Tag: ಸಪ್ತಪದಿ

  • ಪ್ರೇಮಿಗಳ ದಿನದಂದೇ ಹಸೆಮಣೆ ಏರಿದ ಡಿಕೆಶಿ ಪುತ್ರಿ

    ಪ್ರೇಮಿಗಳ ದಿನದಂದೇ ಹಸೆಮಣೆ ಏರಿದ ಡಿಕೆಶಿ ಪುತ್ರಿ

    ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಪ್ರೇಮಿಗಳ ದಿನದಂದು ಸಪ್ತಪದಿ ತುಳಿದಿದ್ದಾರೆ.

     

     

    ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಮತ್ತು ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಮೊಮ್ಮಗ ಹಾಗೂ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಹೆಗ್ಡೆ ಅವರ ಪುತ್ರ  ಅಮರ್ತ್ಯ ಹೆಗ್ಡೆ ಇವತ್ತು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ವೈಟ್‍ಫೀಲ್ಡ್ ಬಳಿಯ ಖಾಸಗಿ ಹೋಟೆಲಿನಲ್ಲಿ ಐಶ್ವರ್ಯ ಮತ್ತು ಅಮರ್ತ್ಯ ಸುಬ್ರಹ್ಮಣ್ಯ ಹೆಗ್ಡೆ ವಿವಾಹ ನೆರವೇರಿದೆ. ಬೆಳಗ್ಗೆ 9 ರಿಂದ 9-45ರ ನಡುವಿನ ಶುಭ ಮುಹೂರ್ತದಲ್ಲಿ ಮಾಂಗಲ್ಯ ಧಾರಣೆ ಆಗಿದೆ.

     

    ಡಿ.ಕೆ ಶಿವಕುಮಾರ್ ಪುತ್ರಿಯ ಮದುವೆ ಸಮಾರಂಭದಲ್ಲಿ ಆಯ್ದ ಗಣ್ಯರು ಹಾಗೂ ಸಂಬಂಧಿಕರಿಗಷ್ಟೇ ಆಹ್ವಾನಿಸಲಾಗಿದೆ. ಅದ್ದೂರಿಯಾಗಿ ಮದುವೆ ನೇರವೇರಿದೆ. ಕನ್ಯಾದಾನದ ವೇಳೆ ಡಿಕೆ ಶಿವಕುಮಾರ್ ಕಣ್ಣೀರು ಇಟ್ಟಿದ್ದಾರೆ. ಡಿ.ಕೆಶಿ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿದೆ.

     

    ನಿನ್ನ ನಡೆದಿರುವ ಕಾರ್ಯಕ್ರಮದಲ್ಲಿ ‘ಅಪ್ಪಾ ಐ ಲವ್ ಯು’ ಹಾಡಿಗೆ ಮಗಳು ನೃತ್ಯ ಮಾಡುತ್ತಿದ್ದರೆ, ಇತ್ತ ತಂದೆ ಶಿವಕುಮಾರ್ ಮಗಳ ನೃತ್ಯ ನೋಡಿ ಆನಂದಭಾಷ್ಪ ಸುರಿಸುತ್ತಿದ್ದರು. ಮಗಳ ಮದುವೆ ಕಾರ್ಯಕ್ರಮದ ಎಲ್ಲಾ ಸಿದ್ಧತೆಯನ್ನು ಸ್ವತಃ ಡಿಕೆ ಶಿವಕುಮಾರ್ ಮುಂದೆ ನಿಂತು ಮಾಡಿದ್ದಾರೆ ಮದುವೆಗೆ ಸಂಬಂಧಿಕರು ಮತ್ತು ಆತ್ಮೀಯ ಸ್ನೇಹಿತರು ಭಾಗಿಯಗಿದ್ದರು. ಫೇ 17 ರಂದು ನಡೆಯುವ ಆರತಕ್ಷತೆಯಲ್ಲಿ ಹಲವು ಗಣ್ಯಾತೀಗಣ್ಯರು ಮತ್ತು ಸೆಲೆಬ್ರಿಟಿಗಳು ಭಾಗಿಯಾಗಲಿದ್ದಾರೆ. ಐಶ್ವರ್ಯ ಪ್ರೇಮಿಗಳ ದಿನದಂದು ಅಮರ್ತ್ಯ ಹೆಗ್ಡೆ ಅವರನ್ನು ವರೆಸಿರುವುದು ವಿಶೇಷವಾಗಿದೆ.

  • ಪ್ರತೀ ತಿಂಗಳು ಸಪ್ತಪದಿ – ಸಚಿವ ಕೋಟ ಘೋಷಣೆ

    ಪ್ರತೀ ತಿಂಗಳು ಸಪ್ತಪದಿ – ಸಚಿವ ಕೋಟ ಘೋಷಣೆ

    ಉಡುಪಿ: ರಾಜ್ಯ ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ಸಾಮೂಹಿಕ ವಿವಾಹದ ಸಪ್ತಪದಿ ಯೋಜನೆ ಇನ್ಮುಂದೆ ಪ್ರತಿ ತಿಂಗಳು ನಡೆಯಲಿದೆ.

    ಮಹಾಮಾರಿ ಕೋವಿಡ್ ಕಾರಣಕ್ಕೆ ಯೋಜನೆ ನಿಲುಗಡೆಯಾಗಿತ್ತು. ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಾ ಸಪ್ತಪತಿ ಯೋಜನೆಯ ಮಾಹಿತಿ ನೀಡಿದರು. ರಾಜ್ಯದಲ್ಲಿ 23 ಮಂದಿಗೆ ವಿವಾಹ ಮಾಡಿಸುವ ಕೆಲಸ ಆಗಿದೆ. ಚಿನ್ನದ ಟೆಂಡರ್ ಹಾಕಲು ಯಾರೂ ಮುಂದೆ ಬಂದಿರಲಿಲ್ಲ. ಕಾವೇರಿ ಎಂಪೋರಿಯಂ ಮೂಲಕ ಚಿನ್ನ ಖರೀದಿ ಮಾಡುತ್ತೇವೆ ಎಂದರು.

    ಪ್ರತಿ ತಿಂಗಳು ಸಪ್ತಪದಿ ಸಾಮೂಹಿಕ ವಿವಾಹ ಮಾಡುತ್ತೇವೆ. ಈ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗುತ್ತದೆ. ಆರ್ಥಿಕ ಸಮಸ್ಯೆ ಇರುವವರ ಪಾಲಿಗೆ ಸಪ್ತಪದಿ ಯೋಚನೆ ವರದಾನವಾಗಲಿದೆ ಎಂದರು.

    ರಾಜ್ಯದಲ್ಲಿ ಲವ್ ಜಿಹಾದ್ ವಿರುದ್ಧ ಕಾಯ್ದೆ ಜಾರಿ ಕುರಿತಂತ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರಕ್ಕೆ ಲವ್ ಜಿಹಾದ್ ನಿಯಂತ್ರಣ ತರುವ ಕಾಯ್ದೆ ತರಬೇಕೆಂಬ ಮನಸ್ಸಿದೆ. ಸದ್ಯಕ್ಕೆ ಅದನ್ನು ಸುಗ್ರಿವಾಜ್ಞೆ ಮೂಲಕ ಜಾರಿಗೊಳಿಸಲ್ಲ. ಕಾನೂನು ತರಬೇಕೆಂಬೂದು ನಮ್ಮ ಪಕ್ಷದ, ಸಾರ್ವಜನಿಕರ ಆಶಯವಿದೆ. ನಮ್ಮ ಧರ್ಮದ ಆಶಯ ಕೂಡ ಅದೇ ಆಗಿದೆ. ಮುಂದಿನ ದಿನಗಳಲ್ಲಿ ಈ ಕುರಿತಾದ ಕಠಿಣ ಕಾನೂನು ತರುತ್ತೇವೆ ಎಂದರು.

    ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಪ್ರತಿಕ್ರಯಿಸಿ, ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ಪರಮಾಧಿಕಾರ. ಸಿಎಂ ಬಿಎಸ್‍ವೈ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ನಿರ್ಧಾರ ತೆಗೆದುಕೊಳ್ಳುತ್ತಾರೆ. ಕೇಂದ್ರದ ಮುಖಂಡರ ಜೊತೆ ಚರ್ಚೆ ಮಾಡಿ ತೀರ್ಮಾನಿಸುತ್ತಾರೆ. ಪ್ರಮುಖರ ತೀರ್ಮಾನಕ್ಕೆ ನಾವು ಬದ್ಧರಾಗಿರುತ್ತೇವೆ ಎಂದರು.

  • ‘ಸಪ್ತಪದಿ’ ಸಾಮೂಹಿಕ ವಿವಾಹ ಲಾಂಛನ ಬಿಡುಗಡೆ – ಏ.26, ಮೇ24ಕ್ಕೆ ಡೇಟ್ ಫಿಕ್ಸ್

    ‘ಸಪ್ತಪದಿ’ ಸಾಮೂಹಿಕ ವಿವಾಹ ಲಾಂಛನ ಬಿಡುಗಡೆ – ಏ.26, ಮೇ24ಕ್ಕೆ ಡೇಟ್ ಫಿಕ್ಸ್

    ಬೆಂಗಳೂರು: ರಾಜ್ಯ ಸರ್ಕಾರ ಮುಜರಾಯಿ ಇಲಾಖೆಯಿಂದ ಸಾಮೂಹಿಕ ವಿವಾಹಕ್ಕೆ ದಿನಾಂಕ ನಿಗದಿ ಮಾಡಿದೆ. ಈ ವರ್ಷದಲ್ಲಿ ಎರಡು ಸಲ ಸಾಮೂಹಿಕ ವಿವಾಹಕ್ಕೆ ಸಿದ್ಧತೆ ನಡೆಸಿದೆ. ವಿಧಾನಸೌಧದಲ್ಲಿ ಇವತ್ತು ಸಪ್ತಪದಿ ಸಾಮೂಹಿಕ ವಿವಾಹದ ಲಾಂಛನವನ್ನು ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಆನಂದ್ ಗುರೂಜೀ ಲಾಂಛನ ಬಿಡುಗಡೆ ಮಾಡಿದರು.

    ದೇವಾಲಯದ ಗೋಪುರವನ್ನು ಸಂಕೇತವಾಗಿಟ್ಟುಕೊಂಡು ಲಾಂಛನ ರೂಪಿಸಲಾಗಿದೆ. ವೈವಾಹಿಕ ಜೀವನದ ಏಳು ಹೆಜ್ಜೆಯ ಕಲ್ಪನೆಯ ಆಧಾರದ ಮೇಲೆ ಕಾರ್ಯಕ್ರಮಕ್ಕೆ ‘ಸಪ್ತಪದಿ’ ಎಂದು ಹೆಸರಿಡಲಾಗಿದೆ. ಉತ್ತಮ ಆದಾಯವಿರುವ ಎ ವರ್ಗದ 100 ದೇವಾಲಯಗಳಲ್ಲಿ ಸಾಮೂಹಿಕ ಕಾರ್ಯಕ್ರಮ ಏರ್ಪಡಿಸಲಾಗುತ್ತದೆ. ಏಪ್ರಿಲ್ 24ರಂದು ಮೊದಲ ಹಂತದಲ್ಲಿ ಹಾಗೂ ಮೇ 24ರಂದು ಎರಡನೇ ಹಂತದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಸಲಾಗುತ್ತದೆ. ಸಾಮೂಹಿಕ ವಿವಾಹದಲ್ಲಿ ಪಾಲ್ಗೊಳ್ಳುವ ವಧುವಿಗೆ 8 ಗ್ರಾಂ ಚಿನ್ನದ ಮಾಂಗಲ್ಯ ಸೇರಿ, ವಧೂವರರಿಗೆ ವಿವಾಹಕ್ಕೆ ಅಗತ್ಯವಿರುವ ವಸ್ತುಗಳ ಖರೀದಿಗೆ 55,000 ರೂ.ಗಳನ್ನು ಸಂಬಂಧಿಸಿದ ದೇವಾಲಯದಿಂದಲೇ ಭರಿಸಲಾಗುತ್ತದೆ.

    ಸಪ್ತಪದಿ ಕಾರ್ಯಕ್ರಮದಲ್ಲಿ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿ, ಸಪ್ತಪದಿ ಅಡಿ ಮದುವೆಯಾಗುವ ವರನಿಗೆ ಹೂವಿನ ಹಾರ, ಪಂಚೆ, ಶರ್ಟ್ ಮತ್ತು ಶಲ್ಯ ಖರೀದಿಗೆ 5 ಸಾವಿರ ರೂ., ವಧುವಿಗೆ ಹೂವಿನ ಹಾರ, ಧಾರೆ ಸೀರೆ, ರವಿಕೆ ಕಣಕ್ಕೆ 10 ಸಾವಿರ ರೂ. ವಧುವಿಗೆ ಚಿನ್ನದ ತಾಳಿ ಎರಡು ಚಿನ್ನದ ಗುಂಡು ಖರೀದಿಗೆ 40 ಸಾವಿರ ರೂ. ನೀಡಲಾಗುತ್ತದೆ ಎಂದು ಹೇಳಿದರು.

    ಇನ್ನು ಲಾಂಛನ ಬಿಡುಗಡೆ ಮಾಡಿ ಮಾತನಾಡಿದ ಸಿಎಂ ಯಡಿಯೂರಪ್ಪ, ಇತ್ತೀಚಿನ ದಿನಗಳಲ್ಲಿ ವಿವಾಹ ಖರ್ಚಿಗೆ ಮನೆ ಮಠ ಮಾರಿಕೊಂಡು ನಂತರ ತೊಂದರೆ ಅನುಭವಿಸುತ್ತಿರುವುದು ಗಮನಕ್ಕೆ ಬಂದಿದೆ. ಸಾಲ ಮಾಡಿಕೊಂಡು ವಧುವರರು ಮತ್ತು ಅವರ ಪೋಷಕರು ನೋವು ಅನುಭವಿಸುತ್ತಿದ್ದಾರೆ. ಹಾಗಾಗಿಯೇ ಎಲ್ಲ ವರ್ಗದ ಜನರ ಅನುಕೂಲಕ್ಕೆ 100 ಆಯ್ದ ದೇವಾಲಯಗಳಲ್ಲಿ ಪ್ರತಿ ವರ್ಷ ಸಾಮೂಹಿಕ ವಿವಾಹ ಹಮ್ಮಿಕೊಳ್ಳುತ್ತಿದ್ದೇವೆ. ವಿವಾಹದ ದುಂದುವೆಚ್ಚಕ್ಕೆ ಕಡಿವಾಣ ಹಾಕಲು ಸಾಮೂಹಿಕ ವಿವಾಹಗಳು ಅವಶ್ಯಕವಾಗಿವೆ. ದೇವರ ದುಡ್ಡು ಸದ್ಬಳಕೆ ಆಗಬೇಕು ಎಂಬುದು ಉದ್ದೇಶ. ಯಾವುದೇ ಕಾರಣಕ್ಕೂ ಬಾಲ್ಯ ವಿವಾಹಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.

  • ಮದ್ವೆಯಲ್ಲಿ 7ರ ಬದಲು 9 ಸಪ್ತಪದಿ ತುಳಿದ ನವಜೋಡಿ- ಕಾರಣವೇನು ಗೊತ್ತಾ?

    ಮದ್ವೆಯಲ್ಲಿ 7ರ ಬದಲು 9 ಸಪ್ತಪದಿ ತುಳಿದ ನವಜೋಡಿ- ಕಾರಣವೇನು ಗೊತ್ತಾ?

    ಚಂಡಿಗಡ: ಹರ್ಯಾಣದ ನವಜೋಡಿಯೊಂದು ತಮ್ಮ ಮದುವೆಯಲ್ಲಿ 7 ಸಪ್ತಪದಿ ಬದಲು 9 ಸಪ್ತಪಡಿ ತುಳಿದು ಒಬ್ಬರಿಗೊಬ್ಬರು ಹೊಸ ಭರವಸೆಯನ್ನು ಮಾಡಿಕೊಂಡರು.

    ಸಂದೀಪ್ ಹಾಗೂ ದೀಪಿಕಾ ಇಬ್ಬರು ಸಿವಾನಿ ಮಂಡಿಯಲ್ಲಿ ಮದುವೆಯಾಗಿದ್ದಾರೆ. ಉಪಮಂಡಲ್ ಗ್ರಾಮದ ಸಂದೀಪ್ ಚೌವ್ಹಾನ್ ಸಮಾಜಿಕ ಕಾರ್ಯಕರ್ತರಾಗಿದ್ದು, ತಮ್ಮ ಮದುವೆಯಲ್ಲಿ ಒಂಭತ್ತು ಸಪ್ತಪದಿ ತುಳಿದು ಎಲ್ಲರಿಗೂ ಮಾದರಿಯಾಗಿದ್ದಾರೆ.

    ಸಂದೀಪ್ ಪರಿಸರವನ್ನು ರಕ್ಷಿಸಲು ಗಿಡಗಳನ್ನು ಬೆಳೆಸುತ್ತೇವೆಂದು ತನ್ನ ಜೀವನ ಸಂಗಾತಿ ದೀಪಿಕಾ ಅವರ ಜೊತೆ 8ನೇ ಸಪ್ತಪದಿ ತುಳಿದರು. ಬಳಿಕ ‘ಭೇಟಿ ಬಜಾವ್, ಭೇಟಿ ಪಡಾವ್’ ಸಂಕಲ್ಪ ಮಾಡಿ ಒಂಭತ್ತನೇ ಸಪ್ತಪದಿ ತುಳಿದಿದ್ದಾರೆ. ಪುರೋಹಿತರು ಅಗ್ನಿಯನ್ನು ಸಾಕ್ಷಿಯನ್ನಾಗಿ ಮಾಡಿ ನವಜೋಡಿಯನ್ನು ಏಳರ ಬದಲು ಒಂಭತ್ತು ಸಪ್ತಪದಿ ತುಳಿಯಲು ಅವಕಾಶ ಕೊಟ್ಟರು. ಸಂದೀಪ್ ಹಾಗೂ ದೀಪಿಕಾ ಅವರ ಈ ವಿಶೇಷ ಮದುವೆ ಈಗ ಆ ಕ್ಷೇತ್ರದಲ್ಲಿ ಹೆಚ್ಚು ಚರ್ಚೆಯಾಗುತ್ತಿದೆ.

    ಸಂದೀಪ್ ಹಾಗೂ ದೀಪಿಕಾ ಮದುವೆಯಾಗಿ ಮನೆಗೆ ಹೋದಾಗ ತಮ್ಮ ಗ್ರಾಮದಲ್ಲಿ ಗಿಡವೊಂದನ್ನು ನೆಟ್ಟಿದ್ದಾರೆ. ನಾವು ಮಾತ್ರ ಗಿಡ ನೆಡದೇ, ಎಲ್ಲರಿಗೂ ಗಿಡ ನೆಡೆಸಲು ಜಾಗೃತಿ ಮೂಡಿಸುತ್ತೇವೆ ಎಂದು ಸಂಕಲ್ಪ ಮಾಡಿದರು. ಅಲ್ಲದೇ ಭೇಟಿ ಪಡಾವ್, ಭೇಟಿ ಬಚಾವ್ ಅಭಿಯಾನದ ಬಗ್ಗೆ ಕೂಡ ಜಾಗೃತಿ ಮೂಡಿಸುವುದಾಗಿ ಸಂಕಲ್ಪ ಮಾಡಿದರು. ಎರಡು ಗ್ರಾಮದಲ್ಲೂ ಗಿಡವನ್ನು ನೆಟ್ಟು ಅದನ್ನು ನೋಡಿಕೊಳ್ಳುತ್ತೇವೆ ಹಾಗೂ ಹೆಣ್ಣುಮಕ್ಕಳ ಬಗ್ಗೆ ಸಾಕಾರಾತ್ಮಕ ಮನೋಭಾವವನ್ನು ಇರಿಸುವುದಾಗಿ ಭರವಸೆ ನೀಡಿದ್ದರು.

    ಸಂದೀಪ್ ಚೌಹ್ವಾನ್ ಅವರ ಮದುವೆ ಯಾವಾಗ ದೀಪಿಕಾ ಅವರ ಜೊತೆ ನಿಶ್ಚಾಯವಾಯಿತ್ತೋ ಆಗ ಅವರು ಮದುವೆ ಮಂಟಪದಲ್ಲಿ ಏಳರ ಬದಲು ಒಂಭತ್ತು ಸಪ್ತಪದಿ ತುಳಿಯಲು ನಿರ್ಧರಿಸಿದ್ದರು. ಸಂದೀಪ್ ಅವರ ಈ ನಿರ್ಧಾರಕ್ಕೆ ದೀಪಿಕಾ ಅವರು ಕೂಡ ಒಪ್ಪಿಗೆ ಸೂಚಿಸಿದ್ದರು. ಮದುವೆಯಲ್ಲಿ ಎಲ್ಲ ಶಾಸ್ತ್ರಗಳು ನಡೆಯುವಾಗ ಸಂದೀಪ್ ಅವರು ಇಚ್ಛಿಸಿದ್ದಂತೆ ಒಂಭತ್ತು ಸಪ್ತಪದಿ ತುಳಿದರು. ಒಂಭತ್ತು ಸಪ್ತಪದಿ ತುಳಿದು ಖುಷಿಯಾಗುತ್ತಿದೆ ಹಾಗೂ ನಮಗೆ ಮೊದಲು ಹೆಣ್ಣು ಮಗಳು ಆಗಲಿ ಎಂದು ಇಷ್ಟಪಡುತ್ತೇವೆ ಎಂದು ನವಜೋಡಿ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv