Tag: ಸಮಾಜವಾದಿ ಪಕ್ಷ

  • ಸತತ 3ನೇ ಬಾರಿಗೆ ಸಮಾಜವಾದಿ ಪಕ್ಷ ಅಧ್ಯಕ್ಷರಾಗಿ ಅಖಿಲೇಶ್‌ ಯಾದವ್‌ ಆಯ್ಕೆ

    ಸತತ 3ನೇ ಬಾರಿಗೆ ಸಮಾಜವಾದಿ ಪಕ್ಷ ಅಧ್ಯಕ್ಷರಾಗಿ ಅಖಿಲೇಶ್‌ ಯಾದವ್‌ ಆಯ್ಕೆ

    ಲಕ್ನೋ: ಸಮಾಜವಾದಿ ಪಕ್ಷದ (Samajwadi Party) ಅಧ್ಯಕ್ಷರಾಗಿ ಸತತ 3ನೇ ಬಾರಿಯೂ ಅಖಿಲೇಶ್‌ ಯಾದವ್‌ (Akhilesh Yadav) ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

    ಲಕ್ನೋದ ರಮಾಬಾಯಿ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಸಮಾಜವಾದಿ ಪಕ್ಷದ ರಾಷ್ಟ್ರೀಯ ಸಮಾವೇಶದಲ್ಲಿ ಚುನಾವಣಾ ಫಲಿತಾಂಶವನ್ನು ಪಕ್ಷದ ಪ್ರಧಾನ ಕಾರ್ಯದರ್ಶಿ ರಾಮ್ ಗೋಪಾಲ್ ಯಾದವ್ ಪ್ರಕಟಿಸಿದರು.

    ತಮ್ಮ ತಂದೆ ಮುಲಾಯಂ ಸಿಂಗ್ ಯಾದವ್ ಅವರಿಂದ ಅಧಿಕಾರ ವಹಿಸಿಕೊಂಡ ಅಖಿಲೇಶ್ ಯಾದವ್ ಅವರು 2017 ರ ಜನವರಿಯಲ್ಲಿ ಪಕ್ಷದ ತುರ್ತು ಸಭೆಯಲ್ಲಿ ಮೊದಲ ಬಾರಿಗೆ ಮತ್ತು ಅದೇ ವರ್ಷ ಅಕ್ಟೋಬರ್‌ನಲ್ಲಿ ಆಗ್ರಾದಲ್ಲಿ ಪಕ್ಷದ ರಾಷ್ಟ್ರೀಯ ಸಮಾವೇಶದಲ್ಲಿ ಎರಡನೇ ಬಾರಿಗೆ ಸಮಾಜವಾದಿ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಇದನ್ನೂ ಓದಿ: ಮುರುಘಾಮಠದ ಪೀಠಾಧಿಪತಿ ಬದಲಾವಣೆಗೆ ಹೆಚ್ಚಿದ ಒತ್ತಡ

    Live Tv
    [brid partner=56869869 player=32851 video=960834 autoplay=true]

  • ಅಧಿವೇಶನದಲ್ಲಿ ತಂಬಾಕು ತಿನ್ನೋದ್ರಲ್ಲಿ, ಗೇಮ್ ಆಡೋದ್ರಲ್ಲಿ ಶಾಸಕರು ಬ್ಯುಸಿ – ಬಿಜೆಪಿ ವಿರುದ್ಧ ಎಸ್‍ಪಿ ವ್ಯಂಗ್ಯ

    ಅಧಿವೇಶನದಲ್ಲಿ ತಂಬಾಕು ತಿನ್ನೋದ್ರಲ್ಲಿ, ಗೇಮ್ ಆಡೋದ್ರಲ್ಲಿ ಶಾಸಕರು ಬ್ಯುಸಿ – ಬಿಜೆಪಿ ವಿರುದ್ಧ ಎಸ್‍ಪಿ ವ್ಯಂಗ್ಯ

    ಲಕ್ನೋ: ವಿಧಾನಸಭೆಯಲ್ಲಿ ಅಧಿವೇಶನ (Assembly) ನಡೆಯುತ್ತಿದ್ದಾಗ ಉತ್ತರ ಪ್ರದೇಶದ (UttarPradesh) ಬಿಜೆಪಿ ಶಾಸಕರು ತಂಬಾಕು (Tobacco) ಸೇವನೆ ಮತ್ತು ಗೇಮ್ (Game) ಆಡಿದ್ದಾರೆ.

    ಈ ಇಬ್ಬರು ಶಾಸಕರ ವೀಡಿಯೋವನ್ನು ಸಮಾಜವಾದಿ ಪಕ್ಷ (Samajwadi Party) ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಶಾಸಕರ ಅಶಿಸ್ತನ್ನು ಖಂಡಿಸಿದೆ. ಮಹೋಬಾದ (Mahoba) ಬಿಜೆಪಿ ಶಾಸಕ ರಾಕೇಶ್‌ ಗೋಸ್ವಾಮಿ (Rakesh Goswami) ಮೂರು ಎಲೆಗಳಿರುವ ಇಸ್ಪೀಟ್ ಗೇಮ್ ಆಡಿದ್ದರೆ, ಝಾನ್ಸಿ (Jhansi) ಶಾಸಕ ರವಿಕುಮಾರ್ ಶರ್ಮಾ (Ravi Sharmar Sharma) ಅವರ ಟೇಬಲ್ ಕೆಳಗೆ ಮುಚ್ಚಿಟ್ಟುಕೊಂಡು ತಂಬಾಕು ತಿಂದಿದ್ದಾರೆ. ಶಾಸಕರ ವರ್ತನೆಯಿಂದ ಬಿಜೆಪಿ ಪಕ್ಷ ಮುಜುಗರಕ್ಕೆ ಒಳಗಾಗಿದೆ. ಇದನ್ನೂ ಓದಿ: ಆಪ್ ಸರ್ಕಾರದ ವಿರುದ್ಧ ಎಲ್‍ಜಿ ವಾರ್ – ಮನೀಷ್ ಸಿಸೋಡಿಯಾ ವಿರುದ್ಧ ತನಿಖೆಗೆ ಸೂಚನೆ

