ಚಾಮರಾಜನಗರ: ಕೊರೊನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಅನೇಕರು ತುಂಬಾ ಸರಳವಾಗಿ ಮದುವೆಯಾಗುತ್ತಿದ್ದಾರೆ. ಇದೀಗ ರೈತ ಮುಖಂಡ ಕೊರೊನಾ ಲಾಕ್ಡೌನ್ನಿಂದಾಗಿ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಡಬೂರು ನಿವಾಸಿ ಮಂಜು ಅದೇ ಗ್ರಾಮದ ಮಾದಲಾಂಬಿಕೆ ವಧುವಿನ ಜೊತೆ ಸರಳವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅಷ್ಟೇ ಅಲ್ಲದೇ ವರ ಮಂಜು ತಮ್ಮ ಮದುವೆಗೆಂದು ಕೂಡಿಟ್ಟಿದ್ದ ಹಣವನ್ನು ಮುಖ್ಯಮಂತ್ರಿಗಳ ಕೋವಿಡ್ ಪರಿಹಾರ ನಿಧಿಗೆ ದೇಣಿಗೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ವರ ಮಂಜು ಮತ್ತು ವಧು ಮಾದಲಾಂಬಿಕೆ ಕಡಬೂರು ಗ್ರಾಮದಲ್ಲೇ ಕುಟುಂಬದವರ ಸಮ್ಮುಖದಲ್ಲಿ ಶಾಸ್ತ್ರೋಸ್ತವಾಗಿ ಸರಳವಾಗಿ ಮದುವೆಯಾಗಿದ್ದಾರೆ. ನಂತರ ಮುಖ್ಯಮಂತ್ರಿಗಳ ಕೋವಿಡ್ ಪರಿಹಾರ ನಿಧಿಗೆ 1 ಲಕ್ಷ ರೂ. ಮತ್ತು ಗ್ರಾಮದ ದೇವಸ್ಥಾನದ ಅಭಿವೃದ್ಧಿಗೆ 2 ಲಕ್ಷ ರೂಪಾಯಿಯನ್ನು ದೇಣಿಗೆ ನೀಡಿದ್ದಾರೆ. ಈ ಮೂಲಕ ಮದುವೆ ಖರ್ಚಿನ ಹಣವನ್ನು ಕೋವಿಡ್ ಪರಿಹಾರ ನಿಧಿಗೆ ನೀಡಿ ರೈತ ಮುಖಂಡ ಮಾದರಿಯಾಗಿದ್ದಾರೆ.
– ಮದ್ವೆಗೆ ಖರ್ಚು ಮಾಡಬೇಕೆಂದಿದ್ದ ಹಣವನ್ನ ದೇಣಿಗೆ ನೀಡಿದ್ರು
ತಿರುವನಂತಪುರಂ: ಕೊರೊನಾ ಲಾಕ್ಡೌನ್ ಪರಿಣಾಮದಿಂದಾಗಿ ಮಲಯಾಳಂ ಚಿತ್ರರಂಗದ ಪ್ರಶಸ್ತಿ ವಿಜೇತ ನಟರೊಬ್ಬರು ದೇವಾಲಯದಲ್ಲಿ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ನಟ ಮಣಿಕಂದನ್ ಆಚಾರಿ ತಮ್ಮ ಗೆಳತಿ ಅಂಜಲಿಯನ್ನು ಭಾನುವಾರ ಮದುವೆಯಾಗಿದ್ದಾರೆ. ಯಾವುದೇ ಆಡಂಬರ, ಅದ್ಧೂರಿ, ಹೆಚ್ಚು ಜನರಿಲ್ಲದೆ ಅತ್ಯಂತ ಸರಳ ರೀತಿಯಲ್ಲಿ ಕೇರಳದ ದೇವಸ್ಥಾನವೊಂದರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅಷ್ಟೇ ಅಲ್ಲದೇ ಮಣಿಕಂದನ್ ಮತ್ತು ಅಂಜಲಿ ಇಬ್ಬರೂ ತಮ್ಮ ಮದುವೆಗೆ ಖರ್ಚು ಮಾಡಬೇಕೆಂದುಕೊಂಡಿದ್ದ ಹಣವನ್ನು ಕೇರಳ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದಾರೆ.
ಮಣಿಕಂದನ್ ಮತ್ತು ಅಂಜಲಿ ಮದುವೆ ಸಂದರ್ಭದಲ್ಲಿ ಕುಟುಂಬದವರು ಲಾಕ್ಡೌನ್ ನಿಯಮಗಳು ಪಾಲಿಸಿದ್ದಾರೆ. ಎಲ್ಲರೂ ಸಾಮಾಜಿಕ ಅಂತರ ಕಾಯ್ದುಕೊಂಡಿದ್ದು, ಮಾಸ್ಕ್ ಧರಿಸಿದ್ದರು.
ಮಣಿಕಂದನ್ ಮತ್ತು ಅಂಜಲಿ ಮದುವೆ ಆರು ತಿಂಗಳ ಹಿಂದೆಯೇ ನಿಶ್ಚಯವಾಗಿತ್ತು. ಆದರೆ ಕೊರೊನಾ ಲಾಕ್ಡೌನ್ನಿಂದಾಗಿ ತಮ್ಮ ಮದುವೆಯನ್ನು ಮುಂದೂಡಲು ಈ ಜೋಡಿ ಇಷ್ಟಪಡಲಿಲ್ಲ. ಹೀಗಾಗಿ ಎರಡೂ ಕುಟುಂಬದವರು ದೇವಸ್ಥಾನದಲ್ಲಿ ಸರಳವಾಗಿ ವಿವಾಹ ಮಾಡಲು ನಿರ್ಧರಿಸಿದ್ದರು. ಅದರಂತೆಯೇ ಕೇರಳದ ದೇವಾಲಯದಲ್ಲಿ ಕುಟುಂಬದ ಕೆಲವು ಮಂದಿಯ ಸಮ್ಮುಖದಲ್ಲಿ ಸರಳವಾಗಿ ವಿವಾಹವಾಗಿದ್ದಾರೆ.
ಮಣಿಕಂದನ್ ಮತ್ತು ಅಂಜಲಿ ಇಬ್ಬರೂ ಒಂದೂವರೆ ವರ್ಷದ ಹಿಂದೆ ದೇವಸ್ಥಾನವೊಂದರ ಉತ್ಸವದಲ್ಲಿ ಭೇಟಿಯಾಗಿದ್ದರು. ಪರಿಚಯ ಸ್ನೇಹವಾಗಿ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ನಂತರ ಇವರಿಬ್ಬರು ತಮ್ಮ ಪ್ರೀತಿಯ ಬಗ್ಗೆ ಮನೆಯವರಿಗೆ ತಿಳಿಸಿದ್ದಾರೆ. ಎರಡು ಕುಟುಂಬದವರು ಇವರ ಪ್ರೀತಿಗೆ ಒಪ್ಪಿಗೆ ಸೂಚಿಸಿ ಮದುವೆ ಮಾಡಿಸಿದ್ದಾರೆ.
ಈ ವೇಳೆ ಮಾತನಾಡಿದ ವರ ಮಣಿಕಂದನ್, “ಕೊರೊನಾ ಲಾಕ್ಡೌನ್ನಿಂದ ನಾವು ಸರಳವಾಗಿ ವಿವಾಹವಾಗಿದ್ದೇವೆ. ಅಲ್ಲದೇ ನಮ್ಮ ಮದುವೆಗೆ ಖರ್ಚು ಮಾಡಬೇಕೆಂದಿದ್ದ ಹಣವನ್ನು ಸಿಎಂ ಪರಿಹಾರ ನಿಧಿಗೆ ದೇಣಿಗೆ ನೀಡುತ್ತಿರುವುದಕ್ಕೆ ನಮಗೆ ಸಂತಸವಾಗಿದೆ. ನಮ್ಮ ಮದುವೆ ಅದ್ಧೂರಿಯಾಗಿ ನಡೆಯಲಿಲ್ಲ ಎಂದು ನಮಗೆ ಬೇಸರವಾಗಿಲ್ಲ. ಇದು ಸಂಭ್ರಮ ಪಡುವ ಸಮಯವಲ್ಲ. ಯಾಕೆಂದರೆ ಇಡೀ ಜಗತ್ತು ಕೊರೊನಾದಿಂದ ಸಂಕಷ್ಟದಲ್ಲಿದೆ. ನಾವು ಯಾವಾಗ ಬೇಕಾದರೂ ಸಂಭ್ರಮಾಚರಣೆ ಮಾಡಬಹುದು” ಎಂದರು.
ನಮ್ಮ ಮದುವೆಯನ್ನು ಮುಂದೂಡದೆ ಎರಡು ಕುಟುಂಬದವರು ಸೇರಿ ದೇವಸ್ಥಾನದಲ್ಲಿ ಮಾಡಲು ನಿರ್ಧಾರ ತೆಗೆದುಕೊಂಡಿದ್ದರು. ಇದರ ಬಗ್ಗೆ ನನಗೆ ತುಂಬಾ ಸಂತೋಷವಿದೆ ಎಂದು ವಧು ಅಂಜಲಿ ಹೇಳಿದ್ದಾರೆ.
ಮಣಿಕಂದನ್ 2016ರಲ್ಲಿ ಮಲಯಾಳಂ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದು, ತಾವು ನಟಿಸಿದ ಮೊದಲ ‘ಕಮ್ಮಟಿಪಾದ’ ಸಿನಿಮಾದ ಅಭಿನಯಕ್ಕೆ ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡಿದ್ದರು. ಈ ಮೂಲಕ ಮಲಯಾಳಂ ಚಿತ್ರರಂಗದಲ್ಲಿ ಮಣಿಕಂದನ್ ಗುರುತಿಸಿಕೊಂಡಿದ್ದಾರೆ.
ಬೆಂಗಳೂರು: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಜನತಾ ಕರ್ಫ್ಯೂಗೆ ಕರೆ ನೀಡಿದ್ದು, ಈ ಮಧ್ಯೆ ಸರಳ ವಿವಾಹವೊಂದು ನಡೆದಿದೆ.
ಹೌದು. ನಗರದ ಅಣ್ಣಮ್ಮ ದೇವಾಲಯದಲ್ಲಿ ಜೋಡಿಯೊಂದು ನವ ಜೀವನಕ್ಕೆ ಕಾಲಿಟ್ಟಿದೆ. ಸಮಸ್ಯೆ ಎಂದು ಹೇಳಿ ಕಡಿಮೆ ಜನರೊಂದಿಗೆ ಮದುವೆ ಕಾರ್ಯ ಮುಗಿಸಿದ್ದಾರೆ. ಅಲ್ಲದೆ ಈ ಬಗ್ಗೆ ಮಾತನಾಡಿ, ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ಕಡಿಮೆ ಜನ ಮದುವೆಗೆ ಬಂದಿದ್ದೀವಿ. ಕಷ್ಟದಲ್ಲಿ ನಾವು ಈಗ ಮದುವೆಗೆ ಮುಂದಾಗಿದ್ದೆವು. ನಾವು ಶೇಷಾದ್ರಿಪುರಂ ನಿವಾಸಿಗಳು ಎಂದು ತಿಳಿಸಿದ್ದಾರೆ.
ಒಟ್ಟಿನಲ್ಲಿ ಪ್ರಧಾನಿ ಕರೆ ಕೊಟ್ಟ ಜನತಾ ಕರ್ಫ್ಯೂಗೆ ಬೆಂಬಲ ವ್ಯಕ್ತವಾಗುತ್ತಿದೆ. ಬೆಂಗಳೂರಿನ ಹೃದಯ ಭಾಗ ಮೆಜೆಸ್ಟಿಕ್ ಬಸ್ ನಿಲ್ದಾಣ ಜನರಿಲ್ಲದೆ ಭಣಗುಡುತ್ತಿದೆ. ಫ್ಲಾಟ್ ಫಾರಂ 1 ರಿಂದ 34 ರ ರವರೆಗೂ ಜನವೇ ಇಲ್ಲದೇ ಖಾಲಿ ಹೊಡೆಯುತ್ತಿದ್ದು, ಈ ಮೂಲಕ ಜನತಾ ಕರ್ಫ್ಯೂಗೆ ಅಭೂತ ಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ.
ಮೆಜೆಸ್ಟಿಕ್ ಕಪಾಲಿ ಚಿತ್ರಮಂದಿರ ರಸ್ತೆಯಲ್ಲಿ ಹಾಲು ಮಾರಾಟ ಮಾತ್ರ ನಡೆಯುತ್ತಿದ್ದು, ಬಿಎಂಟಿಸಿ, ಕೆಎಸ್ಆರ್ಟಿಸಿ, ನಮ್ಮ ಮೆಟ್ರೋ ಸೇವೆ ಬಂದ್ ಆಗಿದೆ.