Tag: ಸದಾನಂದ ಗೌಡ

  • #MeToo ಸುಳಿಯಲ್ಲಿ ಕೇಂದ್ರ ಸಚಿವ ಸದಾನಂದಗೌಡ!

    #MeToo ಸುಳಿಯಲ್ಲಿ ಕೇಂದ್ರ ಸಚಿವ ಸದಾನಂದಗೌಡ!

    ಬೆಂಗಳೂರು: ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರ ವಿರುದ್ಧ ಮೀಟೂ ಆರೋಪ ಕೇಳಿ ಬಂದಿದೆ. ಬಿಜೆಪಿಯಲ್ಲಿ ಈ ಹಿಂದೆ ಗುರುತಿಸಿಕೊಂಡಿದ್ದ ಮಾಧುರಿ ಎಂಬವರು ಈ ಆರೋಪ ಮಾಡಿದ್ದು ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.

    ಸದಾನಂದಗೌಡರು ಸಿಎಂ ಆಗಿದ್ದಾಗ ತಮ್ಮ ಜೊತೆ ಅನುಚಿತವಾಗಿ ನಡೆದುಕೊಂಡಿದ್ದರು. ಕಚೇರಿಗೆ ಬನ್ನಿ, ಊಟಕ್ಕೆ ಬನ್ನಿ, ನಿಮ್ಮ ರೆಸ್ಯೂಮ್ ಕೊಡಿ, ಫೋಟೋ ಕೊಡಿ ಅಂತ ಕೋಡ್ ವರ್ಡ್‍ನಲ್ಲಿ ಕಿರುಕುಳ ಕೊಡುತ್ತಿದ್ದರು ಎಂದು ಆರೋಪಿಸಿದ್ದಾರೆ.

    ಒಬ್ಬ ಸಿಎಂ ಆಗಿದ್ದವರು ಯಾವ ರೀತಿ ವರ್ತನೆ ಮಾಡಬೇಕು ಎನ್ನುವುದು ಗೊತ್ತಿರುತ್ತದೆ. ಬಿಜೆಪಿಯಲ್ಲಿ ಹಲವು ಮಂದಿ ಅವರವರ ಸ್ಟೇಟಸ್‍ನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಅವರಿಗೆ ಎಷ್ಟೋ ಕೆಲಸ ಇರುತ್ತದೆ. ಆದರೆ ಅಲ್ಲಿಗೆ ಬನ್ನಿ, ಇಲ್ಲಿಗೆ ಬನ್ನಿ ಅಂತಾ ಹೇಳೋದು, ನಿಮ್ಮನ್ನು ಅಲ್ಲಿ ನೋಡಿದ್ದೀನಿ ಅಂತಾ ಹೇಳೋದು ಎಷ್ಟು ಸರಿ ಅಲ್ಲವೇ? ಕಾಲ್ ಮಾಡೋದು, ನನ್ನ ಮೈ ಮೇಲೆ ಬರೋದು, ಮೈ ಟಚ್ ಮಾಡಿ ಕೂರೋದು, ಇದೆಲ್ಲ ಪ್ರಾರಂಭವಾಯಿತು ಎಂದು ಹೇಳಿದ್ದಾರೆ.

    ಮಾಧುರಿ ಅವರ ಆರೋಪದ ಬಗ್ಗೆ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಸದಾನಂದಗೌಡರು, ಆಕೆ ಯಾರು ಅಂತ ಗೊತ್ತಿಲ್ಲ. ಆಕೆಗೆ ನಮ್ಮ ಪಕ್ಷದಲ್ಲಿ ಜವಾಬ್ದಾರಿ ನೀಡಿರಬಹುದು. ಆ ಆರೋಪದ ಬಗ್ಗೆ ನನಗೆ ಏನೂ ಗೊತ್ತಿಲ್ಲ. ಅದೆಲ್ಲ ಏನು ಇಲ್ಲ ಅಂತ ಪಬ್ಲಿಕ್‍ ಟಿವಿಗೆ ಫೋನ್ ಮೂಲಕ ತಿಳಿಸಿದರು.

    ಫೇಸ್‍ಬುಕ್ ನಲ್ಲಿ ಬಿಜೆಪಿ ನಾಯಕರ ಬಗ್ಗೆ ಹೇಳಿಕೊಂಡಿದ್ದ ಮಹಿಳೆ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗುತ್ತಿದ್ದಂತೆ ಈ ಹಿಂದೆ ಪ್ರಕಟಿಸಿದ್ದ ಪೋಸ್ಟನ್ನು ಡಿಲೀಟ್ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಮ್ಮಿಶ್ರ ಸರ್ಕಾರದ ಭವಿಷ್ಯ ನುಡಿದವರ ಭವಿಷ್ಯ ಇಂದು ಏನಾಗಿದೆ?: ಡಿವಿಎಸ್ ಗೆ ಬಿ.ಕೆ ಹರಿಪ್ರಸಾದ್ ತಿರುಗೇಟು

    ಸಮ್ಮಿಶ್ರ ಸರ್ಕಾರದ ಭವಿಷ್ಯ ನುಡಿದವರ ಭವಿಷ್ಯ ಇಂದು ಏನಾಗಿದೆ?: ಡಿವಿಎಸ್ ಗೆ ಬಿ.ಕೆ ಹರಿಪ್ರಸಾದ್ ತಿರುಗೇಟು

    ಬಾಗಲಕೋಟೆ: ಸಮ್ಮಿಶ್ರ ಸರ್ಕಾರದ ಭವಿಷ್ಯ ನುಡಿದವರ ಭವಿಷ್ಯ ಏನಾಗಿದೆ ಎಂದು ಎಲ್ಲರಿಗೂ ಗೊತ್ತಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ ಹರಿಪ್ರಸಾದ್ ಕೇಂದ್ರ ಸಚಿವ ಸದಾನಂದ ಗೌಡರಿಗೆ ತಿರುಗೇಟು ನೀಡಿದರು.

    ಇಂದು ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ಕೆ ಹರಿಪ್ರಸಾದ್, ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷ ಒಟ್ಟಾಗಿ ಚುನಾವಣೆ ಎದುರಿಸಲಿವೆ. ದೇಶದಲ್ಲಿ ಬಿಜೆಪಿ ಪ್ರಧಾನಿ ಹೊರತು ಪಡಿಸಿ, ಯಾರಾದ್ರೂ ಪ್ರಧಾನಿಯಾಗಬಹುದು ಅದೇ ನಮ್ಮ ಗುರಿ ಎಂದರು.

    ಬಿಜೆಪಿ ಪ್ರಧಾನಿ ಉಳಿದುಕೊಳ್ಳಬಾರದು ಅನ್ನೋ ದೃಷ್ಟಿಕೋನ ಇಟ್ಟುಕೊಂಡು ನಾವು ಮುನ್ನಡೆಯುತ್ತಿದ್ದೇವೆ. ಕಾಂಗ್ರೆಸ್ ಗೆ ಏಕಾಂಗಿಯಾಗಿ ಸ್ಪರ್ಧಿಸುವ ಶಕ್ತಿ ಇದೆ. ಆದ್ರೆ ಬದಲಾದ ಪರಿಸ್ಥಿತಿ ಹಾಗೂ ಸನ್ನಿವೇಶದಲ್ಲಿ ಎಲ್ಲರ ಸಹಕಾರವನ್ನು ತೆಗೆದುಕೊಂಡು ಹೋಗುವ ಪ್ರಯತ್ನ ನಡೆಯುತ್ತಿದೆ ಅಂದ್ರು.

    ಇದೇ ವೇಳೆ ಮುಂದಿನ ದಿನಗಳಲ್ಲಿ ಯಡಿಯೂರಪ್ಪ ಸಿಎಂ ಆಗಲಿದ್ದಾರೆ ಎಂಬ ಶ್ರೀಗಳ ಹೇಳಿಕೆಗೆ ಪ್ರತಿಕ್ರಿಯಿಸಿದ ಹರಿಪ್ರಸಾದ್, ಸ್ವಾಮೀಜಿಗಳ ಮಾತಿಗೆ ನಾನು ಪ್ರತಿಕ್ರಿಯಿಸಲ್ಲ. ರಾಜಕಾರಣಿಗಳು ಹೇಳಿಕೆ ನೀಡಿದಿದ್ದರೆ, ನಾನು ಪ್ರತಿಕ್ರಿಯಿಸುತ್ತಿದ್ದೆ ಅಂತ ಹೇಳಿ ನುಣುಚಿಕೊಂಡ್ರು.

    ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷ ನೇಮಕವನ್ನು ನಿರ್ಧರಿಸಲಿದ್ದಾರೆ. ನಿಗಮ ಮಂಡಳಿ ಆಯ್ಕೆಗೆ ಮೊದಲ ಹಂತದಲ್ಲಿ ಹಿರಿಯ ಶಾಸಕರಿಗೆ ನೀಡಲಾಗುತ್ತೆ, ಉಳಿದಂತೆ ಏರಿಯಾ ಕಾರ್ಯಕರ್ತರಿಗೆ ನೀಡಲಾಗುತ್ತೆ ಎಂದು ಸ್ಪಷ್ಟಪಡಿಸಿದರು.

    ಮಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ್ದ ಡಿವಿಎಸ್, ಯಾವುದೇ ಕ್ಷಣದಲ್ಲಿ ಸಮ್ಮಿಶ್ರ ಸರಕಾರ ಪತನವಾಗಬಹುದು. ಇವರು ಪ್ರತಿನಿತ್ಯ ಕುರ್ಚಿಗಾಗಿ ಕಚ್ಚಾಟ ನಡೆಸುತ್ತಿದ್ದಾರೆ. ಇದರಿಂದ ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಸ್ಥಗಿತಗೊಂಡಿದೆ. ಸಮ್ಮಿಶ್ರ ಸರಕಾರ ಯಾವಾಗ ಬೀಳುತ್ತೆ ಎಂದು ಜನ ಕಾಯುತ್ತಿದ್ದಾರೆ. ಕಾಂಗ್ರೆಸ್- ಜೆಡಿಎಸ್ ಎರಡೂ ಪಕ್ಷಗಳು ಕುರ್ಚಿ ಉಳಿಸಿಕೊಳ್ಳಲು ಹೋರಾಡುತ್ತಿವೆ. ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಅಧಿಕಾರಿಗಳು ಹಿಡಿತ ಕಳಕೊಂಡಿದ್ದು ತಮಗೆ ಇಷ್ಟ ಬಂದಂತೆ ಆಡಳಿತ ನಡೆಸುತ್ತಿದ್ದಾರೆ. ಈ ಸರಕಾರ ಹೆಚ್ಚು ಕಾಲ ಬಾಳುವುದಿಲ್ಲ ಅನ್ನೋದು ನಿಶ್ಚಿತ ಅಂತ ಡಿವಿಎಸ್ ರಾಜ್ಯ ಸರಕಾರದ ಬಗ್ಗೆ ಭವಿಷ್ಯ ನುಡಿದಿದ್ದರು

