Tag: ಸರಣಿ

  • ಭಾರತ ಪರ ಕ್ರಿಕೆಟ್ ಆಡಿದ 21ನೇ ಶತಮಾನದಲ್ಲಿ ಜನಿಸಿದ ಮೊದಲ ಆಟಗಾರ ಯಾರು ಗೊತ್ತಾ?

    ಭಾರತ ಪರ ಕ್ರಿಕೆಟ್ ಆಡಿದ 21ನೇ ಶತಮಾನದಲ್ಲಿ ಜನಿಸಿದ ಮೊದಲ ಆಟಗಾರ ಯಾರು ಗೊತ್ತಾ?

    ಕೊಲಂಬೋ: ಭಾರತ ಹಾಗೂ ಶ್ರೀಲಂಕಾ ಸರಣಿ ಮುಕ್ತಾಯಗೊಂಡಿದೆ. ಆದರೆ ಈ ಸರಣಿಯಲ್ಲಿ ಹಲವು ಬಗೆಯ ವೈಶಿಷ್ಟ್ಯವನ್ನು ಭಾರತ ತಂಡ ಅನುಭವಿಸಿದೆ. ಅದರಂತೆ 21ನೇ ಶತಮಾನದಲ್ಲಿ ಜನಿಸಿದ ಆಟಗಾರನೊಬ್ಬ ಮೊದಲ ಬಾರಿಗೆ ಭಾರತ ತಂಡದಲ್ಲಿ ಆಡಿ ಸಾಧನೆ ಮಾಡಿದ್ದಾರೆ.

    ಶ್ರೀಲಂಕಾ ಸರಣಿಗೆ ಭಾರತದ ಯುವ ತಂಡವನ್ನು ಕಳುಹಿಸಿಕೊಡಲಾಗಿತ್ತು. ಇದರಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್ ಕೂಡ ಸ್ಥಾನ ಪಡೆದಿದ್ದರು. ಬಳಿಕ ಇವರಿಗೆ ಟಿ20 ಸರಣಿಯಲ್ಲಿ ಭಾರತದ ಪರ ಆಡುವ ಅವಕಾಶ ಕೂಡ ಸಿಕ್ಕಿತು. ಪಡಿಕ್ಕಲ್ 2000ರ ಜುಲೈ 7 ರಂದು ಜನಿಸಿದ್ದು, ಬಳಿಕ ಇದೀಗ ಭಾರತ ತಂಡದ ಪರ ಕ್ರಿಕೆಟ್ ಆಡಿದ್ದಾರೆ. ಈ ಮೂಲಕ ಪಡಿಕ್ಕಲ್ 21ನೇ ಶತಮಾನದಲ್ಲಿ ಹುಟ್ಟಿ ಭಾರತ ತಂಡವನ್ನು ಪ್ರತಿನಿಧಿಸಿದ ಮೊದಲ ಆಟಗಾರ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಇದನ್ನೂ ಓದಿ: ಐಪಿಎಲ್‍ಗೂ ಮುನ್ನ ಡ್ಯಾಶಿಂಗ್ ಲುಕ್‍ನಲ್ಲಿ ಕಾಣಿಸಿಕೊಂಡ ಧೋನಿ

    ಪಡಿಕ್ಕಲ್ ಭಾರತ ತಂಡದ ಪರ ಎರಡು ಟಿ20 ಪಂದ್ಯಗಳನ್ನು ಆಡುವ ಅವಕಾಶ ಪಡೆದರು ಕೂಡ ಅದನ್ನು ಬಳಸಿಕೊಳ್ಳುವಲ್ಲಿ ವಿಫಲರಾದರು. ಎರಡು ಪಂದ್ಯಗಳಿಂದ ಕೇವಲ 38 ರನ್ ಗಳನ್ನು ಬಾರಿಸಲಷ್ಟೇ ಶಕ್ತರಾದರು. ಆದರೆ ಮುಂದಿನ ಭವಿಷ್ಯದ ತಾರೆಯಾಗಿ ಗುರುತಿಸಿಕೊಂಡಿರುವ ಪಡಿಕ್ಕಲ್‍ಗೆ ಇನ್ನಷ್ಟು ಅವಕಾಶ ಕೊಡಬೇಕಾಗಿದೆ.

    ಶ್ರೀಲಂಕಾ ಪ್ರವಾಸ ಕೈಗೊಂಡ ಭಾರತ ತಂಡದಲ್ಲಿ ನಾಯಕನಾಗಿ ಶಿಖರ್ ಧವನ್ ಮೊದಲ ಬಾರಿಗೆ ಭಾರತ ತಂಡವನ್ನು ಮುನ್ನಡೆಸಿದರೆ, ತಂಡದ ಕೋಚ್ ಆಗಿ ಮೊದಲ ಬಾರಿಗೆ ಕನ್ನಡಿಗ ರಾಹುಲ್ ದ್ರಾವಿಡ್ ಅವರು ಕಾರ್ಯ ನಿರ್ವಹಿಸಿದ್ದರು. ಸರಣಿಯಲ್ಲಿ ಭಾರತ ತಂಡ ಏಕದಿನ ಸರಣಿಯನ್ನು 2-1 ಅಂತರದಲ್ಲಿ ಗೆದ್ದರೆ. ಟಿ20 ಸರಣಿಯನ್ನು 1-2 ಅಂತರದಲ್ಲಿ ಸೋತು ಮಿಶ್ರ ಫಲ ಅನುಭವಿಸಿದೆ.

  • ಮಾಸ್ಕ್ ಧರಿಸಿ ಮೈದಾನಕ್ಕೆ ಇಳಿದ ಲಂಕಾ ಆಟಗಾರರು!

    ಮಾಸ್ಕ್ ಧರಿಸಿ ಮೈದಾನಕ್ಕೆ ಇಳಿದ ಲಂಕಾ ಆಟಗಾರರು!

    ನವದೆಹಲಿ: ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟದ ಸಮಯದಲ್ಲಿ ವಾತಾವರಣದಲ್ಲಿನ ದಟ್ಟ ಮಂಜು, ಹೊಗೆ ಹಾಗೂ ಅಪಾಯಕಾರಿ ದೂಳಿನ ಕಣಗಳಿಂದ ಲಂಕಾದ ಆಟಗಾರರು ಹೈರಾಣಗಿದ್ದಾರೆ.

    ಭಾನುವಾರ ಪಂದ್ಯದ ವೇಳೆ ಕೆಲ ಆಟಗಾರರು ಮುಖಕ್ಕೆ ಮಾಸ್ಕ್ ಧರಿಸಿ ಮೈದಾನಕ್ಕೆ ಇಳಿದಿದ್ದರು. ಈ ವೇಳೆ ಲಂಕಾ ತಂಡದ ನಾಯಕ ದಿನೇಶ್ ಚಂಡಿಮಾಲ್ ಅಂಪೈರ್ ಗಳಿಗೆ ವಾತಾವರಣ ಕುರಿತು ದೂರು ನೀಡಿದರು. ಇದರಿಂದ 17 ನಿಮಿಷಗಳ ಕಾಲ ಆಟ ನಿಲ್ಲಿಸಲಾಗಿತ್ತು. ಆದರೆ ಅಂಪೈರ್ ಹಾಗೂ ಮ್ಯಾಚ್ ರೆಫ್ರಿ ಡೇವಿಡ್ ಬೂನ್ ಲಂಕಾ ಆಟಗಾರರ ಮನವೊಲಿಸಿ ಆಟ ಮುಂದುವರೆಸಲು ಯಶಸ್ವಿಯಾದರು.

    ಮತ್ತೆ ಬೌಲಿಂಗ್ ಆರಂಭಿಸಿದ ಶ್ರೀಲಂಕಾದ ಬೌಲರ್ ಲಕ್ಮಲ್ ಪಂದ್ಯದ 123 ನೇ ಓವರ್ ನಲ್ಲಿ ಉಸಿರಾಟ ಸಮಸ್ಯೆ ಎದುರಿಸಿ ಮೈದಾನದಿಂದ ಹೊರ ನಡೆದರು. ಈ ವೇಳೆ ಎರಡನೇ ಬಾರಿ ಆಟ ಸ್ಥಗಿತಗೊಂಡಿತು. (ಇದನ್ನೂ ಓದಿ: ಡಬಲ್ ಸೆಂಚುರಿ ಮೆಷಿನ್ ಕೊಹ್ಲಿಯಿಂದ ವಿಶ್ವದಾಖಲೆ! )

    ಈ ಪಂದ್ಯದಲ್ಲಿ 243 ರನ್ ಗಳಿಸಿ ಪೆವಿಲಿಯನ್ ಸೇರಿದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 7 ವಿಕೆಟ್ ನಷ್ಟಕ್ಕೆ 536 ರನ್ ಗಳಿಸಿದ್ದಾಗ ಮೊದಲ ಇನ್ನಿಂಗ್ಸ್ ಡಿಕ್ಲೇರ್ ಮಾಡುವ ನಿರ್ಧಾರ ಪ್ರಕಟಿಸಿದರು. ದಿನದ ಆಟದ ಅಂತ್ಯಕ್ಕೆ ಲಂಕಾ 3 ವಿಕೆಟ್ ಕಳೆದುಕೊಂಡು 131 ರನ್ ಗಳಿಸಿದೆ. ಫೀಲ್ಡಿಂಗ್ ವೇಳೆ ಟೀಂ ಇಂಡಿಯಾದ ಎಲ್ಲ ಆಟಗಾರು ಮಾಸ್ಕ್ ಧರಿಸದೇ ಎಂದಿನಂತೆ ಅಂಗಳಕ್ಕೆ ಇಳಿದಿದ್ದರು.

  • ಶ್ರೀಲಂಕಾ ಸರಣಿಯಿಂದ ವಿಶ್ರಾಂತಿ ಪಡೆದ ಪಾಂಡ್ಯ ಕ್ಷಮೆ ಕೇಳಿದ್ದು ಯಾಕೆ?

    ಶ್ರೀಲಂಕಾ ಸರಣಿಯಿಂದ ವಿಶ್ರಾಂತಿ ಪಡೆದ ಪಾಂಡ್ಯ ಕ್ಷಮೆ ಕೇಳಿದ್ದು ಯಾಕೆ?

    ನವದೆಹಲಿ: ಶ್ರೀಲಂಕಾ ವಿರುದ್ಧದ ಟೆಸ್ಟ್ ಪಂದ್ಯದಿಂದ ವಿಶ್ರಾಂತಿ ಪಡೆದಿರುವ ಟೀಂ ಇಂಡಿಯಾ ಯುವ ಆಟಗಾರ ಹಾರ್ದಿಕ್ ಪಾಂಡ್ಯ (24) ಸಂದರ್ಶನವೊಂದರಲ್ಲಿ ಅಭಿಮಾನಿಗಳ ಜೊತೆ ಕ್ಷಮೆ ಕೇಳಿದ್ದಾರೆ.

    ವಿಶ್ರಾಂತಿ ಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಸ್ವತಃ ನಾನೇ ಬಿಸಿಸಿಐಗೆ ಶ್ರೀಲಂಕಾ ವಿರುದ್ಧ ಸರಣಿಯಿಂದ ವಿಶ್ರಾಂತಿಯನ್ನು ನೀಡುವಂತೆ ಮನವಿ ಮಾಡಿದ್ದೆ. ಕಳೆದ ಒಂದು ವರ್ಷದಿಂದ ನಿರಂತರ ಕ್ರಿಕೆಟ್ ಪಂದ್ಯಗಳಲ್ಲಿ ಭಾಗವಹಿಸಿರುವುದರಿಂದ ಈ ವಿರಾಮವನ್ನು ಬಯಸಿದ್ದೇನೆ. ನಾನು ಸಂಪೂರ್ಣವಾಗಿ ಫಿಟ್ ಆಗಿರುವಾಗ ಮಾತ್ರ ಆಡಲು ಬಯಸುತ್ತೇನೆ. ವಿರಾಮದ ಅವಧಿಯಲ್ಲಿ ಜಿಮ್ ನಲ್ಲಿ ಮತ್ತಷ್ಟು ಬೆವರಿಳಿಸಿ ಫಿಟ್‍ನೆಸ್ ಕಾಯ್ದುಕೊಳ್ಳಬೇಕಿದೆ ಎಂದು ಹೇಳಿದರು.

    ಮುಂದಿನ ದಕ್ಷಿಣ ಆಫ್ರಿಕಾ ವಿರುದ್ಧ ಸರಣಿಯು ನನಗೆ ಅತ್ಯಂತ ಮಹತ್ವದಾಗಿದ್ದು, ಈ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಲು ವಿರಾಮ ಸಮಯವನ್ನು ಉಪಯೋಗಿಸಿಕೊಳ್ಳುತ್ತೇನೆ. ಕಳೆದ ಒಂದು ವರ್ಷದ ಅವಧಿಯಲ್ಲಿ 30 ಏಕದಿನ ಪಂದ್ಯಗಳು, 25 ಟಿ-20 ಹಾಗೂ 3 ಟೆಸ್ಟ್ ಪಂದ್ಯಗಳನ್ನು ಆಡಿದ್ದೇನೆ. ಈ ಅವಧಿಯಲ್ಲಿ ನಾನು ಕಡಿಮೆ ಪಂದ್ಯವನ್ನು ಆಡಿದ್ದೇನೆ ಎಂದು ಹೇಳಿದ್ದರೆ ಅವರಲ್ಲಿ ನಾನು ಕ್ಷಮೆ ಕೇಳುತ್ತೇನೆ ಎಂಬುದಾಗಿ ಹೇಳುತ್ತೇನೆ. ಆಲ್ ರೌಂಡರ್ ಆಟಗಾರನಾಗಿ ಇದು ಅತ್ಯಂತ ಕಠಿಣ ಎಂದು ತಿಳಿಸಿದರು.

    ಇದನ್ನೂ ಓದಿ: 76 ರನ್‍ಗಳಿಸಿ ರನೌಟ್ ಆದ್ರೂ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ!

    ಜೂನ್ ತಿಂಗಳಿನಿಂದ ನಡೆದ ಚಾಪಿಂಯನ್ಸ್ ಟ್ರೋಫಿ ಸರಣಿಯಿಂದಲೂ ಪಾಂಡ್ಯ ನಿರಂತರವಾಗಿ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದು, ಆಲ್ ರೌಂಡರ್ ಆಗಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ 6 ವಿಕೆಟ್ ಮತ್ತು 222 ರನ್ ಸಿಡಿಸುವ ಮೂಲಕ `ಮ್ಯಾನ್ ಆಫ್ ದಿ ಸೀರೀಸ್’ ಪ್ರಶಸ್ತಿಯನ್ನು ಪಡೆದಿದ್ದರು.

  • ಗಂಗೂಲಿ ದಾಖಲೆ ಮುರಿಯುವತ್ತ ಕೊಹ್ಲಿ ಕಣ್ಣು!

    ಗಂಗೂಲಿ ದಾಖಲೆ ಮುರಿಯುವತ್ತ ಕೊಹ್ಲಿ ಕಣ್ಣು!

    ನವದೆಹಲಿ: ವಿರಾಟ್ ಕೊಹ್ಲಿ ನಾಯಕತ್ವ ವಹಿಸಿದ ಬಳಿಕ ಹಲವು ದಾಖಲೆಗಳನ್ನು ನಿರ್ಮಾಣ ಮಾಡಿದ್ದು ಈಗ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದರೆ ಅತಿ ಹೆಚ್ಚು ಟೆಸ್ಟ್ ಮ್ಯಾಚ್ ಗೆದ್ದ ಎರಡನೇ ಯಶಸ್ವಿ ನಾಯಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

    ಕೋಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಗುರುವಾರದಿಂದ ಮೂರು ಪಂದ್ಯಗಳ ಸರಣಿ ಆರಂಭವಾಗಲಿದೆ. ಈ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದರೆ ಗಂಗೂಲಿ ಅವರ ದಾಖಲೆಯನ್ನು ಕೊಹ್ಲಿ ಮುರಿಯಲಿದ್ದಾರೆ. ಇದೂವರೆಗೆ ಕೊಹ್ಲಿ ನಾಯಕತ್ವದಲ್ಲಿ 29 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಅದರಲ್ಲಿ 19 ಪಂದ್ಯಗಳಲ್ಲಿ ಗೆಲುವು ಪಡೆದು ಟೀಂ ಇಂಡಿಯಾದ ಯಶಸ್ವಿ ನಾಯಕರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

    ಭಾರತದ ಪರ ಟೆಸ್ಟ್ ನಲ್ಲಿ ಯಶಸ್ವಿ ನಾಯಕನೆಂಬ ಹೆಗ್ಗಳಿಕೆಗೆ ಧೋನಿ ಪಾತ್ರರಾಗಿದ್ದಾರೆ. ಧೋನಿ ನೇತೃತ್ವದಲ್ಲಿ 60 ಪಂದ್ಯಗಳನ್ನು ಟೀಂ ಇಂಡಿಯಾ ಆಡಿದ್ದು 27 ರಲ್ಲಿ ಜಯಿಸಿದೆ. ನಂತರ ಸ್ಥಾನದಲ್ಲಿ ಗಂಗೂಲಿ ಇದ್ದು 49 ಪಂದ್ಯಗಳಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಿ 21 ರಲ್ಲಿ ಗೆಲುವು ಪಡೆದಿದ್ದಾರೆ.

    ಅಂತರಾಷ್ಟ್ರೀಯ ಮಟ್ಟದಲ್ಲಿ ಗರಿಷ್ಠ ಟೆಸ್ಟ್ ಪಂದ್ಯಗಳನ್ನು ಗೆದ್ದ ದಾಖಲೆಯನ್ನು ದಕ್ಷಿಣ ಆಫ್ರಿಕಾದ ನಾಯಕ ಗ್ರೇಮ್ ಸ್ಮಿತ್ ಹೆಸರಿನಲ್ಲಿದೆ. 104 ಪಂದ್ಯಗಳನ್ನು ಮುನ್ನಡೆಸಿದ ಸ್ಮಿತ್ 53ರಲ್ಲಿ ಗೆಲುವು ಪಡೆದಿದ್ದಾರೆ. ನಂತರದ ಸ್ಥಾನದಲ್ಲಿ ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ರಿಕ್ಕಿ ಪಾಟಿಂಗ್ ಇದ್ದು, 77 ಪಂದ್ಯಗಳಲ್ಲಿ 48ರಲ್ಲಿ ಗೆಲುವು ಪಡೆದಿದ್ದಾರೆ.

    ತಿಂಗಳ ಹಿಂದೆಯಷ್ಟೇ ನಡೆದ ಶ್ರೀಲಂಕಾ ವಿರುದ್ಧದ ಏಕದಿನ ಹಾಗೂ ಟಿ20 ಪಂದ್ಯಗಳ ಸರಣಿಯನ್ನು ಭಾರತ 9-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿತ್ತು.

     

  • ಹೊಸ ಕ್ಯಾಪ್ಟನ್ ಗಾಗಿ ಟೀಂ ಇಂಡಿಯಾ ಹುಡುಕಾಟ!

    ಹೊಸ ಕ್ಯಾಪ್ಟನ್ ಗಾಗಿ ಟೀಂ ಇಂಡಿಯಾ ಹುಡುಕಾಟ!

    ನವದೆಹಲಿ: ಟೀಮ್ ಇಂಡಿಯಾಕ್ಕೆ ಹೊಸ ನಾಯಕನನ್ನು ಹುಡುಕಬೇಕಿದೆ. ಹೌದು. ವಿರಾಟ್ ಕೊಹ್ಲಿ ತಾತ್ಕಾಲಿಕವಾಗಿ ಕ್ರಿಕೆಟ್‍ನಿಂದ ರೆಸ್ಟ್ ತೆಗೆದುಕೊಳ್ಳುತ್ತಿದ್ದಾರೆ.

    ಹಾಗಂತ ಗಾಬರಿ ಆಗಬೇಡಿ. ಅವರೇನು ಕ್ರಿಕೆಟ್‍ಗೆ ನಿವೃತ್ತಿ ಘೋಷಿಸುತ್ತಿಲ್ಲ. ಬದಲಿಗೆ ಇನ್ನೊಂದು ತಿಂಗಳು ಆಟದಿಂದ ಫ್ರೀ ಬಿಡಿ ಎಂದು ಮನವಿ ಮಾಡಿದ್ದಾರೆ. ನವೆಂಬರ್ 16ರಿಂದ ಡಿಸೆಂಬರ್ ವರೆಗೆ ಶ್ರೀಲಂಕಾ ವಿರುದ್ಧ ಕ್ರಿಕೆಟ್ ಸರಣಿ ನಡೆಯಲಿದೆ. ಈ ವೇಳೆ ಮೂರು ಟೆಸ್ಟ್, ಮೂರು ಏಕದಿನ ಮತ್ತು ಮೂರು ಟಿ-ಟ್ವೆಂಟಿ ಪಂದ್ಯಗಳನ್ನು ಆಡಲಾಗುತ್ತೆ.

    ವೈಯಕ್ತಿಕ ಕಾರಣಗಳಿಂದಾಗಿ ಈ ಸರಣಿಯಲ್ಲಿ ತಮಗೆ ಆಡಲು ಸಾಧ್ಯವಾಗುತ್ತಿಲ್ಲ ಎಂದು ಬಿಸಿಸಿಐಗೆ ಮನವಿ ಮಾಡಿದ್ದಾರೆ. ಜನವರಿಯಿಂದ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾದ ಪ್ರವಾಸ ಕೈಗೊಳ್ಳಲಿದ್ದು, ನಿರಂತರ ಕ್ರಿಕೆಟ್ ಆಡುತ್ತಿರೋ ಕೊಹ್ಲಿ ಅದಕ್ಕೂ ಮೊದಲು ಕೊಂಚ ವಿರಾಮ ಬಯಸಿದ್ದಾರೆ.

    ಇಂದು ಬಿಸಿಸಿಐ ಆಯ್ಕೆ ಸಮಿತಿ ಸಭೆ ನಡೆಯಲಿದ್ದು, ನ್ಯೂಜಿಲೆಂಡ್ ವಿರುದ್ಧದ ಮೂರು ಟಿ-ಟ್ವೆಂಟಿ ಪಂದ್ಯಗಳಿಗೆ ಮತ್ತು ಶ್ರೀಲಂಕಾ ವಿರುದ್ಧದ ಮೂರು ಟೆಸ್ಟ್ ಗಳಿಗೆ ಟೀಂ ಇಂಡಿಯಾವನ್ನು ಆಯ್ಕೆ ಮಾಡಲಿದೆ.