Tag: ಸಪ್ತ ಸಾಗರದಾಚೆ ಎಲ್ಲೋ

  • ಕಿರುತೆರೆಯಲ್ಲಿ ‘ಸಪ್ತ ಸಾಗರದಾಚೆ ಎಲ್ಲೋ’ ಪಾರ್ಟ್ ಬಿ ಪ್ರಸಾರ

    ಕಿರುತೆರೆಯಲ್ಲಿ ‘ಸಪ್ತ ಸಾಗರದಾಚೆ ಎಲ್ಲೋ’ ಪಾರ್ಟ್ ಬಿ ಪ್ರಸಾರ

    ಕ್ಷಿತ್ ಶೆಟ್ಟಿ (Rakshit Shetty) ನಟಿಸಿರುವ, ಹೇಮಂತ್ ರಾವ್ (Hemant Rao) ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಸಪ್ತ ಸಾಗರದಾಚೆ ಎಲ್ಲೋ ಪಾರ್ಟ್ ಬಿ’ ನಾಳೆ ಸಂಜೆ 7.30ಕ್ಕೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದೆ. ಕೆಲವು ದಿನಗಳ ಹಿಂದೆಯಷ್ಟೇ ಇದೇ ವಾಹಿನಿಯು ಪಾರ್ಟ್ ಎ ಪ್ರಸಾರ ಮಾಡಿತ್ತು.

    ಕೇವಲ ಪ್ರೇಕ್ಷಕರು ಮಾತ್ರವಲ್ಲ, ಸೆಲೆಬ್ರಿಟಿಗಳು ಈ ಸಿನಿಮಾವನ್ನು ಒಪ್ಪಿಕೊಂಡಿದ್ದರು. ಹೆಸರಾಂತ ನಟ ಪ್ರಕಾಶ್ ರಾಜ್ (Prakash Raj), ತಾವು ಮೆಚ್ಚಿದ ಸಿನಿಮಾಗಳ ಬಗ್ಗೆ ಆಗಾಗ್ಗೆ ಬರೆಯುತ್ತಲೇ ಇರುತ್ತಾರೆ. ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ನೋಡಿ ಸಂಭ್ರಮಿಸಿದ್ದಾರೆ. ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಸಿನಿಮಾ ಬಗ್ಗೆ, ‘ಸಪ್ತ ಸಾಗರದಾಚೆ ಎಲ್ಲೋ.. ಆಹಾ.. ಒಂದು ಸುಂದರ ದೃಶ್ಯಕಾವ್ಯ ಅನುಭವ. ಡೋಂಟ್ ಮಿಸ್’ ಎಂದು ಬರೆದುಕೊಂಡಿದ್ದರು.

    ರಕ್ಷಿತ್ ಶೆಟ್ಟಿ, ನಿರ್ದೇಶಕ ಹೇಮಂತ್ ರಾವ್, ಚೈತ್ರಾ ಆಚಾರ್ಯ, ರುಕ್ಮಿಣಿ, ಚರಣ್ ರಾಜ್ ಹೀಗೆ ಸಿನಿಮಾದ ಕಲಾವಿದರು ಮತ್ತು ತಂತ್ರಜ್ಞರಿಗೆ ತಮ್ಮ ಬರಹವನ್ನು ಟ್ಯಾಗ್ ಮಾಡಿದ್ದರು. ಇಡೀ ತಂಡಕ್ಕೆ ಇಂಥದ್ದೊಂದು ಸಿನಿಮಾ ಕೊಟ್ಟಿದ್ದಕ್ಕೆ ಧನ್ಯವಾದಗಳನ್ನೂ ಪ್ರಕಾಶ್ ರಾಜ್ ಅರ್ಪಿಸಿದ್ದರು.

    ಕೇವಲ ಕನ್ನಡದಲ್ಲಿ ಮಾತ್ರವಲ್ಲ,  ‘ಸಪ್ತಸಾಗರದಾಚೆ ಎಲ್ಲೋ’ (Sapta Sagaradacche Yello) ತೆಲುಗು ನೆಲದಲ್ಲೂ ಸದ್ದು ಮಾಡಿತ್ತು. ಸ್ಯಾಂಡಲ್‌ವುಡ್‌ನಲ್ಲಿ ಕಮಾಲ್ ಮಾಡಿದ ಈ ಸಿನಿಮಾ, ಈಗ ತೆಲುಗಿನಲ್ಲೂ (Tollywood) ಅತ್ಯುತ್ತಮ ಪ್ರತಿಕ್ರಿಯೆಯನ್ನು ಕಂಡಿತ್ತು. ದೃಶ್ಯ ಕಾವ್ಯಕ್ಕೆ ಕನ್ನಡಿಗರು ಫಿದಾ ಆಗಿದ್ದರು. ಮನು- ಪ್ರಿಯಾ ಜೋಡಿಯ ಪ್ರೇಮ್ ಕಹಾನಿ ನೋಡಿ ಪ್ರೇಕ್ಷಕರು ಚಪ್ಪಾಳೆ ತಟ್ಟಿದ್ದರು.

     

    ‘ಕವಲುದಾರಿ’ ಖ್ಯಾತಿಯ ಹೇಮಂತ್ ನಿರ್ದೇಶನದಲ್ಲಿ ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್, ಅಚ್ಯುತ್ ಕುಮಾರ್, ಪವಿತ್ರಾ ಲೋಕೇಶ್, ರಮೇಶ್ ಇಂದಿರಾ, ಅವಿನಾಶ್ ಸೇರಿದಂತೆ ಹಲವರು ನಟಿಸಿದ್ದಾರೆ. ರಕ್ಷಿತ್‌ ಶೆಟ್ಟಿ ನಿರ್ಮಾಣ ಮಾಡಿದ್ದಾರೆ.

  • ಕೊನೆಗೂ ಘೋಷಣೆಯಾಯ್ತು ಶಿವಣ್ಣ ಜೊತೆ ಹೇಮಂತ್ ರಾವ್ ಸಿನಿಮಾ

    ಕೊನೆಗೂ ಘೋಷಣೆಯಾಯ್ತು ಶಿವಣ್ಣ ಜೊತೆ ಹೇಮಂತ್ ರಾವ್ ಸಿನಿಮಾ

    ‘ಸಪ್ತಸಾಗರದಾಚೆ ಎಲ್ಲೋ’ ಖ್ಯಾತಿಯ ಹೇಮಂತ್ ರಾವ್ (Hemanth Rao) ಮುಂದಿನ ಚಿತ್ರದ ಬಗ್ಗೆ ಅಪ್‌ಡೇಡ್ ಸಿಕ್ಕಿದೆ. ಪ್ರಿಯಾ-ಮನು ಕಥೆ ಹೇಳಿ ಗೆದ್ದಿದ್ದ ಹೇಮಂತ್ ರಾವ್ ಇದೀಗ ಶಿವರಾಜ್‌ಕುಮಾರ್ (Shivarajkumar) ಜೊತೆ ಸಿನಿಮಾ ಮಾಡಲು ಮುಂದಾಗಿದ್ದಾರೆ. ಈಗ ಚಿತ್ರತಂಡ ಕಡೆಯಿಂದ ಅಧಿಕೃತ ಅಪ್‌ಡೇಟ್ ಸಿಕ್ಕಿದೆ. ಇದನ್ನೂ ಓದಿ:ಲವ್ ಸೆಲೆಬ್ರೇಷನ್‌ಗೆ ಗೊಂಬೆಯಂತೆ ರೆಡಿಯಾದ ರಾಧಿಕಾ ಪಂಡಿತ್