  • ರಾಯರನ್ನು ನಂಬಿದ್ದಕ್ಕೆ ವರ ಸಿಕ್ಕಿದೆ: ಜಗ್ಗೇಶ್

    ರಾಯರನ್ನು ನಂಬಿದ್ದಕ್ಕೆ ವರ ಸಿಕ್ಕಿದೆ: ಜಗ್ಗೇಶ್

    ಬೆಂಗಳೂರು: ನಾನು ಇದುವರೆಗೆ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ನನಗೆ ಯಾವ ಆಸೆಗಳೂ ಇಲ್ಲ. ಇದು ನನಗೆ ಬಯಸದೇ ಬಂದ ಭಾಗ್ಯ. ರಾಯರನ್ನು ನಂಬಿದ್ದಕ್ಕೆ ವರ ಸಿಕ್ಕಿದೆ ಎಂದು ನಟ, ಬಿಜೆಪಿ ನಾಯಕ ಜಗ್ಗೇಶ್ ಹೇಳಿದ್ದಾರೆ.

    ಯಶವಂತಪುರ ವಿಧಾನಸಭಾ ಕ್ಷೇತ್ರದ ಟಿಕೆಟ್ ಪಡೆದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು, ನಾಳೆ ನಂಬಿದವನು ಮೇಧಾವಿ. ಇಂದು ನಂಬಿದವನು ಮನುಷ್ಯ. ನಾನು ಮೊದಲು ಹೀರೋ ಆಗಿ ಫಿಲಂ ಮಾಡಿದಾಗ ನಕ್ಕಿದ್ದರು. ಆದರೆ ನನ್ನ ಸಿನಿಮಾ ಸಿಲ್ವರ್ ಜ್ಯುಬಿಲಿ ಕಂಡಿವೆ. ನಾಳೆ 12 ಘಂಟೆಗೆ ನಾಮಪತ್ರ ಸಲ್ಲಿಸಲಿದ್ದೇನೆ. ಮೋದಿ, ಅಮಿತ್ ಶಾ, ಯಡಿಯೂರಪ್ಪ, ಸದಾನಂದ ಗೌಡರ ಕನಸು ನನಸು ಮಾಡುತ್ತೇನೆ ಎಂದು ಹೇಳಿದರು.

    ಜನರಿಗೆ ಗೊತ್ತಿರುವ ವ್ಯಕ್ತಿಯಾಗಿರುವ ನಟ ಜಗ್ಗೇಶ್ ಅವರಿಗೆ ಟಿಕೆಟ್ ನೀಡಲಾಗಿದೆ. ವಿಧಾನ ಪರಿಷತ್ ಸದಸ್ಯರಾಗಿ ಉತ್ತಮ ಕೆಲಸ ಮಾಡಿದ್ದಾರೆ. ಉತ್ತಮ ಪ್ರತಿಕ್ರಿಯೆ ದೊರೆಯುತ್ತದೆ ಎಂದು ಕೇಂದ್ರ ಸಚಿವ ಸದಾನಂದ ಗೌಡ ಪ್ರತಿಕ್ರಿಯಿಸಿದ್ದಾರೆ.

    ಶೋಭಾ ಕರಂದ್ಲಾಜೆಯವರಿಗೆ ಯಶವಂತಪುರ ಕ್ಷೇತ್ರದ ಟಿಕೆಟ್ ಸಿಗಲಿದೆ ಎನ್ನುವ ಮಾತು ಕೇಳಿ ಬಂದಿತ್ತು. ಆದರೆ ಬಿಜೆಪಿ ಹೈಕಮಾಂಡ್ ಸಂಸದರ ಪೈಕಿ ಬಿಎಸ್ ಯಡಿಯೂರಪ್ಪ ಮತ್ತು ಶ್ರೀರಾಮುಲು ಅವರಿಗೆ ಮಾತ್ರ ಸ್ಪರ್ಧಿಸಲು ಅನುಮತಿ ನೀಡಿತ್ತು. ಹೀಗಾಗಿ ಬಿಜೆಪಿ ಯಶವಂತಪುರಕ್ಕೆ ಸೂಕ್ತ ಅಭ್ಯರ್ಥಿಯನ್ನು ಹುಡುಕುತಿತ್ತು. ಮೂರು ಪಟ್ಟಿ ಬಿಡುಗಡೆಯಾದಗಲೂ ಯಶವಂತಪುರದ ಅಭ್ಯರ್ಥಿಯನ್ನು ಬಿಜೆಪಿ ಪ್ರಕಟಿಸಿರಲಿಲ್ಲ. ಆದರೆ ಇಂದು ಪ್ರಕಟವಾದ ನಾಲ್ಕನೇಯ ಪಟ್ಟಿಯಲ್ಲಿ ಜಗ್ಗೇಶ್ ಅವರಿಗೆ ಟಿಕೆಟ್ ನೀಡಿ ಕಣಕ್ಕೆ ಇಳಿಸಿದೆ.

  • ಈಗ ಉತ್ತರ ನೀಡದೇ ಇದ್ರೆ ಜನ ಉತ್ತರ ಕೊಡ್ತಾರೆ: ಸಿಎಂಗೆ ಡಿವಿಎಸ್ ಪಂಚ ಪ್ರಶ್ನೆ

    ಈಗ ಉತ್ತರ ನೀಡದೇ ಇದ್ರೆ ಜನ ಉತ್ತರ ಕೊಡ್ತಾರೆ: ಸಿಎಂಗೆ ಡಿವಿಎಸ್ ಪಂಚ ಪ್ರಶ್ನೆ

    ಬೆಂಗಳೂರು: ನಗರದಲ್ಲಿ ಬಿಜೆಪಿ ಕಾರ್ಯಕರ್ತ ಸಂತೋಷ್ ಹತ್ಯೆ ಕುರಿತು ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಖಾತೆ ಸಚಿವ ಸದಾನಂದ ಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪಂಚ ಪ್ರಶ್ನೆಗಳನ್ನು ಕೇಳಿದ್ದಾರೆ.

    ಟ್ವೀಟ್ ಮೂಲಕ ರಾಜ್ಯದ ಪಂಚ ಮುಗ್ಧರಿಗೆ ಪಂಚ ಪ್ರಶ್ನೆಗಳು ಎಂದು ಹೇಳಿ ಸಿದ್ದರಾಮಯ್ಯ, ಗೃಹ ಸಚಿವ ರಾಮಲಿಂಗ ರೆಡ್ಡಿಯವರು, ಬೆಂಗಳೂರು ಉಸ್ತುವಾರಿ ಸಚಿವ ಕೆ ಜೆ ಜಾರ್ಜ್, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್, ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಇವರುಗಳಿಗೆ ಟ್ಯಾಗ್ ಮಾಡಿದ್ದಾರೆ.

    ಸಚಿವರ ಪ್ರಶ್ನೆಗಳು
    ಪ್ರಶ್ನೆ 1 – ಪಂಚ ಮುಗ್ಧರೇ ದಲಿತ ಯುವಕ ಸಂತೋಷನ ಕೊಲೆ ನಿಮ್ಮ ಮುಗ್ಧ ಸುತ್ತೋಲೆಯ ಪರಿಣಾಮ ಎಂದು ಒಪ್ಪಿಕೊಳ್ಳುತೀರಾ?
    ಪ್ರಶ್ನೆ -2 ನಿಮ್ಮ ಮುಗ್ಧಸುತ್ತೋಲೆ ಹೊರಡಿಸುವ ಮುನ್ನ ಸಮಾಜ ದ್ರೋಹಿ ಶಕ್ತಿಗಳಿಗೆ ನೀವು ರಕ್ಷಾ ಕವಚ ಹಾಕುತ್ತಿದೀರೆಂಬ ಕನಿಷ್ಠ ಜ್ಞಾನವು ನಿಮಗೆ ಇರಲಿಲ್ಲವಾ?
    ಪ್ರಶ್ನೆ -3 ದಲಿತ ಯುವಕ ಸಂತೋಷನ ಹೆತ್ತವರಿಗೆ ಏನೆಂದು ಹೇಳುತ್ತೀರಿ ಅವರನ್ನು ಮುಗ್ಧರು ಕೊಂದದೆಂದು ಹೇಳುತ್ತೀರಾ?

    ಪ್ರಶ್ನೆ -4 23 ಹಿಂದೂ ಕಾರ್ಯಕರ್ತರ ಕೊಲೆಯಾಗಿದೆ. ಕಾನೂನು ವ್ಯವಸ್ಥೆ ಅನ್ನುವುದು ಮರೀಚಿಕೆಯಾಗಿದೆ ನೀವು ಇದೆಲ್ಲವನ್ನು ನೋಡಿಯೂ ನೋಡದಂತೆ ಮುಗ್ಧರಾಗಿ ಉಳಿದಿರುವುದರ ಹಿಂದಿನ ಜಾಣ ಮುಗ್ಧತೆ ಏನು?
    ಪ್ರಶ್ನೆ – 5 ನಿಮ್ಮ ಮುಗ್ಧ ತುಷ್ಟೀಕರಣಕ್ಕೆ ಕೊನೆ ಯಾವಾಗ? ನಿಮ್ಮಗಳ ಆಡಳಿತದಲ್ಲಿ ಹಿಂದೂ ಬಾಂಧವರ ರಕ್ತ ಬಸಿಯುವ ದಾಹಕ್ಕೆ ಕೊನೆ ಯಾವಾಗ? ಒಂದಂತೂ ನೆನಪಿಟ್ಟುಕ್ಕೊಳ್ಳಿ ನೀವೀಗ ಉತ್ತರ ಕೊಡದಿದ್ದರೆ. ಚುನಾವಣೆಯಲ್ಲಿ ರಾಜ್ಯದ ಜನತೆ ಕೊಟ್ಟೇ ಕೊಡುತ್ತಾರೆ.

    ಜೆ.ಸಿ. ನಗರದ ನಿವಾಸಿಯಾಗಿರೋ 28 ವರ್ಷದ ಸಂತೋಷ್ ವೃತ್ತಿಯಲ್ಲಿ ಆಟೋ ಚಾಲಕರಾಗಿದ್ದು, ಬಿಜೆಪಿ ಪರ ಓಡಾಡಿಕೊಂಡಿದ್ದರು. ಬುಧವಾರ ರಾತ್ರಿ ಸುಮಾರು 7:30 ರಲ್ಲಿ ಹೊತ್ತಿಗೆ ಸಂತೋಷ್ ತಮ್ಮ ಮನೆ ಬಳಿ ಇದ್ದ ಬೇಕರಿಯಲ್ಲಿ ಟೀ ಕುಡಿಯುತ್ತಾ ನಿಂತಿದ್ದರು. ಈ ವೇಳೆ ಅದೇ ಏರಿಯಾದ ವಾಸೀಮ್, ಉಮರ್, ಫಿಲಿಪ್ಸ್ ಮತ್ತು ಇರ್ಫಾನ್ ಎಂಬವರು ಕೂಡ ಅಲ್ಲೇ ಟೀ ಕುಡಿಯುತ್ತಿದ್ದರು. ಈ ವೇಳೆ ಎರಡು ಗುಂಪುಗಳ ನಡುವೆ ಜಗಳ ನಡೆದು ವಾಸೀಮ್ ಎಂಬಾತ ತನ್ನ ಬಳಿ ಇದ್ದ ಚಾಕುವಿನಿಂದ ಸಂತೋಷ್ ತೊಡೆಗೆ ಇರಿದಿದ್ದಾನೆ. ಪರಿಣಾಮ ತೀವ್ರ ರಕ್ತ ಸ್ರಾವದಿಂದ ಸಂತೋಷ್ ಕೊನೆಯುಸಿರೆಳೆದಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಸದ್ಯ ಪ್ರಕರಣ ಸಂಬಂಧ ವಸೀಂ, ಫಿಲಿಪ್ಸ್ ಎಂಬ ಇಬ್ಬರೂ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಘಟನೆ ನಡೆದ ಬಗ್ಗೆ ಮಾಹಿತಿ ಸಿಕ್ಕಿದ ತಕ್ಷಣ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಠಾಣೆಯೆದುರು ಪ್ರತಿಭಟನೆ ಸಹ ನಡೆಸಿದ್ದಾರೆ. ಸಂತೋಷ್ ಹತ್ಯೆ ರಾಜಕೀಯ ಪ್ರೇರಿತ ಕೊಲೆ ಅಂತ ಆರೋಪಿಸಿದ್ದು, ವಸೀಮ್ ಸ್ಥಳೀಯ ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತರ ಮಗ, ಅವನಿಗೂ ಬಿಜೆಪಿಗೂ ಆಗುತ್ತಿರಲಿಲ್ಲ. ಹಾಗಾಗಿ ಬಿಜೆಪಿಯ ಪರ ಓಡಾಡುತ್ತಿದ್ದ ಸಂತೋಷ್‍ನನ್ನ ಕೊಲೆಗೈಯ್ಯಲಾಗಿದೆ ಎಂದು ಆರೋಪಿಸಿದ್ದಾರೆ. ಪೊಲೀಸರು ಮಧ್ಯ ಪ್ರವೇಶ ಮಾಡಿ ಪರಿಸ್ಥಿತಿಯನ್ನು ಸುಧಾರಿಸಿದ್ದಾರೆ.

  • ಯಡಿಯೂರಪ್ಪ ಸರ್ಕಾರದಿಂದ ಆತ್ಮಹತ್ಯೆ ಭಾಗ್ಯ ಅಂದ್ರು ಡಿವಿಎಸ್ – ವೇದಿಕೆಯಲ್ಲಿದ್ದ ಬಿಎಸ್‍ವೈ ತಬ್ಬಿಬ್ಬು

    ಯಡಿಯೂರಪ್ಪ ಸರ್ಕಾರದಿಂದ ಆತ್ಮಹತ್ಯೆ ಭಾಗ್ಯ ಅಂದ್ರು ಡಿವಿಎಸ್ – ವೇದಿಕೆಯಲ್ಲಿದ್ದ ಬಿಎಸ್‍ವೈ ತಬ್ಬಿಬ್ಬು

    ಮೈಸೂರು: ಯಡಿಯೂರಪ್ಪ ಅವರ ಸರ್ಕಾರದ ಅವಧಿಯಲ್ಲಿ 3.5 ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂತಹ ಮುಖ್ಯಮಂತ್ರಿ ನಮಗೆ ಬೇಕಾ ಎಂದು ಪ್ರಶ್ನಿಸಿ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಎಡವಟ್ಟು ಮಾಡಿಕೊಂಡಿದ್ದಾರೆ.

    ಪರಿವರ್ತನಾ ಯಾತ್ರೆಯಲ್ಲಿ ಭಾಷಣ ಮಾಡುವ ಸಂದರ್ಭದಲ್ಲಿ ಸಿದ್ದರಾಮಯ್ಯ ಎಂದು ಹೇಳುವ ಭರದಲ್ಲಿ ಬಿಎಸ್‍ವೈ ಹೆಸರನ್ನು ಪ್ರಸ್ತಾಪ ಮಾಡಿದ್ದರು. ಡಿವಿಎಸ್ ಈ ರೀತಿ ಹೇಳಿದ್ದನ್ನು ನೋಡಿ ವೇದಿಕೆಯಲ್ಲಿದ್ದ ಬಿಎಸ್ ಯಡಿಯೂರಪ್ಪ ಒಮ್ಮೆ ತಬ್ಬಿಬ್ಬು ಆದರು.

    ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತಾ ಅಂದ್ರೆ ಕನಸಲ್ಲೂ ಗಡಗಡ ನಡುಗುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ದೊಡ್ಡ ಕಾರ್ಯಕ್ರಮಗಳನ್ನು ನಡೆಸುತ್ತಿರುವಾಗಲೇ ಬಂದ್ ನಡೆಸಲು ಪ್ರೇರಣೆ ನೀಡಿದ್ದಾರೆ. ಮಹದಾಯಿ ವಿಚಾರವಾಗಿ ಉತ್ತರ ಕರ್ನಾಟಕದಲ್ಲಿ ಬಂದ್ ಮಾಡೋದು ಅಥವಾ ರಾಜಧಾನಿಯಲ್ಲಿ ಬಂದ್ ಮಾಡೋದು ಸ್ವಾಭಾವಿಕ. ಆದರೆ ಬಿಜೆಪಿಯ ದೊಡ್ಡ ಕಾರ್ಯಕ್ರಮ ಇದೆ ಎಂದು ಬಂದ್ ಮಾಡುತ್ತಿರುವ ಉದ್ದೇಶವೇ ಸಿದ್ದರಾಮಯ್ಯ ಅವರ ಕಾಗ್ರೆಸ್ ಪ್ರೇರಿತ ಬಂದ್ ಆಗಿದೆ ಅಂತಾ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

    ನಾಲ್ಕೂವರೆ ವರ್ಷಗಳಲ್ಲಿ ಸಿದ್ದರಾಮಯ್ಯ ಸರ್ಕಾರ ಏನೂ ಮಾಡಿಲ್ಲ. ಹೀಗಾಗಿ ಸೋಲು ಕಟ್ಟಿಟ್ಟ ಬುತ್ತಿ ಎಂದು ಅವರಿಗೆ ಗೊತ್ತಾಗಿದ್ದರಿಂದ ಸಿದ್ದರಾಮಯ್ಯ ಈ ರೀತಿ ಮಾಡುತ್ತಿದ್ದಾರೆ. ಈ ರೀತಿಯ ರಾಜಕೀಯ ದ್ವೇಷ ಒಳ್ಳೆಯದಲ್ಲ. ಒಂದು ದೇಶದ ಪ್ರಧಾನಿ ರಾಜ್ಯಕ್ಕೆ ಬರುವಾಗ ಶಾಂತಿ ಸುವ್ಯವಸ್ಥೆ ಕಾಪಾಡುವ ಬದಲು ರಾಜಕೀಯ ದ್ವೇಷ ಮಾಡೋದು ಸರಿಯಲ್ಲ. ಇದು ಅವರಿಗೇ ತಿರುಗುಬಾಣ ಆಗುತ್ತದೆ. ಮಹದಾಯಿ ಹೋರಾಟಗಾರರು ಮತ್ತು ಉತ್ತರ ಕರ್ನಾಟಕದ ಜನ ನಮ್ಮ ಪರವಾಗಿದ್ದು ಕನ್ನಡ ಪರ ಹೋರಾಟಗಾರರೇ ಬಂದ್‍ಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಸದಾನಂದ ಗೌಡ ಆಕ್ರೋಶ ಹೊರಹಾಕಿದ್ರು.

    ಅಧಿಕಾರಿಗಳನ್ನು ಪದೇ ಪದೇ ವರ್ಗಾವಣೆ ಮಾಡುವುದರಿಂದ ಅವರಿಗೆ ಕೆಲಸ ಮಾಡಲು ಆಗಲ್ಲ. ಅಧಿಕಾರಿಗಳ ಮೇಲೆ ಸವಾರಿ ಮಾಡುತ್ತ, ಸ್ವ ಇಚ್ಚೆಯಂತೆ ಕುಣಿಸುವುದರಿಂದ ಆಡಳಿತ ಕೆಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ರು.

    https://www.youtube.com/watch?v=TOEgUo27GjM

  • ತಾಯಿಯಂತೆ ಇನ್ನೂ 20 ವರ್ಷ ರಾಹುಲ್‍ಗಾಂಧಿ ಅಧ್ಯಕ್ಷ ಸ್ಥಾನ ಬಿಡಲ್ಲ, ಮದ್ವೆಯಾಗೋದೆ ಡೌಟ್- ಆಯನೂರು ಮಂಜುನಾಥ್ ಲೇವಡಿ

    ತಾಯಿಯಂತೆ ಇನ್ನೂ 20 ವರ್ಷ ರಾಹುಲ್‍ಗಾಂಧಿ ಅಧ್ಯಕ್ಷ ಸ್ಥಾನ ಬಿಡಲ್ಲ, ಮದ್ವೆಯಾಗೋದೆ ಡೌಟ್- ಆಯನೂರು ಮಂಜುನಾಥ್ ಲೇವಡಿ

    ಚಿಕ್ಕಮಗಳೂರು: ಆ ರಾಹುಲ್ ಗಾಂಧಿ ಮದುವೆಯಾಗ್ತಾನೆ ಅನ್ನೋದೇ ನಂಗೆ ಡೌಟ್ ಎಂದು ಆಯನೂರು ಮಂಜುನಾಥ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಹಾಗೂ ಅಧ್ಯಕ್ಷರ ವಿರುದ್ಧ ಲೇವಡಿ ಮಾಡಿದ್ದಾರೆ.

    ಚಿಕ್ಕಮಗಳೂರು ಜಿಲ್ಲೆ ಕೊಪ್ಪದಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು, ತನ್ನ ತಾಯಿಯಂತೆ ಇನ್ನೂ 20 ವರ್ಷ ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನವನ್ನ ಬಿಡೋದಿಲ್ಲ. ಅವನು ಮದುವೆಯಾಗಿ, ಅವನಿಗೆ ಮಕ್ಕಳಾಗಿ, ಅದು ದೊಡ್ಡದಾದ ಮೇಲೆ ಅದು ಮುಂದಿನ ಅಧ್ಯಕ್ಷ. ಆ ರಾಹುಲ್ ಗಾಂಧಿ ಮದುವೆಯಾಗ್ತಾನೆ ಅನ್ನೋದೇ ಡೌಟ್ ನಂಗೆ. ಕಾಂಗ್ರೆಸ್‍ನಲ್ಲಿ ಅಧ್ಯಕ್ಷರಾಗುವಂತಹಾ ಯೋಗ್ಯತೆ ಯಾರಿಗೂ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ.

    ಇದೇ ವೇಳೆ ಕೇಂದ್ರ ಸಚಿವ ಸದಾನಂದಗೌಡ ಮಾತನಾಡಿ, ಸಿದ್ದರಾಮಯ್ಯನವರಿಗೆ ನಾಚಿಕೆಯಾಗಬೇಕು. ನಿಮ್ಮ ದುಡ್ಡು ತಿನ್ನೋದೇ ನಮ್ಮ ಜವಾಬ್ದಾರಿ ಅಂತ ಅವರು ತಿಳಿದುಕೊಂಡಿದ್ದಾರೆ. ನಿಮ್ಮ ಖರ್ಚಿನಲ್ಲಿ ನಮ್ಮ ಯಾತ್ರೆ ಮಾಡೋದು ಅಂತ ನಿಶ್ಚಯ ಮಾಡ್ಕೊಂಡು ಇವತ್ತು ಯಾತ್ರೆ ಮಾಡ್ತಿರೋ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ಸಿಗರಿಗೆ ನಾಚಿಕೆಯಾಗ್ಬೇಕು ಎಂದು ಕಿಡಿಕಾರಿದ್ರು.

     

  • ಇದೊಂದು ಸಮಾಧಾನಕರವಾದ ಗೆಲುವಾಗಿದೆ- ಡಿವಿಎಸ್

    ಇದೊಂದು ಸಮಾಧಾನಕರವಾದ ಗೆಲುವಾಗಿದೆ- ಡಿವಿಎಸ್

    ನವದೆಹಲಿ: ಇದೊಂದು ನಿರೀಕ್ಷಿತ ಗೆಲುವಾಗಿದೆ. ಗುಜರಾತ್ ನಲ್ಲಿ ಬಿಜೆಪಿ ಮತ್ತೆ ಆದಿಕಾರಕ್ಕೆ ಬರುತ್ತೆ ಅಂತ ನಮಗೆ ಮೊದಲೇ ತಿಳಿದಿತ್ತು. ಹೀಗಾಗಿ ಇದೊಂದು ಸಮಾಧಾನಕರವಾದ ಗೆಲುವಾಗಿದೆ ಅಂತ ಕೇಂದ್ರ ಕಾನೂನು ಸಚಿವ ಡಿವಿ ಸದಾನಂದ ಗೌಡ ತಿಳಿಸಿದ್ದಾರೆ.

    ಗುಜರಾತ್ ಹಾಗೂ ಹಿಮಾಚಲಪ್ರದೇಶದ ಚುನಾವಣಾ ಫಲಿತಾಂಶದ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಕಳೆದ 3 ವರ್ಷದಲ್ಲಿ ಗುಜರಾತಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯ ವೈಖರಿ ಹಾಗೂ ಗುಜರಾತಿನಲ್ಲಿ 13 ವರ್ಷ ಅವರು ನಡೆಸಿದ ಆಡಳಿತದಿಂದ ನಮಗೆ ಇಂದು ಈ ಗೆಲುವು ಲಭಿಸಿದೆ. ಅಲ್ಲದೇ ಈ ಗೆಲುವು ಇಡೀ ದೇಶದಲ್ಲೇ ಬರಬೇಕೆಂಬುದು ಜನ ಮನಸ್ಸಿನ ಭಾವನೆ ಅಂತ ಅವರು ಹೇಳಿದ್ರು.

    ಇದೊಂದು ಸಮಾಧಾನಕರವಾದ ಗೆಲುವಾಗಿದ್ದು, ಪಾಟೀದಾರ್ ಸಮುದಾಯವನ್ನು ಒಡೆದು ಆಳುವ ನೀತಿ ಇರಬಹುದು ಅಥವಾ ಹಿಂದುಳಿದ ಅಥವಾ ಬೇರೆ ಸಮುದಾಯದ ನಾಯಕರನ್ನು ಪಕ್ಷಕ್ಕೆ ಸೇರಿಸಕೊಳ್ಳುವ ಮೂಲಕ ಒಂದು ರೀತಿಯಲ್ಲಿ ಕಾಂಗ್ರೆಸ್ ಪಕ್ಷ ಹಲವು ತಂತ್ರಗಾರಿಕೆಗಳನ್ನು ರೂಪಿಸಿತ್ತು. ಆದ್ರೆ ಇವೆಲ್ಲದರ ಮಧ್ಯೆ ಬಿಜೆಪಿ ಅದ್ಭುತ ಗೆಲುವು ಸಾಧಿಸಿದೆ ಅಂದ್ರೆ ಇದೊಂದು ಅಸಾಧಾರಣ ಗೆಲುವು ಅಂತಾನೇ ಹೇಳಬಹುದು ಅಂದ್ರು.

    ಭ್ರಷ್ಟ ಅಧಿಕಾರಿಗಳಿಗೆ ಮತ್ತೆ ಅವಕಾಶ ಕೊಡಬಾರದೆಂದು ಭಾರತೀಯ ಜನತಾ ಪಕ್ಷದ ಸ್ಪಷ್ಟ ವಿಚಾರವಾಗಿದೆ. ಆರೋಪಗಳು, ಪ್ರತ್ಯಾರೋಪಗಳು ರಾಜಕೀಯದಲ್ಲಿ ಸಾಮಾನ್ಯ. ಆ ಆರೋಪಗಳು ಸಾಬೀತಾಗಿಲ್ಲ ಅಂತ ಅದನ್ನು ಮತ್ತೆ ಮತ್ತೆ ಮುಂದುವರೆಸುವುದರಲ್ಲಿ ನೈತಿಕತೆ ಇಲ್ಲ ಅಂತ ಡಿವಿಎಸ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ರು.