    ಗುರುವಾರದ ಸದನದಲ್ಲಿ ಮಹಿಳೆಯರ ವಿಶೇಷ ದಿನವಾಗಿ ಆಚರಿಸಲಾಗಿತ್ತು. ಈ ವಿಶೇಷ ದಿನದಂದೇ ಬಿಜೆಪಿ ಶಾಸಕರು ಅಶಿಸ್ತು ತೋರಿಸಿದ್ದಾರೆ. ಇದನ್ನೂ ಓದಿ:  ಬೀದಿನಾಯಿಗಳಿಗೆ ಸಂತಾನ ಹರಣ ಚಿಕಿತ್ಸೆ ಮಾಡಿ ಅಂದ್ರೆ ಕಾಡುಪ್ರಾಣಿಗಳ ಆಹಾರಕ್ಕಾಗಿ ಕಾಡಿಗೆ ಬಿಟ್ಟ ಪುರಸಭೆ

    Live Tv
    [brid partner=56869869 player=32851 video=960834 autoplay=true]

  • 500ಮೀ. ದೂರದವರೆಗೆ ಕಾರನ್ನು ಎಳೆದೊಯ್ದ ಟ್ರಕ್- ಸಮಾಜವಾದಿ ಮುಖಂಡನಿದ್ದ ಕಾರು ಜಖಂ

    500ಮೀ. ದೂರದವರೆಗೆ ಕಾರನ್ನು ಎಳೆದೊಯ್ದ ಟ್ರಕ್- ಸಮಾಜವಾದಿ ಮುಖಂಡನಿದ್ದ ಕಾರು ಜಖಂ

    ಲಕ್ನೋ: ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷ ದೇವೇಂದ್ರ ಸಿಂಗ್ ಯಾದವ್ ಅವರ ಕಾರಿಗೆ ಟ್ರಕ್ ಹೊಡೆದು ಸುಮಾರು 500 ಮೀ.ವರೆಗೆ ಎಳೆದೊಯ್ದ ಘಟನೆ ಉತ್ತರಪ್ರದೇಶದ ಮೈನ್‍ಪುರಿ ನಗರದಲ್ಲಿ ನಡೆದಿದೆ.

    ದೇವೇಂದ್ರ ಯಾದವ್ ಅವರು ಮೈನ್‍ಪುರಿಯ ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷರಾಗಿದ್ದು, ಪಕ್ಷದ ಕಚೇರಿಯಿಂದ ಮನೆಗೆ ಹಿಂತಿರುಗುತ್ತಿದ್ದರು. ಆ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

    ಈ ಅಪಘಾತದ ವೀಡಿಯೋವು ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ದೇವೇಂದ್ರ ಯಾದವ್ ಅವರ ಕಾರನ್ನು ನಿಲ್ಲಿಸುವ ಮೊದಲು ಲಾರಿಯೊಂದು ಬಂದು ಸುಮಾರು 500 ಮೀ. ದೂರದವರೆಗೆ ಎಳೆದೊಯ್ದಿದೆ. ಕಾರು ನಿಂತ ತಕ್ಷಣ ರಸ್ತೆಯಲ್ಲಿದ್ದ ಹಲವರು ಸ್ಥಳಕ್ಕೆ ಧಾವಿಸಿ ಸಮಾಜವಾದಿ ಪಕ್ಷದ ನಾಯಕನನ್ನು ರಕ್ಷಿಸಲು ಯತ್ನಿಸಿದರು. ಇದನ್ನೂ ಓದಿ: ವಿದ್ಯಾರ್ಥಿನಿಗೆ ಚುಡಾಯಿಸಿದ ವಿದ್ಯಾರ್ಥಿ – ಕಲಬುರಗಿ ಕೇಂದ್ರಿಯ ವಿಶ್ವವಿದ್ಯಾಲಯದಲ್ಲಿ ಮಾರಾಮಾರಿ

    ಘಟನೆಗೆ ಸಂಬಂಧಿಸಿ ಆರೋಪಿ ಟ್ರಕ್ ಚಾಲಕ ಇಟಾವಾ ಮೂಲದವನಾಗಿದ್ದು, ಆತನನ್ನು ಬಂಧಿಸಲಾಗಿದೆ. ಘಟನೆಗೆ ಸಂಬಂಧಿಸಿ ತನಿಖೆ ನಡೆಸಲಾಗುತ್ತಿದೆ. ಇದನ್ನೂ ಓದಿ: ದೇವಸ್ಥಾನದಲ್ಲಿ ಕಾಲ್ತುಳಿತ- ಮೂವರು ಸಾವು

    Live Tv
    [brid partner=56869869 player=32851 video=960834 autoplay=true]

  • ಸಮಾಜವಾದಿ ಪಕ್ಷದ ಎಲ್ಲ ಘಟಕಗಳನ್ನು ವಿಸರ್ಜಿಸಿದ ಅಖಿಲೇಶ್ ಯಾದವ್

    ಸಮಾಜವಾದಿ ಪಕ್ಷದ ಎಲ್ಲ ಘಟಕಗಳನ್ನು ವಿಸರ್ಜಿಸಿದ ಅಖಿಲೇಶ್ ಯಾದವ್

    ಲಕ್ನೋ: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಯುವ ಹಾಗೂ ಮಹಿಳಾ ವಿಭಾಗ ಸೇರಿದಂತೆ ಎಲ್ಲ ಘಟಕಗಳ ರಾಷ್ಟ್ರೀಯ, ರಾಜ್ಯ ಮತ್ತು ಜಿಲ್ಲಾ ಕಾರ್ಯಕಾರಿ ಸಂಘಗಳನ್ನು ವಿಸರ್ಜಿಸಿದ್ದಾರೆ.

    ಈ ನಿರ್ಧಾರಕ್ಕೆ ಯಾವುದೇ ಅಧಿಕೃತ ಕಾರಣಗಳನ್ನು ಈವರೆಗೆ ನೀಡಿಲ್ಲ. ಆದರೆ ಪಕ್ಷದ ಭದ್ರಕೋಟೆಗಳಾದ ರಾಂಪುರ ಮತ್ತು ಅಜಂಗಢದಲ್ಲಿ ಲೋಕಸಭೆ ಉಪಚುನಾವಣೆ ಸೋಲಿನ ನಂತರ ಸಮಾಜವಾದಿ ಪಕ್ಷವನ್ನು ಪುನಃ ಕಟ್ಟಲು ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ.

