Tag: ಸರ್ಕಾರಿ ನೌಕರ

  • ಪಾಕ್‌ ಪರ ಬೇಹುಗಾರಿಕೆ – 7 ಬಾರಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದ ರಾಜಸ್ಥಾನದ ಸರ್ಕಾರಿ ನೌಕರ ಅರೆಸ್ಟ್‌

    ಪಾಕ್‌ ಪರ ಬೇಹುಗಾರಿಕೆ – 7 ಬಾರಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದ ರಾಜಸ್ಥಾನದ ಸರ್ಕಾರಿ ನೌಕರ ಅರೆಸ್ಟ್‌

    ಜೈಪುರ: ಪಾಕಿಸ್ತಾನದ ಐಎಸ್‌ಐ (Pakistan ISI) ಪರ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ರಾಜಸ್ಥಾನದ ಸರ್ಕಾರಿ ನೌಕರನನ್ನ (Rajasthan Government Employee) ಜೈಸಲ್ಮೇರ್‌ನಲ್ಲಿ ಬಂಧಿಸಲಾಗಿದೆ.

    ಬಂಧಿತ ಸರ್ಕಾರಿ ನೌಕರನನ್ನ ಶಕುರ್ ಖಾನ್ ಮಂಗನಿಯಾರ್ ಎಂದು ಗುರುತಿಸಲಾಗಿದೆ. ಜೈಸಲ್ಮೈರ್‌ನಲ್ಲಿರುವ ಕಚೇರಿಯಲ್ಲೇ ಸಿಐಡಿ ಮತ್ತು ಗುಪ್ತಚರ ಸಂಸ್ಥೆಗಳ (Intelligence Department)ತಂಡವು ಜಂಟಿಯಾಗಿ ಬಂಧಿಸಿವೆ. ಇದನ್ನೂ ಓದಿ: ಇಬ್ಬರು ಕನ್ನಡಿಗರು ಸೇರಿ 26 ಮೃತ ಪ್ರವಾಸಿಗರ ನೆನಪಿಗೆ ಪಹಲ್ಗಾಮ್‌ನಲ್ಲಿ ಸ್ಮಾರಕ – ಒಮರ್ ಅಬ್ದುಲ್ಲಾ

    ರಾಜಸ್ಥಾನದಲ್ಲಿ (Rajasthan) ಸರ್ಕಾರಿ ನೌಕರನಾಗಿದ್ದ ಶಕುರ್ ಖಾನ್ ಗಡಿ ಪ್ರದೇಶದ ಬರೋಡಾ ಗ್ರಾಮದವನು. ಈತನ ಮೇಲೆ ಬಹಳ ದಿನಗಳಿಂದ ನಿಗಾ ಇಡಲಾಗಿತ್ತು ಎನ್ನಲಾಗಿದೆ. ಸದ್ಯ ಹೆಚ್ಚಿನ ವಿಚಾರಣೆಗಾಗಿ ಜೈಪುರಕ್ಕೆ ಸ್ಥಳಾಂತರಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಎರಡೂ ತನಿಖಾ ತಂಡಗಳು ಜಂಟಿಯಾಗಿಯೇ ವಿಚಾರಣೆ ನಡೆಸಲಿವೆ. ಪ್ರಾಥಮಿಕ ವಿಚಾರಣೆ ವೇಳೆ ಆರೋಪಿ ದೆಹಲಿಯಲ್ಲಿರುವ ಪಾಕಿಸ್ತಾನಿ ಹೈಕಮಿಷನ್‌ನೊಂದಿಗೆ (Pakistani High Commission) ಸಂಪರ್ಕದಲ್ಲಿದ್ದ ಅನ್ನೋದು ಪತ್ತೆಯಾಗಿದೆ. ಇದನ್ನೂ ಓದಿ: ಸೆಬಿ ಮಾಜಿ ಮುಖ್ಯಸ್ಥೆ ಮಾಧವಿ ಪುರಿ ಬುಚ್‌ಗೆ ಲೋಕಪಾಲ್ ಕ್ಲೀನ್ ಚಿಟ್

    ಅಲ್ಲದೇ ಪಾಕಿಸ್ತಾನಕ್ಕೆ ಸಂಬಂಧಿಸಿದ ಹಲವಾರು ಫೋನ್ ಸಂಖ್ಯೆಗಳು (+92 ರಿಂದ ಪ್ರಾರಂಭವಾಗುವ ಮೊಬೈಲ್ ಸಂಖ್ಯೆಗಳು) ಇತನ ಮೊಬೈಲ್‌ನಲ್ಲಿ ಪತ್ತೆಯಾಗಿದೆ. ಜೊತೆಗೆ ಕಳೆದ ಕೆಲ ವರ್ಷಗಳಲ್ಲಿ 7 ಬಾರಿ ಪಾಕಿಸ್ತಾನಕ್ಕೆ ಭೇಟಿ ನೀಡಿರುವುದಾಗಿ ಶಕುರ್‌ ಖಾನ್‌ ಒಪ್ಪಿಕೊಂಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಯುಪಿಯಲ್ಲಿ ರೇಪಿಸ್ಟ್, ಕೊಲೆಗಾರರ ವಿರುದ್ಧ ‘ಆಪರೇಷನ್ ಲಂಗ್ಡಾ’ – 11 ಕ್ರಿಮಿನಲ್ಸ್ ಕಾಲಿಗೆ ಗುಂಡೇಟು

    ಪ್ರಮುಖ ಫೈಲ್‌ಗಳೇ ಡಿಲೀಟ್‌
    ಇನ್ನೂ ಶಕುರ್‌ ಖಾನ್‌ ಗುಪ್ತಚರ ಅಧಿಕಾರಿಗಳ ಬಲೆಗೆ ಬೀಳುತ್ತಿದ್ದಂತೆ ಮೊಬೈಲ್‌ ಮತ್ತು ಡಿಲಿಟಲ್‌ ಡಿವೈಸ್‌ಗಳಲ್ಲಿದ್ದ ಹಲವಾರು ಪ್ರಮುಖ ಫೈಲ್‌ಗಳನ್ನ ಡಿಲೀಟ್‌ ಮಾಡಲಾಗಿದೆ. ಹೀಗಾಗಿ ಸಧ್ಯಕ್ಕೆ ಆತನ ಮೊಬೈಲ್‌ನಿಂದ ಯಾವುದೇ ಸೂಕ್ಷ್ಮ ಮಾಹಿತಿಗಳು ರವಾನೆಯಾಗಿರುವ ಬಗ್ಗೆ ಸಾಕ್ಷ್ಯಗಳು ಸಿಕ್ಕಿಲ್ಲ. ಹೊರತುಪಡಿಸಿ ಆತನ ಬ್ಯಾಂಕ್‌ ಖಾತೆ ಮೇಲೂ ನಿಗಾ ವಹಿಸಲಾಗಿದೆ.

    ಸದ್ಯ ಯೂಟ್ಯೂಬರ್‌ ಜ್ಯೋತಿಒ ಮಲ್ಹೋತ್ರಾ ಸೇರಿದಂತೆ ಕಳೆದ ಎರಡು ವಾರಗಳಲ್ಲಿ ಒಟ್ಟು ಬಂಧಿತ ಪಾಕಿಸ್ತಾನಿ ಸ್ಪೈಗಳ ಸಂಖ್ಯೆ 16 ದಾಟಿದೆ. ಇದನ್ನೂ ಓದಿ: ರೈತರಿಗೆ ಗುಡ್‌ನ್ಯೂಸ್ – ಕಿಸಾನ್ ಕ್ರೆಡಿಟ್‌ಕಾರ್ಡ್ ಸಾಲದ ಬಡ್ಡಿ ರಿಯಾಯಿತಿ ಮುಂದುವರಿಕೆ

  • ಕಲ್ಯಾಣಮಂಟಪದಲ್ಲೇ ಹೈಡ್ರಾಮಾ – ಹಸೆಮಣೆ ಏರಬೇಕಿದ್ದ ಸರ್ಕಾರಿ ನೌಕರ ಜೈಲುಪಾಲು

    ಕಲ್ಯಾಣಮಂಟಪದಲ್ಲೇ ಹೈಡ್ರಾಮಾ – ಹಸೆಮಣೆ ಏರಬೇಕಿದ್ದ ಸರ್ಕಾರಿ ನೌಕರ ಜೈಲುಪಾಲು

    ಬೆಳಗಾವಿ: ಮದುವೆ ದಿನ ಕಲ್ಯಾಣಮಂಟಪದಲ್ಲೇ ಸರ್ಕಾರಿ ನೌಕರನೊಬ್ಬ (Government Employee) ವರದಕ್ಷಿಣೆಗೆ (Dowry) ಬೇಡಿಕೆಯಿಟ್ಟು ಹೈಡ್ರಾಮಾ ನಡೆಸಿ ಪೊಲೀಸರ ಅತಿಥಿಯಾದ ಘಟನೆ ಬೆಳಗಾವಿಯಲ್ಲಿ (Belagavi) ನಡೆದಿದೆ.

    ಬೆಳಗಾವಿ ಡಿಸಿ ಕಚೇರಿಯಲ್ಲಿ ಎಸ್‌ಡಿಸಿ ಆಗಿರುವ ಸಚಿನ್ ಪಾಟೀಲ್ ಹೈಡ್ರಾಮಾ ನಡೆಸಿದ ವರ. ಈತ ಕಲ್ಯಾಣಮಂಟಪದಲ್ಲಿ ನಡೆಯುತ್ತಿದ್ದ ಅರಿಶಿಣ ಕಾರ್ಯಕ್ರಮದಲ್ಲಿ 200 ಗ್ರಾಂ ಚಿನ್ನಾಭರಣ, 10 ಲಕ್ಷ ನಗದು ನೀಡುವಂತೆ ವಧುವಿನ ಮನೆಯವರಿಗೆ ಡಿಮ್ಯಾಂಡ್ ಇಟ್ಟಿದ್ದಾನೆ. ವರನ ಡಿಮ್ಯಾಂಡ್‌ಗೆ ವಧುವಿನ ಸಂಬಂಧಿಕರು, ಮದುವೆಯಲ್ಲಿ ಪಾಲ್ಗೊಂಡ ಜನರು ತಬ್ಬಿಬ್ಬಾಗಿದ್ದಾರೆ. ಅಲ್ಲದೇ ನಾವು ಬಡವರು ಇಷ್ಟೊಂದು ಹಣ, ಚಿನ್ನಾಭರಣ ಎಲ್ಲಿಂದ ಕೊಡೋದು ಎಂದು ವಧುವಿನ ಪೋಷಕರು ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಭೀಕರ ಸರಣಿ ಅಪಘತ – 50 ಮೀಟರ್ ಹಾರಿ ಬಿದ್ದ ಯುವತಿ ಗಂಭೀರ

    ಈ ವೇಳೆ ವರದಕ್ಷಿಣೆ ಕೊಡದ ಹಿನ್ನೆಲೆ ಹಳದಿ ಕಾರ್ಯಕ್ರಮ ನಡೆಯುವಾಗಲೇ ಮಂಟಪದಿಂದ ವರ ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ನಾನು ಹಳದಿ ಕಾರ್ಯದಲ್ಲಿ ಪಾಲ್ಗೊಳ್ಳಲ್ಲ ಎಂದು ಹೈಡ್ರಾಮ ನಡೆಸಿದ್ದಾನೆ. ಈ ವೇಳೆ ಮದುವೆ ದಿನ ವಿಚಿತ್ರವಾಗಿ ನಡೆದುಕೊಂಡ ವರನಿಗೆ ಹುಡುಗಿ ಮನೆಯವರು ಗೂಸಾ ನೀಡಿದ್ದು, ಕಲ್ಯಾಣ ಮಂಟಪದಿಂದ ಎಸ್ಕೇಪ್ ಆಗಲು ಯತ್ನಿಸಿದ್ದ ವರನನ್ನು ರೂಂನಲ್ಲೇ ಲಾಕ್ ಮಾಡಿದ್ದಾರೆ. ಇದನ್ನೂ ಓದಿ: ಮಣಿಪುರದಲ್ಲಿ ಹೊಸವರ್ಷದ ಮೊದಲ ದಿನವೇ ಹಿಂಸಾಚಾರ – ಗುಂಡಿನ ದಾಳಿಗೆ ನಾಲ್ವರು ಬಲಿ

    ಏನಿದು ಘಟನೆ?
    ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಗ್ರಾಮವೊಂದರ ಯುವತಿ ಜೊತೆಗೆ ಸಚಿನ್ ಪಾಟೀಲ್ ನಿಶ್ಚಿತಾರ್ಥ ಆಗಿತ್ತು. ಇದ್ದ ಒಬ್ಬಳೇ ಹೆಣ್ಣುಮಗಳನ್ನು ಸರ್ಕಾರಿ ನೌಕರ ಎಂಬ ಕಾರಣಕ್ಕೆ ಸಚಿನ್‌ಗೆ ಕೊಡಲು ವಧುವಿನ ಪೋಷಕರು ನಿರ್ಧರಿಸಿದ್ದರು. ಇವರಿಬ್ಬರ ನಿಶ್ಚಿತಾರ್ಥ ಆರು ತಿಂಗಳ ಹಿಂದೆ ನಡೆದಿತ್ತು. ನಿಶ್ಚಿತಾರ್ಥ ಸಮಯದಲ್ಲೇ 25 ಸಾವಿರ ವರದಕ್ಷಿಣೆ, 50 ಗ್ರಾಂ ಚಿನ್ನಾಭರಣ ಕೊಡುವುದಾಗಿ ಮಾತುಕತೆ ಮಾಡಿದ್ದರು. ಇದರ ಜೊತೆಗೆ ಮದುವೆಯನ್ನು ತಾವೇ ಮಾಡಿಕೊಡುವುದಾಗಿ ಹುಡುಗಿ ಪೋಷಕರು ತಿಳಿಸಿದ್ದರು. ಈ ಮಾತುಕತೆಗೆ ಉಭಯ ಕುಟುಂಬಸ್ಥರೂ ಒಪ್ಪಿಗೆ ಸೂಚಿಸಿದ್ದರು. ಡಿಸೆಂಬರ್ 31ಕ್ಕೆ ಖಾನಾಪುರದ ಲೋಕಮಾನ್ಯ ಕಲ್ಯಾಣ ಮಂಟಪದಲ್ಲಿ ಮದುವೆ ನಿಶ್ಚಯವಾಗಿತ್ತು. ಎಲ್ಲಾ ಸಂಬಂಧಿಕರು, ಸ್ನೇಹಿತರಿಗೆ ಆಹ್ವಾನ ಪತ್ರಿಕೆಯನ್ನು ನೀಡಲಾಗಿತ್ತು. ಇದೀಗ ಹಸೆಮಣೆ ಏರಬೇಕಿದ್ದ ವರ ಜೈಲುಪಾಲಾಗಿದ್ದಾನೆ. ಇದನ್ನೂ ಓದಿ: ಮಕ್ಕಳಾಗದ ಮಹಿಳೆಯರನ್ನ ಗರ್ಭಿಣಿ ಮಾಡಿದ್ರೆ 13 ಲಕ್ಷ ರೂ. ಬಹುಮಾನ – ಆಫರ್‌ ಕೊಟ್ಟಿದ್ದ 8 ಮಂದಿ ಅರೆಸ್ಟ್‌

    ಮದುವೆ ದಿನವೇ ಹೈಡ್ರಾಮಾ ಮಾಡಿದ ಸರ್ಕಾರಿ ನೌಕರ ಹಿಂಡಲಗಾ ಜೈಲು ಪಾಲಾಗಿದ್ದು, ಸಚಿನ್ ಪಾಟೀಲ್‌ನನ್ನು ವಶಕ್ಕೆ ಪಡೆದು ಖಾನಾಪುರ ಪೊಲೀಸರು ವಿಚಾರಣೆ ನಡೆಸಿದ್ದಾರೆ. ನಿಶ್ಚಿತಾರ್ಥದ ಬಳಿಕ ಸಚಿನ್ ಯುವತಿ ಜೊತೆಗೆ ದೈಹಿಕ ಸಂಬಂಧ ಬೆಳೆಸಿದ್ದ ಎನ್ನಲಾಗಿದೆ. ಆಗಾಗ ಮನೆಗೆ ಹೋಗಿ ನಾಲ್ಕೈದು ಸಲ ಯುವತಿ ಜೊತೆಗೆ ದೈಹಿಕ ಸಂಪರ್ಕ ಸಾಧಿಸಿದ್ದ ಸಚಿನ್ ಆಕೆಯ ಸಹೋದರರು, ಸಂಬಂಧಿಕರ ಬಳಿ 1 ಲಕ್ಷ ಸಾಲವನ್ನೂ ಪಡೆದಿದ್ದ. ಅಲ್ಲದೇ ಹೆಚ್ಚಿನ ಪ್ರಮಾಣದಲ್ಲಿ ವರದಕ್ಷಿಣೆ ಕೊಡಲು ಒಪ್ಪದಿದ್ದಾಗ ಯುವತಿಗೂ ಜೀವ ಬೆದರಿಕೆ ಹಾಕಿದ್ದಾನೆ. ಇದೀಗ ಸಚಿನ್ ಪಾಟೀಲ್ ವಿರುದ್ಧ ಖಾನಾಪುರ ಠಾಣೆಯಲ್ಲಿ ಮೂರು ಸೆಕ್ಷನ್ ಅಡಿ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್ 303 (ಕೊಲೆ ಬೆದರಿಕೆ), ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಐಪಿಸಿ ಸೆಕ್ಷನ್ 420 (ವಂಚನೆ) ಪ್ರಕರಣ ದಾಖಲಾಗಿದೆ. ಸೋಮವಾರ ಪೊಲೀಸರು ಆರೋಪಿ ಸಚಿನ್ ಪಾಟೀಲ್‌ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇದನ್ನೂ ಓದಿ: 14ರ ಹುಡುಗಿ ಮೇಲೆ ಪ್ರೀತಿ – ಶಾಲಾ ಬಸ್ ಡ್ರೈವರ್‌ ಪ್ರೇಮದಾಟಕ್ಕೆ ವಿದ್ಯಾರ್ಥಿನಿ ಬಲಿ

  • ಡ್ಯಾನ್ಸ್ ಮಾಡುತ್ತಿದ್ದಂತೆ ಕುಸಿದು ಬಿದ್ದು ಸರ್ಕಾರಿ ನೌಕರ ಸಾವು

    ಡ್ಯಾನ್ಸ್ ಮಾಡುತ್ತಿದ್ದಂತೆ ಕುಸಿದು ಬಿದ್ದು ಸರ್ಕಾರಿ ನೌಕರ ಸಾವು

    ಭೋಪಾಲ್: ಕಾರ್ಯಕ್ರಮವೊಂದರಲ್ಲಿ ಡ್ಯಾನ್ಸ್ ಮಾಡುತ್ತಿದ್ದಂತೆಯೇ ಕುಸಿದು ಬಿದ್ದು ಸರ್ಕಾರಿ ನೌಕರ (Government Official) ಮೃತಪಟ್ಟ ಘಟನೆ ಮಧ್ಯಪ್ರದೇಶದ ಭೋಪಾಲ್‍ನಲ್ಲಿ ನಡೆದಿದೆ.

    ಮೃತರನ್ನು ಸುರೇಂದ್ರ ಕುಮಾರ್ ದೀಕ್ಷಿತ್ ಎಂದು ಗುರುತಿಸಲಾಗಿದೆ. ಇವರು ಅಂಚೆ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಸದ್ಯ ಇವರು ಹೃದಯ ಸ್ತಂಭನವಾಗಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

    ಸಾಂದರ್ಭಿಕ ಚಿತ್ರ

    ಸುರೇಂದ್ರ ಅವರು ಡ್ಯಾನ್ಸ್ ಮಾಡುತ್ತಿದ್ದಂತೆಯೇ ಕುಸಿದು ಬಿದ್ದ ದೃಶ್ಯವನ್ನು ನರೆದಿದ್ದವರು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದು, ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: ಮಹಾ ಎಡವಟ್ಟು; ರೈಲು ನಿಲ್ದಾಣದಲ್ಲಿ ʻಬ್ಲೂ ಫಿಲ್ಮ್‌ʼ ಪ್ರದರ್ಶನ – ತಬ್ಬಿಬ್ಬಾದ ಜನ!

    ಸುರೇಂದ್ರ ಅವರು ಕುಸಿದು ಬೀಳುತ್ತಿದ್ದಂತೆಯೇ ಅಲ್ಲೆ ಇದ್ದವರು ಅವರನ್ನು ರಕ್ಷಿಸುವ ಪ್ರಯತ್ನ ಮಾಡಿದರೂ ಯಾವುದೇ ಫಲಪ್ರದವಾಗಿಲ್ಲ. ಹಿಂದಿ ಹಾಡಿಗೆ ತನ್ನ ಸಹೋದ್ಯೋಗಿಗಳೊಂದಿಗೆ ನೃತ್ಯ ಮಾಡುತ್ತಿದ್ದಾಗ ಅವರು ಕುಸಿದು ಬೀಳುತ್ತಿರುವುದು ವೀಡಿಯೋದಲ್ಲಿ ಕಂಡುಬರುತ್ತಿದೆ.

    ಅಂಚೆ ಇಲಾಖೆಯ 34ನೇ ಅಖಿಲ ಭಾರತ ಅಂಚೆ ಹಾಕಿ ಪಂದ್ಯಾವಳಿ ಆಯೋಜಿಸಲಾಗಿತ್ತು. ಮಾ. 17ರಂದು ಫೈನಲ್ ಪಂದ್ಯ ನಿಗದಿಯಾಗಿತ್ತು. ಮಾರ್ಚ್ 16ರಂದು ಸಂಜೆ ಇಲಾಖೆಯ ಕಚೇರಿ ಆವರಣದಲ್ಲಿಯೇ ಸಾಂಸ್ಕøತಿಕ ಕಾರ್ಯಕ್ರಮ ಆಯೋಜಿಸಲಾಗಿದ್ದ ವೇಳೆ ಈ ದುರ್ಘಟನೆ ನಡೆದಿದೆ.

  • ಮುಷ್ಕರದಲ್ಲಿ ಭಾಗವಹಿಸಿದ್ದ ಸರ್ಕಾರಿ ನೌಕರ ಹೃದಯಾಘಾತದಿಂದ ಸಾವು

    ಮುಷ್ಕರದಲ್ಲಿ ಭಾಗವಹಿಸಿದ್ದ ಸರ್ಕಾರಿ ನೌಕರ ಹೃದಯಾಘಾತದಿಂದ ಸಾವು

    ರಾಯಚೂರು: ಸರ್ಕಾರಿ ನೌಕರರ ಮುಷ್ಕರದಲ್ಲಿ (Government Employee Strike) ಭಾಗವಹಿಸಿದ್ದ ವ್ಯಕ್ತಿಯೊಬ್ಬರು ಮನೆಗೆ ತೆರಳುತ್ತಿದ್ದಂತೆಯೇ ಹೃದಯಾಘಾತದಿಂದ (Heart Attack) ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ (Raichur) ನಡೆದಿದೆ.

    ಸಾಕ್ಷರತಾ ಇಲಾಖೆ ಕಾರ್ಯಕ್ರಮದ ಸಂಯೋಜಕ ಯಲ್ಲಪ್ಪ ಜಾಲಿಬೆಂಚಿ (54) ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇವರು ಎಸ್‌ಟಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿದ್ದು, ಬುಧವಾರ ನಡೆದ ಸರ್ಕಾರಿ ನೌಕರರ ಮುಷ್ಕರದಲ್ಲಿ ಭಾಗವಹಿಸಿ, ಮನೆಗೆ ತೆರಳಿದ ಬಳಿಕ ಅವರಿಗೆ ತೀವ್ರ ಹೃದಯಾಘಾತವಾಗಿದೆ. ಇದನ್ನೂ ಓದಿ: ರೂಪಾ ವಿರುದ್ಧ ಮತ್ತೊಂದು ಅಸ್ತ್ರ ಪ್ರಯೋಗಿಸಿದ ರೋಹಿಣಿ

    ಯಲ್ಲಪ್ಪ ಅವರಿಗೆ ಹೃದಯಾಘಾತವಾಗುತ್ತಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಮಧ್ಯಂತರ ರಿಲೀಫ್‌ – ಷರತ್ತು ಏನು?

  • ವೇತನ ಹೆಚ್ಚಳ- ಮುಷ್ಕರ ವಾಪಸ್ ಪಡೆದ ಸರ್ಕಾರಿ ನೌಕರರು

    ವೇತನ ಹೆಚ್ಚಳ- ಮುಷ್ಕರ ವಾಪಸ್ ಪಡೆದ ಸರ್ಕಾರಿ ನೌಕರರು

    ಬೆಂಗಳೂರು: ಸರ್ಕಾರದ ಅಧಿಕೃತ ಆದೇಶದ ಬೆನ್ನಲ್ಲೇ ಅನಿರ್ದಿಷ್ಟ ಮುಷ್ಕರವನ್ನು ವಾಪಸ್ ತೆಗೆದುಕೊಂಡಿದ್ದೇವೆ ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ (Shadakshari) ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಪ್ರಿಲ್ 1ರಿಂದ ಶೇ.17ರಷ್ಟು ವೇತನ ಹೆಚ್ಚಿಸಿ ಎಂದು ಸರ್ಕಾರ ಆದೇಶ ನೀಡಿದೆ. ಈ ಸರ್ಕಾರದ ಆದೇಶವನ್ನು ಸಾಮೂಹಿಕವಾಗಿ ಒಪ್ಪಿಕೊಳ್ಳುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಭರವಸೆಗಳು ಸಿಗುತ್ತವೆ ಎಂಬ ನಿರೀಕ್ಷೆಯಲ್ಲಿದ್ದೇವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅನಿರ್ದಿಷ್ಟ ಅವಧಿಯ ಮುಷ್ಕರವನ್ನು ವಾಪಸ್ ಪಡೆದಿದ್ದೇವೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಪ್ರಧಾನಿ ಮೋದಿಯವರ ಆರೋಗ್ಯ ಚೆನ್ನಾಗಿರಲಿ: ಸಿದ್ದರಾಮಯ್ಯ

    ಸರ್ಕಾರಿ ನೌಕರರಿಗೆ 17 ಪರ್ಸೆಂಟ್ ವೇತನ ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಘೋಷಿಸಿದ್ದರು. ಸರ್ಕಾರಿ ನೌಕರರ (Government Employees) ಮುಷ್ಕರ ಹಿನ್ನೆಲೆಯಲ್ಲಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳವಾರ ನೌಕರರ ಜೊತೆ ಚರ್ಚೆ ಆದ ಬಳಿಕ ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಮಾತಾಡಿದೆ, ಈ ವೇಳೆ ಒಂದು ಒಪ್ಪಂದಕ್ಕೆ ಬಂದಿದ್ದೇವೆ. 17% ಹೆಚ್ಚಳಕ್ಕೆ ಒಪ್ಪಿಗೆ ನೀಡಲಾಗಿದೆ. ಇದು ಮಧ್ಯಂತರ ಪರಿಹಾರ ರೂಪದಲ್ಲಿ ಇರಲಿದೆ. ಆಯೋಗದ ವರದಿ ಬಳಿಕ ಶೇಕಡವಾರು ಪ್ರಮಾಣದಲ್ಲಿ ಬದಲಾವಣೆ ಆಗಬಹುದು. ಸರ್ಕಾರಿ ನೌಕಕರು ಮುಷ್ಕರ ಕೈಬಿಡ್ತಾರೆ ಎಂಬ ವಿಶ್ವಾಸ ಇದೆ ಎಂದು ತಿಳಿಸಿದ್ದರು. ಇದನ್ನೂ ಓದಿ: ಸತ್ಯೇಂದ್ರ ಜೈನ್, ಮನೀಶ್ ಸಿಸೋಡಿಯಾ ರಾಜೀನಾಮೆ – ಸೌರಭ್ ಭಾರದ್ವಾಜ್ ಮತ್ತು ಅತಿಶಿಗೆ ಮಂತ್ರಿ ಸ್ಥಾನ?

  • ಸರ್ಕಾರಿ ನೌಕರರಿಗೆ ಗುಡ್‍ನ್ಯೂಸ್- ಮಾರ್ಚ್‍ನಲ್ಲಿ 7ನೇ ವೇತನ ಆಯೋಗದ ಶಿಫಾರಸು ಜಾರಿ

    ಸರ್ಕಾರಿ ನೌಕರರಿಗೆ ಗುಡ್‍ನ್ಯೂಸ್- ಮಾರ್ಚ್‍ನಲ್ಲಿ 7ನೇ ವೇತನ ಆಯೋಗದ ಶಿಫಾರಸು ಜಾರಿ

    ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಬೊಮ್ಮಾಯಿ ಗುಡ್ ನ್ಯೂಸ್ ನೀಡಿದೆ.

    ಏಳನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ಮಾರ್ಚ್ 1ರಿಂದ ಮುಷ್ಕರಕ್ಕೆ ಮುಂದಾಗಿದ್ರು. ಮಾಜಿ ಸಿಎಂ ಯಡಿಯೂರಪ್ಪ (B S Yediyurappa) ಆದಿಯಾಗಿ ಬಹುತೇಕ ನಾಯಕರು ರಾಜ್ಯ ಸರ್ಕಾರಿ ನೌಕರರ ಪರ ಬ್ಯಾಟ್ ಬೀಸಿದ್ರು. ಈ ಬೆಳವಣಿಗೆ ಚುನಾವಣೆ ಮೇಲೆ ಪರಿಣಾಮ ಬೀರುವ ಆತಂಕವೂ ಬಿಜೆಪಿ(BJP) ಗೆ ವ್ಯಕ್ತವಾಗಿತ್ತು. ಹೀಗಾಗಿಯೇ ಅಧಿವೇಶನ ಮುಗಿಯಲು ಒಂದು ದಿನ ಇರುವಾಗಲೇ ವಿಧಾನಸಭೆ ಸಾಕ್ಷಿಯಾಗಿ ಸಿಎಂ ಬೊಮ್ಮಾಯಿ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ್ದಾರೆ.

    ಮಾರ್ಚ್ ತಿಂಗಳಲ್ಲಿ 7ನೇ ವೇತನ ಆಯೋಗದ ಮಧ್ಯಂತರ ವರದಿ ಅನ್ವಯ ನಿರ್ಧಾರ ತೆಗೆದುಕೊಳ್ಳುವ ಘೋಷಣೆಯನ್ನು ಮುಖ್ಯಮಂತ್ರಿ ಮಾಡಿದ್ದಾರೆ. ಆದರೆ ಯಾವ ಪ್ರಮಾಣದಲ್ಲಿ ವೇತನ ಹೆಚ್ಚಳ ಆಗಲಿದೆ ಎಂಬ ಗುಟ್ಟನ್ನು ಸಿಎಂ ಬೊಮ್ಮಾಯಿ ಬಿಟ್ಟುಕೊಟ್ಟಿಲ್ಲ. ಇದನ್ನೂ ಓದಿ: ನಮ್ಮದು ಜನಕಲ್ಯಾಣ, ಆರ್ಥಿಕ ಸ್ಥಿರತೆ ಸಾಧಿಸುವ ವಾಸ್ತವಿಕತೆಯ ಬಜೆಟ್: ಬೊಮ್ಮಾಯಿ

    ಇದೇ ವೇಳೆ ಬಜೆಟ್‍ (Budget) ನಲ್ಲಿ ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಘೋಷಿಸಿದ್ದ 500 ರೂಪಾಯಿ ಮಾಸಿಕ ಸಹಾಯಧವನ್ನು ಸಾವಿರ ರೂಪಾಯಿಗೆ ಹೆಚ್ಚಿಸಲು ಸಿಎಂ ತೀರ್ಮಾನಿಸಿದ್ದಾರೆ. ಅಲ್ಲದೇ, ಶಾಲೆಗೆ ಹೋಗುವ ಮಕ್ಕಳಿಗೆ ಬಸ್ ಸಮಸ್ಯೆ ನೀಗಿಸಲು ಬಜೆಟ್‍ನಲ್ಲಿ ಘೋಷಿಸಿದ್ದ 1 ಸಾವಿರ ಬಸ್‍ಗೆ ಬದಲಾಗಿ 2ಸಾವಿರ ಬಸ್ ಒದಗಿಸುವ ಹೊಸ ಘೋಷಣೆಯನ್ನು ಸಿಎಂ ಮಾಡಿದ್ದಾರೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅಕ್ರಮ ಆಸ್ತಿ ಪ್ರಕರಣ – ಸರ್ಕಾರಿ ನೌಕರನ ಮನೆಯಲ್ಲಿ ತನಿಖೆ, ಹೆದರಿ ವಿಷ ಸೇವನೆ

    ಅಕ್ರಮ ಆಸ್ತಿ ಪ್ರಕರಣ – ಸರ್ಕಾರಿ ನೌಕರನ ಮನೆಯಲ್ಲಿ ತನಿಖೆ, ಹೆದರಿ ವಿಷ ಸೇವನೆ

    ಭೋಪಾಲ್: ಅಕ್ರಮ ಆಸ್ತಿ ಪ್ರಕರಣದ ಮೇಲೆ ಮಧ್ಯಪ್ರದೇಶದ ಪೊಲೀಸ್ ಆರ್ಥಿಕ ಅಪರಾಧಗಳ ವಿಭಾಗ(ಇಒಡಬ್ಲ್ಯು) ರಾಜ್ಯ ಸರ್ಕಾರದ ಗುಮಾಸ್ತರೊಬ್ಬರ ಮನೆಯಲ್ಲಿ ಹುಡುಕಾಟ ನಡೆಸಿ, 85 ಲಕ್ಷ ರೂ.ಗೂ ಹೆಚ್ಚು ನಗದು ವಶಪಡಿಸಿಕೊಂಡಿದೆ. ಆದರೆ ಈ ವೇಳೆ ಗುಮಾಸ್ತ ವಿಷ ಕುಡಿದಿರುವುದಾಗಿ ವರದಿಯಾಗಿದೆ.

    ತಿಂಗಳಿಗೆ ಸುಮಾರು 50,000 ರೂ. ವೇತನ ಪಡೆಯುತ್ತಿರುವ ಮೇಲ್ ವಿಭಾಗದ ಗುಮಾಸ್ತ ಹೀರೋ ಕೇಸ್ವಾನಿ ಅವರ ನಿವಾಸದಲ್ಲಿ ನಡೆಸಿದ ಶೋಧದ ವೇಳೆ, ಇಒಡಬ್ಲ್ಯು ತಂಡ ಕೋಟ್ಯಂತರ ರೂ. ಮೌಲ್ಯದ ಹಲವಾರು ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಂಡಿದೆ ಎಂದು ತಿಳಿಸಿದೆ. ಇದನ್ನೂ ಓದಿ: ‘ಹರ್ ಘರ್ ತಿರಂಗಾ’ ಆಂದೋಲನಕ್ಕೆ ಯಶ್, ಸುದೀಪ್ ಸೇರಿದಂತೆ ಹಲವು ಗಣ್ಯರು ಸಾಥ್

    ಬೈರಾಗರ್ ಪ್ರದೇಶದಲ್ಲಿನ ಕೇಸ್ವಾನಿ ಅವರ ಮನೆಯಲ್ಲಿ ಬುಧವಾರ ತಡರಾತ್ರಿಯವರೆಗೂ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಪತ್ತೆಯಾದ ಹಣದ ರಾಶಿಯನ್ನು ನಿಖರವಾಗಿ ಲೆಕ್ಕ ಹಾಕಲು ಅಧಿಕಾರಿಗಳು ನೋಟು ಎಣಿಕೆಯ ಯಂತ್ರವನ್ನು ತರಿಸಿದ್ದರು.

    ತನಿಖೆಯ ವೇಳೆ ಕೇಸ್ವಾನಿ ಬಾತ್ರೂಮ್ ಕ್ಲೀನರ್(ಫಿನಾಯಿಲ್) ಕುಡಿದಿರುವುದಾಗಿ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಹಾಗೂ ತಮ್ಮ ಮನೆಯಲ್ಲಿ ಹುಡುಕಾಟ ನಡೆಸದಂತೆ ತಡೆಯಲು ಪ್ರಯತ್ನಿಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಮಿಶ್ರಾ ತಿಳಿಸಿದ್ದಾರೆ. ಇದನ್ನೂ ಓದಿ: ಭಾರತದ ಮೂರನೇ ಅತಿ ದೊಡ್ಡ ಕಲ್ಲಿದ್ದಲು ಪೂರೈಕೆದಾರ ರಷ್ಯಾ

    ತಕ್ಷಣ ಅವರನ್ನು ರಾಜ್ಯ ಹಮೀಡಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಅವರ ಸ್ಥಿತಿ ಸದ್ಯ ಸ್ಥಿರವಾಗಿದೆ. ಅವರಿಗೆ ರಕ್ತದೊತ್ತಡದ ಸಂಬಂಧಿತ ಸಮಸ್ಯೆಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕರ್ತವ್ಯದ ವೇಳೆ ಕಂಠಪೂರ್ತಿ ಕುಡಿದು ರಂಪಾಟ ಮಾಡಿದ ಸರ್ಕಾರಿ ನೌಕರ

    ಕರ್ತವ್ಯದ ವೇಳೆ ಕಂಠಪೂರ್ತಿ ಕುಡಿದು ರಂಪಾಟ ಮಾಡಿದ ಸರ್ಕಾರಿ ನೌಕರ

    ಬೆಳಗಾವಿ: ಸಾಕಷ್ಟು ಜನರು ಸರ್ಕಾರಿ ನೌಕರಿಗಾಗಿ ಪರದಾಡುತ್ತಿದ್ದಾರೆ. ಆದರೆ ಇಲ್ಲೊಬ್ಬ ಸರ್ಕಾರಿ ನೌಕರ ತನ್ನ ಕೆಲಸಕ್ಕೆ ಮರ್ಯಾದೆ ಕೊಡದೆ ರಂಪಾಟ ಮಾಡಿದ್ದಾನೆ. ಕರ್ತವ್ಯದ ವೇಳೆ ಕಂಠಪೂರ್ತಿ ಕುಡಿದು ಅಡ್ಡಲಾಗಿ ಮಲಗಿದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ತಹಶೀಲ್ದಾರ್ ಕಚೇರಿ ಎದುರು ನಡೆದಿದೆ.

    ಸಂಜು ಬೆಣ್ಣಿ ಕಂಠಪೂರ್ತಿ ಕುಡಿದು ಮಲಗಿದ್ದ ಗ್ರಾಮ ಲೆಕ್ಕಾಧಿಕಾರಿ. ಈ ಮೊದಲು ಸಂಜು ಬೆಣ್ಣಿ ಸವದತ್ತಿ ತಾಲೂಕಿನ ಗೊರವನಕೊಳ್ಳ ಗ್ರಾಮದಲ್ಲಿ ಗ್ರಾಮಲೆಕ್ಕಾಧಿಕಾರಿಯಾಗಿ ಕೆಲಸಕ್ಕಿದ್ದ. ಅಲ್ಲಿಯೂ ಕರ್ತವ್ಯದ ವೇಳೆ ಕಂಠಪೂರ್ತಿ ಕುಡಿಯುತ್ತಿದ್ದ ಹಿನ್ನೆಲೆ ಸವದತ್ತಿ ತಹಶೀಲ್ದಾರ್ ಕಚೇರಿ ಕರ್ತವ್ಯಕ್ಕೆ ನಿಯೋಜಿಸಿದ್ದರು. ಇದನ್ನೂ ಓದಿ: 80ಕ್ಕೂ ಹೆಚ್ಚು ಮಕ್ಕಳನ್ನ ಕಾಡುತ್ತಿದೆ ಟೊಮೆಟೊ ಜ್ವರ – ಏನಿದರ ಲಕ್ಷಣ? 

    ಆದ್ರೆ, ಇಲ್ಲಿಯೂ ಸಹ ಸಂಜು ಬೆಣ್ಣಿ ತನ್ನ ಹಳೇ ಚಾಳಿ ಮುಂದುವರಿಸಿದ್ದಾನೆ. ಈತನ ರಂಪಾಟದ ಜೊತೆಗೆ ಗ್ರಾಮಸ್ಥರ ಜೊತೆ ದುರ್ವರ್ತನೆ ಮಾಡುತ್ತಿದ್ದಾನೆ ಎಂಬ ಆರೋಪ ಕೇಳಿಬರುತ್ತಿದೆ. ಇದರ ಜೊತೆ ಸಂಜು ಬೆಣ್ಣಿ ವಿರುದ್ಧ ಕ್ರಮಕೈಗೊಳ್ಳದ ತಹಶೀಲ್ದಾರ್ ಪ್ರಶಾಂತ್ ಪಾಟೀಲ್ ವಿರುದ್ಧವೂ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಮಧ್ಯರಾತ್ರಿ 12 ಗಂಟೆಯವರೆಗೂ ಕರ್ತವ್ಯ ನಿರ್ವಹಿಸಿ ಆಯುಷ್ ಅಧಿಕಾರಿಯಿಂದ ಅಧಿಕಾರ ಹಸ್ತಾಂತರ

    ಮಧ್ಯರಾತ್ರಿ 12 ಗಂಟೆಯವರೆಗೂ ಕರ್ತವ್ಯ ನಿರ್ವಹಿಸಿ ಆಯುಷ್ ಅಧಿಕಾರಿಯಿಂದ ಅಧಿಕಾರ ಹಸ್ತಾಂತರ

    ಧಾರವಾಡ: ಜಿಲ್ಲಾ ಆಯುಷ್ ಅಧಿಕಾರಿಯೊಬ್ಬರು ತಮ್ಮ ಸೇವಾ ನಿವೃತ್ತಿ ದಿನದ ಕೊನೆ ಗಳಿಗೆಯವರೆಗೂ ಕರ್ತವ್ಯ ನಿರ್ವಹಿಸಿ ಅಧಿಕಾರ ಹಸ್ತಾಂತರಿಸಿದರು.

    ನಿರ್ಗಮಿತ ಜಿಲ್ಲಾ ಆಯುಷ್ ಅಧಿಕಾರಿ ಡಾ.ಸಂಗಮೇಶ್ ಕಲಹಾಳ ಅವರು ಕರ್ತವ್ಯದ ಅವಧಿಯ ಕೊನೆಯ ಗಳಿಗೆಯವರೆಗೂ ಜವಾಬ್ದಾರಿ ನಿರ್ವಹಿಸಿ, ಸರ್ಕಾರದ ಋಣ ತೀರಿಸಬೇಕೆಂಬ ಆದರ್ಶ ಹೊಂದಿದ್ದರು. ಅದೇ ರೀತಿ ಮೇ 31ರ ಮಧ್ಯರಾತ್ರಿ 12 ಗಂಟೆಗೆ ಅಧಿಕಾರ ಹಸ್ತಾಂತರಿಸಿದರು.

    ತಮ್ಮ ನಿವೃತ್ತಿಯ ದಿನ ಮಾತನಾಡಿರುವ ಇವರು, ಸರ್ಕಾರದ ನಿಯಮದಂತೆ ಒಂದು ದಿನವೆಂದರೆ ಮಧ್ಯರಾತ್ರಿ 12 ಗಂಟೆಯಿಂದ ಮುಂದಿನ ದಿನದ ಮಧ್ಯರಾತ್ರಿ 12 ರವರೆಗೆ ಎಂದು ಸೂಚಿಸಲಾಗಿದೆ. ಒಂದು ದಿನದ ವೇತನವೆಂದರೆ 24 ತಾಸುಗಳಿಗೆ ನೀಡುವಂತಹದ್ದಾಗಿದೆ ಎಂದರು.

    ನೌಕರರು ಸಮರ್ಥವಾಗಿ ಕಾರ್ಯನಿರ್ವಹಿಸಲು ದೈಹಿಕ, ಮಾನಸಿಕ ಆರೋಗ್ಯದೃಷ್ಟಿಯಿಂದ ಕೆಲಸದ ವೇಳೆಯನ್ನು ನಿಗದಿಪಡಿಸಲಾಗಿರುತ್ತದೆ. ಹೀಗಿದ್ದರೂ ಅತ್ಯವಶ್ಯಕ ಮತ್ತು ತುರ್ತು ಸ್ಥಿತಿಯಲ್ಲಿ ದಿನದ ಯಾವುದೇ ಸಂದರ್ಭದಲ್ಲಿ ಕಾರ್ಯನಿರ್ವಹಿಸಬೇಕಾಗಿರುತ್ತದೆ. ಸರ್ಕಾರದ ಉದಾತ್ತವಾದ ಧೋರಣೆಯಂತೆ ನೌಕರರ ನಿವೃತ್ತಿ ವರ್ಗಾವಣೆ ಸಂದರ್ಭದಲ್ಲಿ ಕಾರ್ಯಭಾರ ವಹಿಸಲು ಕಾರ್ಯಭಾರ ವಹಿಸಿಕೊಡುವ ದಿನ ಸರ್ಕಾರಿ ರಜೆ ಇದ್ದಲ್ಲಿ ಹಿಂದಿನ ಕೆಲಸದ ದಿನ ಕಾರ್ಯಭಾರ ವಹಿಸಿಕೊಡಬಹುದಾಗಿದೆ ಎಂದು ಹೇಳಿದರು.

  • ಸರ್ಕಾರಿ ನೌಕರರೇ ಹುಷಾರ್ – ಕೆಲಸದ ವೇಳೆ ಕಾಲಹರಣ ಮಾಡಿದ್ರೆ ಶಿಸ್ತು ಕ್ರಮ

    ಸರ್ಕಾರಿ ನೌಕರರೇ ಹುಷಾರ್ – ಕೆಲಸದ ವೇಳೆ ಕಾಲಹರಣ ಮಾಡಿದ್ರೆ ಶಿಸ್ತು ಕ್ರಮ

    ಬೆಂಗಳೂರು: ನೀವು ಸರ್ಕಾರಿ ಅಧಿಕಾರಿ ಅಥವಾ ನೌಕರರಾ? ಕರ್ತವ್ಯದ ಸಮಯದಲ್ಲಿ ಟೀ, ಕಾಫಿ ಬ್ರೇಕ್ ನೆಪದಲ್ಲಿ ಹೊರಹೋಗಿ ಕಾಲ ಹರಣ ಮಾಡ್ತಿದ್ದೀರಾ?. ಹಾಗಿದ್ರೆ ಜೋಕೆ, ಇನ್ಮುಂದೆ ನೀವು ಹೀಗೆಲ್ಲ ಮಾಡಿದ್ರೆ ಸರ್ಕಾರಿ ಕೆಲಸಕ್ಕೆ ತೊಂದರೆಯಾಗಬಹುದು.

    ತುಂಬಾ ಜನ ಸರ್ಕಾರಿ ಅಧಿಕಾರಿಗಳು, ನೌಕರರಿಂದ ಅನಗತ್ಯ ಕಾಲಹರಣ ಆರೋಪ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅಂತಹವರ ವಿರುದ್ಧ ಕ್ರಮಕ್ಕೆ ಮುಂದಾಗಿದೆ. ಟೀ, ಕಾಫಿ ಬ್ರೇಕ್ ಅಂತ ಹೇಳಿಕೊಂಡು ಕೆಲಸದ ವೇಳೆಯಲ್ಲಿ ಹೊರಗಡೆ ಹೋಗಿ ಅನಗತ್ಯವಾಗಿ ಕಾಲಹರಣ ಮಾಡುವವರ ಈ ನಡವಳಿಕೆಗೆ ಸರ್ಕಾರ ಬ್ರೇಕ್ ಹಾಕಿ ಸುತ್ತೋಲೆ ಹೊರಡಿಸಿದೆ.

    ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ವಿ.ಮಂಜುಲ ಅವರು ಈ ನಿಟ್ಟಿನಲ್ಲಿ ಬಿಗಿ ತರಲು ಸುತ್ತೋಲೆ ಹೊರಡಿಸಿದ್ದಾರೆ. ಕೆಲಸದ ವೇಳೆಯಲ್ಲಿ ಟೀ, ಕಾಫಿ ಬ್ರೇಕ್ ನೆಪದಲ್ಲಿ ಅನಗತ್ಯ ಕಾಲಹರಣ ಮಾಡುವವರಿಗೆ ಕೆಲವೊಂದು ಕಡ್ಡಾಯ ನಿಯಮಗಳನ್ನು ಜಾರಿಗೊಳಿಸಲಾಗಿದೆ.

    ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡ, ಜಿಲ್ಲಾ, ತಾಲೂಕು ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುವ ಅಧಿಕಾರಿ, ನೌಕರರ ವಿರುದ್ಧ ಕಾಲಹರಣ ಆರೋಪ ಕೇಳಿಬಂದಿತ್ತು. ಕೆಲಸದ ವೇಳೆಯಲ್ಲಿ ಸರ್ಕಾರಿ ಕಚೇರಿಗಳ ಅಧಿಕಾರಿಗಳು, ನೌಕರರು ತಮ್ಮ ಸ್ಥಾನಗಳಲ್ಲಿ ಇರೋದಿಲ್ಲ ಎಂದು ಸಾರ್ವಜನಿಕರಿಂದ ಸರ್ಕಾರಕ್ಕೆ ಸಾಕಷ್ಟು ದೂರುಗಳು ತಲುಪಿದ್ದವು. ಈ ಹಿನ್ನೆಲೆಯಲ್ಲಿ ಅನಗತ್ಯ ಕಾಲಹರಣಕ್ಕೆ ಬ್ರೇಕ್ ಹಾಕಿ ಸರ್ಕಾರದಿಂದ ಸುತ್ತೋಲೆ ಹೊರಡಿಸಲಾಗಿದೆ.

    ನಿಯಮಗಳೇನು?:
    – ಇನ್ಮುಂದೆ ಅಧಿಕಾರಿಗಳು, ನೌಕರರು ಅನುಮತಿ ಇಲ್ಲದೆ ಕಚೇರಿಗಳಿಂದ ಹೊರಗೆ ಹೋಗುವಂತಿಲ್ಲ.
    – ಹೊರಗೆ ಹೋಗಲು ಇನ್ಮುಂದೆ ಕಚೇರಿಗಳಲ್ಲಿ ಸಹಿ ಪುಸ್ತಕ ಇಟ್ಟಿರಬೇಕು.
    – ಹೊರಗೆ ಹೋಗುವ ಅಧಿಕಾರಿ, ನೌಕರ ಆ ವಹಿ ಪುಸ್ತಕದಲ್ಲಿ ಕಾರಣ, ಹೋಗುವ, ಬರುವ ಸಮಯ ನಮೂದಿಸಿ ಹೋಗುವುದು ಕಡ್ಡಾಯ.
    – ಅನಗತ್ಯವಾಗಿ ಕಚೇರಿ ವೆಳೆಯಲ್ಲಿ ಅಧಿಕಾರಿ, ನೌಕರರು ಹೊರಗೆ ಹೋಗುವಂತಿಲ್ಲ
    – ವೈಯಕ್ತಿಕ ಕೆಲಸಗಳನ್ನು ವಿರಾಮದ ಸಮಯದಲ್ಲಿ ಮಾಡಿಕೊಳ್ಳಬೇಕು
    – ಸಹಿ ಪುಸ್ತಕದಲ್ಲಿ ನಮೂದಿಸದೇ ಹೊರಗೆ ಹೋದರೆ ಕ್ರಮ
    – ಅಧಿಕಾರಿ, ನೌಕರರ ಮೇಲೆ ಆಯಾಯಾ ಕಚೇರಿ ಅಥವಾ ಶಾಖೆಗಳ ಮುಖ್ಯಸ್ಥರ ಕಣ್ಗಾವಲು ಇರಲಿದೆ
    – ಕಚೇರಿ ಒಳಗೆ ಇನ್ಮುಂದೆ ಕಚೇರಿ ಅಥವಾ ಶಾಖಾ ಮುಖ್ಯಸ್ಥರು ಆಗಾಗ ಪರಿಶೀಲಿಸುತ್ತಿರಬೇಕು.
    – ಕರ್ತವ್ಯ ವೇಳೆ ಅಧಿಕಾರಿ, ನೌಕರ ಸ್ಥಾನದಲ್ಲಿ ಇಲ್ಲದಿದ್ದರೆ ಮುಲಾಜಿಲ್ಲದೇ ಕ್ರಮ