Tag: ಸದ್ದುಗುಂಟೆಪಾಳ್ಯ

  • ಬೆಂಗಳೂರು | ಲೇಡಿಸ್ ಪಿಜಿಗೆ ನುಗ್ಗಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕ ಅರೆಸ್ಟ್

    ಬೆಂಗಳೂರು | ಲೇಡಿಸ್ ಪಿಜಿಗೆ ನುಗ್ಗಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕ ಅರೆಸ್ಟ್

    ಬೆಂಗಳೂರು: ಲೇಡಿಸ್ ಪಿ.ಜಿಗೆ ನುಗ್ಗಿ ಯುವತಿಯ ಮೈ ಕೈ ಮುಟ್ಟಿ ಆಕೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ತಲೆಮರಿಸಿಕೊಂಡಿದ್ದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ.

    ಆಂಧ್ರಪ್ರದೇಶದ (Andhra Pradesh) ಮದನ್‌ಪಲ್ಲಿ (Madanapalle) ಮೂಲದ ಕೆ.ನರೇಶ್ ಪಟ್ಯಂ ಬಂಧಿತ ಆರೋಪಿಯಾಗಿದ್ದು, ಬೆಂಗಳೂರಿನಲ್ಲಿ (Bengaluru) ಡೆಲಿವರಿ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದೆ.ಇದನ್ನೂ ಓದಿ: ಬೆಂಗಳೂರು | ಲೇಡಿಸ್ ಪಿಜಿಗೆ ನುಗ್ಗಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ

    ಆ.29ರಂದು ನಸುಕಿನ ಜಾವ 3 ಗಂಟೆ ಸುಮಾರಿಗೆ ಪಿ.ಜಿಗೆ ನುಗ್ಗಿದ್ದ ಅಪರಿಚಿತ ವ್ಯಕ್ತಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಅಲ್ಲದೇ ಯುವತಿಯನ್ನ ಎಳೆದಾಡಿ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದ.

    ಸದ್ದುಗುಂಟೆಪಾಳ್ಯ (Sadduguntepalya) ಠಾಣಾ ವ್ಯಾಪ್ತಿಯ ಪಿಜಿಯಲ್ಲಿ ಘಟನೆ ನಡೆದಿದ್ದು, ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆಸಾಮಿಯು ಯುವತಿಯ ರೂಮ್‌ಗೆ ನುಗ್ಗಿದಾಗ ಆಕೆ ರೂಮ್‌ಮೇಟ್ ಇರಬಹುದು ಅಂದುಕೊಂಡಿದ್ದಳು. ಕಾಮುಕ ಮೊದಲೇ ಪಿಜಿ ಫ್ಲೋರ್‌ನ ಎಲ್ಲಾ ರೂಮ್ ಡೋರ್‌ಗಳನ್ನು ಲಾಕ್ ಮಾಡಿ, ಬಳಿಕ ಯುವತಿ ಬಳಿ ಹೋಗಿ ಆಕೆಯ ಕೈ ಕಾಲು ಮುಟ್ಟಿದ್ದ. ಯುವತಿಗೆ ಎಚ್ಚರವಾಗಿ ಗಾಬರಿಯಿಂದ ಕಿರುಚಿದಾಗ ಚಾಕು ತೋರಿಸಿ ಬೆದರಿಕೆ ಹಾಕಿದ್ದ. ಈ ವೇಳೆ ಪ್ರತಿರೋಧ ಒಡ್ಡಿ, ಕೂಗಾಡಿ ಹೊರಬಂದಿದ್ದ ಯುವತಿಯ ಕಪಾಳಕ್ಕೆ ಹೊಡೆದು, ಆಕೆಯನ್ನು ಎಳೆದಾಡಿ ಕಾಮುಕ ಎಸ್ಕೇಪ್ ಆಗಿದ್ದ.

    ಸದ್ಯ ಸದ್ದುಗುಂಟೆಪಾಳ್ಯ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಇದನ್ನೂ ಓದಿ: Bengaluru | ಲೇಡಿಸ್ ಪಿಜಿಗೆ ನುಗ್ಗಿ ಎಂಜಿನಿಯರ್ ಕುತ್ತಿಗೆಗೆ ಚಾಕು ಇಟ್ಟು ಚಿನ್ನಾಭರಣ ದರೋಡೆ

  • ಬೆಂಗಳೂರು | ಲೇಡಿಸ್ ಪಿಜಿಗೆ ನುಗ್ಗಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ

    ಬೆಂಗಳೂರು | ಲೇಡಿಸ್ ಪಿಜಿಗೆ ನುಗ್ಗಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ

    ಬೆಂಗಳೂರು: ಲೇಡಿಸ್ ಪಿ.ಜಿಗೆ ನುಗ್ಗಿ ಯುವತಿಯ ಮೈ ಕೈ ಮುಟ್ಟಿ ಆಕೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರೋ ಘಟನೆ ಬಿಟಿಎಂ ಲೇಔಟ್‌ನ (BTM Layout) ಪಿ.ಜಿಯಲ್ಲಿ ನಡೆದಿದೆ.

    ಆ.29 ರಂದು ನಸುಕಿನ ಜಾವ 3 ಗಂಟೆ ಸುಮಾರಿಗೆ ಪಿ.ಜಿಗೆ ನುಗ್ಗಿದ್ದ ಅಪರಿತ ವ್ಯಕ್ತಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಲ್ಲದೇ ಯುವತಿಯನ್ನ ಎಳೆದಾಡಿ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಇದನ್ನೂ ಓದಿ: Uttar Pradesh | ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – ಇಬ್ಬರು ದುರ್ಮರಣ, ಐವರಿಗೆ ಗಾಯ

    ಸದ್ದುಗುಂಟೆಪಾಳ್ಯ (Sadduguntepalya) ಠಾಣಾ ವ್ಯಾಪ್ತಿಯ ಪಿಜಿಯಲ್ಲಿ ಘಟನೆ ನಡೆದಿದ್ದು, ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆಸಾಮಿಯು ಯುವತಿಯ ರೂಮ್‌ಗೆ ನುಗ್ಗಿದಾಗ ಆಕೆ ರೂಮ್‌ಮೇಟ್ ಇರಬಹುದು ಅಂದುಕೊಂಡಿದ್ದಳು. ಕಾಮುಕನೂ ಮೊದಲೇ ಪಿಜಿ ಫ್ಲೋರ್‌ನ ಎಲ್ಲಾ ರೂಮ್ ಡೋರ್‌ಗಳನ್ನು ಲಾಕ್ ಮಾಡಿ ಯುವತಿ ಬಳಿ ಹೋಗಿ ಆಕೆಯ ಕೈ ಕಾಲು ಮುಟ್ಟಿದ್ದಾನೆ. ಯುವತಿಗೆ ಎಚ್ಚರವಾಗಿ ಗಾಬರಿಯಿಂದ ಕಿರುಚಿ, ಚಾಕು ತೋರಿಸಿ ಬೆದರಿಕೆ ಹಾಕಿದ್ದಾಳೆ. ಇದನ್ನೂ ಓದಿ: ʻಬಿಗ್ ಬಾಸ್ ಸೀಸನ್‌-12ʼನ ಬಿಗ್‌ ನ್ಯೂಸ್‌ – ಲಾಂಚ್‌ ಡೇಟ್‌ ಅನೌನ್ಸ್‌ ಮಾಡಿದ ಕಿಚ್ಚ ಸುದೀಪ್

    ಈ ವೇಳೆ ಪ್ರತಿರೋಧ ಒಡ್ಡಿ, ಕೂಗಾಡಿ ಹೊರ ಬಂದಿದ್ದ ಯುವತಿಯ ಕಪಾಳಕ್ಕೆ ಹೊಡೆದು, ಆಕೆಯನ್ನು ಎಳೆದಾಡಿ ಕಾಮುಕ ಎಸ್ಕೇಪ್ ಆಗಿದ್ದಾನೆ.

