Tag: ಸಫಾರಿ

  • ನಾಗರಹೊಳೆ ಸಫಾರಿ ವಾಹನದ ಮೇಲೆ ಆನೆ ದಾಳಿ

    ನಾಗರಹೊಳೆ ಸಫಾರಿ ವಾಹನದ ಮೇಲೆ ಆನೆ ದಾಳಿ

    ಮೈಸೂರು: ಸಫಾರಿ ವಾಹನಗಳ‌ (Safari Vehicle) ಮೇಲೆ ಆನೆ ದಾಳಿ ನಡೆಸಲು ಮುಂದಾದ ಘಟನೆ ನಾಗರಹೊಳೆ ಅರಣ್ಯದಲ್ಲಿ (Nagarahole Forest ) ನಡೆದಿದೆ.

    ಹುಣಸೂರು ತಾಲೂಕಿನ‌ ನಾಗರಹೊಳೆ ಅರಣ್ಯ ಪ್ರದೇಶದ ಕುಟ್ಟ ರಸ್ತೆಯಲ್ಲಿ ಈ ಘಟನೆ ನಡೆದಿದ್ದುಸಫಾರಿಗೆ ತೆರಳಿದ್ದ ಪ್ರವಾಸಿಗರ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ. ಇದನ್ನೂ ಓದಿ: ಮಳೆಯಿಂದ ಭಾರತ ಮಂಟಪದಲ್ಲಿ ನಿಂತಿದ್ದ ನೀರನ್ನು ಕೂಡಲೇ ತೆರವುಗೊಳಿಸಲಾಗಿತ್ತು: PIB

    ಮೊದಲಿಗೆ ಖಾಸಗಿ ವಾಹನ ನೋಡಿ‌ ಓಡಿ ಬಂದ ಆನೆ ನಂತರ ಸಫಾರಿ ವಾಹನದ ಮೇಲೆ ದಾಳಿಗೆ ಮುಂದಾಗಿದೆ. ಬಳಿಕ ಎದುರಿನಲ್ಲಿ ಮತ್ತೊಂದು ಸಫಾರಿ ವಾಹನದ ಬಳಿಗೂ ಓಡಿ ಬಂದಿದೆ. ವಾಹನವನ್ನು ಹಿಮ್ಮುಖವಾಗಿ ಚಲಿಸಿದ ಬಳಿಕ ಆನೆ ವಾಪಸ್‌ ಹೋಗಿದೆ.

     
    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾಗರಹೊಳೆ ಕಾಡಲ್ಲಿ ಸಫಾರಿ: ಹುಲಿ ಸಿಗಲಿಲ್ಲ, ಬೇಜಾರಾಯ್ತು ಎಂದ ಯಶ್

    ನಾಗರಹೊಳೆ ಕಾಡಲ್ಲಿ ಸಫಾರಿ: ಹುಲಿ ಸಿಗಲಿಲ್ಲ, ಬೇಜಾರಾಯ್ತು ಎಂದ ಯಶ್

    ಸಿನಿಮಾ ಕೆಲಸಗಳ ಬ್ಯುಸಿ ನಡುವೆಯೂ ರಾಕಿಂಗ್ ಸ್ಟಾರ್ ಯಶ್ (Yash) ಕಾಡಿಗೆ ನುಗ್ಗಿದ್ದಾರೆ. ಮಕ್ಕಳಿಗೆ ಲೈವ್ ಆಗಿ ಕಾಡು ಪ್ರಾಣಿಗಳನ್ನು ತೋರಿಸಲು ಕುಟುಂಬ ಸಮೇತ ನಾಗರಹೊಳೆ (Nagarhole) ಕಾಡಿಗೆ ಬಂದಿದ್ದ ಅವರು, ಸತತ ಮೂರು ದಿನಗಳ ಕಾಲ ಸಫಾರಿ (Safari) ಮಾಡಿದ್ದಾರೆ. ನಾನಾ ಪ್ರಾಣಿಗಳನ್ನು ಕಣ್ತುಂಬಿ ಕೊಂಡ ಯಶ್ ಕುಟುಂಬ, ಹುಲಿ (Tiger) ಸಿಗದೇ ಹೋದ ಕಾರಣಕ್ಕಾಗಿ ಬೇಸರ ವ್ಯಕ್ತಪಡಿಸಿದ್ದಾರೆ.

    ಕೊರೋನಾದಿಂದಾಗಿ ಮೈಸೂರು ಕಡೆ ಪ್ರವಾಸ ಮಾಡಲು ಯಶ್ ಗೆ ಆಗಿರಲಿಲ್ಲವಂತೆ. ಹಾಗಾಗಿ ಇಬ್ಬರು ಮಕ್ಕಳು, ಪತ್ನಿ ರಾಧಿಕಾ ಪಂಡಿತ್ (Radhika Pandit) ಮತ್ತು ಅತ್ತೆ, ಮಾವನ ಜೊತೆ ಮೈಸೂರಿಗೆ ಆಗಮಿಸಿದ್ದರು. ಮೈಸೂರಿನ ಸುತ್ತ ಮುತ್ತಲಿನ ಸ್ಥಳಗಳನ್ನು ಮಕ್ಕಳಿಗೆ ತೋರಿಸಿದರು. ಅದರಲ್ಲೂ ಮಕ್ಕಳಿಗೆ ಇದು ಮೊದಲ ರಿಯಲ್ ಫಾರೆಸ್ಟ್ ಪ್ರವಾಸವಾಗಿದ್ದರಿಂದ ಆ ಸಂಭ್ರಮವನ್ನು ಹಂಚಿಕೊಂಡರು.

