Tag: ಸಮಾನತೆ

  • ಮೊದಲು ಕಾಂಗ್ರೆಸ್ಸನ್ನು ತೊಡೆದು ಹಾಕಿ ಬಿಜೆಪಿಯನ್ನು ಧ್ವಂಸ ಮಾಡಬೇಕು: ಚೇತನ್

    ಮೊದಲು ಕಾಂಗ್ರೆಸ್ಸನ್ನು ತೊಡೆದು ಹಾಕಿ ಬಿಜೆಪಿಯನ್ನು ಧ್ವಂಸ ಮಾಡಬೇಕು: ಚೇತನ್

    ಬೆಂಗಳೂರು: ಸಮಾಜದಲ್ಲಿ ಸಮಾನತೆಗಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡನ್ನು ಸೋಲಿಸಬೇಕು ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಹೇಳಿದ್ದಾರೆ.

    ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಅಧಿಕಾರಕ್ಕೋಸ್ಕರ ಕಾಂಗ್ರೆಸ್ ಪಕ್ಷವು ಏನನ್ನು ಬೇಕಾದರೂ ಮಾಡುತ್ತದೆ. ಬಿಜೆಪಿ ಪಕ್ಷವು ದ್ವೇಷದ ಸಿದ್ದಾಂತವನ್ನು ಹೊಂದಿದೆ. ನಾವು ಮೊದಲು ಬಿಜೆಪಿಯನ್ನು ತೊಡೆದು ಹಾಕಿದರೆ, ಕಾಂಗ್ರೆಸ್ ಅದರಿಂದ ಲಾಭ ಪಡೆದು ಇನ್ನಷ್ಟು ಬಲಗೊಳ್ಳುತ್ತದೆ. ಆದರೆ ಮೊದಲು ಕಾಂಗ್ರೆಸ್ಸನ್ನು ತೊಡೆದು ಹಾಕಿದರೆ, ಬಿಜೆಪಿಯ ಸಿದ್ದಾಂತವನ್ನು ನಮ್ಮ ಸಮಾನತೆಯ ಸಿದ್ಧಾಂತದಿಂದ ಧ್ವಂಸ ಮಾಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಕಾಂಗ್ರೆಸ್ ಪಕ್ಷದ ಸದಸ್ಯರಾದ ಕೆಬಿ ಹೆಡ್ಗೆವಾರ್ ಅವರು 1925 ರಲ್ಲಿ ಆರ್‍ಎಸ್‍ಎಸ್ ಸ್ಥಾಪಿಸಿದರು. ಕಾಂಗ್ರೆಸ್ಸಿನ ಮತ್ತೊಬ್ಬ ಸದಸ್ಯರಾದ ಬಾಲ ಗಂಗಾಧರ ತಿಲಕ್ ಅವರು ಹೆಡ್ಗೆವಾರ್ ಅವರನ್ನು ಪ್ರಭಾವಿಸಿದ್ದರು. ಕಾಂಗ್ರೆಸ್ ಮತ್ತು ಆರ್‍ಎಸ್‍ಎಸ್(ಸಂಘ ಪರಿವಾರ) ಯಾವತ್ತಿನಿಂದಲೂ ಒಂದಕ್ಕೊಂದು ಬೆಸೆದುಕೊಂಡೆ ಇದೆ. ಬ್ರಾಹ್ಮಣ್ಯವನ್ನು ಉಳಿಸಿಕೊಳ್ಳುವುದರಿಂದ ಕಾಂಗ್ರೆಸ್ ಮತ್ತು ಆರ್‍ಎಸ್‍ಎಸ್ ಎರಡಕ್ಕೂ ಲಾಭವಾಗುತ್ತದೆ. ಸಮಾನತೆಗಾಗಿ ಕಾಂಗ್ರೆಸ್ ಮತ್ತು ಸಂಘ, ಎರಡನ್ನೂ ಸೋಲಿಸಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಲಂಕೆಯಲ್ಲಿ ‘ಪಿಪಿಪಿ’ ಸಾಂಗ್ ಗುಂಗು – ಭರ್ಜರಿ ಸ್ಟೆಪ್ಸ್ ಹಾಕಿದ ಯೋಗಿ, ಕೃಷಿ ತಾಪಂಡ

    ಈ ಮುನ್ನ ಸೆಪ್ಟೆಂಬರ್ 6ರಂದು ಕನಕದಾಸರು 16ನೇ ಶತಮಾನದಲ್ಲಿ ಜಾತಿ ರಹಿತ ಮತ್ತು ವರ್ಗರಹಿತ ಸಮಾಜದ ಕನಸು ಕಂಡವರು. ವೈಯಕ್ತಿಕ ಅಧಿಕಾರಕ್ಕಾಗಿ ಜಾತಿ ಗುರುತನ್ನು ಬಳಸುವ ಸ್ವ-ಸೇವಕ ರಾಜಕಾರಣಿಗಳು ಕನಕರನು ಹೈಜಾಕ್ ಮಾಡಲು ಬಿಡಬಾರದು. ಸಮಾನತೆ ಮತ್ತು ನ್ಯಾಯಕ್ಕಾಗಿ ಹೋರಾಡಿದ ಕನಕದಾಸರು ನಮ್ಮೆಲ್ಲರಿಗೂ ಸೇರಿದವರು ಎಂದು ಮಾರ್ಮಿಕವಾಗಿ ಟ್ವೀಟ್ ಮಾಡಿದ್ದರು. ಇದನ್ನೂ ಓದಿ: ಚಂದನವನದ ಹಿರಿಯ ನಿರ್ಮಾಪಕ ಸಿ.ಜಯರಾಮ್ ಇನ್ನಿಲ್ಲ

  • ದಾವಣಗೆರೆಯ ಗ್ರಾಮದಲ್ಲಿ ಮಹಿಳೆಯರೇ ದೇವರ ರಥ ಎಳೆಯುತ್ತಾರೆ!

    ದಾವಣಗೆರೆಯ ಗ್ರಾಮದಲ್ಲಿ ಮಹಿಳೆಯರೇ ದೇವರ ರಥ ಎಳೆಯುತ್ತಾರೆ!

    ದಾವಣಗೆರೆ: ಬಹುತೇಕ ಪುರುಷರೇ ಹೆಚ್ಚು ರಥ ಎಳೆಯುತ್ತಾರೆ. ಆದ್ರೆ, ಜಿಲ್ಲೆಯ ಯರಗುಂಟೆ ಗ್ರಾಮದಲ್ಲಿ ಮಾತ್ರ ಮಹಿಳೆಯರಿಂದಲೇ ರಥೋತ್ಸವ ನಡೆಯುತ್ತದೆ.

    ಯರಗುಂಟೆ ಗ್ರಾಮದಲ್ಲಿ ಕರಿಬಸವೇಶ್ವರ ಸ್ವಾಮಿ ಮಠದಲ್ಲಿ ಒಂದು ವಿಶಿಷ್ಠ ಸಂಪ್ರದಾಯವಿದೆ. ಗ್ರಾಮದಲ್ಲಿ ನಡೆಯುವ ರಥೋತ್ಸವದಲ್ಲಿ ರಥವನ್ನು ಪುರುಷರ ಬದಲಾಗಿ ಮಹಿಳೆಯರು ಎಳೆಯೋದು ಇಲ್ಲಿನ ಪದ್ದತಿ. ಕಳೆದ 6 ವರ್ಷಗಳಿಂದ ರಥೋತ್ಸವವನ್ನು ಮಹಿಳೆಯರೇ ಎಳೆದುಕೊಂಡು ಬಂದಿದ್ದಾರೆ. ಪ್ರತಿ ವರ್ಷವು ಈ ಅವಿಸ್ಮರಣೀಯ ಕ್ಷಣಗಳಿಗೆ ಸಾವಿರಾರು ಜನ ಸಾಕ್ಷಿಯಾಗಿ ಅಪರೂಪ ದೃಶ್ಯವನ್ನ ಕಣ್ತುಂಬಿಕೊಳ್ಳುತ್ತಾರೆ.

    ಕರಿಬಸವೇಶ್ವರ ಸ್ವಾಮಿ ಮಠದ ರಥೋತ್ಸವದ ದಿನದಂದು ರಥವನ್ನು ಹೂವಿನಿಂದ ಅಲಂಕಾರ ಮಾಡುವುದು ಇಲ್ಲಿನ ಸಂಪ್ರದಾಯ. ಹೀಗೆ ಶೃಂಗಾರಗೊಂಡ ರಥವನ್ನ ಮಹಿಳೆಯರು ಎಳೆಯುತ್ತಾರೆ. ಹಾಗೆಯೇ ಮಹಿಳೆಯರಿಗೆ ರಥೋತ್ಸವದಲ್ಲಿ ಗ್ರಾಮಸ್ಥರು ಪೋತ್ಸಾಹಿಸುತ್ತಾರೆ. ಒಂದೆಡೆ ರಥೋತ್ಸವ ನಡೆಯುತ್ತಿದ್ದರೆ, ಮತ್ತೊಂದೆಡೆ ಡೊಳ್ಳು ಕುಣಿತ, ಡ್ರಮ್ ಸೆಟ್ ಕಲರವದ ಸದ್ದಿನಿಂದ ಈ ಆಚರಣೆಗೆ ಮತ್ತಷ್ಟು ಮೆರಗು ತಂದುಕೊಡುತ್ತದೆ.

    ಕರಿಬಸವೇಶ್ವರ ಸ್ವಾಮಿಯ ಮಠದಲ್ಲಿ ಕಳೆದ 8 ವರ್ಷಗಳಿಂದ ರಥೋತ್ಸವ ನಡೆಯುತ್ತಿದೆ. ಮೊದಲು ಪುರುಷರೇ ಇಲ್ಲಿ ರಥ ಎಳೆಯುತ್ತಿದ್ದರು. ಆದರೆ ಇಲ್ಲಿನ ಶ್ರೀಗಳು ಒಮ್ಮೆ ಉತ್ತರ ಕರ್ನಾಟಕಕ್ಕೆ ಭೇಟಿ ನೀಡಿದಾಗ ಅಲ್ಲಿ ಮಹಿಳೆಯರು ರಥ ಎಳೆಯುವುದನ್ನ ನೋಡಿದ್ದರು. ನಂತರ ನಾವು ಕೂಡ ಮಹಿಳೆಯರಿಂದಲೇ ರಥ ಎಳೆಸಬೇಕೆಂದು ತೀರ್ಮಾನಿಸಿದ್ದರು. ಅದರಂತೆ ಕಳೆದ 6 ವರ್ಷಗಳಿಂದ ಇಲ್ಲಿ ಮಹಿಳೆಯರೇ ರಥ ಎಳೆಯುತ್ತಿದ್ದಾರೆ. ಈ ರೀತಿ ಸಂಪ್ರದಾಯದಿಂದ ಮಹಿಳೆಯರಿಗೆ ಸಮಾನತೆ ಸಿಗುತ್ತದೆ, ಇಲ್ಲಿ ರಥೋತ್ಸವದಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದರೆ ನಮಗೆ ಒಳ್ಳೆಯದಾಗುತ್ತದೆ ಎಂದು ಭಕ್ತಾದಿಗಳು ಹೇಳುತ್ತಾರೆ.

    ಈ ಆಚರಣೆಯನ್ನು ಕಾರ್ಯರೂಪಕ್ಕೆ ತಂದ ಗ್ರಾಮದ ಕರಿಬಸವೇಶ್ವರ ಸ್ವಾಮೀಜಿ ಅವರು ಮಾತನಾಡಿ, ನಮ್ಮದು ಪುರುಷ ಪ್ರಧಾನ ದೇಶ. ಇಲ್ಲಿ ಮಹಿಳೆಯರಿಗೂ ಸಮಾನತೆ ಕಲ್ಪಿಸುವ ಹಿನ್ನೆಲೆಯಲ್ಲಿ ಈ ರೀತಿಯ ಆಚರಣೆ ಮಾಡುತ್ತಿದ್ದೇವೆ. ಮನೆಯಲ್ಲಿ ಪೂಜೆ ಮಾಡುವುದು ಹೆಣ್ಣು. ಈ ಭೂಮಿ ಕೂಡ ಒಂದು ಹೆಣ್ಣು. ಇನ್ನು ನಮ್ಮನ್ನ ಸೃಷ್ಟಿಸುವುದು ಕೂಡ ಹೆಣ್ಣು. ಹೆಣ್ಣಿಗೆ ಸಮಾನತೆ ಸಿಗಬೇಕೆಂದು ಮಹಿಳೆಯರಿಂದಲೇ ರಥೋತ್ಸವ ಎಳೆಯುವ ಸಂಪ್ರದಾಯ ಇಲ್ಲಿ ನಡೆಯುತ್ತಾ ಬಂದಿದೆ ಎಂದು ತಿಳಿಸಿದರು.

    ರಥೋತ್ಸವದಲ್ಲಿ ನೂರಾರು ಮಹಿಳೆಯರು ಪಾಲ್ಗೊಂಡಿದ್ದರು. ಮಹಿಳೆಯರು ರಥ ಎಳೆಯುವುದನ್ನ ಸಾವಿರಾರು ಭಕ್ತರು ಕಣ್ತುಂಬಿಕೊಂಡು ಈ ಅಪರೂಪದ ಕ್ಷಣಗಳಿಗೆ ಸಾಕ್ಷಿಯಾದರು. ಮಹಿಳೆಯರು ರಥ ಎಳೆಯುವ ಮೂಲಕ ನಾವು ಪುರುಷರಂತೆ ಸಮಾನರು ಎಂಬುದನ್ನು ಇಲ್ಲಿ ತೋರಿಸಿಕೊಟ್ಟಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ವರನ ಮದ್ವೆ ವರ್ಷ 18ಕ್ಕೆ ಇಳಿಸಿ: ಅರ್ಜಿ ಹಾಕಿದ ವಕೀಲನಿಗೆ ದಂಡ

    ವರನ ಮದ್ವೆ ವರ್ಷ 18ಕ್ಕೆ ಇಳಿಸಿ: ಅರ್ಜಿ ಹಾಕಿದ ವಕೀಲನಿಗೆ ದಂಡ

    ನವದೆಹಲಿ: ಮದುವೆಯಾಗುವ ವರನ ವಯಸ್ಸಿನ ಮಿತಿಯನ್ನು ಇಳಿಸಿ ಎಂದು ಸಲ್ಲಿಕೆಯಾಗಿದ್ದ ಸಾರ್ವಜನಿಕಾ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

    ವಕೀಲ ಅಶೋಕ್ ಪಾಂಡೆ ಮದುವೆಯಾಗಲು ಈಗ ವಧುವಿಗೆ ಕನಿಷ್ಟ 18 ವರ್ಷ ನಿಗದಿಯಾಗಿದ್ದರೆ ವರನಿಗೆ 21 ವರ್ಷ ನಿಗದಿಯಾಗಿದೆ. ಇದು ಸಮಾನತೆಯ ಉಲ್ಲಂಘನೆ ಎಂದು ಹೇಳಿ ಅರ್ಜಿ ಸಲ್ಲಿಸಿದ್ದರು.

    ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಾಧೀಶರಾದ ರಂಜನ್ ಗೊಗೊಯ್ ಮತ್ತು ನ್ಯಾ. ಸಂಜಯ್ ಕಿಶನ್ ಕೌಲ್ ಅವರಿದ್ದ ದ್ವಿಸದಸ್ಯ ಪೀಠ ಈ ಅರ್ಜಿಯಲ್ಲಿ ಸಾರ್ವಜನಿಕಾ ಹಿತಾಸಕ್ತಿ ಉದ್ದೇಶ ಕಾಣುತ್ತಿಲ್ಲ. ಯಾರಾದರೂ ವಯಸ್ಸಿನ ಸಮಸ್ಯೆಯಿಂದ ತೊಂದರೆ ಅನುಭವಿಸಿದ್ದರೆ ಆಗ ಮಾತ್ರ ಪರಿಗಣಿಸಬಹುದು ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿತು. ಅಷ್ಟೇ ಅಲ್ಲದೇ ಅರ್ಜಿದಾರರಿಗೆ 25 ಸಾವಿರ ರೂ. ದಂಡವನ್ನು ವಿಧಿಸಿತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv