Tag: ಸಮಾಜವಾದಿ ಪಾರ್ಟಿ

  • 403ರಲ್ಲಿ 400 ಕ್ಷೇತ್ರಗಳಲ್ಲಿ ನಾವೇ ಗೆಲ್ಲುತ್ತೇವೆ: ಅಖಿಲೇಶ್ ಯಾದವ್

    403ರಲ್ಲಿ 400 ಕ್ಷೇತ್ರಗಳಲ್ಲಿ ನಾವೇ ಗೆಲ್ಲುತ್ತೇವೆ: ಅಖಿಲೇಶ್ ಯಾದವ್

    – ಮೂರು ಕ್ಷೇತ್ರ ಬೇಡ ಅಂದಿದ್ಯಾಕೆ?

    ಲಕ್ನೋ: 2022ರ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಾರ್ಟಿ 400 ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂದು ಪಕ್ಷದ ಮುಖ್ಯಸ್ಥ, ಮಾಜಿ ಸಿಎಂ ಅಖಿಲೇಶ್ ಯಾದವ್ ಭವಿಷ್ಯ ನುಡಿದಿದ್ದಾರೆ.

    ಖಾಸಗಿ ವಾಹಿನಿಯ ಸಂವಾದದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅಖಿಲೇಶ್ ಯಾದವ್ ಹಲವು ರಾಜಕೀಯ ವಿಚಾರಗಳನ್ನು ಹಂಚಿಕೊಂಡರು. ಈ ಸಂವಾದದಲ್ಲಿ 400 ಕ್ಷೇತ್ರಗಳನ್ನು ಗೆಲ್ಲುವ ತಮ್ಮ ಗುರಿಯನ್ನು ಹೇಳಿಕೊಂಡರು. ಸಣ್ಣ ಪಕ್ಷಗಳ ಜೊತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವ ಚಿಂತನೆಯಲ್ಲಿದ್ದೇವೆ. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಚಿಕ್ಕ ಪಕ್ಷ. ಈ ಮೊದಲು ದೊಡ್ಡ ಪಕ್ಷಗಳ ಜೊತೆ ಮಾಡಿಕೊಂಡಿದ್ದ ಮೈತ್ರಿ ಲಾಭದಾಯಕವಾಗಿರಲಿಲ್ಲ ಎಂದು ಹೇಳಿದ್ದಾರೆ.

    ಸದ್ಯ ಹಲವು ಸ್ಥಳೀಯ ಪಕ್ಷದ ನಾಯಕರ ಜೊತೆ ಸಭೆ ನಡೆಯುತ್ತಿದ್ದು, ಯಾವುದೂ ಅಂತಿಮಗೊಂಡಿಲ್ಲ. ಈ ಸಂದರ್ಭದಲ್ಲಿ ಯಾರ ಜೊತೆ ಚರ್ಚೆ ನಡೆತಯುತ್ತಿದೆ ಎಂದು ಹೇಳಲಾರೆ. ನಮ್ಮ ರಾಜಕೀಯ ರಣನೀತಿಗಳನ್ನು ರಿವೀಲ್ ಮಾಡಲ್ಲ. ಕಾರಣ ಬಿಜೆಪಿಯವರು ತುಂಬಾನೇ ಚಾಲಾಕಿಗಳು ಎಂದು ವಿರೋಧಿ ಬಣ ಬಲಿಷ್ಠವಾಗಿರೋದನ್ನು ಪರೋಕ್ಷವಾಗಿ ಅಖಿಲೇಶ್ ಯಾದವ್ ಒಪ್ಪಿಕೊಂಡರು.

    ಚಿಕ್ಕಪ್ಪ ಶಿವಪಾಲ್ ಅವರಿಗಾಗಿ ಜಸ್ವಂತ್ ನಗರ ಸೀಟ್ ಬಿಟ್ಟುಕೊಡಲಾಗಿದೆ. ಇನ್ನು ಅವರ ಬೆಂಬಲಿಗರಿಗೆ ಎಷ್ಟು ಕ್ಷೇತ್ರ ನೀಡಬೇಕು ಎಂಬುದರ ಬಗ್ಗೆ ತೀರ್ಮಾನವಾಗಿಲ್ಲ. ಚುನಾವಣೆ ಪೂರ್ವ ಮೈತ್ರಿ ಬಳಿಕ ಪರಿಸ್ಥಿತಿ ಮತ್ತು ಪಕ್ಷಗಳ ಹೊಂದಾಣಿಕೆ ಮೇಲೆ ಕ್ಷೇತ್ರಗಳನ್ನು ಹಂಚಿಕೊಳ್ಳುತ್ತೇವೆ. 403ರಲ್ಲಿ 400 ಸ್ಥಾನಗಳಲ್ಲಿ ಗೆಲ್ಲೋದು ನಮ್ಮ ಗುರಿ. ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷ ಇರಬೇಕು. ಹಾಗಾಗಿ ಇನ್ನುಳಿದ ಮೂರು ಕ್ಷೇತ್ರಗಳನ್ನು ನೀಡುತ್ತೇವೆ ಎಂದರು. ಇದನ್ನೂ ಓದಿ: ರಾಹುಲ್ ಗಾಂಧಿ ಬ್ರೇಕ್‍ಫಾಸ್ಟ್ ಮೀಟಿಂಗ್ – ಸಂಸತ್‍ವರೆಗೂ ಸೈಕಲ್ ಮಾರ್ಚ್

    ರಾಜ್ಯದ ಜನತೆ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದು, ಚುನಾವಣೆಗೋಸ್ಕರ ಕಾಯುತ್ತಿದ್ದಾರೆ. ಡಬಲ್ ಎಂಜಿನ್ ಸರ್ಕಾರದಿಂದ ರಾಜ್ಯಕ್ಕೆ ಯಾವುದೇ ಲಾಭ ಆಗಲಿಲ್ಲ. ಜನ ಈ ಸರ್ಕಾರ ಕಿತ್ತೊಗೆಯಲು ಸಂಕಲ್ಪ ಮಾಡಿದ್ದು, ಮತದಾನಕ್ಕಾಗಿ ಕಾಯುತ್ತಿದ್ದಾರೆ. ಈ ಬಾರಿ ಉತ್ತರ ಪ್ರದೇಶ ಬೃಹತ್ ಚುನಾವಣೆಗೆ ಸಾಕ್ಷಿಯಾಗಲಿದೆ ಎಂದು ಹೇಳಿದರು. ಇದನ್ನೂ ಓದಿ: ಪವರ್ ಫುಲ್ ಖಾತೆಗಳಿಗೆ ಸಿಕ್ಕಾಪಟ್ಟೆ ಡಿಮ್ಯಾಂಡ್ – ರೆಬಲ್‍ಗಳ ರಹಸ್ಯ ಸಭೆ!

  • ಮಮತಾ ಬ್ಯಾನರ್ಜಿ ಮತ್ತೊಮ್ಮೆ ಸಿಎಂ ಆಗ್ತಾರೆ – ದೀದಿ ಬೆಂಬಲಕ್ಕೆ ನಿಂತ ಜಯಾ ಬಚ್ಚನ್

    ಮಮತಾ ಬ್ಯಾನರ್ಜಿ ಮತ್ತೊಮ್ಮೆ ಸಿಎಂ ಆಗ್ತಾರೆ – ದೀದಿ ಬೆಂಬಲಕ್ಕೆ ನಿಂತ ಜಯಾ ಬಚ್ಚನ್

    ಕೋಲ್ಕತ್ತಾ: ಟಿಎಂಸಿ ಮುಖ್ಯಸ್ಥೆ, ಸಿಎಂ ಮಮತಾ ಬ್ಯಾನರ್ಜಿ ಮತ್ತೊಮ್ಮೆ ಮುಖ್ಯಮಂತ್ರಿ ಆಗ್ತಾರೆ ಎಂದು ನಟಿ, ರಾಜ್ಯಸಭಾ ಸಂಸದೆ ಜಯಾ ಬಚ್ಚನ್ ಭವಿಷ್ಯ ನುಡಿದಿದ್ದಾರೆ.

    ಮಂಗಳವಾರ ಪಶ್ಚಿಮ ಬಂಗಾಳದಲ್ಲಿ ಮೂರನೇ ಹಂತದ ಮತದಾನ ನಡೆಯಲಿದೆ. ಸಮಾಜವಾದಿ ಪಕ್ಷದ ನಾಯಕಿಯಾಗಿರುವ ಜಯಾ ಬಚ್ಚನ್ ಇವತ್ತು ಟಿಎಂಸಿ ಅಭ್ಯರ್ಥಿಗಳ ಪರವಾಗಿ ನಡೆದ ರೋಡ್ ಶೋನಲ್ಲಿ ಭಾಗಿಯಾಗಿ ಮತ ಯಾಚನೆ ಮಾಡಿದರು. ಟಾಲಿಗಂಜ್ ವಿಧಾನಸಭಾ ಕ್ಷೇತ್ರದಲ್ಲಿ ಟಿಎಂಸಿಯಿಂದ ಅರುಣ್ ವಿಶ್ವಾಸ್ ಕಣಕ್ಕಿಳಿಸಿದ್ದಾರೆ. ಬಿಜೆಪಿ ಪರವಾಗಿ ಕೇಂದ್ರ ಸಚಿವೆ ಬಬುಲ್ ಸುಪ್ರಿಯೋ ಚುನಾವಣೆ ಮೈದಾನದಲ್ಲಿದ್ದಾರೆ.

    ರೋಡ್ ಶೋ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಜಯಾ ಬಚ್ಚನ್, ಪಶ್ಚಿಮ ಬಂಗಾಳದಲ್ಲಿ ಇನ್ನು ಹೆಚ್ಚಿನ ಅಭಿವೃದ್ಧಿ ಆಗಲಿದೆ. ಅದು ಕೇವಲ ಮಮತಾ ಬ್ಯಾನರ್ಜಿ ಮತ್ತೊಮ್ಮೆ ಸಿಎಂ ಆದಾಗ ಮಾತ್ರ ಸಾಧ್ಯ ಎಂದು ಹೇಳಿದರು. ಇತ್ತ ಟಿಎಂಸಿಗೆ ಸಾಥ್ ನೀಡಿದ್ದಕ್ಕೆ ಜಯಾ ಬಚ್ಚನ್ ಮತ್ತು ಸಮಾಜವಾದಿ ಪಾರ್ಟಿಯ ಮುಖ್ಯಸ್ಥ ಅಖಿಲೇಶ್ ಯಾದವ್ ಅವರಿಗೆ ಮಮತಾ ಬ್ಯಾನರ್ಜಿ ಧನ್ಯವಾದ ಸಲ್ಲಿಸಿದ್ದಾರೆ.

    ಜಯಾ ಬಚ್ಚನ್ ಕ್ಯಾಂಪೇನ್ ಕುರಿತು ಪ್ರತಿಕ್ರಿಯಿಸಿರುವ ಬಬುಲ್ ಸುಪ್ರಿಯೋ, ಅವರು ನೇರವಾಗಿ ಮಾತನಾಡುವ ನಾಯಕಿ. ಪಕ್ಷಗಳ ಆದೇಶದ ಹಿನ್ನೆಲೆ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಪರವಾಗಿ ಚುನಾವಣೆ ಪ್ರಚಾರ ನಡೆಸುತ್ತಿರಬಹುದು. ಬಚ್ಚನ್ ಕುಟುಂಬದ ಆಪ್ತರಲ್ಲಿ ನಾನು ಒಬ್ಬ. ಕ್ಯಾಂಪೇನ್ ನಲ್ಲಿ ಬಿಜೆಪಿ ವಿರುದ್ಧ ಆರೋಪಗಳನ್ನ ಮಾಡಬಹುದು, ಆದ್ರೆ ನನ್ನ ವಿರುದ್ಧ ಜಯಾಜೀ ಮಾತನಾಡಲಾರು ಎಂದು ಹೇಳಿದ್ದಾರೆ. ಅಭಿಷೇಕ್ ಬಚ್ಚನ್ ಸಿನಿಮಾಗಳ ಹಾಡುಗಳಿಗೆ ಬಬೂಲ್ ಸುಪ್ರಿಯೋ ಧ್ವನಿ ನೀಡಿದ್ದಾರೆ. ಇದನ್ನೂ ಓದಿ: ಇಷ್ಟು ಕೆಟ್ಟ ಪ್ರಧಾನಿ, ಗೃಹ ಸಚಿವರನ್ನ ನೋಡಿಯೇ ಇಲ್ಲ: ದೀದಿ ವಾಗ್ದಾಳಿ

  • ಬಿಹಾರ ಎಫೆಕ್ಟ್ – ದೊಡ್ಡ ಪಕ್ಷಗಳ ಜೊತೆಗಿನ ಮೈತ್ರಿಗೆ ನೋ ಎಂದ ಅಖಿಲೇಶ್ ಯಾದವ್

    ಬಿಹಾರ ಎಫೆಕ್ಟ್ – ದೊಡ್ಡ ಪಕ್ಷಗಳ ಜೊತೆಗಿನ ಮೈತ್ರಿಗೆ ನೋ ಎಂದ ಅಖಿಲೇಶ್ ಯಾದವ್

    – 2022ರ ಚುನಾವಣೆಗೆ ‘ಸೈಕಲ್’ ಏರಿದ ಅಖಿಲೇಶ್

    ಲಕ್ನೋ: ರಾಷ್ಟ್ರೀಯ ಪಕ್ಷಗಳು ಸೇರಿದಂತೆ ದೊಡ್ಡವರ ಜೊತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಲ್ಲ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಹೇಳಿದ್ದಾರೆ. ಪ್ರಾದೇಶಿಕ ಪಕ್ಷವಾಗಿರುವ ಬಿಎಸ್‍ಪಿ ಜೊತೆಗೂ ತಾವು ಹೋಗಲ್ಲ ಎಂಬುದನ್ನ ಅಖಿಲೇಶ್ ಯಾದವ್ ಸ್ಪಷ್ಟಪಡಿಸಿದ್ದಾರೆ.

    2022ರ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಪ್ಪ ಶಿವಪಾಲ್ ಸಿಂಗ್ ಯಾದವ್ ನೇತೃತ್ವದ ಪ್ರಗತಿಶೀಲ ಸಮಾಜವಾದಿ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಉತ್ಸಾಹ ತೋರಿಸಿದ್ದಾರೆ. ಚುನಾವಣೆಯಲ್ಲಿ ಜಸ್ವಂತ್ ನಗರದ ವಿಧಾನಸಭಾ ಕ್ಷೇತ್ರಗಳನ್ನ ಬಿಟ್ಟುಕೊಡಲು ಸಿದ್ಧ ಎಂಬುದನ್ನ ಅಖಿಲೇಶ್ ಇಂದಿನ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಚುನಾವಣೆ ತಯಾರಿಯನ್ನು ಅಖಿಲೇಶ್ ಆರಂಭಿಸಿದ್ದಾರೆ.

    ಅಖಿಲೇಶ್ ಯಾದವ್ 2017ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮತ್ತು 2019ರ ಲೋಕಸಭೆ ಎಲೆಕ್ಷನ್ ನಲ್ಲಿ ಬಿಎಸ್‍ಪಿ ಜೊತೆ ಮೈತ್ರಿ ರಚಿಸಿಕೊಂಡು ಉತ್ತರಪ್ರದೇಶದ ಜನತೆ ಮುಂದೆ ಹೋಗಿತ್ತು. ಆದ್ರೆ ಎರಡೂ ಚುನಾವಣೆಗಳಲ್ಲಿ ಪಕ್ಷ ತನ್ನ ಕಳಪೆ ಪ್ರದರ್ಶನ ತೋರಿಸಿತ್ತು. ಹೀಗಾಗಿ ಚಿಕ್ಕಪ್ಪ ಶಿವಪಾಲ್ ಜೊತೆಯಲ್ಲಿ 2022ರ ಚುನಾವಣೆ ಅಖಾಡಕ್ಕೆ ಇಳಿಯಲು ಅಖಿಲೇಶ್ ಯಾದವ್ ಮುಂದಾಗಿದ್ದಾರೆ. ಆದ್ರೆ ಅಖಿಲೇಶ್ ಪ್ರಸ್ತಾಪಕ್ಕೆ ಶಿವಪಾಲ್ ಯಾದವ್ ಪ್ರತಿಕ್ರಿಯಿಸಿಲ್ಲ.

    ಬಿಹಾರ ಎಫೆಕ್ಟ್: ಬಿಹಾರ ಚುನಾವಣೆಯಲ್ಲಿ ರಾಷ್ಟ್ರೀಯ ಜನತಾ ದಳದ ತೇಜಸ್ವಿ ಯಾದವ್ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿತ್ತು. ಆರ್ ಜೆಡಿ ಚುನಾವಣೆಯಲ್ಲಿ ಬಹುದೊಡ್ಡ ಪಕ್ಷವಾಗಿ ಹೊರ ಹೊಮ್ಮಿದರೂ ಅಧಿಕಾರದಿಂದ ವಂಚಿತವಾಗಿದೆ. ಬಿಹಾರದ 70 ವಿಧಾನಸಭಾ ಕ್ಷೇತ್ರಗಳಲ್ಲಿ ಕಣಕ್ಕಿಳಿದಿದ್ದ ಕಾಂಗ್ರೆಸ್ 19ರಲ್ಲಿ ಗೆದ್ದಿತ್ತು.

