Tag: ಸನ್ ಫ್ಲವರ್ಸ್ ವರ್ ದ ಫಸ್ಟ್ ಒನ್ಸ್ ಟು ನೋ

  • ಕಾನ್ ಫೆಸ್ಟಿವಲ್‌ನಲ್ಲಿ ಮೊದಲ ಬಹುಮಾನ ಗೆದ್ದ ಕನ್ನಡಿಗನ ಸಾಧನೆಯನ್ನು ಹಾಡಿ ಹೊಗಳಿದ ಯಶ್

    ಕಾನ್ ಫೆಸ್ಟಿವಲ್‌ನಲ್ಲಿ ಮೊದಲ ಬಹುಮಾನ ಗೆದ್ದ ಕನ್ನಡಿಗನ ಸಾಧನೆಯನ್ನು ಹಾಡಿ ಹೊಗಳಿದ ಯಶ್

    ಕಾನ್ ಫಿಲ್ಮ್ ಫೆಸ್ಟಿವೆಲ್‌ಗೆ (Cannes Film Festival 2024) ಮೈಸೂರಿನ ಹುಡುಗ ಚಿದಾನಂದ ನಾಯ್ಕ್ (Chidananda S Naik) ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಸನ್ ಫ್ಲವರ್ಸ್ ವರ್ ದ ಫಸ್ಟ್ ಒನ್ಸ್ ಟು ನೋ’ ಕಿರುಚಿತ್ರ ಆಯ್ಕೆಯಾಗಿತ್ತು. ಈ ಫೆಸ್ಟಿವೆಲ್‌ಗೆ ಆಯ್ಕೆಯಾದ ಮೊದಲ ಕನ್ನಡಿಗರ ಕಿರುಚಿತ್ರ ಇದಾಗಿದ್ದು, ಇದೀಗ ಮೊದಲ ಅತ್ಯುತ್ತಮ ಕಿರುಚಿತ್ರ ಪ್ರಶಸ್ತಿಯನ್ನು ಬಾಚಿಕೊಂಡಿರುವ ಚಿದಾನಂದ ಸಾಧನೆಗೆ ನ್ಯಾಷನಲ್ ಸ್ಟಾರ್ ಯಶ್ (Actor Yash) ಹಾಡಿ ಹೊಗಳಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ‘ಕೆಜಿಎಫ್‌ 2’ ನಟ (KGF 2 Actor) ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಚಿದಾನಂದ ನಾಯಕ್‌ಗೆ ಅಭಿನಂದನೆಗಳು. ಕಾನ್ ಚಿತ್ರೋತ್ಸವದಲ್ಲಿ ಅತ್ಯುತ್ತಮ ಕಿರುಚಿತ್ರಕ್ಕಾಗಿ ‘ಲಾ ಸಿನೆಫ್’ ಪ್ರಶಸ್ತಿಯನ್ನು ಗೆದ್ದಿದ್ದಕ್ಕಾಗಿ ‘ಸನ್ ಫ್ಲವರ್ಸ್ ವರ್ ದ ಫಸ್ಟ್ ಒನ್ಸ್ ಟು ನೋ’ (Sunflowers Were The First Ones To Know) ಚಿತ್ರಕ್ಕೆ ಅಭಿನಂದನೆಗಳು ಎಂದು ಯಶ್ ಶುಭಕೋರಿದ್ದಾರೆ. ನೀವು ಕನ್ನಡ ಜಾನಪದವನ್ನು ಜಾಗತಿಕ ಹಂತಕ್ಕೆ ಕೊಂಡೊಯ್ಯುವುದನ್ನು ಮತ್ತು ಭಾರತೀಯ ಚಿತ್ರರಂಗಕ್ಕೆ ಹೊಸ ಮಾನದಂಡಗಳನ್ನು ಹೊಂದಿಸುವುದನ್ನು ನೋಡಲು ಹೆಮ್ಮೆಪಡುತ್ತೇನೆ ಎಂದು ಚಿದಾನಂದಗೆ ಯಶ್ ಎಕ್ಸ್‌ನಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ನಾನು ಸಿಂಗಲ್‌, ಹೊಸ ಸಂಬಂಧಕ್ಕೆ ಸಿದ್ಧಳಾಗಿದ್ದೇನೆ ಎಂದು ಬ್ರೇಕಪ್‌ ಬಗ್ಗೆ ತಿಳಿಸಿದ ‘ಸಲಾರ್‌’ ನಟಿ


    ರಚನೆ ಮತ್ತು ನಿರ್ದೇಶನದ ಜವಾಬ್ದಾರಿಯನ್ನು ಚಿದಾನಂದ ಹೊತ್ತಿದ್ದರೆ, ವಿ. ಮನೋಜ್ ಅವರ ಸಂಕಲನವಿದೆ. ಪುಣೆಯ ಫಿಲ್ಮ್ ಅಂಡ್ ಟೆಲಿವಿಷನ್ ಇನ್ ಸ್ಟಿಟ್ಯೂಟ್ ಈ ಚಿತ್ರವನ್ನು ನಿರ್ಮಾಣ ಮಾಡಿದೆ. ಅಲ್ಲದೇ ಕನ್ನಡದ ಅನೇಕ ಕಲಾವಿದರು ಈ ಕಿರುಚಿತ್ರದಲ್ಲಿ ನಟಿಸಿದ್ದಾರೆ.

    ಕಾನ್ ಚಿತ್ರೋತ್ಸವಕ್ಕೆ ತಮ್ಮ ಕಿರುಚಿತ್ರ ಆಯ್ಕೆಯಾಗಿರುವುದು ಸಹಜವಾಗಿಯೇ ಚಿದಾನಂದ್ ಅವರಿಗೆ ಸಂಭ್ರಮ ತಂದಿತ್ತು. ಕಾನ್ ನೋಡುಗರು ಈ ಕಿರುಚಿತ್ರವನ್ನು ಹೇಗೆ ಸ್ವೀಕರಿಸುತ್ತಾರೆ ಎನ್ನುವ ಕುತೂಹಲ ಎಲ್ಲರದ್ದಾಗಿತ್ತು. ಕೊನೆಗೂ ಕನ್ನಡದ ಹುಡುಗ ಗೆದ್ದಿದ್ದಾನೆ. ಈ ಮೂಲಕ ಕನ್ನಡದ ಹಿರಿಮೆಯನ್ನು ಎತ್ತಿ ಹಿಡಿದಿದ್ದಾನೆ.

  • ಕಾನ್ ಚಿತ್ರೋತ್ಸವಕ್ಕೆ ಮೈಸೂರು ಹುಡುಗನ ಕಿರುಚಿತ್ರ ಆಯ್ಕೆ

    ಕಾನ್ ಚಿತ್ರೋತ್ಸವಕ್ಕೆ ಮೈಸೂರು ಹುಡುಗನ ಕಿರುಚಿತ್ರ ಆಯ್ಕೆ

    ವಿಶ್ವದ ಪ್ರತಿಷ್ಠಿತ ಚಿತ್ರೋತ್ಸವಗಳಲ್ಲಿ ಒಂದಾದ ಕಾನ್ ಫಿಲ್ಮ್ ಫೆಸ್ಟಿವೆಲ್ ಗೆ ಮೈಸೂರಿನ ಹುಡುಗ ಚಿದಾನಂದ ನಾಯಕ್ ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಸನ್ ಫ್ಲವರ್ಸ್ ವರ್ ದ ಫಸ್ಟ್ ಒನ್ಸ್ ಟು ನೋ’ (sunflowers were the first ones to know) ಕಿರುಚಿತ್ರ ಆಯ್ಕೆಯಾಗಿದೆ. ಇಂಥದ್ದೊಂದು ಫೆಸ್ಟಿವೆಲ್ ಗೆ ಆಯ್ಕೆಯಾದ ಮೊದಲ ಕನ್ನಡಿಗರ ಕಿರುಚಿತ್ರ ಇದಾಗಿದೆ.

    ರಚನೆ ಮತ್ತು ನಿರ್ದೇಶನದ ಜವಾಬ್ದಾರಿಯನ್ನು ಚಿದಾನಂದ (Chidananda Nayak) ಹೊತ್ತಿದ್ದರೆ, ವಿ. ಮನೋಜ್ ಅವರ ಸಂಕಲನವಿದೆ. ಪುಣೆಯ ಫಿಲ್ಮ್ ಅಂಡ್ ಟೆಲಿವಿಷನ್ ಇನ್ ಸ್ಟಿಟ್ಯೂಟ್ ಈ ಚಿತ್ರವನ್ನು ನಿರ್ಮಾಣ ಮಾಡಿದೆ. ಅಲ್ಲದೇ ಕನ್ನಡದ ಅನೇಕ ಕಲಾವಿದರು ಈ ಕಿರುಚಿತ್ರದಲ್ಲಿ ನಟಿಸಿದ್ದಾರೆ.

     

    ಕಾನ್ ಚಿತ್ರೋತ್ಸವಕ್ಕೆ ತಮ್ಮ ಕಿರುಚಿತ್ರ ಆಯ್ಕೆಯಾಗಿರುವುದು ಸಹಜವಾಗಿಯೇ ಚಿದಾನಂದ್ ಅವರಿಗೆ ಸಂಭ್ರಮ ತಂದಿದೆ. ಕಾನ್ ನೋಡುಗರು ಈ ಕಿರುಚಿತ್ರವನ್ನು ಹೇಗೆ ಸ್ವೀಕರಿಸುತ್ತಾರೆ ಎನ್ನುವ ಕುತೂಹಲ ಎಲ್ಲರದ್ದು.