Tag: ಸರಳ ವಾಸ್ತು

  • ಗುರೂಜಿಯನ್ನು ನಾವು ದೇವರಂತೆ ಕಾಣುತ್ತಿದ್ದೆವು: ವನಜಾಕ್ಷಿ

    ಗುರೂಜಿಯನ್ನು ನಾವು ದೇವರಂತೆ ಕಾಣುತ್ತಿದ್ದೆವು: ವನಜಾಕ್ಷಿ

    ಹುಬ್ಬಳ್ಳಿ: ಗುರೂಜಿ ಅವರನ್ನು ದೇವರಂತೆ ಕಾಣುತ್ತಿದ್ದೆವು ಎಂದು ಹೇಳುವ ಮೂಲಕ ಸರಳವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಭೀಕರ ಹತ್ಯೆಗೆ ಹಂತಕ ಮಹಾಂತೇಶ್ ಶಿರೂರು ಪತ್ನಿ ವನಜಾಕ್ಷಿ ಮರುಕ ವ್ಯಕ್ತಪಡಿಸಿದ್ದಾರೆ.

    ಹುಬ್ಬಳ್ಳಿಯಲ್ಲಿ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಹಂತಕ ಮಹಾಂತೇಶ್ ಶಿರೂರು ಪತ್ನಿ ವನಜಾಕ್ಷಿ ಅವರು, ನನ್ನ ಪತಿ ಹೀಗೆ ಮಾಡುತ್ತಾರೆ ಎಂದು ಕನಸ್ಸಿನಲ್ಲಿಯೂ ಕೂಡ ಅಂದುಕೊಂಡಿರಲಿಲ್ಲ. ಗುರೂಜಿ ನಮ್ಮನ್ನು ಬಹಳ ಚೆನ್ನಾಗಿ ನೋಡಿಕೊಂಡಿದ್ದರು. ಕೆಲಸ ಮಾಡುವ ಪ್ರತಿಯೊಬ್ಬರನ್ನು ಕೂಡ ಬಹಳ ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದರು. ಇಲ್ಲಿವರೆಗೂ ಯಾವತ್ತು ಯಾರಿಗೂ ಗುರೂಜಿ ಮೋಸ ಮಾಡಿಲ್ಲ ಎಂದಿದ್ದಾರೆ.  ಇದನ್ನೂ ಓದಿ: ಸರಳವಸ್ತು ಗುರೂಜಿ ಹೆಸರು ಹೇಳಿ ಆಸ್ತಿ ಮಾಡಲು ಮುಂದಾಗಿದ್ದ ಹಂತಕರು

    ಗುರೂಜಿ ನಮ್ಮ ಮನೆಯ ದೇವರು, ನಮ್ಮ ತಂದೆ ತರಹ. ಗುರೂಜಿ ನನಗೆ ಯಾವುದೇ ಆಸ್ತಿ ನೀಡಿಲ್ಲ. ಅಪಾರ್ಟ್‍ಮೆಂಟ್ ಕೂಡ ಗುರೂಜಿ ಅವರ ಹೆಸರಿನಲ್ಲಿದೆ. ಆದರೆ ಒಂದು ಫ್ಲಾಟ್ ಮಾತ್ರ ನಮ್ಮದಾಗಿದೆ. ಅದನ್ನು 20 ಲಕ್ಷ ರೂಪಾಯಿ ಸಾಲ ಮಾಡಿ ಖರೀದಿಸಿದ್ದೇವೆ. ನನ್ನ ಮತ್ತು ಗಂಡನ ಹೆಸರಿನಲ್ಲಿ ಯಾವುದೇ ಬೇನಾಮಿ ಆಸ್ತಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: 60 ಬಾರಿ ಚುಚ್ಚಿ ಚುಚ್ಚಿ ಕೊಂದ ಪಾತಕಿಗಳು- ಬುಧವಾರ ಹುಬ್ಬಳ್ಳಿಯಲ್ಲೇ ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆ

    ಈ ಘಟನೆಗೂ ಮುನ್ನ ಕೆಲಸದ ನಿಮಿತ್ತ ಹೊರಗೆ ಹೋಗಿದ್ದ ನನ್ನ ಪತಿ 3 ದಿನದಿಂದ ಮನೆಗೆ ಬಂದಿರಲಿಲ್ಲ. ಹತ್ಯೆ ಮಾಡುವ ಮಟ್ಟಿಗೆ ನನ್ನ ಗಂಡ ಇಳಿಯುತ್ತಾನೆಂದು ಅಂದುಕೊಂಡಿರಲಿಲ್ಲ ಅಂತ ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಚಂದ್ರಶೇಖರ್ ಗುರೂಜಿ ಹತ್ಯೆಗೆ ಕಂಬನಿ ಮಿಡಿದ ನಟ ಜಗ್ಗೇಶ್

    ಚಂದ್ರಶೇಖರ್ ಗುರೂಜಿ ಹತ್ಯೆಗೆ ಕಂಬನಿ ಮಿಡಿದ ನಟ ಜಗ್ಗೇಶ್

    ರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ ಸಂಬಂಧಿಸಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಚಂದ್ರಶೇಖರ್ ಗುರೂಜಿ ಹತ್ಯೆಯನ್ನು ಖಂಡಿಸಿ ನಟ ಜಗ್ಗೇಶ್ ಖಡಕ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.

    JAGGESH

    ಚಂದ್ರಶೇಖರ್ ಗುರೂಜಿ ಮತ್ತು ನಟ ಜಗ್ಗೇಶ್ ಸಾಕಷ್ಟು ವರ್ಷಗಳಿಂದ ಪರಿಚಿತರು ಜಗ್ಗೇಶ್ ಅವರ ಏಳಿಗೆಯನ್ನ ಸದಾ ಪ್ರೋತ್ಸಾಹಿಸುತ್ತಿದ್ದರು. ಈಗ ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಹತ್ಯೆಗೆ ನಟ ಕಂಬನಿ ಮಿಡಿದಿದ್ದಾರೆ. ಇಂದಿನ ಕಾಲದಲ್ಲಿ ಯಾರನ್ನು ನಂಬಲು ಸಾಧ್ಯವಿಲ್ಲ ಅಂತಾ ಗುರೂಜಿ ಸಾವಿಗೆ ಟ್ವೀಟ್ ಮೂಲಕ ಕಂಬಿನಿ ಮಿಡಿದ್ದಾರೆ. ಇದನ್ನೂ ಓದಿ: ಆರ್.ಆರ್.ಆರ್ ಸಿನಿಮಾ ಸಲಿಂಗ ಪ್ರೇಮಕಥೆ ಎಂದ ಆಸ್ಕರ್ ಪ್ರಶಸ್ತಿ ವಿಜೇತ ರೆಸೂಲ್

    ನನ್ನ ಆತ್ಮೀಯ ಸ್ನೇಹಿತರು, ನನ್ನ ಅವರ ಒಡನಾಟ ಆಧ್ಯಾತ್ಮಿಕ ಹಾಗು ವಾಸ್ತು ಸಂಬಂಧಿಸಿದ್ದು, ಸದಾ ನನ್ನ ಒಳಿತು ಬಯಸುತ್ತಿದ್ದ ಆತ್ಮವಾಗಿತ್ತು. ನಾವಿಬ್ಬರು ಮಾತಿಗೆ ಕೂತರೆ ಘಂಟೆಗಟ್ಟಲೆ ಮಾತನಾಡುತ್ತಿದ್ದೆವು, ನನ್ನ ರಾಜ್ಯಸಭೆ ಸ್ಥಾನಕ್ಕೆ ತಮಗೆ ಸಿಕ್ಕಂತೆ ಸಂಭ್ರಮಿಸಿದ್ದರು. ಅವರ ಅಮಾನುಷವಾಗಿ ಕೊಲೆಗೈದ ಪಾಪಿಗಳಿಗೆ ತಕ್ಕ ಶಿಕ್ಷೆಯಾಗಲಿ. ಇಂದಿನ ಕಾಲದಲ್ಲಿ ಯಾರನ್ನ ನಂಬುವುದು ಕಷ್ಟ ಅಂತಾ ಜಗ್ಗೇಶ್ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ಈಗ ಸಖತ್ ವೈರಲ್ ಆಗುತ್ತಿದೆ.

    Live Tv
    [brid partner=56869869 player=32851 video=960834 autoplay=true]