Tag: ಸಭಾಧ್ಯಕ್ಷರು

  • ಸಭಾಧ್ಯಕ್ಷರಿಗೆ ಅಗೌರವ ತೋರಿದ ಸಿದ್ದರಾಮಯ್ಯ ಕ್ಷಮೆಯಾಚಿಸಬೇಕು – ಈಶ್ವರಪ್ಪ

    ಸಭಾಧ್ಯಕ್ಷರಿಗೆ ಅಗೌರವ ತೋರಿದ ಸಿದ್ದರಾಮಯ್ಯ ಕ್ಷಮೆಯಾಚಿಸಬೇಕು – ಈಶ್ವರಪ್ಪ

    ದಾವಣಗೆರೆ: ಸಿದ್ದರಾಮಯ್ಯ ಸಭಾಧ್ಯಕ್ಷರ ಸ್ಥಾನಕ್ಕೆ ಅಗೌರವ ತೋರುತ್ತಿದ್ದಾರೆ. ಕೂಡಲೇ ಕ್ಷಮೆಯಾಚಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಕುಮಾರ್ ಸಭಾಧ್ಯಕ್ಷರಾಗಿದ್ದಾಗ ಇಬ್ಬರೂ ಒಬ್ಬರಿಗೊಬ್ಬರು ಹೊಗಳಿಕೊಳ್ಳುತ್ತಿದ್ದರು. ರಮೇಶ್ ಕುಮಾರ್ ಅವರಿಗೆ ಸಿದ್ದರಾಮಯ್ಯ ಅಂಬೇಡ್ಕರ್ ಎನ್ನುತ್ತಿದ್ದರು. ಸಿದ್ದರಾಮಯ್ಯ ಅವರಿಗೆ ರಮೇಶ್ ಕುಮಾರ್ ದೇವರಾಜ್ ಅರಸ್ ಎಂದು ಹೇಳಿಕೊಳ್ಳುತ್ತಿದ್ದರು. ಆದರೆ ಈಗ ಸಭಾಧ್ಯಕ್ಷರ ವಿರುದ್ಧ ಏಕ ವಚನದಲ್ಲಿ ಕರೆಯುತ್ತಿದ್ದಾರೆ. ಸಿದ್ದರಾಮಯ್ಯ ಸಂವಿಧಾನದ ಬಗ್ಗೆ ಮಾತನಾಡುತ್ತಾರೆ. ಸಭಾಧ್ಯಕ್ಷರಿಗೆ ಯಾವ ರೀತಿ ಗೌರವ ಕೊಡಬೇಕು ಎನ್ನುವುದು ಗೊತ್ತಿಲ್ಲವೇ ಎಂದು ಪ್ರಶ್ನಿಸಿದರು.

    ಸಭಾಧ್ಯಕ್ಷರಿಗೆ ಗೌರವ ಕೊಡದಿರುವುರ ಬಗ್ಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪ್ರತಿಕ್ರಿಯೆ ನೀಡುತ್ತಾರೆ ಎನ್ನುವ ನಿರೀಕ್ಷೆ ಇದೆ. ಈ ಕುರಿತು ಅವರೇ ಸ್ಪಷ್ಟಪಡಿಸಬೇಕು ಎಂದರು.

    ಡಿಕೆಶಿಗೆ ಜಾಮೀನು ಸಿಕ್ಕಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಡಿಕೆಶಿ ವಿಚಾರವನ್ನು ನಾವು ರಾಜಕೀಯವಾಗಿ ಬಳಸಿಕೊಳ್ಳುವುದಿಲ್ಲ. ಅವರು ನೋವಿನಲ್ಲಿದ್ದಾರೆ, ದೇವರು ನೋವನ್ನು ಭರಿಸುವ ಶಕ್ತಿನೀಡಲಿ. ಕುಟುಂಬದವರು ಕಣ್ಣೀರು ಹಾಕುತ್ತಿರುವುದನ್ನು ಮಾಧ್ಯಮಗಳಲ್ಲಿ ನೋಡಿದ್ದೇವೆ. ಡಿಕೆಶಿ ಮನೆಗೆ ತೆರಳಿ ಅವರಿಗೆ ಸಾಂತ್ವನ ಹೇಳಲಿ ಎಂದು ತಿಳಿಸಿದ್ದಾರೆ.

    ಹರ್ಯಾಣದಲ್ಲಿ ನಮ್ಮ ಪಕ್ಷವೇ ಅಧಿಕಾರಕ್ಕೆ ಬರಲಿದೆ, ನಾವೇ ಮುಖ್ಯಮಂತ್ರಿಯಾಗುತ್ತೇವೆ ಎಂದು ಮಹಾರಾಷ್ಟ್ರ ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿದರು.

    ಪಾಲಿಕೆ ಚುನಾವಣೆಯ ಬಗ್ಗೆ ಮಾತನಾಡಿದ ಅವರು, ಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಲಿದೆ. ಬಿಜೆಪಿ ಅಧಿಕಾರದ ಗದ್ದುಗೆ ಏರಲಿದೆ. ಕಾಂಗ್ರೆಸ್ ಪಕ್ಷ ಇನ್ನು ರಾಜ್ಯದಲ್ಲಿ ಇತ್ತು ಎನ್ನುವ ಸ್ಥಿತಿ ನಿರ್ಮಾಣವಾಗಲಿದೆ. ಕಾಂಗ್ರೆಸ್ ಜಿಲ್ಲೆಯಲ್ಲಿ, ರಾಜ್ಯದಲ್ಲಿ, ದೇಶದಲ್ಲಿ ಇತ್ತು ಎನ್ನುವ ಸ್ಥಿತಿ ಬರಲಿದೆ. ಅಜ್ಜಿ ತನ್ನ ತುರುಬು ಇತ್ತು ಎಂದು ನೆನಪಿಸಿಕೊಳ್ಳುವಂತೆ. ಜನರು ಒಂದು ಕಾಲದಲ್ಲಿ ಕಾಂಗ್ರೆಸ್ ಇತ್ತು ಎನ್ನುವಂತಾಗುತ್ತೆ ಎಂದು ಹರಿಹಾಯ್ದರು.

  • ಇಂದಿರಾ ಕ್ಯಾಂಟೀನ್‍ನಲ್ಲಿ ಭ್ರಷ್ಟಾಚಾರ ಹೇಗೆ ನಡೆಯುತ್ತಿದೆ: ದಾಖಲೆಯೊಂದಿಗೆ ಅಕ್ರಮ ಬಿಚ್ಚಿಟ್ಟ ರಾಮದಾಸ್

    ಇಂದಿರಾ ಕ್ಯಾಂಟೀನ್‍ನಲ್ಲಿ ಭ್ರಷ್ಟಾಚಾರ ಹೇಗೆ ನಡೆಯುತ್ತಿದೆ: ದಾಖಲೆಯೊಂದಿಗೆ ಅಕ್ರಮ ಬಿಚ್ಚಿಟ್ಟ ರಾಮದಾಸ್

    ಬೆಂಗಳೂರು: ಇಂದಿರಾ ಕ್ಯಾಂಟೀನ್ ಅವ್ಯವಹಾರ ದಾಖಲೆಗಳನ್ನು ನೀಡಲು ಮುಂದಾಗಿದ್ದೆ, ಈ ವೇಳೆ ಆಡಳಿತ ಪಕ್ಷವು ಹಿಟ್ ಅಂಡ್ ರನ್ ಅಂತ ಹೇಳಿತು. ಆದರೆ ಇದು ಹಿಟ್ ಅಂಡ್ ರನ್ ಅಲ್ಲ, ಹಿಟ್ ಅಂಡ್ ಕ್ಯಾಚ್ ಎಂದು ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ವ್ಯಂಗ್ಯವಾಡಿದರು.

    ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಜೆಟ್ ಅಧಿವೇಶನದಲ್ಲಿ ಇಂದಿರಾ ಕ್ಯಾಂಟೀನ್ ಅವ್ಯವಹಾರದ ಬಗ್ಗೆ ಪ್ರಸ್ತಾಪ ಮಾಡಿದ್ದೆ. ಆದರೆ ದಾಖಲೆಗಳ ಸಮೇತ ಆರೋಪ ಮಾಡುವಂತೆ ಸರ್ಕಾರ ಸೂಚಿಸಿತ್ತು. ಅದನ್ನು ಚಾಲೆಂಜ್ ಆಗಿ ತೆಗೆದುಕೊಂಡು ನಾನು ದಾಖಲೆಗಳ ಸಮೇತ ಬಂದಿದ್ದೆ. ಹೀಗಾಗಿ ಇವತ್ತು ಕಲಾಪದಲ್ಲಿ ಚರ್ಚೆಗೆ ತೆಗೆದುಕೊಳ್ಳಬೇಕು ಅಂತಾ ಎಂದು ಮನವಿ ಮಾಡಿದ್ದೆ. ಇದಕ್ಕೆ ಸಭಾಧ್ಯಕ್ಷ ರಮೇಶ್ ಕುಮಾರ್ ಅವರು ಅವಕಾಶ ನೀಡಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಇಂದಿರಾ ಕ್ಯಾಂಟೀನ್ ಹಗರಣ ಸಂಬಂಧ ಹೈಕೋರ್ಟ್ ನಲ್ಲಿ ದೂರು ನೀಡುತ್ತೇನೆ. ಅಕ್ರಮಕ್ಕೆ ಒಂದು ತಾರ್ಕಿಕ ಅಂತ್ಯ ಕಾಣುವವರೆಗೂ ಹೋರಾಟ ಮಾಡುತ್ತೇನೆ ಎಂದು ಅವರು ಗರಂ ಆಗಿಯೇ ಮಾತನಾಡಿದರು.

    ರಾಮದಾಸ್ ಆರೋಪಗಳೇನು?
    ರಾಜ್ಯದಲ್ಲಿ 308 ಇಂದಿರಾ ಕ್ಯಾಂಟೀನ್‍ಗಳು ಇದ್ದು, ಪ್ರತಿನಿತ್ಯ 6.75 ಲಕ್ಷ ಮಂದಿಗೆ ಅನುಕೂಲವಾಗುತ್ತದೆ. ರಾಜ್ಯ ಸರ್ಕಾರ ಪ್ರತಿ ತಿಂಗಳು ಇದಕ್ಕಾಗಿ 24 ಕೋಟಿ ರೂ. ನೀಡುತ್ತದೆ. ಆದರೆ ಸರಾಸರಿ ಕೇವಲ 100 ರಿಂದ 150 ಮಂದಿ ಮಾತ್ರ ಅನುಕೂಲ ಆಗುತ್ತಿದೆ. ಲೆಡ್ಜ್‍ರಗಳನ್ನು ಇಟ್ಟು ಲೆಕ್ಕಕೊಡದೇ ಸುಳ್ಳು ಲೆಕ್ಕ ಕೊಡುತ್ತಿದ್ದಾರೆ. ಹೊರ ರಾಜ್ಯದವರಿಗೆ ಮಾತ್ರ ಇಂದಿರಾ ಕ್ಯಾಂಟೀನ್‍ಗಳಲ್ಲಿ ಕೆಲಸ ಕೊಟ್ಟಿದ್ದಾರೆ. ಒಂದೇ ದಿನ ಎರಡು ಒಪ್ಪಂದಗಳನ್ನು ಮಾಡಿಕೊಳ್ಳುತ್ತಾರೆ. ಒಂದು ಒಪ್ಪಂದದಲ್ಲಿ 57 ರೂ., 60 ರೂ. ರೀತಿ ಒಪ್ಪಂದ ಆಗಿದೆ. ದಿನಕ್ಕೆ ಮೂರು ಹೊತ್ತಿನ ಒಂದು ಊಟಕ್ಕೆ ಈ ದರ ಕೊಟ್ಟಿದ್ದಾರೆ. ಹೆಚ್ಚಳವಾಗಿರುವ ಹಣದಲ್ಲಿ ಯಾರಿಗೆ ಕಿಕ್‍ಬ್ಯಾಕ್ ಹೋಗುತ್ತದೆ ಎನ್ನುವುದನ್ನ ಸ್ಪಷ್ಟಪಡಿಸಬೇಕು. ದುಬೈ ಮೂಲದ ಕೆಇಎಫ್, ಇನ್‍ಫ್ರಾ ಲಿಮಿಟೆಡ್‍ಗೆ ಗುತ್ತಿಗೆ ನೀಡಿ ಅಕ್ರಮ ಎಸಗಲಾಗುತ್ತಿದೆ ಎಂದು ಎಂದು ಆರೋಪಿಸಿದರು.