    ಹೇಮಂತ್ ರಾವ್ ಅವರು ಶಿವಣ್ಣ ಮತ್ತು ಈ ಚಿತ್ರದ ನಿರ್ಮಾಪಕ ವೈಶಾಖ್ ಜೆ ಗೌಡ ಜೊತೆ ಕ್ಯಾಮೆರಾಗೆ ಪೋಸ್ ನೀಡಿರುವ ಫೋಟೋ ಶೇರ್ ಮಾಡಿ ಸಿನಿಮಾ ಬಗ್ಗೆ ಅಧಿಕೃತ ಅಪ್‌ಡೇಟ್ ನೀಡಿದ್ದಾರೆ. ಶಿವಣ್ಣ ಜೊತೆ ಸಿನಿಮಾ ಮಾಡುವ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ.

    ‘ಗೋಧಿಬಣ್ಣ ಸಾಧಾರಣ ಮೈಕಟ್ಟು’, ಕವಲುದಾರಿ ನಿರ್ದೇಶಕ ಹೇಮಂತ್ ರಾವ್ ಅವರು ತಮ್ಮ ಮುಂದಿನ ಚಿತ್ರಕ್ಕೆ ಶಿವಣ್ಣನಿಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಶಿವಣ್ಣ ಕಥೆ ಕೇಳಿ ಥ್ರಿಲ್ ಆಗಿ ಸಿನಿಮಾ ಮಾಡಲು ಒಪ್ಪಿಗೆ ನೀಡಿದ್ದಾರೆ. ಶಿವಣ್ಣ ಮತ್ತು ಹೇಮಂತ್ ರಾವ್ ಕಾಂಬೋದಲ್ಲಿ ಒಂದು ವಿಭಿನ್ನ ಸಿನಿಮಾ ಮೂಡಿ ಬರಲಿದೆ.

     

    View this post on Instagram

     

    A post shared by Vaishak J Films (@vaishak_j_films)

    ‘ಜೈಲರ್’ ಸಕ್ಸಸ್ ನಂತರ ಶಿವಣ್ಣ ಮತ್ತಷ್ಟು ಬ್ಯುಸಿಯಾಗಿದ್ದಾರೆ. ಭೈರತಿ ರಣಗಲ್, ಕರಟಕ ಧಮನಕ, ಘೋಸ್ಟ್ 2, ರಾಮ್ ಚರಣ್ ಜೊತೆಗಿನ ಹೊಸ ಸಿನಿಮಾದಲ್ಲಿ ಶಿವಣ್ಣ ನಟಿಸುತ್ತಿದ್ದಾರೆ. ಈ ಪ್ರಾಜೆಕ್ಟ್‌ಗಳ ನಡುವೆ ಹೇಮಂತ್ ರಾವ್ ಜೊತೆ ಸಿನಿಮಾ ಮಾಡಬೇಕಿದೆ.

    ಹೇಮಂತ್ ರಾವ್ ನಿರ್ದೇಶನದ ಸಿನಿಮಾಗಳು ಮೋಡಿ ಮಾಡ್ತಿವೆ. ಹೊಸ ಬಗೆಯ ಕಥೆಗಳನ್ನು ತೆರೆಗೆ ತರಲು ತೆರೆಮರೆಯಲ್ಲಿ ತಯಾರಿ ಮಾಡಿಕೊಳ್ತಿದ್ದಾರೆ.

  • ಒಟಿಟಿಯಲ್ಲಿ ‘ಸಪ್ತ ಸಾಗರದಾಚೆ ಎಲ್ಲೋ’ ಪಾರ್ಟ್ ಬಿ

    ಒಟಿಟಿಯಲ್ಲಿ ‘ಸಪ್ತ ಸಾಗರದಾಚೆ ಎಲ್ಲೋ’ ಪಾರ್ಟ್ ಬಿ

    ಕ್ಷಿತ್ ಶೆಟ್ಟಿ ನಟಿಸಿರುವ ಸಪ್ತ ಸಾಗರದಾಚೆ ಎಲ್ಲೋ ಪಾರ್ಟ್ ಬಿ ಒಟಿಟಿಯಲ್ಲಿ (OTT) ಲಭ್ಯವಾಗಿದೆ. ಜನವರಿ 25ರ ಮಧ್ಯರಾತ್ರಿಯಿಂದಲೇ ಅಮೆಜಾನ್ ಪ್ರೈಂ ವಿಡಿಯೋದಲ್ಲಿ ನೋಡಬಹುದು ಎಂದು ನಿರ್ದೇಶಕ ಹೇಮಂತ್ ರಾವ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಎ ಮತ್ತು ಬಿ ಪಾರ್ಟ್ ಎರಡನ್ನೂ ಪ್ರೇಕ್ಷಕರು ಒಪ್ಪಿಕೊಂಡಿದ್ದರು. ಬಾಕ್ಸ್ ಆಫೀಸಿನಲ್ಲೂ ಗೆದ್ದಿದ್ದವು.

    ಕೇವಲ ಪ್ರೇಕ್ಷಕರು ಮಾತ್ರವಲ್ಲ, ಸೆಲೆಬ್ರಿಟಿಗಳು ಈ ಸಿನಿಮಾವನ್ನು ಒಪ್ಪಿಕೊಂಡಿದ್ದರು. ಹೆಸರಾಂತ ನಟ ಪ್ರಕಾಶ್ ರಾಜ್ (Prakash Raj), ತಾವು ಮೆಚ್ಚಿದ ಸಿನಿಮಾಗಳ ಬಗ್ಗೆ ಆಗಾಗ್ಗೆ ಬರೆಯುತ್ತಲೇ ಇರುತ್ತಾರೆ. ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ನೋಡಿ ಸಂಭ್ರಮಿಸಿದ್ದಾರೆ. ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಸಿನಿಮಾ ಬಗ್ಗೆ, ‘ಸಪ್ತ ಸಾಗರದಾಚೆ ಎಲ್ಲೋ.. ಆಹಾ.. ಒಂದು ಸುಂದರ ದೃಶ್ಯಕಾವ್ಯ ಅನುಭವ. ಡೋಂಟ್ ಮಿಸ್’ ಎಂದು ಬರೆದುಕೊಂಡಿದ್ದರು.

    ರಕ್ಷಿತ್ ಶೆಟ್ಟಿ, ನಿರ್ದೇಶಕ ಹೇಮಂತ್ ರಾವ್, ಚೈತ್ರಾ ಆಚಾರ್ಯ, ರುಕ್ಮಿಣಿ, ಚರಣ್ ರಾಜ್ ಹೀಗೆ ಸಿನಿಮಾದ ಕಲಾವಿದರು ಮತ್ತು ತಂತ್ರಜ್ಞರಿಗೆ ತಮ್ಮ ಬರಹವನ್ನು ಟ್ಯಾಗ್ ಮಾಡಿದ್ದರು. ಇಡೀ ತಂಡಕ್ಕೆ ಇಂಥದ್ದೊಂದು ಸಿನಿಮಾ ಕೊಟ್ಟಿದ್ದಕ್ಕೆ ಧನ್ಯವಾದಗಳನ್ನೂ ಪ್ರಕಾಶ್ ರಾಜ್ ಅರ್ಪಿಸಿದ್ದರು.

    ಕೇವಲ ಕನ್ನಡದಲ್ಲಿ ಮಾತ್ರವಲ್ಲ,  ‘ಸಪ್ತಸಾಗರದಾಚೆ ಎಲ್ಲೋ’ (Sapta Sagaradacche Yello) ತೆಲುಗು ನೆಲದಲ್ಲೂ ಸದ್ದು ಮಾಡಿತ್ತು. ಸ್ಯಾಂಡಲ್‌ವುಡ್‌ನಲ್ಲಿ ಕಮಾಲ್ ಮಾಡಿದ ಈ ಸಿನಿಮಾ, ಈಗ ತೆಲುಗಿನಲ್ಲೂ (Tollywood) ಅತ್ಯುತ್ತಮ ಪ್ರತಿಕ್ರಿಯೆಯನ್ನು ಕಂಡಿತ್ತು. ದೃಶ್ಯ ಕಾವ್ಯಕ್ಕೆ ಕನ್ನಡಿಗರು ಫಿದಾ ಆಗಿದ್ದರು. ಮನು- ಪ್ರಿಯಾ ಜೋಡಿಯ ಪ್ರೇಮ್ ಕಹಾನಿ ನೋಡಿ ಪ್ರೇಕ್ಷಕರು ಚಪ್ಪಾಳೆ ತಟ್ಟಿದ್ದರು.

     

    ‘ಕವಲುದಾರಿ’ ಖ್ಯಾತಿಯ ಹೇಮಂತ್ ನಿರ್ದೇಶನದಲ್ಲಿ ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್, ಅಚ್ಯುತ್ ಕುಮಾರ್, ಪವಿತ್ರಾ ಲೋಕೇಶ್, ರಮೇಶ್ ಇಂದಿರಾ, ಅವಿನಾಶ್ ಸೇರಿದಂತೆ ಹಲವರು ನಟಿಸಿದ್ದಾರೆ. ರಕ್ಷಿತ್‌ ಶೆಟ್ಟಿ ನಿರ್ಮಾಣ ಮಾಡಿದ್ದಾರೆ.

  • ಅಭಿಮಾನಿಗಳಿಗೆ ನಿರಾಸೆ ಮಾಡಿದ ರಕ್ಷಿತ್ ಶೆಟ್ಟಿ: ಆದ್ರೂ ಕಾಯ್ತೀವಿ ಅಂತಿದ್ದಾರೆ ಫ್ಯಾನ್ಸ್

    ಅಭಿಮಾನಿಗಳಿಗೆ ನಿರಾಸೆ ಮಾಡಿದ ರಕ್ಷಿತ್ ಶೆಟ್ಟಿ: ಆದ್ರೂ ಕಾಯ್ತೀವಿ ಅಂತಿದ್ದಾರೆ ಫ್ಯಾನ್ಸ್

    ಕ್ಷಿತ್ ಶೆಟ್ಟಿ ನಟಿಸಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ತೆಲುಗಿನಲ್ಲೂ ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡಿದೆ. ಈ ಬೆನ್ನಲ್ಲೇ ‘ಬಿ ಪಾರ್ಟ್’ ಅನ್ನು ಅದ್ಧೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಂಡಿತ್ತು. ಚಿತ್ರತಂಡ ಮೊದಲೇ ಘೋಷಿಸಿದಂತೆ ಅಕ್ಟೋಬರ್ 20ಕ್ಕೆ ಬಿಡುಗಡೆ ಆಗಬೇಕಿತ್ತು. ಬಿ ಪಾರ್ಟ್ ನೋಡಲು ಅಭಿಮಾನಿಗಳು ತುದಿಗಾಲಲ್ಲಿ ನಿಂತು ಕಾಯುತ್ತಿದ್ದರು. ಆದರೆ, ನಿಗದಿತ ದಿನಾಂಕದಲ್ಲಿ ಸಿನಿಮಾ ರಿಲಿಸ್ ಆಗುತ್ತಿಲ್ಲ. ಹಾಗಾಗಿ ಸಹಜವಾಗಿಯೇ ಅಭಿಮಾನಿಗಳಿಗೆ ನಿರಾಸೆ ಮೂಡಿದೆ.

    ಈ ವೇಳೆಯಲ್ಲಿ ಭಾರೀ ಬಜೆಟ್ ಚಿತ್ರಗಳು ಬಿಡುಗಡೆ ಆಗುತ್ತಿವೆ. ಸ್ಟಾರ್ ನಟರ ಚಿತ್ರಗಳು ತೆರೆ ಕಾಣಲು ಸಿದ್ಧತೆ ಮಾಡಿಕೊಳ್ಳುತ್ತಿವೆ. ಅಲ್ಲದೇ, ಪರಭಾಷೆಯ ಚಿತ್ರಗಳ ಹಾವಳಿಯೂ ಹೆಚ್ಚಾಗಿದೆ. ಒಂದೊಳ್ಳೆ ಸಿನಿಮಾ ಕಳೆದು ಹೋಗಬಾರದು ಎನ್ನುವ ಕಾರಣಕ್ಕಾಗಿ ಒಂದು ವಾರ ಚಿತ್ರ ಬಿಡುಗಡೆಯ ದಿನಾಂಕವನ್ನು ಮುಂದೂಡಿದ್ದಾರೆ. ಅಕ್ಟೋಬರ್ 27ಕ್ಕೆ ಗ್ರ್ಯಾಂಡ್ ಆಗಿ ಸಪ್ತ ಸಾಗರದಾಚೆ ಎಲ್ಲೋ ಬಿ ಪಾರ್ಟ್ ಬಿಡುಗಡೆ ಆಗಲಿದೆ.

    ರಕ್ಷಿತ್ ಶೆಟ್ಟಿ(Rakshit Shetty), ರುಕ್ಮಿಣಿ ವಸಂತ್ (Rukmini Vasanth) ನಟನೆಯ ‘ಸಪ್ತಸಾಗರದಾಚೆ ಎಲ್ಲೋ’ (Sapta Sagaradacche Yello) ತೆಲುಗು ನೆಲದಲ್ಲೂ ಸದ್ದು ಮಾಡಿದೆ. ಸ್ಯಾಂಡಲ್‌ವುಡ್‌ನಲ್ಲಿ ಕಮಾಲ್ ಮಾಡಿದ ಈ ಸಿನಿಮಾ, ಈಗ ತೆಲುಗಿನಲ್ಲೂ (Tollywood) ಅತ್ಯುತ್ತಮ ಪ್ರತಿಕ್ರಿಯೆನ್ನು ಕಂಡಿದೆ. ಹೇಮಂತ್ ನಿರ್ದೇಶಿಸಿದ ದೃಶ್ಯ ಕಾವ್ಯಕ್ಕೆ ಕನ್ನಡಿಗರು ಫಿದಾ ಆಗಿದ್ದಾರೆ. ಮನು- ಪ್ರಿಯಾ ಜೋಡಿಯ ಪ್ರೇಮ್ ಕಹಾನಿ ನೋಡಿ ಪ್ರೇಕ್ಷಕರು ಚಪ್ಪಾಳೆ ತಟ್ಟಿದ್ದಾರೆ.

     

    ‘ಕವಲುದಾರಿ’ ಖ್ಯಾತಿಯ ಹೇಮಂತ್ ನಿರ್ದೇಶನದಲ್ಲಿ ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್, ಅಚ್ಯುತ್ ಕುಮಾರ್, ಪವಿತ್ರಾ ಲೊಕೇಶ್, ರಮೇಶ್ ಇಂದಿರಾ, ಅವಿನಾಶ್ ಸೇರಿದಂತೆ ಹಲವರು ನಟಿಸಿದ್ದಾರೆ. ರಕ್ಷಿತ್‌ ಶೆಟ್ಟಿ ನಿರ್ಮಾಣ ಮಾಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಟಾಲಿವುಡ್‌ನಲ್ಲಿ ರುಕ್ಮಿಣಿ ವಸಂತ್‌ಗೆ ಭರ್ಜರಿ ಡಿಮ್ಯಾಂಡ್

    ಟಾಲಿವುಡ್‌ನಲ್ಲಿ ರುಕ್ಮಿಣಿ ವಸಂತ್‌ಗೆ ಭರ್ಜರಿ ಡಿಮ್ಯಾಂಡ್

    ಸ್ಯಾಂಡಲ್‌ವುಡ್ ಬ್ಯೂಟಿ ರುಕ್ಮಿಣಿ ವಸಂತ್‌ಗೆ (Rukmini Vasanth) ಟಾಲಿವುಡ್‌ನಲ್ಲಿ ಸಖತ್ ಬೇಡಿಕೆ ಶುರುವಾಗಿದೆ. ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ತೆಲುಗು ವರ್ಷನ್‌ನಲ್ಲಿ ರಿಲೀಸ್ ಆದ ಬಳಿಕ ರುಕ್ಮಿಣಿ ವಸಂತ್‌ಗೆ ತೆಲುಗಿನ ಪ್ರೇಕ್ಷಕರು ಕೂಡ ಫಿದಾ ಆಗಿದ್ದಾರೆ. ಈ ಬೆನ್ನಲ್ಲೇ ರುಕ್ಮಿಣಿಗೆ ಬಂಪರ್ ಆಫರ್‌ಗಳು ಅರಸಿ ಬರುತ್ತಿವೆ.

    ‘ಬೀರ್‌ಬಲ್’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ನಟಿ, ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರಕ್ಕೆ ನಾಯಕಿಯಾಗಿ ರುಕ್ಮಿಣಿ ವಸಂತ್ ಮಿಂಚಿದ್ದರು. ಪ್ರಿಯಾ-ಮನು ಲವ್ ಸ್ಟೋರಿ ನೋಡುಗರಿಗೆ ಖುಷಿ ಕೊಟ್ಟಿತ್ತು. ರುಕ್ಮಿಣಿ ಆ್ಯಕ್ಟಿಂಗ್‌ಗೆ ಫ್ಯಾನ್ಸ್ ಫುಲ್ ಮಾರ್ಕ್ಸ್ ಕೊಟ್ಟರು. ಇದೇ ಚಿತ್ರ ತೆಲುಗಿಗೆ ಡಬ್ ಆಗಿ ಪ್ರೇಕ್ಷಕರ ದಿಲ್ ಗೆದ್ದಿದೆ. ಇದನ್ನೂ ಓದಿ:ರಜನಿಕಾಂತ್ ವಿರುದ್ಧ ಮತ್ತೆ ಗುಡುಗಿದ ವಾಟಾಳ್ ನಾಗರಾಜ್

    ‘ಸಪ್ತ ಸಾಗರಲು ದಾಟಿ’ ಈಗ ಟಾಲಿವುಡ್ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ತೆಲುಗಿನಿಂದ ನಟಿಗೆ ಒಳ್ಳೆಯ ಸಿನಿಮಾ ಅವಕಾಶಗಳು ಅರಸಿ ಬರುತ್ತಿದೆ. ಒಳ್ಳೆಯ ಆಫರ್ ಸಿಕ್ಕರೆ ತೆಲುಗಿನಲ್ಲಿ ನಟಿಸುವೆ ಎಂದು ರುಕ್ಮಿಣಿ ಕೂಡ ಖುಷಿಯಿಂದ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.

    ತೆಲುಗಿನಲ್ಲಿ ಮೊದಲೇ ಕನ್ನಡದ ನಟಿಮಣಿಯರ ದರ್ಬಾರ್ ಜೋರಾಗಿದೆ. ರಶ್ಮಿಕಾ ಮಂದಣ್ಣ(Rashmika Mandanna), ಶ್ರೀಲೀಲಾ (Sreeleela), ಪೂಜಾ ಹೆಗ್ಡೆ, ಕೃತಿ ಶೆಟ್ಟಿ ಹಾವಳಿ ಮಾಡುತ್ತಿರುವ ಬೆನ್ನಲ್ಲೇ ಇದೀಗ ರುಕ್ಮಿಣಿ ವಸಂತ್ ಕೂಡ ಅದೇ ಹಾದಿಯಲ್ಲಿ ಹೆಜ್ಜೆ ಇಡ್ತಿದ್ದಾರೆ. ಕನ್ನಡದ ನಟಿಯರ ನಡುವೆಯೇ ರುಕ್ಮಿಣಿ ಗೆದ್ದು ಬೀಗುತ್ತಾರಾ ಕಾಯಬೇಕಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರುಕ್ಮಿಣಿ ವಸಂತ್‌ ಎಂಗೇಜ್‌ ಆಗಿದ್ದಾರಾ? ನಟಿ ಸ್ಪಷ್ಟನೆ

