂಬನಿ ಮಿಡಿದರು. ಪೇಜಾವರ ಶ್ರೀಗಳು ಶತಮಾನ ಕಂಡಂತಹ ಅದ್ಭುತ ಧಾರ್ಮಿಕ ಗುರುಗಳು ಇವತ್ತು ನಮ್ಮನೆಲ್ಲಾ ಅಗಲಿದ್ದಾರೆ. ಶ್ರೀಕೃಷ್ಣನ ಪಾದ ಸೇರಿದ್ದಾರೆ. ಅವರ ಬಗ್ಗೆ ಹೇಗೆ ಮತನಾಡಲಿ ಎಂದು ನನಗೆ ಗೊತ್ತಾಗುತ್ತಿಲ್ಲ. ಶ್ರೀಗಳು ಸಾಮಾಜಿಕ ಕಳಕಳಿ ಜೊತೆಗೆ ಧಾರ್ಮಿಕತೆಗೆ ಹೆಚ್ಚು ಒತ್ತು ಕೊಟ್ಟಿದ್ದರು. ಮೊನ್ನೆ ಮೊನ್ನೆಯವರೆಗೂ ಕೂಡ ಈ ಇಳಿ ವಯಸ್ಸಿನಲ್ಲೂ ಶ್ರೀಗಳು ಅದ್ಭುತ ಜನಸೇವೆ ಮಾಡಿದ್ದಾರೆ. ಸಾಮಾಜಿಕ ಪರಿವರ್ತನೆಗೆ ಹೆಚ್ಚು ಒತ್ತು ಕೊಟ್ಟಿದ್ದರು. ಬಹುಶಃ ಶ್ರೀಗಳು ಅಯೋಧ್ಯೆ ತೀರ್ಪಿಗಾಗಿ ಕಾಯುತ್ತಿದ್ದರು ಅನಿಸುತ್ತೆ. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಆಗಬೇಕು ಎನ್ನುವುದಕ್ಕೆ ನಿರಂತರವಾಗಿ ತಮ್ಮ ಸೌಹಾರ್ದತಾ ಮನೋಭಾವದಿಂದ ಎಲ್ಲರನ್ನೂ ಒಗ್ಗೂಡಿಸುವ ಪ್ರಯತ್ನವನ್ನ ಶ್ರೀಗಳು ಮಾಡಿದ್ದರು ಎಂದು ಸದಾನಂದ ಗೌಡರು ಪೇಜಾವರ ಶ್ರೀಗಳ ಸೇವೆಯನ್ನು ನೆನೆದರು. ಇದನ್ನೂ ಓದಿ: ಅಷ್ಟ ಮಠದ ಹಿರಿಯ ಯತಿ, ನಾಡಿನ ಹಿರಿಯ ವಿದ್ವಾಂಸ ಪೇಜಾವರ ಶ್ರೀ ಕೃಷ್ಣೈಕ್ಯ

    ಅಸ್ಪೃಶ್ಯತೆ ಜಗತ್ತಿಗಿರುವ ಅತ್ಯಂತ ದೊಡ್ಡ ಶಾಪ. ಅದರಲ್ಲೂ ನಮ್ಮ ದೇಶದಲ್ಲಿ ಹೆಚ್ಚು. ಪೇಜಾವರ ಶ್ರೀಗಳು ಅಸ್ಪೃಶ್ಯತೆ ವಿರುದ್ಧ ಹೋರಾಟ ಮಾಡಿದ ಪಠಾಧೀಶರು, ಅವರು ಹರಿಜನ ಕೇರಿಗಳಿಗೆ ಹೋಗಿ ಕ್ರಾಂತಿ ಮಾಡಿದವರು. ಅವರ ಚಿಂತನೆ, ವಿಚಾರ ಸದಾ ಜೀವಂತ ಎಂದರು. ಶ್ರೀಗಳನ್ನು ಹೆಲಿಕಾಪ್ಟರ್ ಮೂಲಕ ಅಜ್ಜರಜಾಡಿನಿಂದ ಶಿಫ್ಟ್ ಮಾಡಲಾಗುತ್ತೆ. ಬೆಂಗಳೂರಿನಲ್ಲೂ ಕೂಡ ಶ್ರೀಗಳ ಪಾರ್ಥೀವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು ಎಂದು ತಿಳಿಸಿದರು.

  • ಮಹಾರಾಷ್ಟ್ರದಲ್ಲಿ ಕಾಲ ಮಿಂಚಿಲ್ಲ, ಬಿಜೆಪಿ ಜೊತೆ ಕೈಜೋಡಿಸಿ – ಶಿವಸೇನೆಗೆ ಡಿವಿಎಸ್ ಕಿವಿಮಾತು

    ಮಹಾರಾಷ್ಟ್ರದಲ್ಲಿ ಕಾಲ ಮಿಂಚಿಲ್ಲ, ಬಿಜೆಪಿ ಜೊತೆ ಕೈಜೋಡಿಸಿ – ಶಿವಸೇನೆಗೆ ಡಿವಿಎಸ್ ಕಿವಿಮಾತು

    – ಸುಪ್ರೀಂನಲ್ಲಿ ಅನರ್ಹರ ಪರವಾಗಿಯೇ ತೀರ್ಪು ಬರುತ್ತೆ

    ಉಡುಪಿ: ಶಿವಸೇನೆಗೆ ಇನ್ನೂ ಕಾಲ ಮಿಂಚಿಲ್ಲ. ಮಹಾರಾಷ್ಟ್ರದಲ್ಲಿ ಬಿಜೆಪಿ ಜೊತೆಗೆ ಕೈ ಜೋಡಿಸಿ ನಿಮ್ಮನ್ನು ಪ್ರೀತಿ ವಿಶ್ವಾಸದಿಂದ ನೋಡಿಕೊಳ್ಳುತ್ತೇವೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿವಿ ಸದಾನಂದ ಗೌಡ ಭರವಸೆ ನೀಡಿದ್ದಾರೆ.

    ಉಡುಪಿಯಲ್ಲಿ ಬೀಚ್ ಕ್ಲೀನಿಂಗ್ ಅಭಿಯಾನದಲ್ಲಿ ಪಾಲ್ಗೊಂಡ ಡಿವಿಎಸ್, ಚುನಾವಣೆಯಲ್ಲಿ ಜನಾದೇಶ ಬಿಜೆಪಿ ನೇತೃತ್ವದ ತಂಡಕ್ಕೆ ಸಿಕ್ಕಿತ್ತು. ಅಧಿಕಾರಕ್ಕಾಗಿ ನಮ್ಮ ಮಿತ್ರರೇ ಆಟವಾಡುತ್ತಿದ್ದಾರೆ. ಇದು ಪ್ರಜಾತಂತ್ರ ವ್ಯವಸ್ಥೆಗೆ ಮಾರಕವಾದ ಬೆಳವಣಿಗೆ. ಶಿವಸೇನೆ ಮತ್ತು ಬಿಜೆಪಿ ತುಂಬಾ ಸಮಯದ ಗೆಳೆಯರು ಎಂದು ತಿಳಿಸಿದರು.

    ನಮ್ಮ ಅರ್ಧದಷ್ಟು ಸಂಖ್ಯೆ ಕೂಡಾ ಶಿವಸೇನೆಯಲ್ಲಿ ಇಲ್ಲ. ಇನ್ನೂ ಕಾಲ ಮಿಂಚಿಲ್ಲ, ಪ್ರೀತಿ ವಿಶ್ವಾಸದಿಂದ ನೋಡಿಕೊಳ್ಳುತ್ತೇವೆ ಬನ್ನಿ ಎಂದಿದ್ದಾರೆ. ಮೋದಿ ಆಡಳಿತ, ಫಡ್ನವಿಸ್ ಆಡಳಿತ ಮಾದರಿಯಾಗಿದೆ. ಮಹಾರಾಷ್ಟ್ರದಲ್ಲಿ ಇನ್ನೂ ಯಾವ ಹೊಂದಾಣಿಕೆಯೂ ಆಗಿಲ್ಲ. ರಾಜ್ಯಪಾಲರು ನ್ಯಾಚುರಲ್ ಜಸ್ಟೀಸ್ ಪಾಲಿಸುತ್ತಿದ್ದಾರೆ ಎಂದರು.

    ಅನರ್ಹ ಶಾಸಕರ ಬಗ್ಗೆ ಮಾತನಾಡಿದ ಸದಾನಂದ ಗೌಡ, ನಾಳೆ ಅನರ್ಹರ ತೀರ್ಪು ಬರುತ್ತೆ. ತೀರ್ಪು ಬಂದ ನಂತರ ಮುಂದಿನ ತೀರ್ಮಾನ ಮಾಡುತ್ತೇವೆ. ನ್ಯಾಯಾಂಗವನ್ನು ಗೌರವದಿಂದ ನೋಡ್ತೇವೆ. ರಾಮಜನಭೂಮಿ ವಿಚಾರದಲ್ಲಿ ಕೋರ್ಟ್ ಸಮಾನತೆಯ ಸಂದೇಶ ಕೊಟ್ಟಿದೆ. ಅನರ್ಹರ ವಿಚಾರವೂ ಯೋಗ್ಯ ರೀತಿಯ ತೀರ್ಪು ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಸಮಾನ ನಾಗರಿಕಸಂಹಿತೆ ಜಾರಿ ವಿಚಾರದ ಬಗ್ಗೆ ಮಾತನಾಡಿದ ಅವರು ಪ್ರಣಾಳಿಕೆಯಲ್ಲಿ ಇರುವ ಒಂದೊದೇ ಭರವಸೆ ಈಡೇರಿಸಲಾಗುತ್ತಿದೆ. ಪ್ರಣಾಳಿಕೆಯನ್ನು ಈಡೇರಿಸುವುದು ನಮ್ಮ ಧರ್ಮ. ಸಮಾನ ನಾಗರಿಕ ಸಂಹಿತೆ ದೇಶವನ್ನು ಏಕತೆ, ಅಖಂಡತೆ ಕಡೆಗೆ ಕೊಂಡೊಯ್ಯುತ್ತದೆ. ಖಂಡಿತವಾಗಿಯೂ ಪೂರ್ವ ತಯಾರಿಯ ಜೊತೆಗೆ ಸಮಾನ ನಾಗರಿಕ ಸಂಹಿತೆ ಜಾರಿಗೆ ಬರುತ್ತದೆ ಎಂದು ಸ್ಪಷ್ಟಪಡಿಸಿದರು.

  • ಪ್ರತಿಭಟನೆಯ ಬಳಿಕ ಎಚ್ಚೆತ್ತ ಕೇಂದ್ರ – ಕರ್ನಾಟಕಕ್ಕೆ 1200 ಕೋಟಿ ಮಧ್ಯಂತರ ಪರಿಹಾರ

    ಪ್ರತಿಭಟನೆಯ ಬಳಿಕ ಎಚ್ಚೆತ್ತ ಕೇಂದ್ರ – ಕರ್ನಾಟಕಕ್ಕೆ 1200 ಕೋಟಿ ಮಧ್ಯಂತರ ಪರಿಹಾರ

    ನವದೆಹಲಿ: ನೆರೆ ಪರಿಹಾರ ಬಿಡುಗಡೆ ಮಾಡದ್ದಕ್ಕೆ ಆಕ್ರೋಶ ಹೆಚ್ಚಾದ ಬೆನ್ನಲ್ಲೇ ಕೇಂದ್ರ ಸರ್ಕಾರ 1,200 ಕೋಟಿ ರೂ. ಮಧ್ಯಂತರ ಪರಿಹಾರವನ್ನು ಬಿಡುಗಡೆ ಮಾಡಿದೆ.

     ಕೇಂದ್ರ ಸರ್ಕಾರವು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ (ನ್‌ಡಿಆರ್‌ಎಫ್‌) ಕರ್ನಾಟಕಕ್ಕೆ 1,200 ಕೋಟಿ ರೂ. ಮತ್ತು ಬಿಹಾರಕ್ಕೆ 400 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಿದೆ.

    ಗುರುವಾರ ಪ್ರಧಾನಿ ಮೋದಿ ನೇತೃತ್ವದಲ್ಲಿ ಕ್ಯಾಬಿನೆಟ್ ಸಭೆ ನಡೆದಿತ್ತು. ಕ್ಯಾಬಿನೆಟ್ ಸಭೆಗೂ ಮುನ್ನ ಸಚಿವರಾದ ಪ್ರಹ್ಲಾದ್ ಜೋಷಿ ಮತ್ತು ಸದಾನಂದ ಗೌಡ ಗೃಹ ಸಚಿವರಾದ ಅಮಿತ್ ಶಾ ಅವರನ್ನು ಭೇಟಿ ಮಾಡಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರು.

    ನೆರೆ ಪರಿಹಾರ ವಿಳಂಬಕ್ಕಾಗಿ ಜನರು ಪ್ರಶ್ನೆ ಮಾಡುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ವಿರೋಧ ಪಕ್ಷಗಳು ಈ ವಿಚಾರವಾಗಿ ಪ್ರತಿಭಟನೆ ನಡೆಸುತ್ತಿವೆ. ಆದಷ್ಟು ಬೇಗ ಪರಿಹಾರ ನೀಡುವಂತೆ ಸಚಿವರು ಮನವಿ ಮಾಡಿದ್ದರು.

    ಕರ್ನಾಟಕದ ಬಿಜೆಪಿ ನಾಯಕರನ್ನು ಜನ ತರಾಟೆಗೆ ತೆಗೆದುಕೊಂಡ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿತ್ತು. ಗುರುವಾರ ಕಂದಾಯ ಇಲಾಖೆ ಕಾರ್ಯದರ್ಶಿ ಟಿ.ಕೆ ಅನೀಲ್ ಕುಮಾರ್ ನೇತೃತ್ವದ ನಿಯೋಗ ದೆಹಲಿಗೆ ಆಗಮಿಸಿ ಗೃಹ ಇಲಾಖೆಗೆ ಹಾನಿಯ ಬಗ್ಗೆ ಸ್ಪಷ್ಟೀಕರಣವನ್ನು ನೀಡಿತ್ತು.