Tag: ಸಮಿಶ್ರ ಸರ್ಕಾರ

  • ಅರ್ಥವಿಲ್ಲದ ಪ್ರಶ್ನೆಗೆ ಸುಮ್ಮನಿರುವುದೇ ನನ್ನ ಪ್ರತ್ಯುತ್ತರ: ಸಿಎಂ

    ಅರ್ಥವಿಲ್ಲದ ಪ್ರಶ್ನೆಗೆ ಸುಮ್ಮನಿರುವುದೇ ನನ್ನ ಪ್ರತ್ಯುತ್ತರ: ಸಿಎಂ

    ಬೀದರ್: ಅರ್ಥವಿಲ್ಲದ ಪ್ರಶ್ನೆಗೆ ಸುಮ್ಮನಿರುವುದೇ ನನ್ನ ಪ್ರತ್ಯುತ್ತರ ಎಂದು ಗ್ರಾಮ ವಾಸ್ತವ್ಯದ ಬಗ್ಗೆ ಕೇಳಿಬಂದ ವಿಪಕ್ಷಗಳ ಟೀಕೆಗಳಿಗೆ ಸಿಎಂ ಅವರು ಕುವೆಂಪು ಅವರ ಸ್ಲೋಗನ್ ಮೂಲಕ ಟಾಂಗ್ ನೀಡಿದರು.

    ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಉಜಳಂಬ ಗ್ರಾಮದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಿಎಂ, ಯಾದಗಿರಿ ಜಿಲ್ಲೆಯ ಚಂಡರಕಿ ಶಾಲೆಯಲ್ಲಿ ಮಲಗಿದ್ದಾಗ ಕುವೆಂಪುರವರ ಸ್ಲೋಗನ್ ಓದಿದ್ದೆ. ಅರ್ಥವಿಲ್ಲದ ಪ್ರಶ್ನೆಗೆ ಸುಮ್ಮನಿರುವುದೇ ಉತ್ತರ ಎಂದು ಬರೆದಿತ್ತು. ಹೀಗಾಗಿ ಟೀಕೆ ಮಾಡುವವರಿಗೆ ಉತ್ತರ ನೀಡದಿರುವುದೇ ಸೂಕ್ತ ಎಂಬುದು ನನ್ನ ಅಭಿಪ್ರಾಯ ಎನ್ನುವ ಮೂಲಕ ವಿಪಕ್ಷಗಳಿಗೆ ತಿರುಗೇಟು ನೀಡಿದರು.

    ಗ್ರಾಮವಾಸ್ತವ್ಯದ ಕ್ರೆಡಿಟ್ ಜೆಡಿಎಸ್‍ಗೆ ಬರುತ್ತಿದೆ ಎನ್ನುವುದು ತಪ್ಪು. ಇದು ಸಮ್ಮಿಶ್ರ ಸರ್ಕಾರದ ಕ್ರೆಡಿಟಾಗಿದ್ದು ಗುರುವಾರದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಜಿಲ್ಲೆಯ ಮೂವರು ಮಂತ್ರಿಗಳು ಬಂದಿದ್ದರು. ಹಾಗಾಗಿ ಒಟ್ಟಾರೆ ಇದು ಸಮ್ಮಿಶ್ರ ಸರ್ಕಾರದ ಕ್ರೆಡಿಟ್ ಎಂದು ಸಿಎಂ ಸ್ಪಷ್ಟನೆ ನೀಡಿದರು.

    ವಿದೇಶ ಪ್ರವಾಸ ವಿಚಾರ ಮಾತನಾಡಿದ ಸಿಎಂ, ಆದಿಚುಂಚನಗಿರಿಯ ಶ್ರೀಗಳು ನ್ಯೂಜೆರ್ಸಿಯಲ್ಲಿ ಮಠವೊಂದನ್ನ ಕಟ್ಟಿಸುತ್ತಿದ್ದಾರೆ. ಅದರ ಶಂಕುಸ್ಥಾಪನೆಗಾಗಿ ನಾನು ಬರಲೇಬೇಕೆಂದು ಶ್ರೀಗಳು ಒತ್ತಾಯ ಮಾಡುತ್ತಿದ್ದಾರೆ. ನಾನೇನೂ ಸರ್ಕಾರದ ವೆಚ್ಚದಲ್ಲಿ ಹೋಗುತ್ತಿಲ್ಲ, ಸ್ವಂತ ಖರ್ಚಿನಲ್ಲಿ ಹೋಗುತ್ತಿದ್ದೇನೆ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.

  • ರಾಜೀನಾಮೆ ಏನಿಲ್ಲ, ಇದು ಬರೀ ಆಟ ಅಷ್ಟೇ: ಬಸವರಾಜ ಹೊರಟ್ಟಿ

    ರಾಜೀನಾಮೆ ಏನಿಲ್ಲ, ಇದು ಬರೀ ಆಟ ಅಷ್ಟೇ: ಬಸವರಾಜ ಹೊರಟ್ಟಿ

    ಧಾರವಾಡ: ಯಾರೂ ರಾಜೀನಾಮೆ ಕೊಡುತ್ತಿದ್ದಾರೋ ಅವರು ಕ್ಷೇತ್ರದಲ್ಲಿ ಮತ್ತೆ ಆರಿಸಿ ಬಾರದಂತೆ ಜನ ನೋಡಿಕೊಳ್ಳಬೇಕು ಎಂದು ಮಾಜಿ ಸಚಿವ ಬಸವರಾಜ ಹೊರಟ್ಟಿ ಹೇಳಿದ್ದಾರೆ.

    ಧಾರವಾಡದಲ್ಲಿ ಮಾತನಾಡಿದ ಅವರು, ಆಗ ಶಂಕರ ಅವರು ಮಂತ್ರಿಯಾಗಿದ್ದರು, ಮಂತ್ರಿ ಇದ್ದಾಗ ಕೆಲಸ ಆಗಲಿಲ್ಲವೇ ಎಂದು ಪ್ರಶ್ನಿಸಿದ ಅವರು, ಶಂಕರ್ ಬಿಜೆಪಿ ಒತ್ತಡಕ್ಕೆ ಮಣಿದು ಬೆಂಬಲ ವಾಪಸ್ ತಗೊಂಡಿದ್ದಾರೆ. 12 ಜನ ಶಾಸಕರು ರಾಜೀನಾಮೆ ನೀಡಲ್ಲ. ಇದೆಲ್ಲ ಬರೀ ಆಟ ಅಷ್ಟೇ ಎಂದರು.

    ರಾಜೀನಾಮೆ ಕೊಡುವವರು ಯಾವ ಪುರುಷಾರ್ಥಕ್ಕೆ ರಾಜೀನಾಮೆ ಕೊಡಬಲ್ಲರು? ರಾಜ್ಯದಲ್ಲಿ ಅತಂತ್ರ ಸ್ಥಿತಿ ಬರುತ್ತದೆ. ಮೋದಿ ಕೂಡ ಸಮ್ಮಿಶ್ರ ಸರ್ಕಾರದಲ್ಲಿಯೇ ಅಧಿಕಾರ ನಡೆಸುತ್ತಿದ್ದಾರೆ. ಅವರ ಹಿಂದೆಯೂ ಅನೇಕ ಪಕ್ಷಗಳಿವೆ ಎಂದು ಹೇಳಿದರು.

    ಬಿಜೆಪಿಗೆ ಈಗ ಅಧಿಕಾರ ಏತಕ್ಕೆ ಬೇಕು, ವಿರೋಧ ಪಕ್ಷದಲ್ಲಿದ್ದು ಚೆನ್ನಾಗಿ ಕೆಲಸ ಮಾಡಿ ಮುಂದೆ ಅಧಿಕಾರಕ್ಕೆ ಬರಬಹುದು. ಈಗ ಇಂತಹ ಕೆಲಸ ಮಾಡಿ, ಚುನಾವಣೆಗೆ ಹೋಗಿ ಆರೂವರೆ ಕೋಟಿ ಜನರ ತಲೆ ಮೇಲೆ ಭಾರ ಹಾಕುವುದು ಸರಿಯಲ್ಲ ಎಂದರು.

    ಕುಮಾರಸ್ವಾಮಿ ಏನಾದರೂ ಬಹುಮತ ಸಾಬೀತು ಮಾಡುತ್ತೇನೆ ಎಂದರೆ ಇವರು ಏನು ಮಾಡ್ತಾರೆ. ನಮ್ಮ ಸರ್ಕಾರ ಉಳಿಸಬೇಕಿದೆ. ಅದಕ್ಕಾಗಿ ನಾನು ಬೆಂಗಳೂರಿಗೆ ಹೋಗುತ್ತಿದ್ದೇನೆ. ಯಾರೂ ಬಿಟ್ಟು ಹೋಗಬಾರದು. ಪುನಃ ಅತಂತ್ರವಾಗಬಾರದು ಸಾಧ್ಯವಾದಷ್ಟು ಸರ್ಕಾರ ಉಳಿಸುವ ಪ್ರಯತ್ನ ಮಾಡುತ್ತೇವೆ ಎಂದು ಹೊರಟ್ಟಿ ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv