Tag: ಸರಗಳ್ಳ

  • ಎಸ್ಕೇಪ್ ಆಗುತ್ತಿದ್ದ ಸರಗಳ್ಳನನ್ನು ಚಾಣಕ್ಷತನದಿಂದ ಹಿಡಿದ ಪೊಲೀಸ್ – ವೀಡಿಯೋ ವೈರಲ್

    ಎಸ್ಕೇಪ್ ಆಗುತ್ತಿದ್ದ ಸರಗಳ್ಳನನ್ನು ಚಾಣಕ್ಷತನದಿಂದ ಹಿಡಿದ ಪೊಲೀಸ್ – ವೀಡಿಯೋ ವೈರಲ್

    ನವದೆಹಲಿ: ಪೊಲೀಸ್ ಪೇದೆಯೊಬ್ಬರು ಪರಾರಿಯಾಗುತ್ತಿದ್ದ ಸರಗಳ್ಳನನ್ನು ಹಿಡಿದ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

    ಈ ಘಟನೆಯ ವೀಡಿಯೋವನ್ನು ದೆಹಲಿ (Delhi) ಪೊಲೀಸರ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಶೇರ್ ಮಾಡಿಕೊಳ್ಳಲಾಗಿದ್ದು, ಪ್ರಾಣವನ್ನು ಲೆಕ್ಕಿಸದೇ, ಶಹಬಾದ್ ಡೈರಿ ಪೊಲೀಸ್ ಠಾಣೆಯ (Shahabad Dairy police station) ಕಾನ್‍ಸ್ಟೆಬಲ್ ಸತ್ಯೇಂದ್ರ ಕಳ್ಳನನ್ನು ಹಿಡಿದು ಬಂಧಿಸಿದ್ದಾರೆ. ಈ ಕಳ್ಳನ ಬಂಧನದೊಂದಿಗೆ 11 ಪ್ರಕರಣಗಳನ್ನು ಬಗೆಹರಿಸಲಾಗಿದೆ. ಈ ಸಂಬಂಧ ಕಾನೂನು ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದಿಂದ ಬೆಳಗಾವಿಗೆ ಬರುತ್ತಿದ್ದ 300ಕ್ಕೂ ಹೆಚ್ಚು ಬಸ್‌ಗಳು ತಾತ್ಕಾಲಿಕ ಸ್ಥಗಿತ

    ಕಾನ್‍ಸ್ಟೆಬಲ್‍ನ ಕೆಚ್ಚೆದೆಯ ಕಾರ್ಯದಿಂದ ಕಳ್ಳತನವಾಗುತ್ತಿದ್ದ ಮಹಿಳೆಯ ನೆಕ್ಲೇಸ್ ಉಳಿದಿದೆ. ಈ ಹಿಂದೆ ಶಹಾಬಾದ್ ಡೈರಿ ಪೊಲೀಸ್ ಠಾಣೆಯವರು ಸರಗಳ್ಳತನದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ಹೀಗಾಗಿ ಕಳ್ಳನನ್ನು ಪತ್ತೆ ಹಚ್ಚಲು ಕಾನ್‍ಸ್ಟೆಬಲ್ ಸತ್ಯೇಂದ್ರ ತೆರಳಿದ್ದರು. ಇದನ್ನೂ ಓದಿ: ಕೊಡಗಿನಲ್ಲೂ ಉಗ್ರ ಚಟುವಟಿಕೆಗಳಿಲ್ಲ ಎಂದು ಹೇಳುವಂತಿಲ್ಲ ಈ ಬಗ್ಗೆ ಮಾಹಿತಿ ಇದೆ: ಕೆ.ಜಿ ಬೋಪಯ್ಯ ಸ್ಫೋಟಕ ಹೇಳಿಕೆ