  • ವಿದ್ಯುತ್ ಕಂಬ ಬಿದ್ದು ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವು

    ವಿದ್ಯುತ್ ಕಂಬ ಬಿದ್ದು ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವು

    ಬೆಂಗಳೂರು: ರಸ್ತೆ ಕಾಮಗಾರಿ ವೇಳೆ ವಿದ್ಯುತ್ ಕಂಬಕ್ಕೆ ಜೆಸಿಬಿ ಡಿಕ್ಕಿಯಾಗಿ ವಿದ್ಯುತ್ ಕಂಬ ತುಂಡಾಗಿ ಬಿದ್ದ ಪರಿಣಾಮ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೈಯ್ಯಪ್ಪನಹಳ್ಳಿ (Baiyyappanahalli) ಬಳಿಯ ಸದ್ದುಗುಂಟೆಪಾಳ್ಯದಲ್ಲಿ ನಡೆದಿದೆ.

    ಸದ್ದುಗುಂಟೆಪಾಳ್ಯ (Sudduguntepalya) ನಿವಾಸಿಗಳಾದ ಸುಮತಿ(35) ಮತ್ತು ಸೋನಿ ಕುಮಾರಿ (35) ಮೃತ ದುರ್ದೈವಿಗಳು.

    ಸೋಮವಾರ ಸಂಜೆ 4 ಗಂಟೆ ಸುಮಾರಿಗೆ ಸದ್ದುಗುಂಟೆಪಾಳ್ಯ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದೆ. ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: Aurangzeb Tomb Row| ಧರ್ಮಗ್ರಂಥ ಸುಟ್ಟ ವದಂತಿಯಿಂದ ನಾಗ್ಪುರದಲ್ಲಿ ಹಿಂಸಾಚಾರ, ಕರ್ಫ್ಯೂ ಜಾರಿ

    ಈ ದುರಂತಕ್ಕೆ ಜೆಸಿಬಿ ಡ್ರೈವರ್‌ನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ರಸ್ತೆ ಕಾಮಗಾರಿಯ ವೇಳೆ ಜೆಸಿಬಿ ಡ್ರೈವರ್‌ ಕಿವಿಗೆ ಹೆಡ್‌ಫೋನ್ ಹಾಕಿಕೊಂಡು ಕೆಲಸ ಮಾಡುತ್ತಿದ್ದ. ಈ ವೇಳೆ ಲೈಟ್ ಕಂಬದಿಂದ ಮನೆಗೆ ಬೇರೆ ಕಡೆಗೆ ಕನೆಕ್ಟ್ ಮಾಡಿದ್ದ ವೈಯರ್‌ಗೆ ಜೆಸಿಬಿಯ ಮುಂಭಾಗ ಟಚ್ ಆಗಿದೆ. ಜನ ಜೋರಾಗಿ ಕೂಗಿಕೊಂಡರೂ ಡ್ರೈವರ್‌ ಕೇಳಿಸಿಕೊಳ್ಳದೇ ವೈಯರ್ ಎಳೆದಿರುವುದೇ ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಉಗ್ರರ ದಾಳಿ ಭೀತಿ – ಪಾಕ್‌ ಸೇನೆ ತೊರೆಯುತ್ತಿದ್ದಾರೆ ಯೋಧರು!

    ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದರು. ಜೆಸಿಬಿಯನ್ನು ಜಪ್ತಿ ಮಾಡಿ, ಜೆಸಿಬಿ ಚಾಲಕನ್ನು ವಶಕ್ಕೆ ಪಡೆದಿದ್ದಾರೆ. ಬೈಯ್ಯಪ್ಪನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಜಿಹಾದಿ ಗ್ಯಾಂಗ್ ಹೆಸರಲ್ಲಿ ಜಮೀನು ಖರೀದಿಗೆ ಮುಂದಾಗಿದ್ದ ಶಂಕಿತ ಉಗ್ರರು!

    ಜಿಹಾದಿ ಗ್ಯಾಂಗ್ ಹೆಸರಲ್ಲಿ ಜಮೀನು ಖರೀದಿಗೆ ಮುಂದಾಗಿದ್ದ ಶಂಕಿತ ಉಗ್ರರು!

    – ಇಬ್ಬರು ಶಂಕಿತ ಉಗ್ರರು ತಮಿಳುನಾಡು ಪೊಲೀಸರಿಗೆ ಹಸ್ತಾಂತರ

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜಿಹಾದಿ ಗ್ಯಾಂಗ್ ಸದಸ್ಯರ ಬಂಧನ ಪ್ರಕರಣದಿಂದ ಒಂದೊಂದೆ ಸತ್ಯಾಂಶಗಳು ಹೊರ ಬರುವುದಕ್ಕೆ ಶುರುವಾಗಿವೆ. ಇಡೀ ದಕ್ಷಿಣ ಭಾರತವನ್ನು ಟಾರ್ಗೆಟ್ ಮಾಡಿದ್ದ ಜಿಹಾದಿ ಗ್ಯಾಂಗ್ ಸದಸ್ಯರಿಗೆ ಭರ್ಜರಿ ಟಾಸ್ಕ್ ನೀಡಲಾಗುತ್ತಿತ್ತು ಎನ್ನಲಾಗಿದೆ.

    ಜಿಹಾದಿಗಳು ವ್ಯವಸ್ಥಿತ ಜಾಲ ಹೆಣೆಯಲು ಪಕ್ಕಾ ಪ್ಲ್ಯಾನ್ ಮಾಡಿದ್ದರು. ಮತ್ತೊಂದು ಆಘಾತಕಾರಿ ವಿಚಾರವೆಂದರೆ ಗುಂಡ್ಲುಪೇಟೆ ತಾಲೂಕಿನಲ್ಲಿ ಟ್ರೈನಿಂಗ್ ಕ್ಯಾಂಪ್ ಮಾಡಲು ಸ್ಕೆಚ್ ಹಾಕಿದ್ದರಂತೆ. ಜಿಹಾದಿ ಗ್ಯಾಂಗ್ ಸದಸ್ಯರಿಗೆ ಅಲ್ಲಿಯೇ ಶಸ್ತ್ರಾಸ್ತ್ರ ತರಬೇತಿಗೆ ಪ್ಲ್ಯಾನ್ ರೂಪಿಸಲಾಗಿತ್ತು ಎಂಬ ವಿಚಾರ ಪೊಲೀಸ್ ತನಿಖೆಯಲ್ಲಿ ಹೊರ ಬಿದ್ದಿದೆ ಎಂಬ ಮಾಹಿತಿ ಮೂಲಗಳಿಂದ ಲಭಿಸಿದೆ.

    ಸದ್ದುಗುಂಟೆಪಾಳ್ಯದಲ್ಲಿದ್ದ ಶಂಕಿತ ಉಗ್ರ ಮೆಹಬೂಬ್ ಪಾಷಾ ಸ್ಥಾಪಿಸಿದ್ದ ಟ್ರಸ್ಟ್ ಹೆಸರಿನಲ್ಲಿ ಜಮೀನು ಖರೀದಿಗೆ ಯತ್ನ ನಡೆದಿತ್ತು. ರಾಜ್ಯದ ಐಸಿಎ ಸಂಘಟನೆ ಮುಖ್ಯಸ್ಥ ಮೆಹಬೂಬ್ ಪಾಷಾ ಮೂಲಕ ಮನ್ಸೂರ್ ಖಾನ್‍ಗೆ ಜಮೀನು ಖರೀದಿಸುವ ಟಾಸ್ಕ್ ನೀಡಲಾಗಿತ್ತು. ಸಿಸಿಬಿ ಪೊಲೀಸರು ಇಬ್ಬರು ಶಂಕಿತರನ್ನು ಗುಂಡ್ಲುಪೇಟೆಯಲ್ಲಿ ವಶಕ್ಕೆ ಪಡೆದಿದ್ದರು. ಅಲ್ಲದೆ ದೆಹಲಿಯಲ್ಲಿ ಬಂಧಿತನಾಗಿದ್ದ ಖಾಜಾ ಮೊಯಿದ್ದೀನ್ ಜಿಹಾದಿ ಸದಸ್ಯರ ಮುಖ್ಯಸ್ಥನ ಸೂಚನೆಯಂತೆ ಎಲ್ಲವೂ ನಡೆಯುತ್ತಿತ್ತು. ಬೆಂಗಳೂರಿನ ಸದ್ದುಗುಂಟೆಪಾಳ್ಯದ ಮನೆಯಲ್ಲಿ ಪಿಸ್ತೂಲ್, ಜೀವಂತ ಗುಂಡುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

    ಶಂಕಿತ ಉಗ್ರರು:
    ಉಡುಪಿಯಲ್ಲಿ ಮಂಗಳವಾರ ಸೆರೆಸಿಕ್ಕ ಇಬ್ಬರು ಶಂಕಿತ ಉಗ್ರರಾದ ಅಬ್ದುಲ್ ಶಮೀಮ್ ಮತ್ತು ತೌಫಿಕ್‍ನನ್ನು ತಮಿಳುನಾಡು ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಕರ್ತವ್ಯ ನಿರತ ಪೊಲೀಸ್ ಅಧಿಕಾರಿ ವಿಲ್ಸನ್ ಶೂಟೌಟ್ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಇಬ್ಬರನ್ನೂ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಇಬ್ಬರು ಆರೋಪಿಗಳ ಬಂಧನಕ್ಕಾಗಿ ಕರ್ನಾಟಕ, ಕೇರಳ ಹಾಗೂ ತಮಿಳುನಾಡು ಪೊಲೀಸರು ತೀವ್ರ ಶೋಧ ನಡೆಸಿದ್ದರು.

    ಉಗ್ರರ ಚಟುವಟಿಕೆ ಶಂಕೆ ಹಿನ್ನೆಲೆ ತಮಿಳುನಾಡು ಕೇರಳ ಗಡಿಯ ಕಲಿಯಿಕ್ಕಾವಿಲ ಚೆಕ್‍ಪೋಸ್ಟ್ ನಲ್ಲಿ ವಾಹನಗಳ ತೀವ್ರ ತಪಾಸಣೆ ನಡೆಸಲಾಗುತ್ತಿತ್ತು. ಇದೇ ಮಾರ್ಗವಾಗಿ ಜನವರಿ 8ರ ರಾತ್ರಿ ಮಹೀಂದ್ರ ಸ್ಕಾರ್ಪಿಯೋದಲ್ಲಿ ಬಂದಿದ್ದ ಇಬ್ಬರು ಶಂಕಿತ ಉಗ್ರರು ವಿಲ್ಸನ್ ಅವರನ್ನು ಹತ್ಯೆಗೈದು ಪರಾರಿ ಆಗಿದ್ದರು. ಸದ್ಯ ಈ ಪ್ರಕರಣದ ತನಿಖೆ ನಡೆಸುತ್ತಿರುವ ತಮಿಳುನಾಡು ಕ್ಯೂ ಬ್ರಾಂಚ್ ಪೊಲೀಸರು, ರಾಜ್ಯದ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ, ಆರೋಪಿಗಳನ್ನ ವಶಕ್ಕೆ ಪಡೆದಿದ್ದಾರೆ.