Tag: ಸಮೀರ್‌

  • ಸಮೀರ್ ಮುಸ್ಲಿಂ ಸಮುದಾಯದ ಪ್ರತಿನಿಧಿ ಅಲ್ಲ: ಜಮಾತ್ ಎ ಇಸ್ಲಾಮಿ ಹಿಂದ್ ಸಂಘಟನೆ ಸ್ಪಷ್ಟನೆ

    ಸಮೀರ್ ಮುಸ್ಲಿಂ ಸಮುದಾಯದ ಪ್ರತಿನಿಧಿ ಅಲ್ಲ: ಜಮಾತ್ ಎ ಇಸ್ಲಾಮಿ ಹಿಂದ್ ಸಂಘಟನೆ ಸ್ಪಷ್ಟನೆ

    ಬೆಂಗಳೂರು: ಸಮೀರ್ ಮುಸ್ಲಿಂ ಸಮುದಾಯದ ಪ್ರತಿನಿಧಿ ಅಲ್ಲ ಎಂದು ಜಮಾತ್ ಎ ಇಸ್ಲಾಮಿ ಹಿಂದ್ ಸಂಘಟನೆಯ ರಾಜ್ಯ ಕಾರ್ಯದರ್ಶಿ ಮಹಮದ್ ಕುನ್ಞಿ ತಿಳಿಸಿದ್ದಾರೆ.

    ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಮಹಮದ್, ಯೂಟ್ಯೂಬರ್ ಸಮೀರ್ ಎಐ ವಿಡಿಯೋಗಳ ವಿಚಾರ ಚರ್ಚೆಯಲ್ಲಿದೆ. ಸಮೀರ್ ಯಾರೂ ಅನ್ನೋದೆ ಮುಸ್ಲಿಂ ಸಮುದಾಯಕ್ಕೆ ಗೊತ್ತಿರಲಿಲ್ಲ. ಸಮೀರ್ ಮುಸ್ಲಿಂ ಸಮುದಾಯದ ಪ್ರತಿನಿಧಿ ಅಂತೂ ಖಂಡಿತ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ಕರ್ನಾಟಕದಲ್ಲಿ ಸುಮಾರು ಒಂದೂವರೆ ಕೋಟಿ ಮುಸ್ಲಿಮರಿದ್ದಾರೆ. ಇವರಲ್ಲಿ ಎಷ್ಟು ಜನರಿಗೆ ಸಮೀರ್ ಗೊತ್ತಿದ್ದಾನೆ? ನಾವು ದೊಡ್ಡ ಸಂಘಟನೆಗಳಲ್ಲಿ ಇರುವವರು. ನಮಗಂತೂ ಸಮೀರ್ ಗೊತ್ತೇ ಇರಲಿಲ್ಲ ಎಂದು ಹೇಳಿದ್ದಾರೆ.

    ಈಗಲೂ ಅವನೊಬ್ಬ ಯೂಟ್ಯೂಬರ್ ಅನ್ನೋದಷ್ಟೇ ಗೊತ್ತು. ಅವನು ಮಾಡಿದ ವಿಡಿಯೋಗಳು ತಪ್ಪಿದ್ರೆ ಅವನಿಗೂ ಶಿಕ್ಷೆಯಾಗುತ್ತೆ. ಯಾವುದೇ ಧಾರ್ಮಿಕ ಕ್ಷೇತ್ರಗಳ ಮೇಲೆ ಅಪಪ್ರಚಾರ ಆಗಬಾರದು. ಇದು ನಮ್ಮ ಮೂಲಭೂತ ನಂಬಿಕೆ ಎಂದು ತಿಳಿಸಿದ್ದಾರೆ.

    ಧರ್ಮಸ್ಥಳ ಪ್ರಕರಣಕ್ಕೆ ಸಂಬಧಿಸಿದಂತೆ ಸೋಷಿಯಲ್ ಮೀಡಿಯಾದಲ್ಲಿ ಎಐ ವೀಡಿಯೋ ಹಂಚಿಕೊಂಡಿರುವ ಬಗ್ಗೆ ಸಮೀರ್, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ.

  • ಬುರುಡೆ ಗ್ಯಾಂಗ್ ಸಮೀರ್ ಹಿಂದೆ ಎಡಪಂಥೀಯರು, ಮಾವೋವಾದಿ, ಜಿಹಾದಿಗಳಿದ್ದಾರೆ: ಚಕ್ರವರ್ತಿ ಸೂಲಿಬೆಲೆ

    ಬುರುಡೆ ಗ್ಯಾಂಗ್ ಸಮೀರ್ ಹಿಂದೆ ಎಡಪಂಥೀಯರು, ಮಾವೋವಾದಿ, ಜಿಹಾದಿಗಳಿದ್ದಾರೆ: ಚಕ್ರವರ್ತಿ ಸೂಲಿಬೆಲೆ

    – ಮಸೀದಿಯಲ್ಲಿ ನಡೆಯೋ ಅತ್ಯಾಚಾರ ಕೇಸ್ ಬಗ್ಗೆ ಮಾತೆತ್ತದ ಮುಸಲ್ಮಾನ ಇಲ್ಲಿ ಯಾಕೆ ಬಂದ: ವಾಗ್ಮಿ ಪ್ರಶ್ನೆ
    – ದಸರಾ ಉದ್ಘಾಟನೆಗೆ ಮುಸಲ್ಮಾನರನ್ನು ಕರೆತಂದಿದ್ದಾರೆ: ಸರ್ಕಾರದ ವಿರುದ್ಧ ಟೀಕೆ

    ಕಾರವಾರ: ಬುರುಡೆ ಗ್ಯಾಂಗ್ ಸಮೀರ್ (Sameer) ಹಿಂದೆ ಎಡಪಂಥೀಯರು, ಮಾವೋವಾದಿಗಳು, ಜಿಹಾದಿಗಳು ಇದ್ದಾರೆ ಎಂದು ವಾಗ್ಮಿ ಚಕ್ರವರ್ತಿ ಸೂಲಿಬೆಲೆ (Chakravarti Sulibele) ಗಂಭೀರ ಆರೋಪ ಮಾಡಿದ್ದಾರೆ.

    ಸಿದ್ದಾಪುರ ತಾಲೂಕಿನ ಮಾವಿನಗುಂಡಿಯಲ್ಲಿ ಮಾತನಾಡಿದ ಅವರು, 2012 ರಲ್ಲಿ ಗಿರೀಶ್ ಮಟ್ಟಣ್ಣನವರ್ ಮೊದಲು ಸೌಜನ್ಯ ಪ್ರರಣದಲ್ಲಿ ಹಿಡಿದುಕೊಂಡು ಬಂದ ಆರೋಪಿಯನ್ನು ನಮಗೆ ಒಪ್ಪಿಸಿ ಎಂದು ಗಲಾಟೆ ಮಾಡಿದ್ದ. ಇದೇ 2013 ರಲ್ಲಿ ಹಿಡಿದುಕೊಂಡ ವ್ಯಕ್ತಿ ಆರೋಪಿ ಅಲ್ಲ ಎಂದು ಹೇಳುತ್ತಾನೆ. ಇದರಲ್ಲಿ ವೀರೇಂದ್ರ ಹೆಗ್ಗಡೆ ಪರಿವಾರದವರ ಹೆಸರು ಸೇರಿಸುತ್ತಾನೆ. ಧರ್ಮಸ್ಥಳವನ್ನು ಕಿತ್ತುಕೊಳ್ಳಬೇಕು ಎಂಬ ಹುಳ ಅವರಲ್ಲಿ ಹೊಕ್ಕಿದೆ. 2023 ಸಂತೋಷ್ ರಾವ್ ಹೊರ ಬರುತ್ತಾನೆ. ಸ್ಟ್ಯಾನ್ಲಿ ಒಡನಾಡಿ ಸಂಸ್ಥೆ ಮೂಲಕ ಎಂಟ್ರಿಯಾಗಿ ಮನೆ ಮನೆಗೂ ಹೋಗಿ ಪ್ರಚಾರ ಮಾಡುತ್ತಾನೆ. ಸೌಜನ್ಯ ಪ್ರಕರಣದಲ್ಲಿ ಔಟ್‌ಪುಟ್ ಹೊರಗೆ ಬರದೇ ಇದ್ದುದರಿಂದ ಮಾವೂ ವಾದಿಗಳ ಮುಖವಾಡ ಕಳಚಿ ಅವರ ಹಿಂದೆ ಬಂದು ಗಿರೀಶ್ ಮಟ್ಟಣ್ಣನವರ್ ಎಂಟ್ರಿಯಾಗುತ್ತದೆ. ಗಿರೀಶ್ ಮಟ್ಟಣ್ಣನವರ್ ಎಂಟ್ರಿ ಆದ್ಮೇಲೆ ಅವರ ಪೊಲೀಸ್ ಬುದ್ದಿ ಬಳಸಿಕೊಂಡು ಇಲ್ಲಿ ನಡೆಯುವ ಪ್ರತಿಯೊಂದು ಸಾವನ್ನೂ ಧರ್ಮಸ್ಥಳಕ್ಕೆ ಟ್ಯಾಗ್ ಮಾಡುವ ಪ್ರಯತ್ನ ಮಾಡುತ್ತಾರೆ. ಸೌಜನ್ಯ ಪ್ರಕರಣದಿಂದ ಹೊರಬಂದ ಸಂತೋಷ್ ರಾವ್ ಮುಂದಿಟ್ಟುಕೊಂಡು ಧರ್ಮಸ್ಥಳವನ್ನು ಮುಗಿಸುವ ಧಾವಂತ ಇತ್ತು. ಆಗ ಸಮೀರ್‌ನನ್ನು ಕರೆತಂದರು. ಅಲ್ಲಿಗೆ ಜಿಹಾದಿ ಎಲಿಮಿನೇಟ್‌ಗಳ ಎಂಟ್ರಿ ಆಗುತ್ತದೆ ಎಂದು ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್‌ನಲ್ಲಿ ತಾವೇ ತೋಡಿದ ಹಳ್ಳಕ್ಕೆ ಬಿದ್ದರು, ಡಿಕೆಶಿ ಹೇಳಿಕೆ ವಾಪಸ್ ಪಡೆಯಲಿ: ವಿ.ಸೋಮಣ್ಣ

    ಒಬ್ಬ ಮುಸಲ್ಮಾನ ಬಂದ ಎಂದರೇ ಇದರಲ್ಲಿ ಏನೋ ಇರಬೇಕು. ಒಬ್ಬ ಮುಸಲ್ಮಾನ ತನ್ನ ಮಸೀದಿಯಲ್ಲಿ ನಡೆಯುವ ಅತ್ಯಾಚಾರ ಪ್ರಕರಣಗಳ ಬಗ್ಗೆ ಮಾತೆತ್ತದವನು ಸೌಜನ್ಯ ಪ್ರಕರಣ ಹಿಡಿದುಕೊಂಡು ಇಲ್ಲಿಗೆ ಏಕೆ ಬಂದ? ಎಐ ವಿಡಿಯೋ ಮಾಡಲು ದುಡ್ಡು ಎಲ್ಲಿಂದ ಬಂತು? ಧರ್ಮಸ್ಥಳದ ಪರ ಹೋರಾಟಗಾರರು ಎಲ್ಲಿ ಬಂದರೂ, ಬೇರೆ ದಾರಿ ಇಲ್ಲದೇ ಎಸ್‌ಡಿಪಿಐ ಎಂಟ್ರಿ ಆಗಿದೆ. ಮೊದಲು ಎಡಪಂಥೀಯರು ಬಂದರು. ಅದರ ಹಿಂದೆ ಇವಾಂಜಿಲಿಸ್ಟ್‌ಗಳು ಬಂದರು, ಅವರ ಹಿಂದೆ ಜಿಹಾದಿಗಳು ಬಂದರು. ಜಿಹಾದಿ ಎಲಿಮಿನೇಟ್ ಮೂಲಕ ಮೊದಲ ಹೆಜ್ಜೆಯಾಗಿ ಸಮೀರ್ ಮುಂದಕ್ಕೆ ಬಂದಿದ್ದಾನೆ. ಸಮೀರ್‌ನ ಹಿಂದೆ ಪೂರ್ತಿ ಬ್ಯಾಕಪ್ ಎಡಪಂಥೀಯರದ್ದು ಇತ್ತು. ಸಮೀರ್ ವಿಡಿಯೋ ಆದ ನಂತರ ಎಲ್ಲರಿಗೂ ಹಂಚಲಾಗಿದೆ ಎಂದು ಆರೋಪಿಸಿದ್ದಾರೆ.