    ವೀಡಿಯೋದಲ್ಲಿ ಕ್ರಿಮಿನಲ್ ಒಂದು ಕಡೆಯಿಂದ ಬರುತ್ತಿದ್ದಂತೆಯೇ ಕಾನ್‍ಸ್ಟೆಬಲ್ ತನ್ನ ಬೈಕನ್ನು ನಿಧಾನಗೊಳಿಸುತ್ತಾರೆ. ಪೊಲೀಸ್ ಅನ್ನು ಕಂಡ ಆರೋಪಿ ಗಾಬರಿಯಿಂದ ಎಸ್ಕೇಪ್ ಆಗಲು ಪ್ರಯತ್ನಿಸುತ್ತಾನೆ. ಆದರೆ ತಕ್ಷಣವೇ ಸತ್ಯೇಂದ್ರ ಅವರು ಆತನನ್ನು ಬಿಗಿಯಾಗಿ ಹಿಡಿದು, ತಪ್ಪಿಸಿಕೊಳ್ಳದಂತೆ ತಡೆಯುವುದನ್ನು ಕಾಣಬಹುದಾಗಿದೆ. ಇನ್ನೂ ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಅದ್ಭುತ, ಸೂಪರ್ ಎಂದು ಕಾನ್‍ಸ್ಟೆಬಲ್ ಧೈರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಓಬವ್ವನ ನಾಡಲ್ಲಿ ಸರಗಳ್ಳನ ಹಾವಳಿ- ಬೆಚ್ಚಿದ ವನಿತೆಯರು

    ಓಬವ್ವನ ನಾಡಲ್ಲಿ ಸರಗಳ್ಳನ ಹಾವಳಿ- ಬೆಚ್ಚಿದ ವನಿತೆಯರು

    – 15 ದಿನಗಳಲ್ಲಿ 12 ಸರಗಳ್ಳತನ
    – ಕಳ್ಳನ ಸೆರೆಗಾಗಿ ಪೊಲೀಸರು ಸ್ಕೆಚ್

    ಚಿತ್ರದುರ್ಗ: ಕೊರೊನಾ ಹೊತ್ತಲ್ಲಿ ಜನರ ಕೈಯಲ್ಲಿ ಕಾಸಿಲ್ಲ, ಕೆಲಸ ಸಿಗುತ್ತಿಲ್ಲ ಎಂದು ಜನ ತಲೆ ಮೇಲೆ ಕೈ ಹೊತ್ತು ಕೂತಿದ್ದಾರೆ. ಆದರೆ ಕೋಟೆ ನಾಡಿನಲ್ಲೊಬ್ಬ ಕಳ್ಳ ಪಲ್ಸರ್ ಬೈಕ್ ನಲ್ಲಿ ಮಿಂಚಿನಂತೆ ದಾಳಿಮಾಡಿ ಮಹಿಳೆಯರ ಕೊರಳಲ್ಲಿನ ಸರ ಎಗರಿಸಿ ಪರಾರಿಯಾಗುತ್ತಿದ್ದಾನೆ. ಹೀಗಾಗಿ ಮಹಿಳೆಯರು ಮನೆಯಿಂದ ಹೊರಬರಲು ಯೋಚಿಸುವಂತಾಗಿದೆ.

    ನಗರದ ಫ್ಲೈ ಓವರ್, ಪ್ರಮುಖ ವೃತ್ತಗಳು ಹಾಗೂ ಜನರ ಓಡಾಟ ವಿರಳವಿರುವ ರಸ್ತೆಗಳಲ್ಲಿ ಓಡಾಡುವ ಮಹಿಳೆಯರನ್ನು ಟಾರ್ಗೆಟ್ ಮಾಡುವ ಖದೀಮ, ಮಹಿಳೆಯರ ಚಲನವಲನ ಗಮನಿಸಿ, ಸ್ಕೆಚ್ ಹಾಕಿ ಸರಗಳ್ಳತನ ಮಾಡುತ್ತಿದ್ದಾನೆ.

    ಈ ಬಗ್ಗೆ ಪ್ರತಿಕ್ರಿಯಿಸಿರುವ ಚಿತ್ರದುರ್ಗ ಎಸ್‍ಪಿ ಜಿ.ರಾಧಿಕಾ, ಸರಗಳ್ಳನ ಸೆರೆಗಾಗಿ ಬಲೆ ಬೀಸಲಾಗಿದೆ. ನಗರ ಠಾಣೆ ಹಾಗೂ ಗ್ರಾಮಾಂತರ ಠಾಣೆ ಪೊಲೀಸರೊಂದಿಗೆ ವಿಶೇಷ ತಂಡ ರಚಿಸಿ, ಖರೀಮನನ್ನು ಹಿಡಿಯಲು ಚೆಕ್ ಪೋಸ್ಟ್ ಸಹ ಮಾಡಲಾಗಿದೆ. ಜಿಲ್ಲೆಯ ಹಲವೆಡೆ ಹಗಲು-ಇರುಳು ಎನ್ನದೇ ಪೊಲೀಸ್ ಸಿಬ್ಬಂದಿ ತಪಾಸಣೆ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ತಿಳಿಸಿದ್ದಾರೆ.

    ಕಳೆದ ಎರಡು ತಿಂಗಳಿಂದ ರಾಜ್ಯದಲ್ಲಿ ಜನರು ಕೊರೊನಾ ಎಂದು ಪ್ರಾಣ ಭಯದಲ್ಲೇ ಬದುಕುತ್ತಿದ್ದಾರೆ. ಆದರೆ ಈ ಲಾಕ್‍ಡೌನ್ ಸಮಯವನ್ನ ಚೆನ್ನಾಗಿ ಸದುಪಯೋಗ ಮಾಡಿಕೊಂಡಿರುವ ಈ ಖದೀಮ ಮಿಂಚಿನಂತೆ ದಾಳಿ ಮಾಡಿ ಮಹಿಳೆಯರ ಮೇಲಿನ ಚಿನ್ನದ ಸರವನ್ನು ಎಗರಿಸಿ ಪರಾರಿಯಾಗುತ್ತಿದ್ದಾನೆ. ಇದರಿಂದಾಗಿ ಕೇವಲ 15 ದಿನಗಳಲ್ಲಿ 12 ಸರ ಕಳ್ಳತನ ಮಾಡಿ ಯಾವುದೇ ಸುಳಿವು ಬಿಡದೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿತ್ತಿದ್ದಾನೆ. ಪ್ರತಿಬಾರಿಯೂ ಬ್ಲಾಕ್ ಅಂಡ್ ವೈಟ್ ಪಲ್ಸರ್ ಬೈಕ್ ನಲ್ಲಿ ಬರುವ ಕತರ್ನಾಕ್ ಕಳ್ಳ, ಈ ವರೆಗೆ ಸಿಕ್ಕಿಲ್ಲ. ಹೀಗಾಗಿ ಕೋಟೆನಾಡಿನ ಮಹಿಳೆಯರಲ್ಲಿ ಭಾರೀ ಆತಂಕ ಮೂಡಿದೆ.

  • ಸಿನಿಮೀಯವಾಗಿ ಚೇಸ್ ಮಾಡಿ ಬೈಕಿಗೆ ಡಿಕ್ಕಿ ಹೊಡೆದು ಕಳ್ಳನನ್ನು ಹಿಡಿದ ಆಟೋ ಚಾಲಕ

    ಸಿನಿಮೀಯವಾಗಿ ಚೇಸ್ ಮಾಡಿ ಬೈಕಿಗೆ ಡಿಕ್ಕಿ ಹೊಡೆದು ಕಳ್ಳನನ್ನು ಹಿಡಿದ ಆಟೋ ಚಾಲಕ

    ಬೆಂಗಳೂರು: ರಸ್ತೆಯಲ್ಲಿ ಹೋಗುತ್ತಿದ್ದ ಒಂಟಿ ಮಹಿಳೆಯನ್ನು ಅಡ್ಡಗಟ್ಟಿ ಚಿನ್ನದ ಸರವನ್ನು ಕದ್ದು ಪರಾರಿಯಾಗುತ್ತಿದ್ದ ಖದೀಮನನ್ನು ಸಿನಿಮೀಯ ರೀತಿಯಲ್ಲಿ ಆಟೋ ಚಾಲಕರೊಬ್ಬರು ಚೇಸ್ ಮಾಡಿ ಹಿಡಿದಿದ್ದಾರೆ.

    ಸಿಲಿಕಾನ್ ಸಿಟಿಯ ಮಾರತಹಳ್ಳಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮಾರತಹಳ್ಳಿಯ ಮ್ಯಾಕ್ಸ್ ಶೋರೂಮ್ ಮುಂಭಾಗ ಮಹಿಳೆ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಕೆ.ಜಿ ಹಳ್ಳಿ ನಿವಾಸಿ ವಿಘ್ನೇಶ್ ಮಹಿಳೆಯ ಚಿನ್ನದ ಸರಕ್ಕೆ ಹೊಂಚು ಹಾಕಿ, ಆಕೆಯನ್ನು ಅಡ್ಡಗಟ್ಟಿ ಚಿನ್ನದ ಸರವನ್ನು ಕಿತ್ತು ಪರಾರಿ ಆಗುತ್ತಿದ್ದ. ಈ ವೇಳೆ ಕಳ್ಳತನದ ದೃಶ್ಯವನ್ನು ಗಮನಿಸಿದ ಆಟೋ ಚಾಲಕ ಹನುಮಂತ ಕಳ್ಳನನ್ನು ಹಿಂಬಾಲಿಸಿಕೊಂಡು ಹೋಗಿ ಆತನ ದ್ವಿಚಕ್ರ ವಾಹನಕ್ಕೆ ಆಟೋವನ್ನು ಡಿಕ್ಕಿ ಹೊಡೆಸಿದ್ದಾರೆ. ಇದನ್ನೂ ಓದಿ: ಸರ ಕದ್ದು ಕತ್ತನ್ನೂ ಸೀಳ್ತಾರೆ- ಬೆಂಗ್ಳೂರಿಗೆ ಎಂಟ್ರಿ ಕೊಟ್ಟಿದೆ ರಕ್ತಪಿಪಾಸು ಗ್ಯಾಂಗ್

    ಆಗ ಮತ್ತೆ ಕಳ್ಳ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಸ್ಥಳೀಯರು ಅವನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಆ ಬಳಿಕ ಆಟೋ ಚಾಲಕ ಹನುಮಂತ ಹಾಗೂ ಸಾರ್ವಜನಿಕರು ಖದೀಮನನ್ನು ಮಾರತಹಳ್ಳಿ ಪೋಲಿಸರಿಗೆ ಒಪ್ಪಿಸಿದ್ದಾರೆ.

    ಆಟೋ ಚಾಲಕ ಹನುಮಂತನ ಸಾಹಸದ ದೃಶ್ಯ ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆಟೋ ಚಾಲಕನ ಧೈರ್ಯ ಮತ್ತು ಸಾಹಸಕ್ಕೆ ಪೋಲಿಸ್ ಇಲಾಖೆ ಸೇರಿದಂತೆ ಸಾರ್ವಜನಿಕರು ಮೆಚ್ಚುಗೆ ಸೂಚಿಸಿದ್ದು, ವೈಟ್ ಫೀಲ್ಡ್ ಡಿಸಿಪಿ ಅನುಚೇತ್ ಆಟೋ ಚಾಲಕ ಹನುಮಂತನಿಗೆ 10 ಸಾವಿರ ರೂ. ಬಹುಮಾನ ವಿತರಿಸಿದ್ದಾರೆ.

    ಸದ್ಯ ಈ ಸಂಬಂಧ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿರುವ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

  • ಸೂಚನೆ ನೀಡಿದ್ರೂ ಶರಣಾಗದ ಸರಗಳ್ಳ- ಬಂಧಿಸಲು ಹೋದ ಪೊಲೀಸ್ರ ಮೇಲೆಯೇ ಹಲ್ಲೆ!

    ಸೂಚನೆ ನೀಡಿದ್ರೂ ಶರಣಾಗದ ಸರಗಳ್ಳ- ಬಂಧಿಸಲು ಹೋದ ಪೊಲೀಸ್ರ ಮೇಲೆಯೇ ಹಲ್ಲೆ!

    ಬೆಂಗಳೂರು: ನಗರದಲ್ಲಿ ಸರಗಳ್ಳನ ಮೇಲೆ ತಡರಾತ್ರಿ ಬಾಣಸವಾಡಿ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಸುಹೇಲ್ ಅಲಿಯಾಸ್ ಪಪ್ಪಾಯಿ ಗುಂಡೇಟಿಗೆ ಒಳಗಾದ ಸರಗಳ್ಳ. ಸುಹೇಲ್ ಗ್ಯಾಂಗ್ ಗೆ ಶರಣಾಗಲು ಪೊಲೀಸರು ಮಾಹಿತಿ ನಿಡಿದ್ದರೂ ಶರಣಾಗದೇ ಇರುವುದರಿಂದ ಬಂಧಿಸಲು ಹೋದಾಗ ಆತ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದಾನೆ.

    ನಗರದಲ್ಲಿ ಕಳೆದ ಮೂರು ದಿನಗಳಿಂದ ಸರಣಿ ಸರಗಳ್ಳತನದ ಒಂಬತ್ತು ಪ್ರಕರಣಗಳು ದಾಖಲಾಗಿತ್ತು. ಸುಹೇಲ್ ಗ್ಯಾಂಗ್ ಮಾಡಿರುವ ಖಚಿತ ಮಾಹಿತಿ ಮೇರೆಗ ಪೊಲಿಸರು ಆತನ ಬಂಧನಕ್ಕೆ ಬಾಣಸವಾಡಿ ಎಸಿಪಿ ಮಹದೇವಪ್ಪ ನೇತೃತ್ವದಲ್ಲಿ ತಂಡ ರಚನೆ ಮಾಡಿ ಶೋಧ ಕಾರ್ಯ ನಡೆಸುತ್ತಿದ್ದರು. ಈ ವೇಳೆಯಲ್ಲಿ ಸುಹೇಲ್ ಆ್ಯಂಡ್ ಗ್ಯಾಂಗ್ ಬಾಣಸವಾಡಿ ಅಗ್ನಿಶಾಮಕದಳ ಸ್ಟೇಷನ್ ರಸ್ತೆಯಲ್ಲಿ ಇರುವುದಾಗಿ ಮಾಹಿತಿ ಬಂದಿತ್ತು.

    ಸ್ಥಳಕ್ಕೆ ತೆರಳಿದ ಬಾಣಸವಾಡಿ ಇನ್ಸ್ ಪೆಕ್ಟರ್ ಮುನಿಕೃಷ್ಣ ತಂಡ ಸುಹೇಲ್ ಬಂಧನಕ್ಕೆ ಮುಂದಾಗಿತ್ತು. ಈ ವೇಳೆಯಲ್ಲಿ ಸುಹೇಲ್ ಮಾರಕಾಸ್ತ್ರದಿಂದ ಸಬ್ ಇನ್ಸ್ ಪೆಕ್ಟರ್ ಶರತ್ ಹಾಗೂ ಮುಖ್ಯಪೇದೆ ರಫಿಕ್ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಈ ಹಿನ್ನೆಲೆಯಲ್ಲಿ ಇನ್ಸ್ ಪೆಕ್ಟರ್ ಮುನಿಕೃಷ್ಣ ಮೂರು ಸುತ್ತು ಫೈರಿಂಗ್ ಮಾಡಿದ್ದಾರೆ. ಮೊದಲು ಶರಣಾಗುವಂತೆ ಸೂಚನೆ ನೀಡಿದ್ದರೂ ಆರೋಪಿ ಸುಹೇಲ್ ಶರಣಾಗತಿ ಆಗಲಿಲ್ಲ. ಆಗ ಇನ್ಸ್ ಪೆಕ್ಟರ್ ಸುಹೇಲ್ ಎರಡು ಕಾಲಿಗೂ ಗುಂಡು ಹಾರಿಸಿದ್ದಾರೆ. ಹಲ್ಲೆಗೊಳಗಾದ ಸುಹೇಲ್ ಹಾಗೂ ಪೊಲೀಸರನ್ನು ಚಿಕಿತ್ಸೆಗೆ ಬೌರಿಂಗ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

    ಸದ್ಯ ಸುಹೇಲ್ ಜೊತೆಯಿದ್ದ ಇಬ್ಬರು ಪರಾರಿಯಾಗಿದ್ದಾರೆ. ಸುಹೇಲ್ ವಿರುದ್ಧ ನಗರ ವಿವಿಧ ಪೊಲೀಸ್ ಠಾಣೆಗಳಲ್ಲಿ ಸರಗಳ್ಳತನ, ಸುಲಿಗೆ, ದರೋಡೆ ಸೇರಿದಂತೆ 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದೆ.

    ಸದ್ಯ ಬಾಣಸವಾಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

     

  • ಸರಗಳ್ಳತನಕ್ಕೆ ಬಂದವ ಮಹಿಳೆ ಮೇಲೆ ಡ್ರ್ಯಾಗರ್‌ನಿಂದ ಅಟ್ಯಾಕ್ ಮಾಡ್ದ!

    ಸರಗಳ್ಳತನಕ್ಕೆ ಬಂದವ ಮಹಿಳೆ ಮೇಲೆ ಡ್ರ್ಯಾಗರ್‌ನಿಂದ ಅಟ್ಯಾಕ್ ಮಾಡ್ದ!

    ಬೆಂಗಳೂರು: ಸಾಮಾನ್ಯವಾಗಿ ಸರಗಳ್ಳರು ತಮ್ಮ ಕೃತ್ಯವನ್ನ ಎಸಗಲು ನಿರ್ಜನ ಪ್ರದೇಶವನ್ನ ಆರಿಸಿಕೊಳುತ್ತಾರೆ. ಆದರೆ ಇಲ್ಲೊಬ್ಬ ಕಳ್ಳನಿಗೆ ಅದ್ಯಾವ ಭಂಡ ಧೈರ್ಯವೋ ಗೊತ್ತಿಲ್ಲ. ಜನರ ಮುಂದೆಯೇ ಕೈಚಳಕ ತೋರಿಸಲು ಹೋಗಿ ಪೊಲೀಸರ ಅತಿಥಿಯಾಗಿದ್ದಾನೆ.

    ಎಂಜಿ ರಸ್ತೆಯಲ್ಲಿ ನೂರಾರು ಜನರ ಮುಂದೆಯೇ ಸರಗಳ್ಳ ತನ್ನ ಕೈಚಳಕ ತೋರಿಸಲು ಯತ್ನಿಸಿದ್ದು, ಭಾನುವಾರ ಸಂಜೆ 7.30ರ ಸಮಯದಲ್ಲಿ ಸವಿತಾ ಎಂಬವರು ಮಕ್ಕಳನ್ನು ಆಡಿಸುತ್ತಿದ್ದ ವೇಳೆ ಮೊಹಮ್ಮದ್ ದಸ್ತಗೀರ್ ಎಂಬಾತ ಮಹಿಳೆ ಕೈಗೆ ಡ್ರ್ಯಾಗರ್‍ನಿಂದ ಇರಿದು ಸರ ಕಿತ್ತು ಪರಾರಿಯಾಗಲು ಯತ್ನಿಸಿದ್ದಾನೆ. ಆದರೆ ಈ ವೇಳೆ ಸ್ಥಳದಲ್ಲಿ ಇದ್ದ ರೆವೆನ್ಯೂ ಇಲಾಖೆಯ ಗನ್ ಮ್ಯಾನ್ ರವೀಂದ್ರ ಎಂಬವರು ಕಳ್ಳನನ್ನ ಬೆನ್ನತ್ತಿದ್ದಾರೆ. ಆಗ ಮೊಹಮ್ಮದ್, ಗನ್ ಮ್ಯಾನ್ ಗೂ ಡ್ರ್ಯಾಗರ್ ನಿಂದ ಇರಿದು ಪರಾರಿಯಾಗಲು ಯತ್ನಿಸಿದ್ದಾನೆ. ಇದನ್ನು ಕಂಡ ಸ್ಥಳೀಯರು ಮೊಹಮ್ಮದ್ ನನ್ನು ಹಿಡಿದು ಥಳಿಸಿ ಪೊಲೀಸರ ವಶಕ್ಕೆ ನೀಡಿದ್ದಾರೆ.

    ಘಟನೆ ಕುರಿತು ಮಾಹಿತಿ ನೀಡಿದ ಕೇಂದ್ರ ವಿಭಾಗದ ಡಿಸಿಪಿ ಡಾ. ಚಂದ್ರಗುಪ್ತ ಅವರು, ಸವಿತಾರ ಮೇಲೆ ದಾಳಿ ನಡೆಸುವ ಮುನ್ನ ಮೊಹಮ್ಮದ್ ಅದೇ ದಾರಿಯಲ್ಲಿ ಬರುತ್ತಿದ್ದ ಮತ್ತೊಬ್ಬ ಮಹಿಳೆಯ ಸರ ಕೀಳಲು ಹೋಗಿ ವಿಫಲನಾಗಿದ್ದ. ಆರೋಪಿಯ ಮೇಲೆ 20 ಸರಗಳ್ಳತನ ಪ್ರಕರಣಗಳಿದ್ದು, ಈ ಹಿಂದೆ ಪೊಲೀಸರಿಂದ ಗುಂಡೇಟು ತಿಂದಿದ್ದ ಎಂದು ಮಾಹಿತಿ ನೀಡಿದ್ದಾರೆ. ಘಟನೆ ಕುರಿತು ಕಬ್ಬನ್ ಪಾರ್ಕ್ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.