     

  • ಕೇಂದ್ರದ ಬಗ್ಗೆ ಅಪಹಾಸ್ಯ ಮಾಡಲು ಮೋದಿಯವರಿಗೆ ನಾಚಿಗೆಯಾಗ್ಬೇಕು: ಡಿವಿಎಸ್ ಎಡವಟ್ಟು

    ಕೇಂದ್ರದ ಬಗ್ಗೆ ಅಪಹಾಸ್ಯ ಮಾಡಲು ಮೋದಿಯವರಿಗೆ ನಾಚಿಗೆಯಾಗ್ಬೇಕು: ಡಿವಿಎಸ್ ಎಡವಟ್ಟು

    ಮಂಗಳೂರು: ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಶುಕ್ರವಾರ ಬಳ್ಳಾರಿ ಸಂಸದ ಶ್ರೀರಾಮುಲು ಎಡವಟ್ಟು ಮಾಡಿದ್ದು, ಇದೀಗ ಇಂದು ಮತ್ತೆ ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಖಾತೆಯ ಸಚಿವ ಡಿವಿ ಸದಾನಂದ ಗೌಡ ಅವರು ಎಡವಟ್ಟು ಮಾಡುವ ಮೂಲಕ ವಿರೋಧ ಪಕ್ಷದವರ ನಗೆಪಾಟಲಿಗೀಡಾಗಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ನಿನ್ನೆ ನಡೆದಿದ್ದು, ಇಂದು ದಕ್ಷಿಣ ಕನ್ನಡದ ಬಂಟ್ವಾಳದಲ್ಲಿ ಸಮಾವೇಶ ನಡೆಯಿತು. ತಮ್ಮ ಭಾಷಣದ ವೇಳೆ ಕೇಂದ್ರ ಸಚಿವ ಡಿವಿ ಸದಾನಂದ ಗೌಡ, ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಕೇಂದ್ರದ ಬಗ್ಗೆ ಅಪಹಾಸ್ಯ ಮಾಡಲು ನರೇಂದ್ರ ಮೋದಿಯವರಿಗೆ ನಾಚಿಗೆಯಾಗಬೇಕು ಎಂದು ಹೇಳಿದರು.

    ಇದನ್ನೂ ಓದಿ: ಯಡಿಯೂರಪ್ಪ, ಶೋಭಾ, ಸದಾನಂದ ಗೌಡರಿಂದ ಹಿಂದೂ ಕಾರ್ಯಕರ್ತರ ಕೊಲೆ:ಶ್ರೀರಾಮುಲು ಎಡವಟ್ಟು


    ಬಳಿಕ ಈಶ್ವರಪ್ಪ ಮಾತನಾಡಿ, ಸಿದ್ದರಾಮಯ್ಯ ಮೈಯಲ್ಲಿ ಕನಕದಾಸರ ರಕ್ತ ಹರೀತಿಲ್ಲ. ಅವರ ಮೈಯಲ್ಲಿ ಟಿಪ್ಪುವಿನ ರಕ್ತ ಹರೀತಿದೆ. ಹಾಗಾಗಿ ಮೈಯನ್ನು ಕುಲುಕಿಸಿ ಟಿಪ್ಪು ಹೆಸರಲ್ಲಿ ಬೆಂಕಿ ಹಚ್ಚುತ್ತಿದ್ದಾರೆ. ಸಿದ್ರಾಮಯ್ಯ ತಮಗೆ ಟಿಪ್ಪು ಹೆಸರನ್ನೇ ಇಟ್ಟುಕೊಳ್ಳಲಿ. ಹಿಂದುಗಳ ಮುದ್ರಾಧಾರಣೆ, ತ್ರಿಶೂಲಧಾರಣೆಯನ್ನು ಹಿಂಸೆ ಎನ್ನುತ್ತಾರೆ. ತಾಕತ್ತಿದ್ದರೆ ಮುಸ್ಲಿಮರು ಮಾಡುವ ಸುನ್ನತ್ ನಿಲ್ಲಿಸಿ, ಅದು ಕೂಡ ಹಿಂಸೆಯೇ. ಸುನ್ನತ್ ನಿಷೇಧಿಸುತ್ತೀರಾ ಅಂತ ಸಿಎಂಗೆ ಈಶ್ವರಪ್ಪ ಪ್ರಶ್ನೆ ಹಾಕಿದ್ರು.

    ಡಿಕೆಶಿ ಬಿಜೆಪಿಗೆ ಆಹ್ವಾನ ವದಂತಿ ವಿಚಾರದ ಬಗ್ಗೆ ಮಾತನಾಡಿದ ಅವರು, ಡಿಕೆಶಿಯಂತಹ ಭ್ರಷ್ಟರನ್ನು ಬಿಜೆಪಿ ಸೇರಿಸಲು ಸಾಧ್ಯವೇ ಇಲ್ಲ. ಸಿದ್ಧರಾಮಯ್ಯ, ಡಿಕೆಶಿ ಸಾಕಷ್ಟು ಸುಳ್ಳು ಹೇಳಿದ್ದಾರೆ. ಡಿಕೆಶಿಯಂತಹ ಭ್ರಷ್ಟರನ್ನು ಬಿಜೆಪಿ ತಗೊಳಲ್ಲ. ಇವರು ಪ್ರಭಾಕರ್ ಭಟ್ಟರನ್ನು ಬಂಧಿಸುವ ಉದ್ದೇಶ ಹೊಂದಿದ್ದರು. ಪ್ರಭಾಕರ್ ಭಟ್ ರೋಮ ಮುಟ್ಟಿದರೆ ರಾಜ್ಯದಲ್ಲಿ ಜನ ಸುಮ್ಮನಿರಲ್ಲ. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಗೋಹತ್ಯಾ ನಿಷೇಧ ಕಾನೂನು ತರುತ್ತೇವೆ ಅಂತ ಹೇಳಿದ್ರು.

    https://www.youtube.com/watch?v=paACKy7LMQs