  • ಮಾಯಾವತಿ ಬೆನ್ನಲ್ಲೇ ಕಾಂಗ್ರೆಸ್ ಜೊತೆ ಮೈತ್ರಿಯಿಂದ ಹಿಂದೆ ಸರಿಯುವ ಸೂಚನೆ ನೀಡಿದ ಅಖಿಲೇಶ್ ಯಾದವ್

    ಮಾಯಾವತಿ ಬೆನ್ನಲ್ಲೇ ಕಾಂಗ್ರೆಸ್ ಜೊತೆ ಮೈತ್ರಿಯಿಂದ ಹಿಂದೆ ಸರಿಯುವ ಸೂಚನೆ ನೀಡಿದ ಅಖಿಲೇಶ್ ಯಾದವ್

    ಲಕ್ನೋ: ಬಿಎಸ್‍ಪಿ ಮುಖ್ಯಸ್ಥೆ ಮಾಯಾವತಿ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ನಿರಾಕರಿಸಿ ಏಕಾಂಗಿ ಸ್ಪರ್ಧಿಸಲಿದ್ದೇವೆ ಎಂದು ಹೇಳಿದ ಬೆನ್ನಲ್ಲೇ ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಕೂಡ ಕಾಂಗ್ರೆಸ್ ನೊಂದಿಗೆ ಮೈತ್ರಿ ರಚಿಸುವ ಬಗ್ಗೆ ಹಿಂದೆ ಸರಿದಿದ್ದಾರೆ.

    ಈ ಕುರಿತು ಖಾಸಗಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಅಖಿಲೇಶ್ ಯಾದವ್, ಕಾಂಗ್ರೆಸ್ ಪಕ್ಷ ನಮ್ಮನ್ನು ಈಗಾಗಲೇ ಹೆಚ್ಚು ಸಮಯ ಕಾಯುವಂತೆ ಮಾಡಿದೆ. ಅದ್ದರಿಂದ ಮುಂಬರುವ ಮಧ್ಯಪ್ರದೇಶ ಚುನಾವಣೆಗೆ ನಾವು ಬಿಎಸ್‍ಪಿ ಜೊತೆಗೆ ಮಾತುಕತೆ ನಡೆಸುತ್ತೇವೆ ಎಂದು ಹೇಳಿದ್ದಾರೆ.

    ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿರುವ ಅಖಿಲೇಶ್ ಯಾದವ್ ಅವರ ಈ ತೀರ್ಮಾನ ಮಹಾಮೈತ್ರಿ ರಚಿಸಲು ಸಿದ್ಧತೆ ನಡೆಸುತ್ತಿದ್ದ ಕಾಂಗ್ರೆಸ್ ನಾಯಕರಿಗೆ ಭಾರೀ ಹಿನ್ನಡೆ ಉಂಟು ಮಾಡಲಿದೆ ಎಂದು ರಾಜಕೀಯ ವಿಶ್ಲೇಷಕರು ತಿಳಿಸಿದ್ದಾರೆ.

    ಯಾದವ್ ಅವರ ಈ ನಿರ್ಧಾರದ ಹಿಂದೆ ಪ್ರಮುಖ ಕಾರಣವೂ ಇದ್ದು ಮಾಯಾವತಿ ನೇತೃತ್ವದ ಬಿಎಸ್‍ಪಿ ಪಕ್ಷದೊಂದಿಗೆ ಮೈತ್ರಿ ರಾಜಕಾರಣಕ್ಕೆ ಮುಂದಾದರೆ ಜಾತಿ ರಾಜಕೀಯ ಲೆಕ್ಕಚಾರದಲ್ಲಿ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಲಭಿಸುವ ಸಾಧ್ಯತೆ ಇದೆ. ಇದರೊಂದಿಗೆ ಕಳೆದ 15 ವರ್ಷಗಳಿಂದ ಮುಂದಾಳತ್ವದಲ್ಲಿರುವ ಬಿಜೆಪಿ ವಿರುದ್ಧ ಗೆಲುವು ನಿಶ್ಚಿತವಾಗಲಿದೆ ಎಂಬ ಲೆಕ್ಕಾಚಾರ ನಡೆಸಿದ್ದಾರೆ ಎನ್ನಲಾಗಿದೆ.

    ಕಳೆದ ಕೆಲ ದಿನಗಳ ಹಿಂದೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಮಾಯಾವತಿ ಅವರು, ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಯಾವುದೇ ಕಾರಣಕ್ಕೂ ಬಿಎಸ್‍ಪಿ ಪಕ್ಷ ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ರಾಜಕೀಯವಾಗಿ ಬಿಎಸ್‍ಪಿ ಪಕ್ಷವನ್ನು ಮುಗಿಸಲು ಪ್ರಯತ್ನ ನಡೆಸಿದೆ. ಪಕ್ಷದ ಬೆಳವಣಿಗೆ ಉದ್ದೇಶದಿಂದ ಮಧ್ಯಪ್ರದೇಶ, ರಾಜಸ್ಥಾನ ಚುನಾವಣೆಗಳಲ್ಲಿ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv