Tag: ಸಮಾಜ ವಿಜ್ಞಾನ

  • ಎಸ್‍ಎಸ್‍ಎಲ್‍ಸಿ ಪರೀಕ್ಷೆ – 1 ಗಂಟೆಯಲ್ಲೇ ಪ್ರಶ್ನೆ ಪತ್ರಿಕೆ ವೈರಲ್

    ಎಸ್‍ಎಸ್‍ಎಲ್‍ಸಿ ಪರೀಕ್ಷೆ – 1 ಗಂಟೆಯಲ್ಲೇ ಪ್ರಶ್ನೆ ಪತ್ರಿಕೆ ವೈರಲ್

    ರಾಯಚೂರು: ಇಂದು ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಸಮಾಜ ವಿಜ್ಞಾನ ಪ್ರಶ್ನೆ ಪತ್ರಿಕೆ ಪರೀಕ್ಷೆ ನಡೆಯುತ್ತಿರುವಾಗಲೇ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್‍ನಲ್ಲಿ ವಾಟ್ಸಪ್, ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಪತ್ರಿಕೆ ಹರಿದಾಡುತ್ತಿದೆ. ಆದರೆ ಯಾರಿಂದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬುದು ತಿಳಿದುಬಂದಿಲ್ಲ. ಹೀಗಾಗಿ ಈ ಕುರಿತು ಪೊಲೀಸರಿಗೆ ದೂರು ನೀಡುವುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ವೃಷಭೇಂದ್ರಯ್ಯ ಸ್ವಾಮಿ ಹೇಳಿದ್ದಾರೆ. ಇದನ್ನೂ ಓದಿ: ಚಂದ್ರು ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಕೊಟ್ಟ ಜಮೀರ್‌

    ಪ್ರಶ್ನೆ ಪತ್ರಿಕೆಗಳು ಪರೀಕ್ಷೆಗೂ ಮೊದಲೇ ಲೀಕ್ ಆಗಿಲ್ಲ. ಆದರೆ ಪರೀಕ್ಷೆಯ ಆರಂಭವಾದ ಬಳಿಕ ಯಾರೋ ಫೋಟೋ ತೆಗೆದಿರುವ ಸಾಧ್ಯತೆಯಿದೆ. ಇದನ್ನೂ ಓದಿ:  ಗರ್ಲ್‍ಫ್ರೆಂಡ್, ಮಾಜಿ ಪತ್ನಿ ಜೊತೆ ಗೋವಾದಲ್ಲಿ ಪಾರ್ಟಿ ಮಾಡಿದ ಹೃತಿಕ್ ರೋಷನ್

    ಭರ್ಜರಿ ನಕಲು: ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ಪರೀಕ್ಷೆಯಲ್ಲಿ ಭರ್ಜರಿ ನಕಲು ಸಹ ನಡೆದಿದೆ. ರಾಯಚೂರು ನಗರದ ಆಶಾಪೂರ ರಸ್ತೆಯ ಮೊರಾರ್ಜಿ ವಸತಿ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಎಲ್ಲಾ ರಿಪೀಟರ್ಸ್ ಪರೀಕ್ಷೆ ಬರೆಯುತ್ತಿದ್ದು ಎಗ್ಗಿಲ್ಲದೆ ನಕಲು ನಡೆದಿದೆ. ವಿದ್ಯಾರ್ಥಿಗಳ ಪೋಷಕರೇ ಹೊರಗಿನಿಂದ ನಕಲು ಮಾಡಿ ಒಳಗಡೆ ಹೋಗಿ ಚೀಟಿ ಕೊಟ್ಟು ಬರುತ್ತಿದ್ದಾರೆ.

    ಪರೀಕ್ಷಾ ಕೇಂದ್ರದಲ್ಲಿದ್ದವರೇ ಬಂದು ಚೀಟಿ ತೆಗೆದುಕೊಂಡು ಹೋಗುತ್ತಿದ್ದರು ಕೇಳುವವರಿಲ್ಲದಂತಾಗಿದೆ. ಕಣ್ಮುಂದೆ ಪರೀಕ್ಷಾ ಅಕ್ರಮ ನಡೆಯುತ್ತಿದ್ದರೂ ಅಧಿಕಾರಿಗಳು ಸುಮ್ಮನಿದ್ದಾರೆ. ಡಿಡಿಪಿಐ ವೃಷಭೇಂದ್ರಯ್ಯ ಸ್ವಾಮಿ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

  • ಹತ್ತನೇ ತರಗತಿ ಪುಸ್ತಕದಲ್ಲಿ ನೆಹರು ಬದಲು ಸಾರ್ವಕರ್ ಫೋಟೋ: ಎನ್‍ಎಸ್‍ಯುಐ ವಿರೋಧ

    ಹತ್ತನೇ ತರಗತಿ ಪುಸ್ತಕದಲ್ಲಿ ನೆಹರು ಬದಲು ಸಾರ್ವಕರ್ ಫೋಟೋ: ಎನ್‍ಎಸ್‍ಯುಐ ವಿರೋಧ

    ಪಣಜಿ: ಗೋವಾದ 10ನೇ ತರಗತಿ ಪುಸ್ತಕದಲ್ಲಿದ್ದ ಮಾಜಿ ಪ್ರಧಾನಿ ಜವಹಾರ್ ಲಾಲ್ ಭಾವಚಿತ್ರದ ತಗೆದು ಆರ್‌ಎಸ್‌ಎಸ್ ಸಹ ಸಂಸ್ಥಾಪಕ, ಸ್ವಾತಂತ್ರ್ಯ ಹೋರಾಟಗಾರ ವಿ.ಡಿ.ಸಾರ್ವಕರ್ ಫೋಟೋ ಬಳಕೆ ಮಾಡಲಾಗಿದ್ದು, ಇದಕ್ಕೆ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಸಂಘ (ಎನ್‍ಎಸ್‍ಯುಐ) ಭಾರೀ ವಿರೋಧ ವ್ಯಕ್ತಪಡಿಸಿದೆ.

    10ನೇ ತರಗತಿಯ ಸಮಾಜವಿಜ್ಞಾನ ವಿಷಯ ಪುಸ್ತಕದಲ್ಲಿ ನೆಹರು ಫೋಟೋ ಇತ್ತು. ಅದು 1935ರಲ್ಲಿ ಮಹಾರಾಷ್ಟ್ರದ ವಾರ್ದಾದಲ್ಲಿ ಜವಹಾರ್ ಲಾಲ್ ನೆಹರು ಅವರು ಮಹಾತ್ಮಾ ಗಾಂಧೀಜಿ ಹಾಗೂ ಮೌಲಾನ್ ಅಬ್ದುಲ್ ಕಲಾಂ ಆಜಾದ್ ಜೊತೆಗೆ ಇದ್ದ ಭಾವಚಿತ್ರ. ಆದರೆ ನೆಹರು ಫೋಟೋ ತಗೆದು ಅಲ್ಲಿ ವಿ.ಡಿ.ಸಾರ್ವಕರ್ ಫೋಟೋ ಹಾಕಲಾಗಿದೆ ಎಂದು ದೂರಿದೆ.

    ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಬಲಪಂತಿಯ ವಿಚಾರಗಳನ್ನು ಎತ್ತಿ ಹಿಡಿಯುತ್ತಿದೆ. ಅಷ್ಟೇ ಅಲ್ಲದೇ ಬಿಜೆಪಿಯವರು ಇತಿಹಾಸವನ್ನು ತಿರುಚಲು ಹಾಗೂ ಸ್ವಾತಂತ್ರ್ಯದಲ್ಲಿ ಕಾಂಗ್ರೆಸ್ ಕೊಡುಗೆಯನ್ನು ಮರೆಸಲು ಪ್ರಯತ್ನಿಸುತ್ತಿದ್ದಾರೆ ಎಂದು ಎನ್‍ಎಸ್‍ಯುಐ ಗೋವಾ ರಾಜ್ಯ ಅಧ್ಯಕ್ಷ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಮುಂದಿನ ದಿನಗಳಲ್ಲಿ ಮಹಾತ್ಮಾ ಗಾಂಧಿ ಕಾಂಗ್ರೆಸ್ಸಿಗೆ ಸೇರಿದವರು ಎನ್ನುವ ಕಾರಣಕ್ಕೆ ಅವರ ಫೋಟೋವನ್ನು ತಗೆದು ಹಾಕಬಹುದು. 60 ವರ್ಷಗಳಿಂದ ಕಾಂಗ್ರೆಸ್ ಏನು ಮಾಡಿದೆ ಎನ್ನುವುದದು ಬಿಜೆಪಿ ವಾದವಾಗಿದೆ. ದೇಶದ ಸ್ವಾತಂತ್ರ್ಯಕ್ಕೆ ಕಾಂಗ್ರೆಸ್ ಹಿರಿಯ ನಾಯಕರು ನೀಡಿದ ಕೊಡುಗೆಯನ್ನು ಇತಿಹಾಸದಿಂದ ಅಳಿಸಿ ಹಾಕಲು ಬಿಜೆಪಿಯವರಿಗೆ ಅವರಿಗೆ ಸಾಧ್ಯವಿಲ್ಲ ಎಂದು ಹೇಳಿದರು.

    ಫೋಟೋ ಬದಲಾಯಿಸಿದ್ದಕ್ಕೆ ಕಾರಣ ನೀಡುವಂತೆ ಉನ್ನತ ಹಾಗೂ ಮಾಧ್ಯಮಿಕ ಪರೀಕ್ಷಾ ಮಂಡಳಿಗೆ ಸೂಚನೆ ನೀಡಲಾಗಿದೆ ಎಂದು ಶಿಕ್ಷಣ ಇಲಾಖೆ ನಿರ್ದೇಶಕ ಗಜಾನನ ಪಿ ಭಟ್ ತಿಳಿಸಿದ್ದು, ಇತ್ತ ಶಿಕ್ಷಣ ಮಂಡಳಿಯ ಅಧ್ಯಕ್ಷ ರಾಮಕೃಷ್ಣ ಸಮಂತ್ ತನಿಖೆಗೆ ಆದೇಶ ನೀಡಿದ್ದಾರೆ.

    ವೃತ್ತಿ ಅನುಭವ ಹಾಗೂ ಹಿನ್ನಲೆ ಆಧಾರದ ಮೇಲೆ ಶಿಕ್ಷಕರನ್ನು ಪುಸ್ತಕದ ವಿಷಯ ಬದಲಾವಣೆಗೆ ಆಯ್ಕೆ ಮಾಡಲಾಗುತ್ತದೆ. ಎಲ್ಲ ಕಡೆಗೂ ಬದಲಾವಣೆ ಮಾಡುವ ಅಧಿಕಾರ ಅವರಿಗೆ ಇರುವುದಿಲ್ಲ. ಅವಶ್ಯಕತೆ ಇರುವಲ್ಲಿ ವಿಷಯ ಬದಲಾವಣೆಗೆ ಸಲಹೆ ನೀಡಬಹುದು. ಆದರೆ ಅವರು ಏಕೆ ಫೋಟೋ ಬದಲಾವಣೆ ಮಾಡಿದರು ಎನ್ನುವುದು ತಿಳಿದಿಲ್ಲ. ಹೀಗಾಗಿ ತನಿಖೆಗೆ ಆದೇಶ ನೀಡಲಾಗಿದೆ ಎಂದು ರಾಮಕೃಷ್ಣ ಸಮಂತ್ ತಿಳಿಸಿದ್ದಾರೆಂದು ವರದಿಯಾಗಿದೆ.

    ಮೇ ತಿಂಗಳಿನಲ್ಲಿ ಹೊಸ ಪಠ್ಯ ಬಿಡುಗಡೆಯಾಗಿದೆ ಎಂದು ಶಿಕ್ಷಣ ಇಲಾಖೆ ಹೇಳಿದೆ.