    ಉತ್ತರ ಪ್ರದೇಶದ ಸಮಾಜವಾದಿ ಪಕ್ಷ ಅಧ್ಯಕ್ಷ ನರೇಶ್ ಉತ್ತಮ್ ಅವರು ತಮ್ಮ ಸ್ಥಾನದಲ್ಲಿ ಮುಂದುವರಿಯುತ್ತಾರೆ ಎಂದು ಪಕ್ಷ ಹೇಳಿದೆ. ಈ ಬಗ್ಗೆ ಸಮಾಜವಾದಿ ಪಕ್ಷ ಟ್ವಿಟ್ಟರ್‌ನಲ್ಲಿ ಅಧಿಕೃತ ಮಾಹಿತಿ ಹಂಚಿಕೊಂಡಿದ್ದು, ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಪಕ್ಷದ ರಾಜ್ಯಾಧ್ಯಕ್ಷರನ್ನು ಹೊರತುಪಡಿಸಿ, ಪಕ್ಷದ ರಾಷ್ಟ್ರೀಯ, ರಾಜ್ಯ ಮತ್ತು ಜಿಲ್ಲಾ ಕಾರ್ಯಕಾರಿ ಘಟಕಗಳನ್ನು ವಿಸರ್ಜಿಸಿದ್ದಾರೆ ಎಂದು ತಿಳಿಸಿದೆ.

    ರಾಷ್ಟ್ರೀಯ ಅಧ್ಯಕ್ಷರು, ರಾಜ್ಯಾಧ್ಯಕ್ಷರು, ಯುವಜನ, ಮಹಿಳಾ ಘಟಕ ಸೇರಿದಂತೆ ಪಕ್ಷದ ಎಲ್ಲ ಸಂಘಟನೆಗಳನ್ನು ವಿಸರ್ಜನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರ ಸ್ಪೀಕರ್ ಆಗಿ ಆಯ್ಕೆಯಾದ ರಾಹುಲ್ ನಾರ್ವೇಕರ್ ಯಾರು?

    2024ರ ಲೋಕಸಭೆ ಚುನಾವಣೆಗೆ ಸಮಾಜವಾದಿ ಪಕ್ಷವು ಸಜ್ಜಾಗುತ್ತಿದ್ದು, ಬಿಜೆಪಿಯನ್ನು ಸಂಪೂರ್ಣ ಬಲದಿಂದ ಎದುರಿಸಲು ಸಂಘಟನೆಯನ್ನು ಬಲಪಡಿಸುವತ್ತ ಗಮನ ಹರಿಸಲಾಗಿದೆ ಎಂದು ಪಕ್ಷದ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ದೇಶಕ್ಕೆ ಮಾತಾಡುವ ರಾಷ್ಟ್ರಪತಿ ಬೇಕು; ನಾನು ಗೆದ್ದರೆ ದೇಶದ್ರೋಹ ಕಾನೂನು ರದ್ದು ಮಾಡ್ತೀನಿ – ಯಶವಂತ್‌ ಸಿನ್ಹಾ

    Live Tv

  • ದೊಡ್ಡ ಸಮುದಾಯಕ್ಕೆ ನೋವಾಗುತ್ತಿದೆ, ಬುಲ್ಡೋಜರ್‌ನಿಂದ ರಾಮ ರಾಜ್ಯದ ಕಲ್ಪನೆ ಧ್ವಂಸ: ಅಖಿಲೇಶ್ ಯಾದವ್

    ದೊಡ್ಡ ಸಮುದಾಯಕ್ಕೆ ನೋವಾಗುತ್ತಿದೆ, ಬುಲ್ಡೋಜರ್‌ನಿಂದ ರಾಮ ರಾಜ್ಯದ ಕಲ್ಪನೆ ಧ್ವಂಸ: ಅಖಿಲೇಶ್ ಯಾದವ್

    ಲಕ್ನೋ: ಬಿಜೆಪಿಯು ತನ್ನ ಮಾತೃ ಸಂಘಟನೆಯಾದ ಆರ್‌ಎಸ್‌ಎಸ್ ಸೂಚನೆಗಳ ಮೇರೆಗೆ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಕಿಡಿಕಾರಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸದಸ್ಯರ ಮಾತಿನಿಂದ ದೊಡ್ಡ ಸಮುದಾಯಕ್ಕೆ ನೋವಾಗಿದ್ದು, ರಾಜ್ಯವನ್ನು ಧ್ವಂಸಗೊಳಿಸುತ್ತಿರುವ ಭಯಾನಕ ಅಶಾಂತಿ ಘಟನೆಗಳ ಹಿಂದೆ ಇದೇ ರಾಜಕೀಯವಿದೆ. ಈ ದುರದೃಷ್ಟಕರ ವಿವಾದವನ್ನು ಪರಿಹರಿಸಲು ಬಿಜೆಪಿ ಸರ್ಕಾರವು ಯಾವುದೇ ಗಟ್ಟಿಯಾದ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ದೂರಿದರು.

