Tag: ಸರ್ಕಾರಿ ಉದ್ಯೋಗಿ

  • ಎಸಿಬಿ ದಾಳಿ – 15 ಲಕ್ಷ ನಗದು, 750 ಗ್ರಾಂ ಚಿನ್ನ, ಅಪಾರ ಆಸ್ತಿ ಪತ್ರ ಪತ್ತೆ

    ಎಸಿಬಿ ದಾಳಿ – 15 ಲಕ್ಷ ನಗದು, 750 ಗ್ರಾಂ ಚಿನ್ನ, ಅಪಾರ ಆಸ್ತಿ ಪತ್ರ ಪತ್ತೆ

    ಬೀದರ್: ಜಿಲ್ಲಾ ಪಂಚಾಯತ್ ಬಸವಕಲ್ಯಾಣ ವಿಭಾಗದಲ್ಲಿ ಗ್ರಾಮೀಣ ಕುಡಿಯುವ ನೀರು ಯೋಜನೆಯ ಕಿರಿಯ ಅಭಿಯಂತರರಾಗಿ ಕಾರ್ಯನಿರ್ವಹಿಸುತ್ತಿದ್ದ ಸುರೇಶ್ ಮೋರೆ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿಯಲ್ಲಿ ನಗದು, ಚಿನ್ನಾಭರಣ ಮತ್ತು ಆಸ್ತಿ ಪತ್ರಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

    ಬಸವಕಲ್ಯಾಣದ ಶಿವಾಜಿ ನಗರದ ಸುರೇಶ್ ಮೋರೆ ನಿವಾಸದಲ್ಲಿ 15 ಲಕ್ಷ ನಗದು, 750 ಗ್ರಾಂ ಚಿನ್ನ, 3 ನಿವೇಶನಗಳ ಆಸ್ತಿ ಪತ್ರ ಪತ್ತೆಯಾಗಿದೆ. ಜೊತೆಗೆ 10 ಲಕ್ಷ ಎಫ್‍ಡಿ ಹಾಗೂ 20 ಲಕ್ಷ ಬ್ಯಾಂಕ್ ಬ್ಯಾಲೆನ್ಸ್ ಹೊಂದಿರೋದು ದಾಳಿಯಲ್ಲಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: ದರ್ಶನ್ ನನ್ನ ಮೇಲೆ ಹಲ್ಲೆ ನಡೆಸಿಲ್ಲ, ಕೋಮಾದಲ್ಲಿಯೂ ಇಲ್ಲ: ಗೋಪಾಲ್ ರಾಜ್

    ಬೀದರ್ ಜಿಲ್ಲೆಯಲ್ಲಿ ಇಂದು ಮೂರು ಕಡೆ ಏಕ ಕಾಲದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸಿಬಿ ಎಸ್‍ಪಿ ಮಹೇಶ್ ಮೇಘಣ್ಣನವರ್ ಮಾರ್ಗದರ್ಶನದಲ್ಲಿ ದಾಳಿ ನಡೆದಿತ್ತು. ಇನ್ನಿಬ್ಬರು ಅಧಿಕಾರಿಗಳ ಆಸ್ತಿ ವಿವರದ ಮಾಹಿತಿ ತಿಳಿದು ಬಂದಿಲ್ಲ. ಇದನ್ನೂ ಓದಿ: ದರ್ಶನ್ ಒಮ್ಮೆ ಕೆಟ್ಟದಾಗಿ ಬೈದ್ರು ಅದಕ್ಕೆ ಕೆಲಸ ಬಿಟ್ಟೆ: ಹಾರ್ಸ್ ರೈಡರ್ ಸಂತೋಷ್

  • ಕೊರೊನಾ ನಿಯಂತ್ರಣ ಕೆಲಸಗಳಿಗೆ ಸರ್ಕಾರಿ ಉದ್ಯೋಗಿಗಳ ಬಳಕೆ- ಸರ್ಕಾರದಿಂದ ಮಹತ್ವದ ನಿರ್ಧಾರ

    ಕೊರೊನಾ ನಿಯಂತ್ರಣ ಕೆಲಸಗಳಿಗೆ ಸರ್ಕಾರಿ ಉದ್ಯೋಗಿಗಳ ಬಳಕೆ- ಸರ್ಕಾರದಿಂದ ಮಹತ್ವದ ನಿರ್ಧಾರ

    ಬೆಂಗಳೂರು: ಅನ್‍ಲಾಕ್-2 ಅವಧಿಯಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರಿ ಉದ್ಯೋಗಿಗಳ ಬಳಕೆ ಮಾಡಿಕೊಳ್ಳಲು ಸರ್ಕಾರ ಮಹತ್ವ ನಿರ್ಧಾರವನ್ನು ಮಾಡಿದೆ.

    ಕೋವಿಡ್ ನಿಯಂತ್ರಣ ಮಾಡಲು ಉದ್ದೇಶಕ್ಕಾಗಿ ಕಣ್ಗಾವಲು ಮತ್ತು ಸಾರ್ವಜನಿಕ ಆರೋಗ್ಯ ಪ್ರಯತ್ನಗಳನ್ನು ಹೆಚ್ಚಿಸುವ ಅಗತ್ಯವಿರುವ ಕಾರಣ ಸರ್ಕಾರಿ ಉದ್ಯೋಗಿಗಳ ಬಳಕೆಗೆ ಸರ್ಕಾರ ಮುಂದಾಗಿದೆ. ಆದ್ದರಿಂದ ರಾಜ್ಯದ ಎಲ್ಲಾ ಇಲಾಖೆಯ, ಅನುದಾನಿತ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ 50 ವರ್ಷ ಒಳಗಿನ ಅಧಿಕಾರಿಗಳು, ಸಿಬ್ಬಂದಿಗಳ ಮಾಹಿತಿ ನೀಡಲು ಸೂಚನೆ ಇಲಾಖೆಗಳ ಮುಖ್ಯಸ್ಥರಿಗೆ ಸೂಚನೆ ನೀಡಿ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಆದೇಶ ನೀಡಿದ್ದಾರೆ.

    ಇಲಾಖೆಗಳಲ್ಲಿ ಶೇ.25 ರಿಂದ 50ಕ್ಕಿಂತ ಹೆಚ್ಚದಂತೆ ಉದ್ಯೋಗಿಗಳನ್ನು ಇಲಾಖೆಯ ಕೆಲಸಕ್ಕೆ ಉಳಿಸಿಕೊಳ್ಳಬಹುದಾಗಿದೆ. ಗರ್ಭಿಣಿ, ಬಾಣಂತಿಯರು ಹಾಗೂ ವಿಕಲಚೇತರನ್ನು ಹೊರತುಪಡಿಸಿ ಉಳಿದವರು ವಿಪತ್ತು ನಿರ್ವಹಣಾ ಕಾಯ್ದೆಯ ಆದೇಶದಲ್ಲಿ ಕೆಲಸ ನಿರ್ವಹಿಸಬೇಕು ಮತ್ತು ಯಾವುದೇ ವಿನಾಯಿತಿ ಲಭ್ಯವಿರುವುದಿಲ್ಲ ಎಂದು ಸೂಚಿಸಲಾಗಿದೆ.

    ಬೆಂಗಳೂರು, ಬೆಂಗಳೂರು ಸುತ್ತಮುತ್ತ, ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ವಾಸವಾಗಿರುವ ಅಧಿಕಾರಿಗಳು, ಸಿಬ್ಬಂದಿಗಳ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ. ನಾಳೆ ಸಂಜೆ 5 ಗಂಟೆ ಒಳಗೆ ಬಿಬಿಎಂಪಿ ಆಯುಕ್ತರ ಇ-ಮೇಲ್ ಗೆ ಮಾಹಿತಿ ನೀಡುವಂತೆ ಎಲ್ಲಾ ಇಲಾಖೆ ಮುಖ್ಯಸ್ಥರಿಗೆ ಸಿಎಸ್ ವಿಜಯ್ ಭಾಸ್ಕರ್ ಸೂಚನೆ ನೀಡಿದ್ದಾರೆ.