Tag: ಸಪ್ಲೈಯರ್ ಶಂಕರ

  • ತಾಯಿ ಕಳೆದುಕೊಂಡ ಮಗನ ಆಕ್ರಂದನ- ‘Supplier ಶಂಕರ್’ ಸಿನಿಮಾದ ಸಾಂಗ್‌ ಔಟ್

    ತಾಯಿ ಕಳೆದುಕೊಂಡ ಮಗನ ಆಕ್ರಂದನ- ‘Supplier ಶಂಕರ್’ ಸಿನಿಮಾದ ಸಾಂಗ್‌ ಔಟ್

    ‘ಗಂಟುಮೂಟೆ’, ‘ಟಾಮ್ ಆ್ಯಂಡ್‌ ಜರ‍್ರಿ’ ಸಿನಿಮಾ ಖ್ಯಾತಿಯ ನಾಯಕ ನಿಶ್ಚಿತ್ ಕೊರೋಡಿ (Nishchith Korodi) ಅಭಿನಯದ ‘ಸಪ್ಲೈಯರ್‌ ಶಂಕರ’ (Supplier Shankara) ಸಿನಿಮಾದ ಮೊದಲ ಹಾಡು ಇದೀಗ ಬಿಡುಗಡೆಯಾಗಿದೆ. ಈ ಎಮೋಷನಲ್‌ ಸಾಂಗ್‌ ಪ್ರೇಕ್ಷಕರ ಗಮನ ಸೆಳೆಯುತ್ತಿದೆ.

    ತಾಯಿ ಕಳೆದುಕೊಂಡ ಮಗನ ಆಕ್ರಂದನ, ತುಂಬಾ ಪ್ರೀತಿಸುವ ಜೀವ ದೂರವಾದಾಗ ಆಗುವ‌ ನೋವಿನ ಗೀತೆಯಾಗಿರುವ ಅಯ್ಯೋ ದೈವವೇ ಹಾಡಿಗೆ ನಿರ್ದೇಶಕ ರಂಜಿತ್ ಸಿಂಗ್ ರಜಪೂತ್ ಸಾಹಿತ್ಯ ಬರೆದಿದ್ದು, ಸುನಿಲ್ ಕಶ್ಯಪ್ ಧ್ವನಿಯಾಗಿದ್ದು, ಆರ್ ಬಿ ಭರತ್ ಟ್ಯೂನ್ ಹಾಕಿದ್ದಾರೆ. ಕೇಳುಗರಿಗೆ ಬಹಳ ಕನೆಕ್ಟ್ ಆಗುವ ಸೆಂಟಿಮೆಂಟ್ ಹಾಡು ಇದಾಗಿದ್ದು, ಸಾಹಿತ್ಯ, ಸಂಗೀತ ಎಲ್ಲಾ ವಿಚಾರದಲ್ಲೂ ಗಮನ ಸೆಳೆಯುತ್ತಿದೆ.

    ಇತ್ತೀಚಿಗೆ ರಿಲೀಸ್ ಆದ ಮೋಷನ್ ಪೋಸ್ಟರ್ ಗೆ ಒಳ್ಳೆ ರೆಸ್ಪಾನ್ಸ್ ಸಿಕ್ತಿತ್ತು. ಯುವ ಪ್ರತಿಭೆ ರಂಜಿತ್ ಸಿಂಗ್ ರಜಪೂತ್ ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್ ಹೇಳಿದ್ದಾರೆ. ತ್ರಿನೇತ್ರ ಫಿಲ್ಮಂಸ್ ಸಂಸ್ಥೆಯಡಿ ಎಂ.ಚಂದ್ರಶೇಖರ್ – ನಾಗೇಂದ್ರ ಸಿಂಗ್ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಇದನ್ನೂ ಓದಿ:ದಿಗ್ಗಜರು- 2 ಸಿನಿಮಾಗಾಗಿ ಮತ್ತೆ ಜೊತೆಯಾಗ್ತಾರಾ ಸುದೀಪ್-‌ ದರ್ಶನ್?‌

    ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದ್ದು, ಬಾರ್ ಸಪ್ಲೈಯರ್‌ ಸುತ್ತ ಇಡೀ ಸಿನಿಮಾ ಸಾಗುತ್ತದೆ. ಗೋಪಾಲ ಕೃಷ್ಣ ದೇಶಪಾಂಡೆ, ಜ್ಯೋತಿ ರೈ(Jyothi Rai), ನವೀನ್ ಡಿ ಪಡಿಲ್ ಸೇರಿದಂತೆ ಒಂದಷ್ಟು ಹೊಸಬರು ಚಿತ್ರದಲ್ಲಿದ್ದಾರೆ ಎಂದು ನಿರ್ದೇಶಕರು ಹೇಳಿದ್ದಾರೆ. ಸತೀಶ್ ಕುಮಾರ್.ಎ ಛಾಯಾಗ್ರಹಣ, ಆರ್.ಬಿ.ಭರತ್ ಸಂಗೀತ, ಸತೀಶ್ ಚಂದ್ರಯ್ಯ ಸಂಕಲನ ಚಿತ್ರಕ್ಕಿದೆ. ಸದ್ದಿಲ್ಲದೇ ಶೂಟಿಂಗ್ ಮುಗಿಸಿರುವ ‘ಸಪ್ಲೈಯರ್ ಶಂಕರ’ ಬಿಡುಗಡೆಗೆ ಸಜ್ಜಾಗಿದ್ದಾನೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಗಂಟುಮೂಟೆ’ ಹೀರೋ ನಟನೆಯ ಹೊಸ ಸಿನಿಮಾದ ಶೂಟಿಂಗ್ ಕಂಪ್ಲೀಟ್

    ‘ಗಂಟುಮೂಟೆ’ ಹೀರೋ ನಟನೆಯ ಹೊಸ ಸಿನಿಮಾದ ಶೂಟಿಂಗ್ ಕಂಪ್ಲೀಟ್

    ಗಂಟುಮೂಟೆ, ಟಾಮ್ ಅಂಡ್ ಜೆರ್ರಿ ಸಿನಿಮಾಗಳ ಮೂಲಕ ಭರವಸೆ ಮೂಡಿಸಿರುವ ನಾಯಕ ನಿಶ್ಚಿತ್ ಕೊರೋಡಿ (Nishcith Korori, )ಇದೀಗ ‘Supplier ಶಂಕರ’ (Supplier Shankara)  ಎಂಬ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಯುವ ಪ್ರತಿಭೆ ರಂಜಿತ್ ಸಿಂಗ್ ರಜಪೂತ್ (Ranjit Singh Rajput) ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ. ತ್ರಿನೇತ್ರ ಫಿಲ್ಮಂಸ್ ಸಂಸ್ಥೆಯಡಿ ಎಂ.ಚಂದ್ರಶೇಖರ್ ಹಾಗೂ ನಾಗೇಂದ್ರ ಸಿಂಗ್ ಈ  ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.

    ಸದ್ದಿಲ್ಲದೇ ಶೂಟಿಂಗ್ ಮುಗಿಸಿರುವ (Shooting) Supplier ಶಂಕರ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯೂಸಿಯಾಗಿದೆ. ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದ್ದು, ಟೈಟಲ್ ಹೇಳುವಂತೆ ಒಬ್ಬ ಬಾರ್ ಸಪ್ಲೈಯರ್ ಸುತ್ತಾ ಇಡೀ ಸಿನಿಮಾ ಸಾಗುತ್ತದೆ. ನಿಶ್ಚಿತ್ ಗೆ ಜೋಡಿಯಾಗಿ ಲಗೋರಿ ಸಿನಿಮಾ ಖ್ಯಾತಿಯ ದೀಪಿಕಾ ಆರಾಧ್ಯ ನಟಿಸಿದ್ದು, ಗೋಪಾಲ ಕೃಷ್ಣ ದೇಶಪಾಂಡೇ, ಜ್ಯೋತಿ ರೈ, ನವೀನ್ ಡಿ ಪಡಿಲ್ ಸೇರಿದಂತೆ ಒಂದಷ್ಟು ಹೊಸಬರು ಚಿತ್ರದಲ್ಲಿದ್ದಾರೆ. ಇದನ್ನೂ ಓದಿ:ಶರ್ವಾನಂದ್ ರಿಸೆಪ್ಷನ್ ಸಂಭ್ರಮದಲ್ಲಿ ಸಿನಿ ತಾರೆಯರ ದಂಡು

    ಈ ಸಿನಿಮಾಗೆ ರಂಜಿತ್, ಕಥೆ, ಚಿತ್ರಕಥೆ, ಸಂಭಾಷಣೆ ಜೊತೆಗೆ ಸಾಹಿತ್ಯದ ಜವಾಬ್ದಾರಿ ಕೂಡ ಹೊತ್ತುಕೊಂಡಿದ್ದಾರೆ. ವಿಜಯ್ ಪ್ರಕಾಶ್, ಅಮ್ಮ ನನ್ನೀ ಈ ಜನುಮ ಖ್ಯಾತಿಯ ಸುನಿಲ್ ಕಶ್ಯಪ್, ಮೋಹನ್ ಬಿನ್ನಿಪೇಟೆ, ಸಂತೋಷ್ ವೆಂಕಿ, ನಕುಲ್ ಅಭಯ್ಯಂಕರ್, ಐಶ್ವರ್ಯ ರಂಗರಾಜನ್ ಹಾಡುಗಳಿಗೆ ಧ್ವನಿಯಾಗಿದ್ದು, ರವಿ ಬಸ್ರೂರ್ ಬಳಿ ಕೆಲಸ ಮಾಡಿರುವ ಆರ್.ಬಿ.ಭರತ್ ಸಂಗೀತ ನೀಡಿದ್ದಾರೆ.

     

    ಸತೀಶ್ ಚಂದ್ರಯ್ಯ ಸಂಕಲನ, ಸತೀಶ್ ಕುಮಾರ್.ಎ ಛಾಯಾಗ್ರಹಣ, ಬಾಲಾಜಿ ಕಲಾ ನಿರ್ದೇಶನ ಸಿನಿಮಾಗಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ ಚಿತ್ರತಂಡ ವರ್ಷಾಂತ್ಯಕ್ಕೆ ಸಿನಿಮಾವನ್ನು ತೆರೆಗೆ ತರವು ಯೋಜನೆ ಹಾಕಿಕೊಂಡಿದೆ.