    ನಮ್ಮ ಸಂಸ್ಕೃತಿ, ಧರ್ಮ ಮತ್ತು ಸಂವಿಧಾನವು ಯಾವುದೇ ಶಾಸನಬದ್ಧ ನಿಬಂಧನೆಗಳಿಲ್ಲದೆ ಯಾರೊಬ್ಬರ ಮನೆ ಅಥವಾ ಅಂಗಡಿಯನ್ನು ಧ್ವಂಸ ಮಾಡಲು ಅಥವಾ ಅಮಾಯಕರನ್ನು ಬಂಧಿಸಲು ಅವಕಾಶವಿಲ್ಲ. ಆದರೆ ಈ ಶಾಂತಿಯುತ ಪ್ರತಿಭಟನೆ ನಡೆಸುವ ಜನರ ಪ್ರಜಾಸತ್ತಾತ್ಮಕ ಹಕ್ಕನ್ನು ಕಿತ್ತುಕೊಳ್ಳುತ್ತಿದ್ದು, ಬಿಜೆಪಿ ಆಡಳಿತದಲ್ಲಿ ಉತ್ತರ ಪ್ರದೇಶ ಇಡೀ ವಿಶ್ವದ ಮುಂದೆ ತಲೆತಗ್ಗಿಸುವಂತಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನೂಪುರ್ ವಿರುದ್ಧ ಪ್ರತಿಭಟಿಸಿದವರು ಕುವೈತ್‍ನಿಂದ ಗಡಿಪಾರು – ನಮ್ಮಲ್ಲಿ ಕಠಿಣ ಕ್ರಮ ಯಾವಾಗ ಎಂದ ನೆಟ್ಟಿಗರು?

    ಕಾನೂನು ಸುವ್ಯವಸ್ಥೆ ಕಾಪಾಡುವುದು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದ್ದು, ಇದರಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಸಾಬೀತಾಗಿದೆ. ಪ್ರತಿಯೊಂದು ಕ್ಷೇತ್ರದಲ್ಲೂ ತಮ್ಮ ವೈಫಲ್ಯವನ್ನು ಮರೆಮಾಚಲು ಮುಖ್ಯಮಂತ್ರಿಗಳು ಸುಳ್ಳು ಕಥೆಗಳನ್ನು ಹೆಣೆದು ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದರು.

    ಇದೀಗ ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರು ಪ್ರವಾದಿ ಮೊಹಮ್ಮದ್ ವಿರುದ್ಧ ಮಾತನಾಡಿದ ಹೇಳಿಕೆಗಳ ವಿರುದ್ಧ ಉತ್ತರ ಪ್ರದೇಶದ ಹಲವಾರು ಜಿಲ್ಲೆಗಳಲ್ಲಿ ಪ್ರತಿಭಟನೆಗಳಿಂದ ತತ್ತರಿಸಿದೆ. ಇದನ್ನೂ ಓದಿ: ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ – ಇಂಟರ್‌ನೆಟ್ ಸ್ಥಗಿತ, 70 ಮಂದಿ ಅರೆಸ್ಟ್

    ಜೂನ್ 3 ರಂದು ಕಾನ್ಪುರದಲ್ಲಿ ಅಂತಹ ಮೊದಲ ಪ್ರಮುಖ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ಮಾರುಕಟ್ಟೆಗಳನ್ನು ಮುಚ್ಚಲು ಪ್ರಯತ್ನಿಸಿದರು. ಪೆಟ್ರೋಲ್ ಬಾಂಬ್‍ಗಳು ಮತ್ತು ಕಲ್ಲುಗಳನ್ನು ಎಸೆದು ಸಾರ್ವಜನಿಕ ಆಸ್ತಿಯನ್ನು ಹಾಳು ಮಾಡಿದ್ದಾರೆ.

    ಕಳೆದ ಶುಕ್ರವಾರದಿಂದ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಇದೇ ರೀತಿಯ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿವೆ. ಈವರೆಗೆ 13 ಎಫ್‍ಐಆರ್‌ಗಳನ್ನು ದಾಖಲಿಸಿಕೊಂಡು ಹಿಂಸಾಚಾರಕ್ಕೆ ಸಂಬಂಧಿಸಿದಂತೆ 316 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ. ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

    ಇದರ ಮಧ್ಯೆ ಅಧಿಕಾರಿಗಳು ಆರೋಪಿಗಳು ಅವರ ಸಂಬಂಧಿಕರು ಅಥವಾ ಸಹಚರರಿಗೆ ಸೇರಿದ ಅನೇಕ ಕಟ್ಟಡಗಳನ್ನು ಧ್ವಂಸ ಮಾಡಲು ಸೂಚಿಸಲಾಗಿತ್ತು. ರಾಜ್ಯವು ಸಹರಾನ್‍ಪುರ, ಪ್ರಯಾಗ್‍ರಾಜ್ ಮತ್ತು ಕಾನ್ಪುರ್ ಜಿಲ್ಲೆಯಲ್ಲಿನ ಆಸ್ತಿಗಳನ್ನು ಧ್ವಂಸ ಮಾಡಲಾಯಿತು.

  • ಕಾಂಗ್ರೆಸ್ ತೊರೆದ ಕಪಿಲ್ ಸಿಬಲ್- ರಾಜ್ಯಸಭೆಗೆ SPಯಿಂದ ನಾಮಪತ್ರ ಸಲ್ಲಿಕೆ

    ಕಾಂಗ್ರೆಸ್ ತೊರೆದ ಕಪಿಲ್ ಸಿಬಲ್- ರಾಜ್ಯಸಭೆಗೆ SPಯಿಂದ ನಾಮಪತ್ರ ಸಲ್ಲಿಕೆ

    ಲಕ್ನೋ: ಕಾಂಗ್ರೆಸ್‌ ಪಕ್ಷಕ್ಕೆ ಮತ್ತೊಂದು ಆಘಾತವಾಗಿದ್ದು, ಮಾಜಿ ಕೇಂದ್ರ ಸಚಿವ ಕಪಿಲ್ ಸಿಬಲ್ ಕಾಂಗ್ರೆಸ್‍ಗೆ ರಾಜೀನಾಮೆ ನೀಡಿರುವುದಾಗಿ ಇಂದು ಬಹಿರಂಗಪಡಿಸಿದ್ದಾರೆ.

    ಉತ್ತರ ಪ್ರದೇಶದಿಂದ ರಾಜ್ಯಸಭೆಗೆ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮೇ 16 ರಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದೆ.ಸಂಸತ್ತಿನಲ್ಲಿ ಸ್ವತಂತ್ರ ಧ್ವನಿಯಾಗುವುದು ಮುಖ್ಯ. ಸ್ವತಂತ್ರ ಧ್ವನಿ ಮಾತನಾಡಿದರೆ ಅದು ಯಾವುದೇ ರಾಜಕೀಯ ಪಕ್ಷದಿಂದಲ್ಲ ಎಂದು ಜನರು ನಂಬುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: ಮಳಲಿಯಲ್ಲಿರುವುದು ದರ್ಗಾವಲ್ಲ, ಶಿವ ಸಾನಿಧ್ಯ- ತಾಂಬೂಲ ಪ್ರಶ್ನೆ ಸುಳಿವು

    ಕಾಂಗ್ರೆಸ್‍ನ ಅತ್ಯಂತ ಹಿರಿಯ ನಾಯಕರಲ್ಲಿ ಒಬ್ಬರಾದ ಸಿಬಲ್ ಅವರು 23 ಭಿನ್ನಮತೀಯರ ಗುಂಪಿನಲ್ಲಿ ಕಾಣಿಸಿಕೊಂಡಿದ್ದರು. ಅವರು ಪಕ್ಷದ ನಾಯಕತ್ವ ಮತ್ತು ಸಂಘಟನೆಯ ಬಗ್ಗೆ ಕೂಲಂಕಷ ಪರೀಕ್ಷೆಗೆ ಕರೆ ನೀಡಿದ್ದರು. ಅಷ್ಟೇ ಅಲ್ಲದೇ ಅವರು ಇತ್ತೀಚಿನ ವಾರಗಳಲ್ಲಿ ಗಾಂಧಿಯವರ ನಾಯಕತ್ವದ ಬಗ್ಗೆ ತಮ್ಮ ಟೀಕೆಗಳ ಬಗ್ಗೆಯೂ ಧ್ವನಿ ಎತ್ತಿದ್ದರು. ಇದನ್ನೂ ಓದಿ: ರಾಯಚೂರಿನ ಪೊಲೀಸ್ ಠಾಣೆಗೆ ದೇಶದಲ್ಲೇ 5ನೇ ಸ್ಥಾನ

    ಇತ್ತೀಚೆಗಷ್ಟೇ ಹಾರ್ದಿಕ್ ಪಟೇಲ್ ಹಾಗೂ ಸುನಿಲ್ ಜಾಖಡ್ ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿದ್ದರು.

  • ಎಸ್‍ಪಿ ನಾಯಕ ಅಜಂ ಖಾನ್‍ಗೆ ಮಧ್ಯಂತರ ಜಾಮೀನು – ಜೈಲಿನಿಂದ ರಿಲೀಸ್

    ಎಸ್‍ಪಿ ನಾಯಕ ಅಜಂ ಖಾನ್‍ಗೆ ಮಧ್ಯಂತರ ಜಾಮೀನು – ಜೈಲಿನಿಂದ ರಿಲೀಸ್

    ನವದೆಹಲಿ: ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್‍ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದ್ದು, ಇಂದು ಬಿಡುಗಡೆಯಾಗಿದ್ದಾರೆ.

    ಹೌದು, ಸುಮಾರು 27 ತಿಂಗಳ ಸೆರೆವಾಸದ ಬಳಿಕ ಕೊನೆಗೂ ಅಜಂ ಖಾನ್‍ಗೆ ಜೈಲಿನಿಂದ ಬಿಡುಗಡೆ ಭಾಗ್ಯ ಸಿಕ್ಕಿದೆ. ಉತ್ತರಪ್ರದೇಶದ ರಾಂಪುರದ ಕೊತ್ವಾಲಿ ಪೊಲೀಸ್ ಠಾಣೆಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಅವರಿಗೆ ಈ ಜಾಮೀನನ್ನು ಸುಪ್ರೀಂ ಕೋರ್ಟ್ ನೀಡಿದೆ.

    ಫೆಬ್ರವರಿ 2020 ರಿಂದ ಜೈಲಿನಲ್ಲಿರುವ ಖಾನ್ ವಿರುದ್ಧ ಇದು 88 ಪ್ರಕರಣಗಳಿದ್ದು, ವಿಚಾರಣಾ ನ್ಯಾಯಾಲಯದಿಂದ 88 ಪ್ರಕರಣಗಳಿಗೂ ಜಾಮೀನು ಪಡೆದುಕೊಂಡಿದ್ದಾರೆ. 89ನೇ ಪ್ರಕರಣದಲ್ಲಿ ಜಾಮೀನಿಗೆ ವಿಚಾರಣೆ ಪ್ರಾರಂಭವಾಗುವ ಮುನ್ನ ಸುಪ್ರೀಂಕೋರ್ಟ್ ಆರ್ಟಿಕಲ್ 142 ಮೂಲಕ ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ: ಲಾಲು ಪ್ರಸಾದ್ ಯಾದವ್‍ಗೆ ಶಾಕ್ ಕೊಟ್ಟ ಸಿಬಿಐ – ಲಾಲು, ಪುತ್ರಿ ನಿವಾಸದ ಮೇಲೆ ದಾಳಿ

    ಇತ್ತೀಚೆಗೆ ರಾಂಪುರ ಪಬ್ಲಿಕ್ ಸ್ಕೂಲ್‍ನ ಭೂ ಕಬಳಿಕೆ ಮತ್ತು ಶಾಲೆಗೆ ಮಾನ್ಯತೆ ಪಡೆಯಲು ಕಟ್ಟಡದ ಪ್ರಮಾಣಪತ್ರಗಳನ್ನು ನಕಲಿ ಮಾಡಲಾಗಿದೆ ಎಂಬ ಆರೋಪವನ್ನು ಅಜಂ ಖಾನ್ ಮೇಲೆ ಹೊರಿಸಲಾಗಿತ್ತು. ಇದನ್ನೂ ಓದಿ: ಮುಂದುವರಿದ ಮಳೆ ಅಬ್ಬರ: ಉಡುಪಿ, ಶಿವಮೊಗ್ಗ, ದಾವಣಗೆರೆ, ಹಾವೇರಿಯಲ್ಲಿ ಶಾಲೆಗಳಿಗೆ ರಜೆ

    ಇದೀಗ ಅಜಂ ಖಾನ್ ಬಿಡುಗಡೆಯಾಗುತ್ತಿರುವ ಹಿನ್ನೆಲೆ ಅವರನ್ನು ಬರಮಾಡಿಕೊಳ್ಳಲು ಪಕ್ಷದ ಬೆಂಬಲಿಗರು ಬೆಳ್ಳಂಬೆಳಗ್ಗೆ ಸೀತಾಪುರ ಜೈಲಿನ ಬಳಿ ಜಮಾಯಿಸಿ ಜೈಕಾರ ಕೂಗಿದರು. ಅವರ ಪುತ್ರರಾದ ಅಬ್ದುಲ್ಲಾ ಮತ್ತು ಅದೀಬ್ ಸಹ ಜೈಲಿನ ಬಳಿ ಆಗಮಿಸಿ ತಂದೆಯನ್ನು ಸ್ವಾಗತಿಸಿದರು.

  • ರಾಷ್ಟ್ರಪತಿಯಲ್ಲ, ಪಿಎಂ ಆಗೋ ಕನಸಿದೆ: ಎಸ್‌ಪಿಗೆ ಮಾಯಾವತಿ ಟಾಂಗ್‌

    ರಾಷ್ಟ್ರಪತಿಯಲ್ಲ, ಪಿಎಂ ಆಗೋ ಕನಸಿದೆ: ಎಸ್‌ಪಿಗೆ ಮಾಯಾವತಿ ಟಾಂಗ್‌

    ಲಕ್ನೋ: ರಾಷ್ಟ್ರಪತಿಯಲ್ಲ, ದೇಶದ ಪ್ರಧಾನ ಮಂತ್ರಿಯಾಗುವ ಕನಸಿದೆ ಎನ್ನುವ ಮೂಲಕ ಸಮಾಜವಾದಿ ಪಕ್ಷಕ್ಕೆ ಬಹುಜನ ಸಮಾಜ ಪಕ್ಷದ ನಾಯಕಿ ಮಾಯಾವತಿ ಟಾಂಗ್‌ ಕೊಟ್ಟಿದ್ದಾರೆ.

    ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ರಾಷ್ಟ್ರಪತಿಯಾಗಲು ಬಯಸುತ್ತಿದ್ದೇನೆ ಎಂದು ಸಮಾಜವಾದಿ ಪಕ್ಷ (ಎಸ್‌ಪಿ) ವದಂತಿ ಹಬ್ಬಿಸುತ್ತಿದೆ. ಆದರೆ ರಾಷ್ಟ್ರಪತಿಯಲ್ಲ, ಉತ್ತರ ಪ್ರದೇಶದಲ್ಲಿ ಮತ್ತೆ ಸಿಎಂ ಆಗುವ ಇಲ್ಲವೇ ಪ್ರಧಾನಿಯಾಗುವ ಕನಸು ಹೊಂದಿದ್ದೇನೆ ಎಂದು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಪ್ರಧಾನಿಗೆ ನಾಚಿಕೆಯಾಗಬೇಕು: ಮುಖ್ಯಮಂತ್ರಿಗಳ ವಾಗ್ದಾಳಿ

    ಸಮಾಜವಾದಿ ಪಕ್ಷವು ನನ್ನನ್ನು ರಾಷ್ಟ್ರಪತಿಯಾಗಿಸುವ ಕನಸು ಬಿಡಬೇಕು. ನನಗೆ ನೆಮ್ಮದಿಯ ಜೀವನ ಬೇಡ ಬದಲಿಗೆ ಹೋರಾಟದ ಬದುಕು ಬೇಕು ಎಂದು ತಿಳಿಸಿದ್ದಾರೆ.

    ನಮ್ಮ ಅಧಿಕಾರಾವಧಿಯಲ್ಲಿ ನಿರ್ಮಿಸಲಾದ ಸ್ಮಾರಕಗಳನ್ನು ಎಸ್‌ಪಿ ಮತ್ತು ಬಿಜೆಪಿ ಎರಡೂ ಸರ್ಕಾರಗಳು ನಿರ್ಲಕ್ಷಿಸಿವೆ. ಈ ಬಗ್ಗೆ ರಾಜ್ಯ ಸರ್ಕಾರದ ಗಮನ ಸೆಳೆಯಲು ಮಿಶ್ರಾ ನೇತೃತ್ವದ ಬಿಎಸ್‌ಪಿ ನಿಯೋಗ ಯೋಗಿ ಅವರನ್ನು ಭೇಟಿ ಮಾಡಲು ತೆರಳಿತ್ತು ಎಂದು ಬಿಜೆಪಿ ಮತ್ತು ಬಿಎಸ್‌ಪಿ ಮೈತ್ರಿ ಆರೋಪಗಳನ್ನು ಅಲ್ಲಗಳೆದಿದ್ದಾರೆ. ಇದನ್ನೂ ಓದಿ: ಸೂರ್ಯನ ಕೆಂಗಣ್ಣು – ದೆಹಲಿಯಲ್ಲಿ ದಾಖಲೆ ಪ್ರಮಾಣದ ತಾಪಮಾನ ದಾಖಲು

    ಉತ್ತರ ಪ್ರದೇಶದಲ್ಲಿ ಬಿಜೆಪಿ ಗೆಲುವಿಗೆ ಸಮಾಜವಾದಿ ಪಕ್ಷವೇ ಹೊಣೆ. ಮುಸ್ಲಿಮರು ಮತ್ತು ಇತರರ ಮೇಲೆ ನಡೆಯುತ್ತಿರುವ ಎಲ್ಲಾ ದೌರ್ಜನ್ಯಗಳಿಗೆ ಎಸ್‌ಪಿಯೇ ಹೊಣೆ ಎಂದು ಆರೋಪಿಸಿದ್ದಾರೆ.

    ಈಚೆಗೆ ನಡೆದ ವಿಧಾನಸಭಾ ಚುನಾವಣೆಯ ವೇಳೆ ಬಿಎಸ್‌ಪಿ ತನ್ನ ಮತದಾರರನ್ನು ಬಿಜೆಪಿಗೆ ವರ್ಗಾಯಿಸಿದೆ. ಯುಪಿ ಚುನಾವಣೆಗೆ ಹಿಂದೂ-ಮುಸ್ಲಿಂ ಎಂದು ವಿಭಜಿಸಲು ಬಿಜೆಪಿ ಜೊತೆ ಕೈಜೋಡಿಸಿದೆ ಎಂದು ಎಂದು ಅಖಿಲೇಶ್ ಯಾದವ್ ಆರೋಪಿಸಿದ್ದರು. ಇದನ್ನೂ ಓದಿ: 10,900 ಅಕ್ರಮ ಧ್ವನಿವರ್ಧಕಗಳ ತೆರವು

  • ಉತ್ತರ ಪ್ರದೇಶದಲ್ಲಿ ಎಸ್‍ಪಿ ನಾಯಕನ ಬರ್ಬರ ಹತ್ಯೆ

    ಉತ್ತರ ಪ್ರದೇಶದಲ್ಲಿ ಎಸ್‍ಪಿ ನಾಯಕನ ಬರ್ಬರ ಹತ್ಯೆ

    ಲಕ್ನೋ: ಉತ್ತರ ಪ್ರದೇಶದ ಪಿಜಿಐ ಪೊಲೀಸ್ ಠಾಣಾ ವ್ಯಾಪ್ತಿಯ ರೇವ್ತಾಪುರ್ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ (ಎಸ್‍ಪಿ) ಮುಖಂಡರೊಬ್ಬರನ್ನು ಬರ್ಬರವಾಗಿ ಥಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಗಂಭೀರ ಗಾಯಗೊಂಡಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಸಂತ್ರಸ್ತ ರೋಹಿತ್ (26) ಮೇಲೆ ಸಚಿನ್ ಮತ್ತು ಆತನ ಸಹಚರರು ಹಲ್ಲೆ ನಡೆಸಿದ್ದಾರೆ. ಕಬ್ಬಿಣದ ಕೋಲುಗಳು, ಹರಿತವಾದ ಆಯುಧಗಳು ಮತ್ತು ಲಾಠಿಗಳಿಂದ ತೀವ್ರವಾಗಿ ಥಳಿಸಿದ್ದಾರೆ. ಈ ವೇಳೆ ಅವರನ್ನು ತಕ್ಷಣ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಇದನ್ನೂ ಓದಿ: ಸತೀಶ್ ಜಾರಕಿಹೊಳಿ ಹೆಸರಿನಲ್ಲಿ ಅಶ್ಲೀಲ ವೀಡಿಯೋ ಪೋಸ್ಟ್: ದೂರು ದಾಖಲು

    ಮೃತರ ಕುಟುಂಬಸ್ಥರ ದೂರಿನ ಮೇರೆಗೆ ಪೊಲೀಸರು ಸಚಿನ್ ಮತ್ತು ಐವರು ಅಪರಿಚಿತ ವ್ಯಕ್ತಿಗಳ ವಿರುದ್ಧ ಕೊಲೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ರೋಹಿತ್ ಎಸ್‌ಪಿ ಯುವ ಘಟಕದ ಮಾಜಿ ಜಿಲ್ಲಾ ಕಾರ್ಯದರ್ಶಿಯಾಗಿದ್ದರು. ಸಚಿನ್, ಶಿವಕುಮಾರ್ ಮತ್ತು ಇತರರು ತನ್ನ ಮಗನ ಮೇಲೆ ಹಲ್ಲೆ ನಡೆಸಿ ಅಮಾನುಷವಾಗಿ ಥಳಿಸಿದ್ದಾರೆ ಎಂದು ಮೃತರ ತಾಯಿ ಊರ್ಮಿಳಾ ದೇವಿ ಪೊಲೀಸರಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ಅಪ್ರಾಪ್ತೆ ಮೇಲೆ ತಂದೆ, ಅಣ್ಣನಿಂದ ಅತ್ಯಾಚಾರ – ಅಜ್ಜ, ಚಿಕ್ಕಪ್ಪನಿಂದ ಕಿರುಕುಳ

    ಸಚಿನ್‍ಗೆ ರೋಹಿತ್ ಜೊತೆ ಹಳೆ ವೈಷಮ್ಯವಿದ್ದು, ಹಲವು ಬಾರಿ ಬೆದರಿಕೆ ಹಾಕಿದ್ದ ಎಂದು ಅವರ ತಾಯಿ ಆರೋಪಿಸಿದ್ದಾರೆ. ರೋಹಿತ್ ಆರು ತಿಂಗಳ ಹಿಂದೆ ಮದುವೆಯಾಗಿದ್ದರು.

    ಆರೋಪಿಗಳನ್ನು ಪತ್ತೆ ಹಚ್ಚಲು ಮತ್ತು ಬಂಧಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಕಂಟೋನ್ಮೆಂಟ್ ಸಹಾಯಕ ಪೊಲೀಸ್ ಕಮಿಷನರ್ (ಎಸಿಪಿ) ಅರ್ಚನಾ ಸಿಂಗ್ ತಿಳಿಸಿದ್ದಾರೆ.

  • ಮುಸ್ಲಿಮರು ಬಿಜೆಪಿ ವಿರೋಧಿಸುವುದನ್ನು ನಿಲ್ಲಿಸಬೇಕು: ಮುಸ್ಲಿಂ ಧರ್ಮಗುರು ಸಲಹೆ

    ಮುಸ್ಲಿಮರು ಬಿಜೆಪಿ ವಿರೋಧಿಸುವುದನ್ನು ನಿಲ್ಲಿಸಬೇಕು: ಮುಸ್ಲಿಂ ಧರ್ಮಗುರು ಸಲಹೆ

    ಲಕ್ನೋ: ಬಿಜೆಪಿ ವಿರೋಧಿಸುವುದನ್ನು ಮುಸ್ಲಿಮರು ನಿಲ್ಲಿಸಬೇಕು ಅಖಿಲ ಭಾರತ ತಂಝೀಮ್ ಉಲೇಮಾ-ಎ-ಇಸ್ಲಾಂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮೌಲಾನಾ ಶಹಾಬುದ್ದೀನ್ ರಿಜ್ವಿ ಅವರು ಕರೆ ನೀಡಿದ್ದಾರೆ.

    ಉತ್ತರ ಪ್ರದೇಶದಲ್ಲಿ ಮುಸ್ಲಿಂ ಸಮುದಾಯದವರು ಸಮಾಜವಾದಿ ಪಕ್ಷಕ್ಕೆ ಬೆಂಬಲ ನೀಡುವುದನ್ನು ನಿಲ್ಲಿಸಬೇಕು. ಇತರ ಪರ್ಯಾಯಗಳನ್ನು ಅನ್ವೇಷಿಸಿ ಮತ್ತು ಬಿಜೆಪಿ ವಿರೋಧಿ ಟ್ಯಾಗ್ ಅನ್ನು ಕೈಬಿಡಿ ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಪಂಜಾಬ್‍ ಮಾಜಿ ಸಿಎಂ ಚರಂಜಿತ್ ಸಿಂಗ್ ಚನ್ನಿಗೆ ಇಡಿ ಸಂಕಷ್ಟ

    ರಾಜ್ಯದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷವು ಇತ್ತೀಚೆಗಷ್ಟೇ ಮುಗಿದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಟಿಕೆಟ್ ನೀಡದೆ ಮುಸ್ಲಿಂ ಸಮುದಾಯದ ಹಿರಿಯ ನಾಯಕರನ್ನು ನಿರ್ಲಕ್ಷಿಸಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಉತ್ತರ ಪ್ರದೇಶದಲ್ಲಿ ಮುಂಚೂಣಿಗೆ ಬಂದಿರುವ ಹೊಸ ಸನ್ನಿವೇಶಗಳ ಆಧಾರದ ಮೇಲೆ, ಮುಸ್ಲಿಂ ಸಮುದಾಯವು ಸಮಾಜವಾದಿ ಪಕ್ಷವನ್ನು ಬೆಂಬಲಿಸುವುದನ್ನು ನಿಲ್ಲಿಸಬೇಕು. ಅಖಿಲೇಶ್ ಯಾದವ್, ಮುಸ್ಲಿಮರನ್ನು ನಿರ್ಲಕ್ಷಿಸುತ್ತಿರುವುದರಿಂದ ಪರ್ಯಾಯಗಳ ಬಗ್ಗೆ ಯೋಚಿಸಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಈ ಬಾರಿ ಮಾನ್ಸೂನ್‍ನಲ್ಲಿ ಭಾರತದ ಬಹುತೇಕ ಭಾಗಗಳಲ್ಲಿ ಸಾಮಾನ್ಯ ಮಳೆಯಾಗಲಿದೆ – IMD

    ಸಮಾಜವಾದಿ ಪಕ್ಷವು ಹಿರಿಯ ಮುಸ್ಲಿಂ ನಾಯಕರಿಗೆ ಪಕ್ಷದ ಟಿಕೆಟ್ ನೀಡಲಿಲ್ಲ. ಮುಲಾಯಂ ಸಿಂಗ್ ಯಾದವ್ ಅವರು ಮುಸ್ಲಿಮರ ಹಿತೈಷಿಯಾಗಿದ್ದರು. ಆದರೆ ಈಗ ಅಖಿಲೇಶ್ ಯಾದವ್ ನೇತೃತ್ವದಲ್ಲಿ ಎಸ್‌ಪಿ ನಮ್ಮ ಹಿತೈಷಿ ಅಲ್ಲ ಎಂದು ರಿಜ್ವಿ ಹೇಳಿದ್ದಾರೆ.

    ಈಗ ಮುಸ್ಲಿಮರು ಮುಸ್ಲಿಮರ ವಿರುದ್ಧವೇ ತಿರುಗಿದ್ದಾರೆ. ಹಿಂದೂಗಳು ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ಮಾತನಾಡುತ್ತಿದ್ದಾರೆ. ಯೋಗಿ ಆದಿತ್ಯನಾಥ್ ಅವರು ಎರಡನೇ ಅವಧಿಗೆ ಮುಖ್ಯಮಂತ್ರಿಯಾದ ನಂತರ ಮುಸ್ಲಿಮರ ವಿರುದ್ಧ ಮುಸ್ಲಿಮರು ತಿರುಗಿ ಬಿದ್ದಿರುವುದು ಕಂಡು ಬರುತ್ತಿದೆ. ಒಬ್ಬ ಮುಸ್ಲಿಂ ಬಿಜೆಪಿ ಧ್ವಜ ಇಟ್ಟುಕೊಂಡರೆ, ಮತ್ತೊಬ್ಬ ಮುಸ್ಲಿಂ ವಿರೋಧಿಸುತ್ತಾನೆ. ಇದು ಒಂದೆರಡು ಕೊಲೆಗಳಿಗೂ ಕಾರಣವಾಗಿದೆ. ಮತ್ತೊಂದೆಡೆ ಹಿಂದೂಗಳು ಮುಸ್ಲಿಮರ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪ್ರಧಾನಮಂತ್ರಿಗಳ ಮ್ಯೂಸಿಯಂ ಉದ್ಘಾಟನೆ: ವಿಶೇಷತೆ ಏನು? ಟಿಕೆಟ್‌ ದರ ಎಷ್ಟು?

    ಎರಡು ಸಮುದಾಯಗಳ ನಡುವೆ ದ್ವೇಷ ಹೆಚ್ಚುತ್ತಿದೆ. ನಾನು ಈ ದ್ವೇಷವನ್ನು ಕೊನೆಗೊಳಿಸಬೇಕು ಎಂದು ಬಯಸುತ್ತೇನೆ. ಪರಸ್ಪರರ ವಿರುದ್ಧ ಹೋರಾಡುತ್ತಿರುವ ಮುಸ್ಲಿಮರು ಇದನ್ನು ನಿಲ್ಲಿಸಬೇಕು. ಅದಕ್ಕೆ ಪರಿಣಾಮಕಾರಿ ಮಾರ್ಗವೆಂದರೆ ಮುಸ್ಲಿಮರು ಬಿಜೆಪಿಯನ್ನು ವಿರೋಧಿಸುವುದನ್ನು ನಿಲ್ಲಿಸಬೇಕು ಎಂದು ತಿಳಿಸಿದ್ದಾರೆ.