Tag: ಸನ್ ರೈಸರ್ಸ್ ಹೈದರಾಬಾದ್

  • 3 ವಿಕೆಟ್‌ ಕಿತ್ತು ರೋಚಕ ತಿರುವು – ತಾಯಿಯ ಬಗ್ಗೆ ರಶೀದ್‌ ಖಾನ್‌ ಭಾವನಾತ್ಮಕ ಮಾತು

    3 ವಿಕೆಟ್‌ ಕಿತ್ತು ರೋಚಕ ತಿರುವು – ತಾಯಿಯ ಬಗ್ಗೆ ರಶೀದ್‌ ಖಾನ್‌ ಭಾವನಾತ್ಮಕ ಮಾತು

    ಅಬುದಾಬಿ: ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಸನ್‌ ರೈಸರ್ಸ್‌ ಹೈದರಾಬಾದ್‌ ಜಯಕ್ಕೆ ಕಾರಣವಾದ ರಶೀದ್‌ ಖಾನ್‌ ಪಂದ್ಯ ಮುಗಿದ ಬಳಿಕ ಭಾವನಾತ್ಮಕವಾಗಿ ಮಾತನಾಡಿದ್ದಾರೆ.

    14 ರನ್‌ ನೀಡಿ 3 ವಿಕೆಟ್‌ ಕಿತ್ತು ರಶೀದ್‌ ಖಾನ್‌ ಅವರನ್ನು ಪಂದ್ಯ ಶ್ರೇಷ್ಠ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ವೇಳೆ ತಂದೆ, ತಾಯಿಯ ಬಗ್ಗೆ ರಶೀದ್‌ ಖಾನ್‌ ಭಾವನಾತ್ಮಕವಾಗಿ ಮಾತನಾಡಿದರು.

    ಕಳೆದ ಒಂದೂವರೆ ವರ್ಷದಲ್ಲಿ ನಾನು ನನ್ನ ಪೋಷಕರನ್ನು ಕಳೆದುಕೊಂಡಿದ್ದೇನೆ. ಆರಂಭದಲ್ಲಿ ನಾನು ನನ್ನ ತಂದೆಯನ್ನು ಕಳೆದುಕೊಂಡಿದ್ದೆ. 3-4 ತಿಂಗಳ ಹಿಂದೆ ನನ್ನ ತಾಯಿ ತೀರಿಕೊಂಡರು. ತಾಯಿ ನನ್ನ ಅತಿ ದೊಡ್ಡ ಅಭಿಮಾನಿ. ವಿಶೇಷವಾಗಿ ಐಪಿಎಲ್‌ ಸಮಯದಲ್ಲಿ ರಾತ್ರಿ ತಾಯಿ ನನ್ನ ಜೊತೆ ಮಾತನಾಡುತ್ತಿದ್ದರು ಎಂದು ನೆನಪನ್ನು ಹಂಚಿಕೊಂಡರು. ಈ ವೇಳೆ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ರಶೀದ್‌ ಖಾನ್‌ ಪೋಷಕರಿಗೆ ಸಮರ್ಪಿಸಿದರು. ಇದನ್ನೂ ಓದಿ: ಟೆನ್ನಿಸ್ ಬಾಲ್ ಮ್ಯಾಚಿನಿಂದ ಸೂಪರ್ ಓವರ್ ಬೌಲರ್ – ಆರ್‌ಸಿಬಿ ಸೈನಿಯ ಕ್ರಿಕೆಟ್ ಪ್ರಯಾಣದ ಕಥೆ

     

    ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ ರೈಸರ್ಸ್‌ ತಂಡ 4 ವಿಕೆಟ್‌ ಕಳೆದುಕೊಂಡು 162 ರನ್‌ ಗಳಿಸಿತ್ತು. ನಂತರ ಹೈದರಾಬಾದ್‌ ತಂಡದ ಶಿಸ್ತು ಬದ್ಧ ಬೌಲಿಂಗ್‌ಗೆ ಡೆಲ್ಲಿ ತಂಡ 7 ವಿಕೆಟ್‌ ಕಳೆದುಕೊಂಡು 147 ರನ್‌ ಗಳಿಸಿತು.

    7.1 ಓವರ್‌ಗೆ 42 ರನ್‌ಗೆ 1 ವಿಕೆಟ್‌ ಕಳೆದುಕೊಂಡು ಡೆಲ್ಲಿ ತಂಡ ಉತ್ತಮ ಸ್ಥಿತಿಯಲ್ಲಿ ಇತ್ತು. ಆದರೆ ನಂತರ ನಡೆದದ್ದು ರಶೀದ್‌ ಖಾನ್‌ ಮ್ಯಾಜಿಕ್‌. ಐದನೇಯವರಾಗಿ ಬೌಲಿಂಗ್‌ಗೆ ಇಳಿದ ರಶೀದ್‌ ಖಾನ್‌ 17 ರನ್‌ ಗಳಿಸಿದ್ದ ಶ್ರೇಯಸ್‌ ಅಯ್ಯರ್‌ ಅವರನ್ನು ಔಟ್‌ ಮಾಡಿದ ಬಳಿಕ ಇನ್ನಿಂಗ್ಸ್‌ನ 11.3 ಓವರ್‌ನಲ್ಲಿ ಮತ್ತೊಂದು ಬ್ರೇಕ್‌ ನೀಡಿದರು. ಇದನ್ನೂ ಓದಿ:ಅಂದು ಅಪಘಾತದಿಂದ ಕಾಲಿಗೆ ಪೆಟ್ಟು, ಇಂದು ಬೆಂಕಿ ಫೀಲ್ಡಿಂಗ್‌ – ಇದು ಪೂರನ್‌ ಸಾಧನೆಯ ಕಥೆ

    34 ರನ್‌ ಗಳಿಸಿ ಉತ್ತಮವಾಗಿ ಆಡುತ್ತಿದ್ದ ಶಿಖರ್‌ ಧವನ್‌ ಅವರನ್ನು ಔಟ್‌ ಮಾಡಿದರು. ತಂಡದ ಮೊತ್ತ 117 ಆಗಿದ್ದಾಗ ರಿಷಬ್‌ ಬಂತ್‌ ಅವರನ್ನು ಪೆವಿಲಿಯನ್‌ಗೆ ಕಳುಹಿಸುವಲ್ಲಿ ಯಶಸ್ವಿಯಾದರು. 4 ಓವರ್‌ಗಳಲ್ಲಿ ಕೇವಲ 14 ರನ್‌ ನೀಡಿ 3.50 ಎಕಾನಮಿಯಲ್ಲಿ ಮೂರು ವಿಕೆಟ್‌ ಕಿತ್ತ ಪರಿಣಾಮ ಪಂದ್ಯ ಹೈದರಾಬಾದ್‌ ಕಡೆ ವಾಲಿತು. ವಿಶೇಷ ಏನೆಂದರೆ ಹೈದರಾಬಾದ್‌ ಪರ 5 ಮಂದಿ ಬೌಲ್‌ ಮಾಡಿದ್ದು, ಈ ಪೈಕಿ ರಶೀದ್‌ ಖಾನ್‌ ಹೊರತು ಪಡಿಸಿ ಉಳಿದ ಎಲ್ಲರೂ ಒಂದೊಂದು ವೈಡ್‌ ಎಸೆದಿದ್ದಾರೆ.

    104 ರನ್‌ಗೆ ಮೂರು ವಿಕೆಟ್‌ ಕಳೆದುಕೊಂಡಿದ್ದ ಡೆಲ್ಲಿ ಕೊನೆಯ 4 ವಿಕೆಟ್‌ಗಳನ್ನು 44 ರನ್‌ಗಳ ಅಂತರದಲ್ಲಿ ಕಳೆದುಕೊಂಡಿತು.

  • ಇಬ್ಬರು ಡಕ್ ಔಟ್, ಗಿಲ್ ಅರ್ಧಶತಕ – ಕೋಲ್ಕತ್ತಾಗೆ ಮೊದಲ ಸುಲಭ ಜಯ

    ಇಬ್ಬರು ಡಕ್ ಔಟ್, ಗಿಲ್ ಅರ್ಧಶತಕ – ಕೋಲ್ಕತ್ತಾಗೆ ಮೊದಲ ಸುಲಭ ಜಯ

    – ಶುಭಮನ್, ಮೋರ್ಗಾನ್ ಆಟಕ್ಕೆ ತಲೆಬಾಗಿದ ರೈಸರ್ಸ್

    ಶಾರ್ಜಾ: ಯುವ ಆಟಗಾರ ಶುಭಮನ್ ಗಿಲ್ ಅವರ ಅದ್ಭುತ ಬ್ಯಾಟಿಂಗ್ ಫಲದಿಂದ ಕೋಲ್ಕತಾ ನೈಟ್ ರೈಡರ್ಸ್ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಪಂದ್ಯದಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ ಕೋಲ್ಕತ್ತಾ ತಂಡ ಐಪಿಎಲ್-2020ಯಲ್ಲಿ ಮೊದಲ ಗೆಲುವು ದಾಖಲಿಸಿದೆ.

    ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ತಂಡ ಕೋಲ್ಕತ್ತಾ ವೇಗಿಗಳ ದಾಳಿಗೆ ತತ್ತರಿಸಿ ಹೋಯ್ತು. ಕೊನೆಗೆ ಕನ್ನಡಿಗ ಮನೀಶ್ ಪಾಂಡೆಯವರ ಅರ್ಧಶತಕದ ನೆರವಿನಿಂದ ನಿಗದಿತ 20 ಓವರಿನಲ್ಲಿ 143 ರನ್ ಸೇರಿಸಿತ್ತು. ಈ ಗುರಿಯನ್ನು ಬೆನ್ನಟ್ಟಿದ ಕೋಲ್ಕತಾ ನೈಟ್ ರೈಡರ್ಸ್ ತಂಡ ಶುಭಮನ್ ಗಿಲ್ ಮತ್ತು ಇಯೊನ್ ಮೋರ್ಗಾನ್ ಅವರ ಅದ್ಭುತ ಜೊತೆಯಾಟದಿಂದ ಇನ್ನೂ ಎರಡು ಓವರ್ ಬಾಕಿ ಇರುವಾಗಲೇ 145 ರನ್ ಚಚ್ಚಿದ ಕೋಲ್ಕತ್ತಾ 7 ವಿಕೆಟ್ ಗಳಿಂದ ಜಯ ಸಾಧಿಸಿತು.

    ಇದೇ ವೇಳೆ ಶುಭಮನ್ ಮತ್ತು ಮೋರ್ಗಾನ್, 70 ಬಾಲಿಗೆ 92 ರನ್‍ಗಳ ಉತ್ತಮ ಜೊತೆಯಾಟವಾಡಿದರು. ಇದರಲ್ಲಿ ಮೋರ್ಗಾನ್ ಅವರು 29 ಬಾಲಿಗೆ ಮೂರು ಫೋರ್ ಮತ್ತು ಎರಡು ಸಿಕ್ಸರ್ ಸಮೇತ 42 ರನ್ ಸಿಡಿಸಿ ಮಿಂಚಿದರು. ಆರಂಭದಿಂದಲೂ ಉತ್ತಮವಾಗಿ ಆಡಿಕೊಂಡು ಬಂದ ಗಿಲ್, 62 ಎಸೆತದಲ್ಲಿ 70 ರನ್ ಸಿಡಿಸಿದರು. ಗಿಲ್ ಈ ಇನ್ನಿಂಗ್ಸ್ ನಲ್ಲಿ 5 ಫೋರ್ ಮತ್ತು 2 ಸಿಕ್ಸರ್ ಸಿಡಿಸುವ ಮೂಲಕ ಕೋಲ್ಕತ್ತಾ ತಂಡವನ್ನು ಗೆಲುವಿನ ದಡ ಸೇರಿಸಿದರು.

    ಕೋಲ್ಕತ್ತಾಗೆ ಆರಂಭಿಕ ಆಘಾತ ನೀಡಿದ ಹೈದರಾಬಾದ್ ವೇಗಿ ಖಲೀಲ್ ಅಹ್ಮದ್, ಸೊನ್ನೆ ಸುತ್ತಿ ಸುನಿಲ್ ನರೈನ್ ಪೆವಲಿಯನ್ ಸೇರಿದರು. ನಂತರ ಜೊತೆಯಾದ ಗಿಲ್ ಮತ್ತು ನಿತೀಶ್ ರಾಣಾ ಆಕ್ರಮಣಕಾರಿ ಆಟಕ್ಕೆ ಮುಂದಾಗಿದ್ದರು. ಆದರೆ 4 ಓವರಿನ ನಾಲ್ಕನೇ ಬಾಲಿನಲ್ಲಿ ನಟರಾಜ್ ಅವರಿಗೆ ಔಟ್ ಆಗಿ 13 ಬಾಲಿಗೆ 26 ರನ್ ಗಳಿಸಿದ್ದ ನಿತೀಶ್ ರಾಣಾ ಔಟ್ ಆದರು. ಈ ಮೂಲಕ ಕೋಲ್ಕತ್ತಾ ಆರು ಓವರ್ ಮುಕ್ತಾಯಕ್ಕೆ ಎರಡು ವಿಕೆಟ್ ಕಳೆದುಕೊಂಡು 52 ರನ್ ಸೇರಿಸಿತ್ತು.

    ನಂತರ ಬಂದ ನಾಯಕ ದಿನೇಶ್ ಕಾರ್ತಿಕ್‍ಗೆ ರಶೀದ್ ಖಾನ್ ಅವರು ಮೂರನೇ ಬಾಲಿನಲ್ಲೇ ಶಾಕ್ ನೀಡಿದರು. ಮೂರು ಬಾಲುಗಳನ್ನು ಎದುರಿಸಿದ ಕಾರ್ತಿಕ್ ಡಾಕ್ ಔಟ್ ಆಗಿ ಹೊರನಡೆದರು. ಈ ಮೂಲಕ ಕೋಲ್ಕತ್ತಾದ ಇಬ್ಬರು ಪ್ರಮುಖ ಬ್ಯಾಟ್ಸ್ ಮ್ಯಾನ್‍ಗಳು ಡಾಕ್ ಔಟ್ ಆದರು. ಮೊದಲಿನಿಂದಲೂ ಉತ್ತಮವಾಗಿ ಆಡಿಕೊಂಡು ಬಂದ ಶುಭಮನ್ ಗಿಲ್ 42 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಮಿಂಚಿದರು.

  • ಅರ್ಧಶತಕ ಸಿಡಿಸಿದ ಕನ್ನಡಿಗ ಮನೀಶ್ ಪಾಂಡೆ – ಕೋಲ್ಕತ್ತಾಗೆ 143 ರನ್‍ಗಳ ಗುರಿ

    ಅರ್ಧಶತಕ ಸಿಡಿಸಿದ ಕನ್ನಡಿಗ ಮನೀಶ್ ಪಾಂಡೆ – ಕೋಲ್ಕತ್ತಾಗೆ 143 ರನ್‍ಗಳ ಗುರಿ

    ಶಾರ್ಜಾ: ಕನ್ನಡಿಗ ಮನೀಶ್ ಪಾಂಡೆ ಅರ್ಧಶತಕದ ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್ ತಂಡ ಕೋಲ್ಕತಾ ನೈಟ್ ರೈಡರ್ಸ್ ತಂಡಕ್ಕೆ 143 ರನ್‍ಗಳ ಟಾರ್ಗೆಟ್ ನೀಡಿದೆ.

    ಈ ಪಂದ್ಯದಲ್ಲಿ ಉತ್ತಮವಾಗಿ ಬ್ಯಾಟ್ ಬೀಸಿದ ಮನೀಶ್ ಪಾಂಡೆ ಅರ್ಧಶತಕ ಸಿಡಿಸಿ ಮಿಂಚಿದರು. ವಿಕೆಟ್ ಕಳೆದುಕೊಳ್ಳುತ್ತಿದ್ದ ಹೈದರಾಬಾದ್ ತಂಡಕ್ಕೆ ಆಸರೆಯಾಗಿ ನಿಂತ ಮನೀಶ್, 38 ಎಸೆತದಲ್ಲಿ 51 ರನ್ ಸಿಡಿಸಿ ತಂಡದ ಚೇತರಿಕೆಗೆ ಕಾರಣವಾದರು. ಮನೀಶ್ ಈ ಇನ್ನಿಂಗ್ಸ್ ನಲ್ಲಿ ಮೂರು ಬೌಂಡರಿ ಹಾಗೂ ಎರಡು ಸಿಕ್ಸರ್ ಸಿಡಿಸಿ ಮಿಂಚಿದರು. ಇವರಿಗೆ ಉತ್ತಮ ಸಾಥ್ ನೀಡಿದ ವೃದ್ಧಿಮಾನ್ ಸಹಾ ಅವರು 31 ಎಸೆತಕ್ಕೆ 30 ರನ್ ಪೇರಿಸಿದರು.

    ಆರಂಭದಿಂದಲೂ ಕೋಲ್ಕತಾ ನೈಟ್ ರೈಡರ್ಸ್ ತಂಡದ ಬೌಲರ್ ಗಳು ಶಿಶ್ತು ಬದ್ಧದಾಳಿಯನ್ನು ಮಾಡಿದರು. ಹೀಗಾಗಿ ಉತ್ತಮ ಲಯದಲ್ಲಿದ್ದ ಜಾನಿ ಬೈರ್‍ಸ್ಟೋವ್ ಅವರನ್ನು ವೇಗಿ ಪ್ಯಾಟ್ ಕಮ್ಮಿನ್ಸ್ ಅವರು 3ನೇ ಓವರಿನಲ್ಲಿ ಕ್ಲೀನ್ ಬೌಲ್ಡ್ ಮಾಡಿದರು. ನಂತರ ಜೊತೆಯಾದ ಮನೀಶ್ ಪಾಂಡೆ ಮತ್ತು ನಾಯಕ ಡೇವಿಡ್ ವಾರ್ನರ್ ಅವರು ತಾಳ್ಮೆಯಿಂದ ಜೊತೆಯಾಟವಾಡಿದರು. ಪರಿಣಾಮ ಪವರ್ ಪ್ಲೇ ಮುಕ್ತಾಯಕ್ಕೆ ಹೈದರಾಬಾದ್ ಒಂದು ವಿಕೆಟ್ ಕಳೆದುಕೊಂಡು 40 ರನ್ ಸೇರಿಸಿತು.

    ನಂತರ ವಾರ್ನರ್ ಮತ್ತು ಪಾಂಡೆ ಮಂದಗತಿಯ ಆಟವಾಡಿ ಇನ್ನಿಂಗ್ಸ್ ಕಟ್ಟಲು ಪ್ರಯತ್ನಿಸುತ್ತಿದ್ದರು. ಈ ವೇಳೆ ವರುಣ್ ಚಕ್ರವರ್ತಿ ಅವರ ಬೌಲಿಂಗ್ ಮೋಡಿಗೆ 30 ಎಸೆತಗಳಲ್ಲಿ 36 ರನ್ ಗಳಿಸಿದ್ದ ವಾರ್ನರ್ ಅವರು ಸಿಂಪಲ್ ಕ್ಯಾಚ್ ಕೊಟ್ಟು ಪೆವಿಲಿಯನ್ ಸೇರಿದರು. ನಂತರ ವೃದ್ಧಿಮಾನ್ ಸಹಾ ಕಣ್ಣಕ್ಕಿಳಿದರು, ಸಹಾ ಮತ್ತು ಪಾಂಡೆ ಸೇರಿಕೊಂಡು 12 ಓವರ್ ಮುಕ್ತಾಯದ ವೇಳೆಗೆ ತಂಡದ ಮೊತ್ತವನ್ನು 76ಕ್ಕೆ ಏರಿಸಿದರು.

    ಇದೇ ವೇಳೆ ಸಹಾ ಮತ್ತು ಪಾಂಡೆ ಅರ್ಧಶತಕದ ಜೊತೆಯಾಟವಾಡಿದರು. ಈ ಜೋಡಿ 41 ಬಾಲಿಗೆ 51 ರನ್ ಸಿಡಿಸಿತು. ಹೀಗಾಗಿ 16 ಓವರ್ ಮುಕ್ತಾಯದ ವೇಳೆಗೆ ಹೈದರಾಬಾದ್ ತಂಡ ಎರಡು ವಿಕೆಟ್ ಕಳೆದುಕೊಂಡು 110 ರನ್ ಗಳಿಸಿತು. ಜೊತೆಗೆ 35 ಎಸೆತಗಳಲ್ಲಿ ಮನಿಷ್ ಪಾಂಡೆಯವರು ತಮ್ಮ ಅರ್ಧಶತಕವನ್ನು ಪೂರ್ಣಗೊಳಿಸಿದರು. ಆದರೆ ಆಂಡ್ರೆ ರಸ್ಸೆಲ್ ಅವರ ಬೌಲಿಂಗ್‍ಗೆ ಸುಲಭ ಕ್ಯಾಚ್ ಕೊಟ್ಟು ಹೊರನಡೆದರು. ನಂತರ ಸಹಾ ರನ್ ಔಟ್ ಆದರು.

  • ಸನ್ ರೈಸರ್ಸ್‍ಗೆ ಆರಂಭಿಕ ಆಘಾತ – ಐಪಿಎಲ್‍ನಿಂದ ಮಿಚೆಲ್ ಮಾರ್ಷ್ ಔಟ್

    ಸನ್ ರೈಸರ್ಸ್‍ಗೆ ಆರಂಭಿಕ ಆಘಾತ – ಐಪಿಎಲ್‍ನಿಂದ ಮಿಚೆಲ್ ಮಾರ್ಷ್ ಔಟ್

    ಅಬುಧಾಬಿ: ಐಪಿಎಲ್ ಆರಂಭದಲ್ಲೇ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಆಘಾತ ಎದುರಾಗಿದ್ದು, ತಂಡದ ಸ್ಟಾರ್ ಆಲ್‍ರೌಂಡರ್ ಮಿಚೆಲ್ ಮಾರ್ಷ್ ಟೂರ್ನಿಯಿಂದ ಹೊರಬಂದಿದ್ದಾರೆ.

    ಕಳೆದ ಸೋಮವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧದ ಪಂದ್ಯದಲ್ಲಿ ಮಾರ್ಷ್ ಗಾಯಗೊಂಡಿದ್ದರು. ಬೌಲಿಂಗ್ ಮಾಡುವ ವೇಳೆ ಹೊಸ ಶೂ ಧರಿಸಿದ್ದ ಕಾರಣ ಅವರ ಪಾದಕ್ಕೆ ಗಾಯವಾಗಿತ್ತು. ಈಗ ಇದೇ ಸಮಸ್ಯೆಯಿಂದ ಮಾರ್ಷ್ ಟೂರ್ನಿಯಿಂದ ಹೊರಬಂದಿದ್ದು, ಹೈದರಾಬಾದ್ ತಂಡಕ್ಕೆ ಆರಂಭಿಕ ಹಿನ್ನೆಡೆಯಾಗಿದೆ.

    ಈ ವಿಚಾರವಾಗಿ ತನ್ನ ಅಧಿಕೃತ ಟ್ವಿಟ್ಟರಿನಲ್ಲಿ ಟ್ವೀಟ್ ಮಾಡಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ, ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಮಿಚೆಲ್ ಮಾರ್ಷ್ ಅವರು ಟೂರ್ನಿಯಿಂದ ಹೊರಬಂದಿದ್ದಾರೆ. ಅವರು ಬೇಗ ಗಾಯದಿಂದ ಗುಣಮುಖರಾಗಲಿ ಎಂದು ನಾವು ಹಾರೈಸುತ್ತೇವೆ. ವೆಸ್ಟ್ ಇಂಡೀಸ್ ತಂಡದ ಆಲ್‍ರೌಂಡರ್ ಜೇಸನ್ ಹೋಲ್ಡರ್ ಅವರು ಅವರ ಜಾಗಕ್ಕೆ ಬಂದಿದ್ದಾರೆ ಎಂದು ಮಾಹಿತಿ ನೀಡಿದೆ.

    ಸೋಮವಾರ ನಡೆದ ಆರ್‍ಸಿಬಿ ವಿರುದ್ಧ ಪಂದ್ಯದಲ್ಲಿ ಮಿಚೆಲ್ ಮಾರ್ಷ್ ಅವರು ಐದನೇ ಓವರ್ ಬೌಲಿಂಗ್ ಮಾಡಿದ್ದರು. ಈ ಓವರಿನ ಎರಡನೇ ಬಾಲ್ ಎಸೆದಾಗ ಫಿಂಚ್ ಅವರು ಅದನ್ನು ನೇರವಾಗಿ ಹೊಡೆದರು, ಈ ವೇಳೆ ಇದನ್ನು ತಡೆಯಲು ಹೋಗಿ ಮಾರ್ಷ್ ಅವರು ತಮ್ಮ ಪಾದಕ್ಕೆ ಗಾಯ ಮಾಡಿಕೊಂಡಿದ್ದರು. ಇದಾದ ನಂತರವೂ ಕೂಡ ಎರಡು ಬಾಲ್ ಬೌಲ್ ಮಾಡಿದ ಮಾರ್ಷ್ ನಂತರ, ಪಾದದ ನೋವಿನಿಂದ ಮೈದಾನದಿಂದ ಹೊರಬಂದಿದ್ದರು.

    ಕೇವಲ ನಾಲ್ಕು ಬಾಲ್ ಬೌಲ್ ಮಾಡಿ ಮಾರ್ಷ್ ಹೊರಬಂದರು, ಇದಾದ ನಂತರ ವಿಜಯ್ ಶಂಕರ್ ಅವರು ಉಳಿದ ಎರಡು ಬಾಲನ್ನು ಹಾಕಿದ್ದರು. ನಂತರ ಹೈದರಾಬಾದ್ ಬ್ಯಾಟಿಂಗ್ ವೇಳೆ ಕೂಡ ಗಾಯವಾಗಿದ್ದರೂ ಮಿಚೆಲ್ ಮಾರ್ಷ್ ತಂಡಕ್ಕಾಗಿ ಬ್ಯಾಟಿಂಗ್ ಬೀಸಲು ಬಂದಿದ್ದರು. ಆದರೆ ಮೊದಲ ಬಾಲಿನಲ್ಲೇ ಕ್ಯಾಚ್ ಕೊಟ್ಟು ಔಟ್ ಆದರು. ಆದರೆ ನಿಲ್ಲಲೂ ಆಗದ ಸ್ಥಿತಿಯಲ್ಲಿ ತಂಡ ಸಂಕಷ್ಟಕ್ಕೆ ಸಿಲುಕಿದೆ ಎಂದು ಬ್ಯಾಟಿಂಗ್ ಮಾಡಲು ಬಂದ ಮಾರ್ಷ್‍ಗೆ ಅಪಾರ ಪ್ರಮಾಣದ ಮೆಚ್ಚುಗೆ ವ್ಯಕ್ತವಾಗಿತ್ತು.

  • 3 ವಿಕೆಟ್‌ ಕಿತ್ತು ರೋಚಕ ತಿರುವು ನೀಡಿದ ಚಹಲ್‌ – ಆರ್‌ಸಿಬಿಗೆ 10 ರನ್‌ಗಳ ಗೆಲುವು

    3 ವಿಕೆಟ್‌ ಕಿತ್ತು ರೋಚಕ ತಿರುವು ನೀಡಿದ ಚಹಲ್‌ – ಆರ್‌ಸಿಬಿಗೆ 10 ರನ್‌ಗಳ ಗೆಲುವು

    ದುಬೈ: ಆರಂಭದಲ್ಲಿ ಬ್ಯಾಟ್ಸ್‌ ಮನ್‌, ನಂತರ ಬೌಲರ್‌ಗಳ ಉತ್ತಮ ಪ್ರದರ್ಶನದಿಂದ ಹೈದರಾಬಾದ್‌ ಸನ್‌ ರೈಸರ್ಸ್‌ ವಿರುದ್ಧದ ನಡೆದ ಮೊದಲ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು 10 ರನ್‌ಗಳಿಂದ ಜಯಗಳಿಸಿದೆ.

    ಗೆಲ್ಲಲು 164 ರನ್‌ಗಳ ಗುರಿಯನ್ನು ಪಡೆದ ಹೈದರಾಬಾದ್‌ 19.4 ಓವರ್‌ ಗಳಲ್ಲಿ 153 ರನ್‌ಗಳಿಗೆ ಆಲೌಟ್‌ ಆಯ್ತು. ಲೆಗ್‌ ಸ್ಪಿನ್ನರ್‌ ಯಜುವೇಂದ್ರ ಚಹಲ್‌ ಮೂರು ವಿಕೆಟ್‌ ಕಬಳಿಸಿ ಪಂದ್ಯಕ್ಕೆ ರೋಚಕ ತಿರುವ ನೀಡಿದರೆ ಸೈನಿ ಎರಡು ವಿಕೆಟ್‌ ಕೀಳುವ ಮೂಲಕ ಆರ್‌ಸಿಬಿ ಗೆಲುವಿನಲ್ಲಿ ನೆರವಾದರು. ಇದನ್ನೂ ಓದಿ :29 ಎಸೆತದಲ್ಲಿ 50 ರನ್‌ ಚಚ್ಚಿದ ಎಬಿಡಿ

    ತಿರುವು ಸಿಕ್ಕಿದ್ದು ಎಲ್ಲಿ? ನಾಯಕ ಡೇವಿಡ್‌ ವಾರ್ನರ್‌ ಆರಂಭದಲ್ಲೇ 6 ರನ್‌ ಗಳಿಸಿ ಔಟದರೂ ಜಾನಿ ಬೈರ್‌ಸ್ಟೋವ್ ಮತ್ತು ಮನೀಷ್‌ ಪಾಂಡೆ ಎರಡನೇ ವಿಕೆಟಿಗೆ 71 ರನ್‌ಗಳ ಜೊತೆಯಾಟವಾಡಿದರು.

    11.6 ಓವರ್‌ನಲ್ಲಿ ತಂಡದ ಮೊತ್ತ 89 ಆಗಿದ್ದಾಗ 34 ರನ್‌( 33 ಎಸೆತ, 3 ಬೌಂಡರಿ, 1 ಸಿಕ್ಸರ್‌) ಹೊಡೆದಿದ್ದ ಮನೀಷ್‌ ಪಾಂಡೆ ಕ್ಯಾಚ್‌ ನೀಡಿದರೆ ಔಟಾದರೆ 121 ರನ್‌ ಆಗಿದ್ದಾಗ 61 ರನ್‌(43 ಎಸೆತ, 6 ಬೌಂಡರಿ, 2 ಸಿಕ್ಸರ್‌) ಚಚ್ಚಿದ್ದ ಜಾನಿ ಬೈರ್‌ಸ್ಟೋವ್ ಔಟಾದರು. ಇದನ್ನೂ ಓದಿ: ಭಾರತದ ಕ್ರಿಕೆಟ್‌ನಲ್ಲಿ ಪಡಿಕ್ಕಲ್‌ ಅಪರೂಪದ ಸಾಧನೆ

    ಚಹಲ್‌ ಬೈರ್‌ ಸ್ಟೋವ್‌ ಅವರನ್ನು ಬೌಲ್ಡ್‌ ಮಾಡಿದ ಬೆನ್ನಲ್ಲೇ ಬೆನ್ನಲ್ಲೇ ವಿಜಯ್‌ ಶಂಕರ್‌ ಅವರನ್ನು ಶೂನ್ಯಕ್ಕೆ ಬೌಲ್ಡ್‌ ಮಾಡಿದರು. 89 ರನ್‌ಗಳಿಗೆ 1 ವಿಕೆಟ್‌ ಕಳೆದುಕೊಂಡು ಉತ್ತಮ ಸ್ಥಿತಿಯಲ್ಲಿದ್ದ ಹೈದರಾಬಾದ್‌ 121 ರನ್‌ ಗಳಿಸುವಷ್ಟರಲ್ಲಿ 4 ವಿಕೆಟ್‌ ಕಳೆದುಕೊಂಡಿತ್ತು. ಚಹಲ್‌ ಪಂದ್ಯಕ್ಕೆ ರೋಚಕ ತಿರುವು ನೀಡಿದ ಬೆನ್ನಲ್ಲೇ ಪ್ರಿಯಂ ಗಾರ್ಗ್‌ ಬೌಲ್ಡ್‌ ಆದರು. ನಂತರಅಭಿಷೇಕ್‌ ಶರ್ಮಾ ರನೌಟ್‌ ಆದರು. ನಂತರ ಸೈನಿ ರಶೀದ್‌ ಖಾನ್‌ ಮತ್ತು ಭುವನೇಶ್ವರ್‌ ಕುಮಾರ್‌ ಅವರನ್ನು ಬೌಲ್ಡ್‌ ಮಾಡಿದರು. ಈ ಮೂಲಕ ಪಂದ್ಯ ಆರ್‌ಸಿಬಿಯತ್ತ ವಾಲಿತು.

    ಚಹಲ್‌ 4 ಓವರ್‌ ಮಾಡಿ 18 ರನ್‌ ನೀಡಿ 3 ವಿಕೆಟ್‌ ಕಿತ್ತರೆ, ದುಬೆ 3 ಓವರ್‌ ಮಾಡಿ 15 ರನ್‌ ನೀಡಿ 2 ವಿಕೆಟ್‌ ಕಿತ್ತರು. ನವ್‌ದೀಪ್‌ ಸೈನಿ 2 ವಿಕೆಟ್‌, ಡೇಲ್‌ ಸ್ಟೇನ್‌ 1 ವಿಕೆಟ್‌ ಕಿತ್ತರು.

  • ಹೆಟ್ಮೇಯರ್ ಹೊಡೆತಕ್ಕೆ ಗಾಳಿಯಲ್ಲಿ ಹಾರಿತು ಗುರ್‍ಕೀರತ್ ಬ್ಯಾಟ್- ವಿಡಿಯೋ ನೋಡಿ

    ಹೆಟ್ಮೇಯರ್ ಹೊಡೆತಕ್ಕೆ ಗಾಳಿಯಲ್ಲಿ ಹಾರಿತು ಗುರ್‍ಕೀರತ್ ಬ್ಯಾಟ್- ವಿಡಿಯೋ ನೋಡಿ

    ಬೆಂಗಳೂರು: ಶನಿವಾರ ಬೆಂಗಳೂರು ಮತ್ತು ಹೈದರಾಬ್ ನಡುವಿನ ಪಂದ್ಯದ ವೇಳೆ ಶಿಮ್ರೊನ್ ಹೆಟ್ಮೇಯರ್ ಹೊಡೆತಕ್ಕೆ ಗುರುಕೀರತ್ ಬ್ಯಾಟ್ ಮೇಲಕ್ಕೆ ಚಿಮ್ಮಿದ ಪ್ರಸಂಗ ನಡೆಯಿತು.

    ಆರ್ಸಿಬಿ 20 ರನ್ ಗಳಿಗೆ 3 ವಿಕೆಟ್ ಕಳೆದುಕೊಂಡ ಬಳಿಕ ಹೆಟ್ಮೇಯರ್ ಮತ್ತು ಗುರುಕೀರತ್ ಕ್ರೀಸ್‍ನಲ್ಲಿ ನಿಧಾನವಾಗಿ ರನ್ ಪೇರಿಸುತ್ತಿದ್ದರು. ಲೆಗ್ ಸ್ಪಿನ್ನರ್ ರಶೀದ್ ಖಾನ್ ಅವರು ಮಾಡಿದ ನಾಲ್ಕನೇ ಓವರ್‍ನ ನಾಲ್ಕನೇ ಎಸೆತವನ್ನು ಶಿಮ್ರೋನ್ ಹೆಟ್ಮರ್ ಬಲವಾಗಿ ಹೊಡೆದಿದ್ದಾರೆ.

    ಬಾಲ್ ತನ್ನತ್ತ ಬರುತ್ತದೆ ಎನ್ನುವುದು ಗೊತ್ತಾಗುತ್ತಿದ್ದಂತೆ ನಾನ್ ಸ್ಟ್ರೈಕರ್ ನಲ್ಲಿದ್ದ ಗುರುಕೀರತ್ ಅವರು ಬ್ಯಾಟ್ ಮೇಲಕ್ಕೆ ಎತ್ತಿ ತಪ್ಪಿಸಲು ಯತ್ನಿಸಿದರು. ಆದರೆ ಈ ಪ್ರಯತ್ನ ವಿಫಲವಾಗಿದ್ದು, ಬಾಲ್ ನೇರವಾಗಿ ಬ್ಯಾಟಿಗೆ ಬಡಿದಿದೆ. ಚೆಂಡು ಹೊಡೆದ ರಭಸಕ್ಕೆ ಅವರ ಬ್ಯಾಟ್ ಗಾಳಿಯಲ್ಲಿ ಮೇಲಕ್ಕೆ ಹಾರಿ ಬಿದ್ದಿದೆ.

    ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಹೈದಾರಬಾದ್ ತಂಡ ನಾಯಕ ಕೆ. ವಿಲಿಯಮ್ಸನ್ ಹೊಡೆದ 70 ರನ್ (43 ಎಸೆತ, 5 ಬೌಂಡರಿ, 4 ಸಿಕ್ಸರ್) ಸಹಾಯದಿಂದ 174 ಸ್ಪರ್ಧಾತ್ಮಕ ಮೊತ್ತವನ್ನು ಕಲೆಹಾಕಿತು. ಇದನ್ನು ಬೆನ್ನಟಿದ ಬೆಂಗಳೂರು ತಂಡ ಆರಂಭಿಕ 3 ವಿಕೆಟ್‍ಗಳನ್ನು ಬೇಗನೆ ಕಳೆದುಕೊಂಡಿತು. ಆದರೆ ನಂತರ ಜೊತೆಯಾದ ಹೆಟ್ಮೇಯರ್ 75 ರನ್ (47 ಎಸೆತ, 4 ಬೌಂಡರಿ, 6 ಸಿಕ್ಸರ್) ಮತ್ತು ಗುರುಕೀರತ್ ಸಿಂಗ್ 65 ರನ್ (48 ಎಸೆತ, 8 ಬೌಂಡರಿ, 1 ಸಿಕ್ಸರ್) ಅವರು ನಾಲ್ಕನೇ ವಿಕೆಟ್‍ಗೆ 144 ರನ್ ಗಳ ಜೊತೆಯಾಟವಾಡಿದರು. ಈ ಮೂಲಕ ಬೆಂಗಳೂರು ತಂಡವನ್ನು 4 ವಿಕೆಟ್‍ಗಳ ಭರ್ಜರಿ ಜಯ ಸಾಧಿಸಿತು. ಸೂಪರ್ ಬ್ಯಾಟಿಂಗ್ ಮಾಡಿದ ಶಿಮ್ರೊನ್ ಹೆಟ್ಮರ್ ಅವರು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

    ಈ ಪಂದ್ಯದಲ್ಲಿ ಹೈದರಾಬಾದ್ ಗೆದ್ದಿದ್ದರೆ ಸುಲಭವಾಗಿ ಪ್ಲೇ ಆಫ್ ಪ್ರವೇಶಿಸಬಹುದಿತ್ತು. ಆದರೆ ಸೋತಿದ್ದರಿಂದ ಪ್ಲೇ ಆಫ್ ಪ್ರವೇಶದ ಕನಸು ಇಂದು ಕೋಲ್ಕತ್ತಾ ಮತ್ತು ಪಂಜಾಬ್ ಪಂದ್ಯದ ಫಲಿತಾಂಶದ ಮೇಲೆ ನಿಂತಿದೆ. ಈ ಪಂದ್ಯದಲ್ಲಿ 12 ಅಂಕಗಳಿಸಿರುವ ಕೋಲ್ಕತ್ತಾ ಗೆದ್ದರೆ ಪ್ಲೇ ಆಫ್ ಪ್ರವೇಶಿಸಲಿದೆ. ಪಂಜಾಬ್ ಗೆದ್ದರೆ ರನ್ ರೇಟ್ ಆಧಾರದಲ್ಲಿ ಹೈದರಾಬಾದ್ ಪ್ಲೇ ಆಫ್ ಪ್ರವೇಶಲಿದೆ.

  • ಡಾನ್ಸ್ ಮೂಲಕ ಧೋನಿಗೆ ಗೌರವ ಸೂಚಿಸಿದ ಬ್ರಾವೋ

    ಡಾನ್ಸ್ ಮೂಲಕ ಧೋನಿಗೆ ಗೌರವ ಸೂಚಿಸಿದ ಬ್ರಾವೋ

    ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ 7ನೇ ಬಾರಿಗೆ ಫೈನಲ್ ಪ್ರವೇಶಿಸಿರುವ ಚೆನ್ನೈ ತಂಡದ ಆಟಗಾರರು ಗೆಲುವಿನ ಬಳಿಕ ಸಂಭ್ರಮಾಚರಣೆ ಮಾಡಿದ್ದು, ಸಿಎಸ್‍ಕೆ ತಂಡದ ಹಾಡಿಗೆ ಬ್ರಾವೋ ಡಾನ್ಸ್ ಮಾಡಿ ಧೋನಿಗೆ ಗೌರವ ಸೂಚಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಸಿಎಸ್‍ಕೆ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿರುವ ಈ ವಿಡಿಯೋದಲ್ಲಿ ಕೆರೆಬಿಯನ್ ಆಟಗಾರ, ಚೆನ್ನೈ ತಂಡದ ಬೌಲರ್ ಬ್ರಾವೋ ಹಾಗೂ ಸ್ಪಿನ್ನರ್ ಹರ್ಭಜನ್ ಸಿಂಗ್ ಅವರೊಂದಿಗೆ ಡಾನ್ಸ್ ಮಾಡಿ ಸಂಭ್ರಮಿಸಿದ್ದಾರೆ.

    ಡ್ರೆಸ್ಸಿಂಗ್ ರೂಮ್ ನಲ್ಲಿದ್ದ ಧೋನಿ ಕೂಲ್ ಆಗಿಯೇ ಸಂಭ್ರಮಿಸಿ, ಇಬ್ಬರು ಆಟಗಾರರತ್ತ ನಗೆ ಬೀರಿದ್ದಾರೆ. ಮಂಗಳವಾರ ನಡೆದ ಪಂದ್ಯದಲ್ಲಿ ಹೈದರಾಬಾದ್ ತಂಡವನ್ನು ಎರಡು ವಿಕೆಟ್‍ಗಳಿಂದ ಮಣಿಸಿದ ಸಿಎಸ್‍ಕೆ, ನೇರವಾಗಿ ಫೈನಲ್ ಪ್ರವೇಶ ಪಡೆಯಿತು. ಚೆನ್ನೈ ಪರ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಫಾ ಡು ಪ್ಲೆಸಿಸ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಈ ಪಂದ್ಯದ ಕೊನೆಯ 3 ಓವರ್ ಗಳಲ್ಲಿ 43 ರನ್ ಗಳಿಸುವ ಒತ್ತಡದಲ್ಲಿದ್ದ ತಂಡಕ್ಕೆ ಡು ಪ್ಲೆಸಿಸ್ 18 ನೇ ಓವರ್ ನಲ್ಲಿ 20 ರನ್ ಸಿಡಿಸಿದರು. ಒಟ್ಟಾರೆ ಪಂದ್ಯದಲ್ಲಿ 42 ಎಸೆತಗಳಲ್ಲಿ 5 ಬೌಂಡರಿ, 4 ಸಿಕ್ಸರ್ ನೆರವಿನಿಂದ 67 ರನ್ ಸಿಡಿಸಿ ಮಿಂಚಿದರು.

    ಹೈದರಾಬಾದ್ ವಿರುದ್ಧ ಗೆಲುವಿನೊಂದಿಗೆ ಚೆನ್ನೈ 7ನೇ ಬಾರಿ ಐಪಿಎಲ್ ಪ್ರವೇಶಿಸಿದ ಹೆಗ್ಗಳಿಕೆ ಪಡೆದಿದೆ. ಪಂದ್ಯದ ಬಳಿಕ ಮಾತನಾಡಿದ ಧೋನಿ, ತಮ್ಮ ಗೆಲುವಿಗೆ ಡ್ರೆಸ್ಸಿಂಗ್ ರೂಮ್ ವಾತಾವರಣ ಕಾರಣ. ತಂಡದ ಪ್ರತಿಯೊಬ್ಬ ಆಟಗಾರ ಹಾಗೂ ಸಿಬ್ಬಂದಿಯ ಪರಿಶ್ರಮ ಇಲ್ಲದಿದ್ದರೆ ಗೆಲುವು ಸಾಧಿಸುವುದು ಕಷ್ಟಸಾಧ್ಯ ಎಂದು ಹೇಳಿದರು.

     

  • ನನ್ನನ್ನು ಆಯ್ಕೆ ಮಾಡುವ ಮೂಲಕ ಸೆಹ್ವಾಗ್ ಐಪಿಎಲ್ ರಕ್ಷಿಸಿದ್ದಾರೆ: ಕ್ರಿಸ್ ಗೇಲ್

    ನನ್ನನ್ನು ಆಯ್ಕೆ ಮಾಡುವ ಮೂಲಕ ಸೆಹ್ವಾಗ್ ಐಪಿಎಲ್ ರಕ್ಷಿಸಿದ್ದಾರೆ: ಕ್ರಿಸ್ ಗೇಲ್

    ಮೊಹಾಲಿ: ಐಪಿಎಲ್ 2018 ರ ಆವೃತ್ತಿಗೆ ಸೆಹ್ವಾಗ್ ನನ್ನನ್ನು ಆಯ್ಕೆ ಮಾಡುವ ಮೂಲಕ ಐಪಿಎಲ್ ಅನ್ನು ರಕ್ಷಿಸಿದ್ದಾರೆ ಎಂದು ಕಿಂಗ್ಸ್ ಇಲೆವೆನ್ ತಂಡದ ಸ್ಫೋಟಕ ಆಟಗಾರ ಕ್ರಿಸ್ ಗೇಲ್ ಹಾಸ್ಯದ ಟ್ವೀಟ್ ಮಾಡಿದ್ದಾರೆ.

    ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಗುರುವಾರ ನಡೆದ ಪಂದ್ಯದಲ್ಲಿ ಗೇಲ್ ಶತಕ ಸಿಡಿಸಿ ಪಂಜಾಬ್ ಗೆಲುವಿಗೆ ಕಾರಣರಾಗಿದ್ದರು. ಈ ಕುರಿತು ಸಂತೋಷ ಹಂಚಿಕೊಂಡ ಸೆಹ್ವಾಗ್ ಕ್ರಿಸ್ ಗೇಲ್‍ರನ್ನು ಆಯ್ಕೆ ಮಾಡುವ ಮೂಲಕ ಐಪಿಎಲ್ ರಕ್ಷಣೆ ಮಾಡಿರುವುದಾಗಿ ಗೇಲ್ ರ ಕಾಲೆಳೆದಿದ್ದರು. ಈ ಕುರಿತು ಪ್ರತಿಕ್ರಿಯೆ ನೀಡಿರುವ ಗೇಲ್ ಹೌದು ನನ್ನನ್ನು ಆಯ್ಕೆ ಮಾಡುವ ಮೂಲಕ ಸೆಹ್ವಾಗ್ ಐಪಿಎಲ್ ರಕ್ಷಿಸಿದ್ದಾರೆ ಎಂದು ಹಾಸ್ಯ ಚಟಾಕಿ ಹಾರಿಸಿದ್ದಾರೆ. ಅಲ್ಲದೇ ಎಲ್ಲರೂ ನನ್ನ ಸಾಮರ್ಥ್ಯವನ್ನು ಸಾಬೀತು ಪಡಿಸಲು ಸಲಹೆ ನೀಡಿದರು. ಆದರೆ ಇಲ್ಲಿ ನನ್ನ ಹೆಸರಿಗೆ ಗೌರವ ಗಳಿಸಲು ಮಾತ್ರ ಇರುವುದಾಗಿ ಹೇಳಿದ್ದಾರೆ.

    ವರ್ಷದ ಆರಂಭದಲ್ಲಿ ನಡೆದ ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ಗೇಲ್ ರನ್ನು ತಂಡಕ್ಕೆ ಪಡೆಯಲು ಐಪಿಎಲ್ ಫ್ರಾಂಚೈಸಿಗಳು ಹಿಂದೇಟು ಹಾಕಿತ್ತು. ಈ ವೇಳೆ ಕಿಂಗ್ಸ್ ಇಲೆವೆನ್ ತಂಡದ ಮೆಂಟರ್ ಆಗಿದ್ದ ಸೆಹ್ವಾಗ್ ಗೇಲ್‍ರನ್ನು ಮೂಲ ಬೆಲೆಗೆ 2ಕೋಟಿ ರೂ.ಗೆ ತಂಡಕ್ಕೆ ಸೇರಿಸಿಕೊಂಡಿದ್ದರು. ಕಳೆದ ಕೆಲ ದಿನಗಳ ಹಿಂದೆ ಕನ್ನಡಿಗ ಕೆ.ಎಲ್ ರಾಹುಲ್ ಕ್ರಿಸ್ ಗೇಲ್ ಆಟದ ಕುರಿತು ಎಲ್ಲಾ ತಂಡದ ಬೌಲರ್ ಗಳಿಗೂ ಎಚ್ಚರಿಕೆ ನೀಡಿದ್ದರು.

    ಸದ್ಯ ಇದನ್ನು ಸಾಬೀತು ಪಡಿಸಿರುವ ಗೇಲ್ ಹೈದರಾಬಾದ್ ವಿರುದ್ಧ ಕೇವಲ 63 ಎಸೆತಗಳಲ್ಲಿ 11 ಸಿಕ್ಸರ್ ಹಾಗೂ 1 ಬೌಂಡರಿ ನೆರವಿನಿಂದ ಶತಕ ಸಿಡಿಸಿದರು. ಈ ಮೂಲಕ 2018 ಐಪಿಎಲ್ ಆವೃತ್ತಿಯಲ್ಲಿ ಶತಕ ಸಿಡಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಗೆ ಪಾತ್ರರಾಗಿದ್ದಾರೆ. ಅಲ್ಲದೇ ಐಪಿಎಲ್ ನಲ್ಲಿ ಅತೀಹೆಚ್ಚು ಸಿಕ್ಸರ್ ಸಿಡಿಸಿದ ಪಟ್ಟಿಯಲ್ಲಿ 279 ಸಿಕ್ಸರ್ ಮೂಲಕ ಗೇಲ್ ಮೊದಲ ಸ್ಥಾನ ಪಡೆದಿದ್ದಾರೆ. ನಂತರದಲ್ಲಿ ರೋಹಿತ್ ಶರ್ಮಾ(179), ರೈನಾ(174), ಎಬಿಡಿವಿಲಿಯರ್ಸ್(167), ಕೊಹ್ಲಿ(166) ಸ್ಥಾನ ಪಡೆದಿದ್ದಾರೆ.

  • ಮುಂಬೈ ಇಂಡಿಯನ್ಸ್ ವಿರುದ್ಧ 1 ವಿಕೆಟ್ ರೋಚಕ ಗೆಲುವು ಪಡೆದ ಹೈದರಾಬಾದ್

    ಮುಂಬೈ ಇಂಡಿಯನ್ಸ್ ವಿರುದ್ಧ 1 ವಿಕೆಟ್ ರೋಚಕ ಗೆಲುವು ಪಡೆದ ಹೈದರಾಬಾದ್

    ಹೈದರಾಬಾದ್: ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ 1 ವಿಕೆಟ್ ರೋಚಕ ಗೆಲುವು ದಾಖಲಿಸಿದೆ.

    ಸನ್ ರೈಸರ್ಸ್ ಪರ ಉತ್ತಮ ಆರಂಭ ನೀಡಿದ ಧವನ್ ಹಾಗೂ ಸಹಾ ಬ್ಯಾಟಿಂಗ್ ನೆರವಿನೊಡನೆ ಉತ್ತಮ ಆರಂಭ ಪಡೆಯಿತು. ಬಿರುಸಿನ ಪ್ರದರ್ಶನ ನೀಡಿದ ಧವನ್ ಕೇವಲ 28 ಎಸೆತಗಳಲ್ಲಿ 8 ಬೌಂಡರಿಗಳೊಂದಿಗೆ 45 ರನ್ ಸಿಡಿಸಿ ಮಾರ್ಕಂಡೆ ಬೌಲಿಂಗ್ ನಲ್ಲಿ ಔಟಾದರು. ಇತ್ತ 20 ಎಸೆತಗಳಲ್ಲಿ 22 ರನ್ ಗಳಿಸಿದ್ದ ಸಹಾ ರನ್ನು ಸಹ ಮಾರ್ಕಂಡೆ ಎಲ್‍ಬಿ ಗೆ ಕೆಡವಿದರು. ಬಳಿಕ ಬಂದ ನಾಯಕ ವಿಲಿಯಂಸನ್ 6 ರನ್ ಗಳಿಸಿ ಔಟಾಗುವ ಮೂಲಕ ನಿರಾಸೆ ಮೂಡಿಸಿದರು.

    ಈ ವೇಳೆ ತಂಡಕ್ಕೆ ಚೇತರಿಕೆ ನೀಡಲು ಯತ್ನಿಸಿದ ಮನಿಷ್ ಪಾಂಡೆ (11 ರನ್), ಶಕೀಬ್ ಅಲ್ ಹಸನ್ (12) ವಿಕೆಟ್ ಪಡೆಯುವ ಮೂಲಕ ಮತ್ತೊಮ್ಮೆ ಮಾರ್ಕಂಡೆ ಹೈದರಾಬಾದ್ ತಂಡಕ್ಕೆ ಹೊಡೆತ ನೀಡಿದರು. ಇನ್ನು ಸ್ಫೋಟಕ ಆಟಗಾರ ಯೂಸಫ್ ಪಠಾಣ್ (14) ಹಾಗೂ ರಶೀದ್ ಖಾನ್ (0)ರನ್ನು ಬುಮ್ರಾ ಬಲಿ ಪಡೆದು ಗೆಲುವಿನ ಆಸೆ ಚಿಗುರುವಂತೆ ಮಾಡಿದರು.

    ಕೊನೆಯ 12 ಎಸೆತಗಳಲ್ಲಿ 12 ರನ್ ಗಳಿಸಬೇಕಿದ್ದ ವೇಳೆ ರಹಮಾನ್ ಶಿಸ್ತಿನ ಬೌಲಿಂಗ್ ದಾಳಿ ನಡೆಸಿದರು. 19 ನೇ ಓವರ್ ನಲ್ಲಿ ಕೇವಲ 1 ರನ್ ನೀಡಿದ ರಹಮಾನ್ ಕೌಲ್ ಹಾಗೂ ಸಂದೀಪ್ ಶರ್ಮಾ ವಿಕೆಟ್ ಪಡೆದರು. ಕೊನೆಯ ಓವರ್ ನಲ್ಲಿ 11 ರನ್ ಗಳಿಸ ಬೇಕಾದ ಒತ್ತಡಕ್ಕೆ ಸಿಲುಕಿದ ಹೂಡಾ (25 ಎಸೆತ, 32 ರನ್ ತಲಾ 1 ಸಿಕ್ಸರ್, ಬೌಂಡರಿ) ಮೊದಲ ಎಸೆತದಲ್ಲಿ ಸಿಕ್ಸರ್ ಸಿಡಿಸಿ ತಂಡದ ಗೆಲುವಿಗೆ ರೋಚಕ ತಿರುವು ನೀಡಿದರು. ಮುಂಬೈ ಪರ ಮಾರ್ಕಂಡೆ 4, ಮುಸ್ತಾಫಿಜುರ್ 3 ಹಾಗೂ ಬುಮ್ರಾ 2 ವಿಕೆಟ್ ಪಡೆದರು.

    ಇದಕ್ಕೂ ಮುನ್ನ ಬ್ಯಾಟಿಂಗ್ ನಡೆಸಿದ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್ ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 147 ರನ್ ಗಳಿಸಿ ಸನ್‍ರೈಸರ್ಸ್ ಹೈದರಾಬಾದ್ ವಿರುದ್ಧ ನಿರಾಸ ಬ್ಯಾಟಿಂಗ್ ಪ್ರದರ್ಶನ ನೀಡಿತು. ಮುಂಬೈ ಪರ ಆರಂಭಿಕರಾದ ನಾಯಕ ರೋಹಿತ್ ಶರ್ಮಾ (10 ಎಸೆತ 11ರನ್) ಮೊದಲ ಓವರ್ ನಲ್ಲೇ ಜೀವದಾನ ಪಡೆದರೂ ಅದನ್ನು ಸಂಪೂರ್ಣವಾಗಿ ಬಳಸಿಕೊಳ್ಳುವಲ್ಲಿ ವಿಫಲರಾದರು. ಮತ್ತೊಂದೆಡೆ ಆಕ್ರಮಣಕಾರಿ ಆಟ ಪ್ರಾರಂಭಿಸಿದ್ದ ಎವಿನ್ ಲೂವಿಸ್ (54 ರನ್, 17 ಎಸೆತ, 3 ಬೌಂಡರಿ, 2 ಸಿಕ್ಸರ್) ಸುಲಭ ಕ್ಯಾಚ್ ನೀಡಿ ಔಟಾದರು. ಬಳಿಕ ಬಂದ ಇಶಾನ್ ಕಿಶಾನ್ (9) ಬಂದಷ್ಟೇ ವೇಗದಲ್ಲಿ ಪೆವಿಲಿಯನ್ ಸೇರಿದರು. ಬಳಿಕ ಬಂದ ಕೃನಾಲ್ ಪಾಂಡ್ಯ (10 ರನ್) ಈ ಬಾರಿ ಉತ್ತಮ ಬ್ಯಾಟಿಂಗ್ ನಡೆಸಲಿಲ್ಲ.

    ನಿರಂತರವಾಗಿ ವಿಕೆಟ್ ಕಳೆದಕೊಳ್ಳುತ್ತ ಸಾಗಿದ ತಂಡಕ್ಕೆ ಚೇತರಿಕೆ ನೀಡಲು ಯತ್ನಿಸಿದ ಪೊಲಾರ್ಡ್ ಹಾಗೂ ಸೂರ್ಯಕುಮಾರ್ ಯಾದವ್ ನಿಧಾನಗತಿ ಬ್ಯಾಟ್ ನಡೆಸಿದರು. ಈ ವೇಳೆ ಪೊಲಾರ್ಡ್ 23 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್ ಳಿಂದ 28 ರನ್ ಗಳಿಸಿ ಔಟಾದರು. ಉತ್ತಮವಾಗಿ ಬ್ಯಾಟ್ ಬೀಸುತ್ತಿದ್ದ ಸೂರ್ಯಕುಮಾರ್ 28 ರನ್ ಗಳಿಸಿ ಔಟದರು. ಬಳಿಕ ಬಂದ ಮುಂಬೈ ಬೌಲರ್ ಗಳಾದ ಬೆನ್ ಕಟ್ಟಿಂಗ್ (9), ಪ್ರದೀಪ್ ಸಾಂಗ್ವಾನ್ (2), ಮಾಯಂಕ್ ಮಾರ್ಕಂಡೆ (6) ಹಾಗೂ ಜಸ್ಪ್ರೀತ್ ಬುಮ್ರಾ (4) ರನ್ ಗಳಿಸಿದರು. ಇದರೊಂದಿಗೆ ಮುಂಬೈ 20 ಓವರ್ ಳಲ್ಲಿ 8 ವಿಕೆಟ್ ನಷ್ಟಕ್ಕೆ 147 ರನ್ ಗಳಿಸಲಷ್ಟೇ ಶಕ್ತವಾಯಿತು. ಸನ್ ರೈಸರ್ಸ್ ಪರ ಸಂದೀಪ್ ಶರ್ಮಾ, ಸಿದ್ದಾರ್ಥ್ ಕೌಲ್, ಬಿಲ್ಲಿ ಸ್ಟಾನ್‍ಲೇಕ್ ತಲಾ ಎರಡು ವಿಕೆಟ್ ಮತ್ತು ರಶೀದ್ ಖಾನ್ ಮತ್ತು ಶಕಿಬ್ ಅಲ್ ಹಸನ್ ತಲಾ ಒಂದು ವಿಕೆಟ್ ಪಡೆದರು.

  • ಸನ್‍ರೈಸರ್ಸ್ ಹೈದರಾಬಾದ್‍ಗೆ ಶುಭ ಸುದ್ದಿ-20 ಎಸೆತಗಳಲ್ಲೇ ಶತಕ ಸಿಡಿಸಿದ ವೃದ್ಧಿಮಾನ್ ಸಹಾ

    ಸನ್‍ರೈಸರ್ಸ್ ಹೈದರಾಬಾದ್‍ಗೆ ಶುಭ ಸುದ್ದಿ-20 ಎಸೆತಗಳಲ್ಲೇ ಶತಕ ಸಿಡಿಸಿದ ವೃದ್ಧಿಮಾನ್ ಸಹಾ

    ಕೋಲ್ಕತಾ: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೂ ಮುನ್ನವೇ ವಿಕೆಟ್ ಕೀಪರ್, ಬ್ಯಾಟ್ಸ್ ಮನ್ ವೃದ್ಧಿಮಾನ್ ಸಹಾ ಭರ್ಜರಿ ಆಟ ಪ್ರದರ್ಶಿಸಿದ್ದಾರೆ. ಕೇವಲ 20 ಎಸೆತಗಳಲ್ಲಿ ಶತಕ ಸಿಡಿಸಿದ್ದಾರೆ.

    ಕೋಲ್ಕತಾದಲ್ಲಿ ನಡೆಯುತ್ತಿರುವ ದೇಶಿಯ ಕ್ರಿಕೆಟ್ ಟೂರ್ನಿ ಜೆಸಿ ಮುಖರ್ಜಿ ಟಿ20 ಟ್ರೋಫಿಯಲ್ಲಿ ಮೋಹನ್ ಬಗಾನ್ ತಂಡದ ಪರ ಪ್ರತಿನಿಧಿಸುವ ಸಹಾ ಸಿಡಿಲಬ್ಬರದ ಶತಕ ದಾಖಲಿಸಿದ್ದಾರೆ. ಪಂದ್ಯದ ಆರಂಭಿಕರಾಗಿ ಇನ್ನಿಂಗ್ಸ್ ಆರಂಭಿಸಿದ ಸಹಾ ಕೇವಲ 22 ಎಸೆತಗಳಲ್ಲಿ 14 ಸಿಕ್ಸರ್, 4 ಬೌಂಡರಿಗಳ ಸಹಾಯದಿಂದ ಶತಕ ಸಿಡಿದರು.

    ಇದಕ್ಕೂ ಮುನ್ನ ಬ್ಯಾಟಿಂಗ್ ನಡೆಸಿದ್ದ ಎದುರಾಳಿ ಬಿಎನ್‍ಆರ್ ರಿಕ್ರಿಯೇಷನ್ ತಂಡ 151 ರನ್ ಗುರಿ ನೀಡಿತ್ತು. ಸುಲಭ ಗುರಿಯನ್ನು ಬೆನ್ನತ್ತಿದ ಮೋಹನ್ ಬಗಾನ್ ತಂಡ ಸಹಾ ರ ಶತಕ (102 ರನ್)ದ ನೆರವಿನಿಂದ ಕೇವಲ ಏಳು ಓವರ್ ಗಳಲ್ಲಿ 154 ರನ್ ಗಳಿಸಿ ಜಯ ಪಡೆಯಿತು.

    ಪಂದ್ಯದ ಬಳಿಕ ಮಾತನಾಡಿದ ಸಹಾ, ಇನ್ನಿಂಗ್ಸ್ ಮೊದಲ ಎಸೆತದಿಂದಲೇ ದೊಡ್ಡ ಹೊಡೆತಗಳನ್ನು ಸಿಡಿಸಲು ಪ್ರಯತ್ನಿಸಿದೆ. ಆದರೆ ಈ ಪಂದ್ಯದಲ್ಲಿ ದಾಖಲೆ ಬರೆಯುವ ಯೋಚನೆ ಇರಲಿಲ್ಲ. ಮುಂದಿನ ಐಪಿಎಲ್ ಟೂರ್ನಿಯನ್ನು ಮಾತ್ರ ಗಮನದಲ್ಲಿಟ್ಟು ವಿಭಿನ್ನ ಹೊಡೆತಗಳಿಗೆ ಕೈ ಹಾಕಿದೆ ಎಂದು ಸಹಾ ಹೇಳಿದ್ದಾರೆ.

    2018 ಐಪಿಎಲ್‍ಗಾಗಿ ನಡೆದ ಹರಾಜಿನಲ್ಲಿ ಸಹಾ ಅವರನ್ನು ಸನ್‍ರೈಸರ್ಸ್ ಹೈದರಾಬಾದ್ ಬರೋಬ್ಬರಿ ಐದು ಕೋಟಿ ರೂ.ಗಳನ್ನು ನೀಡಿ ಖರೀದಿಸಿದೆ. ಈ ಮುನ್ನ ಐಪಿಎಲ್ ಟೂರ್ನಿಗಳಲ್ಲಿ ಸಹಾ ಚೆನ್ನೈ, ಕೋಲ್ಕತ್ತಾ ಹಾಗೂ ಪಂಜಾಬ್ ತಂಡಗಳನ್ನು ಪ್ರತಿನಿಧಿಸಿದ್ದರು.

    2014 ರ ಐಪಿಎಲ್ ಫೈನಲ್‍ನಲ್ಲಿ ಶತಕ ಬಾರಿಸುವ ಮೂಳಕ ದಾಖಲೆ ನಿರ್ಮಿಸಿದ್ದರು. ಆದರೆ ದುರದೃಷ್ಟವಶಾತ್ ಈ ಪಂದ್ಯದಲ್ಲಿ ಕೋಲ್ಕತ್ತ ತಂಡ ಜಯಗಳಿಸಿ ಪ್ರಶಸ್ತಿ ಪಡೆದಿತ್ತು.