    ಜನರನ್ನು ಬಡಕಾಯಿಸುವುದು ಸಾಮಾನ್ಯ ಯೂಟ್ಯೂಬರ್ ತಲೆಯಲ್ಲ. ಇದರ ಹಿಂದೆ ಯಾರೋ ದೊಡ್ಡದಾಗಿ ಪ್ರಯತ್ನ ಮಾಡುತ್ತಿದ್ದವರು ಇದ್ದಾರೆ. ದಸರಾ ಉದ್ಘಾಟನೆಗೆ ಮುಸಲ್ಮಾನರನ್ನು ಕರೆದುಕೊಂಡು ಬಂದಿದ್ದಾರೆ. ದಸರಾ ಹಿಂದೂಗಳ ಧಾರ್ಮಿಕ ಹಬ್ಬವಾಗಿ ಸೆಲಬ್ರೇಟ್ ಮಾಡುತ್ತೇವೆ. ನಿಸಾರ್ ಅಹ್ಮದ್ ಬಂದಾಗ ಗಲಾಟೆ ಮಾಡಲಿಲ್ಲ. ಏಕೆಂದರೆ ನಿಸಾರ್ ಅಹ್ಮದ್ ಅವರನ್ನು ಬೇರೆಯವರು ಎಂದು ನಾವು ಗಮನಿಸಿಲ್ಲ. ನಮಗೆ ಹಿಂದೂ ಮುಸ್ಮಿಂ ಪ್ರಾಬ್ಲಮ್ ಅಲ್ಲ. ನಮಗೆ ಧರ್ಮ ಶ್ರದ್ಧೆಯನ್ನು ವಿರೋಧಿಸುವವರ ಕುರಿತು ಇರುವ ಪ್ರಾಬ್ಲಂ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಚಾಮುಂಡೇಶ್ವರಿ ದೇವಸ್ಥಾನ ಎಲ್ಲರ ಆಸ್ತಿ ಅನ್ನೋದು ಸರಿ ಅಲ್ಲ, ಡಿಕೆಶಿ ಕ್ಷಮೆ ಕೇಳ್ಬೇಕು: ಆರ್.ಅಶೋಕ್

    ಕನ್ನಡ ಭಾಷೆಯನ್ನು ದೇವಿ ರೂಪದಲ್ಲಿ ನೋಡಿದರೆ ಸಹಿಸಲಾಗದವರು, ಚಾಮುಂಡಿ ತಾಯಿ ಪೂಜೆ ಎಂದರೆ ಹೇಗೆ ಸಹಿಸುತ್ತಾರೆ? ಹಿಂದೂಗಳನ್ನು ಅವಮಾನಿಸಬೇಕು, ಕಿರಿಕಿರಿ ಉಂಟು ಮಾಡಬೇಕು. ನೀವು ಕರ್ನಾಟಕದಲ್ಲಿ ಸೆಕೆಂಡರಿ ಸಿಟಿಜನ್ ಎಂದು ಪದೇ ಪದೇ ಹೇಳಬೇಕು. ನಿಮ್ಮ ವೋಟು ಅವಶ್ಯಕತೆ ಇಲ್ಲ ಎಂದು ಹೇಳುವ ಪ್ರಯತ್ನವನ್ನು ಸಿದ್ದರಾಮಯ್ಯ ಹಿಂದೆಯೂ ಮಾಡಿದ್ದಾರೆ. ಇಂದೂ ಸಹ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

  • AI ವೀಡಿಯೋಗೆ ಸಾಕ್ಷಿ ಕೊಡಲು ತಡಬಡಿಸಿದ ಬುರುಡೆ ಸಮೀರ್

    AI ವೀಡಿಯೋಗೆ ಸಾಕ್ಷಿ ಕೊಡಲು ತಡಬಡಿಸಿದ ಬುರುಡೆ ಸಮೀರ್

    – 2ನೇ ದಿನವೂ ಬೆಳ್ತಂಗಡಿ ಠಾಣೆಗೆ ವಿಚಾರಣೆಗೆ ಹಾಜರು

    ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತುಹಾಕಲಾಗಿದೆ ಎಂದು ಎಐ ವಿಡಿಯೋ ಮೂಲಕ ಸಂಚಲನ ಸೃಷ್ಟಿಸಿದ್ದ ಯೂಟ್ಯೂಬರ್ ಸಮೀರ್ (Youtuber Sameer MD) ಸೋಮವಾರ (ಆ.25) ಮತ್ತೆ ಬೆಳ್ತಂಗಡಿ ಠಾಣೆಗೆ (Belthangady Police Station) ವಿಚಾರಣೆಗೆ ಹಾಜರಾಗಿದ್ದಾನೆ.

    ಬೆಳ್ತಂಗಡಿ ಠಾಣೆಯಲ್ಲಿ ಸಮೀರ್ ವಿಚಾರಣೆ ಆರಂಭವಾಗಿದ್ದು, ಪಿಎಸ್‌ಐ ಸುಬ್ಬಾಪುರ್ ಮಠ್ ಉಪಸ್ಥಿತಿಯಲ್ಲಿ ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್‌ ನಾಗೇಶ್ ಕದ್ರಿ ನೇತೃತ್ವದಲ್ಲಿ ವಿಚಾರಣೆ ನಡೆಯುತ್ತಿದೆ.ಇದನ್ನೂ ಓದಿ: ಕೇಜ್ರಿವಾಲ್ ಪ್ರಕರಣ ಉಲ್ಲೇಖಿಸಿ ವಿಪಕ್ಷಗಳಿಗೆ ತಿರುಗೇಟು – ಪಿಎಂ, ಸಿಎಂ ವಜಾ ಮಸೂದೆ ಸಮರ್ಥಿಸಿಕೊಂಡ ಅಮಿತ್ ಶಾ

    ಕಾಲ್ಪನಿಕ ವಿಡಿಯೋ ಮೂಲಕ ದೊಂಬಿ ಸೃಷ್ಟಿಯಲು ಯತ್ನಿಸಿದ್ದಾನೆ ಎಂದು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದ ಧರ್ಮಸ್ಥಳ ಪೊಲೀಸರು ಎರಡೆರಡು ನೊಟೀಸ್ ಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ ಭಾನುವಾರ (ಆ.24) ಬೆಳ್ತಂಗಡಿ ಠಾಣೆಯಲ್ಲಿ ನಾಲ್ವರು ವಕೀಲರ ಜೊತೆ ಸಮೀರ್ ಹಾಜರಾಗಿದ್ದ. ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ನೇತೃತ್ವದಲ್ಲಿ ಅಧಿಕಾರಿಗಳು 4:30 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದರು.

    ದೂತನ ಬಂಡವಾಳ ಬಯಲು
    ಇಲ್ಲ ಸಲ್ಲದ ಸುಳ್ಳು ಕತೆಗಳನ್ನು ಸೃಷ್ಟಿಸಿ ಎಲ್ಲರನ್ನೂ ಮರಳು ಮಾಡಿದ್ದವನೇ ಯೂಟ್ಯೂಬರ್ ಸಮೀರ್ ಎಂ.ಡಿ. ಯಾವುದೋ ಕೋಣೇಲಿ ಕೂತ್ಕೊಂಡು ಎಐ ವಿಡಿಯೋಗಳ ಮೂಲಕ ಜನರಿಗೆ ಮಂಕುಬೂದಿ ಎರಚಿ ಲೈಕ್ಸ್, ವೀವ್ಸ್ ಪಡೆದಿದ್ದ ದೂತನ ಬಂಡವಾಳ ಬಯಲಾಗಿದೆ. ತಾನು ಹೇಳಿದ್ದೇ ಸತ್ಯ ಅಂತ ನಂಬಿಸಿ, ಶಿವತಾಂಡವ ಶುರುವಾಗುತ್ತೆ. ನೋಡಿ ಸತ್ಯ ಹೇಗೆ ಹೊರಬರುತ್ತದೆ? ಎಲ್ಲದಕ್ಕೂ ಸಾಕ್ಷ್ಯ ಇದೆ ಅಂತಾ ಪುಂಖಾನುಪುಂಖವಾಗಿ ಸುಳ್ಳಿನ ಅರಮನೆಯನ್ನೇ ಕಟ್ಟಿದ್ದ. ದೂರುದಾರನಿಗೆ ಭೀಮ ಎಂದು ಹೆಸರಿಟ್ಟಿದ್ದೇ ಸುಳ್ಳುಕೋರ ಸಮೀರ್. ಅನನ್ಯಾ ಭಟ್ ಎನ್ನುವ ನಕಲಿ ಯುವತಿಯನ್ನು ಸೃಷ್ಟಿಸಿ ಧರ್ಮಸ್ಥಳ ಕ್ಷೇತ್ರಕ್ಕೆ, ಭಕ್ತರ ಭಾವನೆಗೆ ಚ್ಯುತಿ ಬರುವಂತೆ ಮಾಡಿದ್ದೇ ಈತ. ಬೀದಿಗೆ ಬನ್ನಿ ಹೋರಾಟ ಮಾಡಿ ಅಂತಾನೂ ಕರೆ ಕೊಟ್ಟಿದ್ದ. ಈತನ ವಿಡಿಯೋಗೆ ಫಂಡಿಂಗ್ ಬರುತ್ತಿದೆ ಅನ್ನೋ ಆರೋಪವೂ ಇದೆ.ಇದನ್ನೂ ಓದಿ: ಕನ್ನಡ ತಾಯಿ ಭುವನೇಶ್ವರಿಯನ್ನು ಒಪ್ಪದ ಬಾನು ಮುಷ್ತಾಕ್ ನಾಡದೇವತೆಯನ್ನು ಒಪ್ಪುತ್ತಾರಾ: ಪ್ರತಾಪ್ ಸಿಂಹ ಪ್ರಶ್ನೆ

  • ಧರ್ಮಸ್ಥಳದ ಅಪಪ್ರಚಾರಕ್ಕೆ ಫಂಡಿಂಗ್ – ಸಮೀರ್ ವಿರುದ್ಧ ಐಟಿಗೆ ದೂರು ನೀಡಲು ಚಿಂತನೆ

    ಧರ್ಮಸ್ಥಳದ ಅಪಪ್ರಚಾರಕ್ಕೆ ಫಂಡಿಂಗ್ – ಸಮೀರ್ ವಿರುದ್ಧ ಐಟಿಗೆ ದೂರು ನೀಡಲು ಚಿಂತನೆ

    – `ದೂತ’ ಯೂಟ್ಯೂಬ್ ಬ್ಯಾನ್‌ಗೆ ಆಗ್ರಹ

    ಮಂಗಳೂರು: ಶ್ರೀಕ್ಷೇತ್ರದ ಧರ್ಮಸ್ಥಳದಲ್ಲಿ (Dharmasthala) ಶಿವ ತಾಂಡವ ಶುರುವಾಗಿದೆ. ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡಿದವರ ಕಂತೆ ಕಂತೆ ಸುಳ್ಳುಗಳು ಒಂದೊಂದೇ ಹೊರಬರುತ್ತಿದೆ. ಅಪಪ್ರಚಾರ ಮಾಡಿದವರು ಒಬ್ಬೊಬ್ಬರೇ ಕಂಬಿ ಹಿಂದೆ ಸೇರುತ್ತಿದ್ದಾರೆ. ಧರ್ಮಸ್ಥಳದ ಬಗ್ಗೆ ಎಪಿಸೋಡ್‌ಗಳ ಮೇಲೆ ಎಪಿಸೋಡ್ ಮಾಡಿಕೊಂಡು ನಾನೇ ಸತ್ಯವಂತ ಅಂತಿದ್ದ ಸಮೀರ್‌ಗೆ (Sameer MD) ಭಾನುವಾರ ಧರ್ಮಸ್ಥಳದ ಪೊಲೀಸರು ಡ್ರಿಲ್ ಮಾಡಿದ್ದು, ಇಂದು ವಿಚಾರಣೆಗೆ ಕರೆದಿದ್ದಾರೆ. ಇತ್ತ ಈ ದೂತನ ವಿರುದ್ಧ ಐಟಿಗೆ (IT) ದೂರು ನೀಡಲು ಹಿಂದೂ ಪರ ಹೋರಾಟಗಾರರು ಸಜ್ಜಾಗಿದ್ದಾರೆ.

    ಧರ್ಮಸ್ಥಳದ ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡಿದವರ ಕಂತೆ ಕಂತೆ ಸುಳ್ಳುಗಳು ಒಂದೊಂದೇ ಹೊರಬರುತ್ತಿದೆ. ಈ ಕಟ್ಟು ಕತೆಗಳಲ್ಲಿ ದೂತ ಸಮೀರ್‌ನ ಪಾತ್ರ ಬಹಳ ದೊಡ್ಡದು. ಸಮೀರ್ ಮಾಡಿದ ವಿಡಿಯೋ, ಅವನ ಐಎ ತಂತ್ರಜ್ಞಾನದ ಬಳಕೆಯಿಂದ ಜನ ಅರೇ ಹೀಗೆಲ್ಲಾ ಆಗಿದ್ಯಾ ಅನ್ನೋ ಮಟ್ಟಕ್ಕೆ ನಂಬಿಸೋ ಯತ್ನ ಆಗಿತ್ತು. ಇವನ ಮಾತುಗಾರಿಕೆ, ತಾನೇ ಕದ್ದು ನೋಡಿದ್ದೇನೆ ಅನ್ನೋ ರೀತಿಯ ವಿವರಣೆಗೆ ಜನ ಮಾರುಹೋಗಿದ್ರು. ಈಗ ಈತನ ಧಾರ್ಮಿಕ ಅಂಧತ್ವ ನಮ್ಮ ಧರ್ಮವನ್ನ ಹೊಡೆಯೋ ನೀಚತನ ಹೊರಬರುತ್ತಿದೆ. ಇದನ್ನೂ ಓದಿ: ಕಾಂತಾರ ಮಾತು ನಿಜ, . ಕೋರ್ಟ್ ಮೆಟ್ಟಿಲ ಮೇಲೆ ಅಣ್ಣಪ್ಪ ತೀರ್ಮಾನ: ಸೂಲಿಬೆಲೆ

    ಸಮೀರ್ ವಿರುದ್ಧ ಈಗಾಗಲೇ ಜುಲೈನಲ್ಲೇ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದ ಹಿಂದೂ ಪರ ಹೋರಾಟಗಾರ ತೇಜಸ್‌ಗೌಡ, ಇಂದು ಹಿಂದೂ ಮುಖಂಡರೊಂದಿಗೆ ಆದಾಯ ಇಲಾಖೆಗೆ ದೂರು ನೀಡಲು ಮುಂದಾಗುತ್ತಿದ್ದಾರೆ. ಹೌದು, ಸಮೀರ್ ಸೇರಿದಂತೆ ಧರ್ಮಸ್ಥಳದ ಹಿಂದೆ ಪಿತೂರಿ ಮಾಡಿದವರಿಗೆ ಬೇರೆ ಬೇರೆ ಕಡೆಯಿಂದ ಹಣ ಬಂದಿದೆ. ಇವನ ವೀಡಿಯೋಗೆ ಯಾರು ಫಂಡ್ ಮಾಡುತ್ತಾರೆ, ಇದರ ಹಿಂದೆ ದೊಡ್ಡ ದೊಡ್ಡವರು ಎಡಪಂಥೀಯರು, ನಿಷೇಧಿತ ಸಂಘಟನೆಗಳು ಇದೆ. ಸಮೀರ್‌ನ ಆರ್ಥಿಕ ವಹಿವಾಟನ್ನು ತನಿಖೆ ಮಾಡಬೇಕು ಅಂತಾ ಐಟಿಗೆ ದೂರು ನೀಡೋದಾಗಿ ತೇಜಸ್ ಗೌಡ ಹೇಳಿದ್ದಾರೆ. ಇದನ್ನೂ ಓದಿ: ಬಿಹಾರದ ‘ವೋಟ್ ಅಧಿಕಾರ ಯಾತ್ರೆ’ ದೇಶದ ಪಾಲಿನ ಗೇಮ್ ಚೇಂಜರ್: ಡಿ.ಕೆ.ಶಿವಕುಮಾರ್

    ಸಮೀರ್ ವಿರುದ್ಧ ರಾಷ್ಟ್ರೀಯ ತನಿಖಾ ತಂಡಗಳಿಂದ ತನಿಖೆಯಾಗಬೇಕು. ಆಗ ಇದರ ಮೂಲ ಯಾರು? ಇದಕ್ಕೆ ಕಾರಣಕರ್ತರು ಯಾರೆಲ್ಲ ಇದ್ದಾರೆ ಅನ್ನೋದು ಬಹಿರಂಗವಾಗಲಿದೆ. ಹಾಗೆಯೇ ಸರ್ಕಾರ ಕೂಡ ಈ ಸುಳ್ಳುಸುದ್ದಿ ಹರಿಡಿಸಿದವರ ಯೂಟ್ಯೂಬ್ ಚಾನಲ್ ಬ್ಯಾನ್ ಮಾಡಬೇಕು ಅಂತಾ ತೇಜಸ್ ಗೌಡ ಒತ್ತಾಯ ಮಾಡಿದ್ದಾರೆ. ಇದನ್ನೂ ಓದಿ: ಆಟೋ EMI ಕಟ್ಟಲು ಸ್ನೇಹಿತೆಯನ್ನು ಕೊಂದು ಮಾಂಗಲ್ಯ ಸರ ಕದ್ದ ಖತರ್‌ನಾಕ್ ಚಾಲಕ

  • ಕೂಲಿಂಗ್ ಗ್ಲಾಸ್ ಧರಿಸಿ ವಿಚಾರಣೆಗೆ ಹಾಜರಾದ ʻಬುರುಡೆʼ ಸಮೀರ್‌ – ವಿಚಾರಣೆ ಶುರು

    ಕೂಲಿಂಗ್ ಗ್ಲಾಸ್ ಧರಿಸಿ ವಿಚಾರಣೆಗೆ ಹಾಜರಾದ ʻಬುರುಡೆʼ ಸಮೀರ್‌ – ವಿಚಾರಣೆ ಶುರು

    ಮಂಗಳೂರು: ಧರ್ಮಸ್ಥಳ ದೇವಸ್ಥಾನದ (Dharmasthala Temple) ವಿರುದ್ಧ ಎಐ ವಿಡಿಯೋ ಮಾಡಿ ಕಲರ್‌ ಕಲರ್‌ ಕಾಗೆ ಹಾರಿಸಿದ್ದ ಯೂಟ್ಯೂಬರ್‌ ಸಮೀರ್‌ (Youtuber Sameer) ಕೊನೆಗೂ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾನೆ.

    ಬೆಳಗ್ಗೆ 10:30ರ ವೇಳೆಗೆ ವಿಚಾರಣೆಗೆ ಬರುವುದಾಗಿ ಹೇಳಿದ್ದ ಸಮೀರ್‌ ವಕೀಲರೊಂದಿಗೆ ಮಧ್ಯಾಹ್ನ 1 ಗಂಟೆ ಹೊತ್ತಿಗೆ ಹಾಜರಾಗಿದ್ದಾನೆ. ಕೂಲಿಂಗ್‌ ಗ್ಲಾಸ್‌ ಧರಿಸಿದ್ದ ಸಮೀರ್‌ ಮುಗುಳು ನಗೆ ಬೀರುತ್ತಲೇ ವಿಚಾರಣೆಗೆ ಹಾಜರಾಗಿದ್ದಾನೆ. ಇನ್ನೂ ಸಕಲ ತಯಾರಿ ಮಾಡಿಕೊಂಡಿದ್ದ ಎಸ್‌ಐಟಿ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.

    ಧರ್ಮಸ್ಥಳ ದೇಗುಲ ವಿರುದ್ಧ ಅಪಪ್ರಚಾರ ಆರೋಪದಲ್ಲಿ `ದೂತ’ ಯೂಟ್ಯೂಬ್ ವಾಹಿನಿಯ ಸಮೀರ್‌ಗೆ ಕೋರ್ಟ್ ಇತ್ತೀಚೆಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಧರ್ಮಸ್ಥಳದಲ್ಲಿ ಅಪಪ್ರಚಾರದ ಆರೋಪ ಎದುರಿಸುತ್ತಿರೋ ಸಮೀರ್, ತಮ್ಮ ವಿಡಿಯೋದಲ್ಲಿ ದಂಗೆ ಏಳುವಂತೆ ಜನರಿಗೆ ಪ್ರಚೋದಿಸಿದ್ದ. ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಠಾಣೆಯಲ್ಲಿ ದೊಂಬಿ, ಪ್ರಚೋದನೆ ಸೇರಿದಂತೆ ಹಲವು ಪ್ರಕರಣಗಳ ಅಡಿಯಲ್ಲಿ ಕೇಸ್‌ಗಳು ದಾಖಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ನೀಡಿದ್ದ ಕೋರ್ಟ್ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು.

    ಕೋರ್ಟ್ ಜಾಮೀನು ಬಳಿಕ ಧರ್ಮಸ್ಥಳದಲ್ಲಿ ತನಗೆ ಜೀವ ಬೆದರಿಕೆ ಇರುವುದಾಗಿ ಹೇಳಿಕೊಂಡಿದ್ದ. ಈ ಹಿನ್ನೆಲೆ ಬೆಳ್ತಂಗಡಿ ಠಾಣೆಗೆ ಹಾಜರಾಗಲು ಪೊಲೀಸರು ಸೂಚಿಸಿದ್ದರು.

    ದೂತನ ಬಂಡವಾಳ ಬಯಲು
    ಇಲ್ಲ ಸಲ್ಲದ ಸುಳ್ಳು ಕತೆಗಳನ್ನು ಸೃಷ್ಟಿಸಿ ಎಲ್ಲರನ್ನೂ ಮರಳು ಮಾಡಿದ್ದವನೇ ಯೂಟ್ಯೂಬರ್ ಸಮೀರ್ ಎಂ.ಡಿ. ಯಾವುದೋ ಕೋಣೇಲಿ ಕೂತ್ಕೊಂಡು ಎಐ ವಿಡಿಯೋಗಳ ಮೂಲಕ ಜನರಿಗೆ ಮಂಕುಬೂದಿ ಎರಚಿ ಲೈಕ್ಸ್, ವೀವ್ಸ್ ಪಡೆದಿದ್ದ ದೂತನ ಬಂಡವಾಳ ಬಯಲಾಗಿದೆ. ತಾನು ಹೇಳಿದ್ದೇ ಸತ್ಯ ಅಂತ ನಂಬಿಸಿ, ಶಿವತಾಂಡವ ಶುರುವಾಗುತ್ತೆ. ನೋಡಿ ಸತ್ಯ ಹೇಗೆ ಹೊರಬರುತ್ತದೆ? ಎಲ್ಲದಕ್ಕೂ ಸಾಕ್ಷ್ಯ ಇದೆ ಅಂತಾ ಪುಂಖಾನುಪುಂಖವಾಗಿ ಸುಳ್ಳಿನ ಅರಮನೆಯನ್ನೇ ಕಟ್ಟಿದ್ದ. ದೂರುದಾರನಿಗೆ ʻಭೀಮ’ ಎಂದು ಹೆಸರಿಟ್ಟಿದ್ದೇ ಸುಳ್ಳುಕೋರ ಸಮೀರ್. ಅನನ್ಯಾ ಭಟ್ ಅನ್ನುವ ನಕಲಿ ಯುವತಿಯನ್ನು ಸೃಷ್ಟಿಸಿ ಧರ್ಮಸ್ಥಳ ಕ್ಷೇತ್ರಕ್ಕೆ, ಭಕ್ತರ ಭಾವನೆಗೆ ಚ್ಯುತಿ ಬರುವಂತೆ ಮಾಡಿದ್ದೇ ಈತ. ಬೀದಿಗೆ ಬನ್ನಿ ಹೋರಾಟ ಮಾಡಿ ಅಂತಾನೂ ಕರೆ ಕೊಟ್ಟಿದ್ದ. ಈತನ ವಿಡಿಯೋಗೆ ಫಂಡಿಂಗ್ ಬರುತ್ತಿದೆ ಅನ್ನೋ ಆರೋಪವೂ ಇದೆ.

  • ಸಮೀರ್‌ನ ಸುಳ್ಳಿನ ಕಂತೆ ಬಯಲು – ಇಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ʻದೂತʼನ ವಿಚಾರಣೆ

    ಸಮೀರ್‌ನ ಸುಳ್ಳಿನ ಕಂತೆ ಬಯಲು – ಇಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ʻದೂತʼನ ವಿಚಾರಣೆ

    ಮಂಗಳೂರು: ಬುರುಡೆ ಚಿನ್ನಯ್ಯನ ಬಂಧನದ ಬೆನ್ನಲ್ಲೇ ದೂತ ಸಮೀರ್‌ನ ಸುಳ್ಳಿನ ಕಂತೆ ಕಳಚಿ ಬಿದ್ದಿದೆ. ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ (Dharmasthala Police Station) ದಾಖಲಾಗಿರುವ ಸ್ವಯಂಪ್ರೇರಿತ ಪ್ರಕರಣದಲ್ಲಿ ಇಂದು ವಿಚಾರಣೆಗೆ ಹಾಜರಾಗಲಿದ್ದಾನೆ.

    ಧರ್ಮಸ್ಥಳ ದೇಗುಲ ವಿರುದ್ಧ ಅಪಪ್ರಚಾರ ಆರೋಪದಲ್ಲಿ `ದೂತ’ ಯೂಟ್ಯೂಬ್‌ ವಾಹಿನಿಯ ಸಮೀರ್‌ಗೆ ಕೋರ್ಟ್‌ (Cour) ಇತ್ತೀಚೆಗೆ ನಿರೀಕ್ಷಣಾ ಜಾಮೀನು (Bail) ಮಂಜೂರು ಮಾಡಿತ್ತು. ಧರ್ಮಸ್ಥಳದಲ್ಲಿ ಅಪಪ್ರಚಾರದ ಆರೋಪ ಎದುರಿಸುತ್ತಿರೋ ಸಮೀರ್, ತಮ್ಮ ವಿಡಿಯೋದಲ್ಲಿ ದಂಗೆ ಏಳುವಂತೆ ಜನರಿಗೆ ಪ್ರಚೋದಿಸಿದ್ದ. ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಠಾಣೆಯಲ್ಲಿ ದೊಂಬಿ, ಪ್ರಚೋದನೆ ಸೇರಿದಂತೆ ಹಲವರು ಕೇಸ್‌ಗಳು ದಾಖಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ನೀಡಿದ್ದ ಕೋರ್ಟ್‌ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಇದನ್ನೂ ಓದಿ: ವರ್ಷಾಂತ್ಯದಲ್ಲಿ ಭಾರತಕ್ಕೆ ಪುಟಿನ್‌, ಝೆಲೆನ್ಸ್ಕಿ ಭೇಟಿ – ಅಮೆರಿಕ ತೈಲ ವಾರ್‌ ನಡ್ವೆ ಹೆಚ್ಚಾಯ್ತು ಭಾರತದ ಪ್ರಾಬಲ್ಯ

    ಕೋರ್ಟ್‌ ಜಾಮೀನು ಬಳಿಕ ಧರ್ಮಸ್ಥಳದಲ್ಲಿ ತನಗೆ ಜೀವ ಬೆದರಿಕೆ ಇರುವುದಾಗಿ ಹೇಳಿಕೊಂಡಿದ್ದ. ಈ ಹಿನ್ನೆಲೆ ಬೆಳ್ತಂಗಡಿ ಠಾಣೆಗೆ ಹಾಜರಾಗಲು ಪೊಲೀಸರು ಸೂಚಿಸಿದ್ದರು. ಅದರಂತೆ ಸಮೀರ್‌ ಇಂದು ಬೆಳ್ತಂಗಡಿ ಠಾಣೆಗೆ ವಿಚಾರಣೆಗೆ ಬರುವುದಾಗಿ ತಿಳಿಸಿದ್ದಾನೆ. ಆದ್ರೆ ಬೆಳಗ್ಗೆ 10:30ಕ್ಕೆ ವಿಚಾರಣೆಗೆ ಬರೋದಾಗಿ ತಿಳಿಸಿದ್ದ ಸಮೀರ್‌ 11 ಗಂಟೆಯಾದ್ರೂ ಸುಳಿವಿಲ್ಲ. ಒಂದು ವೇಳೆ ಸಮೀರ್‌ ವಿಚಾರಣೆಗೆ ಹಾಜರಾಗದಿದ್ದರೆ ಬಂಧಿಸುವ ಸಾಧ್ಯತೆಗಳೂ ಇವೆ. ಇದನ್ನೂ ಓದಿ: ಅನನ್ಯಾ ಭಟ್ ನಾಪತ್ತೆ ಪ್ರಕರಣ – ಎಸ್‌ಐಟಿ 2ನೇ ನೋಟಿಸ್‌ಗೂ ಉತ್ತರಿಸದ ಸುಜಾತ ಭಟ್

    ದೂತನ ಬಂಡವಾಳ ಬಯಲು
    ಇಲ್ಲ ಸಲ್ಲದ ಸುಳ್ಳು ಕತೆಗಳನ್ನು ಸೃಷ್ಟಿಸಿ ಎಲ್ಲರನ್ನೂ ಮರಳು ಮಾಡಿದ್ದವನೇ ಯೂಟ್ಯೂಬರ್ ಸಮೀರ್ ಎಂ.ಡಿ. ಯಾವುದೋ ಕೋಣೇಲಿ ಕೂತ್ಕೊಂಡು ಎಐ ವಿಡಿಯೋಗಳ ಮೂಲಕ ಜನರಿಗೆ ಮಂಕುಬೂದಿ ಎರಚಿ ಲೈಕ್ಸ್, ವೀವ್ಸ್ ಪಡೆದಿದ್ದ ದೂತನ ಬಂಡವಾಳ ಬಯಲಾಗಿದೆ. ತಾನು ಹೇಳಿದ್ದೇ ಸತ್ಯ ಅಂತ ನಂಬಿಸಿ, ಶಿವತಾಂಡವ ಶುರುವಾಗುತ್ತೆ.. ನೋಡಿ ಸತ್ಯ ಹೇಗೆ ಹೊರಬರುತ್ತದೆ.. ಎಲ್ಲದಕ್ಕೂ ಸಾಕ್ಷ್ಯ ಇದೆ ಅಂತಾ ಪುಂಖಾನುಪುಂಖವಾಗಿ ಸುಳ್ಳಿನ ಅರಮನೆಯನ್ನೇ ಕಟ್ಟಿದ್ದ. ದೂರುದಾರನಿಗೆ ʻಭೀಮʼ ಎಂದು ಹೆಸರಿಟ್ಟಿದ್ದೇ ಸುಳ್ಳುಕೋರ ಸಮೀರ್. ಅನನ್ಯಾ ಭಟ್ ಅನ್ನುವ ನಕಲಿ ಯುವತಿಯನ್ನು ಸೃಷ್ಟಿಸಿ ಧರ್ಮಸ್ಥಳ ಕ್ಷೇತ್ರಕ್ಕೆ, ಭಕ್ತರ ಭಾವನೆಗೆ ಚ್ಯುತಿ ಬರುವಂತೆ ಮಾಡಿದ್ದೇ ಈತ. ಬೀದಿಗೆ ಬನ್ನಿ ಹೋರಾಟ ಮಾಡಿ ಅಂತಾನೂ ಕರೆ ಕೊಟ್ಟಿದ್ದ. ಈತನ ವಿಡಿಯೋಗೆ ಫಂಡಿಂಗ್ ಬರುತ್ತಿದೆ ಅನ್ನೋ ಆರೋಪವೂ ಇದೆ.

    ಎಐ ಕಟ್ಟುಕತೆಗಳ ಅಸಲಿಯತ್ತು ಬಟಾಬಯಲಾಗ್ತಿದ್ದಂತೆ ಬಿಲ ಸೇರಿಕೊಂಡಿದ್ದಾನೆ. ಬಳ್ಳಾರಿ ಹಾಗೂ ಬನ್ನೇರುಘಟ್ಟದ ಹುಲ್ಲಳ್ಳಿ ಮನೆಗೆ ಪೊಲೀಸರು ನಾಳೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಅಂಟಿಸಿದ್ದಾರೆ. ಇತ್ತ ನಿಂದನೆ ಕೇಸಲ್ಲಿ ಮಹೇಶ್ ಶೆಟ್ಟಿ ತಿಮರೋಡಿಗೆ ಉಡುಪಿ ಜಿಲ್ಲಾ ನ್ಯಾಯಾಲಯದಿಂದ ಜಾಮೀನು ಮಂಜೂರಾಗಿದೆ. ಇದನ್ನೂ ಓದಿ: ಧರ್ಮಸ್ಥಳಕ್ಕೆ ಹೋಗಲು ಭಯವಿದೆ – ಪೊಲೀಸರ ಮುಂದೆ ಹಲವು ಬೇಡಿಕೆ ಇಟ್ಟ ಸಮೀರ್‌

  • ಗಿರೀಶ್‌ ಮಟ್ಟಣನವರ್‌, ಮಹೇಶ್‌ ಶೆಟ್ಟಿ ತಿಮರೋಡಿ, ಸಮೀರ್‌ ವಿರುದ್ಧ ಎಫ್‌ಐಆರ್‌ ದಾಖಲು

    ಗಿರೀಶ್‌ ಮಟ್ಟಣನವರ್‌, ಮಹೇಶ್‌ ಶೆಟ್ಟಿ ತಿಮರೋಡಿ, ಸಮೀರ್‌ ವಿರುದ್ಧ ಎಫ್‌ಐಆರ್‌ ದಾಖಲು

    – ಉಜಿರೆ ಬೆನಕ ಆಸ್ಪತ್ರೆಯಲ್ಲಿ ಪತ್ರಕರ್ತನ ಮೇಲೆ ಹಲ್ಲೆ ಕೇಸ್‌

    ಮಂಗಳೂರು: ಖಾಸಗಿ ವಾಹಿನಿಯ ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಗಿರೀಶ್‌ ಮಟ್ಟಣನವರ್‌ (Girish Mattannavar), ಮಹೇಶ್‌ ಶೆಟ್ಟಿ ತಿಮರೋಡಿ (Mahesh Shetty Thimarodi), ಯೂಟ್ಯೂಬರ್‌ ಸಮೀರ್‌ (Youtuber Sameer) ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

    ವರದಿಗಾರ ಹರೀಶ್‌ ಅವರ ದೂರಿನಂತೆ ಬಿಎನ್‌ಎಸ್‌ ಸೆಕ್ಷನ್‌ 115(2), 189(2), 191(2), 351(2), 352, 190 ಅಡಿ ಎಫ್‌ಐಆರ್‌ ದಾಖಲಾಗಿದೆ. ಎಫ್‌ಐಆರ್‌ನಲ್ಲಿ ಗಿರೀಶ್‌ ಮಟ್ಟಣನವರ್‌ (ಎ1), ಮಹೇಶ್‌ ಶೆಟ್ಟಿ ತಿಮರೋಡಿ(ಎ2) ಯೂಟ್ಯೂಬರ್‌ ಸಮೀರ್‌(ಎ3), ಜಯಂತ್‌(ಎ4) ಇತರರ ಹೆಸರನ್ನು ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ರಹಸ್ಯ| ಕಗ್ಗಂಟಾಗಿದೆ 13ನೇ ಪಾಯಿಂಟ್ ಸವಾಲುಗಳ ಮಧ್ಯೆ ಉತ್ಖನನಕ್ಕೆ ರೆಡಿಯಾದ ಎಸ್‌ಐಟಿ

     

    ದೂರಿನಲ್ಲಿ ಏನಿದೆ?
    ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲೆ ಬುಧವಾರ ಹಲ್ಲೆ ನಡೆದ ವಿಚಾರ ತಿಳಿದ ಹಿನ್ನೆಲೆಯಲ್ಲಿ ನಾನು ಹಲ್ಲೆಗೆ ಒಳಗಾದವರನ್ನು ಮಾತನಾಡಿಸಲು ಉಜಿರೆಯ ಬೆನಕ ಆಸ್ಪತ್ರೆಗೆ ಬಂದಿದ್ದೆ. ಈ ಸಂದರ್ಭದಲ್ಲಿ ಗಿರೀಶ್‌ ಮಟ್ಟಣವರ್‌ ಬಳಿ ಬೈಟ್‌ ಕೊಡುವಂತೆ ಕೇಳಿದಾಗ ನನ್ನ ಮೇಲೆ ಬೈಯಲು ಆರಂಭಿಸಿದರು. ಇದನ್ನೂ ಓದಿಯೂಟ್ಯೂಬರ್‌ಗಳಿಗೆ ಥಳಿತ, ಅಪಪ್ರಚಾರಿಗಳನ್ನು ಬಂಧಿಸಿ  ಸಿಡಿದ ಧರ್ಮಸ್ಥಳದ ಭಕ್ತರು

    ಈ ವೇಳೆ ಅಲ್ಲೇ ಇದ್ದ ಮಹೇಶ್‌ ಶೆಟ್ಟಿ ತಿಮರೋಡಿ ಮತ್ತು ಅವರ ಗ್ಯಾಂಗ್‌ ಸದಸ್ಯರು ಹಲ್ಲೆ ಮಾಡಿದ್ದಾರೆ. ಈ ವೇಳೆ ಕೀಳು ಭಾಷೆಯಿಂದ ನಿಂದಿಸಿದ್ದಾರೆ. ಈ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ಸಮೀರ್‌ ಬೆದರಿಕೆ ಹಾಕಿದ್ದಾರೆ. ವಿಷಯ ತಿಳಿದು ಆಸ್ಪತ್ರೆಗೆ ಆಗಮಿಸಿದ ಪೊಲೀಸರು ನನ್ನನ್ನು ರಕ್ಷಣೆ ಮಾಡಿ ಒಳಗೆ ಕೂರಿಸಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಜಯಂತ್‌ ಟಿ ನನ್ನ ವಿಡಿಯೋ ಮಾಡಿ ಹಲ್ಲೆ ಮಾಡಿದ್ದಾರೆ. ನನ್ನ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡುತ್ತೇನೆ.