    ಮಾಧ್ಯಮಗಳೊಂದಿಗೆ ಮಾತನಾಡಿದ ಯಶ್, ‘ನಾವು ಮತ್ತು ಮಕ್ಕಳು ಕೂಡ ಸಫಾರಿ ಎಂಜಾಯ್ ಮಾಡಿದ್ರು. ಸಫಾರಿಯಲ್ಲಿ ಜಿಂಕೆ, ಕರಡಿ, ಆನೆ ಎಲ್ಲೂ ಕಂಡವು. ಹುಲಿಯೊಂದು ಸಿಗಲಿಲ್ಲ, ಬೇಜಾರಾಯ್ತು.ಇವತ್ತೂ ಸಫಾರಿ ಮಾಡಬೇಕಿತ್ತು, ಮಳೆ ಕಾರಣಕ್ಕೆ ಹೋಗಲಿಲ್ಲ. ಮುಂದೆ ಮತ್ತೆ ಸಫಾರಿ ಮಾಡಿ ನೋಡಿದ್ರಾಯ್ತು ಅಂತ ಬಂದೆವು’ ಎಂದಿದ್ದಾರೆ. ಇದನ್ನೂ ಓದಿ:ಮಹೇಶ್ ಬಾಬು ಚಿತ್ರದಿಂದ ಪೂಜಾ ಹೆಗ್ಡೆ ಕಿಕ್ ಔಟ್- ತ್ರಿಷಾ ಇನ್?

    ಸಫಾರಿ ಮುಗಿಸಿಕೊಂಡು ಕುಟುಂಬ ಸಮೇತ ಇಂದು ಯಶ್ ನಂಜನಗೂಡಿಗೆ ಆಗಮಿಸಿ, ನಂಜುಂಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಕ್ಕಳು ಹಾಗೂ ಅತ್ತೆ ಮಾವ ಸಮೇತ ದೇವಸ್ಥಾನಕ್ಕೆ ಆಗಮಿಸಿದ್ದ ಯಶ್ ಕೆಲ ಹೊತ್ತು ದೇವಸ್ಥಾನದಲ್ಲೇ ಇದ್ದು ನಂಜುಂಡೇಶ್ವರನ ದರ್ಶನ ಪಡೆದರು.

    ಸಿನಿಮಾ ಕೆಲಸಗಳ ಮಧ್ಯೆಯೇ ಬಿಡುವು ಮಾಡಿಕೊಂಡು ಫ್ಯಾಮಿಲಿಗೆ ಟೈಮ್ ಕೊಟ್ಟಿದ್ದಾರೆ ಯಶ್. ಕಳೆದ ಮೂರು ದಿನಗಳಿಂದ ಅವರು ಮೈಸೂರು ಭಾಗದಲ್ಲಿ ಪ್ರವಾಸದಲ್ಲಿದ್ದರು. ನಾಗರ ಹೊಳೆ, ಬಂಡೀಪುರ ಅರಣ್ಯದಲ್ಲಿ ಸಫಾರಿ ನಡುವೆ ಶ್ರೀಕಂಠೇಶ್ವರ ದೇವರಿಗೆ ಪೂಜೆ ನೆರವೇರಿಸಿದ್ದಾರೆ.

  • ಪ್ರಧಾನಿ ಮೋದಿ ಬಂಡೀಪುರ ವೀಕೆಂಡ್‌ ಸಫಾರಿ – ಇಲ್ಲಿವೆ ನೋಡಿ Photos

    ಪ್ರಧಾನಿ ಮೋದಿ ಬಂಡೀಪುರ ವೀಕೆಂಡ್‌ ಸಫಾರಿ – ಇಲ್ಲಿವೆ ನೋಡಿ Photos

    ಚಾಮರಾಜನಗರ: ಹುಲಿ ಯೋಜನೆಯ (Project Tiger) ಸುವರ್ಣ ಮಹೋತ್ಸವದ ಆಚರಣೆಗಾಗಿ ಬಂಡೀಪುರಕ್ಕೆ ಆಗಮಿಸಿದ್ದ ಪ್ರಧಾನಿ ನರೇಂದ್ರ‌ ಮೋದಿ (PM Narendra Modi) ಅವರು ಬಂಡೀಪುರ ಹುಲಿ‌ ಸಂರಕ್ಷಿತ ಪ್ರದೇಶದಲ್ಲಿ (Bandipur Tiger Reserve) ಸಫಾರಿ ನಡೆಸಿದರು. ಅರಣ್ಯದಲ್ಲಿ ಸಂಚರಿಸಿ ಪ್ರಕೃತಿ ಸೌಂದರ್ಯ ಸವಿದರು. ಈ ವೇಳೆ ಅನೇಕ ಪ್ರಾಣಿ, ಪಕ್ಷಿಗಳು ಕಣ್ತುಂಬಿಕೊಂಡು ಖುಷಿ ಪಟ್ಟರು. ಮೋದಿ ಸಫಾರಿಯ ಫೋಟೋಗಳು ಇಲ್ಲಿವೆ ನೋಡಿ.

    ತೆರೆದ ಜೀಪ್‌ನಲ್ಲಿ (ಬೊಲೆರೊ ಕ್ಯಾಂಪರ್‌) ಮೋದಿ ಸಫಾರಿ.

    ಮೋದಿ ಕ್ಯಾಮೆರಾ ಕಣ್ಣಿಗೆ ಸೆರೆಯಾದ ವನ್ಯಜೀವಿ.

    ಬಂಡೀಪುರದಲ್ಲಿ ಜಿಂಕೆಗಳ ನೋಟ.

    ಮೋದಿ ಸಫಾರಿ ವೇಳೆ ಕಾಣಿಸಿಕೊಂಡ ಕಾಟಿಗಳು.

    ಬೈನಾಕುಲರ್‌ನಲ್ಲಿ ಬಂಡೀಪುರ ಕಾಡು, ಪ್ರಾಣಿ-ಪಕ್ಷಿ ವೀಕ್ಷಿಸಿದ ಪ್ರಧಾನಿ.

  • ಹಿಡಿದು ಮಾರಿಬಿಡಬಹುದೆಂಬ ಭಯಕ್ಕೆ ಹುಲಿ ಗುಹೆಯಲ್ಲಿ ಅಡಗಿರಬಹುದು: ಮೋದಿ ಸಫಾರಿಗೆ ಸಿದ್ದು ವ್ಯಂಗ್ಯ

    ಹಿಡಿದು ಮಾರಿಬಿಡಬಹುದೆಂಬ ಭಯಕ್ಕೆ ಹುಲಿ ಗುಹೆಯಲ್ಲಿ ಅಡಗಿರಬಹುದು: ಮೋದಿ ಸಫಾರಿಗೆ ಸಿದ್ದು ವ್ಯಂಗ್ಯ

    ಬೆಂಗಳೂರು: ಮೋದಿ ಸಫಾರಿ ಕುರಿತು ವರದಿಯೊಂದನ್ನು ಉಲ್ಲೇಖಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವ್ಯಂಗ್ಯವಾಗಿ ಟ್ವೀಟ್ (Tweet) ಮಾಡಿದ್ದಾರೆ.

    ಹುಲಿ ಯೋಜನೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಭಾನುವಾರ ಬಂಡೀಪುರಕ್ಕೆ (Bandipur) ಆಗಮಿಸಿದ್ದಾರೆ. ಈ ವೇಳೆ 22 ಕಿಲೋಮೀಟರ್ ಸಫಾರಿ (Safari) ನಡೆಸಿ ಬಂಡೀಪುರದ ಪ್ರಾಣಿ ಪಕ್ಷಿಗಳನ್ನು ವೀಕ್ಷಣೆ ಮಾಡಿದರು. ಇದನ್ನು ಓದಿ: ದೇಶದಲ್ಲಿ ಇದೆ 3167 ಹುಲಿಗಳು – ಪ್ರಕೃತಿಯನ್ನು ರಕ್ಷಿಸುವುದು ಭಾರತೀಯ ಸಂಸ್ಕೃತಿಯ ಭಾಗ: ಮೋದಿ 

    ಮೋದಿ ಸಫಾರಿ ವೇಳೆ ಹುಲಿ ಗೋಚರಿಸಲಿಲ್ಲ ಎಂದು ತಿಳಿಸುವ ಮಾಧ್ಯಮ ವರದಿಯನ್ನು ಸಿದ್ದರಾಮಯ್ಯ ಟ್ವೀಟ್ ಮಾಡಿ ವ್ಯಂಗ್ಯ ಮಾಡಿದ್ದಾರೆ.

    ಹಿಡಿದು ಮಾರಿಬಿಡುತ್ತಾರೆ ಎನ್ನುವ ಭಯಕ್ಕೆ ಯಾವ ಗುಹೆಯೊಳಗೆ ಅಡಗಿ ಕುಳಿತಿದೆಯೋ ಅಯ್ಯೋ ಪಾಪ. ಇನ್ನು ಕೆಲವೇ ದಿನಗಳಲ್ಲಿ ಬಂಡೀಪುರ ಉಳಿಸಿ ಎಂಬ ಅಭಿಯಾನವನ್ನು ಕನ್ನಡಿಗರು ಶುರು ಮಾಡುವಂತೆ ಆಗದಿರಲಿ. ಅದೇ ನೀವು ಕರುನಾಡಿಗೆ ಮಾಡುವ ದೊಡ್ಡ ಉಪಕಾರ ಎಂದು ಬರೆದು ನರೇಂದ್ರ ಮೋದಿಯವರಿಗೆ ಟ್ಯಾಗ್ (Tag) ಮಾಡಿದ್ದಾರೆ. ಇದನ್ನು ಓದಿ: ಕಾಡಿಗೆ ಸಫಾರಿ ಹೋದಾಗ ಸಫಾರಿ ಡ್ರೆಸ್‌ನಲ್ಲಿ ಇರಬೇಕು – ಹೆಚ್‌ಡಿಕೆಗೆ ಅಶ್ವಥ್ ನಾರಾಯಣ್ ತಿರುಗೇಟು

  • ಕಾಡಿಗೆ ಸಫಾರಿ ಹೋದಾಗ ಸಫಾರಿ ಡ್ರೆಸ್‌ನಲ್ಲಿ ಇರಬೇಕು – ಹೆಚ್‌ಡಿಕೆಗೆ ಅಶ್ವಥ್ ನಾರಾಯಣ್ ತಿರುಗೇಟು

    ಕಾಡಿಗೆ ಸಫಾರಿ ಹೋದಾಗ ಸಫಾರಿ ಡ್ರೆಸ್‌ನಲ್ಲಿ ಇರಬೇಕು – ಹೆಚ್‌ಡಿಕೆಗೆ ಅಶ್ವಥ್ ನಾರಾಯಣ್ ತಿರುಗೇಟು

    ಬೆಂಗಳೂರು: ಕಾಡಿಗೆ ಸಫಾರಿಗೆಂದು (Safari) ಹೋದಾಗ ಸಫಾರಿ ಡ್ರೆಸ್‌ನಲ್ಲಿ ಇರಬೇಕು. ನಾಡಿಗೆ ಬಂದಾಗ ನಾಡಿನ ಡ್ರೆಸ್‌ನಲ್ಲಿ ಇರಬೇಕು. ಆದರೆ ಕುಮಾರಸ್ವಾಮಿ (H.D.Kumaraswamy) ಅವರಿಗೆ ಅದು ಎರಡೂ ಹಾಕಲು ಬರುವುದಿಲ್ಲವಲ್ಲ, ಏನುಮಾಡುವುದು ಎಂದು ಮೋದಿ (Narendra Modi) ಬಂಡೀಪುರ (Bandipur) ಅರಣ್ಯ ಭೇಟಿಗೆ ಕುಮಾರಸ್ವಾಮಿ ವ್ಯಂಗ್ಯ ವಿಚಾರವಾಗಿ ಸಚಿವ ಅಶ್ವಥ್ ನಾರಾಯಣ್ (C.N.Ashwath Narayan) ತಿರುಗೇಟು ನೀಡಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರು ಯಾವ ಯಾವ ಜಾಗಕ್ಕೆ ಯಾವ ಯಾವ ವೇಷಗಳನ್ನು ಹಾಕಬೇಕೋ ಅದಕ್ಕೆ ಸೂಕ್ತವಾದ ಬಟ್ಟೆಗಳನ್ನು ಹಾಕುತ್ತಾರೆ. ಇಡೀ ವಿಶ್ವವನ್ನೇ ನಾವು ಪ್ರತಿನಿಧಿಸುತ್ತಿದ್ದೇವೆ. 140 ಕೋಟಿ ಜನರಿಗೆ ನಾಯಕ ಅವರು. ಅಂತಹ ರೋಲ್ ಮಾಡೆಲ್‌ಗೆ (Roll Model) ರೋಲ್ ಮಾಡೆಲ್ ತರಹ ಇರಬೇಡಿ ಸ್ವಾಮಿ ಎಂದು ಹೇಳಲಾಗುವುದಿಲ್ಲ ಎಂದರು. ಇದನ್ನು ಓದಿ: ಮೋದಿ ಕಾಡು ಪ್ರಾಣಿಗಳನ್ನು ನೋಡಿದರೆ ಜನ ವೋಟು ಒತ್ತುತ್ತಾರಾ: ಹೆಚ್ಡಿಕೆ ವ್ಯಂಗ್ಯ 

    ಕೋವಿಡ್ (Covid) ಸಮಯದಲ್ಲಿ ಕುಮಾರಸ್ವಾಮಿ ಎಲ್ಲಿದ್ದರು? ಕಾಂಗ್ರೆಸ್‌ನವರು (Congress) ಲಸಿಕೆ ತೆಗೆದುಕೊಳ್ಳಬೇಡಿ ಎಂದಿದ್ದರು. ಇಡೀ ವಿಶ್ವದಲ್ಲಿ ಭಾರತ ಮಾದರಿಯಾಗಿ ಕೋವಿಡ್ ನಿರ್ವಹಣೆ ಮಾಡಿದೆ. ಸುಮ್ಮನೆ ಪಾಪ ಏನೋ ಹೇಳಬೇಕು ಎಂದು ಹೇಳುತ್ತಿದ್ದಾರೆ ಅಷ್ಟೇ. ಆದರೆ ಜನರು ಬುದ್ದಿವಂತರಿದ್ದಾರೆ ಎಂಬುದು ಗೊತ್ತಿರಲಿ. ಇಂತಹ ಹೇಳಿಕೆಗಳಿಂದ ಅವರು ಸೆಲ್ಫ್ ವಿಕೆಟ್ ಹೊಡೆದುಕೊಳ್ಳುತ್ತಿದ್ದಾರೆ. ಮೋದಿಯವರ ಬಗ್ಗೆ ಕಿಡಿಕಾರಿದರೆ ಅದು ಇವರಿಗೆ ರಿವರ್ಸ್ ಗೇರ್ ಆಗುತ್ತದೆ ಎಂದು ಹರಿಹಾಯ್ದರು. ಇದನ್ನು ಓದಿ: ಬಂಡೀಪುರದಲ್ಲಿ ಮೋದಿ ಸಫಾರಿ – ಪ್ರಕೃತಿ ಸೌಂದರ್ಯ ಸವಿದ ಪ್ರಧಾನಿ 

     

    ನಂದಿನಿ (Nandini) ಉಳಿಸಿ ಅಭಿಯಾನ ವಿಚಾರದ ಕುರಿತು ಮಾತನಾಡಿದ ಅವರು, ನಮ್ಮ ನಂದಿನಿಗೆ ಯಾರೂ ಸರಿಸಾಟಿಯಲ್ಲ. ನಂದಿನಿಯ ಗುಣಮಟ್ಟಕ್ಕಾಗಲಿ, ಬೆಲೆಯಲ್ಲಾಗಲಿ, ವ್ಯವಸ್ಥೆಯಲ್ಲಾಗಲಿ ಯಾವುದೂ ಸರಿಸಾಟಿಯಲ್ಲ. ಇದನ್ನು ರಾಜ್ಯಸರ್ಕಾರವೇ ಸಂಪೂರ್ಣವಾಗಿ ಕೈಗೆತ್ತಿಕೊಂಡು ನಂದಿನಿಗೆ ಎಲ್ಲಾ ರೀತಿಯಾದ ಸಹಕಾರವನ್ನು ನೀಡುತ್ತಿದೆ. ನಂದಿನಿಗೆ ಜಮೀನು ಹಾಗೂ ಹಣ ನೀಡುವ ವಿಚಾರದಲ್ಲಿ ರಾಜ್ಯಸರ್ಕಾರ ಪ್ರೋತ್ಸಾಹ ನೀಡುತ್ತಿದೆ. ಅಲ್ಲದೇ ಒಂದು ಲೀಟರ್ ಹಾಲಿಗೆ 5 ರೂ. ಸಬ್ಸಿಡಿಯನ್ನೂ ಕೊಟ್ಟಿದೆ. ಈ ರೀತಿಯಾಗಿ ನಮ್ಮ ರಾಜ್ಯದ ಹಾಲು ಉತ್ಪಾದಕರು ಮತ್ತು ರೈತರಿಗೆ ಸಂಪೂರ್ಣ ಸಹಕಾರವನ್ನು ನೀಡುತ್ತಿದ್ದೇವೆ. ನಮ್ಮ ಅಭಿಮಾನದ ಸಂಕೇತ ನಂದಿನಿ. ಆದ್ದರಿಂದ ನಂದಿನಿಗೆ ಸರ್ಕಾರದ ಸಂಪೂರ್ಣ ಬೆಂಬಲವಿದೆ. ಹೀಗಾಗಿ ಎಂತಹ ಸ್ಪರ್ಧೆ ಬಂದರೂ ನಮ್ಮ ಹತ್ತಿರ ಯಾರೂ ಬರುವುದಿಲ್ಲ ಎಂದು ಸ್ಪಷ್ಟನೆ ನೀಡಿದರು. ಇದನ್ನು ಓದಿ: ಗದಗ ಜಿಲ್ಲೆಯಲ್ಲಿ ಮಾಜಿ, ಹಾಲಿ ಶಾಸಕರ ಕೊನೆಯ ಕಸರತ್ತು  

    ಬಿಜೆಪಿ (BJP) ಪಟ್ಟಿ ಬಿಡುಗಡೆ ಕುರಿತು ಪ್ರತಿಕ್ರಿಯಿಸಿದ ಅವರು, ನಾಳೆ ಬಿಜೆಪಿಯ ಟಿಕೆಟ್ ಪ್ರಕಟವಾಗುವ ಸಾಧ್ಯತೆಯಿದೆ. ನಾಳೆ ಮೊದಲ ಲಿಸ್ಟ್ ಬಿಡುಗಡೆಯಾಗಲಿದ್ದು, ಎರಡನೇ ಲಿಸ್ಟ್ 13ನೇ ದಿನಾಂಕದಂದು ಬಿಡುಗಡೆಯಾಗಲಿದೆ ಎಂದರು.

    ಹೊಸಬರಿಗೆ ಟಿಕೆಟ್ ಸಿಗಲಿದೆಯಾ ಎಂಬ ಪ್ರಶ್ನೆಗೆ ಕಾದು ನೋಡಿ ಎಂದು ಉತ್ತರಿಸಿದರು. ಇದನ್ನು ಓದಿ: ವಿಕಲಚೇತನ ಕಾರ್ಯಕರ್ತನೊಂದಿಗೆ ಸೆಲ್ಫಿ ಕ್ಲಿಕ್ಕಿಸಿದ ಮೋದಿ

  • ಮೋದಿ ಕಾಡು ಪ್ರಾಣಿಗಳನ್ನು ನೋಡಿದರೆ ಜನ ವೋಟು ಒತ್ತುತ್ತಾರಾ: ಹೆಚ್ಡಿಕೆ ವ್ಯಂಗ್ಯ

    ಮೋದಿ ಕಾಡು ಪ್ರಾಣಿಗಳನ್ನು ನೋಡಿದರೆ ಜನ ವೋಟು ಒತ್ತುತ್ತಾರಾ: ಹೆಚ್ಡಿಕೆ ವ್ಯಂಗ್ಯ

    ಬೆಂಗಳೂರು: ಮೋದಿ (Narendra Modi) ಕಾಡು ಪ್ರಾಣಿಗಳನ್ನು ನೋಡಲು ಬಂದ ತಕ್ಷಣ ಜನ ವೋಟು ಒತ್ತಿ ಬಿಡ್ತಾರಾ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ (H.D.Kumaraswamy) ವ್ಯಂಗ್ಯವಾಡಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸಂಕಷ್ಟದಲ್ಲಿ, ಪ್ರವಾಹದಿಂದ ಜನ ಬೀದಿಗೆ ಬಂದಾಗ ಮೋದಿ ಬರಲಿಲ್ಲ. ಈಗ ಚುನಾವಣೆ ಹೊತ್ತಿನಲ್ಲಿ ಸಫಾರಿಗೆ (Safari) ಬಂದಿದ್ದಾರೆ. ವನ್ಯಜೀವಿಗಳನ್ನು ರಕ್ಷಣೆ ಮಾಡಬೇಕು. ಆದರೆ ವನ್ಯ ಜೀವಿಗಳಿಂದ ಎಷ್ಟು ದಾಳಿ ಆಗಿದೆ ಎಂಬ ಮಾಹಿತಿ ಮೋದಿಯವರಿಗೆ ಇದೆಯೇ? ದಾಳಿಗೊಳಗಾದ ಒಂದು ಕುಟುಂಬಕ್ಕಾದರೂ ಮೋದಿ ಭೇಟಿ ಕೊಟ್ಟಿದ್ದಾರಾ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ವಿಕಲಚೇತನ ಕಾರ್ಯಕರ್ತನೊಂದಿಗೆ ಸೆಲ್ಫಿ ಕ್ಲಿಕ್ಕಿಸಿದ ಮೋದಿ

    ಅರಣ್ಯ ಪ್ರದೇಶಗಳಲ್ಲಿ ಆಹಾರದ ಕೊರತೆ ಇದೆ ಎಂಬ ವರದಿಯಿದೆ. ಪೌಷ್ಟಿಕಾಂಶಯುಕ್ತ ಆಹಾರದ ಕೊರತೆ ವಿಚಾರವಾಗಿ ಚರ್ಚೆಯಾಗಿದೆ. ಈ ಬಗ್ಗೆ ಮೋದಿಯವರು ಗಮನ ಹರಿಸಿದ್ದಾರಾ? ಕೇವಲ ಸೂಟು ಬೂಟು ಹಾಕಿಕೊಂಡು ಬಂದರೆ ಆಗುತ್ತದೆಯೇ? ನಾಡಿನ ಜನ ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ. ಇದನ್ನೂ ಓದಿ: ಕೋವಿಡ್ ಕೇಸ್ ತೀವ್ರ ಹೆಚ್ಚಳ – ಕೇರಳ, ಹರಿಯಾಣ, ಪುದುಚೇರಿಯಲ್ಲಿ ಮತ್ತೆ ಮಾಸ್ಕ್ ಕಡ್ಡಾಯ

  • ಏ. 9ಕ್ಕೆ ಮೋದಿ ಬಂಡೀಪುರ ಭೇಟಿ – ಪ್ರವಾಸಿಗರಿಗೆ ಇಂದಿನಿಂದ 4 ದಿನ ಸಫಾರಿ, ರೆಸಾರ್ಟ್ ವಾಸ್ತವ್ಯ ಬಂದ್

    ಏ. 9ಕ್ಕೆ ಮೋದಿ ಬಂಡೀಪುರ ಭೇಟಿ – ಪ್ರವಾಸಿಗರಿಗೆ ಇಂದಿನಿಂದ 4 ದಿನ ಸಫಾರಿ, ರೆಸಾರ್ಟ್ ವಾಸ್ತವ್ಯ ಬಂದ್

    ಚಾಮರಾಜನಗರ: ವಿಧಾನಸಭಾ ಚುನಾವಣೆ (Assembly Election) ಹಿನ್ನೆಲೆ ರಾಜ್ಯಕ್ಕೆ ಮೇಲಿಂದ ಮೇಲೆ ಪ್ರವಾಸ ಕೈಗೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಇದೀಗ ಮತ್ತೊಮ್ಮೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಈ ಬಾರಿ ಮೋದಿ ಅವರು ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ (Bandipur National Park) ಭೇಟಿ ನೀಡಿ ಸಫಾರಿ ನಡೆಸಲಿದ್ದಾರೆ.

    ಏಪ್ರಿಲ್ 9 ರಾಷ್ಟ್ರೀಯ ಹುಲಿ ದಿನ. ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದು, ಸಫಾರಿ ನಡೆಸಲಿದ್ದಾರೆ. ಹುಲಿ ಯೋಜನೆಗೆ 50 ವರ್ಷ ತುಂಬಿದ ಹಿನ್ನೆಲೆ ರಾಜ್ಯಕ್ಕೆ ಆಗಮಿಸಲಿರುವ ಮೋದಿ, ಮೈಸೂರಿನಲ್ಲಿ 3 ದಿನಗಳ ಮೆಗಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಇತ್ತೀಚಿನ ಹುಲಿ ಗಣತಿ ವರದಿ, ಹುಲಿ ಸಂರಕ್ಷಣೆಗಾಗಿ ಸರ್ಕಾರ ಕೈಗೊಂಡ ಕ್ರಮಗಳ ವರದಿ, ಮತ್ತು ನಾಣ್ಯ ಸ್ಮರಣಿಕೆಯನ್ನು ಮೈಸೂರಿನಲ್ಲಿ ಬಿಡುಗಡೆ ಮಾಡಲಿದ್ದಾರೆ.

    ಪ್ರಧಾನಿ ಭೇಟಿ ಹಿನ್ನೆಲೆ ಭದ್ರತಾ ದೃಷ್ಟಿಯಿಂದ ಏಪ್ರಿಲ್ 6 ರಿಂದ 9 ರವರೆಗೆ ಬಂಡೀಪುರದಲ್ಲಿ ಸಫಾರಿ ಬಂದ್ ಇರಲಿದೆ. ಅಲ್ಲದೇ ಬಂಡೀಪುರ ವ್ಯಾಪ್ತಿಯ ಎಲ್ಲಾ ಹೋಂ ಸ್ಟೇ, ರೆಸಾರ್ಟ್, ಲಾಡ್ಜ್‌ಗಳನ್ನು ತಾತ್ಕಾಲಿಕವಾಗಿ ಮುಚ್ಚಲು ಡಿಸಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ ಅಭ್ಯರ್ಥಿಗಳ 2ನೇ ಪಟ್ಟಿ ಇಂದು ರಿಲೀಸ್?

    ಇದೇ ವೇಳೆ ಮುದುಮಲೈ ಹುಲಿ ರಕ್ಷಿತಾರಣ್ಯದಲ್ಲಿಯೂ 4 ದಿನ ಸಫಾರಿ ಬಂದ್ ಇರಲಿದೆ. ಪ್ರಧಾನಿ ತಮ್ಮ ಭೇಟಿ ವೇಳೆ ಆಸ್ಕರ್ ಖ್ಯಾತಿಯ ದಿ ಎಲಿಫೆಂಟ್ ವಿಸ್ಪರರ್ಸ್ ಸಾಕ್ಷ್ಯಚಿತ್ರದ ನಿಜ ಪಾತ್ರಧಾರಿಗಳನ್ನು ಭೇಟಿಮಾಡಲಿದ್ದಾರೆ.

    ಚುನಾವಣೆ ದಿನಾಂಕ ಹಾಗೂ ನೀತಿ ಸಂಹಿತೆ ಜಾರಿಯಾದ ನಂತರ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ ಚುನಾವಣೆ ದೃಷ್ಟಿಯಲ್ಲಿ ಜನರನ್ನು ಯಾವ ರೀತಿ ಮೋಡಿ ಮಾಡಲಿದ್ದಾರೆಂದು ಕಾದು ನೋಡಬೇಕಿದೆ. ಇದನ್ನೂ ಓದಿ: ಯುಪಿಎಯಿಂದ ನಿರೀಕ್ಷಿಸಿದ್ದೆ, ಬಿಜೆಪಿ ಮುಸ್ಲಿಮರಿಗೆ ಪದ್ಮ ಪ್ರಶಸ್ತಿ ನೀಡಲ್ಲ ಎಂದು ಭಾವಿಸಿದ್ದೆ: ಮೋದಿಗೆ ರಶೀದ್ ಅಹ್ಮದ್ ಖಾದ್ರಿ ಧನ್ಯವಾ

  • ಪ್ರಧಾನಿ ಮೋದಿ ಭೇಟಿ – ಏ.8, 9 ರಂದು ಸಾರ್ವಜನಿಕರಿಗೆ ಬಂಡೀಪುರ ಸಫಾರಿ ಬಂದ್

    ಪ್ರಧಾನಿ ಮೋದಿ ಭೇಟಿ – ಏ.8, 9 ರಂದು ಸಾರ್ವಜನಿಕರಿಗೆ ಬಂಡೀಪುರ ಸಫಾರಿ ಬಂದ್

    ಚಾಮರಾಜನಗರ: ಏಪ್ರಿಲ್ 9 ರಂದು ಬಂಡೀಪುರಕ್ಕೆ (Bandipura) ಪ್ರಧಾನಿ ನರೇಂದ್ರ ಮೋದಿ (Narendra Modi) ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಭದ್ರತಾ ಕಾರಣಗಳಿಂದ ಏಪ್ರಿಲ್ 8 ಮತ್ತು 9 ರಂದು ಪ್ರವಾಸಿಗರಿಗೆ ಸಫಾರಿ ಬಂದ್ ಮಾಡಲಾಗಿದೆ.

    ಏಪ್ರಿಲ್ 4 ರಿಂದ 9 ರ ವರೆಗೂ ಬಂಡೀಪುರದಲ್ಲಿ ಅರಣ್ಯ ಇಲಾಖೆಗೆ ಸೇರಿದ ಅತಿಥಿಗೃಹ, ಕಾಟೇಜ್‌‌ಗಳ ಬುಕಿಂಗ್ ಸಹ ಬಂದ್ ಮಾಡಲಾಗಿದೆ ಎಂದು ಬಂಡೀಪುರ ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಏಪ್ರಿಲ್‌ 11ರ ವರೆಗೆ ಮಾಡಾಳ್‌ಗೆ ಜೈಲು – ಜೈಲಿನ ಪ್ರಕಾರವೇ ಊಟ

    ದೇಶದಲ್ಲಿ ಹುಲಿ ಯೋಜನೆಗೆ 50 ವರ್ಷ ಹಿನ್ನಲೆ ಮೈಸೂರಿನಲ್ಲಿ 3 ದಿನಗಳ ಮೆಗಾ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಇತ್ತೀಚಿನ ಹುಲಿಗಣತಿ ವರದಿ, ಹುಲಿಸಂರಕ್ಷಣೆಗಾಗಿ ಸರ್ಕಾರ ಕೈಗೊಂಡ ಕ್ರಮಗಳ ವರದಿ ಹಾಗೂ ನಾಣ್ಯ ಸ್ಮರಣಿಕೆಯನ್ನು ಅವರು ಮೈಸೂರಿನಲ್ಲಿ ಬಿಡುಗಡೆ ಮಾಡಲಿದ್ದಾರೆ.

    ಅಂದೇ ಬಂಡೀಪುರಕ್ಕೂ ಭೇಟಿ ನೀಡಲಿರುವ ಮೋದಿ ಸಫಾರಿ ನಡೆಸಲಿದ್ದಾರೆ. ಹೀಗಾಗಿ ಸಫಾರಿ ಮಾರ್ಗಗಳನ್ನು ಅರಣ್ಯ ಇಲಾಖೆ ದುರಸ್ತಿ ಮಾಡಲು ಮುಂದಾಗಿದೆ. ಇದನ್ನೂ ಓದಿ: ಹಾಸನ ಟಿಕೆಟ್‌ಗೆ ಒತ್ತಡ ತರಬೇಡಿ, ನಾವು ಕೊಡುವ ಅಭ್ಯರ್ಥಿ ಪರ ಕೆಲಸ ಮಾಡಿ: ದೇವೇಗೌಡ ಕಿವಿಮಾತು

  • ಬಂಡೀಪುರದಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಅವಕಾಶವಿಲ್ಲ – ಪ್ರವಾಸಿಗರಿಗೆ ಕಾಟೇಜ್ ಕೊಡದಿರಲು ನಿರ್ಧಾರ

    ಬಂಡೀಪುರದಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಅವಕಾಶವಿಲ್ಲ – ಪ್ರವಾಸಿಗರಿಗೆ ಕಾಟೇಜ್ ಕೊಡದಿರಲು ನಿರ್ಧಾರ

    ಚಾಮರಾಜನಗರ: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಬಂಡೀಪುರದಲ್ಲಿ (Bandipur) ಅರಣ್ಯ ಇಲಾಖೆಗೆ ಸೇರಿದ ಕಾಟೇಜ್, ಗೆಸ್ಟ್‌ಹೌಸ್ ಹಾಗೂ ರೂಮ್‌ಗಳಲ್ಲಿ ಕೊಠಡಿಗಳಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧಿಸಲಾಗಿದೆ. ಆದರೆ ಎಂದಿನಂತೆ ಸಫಾರಿ ಇರಲಿದೆ.

    ಹೊಸ ವರ್ಷದ ಮೋಜು, ಮಸ್ತಿ ಹೆಸರಿನಲ್ಲಿ ಪರಿಸರಕ್ಕೆ ಧಕ್ಕೆಯಾಗಬಾರದೆಂಬ ಕಾರಣಕ್ಕೆ ವಾಸ್ತವ್ಯ ನಿರ್ಬಂಧಿಸಿರುವ ಅರಣ್ಯ ಇಲಾಖೆ ಖಾಸಗಿ ರೆಸಾರ್ಟ್‌ಗಳಲ್ಲೂ ಡಿಜೆ ಹಾಕುವಂತಿಲ್ಲ, ಪಾರ್ಟಿಗಳನ್ನು ಜೋರಾಗಿ ಆಯೋಜನೆ ಮಾಡುವಂತಿಲ್ಲ ಎಂದು ಸೂಚಿಸಲಾಗಿದೆ. ಪ್ರವಾಸಿಗರು ಮಾಸ್ಕ್ (Mask) ಧರಿಸಿ ಕೋವಿಡ್ (Covid19) ಮಾರ್ಗಸೂಚಿ ಪಾಲಿಸುತ್ತ ಸಫಾರಿ (Safari) ಮಾಡಬಹುದು ಎಂದು ಬಂಡೀಪುರ ಡಿಸಿಎಫ್ ರಮೇಶ್‌ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಹೊಸ ವರ್ಷಾಚರಣೆ; ದಶಪಥ ಹೆದ್ದಾರಿಯ ರಾಮನಗರ- ಚನ್ನಪಟ್ಟಣ ಬೈಪಾಸ್ ಬಂದ್

    ಇನ್ನೂ ಹೊಸ ವರ್ಷಕ್ಕೂ ಮುನ್ನಾ ದಿನ ಸಫಾರಿಗೆ ಬಂಡೀಪುರಕ್ಕೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ನಾಳೆಯು ಹೆಚ್ಚಿನ ಪ್ರಮಾಣದ ಪ್ರವಾಸಿಗರು ಬರುವ ನಿರೀಕ್ಷೆ ಇದೆ‌. ಇನ್ನೊಂದೆಡೆ ನಾಳೆ ಮಲೆ ಮಹದೇಶ್ವರ ಬೆಟ್ಟಕ್ಕೆ ಒಂದು ಲಕ್ಷ ಜನರು ಬರುವ ನಿರೀಕ್ಷೆಯಿದ್ದು, ಮಲೆ ಮಹದೇಶ್ವರ ಬೆಟ್ಟದಲ್ಲೂ ರೂಂಗಳ ಮುಂಗಡ ಬುಕ್ಕಿಂಗ್ ಇರುವುದಿಲ್ಲ. ಮೊದಲು ಬಂದವರಿಗೆ ಆದ್ಯತೆಯ ಮೇರೆಗೆ ಕೊಠಡಿ ಕೊಡಲಾಗುತ್ತಿದೆ. ಇದನ್ನೂ ಓದಿ: ಕಾಂಗ್ರೆಸ್ ತುಕ್ಡೆ ತುಕ್ಡೆ ಗ್ಯಾಂಗ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ: ಅಮಿತ್‌ ಶಾ

    Live Tv
    [brid partner=56869869 player=32851 video=960834 autoplay=true]

  • ಹುಲಿ ಫೋಟೋ ಕ್ಲಿಕ್ಕಿಸಿ ಎಡವಟ್ಟು ಮಾಡಿಕೊಂಡ `ಕೆಜಿಎಫ್ 2′ ನಟಿ ರವೀನಾಗೆ ಸಂಕಷ್ಟ

    ಹುಲಿ ಫೋಟೋ ಕ್ಲಿಕ್ಕಿಸಿ ಎಡವಟ್ಟು ಮಾಡಿಕೊಂಡ `ಕೆಜಿಎಫ್ 2′ ನಟಿ ರವೀನಾಗೆ ಸಂಕಷ್ಟ

    `ಕೆಜಿಎಫ್ 2′ ನಟಿ ರವೀನಾ ಟಂಡನ್ ಮತ್ತೆ ಸುದ್ದಿಯಲ್ಲಿದ್ದಾರೆ. ಹುಲಿಯ ಫೋಟೋ ಕ್ಲಿಕ್ಕಿಸಿದ್ದಕ್ಕೆ ಎಡವಟ್ಟು ಮಾಡಿಕೊಂಡಿದ್ದಾರೆ. ಹೊಸ ಸಂಕಷ್ಟವೊಂದು ನಟಿಗೆ ಎದುರಾಗಿದೆ. ನಟಿಯ ವಿಚಾರಣೆಗೆ ಆದೇಶ ನೀಡಲಾಗಿದೆ.

    ಬಾಲಿವುಡ್ ನಟಿ ರವೀನಾ ಟಂಡನ್ ಹುಲಿಯ ಫೋಟೋ ಕ್ಲಿಕ್ಕಿಸಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರಾಣಿಗಳ ಬಗ್ಗೆ ಅಪಾರ ಪ್ರೀತಿ ಹೊಂದಿರುವ ನಟಿ ರವೀನಾ ಇತ್ತೀಚಿಗಷ್ಟೆ ಸಫಾರಿಗೆ ತೆರಳಿದ್ದರು. ಸತ್ಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡಿದ್ದ ರವೀನಾ ಫೋಟೋ ಮತ್ತು ವಿಡಿಯೋಗಳನ್ನು ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಈ ವಿಡಿಯೋದಲ್ಲಿ ನಟಿ ರವೀನಾ ಹುಲಿ ಸಮೀಪ ಹೋಗಿ ವಿಡಿಯೋ ಮಾಡಿದ್ದಾರೆ, ತೊಂದರೆ ನೀಡಿದ್ದಾರೆ ಎಂದು ಮೀಸಲು ಅಧಿಕಾರಿಗಳು ತನಿಖೆ ಆದೇಶಿಸಿದೆ ಎನ್ನಲಾಗಿದೆ. ಮೂಲಗಳ ಪ್ರಕಾರ ವಾಹನ ಚಾಲಕ ಮತ್ತು ಕರ್ತವ್ಯದಲ್ಲಿರುವ ಅಧಿಕಾರಿಗಳು ಹಾಗೂ ರವೀನಾ ಅವರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲಾಗುವುದು ಎಂದು ಅರಣ್ಯ ಉಪ ವಿಭಾಗಾಧಿಕಾರಿ ತಿಳಿಸಿದ್ದಾರೆ ಎನ್ನಲಾಗಿದೆ.

    ಈ ಬೆನ್ನಲ್ಲೇ ನಟಿ ರವೀನಾ ಟಂಡನ್ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಅರಣ್ಯ ಇಲಾಖೆಯಿಂದ ಪರವಾನಗಿ ಪಡೆದ ಜೀಪ್‌ನಲ್ಲಿಯೇ ತಾನು ಪ್ರಯಾಣಿಸಿದ್ದು ಎಂದು ಸ್ಪಷ್ಟನೆ ನೀಡಿದ್ದಾರೆ. ಇಲಾಖೆ ಗೊತ್ತುಪಡಿಸಿದ ಪ್ರವಾಸೋದ್ಯಮ ಮಾರ್ಗದಿಂದ ಹೊರಹೋಗಿಲ್ಲ ಎಂದು ಹೇಳಿದ್ದಾರೆ. ಇಲಾಖೆಯಿಂದ ಒದಗಿಸಲಾದ ತರಬೇತಿ ಪಡೆದ ಮಾರ್ಗದರ್ಶಿಗಳು ಮತ್ತು ಚಾಲಕರು ಸಫಾರಿಯಲ್ಲಿ ಜೊತೆಗಿದ್ದರು ಎಂದು ಹೇಳಿದ್ದಾರೆ. ರವೀನಾ ನವೆಂಬರ್ 22ರಂದು ಸತ್ಪುರ ಮೀಸಲು ಪ್ರದೇಶಕ್ಕೆ ಭೇಟಿ ನೀಡಿದ್ದರು.

    ರವೀನಾ ಇದ್ದ ಸಫಾರಿ ಜೀಪ್ ಹುಲಿಯ ಸಮೀಪ ತಲುಪುತ್ತಿರುವುದನ್ನು ಗಮನಿಸಬಹುದು. ಹುಲಿ ಘರ್ಜಿಸುತ್ತಿರುವುದನ್ನು ಕೇಳಬಹುದು. ಹುಲಿ ಕಾಣಿಸುವುದೇ ಅಪರೂಪ. ಸಿಕ್ಕ ಅವಕಾಶವನ್ನು ಸರಿಯಾಗಿ ಉಪಯೋಗಿಸಿಕೊಳ್ಳಲು ರವೀನಾ ಟಂಡನ್ ಅವರು ಕ್ಯಾಮೆರಾ ಹಿಡಿದು ಫೋಟೋ ಮತ್ತು ವಿಡಿಯೋ ಚಿತ್ರಿಸಿಕೊಂಡಿದ್ದಾರೆ. ಇದನ್ನೂ ಓದಿ: ಕಾಶ್ಮೀರ್‌ ಫೈಲ್ಸ್‌ ಕಾಲ್ಪನಿಕ ಅಂತಾ ಸಾಬೀತುಪಡಿಸಿದ್ರೆ, ಸಿನಿಮಾ ಮಾಡೋದನ್ನೇ ಬಿಡ್ತೀನಿ- ವಿವೇಕ್ ಅಗ್ನಿಹೋತ್ರಿ

    ಅವರ ವರ್ತನೆಯಿಂದ ಹುಲಿಗೂ ಕಿರಿಕಿರಿ ಆಗಿದ್ದು, ಅದು ಘರ್ಜಿಸಿ ಮುಂದೆ ಸಾಗಿದೆ. ಮಧ್ಯಪ್ರದೇಶದ ನರ್ಮದಾಪುರಂ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ವಿಡಿಯೋ ವೈರಲ್ ಆದ ಬಳಿಕ ಅರಣ್ಯದ ಉಪ ವಿಭಾಗಾಧಿಕಾರಿ ಧೀರಜ್ ಸಿಂಗ್ ಚೌಹಾಣ್ ಹಿರಿಯ ಅಧಿಕಾರಿಗಳ ನಿರ್ದೇಶನದ ನಂತರ, ಈ ಘಟನೆಯ ಕುರಿತು ತನಿಖೆಯನ್ನು ಪ್ರಾರಂಭಿಸಿ ಎಂದು ಹೇಳಿದರು.

    Live Tv
    [brid partner=56869869 player=32851 video=960834 autoplay=true]