    ರುಕ್ಮಿಣಿ ವಸಂತ್‌ ಎಂಗೇಜ್‌ ಆಗಿದ್ದಾರಾ? ನಟಿ ಸ್ಪಷ್ಟನೆ

    ಪ್ತ ಸಾಗರದಾಚೆ ಎಲ್ಲೋ, ಬಾನ ದಾರಿಯಲ್ಲಿ ಚಿತ್ರ ನಟಿ ರುಕ್ಮಿಣಿ ವಸಂತ್ (Rukmini Vasanth) ಅವರು ಸದ್ಯ ಟ್ರೆಂಡ್‌ನಲ್ಲಿರುವ ನಾಯಕಿ. ರಕ್ಷಿತ್ ಶೆಟ್ಟಿ (Rakshit Shetty) ಜೊತೆ ಡ್ಯುಯೇಟ್ ಹಾಡಿದ ಮೇಲೆ ರುಕ್ಮಿಣಿ ಎಲ್ಲರ ಗಮನ ಸೆಳೆದಿದ್ದಾರೆ. ಅವರ ನಟನೆ, ಮುದ್ದಾದ ನಗುವಿಗೆ ಫ್ಯಾನ್ಸ್ ಮನಸೋತಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಬಾಯ್‌ಫ್ರೆಂಡ್ (Boyfriend) ಬಗ್ಗೆ ರುಕ್ಮಿಣಿ ವಸಂತ್‌ಗೆ ಪ್ರಶ್ನೆ ಕೇಳಲಾಗಿದೆ. ಈ ಬಗ್ಗೆ ನಟಿ ಕೂಡ ರಿಯಾಕ್ಟ್ ಮಾಡಿದ್ದಾರೆ.

    ಓರ್ವ ಹುಡುಗನ ಜೊತೆಯಿರುವ ರುಕ್ಮಿಣಿ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿತ್ತು. ಇಬ್ಬರ ಸಂಭಾಷಣೆ‌ ಜೊತೆ ಫೋಟೋ ಸೇರಿಸಿ ಟ್ರೋಲ್ ಮಾಡಲಾಗಿತ್ತು. ಹಾಗಾಗಿ ರುಕ್ಮಿಣಿ ವಸಂತ್ ಎಂಗೇಜ್ ಆಗಿದ್ದಾರೆ ಎಂದು ಹೇಳಲಾಗಿತ್ತು. ಈ ಸುದ್ದಿ ನಿಜನಾ ಎಂಬ ಪ್ರಶ್ನೆಗೆ ‘ನೋ’ ಎಂಬ ಉತ್ತರ ನೀಡುವ ಮೂಲಕ ವದಂತಿಗೆ ತೆರೆ ಎಳೆದಿದ್ದಾರೆ. ಇದನ್ನೂ ಓದಿ:ಚಿತ್ರರಂಗಕ್ಕೆ ಎಂಟ್ರಿ ಕೊಡಲಿದ್ದಾರೆ ದುನಿಯಾ ವಿಜಯ್ ಪುತ್ರಿಯರು

    ವೈರಲ್ ಆದ ಫೋಟೋದಲ್ಲಿರುವುದು ನನ್ನ ಗೆಳೆಯ, ನಾನು ಇನ್ನೂ ಸಿಂಗಲ್ ಎಂದು ಸ್ಪಷ್ಟನೆ ನೀಡಿದ್ದಾರೆ. ಚಿತ್ರರಂಗಕ್ಕೆ ಹೊಸಬಳಾಗಿದ್ದರೂ ನನ್ನ ಸಿನಿಮಾಗಳ ಬಗ್ಗೆ, ನನ್ನ ಖಾಸಗಿ ಜೀವನಗಳ ಬಗ್ಗೆ ಜನ ಕೇರ್ ಮಾಡುತ್ತಿರೋದು ಖುಷಿ ಕೊಟ್ಟಿದೆ ಎಂದಿದ್ದಾರೆ. ಸುಳ್ಳು ಸುದ್ದಿಗಳು, ನೆಗೆಟಿವ್ ಕಾಮೆಂಟ್‌ಗಳು ಬೇಸರ ತರಿಸುತ್ತದೆ ಎಂದಿದ್ದಾರೆ.

    ರಕ್ಷಿತ್ ನಟನೆ, ನಿರ್ಮಾಣದ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದಲ್ಲಿ ರುಕ್ಮಿಣಿ ಅಭಿನಯಕ್ಕೆ ಫ್ಯಾನ್ಸ್ ಫುಲ್ ಮಾರ್ಕ್ಸ್ ಕೊಟ್ಟಿದ್ದಾರೆ. ಈ ಸಿನಿಮಾ ತೆಲುಗು ವರ್ಷನ್‌ನಲ್ಲಿ ಸೆ.22ರಂದು ತೆರೆ ಕಂಡಿದೆ. ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ಅಭಿನಯದ ‘ಬಾನ ದಾರಿಯಲ್ಲಿ’ (Banadariyali)  ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಕ್ಷಿತ್ ಶೆಟ್ಟಿ ಸಿನಿಮಾ ನೋಡಿ ‘ಮಾಸ್ಟರ್‌ಪೀಸ್’ ಎಂದ ಸಮಂತಾ

    ರಕ್ಷಿತ್ ಶೆಟ್ಟಿ ಸಿನಿಮಾ ನೋಡಿ ‘ಮಾಸ್ಟರ್‌ಪೀಸ್’ ಎಂದ ಸಮಂತಾ

    ಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್ ನಟನೆಯ ‘ಸಪ್ತಸಾಗರದಾಚೆ ಎಲ್ಲೋ’ ಕನ್ನಡಿಗರ ದಿಲ್ ಗೆದ್ದಿದೆ. ಈಗ ತೆಲುಗು ಭಾಷೆಯಲ್ಲೂ ಸೆ.22ರಂದು ಈ ಸಿನಿಮಾ ತೆರೆ ಕಾಣುತ್ತಿದೆ. ಈ ನಡುವೆ ರಕ್ಷಿತ್ ನಟನೆಯ ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾವನ್ನ ಸಮಂತಾ (Samantha) ನೋಡಿ ಹಾಡಿ ಹೊಗಳಿದ್ದಾರೆ. ರಕ್ಷಿತ್ ಚಿತ್ರಕ್ಕೆ ಸಮಂತಾ, ಮಾಸ್ಟರ್‌ಪೀಸ್ ಎಂದಿದ್ದಾರೆ.

    ‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಎ ಸಿನಿಮಾ ನೋಡಿದ ಮೇಲೆ ಆದರ ಬಗ್ಗೆ ಸಮಂತಾ ಪೋಸ್ಟ್ ಹಂಚಿಕೊಂಡಿದ್ದಾರೆ. ಅದರಲ್ಲೂ ವಿಶೇಷವಾಗಿ ರುಕ್ಮಿಣಿ ವಸಂತ್ ಅವರ ನಟನೆಗೆ ಫಿದಾ ಆಗಿದ್ದಾರೆ. ಇದು ಮಾಸ್ಟರ್‌ಪೀಸ್ ಚಿತ್ರ, ಇದು ಕಡ್ಡಾಯವಾಗಿ ಎಲ್ಲರೂ ನೋಡಬೇಕಿರುವ ಸಿನಿಮಾ. ರಕ್ಷಿತ್ ಶೆಟ್ಟಿ(Rakshit Shetty), ರುಕ್ಮಿಣಿ ವಸಂತ್ (Rukmini Vasanth), ಹೇಮಂತ್ ರಾವ್ ನಿಮ್ಮ ಈ ಸುಂದರವಾದ ತಂಡಕ್ಕೆ ದೊಡ್ಡ ಅಭಿನಂದನೆಗಳು ಎಂದು ಸಮಂತಾ ಬರೆದುಕೊಂಡಿದ್ದಾರೆ.

    ಇದರ ಜೊತೆಗೆ ನಟಿ ರುಕ್ಮಿಣಿ ವಸಂತ್‌ಗೆ ವಿಶೇಷ ಮೆಚ್ಚುಗೆಯನ್ನು ತಿಳಿಸಿದ್ದಾರೆ ಸಮಂತಾ. ಹೇ ಸುಂದರಿ ರುಕ್ಮಿಣಿ ವಸಂತ್, ಎಂಥ ಅದ್ಭುತ ನಟನೆ ಬ್ರಿಲಿಯಂಟ್, ದೊಡ್ಡ ಅಪ್ಪುಗೆ ನಿಮಗೆ ಎಂದು ಸಮಂತಾ ಬರೆದುಕೊಂಡಿದ್ದಾರೆ. ಸಮಂತಾ ಮೆಚ್ಚುಗೆಗೆ ನಟಿ ರುಕ್ಮಿಣಿ ಕೂಡ ಪ್ರತಿಕ್ರಿಯೆ ನೀಡಿ, ಧನ್ಯವಾದಗಳನ್ನ ತಿಳಿಸಿದ್ದಾರೆ. ಇದನ್ನೂ ಓದಿ:ಮದುವೆಯಾಗಿ 8 ವರ್ಷ, ಮಗು ಬಗ್ಗೆ ಗುಡ್ ನ್ಯೂಸ್ ಕೊಡೋದ್ಯಾವಾಗ? ಪ್ರಜ್ವಲ್ ದೇವರಾಜ್ ಪ್ರತಿಕ್ರಿಯೆ

    ಸೆ.1ರಂದು ಸಪ್ತಸಾಗರದಾಚೆ ಎಲ್ಲೋ (Sapta Sagaradaache Yello) ಸಿನಿಮಾ ತೆರೆಕಂಡು ಉತ್ತಮ ಪ್ರದರ್ಶನ ಕಾಣುತ್ತಿದೆ. ಮನು-ಪ್ರಿಯಾ ಲವ್ ಸ್ಟೋರಿಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಇದೀಗ ತೆಲುಗು ವರ್ಷನ್‌ನಲ್ಲಿ ಸಿನಿಮಾ ತೆರೆ ಕಾಣಲು ಸಿದ್ಧವಾಗಿದೆ. ಇದೇ ಸೆ.22ರಂದು ರಿಲೀಸ್ ಆಗುತ್ತಿದೆ. ಇದನ್ನೂ ಓದಿ:ಮತ್ತೊಂದು ಬಿಗ್ ಪ್ರಾಜೆಕ್ಟ್ ಒಪ್ಪಿಕೊಂಡ ಅನುಷ್ಕಾ ಶೆಟ್ಟಿ

    ‘ಸಪ್ತಸಾಗರದಾಚೆ ಎಲ್ಲೋ’ ಪಾರ್ಟ್ 2 ಅಕ್ಟೋಬರ್ 20ಕ್ಕೆ ರಿಲೀಸ್ ಆಗುತ್ತಿದೆ. ರಕ್ಷಿತ್, ರುಕ್ಮಿಣಿ ಜೊತೆ ಟೋಬಿ ನಾಯಕಿ ಚೈತ್ರಾ ಆಚಾರ್ ಕೂಡ ಸಾಥ್ ನೀಡಿದ್ದಾರೆ. ಮೊದಲ ಭಾಗ ಹಿಟ್ ಆದ ಮೇಲೆ ಸಿನಿಮಾದ 2ನೇ ಭಾಗ ನೋಡಲು ಅಭಿಮಾನಿಗಳು ಕಾಯ್ತಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಸಪ್ತ ಸಾಗರದಾಚೆ ಎಲ್ಲೋ’ ಟೈಟಲ್ ಟ್ರ್ಯಾಕ್ ಗೆ ಫ್ಯಾನ್ಸ್ ಫಿದಾ

    ‘ಸಪ್ತ ಸಾಗರದಾಚೆ ಎಲ್ಲೋ’ ಟೈಟಲ್ ಟ್ರ್ಯಾಕ್ ಗೆ ಫ್ಯಾನ್ಸ್ ಫಿದಾ

    ಕ್ಷಿತ್ ಶೆಟ್ಟಿ ನಾಯಕರಾಗಿ ನಟಿಸಿ, ನಿರ್ಮಾಣ ಮಾಡಿರುವ ‘ಸಪ್ತ ಸಾಗರದಾಚೆ ಎಲ್ಲೋ’ (Hemanth M Rao) ಚಿತ್ರದ ಟೈಟಲ್ ಟ್ರ್ಯಾಕ್ (Title Track) ಮೊನ್ನೆಯಷ್ಟೇ ಬಿಡುಗಡೆಯಾಗಿದೆ. ಚರಣ್ ರಾಜ್ ಸಂಗೀತ ಸಂಯೋಜಿಸಿರುವ ಹಾಗೂ ಧನಂಜಯ್ ರಂಜನ್ ಬರೆದಿರುವ ಈ ಶೀರ್ಷಿಕೆ ಗೀತೆಯನ್ನು ಕಪಿಲ್ ಕಪಿಲನ್ ಹಾಡಿದ್ದಾರೆ. ಹಾಡು ಬಿಡುಗಡೆಯಾದ ಕ್ಷಣದಿಂದಲೇ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಈ ಸುಮಧುರ ಹಾಡಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

    ಸಪ್ತ ಸಾಗರದಾಚೆ ಎಲ್ಲೋ (Sapta Saagaradache Elo) ಚಿತ್ರದ  ಸೈಡ್ 1 ಸೆಪ್ಟೆಂಬರ್ 1 ರಂದು ಬಿಡುಗಡೆಯಾಗಲಿದ್ದು, ಸೈಡ್ 2 ಅಕ್ಟೋಬರ್ 20ಕ್ಕೆ ತೆರೆ ಕಾಣಲಿದೆ. ಬಹು ನಿರೀಕ್ಷಿತ ಈ ಚಿತ್ರದ ಬಿಡುಗಡೆಗೆ ರಕ್ಷಿತ್ ಶೆಟ್ಟಿ (Rakshit Shetty) ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಇದನ್ನೂ ಓದಿ:ಸಿಕ್ಸ್ ಪ್ಯಾಕ್ ಅವತಾರದಲ್ಲಿ ಚಾರ್ಲಿ ಬೆಡಗಿ ಸಂಗೀತಾ

    ಹೇಮಂತ್ ಎಂ ರಾವ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ರಕ್ಷಿತ್ ಶೆಟ್ಟಿ ಹಾಗೂ ಹೇಮಂತ್ ಎಂ ರಾವ್ ಕಾಂಬಿನೇಶನ್ ನಲ್ಲಿ ಬರುತ್ತಿರುವ ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ.  ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್, ಚೈತ್ರ ಜೆ ಆಚಾರ್, ಅವಿನಾಶ್, ಶರತ್ ಲೋಹಿತಾಶ್ವ, ಅಚ್ಯತಕುಮಾರ್, ಪವಿತ್ರ ಲೋಕೇಶ್, ರಮೇಶ್ ಇಂದಿರಾ, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ತಾರಾಬಳಗದಲ್ಲಿದ್ದಾರೆ.

    ಅದ್ವೈತ ಗುರುಮೂರ್ತಿ ಛಾಯಾಗ್ರಹಣ ಹಾಗೂ ಸುನೀಲ್ ಭಾರದ್ವಾಜ್ ಸಂಕಲನ “ಸಪ್ತ. ಸಾಗರದಾಚೆ ಎಲ್ಲೋ ಚಿತ್ರಕ್ಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಪ್ತ ಸಾಗರದಾಚೆ ಎಲ್ಲೋ ‘ಹೋರಾಟ’ ಮಾಡುತ್ತಿರುವ ರಕ್ಷಿತ್ ಶೆಟ್ಟಿ

    ಸಪ್ತ ಸಾಗರದಾಚೆ ಎಲ್ಲೋ ‘ಹೋರಾಟ’ ಮಾಡುತ್ತಿರುವ ರಕ್ಷಿತ್ ಶೆಟ್ಟಿ

    ಕ್ಷಿತ್ ಶೆಟ್ಟಿ (Rakshit Shetty)  ನಾಯಕರಾಗಿ ನಟಿಸಿ, ನಿರ್ಮಾಣ ಮಾಡಿರುವ ‘ಸಪ್ತ ಸಾಗರದಾಚೆ ಎಲ್ಲೋ’ (Sapta Sagarachache Yallo) ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಸೈಡ್ 1 ಸೆಪ್ಟೆಂಬರ್ 1 ರಂದು ಬಿಡುಗಡೆಯಾದರೆ,  ಸೈಡ್ 2 ಅಕ್ಟೋಬರ್ 20ಕ್ಕೆ ತೆರೆಗೆ ಬರಲಿದೆ.

    ಹೇಮಂತ್ ಎಂ ರಾವ್  (Hemant Rao) ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ರಕ್ಷಿತ್ ಶೆಟ್ಟಿ ಹಾಗೂ ಹೇಮಂತ್ ಎಂ ರಾವ್ ಕಾಂಬಿನೇಶನ್ ನಲ್ಲಿ ಬರುತ್ತಿರುವ ಈ ಚಿತ್ರದ ಬಿಡುಗಡೆಗೆ ಅಭಿಮಾನಿ ವಲಯ ಕಾತುರದಿಂದ ಕಾಯುತ್ತಿದೆ.  ಇದನ್ನೂ ಓದಿ:‘ಹಿರಣ್ಯಕಶ್ಯಪ’ನಾಗಿ ಎಂಟ್ರಿ ಕೊಟ್ಟ ರಾಣಾ ದಗ್ಗುಬಾಟಿ ಮೇಲೆ ಶಾಕುಂತಲಂ ನಿರ್ದೇಶಕ ಗರಂ

    ಸದ್ಯ ಈ ಚಿತ್ರಕ್ಕಾಗಿ ಎಂ.ಸಿ.ಬಿಜ್ಜು ಹಾಗೂ ಕಿರಣ್ ಕಾವೇರಪ್ಪ ಬರೆದಿರುವ ‘ಹೋರಾಟ’ ಎಂಬ ಹಾಡಿನ ಲಿರಿಕಲ್ ವಿಡಿಯೋ ಪರಂವಃ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ. ಎಂ.ಸಿ.ಬಿಜ್ಜು(ರಾಪರ್) ಹಾಗೂ ಕೀರ್ತನ್ ಹೊಳ್ಳ ಹಾಡಿರುವ ಈ ಹಾಡು ಎಲ್ಲರ ಪ್ರಶಂಸೆಗೆ ಪಾತ್ರವಾಗುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಚರಣ್ ರಾಜ್ ಈ ಚಿತ್ರದ ಸಂಗೀತ ನಿರ್ದೇಶಕರು.

    ಅದ್ವೈತ ಗುರುಮೂರ್ತಿ ಛಾಯಾಗ್ರಹಣ ಹಾಗೂ ಸುನೀಲ್ ಭಾರದ್ವಾಜ್ ಸಂಕಲನವಿರುವ ಈ ಚಿತ್ರದ ತಾರಾಬಳಗದಲ್ಲಿ ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್, ಚೈತ್ರ ಜೆ ಆಚಾರ್, ಅವಿನಾಶ್, ಶರತ್ ಲೋಹಿತಾಶ್ವ, ಅಚ್ಯತಕುಮಾರ್, ಪವಿತ್ರ ಲೋಕೇಶ್, ರಮೇಶ್ ಇಂದಿರಾ, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಾಲಿವುಡ್ ನ ಪೀಟರ್ ಜಾಕ್ಸನ್ ಮಾದರಿ ಅನುಸರಿಸಿದ ರಕ್ಷಿತ್ ಶೆಟ್ಟಿ ಅಂಡ್ ಟೀಮ್

    ಹಾಲಿವುಡ್ ನ ಪೀಟರ್ ಜಾಕ್ಸನ್ ಮಾದರಿ ಅನುಸರಿಸಿದ ರಕ್ಷಿತ್ ಶೆಟ್ಟಿ ಅಂಡ್ ಟೀಮ್

    ಕ್ಷಿತ್ ಶೆಟ್ಟಿ  (Rakshit Shetty) ಮುಖ್ಯ ಭೂಮಿಕೆಯ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಚಿತ್ರವು ಎರಡು ಭಾಗಗಳಲ್ಲಿ ಮೂಡಿಬರುತ್ತಿದ್ದು, ಮೊದಲ ಭಾಗವಾದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ A’ ಸೆಪ್ಟೆಂಬರ್ 01 ಮತ್ತು ಎರಡನೆಯ ಭಾಗವಾದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ B’  ಅಕ್ಟೋಬರ್ 20ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕನ್ನಡ ಚಿತ್ರರಂಗದ ಜನಪ್ರಿಯ ನಿರ್ಮಾಣ ಮತ್ತು ವಿತರಣೆ ಸಂಸ್ಥೆಯಾದ ಕೆ.ವಿ.ಎನ್. ಪ್ರೊಡಕ್ಷನ್ಸ್ ಈ ಚಿತ್ರಗಳನ್ನು ಬಿಡುಗಡೆ ಮಾಡುತ್ತಿದೆ.

    ಈ ರೀತಿಯಲ್ಲಿ ಒಂದೇ ಸಲ ಸಿನಿಮಾ ರೆಡಿ ಮಾಡಿ, ಎರಡು ಭಾಗವಾಗಿ ಬಿಡುಗಡೆ ಮಾಡುವುದು ತೀರಾ ಅಪರೂಪ. ಹಾಲಿವುಡ್‌ನ ಪೀಟರ್ ಜಾಕ್ಸನ್ ‘ಲಾರ್ಡ್ ಆಫ್ ದ ರಿಂಗ್ಸ್’ ಮತ್ತು ‘ಹಾಬಿಟ್’ ಸಿನಿಮಾಗಳನ್ನು ಸಂಪೂರ್ಣ ಶೂಟ್ ಮುಗಿಸಿ ಪ್ರತಿ ವರ್ಷದ ಡಿಸೆಂಬರ್‌ಗೆ ಒಂದೊಂದು ಸಿನಿಮಾ ರಿಲೀಸ್ ಮಾಡಿದ್ದರು. ಭಾರತೀಯ ಹೆಮ್ಮೆಯ ನಿರ್ದೇಶಕ ಮಣಿರತ್ನಂ ಕೂಡ ಪೊನ್ನಿಯನ್ ಸೆಲ್ವನ್ ಸಿನಿಮಾನ ಸಂಪೂರ್ಣ ಮುಗಿಸಿ ರೆಡಿ ಇಟ್ಕೊಂಡು ಒಂದು ವರ್ಷದ ಗ್ಯಾಪಲ್ಲಿ ಎರಡು ಪಾರ್ಟುಗಳನ್ನು ರಿಲೀಸ್ ಮಾಡಿದರು. ಇದೇ ಮಾದರಿಯನ್ನೇ ಸಪ್ತ ಸಾಗರದಾಚೆ ಎಲ್ಲೋ ಟೀಮ್ ಅನುಸರಿಸುತ್ತಿದೆ.

    ಸಿಂಪಲ್ ಸ್ಟಾರ್ ರಕ್ಷಿತ್ ಇದೀಗ `ಸಪ್ತಸಾಗರದಾಚೆ ಎಲ್ಲೋ’ (Saptasagaradache Yello) ಚಿತ್ರದ ಮೂಲಕ ಗಮನ ಸೆಳೆಯುತ್ತಿದ್ದಾರೆ. ರಕ್ಷಿತ್‌ಗೆ ನಾಯಕಿಯರಾಗಿ ರುಕ್ಮಿಣಿ ವಸಂತ್ (Rukmini Vasanth) ಮತ್ತು ಚೈತ್ರಾ ಆಚಾರ್ (Chaitra Achar) ನಟಿಸಿದ್ದಾರೆ. ಇನ್ನೂ ಬರೋಬ್ಬರಿ 137 ದಿನಗಳ ಕಾಲ ಸಿನಿಮಾ ಚಿತ್ರೀಕರಣ ನಡೆಸಲಾಗಿದೆ.  ಇದನ್ನೂ ಓದಿ:ಡಿವೋರ್ಸ್ ಆಗಿ ಒಂದು ವಾರ ಕಳೆದಿಲ್ಲ ಹೆಂಡ್ತಿ ಬೇಕು ಎಂದ ಸುಶ್ಮಿತಾ ಸೇನ್ ಅಣ್ಣ

    `ಕವಲು ದಾರಿ’ (Kavaludari) ಚಿತ್ರದ ನಂತರ ನಿರ್ದೇಶಕ ಹೇಮಂತ್ `ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್‌ಗೆ ಒಂದಷ್ಟು ದಿನ ವರ್ಕ್ಶಾಪ್ ನಡೆಸಿ ನಂತರ ಚಿತ್ರೀಕರಣ ಆರಂಭಿಸಿದ್ದರು. ಚಿತ್ರದಲ್ಲಿ 2 ಭಿನ್ನ ಶೇಡ್‌ಗಳಿರೋ ಪಾತ್ರದಲ್ಲಿ ರಕ್ಷಿತ್ ನಟಿಸಿದ್ದಾರೆ.

    ತನ್ನ ಪಾತ್ರಕ್ಕಾಗಿ ರಕ್ಷಿತ್ 15 ರಿಂದ 20 ಕೆಜಿ ತೂಕ ಹೆಚ್ಚಿಸಿಕೊಂಡು ಮತ್ತೆ ತೂಕ ಇಳಿಸಿಕೊಂಡು ಕಸರತ್ತು ಕೂಡ ಮಾಡಿದ್ದಾರೆ. ಚಿತ್ರದಲ್ಲಿ ನಾಯಕನ 25 ಹಾಗೂ 45ರ ವಯೋಮಾನದ ಕುರಿತ ಕಥೆ ಇದೆ. ಅದಕ್ಕೆ ತಕ್ಕಂತೆ ಅರ್ಧ ಸಿನಿಮಾ ಸ್ಲಿಮ್ ಅಂಡ್ ಸ್ಮಾರ್ಟ್ ಕಾಲೇಜು ಹುಡುಗನಾಗಿ ರಕ್ಷಿತ್ ಮಿಂಚಿದ್ದಾರೆ. ಹಾಗೆಯೇ ಗಡ್ಡ ಬಿಟ್ಟು ರಗಡ್ ಆಗಿ ಕೂಡ ಕಾಣಿಸಿಕೊಂಡಿದ್ದಾರೆ. `777 ಚಾರ್ಲಿ’ ಸಿನಿಮಾದ ಸೂಪರ್ ಸಕ್ಸಸ್ ನಂತರ ರಕ್ಷಿತ್ ಶೆಟ್ಟಿ ಅವರನ್ನ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾಯ್ತಿದ್ದಾರೆ.

     

    ಈ ಚಿತ್ರದಲ್ಲಿ ರಕ್ಷಿತ್ ಶೆಟ್ಟಿ ಅವರ ಪಾತ್ರ ಎರಡು ಶೇಡ್ ಗಳಲ್ಲಿರುತ್ತದೆ. ಎರಡು ಕಾಲಘಟ್ಟಗಳಲ್ಲಿ ಕಥೆ ನಡೆಯಲಿದೆ. ರಕ್ಷಿತ್ ಶೆಟ್ಟಿ ಜೊತೆಗೆ ರುಕ್ಮಿಣಿ ವಸಂತ್, ಚೈತ್ರಾ ಆಚಾರ್, ಅವಿನಾಶ್, ಶರತ್ ಲೋಹಿತಾಶ್ವ, ಅಚ್ಯುತ್ ಕುಮಾರ್, ಪವಿತ್ರಾ ಲೋಕೇಶ್, ಗೋಪಾಲಕೃಷ್ಣ ದೇಶಪಾಂಡೆ, ರಮೇಶ್ ಇಂದಿರಾ ಮುಂತಾದವರು ನಟಿಸಿದ್ದಾರೆ.